Tag: Dr.Randeep Guleria

  • ಸೆಪ್ಟೆಂಬರ್ ವೇಳೆಗೆ ಮಕ್ಕಳಿಗೆ ಕೋವಿಡ್ ಲಸಿಕೆ – ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ

    ಸೆಪ್ಟೆಂಬರ್ ವೇಳೆಗೆ ಮಕ್ಕಳಿಗೆ ಕೋವಿಡ್ ಲಸಿಕೆ – ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ

    ಬೆಂಗಳೂರು: ದೇಶದಲ್ಲಿ ಮೂರನೇ ಅಲೆ ಭೀತಿ ಹೆಚ್ಚಾಗ್ತಿದೆ. ದೇಶದ ಕೆಲ ರಾಜ್ಯಗಳಲ್ಲಿ ಕೇಸ್ ಗಳ ಸಂಖ್ಯೆ ಏರಿಕೆಯಾಗುತ್ತಿದೆ. ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಸೊಂಕು ತಗುಲುತ್ತೆ ಅಂತಾ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಮಕ್ಕಳಿಗೆ ವ್ಯಾಕ್ಸಿನ್ ಇಲ್ಲದ ಕಾರಣ ಮಕ್ಕಳಿಗೆ ಸೋಂಕು ಹೆಚ್ಚುವ ಸಾಧ್ಯತೆಗಳಿವೆ. ಈ ಮಧ್ಯೆ ಮಕ್ಕಳಿಗೆ ಕೋವಿಡ್ ಲಸಿಕೆ ಸೆಪ್ಟೆಂಬರ್ ವೇಳೆಗೆ ಸಿಗಬಹುದು ಅಂತಾ ಏಮ್ಸ್ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಭಾರತ್ ಬಯೋಟೆಕ್‍ನ ಕೋವಾಕ್ಸಿನ್ ಪ್ರಯೋಗಗಳು ಆಗಸ್ಟ್ ಅಥವಾ ಸೆಪ್ಟೆಂಬರ್ ವೇಳೆಗೆ ಮುಗಿಯಬೇಕು ಮತ್ತು ಆ ಹೊತ್ತಿಗೆ ನಾವು ವ್ಯಾಕ್ಸಿನ್ ಬಳಕೆಗೆ ಅನುಮೋದನೆ ಪಡೆಯಬೇಕು. ಫೈಜರ್ ಲಸಿಕೆಗೆ ಈಗಾಗಲೇ ಅನುಮೋದನೆ ಸಿಕ್ಕಿದೆ. ಸೆಪ್ಟೆಂಬರ್ ವೇಳೆಗೆ ನಾವು ಮಕ್ಕಳಿಗೆ ಲಸಿಕೆ ಹಾಕಲು ಪ್ರಾರಂಭಿಸಬೇಕು. ಚೈನ್ ಲಿಂಕ್ ಕಟ್ ಮಾಡಬೇಕಾದ್ರೆ ಇದು ತುಂಬಾ ಸಹಕಾರಿ ಆಗುತ್ತೆ ಅಂತಾ ಡಾ.ರಣದೀಪ್ ಗುಲೇರಿಯಾ ತಿಳಿಸಿದ್ದಾರೆ.

    ರಾಜ್ಯದಲ್ಲಿ ತಜ್ಞರು ಕೂಡ ಮೂರನೇ ಅಲೆ ಸೆಪ್ಟೆಂಬರ್, ಅಕ್ಟೋಬರ್ ವೇಳೆಗೆ ಕಾಣಿಸಿಕೊಳ್ಳಬಹುದು ಅಂತಾ ಹೇಳುತ್ತಿದ್ದಾರೆ. ಮಕ್ಕಳಿಗೆ ಲಸಿಕೆ ಸೆಪ್ಟೆಂಬರ್ ಗೆ ಬಂದರೆ ಕೋವಿಡ್ ನಿಂದ ಪಾರು ಮಾಡಬಹುದು ಅಂತಾ ರಾಜ್ಯದ ತಜ್ಞರು ಹೇಳಿದ್ದಾರೆ. ಇದನ್ನೂ ಓದಿ: ಅತಿವೃಷ್ಟಿ ಪರಿಹಾರ ಕಾರ್ಯಕ್ಕೆ ಡಿಸಿ ಖಾತೆಯಲ್ಲಿ 950 ಕೋಟಿ ಮೀಸಲು: ಸಚಿವ ಆರ್.ಅಶೋಕ್

  • ಕೆಲ ಪ್ರದೇಶಗಳಲ್ಲಿ ಸಮುದಾಯಕ್ಕೆ ಕೊರೊನಾ ಹಬ್ಬುತ್ತಿದೆ: ಏಮ್ಸ್ ನಿರ್ದೇಶಕ

    ಕೆಲ ಪ್ರದೇಶಗಳಲ್ಲಿ ಸಮುದಾಯಕ್ಕೆ ಕೊರೊನಾ ಹಬ್ಬುತ್ತಿದೆ: ಏಮ್ಸ್ ನಿರ್ದೇಶಕ

    ನವದೆಹಲಿ: ಭಾರತದಲ್ಲಿ ಕೊರೊನಾ ವೈರಸ್ ಏಕಾಏಕಿ ದೇಶದ ಕೆಲವು ಭಾಗಗಳಲ್ಲಿ ಸಮುದಾಯಕ್ಕೆ ಹಬ್ಬಿದೆ ಎಂದು ನವದೆಹಲಿಯ ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ.

    ಮಾಧ್ಯಮ ಸಂದರ್ಶನವೊಂದಲ್ಲಿ ಮಾತನಾಡಿದ ಅವರು, ಕೆಲವು ಪ್ರದೇಶಗಳಲ್ಲಿ ಸಮುದಾಯ ಪ್ರಸರಣ ಕಂಡುಬಂದರೂ ಭಾರತ ಇನ್ನೂ 2ನೇ ಹಂತ ಮತ್ತು 3ನೇ ಹಂತದ ಮಧ್ಯದಲ್ಲಿದೆ. ಕೆಲವು ಸ್ಥಳಗಳಲ್ಲಿ ಸೋಂಕಿತರ ಸಂಖ್ಯೆ ತೀವ್ರವಾಗಿ ಏರಿಕೆ ಕಂಡಿವೆ ಮತ್ತು ಮುಂಬೈನಂತಹ ಕೆಲವು ಪ್ರದೇಶಗಳಲ್ಲಿ ಸ್ಥಳೀಯ ಸಮುದಾಯ ಹರಡುವಿಕೆ ಕೂಡ ಗಮನಕ್ಕೆ ಬಂದಿದೆ. ಭಾರತದ ಹೆಚ್ಚಿನ ಭಾಗಗಳಲ್ಲಿ ಪ್ರಸ್ತುತ ಕೊರೊನಾ ವೈರಸ್ 2ನೇ ಹಂತದಲ್ಲಿದೆ ಎಂದು ಮಾಹಿತಿ ನೀಡಿದರು.

    ಡಾ.ರಣದೀಪ್ ಗುಲೇರಿಯಾ ಅವರು ದೇಶದ ಕೆಲವು ಹಾಟ್‍ಸ್ಪಾಟ್‍ಗಳು ಸ್ಥಳೀಯ ಸಮುದಾಯ ಹರಡುವಿಕೆಯನ್ನು ಹೊಂದಿವೆ. ಇದನ್ನು ಆರಂಭಿಕ ಹಂತದಲ್ಲಿ ನಿಲ್ಲಿಸಿದರೆ ಅಷ್ಟೊಂದು ಕೆಟ್ಟ ಪರಿಣಾಮ ಬೀರುವುದಿಲ್ಲ. ಸಮುದಾಯ ಹರಡುವಿಕೆಯು ಕೆಲವು ಪ್ರದೇಶಗಳಲ್ಲಿ ಪ್ರಾರಂಭವಾಗಿದೆ. ಆದ್ದರಿಂದ ನಾವು ಹೆಚ್ಚು ಜಾಗರೂಕರಾಗಿರುವುದು ಅವಶ್ಯಕ ಎಂದು ತಿಳಿಸಿದರು.

    ದೆಹಲಿಯಲ್ಲಿ ಕಳೆದ ತಿಂಗಳು ನಡೆದ ತಬ್ಲಿಘಿ ಜಮಾತ್ ಕಾರ್ಯಕ್ರಮದಿಂದ ಕೊರೊನಾ ಸೋಂಕಿತರ ಹೆಚ್ಚಳಕ್ಕೆ ಕಾರಣವಾಗಿದೆ. ಜಮಾತ್ ಸಭೆಗೆ ಹಾಜರಾದ ಅಥವಾ ಭಾಗವಹಿಸಿದ್ದವರೊಂದಿಗೆ ಸಂಪರ್ಕ ಹೊಂದಿದ ಎಲ್ಲರನ್ನೂ ಪತ್ತೆಹಚ್ಚುವುದು ಬಹಳ ಮುಖ್ಯ ಎಂದು ಹೇಳಿದರು.

    ಇದೇ ವೇಳೆ ಡಾ.ರಂದೀಪ್ ಗುಲೇರಿಯಾ ಅವರು, ಈ ಸಮಯದಲ್ಲಿ ವೈದ್ಯರನ್ನು ಬೆಂಬಲಿಸುವಂತೆ ಕೇಳಿಕೊಂಡರು. ಹೆಮ್ಮಾರಿ ಕೊರೊನಾ ಸೋಂಕಿನ ವಿರುದ್ಧ ಹೋರಾಡುತ್ತಿರುವವರಿಗೆ ಚಿಕಿತ್ಸೆ ನೀಡುವುದು ಭಾರೀ ಅಪಾಯಕಾರಿ. ಹೀಗಾಗಿ ವೈದ್ಯರು ಸಹ ಭಯದಿಂದ ಬದುಕುತ್ತಿದ್ದಾರೆ. ಅವರನ್ನು ಬೆಂಬಲಿಸಿ, ಪ್ರೋತ್ಸಾಹಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

    21 ದಿನಗಳ ಲಾಕ್‍ಡೌನ್ ಅನ್ನು ವಿಸ್ತರಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಾ.ಗುಲೇರಿಯಾ ಅವರು, ಏಪ್ರಿಲ್ 10ರ ನಂತರ ಪರಿಸ್ಥಿತಿ ಸ್ಪಷ್ಟವಾಗಲಿದೆ. ಆಗ ಮಾತ್ರ ಲಾಕ್‍ಡೌನ್ ವಿಸ್ತರಿಸಬೇಕೋ ಅಥವಾ ಬೇಡವೋ ಎಂದು ಹೇಳಲು ನಮಗೆ ಸಾಧ್ಯವಾಗುತ್ತದೆ. ಪರಿಸ್ಥಿತಿ ಸಾಮಾನ್ಯವಾಗಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.