Tag: Droupadi Murmu

  • ಭಾರತದ 50ನೇ CJI ಆಗಿ ಡಿ.ವೈ ಚಂದ್ರಚೂಡ್ ಪ್ರಮಾಣ ವಚನ ಸ್ವೀಕಾರ

    ಭಾರತದ 50ನೇ CJI ಆಗಿ ಡಿ.ವೈ ಚಂದ್ರಚೂಡ್ ಪ್ರಮಾಣ ವಚನ ಸ್ವೀಕಾರ

    ನವದೆಹಲಿ: ಭಾರತದ ಸುಪ್ರೀಂ ಕೋರ್ಟ್ (Supreme Court) 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ ಚಂದ್ರಚೂಡ್ (DY Chandrachud) ಇಂದು ಪ್ರಮಾಣವಚನ ಸ್ವೀಕರಿಸಿದರು.

    ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ದ್ರೌಪದಿ ಮುರ್ಮು (Droupadi Murmu) ಅವರು ಪ್ರಮಾಣವಚನ ಬೋಧಿಸಿದರು. ಇದನ್ನೂ ಓದಿ: ಪಾಕ್-ಕಿವೀಸ್ ಸೆಮಿಫೈನಲ್‌ – T20 ವಿಶ್ವಕಪ್ ಕ್ರಿಕೆಟ್‌ನಲ್ಲಿಂದು ಬಿಗ್ ಫೈಟ್

    ನಿವೃತ್ತ ನ್ಯಾಯಮೂರ್ತಿ ಎನ್.ವಿ ರಮಣ (NV Ramana) ಅವರ ನಿವೃತ್ತಿಯ ನಂತರ 49ನೇ ಸಿಜೆಐ ಆಗಿ ಅಧಿಕಾರ ಸ್ವೀಕರಿಸಿದ್ದ ಯು.ಯು ಲಲಿತ್ (UU Lalit) ಮಂಗಳವಾರ (ನವೆಂಬರ್ 8) ತಮ್ಮ ಕರ್ತವ್ಯ ಮುಕ್ತಾಗೊಳಿಸಿದರು. ಇಂದು 50ನೇ ನ್ಯಾಯಮೂರ್ತಿಯಾಗಿ ಚಂದ್ರಚೂಡ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಹಿಂದೆಯೇ ಚಂದ್ರಚೂಡ್ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು. ಇದನ್ನೂ ಓದಿ: ಗುಡ್ಡ ಹತ್ತಿ ಆಯುಷ್ಮಾನ್ ಕಾರ್ಡ್ ನೋಂದಣಿ – ಧರ್ಮಸ್ಥಳ ಸಂಘದ ಕಾರ್ಯಕ್ಕೆ ಭಾರೀ ಮೆಚ್ಚುಗೆ

    ಯಾರಿದು ಚಂದ್ರಚೂಡ್:
    1959 ನವೆಂಬರ್ 11 ರಂದು ಜನಿಸಿದ ಡಿ.ವೈ ಚಂದ್ರಚೂಡ್ ಸುಪ್ರೀಂ ಕೋರ್ಟ್ ಮತ್ತು ಬಾಂಬೆ ಹೈಕೋರ್ಟ್ನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡಿದ್ದರು. ನಂತರ ಬಾಂಬೆ ಹೈಕೋರ್ಟ್ ಅವರಗೆ 1998ರ ಜೂನ್‌ನಲ್ಲಿ ಹಿರಿಯ ವಕೀಲರಾಗಿ ಪದೋನ್ನತಿ ನೀಡಿತ್ತು. 2000 ದಲ್ಲಿ ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕವಾಗುವುದಕ್ಕೂ ಮೊದಲು 1998ರಿಂದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಅವರು ಕೆಲಸ ಮಾಡಿದ್ದರು. 2013ರ ಅಕ್ಟೋಬರ್ 31ರಂದು ನ್ಯಾ. ಚಂದ್ರಚೂಡ್ ಅವರನ್ನು ಅಲಾಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿತ್ತು. 2016ರ ಮೇ 13ರಂದು ನ್ಯಾ. ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದರು.

    Live Tv
    [brid partner=56869869 player=32851 video=960834 autoplay=true]

  • ಹು-ಧಾ ಮಹಾನಗರ ಪಾಲಿಕೆ ಸದಸ್ಯ, ಮೇಯರ್ ಗೌನ್ ಗುದ್ದಾಟ – ‘ಕೈ’ ಸದಸ್ಯರಿಗೆ ಹಿನ್ನಡೆ

    ಹು-ಧಾ ಮಹಾನಗರ ಪಾಲಿಕೆ ಸದಸ್ಯ, ಮೇಯರ್ ಗೌನ್ ಗುದ್ದಾಟ – ‘ಕೈ’ ಸದಸ್ಯರಿಗೆ ಹಿನ್ನಡೆ

    ಹುಬ್ಬಳ್ಳಿ: ರಾಜ್ಯದ ಮಹಾನಗರ ಪಾಲಿಕೆಗಳ ಮಹಾಪೌರರು ಪಾಲಿಕೆಯ ಸಭೆ ಹಾಗೂ ವಿಶೇಷ ಸಂದರ್ಭಗಳಲ್ಲಿ ಗೌನ್ (Gown)  ಧರಿಸುವುದು ಆಯಾ ಮಹಾನಗರ ಪಾಲಿಕೆಗಳ ಮಹಾಪೌರರ ವಿವೇಚನೆಗೆ ಬಿಟ್ಟ ವಿಷಯವಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ಸ್ಪಷ್ಟಪಡಿಸಿದ್ದು, ಹು-ಧಾ ಮಹಾನಗರ ಪಾಲಿಕೆಯ ‘ಕೈ’ (Congress) ಸದಸ್ಯರಿಗೆ ಹಿನ್ನಡೆಯಾಗಿದೆ.

    ನಗರಾಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿ ಈ ಕುರಿತು ಸ್ಪಷ್ಟನೆ ನೀಡಿದ್ದು, ಗೌನ್ ಧರಿಸುವ ವಿಷಯದಲ್ಲಿ ಸ್ಪಷ್ಟನೆ ಕೋರಿ ಹು-ಧಾ ಮಹಾನಗರ ಪಾಲಿಕೆಯ ಮೇಯರ್ ಈರೇಶ್ ಅಂಚಟಗೇರಿ ಸರ್ಕಾರಕ್ಕೆ ಪತ್ರ ಬರೆದಿದ್ದರು. ಪಾಲಿಕೆಯ ಸಾಮಾನ್ಯ ಸಭೆ ಅ. 28 ರಂದು ಧಾರವಾಡದಲ್ಲಿ (Dharwad) ನಡೆಯಲಿರುವ ಹಿನ್ನೆಲೆಯಲ್ಲಿ ಸರ್ಕಾರದ ಈ ಸ್ಪಷ್ಟನೆ ಮಹತ್ವ ಪಡೆದುಕೊಂಡಿದೆ. ಪಾಲಿಕೆಯ ಸೆಪ್ಟೆಂಬರ್ ಮಾಸಿಕ ಸಭೆಯಲ್ಲಿ ಮೇಯರ್ ಈರೇಶ್ ಅಂಚಟಗೇರಿ ಗೌನ್ ಧರಿಸದೆ ಪಾಲ್ಗೊಂಡಿದ್ದನ್ನು ಕಾಂಗ್ರೆಸ್ ಸದಸ್ಯರು ವಿರೋಧಿಸಿ ಪ್ರತಿಭಟನೆ ನಡೆಸಿದ್ದರು. ಸಭೆ ನಡೆಸಲು ಅವಕಾಶ ನೀಡಿರಲಿಲ್ಲ. ಬಳಿಕ ಸಭೆಯನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಲಾಗಿತ್ತು. ಇದನ್ನೂ ಓದಿ: ಭಾರತೀಯ ರೂಪಾಯಿ, ಏಮ್ಸ್ ಯೋಜನೆ ಬಗ್ಗೆ ಟೀಕೆ – ಬಿಜೆಪಿ ವಿರುದ್ಧ ಉದಯನಿಧಿ ಸ್ಟಾಲಿನ್ ವಾಗ್ದಾಳಿ

    ಪೂರ್ವ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರ ಪೌರ ಸನ್ಮಾನ ಕಾರ್ಯಕ್ರಮದಲ್ಲೂ ಮೇಯರ್ ಗೌನ್ ಧರಿಸಿರಲಿಲ್ಲ. ಮುಖ್ಯಮಂತ್ರಿ ಅವರ ಮೌಖಿಕ ಆದೇಶದ ಹಿನ್ನೆಲೆಯಲ್ಲಿ ಹೀಗೆ ಮಾಡಿದ್ದೆ ಎಂದು ಮೇಯರ್ ತಿಳಿಸಿದ್ದರು. ಇದೀಗ ಸರ್ಕಾರವೇ ಲಿಖಿತವಾಗಿ ಸ್ಪಷ್ಟನೆ ನೀಡಿದೆ. ಆದರೆ, ಮೇಯರ್ ಗೌನ್ ಧರಿಸುವುದಿಲ್ಲ ಎಂಬುದು ಪಾಲಿಕೆ ಸಾಮಾನ್ಯ ಸಭೆಯಲ್ಲಿ ನಿರ್ಧಾರವಾಗಬೇಕು ಎಂಬುದು ಕಾಂಗ್ರೆಸ್ ವಾದವಾಗಿದೆ. ಇನ್ನು ಮುಂದೆ ಪಾಲಿಕೆ ಸಭೆಗಳಲ್ಲಿ, ಮಹತ್ವದ ಕಾರ್ಯಕ್ರಮಗಳಲ್ಲಿ ಗೌನ್ ಧರಿಸುವುದಿಲ್ಲ ಎಂದು ಮೇಯರ್ ಈರೇಶ್ ಅಂಚಟಗೇರಿ ತಿಳಿಸಿದ್ದರು. ಇದನ್ನೂ ಓದಿ: ಕೆಲಸವಿಲ್ಲದವ ಮಂಗನ ಜೊತೆ ಆಡಲು ಹೊರಟಂತೆ ಸುನಿಲ್ ಕುಮಾರ್ ವಿವಾದ ಸೃಷ್ಟಿಸಲು ಹೊರಟಿದ್ದಾರೆ: ಕಾಂಗ್ರೆಸ್

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರಪತಿ ಮುರ್ಮುಗೆ ಚಮಚಾಗಿರಿ ಎಂದ ಕಾಂಗ್ರೆಸ್ ನಾಯಕ

    ರಾಷ್ಟ್ರಪತಿ ಮುರ್ಮುಗೆ ಚಮಚಾಗಿರಿ ಎಂದ ಕಾಂಗ್ರೆಸ್ ನಾಯಕ

    ನವದೆಹಲಿ: ದ್ರೌಪದಿ ಮುರ್ಮು ಅವರಂಥಹ ರಾಷ್ಟ್ರಪತಿಯನ್ನು ಯಾವ ದೇಶವೂ ಹೊಂದಬಾರದು. ಚಮಚಾಗಿರಿಗೂ ಒಂದು ಮಿತಿ ಇದೆ ಎಂದು ಕಾಂಗ್ರೆಸ್ ನಾಯಕ, ಲೋಕಸಭಾ ಮಾಜಿ ಸಂಸದ ಡಾ. ಉದಿತ್ ರಾಜ್ ಟೀಕಿಸಿದ್ದಾರೆ.

    ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಬಗ್ಗೆ ಕಾಂಗ್ರೆಸ್ (Congress) ನಾಯಕರ ಅವಹೇಳನ ಮುಂದುವರಿದಿದೆ. ಕಾಂಗ್ರೆಸ್ ನಾಯಕ, ಲೋಕಸಭಾ ಮಾಜಿ ಸಂಸದ ಡಾ. ಉದಿತ್ ರಾಜ್ (Udit Raj) ಟ್ವೀಟ್ ಮಾಡಿ ರಾಷ್ಟ್ರಪತಿ ಮುರ್ಮುಗೆ ಚಮಚಾಗಿರಿ ಎಂದು ಹೇಳಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ದ್ರೌಪದಿ ಮುರ್ಮು ಅವರಂಥಹ ರಾಷ್ಟ್ರಪತಿಯನ್ನು ಯಾವ ದೇಶವೂ ಹೊಂದಬಾರದು. ಚಮಚಾಗಿರಿಗೂ ಒಂದು ಮಿತಿ ಇದೆ. ಶೇ.70ರಷ್ಟು ಜನ ಗುಜರಾತ್‍ನಿಂದ ತಯಾರಾಗುವ ಉಪ್ಪನ್ನು ತಿಂತಾರೆ ಅನ್ನೋ ಮಾತಿದೆ. ಹಾಗಂತ, ಉಪ್ಪನ್ನೇ ತಿಂದು ಬದುಕೋಕೆ ಆಗುತ್ತಾ..? ಅಂತ ಟೀಕಿಸಿ ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ಬಿಜೆಪಿ ಸರ್ಕಾರ ದಲಿತರ ವಿರೋಧಿ, ದ್ವೇಷ ಹಬ್ಬಿಸುವ ಸರ್ಕಾರ: ರಾಹುಲ್ ಗಾಂಧಿ

    Congress

    ಇದಕ್ಕೆ ಬಿಜೆಪಿಗರು (BJP) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರ ಹೇಳಿಕೆ ಆಘಾತಕಾರಿ, ದುರಾದೃಷ್ಟ ಅಂತ ಬಿಜೆಪಿ ವಕ್ತಾರ ಸಂಬೀತ್ ಪಾತ್ರ ಕಿಡಿಕಾರಿದರು. ಅಧೀರ್ ರಂಜನ್ ಚೌಧರಿ ಕೂಡ ರಾಷ್ಟ್ರಪತ್ನಿ ಅಂತ ಟೀಕಿಸಿದ್ದರು. ಇದು ಕಾಂಗ್ರೆಸಿಗರ ಬುಡಕಟ್ಟು ಜನರ ವಿರೋಧಿಗಳ ಮನಸ್ಥಿತಿ ತೋರುತ್ತದೆ ಅಂತ ಸಂಬೀತ್ ವಾಗ್ದಾಳಿ ನಡೆಸಿದ್ದರು.

    bjP

    ತಕ್ಷಣವೇ ಕ್ಷಮೆಯಾಚಿಸಬೇಕು ಅಂತ ರಾಷ್ಟ್ರೀಯ ಮಹಿಳಾ ಆಯೋಗ ಕೂಡ ಉದಿತ್ ರಾಜ್‍ಗೆ ನೊಟೀಸ್ ಕಳಿಸಿದೆ. ಟೀಕೆಗಳು ಹೆಚ್ಚಾದ ಬೆನ್ನಲ್ಲೇ ಇವತ್ತು ಮತ್ತೆ ಟ್ವೀಟ್ ಮೂಲಕ ಸ್ಪಷ್ಟನೆ ಕೊಟ್ಟಿರುವ ಉದಿತ್ ರಾಜ್, ಇದು ನನ್ನ ವೈಯಕ್ತಿಕ ಅಭಿಪ್ರಾಯ. ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದ್ದಲ್ಲ. ಮುರ್ಮು ಅವರು ಆದಿವಾಸಿ ಹೆಸರಿನಲ್ಲಿ ಬಂದಿದ್ದಾರೆ. ಆದರೆ, ಅವರು ದೀರ್ಘಕಾಲ ಆದಿವಾಸಿಯಾಗಿ ಉಳಿಯಲ್ಲ. ಎಸ್‍ಸಿ/ ಎಸ್‍ಟಿಗಳು ಉನ್ನತ ಸ್ಥಾನಮಾನ ಅಲಂಕರಿಸಿದ ಬಳಿಕ ತಮ್ಮ ಸಮುದಾಯದ ಬಗ್ಗೆ ಕಿವುಡರು, ಮೂಗರಾಗಿರುತ್ತಾರೆ. ಈ ಬಗ್ಗೆ ನನ್ನ ಹೃದಯ ಹಿಂಡುತ್ತದೆ ಅಂತ ಉದಿತ್ ರಾಜ್ ಸಮಜಾಯಿಷಿ ಕೊಟ್ಟಿದ್ದಾರೆ. ಇದನ್ನೂ ಓದಿ: ಬಿಜೆಪಿ ಸರ್ಕಾರ ದಲಿತರ ವಿರೋಧಿ, ದ್ವೇಷ ಹಬ್ಬಿಸುವ ಸರ್ಕಾರ: ರಾಹುಲ್ ಗಾಂಧಿ

    Live Tv
    [brid partner=56869869 player=32851 video=960834 autoplay=true]

  • ಸಬರಮತಿ ಆಶ್ರಮದಲ್ಲಿ ಚರಕ ಸುತ್ತಿ ನೂಲು ತೆಗೆದ ದ್ರೌಪದಿ ಮುರ್ಮು

    ಸಬರಮತಿ ಆಶ್ರಮದಲ್ಲಿ ಚರಕ ಸುತ್ತಿ ನೂಲು ತೆಗೆದ ದ್ರೌಪದಿ ಮುರ್ಮು

    ಗಾಂಧಿನಗರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೊಮವಾರ ಸಬರಮತಿ (Sabarmati) ಆಶ್ರಮದಲ್ಲಿ (Ashram) ಚರಕ (Charkha) ಹಿಡಿದು ನೂಲು ತೆಗೆದರು.

    ಎರಡು ದಿನಗಳ ಕಾಲ ದ್ರೌಪದಿ ಮುರ್ಮು (Droupadi Murmu) ಗುಜರಾತ್ ಪ್ರವಾಸದಲ್ಲಿದ್ದಾರೆ. ಈ ಮೂಲಕ ಅವರು ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಗುಜರಾತ್‍ಗೆ (Gujarat) ಭೇಟಿ ಕೊಟ್ಟಿದ್ದಾರೆ.

    ಸಬರಮತಿ ಆಶ್ರಮದ ಭೇಟಿಯ ಬಗ್ಗೆ ಟ್ವೀಟ್ ಮಾಡಿರುವ ಅವರು, ಆಶ್ರಮ ಭೇಟಿ ವರ್ಣಿಸಲು ಸಾಧ್ಯವಿಲ್ಲದ ಸ್ಫೂರ್ತಿಯಾಗಿದೆ. ಈ ಹಿಂದೆಯೂ ಚರಕವನ್ನು ತಿರುಗಿಸಿದ್ದೆ. ಆದರೆ ಸಬರಾಮತಿಯಲ್ಲಿರುವ ಬಾಪು ಆಶ್ರಮದಲ್ಲಿ ಚರಕ ತಿರುಗಿಸಿರುವುದು ಸಂತೋಷವನ್ನು ತಂದಿದೆ. ಮಹಾತ್ಮ ಗಾಂಧೀಜಿ ಅವರ ಸಬರಮತಿ ಆಶ್ರಮ, ಸ್ವಾತಂತ್ರ್ಯ ಚಳುವಳಿ ಸಂದರ್ಭದಲ್ಲಿ ಎಲ್ಲರ ಆಕರ್ಷಣೆಯ ಕೇಂದ್ರವಾಗಿತ್ತು. ಮಹಾತ್ಮರ ಕಾರ್ಯಕ್ಷೇತ್ರವಾಗಿತ್ತು. ನಂತರವೂ ಆಶ್ರಮದ ಪಾವಿತ್ರ್ಯತೆ ಹಾಗೂ ಗಾಂಧಿ ನೆನಪು ಅಚ್ಚಳಿಯದೆ ಉಳಿದಿದೆ ಎಂದು ತಿಳಿಸಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವೀಡಿಯೋದಲ್ಲಿ ರಾಷ್ಟ್ರಪತಿ ಮುರ್ಮು ಚರಕದ ಮುಂದೆ ಕುಳಿತಿದ್ದಾರೆ. ಅವರಿಗೆ ಮಹಿಳೆಯೊನ್ನರು ಮಾರ್ಗದರ್ಶನವನ್ನು ನೀಡುತ್ತಿದ್ದು, ಅದರ ಪ್ರಕಾರವಾಗಿಯೇ ಚರಕದಿಂದ ನೂಲು ತೆಗೆಯುತ್ತಿದ್ದಾರೆ. ಇದನ್ನೂ ಓದಿ: ದಸರಾ ಸಂಭ್ರಮ – 85 ದೇಶಗಳ 1.50 ಲಕ್ಷ ಭಕ್ತರಿಂದ ಪ್ರಾರ್ಥನೆ

    ಈ ವೇಳೆ ಆಶ್ರಮದ ಆವರಣದಲ್ಲಿರುವ ಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಮತ್ತು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಉಪಸ್ಥಿತರಿದ್ದರು. ಮುರ್ಮು ಅವರು ಗಾಂಧಿಯವರ ಜೀವನ ಮತ್ತು ದೇಶದ ಸ್ವಾತಂತ್ರ್ಯ ಹೋರಾಟವನ್ನು ಬಿಂಬಿಸುವ ಆರ್ಕೈವಲ್ ಪ್ರದರ್ಶನವನ್ನು ವೀಕ್ಷಿಸಿದರು. ಇದನ್ನೂ ಓದಿ: ರಕ್ಷಣಾ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್‍ಗೆ Z+ ಭದ್ರತೆ

    Live Tv
    [brid partner=56869869 player=32851 video=960834 autoplay=true]

  • ಗಾಂಧಿ ಜಯಂತಿ- ದ್ರೌಪದಿ ಮುರ್ಮು, ಸೋನಿಯಾ ಗಾಂಧಿ ಸೇರಿ ಗಣ್ಯರಿಂದ ನಮನ

    ಗಾಂಧಿ ಜಯಂತಿ- ದ್ರೌಪದಿ ಮುರ್ಮು, ಸೋನಿಯಾ ಗಾಂಧಿ ಸೇರಿ ಗಣ್ಯರಿಂದ ನಮನ

    ನವದೆಹಲಿ: ಮಹಾತ್ಮ ಗಾಂಧಿಯವರ 153ನೇ ಜನ್ಮದಿನದ ಪ್ರಯುಕ್ತವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu), ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಮತ್ತು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸೇರಿದಂತೆ ಅನೇಕ ಗಣ್ಯರು ರಾಜ್‌ಘಾಟ್‌ಗೆ ತೆರಳಿ ಮಹಾತ್ಮ ಗಾಂಧಿ ಸಮಾಧಿಗೆ ಗೌರವವನ್ನು ಸಲ್ಲಿಸಿದರು.

    ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ನಾನು ಎಲ್ಲಾ ನಾಗರಿಕರ ಪರವಾಗಿ ರಾಷ್ಟ್ರಪಿತನಿಗೆ ಗೌರವ ಸಲ್ಲಿಸುತ್ತೇನೆ. ಶಾಂತಿ, ಸಮಾನತೆ, ಕೋಮು ಸೌಹಾರ್ದತೆಯ ಮೌಲ್ಯ ಹಾಗೂ ಅವರ ಜೀವನದ ಎಲ್ಲಾ ಸ್ಫೂರ್ತಿದಾಯಕ ಕ್ಷಣಗಳನ್ನು ಎಲ್ಲರೂ ಅಳವಡಿಸಿಕೊಳ್ಳುವ ಸಂದರ್ಭ ಇದಾಗಿದೆ ಎಂದು ಗಾಂಧಿ ಜಯಂತಿಗೆ ಶುಭ ಕೋರಿದರು.

    ಗಾಂಧೀಜಿಯವರ ಕನಸಿನ ಭಾರತದ ಸಾಕಾರಗೊಳಿಸಲು ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವ ಸಮಯ ಇದಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಖಾದಿ, ಕರಕುಶಲ ವಸ್ತುಗಳನ್ನು ಹೆಚ್ಚು ಖರೀದಿಸಿ – ರಾಜ್‌ಘಾಟ್‌ನಲ್ಲಿ ಗಾಂಧಿ ಸಮಾಧಿಗೆ ಮೋದಿ ಗೌರವ ನಮನ

    ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಹಾತ್ಮ ಗಾಂಧಿಯವರ 153ನೇ ಜನ್ಮದಿನದ ಪ್ರಯುಕ್ತವಾಗಿ ರಾಜ್‌ಘಾಟ್‌ಗೆ ತೆರಳಿ ಮಹಾತ್ಮ ಗಾಂಧಿ ಸಮಾಧಿಗೆ ಗೌರವ ಸಲ್ಲಿಸಿದ್ದರು. ನಂತರ ಮಾತನಾಡಿದ ಅವರು, ಈ ಗಾಂಧಿ ಜಯಂತಿಯು ಇನ್ನೂ ಹೆಚ್ಚು ವಿಶೇಷವಾಗಿದೆ. ಏಕೆಂದರೆ ಭಾರತವು ಆಜಾದಿ ಕಾ ಅಮೃತ ಮಹೋತ್ಸವದ ವರ್ಷವಾಗಿದೆ. ಬಾಪು ಆದರ್ಶಗಳನ್ನು ಅನುಸರಿಸುವ ಮೂಲಕ ಖಾದಿ ಮತ್ತು ಕರಕುಶಲ ವಸ್ತುಗಳನ್ನು ಖರೀದಿಸಲು ಮನವಿ ಮಾಡಿದ್ದರು. ಇದನ್ನೂ ಓದಿ: ಹಳ್ಳದಲ್ಲಿ ನಾಲ್ವರು ಮಹಿಳೆಯರು ಕೊಚ್ಚಿ ಹೋದ ಪ್ರಕರಣ – ಇಬ್ಬರ ಮೃತದೇಹ ಪತ್ತೆ

    Live Tv
    [brid partner=56869869 player=32851 video=960834 autoplay=true]

  • ಬೆಂಗ್ಳೂರಿನಲ್ಲಿ 208 ಕೋಟಿ ವೆಚ್ಚದ ಕ್ರಯೋಜನಿಕ್ ಎಂಜಿನ್ ಘಟಕ ಉದ್ಘಾಟನೆ

    ಬೆಂಗ್ಳೂರಿನಲ್ಲಿ 208 ಕೋಟಿ ವೆಚ್ಚದ ಕ್ರಯೋಜನಿಕ್ ಎಂಜಿನ್ ಘಟಕ ಉದ್ಘಾಟನೆ

    ಬೆಂಗಳೂರು: ಹೆಚ್‌ಎಎಲ್(HAL) ಏರೋಸ್ಪೇಸ್ ಕೇಂದ್ರದಲ್ಲಿ 208 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಏಕೀಕೃತ ಕ್ರಯೋಜನಿಕ್ ಎಂಜಿನ್ (Cryogenic Engine) ಉತ್ಪಾದಕ ಘಟಕವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಉದ್ಘಾಟಿಸಿದ್ದಾರೆ.

    ಇನ್ಮುಂದೆ ಇಸ್ರೋದ (ISRO) ಉಪಗ್ರಹ (Satellite) ವಾಹಕಗಳಿಗೆ ದೇಸೀಯವಾಗಿ ಹೆಚ್‌ಎಎಲ್ (HAL) ಕ್ರಯೋಜನಿಕ್ ಎಂಜಿನ್‌ಗಳನ್ನು ಉತ್ಪಾದನೆ ಮಾಡಲಿದೆ. ಇದನ್ನೂ ಓದಿ: AAP ಉರುಳಿಸಲು ಬಿಜೆಪಿ, ಕಾಂಗ್ರೆಸ್ ಒಟ್ಟಾಗಿ ಕುತಂತ್ರ ನಡೆಸುತ್ತಿವೆ – ಭಗವಂತ್ ಮಾನ್

    ಕ್ರಯೋಜನಿಕ್ ಇಂಜಿನ್ ಬಾಹ್ಯಾಕಾಶ ಉಪಗ್ರಹ (Satellite) ವಾಹಕಗಳಿಗೆ ಅತ್ಯಗತ್ಯ. ಎಚ್‌ಎಎಲ್ 1993 ರಿಂದಲೂ ಇಸ್ರೋದ (ISRO) ಬಾಹ್ಯಾಕಾಶ ಸಂಶೋಧನೆಗಳಿಗೆ ಒತ್ತಾಸೆಯಾಗಿ ನಿಂತಿದೆ. ಎಚ್‌ಎಎಲ್‌ಗೆ ಈಗ ಮತ್ತೊಮ್ಮೆ ತನ್ನ ಸಾಮರ್ಥ್ಯ ತೋರಿಸುವ ಸಮಯ ಬಂದಿದೆ. ಅತ್ಯಾಧುನಿಕ ತಂತ್ರಜ್ಞಾನದಡಿ ಕ್ರಯೋಜನಿಕ್ ಎಂಜಿನ್ ಉತ್ಪಾದನೆ ಕಾರ್ಯದಲ್ಲಿ ತೊಡಗಿಕೊಳ್ಳುತ್ತಿರುವುದು ಒಂದು ದೊಡ್ಡ ಮೈಲಿಗಲ್ಲು. ಅಲ್ಲದೇ ಕ್ರಯೋಜನಿಕ್ ಎಂಜಿನ್ ಉತ್ಪಾದಿಸುತ್ತಿರುವ ಜಗತ್ತಿನ 6 ದೇಶಗಳಲ್ಲಿ ಭಾರತವೂ ಒಂದಾಗಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

    ದೇಶಸೇವೆ ಮಾಡುವಲ್ಲಿ ಎಚ್‌ಎಎಲ್‌ನ ಪಾತ್ರ ದೊಡ್ಡದು. ಡಾ.ಎಪಿಜೆ ಅಬ್ದುಲ್ ಕಲಾಂ ಮಿಸೈಲ್ ಮ್ಯಾನ್ ಅಂತಲೇ ಖ್ಯಾತಿ ಪಡೆದಿದ್ದರು. ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಅವರ ಕೊಡುಗೆ ಅಜರಾಮರವಾಗಿದೆ. ಇಂತಹ ವಿಜ್ಞಾನಿಗಳ ಸೇವೆಯೇ ನಮ್ಮನ್ನು ಹಲವು ಅಪಾಯಗಳಿಂದ ಕಾಪಾಡುತ್ತಿದೆ ಎಂದು ಸ್ಮರಿಸಿದ್ದಾರೆ. ಇದನ್ನೂ ಓದಿ: ಮಠದ ಹಣಕಾಸಿನ ವ್ಯವಹಾರಗಳಿಗೆ ಸಹಿ ಹಾಕಲು ಅವಕಾಶ ಕೊಡಿ – ಹೈಕೋರ್ಟ್‌ಗೆ ಮುರುಘಾ ಶ್ರೀ ಅರ್ಜಿ

    ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಮಾತನಾಡಿ, ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತ ಶತಮಾನಗಳಿಂದ ಹೆಜ್ಜೆ ಗುರುತು ಉಳಿಸಿಕೊಂಡು ಬಂದಿದೆ ಎಂದು ಶ್ಲಾಘಿಸಿದ್ದಾರೆ.

    ವಿಜ್ಞಾನಕ್ಕೆ ಎಲ್ಲೆ ಇಲ್ಲ. ಮಾನವನ, ಜೀವಸಂಕುಲದ ಹಿತ ಕಾಪಾಡವುದೇ ವಿಜ್ಞಾನದ ಅಂತಿಮ ಗುರಿಯಾಗಿದೆ. ಕ್ರಯೋಜನಿಕ್ ಎಂಜಿನ್ ಉತ್ಪಾದನೆ ಬಗ್ಗೆ ಕಳೆದ ನಾಲ್ಕೈದು ದಶಕಗಳಿಂದಲೂ ಚರ್ಚೆ ನಡೀತ್ತಿತ್ತು. ಇದೀಗ ನಮ್ಮ ರಾಜ್ಯ ಕ್ರಯೋಜನಿಕ್ ಇಂಜಿನ್ ಉತ್ಪಾದಿಸುತ್ತಿರುವುದು ನಮಗೆ ಹೆಮ್ಮೆ ತಂದಿದೆ. ಎಚ್‌ಎಎಲ್ ವಿಜ್ಞಾನಿಗಳಿಗೆ ಇದರ ಯಶಸ್ಸು ಸಲ್ಲಲಿದೆ. ಶೇ.25 ಏರೋಸ್ಪೇಸ್ ಬಿಡಿಭಾಗಗಳನ್ನು ಬೆಂಗಳೂರಿನಲ್ಲೇ ಉತ್ಪಾದಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಇಸ್ರೋಯಿಂದ ಹೈಬ್ರಿಡ್ ಎಂಜಿನ್ ಉತ್ಪಾದಿಸುವ ಗುರಿಯನ್ನು ಇಟ್ಟುಕೊಂಡಿದೆ. ರಾಜ್ಯದಲ್ಲಿ ಆರ್ ಅಂಡ್ ಡಿ ನೀತಿ ಜಾರಿಗೊಳಿಸಲಾಗಿದ್ದು, ಇದು ರಕ್ಷಣಾ ಸಂಶೋಧನೆಗೆ ಪೂರಕವಾಗಲಿದೆ ಎಂದು ಹೇಳಿದ್ದಾರೆ.

    ಇನ್ನೂ ನಮ್ಮ ಹೆಮ್ಮೆಯ ಇಸ್ರೋ ಸಾಧನೆಗಳಲ್ಲಿ ಒಂದೆನಿಸಿದ ಮಂಗಳಯಾನಕ್ಕೆ ನಿನ್ನೆಗೆ ಭರ್ತಿ 8 ವರ್ಷ. ಇಸ್ರೋ ನಿರ್ಮಿತ ಮಾರ್ಸ್ ಆರ್ಬಿಟರ್ ಮಿಷನ್ (Mars Orbiter Mission) ಮಂಗಳನ ಕಕ್ಷೆ ತಲುಪಿ ಎಂಟು ವರ್ಷವಾಗಿದೆ. ಇದು ಆರು ತಿಂಗಳಿದ್ರೆ ಸಾಕು ಎಂದು ಇಸ್ರೋ ಭಾವಿಸಿತ್ತು. ಆದ್ರೆ, ವಿಜ್ಞಾನಿಗಳ ಅಂದಾಜನ್ನು ಮೀರಿ ಮಾರ್ಸ್ ಆರ್ಬಿಟರ್ ಮಿಷನ್ ಈಗಲೂ ಉತ್ತಮವಾಗಿ ಕಾರ್ಯನಿರ್ವಹಿಸ್ತಿದೆ. ಮಂಗಳ ಕಕ್ಷೆಗೆ ಸೇರಿದ ದಿನದಿಂದಲೂ ಕೆಂಪು ಗ್ರಹದ ಕುರಿತ ಚಿತ್ರಗಳನ್ನು, ಮಾಹಿತಿಗಳನ್ನು ನಿರಂತರವಾಗಿ ಕಳಿಸುತ್ತಲೇ ಇದೆ. ಈ ವಿಚಾರದಲ್ಲಿ ಇಸ್ರೋ ವಿಜ್ಞಾನಿಗಳು ಖುಷಿ ಆಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಡಿಸೆಂಬರ್‌ನಲ್ಲಿ ಮೋದಿಯವರಿಂದ್ಲೇ ಧಾರವಾಡ IIT ಕ್ಯಾಂಪಸ್‌ ಉದ್ಘಾಟನೆ – ಜೋಶಿ

    ಡಿಸೆಂಬರ್‌ನಲ್ಲಿ ಮೋದಿಯವರಿಂದ್ಲೇ ಧಾರವಾಡ IIT ಕ್ಯಾಂಪಸ್‌ ಉದ್ಘಾಟನೆ – ಜೋಶಿ

    ಧಾರವಾಡ: ಡಿಸೆಂಬರ್ ತಿಂಗಳ ಅಂತ್ಯದೊಳಗೆ ಧಾರವಾಡ (Dharwad) ಐಐಟಿ (IIT) ಸಂಸ್ಥೆಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉದ್ಘಾಟಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ.

    ಪ್ರತಿಷ್ಠಿತ ಧಾರವಾಡದ ʻಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (IIIT)ʼಉದ್ಘಾಟನಾ ಕಾರ್ಯಕ್ರಮದಲ್ಲಿಂದು ಮಾತನಾಡಿದ ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಂದು ತ್ರಿಬಲ್ ಐಟಿ (IIIT) ಸಂಸ್ಥೆ ಕ್ಯಾಂಪಸ್ ಉದ್ಘಾಟಿಸಿದ್ದಾರೆ. ಇದೇ ವೇಳೆ ತ್ರಿಬಲ್ ಐಟಿ (IIIT) ಅಷ್ಟೇ ಅಲ್ಲ, ಐಐಟಿ (IIT) ಸಂಸ್ಥೆಯ ಕ್ಯಾಂಪಸ್ ಕೂಡ ಉದ್ಘಾಟನೆಗೆ ತಯಾರಾಗಿದೆ. ಡಿಸೆಂಬರ್‌ನಲ್ಲಿ ಪ್ರಧಾನಿ ಮೋದಿ ಅವರು ಧಾರವಾಡ ಐಐಟಿ (IIT) ಸಂಸ್ಥೆ ಉದ್ಘಾಟಿಸಲಿದ್ದಾರೆ ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: ಬೆಳಗ್ಗಿನ ಜಾವ ಮಲ ವಿಸರ್ಜನೆಗೆ ಹೋಗಿದ್ದ ಮಹಿಳೆ ಶವವಾಗಿ ಪತ್ತೆ

    ಧಾರವಾಡದ ಎರಡು ಪ್ರತಿಷ್ಠಿತ ಸಂಸ್ಥೆಗಳ ಕ್ಯಾಂಪಸ್ ನಿರ್ಮಾಣಕ್ಕೆ ಪ್ರಧಾನಿ ಮೋದಿ ಅವರು ಶಿಲಾನ್ಯಾಸ ನೆರವೇರಿಸಲು ಬಂದಿದ್ದರು. ಆದಗ ʻಈ ಎರಡು ಸಂಸ್ಥೆಗಳ ಕ್ಯಾಂಪಸ್ 5 ವರ್ಷದ ಸರ್ಕಾರದ ಅವಧಿಯಲ್ಲೇ ಪೂರ್ಣಗೊಳ್ಳಲಿದೆಯಾ?ʼ ಎಂದು ಪ್ರಶ್ನಿಸಿದ್ದರು. ಇಂದು ಎರಡು ಸಂಸ್ಥೆಗಳ ಕ್ಯಾಂಪಸ್ ತಯಾರಿಗಿ ನಿಂತಿವೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರ ಹಿಂದೆಂದಿಗಿಂತ ಹೆಚ್ಚಿನ ವೇಗದಲ್ಲಿ ಪ್ರಗತಿ ಕಾಣುತ್ತಿದ್ದು, ಈ ಸಮಯದಲ್ಲಿ ಧಾರವಾಡದಲ್ಲಿ ಐಐಐ-ಟಿ (IIIT) ಕಾರ್ಯಾರಂಭ ಮಾಡುತ್ತಿರುವುದು ಅತ್ಯಂತ ಸಂತಸ ಮೂಡಿಸಿದೆ ಹರ್ಷ ವ್ಯಕ್ತಪಡಿಸಿದ್ದಾರೆ.

    ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot), ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ (Basavaraj Bommai), ಸಂಸ್ಥೆಯ ನಿರ್ದೇಶಕರಾದ ಪ್ರೊ.ಕವಿ ಮಹೇಶ್‌, ಕುಲಸಚಿವರ ಪ್ರೊ.ಚೆನ್ನಪ್ಪ ಅಕ್ಕಿ, ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಧಾ ಮೂರ್ತಿ ಮೊದಲಾದವರು ಉಪಸ್ಥಿತರಿದ್ದರು. ಇದನ್ನೂ ಓದಿ: ಎಎಪಿ ಶಾಸಕ ಅಮಾನತುಲ್ಲಾ ಖಾನ್‍ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

    ರಾಷ್ಟ್ರಪತಿ ಮುರ್ಮುಗೆ ಪೌರ ಸನ್ಮಾನ: ಗೌರವಾನ್ವಿತ ರಾಷ್ಟ್ರಪತಿಗಳಿಗೆ ಹುಬ್ಬಳ್ಳಿ-ಧಾರವಾಡದ ಜನತೆಯ ಪರವಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವತಿಯಿಂದ ಪೌರ ಸನ್ಮಾನಿಸಲಾಯಿತು.

    ಬಳಿಕ ಮಾತನಾಡಿದ ಪ್ರಲ್ಹಾದ್‌ ಜೋಶಿ, ಹುಬ್ಬಳ್ಳಿ ಧಾರವಾಡದಲ್ಲಿ ಇದೊಂದು ಐತಿಹಾಸಿಕ ಕ್ಷಣ. ರಾಷ್ಟ್ರಪತಿ ಮುರ್ಮು ಅವರಿಗೆ ನಮ್ಮ ಮಹಾನಗರ ಪಾಲಿಕೆಯಿಂದ ಸನ್ಮಾನಿಸಿದ್ದು ಅತ್ಯಂತ ಹೆಮ್ಮೆ. 35 ವರ್ಷದ ಬಳಿಕ ರಾಷ್ಟ್ರಪತಿಗಳಿಗೆ ಸನ್ಮಾನ ಮಾಡುವ ಅವಕಾಶ ಅವಳಿ ನಗರ ಪಾಲಿಕೆಗೆ ದೊರೆತಿರುವುದು ಗೌರವದ ಸಂಗತಿ ಎಂದು ಅಭಿಪ್ರಾಯಪಟ್ಟರು.

    Live Tv
    [brid partner=56869869 player=32851 video=960834 autoplay=true]

  • ಮೈಸೂರು ಸಿಲ್ಕ್‌ ಸೀರೆ ಧರಿಸಿ ದಸರಾಗೆ ಚಾಲನೆ ನೀಡಿದ ದ್ರೌಪದಿ ಮುರ್ಮು

    ಮೈಸೂರು ಸಿಲ್ಕ್‌ ಸೀರೆ ಧರಿಸಿ ದಸರಾಗೆ ಚಾಲನೆ ನೀಡಿದ ದ್ರೌಪದಿ ಮುರ್ಮು

    ಮೈಸೂರು: ಮೈಸೂರು ಸಿಲ್ಕ್‌ ಧರಿಸಿ ವಿಶ್ವ ವಿಖ್ಯಾತ ದಸರಾವನ್ನು (Dasara) ಉದ್ಘಾಟನೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೆ ಚಾಮುಂಡೇಶ್ವರಿ ದೇವಿಯ ವಿಗ್ರಹವನ್ನು ಉಡುಗೊರೆಯಾಗಿ ನೀಡಲಾಗಿದೆ.

    ಚಾಮುಂಡೇಶ್ವರಿ ದೇವಿಯ ಮೂರ್ತಿ ಜೊತೆಗೆ ಮೈಸೂರು ರೇಷ್ಮೆ ಸೀರೆಯನ್ನು ಸಹ ರಾಷ್ಟ್ರಪತಿಗಳಿಗೆ ಉಡುಗೊರೆಯಾಗಿ ನೀಡಲಾಗಿತ್ತು. ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ರಾಷ್ಟ್ರಪತಿಗಳ ಭವನಕ್ಕೆ ಸಚಿವರು ತೆರಳಿದ ಸಂದರ್ಭದಲ್ಲಿ ಮೈಸೂರು ಸಿಲ್ಕ್ ಸೀರೆಯನ್ನು (Mysore Silk Saree) ಉಡುಗೊರೆಯನ್ನಾಗಿ ನೀಡಿ ಮೈಸೂರು ನೆಲದ ವಿಶೇಷತೆಯನ್ನು ರಾಷ್ಟ್ರಪತಿ ಭವನಕ್ಕೆ ತಲುಪಿಸಿದ್ದಾರೆ.

    ವಿಶೇಷವೆಂದರೆ ಉಡುಗೊರೆ ನೀಡಿದ್ದ ಸುಮಾರು 70 ಸಾವಿರ ರೂ. ಬೆಲೆಯ ಮೈಸೂರು ರೇಷ್ಮೆ ಸೀರೆಯನ್ನುಟ್ಟುಕೊಂಡೇ ಸಾಂಸ್ಕೃತಿಕ ನಗರಿಗೆ ಆಗಮಿಸಿದ ರಾಷ್ಟ್ರಪತಿಗಳು ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ದಸರಾ ಮಹೋತ್ಸವವನ್ನು ಉದ್ಘಾಟಿಸಿದರು. ಇದನ್ನೂ ಓದಿ: ಇತಿಹಾಸದಲ್ಲೇ ಮೊದಲ ಬಾರಿಗೆ ಮೈಸೂರು ದಸರಾಗೆ ರಾಷ್ಟ್ರಪತಿಯಿಂದ ಚಾಲನೆ

    ಸೆ.22 ರಂದು ಮೈಸೂರು ಉಸ್ತುವಾರಿ ಸಚಿವ ಎಸ್‌ಟಿ ಸೋಮಶೇಖರ್‌, ಸಂಸದ ಪ್ರತಾಪ್‌ ಸಿಂಗ ಅವರನ್ನು ಒಳಗೊಂಡ ಮೈಸೂರು ದಸರಾ ಸಮಿತಿ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಆಹ್ವಾನಿಸಿದ್ದರು. ಈ ಭೇಟಿಯ ಸಮದಯಲ್ಲಿ ಮೈಸೂರು ಸಿಲ್ಕ್‌ ಸೀರೆಯನ್ನು ಉಡುಗೊರೆಯಾಗಿ ನೀಡಿದ್ದರು.

    ರಾಷ್ಟ್ರಪತಿಯವರು ಬಿಳಿ ಸೀರೆ ಇಷ್ಟಪಡುತ್ತಾರೆ ಎಂಬುದನ್ನು ಅರಿತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರಿ ಸ್ವಾಮ್ಯದ ಕೆ.ಎಸ್.ಐ.ಸಿ.ಯ ಸರ್ಕಾರಿ ರೇಷ್ಮೆ ಕಾರ್ಖಾನೆಗೆ ಈ ಉಡುಪು ತಯಾರಿಕೆಗೆ ಆದೇಶ ನೀಡಿ, ಸಿದ್ಧಪಡಿಸಲು ಸೂಚಿಸಿದ್ದರು. ಮೈಸೂರಿನ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 1912ರಲ್ಲಿ ನಿರ್ಮಿಸಿದ ರೇಷ್ಮೆ ಕಾರ್ಖಾನೆ ಎಂಬ ಹೆಮ್ಮೆ ಈ ಕಾರ್ಖಾನೆಗೆ ಇದೆ.

    ಮೈಸೂರು ಸಿಲ್ಕ್ ಸೀರೆ ಬ್ರಾಂಡ್ ವಿಶ್ವಪ್ರಸಿದ್ಧ ಬ್ರಾಂಡ್ ಆಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಷ್ಟಪಡುವ ನೈಸರ್ಗಿಕ ಬಿಳಿ ಬಣ್ಣದ ಅಪ್ಪಟ ರೇಷ್ಮೆ ಮತ್ತು ಅಪ್ಪಟ ಚಿನ್ನದ ಎಳೆಗಳನ್ನು ಬಳಸಿ ತಯಾರಿಸಿದ ಈ ಉಡುಪನ್ನು ಗೌರವಸೂಚಕವಾಗಿ ಅವರಿಗೆ ಸಮರ್ಪಿಸಲಾಗಿತ್ತು.

    ಇನ್ನೂ ರಾಷ್ಟ್ರಪತಿಗೆ ನೀಡಿದ ಉಡುಗೊರೆಯು 92.5% ಪರಿಶುದ್ಧ ಬೆಳ್ಳಿಯಿಂದ ಕೂಡಿರುವ ಚಾಮುಂಡೇಶ್ವರಿ ದೇವಿಯ ಮೂರ್ತಿಯನ್ನು ರಾಜಸ್ಥಾನದ ಜೈಪುರ್‌ನ ಕರಕುಶಲಕಾರರಿಂದ ವಿನ್ಯಾಸಗೊಳಿಸಲಾಗಿದೆ. ಚಾಮುಂಡೇಶ್ವರಿ ದೇವಿಯ ಉಡುಗೊರೆ 4.25 ಕೆಜಿ ತೂಕವನ್ನು ಹೊಂದಿದೆ.

    Live Tv
    [brid partner=56869869 player=32851 video=960834 autoplay=true]

  • ಇಂದು ರಾಷ್ಟ್ರಪತಿಗಳಿಂದ ಮೈಸೂರು ದಸರಾ ಉದ್ಘಾಟನೆ – ಏನೇನು ಕಾರ್ಯಕ್ರಮ ನಡೆಯಲಿದೆ?

    ಇಂದು ರಾಷ್ಟ್ರಪತಿಗಳಿಂದ ಮೈಸೂರು ದಸರಾ ಉದ್ಘಾಟನೆ – ಏನೇನು ಕಾರ್ಯಕ್ರಮ ನಡೆಯಲಿದೆ?

    ಮೈಸೂರು: ಕಳೆದ ಎರಡು ವರ್ಷದಿಂದ ಕೊರೊನಾ ಮಹಾಮಾರಿಯಿಂದ ಮಂಕಾಗಿದ್ದ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ ಈ ಬಾರಿ ವಿಜೃಂಭಣೆಯಿಂದ ಜರುಗಲಿದೆ. ಇಂದಿನಿಂದ 9 ದಿನಗಳ ಕಾಲ ಸಾಂಸ್ಕೃತಿಕ ನಗರಿಯಲ್ಲಿ ನವರಾತ್ರಿ ವೈಭವ ಆರಂಭವಾಗಲಿದೆ.

    ವೈಭಪೂರಿತ ದಸರಾ ಮಹೋತ್ಸವಕ್ಕೆ ಇಂದು ರಾಷ್ಟ್ರಪತಿ ದ್ರೌಪತಿ ಮುರ್ಮ ಚಾಲನೆ ನೀಡಲಿದ್ದಾರೆ. ಇಂದು ಬೆಳಗ್ಗೆ 10ಕ್ಕೆ ರಾಷ್ಟ್ರಪತಿ ಮುರ್ಮು, ತಾಯಿ ಚಾಮುಂಡಿ ಉತ್ಸವ ಮೂರ್ತಿಗೆ ಪುಷ್ಪರ್ಚಾನೆ ಸಲ್ಲಿಸಿ, ದೀಪ ಬೆಳಗುವ ಮೂಲಕ ಚಾಲನೆ ನೀಡಲಿದ್ದು, ರಾಜ್ಯಪಾಲರು, ಸಿಎಂ, ಕೇಂದ್ರ ಸಚಿವರು ಸಾಥ್ ನೀಡಲಿದ್ದಾರೆ.

    ಇತ್ತ ಅಂಬಾವಿಲಾಸ ಅರಮನೆಯಲ್ಲಿ ಇಂದಿನಿಂದ ಖಾಸಗಿ ದರ್ಬಾರ್ ನಡೆಯಲಿದ್ದು, ಗತಕಾಲದ ವೈಭವ ಮರುಕಳಿಸಲಿದೆ. ದಸರಾ ಕಾರ್ಯಕ್ರಮದ ಆಕರ್ಷಣೆಯ ಕೇಂದ್ರವಾಗಿರುವ ಫಲಪುಷ್ಪ ಪ್ರದರ್ಶನ ಉದ್ಘಾಟನೆಗೆ ಭರದ ಸಿದ್ಧತೆ ಸಾಗಿದೆ. ಇಂದಿನಿಂದ ಅಕ್ಟೋಬರ್ 5ರವರೆಗೆ ನಗರದ ಕುಪ್ಪಣ್ಣ ಉದ್ಯಾನದಲ್ಲಿ ಫಲಪುಷ್ಪ ಪ್ರದರ್ಶನದ ಏರ್ಪಡಿಸಲಾಗಿದೆ.

    ದಸರಾ ತಯಾರಿಯನ್ನು ಸಿಎಂ ಬೊಮ್ಮಾಯಿ ವೀಕ್ಷಿಸಿದ್ದು, ರಾತ್ರಿ ಸಿಟಿ ರೌಂಡ್ಸ್ ಮಾಡುವ ಮೂಲಕ ವಿದ್ಯುತ್ ದೀಪಾಲಂಕಾರವನ್ನು ನೋಡಿ ಆನಂದಿಸಿದ್ದಾರೆ.  ಇದನ್ನೂ ಓದಿ: ಕೊಹ್ಲಿ ಜೊತೆ ಸೂರ್ಯನ ಅಬ್ಬರ – ವಿಶ್ವಚಾಂಪಿಯನ್ನರಿಗೆ ಸೋಲು, ಭಾರತಕ್ಕೆ T20 ಸರಣಿ

    ರಾಷ್ಟ್ರಪತಿಗಳ ದಸರಾ ಕಾರ್ಯಕ್ರಮ ವಿವರ
    ಬೆಳಗ್ಗೆ 9:00 – ಮೈಸೂರು ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮನ
    ಬೆಳಗ್ಗೆ 9.30 – ಚಾಮುಂಡಿಬೆಟ್ಟಕ್ಕೆ ಭೇಟಿ, ವಿಶೇಷ ಪೂಜೆ
    ಬೆಳಗ್ಗೆ 10:00 – ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮೂಲಕ ದಸರೆಗೆ ಚಾಲನೆ
    ಬೆಳಗ್ಗೆ 10:45 – ಚಾಮುಂಡಿ ಬೆಟ್ಟದಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಪ್ರಯಾಣ
    ಬೆಳಗ್ಗೆ 11:15 – ಮೈಸೂರಿನಿಂದ ಹುಬ್ಬಳ್ಳಿಗೆ ಪ್ರಯಾಣ

    ಇಂದಿನ ಕಾರ್ಯಕ್ರಮಗಳು ಏನು?
    – ಬೆಳಗ್ಗೆ 9:45 ರಿಂದ 10.05ರ ಶುಭ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆ
    – ಮಧ್ಯಾಹ್ನ 12:00 – ಕೈಗಾರಿಕಾ ದಸರಾ ಉದ್ಘಾಟಿಸಲಿರುವ ಸಚಿವ ನಿರಾಣಿ ಸ್ಥಳ: ವಿಜ್ಞಾನ ಭವನ
    – ಮಧ್ಯಾಹ್ನ 12:30 – ಶಿವರಾಜ್‍ಕುಮಾರ್ ಅವರಿಂದ ಚಲನಚಿತ್ರೋತ್ಸವ ಉದ್ಘಾಟನೆ ಸ್ಥಳ: ಕಲಾಮಂದಿರ
    – ಮಧ್ಯಾಹ್ನ 12.30 – ಫಲಪುಷ್ಪ ಪ್ರದರ್ಶನ ಉದ್ಘಾಟಿಸಲಿರುವ ಸಚಿವ ಮುನಿರತ್ನ ಸ್ಥಳ: ಕುಪ್ಪಣ್ಣ ಪಾರ್ಕ್
    – ಮಧ್ಯಾಹ್ನ 1.00 – ಸಚಿವ ಎಸ್‍ಟಿಎಸ್ ಅವರಿಂದ ಆಹಾರ ಮೇಳ ಉದ್ಘಾಟನೆ ಸ್ಥಳ: ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನ

    – ಮಧ್ಯಾಹ್ನ 3:30 – ದಸರಾ ಕುಸ್ತಿ ಪಂದ್ಯಾವಳಿ ಉದ್ಘಾಟಿಸಲಿರುವ ಸಿಎಂ ಬೊಮ್ಮಾಯಿ, ಸ್ಥಳ: ದೇವರಾಜ ಅರಸು ಕ್ರೀಡಾಂಗಣ
    – ಸಂಜೆ 4- ವಸ್ತು ಪ್ರದರ್ಶನ ಉದ್ಘಾಟಿಸಲಿರುವ ಸಚಿವ ಆನಂದ್ ಸಿಂಗ್
    – ಸಂಜೆ 5 – ಯೋಗ ದಸರಾ, ನೃತ್ಯರೂಪಕ, ಸ್ಥಳ: ಓವೆಲ್ ಮೈದಾನ
    – ಸಂಜೆ 5:30 – ಅರಮನೆಯಲ್ಲಿ ಸಚಿವ ಎಸ್‍ಟಿ. ಸೋಮಶೇಖರ್ ಅವರಿಂದ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಫಲಪುಷ್ಪ ಪ್ರದರ್ಶನ ಉದ್ಘಾಟನೆ

    – ಸಂಜೆ 5:30 – ರಾಜ್ಯಮಟ್ಟದ ಶಿಲ್ಪ ಚಿತ್ರಕಲೆ ಪ್ರದರ್ಶನ ಉದ್ಘಾಟಿಸಲಿರುವ ಸಚಿವ ಸುನೀಲ್ ಕುಮಾರ್, ಸ್ಥಳ: ಕಲಾಮಂದಿರ
    – ಸಂಜೆ 6 – ಅರಮನೆ ವೇದಿಕೆ ಕಾರ್ಯಕ್ರಮ, ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರಧಾನ ಸಮಾರಂಭ, ಉದ್ಘಾಟನೆ ಸಿಎಂ ಬೊಮ್ಮಾಯಿ
    – ಸಂಜೆ 6:30 – ವಿದ್ಯುತ್ ದೀಪಾಲಂಕಾರ ಉದ್ಘಾಟಿಸಲಿರುವ ಸಚಿವ ಸುನೀಲ್ ಕುಮಾರ್, ಸ್ಥಳ: ಸೈಯಾಜಿರಾವ್ ರಸ್ತೆ

    Live Tv
    [brid partner=56869869 player=32851 video=960834 autoplay=true]

  • ಬ್ಯಾನರ್ ಎಡವಟ್ಟು – ದೇಶದ ಮೊದಲ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು ಎಂದು ಬರೆಸಿದ ಶಾಸಕರು

    ಬ್ಯಾನರ್ ಎಡವಟ್ಟು – ದೇಶದ ಮೊದಲ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು ಎಂದು ಬರೆಸಿದ ಶಾಸಕರು

    ಧಾರವಾಡ: ದೇಶದ ಮೊದಲ ಮಹಿಳಾ ರಾಷ್ಟ್ರಪತಿ (President) ಯಾರು ಎಂದು ಎಲ್ಲರಿಗೆ ಗೊತ್ತಿರುವ ವಿಚಾರ. ಆದರೆ ಧಾರವಾಡದ ಶಾಸಕರೊಬ್ಬರು ದೇಶದ ಮೊದಲ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೆ ಸ್ವಾಗತ ಎಂದು ಬ್ಯಾನರ್‌ನಲ್ಲಿ ಹಾಕಿಕೊಂಡು ಎಡವಟ್ಟು ಮಾಡಿದ್ದಾರೆ.

    ನಾಳೆ ಧಾರವಾಡಕ್ಕೆ (Dharwada) ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುತಿದ್ದಾರೆ. ಇಡಗಟ್ಟಿ ಹಾಗೂ ತಡಸಿನಕೊಪ್ಪ ಗ್ರಾಮದ ಹತ್ತಿರ ನಿರ್ಮಾಣಗೊಂಡಿರುವ ಐಐಟಿ (IIT) ಉದ್ಘಾಟನಾ ಕಾರ್ಯಕ್ರಮಕ್ಕೆ ದ್ರೌಪದಿ ಮುರ್ಮು ಬರುತ್ತಿದ್ದಾರೆ. ಈ ಹಿನ್ನೆಲೆ ಧಾರವಾಡ ಶಾಸಕ ಅರವಿಂದ ಬೆಲ್ಲದ್ (Arvind Bellad) ರಾಷ್ಟ್ರಪತಿಗೆ ಸ್ವಾಗತ ಕೋರಿ ಬ್ಯಾನರ್ ಹಾಕಿದ್ದು, ಅದರಲ್ಲಿ ಎಡವಟ್ಟು ಮಾಡಿದ್ದಾರೆ. ದೇಶದ ಮೊಲದ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸ್ವಾಗತ ಎಂದು ಬರೆಸಿದ್ದಾರೆ. ಇದನ್ನೂ ಓದಿ: ಆ ಭಾಗ್ಯ ಈ ಭಾಗ್ಯ ಅಂತಾ ರಾಜ್ಯಕ್ಕೆ ದೌರ್ಭಾಗ್ಯ ಕೊಟ್ಟರು: ಸಿದ್ದುಗೆ ಬೊಮ್ಮಾಯಿ ಟಾಂಗ್‌

    ಮುರ್ಮು ಅವರು ದೇಶದ ಮೊದಲ ಮಹಿಳಾ ರಾಷ್ಟ್ರಪತಿ ಅಲ್ಲ. ದೇಶದ ಮೊದಲ ಮಹಿಳಾ ರಾಷ್ಟ್ರಪತಿ ಪ್ರತಿಭಾ ಪಾಟೀಲ್ (Pratibha Patil). ಇದೀಗ ಬ್ಯಾನರ್‌ನಲ್ಲಿ ತಪ್ಪಾಗಿ ಹಾಕಿರುವುದರಿಂದಾಗಿ ಶಾಸಕರಿಗೆ ದೇಶದ ಮೊದಲ ಮಹಿಳಾ ರಾಷ್ಟ್ರಪತಿ ಯಾರೆಂದು ಗೊತ್ತಿಲ್ಲ ಎಂದು ಜನರೇ ವ್ಯಂಗ್ಯವಾಡುತ್ತಿದ್ದಾರೆ. ಇದನ್ನೂ ಓದಿ: ಅವರೆಲ್ಲಾ ಸಿಎಂ ಆಗಿದ್ದಾಗ ಬೀಗರ ಊಟ, ಮದುವೆಗೆ ಬರ್ತಿದ್ರು, ಬೊಮ್ಮಾಯಿ ಅಭಿವೃದ್ಧಿ ಕೆಲಸಕ್ಕೆ ಬರ್ತಿದ್ದಾರೆ: ಪ್ರತಾಪ್ ಸಿಂಹ

    Live Tv
    [brid partner=56869869 player=32851 video=960834 autoplay=true]