Tag: Dr. G Parameshwar

  • ಸೋಷಿಯಲ್ ಮೀಡಿಯಾ ಮಾನಿಟರ್‌ಗೆ ಪ್ರತಿ ಠಾಣೆಯಲ್ಲಿ ವಿಶೇಷ ವಿಭಾಗ ಸ್ಥಾಪನೆ: ಪರಮೇಶ್ವರ್

    ಸೋಷಿಯಲ್ ಮೀಡಿಯಾ ಮಾನಿಟರ್‌ಗೆ ಪ್ರತಿ ಠಾಣೆಯಲ್ಲಿ ವಿಶೇಷ ವಿಭಾಗ ಸ್ಥಾಪನೆ: ಪರಮೇಶ್ವರ್

    ಬೆಂಗಳೂರು: ಸಾಮಾಜಿಕ ಜಾಲತಾಣಗಳ ದುರುಪಯೋಗ ನಿಲ್ಲಿಸಲು ದೇಶದಲ್ಲಿ ಮೊದಲ ಬಾರಿಗೆ ವಿಶೇಷ ಪೊಲೀಸ್ ವಿಭಾಗವನ್ನೇ ಕರ್ನಾಟಕ ಸರ್ಕಾರ ಮಾಡಿದೆ ಎಂದು ಗೃಹ ಸಚಿವ ಪರಮೇಶ್ವರ್ (Parameshwar) ತಿಳಿಸಿದರು.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ನವೀನ್ ಪ್ರಶ್ನಿಸಿ, ಸಾಮಾಜಿಕ ಜಾಲತಾಣ ನಿಗಾವಹಿಸಲು ಪೊಲೀಸ್ ಇಲಾಖೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ಪೊಲೀಸ್ ಇಲಾಖೆಗೆ ಸರ್ಕಾರ ಮತ್ತಷ್ಟು ಶಕ್ತಿಯನ್ನ ಕೊಡಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿ ಹೆಚ್ಚು ಗಲಭೆಗಳು ಆಗುತ್ತಿವೆ. ಸಾಮಾಜಿಕ ಜಾಲತಾಣ ನಿಯಂತ್ರಣಕ್ಕಾಗಿ ಗೃಹ ಇಲಾಖೆ ವಿಶೇಷ ಬಜೆಟ್ ನೀಡಬೇಕು. ಸಾಮಾಜಿಕ ಜಾಲತಾಣ ಮಾನಿಟರ್ ಮಾಡಲು ಕ್ರಮವಹಿಸಬೇಕು. ಇದಕ್ಕಾಗಿ ವಿಶೇಷ ಕಾನೂನು ಜಾರಿ ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ನಾಳೆ ರೀ ರಿಲೀಸ್‌ ಆಗ್ತಿದೆ ಪುನೀತ್‌ ರಾಜ್‌ಕುಮಾರ್‌ ನಟನೆಯ ‘ಅಪ್ಪು’ ಸಿನಿಮಾ

    ಪ್ರಶ್ನೆಗೆ ಉತ್ತರಿಸಿದ ಸಚಿವ ಪರಮೇಶ್ವರ್ ಅವರು, ಸೋಷಿಯಲ್ ಮೀಡಿಯಾ ಬಹಳ ಉಪಯೋಗ ಆಗುತ್ತಿದೆ. ಅಷ್ಟೇ ದುರುಪಯೋಗವೂ ಸಹ ಆಗುತ್ತಿದೆ. ಟೆಕ್ನಾಲಜಿ ಇಲ್ಲದೆ ಬದುಕಲು ಸಾಧ್ಯವಿಲ್ಲ ಎನ್ನುವ ಸ್ಥಿತಿಗೆ ನಾವು ತಲುಪಿದ್ದೇವೆ. ಫೇಸ್‌ಬುಕ್, ಎಕ್ಸ್, ಯೂಟ್ಯೂಬ್‌ಗಳನ್ನು ದುರುಪಯೋಗ ಮಾಡಿಕೊಂಡು ಸುಳ್ಳು ಸುದ್ದಿ ಹಬ್ಬಿಸುವ ಕೆಲಸ ಆಗುತ್ತಿದೆ. ಇದನ್ನ ನಿಯಂತ್ರಣ ಮಾಡಲು ದೇಶದಲ್ಲೇ ಮೊದಲ ಬಾರಿಗೆ ಒಂದು ವಿಭಾಗ ಪ್ರಾರಂಭ ಮಾಡಿದ್ದೇವೆ. ಎಡಿಜಿಪಿ ಸೈಬರ್ ಕ್ರೈಮ್‌ ವಿಭಾಗ ನೇಮಕ ಮಾಡಲಾಗಿದೆ. ಪ್ರತಿ ಠಾಣೆಯಲ್ಲಿ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ಮಾಡಿದ್ದೇವೆ. 247 ಪೊಲೀಸರು ಮಾನಿಟರ್ ಮಾಡುತ್ತಾರೆ. ಇಂತಹ ಕೇಸ್ ಕಂಡುಬಂದ ಕೂಡಲೇ ಸುಮೋಟೋ ಕೇಸ್ ಹಾಕುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರು ಅರಮನೆ ಕಾಯ್ದೆ ಇಂದಿನಿಂದ ಜಾರಿ

    ಫ್ಯಾಕ್ಟ್ ಚೆಕ್ ಮಾಡುವ ಆ್ಯಪ್ ಮಾಡಿದ್ದೇವೆ. ನಿತ್ಯ ಮಾನಿಟರ್ ಮಾಡುವ ಕೆಲಸ ಮಾಡುತ್ತಿದ್ದೇವೆ. ಸುಳ್ಳು ಸುದ್ದಿ ಬಂದರೆ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಪೊಲೀಸ್ ಠಾಣೆಯಲ್ಲಿ ಡೆಸ್ಕ್ ಮಾಡಿಕೊಂಡಿದ್ದೇವೆ. ಠಾಣೆಯಲ್ಲಿ ಮೀಡಿಯಾಗಾಗಿ ಒಂದು ಡೆಸ್ಕ್, ಲಾ ಆ್ಯಂಡ್ ಆರ್ಡರ್‌ಗೆ ಒಂದು ಡೆಸ್ಕ್, ವೈಯಕ್ತಿಕ ಡೆಸ್ಕ್, ಸಂಘಟನೆ ಡೆಸ್ಕ್ ಅನ್ನು ಪೊಲೀಸ್ ಠಾಣೆಯಲ್ಲಿ ಮಾಡಿದ್ದೇವೆ ಎಂದು ನುಡಿದರು. ಇದನ್ನೂ ಓದಿ: ಮಲೆ ಮಹದೇಶ್ವರನಿಗೆ ಭರಪೂರ ಆದಾಯ; 20 ದಿನದಲ್ಲಿ 2.85 ಕೋಟಿ ಕಾಣಿಕೆ

    ಡ್ರಗ್ಸ್ ಹಾವಳಿ, ಆರ್ಥಿಕ ಅಪರಾಧ ಜಾಸ್ತಿ ಆಗುತ್ತಿದೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಸೈಬರ್ ಕ್ರೈಮ್‌ ಜಾಸ್ತಿ ಆಗಿದ್ದು, ಈ ವರ್ಷ 22,000 ಕೇಸ್ ದಾಖಲಾಗಿದೆ. ಕೊಲೆ, ರೇಪ್, ಫೋಕ್ಸೋ ಕೇಸ್ ಕಡಿಮೆ ಆಗಿದೆ. ಆದರೆ ಸೈಬರ್ ಕ್ರೈಮ್‌ ಕೇಸ್‌ಗಳು ಜಾಸ್ತಿ ಆಗುತ್ತಿದೆ. ಹೀಗಾಗಿ ಸರ್ಕಾರ ಇದೆಲ್ಲವನ್ನೂ ಗಂಭೀರವಾಗಿ ಪರಿಗಣಿಸಿ ಕ್ರಮಕ್ಕೆ ಮುಂದಾಗಿದೆ ಎಂದರು.

  • ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಕೊಡಿಸಲು ಕೋರ್ಟ್‌ನಲ್ಲಿ ಹೋರಾಟ: ಜಿ.ಪರಮೇಶ್ವರ್

    ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಕೊಡಿಸಲು ಕೋರ್ಟ್‌ನಲ್ಲಿ ಹೋರಾಟ: ಜಿ.ಪರಮೇಶ್ವರ್

    ಬೆಂಗಳೂರು: ಚಿತ್ರದುರ್ಗದ (Chitradurga) ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಸಾಕ್ಷ್ಯಾಧಾರಗಳನ್ನು ಆಧರಿಸಿ ಯಾರನ್ನು ಎ1, ಎ2 ಆರೋಪಿಗಳನ್ನಾಗಿ ಮಾಡಬೇಕು ಎಂಬುದನ್ನು ತನಿಖಾಧಿಕಾರಿಗಳು ನಿರ್ಧರಿಸಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (Dr.G Parameshwar) ಹೇಳಿದ್ದಾರೆ.

    ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕುಟುಂಬಸ್ಥರು ನಮ್ಮಿಂದ ನ್ಯಾಯಕ್ಕಾಗಿ ನಿರೀಕ್ಷಿಸುತ್ತಿದ್ದಾರೆ. ಅವರಿಗೆ ನ್ಯಾಯ ಒದಗಿಸಿಕೊಡುತ್ತೇವೆ. ಕೋರ್ಟ್‌ನಲ್ಲಿಯೂ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದೇವೆ ಎಂದಿದ್ದಾರೆ.ಇದನ್ನೂ ಓದಿ: ಬಂಗಾಳ ವಿಧಾನಸಭೆಯಲ್ಲಿ ಅತ್ಯಾಚಾರ ವಿರೋಧಿ ಮಸೂದೆ ಮಂಡನೆ

    ಇದೇ ವೇಳೆ ಸಿದ್ಧಾರ್ಥ ಟ್ರಸ್ಟ್‌ಗೆ ಕೆಐಎಡಿಬಿ ನಿವೇಶನ ಹಂಚಿಕೆ ಬಗ್ಗೆ ಸಚಿವ ಎಂ.ಬಿ.ಪಾಟೀಲ್ (M B Patil) ಸ್ಪಷ್ಟನೆ ನೀಡಿರುವ ಕುರಿತು ಮಾತನಾಡಿ, ಕಾನೂನು ಬಾಹಿರವಾಗಿ ಹಂಚಿಕೆ ಮಾಡಿಲ್ಲ. ಪರಿಶೀಲನೆ ನಡೆಸಿ ತೀರ್ಮಾನ ತೆಗೆದುಕೊಳ್ಳಬೇಕಾದವರು ರಾಜ್ಯಪಾಲರು. ಸಾವಿರಾರು ಜನ ದೂರು ಕೊಡುತ್ತಾರೆ. ಪರಿಶೀಲನೆ ನಡೆಸಿದ ಬಳಿಕ ಸತ್ಯಾಸತ್ಯತೆ ಗೊತ್ತಾಗುತ್ತದೆ. ಅನಾವಶ್ಯಕವಾಗಿ ಆಪಾದನೆ ಮಾಡುವುದು ಸರಿಯಲ್ಲ ಎಂದರು.

    ಬಿಜೆಪಿಯವರು (BJP) ರಾಜಕಾರಣ ಮಾಡುತ್ತಿದ್ದಾರೆ ಎಂದು ಮೊದಲಿಂದಲೂ ಹೇಳುತ್ತಿದ್ದೇವೆ. ರಾಜಕೀಯ ಉದ್ದೇಶ ಇಟ್ಟುಕೊಂಡು ಈ ರೀತಿ ನಡೆದುಕೊಳ್ಳುತ್ತಿದ್ದಾರೆ. ನಾವು ಜನರ ಮುಂದೆ ಸತ್ಯಸತ್ಯಾತೆ ಇಡುತ್ತೇವೆ. ನಾವು ಯಾವುದನ್ನು ಕೂಡ ಕಾನೂನು ಬಾಹಿರವಾಗಿ ಮಾಡಿಲ್ಲ ಎಂಬುದನ್ನು ಈಗಾಗಲೇ ಕೋರ್ಟ್‌ಗೆ ತಿಳಿಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

    ಬಿಟ್ ಕಾಯಿನ್, ವಾಲ್ಮೀಕಿ, ಕೋವಿಡ್ ಸಂದರ್ಭದಲ್ಲಿ ನಡೆದ ಅಕ್ರಮ ಸೇರಿದಂತೆ ಎಲ್ಲ ಪ್ರಕರಣಗಳ ಪರಿಶೀಲನೆ ನಡೆಯುತ್ತಿದೆ. ಎಸ್‌ಐಟಿಗೆ ವಹಿಸಿರುವ ಮತ್ತು ಸಿಐಡಿ ಕೈಗೊಂಡಿರುವ ಪ್ರಕರಣಗಳ ತನಿಖೆ ಯಾವ ಹಂತದಲ್ಲಿವೆ ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದೇನೆ. ಈ ಎಲ್ಲ ಪ್ರಕರಣಗಳ ರಿವ್ಯೂವ್ ನಡೆಸಲು ಮುಂದಿನ ದಿನಗಳಲ್ಲಿ ಸಮಿತಿ ರಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

    ಹೈಕಮಾಂಡ್ ಭೇಟಿ ಸಂಪ್ರದಾಯ:
    ಸಚಿವ ಸತೀಶ್ ಜಾರಕಿಹೊಳಿಯವರು (Satish Jarkiholi) ರಾಹುಲ್ ಗಾಂಧಿ (Rahul Gandhi) ಅವರನ್ನು ಭೇಟಿಯಾಗಿರುವ ಕುರಿತು ಮಾತನಾಡಿ, ದೆಹಲಿಗೆ ಹೋದಾಗ ಹೈಕಮಾಂಡ್ ಭೇಟಿ ಮಾಡುವುದು ಪಕ್ಷದ ಸಂಪ್ರದಾಯ. ಆ ಸಂಪ್ರದಾಯಕ್ಕೆ ಹೋಗಿರುತ್ತಾರೆ. ಎಲ್ಲದಕ್ಕೂ ರಾಜಕೀಯ ಬಣ್ಣ ಕಟ್ಟುವ ಅಗತ್ಯವಿಲ್ಲ. ಹೈಕಮಾಂಡ್ ಬೇರೆಬೇರೆ ಕೆಲಸಗಳನ್ನು ಒಪ್ಪಿಸಿರುತ್ತದೆ. ನನಗೆ ಸೋಷಿಯಲ್ ಮೀಡಿಯಾದ ಎಕ್ಸ್, ಫೇಸ್ಬುಕ್‌ನಲ್ಲಿ ವೈಯಕ್ತಿಕ ನಿಂದನೆಯ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ. ಇದರಿಂದ ಗೌರವಕ್ಕೆ ದಕ್ಕೆಯಾಗುತ್ತಿದೆ. ಇದೇ ವಿಚಾರಕ್ಕೆ ನಾನು ಭೇಟಿಯಾಗಿದ್ದೆ. ಅದನ್ನು ಬೇರೆ ತರ ಅರ್ಥೈಸಿಕೊಳ್ಳಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.ಇದನ್ನೂ ಓದಿ: ಆಂಧ್ರ, ತೆಲಂಗಾಣದಲ್ಲಿ ಭಾರಿ ಮಳೆ ಪ್ರವಾಹ; 35 ಮಂದಿ ಸಾವು

    ಇನ್‌ಸ್ಪೆಕ್ಟರ್‌ಗೆ ತರಾಟೆ:
    ಗೃಹ ಸಚಿವರ ಮನೆ ಬಳಿ ಮನವಿ ನೀಡಲು ಬಂದಿದ್ದವರನ್ನು ಕರೆದೊಯ್ದ ಸ್ಥಳೀಯ ಪೊಲೀಸರನ್ನು ಗೃಹ ಸಚಿವ ಪರಮೇಶ್ವರ್ ಅವರು ತರಾಟೆಗೆ ತೆಗೆದುಕೊಂಡರು. ಜನರು ಆಹವಾಲು ನೀಡಲು ಬಂದಾಗ ಸುಮ್ಮನೆ ನಿಂತುಕೊಂಡು ನೋಡಬೇಕು. ಇನ್ನೊಮ್ಮೆ ಆ ರೀತಿ ನಡೆದುಕೊಳ್ಳದಂತೆ ಸೂಚಿಸಿದ್ದಾರೆ.

    ಜನರು ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ, ಬಗೆಹರಿಯುತ್ತದೆ ಎಂಬ ಉದ್ದೇಶದಿಂದ ಬರುತ್ತಾರೆ. ನಮ್ಮ ಬಳಿಗೆ ಬಾರದಿದ್ದರೆ, ಇನ್ಯಾರ ಬಳಿ ಹೋಗಲು ಸಾಧ್ಯ. ಸುಮ್ಮನೆ ನಿಂತುಕೊಂಡು ನೋಡಬೇಕು ಎಂದು ಸದಾಶಿವನಗರ ಠಾಣೆ ಇನ್‌ಸ್ಪೆಕ್ಟರ್‌ಗೆ ತಾಕೀತು ಮಾಡಿದ್ದಾರೆ.

  • ಪ್ರಜ್ವಲ್ ಎಲ್ಲಿದ್ದಾರೆ ಅಂತ ಗೊತ್ತೇ ಇಲ್ಲ: ಪರಮೇಶ್ವರ್

    ಪ್ರಜ್ವಲ್ ಎಲ್ಲಿದ್ದಾರೆ ಅಂತ ಗೊತ್ತೇ ಇಲ್ಲ: ಪರಮೇಶ್ವರ್

    – ಕಾರ್ತಿಕ್ ಗೌಡ ಬೆಂಗಳೂರಿನಲ್ಲೆ ಇದ್ದಾನೆ

    ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಪ್ರಕರಣ ದಿನೇದಿನೇ ಹೊಸ ರೂಪ ಪಡೆದುಕೊಳ್ಳುತ್ತಿದೆ. ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಏಪ್ರಿಲ್ 29 ರಂದು ಪ್ರಜ್ವಲ್ ರೇವಣ್ಣ (Prajwal Revanna) ವಿದೇಶಕ್ಕೆ ಹಾರಿದ್ದಾರೆ. ಆದ್ರೆ ಇದುವರೆಗೂ ಸಹ ಅವರು ಎಲ್ಲಿದ್ದಾರೆ ಎಂಬುದರ ಬಗ್ಗೆ ನಿಖರವಾದ ಮಾಹಿತಿ ಇಲ್ಲ. ಪ್ರಜ್ವಲ್‍ಗಾಗಿ ಎಸ್‍ಐಟಿ (SIT) ಅಧಿಕಾರಿಗಳು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

    ಇಂದು ರಾಜ್ಯದ ಗೃಹ ಸಚಿವ ಡಾ. ಜಿ ಪರಮೇಶ್ವರ್ (Dr. G Parameshwar) ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪ್ರಜ್ವಲ್ ರೇವಣ್ಣ ಅವರು ಪ್ರಮುಖ ಆರೋಪಿ, ಅವರು ದೇಶ ಬಿಟ್ಟು ಹೋಗಿದ್ದಾರೆ. ಹಾಸನ ಜಿಲ್ಲೆಯ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಎಸ್‍ಐಟಿ ಗಂಭಿರವಾಗಿ ಪರಿಗಣಿಸಿದೆ. ಅವರನ್ನ ವಾಪಸ್ ಕರೆತರಲು ಸಿಬಿಐಗೆ ಬ್ಲೂ ಕಾರ್ನರ್ ನೋಟಿಸ್ ನೀಡಬೇಕೆಂದು ಎಸ್‍ಐಟಿಯವರು ಮನವಿ ಮಾಡಿದ್ರು. ಅಂತೆಯೇ ಸಿಬಿಐ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ. 197 ದೇಶಗಳಲ್ಲಿ ಇಂಟರ್  ಪೋಲ್ ನಿಂದ ಬ್ಲೂ ಕಾರ್ನರ್ ನೋಟಿಸ್ ಹೋಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣ- ಡಿಕೆಶಿಗೆ ದೇವರಾಜೇಗೌಡ ಓಪನ್‌ ಚಾಲೆಂಜ್

    ಕಾರ್ತಿಕ್ ಗೌಡ ಇಲ್ಲಿಯೇ ಇದ್ದಾರೆ. ಅವರು ಹೇಳಿಕೆ ಕೊಟ್ಟಿದ್ದಾರೆ. ಅವರ ಬಂಧನದ ಬಗ್ಗೆ ಎಸ್ ಐಟಿ ತೀರ್ಮಾನ ಮಾಡುತ್ತೆ. ಇನ್ನು ಪ್ರಜ್ವಲ್ ಎಲ್ಲಿದ್ದಾರೆ ಎಂಬುದು ಗೊತ್ತಿಲ್ಲ. ಜರ್ಮನಿಗೆ ಹೋಗಿರೋದಷ್ಟೇ ಗೊತ್ತು. ದುಬೈಗೆ ಹೋಗಿದ್ದಾರೆ ಅದೆಲ್ಲ ಗೊತ್ತಿಲ್ಲ, ಇನ್ನೂ ನಿಖರವಾಗಿ ಎಲ್ಲಿದ್ದಾರೆ ಗೊತ್ತಿಲ್ಲ ಎಂದು ಹೇಳಿದ್ರು.

  • ಲೋಕಸಭೆ ಸ್ಪರ್ಧೆ ಬಗ್ಗೆ ಖರ್ಗೆಯವರೇ ತೀರ್ಮಾನಿಸಬೇಕು: ಪರಮೇಶ್ವರ್

    ಲೋಕಸಭೆ ಸ್ಪರ್ಧೆ ಬಗ್ಗೆ ಖರ್ಗೆಯವರೇ ತೀರ್ಮಾನಿಸಬೇಕು: ಪರಮೇಶ್ವರ್

    ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆಯವರು (Mallikarjun Kharge) ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಅವರೇ ತೀರ್ಮಾನಿಸಬೇಕು. ಅವರೇ ಎಐಸಿಸಿ ಅಧ್ಯಕ್ಷರಾಗಿದ್ದು, ಸ್ಪರ್ಧೆ ಮಾಡುವ ನಿರ್ಧಾರ ಮಾಡಿದರೆ ಗೆಲ್ಲಿಸಿಕೊಂಡು ಬರುವ ಕೆಲಸ ನಾವು ಮಾಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (Dr G. Parameshwar) ಹೇಳಿದ್ದಾರೆ.

    ಬೆಂಗಳೂರಲ್ಲಿ ಮಾತನಾಡಿದ ಅವರು, ಪ್ರಧಾನಿ ಹುದ್ದೆಗೆ ಖರ್ಗೆಯವರ ಹೆಸರನ್ನು ಪ್ರಸ್ತಾಪಿಸಿರುವುದು ನಮಗೂ ಸಂತೋಷ ತಂದಿದೆ. ಕರ್ನಾಟಕದಿಂದ ಮತ್ತೊಬ್ಬರು ಪ್ರಧಾನಿ ಆಗ್ತಾರೆ ಎನ್ನುವುದಾದರೆ ಎಲ್ಲರಿಗೂ ಖುಷಿಯ ವಿಚಾರವಾಗಿದೆ. ಈ ಬಗ್ಗೆ ಖರ್ಗೆಯವರು ಇನ್ನೂ ಸಮಯ ಇದೆ. ಮೊದಲು ಗೆಲ್ಲೋಣ ಎಂದಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಜ.12 ಕ್ಕೆ ಯುವ‌ನಿಧಿ ಹಣ ವರ್ಗಾವಣೆ; ಡಿ.26 ರಿಂದ ನೋಂದಣಿಗೆ ಚಾಲನೆ: ಸಚಿವ ಶರಣಪ್ರಕಾಶ್ ಪಾಟೀಲ್

    ಇದೇ ವೇಳೆ ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿಯವರು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಬಿಜೆಪಿಗೆ ಪ್ರಜಾಪ್ರಭುತ್ವದ ಮೇಲೆ ವಿಶ್ವಾಸ ಇಲ್ಲ ಎಂದು ಕಾಂಗ್ರೆಸ್ ಮೊದಲಿನಿಂದಲೂ ಹೇಳುತ್ತಾ ಬಂದಿದೆ. ಈಗ ಸಂಸತ್ತಿನಲ್ಲಿ ಸಸ್ಪೆಂಡ್ ಮಾಡಿದ್ದಕ್ಕಿಂತ ಬೇರೆ ಸಾಕ್ಷಿ ಬೇಕಾ? ನೂರಾರು ಜನ ಸಂಸದರನ್ನ ಹೊರಗಡೆ ಇಟ್ಟು ಪ್ರಮುಖವಾದ ಮಸೂದೆಗಳನ್ನು ಪಾಸ್ ಮಾಡಿದ್ದಾರೆ. ಇದಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ಎಂದು ಹೇಳಲು ಸಾಧ್ಯವೇ ಎಂದು ಅವರು ಪ್ರಶ್ನಿಸಿದ್ದಾರೆ.

    ಬಾಗಲಕೋಟೆಯಲ್ಲಿ ಮನೋರಂಜನ್ ಸ್ನೇಹಿತನ ವಿಚಾರಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮನೋರಂಜನ್ ಜೊತೆಯಲ್ಲಿ ಓದುತ್ತಿದ್ದ ಎಂದು ಕರೆದುಕೊಂಡು ಹೋಗಿದ್ದಾರೆ. ಡಿ.4ರ ತನಕ ಅವರಿಬ್ಬರೂ ಫೋನ್ ಮೂಲಕ ಸಂಭಾಷಣೆ ನಡೆಸಿದ್ದಾರೆ. ಅವರಿಗೆ ಯಾವ ಮಾಹಿತಿ ಇರಬಹುದು ಎಂಬುದನ್ನು ಕೇಳುವುದಕ್ಕೆ ವಿಚಾರಣೆ ಮಾಡಿದ್ದಾರೆ. ಇವರಿಗೆ ಏನಾದರೂ ಮೊದಲೇ ಹೇಳಿಕೊಂಡಿದ್ದನಾ? ಈ ರೀತಿ ಮಾಡುತ್ತೇವೆ ಎಂಬುದನ್ನು ಮೊದಲೇ ಹೇಳಿದ್ದನಾ ಎಂಬ ಬಗ್ಗೆ ವಿಚಾರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿಂದು 24 ಮಂದಿಗೆ ಕೊರೊನಾ ಪಾಸಿಟಿವ್‌; ಶತಕ ಗಡಿ ದಾಟಿದ ಸೋಂಕಿತರ ಸಂಖ್ಯೆ

  • ಪರಮೇಶ್ವರ್ ಮನೆಯಲ್ಲಿ ಡಿನ್ನರ್ ಪಾರ್ಟಿ- ಗೃಹಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾದ್ರಾ ಸಿಎಂ?

    ಪರಮೇಶ್ವರ್ ಮನೆಯಲ್ಲಿ ಡಿನ್ನರ್ ಪಾರ್ಟಿ- ಗೃಹಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾದ್ರಾ ಸಿಎಂ?

    ಬೆಂಗಳೂರು: ಗೃಹ ಸಚಿವ ಪರಮೇಶ್ವರ್ (Dr. G Parameshwar) ಅವರ ಸದಾಶಿವನಗರ ನಿವಾಸದಲ್ಲಿ ಭೋಜನ ಕೂಟ (Dnner Party) ಏರ್ಪಡಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಡಿನ್ನರ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

    ಈ ಭೇಟಿಯಲ್ಲಿ ನಿಗಮ ಮಂಡಳಿ ನೇಮಕದ ಬಗ್ಗೆ ನೂತನ ಕಾರ್ಯಾಧ್ಯಕ್ಷರ ನೇಮಕದ ಬಗ್ಗೆ ಉಭಯ ನಾಯಕರ ಮಧ್ಯೆ ಸಾಕಷ್ಟು ಚರ್ಚೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಸಿಎಂ ಅವರು ಪರಮೇಶ್ವರ್ ರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾದ್ರಾ ಎಂಬ ಪ್ರಶ್ನೆ ಎದ್ದಿದೆ.

    8 ವರ್ಷ ಕೆಪಿಸಿಸಿ ಅಧ್ಯಕ್ಷರಾಗಿ, ಉಪಮುಖ್ಯಮಂತ್ರಿ ಆಗಿದ್ದ ಪರಮೇಶ್ವರ್ ಅವರನ್ನು ಈ ಹಿಂದೆ 2013 ರಲ್ಲಿ ಕೊರಟಗೆರೆಯಲ್ಲಿ ಸೋಲಿಸಿದ ಅಪವಾದವನ್ನು ಸಿದ್ದರಾಮಯ್ಯ (Siddaramaiah) ಹೊತ್ತಿದ್ದರು. ಹೀಗಾಗಿ ಸದ್ಯ ಈ ಮೂಲಕ ಪರಮೇಶ್ವರ್ ಅವರನ್ನ ವಿಶ್ವಾಸಕ್ಕೆ ತಗೆದುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ ಎಂಬ ಚರ್ಚೆ ಪಕ್ಷದ ವಲಯದಲ್ಲಿ ಕೇಳಿಬರುತ್ತಿದೆ. ಒಟ್ಟಿನಲ್ಲಿ ಪರಮೇಶ್ವರ್ ಸಿದ್ದರಾಮಯ್ಯ ಸ್ನೇಹ ಮುಂದಿನ ದಿನಗಳಲ್ಲಿ ಕಾಂಗ್ರೆಸ್‍ನ ಸಾಕಷ್ಟು ಆಂತರಿಕ ಬೆಳವಣಿಗೆಗಳಿಗೆ ಕಾರಣವಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.

    ಭೇಟಿ ಬಳಿಕ ಗೃಹ ಸಚಿವ ಪರಮೇಶ್ವರ್ ಮಾತನಾಡಿ, ಸಿಎಂ ಅವರು ನಮ್ಮ ಮನೆಗೆ ಬಂದಿದ್ರು. ನಾನು ಸತೀಶ್, ಮಹಾದೇವಪ್ಪನವರು ಊಟಕ್ಕೆ ಸೇರಿದ್ವಿ. ಊಟ ಮಾಡಿದ್ವಿ ಅಷ್ಟೇ ಬೇರೆ ಏನೂ ಚರ್ಚೆಯಾಗಿಲ್ಲ. ನಿಗಮ ಮಂಡಳಿಯ ಬಗ್ಗೆ ಇಲ್ಲಿ ಚರ್ಚೆ ಮಾಡೋಕಾಗುತ್ತಾ..?. ರಾಜಕೀಯವಾಗಿ ಯಾವುದೇ ಚರ್ಚೆಯಾಗಿಲ್ಲ ಎಂದು ಹೇಳಿದರು. ಇದನ್ನೂ ಓದಿ: Hombale Films: ನ.4ರಂದು ರಿಲೀಸ್ ಆಗಲಿದೆ ಹುಲಿ ಸಂರಕ್ಷಣೆಯ ಸಾಕ್ಷ್ಯ ಚಿತ್ರ

    ಇತ್ತ ಸಚಿವ ಸತೀಶ್ ಜಾರಕಿಹೊಳಿ (Sathish Jarakiholi) ಪ್ರತಿಕ್ರಿಯಿಸಿ, ನಾನು ಸಿಎಂ ಎಲ್ಲಾ ಊಟಕ್ಕೆ ಬಂದಿದ್ವಿ. ನಾವು ಸೇರಿದ ಮೇಲೆ ರಾಜಕೀಯ ಅಲ್ಲದೇ ಬೇರೆ ಏನು ಮಾತಾಡೋದು..?. ಸಣ್ಣಪುಟ್ಟ ರಾಜಕೀಯ ಚರ್ಚೆಯಾಗಿದೆ. ರಾಜಕೀಯ, ರಾಜಕಾರಣ ಎಂದ ಮೇಲೆ ಸಣ್ಣ ಪುಟ್ಟ ಅಸಮಾಧಾನ ಇದ್ದೇ ಇರುತ್ತದೆ. ಮಾತುಕತೆಗಳು ಅಗಾಗ ಅಗ್ತಿರ್ತಾವೆ ಅದು ಬಿಟ್ಟು ಬೇರೆ ಏನೂ ಇಲ್ಲ. ನಿಗಮ ಮಂಡಳಿಯ ನೇಮಕದ ಬಗ್ಗೆ ಚರ್ಚೆಯಾಗಿಲ್ಲ ಅಂದ್ರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎಚ್‍ಎಎಲ್‍ನಲ್ಲಿ ಉದ್ಯೋಗವಕಾಶಕ್ಕೆ ಮನವಿ: ಪರಮೇಶ್ವರ್

    ಎಚ್‍ಎಎಲ್‍ನಲ್ಲಿ ಉದ್ಯೋಗವಕಾಶಕ್ಕೆ ಮನವಿ: ಪರಮೇಶ್ವರ್

    ತುಮಕೂರು: ಜಿಲ್ಲೆಯ ಗುಬ್ಬಿ ಸಮೀಪ ನಿರ್ಮಾಣವಾಗಿರುವ ಎಚ್‍ಎಎಲ್ (HAL) ಘಟಕದಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಸಂಸ್ಥೆ ಮುಖ್ಯಸ್ಥರನ್ನು ಕೇಳಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ (G Parameshwar) ತಿಳಿಸಿದರು.

    ಸ್ವಾತಂತ್ರ್ಯ ದಿನಾಚರಣೆ (Independence Day) ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಅರ್ಹತೆ ಆಧಾರದ ಮೇಲೆ ಸ್ಥಳೀಯರಿಗೆ ಉದ್ಯೋಗ ಕೊಡಬೇಕು. ಜಮೀನು ಕೊಟ್ಟವರಿಗೆ ಕಡ್ಡಾಯವಾಗಿ ಉದ್ಯೋಗ (Job) ನೀಡಬೇಕು. ಕೊನೆಗೆ ಕಸ ಗುಡಿಸುವ ಕೆಲಸವನ್ನಾದರೂ ಕೊಡುವಂತೆ ಹೇಳಿದ್ದೇವೆ ಎಂದರು.

    ಜಿಲ್ಲೆಯಲ್ಲಿ ಹೊಸದಾಗಿ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ರಾಜ್ಯ ಸರ್ಕಾರದ ಹಂತದಲ್ಲಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಸದ್ಯಕ್ಕೆ ವಿಮಾನ ನಿಲ್ದಾಣ ನಿರ್ಮಿಸುವ ಪ್ರಸ್ತಾಪ ಇಲ್ಲ. ಆದರೆ ಮುಂದಿನ ದಿನಗಳಲ್ಲಿ ಕಾರ್ಗೊ ವಿಮಾನ ನಿಲ್ದಾಣ ನಿರ್ಮಾಣವಾಗಬಹುದು ಎಂದು ಸುಳಿವು ನೀಡಿದರು. ಇದನ್ನೂ ಓದಿ: ಅದೇನ್ ಬಿಚ್ಚಿಡ್ತಾರೋ ಬಿಚ್ಚಿಡಲಿ- ಹೆಚ್‍ಡಿಕೆಗೆ ಡಿಕೆಶಿ ಸವಾಲು

    ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ನಡೆದ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕರು ಬೇಡಿಕೆ ಸಲ್ಲಿಸಿದ್ದು, ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ನೀಡುವಂತೆ ಕೇಳಿಕೊಂಡಿದ್ದೇವೆ. ತುಮುಲ್ ನೇಮಕಾತಿಯಲ್ಲಿ ಅಕ್ರಮ ನಡೆದಿರುವುದು ಗಮನಕ್ಕೆ ಬಂದರೆ ತನಿಖೆ ನಡೆಸಲಾಗುವುದು. ಬರಪೀಡಿತ ತಾಲೂಕು ಘೋಷಣೆ ಬಗ್ಗೆ ಸಚಿವ ಸಂಪುಟ ಸಭೆ ನಿರ್ಧಾರ ಕೈಗೊಳ್ಳಬೇಕಿದೆ ಎಂದು ವಿವರಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪೊಲೀಸ್ ಠಾಣೆ ಮೆಟ್ಟಿಲೇರಿದ ಡಾ. ಜಿ. ಪರಮೇಶ್ವರ್!

    ಪೊಲೀಸ್ ಠಾಣೆ ಮೆಟ್ಟಿಲೇರಿದ ಡಾ. ಜಿ. ಪರಮೇಶ್ವರ್!

    ಬೆಂಗಳೂರು: ಸೋಶಿಯಲ್ ಮೀಡಿಯಾ (Social Media) ಹಾವಳಿಯಿಂದ ಬೇಸತ್ತ ಮಾಜಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ (Dr. G Parameshwar) ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

    ಸೋಶಿಯಲ್ ಮೀಡಿಯಾದಲ್ಲಿ ಅವಹೇಳನ ಬರವಣಿಗೆ ವಿರುದ್ಧ ಪರಮೇಶ್ವರ್ ದೂರು ನೀಡಿದ್ದಾರೆ. ಫೇಸ್‍ಬುಕ್ (Facebook) ಮತ್ತು ಯೂಟ್ಯೂಬ್ (Youtube) ನಲ್ಲಿ ತಮ್ಮ ಮತ್ತು ತಮ್ಮ ಮಗಳ ಬಗ್ಗೆ ವೀಡಿಯೋ ಹಾಕಿ ಅವಹೇಳನ ಮಾಡಿದ್ದು, ಫೇಸ್ ಬುಕ್ ಮತ್ತು ಯೂಟ್ಯೂಬ್ ನಲ್ಲಿ ನಕಲಿ ಖಾತೆ ತೆರೆದು ವೀಡಿಯೋ ಅಪ್ಲೋಡ್ ಮಾಡಲಾಗ್ತಿದೆ. ರಾಜಕೀಯವಾಗಿ ತಗ್ಗಿಸಲು ಸಾಮಾಜಿಕ ಜಾಲತಾಣಗಳನ್ನ ಬಳಸಿಕೊಂಡಿದ್ದಾರೆ ಎಂದು ದೂರು ನೀಡಲಾಗಿದೆ. ಇದನ್ನೂ ಓದಿ: ಕಾಯಕಯೋಗಿಗಳಿಂದ ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜು

    ಇಬ್ಬರ ಬಗ್ಗೆ ಅವಹೇಳನಕಾರಿ ವೀಡಿಯೋಗಳನ್ನ ಅಪ್ಲೋಡ್ ಮಾಡುವುದರ ಜೊತೆಗೆ ಪರಮೇಶ್ವರ್ ಘನತೆಗೆ ಕುಂದು ತರಲು ಯತ್ನಿಸಿದ್ದಾರೆ ಅಂತಾ ಪೊಲೀಸ್ ಠಾಣೆಗೆ ತಮ್ಮ ಆಪ್ತನ ಮೂಲಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ

    ಈ ಬಗ್ಗೆ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎಫ್‍ಐಆರ್ ದಾಖಲಾಗಿದೆ.

  • ಹಿಂದೂ ಜಪ ಆರಂಭಿಸಿದ ಪರಮೇಶ್ವರ್ – ಗೋ ಪೂಜೆ, ಧರ್ಮಗೋಷ್ಠಿ ಆಯೋಜನೆ

    ಹಿಂದೂ ಜಪ ಆರಂಭಿಸಿದ ಪರಮೇಶ್ವರ್ – ಗೋ ಪೂಜೆ, ಧರ್ಮಗೋಷ್ಠಿ ಆಯೋಜನೆ

    ತುಮಕೂರು: ಚುನಾವಣೆ ಸಮೀಪಿಸುತಿದ್ದಂತೆ ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ (G Parameshwar) ಹಿಂದೂ (Hindu) ಧರ್ಮದ ಜಪ ಮಾಡುತ್ತಿದ್ದಾರೆ. ಕೊರಟಗೆರೆ ಕ್ಷೇತ್ರದ ಚಿಕ್ಕತೊಟ್ಲುಕೆರೆ ಅಟವಿ ಮಠದಲ್ಲಿ ಧರ್ಮಗೋಷ್ಠಿ ಮತ್ತು ಗೋ ಪೂಜೆ (Go Pooja) ಆಯೋಜನೆ ಮಾಡಿದ್ದಾರೆ.

    ಈ ವೇಳೆ ಧರ್ಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಿ.ಪರಮೇಶ್ವರ್, ಹಿಂದೂ ಧರ್ಮ ಬಹಳ ಶ್ರೇಷ್ಠವಾದ ಧರ್ಮ, ಹಿಂದೂ ಧರ್ಮದ ಬದ್ಧತೆಗಳು, ಹಿಂದೂ ಧರ್ಮ ಕೊಟ್ಟ ಅನೇಕ ವಿಚಾರಧಾರೆಗಳನ್ನು ಚರ್ಚೆ ಮಾಡಿ ಸಮಾಜಕ್ಕೆ ಇನ್ನೊಮ್ಮೆ ತಿಳಿಸುವ ಅವಶ್ಯಕತೆ ಇದೆ ಹೀಗಾಗಿ ಧರ್ಮಗೋಷ್ಠಿ ಆಯೋಜನೆ ಮಾಡಲಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ರಾಜ್ಯಾದ್ಯಂತ 108 ಅಂಬುಲೆನ್ಸ್ ನೌಕರರ ಹೋರಾಟದ ಎಚ್ಚರಿಕೆ

    ಇತ್ತೀಚಿನ ದಿನಗಳಲ್ಲಿ ಹಿಂದೂ ಧರ್ಮದ ಬಗ್ಗೆ ಗೊಂದಲ ಎದ್ದಿದೆ. ಈ ಧರ್ಮ ಸಭೆಯಲ್ಲಿ ಅದಕ್ಕೆ ಸ್ಪಷ್ಟೀಕರಣ ಸಿಗಲಿದೆ ಎಂದಿದ್ದು, ಗೋ ಪೂಜೆಯ ಮಹತ್ವವನ್ನೂ ಸಾರಿದ್ದಾರೆ. ಗೋ ಪೂಜೆ ಅನ್ನೋದು ಹಿಂದೂ ಧರ್ಮದಲ್ಲಿ ಬಹುದೊಡ್ಡ ಧಾರ್ಮಿಕ ಕಾರ್ಯಕ್ರಮ. ಗೋ ಪೂಜೆ ಮಾಡೋದ್ರಿಂದ ನಾವು 33 ಕೋಟಿ ದೇವರುಗಳಿಗೆ ತಲುಪುತ್ತೇವೆ. ಹಾಗಾಗಿ ನಾವು ಇವತ್ತು ಗೋ ಪೂಜೆ ಮಾಡಿ ಆ ಶ್ರೇಷ್ಠತೆಯನ್ನು ಗಳಿಸಿಕೊಳ್ಳಬೇಕು. ಅದರಿಂದ ಸಮಾಜಕ್ಕೆ, ಮನುಕುಲಕ್ಕೆ ಒಳ್ಳೆದಾಗಬೇಕು ಎಂದಿದ್ದಾರೆ. ಗೋ ಹತ್ಯೆ ನಿಷೇಧ ಕಾನೂನು ವಿರೋಧಿಸುವ ಪಕ್ಷದ ನಾಯಕ ಗೋ ಪೂಜೆಗೆ ಬೆಂಬಲ ಸೂಚಿಸಿರುವುದು ಅಚ್ಚರಿ ಮೂಡಿಸಿದೆ. ಇದನ್ನೂ ಓದಿ: ವಿಕೃತಕಾಮಿ ಉಮೇಶ್‌ ರೆಡ್ಡಿಗೆ ರಿಲೀಫ್‌ – ಸುಪ್ರೀಂನಿಂದ ಗಲ್ಲು ಶಿಕ್ಷೆ ರದ್ದು

    Live Tv
    [brid partner=56869869 player=32851 video=960834 autoplay=true]

  • ನಮಗೆ ಇಡೀ ಜಿಲ್ಲೆ ಅಭಿವೃದ್ದಿ ಮುಖ್ಯ, ಅಂತಹ ಪಾಪದ ಕೆಲಸ ನಾವು ಮಾಡಿಲ್ಲ: ಮಾಧುಸ್ವಾಮಿ

    ನಮಗೆ ಇಡೀ ಜಿಲ್ಲೆ ಅಭಿವೃದ್ದಿ ಮುಖ್ಯ, ಅಂತಹ ಪಾಪದ ಕೆಲಸ ನಾವು ಮಾಡಿಲ್ಲ: ಮಾಧುಸ್ವಾಮಿ

    ತುಮಕೂರು: ನಮಗೆ ಇಡೀ ಜಿಲ್ಲೆಯ ಅಭಿವೃದ್ಧಿ ಮುಖ್ಯ. ಅಂತಹ ಪಾಪದ ಕೆಲಸ ನಾವು ಮಾಡಿಲ್ಲ ಎಂದು ಸಚಿವ ಮಾಧುಸ್ವಾಮಿ ಅವರು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ ಕ್ಷೇತ್ರದ ಅನುದಾನವನ್ನು ಬಿಜೆಪಿ ಸರ್ಕಾರ ಹಿಂಪಡೆದಿದೆ ಎಂಬ ಪರಂ ಆರೋಪಕ್ಕೆ ಪ್ರತಿಕ್ರಿಯಿಸಿದರು. ಜಿ.ಪರಮೇಶ್ವರ್ ಜಿಲ್ಲಾ ಮಂತ್ರಿಗಳಾಗಿದ್ದಾಗ ತಾರತಮ್ಯ ನೀತಿ ಅನುಸರಿಸಿದ್ದರು. ಕೇವಲ ಮಧುಗಿರಿ ಮತ್ತು ಕೊರಟಗೆರೆಗೆ 110 ಭವನಗಳನ್ನ ಕೊಟ್ಟಿದ್ರು. ಚಿಕ್ಕನಾಯಕನಹಳ್ಳಿಗೆ 2 ಮಾತ್ರ ಭವನ ಕೊಟ್ಟಿದ್ರು. ಇದು ಮಾನ ಮರ್ಯಾದೇ ಇರುವವರು ಮಾಡೊ ಕೆಲಸನಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಜಯಲಲಿತಾ ನಿವಾಸ ಸ್ವಾಧೀನ- ತಮಿಳುನಾಡು ಸರ್ಕಾರದ ನಿಲುವಿಗೆ ಹೈಕೋರ್ಟ್ ತಡೆ

    ನಮಗೆ ಇಡೀ ಜಿಲ್ಲೆ ಅಭಿವೃದ್ದಿ ಮುಖ್ಯ, ಅಂತಹ ಪಾಪದ ಕೆಲಸ ನಾವು ಮಾಡಿಲ್ಲ. ಇವರ ಸರ್ಕಾರ ಇದ್ದಾಗ ಇಚ್ಚಾನುಸಾರ ಅನುದಾನ ಮಂಜೂರು ಮಾಡಿಕೊಂಡಿದ್ರು. ಅದಕ್ಕೆಲ್ಲ ಅಡ್ಡಗೋಡೆ ಹಾಕಿ ಕಂಟ್ರೋಲ್ ಮಾಡಿದ್ವಿ. ಎಲ್ಲಾ ಕಡೆ ಅನುದಾನ ಸಮರ್ಪಕವಾಗಿ ಹಂಚಲು ವಾತವರಣ ಸೃಷ್ಟಿ ಮಾಡಿದ್ದೇವೆ. ಮಂತ್ರಿಯಾಗಿ ನಿಮ್ಮ ಜನ್ಮಕ್ಕೆ ನಾಚಿಕೆಯಾಗಲ್ವಾ..? ಕೊರಟಗೆರೆ ಕ್ಷೇತ್ರಕ್ಕೆ ಮನೆಗಳ ಮಹಾಪೂರ ಹರಿಸಿದ್ರಿ. ಬೇರೆ ಕ್ಷೇತ್ರಗಳಿಗೆ ಏಕೆ ಮಾಡ್ಲಿಲ್ಲ ಎಂದು ಮಾಧುಸ್ವಾಮಿ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿಂಹಕ್ಕೆ ಆಹಾರವಾಗುತ್ತಿದ್ದ ಯುವಕ: ತಪ್ಪಿತು ಭಾರೀ ದುರಂತ

  • ಬೆಲೆ ಏರಿಕೆ ಮಾಡಿದ್ರೂ ಸಿಂದಗಿಯಲ್ಲಿ ಬಿಜೆಪಿಗೆ ಮುನ್ನಡೆ: ಜಿ.ಪರಮೇಶ್ವರ್

    ಬೆಲೆ ಏರಿಕೆ ಮಾಡಿದ್ರೂ ಸಿಂದಗಿಯಲ್ಲಿ ಬಿಜೆಪಿಗೆ ಮುನ್ನಡೆ: ಜಿ.ಪರಮೇಶ್ವರ್

    ತುಮಕೂರು: ಬೆಲೆ ಏರಿಕೆ ಸಂದರ್ಭದಲ್ಲೂ ಬಿಜೆಪಿಗೆ 30 ಸಾವಿರ ಲೀಡ್ ಸಿಕ್ಕಿರುವುದು ಆಶ್ಚರ್ಯ ತಂದಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಹೇಳಿದರು.

    ಉಪ ಚುನಾವಣೆ ಫಲಿತಾಂಶ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂದಗಿಯಲ್ಲಿ ನಮ್ಮ ಪಕ್ಷ ಅಷ್ಟೊಂದು ಮತ ಸೆಳೆಯಲಿಕ್ಕೆ ಆಗಿಲ್ಲ. ಅದಕ್ಕೆ ಕಾರಣ ಏನು ಎನ್ನುವುದನ್ನು ಪರಿಶೀಲಿಸುತ್ತೇವೆ. ಹಾನಗಲ್ ಸಿಎಂ ತವರು ಜಿಲ್ಲೆಯಾದರೂ ನಾವು ಗೆದ್ದಿರುವುದು ಸಂತಸ ತಂದಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಿಂದಗಿಯಲ್ಲಿ ಲಿಂಗಾಯತರು ಮತ ಹಾಕಿಲ್ಲ, ರಾಷ್ಟ್ರೀಯ ಪಕ್ಷಗಳು ಹಣದ ಹೊಳೆ ಹರಿಸಿ ಗೆದ್ದಿವೆ: ಹೆಚ್‍ಡಿಡಿ ಆರೋಪ

    ಜನ ಇವತ್ತು ಶ್ರೀನಿವಾಸ್ ಮಾನೆ ಅವರ ಕೈ ಹಿಡಿದಿದ್ದಾರೆ. ಅವರು ಕ್ಷೇತ್ರದಲ್ಲೇ ಅಭಿವೃದ್ಧಿ ಕೆಲಸ ಮಾಡಿಕೊಂಡಿದ್ದರು, ಜನರ ಸಂಪರ್ಕದಲ್ಲಿದ್ದರು. ಹೀಗಾಗಿ ಜನ ಕೈ ಹಿಡಿದಿದ್ದಾರೆ ಎಂದರು.

    ಎರಡು ಕ್ಷೇತ್ರದಲ್ಲಿ ಜೆಡಿಎಸ್‌ ನೆಲೆ ಇಲ್ಲದಂತಾಗಿದೆ. ಸಿಂದಗಿಯಲ್ಲಿ ಜೆಡಿಎಸ್ ಪ್ರಾಬಲ್ಯ ಇತ್ತು, ಈಗ ನೆಲೆ ಕಳೆದುಕೊಂಡಿದೆ. ಪೆಟ್ರೋಲ್, ಡಿಸೇಲ್, ಅಡುಗೆ ಅನಿಲದಂತಹ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದರೂ ಸಿಂದಗಿಯಲ್ಲಿ ಇನ್ನೂ ಅವರಿಗೆ ಮತ ಹಾಕಿ ಗೆಲ್ಲಿಸಿರುವುದು ನನಗೆ ಆಶ್ಚರ್ಯ ತಂದಿದೆ. ಇವತ್ತಿನ ಫಲಿತಾಂಶ ನೋಡಿದರೆ, ಅಗತ್ಯ ವಸ್ತು ಬೆಲೆ ಏರಿಕೆಗೆ ಅರ್ಥ ಇಲ್ಲ ಎನಿಸುತ್ತಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಹೆಚ್ಚು ಕೆಲಸ ಮಾಡಬೇಕು ಎನ್ನುವ ಸಂದೇಶ ಕೊಟ್ಟಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಅಪ್ಪು ಜೊತೆಗಿನ ಲಾಸ್ಟ್ ಸೆಲ್ಫಿ ಶೇರ್ ಮಾಡಿದ ರಾಘಣ್ಣ

    ಹಾನಗಲ್‌ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹಿನ್ನೆಡೆಯಾಗಿದೆ‌. ಈ ಫಲಿತಾಂಶ ದಿಕ್ಸೂಚಿಯಲ್ಲ, ನಾವು ಇನ್ನೂ ಹೆಚ್ಚು ಕೆಲಸ ಮಾಡಬೇಕು. ಇನ್ನೂ ಪರಿಣಾಮಕಾರಿಯಾಗಿ ಕಾಂಗ್ರೆಸ್ ಮುಖಂಡರು ಕೆಲಸ ಮಾಡಬೇಕು. ಒಂದು ಸೀಟ್ ಗೆದ್ದರೆ ಸಾಲದು ಇನ್ನೂ ಗೆಲ್ಲಬೇಕಿತ್ತು. ಹಾಗಾಗಿ ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟನೆ ಮಾಡಬೇಕು ಎಂದು ಕರೆ ನೀಡಿದರು.

    sindagi

    ಚುನಾವಣೆ ಫಲಿತಾಂಶದಿಂದ ನೆಲೆ ಕಳೆದುಕೊಳ್ಳುತ್ತಿದ್ದೇವೆ ಎಂಬ ಸಂದೇಶ ಜೆಡಿಎಸ್‌ಗೆ ಹೋಗಿದೆ. ಇದೇ ರೀತಿ ಮುಂದುವರಿದರೆ ಜೆಡಿಎಸ್ ಸಿಂಗಲ್ ಡಿಜಿಟ್ ತಲುಪುತ್ತೆ. ನಾವು ಮುಂದಿನ ದಿನಗಳಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.