Tag: Drone Pratap

  • Bigg Boss Kannada: ಮನೆ ಒಳಗೆ ಕಾಣಿಸಿಕೊಂಡ ದೆವ್ವ

    Bigg Boss Kannada: ಮನೆ ಒಳಗೆ ಕಾಣಿಸಿಕೊಂಡ ದೆವ್ವ

    ಬಿಗ್ ಬಾಸ್ ಸೀಸನ್ 7ರಲ್ಲಿ ಬಿಗ್ ಬಾಸ್ (Bigg Boss Kannada) ಮನೆಯಲ್ಲೇ ದೆವ್ವ ಕಾಣಿಸಿಕೊಂಡು ಗಾಬರಿ ಮೂಡಿಸಿತ್ತು. ಆಗ ದೊಡ್ಮನೆ ಒಳಗಿದ್ದ ಚೈತ್ರಾ ಕೋಟೂರು ಭೂತ ಕಂಡ ಬೊಬ್ಬೆ ಹಾಕಿದ್ದರು. ಮನೆಯಲ್ಲಿ ದೆವ್ವ ಇದೆ ನಾನು ನೋಡಿದ್ದೇನೆ ಎಂದು ಇಡೀ ಬಿಗ್ ಬಾಸ್ ಮನೆಯ ವಾತಾವರಣವನ್ನೇ ಭಯಭೀತಿಗೊಳಿಸಿದ್ದಳು. ಚೈತ್ರಾ ಮಾತನ್ನು ಅನೇಕರು ನಂಬಿದ್ದರು. ಭಯದಲ್ಲೇ ಅಂದಿನ ದಿನವನ್ನು ಕಳೆಯಲಾಗಿತ್ತು.

    ಬಿಗ್ ಬಾಸ್ ಮನೆಯಲ್ಲಿ ದೆವ್ವ ಕಾಣಿಸಿಕೊಂಡ ವಿಚಾರ ದೊಡ್ಮನೆ ಒಳಗೆ ಮಾತ್ರವಲ್ಲ, ಆಚೆಯೂ ಸಾಕಷ್ಟು ಸದ್ದು ಮಾಡಿತ್ತು. ತಮ್ಮದೇ ಆದ ಕಲ್ಪನೆಯನ್ನು ಸೇರಿಸಿ ಸುದ್ದಿಯನ್ನು ಮತ್ತಷ್ಟು ದೊಡ್ಡದು ಮಾಡಿದ್ದರು. ರಾಷ್ಟ್ರೀಯ ಮಟ್ಟದಲ್ಲಿ ಈ ವಿಷಯ ಸದ್ದು ಮಾಡಿತ್ತು. ಈ ಬಾರಿಯೂ ಬಿಗ್ ಬಾಸ್ ಮನೆಯಲ್ಲಿ ದೆವ್ವ ಕಾಣಿಸಿಕೊಂಡಿದೆ. ಆದರೆ, ಯಾರೂ ಭಯ ಪಡಲು ಹೋಗಿಲ್ಲ. ಕಾರಣ, ಆ ದೆವ್ವವನ್ನು ಸೃಷ್ಟಿ ಮಾಡಿದವರು ಅದೇ ಮನೆಯಲ್ಲೇ ಇದ್ದರು.

    ಬಿಗ್ ಬಾಸ್ ಮನೆಯಲ್ಲಿ ಇಂದು ಇಂಟ್ರಸ್ಟಿಂಗ್ ಸಂಗತಿಯೊಂದು ನಡೆಯಿತು. ಒಬ್ಬೊಬ್ಬರು ಒಂದೊಂದು ಸಾಲನ್ನು ಜೋಡಿಸುವ ಮೂಲಕ ಹಾರರ್ ಸಿನಿಮಾದ ಕಥೆಯನ್ನು ರೆಡಿ ಮಾಡಿದರು. ಒಬ್ಬೊಬ್ಬರು ಒಂದೊಂದು ರೋಚಕ ಸಾಲುಗಳನ್ನು ಪೋಣಿಸುವ ಮೂಲಕ ದೆವ್ವದ ಕಥೆಯೊಂದನ್ನು ರೆಡಿ ಮಾಡಿದರು. ಆ ಕಥೆ ನಿಜಕ್ಕೂ ಇಂಟ್ರಸ್ಟಿಂಗ್ ಆಗಿತ್ತು. ಜೋಡಿಸಿದ ಸಾಲುಗಳಲ್ಲಿ ಸಸ್ಪೆನ್ಸ್, ಥ್ರಿಲ್ಲರ್ ಅಂಶಗಳು ಇದ್ದವು.

    ಅದರಲ್ಲೂ ತುಕಾಲಿ ಸಂತು ದೆವ್ವ, ನಾಗಿಣಿಯಾದ ಎಳೆಗೆ ಹಾಲು ಕುಡಿಸುವ ದೃಶ್ಯವನ್ನೂ ಪೋಣಿಸಿದರು. ಅಲ್ಲಿಂದ ಕಥೆಯ ಚಿತ್ರಣವೇ ಬದಲಾಯಿತು. ಇಡೀ ಮನೆಯಲ್ಲಿ ಆಹ್ಲಾದಕರ ವಾತಾವರಣವಿತ್ತು. ಯಾವುದೇ ಕೆಲಸವಿರಲಿ ಎಲ್ಲರೂ ಕೈ ಜೋಡಿಸಿದರೆ ಅದ್ಭುತವಾದ ಕೆಲಸವನ್ನು ಮಾಡಲು ಸಾಧ್ಯ ಎನ್ನುವುದಕ್ಕೆ ಈ ದೃಶ್ಯ ಸಾಕ್ಷಿಯಾಗಿತ್ತು.

     

    ಈ ಕಥೆ ಹೆಣೆಯುವ ಪ್ರಕ್ರಿಯೆಯಲ್ಲಿ ಸ್ನೇಕ್ ಶ್ಯಾಮ್ ಉತ್ತೇಜಿಸುತ್ತಲೇ, ಹಾದಿ ತಪ್ಪುವ ಮಾತುಗಳಿಗೆ ಬ್ರೇಕ್ ಹಾಕುತ್ತಿದ್ದರು. ಕೆಲವರು ಉತ್ಸಾಹದಿಂದ ಭಾಗಿಯಾದರೆ, ಇನ್ನೂ ಕೆಲವರು ಕಥೆ ಕೇಳಿಕೊಂಡು ಎಂಜಾಯ್ ಮಾಡುತ್ತಿದ್ದರು. ಅವರು ಕಟ್ಟಿದ ಕಥೆಯನ್ನು JioCinema live ನಲ್ಲೂ ವೀಕ್ಷಿಸಬಹುದು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡ್ರೋನ್ ಪ್ರತಾಪ್ ಮೇಲೆ ಮತ್ತೊಂದು ಕೇಸ್ – ವಶಕ್ಕೆ ಪಡೆದ ಅಶೋಕ ನಗರ ಪೊಲೀಸರು

    ಡ್ರೋನ್ ಪ್ರತಾಪ್ ಮೇಲೆ ಮತ್ತೊಂದು ಕೇಸ್ – ವಶಕ್ಕೆ ಪಡೆದ ಅಶೋಕ ನಗರ ಪೊಲೀಸರು

    ಬೆಂಗಳೂರು: ಕ್ವಾರಂಟೈನ್‍ನಲ್ಲಿ ಇದ್ದರು ನಿಯಮ ಉಲ್ಲಂಘನೆ ಮಾಡಿದಕ್ಕೆ ಡ್ರೋನ್ ಪ್ರತಾಪನ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು, ಅಶೋಕ ನಗರ ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ.

    ಈ ಹಿಂದೆ ಕ್ವಾರಂಟೈನ್‍ನಲ್ಲಿ ಇರಬೇಕು ಎಂದು ಅಧಿಕಾರಿಗಳು ಹೇಳಿದ್ದರು ಪ್ರತಾಪ್ ನಿಯಮ ಉಲ್ಲಂಘನೆ ಮಾಡಿದ್ದ. ಆದ್ದರಿಂದ ಆತನ ವಿರುದ್ಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹೀಗಾಗಿ ಆತನನ್ನು ವಶಕ್ಕೆ ಪಡೆದು ಬೆಂಗಳೂರಿನ ಖಾಸಗಿ ಹೋಟೆಲ್‍ವೊಂದರಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

    ಇಂದಿಗೆ ಪ್ರತಾಪ್ ಕ್ವಾರಂಟೈನ್ ಅವಧಿ ಮುಗಿಯುತ್ತಿದ್ದ ಕಾರಣ ತಲಘಟ್ಟಪುರ ಪೊಲೀಸರು ಆತನನ್ನು ವಶಕ್ಕೆ ಪಡೆಯಲು ಮುಂದಾಗಿದ್ದರು. ಆದರೆ ಖಾಸಗಿ ಹೋಟೆಲ್‍ನಲ್ಲಿ ಕ್ವಾರಂಟೈನ್‍ನಲ್ಲಿ ಇದ್ದ ಪ್ರತಾಪ್ ಇನ್ನೊಂದು ಎಡವಟ್ಟು ಮಾಡಿದ್ದು, ಹೋಟೆಲ್‍ಗೆ ಲಾಯರ್ ಒಬ್ಬರನ್ನು ಕರೆಸಿ ಮಾತಾಡಿದ್ದ. ಹೀಗಾಗಿ ಆತನ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು, ಅಶೋಕ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಡ್ರೋನ್ ಪ್ರತಾಪ್ ಜುಲೈ 15ರಂದು ಹೈದರಾಬಾದ್‍ನಿಂದ ಬೆಂಗಳೂರಿಗೆ ಬಂದಿದ್ದ. ತಲಘಟ್ಟಪುರದ ಅಪಾಟ್ರ್ಮೆಂಟ್‍ವೊಂದರಲ್ಲಿ ಈತ ಕ್ವಾರಂಟೈನ್ ಆಗಿದ್ದ. ಆತನ ಕೈಗೆ ಬಿಬಿಎಂಪಿಯಿಂದ ಕ್ವಾರಂಟೈನ್ ಸ್ಟಿಕರ್ ಕೂಡ ಅಂಟಿಸಲಾಗಿತ್ತು. ಆದರೆ, ಅದಾಗಿ ಎರಡೇ ದಿನಕ್ಕೆ ಈತ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದ. ಹೀಗಾಗಿ ಪಶುವೈದ್ಯ ಹಾಗೂ ವಿಧಿ ವಿಜ್ಞಾನ ತಜ್ಞ ಡಾ.ಎಚ್.ಎಸ್.ಪ್ರಯಾಗ್ ತಲಘಟ್ಟಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ಪ್ರಕರಣ ದಾಖಲಾಗುತ್ತಿದ್ದಂತೆ ಡ್ರೋನ್ ಪ್ರತಾಪ್ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದ. ನಂತರ ಪ್ರತಾಪ್ ಮೈಸೂರಿನಲ್ಲಿರುವುದನ್ನು ತಿಳಿದು ವಿಶೇಷ ತಂಡ ಮೈಸೂರಿಗೆ ತೆರಳಿತ್ತು. ಅಲ್ಲಿ ಆತನನ್ನು ವಶಕ್ಕೆ ಪಡೆದು ಜುಲೈ 20ರಂದು ಆತನನ್ನು ಬೆಂಗಳೂರಿಗೆ ಕರೆ ತಂದು ಕೆಂಗೇರಿಯ ಖಾಸಗಿ ಹೋಟೆಲ್‍ನಲ್ಲಿ ಸಾಂಸ್ಥಿಕ ಕ್ವಾರಂಟೈನ್‍ಗೆ ಒಳಪಡಿಸಲಾಗಿತ್ತು. ಇಂದಿಗೆ ಕ್ವಾರಂಟೈನ್ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ತಮ್ಮ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಿದ್ದಾರೆ.

    ವಶಕ್ಕೂ ಮುನ್ನ ಮೈಸೂರಿನಲ್ಲಿ ಕ್ವಾರಂಟೈನ್ ಆಗುತ್ತೇನೆ ಎಂದು ಪ್ರತಾಪ್ ಪಟ್ಟು ಹಿಡಿದಿದ್ದ. ಆದರೆ ಬೆಂಗಳೂರಿನಲ್ಲೇ ಕ್ವಾರಂಟೈನ್ ಆಗುವಂತೆ ಸೂಚನೆ ನೀಡಿ ಅಧಿಕಾರಿಗಳು ಕರೆತಂದಿದ್ದರು. ಪ್ರತಾಪನ ವಿರುದ್ಧ ಕ್ವಾರಂಟೈನ್ ನಿಯಮ ಉಲ್ಲಂಘನೆ ಆರೋಪದಲ್ಲಿ ಎಮ್‍ಡಿಎಮ್ ಎ ಆಕ್ಟ್ ಆಡಿ ಕೇಸ್ ದಾಖಲಾಗಿತ್ತು.

  • ಡ್ರೋನ್ ಪ್ರತಾಪ್‍ ಪೊಲೀಸರ ವಶಕ್ಕೆ

    ಡ್ರೋನ್ ಪ್ರತಾಪ್‍ ಪೊಲೀಸರ ವಶಕ್ಕೆ

    – ಬೆಂಗಳೂರಿನ ಹೋಟೆಲ್‍ನಲ್ಲಿ ಕ್ವಾರಂಟೈನ್‍ಗೆ ಸೂಚನೆ
    – ಕ್ವಾರಂಟೈನ್ ಅವಧಿ ನಂತರ ಕಾನೂನು ಕ್ರಮ

    ಬೆಂಗಳೂರು: ಎಫ್‍ಐಆರ್ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಡ್ರೋನ್ ಪ್ರತಾಪ್‍ನನ್ನು ಬಿಬಿಎಂಪಿ ಅಧಿಕಾರಿಗಳು ಮತ್ತು ತಲಘಟ್ಟಪುರ ಪೊಲೀಸರು ಮೈಸೂರಿನಲ್ಲಿ ವಶಕ್ಕೆ ಪಡೆದಿದ್ದಾರೆ.

    ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಹಿನ್ನೆಲೆ ಡ್ರೋನ್ ಪ್ರತಾಪ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಡ್ರೋನ್ ಪ್ರತಾಪ್ ತಲೆಮರೆಸಿಕೊಂಡಿದ್ದ. ಅಧಿಕಾರಿಗಳು ಅವನ ಹುಡುಕಾಟದಲ್ಲಿ ತೊಡಗಿದ್ದರು. ಇದೀಗ ಬಿಬಿಎಂಪಿ ಅಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಪ್ರತಾಪ್‍ನನ್ನು ಮೈಸೂರಿನಿಂದ ಬೆಂಗಳೂರಿಗೆ ಕರೆತಂದಿದ್ದಾರೆ. ಕೆಂಗೇರಿ ಬಳಿಯ ಖಾಸಗಿ ಹೋಟೆಲ್‍ನಲ್ಲಿ ಸಾಂಸ್ಥಿಕ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ. ವಶಕ್ಕೂ ಮುನ್ನ ಮೈಸೂರಿನಲ್ಲಿ ಕ್ವಾರಂಟೈನ್ ಆಗುತ್ತೇನೆ ಎಂದು ಪ್ರತಾಪ್ ಪಟ್ಟು ಹಿಡಿದಿದ್ದ. ಆದರೆ ಬೆಂಗಳೂರಿನಲ್ಲೇ ಕ್ವಾರಂಟೈನ್ ಆಗುವಂತೆ ಸೂಚನೆ ನೀಡಿ ಅಧಿಕಾರಿಗಳು ಕರೆತಂದಿದ್ದಾರೆ.

    ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದಕ್ಕೆ ಎಫ್‍ಐಆರ್ ದಾಖಲಾಗುತ್ತಿದ್ದಂತೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪ್ರತಾಪ್ ನಾಪತ್ತೆಯಾಗಿದ್ದ. ಕೆಲ ದಿನಗಳ ಹಿಂದಷ್ಟೇ ಹೊರ ಜಿಲ್ಲೆಗೆ ಹೋಗಿದ್ದ ಪ್ರತಾಪ್, ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ. ಅಲ್ಲದೆ ಆತ ವಾಸವಿದ್ದ ಅಂಜನಾಪುರದ ಎಸ್‍ಎಸ್‍ಎಂಐಎಂಜಿ ವಿಂಡ್ ಪಾಲ್ ಅಪಾರ್ಟ್‍ಮೆಂಟ್‍ನಲ್ಲಿ ಕ್ವಾರಂಟೈನ್ ಆಗುವಂತೆ ಬಿಬಿಎಂಪಿ ಅಧಿಕಾರಿಗಳು ಸೂಚಿಸಿದ್ದರು. ಆದರೆ ಇದಾವುದನ್ನು ಲೆಕ್ಕಿಸದ ಪ್ರತಾಪ್, ಜುಲೈ 16ರಂದು ಹೊರಗೆ ಬಂದಿದ್ದ. ಹೀಗಾಗಿ ಪಶುವೈದ್ಯ ಹಾಗೂ ವಿಧಿ ವಿಜ್ಞಾನ ತಜ್ಞ ಡಾ.ಎಚ್.ಎಸ್.ಪ್ರಯಾಗ್ ತಲಘಟ್ಟಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ಕೋವಿಡ್-19 ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದಕ್ಕೆ ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು. ನಂತರ ಪ್ರತಾಪ್ ಮೈಸೂರಿನಲ್ಲಿರುವುದನ್ನು ತಿಳಿದು ವಿಶೇಷ ತಂಡ ಮೈಸೂರಿಗೆ ತೆರಳಿತ್ತು. ಇದೀಗ ಪ್ರತಾಪ್‍ನನ್ನು ಬೆಂಗಳೂರಿಗೆ ಕರೆ ತಂದಿದ್ದು, ಸಾಂಸ್ಥಿಕ ಕ್ವಾರಂಟೈಗೆ ಒಳಪಡಿಸಿದ್ದಾರೆ. ಕ್ವಾರಂಟೈನ್ ಅವಧಿ ಮುಗಿದ ನಂತರ ಕಾನೂನು ಕ್ರಮ ಕೈಗೊಳ್ಳುವ ಕುರಿತು ತಿಳಿಸಿದ್ದಾರೆ.