Tag: Drivers

  • ಪ್ರಯಾಣಿಕರನ್ನು ಕುರಿಗಳಂತೆ ತುಂಬ್ತಾರೆ, ಟಾಪ್‍ಲ್ಲಿ ಕೂರಿಸ್ತಾರೆ – ತುಮಕೂರಿನಲ್ಲಿ ಖಾಸಗಿ ಬಸ್‍ಗಳಿಂದ ರೂಲ್ಸ್ ಬ್ರೇಕ್

    ಪ್ರಯಾಣಿಕರನ್ನು ಕುರಿಗಳಂತೆ ತುಂಬ್ತಾರೆ, ಟಾಪ್‍ಲ್ಲಿ ಕೂರಿಸ್ತಾರೆ – ತುಮಕೂರಿನಲ್ಲಿ ಖಾಸಗಿ ಬಸ್‍ಗಳಿಂದ ರೂಲ್ಸ್ ಬ್ರೇಕ್

    ತುಮಕೂರು: ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳಿಗೆ ಯಾವುದೇ ಲಂಗು ಲಗಾಮಿಲ್ಲದಂತಾಗಿದೆ. ಬುಧವಾರ ಕೊರಟಗೆರೆಯ ಜಟ್ಟಿ ಅಗ್ರಹಾರದಲ್ಲಿ ಐವರ ಸಾವಿಗೆ ಕಾರಣವಾದ ಖಾಸಗಿ ಬಸ್ಸುಗಳ ಆಟಾಟೋಪ ಮುಂದುವರಿದಿದೆ. ಓವರ್ ಲೋಡ್, ಟಾಪಲ್ಲಿ ಪ್ರಯಾಣ ಎಂದಿನಂತೆ ಸಾಗಿದೆ. ಆದರೂ ಜಿಲ್ಲಾಡಳಿತ, ಆರ್‌ಟಿಓ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದೆ.

    ಬುಧವಾರದಂದು ಕೊರಟಗೆರೆಯ ಜಟ್ಟಿ ಅಗ್ರಹಾರದ ಬಳಿ ಓವರ್ ಸ್ಪೀಡಲ್ಲಿ ಬಂದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಮಗುಚಿದ ಪರಿಣಾಮ ಐವರು ಸಾವನಪ್ಪಿ, 29 ಜನರಿಗೆ ಗಾಯಗೊಂಡ ಘಟನೆ ನಡೆದಿತ್ತು. ಆದರೂ ಖಾಸಗಿ ಬಸ್ಸುಗಳ ಆಟಾಟೋಪಕ್ಕೆ ಬ್ರೇಕ್ ಬಂದಿಲ್ಲ. ತುಮಕೂರು- ಕೊರಟಗೆರೆ-ಮಧುಗಿ ಮಾರ್ಗದಲ್ಲಿ ಬಸ್ಸುಗಳ ಅತಿ ವೇಗ ಮತ್ತೆ ಪ್ರಯಾಣಿಕರ ಪ್ರಾಣಕ್ಕೆ ಸಂಚಕಾರ ತಂದೊಡ್ಡುತ್ತಿದೆ. ಇದನ್ನೂ ಓದಿ: ತುಮಕೂರಿನಲ್ಲಿ ಭೀಕರ ಅಪಘಾತಕ್ಕೆ ಐವರು ಬಲಿ

    ಕಡಿಮೆ ಸಮಯದಲ್ಲಿ ತಲುಪಬೇಕು ಎಂಬ ಆತುರದಲ್ಲಿ ಚಾಲಕರು ತಮ್ಮ ಅತೀ ವೇಗದ ಚಾಲನೆ ಮುಂದುವರಿಸಿದ್ದಾರೆ. ಬುಧವಾರ ನಡೆದ ಘಟನೆಯಿಂದ ಎಚ್ಚೆತ್ತುಕೊಳ್ಳದ ಖಾಸಗಿ ಬಸ್ಸಿನ ಚಾಲಕರು ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟ ಆಡುತಿದ್ದಾರೆ.

    ತುಮಕೂರು ನಗರದಲ್ಲಿ ಖಾಸಗಿ ಬಸ್ಸಿನ ಟಾಪಲ್ಲಿ ಕೂತು ಪ್ರಯಾಣಿಸುವವರ ಸಂಖ್ಯೆ ಕಡಿಮೆ ಇದೆ. ಆದರೆ ಮಧುಗಿರಿ-ಶಿರಾ-ತಿಪಟೂರು ಮಾರ್ಗದಲ್ಲಿ ಖಾಸಗಿ ಬಸ್ಸಿನವರು ಆಡಿದ್ದೇ ಆಟವಾಗಿದೆ. ಈ ಮಾರ್ಗದಲ್ಲಿ ಪ್ರತಿ ಬಸ್ಸಿನ ಟಾಪಲ್ಲಿ ಪ್ರಯಾಣಿಕರು ಕುಳಿತು ಪ್ರಯಾಣಿಸುತ್ತಾರೆ. ಬಸ್ಸಿನೊಳಗೆ ಪ್ರಯಾಣಿಕರನ್ನು ಕಿಕ್ಕಿರಿದು ತುಂಬಿ, ಬಾಗಿಲಲ್ಲಿ ನಿಂತು ಪ್ರಯಾಣಿಸುವುದು ಸಾಮಾನ್ಯವಾಗಿದೆ. ವಿಧಿಯಿಲ್ಲದೆ ಸಾರ್ವಜನಿಕರು ಪ್ರಯಾಣಿಸುವಂತಾಗಿದೆ.

  • ಚಾಲಕರಿಗೆ ಅವಧಿ ಮೀರಿದ ಮೆಡಿಕಲ್ ಕಿಟ್ ವಿತರಿಸಿದ ಕಾರ್ಮಿಕ ಇಲಾಖೆ

    ಚಾಲಕರಿಗೆ ಅವಧಿ ಮೀರಿದ ಮೆಡಿಕಲ್ ಕಿಟ್ ವಿತರಿಸಿದ ಕಾರ್ಮಿಕ ಇಲಾಖೆ

    -ಕಿಟ್‍ಗಳ ಮೇಲೆ ಮಾಜಿ ಸಿಎಂ, ಸಚಿವರ ಹೆಸರೇ ಬದಲಾಗಿಲ್ಲ

    ಗದಗ: ಅವಧಿ ಮೀರಿದ ಚಿಕಿತ್ಸೆ ಕಿಟ್‍ನ್ನು ಚಾಲಕರಿಗೆ ನೀಡಿ ಗದಗದಲ್ಲಿ ಕಾರ್ಮಿಕ ಇಲಾಖೆ ಪ್ರಮಾದ ಎಸಗಿದೆ. ಅವಧಿ ಮೀರಿದ ಕಿಟ್‍ಗಳನ್ನ ನೀಡಿದ ಗದಗ ಜಿಲ್ಲಾ ಕಾರ್ಮಿಕ ಇಲಾಖೆ ವಿರುದ್ಧ ಚಾಲಕರು ಗರಂ ಆಗಿದ್ದಾರೆ.

    ಕಾರ್ಮಿಕ ಇಲಾಖೆಯಿಂದ ವಾಹನ ಚಾಲಕರಿಗೆ ನೀಡಿರೋ ಪ್ರಥಮ ಚಿಕಿತ್ಸಾ ಪೆಟ್ಟಿಗೆಯ ಎಡವಟ್ಟಿನ ಕೆಲಸವಿದು. ಸಂಚರಿಸುವ ವೇಳೆ ಅಪಘಾತವಾದರೆ ಕೂಡಲೇ ಪ್ರಥಮ ಚಿಕಿತ್ಸೆ ನೀಡುವುದಕ್ಕಾಗಿ ಸರ್ಕಾರದಿಂದ ಎಲ್ಲಾ ವಾಹನ ಚಾಲಕರಿಗೆ ಮೆಡಿಕಲ್ ಕಿಟ್ ನೀಡಲಾಗುತ್ತದೆ. ಆದರೆ ಈ ಬಾಕ್ಸ್ ಮೇಲೆ ಇನ್ನೂ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಕಾರ್ಮಿಕ ಸಚಿವ ಸಂತೋಷ ಲಾಡ್ ಪೋಸ್ಟರ್‌ಗಳು ರಾರಾಜಿಸುತ್ತಿವೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ನೀಡಿದ ಕಿಟ್‍ಗಳನ್ನ ಈಗ ವಿತರಿಸಿ ಅಧಿಕಾರಿಗಳು ಪೇಚಿಗೆ ಸಿಲುಕಿದ್ದಾರೆ. ಇದಕ್ಕೆ ಟ್ಯಾಕ್ಸಿ ಚಾಲಕರು ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಕಾರ್ಮಿಕ ಇಲಾಖೆ ಪ್ರಕಾರ ಈಗಲೂ ಸಿದ್ದರಾಮಯ್ಯ ಮುಖ್ಯಮಂತ್ರಿ, ಕಾರ್ಮಿಕ ಹಾಗೂ ಕೌಶಲ್ಯಭಿವೃದ್ದಿ ಇಲಾಖೆಯ ಸಚಿವ ಸಂತೋಷ ಲಾಡ್ ಆಗಿದ್ದಾರೆ. ಇಷ್ಟು ದಿನ ಬಚ್ಚಿಟ್ಟಿದ್ದ ಕಿಟ್ ಈಗ ಟ್ಯಾಕ್ಸಿ ಚಾಲಕರಿಗೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಈ ಕಿಟ್‍ಗಳಲ್ಲಿ ಅವಧಿ ಮುಗಿದ ಔಷಧ ಇರುವುದು ವಿಪರ್ಯಾಸ. ಈ ಬಗ್ಗೆ ಕಾರ್ಮಿಕ ಇಲಾಖೆ ಅಧಿಕಾರಿಯನ್ನು ಕೇಳಿದರೆ, ನಾನು ಹೊಸದಾಗಿ ಬಂದಿದ್ದೇನೆ. ನಾನು ಬರುವಾಗಲೇ ಈ ವಿತರಣಾ ಕಾರ್ಯಕ್ರಮ ಅವಧಿ ಫಿಕ್ಸ್ ಆಗಿತ್ತು. ಈಗ ಅವಧಿ ಮೀರಿದ ಕಿಟ್‍ಗಳನ್ನು ವಾಪಾಸ್ ತರೆಸಿಕೊಂಡು ಹೊಸಕಿಟ್ ನೀಡುತ್ತೇನೆ. ದಯವಿಟ್ಟು ಕ್ಷಮಿಸಿ ಎಂದು ಕಾರ್ಮಿಕ ಇಲಾಖೆ ಅಧಿಕಾರಿ ಸುಧಾ ಗರಗ ಅವರು ಕ್ಷಮೆಯಾಚಿಸಿದ್ದಾರೆ.

    ಅದೇನೇ ಇರಲಿ ಕಾರ್ಮಿಕರ ಹಿತ ಕಾಪಾಡಬೇಕಾದ ಅಧಿಕಾರಿಗಳು ಅವಧಿ ಮುಗಿದ ಮೆಡಿಕಲ್ ಕಿಟ್ ನೀಡಿದರೆ ಹೇಗೆ ಎನ್ನುವುದೆ ಕಾರ್ಮಿಕರ ಪ್ರಶ್ನೆಯಾಗಿದೆ. ಬೇಜವಾಬ್ದಾರಿ ವರ್ತನೆ ತೋರಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಚಾಲಕರು ಒತ್ತಾಯಿಸಿದ್ದಾರೆ.

  • ಫ್ಯಾಮಿಲಿ ಪ್ಲ್ಯಾನಿಂಗ್ ಅಳವಡಿಸಿಕೊಂಡ ಸಿಬ್ಬಂದಿಗೆ ಸಾರಿಗೆ ಇಲಾಖೆಯಿಂದ ಗಿಫ್ಟ್ – ಸುತ್ತೋಲೆಯಲ್ಲಿ ಏನಿದೆ?

    ಫ್ಯಾಮಿಲಿ ಪ್ಲ್ಯಾನಿಂಗ್ ಅಳವಡಿಸಿಕೊಂಡ ಸಿಬ್ಬಂದಿಗೆ ಸಾರಿಗೆ ಇಲಾಖೆಯಿಂದ ಗಿಫ್ಟ್ – ಸುತ್ತೋಲೆಯಲ್ಲಿ ಏನಿದೆ?

    ಬೆಂಗಳೂರು: ದೇಶದಲ್ಲಿ ಜನಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಫ್ಯಾಮಿಲಿ ಪ್ಲ್ಯಾನಿಂಗ್ ಅಳವಡಿಸಿಕೊಂಡ ಸಿಬ್ಬಂದಿಗೆ ವಿಶೇಷ ವೇತನ ನೀಡಲು ಕೆಎಸ್‍ಆರ್‍ಟಿಸಿ ಮುಂದಾಗಿದೆ.

    ಎರಡು ಮಕ್ಕಳನ್ನು ಹೊಂದಿದ್ರೆ ಸಿಬ್ಬಂದಿಗೆ ವಾರ್ಷಿಕ ವಿಶೇಷ ವೇತನ ಭಡ್ತಿ ನೀಡುವುದಾಗಿ ಕೆಎಸ್‍ಆರ್‍ಟಿಸಿ ಹೇಳಿದೆ. ವೈದ್ಯರಿಂದ ದೃಢೀಕರಿಸಿದ ದಾಖಲೆ ನೀಡಿದರೆ ಪೂರ್ಣ ಸೇವಾವಧಿಗೆ ನೀಡಲು ಚಿಂತನೆ ನಡೆಸಿದೆ.

    ಈ ಆಫರ್ ಪಡೆಯಬೇಕಾದರೆ ನೌಕರ ಅಥವಾ ಆತನ ಪತ್ನಿ ಸಂತಾನಹರಣ ಚಿಕಿತ್ಸೆ ಮಾಡಿಸಿಕೊಂಡ ದೃಢೀಕರಣ ಪತ್ರ ನೀಡುವುದು ಕಡ್ಡಾಯವಾಗಿದೆ. ಈ ಮೂಲಕ ಎರಡು ಮಕ್ಕಳು ಸಾಕು ಎನ್ನುವ ಸರ್ಕಾರದ ಯೋಜನೆಗೆ ಸಾರಿಗೆ ನಿಗಮ ಕೈ ಜೋಡಿಸಿದೆ.

    ತರಬೇತಿ ನೌಕರರಿಗೂ ಈ ನಿಯಮ ಅನ್ವಯವಾಗಲಿದ್ದು, -ಕೆಎಸ್‍ಆರ್‍ಟಿಸಿ ಎಂಡಿ ಶಿವಯೋಗಿ ಕಳಸದ್ ಅವರು ಜುಲೈ 27 ರಂದು ಸುತ್ತೋಲೆ ಹೊರಡಿಸಿದ್ದಾರೆ.

    ಸುತ್ತೋಲೆಯಲ್ಲಿ ಏನಿದೆ?
    1 ಅಥವಾ 2 ಜೀವಂತ ಮಕ್ಕಳನ್ನು ಹೊಂದಿದ್ದು, ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ಸಂಸ್ಥೆಯ ನೌಕರರು ಅಥವಾ ಪತಿ/ಪತ್ನಿ, ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ದಿನಾಂಕದಂದು ಅವರ ಹುದ್ದೆ ವೇತನ ಶ್ರೇಣಿಯ ವಾರ್ಷಿಕ ಬಡ್ತಿಯನ್ನು ವೈಯಕ್ತಿಕ ವೇತನವನ್ನಾಗಿ ಅವರ ಪೂರ್ಣ ಸೇವಾವಧಿ ಪಡೆಯಲು ಅರ್ಹರಿರುತ್ತಾರೆ.

    ಸರ್ಕಾರಿ ಆದೇಶದ ಅನ್ವಯ ಕುಟುಂಬ ಯೋಜನೆಯಡಿ ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಿಸಿರುವ ಕುರಿತಂತೆ, ನೌಕರರು(ತರಬೇತಿ ನೌಕರರು ಸೇರಿದಂತೆ) ‘ವಿಶೇಷ ವೇತನ ಬಡ್ತಿ’ಗಾಗಿ ಸಂತಾನ ಹರಣ ಚಿಕಿತ್ಸೆ ಮಾಡಿಸಿದ ದಿನಾಂಕದಿಂದ ಎರಡು ವರ್ಷದೊಳಗೆ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬೇಕು. ಇಲ್ಲವಾದಲ್ಲಿ ‘ವಿಶೇಷ ವೇತನ ಬಡ್ತಿ’ ಗೆ ಅರ್ಹರಾಗಿರುವುದಿಲ್ಲ ಎಂದು ನಿರ್ಣಯಿಸಲಾಗಿದೆ. ಸಂಬಂಧ ಪಟ್ಟವರು ಈ ಅಂಶವನ್ನು ಮನದಟ್ಟು ಮಾಡಿಕೊಂಡು ಅದರಂತೆ ಕ್ರಮ ಕೈಗೊಳ್ಳಬೇಕು. ಉಲ್ಲೇಖಿತ ಸುತ್ತೋಲೆಯಲ್ಲಿನ ನಿರ್ದೇಶನಗಳಲ್ಲಿ ಬದಲಾವಣೆಗಳು ಇರುವುದಿಲ್ಲ. ಸುತ್ತೋಲೆ ಹೊರಡಿಸಿದ ದಿನಾಂಕದಿಂದ ಜಾರಿಯಲ್ಲಿರುತ್ತದೆ.

  • ಎರಡು ಲಾರಿ, ಖಾಸಗಿ ಬಸ್ ನಡುವೆ ಡಿಕ್ಕಿ – ತಪ್ಪಿದ ಭಾರೀ ಅನಾಹುತ

    ಎರಡು ಲಾರಿ, ಖಾಸಗಿ ಬಸ್ ನಡುವೆ ಡಿಕ್ಕಿ – ತಪ್ಪಿದ ಭಾರೀ ಅನಾಹುತ

    ಬೆಂಗಳೂರು: ಎರಡು ಲಾರಿ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ ಭಾರಿ ಅನಾಹುತ ತಪ್ಪಿದ ಘಟನೆ ಆನೇಕಲ್ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಗೋಪಸಂದ್ರ ಬಳಿ ನಡೆದಿದೆ.

    ಗ್ರೀನ್ ಲೈನ್ ಸಂಸ್ಥೆಗೆ ಸೇರಿದ ಖಾಸಗಿ ಬಸ್ ತಮಿಳುನಾಡಿನಿಂದ ಬೆಂಗಳೂರಿಗೆ ಬರುತ್ತಿತ್ತು. ಈ ವೇಳೆ ಎರಡು ಲಾರಿ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಲಾರಿ ಚಾಲಕರು ಹಾಗೂ ಬಸ್ಸಿನಲ್ಲಿದ್ದ 10 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

    ಅಪಘಾತದಿಂದ ಕನ್ಯಾಕುಮಾರಿ – ಬೆಂಗಳೂರು ಹೆದ್ದಾರಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಬೆಳ್ಳಂಬೆಳಗ್ಗೆ ನೂರಾರು ವಾಹನಗಳು ಟ್ರಾಫಿಕ್ ಜಾಮ್‍ನಲ್ಲಿ ಸಿಲುಕಿದ್ದು, ಕಿಲೋಮೀಟರ್ ಉದ್ದಕ್ಕೆ ವಾಹನಗಳು ಸಾಲುಗಟ್ಟಿ ನಿಂತಿದೆ. ಸದ್ಯ ಸುಳಗಿರಿ ಪೊಲೀಸರು ಅಪಘಾತಕ್ಕೊಳಗಾದ ವಾಹನಗಳನ್ನು ಸ್ಥಳಾಂತರಿಸುತ್ತಿದ್ದಾರೆ.

  • ಹಣ, ಬಂಗಾರ, ಬೆಲೆ ಬಾಳುವ ಮೊಬೈಲ್ ಹಿಂದಿರುಗಿಸಿದ ಆಟೋ ಚಾಲಕರು

    ಹಣ, ಬಂಗಾರ, ಬೆಲೆ ಬಾಳುವ ಮೊಬೈಲ್ ಹಿಂದಿರುಗಿಸಿದ ಆಟೋ ಚಾಲಕರು

    ಕೊಪ್ಪಳ: ಬೆಲೆಬಾಳುವ ವಸ್ತುಗಳು ಸಿಕ್ಕರೆ ಸಾಕು, ಮರಳಿ ಕೊಡದೆ ಯಾಮಾರಿಸೋರೆ ಇರುತ್ತಾರೆ. ಆದರೆ ಕೊಪ್ಪಳದಲ್ಲಿ ಆಟೋ ಚಾಲಕರು ಪ್ರಯಾಣಿಕರು ಬಿಟ್ಟು ಹೋದ ಬೆಲೆಬಾಳುವ ವಸ್ತುಗಳನ್ನು ಮರಳಿ ಗ್ರಾಹಕರಿಗೆ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ.

    ಭಾನುವಾರ ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಬಳ್ಳಾರಿಯಿಂದ ಬಂದ ಜಯಶ್ರೀ ಕುಟುಂಬಸ್ಥರು ಆಟೋದಲ್ಲಿ ಮನೆಗೆ ತೆರಳಿದ್ದರು. ಅವರು ಆಟೋದಲ್ಲಿಯೇ ಮರೆತು ತಮ್ಮ ಪರ್ಸ್ ಬಿಟ್ಟು ಹೋಗಿದ್ದರು. ಪರ್ಸ್ ನಲ್ಲಿ ಮೂರು ಬೆಲೆಬಾಳು ಮೊಬೈಲ್‍ಗಳು, ಹಣ, ಬಂಗಾರದ ಆಭರಣಗಳಿದ್ದವು. ಸುಮಾರು 2 ಗಂಟೆ ಬಳಿಕ ಮೊಬೈಲ್‍ಗಳ ನೆನಪಾದಾಗ ಪರ್ಸ್ ಬಿಟ್ಟಿರುವುದು ಬೆಳಕಿಗೆ ಬಂದಿದೆ.

    ಜಯಶ್ರೀ ಆಟೋ ಏರಿದ ಸ್ಥಳಕ್ಕೆ ಆಗಮಿಸಿ ವಿಚಾರಿಸಿದಾಗ ರೈಲ್ವೆ ನಿಲ್ದಾಣದ ಚಾಲಕರು ಅವರಿಗೆ ಧೈರ್ಯ ತುಂಬಿ ಕೇವಲ ಹತ್ತು ನಿಮಿಷದಲ್ಲೇ ಯಾರ ಆಟೋ ಎಂದು ಗುರುತಿಸಿ ಆಟೋದಲ್ಲೇ ಇದ್ದ ಪರ್ಸ್ ಮರಳಿ ನೀಡಿದ್ದಾರೆ. ಪರ್ಸ್ ನಲ್ಲಿದ್ದ ಎಲ್ಲಾ ವಸ್ತುಗಳು ಹಾಗೆ ಇದ್ದವು. ಕಳೆದು ಹೋಗಿದ್ದ ವಸ್ತುಗಳು ತಮ್ಮ ಕೈ ಸೇರಿದ್ದಕ್ಕೆ ಆಟೋದವರಿಗೆ ಜಯಶ್ರೀ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

    ಈ ಮೂಲಕ ಕೊಪ್ಪಳ ರೈಲ್ವೆ ನಿಲ್ದಾಣದ ಆಟೋ ಚಾಲಕರು ಮಾದರಿಯಾಗಿ ಮಾನವೀಯತೆ ಮೆರೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಪಘಾತ ರಹಿತ ಚಾಲನೆ: ಕೋಲಾರದ 62 ಚಾಲಕರಿಗೆ ಬೆಳ್ಳಿ ಪದಕ

    ಅಪಘಾತ ರಹಿತ ಚಾಲನೆ: ಕೋಲಾರದ 62 ಚಾಲಕರಿಗೆ ಬೆಳ್ಳಿ ಪದಕ

    ಕೋಲಾರ: ಅಪಘಾತ ರಹಿತವಾಗಿ ಸುರಕ್ಷಿತ ಚಾಲನೆ ಮಾಡಿರುವ ಚಾಲಕರಿಗೆ ಸಾರಿಗೆ ಇಲಾಖೆ 30ನೇ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಬೆಳ್ಳಿ ಪದಕವನ್ನು ಪ್ರದಾನ ಮಾಡಿ ಅಭಿನಂದಿಸಲಾಗಿದೆ.

    ಜಿಲ್ಲೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿ ಆವರಣದಲ್ಲಿ 30ನೇ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಜೆ. ಮಂಜುನಾಥ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದರು.

    ರಾಜ್ಯದಲ್ಲೇ ಕಳೆದ 5 ವರ್ಷಗಳಲ್ಲಿ ಹೆಚ್ಚು ಸುರಕ್ಷಿತ ಚಾಲನೆ ಮಾಡಿದ ಜಿಲ್ಲೆಗೆ ಕೋಲಾರ ಪಾತ್ರವಾದ ಹಿನ್ನೆಲೆಯಲ್ಲಿ ಅಪಘಾತ ರಹಿತ ಸುರಕ್ಷಿತ ಸೇವೆ ನೀಡಿರುವ ಕೋಲಾರ ವಿಭಾಗದ 62 ಜನ ಚಾಲಕರನ್ನ ಜಿಲ್ಲಾಧಿಕಾರಿಗಳು ಬೆಳ್ಳಿ ಪದಕ ನೀಡಿ ಗೌರವಿಸಿದರು.

    ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, 1968ರಲ್ಲಿ ಪ್ರಾರಂಭವಾದ ನಿಗಮ ನಷ್ಟದಲ್ಲಿದ್ದರೂ ಕೂಡ ಸಾರಿಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸೇವಾ ಮನೋಭಾವದಿಂದ ಸಾರಿಗೆ ವ್ಯವಸ್ಥೆಯನ್ನು ಸರ್ಕಾರ ನೀಡುತ್ತಾ ಬಂದಿದೆ. ಪ್ರತಿ ಕಿ.ಮೀ ಗೆ 28 ರೂಪಾಯಿ ಆದಾಯ ಬರುತ್ತಿದ್ದರೆ, ಅದಕ್ಕೆ ನಿಗಮ 35 ರೂಪಾಯಿ ವ್ಯಯ ಮಾಡುತ್ತಿದೆ. ಕೋಲಾರ ವಿಭಾಗದಲ್ಲಿ ಮಾತ್ರವೇ 2,856 ಮಂದಿ ಸಾರಿಗೆಯಲ್ಲಿ ಕೆಲಸ ಮಾಡುತ್ತಿದ್ದು, 609 ಸಾರಿಗೆ ಬಸ್‍ಗಳು 754 ಗ್ರಾಮಗಳನ್ನು ತಲುಪಿ ಜನರಿಗೆ ಸಾರಿಗೆ ಸಂಪರ್ಕ ಕಲ್ಪಿಸಿದೆ ಎಂದು ತಿಳಿಸಿದರು.

    ಬಳಿಕ ಬೆಳ್ಳಿ ಪದಕ ಪಡೆದ ಚಾಲಕರು ಮಾತನಾಡಿ, ಸುರಕ್ಷಿತವಾಗಿ ಬಸ್ ಚಾಲನೆ ಮಾಡಿದ ನಮ್ಮನ್ನು ಸಾರಿಗೆ ನಿಗಮ ಪದಕ ಕೊಟ್ಟು ಗೌರವಿಸುತ್ತಿರುವುದು ಸಂತೋಷ ತಂದಿದೆ. ಕಳೆದ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಇಲಾಖೆಯ ಎಲ್ಲಾ ಸಿಬ್ಬಂದಿಗೆ ನಿಗಮ ಉತ್ತಮ ಸೌಲಭ್ಯ ಕೊಟ್ಟಿರುವುದು ನೆಮ್ಮದಿಯ ವಿಚಾರ ಎಂದು ಅಭಿಪ್ರಾಯ ಹಂಚಿಕೊಂಡರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಎಂಟಿಸಿ ಚಾಲಕರೇ ಹುಷಾರ್ – ಮೊಬೈಲ್ ಇಟ್ಕೊಂಡ್ರೆ ಕೆಲ್ಸ ಕಳ್ಕೋತಿರಾ!

    ಬಿಎಂಟಿಸಿ ಚಾಲಕರೇ ಹುಷಾರ್ – ಮೊಬೈಲ್ ಇಟ್ಕೊಂಡ್ರೆ ಕೆಲ್ಸ ಕಳ್ಕೋತಿರಾ!

    ಬೆಂಗಳೂರು: ಬಿಎಂಟಿಸಿ ಚಾಲಕರ ಮೊಬೈಲ್ ಬಳಕೆ ನಿಷಿದ್ಧಗೊಳಿಸಿ ಎಂದು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

    ಚಾಲಕರು ಇನ್ನು ಮುಂದೆ ಡ್ಯೂಟಿಯಲ್ಲಿ ಇರಬೇಕಾದರೆ ಮೊಬೈಲ್ ತರುವಂತಿಲ್ಲ. ಆಯಾ ಡಿಪೋಗಳಲ್ಲಿ ಫೋನ್ ಸ್ವಿಚ್ ಆಫ್ ಮಾಡಿ ಇಡಬೇಕು. ಬಿಎಂಟಿಸಿ ಚಾಲಕರಿಗೆ ಡ್ರೈವಿಂಗ್ ನಲ್ಲಿ ಮೊಬೈಲ್ ಫೋನ್ ಬಳಕೆ ಮಾಡುವಂತಿಲ್ಲ ಎಂದು ಸುತ್ತೋಲೆ ಕೊಟ್ರೂ ಎಚ್ಚೆತ್ತುಕೊಳ್ಳದ ಹಿನ್ನೆಲೆಯಲ್ಲಿ ಮೊಬೈಲ್ ಇಟ್ಟುಕೊಳ್ಳದಂತೆ ಇದೀಗ ಖಡಕ್ ಆದೇಶ ನೀಡಲಾಗಿದೆ.

    ಫೋನ್ ಬಳಕೆಯಿಂದ ಆಕ್ಸಿಡೆಂಟ್ ಪ್ರಕರಣ ಹೆಚ್ಚಾಗಿರೋದಕ್ಕೆ ಈ ಕಠಿಣ ಕ್ರಮಕೈಗೊಳ್ಳಲಾಗಿದೆ. ಒಂದು ವೇಳೆ ಆದೇಶ ಮೀರಿ ನಡೆದುಕೊಂಡರೆ ಕೆಲಸದಿಂದಲೇ ಅಮಾನತು ಮಾಡಲಾಗುತ್ತದೆ ಎಂದು ಇಲಾಖೆ ಎಚ್ಚರ ನೀಡಿದೆ. ನವೆಂಬರ್ 15 ರಿಂದ ಈ ಹೊಸ ಕಾಯ್ದೆ ಬಿಎಂಟಿಸಿ ಚಾಲಕರಿಗೆ ಅನ್ವಯವಾಗಲಿದೆ ಎಂಬುದಾಗಿ ಇಲಾಖೆ ತಿಳಿಸಿದೆ.

    ಆದೇಶದಲ್ಲಿ ಏನಿದೆ?
    1. ಬೆಂ.ಮ.ಸಾ.ಸಂಸ್ಥೆಯ ಚಾಲಕರು ಸಂಸ್ಥೆಯ ಬಸ್ಸುಗಳನ್ನು ಚಾಲನೆ ಮಾಡುವಾಗ ಮೊಬೈಲ್ ಬಳಸುವುದನ್ನು ಮತ್ತು ಮೊಬೈಲ್ ಇಟ್ಟುಕೊಳ್ಳುವುದನ್ನು ನವೆಂಬರ್ 15 ರಿಂದ ಜಾರಿಗೆ ಬರುವಂತೆ ಕಡ್ಡಾಯವಾಗಿ ನಿಷೇದಿಸಲಾಗಿದೆ.

    2. ಬಸ್ ಚಾಲನೆ ಮಾಡುವಾಗ ಚಾಲಕರು ಅವರ ಶರ್ಟ್, ಪ್ಯಾಂಟ್ ಅಥವಾ ಅಕ್ಕಪಕ್ಕದಲ್ಲಿ ಅಂದರೆ ಅವರ ಸುತ್ತಮುತ್ತ ಮೊಬೈಲ್ ಇಟ್ಟುಕೊಳ್ಳುವುದನ್ನು ಸಹ ನಿಷೇಧಿಸಲಾಗಿದೆ.

    3. ಚಾಲಕರು ಬಸ್ ಚಾಲನೆ ಮಾಡುವಾಗ ಮೊಬೈಲ್ ಬಳಸುವುದು ಕಂಡು ಬಂದಲ್ಲಿ ಅಂತಹ ಚಾಲಕರನ್ನು ಸೇವೆಯಿಂದ ಅಮಾನತುಗೊಳಿಸಿ ಅವರ ವಿರುದ್ಧ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗುವುದು/ ಕಠಿಣ ಶಿಕ್ಷಾದೇಶವನ್ನು ಹೊರಡಿಸಲಾಗುವುದು.

    4. ಒಂದು ವೇಳೆ ಚಾಲಕರು ಕೆಲಸಕ್ಕೆ ಬರುವಾಗ ಅವರು ಮೊಬೈಲ್‍ನ್ನು ತಂದಿದ್ದ ಪಕ್ಷದಲ್ಲಿ ಅದನ್ನು ಸ್ವಿಚ್ ಆಫ್ ಮಾಡಿ ಅವರ ಬಾಕ್ಸ್ ನಲ್ಲಿಟ್ಟು ಲಾಕ್ ಮಾಡಿ ನಂತರ ಕರ್ತವ್ಯದ ಮೇಲೆ ಹೋಗುವುದು. ಇದನ್ನು ಘಟಕದ ಮುಖ್ಯ ದ್ವಾರದಲ್ಲಿ ಭದ್ರತಾ ಸಿಬ್ಬಂದಿ ಅವಶ್ಯ ಪರಿಶೀಲಿಸುವುದು. ಒಂದು ವೇಳೆ ಈ ಸೌಲಭ್ಯವನ್ನು ದುರುಪಯೋಗಪಡಿಸಿಕೊಂಡಲ್ಲಿ, ಅದನ್ನು ಸಹ ಹಿಂಪಡೆಯಲಾಗುವುದು.

    5. ಅದೇ ರೀತಿ, ನಿರ್ವಾಹಕರು ಸಹ ಕರ್ತವ್ಯದ ಮೇಲೆ ಇರುವಾಗ ಯಥೇಚ್ಚವಾಗಿ ಮೊಬೈಲ್ ಬಳಸುತ್ತಿರುವುದನ್ನು ಗಮನಿಸಲಾಗಿದೆ. ಇದರಿಂದ ನಿರ್ವಾಹಕರು ಪ್ರಯಾಣಿಕರನ್ನು ಕರೆದು ಹತ್ತಿಸಿಕೊಳ್ಳುವುದು, ಪ್ರಯಾಣಿಕರಿಗೆ ಸಕಾಲದಲ್ಲಿ ಚೀಟಿ ನೀಡುವುದು, ಚಿಲ್ಲರೆ ನೀಡುವುದು, ಅವರಿಗೆ ಮಾರ್ಗದರ್ಶನ ನೀಡುವುದು ಇತ್ಯಾದಿ ಕೆಲಸ ಕಾರ್ಯಗಳ ಸಮರ್ಪಕ ನಿರ್ವಹಣೆಗೆ ಅಡಚಣೆ ಆಗುತ್ತಿರುವುದು ಕಂಡು ಬಂದಿದೆ. ಆದುದರಿಂದ ನಿರ್ವಾಹಕರು ಸಹ ಕರ್ತವ್ಯದ ಸಮಯದಲ್ಲಿ ಮೊಬೈಲ್ ಬಳಸಬಾರದು. ಆದರೆ ನಿರ್ವಾಹಕರು ಮೊಬೈಲ್ ಇಟ್ಟುಕೊಳ್ಳಲು ಮಾತ್ರ ಅವಕಾಶ ಕಲ್ಪಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಹಗಲು ಟೈಲರ್, ರಾತ್ರಿಯಾದರೆ ಹಂತಕ- 36 ಜನರನ್ನು ಕೊಂದ ಆರೋಪಿ ಕೊನೆಗೂ ಅರೆಸ್ಟ್

    ಹಗಲು ಟೈಲರ್, ರಾತ್ರಿಯಾದರೆ ಹಂತಕ- 36 ಜನರನ್ನು ಕೊಂದ ಆರೋಪಿ ಕೊನೆಗೂ ಅರೆಸ್ಟ್

    ಭೋಪಾಲ್: ಹಗಲಿನಲ್ಲಿ ಟೈಲರ್ ಕೆಲಸ ಮಾಡಿ ರಾತ್ರಿ ವೇಳೆ ಮನುಷ್ಯರನ್ನು ಕೊಲೆ ಮಾಡಿ ತೃಪ್ತಿ ಪಡುತ್ತಿದ್ದ ವಿಕೃತ ಮನಸ್ಸಿನ ವ್ಯಕ್ತಿಯನ್ನು ಮಧ್ಯಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

    ಭೋಪಾಲ್‍ನ ಮನ್‍ದೀಪ್ ನಿವಾಸಿ ಆದೇಶ್ ಖಾಮ್ರಾ ಬಂಧಿತ ಆರೋಪಿ. 2010 ರಲ್ಲಿ ಅಮರಾವತಿಯಲ್ಲಿ ಮೊದಲ ಬಾರಿಗೆ ಕೊಲೆ ಮಾಡಿದ್ದ. ಅಲ್ಲಿಂದ ಪ್ರಾರಂಭವಾದ ಆತನ ವಿಕೃತ ವರ್ತನೆಯಿಂದ ನಾಸಿಕ್, ಮಹಾರಾಷ್ಟ್ರ, ಮಧ್ಯಪ್ರದೇಶ, ಬಿಹಾರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ 36 ಜನರು ಕೊಲೆಯಾಗಿದ್ದಾರೆ.

    ಮಧ್ಯರಾತ್ರಿ ಭೋಪಾಲ್ ನಗರದ ಎಸ್‍ಪಿ ಬಿತ್ತು ಶರ್ಮಾ ನೇತೃತ್ವದ ತಂಡದ ಬಲೆಗೆ ಆದೇಶ್ ಸಿಕ್ಕಿಬಿದ್ದಿದ್ದು, ಆತನನ್ನು ವಿಚಾರಣೆಗೆ ಒಳಪಡಿಸಿದಾಗ ವಿಚಿತ್ರ ಸತ್ಯಗಳು ಬಯಲಿಗೆ ಬಂದಿವೆ. ನನ್ನ ಟಾರ್ಗೆಟ್ ಟ್ರಕ್ ಚಾಲಕರು ಎಂದು ಆದೇಶ್ ತಿಳಿಸಿದ್ದಾನೆ.

    ಟ್ರಕ್ ಚಾಲಕರೇ ಏಕೆ?
    ಟ್ರಕ್ ಚಾಲಕರ ಜೀವನ ಬಹಳ ಕಷ್ಟದಿಂದ ಕೂಡಿದೆ. ಅವರಿಗೆ ಮುಕ್ತಿ ನೀಡುವುದಕ್ಕಾಗಿ ನಾನು ಅವರನ್ನು ಕೊಲೆ ಮಾಡುತ್ತಿದ್ದೆ. ನಾನು ಕೊಲೆ ಮಾಡಿದ್ದು ಹೆಚ್ಚಾಗಿ ಹೆಚ್ಚಾಗಿ ಟ್ರಕ್ ಚಾಲಕರು ಹಾಗೂ ಅವರ ಸಹಾಯಕನನ್ನೆ ಎಂದು ಆದೇಶ್ ಒಪ್ಪಿಕೊಂಡಿದ್ದಾನೆ.

    ಆದೇಶ್ ತನ್ನ ಗ್ಯಾಂಗ್ ಜೊತೆಗೂಡಿ ಟ್ರಕ್ ಚಾಲಕರನ್ನು ಲೂಟಿ ಮಾಡುತ್ತಿದ್ದ. ಲೂಟಿ ಮಾಡಿದ ಬಳಿಕ ಉದ್ದನೆಯ ಹಗ್ಗವನ್ನು ಚಾಲಕರ ಕುತ್ತಿಗೆಗೆ ಬಿಗಿದು ಕೊಲೆ ಮಾಡುತ್ತಿದ್ದ. ಅಷ್ಟೇ ಅಲ್ಲದೆ ಮೃತ ದೇಹದ ಬಟ್ಟೆ ಬಿಚ್ಚಿ, ಹೆಣದ ಗುರುತು ಸಿಗದಂತೆ ಮಾಡಿ, ಬೆಟ್ಟ ಪ್ರದೇಶದಲ್ಲಿ ಎಸೆಯುತ್ತಿದ್ದ. ಇಲ್ಲವೇ ಮಣ್ಣಿನಲ್ಲಿ ಹೂಳುತ್ತಿದ್ದ. ಕೆಲವೊಮ್ಮೆ ಕೊಲೆ ಮಾಡಲು ಚಾಲಕರಿಗೆ ವಿಷ ಕುಡಿಸುತ್ತಿದ್ದ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

    ಆದೇಶ್ ಚಿಕ್ಕಪ್ಪ ಅಶೋಕ್ ಖಾಮ್ರಾ ಕೂಡಾ ಸುಮಾರು 100 ಟ್ರಕ್ ಚಾಲಕರನ್ನು ಕೊಲೆ ಮಾಡಿದ್ದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದಾನೆ. ಆತನ ಪ್ರೇರಣೆಯಿಂದಲೇ ಆದೇಶ್ ಈ ಕೃತ್ಯಕ್ಕೆ ಮುಂದಾಗಿರಬಹುದು ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಏಕಾಏಕಿ 4 ಸಾವಿರ ಚಾಲಕರು ಓಲಾದಿಂದ ಔಟ್!

    ಏಕಾಏಕಿ 4 ಸಾವಿರ ಚಾಲಕರು ಓಲಾದಿಂದ ಔಟ್!

    ಬೆಂಗಳೂರು: ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆ ನೀಡುತ್ತಿರುವ ಓಲಾ ಕಂಪೆನಿಯು ಏಕಾಏಕಿ ತನ್ನ 4 ಸಾವಿರ ಚಾಲಕರನ್ನು ಬ್ಲಾಕ್ ಲಿಸ್ಟ್ ಮಾಡಿ, ಸೇವೆಯಿಂದ ತೆಗೆದು ಹಾಕಿದೆ.

    ನಗರದಾದ್ಯಂತ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆ ನೀಡತ್ತಿರುವ ಓಲಾ ಕಂಪೆನಿಯು, ಗ್ರಾಹಕರ ಪ್ರತಿಕ್ರಿಯೆ ಆಧಾರದ ಮೇಲೆ 4 ಸಾವಿರ ಚಾಲಕರನ್ನು ಏಕಾಏಕಿ ಸೇವೆಯಿಂದ ತೆಗೆದು ಹಾಕಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಓಲಾವು ಗ್ರಾಹಕರೊಂದಿಗೆ ಚಾಲಕರು ಅಸಭ್ಯ ವರ್ತನೆ ಹಾಗೂ ಅಜಾಗರೂಕ ಚಾಲನೆ ಮಾಡಿದ್ದಲ್ಲದೇ, ಇನ್ನೂ ಅನೇಕ ದೂರುಗಳು ಚಾಲಕರ ವಿರುದ್ಧ ಹೆಚ್ಚಾಗಿ ಕೇಳಿ ಬಂದ್ದಿದ್ದವು. ಹೀಗಾಗಿ ಈ ನಿರ್ಣವನ್ನು ತೆಗೆದುಕೊಂಡಿದೆ ಎಂದು ತಿಳಿಸಿದೆ.

    ಓಲಾದ ಏಕಾಏಕಿ ನಿರ್ಧಾರದಿಂದ ಕಂಗಾಲಾಗಿರುವ ಚಾಲಕರುಗಳು ಸೋಮವಾರ ಓಲಾ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಈ ಬಗ್ಗೆ ಯಾವುದೇ ಮಾಹಿತಿಯನ್ನು ಕೊಡದೆ ಏಕಾಏಕಿ ಟರ್ಮಿನೇಟ್ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂಪೆನಿಯ ನಿರ್ಧಾರದಿಂದ ಕಷ್ಟಪಟ್ಟು ಸಾಲ ಮಾಡಿಕೊಂಡು ಕಾರು ಚಲಾಯಿಸುತ್ತಿದ್ದ ಎಷ್ಟೋ ಚಾಲಕರು ಬೀದಿಗೆ ಬಿದ್ದಿದ್ದಾರೆ. ಇದನ್ನೂ ಓದಿ: ಮಹಿಳೆಗೆ ನೀಲಿ ಚಿತ್ರ ತೋರಿಸಿದ ಬೆಂಗ್ಳೂರಿನ ಓಲಾ ಡ್ರೈವರ್!

    ಕೇವಲ ಗ್ರಾಹಕರ ಪ್ರತಿಕ್ರಿಯೆ ಪಡೆದು ಟರ್ಮಿನೇಟ್ ಮಾಡಿರುವುದು ಎಷ್ಟು ಸರಿ, ಈ ಬಗ್ಗೆ ತನಿಖೆ ನಡೆಸಿ ಸಂಬಂಧಪಟ್ಟವರನ್ನು ತೆಗೆದು ಹಾಕಬಹುದಾಗಿತ್ತು. ಯಾವುದೇ ಮಾಹಿತಿ ನೀಡದೇ ಕ್ಷುಲ್ಲಕ ವಿಚಾರಗಳಿಗೆ ಬಹುತೇಕ ಚಾಲಕರನ್ನು ಓಲಾವು ತೆಗೆದು ಹಾಕಿದೆ ಎಂದು ಚಾಲಕರೋರ್ವರು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಲೆಗ್ ಪೀಸ್‍ಗಾಗಿ ಗಲಾಟೆ ಶುರು: ಕಿವಿ ಪೀಸ್ ಕಚ್ಚಿ ತೆಗೆಯೋ ಮೂಲಕ ಜಗಳ ಎಂಡ್

    ಲೆಗ್ ಪೀಸ್‍ಗಾಗಿ ಗಲಾಟೆ ಶುರು: ಕಿವಿ ಪೀಸ್ ಕಚ್ಚಿ ತೆಗೆಯೋ ಮೂಲಕ ಜಗಳ ಎಂಡ್

    ಉಡುಪಿ: ಚಾಲಕರಿಬ್ಬರು ಬಿರಿಯಾನಿಯ ಲೆಗ್ ಪೀಸ್‍ಗಾಗಿ ಗಲಾಟೆ ಮಾಡಿಕೊಂಡು, ಕೊನೆಗೆ ಕಿವಿ ಕಚ್ಚಿ ತಿನ್ನುವ ಮೂಲಕ ಜಗಳ ಕೊನೆಗೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.

    ಚಾಲಕರಾದ ಮಧು ಮತ್ತು ಸುರೇಶ್ ಲೆಗ್ ಪೀಸ್‍ಗಾಗಿ ಜಗಳವಾಡಿದವರು. ಶ್ರೀಕೃಷ್ಣ ಮಠದ ಪಾರ್ಕಿಂಗ್ ಮೈದಾನದಲ್ಲಿ ಕುಡಿದ ಅಮಲಿನಲ್ಲಿದ್ದ ಇಬ್ಬರು ಕಿವಿ, ಮುಖ, ಕೈಗೆ ಕಚ್ಚಿಕೊಂಡು ವಿಲಕ್ಷಣವಾಗಿ ವರ್ತಿಸಿದ್ದಾರೆ.

    ನಡೆದಿದ್ದು ಏನು?
    ಸುರೇಶ ಹಾಗೂ ಮಧು ಒಂದೇ ತಟ್ಟೆಯಲ್ಲಿ ತಿಂದು, ಉಂಡು-ಕುಡಿದ ಸ್ನೇಹಿತರು. ಇಂದು ಉಡುಪಿಯ ಕೃಷ್ಣಮಠಕ್ಕೆ ಉತ್ತರ ಕರ್ನಾಟಕದಿಂದ ಪ್ರವಾಸಿಗರನ್ನು ಕರೆತಂದು ತಂದಿದ್ದರು. ಕುಡಿದ ಅಮಲಿನಲ್ಲಿ ಮಠದ ಪಾರ್ಕಿಂಗ್ ಜಾಗದಲ್ಲಿದ್ದ ಹೋಟೆಲ್‍ನಲ್ಲಿ ಊಟ ಮಾಡುತ್ತಿದ್ದರು. ಈ ವೇಳೆ ಇಬ್ಬರೂ ಬಿರಿಯಾನಿಯ ಲೆಗ್ ಪೀಸ್ ಗಾಗಿ ನಡೆದ ಜಗಳ ಪ್ರಾರಂಭಿಸಿದ್ದು, ಪರಸ್ಪರ ಹೊಡೆದಾಡಿ ಕಿವಿ, ಮುಖ, ಕೈಗೆ ಕಚ್ಚಿಕೊಂಡ ವಿಲಕ್ಷಣ ವರ್ತಿಸಿದ್ದಾರೆ. ಅಷ್ಟೇ ಅಲ್ಲದೇ ಜಗಳದಲ್ಲಿ ಚಾಲಕ ಮಧು ಕಿವಿಯನ್ನು ಮತ್ತೊಬ್ಬ ಚಾಲಕ ಸುರೇಶ ಕಚ್ಚಿ ಹರಿದಿದ್ದಾನೆ. ಕುಡಿದ ಅಮಲಿನಲ್ಲಿ ಆತ ಬಿರಿಯಾನಿ ಜೊತೆಗೆ ಕಿವಿಯನ್ನೂ ತಿಂದಿರುವ ಶಂಕೆ ವ್ಯಕ್ತಪಾಗಿದೆ. ಪ್ರಕರಣದ ಕುರಿತು ಚಾಲಕ ಮಧು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.