Tag: Drugs Case

  • ನಿಜವಾಗಿಯೂ ಆರೋಗ್ಯ ಸಮಸ್ಯೆ ಇದ್ಯಾ? – ನಟಿಯರ ಹೈಡ್ರಾಮಾಕ್ಕೆ ಇಂದೇ ಬೀಳುತ್ತೆ ತೆರೆ

    ನಿಜವಾಗಿಯೂ ಆರೋಗ್ಯ ಸಮಸ್ಯೆ ಇದ್ಯಾ? – ನಟಿಯರ ಹೈಡ್ರಾಮಾಕ್ಕೆ ಇಂದೇ ಬೀಳುತ್ತೆ ತೆರೆ

    ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಸಿಸಿಬಿ ವಿಚಾರಣೆ ಎದುರಿಸುತ್ತಿದ್ದು, ಈ ಮಧ್ಯೆ ನಟಿಮಣಿಯರಿಬ್ಬರು ಅನಾರೋಗ್ಯದ ನೆಪ ಹೇಳಿಕೊಂಡು ತನಿಖೆಗೆ ಸರಿಯಾಗಿ ಸಹಕಾರ ನೀಡದ ಹಿನ್ನೆಲೆಯಲ್ಲಿ ಈಗ ಅವರ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.

    ಹೌದು. ರಾಗಿಣಿ ಹಾಗೂ ಸಂಜನಾಳನ್ನು ಈಗಾಗಲೇ ನಗರದ ಕೆ.ಸಿ ಜನರಲ್ ಆಸ್ಪತ್ರೆಗೆ ಕರೆದೊಯ್ದು ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಈ ಮೂಲಕ ಅನಾರೋಗ್ಯ ಇದೆಯಾ ಅಥವಾ ನಟಿಮಣಿಗಳಿಬ್ಬರು ಸುಳ್ಳು ಹೇಳುತ್ತಿದ್ದಾರಾ ಎಂಬುದನ್ನು ಪತ್ತೆ ಹಚ್ಚುವ ಕೆಲಸಕ್ಕೆ ಪೊಲೀಸರು ಈಗ ಮುಂದಾಗಿದ್ದಾರೆ.

    ಅರೆಸ್ಟ್ ಆದ ಸಂದರ್ಭದಲ್ಲಿ ನಡೆದ ಟೆಸ್ಟ್ ನಲ್ಲಿ ರಕ್ತದ ಮಾದರಿ ತೆಗೆದುಕೊಂಡಿಲ್ಲ. ಹೀಗಾಗಿ ಇಂದು ರಕ್ತದ ಮಾದರಿಯನ್ನ ಪಡೆಯಲು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೊದಲು ನಾರ್ಮಲ್ ಚೆಕಪ್ ನಡೆಸಿ ನಂತರ ರಕ್ತದ ಮಾದರಿಯನ್ನ ಪಡೆಯಲಿದ್ದಾರೆ.

    ರಕ್ತದ ಮಾದರಿ ಪಡೆಯಲು ಕೋರ್ಟಿನಿಂದ ಪರ್ಮೀಷನ್ ಪಡೆಯಬೇಕು. ನಿನ್ನೆ ಕೋರ್ಟಿನಿಂದ ಪರ್ಮೀಷನ್ ಸಿಕ್ಕಿತ್ತು. ಹೀಗಾಗಿ ಇವತ್ತು ರಕ್ತದ ಸ್ಯಾಂಪಲ್ ಪಡೆಯಲು ಸಿದ್ಧತೆ ನಡೆಸಲಾಗುತ್ತಿದೆ.

    ಇಬ್ಬರ ರಕ್ತದ ಮಾದರಿ ಹಾಗೂ ಯೂರಿನ್ ಸ್ಯಾಂಪಲ್ ಸಂಗ್ರಿಹಸಲಾಗುತ್ತೆ. ಇಬ್ಬರು ನಟಿ ಮಣಿಯರ ಓವರ್ ಆ್ಯಕ್ಟಿಂಗ್ ಕೂಡ ಈ ಪರೀಕ್ಷೆಗೆ ಕಾರಣ ಎಂದು ಹೇಳಲಾಗುತ್ತಿದೆ. ಯಾಕೆಂದರೆ ತನಿಖೆ ನಡೆಸುವಾಗ ಪದೇ ಪದೇ ಅನಾರೋಗ್ಯದ ನೆಪವೊಡ್ಡಿ ನಟಿಯರು ನಾಟಕವಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರ ಸಂಪೂರ್ಣ ಆರೋಗ್ಯ ತಪಾಸಣೆಗೆ ನಿರ್ಧರಿಸಿದ್ದಾರೆ.

    ಪರೀಕ್ಷೆಯ ವೇಳೆ ಇಬ್ಬರ ಬಿಪಿ ನಾರ್ಮಲ್ ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂಬುವುದು ಮೂಲಗಳಿಂದ ತಿಳಿದು ಬಂದಿದೆ.

  • ನನ್ನ ಶ್ರೀಮತಿ ಬಿಟ್ಟು ನನಗೆ ಸಂಜನಾ, ರಾಗಿಣಿ ಗೊತ್ತಿಲ್ಲ: ವಿ. ಸೋಮಣ್ಣ

    ನನ್ನ ಶ್ರೀಮತಿ ಬಿಟ್ಟು ನನಗೆ ಸಂಜನಾ, ರಾಗಿಣಿ ಗೊತ್ತಿಲ್ಲ: ವಿ. ಸೋಮಣ್ಣ

    ಬೆಂಗಳೂರು: ನನಗೆ ನನ್ನ ಶ್ರೀಮತಿ ಬಿಟ್ಟು ಬೇರೆ ಯಾರೂ ಗೊತ್ತಿಲ್ಲ. ಸಂಜನಾ ರಾಗಿಣಿ ಯಾರೂ ಗೊತ್ತಿಲ್ಲ ಎಂದು ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

    ವಸತಿ ಇಲಾಖೆಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಡ್ರಗ್ಸ್ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸಂಜನಾ, ರಾಗಿಣಿ ನನಗೆ ಗೊತ್ತಿಲ್ಲ. ನಮ್ಮ ಶ್ರೀಮತಿ ಬಿಟ್ಟು ಯಾರೂ ಗೊತ್ತಿಲ್ಲ. ನಾನು ಆ ವಿಚಾರದಲ್ಲಿ ಎಲ್ ಬೋರ್ಡ್, ಜಿರೋ ಎಂದು ಹೇಳಿದರು.

    ಡ್ರಗ್ಸ್ ಕೇಸ್ ವಿಚಾರದಲ್ಲಿ ಜಮೀರ್ ಖಾನ್ ಇರೋ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಾನೂನಿಗಿಂತ ಯಾರು ದೊಡ್ಡವರು. ಕಾನೂನು ಪ್ರಕಾರ ತನಿಖೆ ನಡೆಯುತ್ತೆ. ಯಾರೇ ಇದ್ದರೂ ಕ್ರಮ ಆಗಲಿ. ನನಗೆ ಯಾವ ಫಿಲ್ಮ್ ಹಿರೋಯಿನ್ ಯಾರೂ ಗೊತ್ತಿಲ್ಲ. ನಾನು ಬಂಧನ ಚಿತ್ರ ನೋಡಿದ್ದು ಕೊನೆ ಎಂದು ತಿಳಿಸಿದರು.

    ಇಂತಹ ತಪ್ಪು ಯಾರೇ ಮಾಡಿದ್ರು ಹಲ್ಕಟ್ ಗಳು. ಸಿಎಂ ಕೂಡ ಈಗಾಗಲೇ ಯಾರೇ ಇದ್ದರೂ ಕ್ರಮ ತಗೋತೀವಿ ಅಂತ ಹೇಳಿದ್ದಾರೆ. ಯಾರೇ ಇದ್ದರು ಕ್ರಮ ನಮ್ಮ ಸರ್ಕಾರ ತೆಗೆದುಕೊಳ್ಳುತ್ತೆ ಎಂದು ಭರವಸೆ ನಿಡಿದರು.

    ಇದೇ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಮಳೆ ವಿಚಾರದ ಬಗ್ಗೆ ಮಾತನಾಡಿದ ಅವರು, ಬೆಳಗ್ಗೆಯಿಂದ ಕ್ಷೇತ್ರದಲ್ಲಿ ಸಂಚಾರ ಮಾಡಿ ಪರಿಸ್ಥಿತಿ ಅವಲೋಕನ ಮಾಡಿದ್ದೇನೆ. ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಗತ್ಯ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ. ನನ್ನ ಕೆಲಸ ನಾನು ಮಾಡಿದ್ದೇನೆ. ಬೇರೆ ಅವರ ಬಗ್ಗೆ ನನಗೆ ಗೊತ್ತಿಲ್ಲ ಎಂದರು.

  • ಡ್ರಗ್ಸ್ ಅಡಿಕ್ಟ್ ಸುಶಾಂತ್‍ನನ್ನು ಪ್ರೀತಿಸಿದ್ದಕ್ಕೆ ಈ ಶಿಕ್ಷೆ: ರಿಯಾ ಪರ ವಕೀಲ

    ಡ್ರಗ್ಸ್ ಅಡಿಕ್ಟ್ ಸುಶಾಂತ್‍ನನ್ನು ಪ್ರೀತಿಸಿದ್ದಕ್ಕೆ ಈ ಶಿಕ್ಷೆ: ರಿಯಾ ಪರ ವಕೀಲ

    -ಜಾಮೀನು ಅರ್ಜಿ ವಜಾ, 14 ದಿನ ನ್ಯಾಯಾಂಗ ಬಂಧನ
    -ರಿಯಾಗೆ ಮುಂಬೈ ಪೊಲೀಸರ ಸಾಥ್?
    -ಡ್ರಗ್ಸ್ ಖರೀದಿಗೆ ಸುಶಾಂತ್ ಹಣ ಬಳಕೆ

    ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಅವರನ್ನ ಪ್ರೀತಿಸಿದ ತಪ್ಪಿಗೆ ನನ್ನ ಕಕ್ಷಿದಾರ ರಿಯಾ ಚಕ್ರವರ್ತಿಯ ಬಂಧನವಾಗಿದೆ. ಮೂರು ತನಿಖಾ ಏಜೆನ್ಸಿಗಳು ಓರ್ವ ಮಹಿಳೆ ಹಿಂದೆ ಬಿದ್ದಿವೆ. ಕಾರಣ ಆಕೆ ಓರ್ವ ಡ್ರಗ್ಸ್ ಅಡಿಕ್ಟ್ ನನ್ನು ಪ್ರೀತಿಸುತ್ತಿದ್ದಳು. ಸುಶಾಂತ್ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಿಯಾ ಚಕ್ರವರ್ತಿ ಪರ ವಕೀಲ ಸತೀಶ್ ಮನಶಿಂಧೆ ಹೇಳಿದ್ದಾರೆ.

    ಇಂದು ವಿಚಾರಣೆಗೆ ಹಾಜರಾಗಿದ್ದ ರಿಯಾ ಚಕ್ರವರ್ತಿ ಅವರನ್ನ ಎನ್‍ಸಿಬಿ ಬಂಧಿಸಿದ್ದು, ನ್ಯಾಯಾಲಯ 14 ದಿನದ ನ್ಯಾಯಾಂಗ ಬಂಧನಕ್ಕೆ ನೀಡಿದೆ. ವೈದ್ಯಕೀಯ ಪರೀಕ್ಷೆ ಬಳಿಕ ರಿಯಾರನ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಎನ್‍ಸಿಬಿ ಆರೋಪಿ ರಿಯಾರನ್ನ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ನ್ಯಾಯಾಧೀಶರ ಮುಂದೆ ಮನವಿ ಮಾಡಿಕೊಂಡಿತ್ತು.

    ನ್ಯಾಯಾಂಗ ಬಂಧನದ ಬಳಿಕ ರಿಯಾ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆರೋಪಿ ರಿಯಾ ಪ್ರಭಾವಿ ವ್ಯಕ್ತಿಯಾಗಿದ್ದು, ಇತರೆ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ಹಾಗಾಗಿ ಜಾಮೀನು ನೀಡಕೂಡದು ಎಂದು ಎನ್‍ಸಿವಿ ತನ್ನ ವಾದವನ್ನ ಮಂಡಿಸಿತ್ತು. ಇತ್ತ ರಿಯಾ ಪರ ವಕೀಲರು, ಕಕ್ಷಿದಾರರು ವಿಚಾರಣೆ ಸಂಪೂರ್ಣ ಸಹಕಾರ ನೀಡಿದ್ದು, ಅವಶ್ಯವಿದ್ದಲ್ಲಿ ಮತ್ತೆ ಹಾಜರಾಗುತ್ತಾರೆ. ಈ ಹಿನ್ನೆಲೆ ಜಾಮೀನು ನೀಡಬೇಕೆಂದು ಮನವಿ ಮಾಡಿಕೊಂಡಿದ್ದರು. ವಾದ-ವಿವಾದ ಆಲಿಸಿದ ನ್ಯಾಯಾಲಯ ಅರ್ಜಿಯನ್ನ ವಜಾಗೊಳಿಸಿದೆ. ಇದನ್ನೂ ಓದಿ: ವಿಚಾರಣೆ ವೇಳೆ ತಮ್ಮನನ್ನ ನೋಡಿ ಕಣ್ಣೀರಿಟ್ಟ ರಿಯಾ ಚಕ್ರವರ್ತಿ-25 ಬಿಟೌನ್ ಸ್ಟಾರ್ ಗಳಿಗೆ ಢವಢವ ಶುರು

    ಮೂರು ದಿನ ವಿಚಾರಣೆ ಹಾಜರಾಗಿದ್ದ ರಿಯಾ ತನಿಖೆಗೆ ಸಹಕಾರ ನೀಡಿದ್ದಾರೆ. ಹೀಗಾಗಿ ನಾವು ರಿಯಾರನ್ನ ನ್ಯಾಯಾಂಗ ಬಂಧನದಲ್ಲಿರಿಸುವಂತೆ ಮಾಡಿಕೊಂಡಿದ್ದೇವೆ. ಮುಂದಿನ ತನಿಖೆವರೆಗೂ ರಿಯಾ ನ್ಯಾಯಾಂಗ ಬಂಧನದಲ್ಲಿರೋದು ಸೂಕ್ತ ಎಂದು ಎನ್‍ಸಿಬಿ ಅಧಿಕಾರಿಗಳು ಹೇಳಿದ್ದಾರೆ ಎಂದು ವರದಿಯಾಗಿದೆ. ಇತ್ತ ವಿಚಾರಣೆ ವೇಳೆ ರಿಯಾ ಡ್ರಗ್ಸ್ ಸೇವನೆ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಕರ್ಮ ನಿಮ್ಮನ್ನ ಬಿಡಲ್ಲ- ರಿಯಾ ಬಂಧನಕ್ಕೆ ಅಂಕಿತಾ ಪ್ರತಿಕ್ರಿಯೆ

    ಡ್ರಗ್ಸ್ ಎಲ್ಲಿ ಮತ್ತು ಯಾರಿಂದ ಖರೀದಿಸಬೇಕು ಎಂಬುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಿದ್ದರು. ಕೇವಲ ಸುಶಾಂತ್‍ಗೆ ಮಾತ್ರವಲ್ಲದೇ ಹಲವರಿಗಾಗಿ ರಿಯಾ ಡ್ರಗ್ಸ್ ಖರೀದಿಸುತ್ತಿದ್ದರು. ಡ್ರಗ್ಸ್ ಖರೀದಿಗಾಗಿ ಸುಶಾಂತ್ ಖಾತೆಯಿಂದ ಹಣ ಪಾವತಿಸಲಾಗುತ್ತಿತ್ತು. ಡ್ರಗ್ಸ್ ಸಿಂಡಿಕೇಟ್ ನಲ್ಲಿ ರಿಯಾ ಸದಸ್ಯೆ ಆಗಿದ್ದರು ಎಂಬ ಆರೋಪಗಳನ್ನ ರಿಯಾ ಒಪ್ಪಿಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಡ್ರಗ್ಸ್ ಸೇವನೆ, ಮಾರಾಟ ಆರೋಪ- ರಿಯಾ ಚಕ್ರವರ್ತಿ ವಕೀಲ ಸ್ಪಷ್ಟನೆ

    ಆರಂಭದಲ್ಲಿ ಸುಶಾಂತ್ ಸಿಂಗ್ ಪ್ರಕರಣದ ತನಿಖೆ ನಡೆಸಿದ್ದ ಮುಂಬೈ ಪೊಲೀಸರು ರಿಯಾಗೆ ಸಾಥ್ ನೀಡಿದ್ದಾರೆ ಎಂಬ ಗಂಭೀರ ಆರೋಪಗಳು ಸಹ ಕೇಳಿಬಂದಿವೆ. ಈ ಹಿನ್ನೆಲೆ ರಿಯಾರನ್ನ ಬಂಧಿಸಲಾಗಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಅಂಕಿತಾ ಲೋಖಂಡೆ ಪೋಸ್ಟ್ ಗೆ ರಮ್ಯಾ ಪ್ರತಿಕ್ರಿಯೆ

    ಜೂನ್ 14ರಂದು ಸುಶಾಂತ್ ಮೃತದೇಹ ಅವರ ಬಾಂದ್ರಾ ನಿವಾಸದಲ್ಲಿ ಪತ್ತೆಯಾಗಿತ್ತು. ಮಾನಸಿಕ ಖಿನ್ನತೆಗೆ ಒಳಗಾಗಿ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ಹೇಳಲಾಗಿತ್ತು. ಆದ್ರೆ ಬಾಲಿವುಡ್ ನಟಿ ಕಂಗನಾ ರಣಾವತ್, ಇದೊಂದು ಪಕ್ಕಾ ಪೂರ್ವಯೋಜಿತ ಕೊಲೆ. ಬಾಲಿವುಡ್ ನಲ್ಲಿ ಸ್ವಜನಪಕ್ಷಪಾತ ಮಹಾರೋಗಕ್ಕೆ ಸುಶಾಂತ್ ಬಲಿಯಾಗಿದ್ದಾರೆ ಎಂದು ಆರೋಪಿಸಿ ಧ್ವನಿ ಎತ್ತಿದ್ದರು. ತದನಂತರ ಸಾವಿನ ಬಗ್ಗೆ ಮತ್ತು ಮುಂಬೈ ಪೊಲೀಸರ ತನಿಖೆಯ ಕುರಿತು ಅನುಮಾನಗಳು ವ್ಯಕ್ತವಾಗಿದ್ದರು. ಇತ್ತ ಸುಶಾಂತ್ ನಿಧನದ ಒಂದೂವರೆ ತಿಂಗಳ ಬಳಿಕ ಸುಶಾಂತ್ ತಂದೆ ಕೆ.ಕೆ.ಸಿಂಗ್ ಬಿಹಾರದ ಪಾಟ್ನಾದಲ್ಲಿ ನಟಿ ರಿಯಾ ವಿರುದ್ಧ ದೂರು ದಾಖಲಿಸಿದ್ದರು. ಇದನ್ನೂ ಓದಿ: ಸರ್ ನಿಧನದ ಬಳಿಕ ಮನೆಯಲ್ಲಿದ್ದ ಡ್ರಗ್ ಸಿಗರೇಟ್  ರೋಲ್ ಮಾಯವಾಯ್ತು: ಸುಶಾಂತ್ ಮನೆಯ ಕುಕ್ 

    ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಬಿಹಾರ ಸಿಎಂ ನಿತೀಶ್ ಕುಮಾರ್ ತನಿಖೆಯನ್ನ ಸಿಬಿಐಗೆ ವರ್ಗಾಯಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು. ಇತ್ತ ನಟಿ ರಿಯಾ, ಪಾಟ್ನಾ ಪ್ರಕರಣವನ್ನ ಮುಂಬೈಗೆ ವರ್ಗಾಯಿಸಬೇಕೆಂದು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣದ ತನಿಖೆ ಸಿಬಿಐಗೆ ವರ್ಗಾಯಿಸಿ ಅದೇಶ ನೀಡಿತ್ತು. ಇದನ್ನೂ ಓದಿ: ಪ್ರಕರಣಕ್ಕೆ ಹೊಸ ತಿರುವು ನೀಡಿದ ಸುಶಾಂತ್ ಪಕ್ಕದ್ಮನೆ ಮಹಿಳೆ ಹೇಳಿಕೆ

  • ಡ್ರಗ್ ಕೇಸ್‍ಗೆ ಸ್ಫೋಟಕ ಟ್ವಿಸ್ಟ್- ಕಾರ್ಪೊರೇಟರ್ ಮಗನಿಗೆ ಎನ್‍ಸಿಬಿ ನೋಟಿಸ್

    ಡ್ರಗ್ ಕೇಸ್‍ಗೆ ಸ್ಫೋಟಕ ಟ್ವಿಸ್ಟ್- ಕಾರ್ಪೊರೇಟರ್ ಮಗನಿಗೆ ಎನ್‍ಸಿಬಿ ನೋಟಿಸ್

    ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದ್ದು, ಬೆಂಗಳೂರಿನ ಕಾಂಗ್ರೆಸ್ ಕಾರ್ಪೋರೇಟರ್ ಮಗನಿಗೆ ಎನ್‍ಸಿಬಿ ನೋಟಿಸ್ ಜಾರಿ ಮಾಡಿರುವ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಕಳೆದ ಮೂರು ದಿನಗಳ ಹಿಂದೆ ರಾಜಾಜಿನಗರದ ಫಸ್ಟ್ ಬ್ಲಾಕ್‍ನಲ್ಲಿರುವ ಕಾರ್ಪೋರೇಟರ್ ಕೇಶವಮೂರ್ತಿ ಅವರ ನಿವಾಸದ ಮೇಲೆ ಎನ್‍ಸಿಬಿ ದಾಳಿ ನಡೆಸಿತ್ತು. ಇದೀಗ ಕಾರ್ಪೋರೇಟರ್ ಮಗನಿಗೆ ಎನ್‍ಸಿಬಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ ಎಂದು ತಿಳಿದು ಬಂದಿದೆ.

    ಸುಶಾಂತ್ ಸಿಂಗ್ ರಜಪೂತ್ ಪ್ರಕರಣಕ್ಕೆ ಸಂಬಂಧಿಸಿದ ದಾಳಿ ಇದಾಗಿದ್ದು, ಕಾರ್ಪೋರೇಟರ್ ಪುತ್ರ ಡಾರ್ಕ್‍ನೆಟ್ ಮೂಲಕ ಡ್ರಗ್ಸ್ ಖರೀದಿಸುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆ ಎನ್‍ಸಿಬಿ ದಾಳಿ ನಡೆಸಿತ್ತು. ದಾಳಿ ವೇಳೆ ಎನ್‍ಸಿಬಿ ಅಧಿಕಾರಿಗಳಿಗೆ ಯಾವುದೇ ಸಾಕ್ಷ್ಯ ಲಭ್ಯವಾಗಿರಲಿಲ್ಲ. ದಾಳಿ ಬಳಿಕ ಇದೀಗ ಬೆಂಗಳೂರಿನ ಎನ್‍ಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಮುಂಬೈಗೆ ಕರೆದೊಯ್ಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಕಾರ್ಪೋರೇಟರ್ ಕೇಶವಮೂರ್ತಿ, ನನ್ನ ಮಗನಿಗೆ ನೋಟಿಸ್ ವಿಚಾರ ನನಗೆ ಗೊತ್ತಿಲ್ಲ. ಮಗನಿಗೆ 26 ವರ್ಷ, ಡಿಗ್ರಿ ಅಪೂರ್ಣವಾಗಿದೆ. ಮಗನಿಗೆ ಸಿನಿಮಾದವರ ಯಾವುದೇ ಲಿಂಕ್ ಇಲ್ಲ. ಮಗ ಜಿಮ್ ಮಾಡಿಕೊಂಡು ಚೆನ್ನಾಗಿದ್ದಾನೆ ಎಂದು ಹೇಳಿದ್ದಾರೆ.