Tag: drama juniors

  • 625ಕ್ಕೆ 619 ಅಂಕಗಳನ್ನು ಗಳಿಸಿದ `ಗಟ್ಟಿಮೇಳ’ ಖ್ಯಾತಿಯ ಮಹತಿ ಭಟ್

    625ಕ್ಕೆ 619 ಅಂಕಗಳನ್ನು ಗಳಿಸಿದ `ಗಟ್ಟಿಮೇಳ’ ಖ್ಯಾತಿಯ ಮಹತಿ ಭಟ್

    `ಡ್ರಾಮಾ ಜ್ಯೂನಿಯರ್ಸ್’ ಮತ್ತು ಗಟ್ಟಿಮೇಳ ಸೀರಿಯಲ್ ಮೂಲಕ ಗುರುತಿಸಿಕೊಂಡಿರುವ ಮಹತಿ ವೈಷ್ಣವಿ ಭಟ್ ಎಸ್‌ಎಸ್‌ಎಲ್‌ಸಿನಲ್ಲಿ ಶೇ.99 ಅಂಕ ಪಡೆದು ಪಾಸ್ ಆಗಿದ್ದಾರೆ. ಈ ಕುರಿತಯ ಮಹತಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

    ಖಾಸಗಿ ವಾಹಿನಿಯಲ್ಲಿ ಮೂಡಿ ಬರುತ್ತಿರುವ `ಗಟ್ಟಿಮೇಳ’ ಸೀರಿಯಲ್ ಜತೆ ಶಿಕ್ಷಣವನ್ನ ಕೂಡ ನಿಭಾಯಿಸುತ್ತಾ ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ ಬರೋಬ್ಬರಿ 619 ಮಾರ್ಕ್ಸ್ಗಳನ್ನು ನಟಿ ಮಹತಿ ಗಳಿಸಿದ್ದಾರೆ. ಈ ಮೂಲಕ ಅವರ ಫಲಿತಾಂಶ ಶೇ.99.04 ಆಗಿದೆ. ಇದು ಅವರಿಗೆ ಅವರ ಕುಟುಂಬಕ್ಕೆ ಖುಷಿ ನೀಡಿದೆ.

    ಗಟ್ಟಿಮೇಳ ನಟಿ ಮಹತಿ ಯಾವ ವಿಷಯಕ್ಕೆ ಎಷ್ಟು ಅಂಕ ಬಂದಿದೆ ಎಂಬ ವಿವರ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಕನ್ನಡದಲ್ಲಿ 124, ಇಂಗ್ಲೀಷ್‌ನಲ್ಲಿ 100, ಹಿಂದಿ 99, ಗಣಿತ 100, ವಿಜ್ಞಾನ 97, ಸಮಾಜ ವಿಜ್ಞಾನದಲ್ಲಿ 99 ಅಂಕ ಗಳಿಸಿದ್ದಾರೆ. ರಾಜ್ಯಾದ್ಯಂತ 7ನೇ ಸ್ಥಾನ ಪಡೆದಿದ್ದಾರೆ. ಧಾರಾವಾಹಿ ಶೂಟಿಂಗ್ ಮಧ್ಯೆ ಉತ್ತಮ ಅಂಕ ಪಡೆದಿರೋದಕ್ಕೆ ಮಹತಿ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಜ್ಯೂ.ಎನ್‌ಟಿಆರ್ ಫ್ಯಾನ್ಸ್‌ಗೆ ಗುಡ್ ನ್ಯೂಸ್: ಹೊಸ ಚಿತ್ರ ಘೋಷಣೆ ಮಾಡಿದ ಪ್ರಶಾಂತ್‌ನೀಲ್-ತಾರಕ್

    ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಮಹತಿ, ನೀವು ಇಲ್ಲದೇ ಇದು ಅಸಾಧ್ಯ ಎಂದು ತಮ್ಮ ಕುಟುಂಬ ಮತ್ತು ಶಿಕ್ಷಕರಿಗೆ ಹಾಗೆಯೇ `ಗಟ್ಟಿಮೇಳ’ ತಂಡಕ್ಕೂ ಮಹತಿ ಅಭಿನಂದನೆ ತಿಳಿಸಿದ್ದಾರೆ. ಅಭಿಮಾನಿಗಳ ಹಾರೈಕೆಗೂ ಧನ್ಯವಾದ ತಿಳಿಸಿದ್ದಾರೆ. ಸದ್ಯ ಈ ಪೋಸ್ಟ್ ಸಖತ್ ವೈರಲ್ ಆಗಿದೆ.

  • ಮತ್ತೆ ಶುರು ಡ್ರಾಮಾ ಜ್ಯೂನಿಯರ್ಸ್ ಸೀಸನ್ 3 ಹವಾ!

    ಮತ್ತೆ ಶುರು ಡ್ರಾಮಾ ಜ್ಯೂನಿಯರ್ಸ್ ಸೀಸನ್ 3 ಹವಾ!

    ಬೆಂಗಳೂರು: ರಿಯಾಲಿಟಿ ಶೋಗಳಲ್ಲಿ ನಿರೀಕ್ಷೆಗೂ ಮೀರಿ ತನ್ನದೇ ಸಂಚಲನ ಮೂಡಿಸಿದ ವಾಹಿನಿ ಜೀ ಕನ್ನಡ ಪ್ರೇಕ್ಷಕರ ಬೇಕು ಬೇಡಗಳನ್ನು ಅರ್ಥೈಸಿಕೊಂಡು ಇಲ್ಲಿಯವರೆಗೂ ಹತ್ತು ಹಲವು ಸದಭಿರುಚಿಯ ವಿಭಿನ್ನ ಪ್ರಯೋಗಗಳನ್ನು ಮಾಡುತ್ತ ಹೊಸ ದಾಖಲೆಗಳಿಗೆ ನಾಂದಿ ಹಾಡುತ್ತಿದೆ. ರಿಯಾಲಿಟಿ ಶೋ ಚಿತ್ರೀಕರಣ ಮತ್ತು ಪ್ರಸಾರ ಎರಡೂ ಜನರಿಂದ ದೂರವಾಗಿ ನಡೆಯುವಂತ ಪ್ರಕ್ರಿಯೆ. ಇಲ್ಲಿ ಪ್ರೇಕ್ಷಕರಿಗೂ ನಟರಿಗೂ ನೇರ ಮುಖಾಮುಖಿ ಇರುವುದಿಲ್ಲ. ಆದರೆ ರಂಗಭೂಮಿ ಜನರ ನೇರಸಂಪರ್ಕಕ್ಕೆ ಮತ್ತು ಸಂವಹನಕ್ಕೆ ಒಳಪಡುವಂತದ್ದು.

    ಡ್ರಾಮಾ ಜ್ಯೂನಿಯರ್ಸ್ ರಿಯಾಲಿಟಿ ಶೋ ಮುಗ್ಧ ಮನಸ್ಸಿನ ಮಕ್ಕಳ ನಟನಾ ಕೌಶಲ್ಯಕ್ಕೆ ಮತ್ತು ಅವರ ಅಭಿನಯ ಸಾಮರ್ಥ್ಯಕ್ಕೆ ವೇದಿಕೆಯನ್ನು ಒದಗಿಸುವ ಒಂದು ಉತ್ತಮ ಶೋ. ಈ ಶೋ ಕೇವಲ ಮನರಂಜನೆಯನ್ನಷ್ಟೇ ನೀಡದೇ, ವಿನೂತನ, ವಿಭಿನ್ನ ಪ್ರಯೋಗಗಳನ್ನು ಮಾಡಿ ಹೊಸ ದಾಖಲೆಗಳಿಗೆ ನಾಂದಿ ಹಾಡಿದೆ. ಅಭಿನಯದ ಜೊತೆಗೆ ರಂಗಭೂಮಿಯ ವಿವಿಧ ಮಜಲುಗಳನ್ನು ಪರಿಚಯಿಸುವುದರ ಜೊತೆಗೆ ಸಾಮಾಜಿಕ ಸಂದೇಶಗಳನ್ನು ನೀಡುತ್ತ ಪ್ರೇಕ್ಷಕರಿಂದ ಇದೊಂದು ಅದ್ಭುತವಾದ ಕಾರ್ಯಕ್ರಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

    ಕನ್ನಡ ಚಿತ್ರರಂಗಕ್ಕೆ ಹತ್ತು ಹಲವು ಬಾಲ ಕಲಾವಿದರನ್ನು ಕೊಡುಗೆಯಾಗಿ ನೀಡುವ ನಿಟ್ಟಿನಲ್ಲಿ ಆರಂಭವಾದ ಡ್ರಾಮಾ ಜ್ಯೂನಿಯರ್ಸ್ ಸೀಸನ್ 1 ಮತ್ತು ಸೀಸನ್ 2 ಎಂಬ ಅತ್ಯದ್ಭುತ ಯಶಸ್ಸಿನ ಕಾರ್ಯಕ್ರಮವನ್ನು ಪರಿಚಯಿಸಿದ್ದಲ್ಲದೇ, ಅದು ಕರ್ನಾಟಕವಲ್ಲದೇ ದೇಶ ವಿದೇಶದ ಕನ್ನಡಿಗರಲ್ಲೆರೂ ಅದರ ಒಂದು ಭಾಗವಾಗುವಂತೆ ಮಾಡಿದ ಕೀರ್ತಿ ಜೀ ವಾಹಿನಿಗೆ ಸಲ್ಲುತ್ತದೆ. ಅದರ ಮುಂದುವರಿದ ಅಧ್ಯಾಯವೆಂಬಂತೆ ಡ್ರಾಮಾ ಜ್ಯೂನಿಯರ್ಸ್ ಸೀಸನ್ 3 ಆರಂಭಗೊಳ್ಳುತ್ತಿದ್ದು ಮತ್ತೊಂದು ವಿಭಿನ್ನ ಪ್ರಯತ್ನಕ್ಕೆ ಸಾಕ್ಷಿಯಾಗುತ್ತಿದೆ.

    ಕರ್ನಾಟಕದಾದ್ಯಂತ 30 ಜಿಲ್ಲೆಗಳಲ್ಲಿ ಆಡಿಷನ್ ಪ್ರಕ್ರಿಯೆ ನಡೆದಿದ್ದು, ಅದರಲ್ಲಿ ಅಭಿನಯ ಕೌಶಲ್ಯದ ಹಿನ್ನೆಲೆಯುಳ್ಳ 30 ಮಕ್ಕಳನ್ನು ಆಯ್ಕೆ ಮಾಡಿಕೊಂಡಿದ್ದು, ಆ 30 ಮಕ್ಕಳು ಮೆಗಾ ಆಡಿಷನ್ ನಲ್ಲಿ ಭಾಗಿಯಾಗಲು ತಯಾರಾಗಿದ್ದಾರೆ. ಹೊಸ ಹೊಸ ಪ್ರಯೋಗಗಳು, ಹೊಸ ಪ್ರಯತ್ನದೊಂದಿಗೆ ಹಿಂದೆಂದೂ ನೋಡಿರದಂತ, ಹಿಂದೆಂದೂ ಕೇಳಿರದಂತ ಮನರಂಜನೆ ಈ ಒಂದು ಕಾರ್ಯಕ್ರಮದಲ್ಲಿ ನಿಮಗಾಗಿ ಎದುರುಗೊಳ್ಳುತ್ತಿದೆ.

    ಇನ್ನುಳಿದಂತೆ ಕಾರ್ಯಕ್ರಮಕ್ಕೆ ಅಂದದ ಮೆರುಗೆಂಬಂತೆ ತೀರ್ಪುಗಾರರಾಗಿ ಜೂಲಿ ಲಕ್ಷ್ಮಿ, ಮುಖ್ಯಮಂತ್ರಿ ಚಂದ್ರು ಹಾಗು ವಿಜಯರಾಘವೇಂದ್ರ ಇದ್ದಾರೆ. ಮಕ್ಕಳಿಂದ ಹಿಡಿದು ವಯೋಮಾನದವರಿಗೆಲ್ಲರಿಗು ಪ್ರೀತಿ ಪಾತ್ರರಾದ ಮಾಸ್ಟರ್ ಆನಂದ್ ತಮ್ಮ ಮಾತಿನ ಚಟಾಕಿಯ ಮೂಲಕ ನಿರೂಪಣೆಯನ್ನು ನೀಡಲಿದ್ದಾರೆ. ಅಂದುಕೊಂಡಿರುವಂತೆ ಎಲ್ಲವೂ ಅತ್ಯದ್ಭುತವಾಗಿ ಸಜ್ಜುಗೊಳ್ಳುತ್ತಿದ್ದು, ಪ್ರೇಕ್ಷಕರಿಗೆ ವಿವಿಧ ಆಯಾಮಗಳಲ್ಲಿ ಮನರಂಜನೆ ನೀಡಲು ಸಜ್ಜಾಗಿ ಬರ್ತಾ ಇದ್ದಾರೆ. ಡ್ರಾಮಾ ಜ್ಯೂನಿಯರ್ಸ್ ಸೀಸನ್ 3 ಸ್ಪರ್ಧಿಗಳು ಇನ್ನು ಮುಂದೆ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 9 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ ತಪ್ಪದೆ ಹಾಜರಾಗುತ್ತಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಡ್ರಾಮಾ ಜೂನಿಯರ್ಸ್‍ನಲ್ಲಿ ಬ್ರಾಹ್ಮಣ ಪುರೋಹಿತರಿಗೆ ಅಪಮಾನ- ಉಡುಪಿ ಪೇಜಾವರ ಮಠ ತಲುಪಿದ ವಿವಾದ

    ಡ್ರಾಮಾ ಜೂನಿಯರ್ಸ್‍ನಲ್ಲಿ ಬ್ರಾಹ್ಮಣ ಪುರೋಹಿತರಿಗೆ ಅಪಮಾನ- ಉಡುಪಿ ಪೇಜಾವರ ಮಠ ತಲುಪಿದ ವಿವಾದ

    ಬೆಂಗಳೂರು: ಖಾಸಗಿ ವಾಹಿನಿಯ ಡ್ರಾಮಾ ಜೂನಿಯರ್ಸ್ ಎರಡನೇ ಆವೃತ್ತಿಯ ಸಂಚಿಕೆಯಲ್ಲಿ ಬ್ರಾಹ್ಮಣ ವೃತ್ತಿಗೆ ಮತ್ತು ಜಾತಿಗೆ ಅವಮಾನವಾಗಿದೆ ಎಂದು ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಡ್ರಾಮಾ ಜೂನಿಯರ್ಸ್ ಕಾರ್ಯಕ್ರಮದಲ್ಲಿ ಪ್ರಸಾರವಾದ ಎಪಿಸೋಡ್ ಒಂದರ ಬಗ್ಗೆ ಉಡುಪಿ ಪೇಜಾವರ ಮಠದಲ್ಲಿ ಖಂಡನಾ ಸಭೆ ನಡೆಯಿತು. ಬ್ರಾಹ್ಮಣ ಜಾತಿಗೆ ಜೊತೆಗೆ ವೃತ್ತಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಯುವ ಬ್ರಾಹ್ಮಣ ಪರಿಷತ್ ನೇತೃತ್ವದಲ್ಲಿ ಪ್ರತಿಭಟನಾ ಸಭೆ ಮಾಡುವ ಮೂಲಕ ಖಂಡಿಸಲಾಯ್ತು.

    ಈ ಸಂದರ್ಭ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮಾತನಾಡಿ, ಬ್ರಾಹ್ಮಣ ವೃತ್ತಿಯ ಅವಹೇಳನವಾಗಿದೆ. ಇದು ನಮಗೆ ದುಃಖವುಂಟು ಮಾಡಿದೆ. ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಬೇಡ. ಸಣ್ಣ ಮಕ್ಕಳ ಮನಸ್ಸಿನಲ್ಲಿ ವಿಷಬೀಜ ಬಿತ್ತುವ ಕಾರ್ಯ ಮಾಡದಿರಿ. ಇದನ್ನು ನಾವು ಸರ್ವತಾ ಒಪ್ಪಲು ಸಾಧ್ಯವಿಲ್ಲ. ಕ್ಷಮೆ ಯಾಚನೆ ಮಾಡದೆ ಇದ್ದಲ್ಲಿ ಈ ಬಗ್ಗೆ ತೀವ್ರ ಪ್ರತಿಭಟನೆ ಮಾಡುತ್ತೇನೆ ಎಂದು ಸ್ವಾಮೀಜಿ ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿಗಳ ಮೂಲಕ ಯುವ ಬ್ರಾಹ್ಮಣ ಪರಿಷತ್ ಮನವಿಯನ್ನು ನೀಡುವುದಾಗಿ ಹೇಳಿದೆ.

    ಕಾರ್ಯಕ್ರಮದಲ್ಲಿ ಪುರೋಹಿತ ವರ್ಗ, ಬ್ರಾಹ್ಮಣರನ್ನು ಅವಹೇಳನ ಮಾಡಲಾಗಿದೆ ಎಂದು ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ಆರೋಪಿಸಿದೆ. ಈ ಸಂಚಿಕೆಯಲ್ಲಿ ಮುಗ್ಧ ಮಕ್ಕಳನ್ನು ಇಟ್ಟುಕೊಂಡು ಬ್ರಾಹ್ಮಣರನ್ನು ತೇಜೋವಧೆ ಮಾಡಲಾಗಿದೆ. ಇಂತಹ ಕಾರ್ಯಕ್ರವiಗಳಿಗೆ ಅವಕಾಶ ನೀಡಬಾರದೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಬ್ರಾಹ್ಮಣ ಮಹಾಸಭಾ ಪತ್ರ ಬರೆದಿದೆ. ಅಲ್ಲದೇ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದೆ