Tag: dress shop

  • ಅಂಗಡಿಯಲ್ಲಿದ್ದ ಸೀರೆ ಪತ್ನಿಗೆ ಇಷ್ಟವಾಗಿಲ್ಲವೆಂದು ಮಾಲೀಕನ ಮೇಲೆ ಪತಿ ಹಲ್ಲೆ!

    ಅಂಗಡಿಯಲ್ಲಿದ್ದ ಸೀರೆ ಪತ್ನಿಗೆ ಇಷ್ಟವಾಗಿಲ್ಲವೆಂದು ಮಾಲೀಕನ ಮೇಲೆ ಪತಿ ಹಲ್ಲೆ!

    ಕಾರವಾರ: ಅಂಗಡಿಯಲ್ಲಿ ಕೊಂಡ ಸೀರೆ ಪತ್ನಿಗೆ ಇಷ್ಟವಾಗದ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕನಿಗೆ ಗ್ರಾಹಕ ಸ್ನೇಹಿತನೊಂದಿಗೆ ಸೇರಿ ಹಲ್ಲೆ ಮಾಡಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.

    ಶಿರಸಿಯ ಮೊಹಮ್ಮದ್ ಹಲ್ಲೆ ಮಾಡಿದ ವ್ಯಕ್ತಿಂ. ಬಲರಾಮ್ ಹಲ್ಲೆಗೊಳಗಾದ ಅಂಗಡಿ ಮಾಲೀಕ. ಶಿರಸಿಯ ಸಿಪಿ ಬಜಾರದಲ್ಲಿರುವ ಸಾಗರ ಬಟ್ಟೆ ಅಂಗಡಿಯಲ್ಲಿ ಮೊಹಮ್ಮದ್ ಪತ್ನಿಗೆಂದು ಸೀರೆ ತೆಗೆದುಕೊಂಡು ಹೊಗಿದ್ದನು. ಆ ಸೀರೆ ಪತ್ನಿಗೆ ಇಷ್ಟ ಆಗದ ಹಿನ್ನೆಲೆ ಅಂಗಡಿಗೆ ಪುನಃ ಬಂದು ಸೀರೆ ನೋಡಿದ್ದಾನೆ. ಆದರೆ ಅಂಗಡಿಯಲ್ಲಿರುವ ಯಾವುದೇ ಸೀರೆ ಪತ್ನಿಗೆ ಇಷ್ಟ ಆಗಲಿಲ್ಲ. ಹೀಗಾಗಿ ಸಿಟ್ಟುಗೊಂಡ ಮೊಹಮ್ಮದ್ ಒಳ್ಳೆ ಬಟ್ಟೆ ಇಡೋಕೆ ಆಗಲ್ವಾ ಅಂತಾ ಅವಾಚ್ಯ ಪದ ಬಳಕೆ ಮಾಡಿದ್ದ. ಇದನ್ನೂ ಓದಿ: ಬಟ್ಟೆ ಕ್ಲೀನ್ ಇಲ್ಲವೆಂದು ವ್ಯಕ್ತಿಯನ್ನು ತಡೆದ ಮೆಟ್ರೋ ಸಿಬ್ಬಂದಿ- ಜೊತೆಗೆ ಕರೆದೊಯ್ದ ಸಹ ಪ್ರಯಾಣಿಕರು

    ಅಂಗಡಿ ಮಾಲೀಕ, ನಿನ್ನ ಹಣ ರಿಟರ್ನ್ ಕೊಡ್ತೀನಿ, ತಗೊಂಡು ಹೋಗು ಬೈಬೇಡ ಎಂದಿದ್ದನು. ನಂಗೆ ಹಣ ಏನ್ ಕೊಡ್ತಿಯಾ ಸರಿಯಾಗಿ ಬಟ್ಟೆ ಇಡೋಕೆ ಆಗಲ್ವಾ ಎಂದು ತಕರಾರು ತೆಗೆದು ಹೊರಗಡೆಯಿಂದ ಸರ್ಪರಾಜ್ ಎಂಬ ಗೆಳೆಯನನ್ನು ಕರೆಸಿ ಅಂಗಡಿ ಮಾಲೀಕ ಹಾಗೂ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ್ದಾನೆ.

    ಈ ಘಟನೆ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಘಟನೆ ಸಂಬಂಧ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸ್ವಚ್ಛಗೊಳಿಸಿದ್ದ ಜಾಗದಲ್ಲಿ ಎಸೆದ ಕಸವನ್ನು ಮತ್ತೆ ಅಂಗಡಿಯೊಳಗೆ ಸುರಿದು ಜಾಗೃತಿ ಮೂಡಿಸಿದ ಮಂಗ್ಳೂರು ಯುವಕ!

    ಸ್ವಚ್ಛಗೊಳಿಸಿದ್ದ ಜಾಗದಲ್ಲಿ ಎಸೆದ ಕಸವನ್ನು ಮತ್ತೆ ಅಂಗಡಿಯೊಳಗೆ ಸುರಿದು ಜಾಗೃತಿ ಮೂಡಿಸಿದ ಮಂಗ್ಳೂರು ಯುವಕ!

    ಮಂಗಳೂರು: ರಸ್ತೆಯಲ್ಲಿ ಕಸ ಎಸೆದಿದ್ದಕ್ಕೆ ಸಿಟ್ಟಾದ ಯುವಕನೊಬ್ಬ ಅದೇ ಕಸವನ್ನು ಬಟ್ಟೆ ಅಂಗಡಿ ಒಳಗೆ ಸುರಿದ ಘಟನೆ ಮಂಗಳೂರಿನ ಕರಂಗಲ್ಪಾಡಿಯಲ್ಲಿ ನಡೆದಿದೆ.

    ರಾಮಕೃಷ್ಣ ಮಿಷನ್ ವತಿಯಿಂದ ಪ್ರತಿ ಆದಿತ್ಯವಾರ ನೂರಾರು ಸ್ವಯಂ ಸೇವಕರು ಮಂಗಳೂರು ನಗರವನ್ನು ಸ್ವಚ್ಛಗೊಳಿಸುತ್ತಾರೆ. ಆದ್ರೆ ಮಾರನೇ ದಿನ ಮತ್ತೆ ಸ್ವಚ್ಛಗೊಳಿಸಿದ ಸ್ಥಳದಲ್ಲಿ ಸಾರ್ವಜನಿಕರು ಕಸ ಹಾಕುತ್ತಿದ್ದರು. ಮಂಗಳೂರಿನ ಕರಂಗಲ್ಪಾಡಿಯಲ್ಲೂ ಡಿ.31 ರ ಆದಿತ್ಯವಾರ ಸ್ವಯಂಸೇವಕರು ಸ್ವಚ್ಛಗೊಳಿಸಿದ್ದು, ಅದೇ ದಿನ ಸ್ಥಳೀಯ ಶಾಪ್ ನ ಸಿಬ್ಬಂದಿ ಅದೇ ಜಾಗದಲ್ಲಿ ಕಸ ಎಸೆದಿದ್ದಾರೆ.

    ಇದರಿಂದ ಕೋಪಗೊಂಡ ಸೌರಜ್ ಮಂಗಳೂರು ಎಂಬ ಯುವಕ ಶಾಪ್ ನ ಸಿಬ್ಬಂದಿ ಎಸೆದ ಕಸವನ್ನು ರಸ್ತೆ ಬದಿಯಿಂದ ಸಂಗ್ರಹಿಸಿ ಶಾಪ್ ಒಳಗೆ ಸುರಿದಿದ್ದಾರೆ. ಸ್ವಚ್ಛಗೊಳಿಸಿದ ಸ್ಥಳದಲ್ಲೇ ಕಸ ಸುರಿದ ಶಾಪ್ ನ ಸಿಬ್ಬಂದಿ ಒಂದು ಕ್ಷಣ ವಿಚಲಿತರಾದ್ರೂ ಸೌರಜ್ ನ ಕೋಪದ ಮುಂದೆ ತಣ್ಣಗಾಗಿದ್ದಾರೆ. ಸೌರಜ್ ಫೇಸ್ ಬುಕ್ ಲೈವ್ ಮೂಲಕ ವಿಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

    ಈ ಹಿಂದೆ ಮೋರ್ಗನ್ಸ್ ಗೇಟ್ ಬಳಿಯೂ ಸ್ವಚ್ಛಗೊಳಿಸಿದ ಸ್ಥಳದಲ್ಲಿ ಅಕ್ಕಪಕ್ಕದ ಮನೆಯವರು ಕಸ ಸುರಿದಿದ್ದು, ಸೌರಜ್ ಅದೇ ಕಸವನ್ನು ಸಂಗ್ರಹಿಸಿ ಮನೆಯೊಳಗೆ ಹಾಕಿದ್ದರು. ಆ ನಂತರವಾಗಿ ಮನೆಯವರು ಎಚ್ಚೆತ್ತು ಕಸವನ್ನು ತೊಟ್ಟಿಯಲ್ಲಿ ಹಾಕಲು ಆರಂಭಿಸಿದ್ರು. ಇನ್ಮುಂದೇ ಇದೇ ರೀತಿಯ ಅಭಿಯಾನ ಮಾಡಲು ರಾಮಕೃಷ್ಣ ಮಿಷನ್ ನ ಸ್ವಯಂ ಸೇವಕರು ನಿರ್ಧರಿಸಿದ್ದು, ಎಲ್ಲೆಂದರಲ್ಲಿ ಕಸ ಎಸೆದವರಿಗೆ ತಕ್ಕ ಪಾಠ ಕಲಿಸಲು ನಿರ್ಧರಿಸಿದ್ದಾರೆ.

    https://www.youtube.com/watch?v=SX_4fh8j_rk