Tag: DRS

  • ಭಾರತ ಕೊಟ್ಟ ಏಟಿಗೆ ಡಿಆರ್‌ಎಸ್‌ ನಿಯಮವನ್ನೇ ಕೈಬಿಟ್ಟ ಪಿಎಸ್‌ಎಲ್‌!

    ಭಾರತ ಕೊಟ್ಟ ಏಟಿಗೆ ಡಿಆರ್‌ಎಸ್‌ ನಿಯಮವನ್ನೇ ಕೈಬಿಟ್ಟ ಪಿಎಸ್‌ಎಲ್‌!

    – ಪಾಕ್‌ ತೊರೆದ ಹಾಕ್‌ಐ ತಂತ್ರಜ್ಞರು
    – ಮೇ 17 ರಿಂದ ಟಿ-20 ಲೀಗ್‌ ಆರಂಭ

    ಕರಾಚಿ: ಭಾರತದ ಆಪರೇಷನ್‌ ಸಿಂಧೂರ (Operation Sindoor) ಕಾರ್ಯಾಚರಣೆಯಿಂದ ಸ್ಥಗಿತಗೊಂಡಿದ್ದ ಪಾಕಿಸ್ತಾನ ಸೂಪರ್‌ ಲೀಗ್‌ (PSL) ಮೇ 17 ರಿಂದ ಪುನಾರಂಭಗೊಂಡಿದ್ದರೂ ಪಂದ್ಯಗಳಲ್ಲಿ ತೀರ್ಪು ಮರು ಪರಿಶೀಲನಾ ನಿಯಮವನ್ನು(DRS) ಕೈಬಿಟ್ಟಿದೆ.

    ಡಿಆರ್‌ಎಸ್‌ಗೆ ಬೇಕಾಗಿರುವ ಹಾಕ್‌ಐ (Hawk-Eye) ಬಳಸಲು ಗೊತ್ತಿರುವ ತಂತ್ರಜ್ಞರು ಪಾಕಿಸ್ತಾನದಲ್ಲಿ (Pakistan) ಇಲ್ಲದ ಕಾರಣ ಈ ನಿಯಮನ್ನೇ ಕೈಬಿಡಲಾಗಿದೆ. ಟೂರ್ನಿ ಸ್ಥಗಿತಗೊಂಡ ಕಾರಣ ಹಾಕ್‌ಐ ತಂಡದ ಸದಸ್ಯರು ತಮ್ಮ ದೇಶಕ್ಕೆ ಮರಳಿದ್ದಾರೆ.

    ಪಿಎಸ್‌ಎಲ್‌ ಆರಂಭಗೊಂಡಿದ್ದರೂ ಹಾಕ್‌ಐ ತಂತ್ರಜ್ಞರು ಪಾಕಿಸ್ತಾನಕ್ಕೆ ಮರಳಲು ಹಿಂದೇಟು ಹಾಕಿದ್ದಾರೆ. ಪಾಕ್‌ನಲ್ಲಿ ಬೇರೆ ಯಾರಿಗೂ ಡಿಆರ್‌ಎಸ್ ಬಳಕೆಯ ಬಗ್ಗೆ ತಿಳಿಯದ ಕಾರಣ ಈ ನಿಯಮವನ್ನೇ ಟೂರ್ನಿಯಿಂದ ಕೈಬಿಡಲಾಗಿದೆ. ಹೀಗಾಗಿ ಅಂಪೈರ್ ನಿರ್ಧಾರವೇ ಅಂತಿಮವಾಗಿದ್ದು ಮರು ಪರಿಶೀಲನೆಗೆ ಆಟಗಾರರಿಗೆ ಅವಕಾಶವಿಲ್ಲದಂತಾಗಿದೆ.  ಇದನ್ನೂ ಓದಿ: ಜೈಶಂಕರ್‌ ಕರೆ ಬೆನ್ನಲ್ಲೇ ತಾಲಿಬಾನ್‌ ವಿದೇಶಾಂಗ ಸಚಿವರನ್ನೇ ಬೀಜಿಂಗ್‌ಗೆ ಕರೆಸಿ ಪಾಕ್‌ ಜೊತೆ ಕೈ ಕುಲುಕಿಸಿದ ಚೀನಾ!

    ಪಿಎಸ್ಎಲ್‌ನ ಡಿಆರ್‌ಎಸ್‌ ಮತ್ತು ಹಾಕ್-ಐ ತಂತ್ರಜ್ಞಾನಗಳನ್ನು ನಿರ್ವಹಿಸುತ್ತಿದ್ದವರ ಪೈಕಿ ಹೆಚ್ಚಿನ ತಂತ್ರಜ್ಞರು ಭಾರತದವರೇ ಆಗಿದ್ದಾರೆ ಎಂದು ವರದಿಯಾಗಿದೆ. ಪಿಎಸ್‌ಎಲ್‌ನ ಕೊನೆಯ ಕೆಲವು ಪಂದ್ಯಗಳು ಡಿಆರ್‌ಎಸ್‌ ಇಲ್ಲದೇ ಪೂರ್ಣಗೊಳ್ಳುವ ಕಾರಣ ತಂಡಗಳಿಗೆ ದೊಡ್ಡ ಹೊಡೆತ ಬಿದ್ದಿದೆ. ಇದನ್ನೂ ಓದಿ: ಉಗ್ರರು ಪಾಕಿಸ್ತಾನದಲ್ಲೇ ಅಡಗಿದ್ರೂ ನುಗ್ಗಿ ಹೊಡೆಯುತ್ತೇವೆ: ಜೈಶಂಕರ್‌

    ಪುನರಾರಂಭದ ನಂತರದ ಮೊದಲ ಐದು ಪಂದ್ಯಗಳು ಯಾವುದೇ ವಿವಾದ ಇಲ್ಲದೇ ನಡೆದಿದೆ. ಪಿಎಸ್‌ಎಲ್ ಅಥವಾ ಪಿಸಿಬಿ ಡಿಆರ್‌ಎಸ್‌ ಕೈಬಿಟ್ಟ ಬಗ್ಗೆ ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.

    ಭಾರತದ ಐಪಿಎಲ್‌ಗೆ ಪ್ರತಿಯಾಗಿ ಪಾಕಿಸ್ತಾನ ಪಿಎಸ್‌ಎಲ್‌ ಅನ್ನು 2017 ರಿಂದ ಆರಂಭಿಸಿದೆ. 2017 ರಿಂದ ಮೇ 7 ರವರೆಗೂ ಡಿಆರ್‌ಎಸ್‌ ನಿಯಮ ಜಾರಿಯಲ್ಲಿತ್ತು.

  • ರೋಹಿತ್ ಶರ್ಮಾ ಈ ತಪ್ಪನ್ನು ಮಾಡ್ತಾರೆ: ಇರ್ಫಾನ್ ಪಠಾಣ್

    ರೋಹಿತ್ ಶರ್ಮಾ ಈ ತಪ್ಪನ್ನು ಮಾಡ್ತಾರೆ: ಇರ್ಫಾನ್ ಪಠಾಣ್

    ರಾಯ್‌ಪುರ: ನ್ಯೂಜಿಲೆಂಡ್ (New Zealand) ವಿರುದ್ಧ ನಡೆಯುತ್ತಿರುವ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ (India) 2-0 ಅಂತರದಲ್ಲಿ ಗೆದ್ದು ಸರಣಿ ವಶಪಡಿಸಿಕೊಂಡಿದೆ. 2ನೇ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಬೌಲಿಂಗ್ ಪ್ರದರ್ಶನ ನೀಡಿದ ಟೀಂ ಇಂಡಿಯಾ (Team India) ಎದುರಾಳಿ ತಂಡವನ್ನ ಅತ್ಯಲ್ಪ ಮೊತ್ತಕ್ಕೆ ಕಟ್ಟಿಹಾಕಿತು.

    ಈ ಪಂದ್ಯದಲ್ಲಿ 50 ಎಸೆತ ಎದುರಿಸಿದ ನಾಯಕ ರೋಹಿತ್ ಶರ್ಮಾ (Rohit Sharma) 51 ರನ್ ಗಳಿಸಿ ಔಟಾದರು. ಎಲ್‌ಬಿಡಬ್ಲ್ಯೂ (LBW) ಆದ ನಂತರ ಅವಕಾಶವಿದ್ದರೂ ಡಿಆರ್‌ಎಸ್ (DRS) ತೆಗೆದುಕೊಳ್ಳದೇ ಕ್ರೀಸ್ ಬಿಟ್ಟು ಹೊರನಡೆದರು. ಈ ಕುರಿತು ಭಾರತದ ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್ (Irfan Pathan) ಮಾತನಾಡಿದ್ದಾರೆ. ಇದನ್ನೂ ಓದಿ: 120 ವರ್ಷಗಳ ಬಳಿಕ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್? – 6 ತಂಡಗಳ ಟೂರ್ನಿಗೆ ಐಸಿಸಿ ಪ್ರಸ್ತಾಪ

    `ರೋಹಿತ್ ಶರ್ಮಾ (Rohit Sharma) ಈ ಒಂದು ತಪ್ಪನ್ನ ಮಾಡ್ತಾರೆ. ಬಾಲ್ ಅವರ ಪ್ಯಾಡ್‌ಗೇ ಬಡಿದು ಎಲ್‌ಬಿಡಬ್ಲ್ಯೂ ಆದಾಗ ಅವರಿಗೆ ಡಿಆರ್‌ಎಸ್ ತೆಗೆದುಕೊಳ್ಳುವ ಅವಕಾಶವಿತ್ತು. ಆದರೂ ತೆಗೆದುಕೊಳ್ಳಲಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: 48 ವರ್ಷಗಳ ಕನಸು ಮತ್ತೆ ಭಗ್ನ – ನ್ಯೂಜಿಲೆಂಡ್‌ ವಿರುದ್ಧ ಸೋತು ವಿಶ್ವಕಪ್‌ ಟೂರ್ನಿಯಿಂದ ಹೊರಬಿದ್ದ ಭಾರತ

    ರೋಹಿತ್ ಶರ್ಮಾ ಈಗ ಫುಲ್ ಫಾರ್ಮ್‌ನಲ್ಲಿದ್ದಾರೆ. ಆಫ್ ಸೈಡ್ ಮತ್ತು ಲೆಗ್ ಸೈಡ್‌ನಲ್ಲಿ ಅವರ ಅದ್ಭುತ ಶಾಟ್‌ಗಳನ್ನ ನಾವು ನೋಡಿದ್ದೇವೆ. ಟಾರ್ಚ್ ಲೈಟ್ ಬೆಳಕಿನಲ್ಲಿ ಬ್ಯಾಟಿಂಗ್ ಮಾಡುವುದು ಸುಲಭವಲ್ಲ. ಆದರೂ ರೋಹಿತ್ ಅವರು ಯಾವುದೇ ಒತ್ತಡವಿಲ್ಲದೇ ಮೈಲಿಗಲ್ಲು ಸಾಧಿಸಿದರು ಎಂದು ಪಠಾಣ್ ಶ್ಲಾಘಿಸಿದ್ದಾರೆ.

    ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 2-0 ಅಂತರದಲ್ಲಿ ಗೆದ್ದು ಸರಣಿ ವಶಪಡಿಸಿಕೊಂಡಿದೆ. ಮಾರಕ ಬೌಲಿಂಗ್ ದಾಳಿ, ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಟೀಂ ಇಂಡಿಯಾ ಎದುರಾಳಿ ತಂಡವನ್ನು 2ನೇ ಪಂದ್ಯದಲ್ಲಿ 108ಕ್ಕೆ ಆಲೌಟ್ ಮಾಡಿತು. 109 ರನ್‌ಗಳ ಗುರಿ ಬೆನ್ನತ್ತಿ 20.1 ಓವರ್‌ಗಳಲ್ಲೇ 111 ರನ್ ಚಚ್ಚಿ ಗೆಲುವಿನ ನಗೆ ಬೀರಿತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆ ಬಿಸಿಸಿಐಗೆ ರಣಜಿ ಟ್ರೋಫಿಯಲ್ಲಿ DRS ಬಳಸಲು ಹಣವಿಲ್ಲ!

    ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆ ಬಿಸಿಸಿಐಗೆ ರಣಜಿ ಟ್ರೋಫಿಯಲ್ಲಿ DRS ಬಳಸಲು ಹಣವಿಲ್ಲ!

    ಬೆಂಗಳೂರು: ನಗರದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಡಿಆರ್‌ಎಸ್ (ಮೈದಾನದ ಅಂಪೈರ್ ತೀರ್ಪಿನ ವಿರುದ್ಧ ಮೂರನೇ ಅಂಪೈರ್‌ಗೆ ಮೇಲ್ಮನವಿ ಸಲ್ಲಿಸುವ ಅವಕಾಶ) ಇಲ್ಲದೆ ಹಲವು ಗೊಂದಲಕ್ಕೆ ಕಾರಣವಾಗಿದೆ. ಈ ಮೂಲಕ ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆ ಬಿಸಿಸಿಐಗೆ ಡಿಆರ್‌ಎಸ್ ತಂತ್ರಜ್ಞಾನ ಅಳವಡಿಸಲು ಹಣವಿಲ್ಲದ ಪರಿಸ್ಥಿತಿ ಬಂದಿದೆ ಎಂಬ ಟೀಕೆಗೆ ಗುರಿಯಾಗಿದೆ.

    ರಣಜಿ ಫೈನಲ್ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಫೈನಲ್‍ನಲ್ಲಿ ಮುಂಬೈ ಮತ್ತು ಮಧ್ಯಪ್ರದೇಶ ತಂಡ ಕಾದಾಡುತ್ತಿದೆ. ಈ ಪಂದ್ಯದಲ್ಲಿ ಮುಂಬೈ ತಂಡದ ಬ್ಯಾಟ್ಸ್‌ಮ್ಯಾನ್‌ ಸರ್ಫರಾಜ್ ಖಾನ್ ಎಲ್‍ಬಿಡಬ್ಲ್ಯೂ ಬಲೆಗೆ ಬಿದ್ದರೂ ಮೈದಾನದ ಅಂಪೈರ್ ನೀಡಿದ ತೀರ್ಪಿನಿಂದ ಬಚಾವ್ ಆಗಿ ಅಮೋಘ ಶತಕ ಸಿಡಿಸಿ ಬೀಗಿದ್ದರು. ಈ ವೇಳೆ ಮಧ್ಯಪ್ರದೇಶ ತಂಡ ಮೂರನೇ ಅಂಪೈರ್‌ಗೆ ಮನವಿ ಸಲ್ಲಿಸುವ ಡಿಆರ್‌ಎಸ್ ಅವಕಾಶ ಇದ್ದಿದ್ದರೆ ಅದರ ಲಾಭ ಪಡೆಯುತ್ತಿತ್ತು. ಈ ಪಂದ್ಯದಲ್ಲಿ ಡಿಆರ್‌ಎಸ್ ತಂತ್ರಜ್ಞಾನವನ್ನು ಬಿಸಿಸಿಐ ಬಳಸಿರಲಿಲ್ಲ. ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ವರ್ಷ ಪೂರೈಸಿದ ಹಿಟ್‌ಮ್ಯಾನ್ – ಭಾವುಕ ಪತ್ರ ಬರೆದ ರೋಹಿತ್ ಶರ್ಮಾ

    ಈ ಬಗ್ಗೆ ತೀವ್ರ ಟೀಕೆಗಳು ಕೇಳಿಬರುತ್ತಿದ್ದು ಬಿಸಿಸಿಐ ಮಹತ್ವದ ಪಂದ್ಯಗಳಿಗೆ ಡಿಆರ್‌ಎಸ್ ಬಳಸಲಾಗದಷ್ಟು ಸೊರಗಿದೆಯೇ ಎಂಬ ಪ್ರಶ್ನೆ ಎದ್ದಿದೆ. ಈ ಬಗ್ಗೆ ಬಿಸಿಸಿಐ ಹಿರಿಯ ಅಧಿಕಾರಿಗಳನ್ನು ಕೇಳಿದಾಗ ಡಿಆರ್‌ಎಸ್ ವ್ಯವಸ್ಥೆ ಬಳಸಲು ದುಬಾರಿ ವೆಚ್ಚವಾಗುತ್ತದೆ. ಹಾಕ್ ಐ ಸೌಲಭ್ಯಕ್ಕೆ ಹೆಚ್ಚುವರಿ ಕ್ಯಾಮೆರಾಗಳನ್ನು ಬಳಸಬೇಕಾಗುತ್ತದೆ. ಇದನ್ನು ಕೇವಲ ಒಂದು ಪಂದ್ಯಕ್ಕೆ ಜೋಡಿಸುವುದು ವ್ಯರ್ಥ ಮತ್ತು ದುಬಾರಿ ಖರ್ಚು ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: ತಂಡಕ್ಕೆ ಸ್ಫೂರ್ತಿ ತುಂಬಲು ಲಕ್ಷ, ಲಕ್ಷ ಸುರಿದು ಜ್ಯೋತಿಷಿಯನ್ನು ನೇಮಕ ಮಾಡಿದ AIFF

    ದುಬಾರಿ ವೆಚ್ಚ ಖರ್ಚು ಮಾಡಿ ಪಂದ್ಯ ನಡೆಸುವುದರ ಬದಲು ನಮ್ಮ ಅಂಪೈರ್‌ಗಳ ಮೇಲೆ ನಂಬಿಕೆ ಇದೆ. ಅಂಪೈರ್‌ಗಳು ಉತ್ತಮ ನಿರ್ಧಾರಗಳನ್ನು ನೀಡುತ್ತಾರೆ. ನಾವು ಒಂದು ಪಂದ್ಯಕ್ಕೆ ಡಿಆರ್‌ಎಸ್‌ ಬಳಸಿದರೆ ಉಳಿದ ಲೀಗ್‌ ಪಂದ್ಯಗಳಿಗೂ ಡಿಆರ್‌ಎಸ್‌ ಬಳಸಬೇಕಾಗುತ್ತದೆ ಎಂದು ಸಮಜಾಯಿಷಿ ನೀಡಿದ್ದಾರೆ. ಈ ಬಗ್ಗೆ ಪ್ರಶ್ನೆ ಎತ್ತಿರುವ ಅಭಿಮಾನಿಗಳು ಬಿಸಿಸಿಐ ನಡೆಸುವ ಐಪಿಎಲ್‍ನ ಪ್ರಸಾರ ಹಕ್ಕು 48.390 ಕೋಟಿ ರೂ.ಗೆ ಸೇಲ್ ಆಗಿ ದಾಖಲೆ ಬರೆದಿದೆ. ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆ ಎಂಬ ಹೆಗ್ಗಳಿಕೆ ಇರುವ ಬಿಸಿಸಿಐ ಈ ರೀತಿ ಡಿಆರ್‌ಎಸ್ ವ್ಯವಸ್ಥೆ ಅವಳವಡಿಸಲು ಜಿಪುಣತನ ಮಾಡುವುದೇಕೆ ಎಂದು ಕಾಲೆಳೆದಿದ್ದಾರೆ.

    Live Tv

  • ಪಂದ್ಯ ಗೆದ್ದು IPL ಸೀಸನ್‌ಗೆ ಗುಡ್‌ಬೈ ಹೇಳಿದ ಮುಂಬೈ- ಸೋಲಿಗೆ ಕಾರಣ ಬಿಚ್ಚಿಟ್ಟ ರಿಷಭ್ ಪಂತ್

    ಪಂದ್ಯ ಗೆದ್ದು IPL ಸೀಸನ್‌ಗೆ ಗುಡ್‌ಬೈ ಹೇಳಿದ ಮುಂಬೈ- ಸೋಲಿಗೆ ಕಾರಣ ಬಿಚ್ಚಿಟ್ಟ ರಿಷಭ್ ಪಂತ್

    ನವದೆಹಲಿ: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶನಿವಾರ ನಡೆದ IPL ಟೂರ್ನಿಯ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಎದುರು ದೆಹಲಿ ಕ್ಯಾಪಿಟಲ್ಸ್ ಸೋಲು ಕಂಡಿತು. ಕಳಪೆ ಪ್ರದರ್ಶನ ನೀಡಿ ಟೂರ್ನಿಯಿಂದ ಹೊರಬಿದ್ದಿದ್ದ ಮುಂಬೈ ತನ್ನ ಜೊತೆಗೆ ದೆಹಲಿಯನ್ನೂ ಸೀಸನ್‌ನಿಂದ ಹೊರಗೆಳೆಯಿತು.

    ಐಪಿಎಲ್ 15ನೇ ಆವೃತ್ತಿಯಲ್ಲಿ ತನ್ನ 14ನೇ ಪಂದ್ಯವನ್ನಾಡಿದ ಮುಂಬೈ ಇಂಡಿಯನ್ಸ್ ತಂಡ ಗೆದ್ದು ಆವೃತ್ತಿಗೆ ಗುಡ್‌ಬೈ ಹೇಳಿತು. 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ರೋಹಿತ್ ಶರ್ಮಾ ಪಡೆಯಿಂದ RCB ತಂಡವು ಪ್ಲೇ ಆಫ್ ಪ್ರವೇಶಿಸಲು ಸಹಕಾರಿಯಾಯಿತು. ಇದನ್ನೂ ಓದಿ: ಈಡೇರಿದ ಬೆಂಗ್ಳೂರು ಅಭಿಮಾನಿಗಳ ಬಯಕೆ – ಆರ್‌ಸಿಬಿ ಪ್ಲೇ ಆಫ್‍ಗೆ ಡೆಲ್ಲಿ ಮನೆಗೆ

    TIM DEVID

    ಕೊನೆಯ ಪಂದ್ಯವನ್ನು ಗೆದ್ದಿದ್ದರೆ ದೆಹಲಿಗೆ ಪ್ಲೇ ಆಫ್ ಪ್ರವೇಶಿಸುವ ಉತ್ತಮ ಅವಕಾಶವಿತ್ತು. ಮುಂಬೈ ವಿರುದ್ಧ ರಿಷಭ್ ಪಂತ್ ಪಡೆಯ ಗೆಲುವಿಗೆ ಉತ್ತಮ ಅವಕಾಶವಿತ್ತು. ಆದರೆ ಸುಲಭವಾಗಿ ಗೆಲ್ಲುವ ಪಂದ್ಯದಲ್ಲಿ ದೆಹಲಿ ಸೋಲಬೇಕಾಯಿತು. ಮ್ಯಾಚ್ ಮುಗಿದ ಬಳಿಕ ತಮ್ಮ ತಂಡದ ಸೋಲಿಗೆ ಕಾರಣವೇನೆಂಬುದನ್ನು ನಾಯಕ ರಿಷಭ್ ಪಂತ್ ಹೇಳಿದ್ದಾರೆ. ಇದನ್ನೂ ಓದಿ: ಡೆಲ್ಲಿ ವಿರುದ್ಧದ ಪಂದ್ಯದ ಮೂಲಕ ಅರ್ಜುನ್ ತೆಂಡೂಲ್ಕರ್ ಐಪಿಎಲ್‍ಗೆ ಪದಾರ್ಪಣೆ?

    ಈ ಕುರಿತು ಮಾತನಾಡಿದ ರಿಷಭ್ ಪಂತ್, ನಾವು ಉತ್ತಮವಾಗಿಯೇ ಆಡಿದ್ದೆವು. ಆದರೆ ಕೆಲವು ತಪ್ಪುಗಳಿಂದಾಗಿ ಸೋಲಬೇಕಾಯಿತು. ಬೌಲಿಂಗ್ ಮತ್ತು ಫೀಲ್ಡಿಂಗ್‌ನಲ್ಲಿ ಫೇಲ್ ಆಗಿದ್ದರಿಂದ ಸೋಲಾಗಿದೆ. ಟೂರ್ನಿಯುದ್ದಕ್ಕೂ ನಾವು ಇದೇ ತೊಂದರೆಯನ್ನು ಎದುರಿಸಿದ್ದೇವೆ. ನಾವು ನಮ್ಮ ತಪ್ಪುಗಳಿಂದ ಪಾಠ ಕಲಿತಿದ್ದೇವೆ. ಮುಂದಿನ ಸೀಸನ್‌ನಲ್ಲಿ ಬಲಿಷ್ಠ ತಂಡವಾಗಿ ಮರಳುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಮುಂಬೈ ಇಂಡಿಯನ್ಸ್ ತಂಡದ ಈ ಗೆಲುವಿನಲ್ಲಿ ಟಿಮ್ ಡೇವಿಡ್ ಪಾತ್ರ ಬಹುಮುಖ್ಯವಾಗಿದೆ. ಕೇವಲ 11 ಎಸೆತಗಳಲ್ಲಿ ಅವರು 34 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿ ತಂಡಕ್ಕೆ ಗೆಲುವು ತಂದುಕೊಟ್ಟರು. ಒಂದು ಬಾರಿ ಟಿಮ್ ಡೇವಿಡ್ ಕ್ಲೀನ್ ಔಟ್ ಆಗಿದ್ದರು. ಆದರೆ ಅಂಪೈರ್ ಔಟ್ ನೀಡಲಿಲ್ಲ. ಈ ವೇಳೆ ರಿಷಭ್ ಪಂತ್ ಡಿಆರ್‌ಎಸ್ ರಿವ್ಯೂ ತೆಗೆದುಕೊಳ್ಳಲಿಲ್ಲ. ಆದರೆ ಟಿಮ್ ಡೇವಿಡ್ ಸ್ಪಷ್ಟವಾಗಿ ಔಟಾಗಿರುವುದು ಬಳಿಕ ಗೊತ್ತಾಯಿತು. ಇದರಿಂದಾಗಿ ದೆಹಲಿಗೆ ದೊಡ್ಡ ಹೊಡೆತ ಬಿದ್ದಂತಾಯಿತು. ಒಂದು ವೇಳೆ ರಿವ್ಯೂ ತೆಗೆದುಕೊಂಡಿದ್ದರೆ ಟಿಮ್ ಡೇವಿಡ್ ಸ್ಫೋಟಕ ಆಟಕ್ಕೆ ಬ್ರೇಕ್ ಬೀಳುತ್ತಿತ್ತು. ಡೆಲ್ಲಿ ಕ್ಯಾಪಿಟಲ್ಸ್ ಗೆಲುವು ಸಾಧ್ಯವೂ ಆಗುತ್ತಿತ್ತು.

    ಕ್ಯಾಚ್ ಕೈಚೆಲ್ಲಿದ್ದೇ ಎಡವಟ್ಟಾಯ್ತು: ರಿಷಭ್ ಪಂತ್ ಸೇರಿದಂತೆ ದೆಹಲಿಯ ಕೆಲ ಆಟಗಾರರು ಕೆಲವು ಸುಲಭ ಕ್ಯಾಚ್‌ಗಳನ್ನು ಕೈಚೆಲ್ಲಿದ್ದು ತಂಡಕ್ಕೆ ಭಾರೀ ಪೆಟ್ಟು ನೀಡಿತು. ಉತ್ತಮ ಫೀಲ್ಡಿಂಗ್ ಮಾಡಿದ್ದರೆ ಮುಂಬೈ ವಿರುದ್ಧ ದೆಹಲಿ ಗೆಲುವು ಸಾಧಿಸುವ ಎಲ್ಲ ಸಾಧ್ಯತೆಗಳು ಇದ್ದವು. ಆದರೆ ಕೈಚೆಲ್ಲಿದ ಕ್ಯಾಚ್‌ಗಳಿಂದ ದೆಹಲಿ ಸೋಲು ಕಾಣಬೇಕಾಯಿತು.

  • ಅಂಪೈರ್ ಎಡವಟ್ಟು – ಡ್ರೆಸ್ಸಿಂಗ್ ರೂಮ್‍ನಲ್ಲಿ ರೊಚ್ಚಿಗೆದ್ದ ಮ್ಯಾಥ್ಯೂ ವೇಡ್

    ಅಂಪೈರ್ ಎಡವಟ್ಟು – ಡ್ರೆಸ್ಸಿಂಗ್ ರೂಮ್‍ನಲ್ಲಿ ರೊಚ್ಚಿಗೆದ್ದ ಮ್ಯಾಥ್ಯೂ ವೇಡ್

    ಮುಂಬೈ: ಆರ್‌ಸಿಬಿ ಮತ್ತು ಗುಜರಾತ್ ನಡುವಿನ ಪಂದ್ಯದಲ್ಲಿ ಅಂಪೈರ್ ನೀಡಿದ ವಿವಾದಾತ್ಮಕ ತೀರ್ಪಿನ ಮೂಲಕ ಔಟ್ ಆದ ಗುಜರಾತ್ ತಂಡದ ಆಟಗಾರ ಮ್ಯಾಥ್ಯೂ ವೇಡ್ ಡ್ರೆಸ್ಸಿಂಗ್ ರೂಮ್‍ನಲ್ಲಿ ರಂಪಾಟ ಮಾಡಿದ್ದಾರೆ.

    ವೇಡ್ 16 ರನ್ ಗಳಿಸಿ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದರು ಈ ವೇಳೆ ದಾಳಿಗಿಳಿದ ಮ್ಯಾಕ್ಸ್‌ವೆಲ್, ವೇಡ್‍ರನ್ನು ಎಲ್‍ಬಿಡಬ್ಲ್ಯೂ ಬಲೆಗೆ ಬೀಳಿಸಿದರು. ಅಂಪೈರ್ ಕೂಡ ಔಟ್ ಎಂದು ತೀರ್ಪು ನೀಡಿದರು. ಈ ವೇಳೆ ವೇಡ್ ಮೂರನೇ ಅಂಪೈರ್‌ಗೆ ಮನವಿ ಸಲ್ಲಿಸಿದರು. ಆದರೆ ಮೂರನೇ ಅಂಪೈರ್ ಬ್ಯಾಟ್‍ಗೆ ಎಡ್ಜ್ ಆಗಿಲ್ಲ ಔಟ್ ಎಂದು ತೀರ್ಪು ನೀಡಿದರು. ಇದನ್ನೂ ಓದಿ: ಐಪಿಎಲ್ ಫೈನಲ್ ಪಂದ್ಯದ ಟೈಮಿಂಗ್ ಚೇಂಜ್ – ರಾತ್ರಿ 7:30ರ ಬದಲು 8 ಗಂಟೆಗೆ ಆರಂಭ

    ಇತ್ತ ಬ್ಯಾಟ್‍ಗೆ ಬಡಿದು ಹೋಗಿರುವುದು ಅಲ್ಟ್ರಾಎಡ್ಜ್‌ನಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿತ್ತು. ಜೊತೆಗೆ ವೇಡ್‍ಗೆ ಕೂಡ ಬ್ಯಾಟ್‍ಗೆ ಬಾಲ್ ಎಡ್ಜ್ ಆಗಿರುವ ಬಗ್ಗೆ ಸ್ಪಷ್ಟವಾಗಿ ತಿಳಿದಿತ್ತು. ಆದರೆ ಅಂಪೈರ್ ಮಾತ್ರ ಔಟ್ ತೀರ್ಪು ನೀಡಿದ ಕಾರಣ ಕೋಪದಿಂದಲೇ ಪೆವಿಲಿಯನ್‍ಗೆ ಹೆಜ್ಜೆ ಹಾಕಿದ ವೇಡ್, ಡ್ರೆಸ್ಸಿಂಗ್ ರೂಮ್‍ನಲ್ಲಿ ಹೆಲ್ಮೆಟ್ ಬಿಸಾಕಿ, ಬ್ಯಾಟ್‍ನ್ನು ನೆಲಕ್ಕೆ ಬಡಿದು ರಂಪಾಟ ಮಾಡಿದರು. ಇದನ್ನೂ ಓದಿ: ವಿರೋಚಿತ ಸೋಲು – ಕಣ್ಣೀರಿಟ್ಟ ರಿಂಕು ಸಿಂಗ್

    https://twitter.com/Kavy2507/status/1527296295206936578

    ಇದೀಗ ವೇಡ್ ರಂಪಾಟದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಆರ್‌ಸಿಬಿ ಮತ್ತು ಗುಜರಾತ್ ನಡುವಿನ ಪಂದ್ಯ ಆರ್‌ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯವಾದರೆ, ಗುಜರಾತ್‍ಗೆ ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯವಾಗಿದೆ.

  • ಡಿಆರ್‌ಎಸ್‌ಗೆ ಪವರ್ ಕಟ್ ಕಾಟ – ಟ್ರೋಲಾದ ಶ್ರೀಮಂತ ಕ್ರಿಕೆಟ್ ಲೀಗ್

    ಡಿಆರ್‌ಎಸ್‌ಗೆ ಪವರ್ ಕಟ್ ಕಾಟ – ಟ್ರೋಲಾದ ಶ್ರೀಮಂತ ಕ್ರಿಕೆಟ್ ಲೀಗ್

    ಮುಂಬೈ: ಗುರುವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯಕ್ಕೆ ವಿದ್ಯುತ್ ಸಮಸ್ಯೆ ಎದುರಾಗಿತ್ತು.

    ಐಪಿಎಲ್ 2022ರ 59 ನೇ ಪಂದ್ಯದಲ್ಲಿ ಚೆನ್ನೈ ಮತ್ತು ಮುಂಬೈ ಗುರುವಾರ ವಾಂಖೆಡೆ ಸ್ಟೇಡಿಯಂನಲ್ಲಿ ವಿದ್ಯುತ್ ಕಡಿತದಿಂದಾಗಿ ಮೊದಲ ಇನಿಂಗ್ಸ್‌ನ ಮೊದಲ ಎರಡು ಓವರ್‌ಗಳಿಗೆ ಡಿಆರ್‌ಎಸ್ ಇರಲಿಲ್ಲ. ಕ್ರೀಡಾಂಗಣದಲ್ಲಿ ವಿದ್ಯುತ್ ಸಮಸ್ಯೆಯಿಂದ ಟಾಸ್ ಕೂಡ ವಿಳಂಬವಾಯಿತು.

    ಇದರಿಂದಾಗಿ ಪಂದ್ಯದಲ್ಲಿ ಮೊದಲ 10 ಎಸೆತಗಳಲ್ಲಿ ಡಿಆರ್‌ಎಸ್ ತಂತ್ರಜ್ಞಾನ ಬಳಕೆಗೆ ಲಭ್ಯವಾಗಿರಲಿಲ್ಲ. ಅಲ್ಲದೆ ಸಿಎಸ್‍ಕೆ ಆರಂಭಿಕ ಬ್ಯಾಟ್ಸ್‌ಮ್ಯಾನ ಡೆವೊನ್ ಕಾನ್ವೆ ವಿವಾದಾತ್ಮಕ ತೀರ್ಪಿಗೆ ಔಟ್ ಆಗಿದ್ದರು. ಇದು ಚೆನ್ನೈ ತಂಡದ ಹಿನ್ನಡೆಗೆ ಕಾರಣವಾಯಿತು.

    ವಿದ್ಯುತ ಕಂಬದ ಟವರ್‌ನಲ್ಲಿ ತಾಂತ್ರಿಕ ದೋಷದಿಂದಾಗಿ ಟಾಸ್ ಎರಡು ನಿಮಿಷಗಳಷ್ಟು ವಿಳಂಬವಾಗಿತ್ತು. ನಂತರದಲ್ಲಿ ಟಾಸ್ ಗೆದ್ದ ಮುಂಬೈ ತಂಡದ ನಾಯಕ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

    ಮುಂಬೈ ತಂಡದ ಪ್ರಮುಖ ಬೌಲರ್ ಡ್ಯಾನಿಯಲ್ ಸ್ಯಾಮ್ಸ್ ಎಸೆದ ಇನ್ನಿಂಗ್ಸ್‌ನ ಎರಡನೇ ಎಸೆತದಲ್ಲೇ ಕಾನ್ವೆ  ಎಲ್‍ಬಿಡಬ್ಲ್ಯು ಬಲೆಗೆ ಬಿದ್ದರು. ಈ ವೇಳೆ ಮುಂಬೈ ತಂಡದ ಮನವಿ ಪುರಸ್ಕರಿಸಿದ ಅಂಪೈರ್ ಔಟ್ ತೀರ್ಪು ನೀಡಿದರು. ಆದರೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಡಿಆರ್‌ಎಸ್ ತಂತ್ರಜ್ಞಾನದ ಅಲಭ್ಯತೆ ಕಾಡಿದ್ದರಿಂದ ಕಾನ್ವೆಗೆ ರೀವ್ಯೂ ಮಾಡಲು ಸಾಧ್ಯವಾಗಲಿಲ್ಲ. ಅಲ್ಲದೆ ಪೆವಿಲಿಯನ್‍ನತ್ತ ಹೆಜ್ಜೆ ಹಾಕಬೇಕಾಯಿತು. ಆದರೆ ನಿಜಕ್ಕೂ ಇದು ಔಟ್ ಆಗಿತ್ತೆ ಎಂಬ ಅನುಮಾನ ಅಭಿಮಾನಿಗಳಲ್ಲಿ ಕಾಡಿದೆ.

    ಈ ಕುರಿತು ಅಭಿಮಾನಿಗಳು ಟ್ವಿಟರ್‍ನಲ್ಲಿ ಮಿಶ್ರ ಪ್ರತಿಕ್ರಿಯಿ ನೀಡಿದ್ದು, ವಿಶ್ವದ ಶ್ರೀಮಂತ ಲೀಗ್‍ನಲ್ಲಿ ವಿದ್ಯುತ್ ಅಡಚಣೆ ಉಂಟಾಗಿರುವುದು ಸಿಕ್ಕಾಪಟ್ಟೆ ಟ್ರೋಲ್‍ಗೆ ಗುರಿಯಾಗಿದೆ.

  • ಶಾಕಿಂಗ್‌ ಡಿಆರ್‌ಎಸ್‌ ವಿಡಿಯೋಗೆ ಕೊಹ್ಲಿ ಕಿಡಿ – ರಿವ್ಯೂ ಸಕ್ಸಸ್‌ ಎಂದು ವಾಹಿನಿಯಿಂದ ಸಮರ್ಥನೆ

    ಶಾಕಿಂಗ್‌ ಡಿಆರ್‌ಎಸ್‌ ವಿಡಿಯೋಗೆ ಕೊಹ್ಲಿ ಕಿಡಿ – ರಿವ್ಯೂ ಸಕ್ಸಸ್‌ ಎಂದು ವಾಹಿನಿಯಿಂದ ಸಮರ್ಥನೆ

    – ಸ್ಟಂಪ್‌ ಮೈಕ್‌ ಬಳಿ ಹೋಗಿ ಕೊಹ್ಲಿ ಆಕ್ರೋಶ
    – ಈ ರೀತಿ ಆಗಲು ಅಸಾಧ್ಯ ಎಂದ ಫೀಲ್ಡ್‌ ಅಂಪೈರ್‌

    ಕೇಪ್‌ಟೌನ್‌: ಕ್ರಿಕೆಟ್‌ನಲ್ಲಿ ನಿಖರ ತೀರ್ಪು ಪ್ರಕಟವಾಗಲೆಂದೇ ತಂತ್ರಜ್ಞಾನವನ್ನು ಬಳಕೆ ಮಾಡಲಾಗುತ್ತದೆ. ಆದರೆ ಈ ತಂತ್ರಜ್ಞಾನದ ಪಾರದರ್ಶಕವಲ್ಲ ಎನ್ನುವುದು ಮೂರನೇ ಟೆಸ್ಟ್‌ ವೇಳೆ ಸಾಬೀತಾಗಿದ್ದು ಈಗ ಭಾರೀ ಹೈಡ್ರಾಮಾ ಸೃಷ್ಟಿಯಾಗಿದೆ. ನಾಯಕ ಕೊಹ್ಲಿ ಸ್ಟಂಪ್‌ ಮೈಕ್‌ನಲ್ಲೇ ಕಿಡಿಕಾರಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

    ನಡೆದಿದ್ದು ಏನು?
    ದಕ್ಷಿಣ ಆಫ್ರಿಕಾ ತಂಡ ಎರಡನೇ ಇನಿಂಗ್ಸ್‌ ಬ್ಯಾಟಿಂಗ್‌ ವೇಳೆ ಅಶ್ವಿನ್‌ ಎಸೆದ 21 ಓವರ್‌ನ ಡಿಆರ್‌ಎಸ್‌ ನಿರ್ಧಾರ ಈ ಚರ್ಚೆಯ ಕೇಂದ್ರ ಬಿಂದು. 4ನೇ ಎಸೆತದಲ್ಲಿ ನಾಯಕ ಹಾಗೂ ಎಡಗೈ ಬ್ಯಾಟ್ಸ್‌ಮನ್‌ ಡೀನ್‌ ಎಲ್ಗರ್‌ ಎಲ್‌ಬಿಡಬ್ಲ್ಯು ಆಗಿದ್ದರು. ಅಂಪೈರ್‌ ಮರಾಯಿಸ್‌ ಎರಾಸ್ಮಸ್‌ ಕೂಡ ಔಟ್‌ ಎಂದು ತೀರ್ಪು ಕೊಟ್ಟಿದ್ದರು. ಇದನ್ನೂ ಓದಿ: ಫೀಲ್ಡಿಂಗ್‍ನಲ್ಲಿ ವಿರಾಟ್ ಕೊಹ್ಲಿ ಶತಕ

    ಅಂಪೈರ್‌ ತೀರ್ಪು ಪ್ರಶ್ನಿಸಿ ಎಲ್ಗರ್‌ ಡಿಆರ್‌ಎಸ್‌ ಮೊರೆ ಹೋಗಿದ್ದರು. ಆದರೆ ಡಿಆರ್‌ಎಸ್‌ ತೀರ್ಮಾನ ನೋಡಿ ಆಟಗಾರರ ಜೊತೆ ಅಂಪೈರ್‌ ಶಾಕ್‌ ಆಗಿದ್ದಾರೆ. ಹ್ಯಾಕ್‌ ಐ ತಂತ್ರಜ್ಞಾನ ಬಳಕೆ ಮಾಡಿದಾಗ ಚೆಂಡು ಸ್ಟಂಪ್ಸ್‌ಗೆ ತಾಗದೇ ಮೇಲೆ ಹೋಗುವಂತೆ ತೋರಿಸಿದೆ.

    ಚೆಂಡು ಎಲ್ಗರ್‌ ಅವರ ಮಂಡಿಗಿಂತಲೂ ಕೆಳಗೆ ಬಡಿದಿದ್ದ ಕಾರಣ ಅದು ಸ್ಟಂಪ್ಸ್‌ಗಿಂತ ಮೇಲೆ ಹೋಗಲು ಖಂಡಿತಾ ಸಾಧ್ಯವಿಲ್ಲ ಎಂದು ಟೀಂ ಇಂಡಿಯಾ ಆಟಗಾರರು ಭಾವಿಸಿದ್ದರು. ಆದರೆ ಬಾಲ್‌ ಸ್ಟಂಪ್‌ಗಿಂತಲೂ ಮೇಲೆ ಹೋಗುವಂತೆ ಕಾಣಿಸಿದ್ದರಿಂದ ಅಂಪೈರ್‌ ನಾಟೌಟ್‌ ಎಂದು ತೀರ್ಪು ನೀಡಿದ್ದಾರೆ. ಡಿಆರ್‌ಎಸ್‌ ತೀರ್ಪು ಕಂಡ ಆನ್‌ ಫೀಲ್ಡ್‌ ಅಂಪೈರ್‌ ಎರಾಸ್ಮಸ್‌ ‘ಇದು ಅಸಾಧ್ಯ’ ಎಂದು ಹೇಳಿದ್ದು ಸ್ಟಂಪ್‌ ಮೈಕ್‌ನಲ್ಲಿ ದಾಖಲಾಗಿದೆ. ಇದನ್ನೂ ಓದಿ: ಹರಾಜಿಗೂ ಮುನ್ನ 3 ಆಟಗಾರರನ್ನು ಆಯ್ಕೆ ಮಾಡಿ: ಲಕ್ನೋ, ಅಹಮದಾಬಾದ್‍ಗೆ ಡೆಡ್‍ಲೈನ್

    ಆರ್‌ ಅಶ್ವಿನ್‌ ಕೂಡಲೇ, ಸೂಪರ್‌ ಸ್ಪೋರ್ಟ್‌ ಪಾರ್ಕ್‌ನಲ್ಲಿ ಗೆಲ್ಲಲು ನೀವು ಇನ್ನು ಒಳ್ಳೆಯ ಮಾರ್ಗ ಕಂಡುಕೊಳ್ಳಬೇಕಿತ್ತು, ಎಂದು ಕಿಚಾಯಿಸಿದ್ದಾರೆ. ನಾಯಕ ಕೊಹ್ಲಿ ಸ್ಟಂಪ್‌ ಮೈಕ್‌ದ ಬಳಿ ಹೋಗಿ, ನೀವು ಬರೀ ಎದುರಾಳಿ ಮಾತ್ರವಲ್ಲ ನಿಮ್ಮ ತಂಡದ ಮೇಲೂ ಗಮನ ಇರಲಿ ಪ್ರಸಾರಕರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಕೆಎಲ್‌ ರಾಹುಲ್‌, 11 ಆಟಗಾರರ ವಿರುದ್ಧ ಇಡೀ ದೇಶವೇ ನಿಂತಿದೆ ಎಂದು ಕಾಡಿಕಾರಿದ್ದಾರೆ. ಈಗ ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ಭಾರೀ ಚರ್ಚೆ ಆಗುತ್ತಿದೆ.

    https://twitter.com/AkashRa66/status/1481703222922584064

    ಚರ್ಚೆ ಆಗುತ್ತಿದ್ದಂತೆ ವಾಹಿನಿ ತನ್ನ ನಡೆಯನ್ನು ಸಮರ್ಥಿಸಿಕೊಂಡಿದ್ದು, ಬಾಲ್‌ ಪಿಚ್‌ ಬಿದ್ದ ನಂತರ ಬೌನ್ಸ್‌ ಆಗಿದೆ. ಬೌನ್ಸ್‌ ಆದ ಪರಿಣಾಮ ಬಾಲ್‌ ಸ್ಟಂಪ್ಸ್‌ಗಿಂತ ಮೇಲಕ್ಕೆ ಹೋಗಿದೆ. ಹೀಗಾಗಿ ಎಲ್ಗರ್‌ ಡಿಎಆರ್‌ಎಸ್‌ ರಿವ್ಯೂ ಸಕ್ಸಸ್‌ ಆಗಿದೆ ಎಂದು ತೋರಿಸುವ ವಿಡಿಯೋವನ್ನು ರಿಲೀಸ್‌ ಮಾಡಿದೆ.

  • ಬೌಲ್ಡಾದರೂ DRS ಮೊರೆ ಹೋಗಿ ಲೆಜೆಂಡ್ ಎನಿಸಿಕೊಂಡ ಅಶ್ವಿನ್

    ಬೌಲ್ಡಾದರೂ DRS ಮೊರೆ ಹೋಗಿ ಲೆಜೆಂಡ್ ಎನಿಸಿಕೊಂಡ ಅಶ್ವಿನ್

    ಮುಂಬೈ: ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಎರಡನೇ ದಿನ ಬ್ಯಾಟಿಂಗ್ ಮಾಡುತ್ತಿದ್ದ ಭಾರತದ ಸ್ಪಿನ್ನರ್ ಆರ್. ಅಶ್ವಿನ್ ಅಜಾಜ್ ಪಟೇಲ್ ಬೌಲಿಂಗ್‍ನಲ್ಲಿ ಕ್ಲೀನ್ ಬೌಲ್ಡಾದರೂ ಕೂಡ ಅಂಪೈರ್ ತೀರ್ಪು ಮರುಪರಿಶೀಲನಾ ವ್ಯವಸ್ಥೆ (ಡಿಆರ್‌ಎಸ್) ಮೊರೆ ಹೋಗಿ ಪೇಚಿಗೆ ಸಿಲುಕಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಅಶ್ವಿನ್ ಟ್ರೋಲ್ ಆಗುತ್ತಿದ್ದಾರೆ.

    ಕ್ರಿಕೆಟ್‍ನಲ್ಲಿ ಆನ್‍ಫೀಲ್ಡ್ ಅಂಪೈರ್ ಅನುಮಾನದ ತೀರ್ಪು ನೀಡಿದಾಗ ಆಟಗಾರರು ಡಿಆರ್‌ಎಸ್ ಮೊರೆ ಹೋಗಲು ಅವಕಾಶವಿದೆ. ಬಳಿಕ ಆನ್‍ಫೀಲ್ಡ್ ಅಂಪೈರ್ ತಮ್ಮ ತೀರ್ಪನ್ನು ಬದಲಾಯಿಸಿಕೊಳ್ಳುವ ಅವಕಾಶವು ಇದೆ. ಹಾಗಾಗಿ ಆಟಗಾರರು ಡಿಆರ್‌ಎಸ್ ಕೇಳುವುದು ಸರ್ವೇಸಾಮಾನ್ಯ. ಆದರೆ ಬೌಲ್ಡ್ ಆಗಿ ಡಿಆರ್‌ಎಸ್ ಕೇಳಿದ ನಿದರ್ಶನಗಳಿರಲಿಲ್ಲ. ಇದೀಗ ಅದು ಕೂಡ ನಡೆದಿದೆ. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಅಶ್ವಿನ್ ಬ್ಯಾಟಿಂಗ್ ಬಂದಿದ್ದರು. ಅವರು ಎದುರಿಸಿದ ಮೊದಲ ಎಸೆತದಲ್ಲೇ ಬೌಲ್ಡ್ ಆದರೂ ಆದರೆ ಇದನ್ನು ಗಮನಿಸದ ಅಶ್ವಿನ್ ತಮ್ಮ ಬ್ಯಾಟ್‍ಗೆ ತಾಗದೆ ಕೀಪರ್‌ಗೆ ಕ್ಯಾಚ್ ಆಗಿದೆ ಅಂದುಕೊಂಡು ಅಂಪೈರ್ ಔಟ್ ತೀರ್ಪು ನೀಡಿದ್ದಾರೆಂದು ಡಿಆರ್‌ಎಸ್ ಮೊರೆ ಹೋದರು. ಆ ಬಳಿಕ ಎಚ್ಚೆತ್ತುಕೊಂಡ ಅಶ್ವಿನ್ ಬೌಲ್ಡ್ ಆಗಿರುವುದನ್ನು ಗಮನಿಸಿ ಪೆವಿಲಿಯನ್‍ಗೆ ಹೆಜ್ಜೆ ಹಾಕಿದರು.  ಇದನ್ನೂ ಓದಿ: 10 ವಿಕೆಟ್‌ ಕಿತ್ತು ಇತಿಹಾಸ ಸೃಷ್ಟಿಸಿದ ಭಾರತ ಮೂಲದ ಅಜಾಜ್‌ ಪಟೇಲ್‌

    https://twitter.com/jawairiasyed/status/1467065070559637512

    ಇದೀಗ ಅಶ್ವಿನ್ ಅವರ ರಿವ್ಯೂ ವೀಡಿಯೋ ವೈರಲ್ ಆಗುತ್ತಿದ್ದು, ಬೌಲ್ಡ್ ಆದರೂ ಡಿಆರ್‌ಎಸ್ ತೆಗೆದುಕೊಂಡ ಅಶ್ವಿನ್ ಲೆಜೆಂಡ್ ಆಟಗಾರ ಹಾಗಾಗಿ ಡಿಆರ್‌ಎಸ್ ತೆಗೆದುಕೊಂಡಿದ್ದಾರೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ವಿವಿಧ ಕಾಮೆಂಟ್ ಮೂಲಕ ಅಶ್ವಿನ್ ಕಾಲೆಳೆಯುತ್ತಿದ್ದಾರೆ. ಇದನ್ನೂ ಓದಿ: ಆರ್​ಸಿಬಿ ಪರ ಮಾತ್ರ ಆಡುತ್ತೇನೆ ಎಂದಿದ್ದ ಚಹಲ್ ಐಪಿಎಲ್ ಭವಿಷ್ಯವೇನು?

  • ಡಿಆರ್‌ಎಸ್‌ ಎಡವಟ್ಟು – ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ಸಿರಾಜ್

    ಡಿಆರ್‌ಎಸ್‌ ಎಡವಟ್ಟು – ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ಸಿರಾಜ್

    ಲಂಡನ್: ಮೊಹಮ್ಮದ್ ಸಿರಾಜ್ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಆದರೆ ಡಿಆರ್‌ಎಸ್‌ ತೆಗೆದುಕೊಳ್ಳುವುದರಲ್ಲಿ ಮಾತ್ರ ಎಡವಟ್ಟು ಮಾಡಿಕೊಳ್ಳುತ್ತಿದ್ದಾರೆ.

    ಭಾರತದ ಪರ ಯುವ ವೇಗಿ ಸಿರಾಜ್ ಕಳೆದ ಕೆಲ ಟೆಸ್ಟ್ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಭಾರತದ ಭರವಸೆಯ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ. ಆದರೆ ಡಿಆರ್‌ಎಸ್‌ ವಿಷಯದಲ್ಲಿ ಮಾತ್ರ ನಾಯಕ ವಿರಾಟ್ ಕೊಹ್ಲಿಯನ್ನು ತಬ್ಬಿಬ್ಬಾಗಿಸುತ್ತಿದ್ದಾರೆ. ಲಾಡ್ರ್ಸ್ ಟೆಸ್ಟ್ ನಲ್ಲೂ ಕೂಡ 2 ಬಾರಿ ಸಿರಾಜ್ ರಿವ್ಯೂ ಪಡೆದುಕೊಳ್ಳುವಂತೆ ಕೊಹ್ಲಿಗೆ ಸೂಚಿಸಿ ಎರಡರಲ್ಲೂ ವಿಫಲತೆ ಕಂಡರು. ಸಿರಾಜ್ ಬೌಲಿಂಗ್ ಮಾಡುತ್ತಿದ್ದಾಗ ಈವರೆಗೆ ಭಾರತ ತಂಡ 10 ಬಾರಿ ರಿವ್ಯೂ ಪಡೆದುಕೊಂಡಿದ್ದು, ಅದರಲ್ಲಿ 9 ಬಾರಿ ವಿಫಲತೆ ಅನುಭವಿಸಿ, 1 ಬಾರಿ ಮಾತ್ರ ಸಫಲತೆ ಕಂಡಿದೆ. ಹಾಗಾಗಿ ಸಿರಾಜ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

    ಸಿರಾಜ್ ಬೌಲಿಂಗ್ ಮಾಡುತ್ತಿದ್ದಂತೆ ರಿವ್ಯೂ ತೆಗೆದುಕೊಳ್ಳುವ ಅವಕಾಶವನ್ನು ಕೊಹ್ಲಿ ತಿರಸ್ಕರಿಸದೆ ಪದೇ ಪದೇ ತೆಗೆದುಕೊಂಡು ಫೇಲ್ ಆಗುತ್ತಿದ್ದಾರೆ. ಇವರೊಂದಿಗೆ ವಿಕೆಟ್ ಕೀಪರ್ ರಿಷಬ್ ಪಂತ್ ಕೂಡ ಕೈಜೋಡಿಸಿ ಕೆಲ ಕೆಟ್ಟ ನಿರ್ಧಾರಕ್ಕೆ ಕಾರಣರಾಗುತ್ತಿದ್ದಾರೆ. ಹಾಗಾಗಿ ನೆಟ್ಟಿಗರು ನಾಯಕ ಸಹಿತ ಇವರಿಬ್ಬರನ್ನು ಸಾಮಾಜಿಕ ಜಾಲತಾಣದಲ್ಲಿ ಕಾಲೆಳೆಯುತ್ತಿದ್ದಾರೆ. ಇದನ್ನೂ ಓದಿ: ದೇಶಕ್ಕೆ ಹೆಮ್ಮೆ ತಂದಿದ್ದೀರಿ – ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ ಕೋವಿಂದ್ ಅಭಿನಂದನೆ

  • ಅಂಪೈರ್ಸ್ ಕಾಲ್ ನಿಯಮ ಮುಂದುವರಿಕೆ – ಡಿಆರ್‍ಎಸ್‍ನಲ್ಲಿ 3 ಬದಲಾವಣೆಗೆ ಒಪ್ಪಿಗೆ

    ಅಂಪೈರ್ಸ್ ಕಾಲ್ ನಿಯಮ ಮುಂದುವರಿಕೆ – ಡಿಆರ್‍ಎಸ್‍ನಲ್ಲಿ 3 ಬದಲಾವಣೆಗೆ ಒಪ್ಪಿಗೆ

    – ಐಸಿಸಿ ಸಭೆಯಲ್ಲಿ ಗಂಭೀರ ಚರ್ಚೆ
    – ನಿಯಮದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಕೊಹ್ಲಿ

    ದುಬೈ: ಬಹಳ ಚರ್ಚೆಗೆ ಗ್ರಾಸವಾಗಿರುವ ಅಂಪೈರ್ಸ್ ಕಾಲ್ ನಿಯಮವನ್ನು ರದ್ದು ಮಾಡದೇ ಇರಲು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ ನಿರ್ಧಾರ ತೆಗೆದುಕೊಂಡಿದೆ. ಆದರೆ ಈಗ ಅನುಸರಿಸುತ್ತಿರುವ ಡಿಆರ್‍ಎಸ್‍ನಲ್ಲಿ ಕೆಲ ಬದಲಾವಣೆ ಮಾಡಲು ಒಪ್ಪಿಗೆ ನೀಡಿದೆ.

    ಇಂಗ್ಲೆಂಡ್ ಜೊತೆಗಿನ ಕ್ರಿಕೆಟ್ ಸರಣಿ ಸಂದರ್ಭದಲ್ಲಿ ಟೀಂ ಇಂಡಿಯಾ ನಾಯಕ ಅಂಪೈರ್ಸ್ ಕಾಲ್‍ನಲ್ಲಿ ಗೊಂದಲಗಳಿವೆ ಎಂದು ಹೇಳಿದ್ದರು. ಇದಕ್ಕೆ ಕೆಲ ಕ್ರಿಕೆಟಿಗರು ಸಹ ಬೆಂಬಲ ಸೂಚಿಸಿದ್ದ ಬಳಿಕ ಈ ನಿಯಮ ಬಹಳ ಚರ್ಚೆಗೆ ಗ್ರಾಸವಾಗಿತ್ತು. ಇದನ್ನೂ ಓದಿ: ಡೇವಿಡ್‌ ವಾರ್ನರ್‌ ಔಟ್‌? ನಾಟೌಟ್?‌ – ಚರ್ಚೆಗೆ ಗ್ರಾಸವಾದ ಮೂರನೇ ಅಂಪೈರ್‌ ನಿರ್ಧಾರ

    ಕೊಹ್ಲಿ ಹೇಳಿದ್ದು ಏನು?
    ಹಾಲಿ ನಿಯಮದ ಪ್ರಕಾರ ಎಲ್‍ಬಿಡಬ್ಲ್ಯೂ ಸಂದರ್ಭದಲ್ಲಿ ಅಂಪೈರ್ ನೀಡಿದ ನಾಟೌಟ್ ತೀರ್ಪನ್ನು ಪ್ರಶ್ನಿಸಿ ಮೂರನೇ ಅಂಪೈರ್ ಔಟ್ ಎಂಬ ತೀರ್ಮಾನಕ್ಕೆ ಬರಬೇಕಾದರೆ ಚೆಂಡಿನ ಅರ್ಧಕ್ಕಿಂತಲೂ(ಶೇ.50) ಹೆಚ್ಚಿನ ಭಾಗ ವಿಕೆಟಿಗೆ ತಾಗುವಂತಿರಬೇಕು. ಆದರೆ ಬಾಲ್ ವಿಕೆಟಿಗೆ ಸ್ವಲ್ಪವೇ  ಬಡಿಯುವಂತಿದ್ದರೂ ಔಟ್ ಕೊಡಬೇಕು ಎಂದು ವಿರಾಟ್ ಕೊಹ್ಲಿ ವಾದಿಸಿದ್ದರು.

    ಮೂರು ಬದಲಾವಣೆ
    1. ಈಗ ಡಿಆರ್‍ಎಸ್‍ಗೆ 3 ಸಣ್ಣ ಬದಲಾವಣೆಗಳನ್ನು ತರಲು ಐಸಿಸಿ ಮುಂದಾಗಿದೆ. ಹಾಲಿ ನಿಯಮದ ಪ್ರಕಾರ ಎಲ್‍ಬಿಡಬ್ಲ್ಯುಗೆ ಸಂಬಂಧಿಸಿದಂತೆ ಡಿಆರ್‍ಎಸ್ ತೆಗೆದುಕೊಳ್ಳುವಾಗ ಚೆಂಡು ಬೇಲ್ಸ್‌ನ ಕೆಳಭಾಗಕ್ಕೆ ಬಡಿಯುವಂತಿದ್ದರೆ ಆಗ ಅದು ಅಂಪೈರ್ಸ್ ಕಾಲ್ ವ್ಯಾಪ್ತಿಗೆ ಬರುತ್ತದೆ. ಆದರೆ ಈಗ ಚೆಂಡು ಬೇಲ್ಸ್ ಮೇಲ್ಭಾಗಕ್ಕೆ ಬಡಿಯುತ್ತದೆ ಎಂದು ಖಾತ್ರಿಯಾದರೂ ಅದನ್ನು ಅಂಪೈರ್ಸ್ ಕಾಲ್ ವ್ಯಾಪ್ತಿಗೆ ಸೇರಿಸಲು ಮುಂದಾಗಿದೆ. ಇದನ್ನೂ ಓದಿ: ಟೆಸ್ಟ್‌ ಚಾಂಪಿಯನ್‌ ಶಿಪ್‌ – ಐಸಿಸಿ ನಿಯಮದ ವಿರುದ್ಧ ಕೊಹ್ಲಿ ಕಿಡಿ ಕಾರಿದ್ದು ಯಾಕೆ?

    2. ಎಲ್‍ಬಿಡಬ್ಲ್ಯುಗೆ ಸಂಬಂಧಿಸಿ ಅಂಪೈರ್‌ಗೆ ಮನವಿ ಸಲ್ಲಿಸುವುದಕ್ಕೂ ಮೊದಲು ಬ್ಯಾಟ್ಸ್‌ಮನ್‌ ನಾನು ಹೊಡೆತಕ್ಕೆ ಮುಂದಾಗಿದ್ದೇನೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು ಅವಕಾಶ ನೀಡಲಾಗಿದೆ.

    3. ಬ್ಯಾಟ್ಸ್‌ಮನ್‌ಗಳು ರನ್ ಓಡುವ ಸಂದರ್ಭದಲ್ಲಿ ಕ್ರೀಸ್ ಮುಟ್ಟಿದ್ದಾರೋ ಇಲ್ಲವೋ ಎನ್ನುವುದನ್ನು 3ನೇ ಅಂಪೈರ್ ಖಚಿತ ಪಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಒಂದು ವೇಳೆ ಓಡುವ ಭರದಲ್ಲಿ ಕ್ರೀಸ್‍ಮುಟ್ಟದೇ ಇದ್ದಾಗ 3ನೇ ಅಂಪೈರ್ ಫೀಲ್ಡ್ ಅಂಪೈರ್ ಜೊತೆ ಸಂವಹನ ನಡೆಸಿ ರನ್ ಕಡಿತಗೊಳಿಬಹುದಾಗಿದೆ.

    ಅಂಪೈರ್ಸ್ ಕಾಲ್ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಯಿತು. ತಂತ್ರಜ್ಞಾನದಲ್ಲಿರುವ ಕೆಲ ನ್ಯೂನತೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಅಂಪೈರ್ಸ್ ಕಾಲ್ ಜಾರಿಯಲ್ಲಿದೆ. ಇದರ ಜೊತೆ ಮೈದಾನದಲ್ಲಿರುವ ಅಂಪೈರ್‌ಗಳೇ ತೀರ್ಮಾನ ತೆಗೆದುಕೊಳ್ಳುವವರಾಗಿ ಮುಂದುವರಿಯಬೇಕು. ಈ ಕಾರಣಕ್ಕೆ ಅಂಪೈರ್ಸ್ ಕಾಲ್ ನಿರ್ಧಾರವನ್ನು ಮುಂದುವರಿಸಿರುವುದಾಗಿ ಐಸಿಸಿ ಕ್ರಿಕೆಟ್ ಸಮಿತಿಯ ಮುಖ್ಯಸ್ಥ ಅನಿಲ್ ಕುಂಬ್ಳೆ ತಿಳಿಸಿದ್ದಾರೆ.