ನೆಲಮಂಗಲ: ಸಾಹಸ ಸಿಂಹ, ಅಭಿನವ ಭಾರ್ಗವ, ದಿವಂಗತ ಡಾ.ವಿಷ್ಣುವರ್ಧನ್ ಅವರ 71ನೇ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಆಚರಿಸಿದ್ದಾರೆ.
ನಗರದ ಹೊನ್ನಗಂಗಯ್ಯನ ಪಾಳ್ಯದಲ್ಲಿ ಕಳೆದ 7 ವರ್ಷದ ಹಿಂದೆ ಡಾ.ವಿಷ್ಣು ಸೇವಾ ಸಮಿತಿಯ ರಾಜ್ಯಾಧ್ಯಕ್ಷ ಕುಮಾರ್ ನೇತೃತ್ವದಲ್ಲಿ ಅಭಿಮಾನಿಗಳು ಕಂಚಿನ ಪುತ್ಥಳಿಯನ್ನ ಮಾಡಿಸಿ ವಿಷ್ಣು ಮಂದಿರ ನಿರ್ಮಾಣ ಮಾಡಿದ್ದರು. ಇಂದು ಡಾ.ವಿಷ್ಣುವರ್ಧನ್ ಅವರ 71ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಂದಿರವನ್ನು ವಿವಿಧ ಹೂಗಳಿಂದ ಅಲಂಕರಿಸಿ, ಕೇಕ್ ಕತ್ತರಿಸಿ, ಸಿಹಿ ಹಂಚಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮದಿಂದ ಆಚರಿಸಿದ್ದಾರೆ. ಇದನ್ನೂ ಓದಿ: ರಾಮ್ ಗೋಪಾಲ್ ವರ್ಮಾ ಸಿನಿಮಾದಲ್ಲಿ ಬುದ್ಧಿವಂತ
ಈ ವೇಳೆ ಡಾ.ವಿಷ್ಣು ಸೇವಾ ಸಮಿತಿಯ ರಾಜ್ಯಾಧ್ಯಕ್ಷ ಕುಮಾರ್, ಸದಸ್ಯರಾದ ಶಿವಕುಮಾರ್, ರವಿಕುಮಾರ್, ಉಮೇಶ್, ವಿಷ್ಣು ಸೇರಿದಂತೆ ನೆರದಿದ್ದ ಮಹಿಳಾ ಅಭಿಮಾನಿಗಳು ದಿ.ಸಾಹಸ ಸಿಂಹ ವಿಷ್ಣುವರ್ಧನ್ ಅವರಿಗೆ ಜೈಕಾರ ಕೂಗಿ ತಮ್ಮ ಪ್ರೀತಿ ಹಾಗೂ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅನುಮತಿ ಇಲ್ಲದೇ ವಿಷ್ಣು ಪ್ರತಿಮೆ ನಿರ್ಮಾಣ – ಪ್ರತಿಮೆ ತೆರವುಗೊಳಿಸಿದ ಪೊಲೀಸರು
ರಾಜ್ಯಾದ್ಯಂತ ಇಂದು ವಿಷ್ಣುವರ್ಧನ್ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಅಚರಿಸುತ್ತಿದ್ದು, ವಿಷ್ಣುವರ್ಧನ್ ನಮ್ಮನ್ನಗಲಿ ಸುಮಾರು 11 ವರ್ಷಗಳು ಕಳೆದರೂ ಅವರ ಅಭಿಮಾನಿಗಳ ಅಭಿಮಾನ ಮಾತ್ರ ದಿನೇ ದಿನೇ ಜಾಸ್ತಿಯಾಗುತ್ತಲೇ ಇದೆ.
ಬೆಂಗಳೂರು: ಸಾಹಸಸಿಂಹ ಡಾ.ವಿಷ್ಣುವರ್ಧನ್ ಮರೆಯಾಗಿ ದಶಕವೇ ಕಳೆದುಹೋಗಿದೆ. ಇಂದು 11ನೇ ಪುಣ್ಯಸ್ಮರಣೆ ಆಚರಿಸಲಾಗುತ್ತಿದೆ.
ಪ್ರತಿ ವರ್ಷದಂತೆ ದಾದಾ ಅಭಿಮಾನಿಗಳು ಭಾರವಾದ ಮನಸ್ಸಿನಲ್ಲಿ ತಮ್ಮ ಆರಾಧ್ಯ ದೈವದ ಪುಣ್ಯಸ್ಮರಣೆ ಮಾಡುತ್ತಾರೆ. ಅಭಿಮಾನ್ ಸ್ಟುಡಿಯೋದಲ್ಲಿ ಬೆಳಗ್ಗೆ 10 ಗಂಟೆಗೆ ವಿಷ್ಣು ಸಮಾಧಿಗೆ ಪೂಜೆ ನಡೆಯುತ್ತೆ.
ಕೋವಿಡ್ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರದೆಯೂ ಇರಬಹುದು. ಆದರೆ ಅಭಿಮಾನಿಗಳಿಗಾಗಿ ಕೋವಿಡ್ ನಿಯಮಾವಳಿಗಳನ್ನ ಪಾಲಿಸೋಕೆ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಅನ್ನಸಂತರ್ಪಣೆ, ರಕ್ತದಾನ ಶಿಬಿರ ಮುಂತಾದ ಕಾರ್ಯಕ್ರಮಗಳಿರುತ್ತವೆ. ಇನ್ನು ವಿಷ್ಣುವರ್ಧನ್ ಕುಟುಂಬಸ್ಥರು ಜಯನಗರದ ಸ್ವಗ್ರಹದಲ್ಲೇ ವಿಷ್ಣು ಪುಣ್ಯತಿಥಿ ಆಚರಿಸಲಿದ್ದಾರೆ. ಜೊತೆಗೆ ಮೈಸೂರಿನ ಸ್ಮಾರಕ ನಿಗದಿಸಿರುವ ಜಾಗಕ್ಕೂ ಭೇಟಿ ಕೊಡುವ ನಿರೀಕ್ಷೆ ಇದೆ.
2009ರ ಡಿಸೆಂಬರ್ 30ರಂದು ತೀವ್ರ ಹೃದಯಾಘಾತದಿಂದ ವಿಷ್ಣುದಾದ ಇಹಲೋಕ ತ್ಯಜಿಸಿದ್ರು. ಕನ್ನಡ ಚಿತ್ರರಂಗದಲ್ಲಿ ತ್ಮಮ ವಿಶಿಷ್ಟ ಅಭಿನಯದ ಮೂಲಕ ತಮ್ಮದೇ ಛಾಪು ಮೂಡಿಸಿದ್ದ ಡಾ. ವಿಷ್ಣುವರ್ಧನ್ ಅವರು 197 ಚಿತ್ರಗಳಲ್ಲಿ ನಟಿಸಿದ್ದು, 7 ರಾಜ್ಯಪ್ರಶಸ್ತಿಗಳು, 5 ಫಿಲ್ಮ್ ಫೇರ್ ಪ್ರಶಸ್ತಿಗಳು ಅವರ ಕೀರ್ತಿ ಮುಕಟವನ್ನು ಅಲಂಕರಿಸಿದ್ದವು.
ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಪುಣ್ಯತಿಥಿಯಂದು ಕನ್ನಡ ಚಿತ್ರರಂಗದ ಈ ಮೇರುನಟನನ್ನು ಗೌರವಪೂರ್ವಕವಾಗಿ ಸ್ಮರಿಸೋಣ.
ಬಹುಭಾಷಾ ತಾರೆಯಾಗಿ ಮಿಂಚಿರುವ ಅವರ ಕಲಾ ಸಿರಿವಂತಿಕೆ ಹಾಗೂ ಶ್ರೇಷ್ಠ ವ್ಯಕ್ತಿತ್ವದ ಪ್ರಭಾವ ಎಂದೆಂದಿಗೂ ಜೀವಂತ. pic.twitter.com/JIH9hlAS6z
– ಸಾಹಸ ಸಿಂಹನ ಹುಟ್ಟುಹಬ್ಬಕ್ಕೆ ವಿಷ್ಣುಸೇನಾದಿಂದ ಮಾನವೀಯ ಕಾರ್ಯ
ಧಾರವಾಡ: ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಜನ್ಮದಿನಾಚರಣೆಯನ್ನು ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ವಿಷ್ಣುಸೇನಾ ಧಾರವಾಡ ಜಿಲ್ಲಾ ಘಟಕದ ಸದಸ್ಯರು, ಇಬ್ಬರು ಕೈದಿಗಳ ದಂಡದ ಹಣ ಪಾವತಿಸಿ ಜೈಲಿನಿಂದ ಬಿಡಿಸುವ ಮಾನವೀಯ ಕಾರ್ಯ ಮಾಡಿದ್ದಾರೆ.
ಧಾರವಾಡ ಕೇಂದ್ರ ಕಾರಾಗೃಹದಲ್ಲಿ ತಮ್ಮ ಜೈಲು ಶಿಕ್ಷೆಯ ಅವಧಿ ಪೂರ್ಣಗೊಂಡಿದ್ದರೂ ಸಹ ಇಬ್ಬರು ಖೈದಿಗಳು ಜೈಲಿನಲ್ಲೆ ಇದ್ದರು. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದ ಮಹಾದೇವಪ್ಪ ಉದಗಟ್ಟಿ ಮತ್ತು ಹುಬ್ಬಳ್ಳಿಯ ವಾಸು ಕಾಟೀಗರ ಎಂಬಿಬ್ಬರು ತಮಗೆ ವಿಧಿಸಿದ್ದ ದಂಡದ ಹಣ ಹತ್ತು ಸಾವಿರ ರೂಪಾಯಿ ತುಂಬಲಾಗದೇ ಜೈಲು ಶಿಕ್ಷೆಯಲ್ಲಿಯೇ ಮುಂದುವರೆದಿದ್ದರು.
ಆದರೆ ವಿಷ್ಣುವರ್ಧನ್ರ ಜನ್ಮದಿನದ ಪ್ರಯುಕ್ತ ಇವರಿಬ್ಬರ ದಂಡದ ಹಣ ತಲಾ ಹತ್ತು ಸಾವಿರ ರೂಪಾಯಿ ಪಾವತಿ ಮಾಡಿದ ವಿಷ್ಣು ಸೇನಾ ಜಿಲ್ಲಾ ಘಟಕದ ಸದಸ್ಯರು, ಇಬ್ಬರನ್ನು ಧಾರವಾಡ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಳಿಸಿದರು. ವಿಷ್ಣು ಸೇನಾ ಧಾರವಾಡ ಘಟಕದ ಜಿಲ್ಲಾಧ್ಯಕ್ಷ ಮೃತ್ಯುಂಜಯ ಹಿರೇಮಠ ನೇತೃತ್ವದಲ್ಲಿ ಇಬ್ಬರನ್ನೂ ಬಿಡುಗಡೆ ಮಾಡಿಸುವ ಮೂಲಕ ವಿಷ್ಣುವರ್ಧನ್ ಅವರ ಜನ್ಮದಿನ ಆಚರಿಸಲಾಯಿತು. ಜೈಲಿನಿಂದ ಬಿಡುಗಡೆಗೊಂಡ ಇಬ್ಬರು ಕೈದಿಗಳು ವಿಷ್ಣು ಸೇನೆಗೆ ಕೃತಜ್ಞತೆ ಸಲ್ಲಿಸಿದರು.
ಮೈಸೂರು: ಇಂದು ದಿವಂಗತ ಡಾ.ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆನ್ಲೈನ್ ಮೂಲಕ ಚಾಲನೆ ನೀಡಿದ್ದಾರೆ.
ಸಿಎಂ ಯಡಿಯೂರಪ್ಪ ಅವರು ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣು ಸ್ಮಾರಕಕ್ಕೆ ಗೃಹ ಕಚೇರಿ ಕೃಷ್ಣಾದಿಂದ ಸಚಿವರೊಟ್ಟಿಗೆ ಆನ್ಲೈನ್ ಮೂಲಕ ಭೂಮಿ ಪೂಜೆಗೆ ಚಾಲನೆ ಕೊಟ್ಟಿದ್ದಾರೆ. ಮೈಸೂರಿನ ಹಾಲಾಳು ಗ್ರಾಮದಲ್ಲಿ ಶಂಕು ಸ್ಥಾಪನೆಯ ಸಮಾರಂಭ ನಡೆದಿದ್ದು, ಹಿರಿಯ ನಟಿ ಭಾರತಿ ಅವರು ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಸಿಎಂ ಯಡಿಯೂರಪ್ಪ, ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಈಗಾಗಲೇ ತಡವಾಗಿದೆ. ಆದ್ದರಿಂದ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಡಾ.ವಿಷ್ಣುವರ್ಧನ್ ತವರು ಜಿಲ್ಲೆ ಮೈಸೂರಿನಲ್ಲಿ ಅವರ ಸ್ಮಾರಕ ನಿರ್ಮಾಣವಾಗುತ್ತಿರುವುದು ಅತ್ಯಂತ ಔಚಿತ್ಯಪೂರ್ಣವಾಗಿದೆ ಎಂದರು.
ಮೈಸೂರು ತಾಲೂಕಿನ ಹೆಚ್.ಡಿ.ಕೋಟೆ ರಸ್ತೆಯ ಮಾರ್ಗದಲ್ಲಿ ಬರುವ ಹಾಲಾಳು ಗ್ರಾಮದ 5 ಎಕರೆ ಪ್ರದೇಶದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ. ಪೊಲೀಸ್ ವಸತಿಗೃಹ ನಿರ್ಮಾಣ ಸಂಸ್ಥೆಯ ವತಿಯಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಸ್ಮಾರಕ ನಿರ್ಮಾಣಕ್ಕೆ ಈಗಾಗಲೇ 11 ಕೋಟಿ ರೂ. ಅನುದಾನ ಮಂಜೂರಾಗಿದೆ. ಕಾಮಗಾರಿ ಪ್ರಾರಂಭಿಸಲು ಸುಮಾರು 5 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಡಾ. ವಿಷ್ಣುವರ್ಧನ್ ಸ್ಮಾರಕವು ಸುಸಜ್ಜಿತವಾಗಿ ನಿರ್ಮಾಣಗೊಳ್ಳಲು ಎಲ್ಲ ರೀತಿಯ ಕ್ರಮಕೈಗೊಳ್ಳಲು ನಾವು ಬದ್ಧರಾಗಿದ್ದೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಮುಖ್ಯಮಂತ್ರಿ @BSYBJP ರವರು ಇಂದು ದಿವಂಗತ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ಭವನ ನಿರ್ಮಾಣಕ್ಕೆ ನಡೆದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಆನ್ ಲೈನ್ ಮೂಲಕ ಭಾಗವಹಿಸಿದರು. (1/2) pic.twitter.com/tUY4yOpg4x
ಡಾ.ವಿಷ್ಣುವರ್ಧನ್ ಸ್ಮಾರಕ ಭವನ 11 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಸ್ಮಾರಕ ನಿರ್ಮಾಣದ ಗುತ್ತಿಗೆಯನ್ನು ಪೊಲೀಸ್ ವಸತಿ ನಿಗಮಕ್ಕೆ ನೀಡಲಾಗುತ್ತಿದೆ. ಎಂ-9 ಡಿಸೈನ್ ಸ್ಟುಡಿಯೋದಿಂದ ಆರ್ಕಿಟೆಕ್ ಡಿಸೈನ್ ಮಾಡಿಸಲಾಗಿದೆ. ಸ್ಮಾರಕದಲ್ಲಿ ವಿಷ್ಣು ಪುತ್ಥಳಿ, ಆಡಿಟೋರಿಯಂ, ಫೋಟೋ ಗ್ಯಾಲರಿ, ಉದ್ಯಾನವನ, ವಾಟರ್ ಪೌಂಡ್ ಇರುತ್ತದೆ.
ಬೆಂಗಳೂರು: ಪದ ಬಳಕೆ ಮಾಡುವಾಗ ಪದಗಳ ಗಾಂಭೀರ್ಯತೆಯನ್ನು ಅರ್ಥ ಮಾಡಿಕೊಳ್ಳಬೇಕು. ಕಲಾವಿದರು ಮಾಡಿದ ಕೆಲಸಕ್ಕೆ ಸರ್ಕಾರ ಗೌರವ ಕೊಟ್ಟಿದ್ದೇವೆ ಎಂದು ಸಿಎಂ ಕುಮಾರಸ್ವಾಮಿ ದಿವಂಗತ ವಿಷ್ಣುವರ್ಧನ್ ಅಳಿಯ ನಟ ಅನಿರುದ್ಧ್ ವಿರುದ್ಧ ಕಿಡಿಕಾರಿದ್ದರು. ಈಗ ಸಿಎಂ ಮಾತಿಗೆ ಅನಿರುದ್ಧ್ ಸ್ಪಷ್ಟನೆ ಕೊಟ್ಟಿದ್ದಾರೆ.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ನಟ ಅನಿರುದ್ಧ, ನನಗೆ ವೈಯಕ್ತಿಕವಾಗಿ ಸಿಎಂ ಕುಮಾರಸ್ವಾಮಿ ಮೇಲೆ ತುಂಬಾ ಆತ್ಮೀಯತೆ ಇದೆ. ಅವರ ಮೇಲೆ, ಅವರ ಕುಟುಂಬದ ಮೇಲೆ ಸಾಕಷ್ಟು ಗೌರವವಿದೆ. ಅಂದು ಅಪ್ಪಾಜಿ ಮೃತಪಟ್ಟಿದ್ದಾಗ ಬಂದು ಎಲ್ಲಿ ಮಾಡಬೇಕು ಎಂದುಕೊಂಡಿದ್ದೀರ ಅಂತ ಕೇಳಿದ್ದರು. ಅದಕ್ಕೆ ನಾನು ನೇರವಾಗಿ ಬನಶಂಕರಿನಲ್ಲೇ ಅಂತ್ಯಸಂಸ್ಕಾರ ಮಾಡಬೇಕು ಎಂದು ಕೊಂಡಿದ್ದೇನೆ ಅಂತ ಹೇಳಿದ್ದೆ. ವಿಷ್ಣುವರ್ಧನ್ ದೊಡ್ಡ ಕಲಾವಿದರು, ಅವರಿಗಾಗಿ ವಿಶೇಷ ಜಾಗ ಆಗಬೇಕು ಅಂತ ಅಪ್ಪಾಜಿ ಅವರು ಅಂದರೆ ದೇವೇಗೌಡರು ಹೇಳಿದ್ದಾರೆ ಅಂತ ತಿಳಿಸಿದ್ದರೆಂದು ಅನಿರುದ್ಧ್ ಹೇಳಿದರು.
ಅದರಂತಯೇ ಸ್ಮಾರಕಕ್ಕೆ 2004ರಲ್ಲಿ ಕೇಸ್ ಹಾಕಿರುವ ಜಾಗವನ್ನು ಕೊಟ್ಟಿದ್ದರು. ಆದರೆ ಇಂದಿಗೂ ಸ್ಮಾರಕ ಆಗಿಲ್ಲ. ಒಂಬತ್ತು ವರ್ಷದ ತಾಳ್ಮೆ, ಶ್ರಮ ಇದೆ. ನಾಲ್ಕು ಗಂಟೆಗಳು ನಾನು ಅಮ್ಮ ಕಾದು ಕುಳಿತ್ತಿದ್ದವು. ಆದರೆ ಬ್ಯುಸಿ ಎಂದು ಪ್ರತಿಕ್ರಿಯಿಸಿಲಿಲ್ಲ. ಮಾರನೇ ದಿನ, ಒಂದುವಾರ, 10 ದಿನಗಳ ಬಳಿಕ ಕರೆಸಿ ಮಾತನಾಡಿದ್ದರು. ಆದರೂ ಇದುವರೆಗೂ ಮಾತನಾಡಿಲ್ಲ ಎಂದು ಬೇಸರಿಂದ ಅನಿರುದ್ಧ ಹೇಳಿದ್ದಾರೆ.
ನಾವು 5 ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದೇವೆ. ತುಂಬಾ ಕಚೇರಿ, ಅಧಿಕಾರಿಗಳ ಮನೆಗೆ ಅಲೆದಾಡಿದ್ದೇವೆ. ಏನು ಪ್ರಯೋಜವಾಗಿಲ್ಲ. ಅವರೇ ಸ್ಮಾರಕ ಮಾಡಬೇಕು ಎಂದು ಹೇಳಿ 11 ಕೋಟಿ ರೂ. ಹಣವನ್ನು ನೀಡಿದ್ದರು. ಇದುವರೆಗೂ ಸ್ಮಾರಕ ಆಗಿಲ್ಲ. ಸರ್ಕಾರ ಕೊಟ್ಟಿರುವ ಮಾತನ್ನ ನಡೆಸಿಕೊಡಲಿ ಇದನ್ನು ನಾನು ಕೈ ಮುಗಿದು, ಕಳಕಳಿಯಿಂದ ಕೇಳಿಕೊಳ್ಳುತ್ತಿದ್ದೇನೆ ಎಂದು ಮನವಿ ಮಾಡಿಕೊಂಡರು.
ಅಭಿಮಾನಿಗಳು ಪ್ರತಿದಿನ ಕರೆ ಮಾಡಿ ಸರ್ ಪ್ರತಿಭಟನೆ ಮಾಡೋಣ, ಸ್ಮಾರಕ ಇನ್ನು ಮಾಡಿಲ್ಲ ಅಂತ ಹೇಳುತ್ತಾರೆ. ನಾನು ಬೇಡ ಅಪ್ಪಾಜಿ ಅವರು ಶಾಂತಿಯಿಂದ ಇರಬೇಕೆಂದು ಇಷ್ಟ ಪಡುತ್ತಾರೆ. ಆದ್ದರಿಂದ ನಾವು ಗಲಾಟೆ ಮಾಡುವುದು ಬೇಡ ಎಂದು ಸಮಾಧಾನ ಮಾಡುತ್ತಿದ್ದೇನೆ. ಮನಷ್ಯನಿಗೆ ತಾಳ್ಮೆ ಅಂತ ಇರುತ್ತೆ. ತಾಳ್ಮೆ ಕಳೆದುಕೊಂಡಾಗ ಈ ರೀತಿಯಾಗಿ ಮಾತನಾಡುತ್ತಾನೆ. ನಾನು ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡಿಲ್ಲ. ಸರ್ಕಾರದ ಬಗ್ಗೆ ಮಾತನಾಡಿದ್ದೇವೆ. ಕ್ಷಮಿಸಿ ಅದನ್ನು ಅವರು ತಪ್ಪಾಗಿ ತಿಳಿದುಕೊಂಡಿದ್ದಾರೆ ಅಂತ ಅನಿರುದ್ಧ್ ಖಡಕ್ ಉತ್ತರ ಕೊಟ್ಟಿದ್ದಾರೆ.
ನಾನು ಮಾನ, ಮರ್ಯಾದೇ, ಗೌರವ ಈ ಮಾತನ್ನು ಸರ್ಕಾರದ ಬಗ್ಗೆ ಹೇಳಿದ್ದೇನೆ. ಕುಮಾರಸ್ವಾಮಿ ಬಗ್ಗೆ ಹೇಳಿಲ್ಲ. ಸ್ಮಾರಕದ ಮುಂದಾಳತ್ವವನ್ನು ಸಿಎಂ ವಹಿಸಿಕೊಳ್ಳಬೇಕು. ನಾವು ಅದರ ಬಗ್ಗೆ ಗಮನ ಕೊಡುತ್ತಿದ್ದೇವೆ ಎಂದು ಸುಮ್ಮನೆ ಕುಳಿತಿಕೊಂಡರೆ ಕೆಲಸ ಆಗದು. ರೈತರನ್ನು, ನಮ್ಮನ್ನು ಕರೆಸಿ ಮಾತನಾಡಬೇಕು. ನಾವು ಹೋದಾಗ ಸರ್ಕಾರ, ಸರ್ಕಾರಿ ಅಧಿಕಾರಿಗಳು ತುಂಬಾ ಗೌರವ, ಭರವಸೆ ಕೊಡುತ್ತಾರೆ. ಆದರೆ ಸ್ಮಾರಕದ ಕೆಲಸ ಏನು ನಡೆಯುತ್ತಿಲ್ಲ ಎಂದು ಗರಂ ಆಗಿ ಮಾತನಾಡಿದ್ದಾರೆ.
ಬ್ರಹ್ಮ, ವಿಷ್ಣು, ಮಹೇಶ್ವರ ಮೂವರು ಒಂದೇ ಕಡೆ ಇರುವುದಿಲ್ಲ. ಸರ್ಕಾರ ಸ್ಮಾರಕ ಮಾಡಿದರು ನಾನು ಖಂಡಿತ ಒಪ್ಪಲ್ಲ. ಸುಮಾರು 5 ಜಾಗವನ್ನು ತೋರಿಸಿದರು. ನಾವು ಏನು ಮಾತನಾಡದೇ ಒಪ್ಪಿಕೊಂಡಿದ್ದೇವು. ಆದರೆ ಸ್ಮಾರಕ ನಿರ್ಮಾಣದ ಕೆಲಸ ಪ್ರಾರಂಭಿಸುವ ಮೊದಲೇ ಏನೋ ಸಮಸ್ಯೆಯಾಗಿ ಕ್ಯಾನ್ಸಲ್ ಆಗುತ್ತಿತ್ತು. ಈಗ ಮೈಸೂರಿನಲ್ಲಿ ತೋರಿಸಿರುವ ಜಾಗದಲ್ಲಿ ಸ್ಮಾರಕ ನಿರ್ಮಾಣ ಮಾಡುತ್ತಿದ್ದೇವೆ. ಆದರೆ ಅಲ್ಲಿಗೂ ರೈತರು ಬಂದು ಕೇಸ್ ಹಾಕಿದ್ದಾರೆ. ಆದ್ದರಿಂದ ಕೆಲಸ ನಿಂತು ಹೋಗಿದೆ. ಹೀಗಾಗಿ ಈ ಬಗ್ಗೆ ವಿಚಾರಣೆ ಮಾಡಿ ಬೇಗ ಕೆಲಸ ಮುಂದುವರಿಸುವಂತೆ ಮಾಡಿಕೊಡಿ ಎಂದು ಕಳಕಳಿಯಿಂದ ಅನಿರುದ್ಧ್ ಕೇಳಿಕೊಂಡರು.
ಒಂಬತ್ತು ವರ್ಷಗಳಾದರೂ ಸ್ಮಾರಕ ನಿರ್ಮಾಣವಾಗಿಲ್ಲ. ಅಮ್ಮ ಎಷ್ಟು ದಿನ ಕಣ್ಣೀರು ಹಾಕಿದ್ದಾರೆ ಅಂತ ನನಗೆ ಗೊತ್ತು. ಸರ್ಕಾರ ಒಂದು ಕೆಲಸವನ್ನು ಮಾಡಿಕೊಡುತ್ತೇನೆ ಎಂದು ಗಡುವು ಕೊಟ್ಟಿರುತ್ತದೆ. ಆ ಗಡುವಿನಲ್ಲೇ ಕೆಲಸ ಮಾಡಿಕೊಡಬೇಕು. ವಿಷ್ಣು ಅಭಿಮಾನಿಗಳು ಸಿಂಹಗಳಿದಂತೆ ಅವರನ್ನು ಬಡಿದು ಎಬ್ಬಿಸಬೇಡಿ. ಆದ್ದರಿಂದ ಮುಂದಿನ ತಿಂಗಳ ಡಿಸೆಂಬರ್ 30ರವಗೆ ವಿಷ್ಣು ಸ್ಮಾರಕದ ಕೆಲಸ ಶುರುವಾಗಬೇಕು ಎಂದು ನಾನು ಪ್ರೀತಿಯಿಂದ ಗಡುವು ಕೊಡುತ್ತಿದ್ದೇನೆ ಎಂದು ಅನಿರುದ್ಧ್ ಹೇಳಿದರು.
ಬೆಂಗಳೂರು: ನಟ ಡಾ. ವಿಷ್ಣುವರ್ಧನ್ ಅವರ ಮಗಳು ನಟಿ ಮೇಘನಾ ರಾಜ್ ಅವರಿಗೆ ತಂದೆ ಹಾಕಿಕೊಳ್ಳುತ್ತಿದ್ದ ಅಪರೂಪದ ವಸ್ತುವನ್ನು ಉಡುಗೊರೆಯಾಗಿ ನೀಡಿದ್ದಾರೆ.
ಇಂದು ಡಾ. ವಿಷ್ಣುವರ್ಧನ್ ಇಲ್ಲದಿದ್ದರೂ ಅವರ ಅಭಿಮಾನಿಗಳ ಮನದಲ್ಲಿ ಸದಾ ಉಳಿದುಕೊಂಡಿದ್ದಾರೆ. ಡಾ. ವಿಷ್ಣುವರ್ಧನ್ ಅವರು ಬಳಸುತ್ತಿದ್ದ ವಾಚ್ ನ್ನ ಮಗಳು ಕೀರ್ತಿ ಅವರಿಂದ ನಟಿ ಮೇಘನಾ ಉಡುಗೊರೆಯಾಗಿ ಪಡೆದುಕೊಂಡಿದ್ದಾರೆ.
ಈ ಬಗ್ಗೆ ನಟಿ ಮೇಘನಾ ತಮ್ಮ ಟ್ಟಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ. “ವಿಷ್ಣುವರ್ಧನ್ ಅವರ ಮಗಳು ಕೀರ್ತಿ ಅವರಿಂದ ನನಗೆ ವಿಷ್ಣುವರ್ಧನ್ ಬಳಸುತ್ತಿದ್ದ ವಾಚ್ ಉಡುಗೊರೆಯಾಗಿ ಸಿಕ್ಕಿದೆ. ಇದೊಂದು ಅದ್ಭುತ ಉಡುಗೊರೆಯಾಗಿದೆ. ಧನ್ಯವಾದಗಳು ಕೀರ್ತಿ ಅಕ್ಕ” ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಕೀರ್ತಿ ಅವರು ನೀಡಿರುವ ವಾಚ್ ಹಾಕಿಕೊಂಡು ಮೆಘನಾ ಸೆಲ್ಫಿ ಕ್ಲಿಕ್ಕಿಸಿಕೊಂಡು ಆ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.
ಡಾ. ವಿಷ್ಣುವರ್ಧನ್ ಅವರ ಕುಟುಂಬಕ್ಕೆ ಮೇಘನಾ ರಾಜ್ ಕುಟುಂಬ ಬಹಳ ಹತ್ತಿರವಾಗಿದೆ. ಮೇಘನಾ ರಾಜ್ ಅವರ ತಂದೆ ಸುಂದರ್ ರಾಜ್ ಮತ್ತು ವಿಷ್ಣುವರ್ಧನ್ ಅವರು ಆತ್ಮೀಯ ಸ್ನೇಹಿತರಾಗಿದ್ದು, ಸಿನಿಮಾಗಳಲ್ಲಿ ಒಟ್ಟಾಗಿ ಅಭಿನಯಿಸಿದ್ದಾರೆ.
ಮೇಘನಾ ರಾಜ್ ಚಿಕ್ಕವಯಸ್ಸಿನಲ್ಲಿ ವಿಷ್ಣುವರ್ಧನ್ ಅವರನ್ನು ಭೇಟಿ ಮಾಡಿ, ಅವರ ಜೊತೆ ಮಾತನಾಡಿ ಸಮಯ ಕಳೆದಿದ್ದಾರೆ. ಇಂದಿಗೂ ವಿಷ್ಣುವರ್ಧನ್ ಅಂದರೆ ಮೇಘನಾ ರಾಜ್ ಅಭಿಮಾನವಿದೆ. ಸದ್ಯಕ್ಕೆ ಮೇಘನಾ ರಾಜ್ ಅಭಿನಯದ ‘ಇರುವುದೆಲ್ಲವ ಬಿಟ್ಟು’ ಸಿನಿಮಾ ಇದೇ ತಿಂಗಳಲ್ಲಿ ಬಿಡುಗೆಡೆಗೆ ಸಿದ್ಧವಾಗಿದೆ.
ಬೆಂಗಳೂರು: ನಗರದ ಹೊರವಲಯ ನೆಲಮಂಗಲ ಪಟ್ಟಣದ ಹೊನ್ನಗಂಗಯ್ಯನ ಪಾಳ್ಯದಲ್ಲಿರುವ ಡಾ.ವಿಷ್ಣುವರ್ಧನ್ ಕಂಚಿನ ಪುತ್ಥಳಿಯಲ್ಲಿ ನಾಗರಹಾವೊಂದು ಪ್ರತ್ಯಕ್ಷ್ಯ ವಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು.
ವಿಷ್ಣು ಅಭಿಮಾನಿಗಳು ಕಂಚಿನ ಪುತ್ಥಳಿ ಇರುವ ಮಂದಿರದಲ್ಲಿ ಇಂದು ಬೆಳಗ್ಗೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದರು. ಈ ಸಂಧರ್ಭದಲ್ಲಿ ಐದೂವರೆ ಅಡಿ ಉದ್ದದ 8 ರಿಂದ 9 ವರ್ಷದ ದೈತ್ಯ ನಾಗರಹಾವು ಪ್ರತ್ಯಕ್ಷ್ಯವಾಗಿದೆ. ಈ ವೇಳೆ ಆತಂಕಗೊಂಡ ಸ್ಥಳೀಯರು ಉರಗ ರಕ್ಷಕರಿಗೆ ದೂರವಾಣಿ ಕೆರೆ ಮಾಡಿದ್ದು, ಸ್ಥಳಕ್ಕೆ ಬಂದ ಸ್ನೇಕ್ ಲೋಕೇಶ್ ಅವರು ಹಾವನ್ನ ರಕ್ಷಣೆ ಮಾಡಿದ್ದರೆ.
ನೆಲಮಂಗಲ ಪಟ್ಟಣದ ಹೊನ್ನಗಂಗಯ್ಯನ ಪಾಳ್ಯದಲ್ಲಿ ಅಭಿಮಾನಿಗಳು ಡಾ.ವಿಷ್ಣುವರ್ಧನ್ ಸೇವಾ ಸಮಿತಿ ಎಂಬ ಸಂಘವನ್ನ ನಿರ್ಮಾಣ ಮಾಡಿಕೊಂಡು ಕಂಚಿನ ಪುತ್ಥಳಿಯ ಮಂದಿರವನ್ನ ಕಳೆದ ಐದು ವರ್ಷದ ಹಿಂದೆಯೇ ನಿರ್ಮಿಸಿದ್ದರು. ಸೋಮವಾರ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ 68ನೇ ಹುಟ್ಟು ಹಬ್ಬವಿದ್ದು, ಈ ನಾಗರಹಾವು ಪ್ರತ್ಯಕ್ಷ್ಯದಿಂದ ಸ್ಥಳೀಯರಲ್ಲಿ ಹಾಗೂ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.
ಇದೇ ರೀತಿ ಈ ಪುತ್ಥಳಿಯ ಬಳಿ ನಾಲ್ಕೈದು ಬಾರಿ ನಾಗರಹಾವುಗಳು ಕಾಣಿಸಿಕೊಂಡಿವೆ. ಪೊದೆ ಹಾಗೂ ಹುತ್ತಗಳು ಇರುವ ಕಾರಣದಿಂದ ಉರಗಗಳು ಸರ್ವೇ ಸಾಮನ್ಯವಾಗಿ ಕಾಣಿಸುತ್ತವೆ ಎಂದು ಉರಗ ರಕ್ಷಕ ಸ್ನೇಕ್ ಲೋಕೇಶ್ ತಿಳಿಸಿದ್ದಾರೆ.