Tag: drug mafia

  • ಪೊಲೀಸ್ ಇಲಾಖೆ ನ್ಯಾಯ ಕೊಡ್ಬೇಕು – ಕಮಲ್ ಪಂತ್ ಹೇಳಿಕೆಗೆ ಇಂದ್ರಜಿತ್ ಪ್ರತಿಕ್ರಿಯೆ

    ಪೊಲೀಸ್ ಇಲಾಖೆ ನ್ಯಾಯ ಕೊಡ್ಬೇಕು – ಕಮಲ್ ಪಂತ್ ಹೇಳಿಕೆಗೆ ಇಂದ್ರಜಿತ್ ಪ್ರತಿಕ್ರಿಯೆ

    ಬೆಂಗಳೂರು: ಪೊಲೀಸ್ ಇಲಾಖೆ ನ್ಯಾಯ ಕೊಡಬೇಕು. ಚಿತ್ರರಂಗ ಸ್ವಚ್ಛ ಆಗಬೇಕು ಅನ್ನೋದು ನನ್ನ ಉದ್ದೇಶ ಎಂದು ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿಕೆಗೆ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯೆ ನೀಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಇಂದ್ರಜಿತ್ ಲಂಕೇಶ್, ಪೊಲೀಸ್ ಕಮಿಷನರ್ ಅವರ ತನಿಖೆಗೆ ಸಹಕರಿಸುತ್ತೀನಿ, ಭದ್ರತೆ ಕೊಡುತ್ತೀನಿ ಅಂತ ಹೇಳಿರೋದು ಸಂತೋಷ. ಆದರೆ ಪೊಲೀಸ್ ಇಲಾಖೆ ಚಿತ್ರರಂಗಕ್ಕೆ ನ್ಯಾಯ ಕೊಡಬೇಕು ಎಂದು ಕಮಲ್ ಪಂತ್ ಅವರ ಹೇಳಿಕೆಯನ್ನು ಸ್ವಾಗತಿಸಿದ್ದಾರೆ. ಇದನ್ನೂ ಓದಿ: ಎನ್‍ಸಿಬಿ ಸಹಕಾರ ಕೇಳಿದ್ರೆ ನಾವು ಪೂರ್ಣ ಪ್ರಮಾಣದಲ್ಲಿ ಸಹಕರಿಸ್ತೇವೆ: ಕಮಲ್ ಪಂತ್

    ಅಲ್ಲದೇ ಚಿತ್ರರಂಗ ಸ್ವಚ್ಛ ಆಗಬೇಕು ಅನ್ನೋದು ನನ್ನ ಉದ್ದೇಶ. ಚಿತ್ರರಂಗಕ್ಕೆ ನನ್ನಿಂದ ಯಾವುದೇ ಧಕ್ಕೆ ಆಗಲ್ಲ. ಚಿತ್ರರಂಗದ ಮಂದಿ ಡ್ರಗ್ಸ್ ಮಾಫಿಯಾದಲ್ಲಿ ಸಿಲುಕಿದೆ ಅಂದಾಗ ಫಿಲಂ ಚೇಂಬರ್ ಮಾತನಾಡಬೇಕಿತ್ತು. ಈ ಹಿಂದೆ ಹನಿಟ್ರ್ಯಾಪ್ ಆರೋಪ ಕೇಳಿ ಬಂದಿತ್ತು. ಆಗಲೂ ಫಿಲಂ ಚೇಂಬರ್ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದರು.

    ಕಮಲ್ ಪಂತ್ ಹೇಳಿಕೆ?
    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕಮಲ್ ಪಂತ್ ಅವರು, ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಎನ್‍ಸಿಬಿ ತನಿಖೆ ನಡೆಸುತ್ತಿದೆ. ಎನ್‍ಸಿಬಿ ಅಧಿಕಾರಿಗಳು ಹೊರಗಡೆಯಿಂದ ಬರುತ್ತಿದ್ದಾರೆ ಎಂದು ನಮಗೆ ಗೊತ್ತಾಗಿದೆ. ಒಂದು ವೇಳೆ ಎನ್‍ಸಿಬಿ ತಂಡ ನಮ್ಮ ಸಹಕಾರ, ಬೆಂಬಲವನ್ನು ಕೇಳಿದರೆ ನಾವು ಪೂರ್ಣ ಪ್ರಮಾಣದಲ್ಲಿ ಅವರಿಗೆ ಸಹಕಾರ ಕೊಡುತ್ತೇವೆ ಎಂದಿದ್ದರು.

     

    ಇಂದ್ರಜಿತ್ ಲಂಕೇಶ್ ಹೇಳಿಕೆ ಬಗ್ಗೆ ನಮ್ಮ ಪೊಲೀಸರು ಗಮನಿಸಿದ್ದಾರೆ. ಸುಮೋಟೋ ತೆಗೆದುಕೊಳ್ಳುವ ಬಗ್ಗೆ ಚರ್ಚೆ ನಡೆದಿದೆ. ರಕ್ಷಣೆ ಬೇಕು ಅಂದರೆ ಕೊಡೋಣ. ಬಳಿಕ ಸಮನ್ಸ್ ಕೊಡುವುದರ ಬಗ್ಗೆ ಚಿಂತನೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದರು.

  • ಚಿತ್ರರಂಗದಲ್ಲಿ ವಾಮ ಮಾರ್ಗದಲ್ಲಿ ಗೆದ್ದವರೇ ಡ್ರಗ್ಸ್ ದಾಸರು: ಜಗ್ಗೇಶ್ ಆಕ್ರೋಶ

    ಚಿತ್ರರಂಗದಲ್ಲಿ ವಾಮ ಮಾರ್ಗದಲ್ಲಿ ಗೆದ್ದವರೇ ಡ್ರಗ್ಸ್ ದಾಸರು: ಜಗ್ಗೇಶ್ ಆಕ್ರೋಶ

    ಬೆಂಗಳೂರು: ಯಾರು ವಾಮಮಾರ್ಗದಲ್ಲಿ ಗೆದ್ದಿರುತ್ತಾರೆ ಅವರೇ ನಶೆಹಾದರದ ದಾಸರು. ಉಪ್ಪುತಿಂದವ ನೀರು ಕುಡಿಯುವ ಎಂದು ಜಗ್ಗೇಶ್ ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಆಕ್ರೋಶದಿಂದ ಪ್ರತಿಕ್ರಿಯಿಸಿದ್ದಾರೆ.

    ಸ್ಯಾಂಡಲ್‍ವುಡ್‍ನ ಕೆಲ ಕಲಾವಿದರಿಗೆ ಡ್ರಗ್ಸ್ ಪೂರೈಕೆ ವಿಚಾರವಾಗಿ ನಟ ಜಗ್ಗೇಶ್ ಅವರು ಆಕ್ರೋಶ ಭರಿತವಾಗಿ ಟ್ವೀಟ್ ಮಾಡುವ ಮೂಲಕ ಡ್ರಗ್ಸ್ ಮಾಫಿಯಾದ ಬಗ್ಗೆ ಮಾತನಾಡಿದರು. ಇದನ್ನೂ ಓದಿ: ವಯಸ್ಸಿಗು ಡ್ರಗ್ಸ್‌ಗೂ ಕನೆಕ್ಟ್ ಮಾಡಬೇಡಿ: ನಟಿ ರಾಗಿಣಿ

    “ಸರಿಯಾಗಿ ಬಾಳಿಬದುಕುವ ನಿರ್ಧಾರ ಮಾಡಿ ಶ್ರಮಿಸುವರು ಎಲ್ಲೇ ಇದ್ದರು ಶ್ರೇಷ್ಠವಾಗಿ ಉಳಿಯುತ್ತಾರೆ. ನಾನು ನನ್ನಿಷ್ಟ, ನನ್ನ ಬದುಕು ಎನ್ನುವರ ಮಠಕ್ಕೆ ಸೇರಿಸಿದರೂ ನಶೆ, ಹಾದರದ ಬಿಸಿ ಹೆಂಚಿನ ಮೇಲೆ ಸ್ವಲ್ಪ ಕಾಲಬದುಕಿ ವಿಕೃತ ಆನಂದ ಅನುಭವಿಸಿ ಸೀದು ಹೋಗುತ್ತಾರೆ. ಏಕ್ ಮಾರ್ ದೋ ತುಕಡ, ತಪ್ಪು ಮಾಡಿದವರ ಬೆತ್ತಲೆ ಮಾಡಿ ಆಗಲಾದರು ಜನಕ್ಕೆ ಅರಿವಾಗಲಿ” ಎಂದು ಟ್ವಿಟ್ಟರಿಯಲ್ಲಿ ಆಕ್ರೋಶದಿಂದ ಬರೆದುಕೊಂಡಿದ್ದಾರೆ.

    “ಶ್ರೇಷ್ಠ ಮನುಜನ್ಮ, ಅದು ನಶ್ವರ ಸತ್ಯ. ಆದರೂ ಆ ನಶ್ವರದೇಹ ನಶಿಸುವ ಮುನ್ನ ಸಾರ್ಥಕಪಡಿಸಿ ಬದುಕಬೇಕು. ನಶೆ ಹಾದರದ ಹಿಂದೆ ಬರಿ ಸಿನಿಮಾ ಅಲ್ಲಾ ಸಮಾಜವೇ ಆಕರ್ಷಶಿತ ಆಗುತ್ತಿದೆ. ಯಾರು ಶ್ರಮಪಟ್ಟು ಜೀವನ ಗೆದ್ದಿರುತ್ತಾರೆ. ಅವರ ಹೆಜ್ಜೆ ತಪ್ಪುದಾರಿ ತುಳಿಯದು. ಯಾರು ವಾಮಮಾರ್ಗದಲ್ಲಿ ಗೆದ್ದಿರುತ್ತಾರೆ ಅವರೇ ನಶೆಹಾದರದ ದಾಸರು. ಉಪ್ಪುತಿಂದವ ನೀರು ಕುಡಿಯುವ” ಎಂದು ಜಗ್ಗೇಶ್ ಹೇಳಿದರು.

    “ಬಲವಂತಕ್ಕೆ 2017 ಒಬ್ಬ ರಾಜಕಾರಣಿ ಪಾರ್ಟಿಗೆ ಹೋಗಿದ್ದೆ. ಅರ್ಧ ಗಂಟೆಗೆ ಆ ಜಾಗ ಅಲ್ಲಿದ್ದವರ ಆರ್ಭಟ, ಬಂದು ಸೇರಿದ ಅರ್ಧ ಉಡುಗೆ ಸುಂದರಿಯರು, ಅದಕಂಡು ನಾನು ನನ್ನ ಆತ್ಮೀಯ ಯುವನಟಗೆ ಹೇಳದೆ ಕೇಳದೆ ಲಿಫ್ಟು ಬಳಸದೆ 12 ಮಹಡಿ ಇಳಿದು ಓಡಿದೆವು. ಅದೆಕಡೆ ಇಂದಿಗೂ ನನಗೆ ಯಾರು ಕರೆಮಾಡದಂತೆ ಮೊಬೈಲ್ ವರ್ಜಿಸಿದೆ. ಅಲ್ಲಿದ್ದವರು ಸಮಾಜದ ಎಲ್ಲ ಮುಖಗಳು” ಎಂದು 2017ರಲ್ಲಿ ನಡೆದ ಘಟನೆಯ ಬಗ್ಗೆ ಹೇಳಿದ್ದಾರೆ.

  • ಎನ್‍ಸಿಬಿ ಸಹಕಾರ ಕೇಳಿದ್ರೆ ನಾವು ಪೂರ್ಣ ಪ್ರಮಾಣದಲ್ಲಿ ಸಹಕರಿಸ್ತೇವೆ: ಕಮಲ್ ಪಂತ್

    ಎನ್‍ಸಿಬಿ ಸಹಕಾರ ಕೇಳಿದ್ರೆ ನಾವು ಪೂರ್ಣ ಪ್ರಮಾಣದಲ್ಲಿ ಸಹಕರಿಸ್ತೇವೆ: ಕಮಲ್ ಪಂತ್

    ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಎನ್‍ಸಿಬಿ (Narcotics Control Bureau) ತನಿಖೆ ನಡೆಸುತ್ತಿದೆ. ಅವರು ನಮ್ಮ ಸಹಕಾರ ಕೇಳಿದರೆ ನಾವು ಸಹಾಯ ಮಾಡುತ್ತೇವೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ಇದನ್ನೂ ಓದಿ: ಈ ಹಿಂದೆ ತೀರಿಕೊಂಡ ನಟನ ಪೋಸ್ಟ್ ಮಾರ್ಟಂ ಆಗಿಲ್ಲ ಏಕೆ?: ಇಂದ್ರಜಿತ್

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಎನ್‍ಸಿಬಿ ತನಿಖೆ ನಡೆಸುತ್ತಿದೆ. ಎನ್‍ಸಿಬಿ ಅಧಿಕಾರಿಗಳು ಹೊರಗಡೆಯಿಂದ ಬರುತ್ತಿದ್ದಾರೆ ಎಂದು ನಮಗೆ ಗೊತ್ತಾಗಿದೆ. ಒಂದು ವೇಳೆ ಎನ್‍ಸಿಬಿ ತಂಡ ನಮ್ಮ ಸಹಕಾರ, ಬೆಂಬಲವನ್ನು ಕೇಳಿದರೆ ನಾವು ಪೂರ್ಣ ಪ್ರಮಾಣದಲ್ಲಿ ಅವರಿಗೆ ಸಹಕಾರ ಕೊಡುತ್ತೇವೆ ಎಂದರು.

    ಹೊರಗಡೆಯಿಂದ ಬರುತ್ತಿರುವ ಅಧಿಕಾರಿಗಳು ನಮ್ಮ ಬಳಿ ಬರುವ ನಿರೀಕ್ಷೆ ಇದೆ. ಅವರಿಗೆ ಅನುಕೂಲವಾದಾಗ ಪ್ರಕರಣವನ್ನು ನಮಗೆ ನೀಡಿದರೆ ನಾವು ಖಂಡಿತ ತನಿಖೆಯನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ಸಹಕಾರ ನೀಡಲು ಪೊಲೀಸರು ಬದ್ಧರಾಗಿದ್ದೇವೆ. ಎನ್‍ಸಿಬಿ ಅಧಿಕಾರಿಯಿಂದ ನಮಗೆ ಇಲ್ಲಿವರೆಗೂ ಯಾವುದೇ ಮಾಹಿತಿ ತಿಳಿಸಿಲ್ಲ. ಎನ್‍ಸಿಬಿ ಮಾಹಿತಿ ಶೇರ್ ಮಾಡುತ್ತಾರೆ. ನಂತರ ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

    ಇಂದ್ರಜಿತ್ ಲಂಕೇಶ್ ಹೇಳಿಕೆ ಬಗ್ಗೆ ನಮ್ಮ ಪೊಲೀಸರು ಗಮನಿಸಿದ್ದಾರೆ. ಸುಮೋಟೋ ತೆಗೆದುಕೊಳ್ಳುವ ಬಗ್ಗೆ ಚರ್ಚೆ ನಡೆದಿದೆ. ರಕ್ಷಣೆ ಬೇಕು ಅಂದರೆ ಕೊಡೋಣ. ಬಳಿಕ ಸಮನ್ಸ್ ಕೊಡುವುದರ ಬಗ್ಗೆ ಚಿಂತನೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದರು.

    ಇಂದ್ರಜಿತ್ ಹೇಳಿದ್ದೇನು?
    ಹಲವಾರು ರೇವ್ ಪಾರ್ಟಿಗಳು ನಡೆಯುತ್ತಾ ಇರುತ್ತವೆ. ಯುವ ನಟ ಹಾಗೂ ನಟರು ಇದರಲ್ಲಿ ಸಿಲುಕಿದ್ದಾರೆ. ನನಗೆ ಪರಿಚಯ ಇರುವಂತಹ ಹಾಗೂ ಈಗಾಗಲೇ ಖ್ಯಾತಿಯಲ್ಲಿರುವವವರು ಯಾರೂ ಮಾಡಲ್ಲ ಅಂತ ನಾನು ಖಂಡಿತವಾಗಿ ಹೇಳಬಹುದು. ಆದರೆ ಸಡನ್ ಆಗಿ ಪ್ರಚಾರ ಪಡೆಯುತ್ತಿರುವಂತಹ ಯುವ ನಟ-ನಟಿಯರು ಪಾರ್ಟಿ ಹಾಗೂ ಈ ರೀತಿಗಳಲ್ಲಿ ತಮ್ಮನ್ನು ತಾವು ತೊಡಿಸಿಕೊಳ್ಳುತ್ತಾರೆ ಅಂತ ನಾನು ಕೇಳಿದ್ದೀನಿ. ಹಲವಾರು ಘಟನೆಗಳು ಕೂಡ ನನಗೆ ತಿಳಿದಿದೆ. ಬಾಲಿವುಡ್ ನಟಿ ಕಂಗನಾ ರಣಾವತ್ ಹೇಳಿದಂತೆ ನನಗೂ ರಕ್ಷಣೆ ಕೊಟ್ಟರೆ ನಾನೂ ಕೆಲವೊಂದು ವಿಚಾರಗಳನ್ನು ಬಹಿರಂಗಪಡಿಸಲು ಸಿದ್ಧನಿದ್ದೇನೆ ಎಂದು ತಿಳಿಸಿದ್ದರು.

  • ವಯಸ್ಸಿಗೂ ಡ್ರಗ್ಸ್‌ಗೂ ಕನೆಕ್ಟ್ ಮಾಡಬೇಡಿ: ನಟಿ ರಾಗಿಣಿ

    ವಯಸ್ಸಿಗೂ ಡ್ರಗ್ಸ್‌ಗೂ ಕನೆಕ್ಟ್ ಮಾಡಬೇಡಿ: ನಟಿ ರಾಗಿಣಿ

    ಬೆಂಗಳೂರು: ವಯಸ್ಸಿಗು ಡ್ರಗ್ಸ್‌ಗೂ ಕನೆಕ್ಟ್ ಮಾಡಬೇಡಿ. ವಯಸ್ಸಾಗುವುದು ಒಂದು ನೈಸರ್ಗಿಕ ಪ್ರಕ್ರಿಯೆ ಎಂದು ನಟಿ ರಾಗಿಣಿ ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಪ್ರತಿಕ್ರಿಯಸಿದ್ದಾರೆ. ಇದನ್ನೂ ಓದಿ: ನಾನು ಡ್ರಗ್ಸ್ ಸೇವನೆ ಮಾಡಲ್ಲ, ಮಾಡೋರ ಬಗ್ಗೆ ಗೊತ್ತಿಲ್ಲ: ರಚಿತಾ ರಾಮ್

    ಪಬ್ಲಿಕ್ ಟಿವಿ ಜೊತೆ ಫೋನ್ ಮೂಲಕ ಮಾತನಾಡಿದ ನಟಿ ರಾಗಿಣಿ, ಕಳೆದ ಮೂರು ದಿನಗಳಿಂದ ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾ ಇದೆ ಎಂಬುದರ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬರುತ್ತಿದೆ. ನಾನು ಸುದ್ದಿ ನೋಡಿ ತಿಳಿದುಕೊಂಡಿದ್ದೇನೆ. ಸ್ಟಾರ್ ನಟ-ನಟಿಯರ ಹೆಸರನ್ನು ಸುಮ್ಮನೆ ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ ಪೊಲೀಸರು ಸರಿಯಾದ ರೀತಿಯಲ್ಲಿ ತನಿಖೆ ಮಾಡಬೇಕು ಎಂದರು.

    ಇಡೀ ದೇಶದಲ್ಲಿ ಏನೇನೋ ಸುದ್ದಿ ಹೋಗುತ್ತಿದೆ. ಏನೇನೋ ಕಥೆಗಳು ನಡೆಯುತ್ತಿದೆ. ಬಾಂಬೆಯಲ್ಲಿ ನಡೆಯುತ್ತಿರುವ ಕೇಸ್‍ನಿಂದ ಈ ವಿಚಾರ ಹೊರಗಡೆ ಬರುತ್ತಿದೆ. ರೂಟ್ ಕಾರ್ಟ್ ಮೂಲಕ ಎಲ್ಲರನ್ನೂ ಹುಡುಕಲಿ. ಆದರೆ ಅನಾವಶ್ಯಕವಾಗಿ ಇಂಡಸ್ಟ್ರಿ ಅಥವಾ ವೈಯಕ್ತಿಕವಾಗಿ ದೂಷಿಸುವುದು ತಪ್ಪು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

    ಎಲ್ಲ ಮಾಹಿತಿ ಗೊತ್ತಿದ್ದರೆ ರಕ್ಷಣೆ ತೆಗೆದುಕೊಂಡು ಬಹಿರಂಗಪಡಿಸಲಿ. ಸುಮ್ಮನೆ ಊಹೆಯಿಂದ ಆರೋಪ ಮಾಡುವುದು ಸರಿಯಲ್ಲ. ಯಾವತ್ತಿದ್ದರೂ ಸತ್ಯ ಹೊರಗೆ ಬರಬೇಕು ಎಂದು ನಟಿ ರಾಗಿಣಿ ಗರಂ ಆದರು.

    ಇದೇ ವೇಳೆ ಸೌಂದರ್ಯ ಕಾಪಾಡಿಕೊಳ್ಳಲು ನಟಿಯರು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದಾರೆ ಎಂಬುದರ ಬಗ್ಗೆ ಮಾತನಾಡಿದ ರಾಗಿಣಿ, ಮೊದಲಿಗೆ ವಯಸ್ಸಿಗೂ ಡ್ರಗ್ಸ್‌ಗೂ ಕನೆಕ್ಟ್ ಮಾಡಬೇಡಿ. ವಯಸ್ಸಾಗುವುದು ಒಂದು ನೈಸರ್ಗಿಕ ಪ್ರಕ್ರಿಯೆ. ಎಲ್ಲರೂ ನೈಸರ್ಗಿಕವಾಗಿ ಸೌಂದರ್ಯ ಹೊಂದಿರುತ್ತಾರೆ. ನೈಸಗಿರ್ಕ ಬ್ಯೂಟಿ ಆ್ಯಂಟಿ ಏಜಿಂಗೂ ಪ್ರಕ್ರಿಯೆ ಏನಿದೆ ಎಂದರೆ, ಮೆಡಿಟೇಶನ್, ವ್ಯಾಯಾಮದ ಮೂಲಕ ಮಾಡುತ್ತಾರೆ. ತಾಂತ್ರಿಕವಾಗಿ, ವೈಜ್ಞಾನಿಕವಾಗಿ ಡ್ರಗ್ಸ್‌ಗೂ ಆ್ಯಂಟಿ ಏಜಿಂಗೂ ಸಂಬಂಧವೇ ಇಲ್ಲ ಎಂದು ನಟಿ ಸ್ಪಷ್ಟಪಡಿಸಿದರು.

  • ಡ್ರಗ್ಸ್ ಮಾಫಿಯಾದಿಂದ ಮರ್ಸಿಡಿಸ್, ಜಾಗ್ವಾರ್ ಕಾರು ಪಡೆದ ಕಲಾವಿದರ ಹೆಸರು ಬಹಿರಂಗವಾಗ್ಬೇಕು: ಇಂದ್ರಜಿತ್

    ಡ್ರಗ್ಸ್ ಮಾಫಿಯಾದಿಂದ ಮರ್ಸಿಡಿಸ್, ಜಾಗ್ವಾರ್ ಕಾರು ಪಡೆದ ಕಲಾವಿದರ ಹೆಸರು ಬಹಿರಂಗವಾಗ್ಬೇಕು: ಇಂದ್ರಜಿತ್

    – ನನಗೆ ರಕ್ಷಣೆ ನೀಡಿದ್ರೆ ಮಾಹಿತಿ ಬಹಿರಂಗ

    ಬೆಂಗಳೂರು: ಡ್ರಗ್ಸ್ ಮಾಫಿಯಾದಿಂದ ಮರ್ಸಿಡಿಸ್, ಜಾಗ್ವಾರ್ ಕಾರು ಪಡೆದ ಕಲಾವಿದರ ಹೆಸರು ಬಹಿರಂಗ ಆಗಬೇಕು ಎಂದು ನಟ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.

    ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಇಂದಿನ ಶಾಲೆಯ ವಿದ್ಯಾರ್ಥಿಗಳು ಕೂಡ ಡ್ರಗ್ಸ್ ಗೆ ಎಡಿಕ್ಟ್ ಆಗುತ್ತಿದ್ದಾರೆ. ಅಲ್ಲದೆ ಮಕ್ಕಳನ್ನು ಡ್ರಗ್ ಎಡಿಕ್ಟ್ ಆಗುವಂತೆ ಮಾಡುವವರು ಇದ್ದಾರೆ. ಇದೊಂದು ದೊಡ್ಡ ಮಾಫಿಯಾ ಆಗಿದೆ ಎಂದರು.

    ಹಲವಾರು ರೇವ್ ಪಾರ್ಟಿಗಳು ನಡೆಯುತ್ತಾ ಇರುತ್ತವೆ. ಯುವ ನಟ ಹಾಗೂ ನಟರು ಇದರಲ್ಲಿ ಸಿಲುಕಿದ್ದಾರೆ. ನನಗೆ ಪರಿಚಯ ಇರುವಂತಹ ಹಾಗೂ ಈಗಾಗಲೇ ಖ್ಯಾತಿಯಲ್ಲಿರುವವವರು ಯಾರೂ ಮಾಡಲ್ಲ ಅಂತ ನಾನು ಖಂಡಿತವಾಗಿ ಹೇಳಬಹುದು. ಆದರೆ ಸಡನ್ ಆಗಿ ಪ್ರಚಾರ ಪಡೆಯುತ್ತಿರುವಂತಹ ಯುವ ನಟ-ನಟಿಯರು ಪಾರ್ಟಿ ಹಾಗೂ ಈ ರೀತಿಗಳಲ್ಲಿ ತಮ್ಮನ್ನು ತಾವು ತೊಡಿಸಿಕೊಳ್ಳುತ್ತಾರೆ ಅಂತ ನಾನು ಕೇಳಿದ್ದೀನಿ. ಹಲವಾರು ಘಟನೆಗಳು ಕೂಡ ನನಗೆ ತಿಳಿದಿದೆ. ಬಾಲಿವುಡ್ ನಟಿ ಕಂಗನಾ ರಣಾವತ್ ಹೇಳಿದಂತೆ ನನಗೂ ರಕ್ಷಣೆ ಕೊಟ್ಟರೆ ನಾನೂ ಕೆಲವೊಂದು ವಿಚಾರಗಳನ್ನು ಬಹಿರಂಗಪಡಿಸಲು ಸಿದ್ಧನಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನು ಓದಿ: ನಾನು ಡ್ರಗ್ಸ್ ಸೇವನೆ ಮಾಡಲ್ಲ, ಮಾಡೋರ ಬಗ್ಗೆ ಗೊತ್ತಿಲ್ಲ: ರಚಿತಾ ರಾಮ್

    ನಮ್ಮಲ್ಲಿ ರೇವ್ ಪಾರ್ಟಿಗಳು ನಡೆಯುತ್ತೆ. ಯುವ ನಟ-ನಟಿಯರು ಮಾದಕ ವಸ್ತುಗಳನ್ನ ಬಳಸುತ್ತಿದ್ದಾರೆ. ಈ ಕುರಿತು ಸೂಕ್ತತವಾದ ತನಿಖೆ ನಡೆಯಬೇಕು. ಸರಿಯಾದ ತನಿಖೆ ನಡೆದು ಸಾಕ್ಷಿ ಸಮೇತ ಬಹಿರಂಗಪಡಿಸಿ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಈ ತನಿಖೆಗೆ ನಾನು ಕೂಡ ಸಂಪೂರ್ಣ ಸಹಕಾರ ಕೊಡ್ತೀನಿ. ಅಧಿಕಾರಿಗಳು ಕರೆದರೆ ತನಿಖೆಗೆ ಇನ್ನಷ್ಟು ಮಾಹಿತಿ ಕೊಡುವುದಾಗಿ ಅವರು ಹೇಳಿದರು.