Tag: Dr Parameshwar

  • ಚನ್ನಪಟ್ಟಣದಲ್ಲಿ ಡಿಕೆಶಿ ಸ್ಪರ್ಧೆ ಅಂತೇನಿಲ್ಲ; ಬೇರೆ ಆಯ್ಕೆ ಇವೆ: ಪರಮೇಶ್ವರ್

    ಚನ್ನಪಟ್ಟಣದಲ್ಲಿ ಡಿಕೆಶಿ ಸ್ಪರ್ಧೆ ಅಂತೇನಿಲ್ಲ; ಬೇರೆ ಆಯ್ಕೆ ಇವೆ: ಪರಮೇಶ್ವರ್

    ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಡಿಕೆಶಿ ಸ್ಪರ್ಧೆ ಮಾಡ್ತಾರೆ ಅಂತೇನಿಲ್ಲ, ಆ ರೀತಿ ಇಲ್ಲ ಅಂತಾ ಗೃಹ ಸಚಿವ ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ‌ಮಾತನಾಡಿದ ಅವರು, ಡಿಕೆಶಿ ಅವರ ಸಹೋದರ ಸಂಸತ್ ಗೆ ಬರೋದಿತ್ತು, ಆದರೆ ಅದು ಆಗಿಲ್ಲ. ಹೀಗಾಗಿ ಒಳ್ಳೆಯ ಅಭ್ಯರ್ಥಿ ಹಾಕಿದ್ರೆ ಗೆಲ್ತೀವಿ ಅಂತ ಇರಬಹುದು. ಹಿಂದೆ ಕಾಂಗ್ರೆಸ್ ಚನ್ನಪಟ್ಟಣದಲ್ಲಿ ಗೆದ್ದಿಲ್ವಾ..?. ಅಲ್ಲೂ ಕೂಡ ಕಾಂಗ್ರೆಸ್ ಮತವಿದೆ. ಸಾಂದರ್ಭಿಕವಾಗಿ ಕೆಲವೊಮ್ಮೆ ಬೇರೆ ಬೇರೆ ಆಯ್ಕೆ ಇವೆ ಅಂತೇಳಿದ್ರು. ಹಿಂದೆ ನನ್ನ ಕ್ಷೇತ್ರದಲ್ಲಿ ನಾನೂ ಸೋತಿದ್ದೇನೆ. ನಂತರ ನಾನು ಅದೇ ಕ್ಷೇತ್ರದಲ್ಲಿ ಗೆದ್ದಿದ್ದೇನೆ ಎಂದು ಮಾರ್ಮಿಕ ಹೇಳಿಕೆ ನೀಡಿದ್ರು. ಇದನ್ನೂ ಓದಿ: ಜೈಲಿನಿಂದ ಸಿಎಂ ಕೇಜ್ರಿವಾಲ್‌ ಬಿಡುಗಡೆಗೆ ಹೈಕೋರ್ಟ್‌ ತಡೆ

    ಸರ್ಕಾರ ಇದ್ದರೂ ಇಷ್ಟೊಂದು ಕಡಿಮೆ ಆಯ್ತು!: ಇದೇ ವೇಳೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನಕ್ಕೆ ಎಐಸಿಸಿ ಕಮಿಟಿ ರಚನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಎಐಸಿಸಿ ಮಟ್ಟದಲ್ಲಿ ಗೆಲುವಿನ ನಿರೀಕ್ಷೆ ಬೇರೆ ಇತ್ತು. 15 ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ನಾವು 15 ಸ್ಥಾನ ಗೆಲ್ಲಲಿಲ್ಲ. ಸರ್ಕಾರ ಇದ್ದು ಕೂಡ ಇಷ್ಟೊಂದು ಕಡಿಮೆ ಆಯ್ತು ಅಂತಾ ಆತ್ಮಾವಲೋಕನ ಅಥವಾ ಫ್ಯಾಕ್ಟ್ ಫೈಂಡಿಂಗ್ ಕಮಿಟಿ ರಚನೆ ಮಾಡಿದ್ದಾರೆ. ಎಲ್ಲಾ ರಾಜ್ಯಕ್ಕೂ ಮಾಡಿರುವ ಹಾಗೆ ನಮ್ಮ ರಾಜ್ಯಕ್ಕೂ ಮಾಡಿದ್ದಾರೆ ಅಂತಾ ಸ್ಪಷ್ಟಪಡಿಸಿದ್ರು. ಇದನ್ನೂ ಓದಿ: ವಿಧಾನಸೌಧದ ಎದುರು ಡಿಕೆಶಿ ಯೋಗ – ನಟಿ ಅನು ಪ್ರಭಾಕರ್‌, ಕ್ರಿಕೆಟಿಗ ಮನಿಷ್‌ ಪಾಂಡೆ ಸಾಥ್‌

    ಈ ವರದಿ ಮೇಲೆ ಸಚಿವ ಸಂಪುಟ ಬದಲಾವಣೆ ಮಾಡ್ತಾರೆ ಎಂಬ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದ ಪರಂ, ಅದು ಹೈಕಮಾಂಡ್ ಗೆ ಬಿಟ್ಟ ವಿಚಾರ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ನಮಗೆ ಗೊತ್ತಾಗಲ್ಲ. ಫ್ಯಾಕ್ಟ್ ಫೈಂಡಿಂಗ್ ಆಧಾರದ ಮೇಲೆ ಕೆಲವೊಮ್ಮೆ ನಿರ್ಧಾರಗಳು ಆಗುತ್ತದೆ. ಎಐಸಿಸಿ ಇರೋದೆ ನಮ್ಮನ್ನು ನಿಯಂತ್ರಣ ಮಾಡುವುದಕ್ಕೆ ಅಂತೇಳಿದ್ರು.

  • ನಡೆದಾಡುವ ದೇವರ ಶ್ವಾಸಕೋಶದಲ್ಲಿ ಸೋಂಕು ಪತ್ತೆ – ಶ್ರೀಗಳ ಆಪ್ತ ವೈದ್ಯರು ಸ್ಪಷ್ಟನೆ

    ನಡೆದಾಡುವ ದೇವರ ಶ್ವಾಸಕೋಶದಲ್ಲಿ ಸೋಂಕು ಪತ್ತೆ – ಶ್ರೀಗಳ ಆಪ್ತ ವೈದ್ಯರು ಸ್ಪಷ್ಟನೆ

    ತುಮಕೂರು: ಸಿದ್ದಗಂಗಾ ಶ್ರೀಗಳ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದೆ. ಕಳೆದ ಐದಾರು ದಿನದಿಂದ ಶ್ವಾಸಕೋಶದಲ್ಲಿ ಕಫ ಕಾಣಿಸಿಕೊಂಡಿದ್ದರ ಪರಿಣಾಮ ಇಂದು ಸೋಂಕು ಪತ್ತೆಯಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ.

    ಶ್ರೀಗಳ ಆರೋಗ್ಯದ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ವೈದ್ಯರು, ಶನಿವಾರ ಸಂಜೆ ಸೋಂಕು ತಗಲಿರುವುದು ರಕ್ತಪರೀಕ್ಷೆ ಮೂಲಕ ದೃಢಪಟ್ಟಿದೆ. ಸದ್ಯಕ್ಕೆ ಇಂದು ಬೆಳಗ್ಗೆಯಿಂದ ಚಿಕಿತ್ಸೆ ನೀಡಲಾಗುತ್ತಿದೆ. ಶ್ವಾಸಕೋಶ ಸೋಂಕಿಗೆ 5-10 ದಿನ ಚಿಕಿತ್ಸೆ ಮುಂದುವರಿಸಬೇಕಾಗುತ್ತದೆ. ಅಲ್ಲದೆ ಈ ಹಿಂದೆ ಪಿತ್ತಕೋಶದಲ್ಲಿ ಸೋಂಕು ಕಾಣಿಸಿಕೊಂಡಿದ್ದರಿಂದ ಸ್ಟಂಟ್ ತೆರವುಗೊಳಿಸಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಹಾಗಾಗಿ ಇದೀಗ ಪಿತ್ತಕೋಶಕ್ಕೆ ಸಂಬಂಧಿಸಿದ ಯಾವುದೇ ತೊಂದರೆ ಇಲ್ಲ. ಬದಲಾಗಿ ಶ್ವಾಸಕೋಶಕ್ಕೆ ಸೋಂಕು ಕಾಣಿಸಿಕೊಂಡಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

    ಶ್ರೀಗಳನ್ನು ರೇಲಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ ಬಳಿಕ ಯಾವುದೇ ರೀತಿಯ ಸೋಂಕು ತಗುಲದಂತೆ ಎಷ್ಟೇ ನಿಗಾವಹಿಸಿದ್ರೂ ಕಳೆದ ಮೂರು ದಿನಗಳಿಂದ ಕಫ ಹೆಚ್ಚಾಗಿ ಇಂದು ಮತ್ತೆ ಸೋಂಕು ಕಾಣಿಸಿಕೊಂಡಿದೆ. ಜೊತೆಗೆ ನಿಶ್ಯಕ್ತಿಯೂ ಕಾಣಿಸಿಕೊಂಡಿದೆ. ಎಲ್ಲದಕ್ಕೂ ಶ್ರೀಮಠದಲ್ಲೇ ಚಿಕಿತ್ಸೆ ನಡೆಸಲು ಎಲ್ಲ ವ್ಯವಸ್ಥೆಯನ್ನು ನೀಡಲಾಗುತ್ತಿದೆ. ಬೇರೆ ಯಾವುದೇ ಆಸ್ಪತ್ರೆಗೆ ಶಿಫ್ಟ್ ಮಾಡುವ ಮಾತೇ ಇಲ್ಲ ಎಂದು ಕಿರಿಯ ಶ್ರೀ ಸಿದ್ದಲಿಂಗಸ್ವಾಮೀಜಿ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇನ್ನೂ ಒಂದು ವಾರ ಸಿದ್ದಗಂಗಾ ಶ್ರೀಗಳಿಗೆ ಐಸಿಯುನಲ್ಲೇ ಚಿಕಿತ್ಸೆ

    ಇನ್ನೂ ಒಂದು ವಾರ ಸಿದ್ದಗಂಗಾ ಶ್ರೀಗಳಿಗೆ ಐಸಿಯುನಲ್ಲೇ ಚಿಕಿತ್ಸೆ

    ಚೆನ್ನೈ: ನಡೆದಾಡುವ ದೇವರು ಶ್ರೀ ಸಿದ್ದಗಂಗಾ ಶ್ರೀಗಳ ಆರೋಗ್ಯ ಚೇತರಿಸಿಕೊಳ್ಳುತ್ತಿದೆ. ನ್ಯೂಟ್ರೀಷನ್‍ಗಳನ್ನು ನೀಡಲಾಗುತ್ತಿದ್ದು ಇನ್ನೂ ಒಂದು ವಾರಗಳ ಕಾಲ ಐಸಿಯುನಲ್ಲೇ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ರೇಲಾ ಆಸ್ಪತ್ರೆಯ ಡಾ. ಪರಮೇಶ್ವರ್ ತಿಳಿಸಿದ್ದಾರೆ.

    ಶ್ರೀಗಳಿಗೆ ಶಸ್ತ್ರಚಿಕಿತ್ಸೆ ಮಾಡಿ ಸುಮಾರು 9 ದಿನಗಳು ಕಳೆದಿದೆ. ಅವರು ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ, ಆರೋಗ್ಯದಲ್ಲಿ ಚೇತರಿಕೆ ಕಾಣಿಸುತ್ತಿದೆ. ಎಂದಿನಂತೆ ರಕ್ತನಾಳ ಮೂಲಕವೇ ನ್ಯೂಟ್ರೀಷನ್‍ಗಳನ್ನು ನೀಡಲಾಗುತ್ತಿದೆ. ಶ್ರೀಗಳಿಗೆ ಇನ್ನೂ ಒಂದು ವಾರಗಳ ಕಾಲ ಐಸಿಯುನಲ್ಲೇ ಚಿಕಿತ್ಸೆ ನೀಡಲಾಗುತ್ತದೆ ಎಂದು ಡಾ. ಪರಮೇಶ್ವರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

    ಸಿದ್ದಗಂಗಾ ಶ್ರೀಗಳಿಗೆ ಯಾವುದೇ ಸೋಂಕು ತಗಲದಂತೆ ನೋಡಿಕೊಳ್ಳಲಾಗುತ್ತಿದೆ. ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀಗಳಿಗೆ ಪ್ರೋಟೀನ್ ಹಾಗೂ ನ್ಯೂಟ್ರಿಷನ್ ಕೊರತೆ ಇದ್ದು, ಸರಿಯಾದ ಪ್ರಮಾಣದಲ್ಲಿ ನ್ಯೂಟ್ರೀಷನ್‍ನನ್ನು ನೀಡಲಾಗುತ್ತಿದೆ. ಈಗ ಶ್ರೀಗಳು ಆರೋಗ್ಯವಾಗಿದ್ದಾರೆ ಎಲ್ಲರೊಡನೆ ಮಾತನಾಡುತ್ತಿದ್ದಾರೆ ಯಾರು ಚಿಂತಿಸುವ ಅಗತ್ಯವಿಲ್ಲ ಎಂದು ಮಾಹಿತಿ ನೀಡಿದ್ದಾರೆ.

    ಶ್ರೀಗಳು ಗುಣಮುಖರಾದ ಮೇಲೆ ಐಸಿಯುನಿಂದಾನೇ ನೇರವಾಗಿ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • 4 ದಿನ ಐಸಿಯುನಲ್ಲೇ ಚಿಕಿತ್ಸೆ- ಮತ್ತಷ್ಟು ಚೇತರಿಸಿಕೊಂಡಿದ್ದಾರೆ ನಡೆದಾಡೋ ದೇವ್ರು

    4 ದಿನ ಐಸಿಯುನಲ್ಲೇ ಚಿಕಿತ್ಸೆ- ಮತ್ತಷ್ಟು ಚೇತರಿಸಿಕೊಂಡಿದ್ದಾರೆ ನಡೆದಾಡೋ ದೇವ್ರು

    ಚೆನ್ನೈ: ಸಿದ್ದಗಂಗಾ ಶ್ರೀಗಳಿಗೆ ಸೋಂಕು ತಾಗಿರುವ ಹಿನ್ನೆಲೆಯಲ್ಲಿ ವಾರ್ಡ್ ನಿಂದ ಮತ್ತೆ ಐಸಿಯುಗೆ ಶಿಫ್ಟ್ ಮಾಡಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಅಂತಾ ರೇಲಾ ಆಸ್ಪತ್ರೆಯ ವೈದ್ಯ ಡಾ. ಪರಮೇಶ್ವರ್ ತಿಳಿಸಿದ್ದಾರೆ.

    ಮಾಧ್ಯಮದವರ ಜೊತೆ ಮಾತನಾಡಿದ ಅವರು, ಶ್ರೀಗಳಿಗೆ ಸೋಂಕು ತಾಗಿದ್ದರಿಂದ ಅವರನ್ನು ರೇಲಾ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ದಾಖಲಿಸಲಾಗಿದೆ. ಗುರುವಾರದಂದು ಶ್ರೀಗಳ ಆರೋಗ್ಯದಲ್ಲಿ ಚೇತರಿಕೆಯಾಗಿದ್ದರಿಂದ ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಈಗ ಸೋಂಕು ತಗಲಿರುವ ಪರಿಣಾಮ ಅವರನ್ನು ಮತ್ತೆ ಐಸಿಯುಗೆ ಶಿಫ್ಟ್ ಮಾಡಲಾಗಿದೆ. ಹಾಗೆಯೇ ಇನ್ನು 4 ದಿನಗಳ ಕಾಲ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಯುತ್ತದೆ. ಅಲ್ಲದೆ ಸದ್ಯ ಶ್ರೀಗಳು ಐಸಿಯುನಲ್ಲಿ ಮತ್ತಷ್ಟು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

    ಸಿದ್ದಗಂಗಾ ಶ್ರೀಗಳನ್ನು ನೋಡಲು ಬರುವವರ ಸಂಖ್ಯೆಯಲ್ಲಿ ಹೆಚ್ಚಳವಾದ್ದರಿಂದ ಅವರಿಗೆ ಸೋಂಕು ತಗುಲಿದೆ. ಇದು ಸೂಕ್ಷ್ಮವಾದ ಸಂಗತಿ ಹೀಗೆ ಸೋಂಕು ಹೆಚ್ಚಾದರೆ ಶ್ರೀಗಳಿಗೆ ತೊಂದರೆಯಾಗುತ್ತದೆ. ಆದ್ದರಿಂದ ಡಾ. ರೇಲಾ ಅವರು ಶ್ರೀಗಳನ್ನು ಐಸಿಯುಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲು ನಿರ್ಧರಿಸಿದರು. ಈಗ ಯಾವುದೇ ರೀತಿಯ ಭಯಪಡುವ ಅಗತ್ಯವಿಲ್ಲ. ಶ್ರೀಗಳು ಕ್ಷೇಮವಾಗಿದ್ದಾರೆ. ಬಹುಶಃ ಮುಂದಿನ ವಾರ ಶ್ರೀಗಳನ್ನು ಡಿಸ್ಚಾರ್ಜ್ ಮಾಡುಬಹುದು ಎಂದು ಅವರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಸೀಟ್ ವಾಸ್ತುಪ್ರಕಾರ ಸರಿಯಾಗಿದೆ, ಮುಂದೆ ಬನ್ನಿ: ನಗೆಗಡಲಲ್ಲಿ ತೇಲಿಸಿದ ಸ್ಪೀಕರ್

    ಸೀಟ್ ವಾಸ್ತುಪ್ರಕಾರ ಸರಿಯಾಗಿದೆ, ಮುಂದೆ ಬನ್ನಿ: ನಗೆಗಡಲಲ್ಲಿ ತೇಲಿಸಿದ ಸ್ಪೀಕರ್

    ಬೆಂಗಳೂರು: ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇಂದು ಸದನದಲ್ಲಿ ಹಿಂದಿನ ಸಾಲಿನಲ್ಲಿ ಕುಳಿತುಕೊಂಡಿದ್ದರು. ಆಗ ಅದನ್ನು ಗಮನಿಸಿದ ವಿಧಾನಸಭಾ ಸಭಾಪತಿ ರಮೇಶ್ ಕುಮಾರ್ ರೇವಣ್ಣರನ್ನು ಕರೆದು ಮುಂದಿನ ಸಾಲಿನಲ್ಲಿ ಕುಳಿತುಕೊಳ್ಳುವಂತೆ ಹೇಳಿದರು.

    ತಕ್ಷಣ ಸಭಾಪತಿಗಳ ಮಾತಿಗೆ ಪ್ರತಿಕ್ರಿಯೆ ನೀಡಿದ ರೇವಣ್ಣ, ಮುಂದಿನ ಸೀಟುಗಳನ್ನು ಹಿರಿಯರಿಗೆ ಬಿಟ್ಟಿದ್ದೇನೆ. ಹೀಗಾಗಿ ಇಲ್ಲಿ ಕುಳಿತ್ತಿದ್ದೇನೆ ಎಂದು ಉತ್ತರಿಸಿದರು. ಅದಕ್ಕೆ ಸ್ಪೀಕರ್, ನೀವು ಮುಂದಿನ ಸಾಲಿನಲ್ಲಿ ಕುಳಿತರೇ ಲಕ್ಷಣ. ಬನ್ನಿ ಮುಂದಿನ ಸಾಲಿನಲ್ಲಿ ಕುಳಿತುಕೊಳ್ಳಿ. ನೀವು ಮುಂದಿನ ಸಾಲಿನಲ್ಲಿ ಕುಳಿತುಕೊಂಡಿದ್ದರೆ ಅದನ್ನು ನೋಡಲು ಲಕ್ಷಣವಾಗಿರುತ್ತೆ. ಅಲ್ಲದೇ ಮುಂದಿನ ಸೀಟ್ ವಾಸ್ತುಪ್ರಕಾರವೂ ಚೆನ್ನಾಗಿದೆ ಎಂದು ಹೇಳಿ ಸದನದಲ್ಲಿ ಎಲ್ಲರನ್ನು ನಗೆಗಡಲಲ್ಲಿ ತೇಲಿಸಿದರು. ಇದನ್ನು ಓದಿ:  ವಾಸ್ತು ಪ್ರಕಾರ ಪೂಜೆ ಮಾಡ್ತಿಲ್ಲ ಅಂತಾ ಸಚಿವ ರೇವಣ್ಣರಿಂದ ಅರ್ಚಕರಿಗೆ ಕ್ಲಾಸ್

    ಅಲ್ಲದೇ ಈ ಸಂದರ್ಭದಲ್ಲಿ ಎಲ್ಲಿ ಇನ್ನೂ ಇಬ್ಬರು ಸಚಿವರು ಕಾಣ್ತಿಲ್ಲ, ಜಮೀರ್ ಅಹ್ಮದ್ ಮತ್ತು ಯು ಟಿ ಖಾದರ್ ಇನ್ನು ಬಂದಿಲ್ಲ ಅಂತಾ ಸಭಾಪತಿ ರಮೇಶ್ ಕುಮಾರ್ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಗೆ ಪ್ರಶ್ನಿಸಿದರು.

  • ಮೈತ್ರಿ ಸರ್ಕಾರ 5 ವರ್ಷ ಪೂರೈಸುತ್ತೆ ಅಂತಾ ಅಷ್ಟೇ ಹೇಳುತ್ತೇನೆ-ಪರಮೇಶ್ವರ್

    ಮೈತ್ರಿ ಸರ್ಕಾರ 5 ವರ್ಷ ಪೂರೈಸುತ್ತೆ ಅಂತಾ ಅಷ್ಟೇ ಹೇಳುತ್ತೇನೆ-ಪರಮೇಶ್ವರ್

    ಚಿತ್ರದುರ್ಗ: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ.

    ಚಿತ್ರದುರ್ಗದಲ್ಲಿ ಮಾತನಾಡಿದ ಡಿಸಿಎಂ, ಮಾಜಿ ಸಿಎಂ ಸಿದ್ದರಾಮಯ್ಯ ಏನು ಹೇಳುತ್ತಿದ್ದಾರೋ ಗೊತ್ತಿಲ್ಲ. ಆದರೆ ಕೆಪಿಸಿಸಿ ಅಧ್ಯಕ್ಷನಾಗಿ ನಾನು ಹೇಳುತ್ತಿದ್ದೇನೆ, ಈ ಸಮ್ಮಿಶ್ರ ಸರ್ಕಾರ ಖಂಡಿತವಾಗಿಯೂ 5 ವರ್ಷ ಪೂರೈಸುತ್ತದೆ ಎಂದುಂ ಆತ್ಮ ವಿಶ್ವಾಸ ವ್ಯಕ್ತಪಡಿಸಿದ್ರು.

    ಮೈತ್ರಿ ಸರ್ಕಾರ ರಚನೆ ವೇಳೆಯೇ ಐದು ವರ್ಷದ ಒಪ್ಪಂದ ಆಗಿದೆ. ನೀವು ತಿರುಗಿಸಿ ಅದನ್ನೇ ಕೇಳಿದರೆ ನಾನು ಅದನ್ನೇ ಹೇಳ್ತೀನಿ ಎಂದು ಪತ್ರಕರ್ತರ ಮೇಲೆ ಗರಂ ಆದ್ರು. ರಾಜಕಾರಣದಲ್ಲಿ ಯಾವ ಸಂದರ್ಭದಲ್ಲಿ ಏನಾಗುತ್ತೆ ಅಂತಾ ಯಾರೂ ಹೇಳೋಕಾಗಲ್ಲ ಎನ್ನುವ ಮೂಲಕ ಮತ್ತೆ ಸರ್ಕಾರದ ಅನಿಶ್ಚಿತತೆಯನ್ನು ಖಾತ್ರಿ ಮಾಡಿದ್ದಾರೆ.

    ಸಿದ್ದರಾಮಯ್ಯ ಹೇಳಿದ್ದೇನು?: ಪಾರ್ಲಿಮೆಂಟ್ ಎಲೆಕ್ಷನ್ ವರೆಗೂ ಸಮ್ಮಿಶ್ರ ಸರ್ಕಾರ ಇರುತ್ತೆ. ಪಾರ್ಲಿಮೆಂಟ್ ಎಲೆಕ್ಷನ್ ಬಳಿಕ ಏನು ಬೆಳವಣಿಗೆ ಆಗುತ್ತೆ ನೋಡೋಣ ಎಂದು ಸಿದ್ದರಾಮಯ್ಯನವರು ಆಪ್ತರ ಬಳಿ ಹೇಳಿರುವ ವಿಡಿಯೋ ವೈರಲ್ ಆಗಿದೆ.

    ಪರಮೇಶ್ವರ್ ಚಿತ್ರದುರ್ಗ ಮಾರ್ಗವಾಗಿ ಹೊಸಪೇಟೆಗೆ ತೆರಳುವ ವೇಳೆ ಪರಮೇಶ್ವರ್ ಅಭಿಮಾನಿಗಳಿಂದ ಕೆಲ ಕಾಲ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹೆದ್ದಾರಿ ಮಧ್ಯೆ ಛಲವಾದಿ ಸಮುದಾಯದ ಮುಖಂಡರು ಗೃಹ ಸಚಿವರಿಗೆ ಸನ್ಮಾನ ಮಾಡಿದರು. ಈ ಮಾರ್ಗವಾಗಿ ತುರ್ತು ಸೇವೆಗಾಗಿ ಜಿಲ್ಲಾಸ್ಪತ್ರೆಗೆ ತೆರಳುತ್ತಿದ್ದ ಅಂಬ್ಯುಲೆನ್ಸ್ ಗೆ ಚಿತ್ರದುರ್ಗ ಡಿಸಿ ವಿವಿ ಜೋತ್ಸ್ನಾ ಕಾರು ಅಡ್ಡಿಮಾಡಿತು. ತಡವಾಗಿ ಎಚ್ಚೆತ್ತ ಪೊಲೀಸರು ಅಂಬುಲೆನ್ಸ್ ಗೆ ದಾರಿ ಮಾಡಿಕೊಟ್ಟಿದ್ದಾರೆ.

  • ಡಿಸಿಎಂನಿಂದಾಗಿ ತುಮಕೂರು, ಬೆಂಗ್ಳೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್ ಜಾಂ!

    ಡಿಸಿಎಂನಿಂದಾಗಿ ತುಮಕೂರು, ಬೆಂಗ್ಳೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್ ಜಾಂ!

    ಬೆಂಗಳೂರು: ಉಪ ಮುಖ್ಯಮಂತ್ರಿಗಾಗಿ ಜೀರೋ ಟ್ರಾಫಿಕ್ ಮಾಡಲು ಹೋಗಿ, ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಗೂ ಟೋಲ್ ಗಳಲ್ಲಿ ಫುಲ್ ಟ್ರಾಫಿಕ್ ಜಾಂ ಉಂಟಾಗಿದೆ.

    ಬೆಂಗಳೂರು ಹೊರವಲಯ ನೆಲಮಂಗಲದ ನವಯುಗ ಹಾಗೂ ಜಾಸ್ ಟೋಲ್ ಗಳಲ್ಲಿ ವಾಹನ ಸವಾರರು ಜಾಮ್ ನಿಂದ ಹೈರಾಣಾಗಿದ್ದಾರೆ. ಡಿಸಿಎಂ ಡಾ. ಜಿ ಪರಮೇಶ್ವರ್ ಕೊರಟಗೆರೆಯಿಂದ ಬೆಂಗಳೂರಿಗೆ ವಾಪಸ್ಸಾಗುತ್ತಿರುವ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರಿಂದ ಜೀರೋ ಟ್ರಾಫಿಕ್ ಮಾಡಲಾಗಿತ್ತು.

    ಅಷ್ಟೇ ಅಲ್ಲದೇ ರಂಜಾನ್ ಹಬ್ಬದ ರಜೆ ಹಾಗೂ ವಾರಾಂತ್ಯದ ರಜೆ ಮುಗಿಸಿಕೊಂಡು, ಜನರು ಬೆಂಗಳೂರಿಗೆ ವಾಪಸ್ಸಾಗುತ್ತಿದ್ದು, ಅಧಿಕ ದಟ್ಟಣೆ ಉಂಟಾಗಿ, ಟೋಲ್ ಗಳಲ್ಲಿ ವಾಹನ ಸವಾರರು ಹೈರಾಣಾಗಿದ್ದಾರೆ. ಸುಮಾರು ಹೆದ್ದಾರಿಯಲ್ಲಿ ಐದಾರು ಕಿಲೋಮೀಟರ್ ದೂರದವರೆಗೂ ಟ್ರಾಫಿಕ್ ಜಾಮ್ ಉಂಟಾಗಿತ್ತು.

    ಇನ್ನೂ ಸಂಚಾರ ದಟ್ಟಣೆ ನಿಯಂತ್ರಿಸಲು ನೆಲಮಂಗಲ ಸಂಚಾರಿ ಪೊಲೀಸರು, ಟೌನ್ ಪೊಲೀಸರು ಹಾಗೂ ಮಾದನಾಯಕನಹಳ್ಳಿ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಒಟ್ಟಿನಲ್ಲಿ ಉಪಮುಖ್ಯಮಂತ್ರಿಯಿಂದಾಗಿ ಬೆಂಗಳೂರಿಗೆ ತೆರಳಲು ಸವಾರರು ಪರದಾಡುವಂತಾಗಿತ್ತು.

  • ಸಾಲಮನ್ನಾ ಇನ್ನೂ ಒಂದು ತಿಂಗಳು ಅನುಮಾನ!

    ಸಾಲಮನ್ನಾ ಇನ್ನೂ ಒಂದು ತಿಂಗಳು ಅನುಮಾನ!

    ಬೆಂಗಳೂರು: ನಾನು ಸಾಂದರ್ಭಿಕ ಶಿಶು. ಕಾಂಗ್ರೆಸ್‍ನ ಹಂಗಿನಲ್ಲಿ ಸಿಎಂ ಆಗಿದ್ದೇನೆ ಅಂತ ಸಿಎಂ ಕುಮಾರಸ್ವಾಮಿ ಹೇಳಿಕೊಂಡು ಬರ್ತಿದ್ದಾರೆ. ಜೊತೆಗೆ, ಸಮ್ಮಿಶ್ರ ಸರ್ಕಾರದ ಆಯಸ್ಸಿನ ಬಗ್ಗೆ ರಾಜ್ಯವ್ಯಾಪಿ ಚರ್ಚೆ ಇದೆ. ಜೊತೆಗೆ, ರೈತರ ಸಂಪೂರ್ಣ ಸಾಲಮನ್ನಾಕ್ಕೆ ಸರ್ಕಾರ ಕೇಳಿದ್ದ 15 ದಿನಗಳ ಗಡುವು ಅಂತ್ಯಗೊಂಡಿದೆ. ಸಾಲಮನ್ನಾ ನಿರೀಕ್ಷೆಯಲ್ಲಿದ್ದ ಅನ್ನದಾತರಿಗೆ ನಿರಾಸೆಯೂ ಆಗಿದೆ.

    ವಾಸ್ತವವಾಗಿ ಸಂಪೂರ್ಣ ಸಾಲಮನ್ನಾವಿರಲಿ, ಕಳೆದ ಸಿದ್ದರಾಮಯ್ಯ ಸರ್ಕಾರ ಘೋಷಿಸಿದ್ದ ಸಾಲವೇ ಇನ್ನೂ ಮನ್ನಾ ಆಗಿಲ್ಲ. ಈಗಿನ ಸ್ಥಿತಿಯಲ್ಲಿ ಸದ್ಯಕ್ಕೆ ಸಾಲಮನ್ನಾ ಘೋಷಣೆ ಅನುಮಾನವಾಗಿದ್ದು, ಮುಂದಿನ ತಿಂಗಳು ಮಂಡನೆಯಾಗಲಿರೋ ಬಜೆಟ್‍ವರೆಗೂ ರೈತರು ಕಾಯಲೇಬೇಕಿದೆ.

    ಸಾಲಮನ್ನಾಕ್ಕೆ ಸರ್ಕಾರ ಬದ್ಧ ಅಂತ ಮುಖ್ಯಮಂತ್ರಿ ಕುಮಾರಸ್ವಾಮಿ ಪುನರುಚ್ಚರಿಸಿದ್ದರೂ, ಯಾವಾಗ ಅಂತ ಎಲ್ಲಿಯೂ ಹೇಳಿಲ್ಲ. ಸಾಲಮನ್ನಾಕ್ಕೆ ಯಾವುದೇ ಗಡುವಿಲ್ಲ ಅಂತ ಉಪ ಮುಖ್ಯಮಂತ್ರಿ ಪರಮೇಶ್ವರ್ ನೀಡಿರೋ ಹೇಳಿಕೆಯನ್ನು ಸಮರ್ಥಿಸಿಕೊಂಡಿರೋ ಎಚ್ಡಿಕೆ, ಸಾಮಾನ್ಯ ಕನಿಷ್ಟ ಕಾರ್ಯಕ್ರಮದಡಿ ಆರ್ಥಿಕ ಶಿಸ್ತಿನಡಿ ಸಾಲಮನ್ನಾ ಮಾಡೋದಾಗಿ ಸ್ಪಷ್ಟಪಡಿಸಿದ್ದಾರೆ.

    ಸಾಲಮನ್ನಾ ಬಗ್ಗೆ ಪ್ರಶ್ನಿಸಿದ ಮಾಧ್ಯಮಗಳ ವಿರುದ್ಧವೂ ಕಿಡಿಕಾರಿದ ಎಚ್ಡಿಕೆ, ಇನ್ನೆಷ್ಟು ದಿನ ರಾಜಕೀಯ ಸುದ್ದಿ ಪ್ರಸಾರ ಮಾಡ್ತೀರಾ ಅಂತ ಸವಾಲೆಸೆದಿದ್ದಾರೆ. ನಮ್ನ ಸರ್ಕಾರ ಐದು ವರ್ಷ ಪೂರೈಸುತ್ತೆ. ಕೊನೆ ಪಕ್ಷ ಒಂದು ವರ್ಷವಾದ್ರು ನಮ್ಮನ್ನು ಯಾರು ಮುಟ್ಟೋಕೆ ಆಗೋಲ್ಲ. ಲೋಕಸಭೆ ಚುನಾವಣೆಯವರೆಗೂ ಯಾರು ಏನು ಮಾಡೋಕೂ ಆಗಲ್ಲ ಅಂದಿದ್ದಾರೆ.

    ವಿಳಂಬ ಏಕೆ?
    ಸಾಲಮನ್ನಾ ವಿಚಾರದಲ್ಲಿ ಮೈತ್ರಿಕೂಟ ಸರ್ಕಾರದಲ್ಲೇ ಅಪಸ್ವರ ಕೇಳಿಬಂದಿದೆ. ಗುರುವಾರ ಸಿದ್ದರಾಮಯ್ಯ ನೇತೃತ್ವದ ಸಮನ್ವಯ ಸಮಿತಿ ಸಭೆಯಲ್ಲೂ ಈ ಕುರಿತು ಪ್ರಸ್ತಾಪ ನಡೆದಿದೆ. ಸಂಪೂರ್ಣ ಸಾಲಮನ್ನಾಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅಡ್ಡಿಪಡಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಸಾಲಮನ್ನಾ ಕ್ರೆಡಿಟ್ ಜೆಡಿಎಸ್‍ಗೆ ಸಿಗಬಾರದು ಅಂತಾ ಕಾಂಗ್ರೆಸ್ ನಿಗಾವಹಿಸುತ್ತಿದೆ ಎಂಬ ಮಾತು ಕೇಳಿಬರುತ್ತಿದೆ. ಸಾಮಾನ್ಯ ಕನಿಷ್ಟ ಯೋಜನೆ ಅಡಿ ರೈತರ ಸಾಲ ಮನ್ನಾ ಮಾಡುವ ಕುರಿತು ಸರಕಾರ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.

    ಸಿದ್ದು ಸರಕಾರದ ಸಾಲ ಮನ್ನಾ ಕಥೆ ಏನು?
    2017ರ ಜೂನ್ 21ರಿಂದ 2018ರ ಜೂ.ನ್ 20ರೊಳಗಿನ ಸಾಲಮನ್ನಾ ಮಾಡುವುದಾಗಿ ಸಿದ್ಧರಾಮಯ್ಯ ಸರಕಾರ ಘೋಷಿಸಿತ್ತು. ಆದ್ರೆ ಸಹಕಾರ ಸಂಘಗಳಲ್ಲಿನ 50 ಸಾವಿರವರೆಗೆ ಸಾಲ ಮನ್ನಾ ಅಂತ ಮಾತ್ರ ಸರಕಾರ ಘೋಷಿಸಿತ್ತು. ಸಿದ್ಧರಾಮಯ್ಯ ಸರ್ಕಾರ ಒಟ್ಟು 22 ಲಕ್ಷ ರೈತರ 8,165 ಕೋಟಿ ಸಾಲಮನ್ನಾ ಮಾಡಿದ್ದೇವೆ ಅಂತಾ ಹೇಳಿದ್ದರು. ಆದ್ರೆ ಮನ್ನಾ ಆಗಿರೋದು 14 ಲಕ್ಷ ರೈತರ 4,967 ಕೋಟಿ ಮಾತ್ರ. ಸಾಲಮನ್ನಾಕ್ಕೆ ಜೂನ್ 20 ಕೊನೆಯ ದಿನವಾಗಿದೆ. 50 ಸಾವಿರಕ್ಕಿಂತ ಮೇಲ್ಪಟ್ಟ ಹಣವನ್ನು ಲಕ್ಷಾಂತರ ರೈತರು ಸಾಲಮನ್ನಾ ನಿರೀಕ್ಷೆಯಲ್ಲಿ ಇನ್ನೂ ಪಾವತಿಸಿಲ್ಲ.