Tag: Drugs Case

  • ಡ್ರಗ್ಸ್ ತೆಗೆದುಕೊಂಡಿಲ್ಲ, 12 ಕೋಟಿ ಮನೆ ಇಲ್ಲ, ಈಗಲೂ ವಿಚಾರಣೆಗೆ ಸಿದ್ಧ: ಅನುಶ್ರೀ

    ಡ್ರಗ್ಸ್ ತೆಗೆದುಕೊಂಡಿಲ್ಲ, 12 ಕೋಟಿ ಮನೆ ಇಲ್ಲ, ಈಗಲೂ ವಿಚಾರಣೆಗೆ ಸಿದ್ಧ: ಅನುಶ್ರೀ

    – ಪೊಲೀಸರು ಯಾವುದೇ ಟೆಸ್ಟ್ ಮಾಡಿಲ್ಲ, ನಾನು ಮಾಡಬೇಡಿ ಅಂದಿಲ್ಲ
    – ಪೊಲೀಸರು ಕೇಳಿದ ಎಲ್ಲ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ
    – ಎಲ್ಲೂ ಓಡಿ ಹೋಗಲ್ಲ, ಇನ್ನೂ ವಿಚಾರಣೆ ಎದುರಿಸಲು ನಾನು ಸಿದ್ಧ

    ಬೆಂಗಳೂರು: ಕಳೆದ ವರ್ಷ ಸಿಸಿಬಿ ಪೊಲೀಸರು ವಿಚಾರಣೆಗೆ ಕರೆದಾಗ ಡ್ರಗ್ಸ್ ತೆಗೆದುಕೊಂಡಿರುವುದು, ಮಾರಾಟ ಮಾಡಿರುವುದರ ಬಗ್ಗೆ ಕೇಳಿಲ್ಲ. ಇದನ್ನು ಕಳೆದ ಬಾರಿಯೂ ಸ್ಪಷ್ಟಪಡಿಸಿದ್ದೇನೆ. ಕಾನೂನಿನ ಚೌಕಟ್ಟಿನಲ್ಲಿ ಪೊಲೀಸರು ಏನೇನು ಕೇಳಬೇಕು, ನಾನು ಏನೇನು ಹೇಳಬೇಕೋ ಎಲ್ಲವನ್ನೂ ಹೇಳಿದ್ದೇನೆ. ಕಾನೂನು ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದೇನೆ, ಮುಂದೆಯು ಕೊಡುತ್ತೇನೆ. ನನಗೆ ಬೆಂಗಳೂರಲ್ಲಿ ಮನೆ ಇಲ್ಲ, ಆರೋಪಗಳೆಲ್ಲವೂ ಸುಳ್ಳು ಎಂದು ನಟಿ, ನಿರೂಪಕಿ ಅನುಶ್ರೀ ಸ್ಪಷ್ಟಪಡಿಸಿದರು.

    ಮಹಾಲಕ್ಷ್ಮಿ ಲೇಔಟ್ ನಲ್ಲಿರೋ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಯಾವುದೇ ಮಾಜಿ ಮುಖ್ಯಮಂತ್ರಿ ಸಹಾಯ ಮಾಡಿಲ್ಲ, ಯಾರ ಸಹಾಯವೂ ನನಗೆ ಬೇಕಿಲ್ಲ. ನಾನು ಒಬ್ಬಳೇ ಬೆಂಗಳೂರಿಗೆ ಬಂದಿದ್ದೇನೆ, ಈಗಲೂ ನಿಮ್ಮ ಮುಂದೆ ಒಬ್ಬಳೇ ಬಂದು ನಿಂತಿದ್ದೇನೆ. ಅಲ್ಲದೆ ನಾನು ಭಯಪಟ್ಟುಕೊಂಡು ತಲೆಮರೆಸಿಕೊಂಡಿದ್ದೇನೆ ಎಂದು ಹೇಳಲಾಗುತ್ತಿದೆ. ನಾನು ಕೆಲಸದ ನಿಮಿತ್ತ ಮುಂಬೈಗೆ ಹೋಗಿದ್ದೆ. ಸೋಮವಾರ ನಾನು ಕೆಲಸದ ನಿಮಿತ್ತ ಮುಂಬೈಗೆ ಹೋಗಿದ್ದೆ. ವಾಪಸ್ ಬರಲು ಸಹ ಅದೇ ದಿನ ಬುಕ್ ಮಾಡಿದ್ದೇನೆ. ನಾನು ಎಲ್ಲೂ ಹಾರಿ ಹೋಗಿಲ್ಲ, ಭಯಪಟ್ಟುಕೊಂಡು ಹೋಗಿಲ್ಲ. ಕೆಲಸದ ನಿಮಿತ್ತ ಮುಂಬೈಗೆ ಹೋಗಿದ್ದೆ. ನೀವೆಲ್ಲ ಆರೋಪ ಮಾಡುವ 2 ದಿನ ಮುಂಚೆಯೇ ನಾನು ಮುಂಬೈಗೆ ಹೋಗಿದ್ದೆ. ಇದು ನನ್ನ ನೆಲ, ನಾನು ಇಲ್ಲೇ ಇರುತ್ತೇನೆ, ಎಲ್ಲೂ ಓಡಿ ಹೋಗುವುದಿಲ್ಲ. ಏನೇ ಬಂದರೂ ಎದುರಿಸುತ್ತೇನೆ ಎಂದರು. ಇದನ್ನೂ ಓದಿ: ಮುಂಬೈನಿಂದಲೇ ವಕೀಲರಿಗೆ ಕರೆ ಮಾಡಿ ಅನುಶ್ರೀ ಮಾತುಕತೆ!

    ಅನುಶ್ರೀ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ರೂಮ್‍ಗೆ ಬರುತ್ತಿದ್ದರು, ಡ್ರಗ್ಸ್ ತರುತ್ತಿದ್ದರು. ಎಲ್ಲರೂ ಜೊತೆಯಲ್ಲಿ ಡ್ರಗ್ಸ್ ಸೇವಿಸುತ್ತಿದ್ದೆವು ಎಂದು ಆರೋಪಿ ಹೇಳಿದ್ದಾನೆ. ಆರೋಪಿಗಳು ಸಾವಿರ ಹೇಳುತ್ತಾರೆ. ಏನುಬೇಕಾದರೂ ಹೇಳಿಕೆ ನೀಡಬಹುದು. ಪೊಲೀಸರು ಹಾಗೂ ಕಾನೂನು ಸರಿ, ತಪ್ಪನ್ನು ಪರಿಶೀಲನೆ ಮಾಡುತ್ತಾರೆ. 2007ರ ಶೋನಲ್ಲಿ ನಾನು ಭಾಗವಹಿಸಿದಾಗ ಡ್ಯಾನ್ಸರ್ ಕೋರಿಯೋಗ್ರಫರ್ ಆಗಿ ಬಂದಿದ್ದರು. ಆ ಶೋನ ಫಿನಾಲೆಯಲ್ಲಿ ನಾನು ಗೆದ್ದಿದ್ದೆ. ಆಗ ಎಲ್ಲರಿಗೂ ಊಟ ಕೊಡಿಸಿದ್ದೇನೆ. ಅದನ್ನೇ ನೀವು ಡ್ರಗ್ಸ್ ಸೇವಿಸಿದ್ದಾರೆ ಎಂದು ಹೇಳುತ್ತಿರುವುದು ತಪ್ಪು ಎಂದು ತಿಳಿಸಿದರು.

    ಸಿಸಿಬಿ ಪೊಲೀಸರು 3 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಅವರ ಎಲ್ಲ ಪ್ರಶ್ನೆಗಳಿಗೆ ನಾನು ಉತ್ತರಿಸಿದ್ದೇನೆ. ನಾನು ಯಾವುದೇ ಪ್ರಭಾವಶಾಲಿಗಳಿಗೆ ಕರೆ ಮಾಡಿಲ್ಲ. ಯಾರ ಸಹಾಯವೂ ನನಗೆ ಅಗತ್ಯವಿಲ್ಲ. ಒಬ್ಬಳೇ ಬೆಂಗಳೂರಿಗೆ ಬಂದಿದ್ದೇನೆ. ಒಬ್ಬಳೇ ದುಡಿಯುತ್ತೇನೆ, ಒಬ್ಬಳೇ ಹೋರಾಟ ಮಾಡುತ್ತೇನೆ. ಯಾವುದೇ ಪ್ರಭಾವಶಾಲಿಗಳ ಸಹಾಯ ನನಗೆ ಅಗತ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಡ್ರಗ್ಸ್ ಪ್ರಕರಣದ ಬಗ್ಗೆ ಅಂದು ಕಣ್ಣೀರಿಟ್ಟು ಅನುಶ್ರೀ ಹೇಳಿದ್ದೇನು?

    12 ಕೋಟಿ ಮನೆಗಳನ್ನು ಹೊಂದಿದ್ದೇನೆ ಎಂದು ಆರೋಪಿಸಲಾಗುತ್ತಿದೆ. ಒರಾಯನ್ ಮಾಲ್ ಎದುರು ನಾನು ವಾಸವಿರುವುದು ನಿಜ. ಆದರೆ ಇದು ಬಾಡಿಗೆ ಮನೆ, ನಾನು ಎಷ್ಟು ವರ್ಷದಿಂದ ಬಾಡಿಗೆ ಕಟ್ಟಿಕೊಂಡು ಈ ಮನೆಯಲ್ಲಿ ವಾಸವಿದ್ದೇನೆ ಎಂದು ಮನೆ ಮಾಲೀಕರನ್ನು ಕೇಳಬಹುದು. ಕಳೆದ ಮೂರು ವರ್ಷದಿಂದ ಬಾಡಿಗೆಗೆ ಇದ್ದೇನೆ. ಮಂಗಳೂರಿನಲ್ಲಿ ಮನೆ ಇರುವುದು ಸತ್ಯ, ಅದರ ಮೇಲೆ ಇನ್ನೂ ಸ್ವಲ್ಪ ಲೋನ್ ಇದೆ. ಆ ಮನೆ ಸಹ ಎಷ್ಟು ಕೋಟಿ ಬೆಲೆ ಬಾಳುತ್ತದೆ ಎಂಬುದನ್ನು ಪರಿಶೀಲನೆ ನಡೆಸಬಹುದು ಎಂದರು.

    ನಾನು ಡ್ರಗ್ಸ್ ಸೇವಿಸಿಲ್ಲ, ಖರೀದಿಸಿಲ್ಲ ಆರೋಪಿ ಹೇಳಿಕೆ ನೀಡಿರುವುದು ಸುಳ್ಳು. ನನ್ನನ್ನು ಯಾವುದೇ ಪರೀಕ್ಷೆಗೆ ಕರೆದಿಲ್ಲ. ಕೇಳಿದ್ದರೆ ನಾನು ಖಂಡಿತವಾಗಿಯೂ ಹೋಗುತ್ತಿದ್ದೆ. ಅಲ್ಲದೆ ನಾನು ಡ್ರಗ್ಸ್ ಸೇವಿಸಿದ್ದೇನೆ, ಡ್ರಗ್ಸ್ ಪೆಡ್ಲರ್ ಎಂದು ವಿಚಾರಣೆಗೆ ಕರೆದಿಲ್ಲ. ಆರೋಪಿಗಳು ನನಗೆ ಪರಿಚಯ ಇದ್ದಿದ್ದರ ಕುರಿತು ಮಾತ್ರ ಅಧಿಕಾರಿಗಳು ಕೇಳಿದ್ದಾರೆ. ಈಗಲೂ ವಿಚಾರಣೆಗೆ ಕರೆದರೆ ಹೀಗುತ್ತೇನೆ. ನನಗೆ ಯಾವುದೇ ಭಯವಿಲ್ಲ ಎಂದು ಸ್ಪಷ್ಟಪಡಿಸಿದರು.

  • ಡ್ರಗ್ಸ್ ದಂಧೆ ಜೊತೆಗೆ ಕುಹಕ ಮಾಡುವವರನ್ನೂ ಮಟ್ಟ ಹಾಕುತ್ತೇವೆ: ಕೋಟಾ

    ಡ್ರಗ್ಸ್ ದಂಧೆ ಜೊತೆಗೆ ಕುಹಕ ಮಾಡುವವರನ್ನೂ ಮಟ್ಟ ಹಾಕುತ್ತೇವೆ: ಕೋಟಾ

    ಮಡಿಕೇರಿ: ರಾಜ್ಯದಲ್ಲಿ ಡ್ರಗ್ಸ್ ದಂಧೆ ಜೊತೆಗೆ ನಮ್ಮನ್ನು ಕುಹಕ ಮಾಡುವವರನ್ನು ಸಹ ಮಟ್ಟ ಹಾಕುತ್ತೇವೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಜಿ ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

    ಮಡಿಕೇರಿಯಲ್ಲಿ ಕೋವಿಡ್ ನಿರ್ವಹಣೆ ಮತ್ತು ನಿಫಾ ವೈರಸ್ ತಡೆಗೆ ಸಂಬಂಧಿಸಿದಂತೆ ನಡೆದ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ವಿಷಯದಲ್ಲಿ ಬಿಜೆಪಿಯವರನ್ನು ಮೊದಲು ಪರೀಕ್ಷಿಸಬೇಕು ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಸಾಮಾಜಿಕ ಜವಾಬ್ದಾರಿ ವಿಷಯಗಳಿಗೆ ಯಾರೋ ಕುಹಕದ ಮಾತುಗಳನ್ನಾಡಿದರೆ ಅದಕ್ಕೆ ಉತ್ತರಿಸುವ ಅಗತ್ಯವಿಲ್ಲ ಎಂದರು.

    ಡ್ರಗ್ಸ್ ಪ್ರಕರಣಗಳು ಬೆಳಕಿಗೆ ಬಂದಾಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೇ ಗೃಹ ಮಂತ್ರಿಯಾಗಿದ್ದರು. ಆಗ ಅವರೇ ಕಠಿಣ ನಿರ್ಧಾರ ತೆಗೆದುಕೊಂಡಿದ್ದರು. ಈಗ ಸಿಎಂ ಆಗಿದ್ದು, ಯಾವುದೇ ಕಾರಣಕ್ಕೂ ಡ್ರಗ್ಸ್ ದಂಧೆಯನ್ನು ಮಟ್ಟ ಹಾಕದೇ ಬಿಡುವುದಿಲ್ಲ ಎಂದರು. ಇದನ್ನೂ ಓದಿ: ಲಾರಿ, ಬೈಕ್ ಡಿಕ್ಕಿ – ಬಾಗಿನ ಕೊಟ್ಟು ಬರ್ತಿದ್ದ ತಂದೆ, ಮಗಳ ಸಾವು

    ನಟಿ, ನಿರೂಪಕಿ ಅನುಶ್ರಿ ಅವರ ವಿಷಯದಲ್ಲಿ ಸಾಫ್ಟ್ ಕಾರ್ನರ್ ತೋರಿಸಲಾಗುತ್ತಿದೆಯಾ ಎಂಬುದಕ್ಕೆ ಪ್ರತಿಕ್ರಿಯಿಸಿದ ಅವರು, ಯಾರಿಗೂ ಯಾವುದೇ ಕಾರಣಕ್ಕೂ ಸಾಫ್ಟ್ ಕಾರ್ನರ್ ತೋರಿಸುವ ಪ್ರಶ್ನೆಯೇ ಇಲ್ಲ. ಈ ಕುರಿತು ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

    ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ 0.5ಗೆ ಬಂದಿದೆ. ಹೀಗಾಗಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ತೆರವಿಗೆ ಸರ್ಕಾರ ಚಿಂತಿಸಿದೆ. ಇಂದು ಸಂಜೆ ಒಳಗೆ ಕಂದಾಯ ಸಚಿವರು ಈ ಕುರಿತು ಆದೇಶ ಹೊರಡಿಸಬಹುದು. ಬಳಿಕ ವೀಕೆಂಡ್ ಕರ್ಫ್ಯೂ ತೆರವು ಮಾಡಲು ನಾವು ನಿರ್ಧಾರ ಮಾಡುತ್ತೇವೆ. ಕೇರಳದಲ್ಲಿ ನಿಫಾ ವೈರಸ್ ಆತಂಕ ಹಿನ್ನೆಲೆ ಗಡಿಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಶೇ.83ರಷ್ಟು ವ್ಯಾಕ್ಸಿನ್ ಆಗಿದೆ. ಮುಂದಿನ 15 ದಿನಗಳಲ್ಲಿ ಶೇ.100ರಷ್ಟು ವಾಕ್ಸಿನ್ ಮಾಡಲಾಗುವುದು.

  • ಮುಂಬೈನಿಂದಲೇ ವಕೀಲರಿಗೆ ಕರೆ ಮಾಡಿ ಅನುಶ್ರೀ ಮಾತುಕತೆ!

    ಮುಂಬೈನಿಂದಲೇ ವಕೀಲರಿಗೆ ಕರೆ ಮಾಡಿ ಅನುಶ್ರೀ ಮಾತುಕತೆ!

    ಮಂಗಳೂರು: ಖ್ಯಾತ ನಿರೂಪಕಿ ಅನುಶ್ರೀ ಅವರಿಗೆ ಮತ್ತೆ ಡ್ರಗ್ಸ್ ಕಂಟಕ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಇದೀಗ ಅವರು ತಮ್ಮ ವಕೀಲರಿಗೆ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.

    ಡ್ರಗ್ಸ್ ಪ್ರಕರಣ ಎದುರಿಸುತ್ತಿರುವ ಕಿಶೋರ್ ಅಮನ್ ಶೆಟ್ಟಿ ಅವರು ಸಹಿ ಹಾಕಿರುವ ಚಾರ್ಜ್ ಶೀಟ್ ನಲ್ಲಿ ಅನುಶ್ರೀ ಹೆಸರು ಉಲ್ಲೇಖವಾಗಿತ್ತು. ಆದರೆ ಈ ಬಗ್ಗೆ ಪ್ರತಿಕ್ರಿಯಿಸಲು ನಿನ್ನೆ ಅನುಶ್ರೀ ಎಲ್ಲಿಯೂ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಅಲ್ಲದೆ ಬೆಂಗಳೂರಿನ ಮನೆಯಲ್ಲೂ ಇರಲಿಲ್ಲ. ಕೊನೆಗೆ ಅವರು ಮುಂಬೈಗೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು.

    ಸದ್ಯ ತಮ್ಮ ಆಪ್ತರ ಜೊತೆ ಅನುಶ್ರೀ ಮುಂಬೈನಲ್ಲಿರುವುದು ಖಚಿತವಾಗಿದ್ದು, ಅಲ್ಲಿಂದಲೇ ತಮ್ಮ ವಕೀಲರ ಜೊತೆ ಪ್ರಕರಣ ಸಂಬಂಧ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಚಾರ್ಜ್ ಶೀಟ್‍ನಲ್ಲಿ ಅನುಶ್ರೀ ಆರೋಪಿಯೆಂದು ಉಲ್ಲೇಖವಾಗಿಲ್ಲ: ಮಂಗಳೂರು ಪೊಲೀಸ್ ಆಯುಕ್ತರ ಸ್ಪಷ್ಟನೆ

    ಜಾರ್ಜ್ ಶೀಟ್‍ನಲ್ಲಿ ಏನಿತ್ತು..?
    2007-0ರಲ್ಲಿ ನಾನು ಮತ್ತು ತರುಣ್ ಇಬ್ಬರೂ ಕೂಡಿ ಅನುಶ್ರೀಯವರಿಗೆ ಡ್ಯಾನ್ಸ್ ಕೋರಿಯಾಗ್ರಾಫಿ ಮಾಡಿರುತ್ತೇವೆ. ಅನುಶ್ರೀಯವರು ಡ್ಯಾನ್ಸ್ ಕಾಂಪಿಟೇಶನ್‍ಗೆ ಪ್ರ್ಯಾಕ್ಟೀಸ್ ಮಾಡುವ ಸಮಯದಲ್ಲಿ ತರುಣ್ ಬಾಡಿಗೆ ಮನೆಯಲ್ಲಿ ತಡರಾತ್ರಿ ತನಕ ಪ್ರ್ಯಾಕ್ಟೀಸ್ ಮಾಡುತ್ತಾ ಕೆಲವು ದಿನ ಇದ್ದರು. ಕೆಲವೊಂದು ದಿನಗಳಲ್ಲಿ ನಾನು ಕೂಡ ತರುಣ್ ಜೊತೆಗೆ ಹೋಗಿದ್ದೆ. ಆ ದಿನಗಳಲ್ಲಿ ನಾವು ಮೂರು ಜನ ತರುಣ್‍ನ ಮನೆಯಲ್ಲೇ ಅಡುಗೆ ಮಾಡಿ ಊಟ ಮಾಡುವ ಸಮಯ ಮಾದಕ ವಸ್ತುಗಳಾದ ಎಕ್ಟಸಿ ಮಾತ್ರೆಗಳನ್ನು ಸೇವನೆ ಮಾಡಿರುತ್ತೇವೆ. ಕೆಲವು ದಿನಗಳಲ್ಲಿ ಅನುಶ್ರೀ ಮತ್ತು ತರುಣ್ ಇಬ್ಬರೇ ರೂಂನಲ್ಲಿ ಉಳಿದುಕೊಳ್ಳುತ್ತಿದ್ದರು.

    ಅನುಶ್ರೀಯವರು ಡ್ಯಾನ್ಸ್ ಕಾಂಪಿಟೇಶನ್‍ನಲ್ಲಿ ವಿನ್ ಆಗಿದ್ದಕ್ಕೆ ನಾನು, ತರುಣ್ ಮತ್ತು ಅನುಶ್ರೀ ಬೆಂಗಳೂರಿನಲ್ಲಿ ಮಾದಕ ವಸ್ತು ಎಕ್ಟಸಿ ಮಾತ್ರೆಗಳನ್ನು ಸೇವಿಸಿ ಡ್ರಗ್ಸ್, ಡ್ರಿಂಕ್ಸ್ ಪಾರ್ಟಿ ಮಾಡಿರುತ್ತೇವೆ. ಮಾದಕ ಸೇವನೆ, ಖರೀದಿಯಲ್ಲಿ ಅನುಶ್ರೀಯವರು ಭಾಗಿಯಾಗಿರುತ್ತಾರೆ. ನಾವು ಡ್ಯಾನ್ಸ್ ಪ್ರ್ಯಾಕ್ಟೀಸ್ ಮಾಡುವ ಸಮಯ ಮತ್ತು ಅನುಶ್ರೀಯವರಿಗೆ ಕೋರಿಯಾಗ್ರಾಫಿಂಗ್ ಪ್ರ್ಯಾಕ್ಟೀಸ್ ಮಾಡುವ ಸಮಯದಲ್ಲಿ ಹಲವಾರು ಬಾರಿ ಮಾದಕ ವಸ್ತು ಎಕ್ಟಸಿ ಮಾತ್ರೆಗಳನ್ನು ಸೇವಿಸಿರುತ್ತೇವೆ. ಅನುಶ್ರೀಯವರು ಪ್ರ್ಯಾಕ್ಟೀಸ್ ಮಾಡಲು ನಮ್ಮ ರೂಂಗೆ ಬರುವಾಗ ಎಕ್ಟಸಿ ಮಾತ್ರೆಗಳನ್ನು ಖರೀದಿಸಿ ತಂದು ನಮಗೆ ನೀಡಿ ನಮ್ಮ ಜೊತೆ ಸೇವೆನೆಯನ್ನೂ ಮಾಡಿರುತ್ತಾರೆ. ಇದನ್ನೂ ಓದಿ: Exclusive: ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿದ್ದೇನೆ ಎಂಬುದು ಸುಳ್ಳು: ಕಿಶೋರ್ ಅಮನ್ ಶೆಟ್ಟಿ

    ಡ್ಯಾನ್ಸ್ ಮಾಡಲು ಇದು ಹೆಚ್ಚು ತಾಕತ್ತು ಕೊಡುತ್ತದೆ, ಡ್ಯಾನ್ಸ್ ಮಾಡಲು ಖುಷಿ ಸಿಗುತ್ತದೆ, ಪ್ರ್ಯಾಕ್ಟೀಸ್ ಮಾಡಲು ಸುಲಭವಾಗುತ್ತದೆ ಎಂದು ನಾವೆಲ್ಲರೂ ಮಾತಾಡಿಕೊಳ್ಳುತ್ತಿದ್ದೆವು. ಡ್ರಗ್ಸ್ ಯಾರು ನೀಡುತ್ತಾರೆ ಎಂದು ಅನುಶ್ರೀಯವರಿಗೆ ನಮಗಿಂತ ಹೆಚ್ಚು ತಿಳಿದಿದೆ. ಅವರಿಗೆ ಡ್ರಗ್ಸ್ ಪೆಡ್ಲರ್‍ಗಳ ಪರಿಚಯ ಇರುತ್ತದೆ. ಅವರು ಸುಲಭವಾಗಿ ಮಾದಕ ವಸ್ತುಗಳನ್ನು ತರಿಸುತ್ತಾರೆ. ಅವರು ಹೇಗೆ ತರಿಸುತ್ತಾರೆ ಎಂದು ನನಗೆ ತಿಳಿದಿಲ್ಲ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದ್ದು, ಇದಕ್ಕೆ ಕಿಶೋರ್ ಅಮನ್ ಶೆಟ್ಟಿ ಸಹಿ ಕೂಡ ಹಾಕಿರುವ ಪ್ರತಿ ಲಭ್ಯವಾಗಿತ್ತು.

    ಆದರೆ ಕಿಶೋರ್ ಶೆಟ್ಟಿ ಮಾತ್ರ ತಾನು ಅನುಶ್ರೀ ಬಗ್ಗೆ ಯಾವುದೇ ಹೇಳಿಕೆಗಳನ್ನು ನೀಡಿಲ್ಲ. ಅವರು ತುಂಬಾ ಕಷ್ಟಪಟ್ಟು ಬಂದಿದ್ದು, ಅವರನ್ನು ನಾನು ಗೌರವಿಸುತ್ತೇನೆ. ಅಲ್ಲದೆ ಇತ್ತೀಚೆಗೆ ನಾನು ಅವರನ್ನು ಭೇಟಿಯಾಗಿಲ್ಲ, ಫೋನ್ ನಂಬರ್ ಕೂಡ ಇಲ್ಲ ಎಂದು ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ಕಿಶೋರ್ ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ಪ್ರಕರಣದ ಬಗ್ಗೆ ಅಂದು ಕಣ್ಣೀರಿಟ್ಟು ಅನುಶ್ರೀ ಹೇಳಿದ್ದೇನು?

  • ನಿವೃತ್ತ ಐಪಿಎಸ್ ಅಧಿಕಾರಿಯ ಮಧ್ಯಸ್ಥಿಕೆಯಿಂದ ಇಡೀ ಕೇಸ್ ಹಳ್ಳ ಹಿಡಿದಿದೆ: ಸಂಬರ್ಗಿ ಆರೋಪ

    ನಿವೃತ್ತ ಐಪಿಎಸ್ ಅಧಿಕಾರಿಯ ಮಧ್ಯಸ್ಥಿಕೆಯಿಂದ ಇಡೀ ಕೇಸ್ ಹಳ್ಳ ಹಿಡಿದಿದೆ: ಸಂಬರ್ಗಿ ಆರೋಪ

    ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರ ಪ್ರಭಾವದಿಂದ ಇಡೀ ಡ್ರಗ್ಸ್ ಪ್ರಕರಣ ಹಳ್ಳ ಹಿಡಿದಿದೆ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ಗಂಭೀರ ಆರೋಪ ಮಾಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತರುಣ್ ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆದರೆ ಚಾರ್ಜ್ ಶೀಟ್ ನಲ್ಲಿ ತರುಣ್ ಹೆಸರು ಯಾಕೆ ಉಲ್ಲೇಖ ಆಗಿಲ್ಲ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಬರೀ ಯೂರಿನ್, ರಕ್ತ ಪರೀಕ್ಷೆ ಮಾಡಿದ್ರೆ ಸಾಲದು -ಹೇರ್ ಫೋಲಿಕಲ್ ಟೆಸ್ಟ್‌ಗೆ ಇಂದ್ರಜಿತ್ ಆಗ್ರಹ

    ನಿವೃತ್ತ ಐಪಿಎಸ್ ಆಫೀಸ್ ಅವರ ಮಧ್ಯಸ್ಥಿಕೆಯಿಂದ ಇಡೀ ಕೇಸ್ ಹಳ್ಳ ಹಿಡಿದಿದೆ. ಇಲ್ಲಿ ಅನುಶ್ರೀ ಡ್ರಗ್ಸ್ ಸೇವನೆ ಮಾಡಿಲ್ಲ. ಬೆಂಗಳೂರಿಗಿಂತ ಮಂಗಳೂರಿನಲ್ಲಿ ಡ್ರಗ್ಸ್ ಮಾತ್ರೆಗಳು ಹೆಚ್ಚಾಗಿ ಸಿಗುತ್ತಿದೆ ಎಂಬುದು ಕಿಶೋರ್ ಅಮನ್ ಶೆಟ್ಟಿ ಹೇಳಿಕೆಯಿಂದ ಸ್ಪಷ್ಟವಾಗುತ್ತದೆ. ಅಲ್ಲಿಗೆ ಗೋವಾ ಹಾಗೂ ಕೇರಳದಿಂದ ಡ್ರಗ್ಸ್ ಮಾತ್ರೆಗಳು ರವಾನೆಯಾಗುತ್ತಿವೆ ಎಂದು  ಆರೋಪಿಸಿದರು. ಇದನ್ನೂ ಓದಿ: ಡ್ರಗ್ಸ್ ಸೇವಿಸಿ ಡ್ಯಾನ್ಸ್ ಮಾಡಿದ್ರೆ ಖುಷಿ ಆಗುತ್ತೆ ಅಂತಿದ್ರು ಅನುಶ್ರೀ: ಕಿಶೋರ್ ಅಮನ್ ಶೆಟ್ಟಿ

    ಇದಕ್ಕೂ ಮೊದಲು ಸುದ್ದಿಗೋಷ್ಠಿ ನಡೆಸಿದ್ದ ಇಂದ್ರಜಿತ್, ಯೂರಿನ್ ರಕ್ತ ಪರೀಕ್ಷೆಯ ಬದಲು ಹೇರ್ ಫೋಲಿಕಲ್ ಟೆಸ್ಟ್ ಮಾಡಿ ಎಂದು ಆಗ್ರಹಿಸಿದ್ದರು. ಈ ಹಿಂದೆ ಪ್ರಕರಣ ಸಂಬಂಧ ಯಾರನ್ನು ವಿಚಾರಣೆಗೆ ಕರೆದಿದ್ದಾರೋ ಅವರಿಗೆ ಯಾವುದೇ ರೀತಿಯ ಭಯ ಹುಟ್ಟಿಲ್ಲ. ಕೊರೊನಾ ಎರಡನೇ ಅಲೆಯ ಬಳಿಕ ಅವರು ಮತ್ತೆ ಪಾರ್ಟಿಗಳಲ್ಲಿ ಭಾಗಿಯಾಗುತ್ತಿದ್ದಾರೆ. ಹೀಗಾಗಿ ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ.  ಇದನ್ನೂ ಓದಿ: Exclusive: ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿದ್ದೇನೆ ಎಂಬುದು ಸುಳ್ಳು: ಕಿಶೋರ್ ಅಮನ್ ಶೆಟ್ಟಿ

    ನಾನು ಈ ಹಿಂದೆ ಹೇಳಿದಂತೆ ಇದೊಂದು ಇಡೀ ಕರ್ನಾಟಕದ ಇತಿಹಾಸದಲ್ಲಿಯೇ ದೊಡ್ಡ ಸ್ಕ್ಯಾಮ್ ಆಗಿದೆ. ರಾಜಕೀಯ, ಸಮಾಜ, ಯುವಕ ಹಾಗೂ ಚಿತ್ರರಂಗದ ಆ್ಯಂಗಲ್ ಗಳಿವೆ. ಹೀಗಾಗಿ ನೀವು ಕಳಿಸಿರುವ ಸಂದೇಶದಿಂದ ಯಾರಿಗೂ ಭಯ ಇಲ್ಲ. ಇಂದಿಗೂ ಕೋಟ್ಯಂತರ ರೂ. ಡ್ರಗ್ಸ್ ಕರ್ನಾಟಕ ಮಾತ್ರವಲ್ಲದೇ ಅದರಲ್ಲೂ ಬೆಂಗಳೂರಿನಲ್ಲಿ ಡಂಪ್ ಆಗುತ್ತಿದೆ ಎಂದು ಇಂದ್ರಜಿತ್ ಗಂಭೀರ ಆರೋಪ ಮಾಡಿದರು. ಇದನ್ನೂ ಓದಿ: ಡ್ರಗ್ಸ್ ಲಿಂಕ್ ಪ್ರಕರಣ – ಚಾರ್ಜ್‍ಶೀಟ್‍ನಲ್ಲಿ ಆ್ಯಂಕರ್ ಅನುಶ್ರೀ ಹೆಸರು

  • ಬರೀ ಯೂರಿನ್, ರಕ್ತ ಪರೀಕ್ಷೆ ಮಾಡಿದ್ರೆ ಸಾಲದು -ಹೇರ್ ಫೋಲಿಕಲ್ ಟೆಸ್ಟ್‌ಗೆ ಇಂದ್ರಜಿತ್ ಆಗ್ರಹ

    ಬರೀ ಯೂರಿನ್, ರಕ್ತ ಪರೀಕ್ಷೆ ಮಾಡಿದ್ರೆ ಸಾಲದು -ಹೇರ್ ಫೋಲಿಕಲ್ ಟೆಸ್ಟ್‌ಗೆ ಇಂದ್ರಜಿತ್ ಆಗ್ರಹ

    ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೀ ಯೂರಿನ್ ಹಾಗೂ ರಕ್ತ ಪರೀಕ್ಷೆ ನಡೆಸಿದರೆ ಸಾಲದು. ಹೇರ್ ಫೋಲಿಕಲ್ ಟೆಸ್ಟ್ ಮಾಡಬೇಕು ಎಂದು ನಿರ್ಮಾಪಕ ಇಂದ್ರಜಿತ್ ಲಂಕೇಶ್ ಆಗ್ರಹಿಸಿದ್ದಾರೆ.

    ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಪ್ರಕರಣ ಸಂಬಂಧ ಯಾರನ್ನು ವಿಚಾರಣೆಗೆ ಕರೆದಿದ್ದೀರೋ ಅವರಿಗೆ ಯಾವುದೇ ರೀತಿಯ ಭಯ ಹುಟ್ಟಿಲ್ಲ. ಕೊರೊನಾ ಎರಡನೇ ಅಲೆಯ ಬಳಿಕ ಅವರು ಮತ್ತೆ ಪಾರ್ಟಿಗಳಲ್ಲಿ ಭಾಗಿಯಾಗುತ್ತಿದ್ದಾರೆ. ಹೀಗಾಗಿ ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಡ್ರಗ್ಸ್‌ ನಟಿಯರಿಗೆ ಹೇರ್ ಫೋಲಿಕಲ್ ಟೆಸ್ಟ್‌ – ಏನಿದು ಟೆಸ್ಟ್‌? ನಿಖರ ಹೇಗೆ?

    ನಾನು ಈ ಹಿಂದೆ ಹೇಳಿದಂತೆ ಇದೊಂದು ಇಡೀ ಕರ್ನಾಟಕದ ಇತಿಹಾಸದಲ್ಲಿಯೇ ದೊಡ್ಡ ಸ್ಕ್ಯಾಮ್ ಆಗಿದೆ. ರಾಜಕೀಯ, ಸಮಾಜ, ಯುವಕ ಹಾಗೂ ಚಿತ್ರರಂಗದ ಆ್ಯಂಗಲ್ ಗಳಿವೆ. ಹೀಗಾಗಿ ನೀವು ಕಳಿಸಿರುವವ ಸಂದೇಶದಿಂದ ಯಾರಿಗೂ ಭಯ ಇಲ್ಲ. ಇಂದಿಗೂ ಕೋಟ್ಯಂತರ ರೂ. ಡ್ರಗ್ಸ್ ಕರ್ನಾಟಕ ಮಾತ್ರವಲ್ಲದೇ ಅದರಲ್ಲೂ ಬೆಂಗಳೂರಿನಲ್ಲಿ ಡಂಪ್ ಆಗುತ್ತಿದೆ ಎಂದು ಇಂದ್ರಜಿತ್ ಗಂಭೀರ ಆರೋಪ ಮಾಡಿದರು. ಇದನ್ನೂ ಓದಿ: ಡ್ರಗ್ ಲಿಂಕ್ ಪ್ರಕರಣ – ಚಾರ್ಜ್‍ಶೀಟ್‍ನಲ್ಲಿ ಆ್ಯಂಕರ್ ಅನುಶ್ರೀ ಹೆಸರು

    ಒಟ್ಟಿನಲ್ಲಿ ಈ ಹಿಂದೆ ಕೆಲವರನ್ನು ಅರೆಸ್ಟ್ ಮಾಡಿ ಟೆಸ್ಟ್ ಮಾಡಿದ್ರಿ. ಇನ್ನೂ ಕೆಲವರನ್ನು ವಿಚಾರಣೆ ನಡೆಸಿ ಹಾಗೆಯೇ ಬಿಟ್ಟು ಕಳುಹಿಸಿದ್ದೀರಿ. ಈ ವಿಚಾರದಲ್ಲಿ ಕೆಲವರಿಗೆ ಬೆಣ್ಣೆ, ಇನ್ನೂ ಕೆಲವರಿಗೆ ಸುಣ್ಣ ಮಾಡಿದ್ದೀರಿ. ಹೀಗಾಗಿ ಇಂದು ಕುಡ ಪಾರ್ಟಿಗಳು ನಡೆಯಲು ಕಾರಣವಾಗಿದೆ. ಹೀಗೆ ಯಾಕೆ ಮಾಡಿದ್ದೀರಿ ಎಂದು ಇಂದ್ರಜಿತ್ ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಡ್ರಗ್ಸ್ ಸೇವಿಸಿ ಡ್ಯಾನ್ಸ್ ಮಾಡಿದ್ರೆ ಖುಷಿ ಆಗುತ್ತೆ ಅಂತಿದ್ರು ಅನುಶ್ರೀ: ಕಿಶೋರ್ ಅಮನ್ ಶೆಟ್ಟಿ

  • ಮತ್ತೊಂದು ಹೈ ಪ್ರೊಫೈಲ್ ಕೇಸ್ ಆಗುತ್ತಾ ಗೋವಿಂದಪುರ ಡ್ರಗ್ ಪ್ರಕರಣ?

    ಮತ್ತೊಂದು ಹೈ ಪ್ರೊಫೈಲ್ ಕೇಸ್ ಆಗುತ್ತಾ ಗೋವಿಂದಪುರ ಡ್ರಗ್ ಪ್ರಕರಣ?

    – ಕೇರಳದ ಸಿನಿ ಅಂಗಳಕ್ಕೂ ಲಿಂಕ್? ನಿರ್ದೇಶಕನಿಗೆ ನೋಟಿಸ್?

    ಬೆಂಗಳೂರು: ಗೋವಿಂದಪುರ ಡ್ರಗ್ಸ್ ಕೇಸ್ ಮತ್ತೊಂದು ಹೈ ಫ್ರೊಫೈಲ್ ಪ್ರಕರಣವಾಗುವ ಎಲ್ಲ ಲಕ್ಷಣಗಳು ಕಾಣಿಸುತ್ತಿವೆ. ಪೊಲೀಸರ ಬಲೆಯಿಂದ ತಪ್ಪಿಸಿಕೊಂಡೆ ಅಂತಿದ್ದವರಿಗೆ ಮತ್ತೆ ಶಾಕ್ ಎದುರಾಗಿದೆ.

    ಎರಡು ದಿನ ವಿಚಾರಣೆ ಎದುರಿಸಿದ್ರೆ ಸಾಕು ಅಂತಿದ್ದವರಿಗೆ ಪೊಲೀಸರು ಶಾಕ್ ನೀಡಲು ತಯಾರಿ ನಡೆಸಿದ್ದಾರೆ. ನಿತ್ಯ ವಿಚಾರಣೆ ಎದುರಿಸುತ್ತಿರುವ ಡಿಜೆ ವಚನ್ ಚಿನ್ನಪ್ಪ ಮತ್ತು ಉದ್ಯಮಿ ಭರತ್ ಗೆ ಪ್ರಾಥಮಿಕ ತನಿಖೆಯಲ್ಲಿ ಇವರು ಡ್ರಗ್ ಸೇವನೆ ಬಗ್ಗೆ ಅಷ್ಟೇ ಪೊಲೀಸರಿಗೆ ಮಾಹಿತಿ ದೊರೆತಿದೆ. ಆದರೆ ಮೆಡಿಕಲ್ ರಿಪೋರ್ಟ್ ನಲ್ಲಿ ಡ್ರಗ್ ಸೇವನೆ ಬಗ್ಗೆ ಸಾಬೀತಾಗಿಲ್ಲ ಎನ್ನಲಾಗುತ್ತಿದೆ.

    ಮೆಡಿಕಲ್ ಟೆಸ್ಟ್ ನಂತರ ಮುಂದಿನ ಹಂತದ ವಿಚಾರಣೆಗೆ ಸಿದ್ಧರಾಗಿರುವ ಪೊಲೀಸರು, ಇಂದು ಹೇರ್ ಫಾಲಿಕನ್ ಟೆಸ್ಟ್ ಮಾಡಿಸಲು ಕೋರ್ಟಿಗೆ ಅರ್ಜಿ ಹಾಕಲು ತಯಾರಿ ನಡೆಸಿದ್ದಾರೆ. ಸಿಸಿಬಿ ಕೇಸ್ ನಲ್ಲಿ ಆರೋಪಿಗಳ ಕೂದಲು, ಮೂತ್ರ ಮತ್ತು ರಕ್ತ ಮಾದರಿ ಪರೀಕ್ಷೆ ಮಾಡಲಾಗಿತ್ತು. ಇದೇ ಮಾದರಿಯಲ್ಲಿ ವಚನ್ ಮತ್ತು ಭರತ್ ಪರೀಕ್ಷೆ ಮಾಡಿಸಲು ಪೊಲೀಸರ ತಯಾರಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಕೋರ್ಟ್ ನಿಂದ ಅನುಮತಿ ಸಿಕ್ಕರೆ ಸಂಜೆ ಕೂದಲು, ಮೂತ್ರ ಮತ್ತು ರಕ್ತದ ಮಾದರಿಹೈದಾರಬಾದ್ ನ ಕೇಂದ್ರ ವಿಧಿ ವಿಧಾನ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗುತ್ತೆ.

    ಇತ್ತ ಥಾಮಸ್ ವಿಚಾರಣೆ ವೇಳೆ ಇನ್ನಷ್ಟು ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದ್ದು, ಕೇವಲ ಲೋಕಲ್ ನಲ್ಲಿ ಅಷ್ಟೇ ಅಲ್ಲದೆ ನ್ಯಾಷನಲ್ ಲೆವೆಲ್ ನಲ್ಲೂ ಡ್ರಗ್ ಡೀಲಿಂಗ್ ಶಂಕೆಯಾಗಿದೆ. ಮಾಲಿವುಡ್ ನಿರ್ದೇಶಕನ ಜೊತೆ ರೆಗ್ಯೂಲರ್ ಟಚ್ ನಲ್ಲಿದ್ದ ಆಫ್ರಿಕನ್ ಪೆಡ್ಲರ್ ಥಾಮಸ್, ಮೊಬೈಲ್ ರಿಟ್ರಿವ್ ವೇಳೆ ಡ್ರಗ್ ಕುರಿತ ಚಾಟಿಂಗ್ ಪೊಲೀಸರಿಗೆ ಲಭ್ಯವಾಗಿದೆ. ಇದನ್ನೂ ಓದಿ: ಮೋಸ್ಟ್ ವಾಂಟೆಡ್ ಡ್ರಗ್ ಡೀಲರ್ ಮ್ಯಾಶಿ ಅರೆಸ್ಟ್

    ಇದೇ ಪ್ರಕರಣದಲ್ಲಿ ಕೇರಳದ ಸಿನಿ ಇಂಡಸ್ಟ್ರಿಯಲ್ಲಿ ಸಾಕಷ್ಟು ಹೆಸರು ಮಾಡಿರೋ ಹೆಸಾರಂತ ನಿರ್ದೇಶಕ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಸದ್ಯ ಇವರ ವಿಚಾರಣೆ ನಂತರ ಮಾಲಿವುಡ್ ನಿರ್ದೇಶಕನಿಗೂ ನೋಟಿಸ್ ನೀಡುವ ಸಾಧ್ಯತೆಗಳಿವೆ. ಸೋನಿಯಾ ಅಗರ್ ವಾಲ್ ಹಾಗು ಆಕೆಯ ಪ್ರಿಯಕರನನ್ನ ಪೊಲೀಸರು ಡ್ರಗ್ ಸಂಬಂಧ ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ದೋಹಾದಲ್ಲಿ ಭಾರತ-ತಾಲಿಬಾನಿಗಳ ಮೊದಲ ಔಪಚಾರಿಕ ಮಾತುಕತೆ

  • ಹೋಟೆಲಿನ ವಾಶ್ ರೂಮಿನಲ್ಲಿ ಅವಿತಿದ್ದ ನಟಿ ಸೋನಿಯಾ ವಶಕ್ಕೆ

    ಹೋಟೆಲಿನ ವಾಶ್ ರೂಮಿನಲ್ಲಿ ಅವಿತಿದ್ದ ನಟಿ ಸೋನಿಯಾ ವಶಕ್ಕೆ

    ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸೆಲೆಬ್ರಿಟಿ ಮಾಡೆಲ್ ಸೋನಿಯಾ ಅಗರ್ವಾಲ್‍ಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಐಟಿಸಿ ಗಾರ್ಡೇನಿಯಾ ಹೋಟೆಲ್ ನಲ್ಲಿ ಇದ್ದ ಸೋನಿಯಾಳನ್ನು ವಶಕ್ಕೆ ಪಡೆದಿದ್ದರು. ಕೊಠಡಿಯ ವಾಶ್ ರೂಮ್ ನಲ್ಲಿ ಅವಿತು ಕುಳಿತಿದ್ದ ಬಗ್ಗೆ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಇಂದು ಮಧ್ಯಾಹ್ನ ಹೋಟೆಲಿಗೆ ಹೋಗಿ ಆಕೆಯನ್ನು ವಶಕ್ಕೆ ಪಡೆಯಲಾಗಿದೆ.

    ಇಂದು ಬೆಳ್ಳಂಬೆಳಗ್ಗೆ ಸೋನಿಯಾ ಮನೆಯ ಮೇಲೆ ದಾಳಿ ನಡೆಸಿದ ಪೂರ್ವ ವಲಯದ ಪೊಲೀಸರು 40 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದರು. ಡಿಜೆ ಹಳ್ಳಿ ಇನ್ಸ್‍ಪೆಕ್ಟರ್ ನೇತೃತ್ವದಲ್ಲಿ ಈ ದಾಳಿ ನಡೆದಿತ್ತು. ಇದನ್ನೂ ಓದಿ: ನಟಿ ಸೋನಿಯಾ ಮನೆ ಮೇಲೆ ದಾಳಿ – ರಾಜಕಾರಣಿಗಳ ಮಕ್ಕಳಿಗೆ ಶಾಕ್

    ದಾಳಿಯ ಸಮಯದಲ್ಲಿ ಸೋನಿಯಾ ಅಗರ್ವಾಲ್ ಮನೆಯಲ್ಲಿ ಇರಲಿಲ್ಲ. ಭಾನವಾರ ರಾತ್ರಿ ಪಾರ್ಟಿಗೆ ಹೋಗಿದ್ದ ಆಕೆ ಮನೆಗೆ ಬಂದಿರಲಿಲ್ಲ. ದಾಳಿ ನಡೆದ ಹಿನ್ನೆಲೆಯಲ್ಲಿ ಪೊಲೀಸರು ಆಕೆಗೆ ಕರೆ ಮಾಡಿದ್ದರು. ಈ ವೇಳೆ ಆಕೆ ಕರೆಯನ್ನು ಸ್ವೀಕರಿಸಿರಲಿಲ್ಲ. ಆ ಬಳಿಕ ಆಕೆಯ ತಂದೆಯಿಂದ ಫೋನ್ ಕರೆ ಮಾಡಿಸಿದ್ದರು. ಈ ವೇಳೆ ಆಕೆ ಮಧ್ಯಾಹ್ನ 12 ಗಂಟೆಗೆ ಬರುವುದಾಗಿ ಹೇಳಿದ್ದಳು.

    ಅಗರ್ವಾಲ್ ಮನೆಗೆ ಬಾರದ ಹಿನ್ನೆಲೆಯಲ್ಲಿ ಆಕೆಯ ತಂದೆಯಿಂದ ಕೀ ತೆಗೆಸಿ ಮನೆಯನ್ನು ಜಾಲಾಡಿದ್ದಾರೆ. ಈ ವೇಳೆ 40 ಗ್ರಾಂ ಗಾಂಜಾ ಪತ್ತೆಯಾಗಿತ್ತು. ಇದನ್ನೂ ಓದಿ: ಚೊಚ್ಚಲ ಬಾಲಿವುಡ್ ಸಿನಿಮಾ ಶೂಟಿಂಗ್ ಮುಗಿದ ಖುಷಿಯಲ್ಲಿ ಕೂಡಗಿನ ಕುವರಿ

    ಆಗ್ರ್ಯಾನಿಕ್ ಕಾಸ್ಮೆಟಿಕ್ ಕಂಪನಿ ನಡೆಸುತ್ತಿದ್ದ ಸೋನಿಯಾ ಜೊತೆ ಡಜನ್‍ಗಟ್ಟಲೇ ಸೆಲೆಬ್ರಿಟಿಗಳ ಲಿಂಕ್ ಇರುವುದು ಗೊತ್ತಾಗಿದೆ. ಎಲ್ಲಾ ಪಾರ್ಟಿಗಳಲ್ಲಿ ಸೋನಿಯಾ ಅಗರ್ವಾಲ್ ಮುಖಾಂತರ ಸೆಲೆಬ್ರಿಟಿಗಳು ಎಂಟ್ರಿ ಕೊಡುತ್ತಿದ್ದರು.

    ಅರೆಸ್ಟ್ ಆಗಿರುವ ವಿದೇಶಿ ಪ್ರಜೆ, ಡ್ರಗ್ ಪೆಡ್ಲರ್ ಥಾಮಸ್ ನಿಂದ ಡ್ರಗ್ಸ್ ಪಡೆದುಕೊಳ್ಳುತ್ತಿದ್ದ ಸೋನಿಯಾ ಆ ಬಳಿಕ ಬೇಕಾದ ಸೆಲೆಬ್ರಿಟಿಗಳಿಗೆ ಪೂರೈಸುತ್ತಿದ್ದ ಬಗ್ಗೆ ಪೊಲೀಸರಿಗೆ ಬಲವಾದ ಸಂಶಯ ಮೂಡಿದೆ. ಕೆಲ ರಾಜಕಾರಣಿಗಳ ಮಕ್ಕಳು ಮತ್ತು ಸ್ಯಾಂಡಲ್‍ವುಡ್‍ನವರ ಜೊತೆ ಸೋನಿಯಾಗೂ ಉತ್ತಮ ಸಂಬಂಧ ಇತ್ತು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

  • ನಟಿ ಸಂಜನಾ ಗಲ್ರಾನಿ ಆಸ್ಪತ್ರೆಗೆ ದಾಖಲು

    ನಟಿ ಸಂಜನಾ ಗಲ್ರಾನಿ ಆಸ್ಪತ್ರೆಗೆ ದಾಖಲು

    ಬೆಂಗಳೂರು: ಡ್ರಗ್ಸ್ ಸೇವಿಸಿರುವುದು ಖಚಿತ ಎಂದು ವರದಿಯಾಗುತ್ತಿದ್ದಂತೆಯೇ ಇತ್ತ ನಟಿ ಸಂಜನಾ ಗಲ್ರಾನಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಹೌದು. ಮಗಳು ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದಾಳೆ. ಈ ಹಿಂದೆ ಸಂಜನಾಗೆ ಸರ್ಜರಿ ಆಗಿತ್ತು. ಹೀಗಾಗಿ ರಾತ್ರಿಯೇ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದಾರೆ. ಮೆಂಟಲಿ ಅಪ್ ಸೆಟ್ ಆಗಿದ್ದಾರೆ ಎಂದು ನಟಿ ಸಂಜನಾ ತಾಯಿ ರೇಷ್ಮಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

    ಸದ್ಯ ಆಕೆ ಈ ಕೇಸ್ ನಿಂದ ಡಿಸ್ಟರ್ಬ್ ಆಗಿದ್ದಾಳೆ. ಪದೇ ಪದೇ ಇದೇ ಕೇಸ್ ಬಗ್ಗೆ ಕೇಳಿ ಡಿಪ್ರೆಶನ್ ಗೆ ಹೋಗಿದ್ದಾಳೆ. ಹುಷಾರಿಲ್ಲದ ಕಾರಣ ಆಕೆಯನ್ನ ಆಸ್ಪತ್ರೆಗೆ ಸೇರಿಸಲಾಗಿದೆ. ನನ್ನ ಮಗಳು ಏನೂ ತಪ್ಪು ಮಾಡಿಲ್ಲ. ಆದರೆ ದುರಾದೃಷ್ಟದಿಂದ ಈತರ ಎಲ್ಲಾ ಆಗ್ತಿದೆ. ನಾವು ಭಗವಾನ್ ನನ್ನ ನಂಬ್ತೀವಿ. ದೇವರ ದಯೆಯಿಂದ ನಾಲ್ಕು ಜನರಿಗೆ ಸಹಾಯ ಮಾಡುತ್ತಿದ್ದೇವೆ. ಹುಷಾರಿಲ್ಲದ ಕಾರಣ ನಂಗೆ ಊಟ ನೀಡೋಕೆ ಹೇಳಿದಳು ಎಂದರು. ಇದನ್ನೂ ಓದಿ: ಬೆಟ್ಟದಲ್ಲಿ ವಿವಸ್ತ್ರಗೊಳಿಸಿ ಮಹಿಳೆಯ ಶವ ಪತ್ತೆ – ಅತ್ಯಾಚಾರ ಎಸಗಿ ಕೊಲೆ ಶಂಕೆ

    ಒಂದು ಹುಡುಗಿ ಆಗಿ ಒಳ್ಳೆ ಕೆಲಸ ಮಾಡ್ತಿದ್ದಾಳೆ. ಎಲ್ಲಾ ನಮ್ಮ ಡೆಸ್ಟಿನಿ. ಸಂಜನಾಗೆ ಹುಷಾರಿಲ್ಲ ಬೇಜಾರನಲ್ಲಿ ಇದ್ದೇವೆ. ಅವರಿಗೆ ಅಟ್ಯಾಕ್ಟ್ ತರಾ ಆಗ್ತಿದೆ. 10-12 ದಿನ ಊಟ ಕೊಡ್ತೇವೆ. ತುಂಬಾ ಡಿಪ್ರೇಸ್ ಆಗಿದ್ದಾರೆ. ಎಲ್ಲರೂ ಸರ್ಪೋಟ್ ಮಾಡಿ. ತಾಯಿಯಾಗಿ ದೇವರನ್ನು ಪ್ರೇಯರ್ ಮಾಡ್ತೇನೆ ಎಂದು ರೇಷ್ಮಾ ಬೇಸರ ವ್ಯಕ್ತಪಡಿಸಿದ್ದಾರೆ.

    10 ತಿಂಗಳ ಬಳಿಕ ಹೈದರಾಬಾದ್‍ನ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಸಿಕ್ಕಿದ್ದು, ತಲೆಕೂದಲ ಪರೀಕ್ಷೆಯಲ್ಲಿ ನಟಿಯರ ಮಾದಕ ದ್ರವ್ಯ ಸೇವನೆ ದೃಢವಾಗಿದೆ. 2020ರ ಸೆಪ್ಟೆಂಬರ್ 13 ಕೆಸಿ ಜನರಲ್ ಆಸ್ಪತ್ರೆಯಲ್ಲಿ ರಕ್ತ, ಯೂರಿನ್ ಸ್ಯಾಂಪಲ್ ಸಂಗ್ರಹ ಮಾಡಲಾಗಿತ್ತು. ಆದರೆ ತಾಂತ್ರಿಕ ದೋಷದಿಂದಾಗಿ ಮತ್ತೆ ಡಿಸೆಂಬರ್ 5ರಂದು ಕೋರ್ಟ್ ಅನುಮತಿ ಪಡೆದು, ಕೂದಲು, ರಕ್ತ, ಯೂರಿನ್ ಅಂಶಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿತ್ತು. ಈಗ ಎಫ್‍ಎಸ್‍ಎಲ್ ವರದಿಯಲ್ಲಿ ಡ್ರಗ್ಸ್ ಸೇವನೆ ಖಚಿತವಾಗಿದೆ. ಈ ಮೂಲಕ ಕರ್ನಾಟಕದಲ್ಲಿ ತಲೆ ಕೂದಲ ಮೂಲಕ ಡ್ರಗ್ಸ್ ಸೇವನೆ ಖಚಿತ ಆಗಿರೋದು ಇದೇ ಮೊದಲ ಕೇಸ್ ಎಂದು ಸಿಸಿಬಿ ಹೇಳಿದೆ.

    ಡ್ರಗ್ಸ್ ಸೇವನೆ ಖಚಿತ, ಮುಂದೇನು?
    ಡ್ರಗ್ಸ್ ಕೇಸಲ್ಲಿ ಕೂದಲು ಮೂಲಕ ಪತ್ತೆ ಹಚ್ಚಿರೋದು ರಾಜ್ಯದಲ್ಲಿ ಇದೇ ಮೊದಲ ಕೇಸ್ ಆಗಿದೆ. ರಾಗಿಣಿ, ಸಂಜನಾ ವಿರುದ್ಧ ಬೆಂಗಳೂರಿನ 33ನೇ ಸಿಸಿಹೆಚ್ ಕೋರ್ಟ್‍ಗೆ ಸಿಸಿಬಿ ಪೊಲೀಸರು 145 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ. ಎಫ್‍ಎಸ್‍ಎಲ್ ವರದಿ, ಸಿಸಿಬಿ ವಿಚಾರಣೆ ವೇಳೆ ಇಬ್ಬರ ವಿರುದ್ಧ ನಟರು ಕೊಟ್ಟಿರುವ ಹೇಳಿಕೆಯನ್ನು ಸಾಕ್ಷ್ಯವಾಗಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ಪ್ರಕರಣ – ಕೊನೆಗೂ ಮೌನ ಮುರಿದ ನಟಿ ರಾಗಿಣಿ

    ಹೈದ್ರಾಬಾದ್ ಎಫ್‍ಎಸ್‍ಎಲ್ ರಿಪೋರ್ಟ್ ಬಗ್ಗೆ ಕೋರ್ಟ್ ಪರಿಶೀಲನೆ ನಡೆಸಲಿದೆ. ಇಬ್ಬರ ವಿಚಾರಣೆ ವೇಳೆ ಸರ್ಕಾರಿ ವಕೀಲರು ವಾದ ಮಂಡಿಸಲಿದ್ದಾರೆ. ಈ ವೇಳೆ ಪೂರಕ ಸಾಕ್ಷ್ಯ ಕೊಟ್ಟು ಪಬ್ಲಿಕ್ ಪ್ರಾಸಿಕ್ಯೂಟರ್ ವಾದ ಮಂಡಿಸಲಿದ್ದಾರೆ. ವಿಚಾರಣೆ ಬಳಿಕ ಆರೋಪ ಸಾಬೀತಾದರೆ ಸಂಜನಾ, ರಾಗಿಣಿಗೆ ಕೋರ್ಟ್ ಶಿಕ್ಷೆ ವಿಧಿಸಬಹುದು. ಕೆಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ನಟಿ ಮಣಿಯರು ಹೈಕೋರ್ಟ್ ಮೊರೆ ಹೋಗಬಹುದು.

  • ಡ್ರಗ್ಸ್ ಪ್ರಕರಣ – ಕೊನೆಗೂ ಮೌನ ಮುರಿದ ನಟಿ ರಾಗಿಣಿ

    ಡ್ರಗ್ಸ್ ಪ್ರಕರಣ – ಕೊನೆಗೂ ಮೌನ ಮುರಿದ ನಟಿ ರಾಗಿಣಿ

    ಬೆಂಗಳೂರು: ಡ್ರಗ್ಸ್ ಸೇವನೆ ಸಂಬಂಧ ಖಚಿತ ವರದಿ ಬರುತ್ತಿದ್ದಂತೆಯೇ ಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಿಂದ ದೂರವಿದ್ದ ನಟಿ ರಾಗಿಣಿ ಕೊನೆಗೂ ಮೌನ ಮುರಿದಿದ್ದಾರೆ.

    ಈ ಸಂಬಂಧ ಇನ್‍ಸ್ಟಾ ಸ್ಟೇಟಸ್ ಹಾಕಿರುವ ನಟಿ, ದೇವರ ಪ್ಲ್ಯಾನ್ ಬಗ್ಗೆ ನಿನ್ನಲ್ಲಿ ಎಷ್ಟು ಭರವಸೆ ಇರಬೇಕು ಅಂದರೆ, ನೀನು ಅಂದುಕೊಂಡಂತೆ ನಡೆಯದಿದ್ದರೂ ಬೇಸರ ಮಾಡಿಕೊಳ್ಳಬಾರದು. ಅಷ್ಟು ಆತ್ಮವಿಶ್ವಾಸ ಇರಬೇಕು ಎಂದು ಬರೆದುಕೊಂಡಿದ್ದಾರೆ.

    ಸದ್ಯ ಮನೆಯಲ್ಲಿಯೇ ಇರುವ ರಾಗಿಣಿ, ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಫೋನ್ ಮೂಲಕ ತಮ್ಮ ಲಾಯರ್ ಜೊತೆ ಸಂಪರ್ಕದಲ್ಲಿದ್ದಾರೆ. ಕಾನೂನು ರೀತಿ ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ಕೇಸ್- ನಮ್ಮನ್ನು ಬಿಟ್ಟುಬಿಡಿ ಎಂದು ಕಣ್ಣೀರಿಟ್ಟ ಸಂಜನಾ ತಾಯಿ

    10 ತಿಂಗಳ ಬಳಿಕ ಹೈದರಾಬಾದ್‍ನ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಸಿಕ್ಕಿದ್ದು, ತಲೆಕೂದಲ ಪರೀಕ್ಷೆಯಲ್ಲಿ ನಟಿಯರ ಮಾದಕ ದ್ರವ್ಯ ಸೇವನೆ ದೃಢವಾಗಿದೆ. 2020ರ ಸೆಪ್ಟೆಂಬರ್ 13 ಕೆಸಿ ಜನರಲ್ ಆಸ್ಪತ್ರೆಯಲ್ಲಿ ರಕ್ತ, ಯೂರಿನ್ ಸ್ಯಾಂಪಲ್ ಸಂಗ್ರಹ ಮಾಡಲಾಗಿತ್ತು. ಆದರೆ ತಾಂತ್ರಿಕ ದೋಷದಿಂದಾಗಿ ಮತ್ತೆ ಡಿಸೆಂಬರ್ 5ರಂದು ಕೋರ್ಟ್ ಅನುಮತಿ ಪಡೆದು, ಕೂದಲು, ರಕ್ತ, ಯೂರಿನ್ ಅಂಶಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿತ್ತು. ಈಗ ಎಫ್‍ಎಸ್‍ಎಲ್ ವರದಿಯಲ್ಲಿ ಡ್ರಗ್ಸ್ ಸೇವನೆ ಖಚಿತವಾಗಿದೆ. ಈ ಮೂಲಕ ಕರ್ನಾಟಕದಲ್ಲಿ ತಲೆ ಕೂದಲ ಮೂಲಕ ಡ್ರಗ್ಸ್ ಸೇವನೆ ಖಚಿತ ಆಗಿರೋದು ಇದೇ ಮೊದಲ ಕೇಸ್ ಎಂದು ಸಿಸಿಬಿ ಹೇಳಿದೆ.

    ಡ್ರಗ್ಸ್ ಸೇವನೆ ಖಚಿತ, ಮುಂದೇನು?
    ಡ್ರಗ್ಸ್ ಕೇಸಲ್ಲಿ ಕೂದಲು ಮೂಲಕ ಪತ್ತೆ ಹಚ್ಚಿರೋದು ರಾಜ್ಯದಲ್ಲಿ ಇದೇ ಮೊದಲ ಕೇಸ್ ಆಗಿದೆ. ರಾಗಿಣಿ, ಸಂಜನಾ ವಿರುದ್ಧ ಬೆಂಗಳೂರಿನ 33ನೇ ಸಿಸಿಹೆಚ್ ಕೋರ್ಟ್‍ಗೆ ಸಿಸಿಬಿ ಪೊಲೀಸರು 145 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ. ಎಫ್‍ಎಸ್‍ಎಲ್ ವರದಿ, ಸಿಸಿಬಿ ವಿಚಾರಣೆ ವೇಳೆ ಇಬ್ಬರ ವಿರುದ್ಧ ನಟರು ಕೊಟ್ಟಿರುವ ಹೇಳಿಕೆಯನ್ನು ಸಾಕ್ಷ್ಯವಾಗಿ ಉಲ್ಲೇಖಿಸಿದ್ದಾರೆ.

    ಹೈದ್ರಾಬಾದ್ ಎಫ್‍ಎಸ್‍ಎಲ್ ರಿಪೋರ್ಟ್ ಬಗ್ಗೆ ಕೋರ್ಟ್ ಪರಿಶೀಲನೆ ನಡೆಸಲಿದೆ. ಇಬ್ಬರ ವಿಚಾರಣೆ ವೇಳೆ ಸರ್ಕಾರಿ ವಕೀಲರು ವಾದ ಮಂಡಿಸಲಿದ್ದಾರೆ. ಈ ವೇಳೆ ಪೂರಕ ಸಾಕ್ಷ್ಯ ಕೊಟ್ಟು ಪಬ್ಲಿಕ್ ಪ್ರಾಸಿಕ್ಯೂಟರ್ ವಾದ ಮಂಡಿಸಲಿದ್ದಾರೆ. ವಿಚಾರಣೆ ಬಳಿಕ ಆರೋಪ ಸಾಬೀತಾದರೆ ಸಂಜನಾ, ರಾಗಿಣಿಗೆ ಕೋರ್ಟ್ ಶಿಕ್ಷೆ ವಿಧಿಸಬಹುದು. ಕೆಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ನಟಿ ಮಣಿಯರು ಹೈಕೋರ್ಟ್ ಮೊರೆ ಹೋಗಬಹುದು.

  • ನಟಿ ರಾಗಿಣಿ ವಿರುದ್ಧ ಅಕುಲ್ ಬಾಲಾಜಿ ಸಾಕ್ಷ್ಯ!

    ನಟಿ ರಾಗಿಣಿ ವಿರುದ್ಧ ಅಕುಲ್ ಬಾಲಾಜಿ ಸಾಕ್ಷ್ಯ!

    ಬೆಂಗಳೂರು: ನಟಿ ರಾಗಿಣಿ ದ್ವಿವೇದಿ ಡ್ರಗ್ಸ್ ಸೇವನೆ ಮಾಡುತ್ತಿದ್ದರು ಎಂಬುದಾಗಿ ದೃಢಪಡುತ್ತಿದ್ದಂತೆಯೇ ಇತ್ತ ಖ್ಯಾತ ನಿರೂಪಕ ಅಕುಲ್ ಬಾಲಾಜಿ ಕೂಡ ತುಪ್ಪದ ಹುಡುಗಿ ವಿರುದ್ಧ ಸಾಕ್ಷ್ಯ ಹೇಳಿದ್ದಾರೆ.

    ನಟಿ ರಾಗಿಣಿ ಮಾದಕ ದ್ರವ್ಯ ಸೇವನೆ ಮಾಡ್ತಿದ್ದರು. ತಾವು ಮಾದಕ ದ್ರವ್ಯ ಸೇವನೆ ಮಾಡಿ ಬೇರೆಯವರಿಗೂ ಪ್ರಚೋದಿಸುತ್ತಿದ್ದರು ಎಂದು ಸಿಸಿಬಿ ಪೊಲೀಸರ ಎದುರು ಅಕುಲ್ ಬಾಲಾಜಿ ಸಾಕ್ಷ್ಯ ನುಡಿದಿದ್ದಾರೆ. ರಾಗಿಣಿ ವಿರುದ್ಧ ಆಕೆಯ ಡ್ರೈವರ್ ಇಮ್ರಾನ್ ಸೇರಿ ಸುಮಾರು 19 ಮಂದಿಯಿಂದ ಈಗಾಗಲೇ ಹೇಳಿಕೆಗಳನ್ನು ಪಡೆದುಕೊಳ್ಳಲಾಗಿದೆ.

    ರಾಗಿಣಿ ವಿರುದ್ಧ ಸಾಕ್ಷ್ಯಗಳು..!
    ಡ್ರಗ್ಸ್ ಖರೀದಿಗೆ ಬಗ್ಗೆ ರಾಗಿಣಿ ವಾಟ್ಸಾಪ್ ಚ್ಯಾಟ್ ಮಾಡಿದ್ದರು. ಇಂಥ ದಿನ, ಇಂಥ ಸ್ಥಳಕ್ಕೆ ಇಷ್ಟು ಡ್ರಗ್ಸ್ ಬೇಕು ಎಂದು ಡ್ರಗ್ಸ್ ದಂಧೆಕೋರರ ಜೊತೆಗೆ ಚಾಟ್ ಮಾಡಿದ್ದರು. ಅಲ್ಲದೆ ಡ್ರಗ್ಸ್ ಸರಬರಾಜು, ಡಗ್ಸ್ ಸಂಬಂಧಿ ಕಾನೂನುಗಳ ಬಗ್ಗೆ ಗೂಗಲ್ ನಲ್ಲಿ ಹುಡುಕಾಟ ಕೂಡ ನಡೆಸುತ್ತಿದ್ದರು ಎಂದು ಸಿಸಿಬಿ ಪೊಲೀಸರು ಕೋರ್ಟಿಗೆ ಸಲ್ಲಿಸಿದ್ದ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ.

    ಇಷ್ಟು ಮಾತ್ರವಲ್ಲದೆ ಮಾದಕ ದ್ರವ್ಯ ಖರೀದಿಗಾಗಿ 49 ಬಾರಿ ರಾಗಿಣಿ ಕರೆ ಮಾಡಿದ್ದರು. ಅದರಲ್ಲಿ ಗೆಳೆಯ ರವಿಶಂಕರ್‍ಗೆ 16 ಬಾರಿ ಕರೆ ಮಾಡಿದ್ದರು. ಆದಿತ್ಯ ಆಳ್ವ, ಲೂಮ್ ಪೆಪ್ಪರ್ ಸಾಂಬಾ, ಇಮ್ರಾನ್‍ಗೆ ನಟಿ ಕಾಲ್ ಮಾಡಿದ್ದರು. ಈ ಮೂಲಕ ಕೊಕೇನ್, ಎಂಡಿಎಂಎ, ಎಕ್ಸ್‍ಟೆಸಿ ಮಾತ್ರೆ ತರಿಸಿಕೊಂಡಿದ್ದರು. ಇದನ್ನೂ ಓದಿ: ಮೂಗಿನಲ್ಲಿ ಕೊಕೇನ್ ಸೇವಿಸುತ್ತಿದ್ದ ನಟಿ ರಾಗಿಣಿ!

    ರಾಗಿಣಿಯವರು ತಟ್ಟೆಯಲ್ಲಿ ಕೊಕೇನ್ ಪೌಡರ್ ಹಾಕಿ ಎಟಿಎಂ ಕಾರ್ಡ್‍ನಿಂದ ಉಜ್ಜುತ್ತಿದ್ದರು. ಬಳಿಕ ಆ ಕೊಕೇನ್ ಪೌಡರ್‍ನ್ನು 2 ಲೇನ್ ಆಗಿ ಮಾಡಿ ನಂತರ ಸುರುಳಿ ಸುತ್ತಿದ್ದ 100 ರೂ. ನೋಟಿನ ಮೂಲಕ ಡ್ರಗ್ಸ್ ಸೇವೆನೆ ಮಾಡುತ್ತಿದ್ದರು. ನೋಟಿನ ಮೂಲಕ ಮೂಗಿಗೆ ಕೊಕೇನ್ ಪೌಡರ್ ಇಳಿಸಿಕೊಳ್ಳುತ್ತಿದ್ದರು. ಇಂತಹ ಮಾದಕ ಪಾರ್ಟಿಗಳು ಫ್ಯಾಷನ್ ಶೋನಲ್ಲೂ ನಡೆಯುತ್ತಿತ್ತು ಎಂಬುದಾಗಿ ಕೋರ್ಟಿಗೆ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ಸಿಸಿಬಿ ದೋಷಾರೋಪಣೆ ಮಾಡಿದೆ.

    ಹೈದರಾಬಾದ್ ನ ಸಿಎಸ್‍ಎಫ್‍ಎಲ್‍ನ ಲ್ಯಾಬ್ ನೀಡಿರುವ ವರದಿಯನ್ನು ಸಿಸಿಬಿ ತರಿಸಿಕೊಂಡಿದೆ. ಈ ಹಿಂದೆ ಇಬ್ಬರು ನಟಿಯರನ್ನು ಬಂಧಿಸಿದ್ದಾಗ ತಲೆ ಕೂದಲು ಸಂಗ್ರಹಿಸಿ ಡ್ರಗ್ಸ್ ಸೇವನೆ ಪತ್ತೆ ಮಾಡಲು ಕಳುಹಿಸಲಾಗಿತ್ತು. ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ತಲೆ ಕೂದಲಿನ ಮಾದರಿ ಸಂಗ್ರಹ ಮಾಡಲಾಗಿತ್ತು. ಒಮ್ಮೆ ಸರಿಯಾದ ಕ್ರಮದಲ್ಲಿ ಮಾದರಿ ಸಂಗ್ರಹ ಆಗದೇ ರಿಜೆಕ್ಟ್ ಆಗಿತ್ತು. ಬಳಿಕ ಮತ್ತೊಮ್ಮೆ ಮಾದರಿ ಸಂಗ್ರಹ ಮಾಡಿ ಕಳುಹಿಸಲಾಗಿತ್ತು. ಈಗ ವರದಿ ದೃಢ ಎಂದು ಪ್ರಯೋಗಾಲಯದಿಂದ ವರದಿ ನೀಡಿದೆ. ಸದ್ಯ ಬೆಂಗಳೂರಿನ 33ನೇ ಸಿಸಿಹೆಚ್ ಕೋರ್ಟ್‍ಗೆ ಸಿಸಿಬಿ ಪೊಲೀಸರು 145 ಪುಟಗಳ ಆರೋಪಪಟ್ಟಿಯನ್ನು ಸಲ್ಲಿಕೆ ಮಾಡಿದ್ದಾರೆ.