Tag: Dr.G.Parameshwara

  • ಚಿತ್ತಾಪುರ RSS ಪಥ ಸಂಚಲನ – ಸರ್ಕಾರದ ಆದೇಶದಂತೆ ಜಿಲ್ಲಾಡಳಿತ ತೀರ್ಮಾನ: ಪರಮೇಶ್ವರ್

    ಚಿತ್ತಾಪುರ RSS ಪಥ ಸಂಚಲನ – ಸರ್ಕಾರದ ಆದೇಶದಂತೆ ಜಿಲ್ಲಾಡಳಿತ ತೀರ್ಮಾನ: ಪರಮೇಶ್ವರ್

    – ಕಡ್ಡಾಯ ಅನುಮತಿ ಆದೇಶ RSS ದೃಷ್ಟಿಯಿಂದ ಮಾಡಿದ್ದಲ್ಲ ಎಂದ ಸಚಿವ

    ಬೆಂಗಳೂರು: ಚಿತ್ತಾಪುರದಲ್ಲಿ (Chittapur) ಪಥ ಸಂಚಲನ ನಡೆಸಲು ಆರ್‌ಎಸ್‌ಎಸ್ ಹಾಗೂ ಭೀಮ್ ಆರ್ಮಿ ಒಟ್ಟಿಗೆ ಅನುಮತಿ ಕೇಳಿದ್ದಾರೆ. ಸರ್ಕಾರದ ಮಾರ್ಗಸೂಚಿಯನ್ವಯ ಜಿಲ್ಲಾಡಳಿತ ಅದರ ತೀರ್ಮಾನ ಕೈಗೊಳ್ಳಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G.Parameshwara) ತಿಳಿಸಿದರು.

    ಬೆಂಗಳೂರಿನಲ್ಲಿ ಮಾತಾಡಿದ ಪರಮೇಶ್ವರ್, ಸರ್ಕಾರದ ಮಾರ್ಗಸೂಚಿ ಪ್ರಕಾರ ತೀರ್ಮಾನ ತೆಗೆದುಕೊಳ್ಳಲಾಗುತ್ತೆ. ಸಾರ್ವಜನಿಕ, ಸರ್ಕಾರಿ ಸ್ಥಳಗಳ ಬಳಕೆ ಅನುಮತಿ ಪಡೆಯುವ ಆದೇಶ ಆರ್‌ಎಸ್‌ಎಸ್‌ಗೆ ಮಾತ್ರ ಸೀಮಿತ ಅಲ್ಲ. ಈಗ ಹೊರಡಿಸಿರುವ ತುರ್ತು ಆದೇಶದಲ್ಲಿ ಕ್ಲಾರಿಟಿ ಇದೆ. ಅದರಲ್ಲಿ ಎಲ್ಲಾದರೂ ಆರ್‌ಎಸ್‌ಎಸ್ ಪದ ಬಳಕೆ ಆಗಿದೆಯಾ? ಸುಮ್ಮನೆ ಅನವಶ್ಯಕವಾಗಿ RSSಗೆ ಮಾಡಿದ್ದಾರೆ ಅಂತ ಹೇಳೋದು ಸರಿಯಲ್ಲ. ನಾವು ಆರ್‌ಎಸ್ಎಸ್‌ ಒಬ್ಬರಿಗೆ ಮಾಡಲಿಲ್ಲ. ನಾವು ಎಲ್ಲರಿಗೂ ಅನ್ವಯ ಆಗುವಂತೆ ಮಾಡಿದ್ದೇವೆ. ಸಂಘರ್ಷ ಆಗಬಾರದು ಶಾಂತಿಯುತವಾಗಿ ನಡೆಯಬೇಕು ಎನ್ನುವ ಕಾರಣಕ್ಕಾಗಿ ಮಾಡಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಸೇಡಂ ಆರ್‌ಎಸ್ಎಸ್ ಪಥಸಂಚಲನದಲ್ಲಿ ಸರ್ಕಾರಿ ವೈದ್ಯ ಭಾಗಿ

    ಸಾಂದರ್ಭಿಕ ಚಿತ್ರ

    ಸರ್ಕಾರಿ ಶಾಲಾ ಕಾಲೇಜಿನಲ್ಲಿ ಯಾರಿಗೂ ಕೊಡಬಾರದು ಅಂತಲೇ ಈ ತೀರ್ಮಾನ ತೆಗೆದುಕೊಂಡಿದ್ದೇವೆ. ಈಗ ಸಮಸ್ಯೆ ಬಂತು ಆರ್‌ಎಸ್‌ಎಸ್ ದೃಷ್ಟಿಯಿಂದಲೇ ಈ ನಿರ್ಧಾರ ಬಂತು ಅಂತ ಇಟ್ಟುಕೊಳ್ಳೋಣ. ಆ ಸಮಸ್ಯೆ ಬಂದಾಗ ಸಂಘರ್ಷಕ್ಕೆ ಅವಕಾಶ ಮಾಡಿಕೊಡದೆ ಶಾಂತಿಯುತವಾಗಿ ಆಗಲಿ ಅಂತ ನಾವು ಮಾಡಿದ್ದೇವೆ ಎಂದು ಸ್ಪಷ್ಟನೆ ಕೊಟ್ಟರು.

    ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಬರ್ತಾ ಇತ್ತು. ಅದಕ್ಕಾಗಿ ಅವರಿಗೆ ಬೆಂಗಾವಲು ಪಡೆ ಹೆಚ್ಚಿಸಲಾಗಿದೆ. ಕ್ಯಾಬಿನೆಟ್ ದರ್ಜೆ ಸಚಿವರು ಅವರಿಗೆ ರಕ್ಷಣೆ ಕೊಡಬೇಕಾದ ಜವಾಬ್ದಾರಿ ಸರ್ಕಾರದ್ದು ಅಂತ ಪರಮೇಶ್ವರ್ ತಿಳಿಸಿದರು. ಇದನ್ನೂ ಓದಿ: ಚಿತ್ತಾಪುರ ಆಯ್ತು ಈಗ ಸೇಡಂ – ಕೊನೆ ಕ್ಷಣದಲ್ಲಿ ಆರ್‌ಎಸ್‌ಎಸ್‌ ಪಥ ಸಂಚಲನಕ್ಕೆ ಬ್ರೇಕ್‌

  • ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ – ಪರಿಶೀಲಿಸಿ ಕ್ರಮಕ್ಕೆ ಸೂಚನೆ: ಪರಮೇಶ್ವರ್

    ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ – ಪರಿಶೀಲಿಸಿ ಕ್ರಮಕ್ಕೆ ಸೂಚನೆ: ಪರಮೇಶ್ವರ್

    ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರಿಗೆ ಬೆದರಿಕೆ ಕರೆಗಳು ಬಂದಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ (G.Parameshwara) ಹೇಳಿದರು.

    ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತಮಾಡಿದ ಅವರು, ಯಾರು ಬೆದರಿಕೆ ಕರೆ ಮಾಡಿದ್ದಾರೆ? ಎಲ್ಲಿಂದ ಬಂದಿದೆ ಎಂಬುದನ್ನು ತನಿಖೆ ಮಾಡುತ್ತೇವೆ. ಆರ್‌ಎಸ್‌ಎಸ್ ವಿಚಾರದಲ್ಲಿ ಸಚಿವರು ತಮ್ಮ ಅಭಿಪ್ರಾಯ ಹೇಳಿರಬಹುದು. ಆ ಬಗ್ಗೆ ಸರ್ಕಾರ ತೀರ್ಮಾನ ‌ಮಾಡುತ್ತದೆ. ಅದಕ್ಕೆ ಅವರಿಗೆ ಬೆದರಿಕೆ ಮಾಡುವುದು ಸರಿಯಲ್ಲ. ಎಲ್ಲವನ್ನು ಪರಿಶೀಲನೆ ಮಾಡುವುದಕ್ಕೆ ಸೂಚಿಸಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ನನ್ನ ಮರ್ಯಾದೆ ಉಳಿಸಿಕೊಳ್ಳಲು ಕೆಲವು ಬೆದರಿಕೆ ಕರೆ ವಿಡಿಯೋ ರಿಲೀಸ್ ಮಾಡಿಲ್ಲ: ಪ್ರಿಯಾಂಕ್ ಖರ್ಗೆ

    ಸಿಎಂ ಔತಣಕೂಟ ಸಚಿವ ಸಂಪುಟ ಪುನಾರಚನೆಗೆ ಅಲ್ಲ. ಸರ್ಕಾರ ಬಂದು ಎರಡೂವರೆ ವರ್ಷ ಕಳೆದಿದೆ. ಎಲ್ಲರೂ ಚೆನ್ನಾಗಿ ಕೆಲಸ ಮಾಡಬೇಕು ಎಂದು ಮಾತಾಡಿದ್ದೇವೆ. ರಾಜಕೀಯ ವಿಚಾರಗಳನ್ನು ಚರ್ಚೆ ಮಾಡಿಲ್ಲ ಎಂದರು.

    ಯಾದಗಿರಿ ಎಎಸ್‌ಐ ಕಿಡ್ನ್ಯಾಪ್ ಮಾಡಿ ಹಲ್ಲೆ ಮಾಡಿದ್ದಾರೆಂಬ ಮಾಜಿ ಸಚಿವ ರಾಜುಗೌಡ ಆರೋಪದ ಕುರಿತು ಪ್ರತಿಕ್ರಿಯಿಸಿ, ಈ ಬಗ್ಗೆ ವರದಿ ನೀಡುವಂತೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರಿಗೆ ಸೂಚಿಸಿದ್ದೇನೆ. ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಬಿಜೆಪಿ ಅವರು ಟೀಕೆ ಮಾಡುವುದರಲ್ಲಿ ನಿಸ್ಸೀಮರು. ಅದು ಅವರ ಕರ್ತವ್ಯ ಕೂಡ ಹೌದು. ನಾನು ಹೇಳುವುದು ಒಂದೇ. ಪಾಸಿಟಿವ್ ಕ್ರಿಟಿಸಸಂ ಮಾಡಿ. ರಾಜಕೀಯಕ್ಕಾಗಿ ಟೀಕೆ ಮಾಡುವುದು ಬೇಡ ಅಂತ ಟಕ್ಕರ್ ಕೊಟ್ಟರು. ಇದನ್ನೂ ಓದಿ: ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ: ನಾರಾ ಲೋಕೇಶ್‌ಗೆ ಡಿಕೆಶಿ ತಿರುಗೇಟು

    ಉದ್ಯಮಿ ಕಿರಣ್ ಮಜುಂದಾರ್ ಶಾ ಟ್ವೀಟ್ ವಿಚಾರದ ಕುರಿತು ಮಾತನಾಡಿ, ರಸ್ತೆ ಗುಂಡಿ ಮುಚ್ಚುವ ಕೆಲಸ ಪ್ರಾರಂಭ ಮಾಡಿದ್ದಾರೆ. ಇದಕ್ಕೆ ಸಮಯ ಹಿಡಿಯುತ್ತದೆ. ಅಷ್ಟರೊಳಗೆ ಪ್ರತಿಕ್ರಿಯಿಸುವುದು ಸರಿಯಲ್ಲ. ಕೆಲಸ ನಡೆಯುತ್ತಿರುವಾಗಲೇ ಟೀಕೆ ಮಾಡುವುದು ಸಮಂಜಸವಲ್ಲ. ಕೆಲಸ ಅಗಿಲ್ಲ ಎಂಬುದಾದರೆ ಮಾತನಾಡಲಿ ಎಂದು ಹೇಳಿದರು.

    ರಾಜ್ಯದಲ್ಲಿ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಲ್ಲಿ 10 ಲಕ್ಷ 22 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆಗೆ ಸಹಿ ಮಾಡಿದ್ದಾರೆ. ಗೂಗಲ್ ಎಐ ಹಬ್ ಹೋಗಿರುವುದು ಬೇರೆ ಕಾರಣಕ್ಕೆ. ನಾವು ಕೂಡ ಕರ್ನಾಟಕಕ್ಕೆ ಬರುವವರನ್ನು ಸ್ವಾಗತ ಮಾಡುತ್ತೇವೆ ಎಂದು ಪರಮೇಶ್ವರ್ ತಿಳಿಸಿದರು.

  • ಸಚಿವ ಪರಮೇಶ್ವರ್‌ ಕರೆದಿದ್ದ ಡಿನ್ನರ್‌ ಮೀಟಿಂಗ್‌ ಮುಂದೂಡಿಕೆ

    ಸಚಿವ ಪರಮೇಶ್ವರ್‌ ಕರೆದಿದ್ದ ಡಿನ್ನರ್‌ ಮೀಟಿಂಗ್‌ ಮುಂದೂಡಿಕೆ

    ಬೆಂಗಳೂರು: ಸಚಿವ ಡಾ. ಜಿ.ಪರಮೇಶ್ವರ್‌ (G.Parameshwar) ಕರೆದಿದ್ದ ಡಿನ್ನರ್‌ ಮೀಟಿಂಗ್‌ (Dinner Meeting) ಅನ್ನು ಮುಂದೂಡಲಾಗಿದೆ.

    ಪರಮೇಶ್ವರ್ ಅವರು, ದಲಿತ ನಾಯಕರ ಜೊತೆಗಿನ ಡಿನ್ನರ್ ಮೀಟಿಂಗ್‌ ಅನ್ನು ಹೈಕಮಾಂಡ್‌ ಸೂಚನೆ ಮೇರೆಗೆ ಮುಂದೂಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ. ಇದನ್ನೂ ಓದಿ: ಸರ್ಕಾರ ಕೊಟ್ಟ ಹಣ ಖರ್ಚು ಮಾಡದ ಅಧಿಕಾರಿಗಳ ವಿರುದ್ಧ ಸಿಎಂ ಕೆಂಡಾಮಂಡಲ

    ಪ್ರಕಟಣೆಯಲ್ಲೇನಿದೆ?
    ಇದೇ ಜ.8 ರಂದು ರಾಜ್ಯ ಕಾಂಗ್ರೆಸ್‌ ಪಕ್ಷದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಚಿವರು, ಶಾಸಕರು, ಸಂಸದರು ಹಾಗೂ ಮುಖಂಡರ ಸಭೆಯನ್ನು ಬೆಂಗಳೂರಿನ ರ‍್ಯಾಡಿಸನ್‌ ಬ್ಲೂ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದು ಸರಿಯಷ್ಟೆ. ಸದರಿ ಸಭೆಯನ್ನು ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯದ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲ ಅವರ ಸೂಚನೆ ಮೇರೆಗೆ ಮುಂದೂಡಲಾಗಿದೆ. ಸದರಿ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದಿದೆ.

    ಬೆಳಗಾವಿಯಲ್ಲಿ ಇತ್ತೀಚೆಗೆ ಸಚಿವ ಸತೀಶ್‌ ಜಾರಕಿಹೊಳಿ ಅವರ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಡಿನ್ನರ್‌ ಮೀಟಿಂಗ್‌ ನಡೆದಿತ್ತು. ಸಿಎಂ ಆಪ್ತರ ಜೊತೆ ನಡೆಸಿದ ಮೀಟಿಂಗ್‌ ಕಾಂಗ್ರೆಸ್‌ ಪಾಳಯದಲ್ಲಿ ಸಂಚಲನ ಸೃಷ್ಟಿಸಿತ್ತು. ಆ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿದೇಶ ಪ್ರವಾಸದಲ್ಲಿದ್ದರು. ಇದನ್ನೂ ಓದಿ: ಯಾವುದೇ ಸಮುದಾಯಗಳಿಗೆ ಸಮಸ್ಯೆ ಆಗದಂತೆ ಜಾತಿಗಣತಿ ವರದಿ ಬಗ್ಗೆ ನಿರ್ಧಾರ: ಈಶ್ವರ್ ಖಂಡ್ರೆ

  • ಪ್ರಜ್ವಲ್ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್ ರದ್ದತಿ ಕೇಂದ್ರದ ಕರ್ತವ್ಯ: ಜಿ.ಪರಮೇಶ್ವರ್

    ಪ್ರಜ್ವಲ್ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್ ರದ್ದತಿ ಕೇಂದ್ರದ ಕರ್ತವ್ಯ: ಜಿ.ಪರಮೇಶ್ವರ್

    ಬೆಂಗಳೂರು: ಪ್ರಜ್ವಲ್ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್ ರದ್ದು ಮಾಡುವುದು ಕೇಂದ್ರದ ಕರ್ತವ್ಯ. ಆದರೆ ಹೆಚ್‌.ಡಿ.ಕುಮಾರಸ್ವಾಮಿ ಅವರು ಪ್ರತಿಯೊಂದು ಹೀಗೆ ಆಗಬೇಕು ಎನ್ನುತ್ತಿದ್ದಾರೆ ಎಂದು ಗೃಹ ಸಚಿವ ಡಾ‌.ಜಿ.ಪರಮೇಶ್ವರ್ (G.Parameshwara) ಕಿಡಿಕಾರಿದರು.

    ಬೆಂಗಳೂರಿನಲ್ಲಿ ಮಾತಾಡಿದ ಸಚಿವ ಪರಮೇಶ್ವರ್, ಪ್ರಜ್ವಲ್ (Prajwal Revanna) ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್ ರದ್ದತಿ ವಿಚಾರದಲ್ಲಿ ಕೇಂದ್ರ ಸರ್ಕಾರ ಸಹಕಾರ ಕೊಡಬೇಕು. ಬರೀ ಟೀಕೆ ಟಿಪ್ಪಣಿ ಮಾಡಿದರೆ ಪ್ರಯೋಜನ ಇಲ್ಲ. ಪ್ರಜ್ವಲ್ ಪಾಸ್‌ಪೋರ್ಟ್ ರದ್ದು ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಕೇಂದ್ರ ಸಹಾಯ, ಸಹಕಾರ ಮಾಡಬೇಕು. ಇದು ಪ್ರಜ್ವಲ್ ರೇವಣ್ಣ ಅನ್ನೋ ಪ್ರಶ್ನೆ ಅಲ್ಲ. ಇದು ಕಾನೂನಿಗೆ ಸಂಬಂಧಿಸಿದ ವಿಚಾರ. ಇಂಥ ಸಂದರ್ಭದಲ್ಲಿ ಕಾನೂನು ರಕ್ಷಣೆ ಮಾಡೋದು ಕೇಂದ್ರದ ಜವಾಬ್ದಾರಿ‌ ಕೂಡಾ. ಇದನ್ನ ಕೇಂದ್ರ ಸರ್ಕಾರ ತಿಳಿದುಕೊಳ್ಳಲಿ. ಅರೆಸ್ಟ್ ವಾರಂಟ್ ಜಾರಿಯಾಗಿರೋದು ಕೋರ್ಟ್‌ನಿಂದ. ಇದನ್ನ ಈಗಾಗಲೇ ಎಸ್ಐಟಿಯವರು ಕೇಂದ್ರಕ್ಕೆ ತಿಳಿಸಿದ್ದಾರೆ ಎಂದರು. ಇದನ್ನೂ ಓದಿ: ಫೋನ್ ಟ್ಯಾಪ್‌ನಂತಹ ನೀಚ ಕೆಲಸ ಮಾಡಲ್ಲ: ಸಿದ್ದರಾಮಯ್ಯ ತಿರುಗೇಟು

    ಪ್ರಜ್ವಲ್ ಪಾಸ್‌ಪೋರ್ಟ್ ರದ್ದು ಮಾಡೋದು ಕೇಂದ್ರದ ಕರ್ತವ್ಯ. ಈಗಾಗಲೇ ಪಾಸ್‌ಪೋರ್ಟ್ ರದ್ದತಿಗೆ ಸಿಎಂ ಪತ್ರ ಬರೆದಿದ್ದಾರೆ. ಸಿಎಂ ಪತ್ರಕ್ಕೆ ಕೇಂದ್ರ ಸರ್ಕಾರ ಇನ್ನೂ ಸ್ಪಂದಿಸಿಲ್ಲ. ಈಗ ಕೋರ್ಟ್‌ನಿಂದ ಅರೆಸ್ಟ್ ವಾರಂಟ್ ಹೊರಡಿಸಲಾಗಿದೆ. ಇದು ಅಧಿಕೃತ. ಇದರ ಆಧಾರದಲ್ಲಾದರೂ ಕೇಂದ್ರ ಪಾಸ್‌ಪೋರ್ಟ್ ರದ್ದು ಮಾಡಲಿ ಎಂದು ಆಗ್ರಹಿಸಿದರು.

    ದೇವರಾಜೇಗೌಡ ರಿಲೀಸ್ ಮಾಡಿದ ಆಡಿಯೋದಲ್ಲಿ ಡಿಕೆಶಿ ದನಿ ಇರೋದೇ ದೊಡ್ಡ ಸಾಕ್ಷಿ ಅಲ್ವಾ ಅನ್ನೋ ಹೆಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟ ಪರಮೇಶ್ವರ್, ಕುಮಾರಸ್ವಾಮಿ ಅವರು ಪ್ರತಿಯೊಂದಕ್ಕೂ ಮಾತಾಡ್ತಿದ್ದಾರೆ. ಪ್ರತಿಯೊಂದನ್ನೂ ಮಾತಾಡ್ತಿದ್ದಾರೆ. ಆದ್ರೆ ಕಾನೂನು ಚೌಕಟ್ಟು ಮತ್ತು ಎಸ್ಐಟಿ‌ ನಿಯಮದನ್ವಯ ನಡೆಯುತ್ತೆ. ಸರ್ಕಾರ ಕೂಡಾ ಇದನ್ನು ಗಮನಿಸಿಯೇ ಕೆಲಸ ಮಾಡುತ್ತೆ. ಪ್ರತಿಯೊಂದಕ್ಕೂ ಟೀಕೆ ಟಿಪ್ಪಣಿ ಮಾಡ್ತಿದ್ದಾರೆ ಹೆಚ್ಡಿಕೆ. ಹಾಗೇ ಆಗಬೇಕು ಹೀಗೇ ಆಗಬೇಕು ಅನ್ನೋ ಥರ ಹೆಚ್ಡಿಕೆ ಮಾತಾಡ್ತಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ರೇಸ್‌ನಲ್ಲಿ ನಾನಿಲ್ಲ, ಸಾಮರ್ಥ್ಯ ಇರುವವರಿಗೆ ಕೊಡಲಿ: ಸತೀಶ್ ಜಾರಕಿಹೊಳಿ

    ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪಕ್ಕೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವಿಫಲವಾಗಿಲ್ಲ. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ಯಾರ ಕಾಲದಲ್ಲಿ ಕೊಲೆ, ಅಪರಾಧ ಜಾಸ್ತಿ ಇತ್ತು ಅಂತ ದಾಖಲೆ ಬಿಡುಗಡೆ ಮಾಡಿದ್ದೇವೆ. ಇದಕ್ಕೆ ಮೊದಲು ಬಿಜೆಪಿಯವ್ರು ಉತ್ತರ ಕೊಡಲಿ ಎಂದು ತಿರುಗೇಟು ನೀಡಿದರು.

  • ಬಿಜೆಪಿ-ಜೆಡಿಎಸ್ ಮೈತ್ರಿ ಜನ ಒಪ್ಪುವುದಿಲ್ಲ: ಜಿ.ಪರಮೇಶ್ವರ್‌

    ಬಿಜೆಪಿ-ಜೆಡಿಎಸ್ ಮೈತ್ರಿ ಜನ ಒಪ್ಪುವುದಿಲ್ಲ: ಜಿ.ಪರಮೇಶ್ವರ್‌

    ತುಮಕೂರು: ಲೋಕಸಭೆ ಚುನಾವಣೆಗೆ ಜೆಡಿಎಸ್–ಬಿಜೆಪಿ (BJP-JDS Alliance) ಮೈತ್ರಿ ಮಾಡಿಕೊಂಡಿದ್ದು, ಇದರಿಂದ ಕಾಂಗ್ರೆಸ್‌ಗೆ ಲಾಭವೂ ಇಲ್ಲ, ನಷ್ಟವೂ ಇಲ್ಲ. ಮೈತ್ರಿಯನ್ನು ಜನ ಒಪ್ಪುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ (G.Parameshwara) ಹೇಳಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದೆವು. ಇದರಿಂದ ಫಲಿತಾಂಶ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ನಂತರ ಬಿಜೆಪಿಯವರಿಗೂ ಗೊತ್ತಾಗಲಿದೆ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ಮಹಿಳೆಯರಿಗೆ ವಂಚನೆ ಮಾಡಿ ಅಂತಲೇ ದೇವರು ಮೋದಿಯನ್ನ ಕಳುಹಿಸಿದ್ದಾ; ಸಿಎಂ ಪ್ರಶ್ನೆ

    ಕಳೆದ ಚುನಾವಣೆಯಲ್ಲಿ ದೇವೇಗೌಡ ಅವರು ಕಷ್ಟ ಬಿದ್ದು ಕೆಲಸ ಮಾಡಿದರೂ ಗೆಲ್ಲಲು ಸಾಧ್ಯವಾಗಲಿಲ್ಲ. ಈಗ ಜನರು ಏನು ಮಾಡುತ್ತಾರೆ ನೋಡಬೇಕು ಎಂದರು.

    ಜೆಡಿಎಸ್ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ನನ್ನನ್ನು ಭೇಟಿ ಮಾಡಿದ್ದರು. ಆದರೆ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಬೆಂಗಳೂರು-ಹೈದರಾಬಾದ್‌ ಸೇರಿ 9 ವಂದೇ ಭಾರತ್‌ ರೈಲುಗಳಿಗೆ ಮೋದಿ ಚಾಲನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಮಾನತುಗೊಂಡ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಿಐಡಿಗೆ ವರ್ಗಾವಣೆ – ಕ್ರಮ ಪ್ರಶ್ನಿಸಿ ಗೃಹ ಸಚಿವರಿಗೆ ಸುರೇಶ್‌ ಕುಮಾರ್‌ ಪತ್ರ

    ಅಮಾನತುಗೊಂಡ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಿಐಡಿಗೆ ವರ್ಗಾವಣೆ – ಕ್ರಮ ಪ್ರಶ್ನಿಸಿ ಗೃಹ ಸಚಿವರಿಗೆ ಸುರೇಶ್‌ ಕುಮಾರ್‌ ಪತ್ರ

    ಬೆಂಗಳೂರು: ಅಮಾನತುಗೊಂಡ ಪೊಲೀಸ್‌ ಇನ್‌ಸ್ಪೆಕ್ಟರನ್ನು ಸಿಐಡಿಗೆ ವರ್ಗಾವಣೆ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ಗೆ (G.Parameshwara) ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ ಪತ್ರ ಬರೆದಿದ್ದಾರೆ.

    ಬೆಂಗಳೂರು ನಗರದ ಹಲಸೂರು ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಮಂಜುನಾಥ್ ವರ್ಗಾವಣೆ ಕುರಿತು ಗೃಹ ಇಲಾಖೆಯ ಕ್ರಮವನ್ನು ಪ್ರಶ್ನಿಸಿರುವ ಶಾಸಕ ಸುರೇಶ್‌ ಕುಮಾರ್‌, ಈ ಬಗ್ಗೆ ಸ್ಪಷ್ಟನೆ ಕೇಳಿ ಬರೆದಿದ್ದಾರೆ. ಇದನ್ನೂ ಓದಿ: ಕುದಿಯೋ ನೀರಿಗೆ ಖಾರದ ಪುಡಿ ಬೆರೆಸಿ ಪತಿ ಮೇಲೆ ಎರಚಿ ಬೆದರಿಕೆ ಹಾಕಿದ್ಳು!

    ನಗರ ಪೊಲೀಸ್ ಆಯುಕ್ತರು ಒಂದು ವಿದ್ಯಮಾನದಲ್ಲಿ ಮಂಜುನಾಥ್ ಅವರ ವಿಚಾರಣೆ ನಡೆಸಿದ ನಂತರ ಅಮಾನತು ಮಾಡಿದ್ದಾರೆ. ಈ ಮಾಹಿತಿ ಮಾಧ್ಯಮದ ಮೂಲಕ ನನಗೆ ತಿಳಿಯಿತು. ಅದೇ ಸುದ್ದಿಯಲ್ಲಿ ಮತ್ತೊಂದು ಅಚ್ಚರಿಯ ಮಾಹಿತಿಯನ್ನೂ ಓದಿದೆ. ಅಮಾನತುಗೊಂಡ ಆ ಪೊಲೀಸ್ ಇನ್‌ಸ್ಪೆಕ್ಟರನ್ನು ಅದರ ಬೆನ್ನಲ್ಲೇ ಸಿಐಡಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಇದರಿಂದ ನನ್ನಲ್ಲಿ ಕೆಲವು ಪ್ರಶ್ನೆಗಳು ಉದ್ಭವವಾಗಿವೆ ಎಂದು ಪತ್ರದಲ್ಲಿ ಬರೆದಿದ್ದಾರೆ.

    ಆ ಪೊಲೀಸ್ ಇನ್‌ಸ್ಪೆಕ್ಟರನ್ನು ಆಯುಕ್ತರು ಅಮಾನತು ಮಾಡಿದ ಆದೇಶ ಇಂದು ಯಾವ ಸ್ಥಿತಿಯಲ್ಲಿದೆ? ಅಮಾನತುಗೊಂಡ ಹಿಂದೆಯೇ ಅವರನ್ನು ಸಿಐಡಿ ವಿಭಾಗಕ್ಕೆ ವರ್ಗಾವಣೆ ಮಾಡಿಸಿರುವ ಹಿಂದಿನ ಶಕ್ತಿ ಯಾವುದು? ಆ ಪೊಲೀಸ್ ಅಧಿಕಾರಿಯನ್ನು ಕರ್ತವ್ಯಲೋಪದ ಕಾರಣ ಅಮಾನತು ಮಾಡಿದ ಪೊಲೀಸ್‌ ಆಯುಕ್ತರಿಗೆ ಇದರಿಂದ ನೈತಿಕ ಬಲ ಕುಸಿದಂತೆ ಆಗಿಲ್ಲವೇ? ಸಿಐಡಿ ಎಂದರೆ ಇಂತಹ ಕರ್ತವ್ಯಲೋಪ ಎಸಗಿರುವವರನ್ನು, ಅದಕ್ಷತೆ ತೋರಿಸುವವರನ್ನು, ಭ್ರಷ್ಟಾಚಾರ ಪ್ರಕರಣ ಎದುರಿಸುವವರನ್ನು ವರ್ಗಾವಣೆ ಮಾಡುವ ಒಂದು ಕೇಂದ್ರವೇ? ಪೊಲೀಸ್ ಇಲಾಖೆಯಲ್ಲಿ ಸಿಐಡಿ ವಿಭಾಗಕ್ಕೆ ಯಾವುದೇ ಮಹತ್ವ ಇಲ್ಲವೇ? ತಾವು ಈ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಎಂದು ಪತ್ರದ ಮೂಲಕ ಆಗ್ರಹಿಸಿದ್ದಾರೆ. ಇದನ್ನೂ ಓದಿ: 3 ಸಾವಿರ ರೂ. ಸಾಲ ಮರುಪಾವತಿಸದ್ದಕ್ಕೆ ವ್ಯಕ್ತಿಯ ಬೆತ್ತಲೆ ಮೆರವಣಿಗೆ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಟ್ ಕಾಯಿನ್ ಹಗರಣ ತನಿಖೆ ಪುನಾರಂಭ ಮಾಡ್ತೀವಿ: ಜಿ.ಪರಮೇಶ್ವರ್

    ಬಿಟ್ ಕಾಯಿನ್ ಹಗರಣ ತನಿಖೆ ಪುನಾರಂಭ ಮಾಡ್ತೀವಿ: ಜಿ.ಪರಮೇಶ್ವರ್

    ಬೆಂಗಳೂರು: ಬಿಟ್ ಕಾಯಿನ್‌ ಹಗರಣ (Bitcoin Scam) ಮರು ತನಿಖೆಗೆ ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ (Dr G.Parameshwara) ಹೇಳಿದ್ದಾರೆ.

    ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣವನ್ನೂ ಮರು ಪರಿಶೀಲನೆ ಮಾಡುತ್ತೇವೆ.‌ ಬಿಜೆಪಿಯವರು ಈಗಲೇ ಕುಣಿದಾಡ್ತಿದ್ದಾರೆ. ನಮ್ಮ ಸರ್ಕಾರ ಬಂದು 20 ದಿನ ಆಗಿದೆ ಅಷ್ಟೇ. ಅವರು ಸ್ವಲ್ಪ ಸಮಾಧಾನವಾಗಿರುವುದು ಒಳ್ಳೆಯದು. ಬಿಟ್ ಕಾಯಿನ್ ಪ್ರಕರಣವನ್ನೂ ಮರು ಪರಿಶೀಲನೆ ಮಾಡ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರತಾಪ್ ಸಿಂಹ ಎಳಸು, ರಾಜಕೀಯ ಪ್ರಬುದ್ಧತೆಯಿಲ್ಲ : ಸಿದ್ದರಾಮಯ್ಯ ವಾಗ್ದಾಳಿ

    ಸುರ್ಜೇವಾಲ ಅಧಿಕಾರಿಗಳ ಸಭೆ ನಡೆಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಅಧಿಕೃತ ಸಭೆ ಆಗಿರಲಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ನಡೆಸಿದರು. ಆ ವೇಳೆ ರಣದೀಪ್ ಸಿಂಗ್ ಸುರ್ಜೇವಾಲ ಬಂದಿದ್ದಾರೆ ಅಷ್ಟೇ. ವಿಧಾನಸೌಧದ ಒಳಗೆ ಸಭೆ ಮಾಡಿದರೆ ತಪ್ಪು. ಖಾಸಗಿ ಹೊಟೇಲ್‌ನಲ್ಲಿ ಡಿ‌.ಕೆ.ಶಿವಕುಮಾರ್ ಸಭೆ ಮಾಡಿದ್ದಾರೆ. ಆ ಸಂದರ್ಭದಲ್ಲಿ ಸುರ್ಜೇವಾಲ ಬಂದಿದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿಲ್ಲ. ಬಿಜಪಿಯವರು ದೂರು‌ ನೀಡಲಿ. ರಾಜಭವನದವರು ಪರಿಶೀಲನೆ ಮಾಡ್ತಾರೆ ಎಂದಿದ್ದಾರೆ.

    ದಲಿತ ಸಿಎಂ ವಿಚಾರದಲ್ಲಿ ನೀವು ಬಹಳ ಡೀಪ್‌ ಆಗಿ ಹೋಗುವ ಅಗತ್ಯವಿಲ್ಲ. ನಮ್ಮ ಸಮುದಾಯಕ್ಕೆ ಧೈರ್ಯ ತುಂಬುವ ನಿಟ್ಟಿನಲ್ಲಿ ಮಾತನಾಡಿದ್ದೇನೆ. ನಾಳೆಯೇ ಹೋಗಿ ನಾವು ಸಿಎಂ ಆಗಬೇಕು ಅಂತ ನಾವು ಕೇಳಲ್ಲ. ಯಾವುದೇ ಗೊಂದಲವಾದ ಮಾತುಗಳು ಅದರಲ್ಲಿ ಇಲ್ಲ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ನಿತಿನ್ ಗಡ್ಕರಿ ಭೇಟಿಯಾದ ಸಂಸದ ಬಿ.ವೈ ರಾಘವೇಂದ್ರ- ಶಿವಮೊಗ್ಗ ಜಿಲ್ಲೆಯ ರಸ್ತೆಗಳ ಅಭಿವೃದ್ಧಿಗೆ ಒತ್ತಾಯ

    ಬಿಟ್‌ ಕಾಯಿನ್‌ ಹಗರಣ ರಾಜ್ಯದಲ್ಲಿ ಕೋಲಾಹಲ ಎಬ್ಬಿಸಿತ್ತು. ಇದರಲ್ಲಿ ಕೆಲವು ಪ್ರಭಾವಿ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಕೈ ಜೋಡಿಸಿದ್ದಾರೆ ಎಂಬ ವದಂತಿ ದಟ್ಟವಾಗಿತ್ತು. ಈ ಹಗರಣದ ಸೂತ್ರಧಾರ ಎನ್ನಲಾಗಿದ್ದ ಅಂತಾರಾಷ್ಟ್ರೀಯ ಹ್ಯಾಕರ್‌ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ನಂತರ ಬಿಡುಗಡೆ ಮಾಡಿದ್ದರು.

  • ಮಂಗಳೂರಿನಲ್ಲಿ ಕೋಮು ದ್ವೇಷ ನಿಗ್ರಹ ದಳ ಸ್ಥಾಪನೆ: ಜಿ.ಪರಮೇಶ್ವರ್

    ಮಂಗಳೂರು: ನೈತಿಕ ಪೊಲೀಸ್ ಗಿರಿ (Moral Policing) ತಡೆಯಲು ಮಂಗಳೂರು (Mangaluru) ಕಮಿಷನರೇಟ್ ವ್ಯಾಪ್ತಿಯಲ್ಲಿ ಹೊಸದಾಗಿ ಕೋಮು ದ್ವೇಷ ನಿಗ್ರಹ (Anti Communal Wing) ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (Dr.G.Parameshwara) ಭರವಸೆ ನೀಡಿದ್ದಾರೆ.

    ಮಂಗಳೂರಿನಲ್ಲಿ ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಒಳ್ಳೆಯ ಜನರಿದ್ದಾರೆ ಎಂದು ಇಡೀ ದೇಶವೇ ನಂಬಿದೆ. ಆದರೆ ಅದರ ಜೊತೆಗೆ ಇಲ್ಲಿ ಶಾಂತಿ ಇಲ್ಲ, ಕೋಮು ಸಾಮರಸ್ಯ ಇಲ್ಲ ಎಂಬ ಮಾತು ಕೇಳಿಬರುತ್ತಿದೆ. ನಾನು ಪ್ರಣಾಳಿಕೆ ಸಮಿತಿ ಅಧ್ಯಕ್ಷನಾಗಿದ್ದಾಗ ಇಪ್ಪತ್ತು ಸಂಸ್ಥೆಗಳ ಮುಖ್ಯಸ್ಥರ ಜೊತೆ ಮಾತನಾಡಿದ್ದೇನೆ. ಆಗ ಅವರೂ ಇಲ್ಲಿ ಶಾಂತಿ ಕೊಡಿ ಎಂಬ ಮಾತನ್ನಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ನನ್ನ ಕುಟುಂಬಕ್ಕೆ ಉಚಿತ ಯೋಜನೆ ಬೇಡ, ಬಡವರಿಗೆ ಸಿಗಲಿ: ರೇಣುಕಾಚಾರ್ಯ

    ಕರಾವಳಿಯಲ್ಲಿ ಇಂದು ಭಯದ ವಾತಾವರಣ ಇದೆ ಎಂದು ಜನ ಮಾತಾನಾಡಿಕೊಳ್ಳುತ್ತಿದ್ದಾರೆ. ಈ ಪರಿಸ್ಥಿತಿಯನ್ನು ನಾವು ತಡೆಯುತ್ತೇವೆ. ನೈತಿಕ ಪೊಲೀಸ್‌ಗಿರಿ ಇಲ್ಲಿ ಜಾಸ್ತಿಯಾಗಿದೆ. ಇದೆಲ್ಲವನ್ನೂ ನಾವು ತಡೆಯದೇ ಇದ್ದರೆ ಇಲಾಖೆ ಹಾಗೂ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ. ಇದಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದರು. ಇದನ್ನೂ ಓದಿ: ಬಾಡಿಗೆದಾರರೇ ನಿಮಗೆ ಉಚಿತ ವಿದ್ಯುತ್‌ ಬೇಕೇ – ಷರತ್ತುಗಳನ್ನು ಪೂರ್ಣಗೊಳಿಸಿದ್ರೆ ಮಾತ್ರ ಫ್ರೀ