Tag: Drainage System

  • ಸೈಕಲ್‌ನಲ್ಲಿ ವಿಜಯನಗರ ಜಿಲ್ಲಾಧಿಕಾರಿಯಿಂದ ನಗರ ವೀಕ್ಷಣೆ

    ಸೈಕಲ್‌ನಲ್ಲಿ ವಿಜಯನಗರ ಜಿಲ್ಲಾಧಿಕಾರಿಯಿಂದ ನಗರ ವೀಕ್ಷಣೆ

    ಬಳ್ಳಾರಿ: ವಿಜಯನಗರ ಜಿಲ್ಲಾಧಿಕಾರಿ (Vijayanagara District Collector) ಎಂ ಎಸ್ ದಿವಾಕರ್ (MS Divakar) ಅವರು ಇಂದು ಹೊಸಪೇಟೆ ನಗರ ಪರಿಶೀಲನೆ ನಡೆಸಿದ್ದಾರೆ.

    ಹೊಸಪೇಟೆ (Hosapete) ಬಸ್ ನಿಲ್ದಾಣ ತರಕಾರಿ ಮಾರುಕಟ್ಟೆ ಸೇರಿದಂತೆ ನಗರದ ನಾನಾ ಪ್ರದೇಶಗಳಿಗೆ ಭೇಟಿ ನೀಡಿ ನಗರದ ಸ್ವಚ್ಛತಾ ಕಾರ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ. ನಗರದಲ್ಲಿ ನಡೆಯುತ್ತಿರುವ ಸ್ವಚ್ಛತಾ ಕಾರ್ಯಗಳ ಕುರಿತು ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಖುದ್ದು ಸೈಕಲ್ ಏರಿ ನಗರ ವೀಕ್ಷಣೆ ನಡೆಸಿದ್ದಾರೆ.

    ಈ ವೇಳೆಯಲ್ಲಿ ಪೌರ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದ್ದು, ಕೂಡಲೇ ಅವರ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ಕಸ ನಿರ್ವಹಣೆ, ಚರಂಡಿಗಳ ಸ್ಥಿತಿಗತಿ ಹಾಗೂ ಬೀದಿನಾಯಿಗಳ ಹಾವಳಿ ಕುರಿತು ಮಾಹಿತಿ ಪಡೆಯುವುದು ಅವರ ನಗರ ಪ್ರದಕ್ಷಿಣೆಯ ಮುಖ್ಯ ಉದ್ದೇಶವಾಗಿತ್ತು. ಇದನ್ನೂ ಓದಿ: ಬೆಂಗಳೂರಿನ ಟೆಕ್ಕಿಯ ಶವ 4 ಸಾವಿರ ಅಡಿ ಆಳದ ಪ್ರಪಾತದಲ್ಲಿ ಪತ್ತೆ- ಕೆಲಸ ಹೋಗಿದ್ದಕ್ಕೆ ರಾಣಿ ಝರಿಗೆ ಹಾರಿ ಆತ್ಮಹತ್ಯೆ?

    ಕೆಲವೆಡೆ ಸಾರ್ವಜನಿಕರು ಬೀದಿನಾಯಿ ಕಾಟದ ಬಗ್ಗೆ ತಮ್ಮ ಅಳಲು ತೋಡಿಕೊಂಡರು. ಕಸ ನಿರ್ವಹಣೆ, ಚರಂಡಿಗಳ ನಿರ್ವಹಣೆ ಬಗ್ಗೆ ಜಿಲ್ಲಾಧಿಕಾರಿ ಅವರು ಕೆಲವೆಡೆ ಸೂಕ್ತ ಸಲಹೆ ನೀಡಿದ್ದಾರೆ.

     

  • ಬೆಂಗಳೂರು ಚರಂಡಿ ಅವ್ಯವಸ್ಥೆಗೆ ಕಾರಣರಾದ ಅಧಿಕಾರಿಗಳು ಏನು ಮಾಡುತ್ತಿದ್ದಾರೆ: ಎನ್‍ಜಿಟಿ ಪ್ರಶ್ನೆ

    ಬೆಂಗಳೂರು ಚರಂಡಿ ಅವ್ಯವಸ್ಥೆಗೆ ಕಾರಣರಾದ ಅಧಿಕಾರಿಗಳು ಏನು ಮಾಡುತ್ತಿದ್ದಾರೆ: ಎನ್‍ಜಿಟಿ ಪ್ರಶ್ನೆ

    ಬೆಂಗಳೂರು: ನಗರದ ಚರಂಡಿ ಅವ್ಯವಸ್ಥೆ ಬಗ್ಗೆ ದೆಹಲಿಯ ರಾಷ್ಟೀಯ ಹಸಿರು ನ್ಯಾಯಾಧಿಕರಣ ಕಳವಳ ವ್ಯಕ್ತಪಡಿಸಿದ್ದು, ಬೆಂಗಳೂರಿನ ಚರಂಡಿ ಅವ್ಯವಸ್ಥೆಗೆ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದೆ.

    ಬೆಳ್ಳಂದೂರು ಕೆರೆ ಮಾಲಿನ್ಯ ಅರ್ಜಿ ವಿಚಾರಣೆ ವೇಳೆ ಇತ್ತೀಚೆಗೆ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಒಟ್ಟು 16 ಮಂದಿ ಸಾವನ್ನಪ್ಪಿದ್ದರು, ಇದಕ್ಕೆ ಅಸಮರ್ಪಕ ಚರಂಡಿ ವ್ಯವಸ್ಥೆ ಕಾರಣ ಅಂತಾ ಆರೋಪಿಸಿ ಅರ್ಜಿದಾರ ಕುಪೇಂದ್ರ ರೆಡ್ಡಿ ಪರ ವಕೀಲ ಫೋಟೊ ಸಹಿತ ದಾಖಲೆಗಳನ್ನು ನ್ಯಾಯಾಧಿಕರಣ ಸಲ್ಲಿಸಿದ್ದರು.

    ನ್ಯಾ. ಸ್ವತಂತ್ರಕುಮಾರ್ ನೇತೃತ್ವದ ತ್ರಿಸದಸ್ಯ ಪೀಠ ಮಳೆಯಿಂದ 16 ಮಂದಿ ಸಾವನ್ನಪ್ಪಿರುವ ಬಗ್ಗೆ ಆತಂಕ ವ್ಯಕ್ತಪಡಿಸಿತು. ಮಳೆಗೆ ಜನರು ಚರಂಡಿಯಲ್ಲಿ ಕೊಚ್ಚಿ ಹೋಗಿ ಸಾಯುತ್ತಾರೆ ಅಂದರೆ ಬೆಂಗಳೂರಿನ ಚರಂಡಿ ವ್ಯವಸ್ಥೆಗೆ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿತು.

    ಇದೇ ಸಂದರ್ಭದಲ್ಲಿ ನಗರದ ಬೆಳಂದೂರು ಕೆರೆ ವ್ಯಾಪ್ತಿಯ ಅಪಾರ್ಟ್ ಮೆಂಟ್ ನಿವಾಸಿಗಳ ಒಕ್ಕೂಟ ಘನ ತಾಜ್ಯ ಘಟಕ ಅವಳವಡಿಕೆ ಸಮಯ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಎನ್‍ಜಿಟಿ ಮುಂದೂಡಿತು.