Tag: Dr Mansukh Mandaviya

  • ರಾಯಚೂರಿನಲ್ಲಿ ಏಮ್ಸ್ ನಿರ್ಮಾಣಕ್ಕೆ ಒತ್ತಡ – ಕೇಂದ್ರ ಆರೋಗ್ಯ ಸಚಿವರ ಭೇಟಿಯಾದ ಹೈ.ಕ ನಾಯಕರ ನಿಯೋಗ

    ರಾಯಚೂರಿನಲ್ಲಿ ಏಮ್ಸ್ ನಿರ್ಮಾಣಕ್ಕೆ ಒತ್ತಡ – ಕೇಂದ್ರ ಆರೋಗ್ಯ ಸಚಿವರ ಭೇಟಿಯಾದ ಹೈ.ಕ ನಾಯಕರ ನಿಯೋಗ

    ನವದೆಹಲಿ: ರಾಯಚೂರು (Raichuru) ಜಿಲ್ಲೆಯಲ್ಲಿ ಏಮ್ಸ್ (AIIMS) ಸ್ಥಾಪನೆ ಮಾಡುವಂತೆ ಹೈದರಾಬಾದ್ ಕರ್ನಾಟಕದ ಸಚಿವರು, ಸಂಸದರು ಮತ್ತು ಶಾಸಕರ ನಿಯೋಗ ಮನವಿ ಮಾಡಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸೂಕ್ ಮಾಂಡವೀಯ (Mansukh Mandaviya) ಭೇಟಿಯಾದ ಸಚಿವ ಶರಣ ಪ್ರಕಾಶ್ ಪಾಟೀಲ್, ಎನ್‌.ಎಸ್ ಬೋಸರಾಜು ನೇತೃತ್ವದ ನಿಯೋಗ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದೆ.

    ಭೇಟಿ ಬಳಿಕ ಕರ್ನಾಟಕ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಶರಣ ಪ್ರಕಾಶ್ ಪಾಟೀಲ್, ಕೇಂದ್ರ ಆರೋಗ್ಯ ಸಚಿವರಿಗೆ ರಾಯಚೂರಿನಲ್ಲಿ ಏಮ್ಸ್ ನಿರ್ಮಾಣ ಮಾಡುವಂತೆ ಮನವಿ ಮಾಡಿದೆ. ಕರ್ನಾಟಕದಲ್ಲಿ ಈವರೆಗೂ ಏಮ್ಸ್ ಸ್ಥಾಪನೆಯಾಗಿಲ್ಲ. ರಾಜ್ಯ ಸರ್ಕಾರದ ವತಿಯಿಂದ ಎಲ್ಲ ಸೌಲಭ್ಯ ಒದಗಿಸುತ್ತೇವೆ ಎಂದು ಭರವಸೆ ನೀಡಿದ್ದೇವೆ. ಇದನ್ನೂ ಓದಿ: BJPಯಲ್ಲಿ ಅನಿವಾರ್ಯವಾಗಿ ಹೊಂದಿಕೊಂಡು ಹೋಗ್ತಿದ್ದೀನಿ – ಎಸ್.ಟಿ ಸೋಮಶೇಖರ್

    ರಾಯಚೂರಿನಲ್ಲಿ ಏಮ್ಸ್ ಅಗತ್ಯತೆ ವಿವರಿಸಿದೆ. ಹಿಂದುಳಿದ ಭಾಗವಾದ ಈ ಪ್ರದೇಶದಲ್ಲಿ ತಾಯಿ ಶಿಶು ಮರಣ ಪ್ರಮಾಣ ಹೆಚ್ಚಿದೆ. ಗಣಿಗಾರಿಕೆಯೂ ಇರುವ ಹಿನ್ನಲೆ ಹೆಚ್ಚಿನ ಪ್ರಮಾಣದಲ್ಲಿ ಅತ್ಯುನ್ನತ ಆಸ್ಪತ್ರೆ ಅವಶ್ಯಕತೆ ಇದೆ ಎಂದು ಹೇಳಿದೆ. ಕೇಂದ್ರ ಸಚಿವರು ಕೂಡ ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯ ಸರ್ಕಾರ ಎಲ್ಲಿ ಹೇಳುತ್ತೋ ಅಲ್ಲಿ ಮಾಡುತ್ತೇವೆ ಎಂದಿದ್ದಾರೆ ಎಂದರು.

    ಬಳಿಕ ಮಾತನಾಡಿದ ಎನ್.ಎಸ್ ಬೋಸರಾಜು, ರಾಯಚೂರಿನಲ್ಲಿ ಏಮ್ಸ್ ಮಾಡುವುದು ಸೂಕ್ತ. ಕಲ್ಯಾಣ ಕರ್ನಾಟಕದ ಎಲ್ಲ ಪ್ರತಿನಿಧಿಗಳ ಒತ್ತಾಯವಿದೆ. ಏಮ್ಸ್ ಸ್ಥಾಪನೆಗೆ ಭೂಮಿ ಕೊಡಲಿದ್ದೇವೆ. ನೀರಿನ ವ್ಯವಸ್ಥೆ ಇದೆ. ರಾಯಚೂರಿನಲ್ಲಿ ಏಮ್ಸ್ ನಿರ್ಮಾಣವಾಗಬೇಕು ಎಂದು ಒಂದೇ ಹೆಸರು ಆಯ್ಕೆಗೆ ಕಳುಹಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ರಾಯಚೂರು ಹೆಸರಿಗೆ ಅನುಮೋದಿಸಿದ್ದಾರೆ. ರಾಜ್ಯ ಸರ್ಕಾರ ಆಶಯದ ಅನ್ವಯ ಏಮ್ಸ್ ನಿರ್ಮಿಸಲು ಮನವಿ ಮಾಡಿದೆ ಎಂದರು. ಇದನ್ನೂ ಓದಿ: ಆಪರೇಷನ್ ಹಸ್ತ ತಡೆಯಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿ?

    ನಿಯೋಗದಲ್ಲಿ ಬೀದರ್ ಸಂಸದ, ಕೇಂದ್ರ ಸಚಿವ ಭಗವಂತ್ ಖೂಬಾ, ಕೊಪ್ಪಳ ಸಂಸದ ಕರಡಿ ಸಂಗಣ್ಣ, ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ್, ಶಾಸಕರಾದ ಬಾದರ್ಲಿ ಹಂಪನಾಗೌಡ, ಬಸನಗೌಡ ತುರವಿಹಾಳ್, ಬಸಣಗೌಡ ದದ್ದಲ್, ಡಾ. ಶಿವರಾಜ್ ಪಾಟೀಲ್, ಶರಣಗೌಡ ಭಯ್ಯಪೂರ, ಕರಿಯಮ್ಮ ದೇವದುರ್ಗ, ಕಲ್ಯಾಣ ಕರ್ನಾಟಕ ಹೋರಾಟಗಾರರಾದ ಡಾ. ಬಸವರಾಜ್ ಕಳಸ, ಲಕ್ಷ್ಮಣ್ ದಸ್ತಿ, ಅಶೋಕ್ ಕುಮಾರ್ ಇದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಒಂದು ವರ್ಷ ಪೂರೈಸಿದ ಲಸಿಕಾ ಅಭಿಯಾನ – ಟ್ವೀಟ್ ಮಾಡಿ ಮೋದಿ ಪ್ರಶಂಸೆ

    ಒಂದು ವರ್ಷ ಪೂರೈಸಿದ ಲಸಿಕಾ ಅಭಿಯಾನ – ಟ್ವೀಟ್ ಮಾಡಿ ಮೋದಿ ಪ್ರಶಂಸೆ

    ನವದೆಹಲಿ: ಭಾರತದಲ್ಲಿ ಲಸಿಕೆ ಅಭಿಯಾನ ಪ್ರಾರಂಭವಾಗಿ ಇಂದಿಗೆ ಒಂದು ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಟ್ವಿಟ್ಟರ್ ನಲ್ಲಿ  ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

    ಲಸಿಕಾ ಅಭಿಯಾನ ಒಂದು ವರ್ಷ ಪೂರೈಸಿರುವ ಕುರಿತು ಟ್ವೀಟ್ ಮಾಡಿರುವ ಅವರು, ಲಸಿಕೆ ಪಡೆದ ಪ್ರತಿಯೊಬ್ಬರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಲಸಿಕಾ ಅಭಿಯಾನವು ಕೊರೊನಾ ವಿರುದ್ಧ ಹೋರಾಡಲು ಹೆಚ್ಚಿನ ಶಕ್ತಿಯನ್ನು ನೀಡಿದೆ. ಕೊರೊನಾ ಸಾಂಕ್ರಾಮಿಕ ಮೊದಲ ಬಾರಿಗೆ ಅಪ್ಪಳಿಸಿದಾಗ ಈ ಬಗ್ಗೆ ನಮಗೂ ಹೆಚ್ಚೆನೂ ಮಾಹಿತಿ ಇರಲಿಲ್ಲ. ಆದರೂ ವಿಜ್ಞಾನಿಗಳು ಲಸಿಕೆಯನ್ನು ಅಭಿವೃದ್ಧಿ ಪಡಿಸುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಲಸಿಕೆ ಮೂಲಕ ಕೊರೊನಾ ವಿರುದ್ಧ ಹೋರಾಡಲು ನಮಗೆ ಸಹಾಯವಾಗಿದೆ ಎಂದು ತಿಳಿಸಿದ್ದಾರೆ.

    ಈ ಸಮಯದಲ್ಲಿ ಸಹಾಯ ಮಾಡಿದ ಎಲ್ಲಾ ಕಾರ್ಯಕರ್ತರಿಗೂ ಧನ್ಯವಾದವನ್ನು ತಿಳಿಸುತ್ತೇನೆ. ಇವರ ಸೇವಾ ಕಾರ್ಯಕ್ಕೆ ಹೆಮ್ಮೆಯೆನಿಸುತ್ತದೆ. ನಾವು ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಿ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡೋಣ ಎಂದು ಟ್ವಿಟ್ಟರ್ ನಲ್ಲಿ ಕರೆ ನೀಡಿದ್ದಾರೆ.

    ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಕೂಡ ಈ ಬಗ್ಗೆ ಟ್ವೀಟ್ ಮಾಡಿ ವಿಶ್ವದಲ್ಲೇ ಇದು ಅತ್ಯಂತ ಯಶಸ್ವಿಯಾಗಿದೆ ಎಂದು ತಿಳಿಸಿದ್ದಾರೆ. ಕಳೆದ ವರ್ಷ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಂಡವಿಯಾ ಪ್ರಶಂಸಿಸಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

    ವಿಶ್ವದ ಅತಿದೊಡ್ಡ ಅಭಿಯಾನ ಇಂದು ಒಂದು ವರ್ಷವನ್ನು ಪೂರೈಸಿದೆ. ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಪ್ರಾರಂಭವಾದ ಈ ಅಭಿಯಾನವು ಇಂದು ವಿಶ್ವದಲ್ಲೇ ಅತ್ಯಂತ ಯಶಸ್ವಿ ಅಭಿಯಾನವಾಗಿದೆ. ಇದಕ್ಕೆ ಸಹಕರಿಸಿದ ಎಲ್ಲಾ ಕಾರ್ಯಕರ್ತರಿಗೂ, ವಿಜ್ಞಾನಿಗಳಿಗೂ ಧನ್ಯವಾದ ತಿಳಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

    ಭಾರತದಲ್ಲಿ ಈವರೆಗೆ ಕೋವಿಡ್ ಲಸಿಕೆ, 156.76 ಡೋಸ್ ವಿತರಣೆಯಾಗಿದೆ. ಕಳೆದ 24 ಗಂಟೆಗಳಲ್ಲಿ 66 ಲಕ್ಷಕ್ಕೂ ಹೆಚ್ಚು ಡೋಸ್‍ಗಳನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಮತ್ತು ಸ್ಫೂರ್ತಿದಾಯಕ ನಾಯಕತ್ವದಿಂದಾಗಿ ಕೊರೊನಾ ವಿರುದ್ಧ ಸಾಮೂಹಿಕವಾಗಿ ಹೋರಾಡಲು ಸಹಾಯಕವಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಭಾರತದಲ್ಲಿ ಲಸಿಕಾ ಅಭಿಯಾನ ಹೇಗೆ ಪ್ರಾರಂಭವಾಯಿತು ಮತ್ತು ಒಂದು ವರ್ಷದ ಅವಧಿಯಲ್ಲಿ 150 ಕೋಟಿಗೂ ಹೆಚ್ಚು ಡೋಸ್‍ಗಳನ್ನು ನೀಡುವಲ್ಲಿ ಹೇಗೆ ಯಶಸ್ವಿಯಾದೆವು ಎನ್ನುವುದರ ಬಗ್ಗೆ ಚಾರ್ಟ್‍ನ್ನು ಅವರು ಹಂಚಿಕೊಂಡಿದ್ದಾರೆ.

    ಕೊರೊನಾ ಲಸಿಕೆ ಅಭಿಯಾನವನ್ನು 2021ರ ಜನವರಿ 16ರಲ್ಲಿ ಪ್ರಾರಂಭಿಸಲಾಯಿತು. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,71,202 ಹೊಸ ಕೋವಿಡ್ ಪ್ರಕರಣಗಳು, 314 ಸೋಂಕಿತರು ಸಾವನ್ನಪ್ಪಿದ್ದು, 1,38,331 ಚೇತರಿಸಿಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

     

  • ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಜೊತೆ ಲಸಿಕೆ ಅಭಿಯಾನಕ್ಕೆ ಕೇಂದ್ರ ಸಚಿವರ ಮೆಚ್ಚುಗೆ

    ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಜೊತೆ ಲಸಿಕೆ ಅಭಿಯಾನಕ್ಕೆ ಕೇಂದ್ರ ಸಚಿವರ ಮೆಚ್ಚುಗೆ

    ಬೆಂಗಳೂರು: ರಾಜ್ಯದಲ್ಲಿನ ಕೋವಿಡ್-19 ಸೋಂಕಿನ ನಿರ್ವಹಣೆ ಹಾಗೂ ಲಸಿಕೆ ಕಾರ್ಯಕ್ರಮದ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್‍ಸುಖ್ ಮಾಂಡವೀಯ ಅವರು ಮೆಚ್ಚುಗೆ ವ್ಯಕ್ತಪಡಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅಭಿನಂದಿಸಿದರು.

    ಇಂದು ನಗರದ ಎಸ್.ಡಿ.ಎಸ್-ಟಿ.ಆರ್.ಸಿ ಮತ್ತು ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಯ ಆವರಣದಲ್ಲಿ ಸರ್ಕಾರದ ಮತ್ತು ಸಿ.ಎಸ್.ಆರ್. ಅನುದಾನದಡಿಯಲ್ಲಿ ನಿರ್ಮಿಸಲಾಗಿರುವ ಕೋವಿಡ್ ಫೀಲ್ಡ್ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಲಸಿಕೆ ಕಾರ್ಯಕ್ರಮದ ಕುರಿತು ಸಾರ್ವಜನಿಕರಿಂದಲೂ ಮೆಚ್ಚುಗೆ ವ್ಯಕ್ತವಾಗಿರುವ ಬಗ್ಗೆ ನಮಗೆ ಮಾಹಿತಿ ಬಂದಿದೆ. ರಾಜ್ಯದಲ್ಲಿ ಶೇ.83 ರಷ್ಟು ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, ಸೆಪ್ಟೆಂಬರ್ 17ರಂದು ನಡೆಸಿದ ವಿಶೇಷ ಅಭಿಯಾನದಲ್ಲಿ ದೇಶದಲ್ಲಿ ಒಟ್ಟು 2.5 ಕೋಟಿ ಡೋಸ್ ಲಸಿಕೆ ನೀಡಲಾಯಿತು. ಇದರಲ್ಲಿ ಕರ್ನಾಟಕ ರಾಜ್ಯ ಅತಿ ಹೆಚ್ಚು ಲಸಿಕೆ ನೀಡಿ ದಾಖಲೆ ನಿರ್ಮಿಸಿದ್ದು, ಇದಕ್ಕಾಗಿ ಕರ್ನಾಟಕ ಸರ್ಕಾರ ಹಾಗೂ ರಾಜ್ಯದ ಜನತೆಯನ್ನು ಸಚಿವರು ಅಭಿನಂದಿಸಿದರು. ಇದನ್ನೂ ಓದಿ: ಬಿಸಿಲಿನಲ್ಲಿ ಬಾಸ್ಕೆಟ್ ಬಾಲ್ ಆಡಿದ ರಣ್‍ವೀರ್ – ಸಿಕ್ಸ್ ಪ್ಯಾಕ್ ನೋಡಿ ಹುಡ್ಗೀರು ಕ್ಲೀನ್ ಬೋಲ್ಡ್

    ಕೋವಿಡ್-19 ಸಾಂಕ್ರಾಮಿಕ ನಿಯಂತ್ರಣದಲ್ಲಿದ್ದರೂ ಇನ್ನೂ ಅಂತ್ಯವಾಗಿಲ್ಲ. ಆದ್ದರಿಂದ ಸರ್ಕಾರಗಳು ಜಾಗರೂಕರಾಗಿರುವುದು ಅತಿ ಮುಖ್ಯ. ಈ ನಿಟ್ಟಿನಲ್ಲಿ ಅಗತ್ಯವಿದ್ದೆಡೆ ಸುಲಭವಾಗಿ ಸ್ಥಳಾಂತರಿಸಬಹುದಾದ ಫೀಲ್ಡ್ ಆಸ್ಪತ್ರೆಗಳನ್ನು ಕರ್ನಾಟಕದಲ್ಲಿ ಸ್ಥಾಪಿಸುತ್ತಿರುವುದು ಒಂದು ದೂರದೃಷ್ಟಿಯ ನಡೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ  ಬಸವರಾಜ ಬೊಮ್ಮಾಯಿ ಅವರು, ಪ್ರತಿ ಜಿಲ್ಲೆಯಲ್ಲಿ ಫೀಲ್ಡ್ ಆಸ್ಪತ್ರೆ ಸ್ಥಾಪಿಸಲು ಸರ್ಕಾರ ಸಿದ್ಧವಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಅಡಿ ನೆರವು ನೀಡುವ ಮೂಲಕ ಕಾರ್ಪೊರೇಟ್ ಸಂಸ್ಥೆಗಳು ತಾವು ಬೆಳೆಯಲು ಅನುವು ಮಾಡಿಕೊಟ್ಟ ಸಮಾಜಕ್ಕೆ ಕೊಡುಗೆ ನೀಡಿ, ಉಪಕಾರ ಸ್ಮರಣೆ ಮಾಡುತ್ತಿವೆ. ಸರ್ಕಾರದ ಪ್ರಯತ್ನಗಳಲ್ಲಿ ಕೈಜೋಡಿಸುವ ಈ ಸಂಸ್ಥೆಗಳ ಉಪಕಾರಸ್ಮರಣೆಯನ್ನು ಸರ್ಕಾರ ಮಾಡುವುದು ಎಂದು ತಿಳಿಸಿದರು. ಇದನ್ನೂ ಓದಿ: ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾಗೆ 14 ದಿನ ನ್ಯಾಯಾಂಗ ಬಂಧನ

    ಹುಟ್ಟಿದ ಕೂಡಲೇ ಯಾರೂ ದೊಡ್ಡವರಾಗುವುದಿಲ್ಲ. ನಮ್ಮ ಪೋಷಕರು, ಗುರುಗಳು, ನಮ್ಮ ಸಮಾಜ ಒಂದಲ್ಲ ಒಂದು ರೀತಿಯಲ್ಲಿ ನಮ್ಮ ಬೆಳವಣಿಗೆಗೆ ಕೊಡುಗೆ ನೀಡುತ್ತಾರೆ. ನಾವು ಬೆಳೆಯುವುದರೊಂದಿಗೆ ನಮ್ಮ ಸುತ್ತಮುತ್ತಲಿನವರನ್ನೂ ಬೆಳೆಸಬೇಕು. ಸಮಾಜಕ್ಕೆ ನಾವು ಪಡೆದುಕೊಂಡಿರುವುದರಲ್ಲಿ ಕಿಂಚಿತ್ತಾದರೂ ಹಿಂತಿರುಗಿಸಬೇಕು. ಆಗ ಬದುಕಿನ ಬ್ಯಾಲೆನ್ಸ್ ಶೀಟ್ ತಾಳೆಯಾಗುವುದು ಎಂದು ನುಡಿದರು.

    ಉಚಿತವಾಗಿ ಲಸಿಕೆ ಒದಗಿಸುವ ಮೂಲಕ ಲಸಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ, ಕೋವಿಡ್ ಸೋಂಕು ನಿಯಂತ್ರಿಸಲು ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ, ಆರೋಗ್ಯ ಸಚಿವರು ಹಾಗೂ ಭಾರತ ಸರ್ಕಾರಕ್ಕೆ ಮುಖ್ಯಮಂತ್ರಿಗಳು ಕೃತಜ್ಞತೆ ಸಲ್ಲಿಸಿದರು. ಆರೋಗ್ಯ ಕ್ಷೇತ್ರದಲ್ಲಿ ಸಿ.ಎಸ್.ಆರ್. ಉಪಕ್ರಮಗಳ ಅಧ್ಯಕ್ಷೆಯಾಗಿರುವ ಗೀತಾಂಜಲಿ ಕಿರ್ಲೋಸ್ಕರ್ ಅವರ ಪ್ರಯತ್ನವನ್ನು ಶ್ಲಾಘಿಸಿದ ಮುಖ್ಯಮಂತ್ರಿಯವರು, ಹಿಂದುಳಿದ ಜಿಲ್ಲೆಗಳಲ್ಲಿ ಮತ್ತು ಅಗತ್ಯವಿರುವ ಜಿಲ್ಲೆಗಳಲ್ಲಿ ಇಂತಹ ಫೀಲ್ಡ್ ಆಸ್ಪತ್ರೆ ಸ್ಥಾಪಿಸಲು ಮುಂದಾಗುವಂತೆ ಸಲಹೆ ನೀಡಿದರು. ಇದಕ್ಕೆ ಸರ್ಕಾರದಿಂದ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಚಾಲಕನ ಮೇಲೆ ದಾಳಿಯಾದಾಗ ನಿಯಂತ್ರಣ ತಪ್ಪಿ ಕಾರು ರೈತರ ಮೇಲೆ ಹರಿದಿದೆ: ಮಿಶ್ರಾ

    ಇಂದು ಉದ್ಘಾಟಿಸಲಾದ ಕೋವಿಡ್ ಫೀಲ್ಡ್ ಆಸ್ಪತ್ರೆಗೆ ನೋಕಿಯ, ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್, ಸ್ವಸ್ತಿ, ಮತ್ತಿತರ ಸಂಸ್ಥೆಗಳು ಸಹಕಾರ ನೀಡಿದ್ದವು. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸದ ಪಿ.ಸಿ. ಮೋಹನ್, ಶಾಸಕ ಉದಯ್ ಗರುಡಾಚಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.