Tag: Dr. Shivamurthy Murugha Sharanaru

  • ಯಡಿಯೂರಪ್ಪರನ್ನು ಗೌರವದಿಂದ ನಡೆಸಿಕೊಳ್ಳಿ, ಇಲ್ಲ ಬಿಜೆಪಿಗೆ ನಷ್ಟ: ಮುರುಘಾ ಶರಣರು

    ಯಡಿಯೂರಪ್ಪರನ್ನು ಗೌರವದಿಂದ ನಡೆಸಿಕೊಳ್ಳಿ, ಇಲ್ಲ ಬಿಜೆಪಿಗೆ ನಷ್ಟ: ಮುರುಘಾ ಶರಣರು

    ಚಿತ್ರದುರ್ಗ: ಕರ್ನಾಟಕ ರಾಜ್ಯಕ್ಕೆ ತಮ್ಮದೇ ಆದ ಅಪಾರ ಕೊಡುಗೆ ನೀಡಿರುವ ಸಿಎಂ ಯಡಿಯೂರಪ್ಪ ಅವರನ್ನೂ ಗೌರವದಿಂದ ನಡೆಸಿಕೊಳ್ಳಬೇಕು. ಇಲ್ಲವಾದರೆ ಬಿಜೆಪಿಗೆ ನಷ್ಟವಾಗಲಿದೆ ಎಂದು ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದ್ದಾರೆ.

    ಸಿಎಂ ಸ್ಥಾನದಿಂದ ಬಿಎಸ್ ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಚಿತ್ರದುರ್ಗದ ಮುರುಘಾ ಮಠದಿಂದ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಎಸ್ ವೈ ತಳಮಟ್ಟದಿಂದ ಬಿಜೆಪಿ ಸಂಘಟನೆ ಮಾಡಿದ್ದಾರೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿದ ಹೆಗ್ಗಳಿಕೆ ಯಡಿಯೂರಪ್ಪ ಅವರ ಹೆಗಲಿಗಿದೆ.

    ನೇರ ನುಡಿ, ಧೀರ ನಡೆಗೆ ಸಿಎಂ ಯಡಿಯೂರಪ್ಪ ಹೆಸರಾಗಿದ್ದೂ, ಪ್ರತಿ ಚುನಾವಣೆ ಸಹ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಿವೆ. ಅಲ್ಲದೇ ಬಿಎಸ್‍ವೈ ರಾಜ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದು, ಮೇಧಾವಿ ಹಾಗೂ ಅಪ್ರತಿಮ ರಾಜಕೀಯ ಮುತ್ಸದ್ಧಿ ಬಿಎಸ್‍ವೈರನ್ನು ನಿರ್ಲಕ್ಷಿಸಿದರೆ ಬಿಜೆಪಿಗೆ ನಷ್ಟ ಸಾಧ್ಯತೆ ಇದೆ. ಆದ್ದರಿಂದ ಬಿಎಸ್ ವೈ ಅವರನ್ನು ಗೌರವದಿಂದ ನಡೆಸಿಕೊಳ್ಳಬೇಕು. ಈ ವೇಳೆ ನಾಯಕತ್ವ ಬದಲಾವಣೆ ಸಮಂಜಸವಲ್ಲ ಎಂದು ಬಿಜೆಪಿ ಹೈಕಮಾಂಡ್ ನಡೆ ವಿರುದ್ಧ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಸಚಿವ ಮುರುಗೇಶ್ ನಿರಾಣಿ ಬಳಿ ಸುಮಾರು 500 ಸಿ.ಡಿಗಳು ಇವೆ: ಅಲಂ ಪಾಷಾ

  • ರಕ್ತದಾನ ಮಾಡೋ ಮೂಲಕ ಜಾಗೃತಿ ಮೂಡಿಸಿದ ಶ್ರೀಗಳು

    ರಕ್ತದಾನ ಮಾಡೋ ಮೂಲಕ ಜಾಗೃತಿ ಮೂಡಿಸಿದ ಶ್ರೀಗಳು

    ಹಾವೇರಿ: ನಾವು ಔಷಧಿಗಳನ್ನು ಉತ್ಪಾದನೆ ಮಾಡಬಹುದೇ ವಿನಃ ರಕ್ತವನ್ನು ಉತ್ಪಾದನೆ ಮಾಡಲು ಸಾಧ್ಯವಿಲ್ಲ, ಅದು ದಾನ ಮಾಡುವುದರಿಂದ ಮಾತ್ರ ಲಭಿಸುತ್ತದೆ ಎಂದು ರಕ್ತದಾನ ಮಾಡಿ ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರು ಜಾಗೃತಿ ಮೂಡಿಸಿದ್ದಾರೆ.

    ಹೊಸಮಠದ ಬಸವ ಕೇಂದ್ರದಲ್ಲಿ ಜರುಗುತ್ತಿರುವ ಲಿಂಗೈಕ್ಯ ಜಗದ್ಗುರು ಶ್ರೀ ನೈಘಂಟಿನ ಸಿದ್ದಬಸವ ಮುರುಘರಾಜೇಂದ್ರ ಶ್ರೀಗಳು ಹಾಗೂ ಶ್ರೀ ಮುರುಘೇಂದ್ರ ಮಹಾಶಿವಯೋಗಿಗಳ ಸ್ಮರಣೋತ್ಸವ ನಿಮಿತ್ಯ ಶರಣ ಸಂಸ್ಕೃತಿ ಉತ್ಸವ-2019ರ ಪ್ರಯಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬಸವಕೇಂದ್ರದಲ್ಲಿ ಜಯಪ್ರಿಯಾ ಆಸ್ಪತ್ರೆ ಹುಬ್ಬಳ್ಳಿ, ವೀರಾಪುರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾವೇರಿ ಹಾಗೂ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ರಕ್ತದಾನ ಶಿಬಿರಕ್ಕೆ ಡಾ. ಶಿವಮೂರ್ತಿ ಮುರುಘಾ ಶರಣರು ಚಾಲನೆ ನೀಡಿದರು.

    ಮಹಿಳೆಯರಿಗೆ ಹೆರಿಗೆಯ ಸಂದರ್ಭದಲ್ಲಿ ರಕ್ತವು ಅವಶ್ಯಕತೆಯಿದ್ದಾಗ ಸುಲಭವಾಗಿ ದೊರಕಿದರೆ ತಾಯಿ ಮತ್ತು ಮಗು ಆರೋಗ್ಯವಾಗಿರಲು ಸಾಧ್ಯ. ರಕ್ತವು ಸಕಾಲಕ್ಕೆ ದೊರೆಯದೆ ಇದ್ದಲ್ಲಿ ಸಾವು ಉಂಟಾಗುವ ಸಂಭವವಿರುತ್ತದೆ. ಹೀಗಾಗಿ ನಾವೆಲ್ಲಾ ಆರೋಗ್ಯವಾಗಿರಲು ಹಾಗೂ ಸಮಾಜವನ್ನು ಆರೋಗ್ಯವಾಗಿಡಲು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವಂತೆ ಕರೆ ನೀಡಿದರು.

    ಸಾತ್ವಿಕ ಆಹಾರವನ್ನು ಸೇವಿಸದೆ ಇರುವುದರಿಂದ ಯುವ ಜನತೆ ದೃಷ್ಟಿ ದೋಷದಿಂದ ಬಳಲುತ್ತಿದ್ದಾರೆ. ಅತಿಯಾದ ಮೊಬೈಲ್ ಮತ್ತು ದೂರದರ್ಶನ ವಿಕ್ಷಣೆಯಿಂದಾಗಿ ಸಣ್ಣ ವಯಸ್ಸಿನಲ್ಲಿಯೇ ವಿವಿಧ ರೀತಿಯ ದೃಷ್ಟಿದೋಷಗಳಿಗೆ ಒಳಗಾಗುತ್ತಿದ್ದೇವೆ. ಹೀಗಾಗಿ ಅವಶ್ಯಕತೆಗೆ ತಕ್ಕಷ್ಟು ಮಾತ್ರ ಮೊಬೈಲ್ ಮತ್ತು ದೂರದರ್ಶನದ ಬಳಕೆ ಮಾಡಬೇಕೆಂದರು.

    ಆಯೋಜಕ ಡಾ. ಬಸವರಾಜ ವೀರಾಪುರ ಮಾತನಾಡಿ, ಮಠ ಮಾನ್ಯಗಳು ಹಾಗೂ ಸಂಘ ಸಂಸ್ಥೆಗಳು ಆಯೋಜಿಸುವ ಉಚಿತ ತಪಾಸಣಾ ಶಿಬಿರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆಯಬೇಕೆಂದರು. ಶಿಬಿರದಲ್ಲಿ ಹುಬ್ಬಳ್ಳಿಯ ಜಯಪ್ರೀಯಾ ಆಸ್ಪತ್ರೆಯ ವೈದ್ಯ ಡಾ. ವೆಂಕಟರಾಮ್, ನಗರದ ವೈದ್ಯರಾದ ಡಾ. ಮೃತ್ಯುಂಜಯ ತುರಕಾಣಿ ತಪಾಸಣೆಯನ್ನು ನೆರವೇರಿಸಿದರು.

    ರಕ್ತದಾನ ಶಿಬಿರದಲ್ಲಿ 100ಕ್ಕೂ ಅಧಿಕ ಜನರು ರಕ್ತದಾನ ಮಾಡಿದರು. ನೂರಕ್ಕೂ ಅಧಿಕ ಜನರು ಉಚಿತ ನೇತ್ರ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಂಡವರಲ್ಲಿ 32 ಜನರಿಗೆ ಉಚಿತ ಶಸ್ತ್ರಚಿಕಿತ್ಸೆಗೆ ಹುಬ್ಬಳ್ಳಿಯ ಜಯಪ್ರೀಯಾ ಕಣ್ಣಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು.

    ಈ ಸಂದರ್ಭದಲ್ಲಿ ಹೊಸಮಠದ ಬಸವ ಶಾಂತಲಿಂಗ ಶ್ರೀಗಳು, ಶರಣ ಸಂಸ್ಕೃತಿ ಉತ್ಸವ ಸಮಿತಿ ಉಪಾಧ್ಯಕ್ಷ ಶ್ರೀಧರ ದೊಡ್ಡಮನಿ, ದಯಾನಂದ ಯಡ್ರಾಮಿ, ಡಾ. ಮೃಂತ್ಯುಂಜಯ ತುರಕಾಣಿ ರುದ್ರೇಶ ಚೆನ್ನಣ್ಣನವರ, ಎನ್.ಬಿ. ಕಾಳೆ, ಶಿವಬಸಪ್ಪ ಮುದ್ದಿ, ಮಲ್ಲಿಕಾರ್ಜುನ ಹಿಂಚಿಗೇರಿ, ಚಂದ್ರಶೇಖರ ಶಿಶುನಳ್ಳಿ, ಮುರುಗೆಪ್ಪ ಕಡೆಕೊಪ್ಪ ಸೇರಿದಂತೆ ಇತರರು ಹಾಜರಿದ್ದರು.

  • ಜ್ಯೋತಿಷಿಗಳಿಂದ ಭಯದ ಬೀಜ ಬಿತ್ತನೆ: ಡಾ.ಶಿವಮೂರ್ತಿ ಶ್ರೀ

    ಜ್ಯೋತಿಷಿಗಳಿಂದ ಭಯದ ಬೀಜ ಬಿತ್ತನೆ: ಡಾ.ಶಿವಮೂರ್ತಿ ಶ್ರೀ

    ಚಿತ್ರದುರ್ಗ: ಇಂದಿನ ಚಂದ್ರ ಗ್ರಹಣ ಬ್ಲಡ್ ಮೂನ್ (ರಕ್ತ ಚಂದ್ರ) ಅಲ್ಲ, ವಂಡರ್ ಮೂನ್ (ಅದ್ಭುತ ಚಂದ್ರ), ಸೂಪರ್ ಮೂನ್. ಆದರೆ ಇದರ ಬಗ್ಗೆ ಜ್ಯೋತಿಷಿಗಳು ಜನರಲ್ಲಿ ಭಯ ಹುಟ್ಟಿಸುತ್ತಿದ್ದಾರೆ ಎಂದು ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀಗಳು, ಚಂದ್ರಗ್ರಹಣದಲ್ಲಿ ಮಂಗಳವೋ, ಅಮಂಗಳವೋ ಎನ್ನುವ ಪ್ರಶ್ನೆಯೇ ಇಲ್ಲ. ಎಲ್ಲವೂ ಮಂಗಳವೇ. ಇಂದಿಗೂ ಕೆಲವರು ಪಂಚಾಂಗದ ದಾಸರಾಗಿದ್ದಾರೆ. ಹೀಗಾಗಿ ಜ್ಯೋತಿಷಿಗಳು ಭಯದ ಬೀಜ ಬಿತ್ತಿ, ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

    ಚಂದ್ರ ಗ್ರಹಣ ಜಗತ್ತಿನ ಅದ್ಭುತ, ಅದನ್ನು ತಪ್ಪು ಕಲ್ಪನೆಗಳಿಂದ ಬಿಂಬಿಸಲಾಗುತ್ತಿದೆ. ಬ್ರಿಟಿಷರು ಬಂದು ದೇಶ ಆಳಿದರು. ಅವರ ಆಚರಣೆಗಳನ್ನು ಅಳವಡಿಕೊಂಡಿದ್ದೇವೆಯೇ ಹೊರತು ಮೂಢನಂಬಿಕೆಗಳನ್ನು ಕೈ ಬಿಡುವ ಪ್ರಯತ್ನ ಮಾಡಲಿಲ್ಲ ಎಂದು ನುಡಿದರು.

    ಚಿತ್ರದುರ್ಗದ ಮುರುಘಾ ಮಠದ ಅಲ್ಲಮಪ್ರಭು ಸಂಶೋಧನ ಕೇಂದ್ರ ಸಭಾಂಗಣದಲ್ಲಿ ಚಂದ್ರ ಗ್ರಹಣದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಲ್ಲಿ ಶಿವಮೂರ್ತಿ ಸ್ವಾಮೀಜಿ ಸಾನ್ನಿಧ್ಯದಲ್ಲಿ ನೂರಾರು ಮಕ್ಕಳು ಹಾಗೂ ಯುವಕರು ವಿಭೂತಿ, ರುದ್ರಾಕ್ಷಿ ಧರಿಸುವ ಮೂಲಕ ಲಿಂಗದೀಕ್ಷೆ ಪಡೆದರು. ಜೊತೆಗೆ ಹಿರಿಯೂರು ತಾಲೂಕಿನ ಹೂವಿನಹೊಳೆ ಗ್ರಾಮದ ಮರಡಿ ರಂಗಪ್ಪ ನಾಯಕ ಮತ್ತು ವಸಂತಕುಮಾರಿ ನವ ಜೋಡಿ ವಿವಾಹವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.