Tag: Driving Licence

  • ರಸ್ತೆಯಲ್ಲಿ ನಮಾಜ್ ಮಾಡಿದ್ರೆ ಪಾಸ್‌ಪೋರ್ಟ್‌, ಡ್ರೈವಿಂಗ್‌ ಲೈಸೆನ್ಸ್ ರದ್ದು: ಮಿರತ್‌ ಪೊಲೀಸರಿಂದ ಎಚ್ಚರಿಕೆ

    ರಸ್ತೆಯಲ್ಲಿ ನಮಾಜ್ ಮಾಡಿದ್ರೆ ಪಾಸ್‌ಪೋರ್ಟ್‌, ಡ್ರೈವಿಂಗ್‌ ಲೈಸೆನ್ಸ್ ರದ್ದು: ಮಿರತ್‌ ಪೊಲೀಸರಿಂದ ಎಚ್ಚರಿಕೆ

    ಲಕ್ನೋ: ಈದ್-ಉಲ್-ಫಿತರ್ ಮತ್ತು ರಂಜಾನ್‌ನ (Ramzan) ಕೊನೆಯ ಶುಕ್ರವಾರದಂದು ರಸ್ತೆಗಳಲ್ಲಿ ನಮಾಜ್ ಮಾಡಿದರೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವುದಾಗಿ ಉತ್ತರ ಪ್ರದೇಶದ (Uttar Pradesh) ಮಿರತ್‌ (Meerut) ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

    ರಸ್ತೆಗಳಲ್ಲಿ ನಮಾಜ್‌ ಮಾಡಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಅಂತಹವರ ಪಾಸ್‌ಪೋರ್ಟ್‌ (Passport) ಹಾಗೂ ಚಾಲನಾ ಪರವಾನಗಿಯನ್ನೂ (Driving Licence) ರದ್ದುಗೊಳಿಸಬಹುದು ಎಂದು ಮೀರತ್ ಪೊಲೀಸ್ ಅಧೀಕ್ಷಕ (ನಗರ) ಆಯುಷ್ ವಿಕ್ರಮ್ ಸಿಂಗ್ ಎಚ್ಚರಿಸಿದ್ದಾರೆ. ಸ್ಥಳೀಯ ಮಸೀದಿಗಳು ಅಥವಾ ಗೊತ್ತುಪಡಿಸಿದ ಈದ್ಗಾಗಳಲ್ಲಿ ಈದ್ ಪ್ರಾರ್ಥನೆ ಸಲ್ಲಿಸಬೇಕು ಮತ್ತು ಯಾರೂ ರಸ್ತೆಗಳಲ್ಲಿ ನಮಾಜ್ ಮಾಡಬಾರದು ಎಂದಿದ್ದಾರೆ.ಇದನ್ನೂ ಓದಿ: ಜಮ್ಮು-ಕಾಶ್ಮೀರದ ಕಥುವಾದಲ್ಲಿ ಎನ್‌ಕೌಂಟರ್‌ – ನಾಲ್ವರು ಪೊಲೀಸರು ಹುತಾತ್ಮ, ಇಬ್ಬರು ಉಗ್ರರ ಹತ್ಯೆ

    ಈ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ಮತ್ತು ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ನಾಯಕ ಜಯಂತ್ ಸಿಂಗ್ ಚೌಧರಿ, ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದರೆ ಅಂತವರ ಪಾಸ್‌ಪೋರ್ಟ್‌ ಮತ್ತು ಪರವಾನಗಿಗಳನ್ನು ರದ್ದುಗೊಳಿಸಬಹುದು. ನ್ಯಾಯಾಲಯದಿಂದ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಇಲ್ಲದೆ ಹೊಸ ಪಾಸ್‌ಪೋರ್ಟ್ ಪಡೆಯುವುದು ಕಷ್ಟಕರವಾಗುತ್ತದೆ. ನ್ಯಾಯಾಲಯದಿಂದ ವ್ಯಕ್ತಿಗಳು ದೋಷಮುಕ್ತರಾಗುವವರೆಗೆ ಅಂತಹ ದಾಖಲೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

    ಮೀರತ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ವಿಪಿನ್ ಟಾಡಾ ಪ್ರತಿಕ್ರಿಯಿಸಿ, ಹಬ್ಬದ ಸಮಯದಲ್ಲಿ, ಸಾಮಾಜಿಕ ಮಾಧ್ಯಮಗಳ ಮೂಲಕ ವದಂತಿಗಳನ್ನು ಹರಡಿದರೆ ಅಥವಾ ಅಶಾಂತಿಯನ್ನು ಉಂಟು ಮಾಡಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಾವು ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ ಇಡುತ್ತಿದ್ದೇವೆ. ಕೋಮು ಸಾಮರಸ್ಯವನ್ನು ಹಾಳು ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

    ಭದ್ರತೆಗಾಗಿ ಹಿಂದಿನ ಅನುಭವಗಳ ಆಧಾರದ ಮೇಲೆ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ ಮತ್ತು ಅಲ್ಲಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ. ಶಾಂತಿಯನ್ನು ಕಾಪಾಡಲು ಮತ್ತು ಮುಂಬರುವ ಹಬ್ಬಗಳನ್ನು ಸುಗಮವಾಗಿ ಆಚರಿಸಲು ಆಡಳಿತವು ಪ್ರಮುಖ ನಾಗರಿಕರು ಮತ್ತು ಧಾರ್ಮಿಕ ನಾಯಕರೊಂದಿಗೆ ಸಭೆ ನಡೆಸಲಾಗಿದೆ. ಕೆಲವೆಡೆ ಡ್ರೋನ್‌ಗಳನ್ನು ನಿಯೋಜಿಸಲಾಗುವುದು. ಎಲ್ಲಾ ಸೂಕ್ಷ್ಮ ಸ್ಥಳಗಳಲ್ಲಿ ಮಫ್ತಿಯಲ್ಲಿ ಅಧಿಕಾರಿಗಳನ್ನು ಸಹ ನಿಯೋಜಿಸಲಾಗುವುದು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ 50 ಕೋಟಿ ರೂ.ನಿಗದಿ: ಸಚಿವ ರಾಜಣ್ಣ

  • ಬೆಂಗಳೂರು: ಫುಟ್‌ಪಾತ್ ಮೇಲೆ ವಾಹನ ಚಲಾಯಿಸಿದ್ರೆ ಡಿಎಲ್ ಅಮಾನತು!

    ಬೆಂಗಳೂರು: ಫುಟ್‌ಪಾತ್ ಮೇಲೆ ವಾಹನ ಚಲಾಯಿಸಿದ್ರೆ ಡಿಎಲ್ ಅಮಾನತು!

    ಬೆಂಗಳೂರು: ಫುಟ್‌ಪಾತ್ ಮೇಲೆ ವಾಹನ ಚಲಾಯಿಸುವವರಿಗೆ ಬಿಸಿ ಮುಟ್ಟಿಸಲು ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ. ಇನ್ಮುಂದೆ ಫುಟ್‌ಪಾತ್‌ನಲ್ಲಿ ರೈಡಿಂಗ್ ಮಾಡಿದರೆ ಡ್ರೈವಿಂಗ್ ಲೈಸೆನ್ಸ್ (ಡಿಎಲ್) ಅಮಾನತು ಮಾಡುವ ನಿರ್ಧಾರ ಕೈಗೊಂಡಿದ್ದಾರೆ.

    ಫುಟ್‌ಪಾತ್ ಮೇಲೆ ಬೈಕ್, ಕಾರು ಓಡಿಸುವ ಸವಾರರಿಗೆ ಸಂಚಾರ ವಿಭಾಗದ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪಾದಾಚಾರಿ ರಸ್ತೆಯಲ್ಲಿ ವಾಹನ ಚಲಾಯಿಸಿದರೆ ಡಿಎಲ್ ಅಮಾನತು ಮಾಡುವುದಾಗಿ ಎಚ್ಚರಿಸಿದ್ದಾರೆ.

    ಇದರ ಜೊತೆಗೆ ಕೇಸ್ ದಾಖಲಿಸಿ ಸೂಕ್ತ ದಂಡ ವಿಧಿಸಲಿದ್ದಾರೆ. ಫುಟ್‌ಪಾತ್ ರೈಡಿಂಗ್ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರ ನಿರ್ಧಾರಿಸಿದ್ದಾರೆ. ಪಾದಚಾರಿಗಳ ಬಳಕೆಗೆ ಫುಟ್‌ಪಾತ್ ಇರೋದು. ಅಲ್ಲಿ ವಾಹನ ಚಲಾಯಿಸುವಂತಿಲ್ಲ ಎಂದು ಸೂಚಿಸಿದ್ದಾರೆ.

    ಪಾದಚಾರಿಗಳು ಹೊರತುಪಡಿಸಿ ಬೇರೆ ಯಾರೇ ಬಳಸಿದರೂ ಕ್ರಮ ಆಗಲಿದೆ. ಪಾದಚಾರಿಗಳ ಸುಗಮ ಓಡಾಟಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪೊಲೀಸರು ಕಠಿಣ ನಿಯಮ ರೂಪಿಸಿದ್ದಾರೆ.

    ಇತ್ತೀಚೆಗೆ ಟ್ರಾಫಿಕ್‌ನಿಂದ ತಪ್ಪಿಸಿಕೊಳ್ಳಲು ನಿಯಮ ಉಲ್ಲಂಘಿಸಿ ಫುಟ್‌ಪಾತ್ ಮೇಲೆ ವಾಹನ ಚಲಾಯಿಸಿಕೊಂಡು ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಪಾದಚಾರಿಗಳಿಗೆ ಓಡಾಟಕ್ಕೆ ಕಿರಿಕಿರಿಯಾಗುತ್ತಿದೆ. ಫುಟ್‌ಪಾತ್‌ನಲ್ಲಿ ಬೈಕ್ ಅಷ್ಟೇ ಅಲ್ಲ, ಕೆಲವರು ಕಾರುಗಳನ್ನೂ ಚಲಾಯಿಸಿರುವುದು ಕಂಡುಬಂದಿದೆ. ಇದೆಲ್ಲವನ್ನು ತಪ್ಪಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ.

  • ‌Expressway- ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ರೆ ಡಿಎಲ್ ರದ್ದು: ಅಲೋಕ್ ಕುಮಾರ್

    ‌Expressway- ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ರೆ ಡಿಎಲ್ ರದ್ದು: ಅಲೋಕ್ ಕುಮಾರ್

    – ಮೊಬೈಲ್ ಬಳಕೆ ಮಾಡಿದ್ರೆ ಕೇಸ್

    ರಾಮನಗರ: ಯಾರಾದರೂ ಸಂಚಾರಿ ನಿಯಮ ಉಲ್ಲಂಘನೆ ಮಾಡಿದರೆ ಡಿಎಲ್‌ (Driving Licence) ರದ್ದು ಮಾಡುತ್ತೇವೆ.  ಡ್ರೈವಿಂಗ್ ವೇಳೆ ಮೊಬೈಲ್ ಬಳಕೆ, ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ಹಾಗೂ ಮಿತಿ ಮೀರಿ ವಾಹನ ಚಾಲನೆ ಮಾಡಿದರೆ ಕೇಸ್ (Case) ಹಾಕುವ ಕೆಲಸ ಮಾಡುತ್ತೇವೆ ಎಂದು ಸಂಚಾರಿ ಮತ್ತು ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ (Alok Kumar) ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

    ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆ ಇಂದು ಎನ್‌ಹೆಚ್ ಅಧಿಕಾರಿಗಳ ಜೊತೆ ಅಲೋಕ್ ಕುಮಾರ್ ಹೆದ್ದಾರಿಯ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಈ ರಸ್ತೆಯಲ್ಲಿ ಬಹಳ ಬಾರಿ ಸಂಚರಿಸಿದ್ದೇನೆ. ಕಳೆದ ಐದಾರು ತಿಂಗಳಿನಿಂದ ರಾಮನಗರ (Ramanagara) ವ್ಯಾಪ್ತಿಯಲ್ಲಿ 58ಕ್ಕೂ ಹೆಚ್ಚು ಜನ ಮೃತ ಪಟ್ಟಿದ್ದಾರೆ. 48ಕ್ಕೂ ಹೆಚ್ಚು ಅಪಘಾತಗಳಾಗಿವೆ. ಎಲ್ಲೆಲ್ಲಿ ಅಪಘಾತ ನಡೆದಿದೆ ಆ ಸ್ಥಳಗಳ ಸಮಸ್ಯೆ ಬಗ್ಗೆ ಪರಿಶೀಲಿಸಿದ್ದೆವೆ. ಹೆದ್ದಾರಿಯಲ್ಲಿ ಆಗಮನ ಮತ್ತು ನಿರ್ಗಮನದ ಸಮಸ್ಯೆ ಇದೆ. ಕೆಲವೆಡೆ ರಸ್ತೆಯಲ್ಲಿ ತೀವ್ರ ತಿರುವುಗಳಿವೆ. ಇದರಿಂದ ವಾಹನಗಳು ಡಿವೈಡರ್ ಹಾರುತ್ತಿವೆ. ಹೈವೆಯಲ್ಲಿ ಲೇನ್ ಶಿಸ್ತನ್ನು ಬಳಸಬೇಕು. ಹೀಗಾಗಿ ಹೈವೇ ಪಟ್ರೋಲಿಂಗ್ (Patroling) ಅಗತ್ಯ ಇದೆ ಎಂದರು. ಇದನ್ನೂ ಓದಿ: ಬಿಜೆಪಿ ನಾಯಕರ ಬೀದಿ ಜಗಳ; ಅಚ್ಚರಿ ಮೂಡಿಸಿದ ಹೈಕಮಾಂಡ್ ಮೌನ

    ಈಗಾಗಲೇ ನಾಲ್ಕು ಹೈವೇ ಪಟ್ರೊಲಿಂಗ್ ವಾಹನಗಳಲ್ಲಿ ಗಸ್ತು ಮಾಡಲಾಗುತ್ತಿದೆ. ಹೈ ಸ್ಪೀಡ್ ಲಿಮಿಟ್ ತಡೆಗೆ ಸ್ಪೀಡ್ ರೆಡಾರ್ (Speed Radar) ಅಳವಡಿಕೆ ಮಾಡುತ್ತೇವೆ. ಯಾರಾದರೂ ಸಂಚಾರಿ ನಿಯಮ ಉಲ್ಲಂಘನೆ ಮಾಡಿದರೆ ಡಿಎಲ್ ರದ್ದು ಮಾಡುತ್ತೇವೆ. ಡ್ರೈವಿಂಗ್ ವೇಳೆ ಮೊಬೈಲ್ ಬಳಕೆ, ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ಹಾಗೂ ಮಿತಿ ಮೀರಿ ವಾಹನ ಚಾಲನೆ ಮಾಡಿದರೆ ಕೇಸ್ ಹಾಕುವ ಕೆಲಸ ಮಾಡುತ್ತೇವೆ. ಸದ್ಯ ಕನಿಷ್ಠ 25% ರಷ್ಟು ಅಪಘಾತ ಕಡಿಮೆ ಮಾಡುವ ಗುರಿ ಇದೆ. ಈ ಬಗ್ಗೆ ಹೆದ್ದಾರಿ ಪ್ರಾಧಿಕಾರಕ್ಕೆ ಸಲಹೆ, ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: LKGಯಿಂದ ಸ್ನಾತಕೋತ್ತರ ಪದವಿವರೆಗೂ ಕೆಂಪೇಗೌಡರ ಪಠ್ಯ ಸೇರಿಸಿ: ನಂಜಾವಧೂತ ಶ್ರೀ

    ದಶಪಥ ಹೆದ್ದಾರಿಯಲ್ಲಿ ವಾಹನ ಸವಾರರು ನಿಯಮ ಪಾಲನೆ ಮಾಡಬೇಕು. ಅಮೂಲ್ಯವಾದ ಜೀವಕ್ಕಾಗಿ ನಿಧಾನವಾಗಿ ಚಲಿಸಿ. ನಮ್ಮ ಕುಟುಂಬಕ್ಕೆ ನಾವುಗಳೇ ಮುಖ್ಯ. ಹಾಗಾಗಿ ಸುಗಮ ಸಂಚಾರಕ್ಕೆ ಸೀಟ್ ಬೆಲ್ಟ್, ಇಂಡಿಕೇಟರ್ ಬಳಕೆ, ಸ್ಪೀಡ್ ಲಿಮಿಟ್‌ನಲ್ಲಿಯೇ ವಾಹನ ಚಲಾಯಿಸಬೇಕು. ದಶಪಥ ಹೆದ್ದಾರಿಯಲ್ಲಿ ಗರಿಷ್ಟ ಮಿತಿ 100 ಕಿ.ಮೀ ಇದೆ. ತಿರುವುಗಳಲ್ಲಿ 60- 80 ವೇಗ ಮಿತಿ ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ: ರೇಣುಕಾಚಾರ್ಯ

    ಹೆದ್ದಾರಿಯಲ್ಲಿ ಎನ್‌ಹೆಚ್ ಅಧಿಕಾರಿಗಳ ನ್ಯೂನ್ಯತೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ನಮ್ಮ ಸೂಚನೆಗಳನ್ನು ಹೈವೇ ಪ್ರಾಧಿಕಾರ ಪಾಲಿಸದಿದ್ದರೆ, ಅಧಿಕಾರಿಗಳ ಮೇಲೆ ಕ್ರಮ ವಹಿಸುತ್ತೇವೆ. ನಾವು ನೀಡಿರುವ ಕಾಲವಕಾಶವನ್ನು ಮೀರಿದರೆ, ಕ್ರಮ ಖಂಡಿತ ಎಂದರು. ಹೆದ್ದಾರಿ ಪ್ರಾಧಿಕಾರ ಅಂಬುಲೆನ್ಸ್, ಹೈವೆ ಪಟ್ರೋಲ್ ವ್ಯವಸ್ಥೆ ಮಾಡಬೇಕು. ಅಲ್ಲಲ್ಲಿ ತುರ್ತು ಗೇಟ್‌ಗಳನ್ನು ಸಿದ್ಧಪಡಿಸಬೇಕು. ಹಲವೆಡೆ ಸ್ಕೈವಾಕ್ ನಿರ್ಮಾಣ ಮಾಡಬೇಕು. ಈ ಬಗ್ಗೆ ಹೆದ್ದಾರಿ ಪ್ರಾಧಿಕಾರಕ್ಕೆ ಒತ್ತಡವನ್ನು ಹೇರುತ್ತೇವೆ ಎಂದರು. ಇದನ್ನೂ ಓದಿ: ಅಕ್ಕಿ ದೊರೆತ ತಕ್ಷಣದಿಂದಲೇ ಅನ್ನಭಾಗ್ಯ ಜಾರಿ: ಸಿದ್ದರಾಮಯ್ಯ

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸ್ ಬ್ಯಾನ್ ಮಾಡಿದ ತಾಲಿಬಾನ್

    ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸ್ ಬ್ಯಾನ್ ಮಾಡಿದ ತಾಲಿಬಾನ್

    ಕಾಬೂಲ್: ಆಫ್ಘಾನಿಸ್ತಾನದ ತಾಲಿಬಾನ್ ಆಡಳಿತವು ಕಾಬೂಲ್ ಮತ್ತು ಇತರ ಪ್ರಾಂತ್ಯಗಳಲ್ಲಿ ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸ್ (ವಾಹನ ಪರವಾನಗಿ) ನೀಡುವುದನ್ನು ನಿಲ್ಲಿಸಿದೆ.

    ಆಹಾರ ಮತ್ತು ಇತರ ಅಗತ್ಯ ವಸ್ತುಗಳ ಸರಬರಾಜುಗಳ ತೀವ್ರ ಕೊರತೆಯೊಂದಿಗೆ ದೇಶವು ವಿನಾಶಕಾರಿ ಮಾನವೀಯ ಬಿಕ್ಕಟ್ಟಿನಿಂದ ಬಳಲುತ್ತಿರುವ ಸಂದರ್ಭದಲ್ಲಿ ಈ ನಿಷೇಧವನ್ನು ಹೇರಲಾಗಿದೆ. ಇದನ್ನೂ ಓದಿ: ಮೋದಿ ಗಿಫ್ಟ್‌ಗೆ ವಿಶೇಷ ಸ್ಥಾನಕೊಟ್ಟ ಡೆನ್ಮಾರ್ಕ್ ಪ್ರಧಾನಿ

    ತಾಲಿಬಾನ್ ವಶಪಡಿಸಿಕೊಳ್ಳುವ ಮೊದಲು ಅಫ್ಘಾನಿಸ್ತಾನದಲ್ಲಿ ಮಹಿಳೆಯರು ಕಾಬೂಲ್ ಸೇರಿದಂತೆ ದೇಶದ ಕೆಲವು ಪ್ರಮುಖ ನಗರಗಳಲ್ಲಿ ವಾಹನ ಚಲಾಯಿಸುವ ಹಕ್ಕು ಹೊಂದಿದ್ದರು. ಆದರೆ ತಾಲಿಬಾನ್ ಈಗ ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸ್ ವಿತರಿಸುವುದನ್ನು ನಿಲ್ಲಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಆಫ್ಘನ್ ಸರ್ಕಾರದ ಪತನ ಮತ್ತು ತಾಲಿಬಾನ್ ಅಧಿಕಾರಕ್ಕೆ ಮರಳಿದ ನಂತರ ಆಫ್ಘಾನಿಸ್ತಾನದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿ ಹದಗೆಟ್ಟಿದೆ. ದೇಶದಲ್ಲಿ ಹೋರಾಟ ಕೊನೆಗೊಂಡಿದ್ದರೂ, ಮಾನವ ಹಕ್ಕುಗಳ ಉಲ್ಲಂಘನೆ ನಿರಂತರವಾಗಿ ನಡೆಯುತ್ತಿದೆ. ಜೊತೆಗೆ ಮಹಿಳೆಯರ ಹಕ್ಕುಗಳನ್ನೂ ಕಸಿಯಲಾಗುತ್ತಿದೆ. ಇದನ್ನೂ ಓದಿ: 11 ಲಕ್ಷ ಪ್ರಜೆಗಳು ಇದೀಗ ರಷ್ಯಾದ ಒತ್ತೆಯಾಳುಗಳು: ಉಕ್ರೇನ್ ಆರೋಪ

    ಈಚೆಗಷ್ಟೇ ತಾಲಿಬಾನ್ ಆಡಳಿತವು, ಆಫ್ಘಾನಿಸ್ತಾನದಲ್ಲಿ 6ನೇ ತರಗತಿ ಮುಗಿಸಿದ ನಂತರ ಹೆಣ್ಣುಮಕ್ಕಳು ಶಾಲೆಗೆ ಹೋಗುವುದನ್ನು ನಿಷೇಧಿಸಿತು. ಈ ನಡೆ ವಿಶ್ವಾದ್ಯಂತ ಖಂಡನೆಗೆ ಕಾರಣವಾಯಿತು. ‘ಶಿಕ್ಷಕರ ಕೊರತೆ ಇರುವುದರಿಂದ ಈ ಕ್ರಮಕೈಗೊಳ್ಳಲಾಗಿದೆ. ಶೀಘ್ರದಲ್ಲೇ 6ನೇ ತರಗತಿ ನಂತರವೂ ಹೆಣ್ಣುಮಕ್ಕಳು ಶಾಲೆಗಳಲ್ಲಿ ಶಿಕ್ಷಣ ಕಲಿವುದನ್ನು ಪುನಾರಂಭಿಸಲಾಗುವುದು ಎಂದು ತಾಲಿಬಾನ್ ಹೇಳಿತ್ತು.

    ಆಫ್ಘಾನಿಸ್ತಾನ ಈಗ ವಿಶ್ವದಲ್ಲೇ ಅತಿ ಹೆಚ್ಚು ತುರ್ತು ಆಹಾರ ಅಭದ್ರತೆಯ ಸಮಸ್ಯೆ ಎದುರಿಸುತ್ತಿದೆ. ದೇಶದಲ್ಲಿ ಶೇ.95ರಷ್ಟು ಜನತೆ ಆಹಾರ ಕೊರತೆಯಿಂದ ಬಳಲುತ್ತಿದ್ದಾರೆ. ಇದನ್ನೂ ಓದಿ: ಪುಟಿನ್‌ಗೆ ಕ್ಯಾನ್ಸರ್‌ – ಯುದ್ಧದ ವೇಳೆ ಅಧಿಕಾರ ಹಸ್ತಾಂತರ ಸಾಧ್ಯತೆ!

  • ಡಿಎಲ್‌ ಇಲ್ಲದೇ 70 ವರ್ಷ ಕಾರು ಚಾಲನೆ – ಫಸ್ಟ್‌ ಟೈಂ ಪೊಲೀಸರಿಗೆ ಸಿಕ್ಕಿಬಿದ್ದ ವೃದ್ಧ!

    ಡಿಎಲ್‌ ಇಲ್ಲದೇ 70 ವರ್ಷ ಕಾರು ಚಾಲನೆ – ಫಸ್ಟ್‌ ಟೈಂ ಪೊಲೀಸರಿಗೆ ಸಿಕ್ಕಿಬಿದ್ದ ವೃದ್ಧ!

    ಲಂಡನ್:‌ ಚಾಲನ ಪರವಾನಗಿ (ಡಿಎಲ್‌) ಇಲ್ಲದೆಯೇ 70 ವರ್ಷಗಳ ಕಾಲ ಕಾನೂನು ಬಾಹಿರವಾಗಿ ವಾಹನ ಚಲಾಯಿಸಿಕೊಂಡಿದ್ದ ವ್ಯಕ್ತಿ ಮೊದಲ ಬಾರಿಗೆ ಪೊಲೀಸರಿಗೆ ಸಿಕ್ಕಿಬಿದ್ದಿರುವ ಪ್ರಸಂಗ ಇಂಗ್ಲೆಂಡ್‌ನ ಬುಲ್ವೆಲ್‌ನಲ್ಲಿ ನಡೆದಿದೆ.

    83 ವಯಸ್ಸಿನ ವೃದ್ಧ 70 ವರ್ಷಗಳ ಕಾಲ ಡ್ರೈವಿಂಗ್‌ ಲೈಸೆನ್ಸ್‌ ಇಲ್ಲದೇ ಬ್ಲ್ಯೂ ಮಿನಿ ವಾಹನ ಚಲಾಯಿಸಿಕೊಂಡು ಇದ್ದರು. ಇವರನ್ನು ಮೊದಲ ಬಾರಿಗೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವಿಚಾರಣೆಗೆ ಒಳಪಡಿಸಿದಾಗ, ತಾನು 12 ವಯಸ್ಸಿನ ಹುಡುಗನಾಗಿದ್ದಾಗಿನಿಂದಲೂ ವಾಹನ ಚಲಾಯಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಲಸಿಕೆ ಕಡ್ಡಾಯ ನಿಯಮ ವಿರೋಧಿಸಿ ತೀವ್ರ ಪ್ರತಿಭಟನೆ – ರಹಸ್ಯ ಸ್ಥಳಕ್ಕೆ ಕೆನಡಾ ಪಿಎಂ ಸ್ಥಳಾಂತರ

    70 ವರ್ಷಗಳ ಕಾಲ ಸಾರ್ವಜನಿಕ ರಸ್ತೆಗಳಲ್ಲಿ ವಾಹನ ಚಲಾಯಿಸಿರುವ ಇವರು ಇದುವರೆಗೆ ಯಾವುದೇ ಅಪಘಾತಕ್ಕೆ ಒಳಗಾಗಿಲ್ಲ ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ. ವೃದ್ಧನನ್ನು ಇದುವರೆಗೂ ಪೊಲೀಸರು ತಪಾಸಣೆಗೆ ಒಳಪಡಿಸದಿರುವುದು ವಿಲಕ್ಷಣವಾಗಿದೆ.

    ನಾಟಿಂಗ್‌ಹ್ಯಾಮ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಎಎನ್‌ಪಿಆರ್‌ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಸ್ವಲ್ಪ ದೂರದ ಪ್ರಯಾಣಗಳಿದ್ದರೂ ಕ್ಯಾಮರಾ ಕಣ್ಣಿಗೆ ಬೀಳುವುದು ಗ್ಯಾರಂಟಿ. ಆದ್ದರಿಂದ ಚಾಲಕರು ದಾಖಲೆಗಳನ್ನು ಕ್ರಮಬದ್ಧವಾಗಿ ಹೊಂದಿರುವುದು ಮುಖ್ಯ ಎಂದು ಸಂಚಾರ ಪೊಲೀಸರು ಈಗಾಗಲೇ ಸಾಕಷ್ಟು ಬಾರಿ ಜನರಿಗೆ ಮನವರಿಕೆ ಮಾಡಿದ್ದಾರೆ. ಆದರೂ ಎಷ್ಟೋ ಜನ ನಿಯಮ ಉಲ್ಲಂಘಿಸುತ್ತಿದ್ದಾರೆ. ಇದನ್ನೂ ಓದಿ: ಇರಾಕ್ ಏರ್‌ಸ್ಟ್ರೈಕ್ – 6 ಐಸಿಸ್‌ ಉಗ್ರರ ಹತ್ಯೆ

    83 ವರ್ಷದ ವೃದ್ಧ ಚಾಲಕನಿಗೆ ಯಾವ ಶಿಕ್ಷೆ ನೀಡಲಾಗಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.

  • ಹೆಲ್ಮೆಟ್ ಮರೆತ್ರೆ ದಂಡ, ಡಿಎಲ್ ಅಮಾನತು – ಸಾರಿಗೆ ಇಲಾಖೆಯಿಂದ ಮಹತ್ವದ ಆದೇಶ

    ಹೆಲ್ಮೆಟ್ ಮರೆತ್ರೆ ದಂಡ, ಡಿಎಲ್ ಅಮಾನತು – ಸಾರಿಗೆ ಇಲಾಖೆಯಿಂದ ಮಹತ್ವದ ಆದೇಶ

    ಬೆಂಗಳೂರು: ಹೆಲ್ಮೆಟ್ ಹಾಕದ ದ್ವಿಚಕ್ರ ವಾಹನಗಳನ್ನು ಹತ್ತುವವರು ಇನ್ಮುಂದೆ ಎಚ್ಚರಿಕೆಯಿಂದಿರಬೇಕು. ರಾಜ್ಯ ಸಾರಿಗೆ ಇಲಾಖೆ ಮಹತ್ವದ ಆದೇಶ ಹೊರಡಿಸಿದ್ದು, ಹೆಲ್ಮೆಟ್ ಹಾಕದಿದ್ದರರೆ ದಂಡದ ಜೊತೆ ಮೂರು ತಿಂಗಳು ನಿಮ್ಮ ಚಾಲನಾ ಪರವಾನಿಗೆ (ಡಿಎಲ್) ರದ್ದಾಗಲಿದೆ. ಮೋಟಾರು ಕಾಯ್ದೆ 1988ರ ಕಲಂ 194ರ ಅನ್ವಯ ಸರ್ಕಾರ ಆದೇಶಿಸಿದೆ.

    4 ವರ್ಷದ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ. ಜೊತೆಗೆ ಹಿಂಬದಿ ಸವಾರರು ಸಹ ಕಡ್ಡಾಯವಾಗಿ ಹೆಲ್ಮೆಟ್ ಹಾಕಬೇಕು. ರಾಜ್ಯದಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸರ್ಕಾರ ಮುಂದಾಗಿದೆ.

    ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989ರ ನಿಯಮ 230 ಉಪ ನಿಯಮ (1)ರ ಪ್ರಕಾರ ಎಲ್ಲ ದಿಚಕ್ರ ವಾಹನ ಸವಾರರು, ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ. ಹೆಲ್ಮೆಟ್ ಧರಿಸದೇ ಸಂಚರಿಸುವ ಪರಿಣಾಮವಾಗಿ ರಸ್ತೆ ಅಪಘಾತಗಳಲ್ಲಿ ಸವಾರರು ಸಾವನ್ನಪ್ಪುತ್ತಿದ್ದಾರೆ. ಇಂತಹ ಮರಣ/ತೀವ್ರತರವಾದ ಗಾಯಗಳನ್ನ ತಡೆಗಟ್ಟಲು ಮೋಟಾರು ವಾಹನಗಳ ಕಾಯ್ದೆಯಡಿ ದಂಡ ಮತ್ತು ಡಿಎಲ್ ಅಮಾನತುಗೊಳಿಸಲು ಸರ್ಕಾರ ಮುಂದಾಗಿದೆ.

  • ಇಂದಿನಿಂದ ಡಿಎಲ್‌, ಆರ್‌ಸಿ ಕಾರ್ಡ್‌ ಬದಲು ಇ- ಕಾಪಿ ತೋರಿಸಿ – 5 ಬದಲಾವಣೆ ಓದಿ

    ಇಂದಿನಿಂದ ಡಿಎಲ್‌, ಆರ್‌ಸಿ ಕಾರ್ಡ್‌ ಬದಲು ಇ- ಕಾಪಿ ತೋರಿಸಿ – 5 ಬದಲಾವಣೆ ಓದಿ

    ನವದೆಹಲಿ: ಇಂದಿನಿಂದ ಹೊಸ ನಿಯಮಗಳು ಜಾರಿಗೆ ಬರುತ್ತಿದ್ದು ಇನ್ನು ಮುಂದೆ ವಾಹನ ಸವಾರರು/ ಚಾಲಕರು ಚಾಲನಾ ಪರವಾನಗಿ (ಡಿಎಲ್‌) ಮತ್ತು ರಿಜಿಸ್ಟ್ರೇಷನ್‌ ಸರ್ಟಿಫಿಕೆಟ್‌ (ಆರ್‌ಸಿ) ಕಾರ್ಡ್‌ಗಳ ಬದಲು ಇ–ಕಾಪಿಗಳನ್ನು ತೋರಿಸಬಹುದು.

    1989 ರಿಂದ 2020ರವರೆಗಿನ ಮೋಟಾರು ವಾಹನ ನಿಯಮಾವಳಿಗಳಿಗೆ ಇತ್ತೀಚೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿತ್ತು. ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನೋಟಿಫಿಕೇಶನ್‌ ಹೊರಡಿಸಿದ್ದು ಇಂದಿನಿಂದ ಹೊಸ ಬದಲಾವಣೆ ಜಾರಿಗೆ ಬರಲಿದೆ.

    ಏನು ಬದಲಾವಣೆ?
    1. ಕಾರ್ಡ್‌ ತೋರಿಸುವ ಅಗತ್ಯವಿಲ್ಲ:
    ಇಲ್ಲಿಯವರೆಗೆ ಡಿಎಲ್‌ ಮತ್ತು ಆರ್‌ಸಿ ಕಾರ್ಡ್‌ಗಳನ್ನು ಸವಾರರು ಜೊತೆಯಲ್ಲೇ ಇಟ್ಟುಕೊಳ್ಳಬೇಕಿತ್ತು. ಸಂಚಾರಿ ಪೊಲೀಸರ ತಪಾಸಣೆಯ ವೇಳೆ ಇದನ್ನು ತೋರಿಸಬೇಕಿತ್ತು. ಆದರೆ ಇನ್ನು ಮುಂದೆ ತಪಾಸಣೆಯ ವೇಳೆ ಇ-ಕಾಪಿಗಳನ್ನು ತೋರಿಸಬಹುದಾಗಿದೆ.

    ಇಷ್ಟೇ ಅಲ್ಲದೇ ಒಂದು ವೇಳೆ ಸಂಚಾರ ನಿಯಮ ಉಲ್ಲಂಘನೆ ಮಾಡಿ ಕೇಸ್‌ ದಾಖಲಾದಾಗ ಇ -ದಾಖಲೆಗಳನ್ನು ಅಧಿಕಾರಿಗಳು ಸೀಜ್‌ ಮಾಡಬಹುದು. ಇದರ ಜೊತೆ ಇ-ಚಲನ್‌ ಮೂಲಕ ದಂಡವನ್ನು ಪಾವತಿಸಬಹುದು. ಸರ್ಕಾರದ ಡಿಜಿಟಲ್‌ ಪೋರ್ಟಲ್‌ನಲ್ಲಿ ಇ- ಚಲನ್‌ ಲಭ್ಯವಿದೆ.

    2. ಉಲ್ಲಂಘನೆ ಮಾಹಿತಿ ಅಪ್‌ಡೇಟ್‌:
    ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದಲ್ಲಿ ಸವಾರನ ಮೇಲೆ ಕೇಸ್‌ ದಾಖಲಾದ ಅಂಶವೂ ಡಿಜಿಟಲ್‌ ಪೋರ್ಟಲ್‌ನಲ್ಲಿ ನಿರಂತರವಾಗಿ ಅಪ್‌ಡೇಟ್‌ ಆಗುತ್ತದೆ. ಪೋರ್ಟಲ್ ಅನ್ನು ಕಾಲಾನುಕ್ರಮದಲ್ಲಿ ನವೀಕರಿಸಲಾಗುತ್ತಿರುತ್ತದೆ.

    3. ಹೊಸ ವ್ಯವಸ್ಥೆಯಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ:
    ಸವಾರರ ಎಲ್ಲ ಉಲ್ಲಂಘನಾ ಪ್ರಕರಣಗಳು ಪೋರ್ಟಲ್‌ನಲ್ಲಿ ದಾಖಲಾಗುತ್ತಿರುತ್ತದೆ. ಇದರಿಂದಾಗಿ ಸವಾರನ ನಡತೆಯನ್ನು ಅಧಿಕಾರಿಗಳು ತಿಳಿಯಬಹುದು. ಅಷ್ಟೇ ಅಲ್ಲದೇ ಸಂಚಾರ ಪೊಲೀಸರು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರೋ ಇಲ್ಲವೋ ಎನ್ನುವುದು ಇದರಲ್ಲಿ ಗೊತ್ತಾಗುತ್ತದೆ.

    4. ದಾಖಲೆಗಳನ್ನು ಎಲ್ಲಿ ಸಂಗ್ರಹಿಸಬಹುದು?
    ಕೇಂದ್ರ ಸರ್ಕಾರದ ಡಿಜಿ ಲಾಕರ್‌ ಅಥವಾ ಎಂ–ಪರಿವಾಹನ್‌‌ ರೀತಿಯ ಪೋರ್ಟಲ್‌ಗಳಿಗೆ ದಾಖಲೆಗಳನ್ನು ಅಪ್‌ಲೋಡ್‌ ಮಾಡಬಹುದು. ತಪಾಸಣೆ ಸಮಯದಲ್ಲಿ ಕೇಳಿದಾಗ ಡಿಜಿಟಲ್‌ ಪ್ರತಿಯನ್ನು ತೋರಿಸಬಹುದು.

    5. ಮಾರ್ಗಸೂಚಿಗಾಗಿ ಮೊಬೈಲ್‌ ಬಳಕೆ
    ವಾಹನ ಚಾಲನೆ ಮಾಡುವ ಸಮಯದಲ್ಲಿ ಮಾರ್ಗ ತಿಳಿಯಲು (ಮ್ಯಾಪ್‌/ನ್ಯಾವಿಗೇಷನ್‌) ಮಾತ್ರ ಮೊಬೈಲ್‌ ಬಳಕೆ ಮಾಡಬಹುದಾಗಿದೆ. ಡ್ರೈವರ್‌ ಏಕಾಗ್ರತೆಗೆ ಭಂಗ ಬಾರದ ರೀತಿಯಲ್ಲಿ ಬಳಸಬೇಕು ಎಂದು ತಿಳಿಸಲಾಗಿದೆ. ಒಂದು ವೇಳೆ ಚಾಲನೆಯ ಸಮಯದಲ್ಲಿ ಈ ಕಾರಣವನ್ನು ಹೊರತು ಪಡಿಸಿ ಮೊಬೈಲ್‌ ಬಳಕೆ ಮಾಡಿದ್ದು ಕಂಡು ಬಂದಲ್ಲಿ ಈಗ ಇರುವ ಸಂಚಾರ ನಿಯಮಗಳ ಪ್ರಕಾರ ದಂಡ ವಿಧಿಸಲಾಗುತ್ತದೆ.

    ವಾಹನ ಚಲಾಯಿಸುವಾಗ ಮೊಬೈಲ್‌ ಬಳಸಿದರೆ 1,000 ದಿಂದ 5 ಸಾವಿರ ರೂ.ಗಳ ವರೆಗೆ ದಂಡ ವಿಧಿಸಲು ಅವಕಾಶವಿದೆ. ಈ ನಿಯಮವೂ ಅ. 1 ರಿಂದ ಜಾರಿಗೆ ಬಂದಿದೆ.

  • ದೇಶಾದ್ಯಂತ ಏಕರೂಪದ ಡಿಎಲ್, ಆರ್‌ಸಿ: ಏನೇನು ಮಾಹಿತಿ ಇರುತ್ತೆ? ಯಾವಾಗ ಬರುತ್ತೆ? ದರ ಎಷ್ಟು?

    ದೇಶಾದ್ಯಂತ ಏಕರೂಪದ ಡಿಎಲ್, ಆರ್‌ಸಿ: ಏನೇನು ಮಾಹಿತಿ ಇರುತ್ತೆ? ಯಾವಾಗ ಬರುತ್ತೆ? ದರ ಎಷ್ಟು?

    ಸಾಂದರ್ಭಿಕ ಚಿತ್ರ

    ನವದೆಹಲಿ: 2019ರ ಜುಲೈ ತಿಂಗಳಿನಿಂದ ದೇಶಾದ್ಯಂತ ಏಕರೂಪದ ವಾಹನ ಚಾಲನಾ ಪರವಾನಗಿ (ಡಿಎಲ್) ಮತ್ತು ನೋಂದಣಿ ಪ್ರಮಾಣ ಪತ್ರ(ಆರ್‌ಸಿ)ಗಳನ್ನು ವಿತರಿಸಲು ರಸ್ತೆ ಸಾರಿಗೆ ಸಚಿವಾಲಯ ನಿರ್ಧರಿಸಿದೆ.

    ದೇಶಾದ್ಯಂತ ಒಂದೇ ಮಾದರಿಯ ಡಿಎಲ್ ಹಾಗೂ ಆರ್‌ಸಿ ಕಾರ್ಡ್‍ಗಳನ್ನು ವಿತರಿಸಲು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂ ಆರ್‌ಸಿ ಕಾರ್ಡ್‍ಗಳು ಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳ ಎಟಿಎಂ ಕಾರ್ಡ್‍ಗಳು ಕೆಲಸ ನಿರ್ವಹಿಸುವ ರೀತಿಯಲ್ಲೇ ಕಾರ್ಯನಿರ್ವಹಿಸಲಿವೆ.

    ನೂತನ ಸ್ಮಾರ್ಟ್ ಡಿಎಲ್ ಹಾಗೂ ಆರ್‌ಸಿಗಳ ಬಣ್ಣ, ವಿನ್ಯಾಸಗಳು ಎಲ್ಲಾ ರಾಜ್ಯಗಳಲ್ಲಿಯೂ ಒಂದೇ ಆಗಿರಲಿದೆ. ವಿಶೇಷವಾಗಿ ಈ ಕಾರ್ಡ್‍ಗಳಲ್ಲಿ ಮೈಕ್ರೋ ಚಿಪ್ ಹಾಗೂ ಕ್ಯೂಆರ್ ಕೋಡ್ ವ್ಯವಸ್ಥೆಯೂ ಇರಲಿದೆ. ಇದು ನಿಯರ್ ಫೀಲ್ಡ್ ಕಮ್ಯೂನಿಕೇಶನ್(ಎನ್‍ಎಫ್‍ಸಿ) ತಂತ್ರಜ್ಞಾನವನ್ನು ಹೊಂದಿದೆ. ಹೀಗಾಗಿ ಈ ಕಾರ್ಡ್‍ಗಳನ್ನು ಮೆಟ್ರೋ ಹಾಗೂ ಎಟಿಎಮ್ ಕಾರ್ಡ್‍ಗಳ ರೀತಿಯಲ್ಲೂ ಬಳಸಬಹುದಾಗಿದೆ. ಈ ಮೂಲಕ ಸಂಚಾರಿ ಪೊಲೀಸರು ಸ್ಕ್ಯಾನ್ ಮಾಡಿ ಸುಲಭವಾಗಿ ವಾಹನ ಸವಾರರ ಮಾಹಿತಿಗಳನ್ನು ಕಲೆಹಾಕಬಹುದು.

    ಇದಲ್ಲದೇ ವಿಶೇಷವಾಗಿ ವಾಹನ ಚಾಲಕರು ತಮ್ಮ ಅಂಗಾಂಗ ದಾನದ ಮಾಹಿತಿಯನ್ನೂ ಸಹ ಈ ಡಿಲ್‍ನಲ್ಲಿ ನಮೂದಿಸಬಹುದು. ಅಂಗವಿಕಲರಿಗಾಗಿ ಸಿದ್ಧಪಡಿಸಿರುವ ವಿಶೇಷ ವಾಹನಗಳ ಬಗ್ಗೆಯೂ ಸಹ ಈ ಕಾರ್ಡ್‍ಗಳಲ್ಲಿ ವಿವರ ನೀಡಲಾಗಿರುತ್ತದೆ. ನೂತನ ಆರ್‌ಸಿ ಕಾರ್ಡ್ ಮೂಲಕ ವಾಹನವು ಎಷ್ಟು ಪ್ರಮಾಣದಲ್ಲಿ ಹೊಗೆ ಹೊರಹಾಕುತ್ತದೆ ಎಂಬುದನ್ನು ಸಹ ತಿಳಿಯಬಹುದಾಗಿದೆ. ಇದರಿಂದಾಗಿ ವಾಯುಮಾಲಿನ್ಯವೂ ನಿಯಂತ್ರಣಕ್ಕೆ ಬರುತ್ತದೆ ಎಂದು ಹೇಳಲಾಗುತ್ತಿದೆ.

    ನೂತನ ಡಿಎಲ್‍ನಲ್ಲಿ ಏನೇನು ಇರುತ್ತದೆ?
    ದೇಶ ಹಾಗೂ ರಾಜ್ಯ ಸರ್ಕಾರಗಳ ಅಧಿಕೃತ ಚಿಹ್ನೆಗಳು, ಡಿಎಲ್ ವಿತರಿಸುವ ಸಂಸ್ಥೆಯ ಹೆಸರು, ವಿತರಿಸುವ ದಿನಾಂಕ ಹಾಗೂ ಮುಕ್ತಾಯದ ದಿನಾಂಕ, ವ್ಯಕ್ತಿಯ ಹೆಸರು, ರಕ್ತದ ಗುಂಪು ಹಾಗೂ ಅಂಗಾಂಗಳನ್ನು ದಾನ ಮಾಡುವ ಮಾಹಿತಿ, ವಾಹನಗಳ ವಿಧ ಹಾಗೂ ತುರ್ತು ಸಂದರ್ಭಗಳಲ್ಲಿ ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆಗಳು ಮುದ್ರಿತವಾಗಿರುತ್ತದೆ.

    ಆರ್‌ಸಿ ಕಾರ್ಡ್‍ನಲ್ಲಿ ಏನೇನು ಇರುತ್ತೆ?
    ದೇಶ ಹಾಗೂ ರಾಜ್ಯ ಸರ್ಕಾರಗಳ ಅಧಿಕೃತ ಚಿಹ್ನೆಗಳು, ಆರ್‍ಸಿ ವಿತರಿಸುವ ಸಂಸ್ಥೆಯ ಹೆಸರು, ವಿತರಿಸುವ ದಿನಾಂಕ ಹಾಗೂ ಮುಕ್ತಾಯದ ದಿನಾಂಕ, ವಾಹನದ ವಿಧ, ವಾಣಿಜ್ಯೇತರ ಹಾಗೂ ವಾಣಿಜ್ಯ ಬಳಕೆಯ ವಿವರ, ವಾಹನಗಳ ಚಾಸಿ ಹಾಗೂ ಇಂಜಿನ್ ಸಂಖ್ಯೆ, ಭಾರತ್ ಸ್ಟೇಜ್ 4 ಅಥವಾ 5 ಎಂಬುದರ ವಿವರ ಮುದ್ರಿತವಾಗಿರುತ್ತದೆ. ಇದನ್ನೂ ಓದಿ: ಏನಿದು ಭಾರತ್ ಸ್ಟೇಜ್?ಯಾವಾಗ ಜಾರಿಯಾಗಿದೆ? ಬಿಎಸ್4 ಕಾರಿಗೆ ಬಿಎಸ್6 ಇಂಧನ ಹಾಕಿದ್ರೆ ಏನಾಗುತ್ತೆ?

    ಡಿಎಲ್ ಹಾಗೂ ಆರ್‌ಸಿಗಳಲ್ಲಿರುವ ಭದ್ರತಾ ಕ್ರಮಗಳು:
    ನೂತನ ಸ್ಮಾಟ್ ಡಿಎಲ್ ಹಾಗೂ ಆರ್‌ಸಿಗಳಲ್ಲಿ ಅಳಿಸಲಾರದಂತೆ ಗಿಲ್ಲೋಚ್ ಪ್ರಿಂಟಿಂಗ್ ತಂತ್ರಜ್ಞಾನವನ್ನು ಹೊಂದಿದೆ. ಇದಲ್ಲದೆ ಇದಕ್ಕೆ ಬಳಸಲಾದ ಬಣ್ಣಗಳು ನೇರಾಳಾತಿತಾ ಬಣ್ಣಗಳಿಂದ ಕೂಡಿದ್ದರಿಂದ ಯಾವುದೇ ರೀತಿಯಲ್ಲಿ ಬಣ್ಣ ಬದಲಾಗುವುದಿಲ್ಲ. ಸೂಕ್ಷ್ಮ ರೀತಿಯಲ್ಲಿ ಅಕ್ಷರಗಳನ್ನು ಮುದ್ರಿಸಲಾಗಿರುತ್ತದೆ. ನಿರ್ದಿಷ್ಟ ಗುರುತಿನ ಪುರಾವೆ(ಹೊಲೊಗ್ರಾಮ್) ಬಳಕೆ ಮಾಡಿರಲಾಗುತ್ತದೆ. ಹಿಂಬದಿ ಹಾಗೂ ಮುಂಭಾಗದಲ್ಲಿ ವಾಟರ್ ಮಾರ್ಕ್ ಮೂಲಕ ರಾಜ್ಯ ಅಥವಾ ಕೇಂದ್ರ ಸರ್ಕಾರಗಳ ಅಧಿಕೃತ ಚಿಹ್ನೆಗಳನ್ನು ಮುದ್ರಿಸಲಾಗಿರುತ್ತದೆ.

    ಯಾಕೆ ವಿತರಣೆ? ದರ ಎಷ್ಟು?
    ಮಾಹಿತಿಗಳ ಪ್ರಕಾರ ಪ್ರತಿನಿತ್ಯ ಹೊಸ ಹಾಗೂ ಪರಿಷ್ಕೃತ 32,000 ಡಿಎಲ್‍ಗಳನ್ನು ವಿತರಿಸಲಾಗುತ್ತಿದೆ. ಇದಲ್ಲದೇ ಹೊಸ ನೋಂದಣಿ ಹಾಗೂ ಮರು ನೋಂದಣಿಯ ಸುಮಾರು 43 ಸಾವಿರ ಕಾರ್ಡುಗಳನ್ನು ದೇಶದಲ್ಲಿ ವಿತರಿಸಲಾಗುತ್ತಿದೆ. ಹೀಗಾಗಿ ಹೊಸ ಮಾದರಿಯ ವಿಶೇಷ ತಂತ್ರಜ್ಞಾನ ಹೊಂದಿರುವ ಕಾರ್ಡ್‍ಗಳನ್ನು ಬಿಡುಗಡೆ ಮಾಡುವ ಮೂಲಕ ಸಮಯದ ಉಳಿತಾಯ ಹಾಗೂ ಎಲ್ಲಾ ಮಾಹಿತಿಗಳನ್ನು ಒಂದೆಡೆ ಸಿಗುವಂತೆ ಮಾಡಲು ರಸ್ತೆ ಸಾರಿಗೆ ಸಚಿವಾಲಯ ಸಿದ್ಧತೆ ನಡೆಸುತ್ತಿದೆ. ಮೂಲಗಳ ಪ್ರಕಾರ ಇಂದು ಮುದ್ರಿತವಾಗುತ್ತಿರುವ ಪ್ರತಿ ಕಾರ್ಡ್ ದರಕ್ಕಿಂತ 15 ರೂಪಾಯಿ ಮಾತ್ರ ಹೆಚ್ಚಳವಾಗುತ್ತದೆ ಎಂದು ತಿಳಿದುಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv