Tag: Drugs Case

  • ಮಫ್ತಿಯಲ್ಲಿ ಎನ್‍ಸಿಬಿ ದಾಳಿ – ಡ್ರಗ್ಸ್ ಖರೀದಿಸುವಾಗ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಖ್ಯಾತ ನಟಿ

    ಮಫ್ತಿಯಲ್ಲಿ ಎನ್‍ಸಿಬಿ ದಾಳಿ – ಡ್ರಗ್ಸ್ ಖರೀದಿಸುವಾಗ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಖ್ಯಾತ ನಟಿ

    ಮುಂಬೈ: ಡ್ರಗ್ಸ್ ಖರೀದಿಸುವಾಗ ಬಾಲಿವುಡ್ ಕಿರುತೆರೆ ನಟಿಯೊಬ್ಬಳು ರೆಡ್‍ಹ್ಯಾಡ್ ಆಗಿ ಸಿಕ್ಕಿಬಿದ್ದಿದ್ದು, ಆಕೆಯನ್ನು ಎನ್‍ಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

    ಇಡೀ ಭಾರತದ ಚಿತ್ರರಂಗಕ್ಕೆ ಡ್ರಗ್ ಕಳಂಕ ಅಂಟಿಕೊಂಡಿದೆ. ಈಗಾಗಲೇ ಬಾಲಿವುಡ್‍ನಲ್ಲಿ ರಿಯಾ ಚಕ್ರವರ್ತಿ ಡ್ರಗ್ ವಿಚಾರದಲ್ಲಿ ಆರೆಸ್ಟ್ ಆಗಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಜೊತೆಗೆ ಸ್ಯಾಂಡಲ್‍ವುಡ್‍ನಲ್ಲಿ ನಟಿಮಣಿಯರಾದ ರಾಗಿಣಿ ಮತ್ತು ಸಂಜಾನ ಗಲ್ರಾನಿ ಅರೆಸ್ಟ್ ಆಗಿ ಜೈಲು ಸೇರಿದ್ದಾರೆ.

    ಈಗ ಬಾಲಿವುಡ್‍ನಲ್ಲಿ ಸವ್ಧಾನ್ ಇಂಡಿಯಾ ಮತ್ತು ದೇವೋ ಕೆ ದೇವ್ ಮಹಾದೇವ್ ನಂತಹ ಟಿವಿ ಧಾರಾವಾಹಿಗಳಲ್ಲಿ ಸರಸ್ವತಿ ಪಾತ್ರದಲ್ಲಿ ನಟಿಸಿದ್ದ ನಟಿ ಪ್ರೀತಿಕಾ ಚೌಹಾನ್ ಅವರನ್ನು ಎನ್‍ಸಿಬಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಮುಂಬೈನ ಮೆರ್ಸೋವಾ ಏರಿಯಾದಲ್ಲಿ ಎನ್‍ಸಿಬಿ ಅಧಿಕಾರಿಗಳು ಮಫ್ತಿಯಲ್ಲಿ ಕಾರ್ಯಚರಣೆ ಮಾಡುತ್ತಿದ್ದರು. ಈ ವೇಳೆ ಡ್ರಗ್ ಖರೀದಿಗೆ ಬಂದ ಪ್ರೀತಿಕಾ ಚೌಹಾನ್ ಅವರನ್ನು ಅಧಿಕಾರಿಗಳು ಸಾಕ್ಷಿ ಸಮೇತ ರೆಡ್‍ಹ್ಯಾಂಡ್ ಆಗಿ ಹಿಡಿದಿದ್ದಾರೆ.

    ಪ್ರೀತಿಕಾ ಚೌಹಾನ್ ಡ್ರಗ್ಸ್ ಖರೀದಿಗೆ ಬಂದಾಗ ಬಂಧಿಸಲಾಗಿದೆ. ಈ ನಟಿಮಣಿಯ ಜೊತೆ ಆಕೆಗೆ ಡ್ರಗ್ಸ್ ನೀಡಲು ಬಂದ ಮತ್ತು ತೆಗೆದುಕೊಳ್ಳಬಂದ ಎಲ್ಲರನ್ನು ಸೇರಿ ಒಟ್ಟು ಐದು ಜನರನ್ನು ಎನ್‍ಸಿಬಿ ಬಂಧಿಸಿದೆ. ಪ್ರೀತಿಕಾ ಚೌಹಾನ್ ಬಂಧನದ ನಂತರ ಅವರನ್ನು ಮುಂಬೈನ ಕಿಲಾ ಕೋರ್ಟಿಗೆ ಹಾಜರು ಪಡಿಸಲಾಗಿದೆ. ಈಗಾಗಲೇ ಬಾಲಿವುಡ್‍ನಲ್ಲಿ ಡ್ರಗ್ ಕೇಸ್ ಬಹಳ ಸದ್ದು ಮಾಡುತ್ತಿದೆ. ಇದರ ನಡುವೆಯ ಪ್ರೀತಿಕಾ ಚೌಹಾನ್ ಸಿಕ್ಕಿಬಿದ್ದಿದ್ದಾರೆ.

    ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ಬಾಲಿವುಡ್‍ನಲ್ಲಿ ಡ್ರಗ್ಸ್ ಕೇಸ್ ಬಹಳ ಸದ್ದು ಮಾಡಿತ್ತು. ವಾಟ್ಸಪ್ ಚಾಟಿನಲ್ಲಿ ಡ್ರಗ್ಸ್ ವಿಚಾರವಾಗಿ ಮೆಸೇಜ್ ಮಾಡಿದ್ದ ಕಾರಣ ಸುಶಾಂತ್ ಪ್ರೇಯಸಿ ರಿಯಾ 28 ದಿನಗಳ ಕಾಲ ಜೈಲಿನಲ್ಲಿದ್ದು, ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಜೊತೆಗೆ ಈ ಪ್ರಕರಣದಲ್ಲಿ ನಟಿಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, ಸಾರಾ ಅಲಿ ಖಾನ್, ರಕುಲ್ ಪ್ರೀತ್ ಸಿಂಗ್ ಅವರನ್ನು ಎನ್‍ಸಿಬಿ ವಿಚಾರಣೆ ಮಾಡಿತ್ತು.

    ಡ್ರಗ್ಸ್ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೊವಿಕ್ ಚಕ್ರವರ್ತಿ, ಸುಶಾಂತ್ ಅವರ ಮನೆ ವ್ಯವಸ್ಥಾಪಕ ಸ್ಯಾಮ್ಯುಯೆಲ್ ಮಿರಾಂಡಾ ಮತ್ತು ಉದ್ಯೋಗಿ ದೀಪೇಶ್ ಸಾವಂತ್ ಅವರನ್ನು ಎನ್‍ಸಿಬಿ ಬಂಧಿಸಿದೆ. ರಿಯಾ ಮತ್ತು ದೀಪೇಶ್ ಅವರನ್ನು ಈ ತಿಂಗಳ ಆರಂಭದಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ರಿಯಾ ಮುಂಬೈನ ಬೈಕುಲ್ಲಾ ಜೈಲಿನಲ್ಲಿ 28 ದಿನಗಳನ್ನು ಕಳೆದಿದ್ದರು.

  • ಸ್ಯಾಂಡಲ್‍ವುಡ್ ಡ್ರಗ್ಸ್ ಕೇಸ್- ಸಿಸಿಬಿ ವಿಚಾರಣೆಗೆ ನಿರ್ಮಾಪಕ ಸೌಂದರ್ಯ ಜಗದೀಶ್ ಹಾಜರು

    ಸ್ಯಾಂಡಲ್‍ವುಡ್ ಡ್ರಗ್ಸ್ ಕೇಸ್- ಸಿಸಿಬಿ ವಿಚಾರಣೆಗೆ ನಿರ್ಮಾಪಕ ಸೌಂದರ್ಯ ಜಗದೀಶ್ ಹಾಜರು

    – ಸಿಸಿಬಿ ವಿಚಾರಣೆ ಎದುರಿಸಿದ ಕಾಂಗ್ರೆಸ್ ಪರಿಷತ್ ಸದಸ್ಯ ಪುತ್ರ

    ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ನಿರ್ಮಾಪಕ ಸೌಂದರ್ಯ ಜಗದೀಶ್ ಮತ್ತು ಕಾಂಗ್ರೆಸ್ ಪರಿಷತ್ ಸದಸ್ಯ ಯುಬಿ ವೆಂಕಟೇಶ್ ಪುತ್ರ ವಿ.ಗಣೇಶ್ ರಾವ್ ಸಹ ಸಿಸಿಬಿ ವಿಚಾರಣೆಗೆ ಆಗಮಿಸಿದ್ದರು.

    ನೋಟಿಸ್ ಹಿನ್ನೆಲೆ ನಿರ್ಮಾಪಕ ಸೌಂದರ್ಯ ಜಗದೀಶ್ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸೌಂದರ್ಯ ಜಗದೀಶ್ ಪತ್ನಿ, ಡ್ರಗ್ಸ್ ಪ್ರಕಜರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಪತಿ ನಿರ್ಮಾಣದ ರಾಮ್ ಲೀಲಾ ಚಿತ್ರದಲ್ಲಿ ನಟಿ ಸಂಜನಾ ಗಲ್ರಾನಿ ನಟಿಸಿದ್ದರು. ಸಿನಿಮಾದ ನಟನೆಗಾಗಿ ಸಂಜನಾಗೆ ನೀಡಿದ ಸಂಭಾವನೆ ಕೇಳಿದರು. ಸಂಜನಾಗೆ ಸಂಭಾವನೆ ಚೆಕ್ ಅಥವಾ ನಗದು ಮೂಲಕ ನೀಡಿದ್ರಾ ಎಂದು ಚಿತ್ರದ ಕುರಿತು ಮಾಹಿತಿ ಕೇಳಿದ್ದರು. ಅಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ವೈಭವ್ ಜೈನ್ ವೈಭವಕ್ಕೆ ತುಪ್ಪದ ಹುಡ್ಗಿ ಫುಲ್ ಸೈಲೆಂಟ್

    ಸೌಂದರ್ಯ ಜಗದೀಶ್ ಬೆಂಗಳೂರಿನ ಓರಿಯನ್ ಮಾಲ್ ಬಳಿ ಜೆಟ್ ಲಾಗ್ ಹೆಸರಿನ ಪಬ್ ಹೊಂದಿದ್ದಾರೆ. ಈ ಪಬ್ ನಲ್ಲಿ ವೀರೇನ್ ಖನ್ನಾ ಮತ್ತು ವೈಭವ್ ಜೈನ್ ಪಾರ್ಟಿ ಆಯೋಜಿಸುತ್ತಿದ್ದರು ಎಂದು ತಿಳಿದು ಬಂದಿದೆ. ಜೆಟ್ ಲಾಗ್ ನಲ್ಲಿ ನಡೆದ ಪಾರ್ಟಿಗಳ ಮಾಹಿತಿ ಪಡೆದುಕೊಳ್ಳಲು ಸಿಸಿಬಿ ಸೌಂದರ್ಯ ಜಗದೀಶ್ ಅವರಿಗೆ ನೋಟಿಸ್ ನೀಡಿತ್ತು ಎಂದು ಮೂಲಗಳು ತಿಳಿಸಿವೆ. ಆದ್ರೆ ಸೌಂದರ್ಯ ಜಗದೀಶ್, ಜೆಟ್ ಲಾಗ್ ಕುರಿತು ಏನು ಕೇಳಿಲ್ಲ ಅಂತ ಹೇಳಿದ್ದಾರೆ. ಇದನ್ನೂ ಓದಿ: ಹೆಂಡ್ತಿಗೆ ಫೋನ್ ಮಾಡ್ಬೇಕು ಅಂತ ಲವ್ವರ್‌ಗೆ ಕಾಲ್ – ತಗ್ಲಾಕ್ಕೊಂಡ ವೈಭವ್

    ರಾಯಲ್ ಮೀನಾಕ್ಷಿ ಮಾಲ್ ಮಾಲೀಕರಾಗಿರುವ ವಿ.ಗಣೇಶ್ ರಾವ್ ತಮ್ಮ ಒಡೆತನದ ಫ್ಲ್ಯಾಟ್ ಗಳಲ್ಲಿ ಪಾರ್ಟಿ ಆಯೋಜನೆ ಮಾಡುತ್ತಿದ್ದರು. ಜೇಡ್ ಶ್ರೀ ಸುಬ್ರಮಣ್ಯ ಸೇರಿದಂತೆ ಹಲವರೊಂದಿಗೆ ಸೇರಿ ಗಣೇಶ್ ರಾವ್ ಪಾರ್ಟಿ ಆಯೋಜಿಸುತ್ತಿದ್ದರು. ಈಗಾಗಲೇ ಬಂಧನದಲ್ಲಿರುವ ನಟಿ ಸಂಜನಾ ಗಲ್ರಾನಿ ಜೊತೆಯಲ್ಲಿಯೂ ಗಣೇಶ್ ರಾವ್ ಹಣಕಾಸಿನ ವ್ಯವಹಾರ ನಡೆಸಿದ್ದರು ಎಂಬ ಮಾಹಿತಿ ಸಿಸಿಬಿ ಲಭ್ಯವಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆ ವಿಚಾರಣೆಗೆ ಹಾಜರಾಗಬೇಕೆಂದು ನೋಟಿಸ್ ನೀಡಿದ ಹಿನ್ನೆಲೆ ಗಣೇಶ್ ರಾವ್ ಇಂದು ಸಿಸಿಬಿ ಕಚೇರಿಗೆ ಆಗಮಿಸಿದ್ದರು. ಗಣೇಶ್ ರಾವ್ ವಿಚಾರಣೆಗೆ ಅಂತ್ಯವಾಗಿದ್ದು, ಸಿಸಿಬಿ ಹಲವು ಪ್ರಶ್ನೆಗಳಿಗೆ ಉತ್ತರ ಪಡೆದುಕೊಂಡಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಜೈಲಿನಲ್ಲಿ ಸೊಳ್ಳೆ ಕಚ್ತಿದೆಂದು ನಿದ್ರಿಸದೆ ಸಂಜನಾ ರಂಪಾಟ!

  • ಡ್ರಗ್ಸ್ ಪ್ರಕರಣದಲ್ಲಿ ಹೆಣ್ಣುಮಕ್ಕಳನ್ನೇ ಟಾರ್ಗೆಟ್ ಮಾಡಲಾಗುತ್ತಿದೆ: ರಾಮಲಿಂಗಾರೆಡ್ಡಿ

    ಡ್ರಗ್ಸ್ ಪ್ರಕರಣದಲ್ಲಿ ಹೆಣ್ಣುಮಕ್ಕಳನ್ನೇ ಟಾರ್ಗೆಟ್ ಮಾಡಲಾಗುತ್ತಿದೆ: ರಾಮಲಿಂಗಾರೆಡ್ಡಿ

    ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣದಲ್ಲಿ ಕೇವಲ ಹೆಣ್ಣುಮಕ್ಕಳನ್ನೇ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

    ಇಂದು ಆನೇಕಲ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ಪ್ರಕರಣದಲ್ಲಿ ಹೆಣ್ಣು ಮಕ್ಕಳು ಬಿಟ್ಟರೆ ಇನ್ನೂ ಯಾರೂ ಕೂಡ ಇಲ್ವಾ? ಬರಿ ಹೆಣ್ಣುಮಕ್ಕಳನ್ನೇ ಟಾರ್ಗೆಟ್ ಮಾಡಲಾಗುತ್ತಿದೆ. ಅವರು ತಪ್ಪು ಮಾಡಿರಬಹುದು ನಾನು ಇಲ್ಲ ಎಂದು ಹೇಳುವುದಿಲ್ಲ. ಆದರೆ ಇದರ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ಒತ್ತಾಯ ಮಾಡಿದರು.

    ನಾನು ಕೂಡ ಗೃಹ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ನಾನು ಡ್ರಗ್ಸ್ ತಡೆಯ ಬಗ್ಗೆ ಸಾಕಷ್ಟು ಪ್ರಿಯಾರಿಟಿ ಕೊಟ್ಟಿದ್ದೆ. ಡ್ರಗ್ಸ್ ಬರುತ್ತಿರುವ ಮೂಲವನ್ನು ಕಂಟ್ರೋಲ್ ಮಾಡಬೇಕಿದೆ. ಪೊಲೀಸರಿಗೂ ಕೂಡ ಸಾಕಷ್ಟು ಮಾಹಿತಿ ಇದೆ. ಡ್ರಗ್ಸ್ ಪ್ರಕರಣ ಯುವಜನಾಂಗವನ್ನು ಹಾಳುಮಾಡುತ್ತಿದೆ. ಮೂರು ಜನರನ್ನೇ ಟಾರ್ಗೆಟ್ ಮಾಡುತ್ತಿರುವುದನ್ನು ನೋಡಿದರೆ ಈ ಪ್ರಕರಣ ಹಳ್ಳ ಹಿಡಿಯಬಹುದು. ಉಳಿದವರ ಬಂಧನ ಯಾಕೆ ಆಗುತ್ತಿಲ್ಲ ಗೃಹ ಮಂತ್ರಿಗಳಿಗೆ ಮಾಹಿತಿ ಇಲ್ಲವಾ ಎಂದು ಪ್ರಶ್ನೆ ಮಾಡಿದರು.

    ಇದೇ ವೇಳೆ ಆರ್.ಆರ್.ನಗರ ಚುನಾವಣಾ ಕೇಸ್ ವಿಚಾರವಾಗಿ ಮಾತನಾಡಿ, ಸಣ್ಣಪುಟ್ಟ ವಿಚಾರಕ್ಕೆ ಕೇಸು ದಾಖಲಿಸುವುದು ಸರಿಯಲ್ಲ. ಚಾಲಕನಿಗೆ ಗೊತ್ತಾಗದೆ 100 ಮೀಟರ್ ಒಳಗೆ ಹೋಗಿದ್ದಾರೆ. ಇನ್ನು ಮೇಲೆ ಬರಬಾರದು ಅಂತ ಪೊಲೀಸರು ಹೇಳಿದರೆ ಮುಗಿದುಹೋಗುತ್ತಿತ್ತು. ಅದನ್ನೇ ದೊಡ್ಡದಾಗಿ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

    ಡಿಜೆ ಹಳ್ಳಿ ಕೆಜಿಹಳ್ಳಿ ಗಲಾಟೆ ವಿಚಾರ ಹೇಳಿಕೆ ನೀಡಿದ ರಾಮಲಿಂಗಾರೆಡ್ಡಿ, ಪೊಲೀಸರು ಸರಿಯಾಗಿ ನಿರ್ವಹಣೆ ಮಾಡದಿರುವುದೇ ಗಲಾಟೆಗೆ ಕಾರಣ. ಸರ್ಕಾರ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದೆ. ಸಂಪತ್ ರಾಜ್ ತಪ್ಪು ಮಾಡಿದರೆ ಕ್ರಮಕೈಗೊಳ್ಳಲಿ. ನವೀನನನ್ನು ಕೂಡಲೇ ಬಂಧಿಸಿದರೆ ಈ ಗಲಾಟೆ ಆಗುತ್ತಿರಲಿಲ್ಲ. ಆರ್ ಆರ್ ನಗರ ಚುನಾವಣೆಗೆ ಒಂದು ವಾರ್ಡಿಗೆ ಅಖಂಡ ಶ್ರೀನಿವಾಸಮೂರ್ತಿ ಅವರನ್ನು ಕೂಡ ನೇಮಕ ಮಾಡಲಾಗಿದೆ. ಅವರು ಕೂಡ ಚುನಾವಣಾ ಪ್ರಚಾರಕ್ಕೆ ಬರುತ್ತಾರೆ ಎಂದರು.

  • ಶೀಘ್ರವೇ ಕನ್ನಡದ ಸ್ಟಾರ್ ನಟನಿಗೆ ಎನ್‍ಸಿಬಿ ಡ್ರಗ್ಸ್ ಶಾಕ್

    ಶೀಘ್ರವೇ ಕನ್ನಡದ ಸ್ಟಾರ್ ನಟನಿಗೆ ಎನ್‍ಸಿಬಿ ಡ್ರಗ್ಸ್ ಶಾಕ್

    ಬೆಂಗಳೂರು: ಡ್ರಗ್ಸ್ ಡೀಲ್ ಪ್ರಕರಣಕ್ಕೆ ಶೀಘ್ರವೇ ಸ್ಫೋಟಕ ಟ್ವಿಸ್ಟ್ ದೊರೆಯಲಿದ್ದು, ಸ್ಯಾಂಡಲ್‍ವುಡ್‍ಗೆ ಅತಿ ದೊಡ್ಡ ಶಾಕ್ ಒಂದು ಕಾದಿದೆ.

    ಇದು ಸಿಸಿಬಿ ಅಲ್ಲ, ಮಾದಕ ವಸ್ತು ನಿಯಂತ್ರಣ ಸಂಸ್ಥೆ(ಎನ್‍ಸಿಬಿ)ಯ ದೊಡ್ಡ ಕಾರ್ಯಾಚರಣೆಯಾಗಿದೆ. ಈ ಮೂಲಕ ಡ್ರಗ್ ಕೇಸಿನಲ್ಲಿ ಎನ್‍ಸಿಬಿ ಸೈಲೆಂಟ್ ಆಗಿ ಕೆಲಸ ಮಾಡುತ್ತಿದ್ದು, ಶೀಘ್ರವೇ ಸ್ಯಾಂಡ್‍ಲವುಡ್‍ನ ಬಿಗ್ ಬ್ರೇಕಿಂಗ್ ಸುದ್ದಿಯೊಂದು ಹೊರಬೀಳಲಿದೆ.

    ಕಾರ್ಪೊರೇಟರ್ ಮಗ ಯಶಸ್ ‘ಸ್ಟಾರ್ ನಟ’ನ ಹೆಸರು ಹೇಳಿದ್ದಾನೆ. ಹೀಗಾಗಿ ಸದ್ಯದಲ್ಲೇ ಕನ್ನಡದ ದೊಡ್ಡ ನಟನಿಗೆ ಶಾಕ್ ಸಿಗಲಿದೆ. ಯಶಸ್ ಹೇಳಿಕೆ ಆಧರಿಸಿ ಎನ್‍ಸಿಬಿ ದೊಡ್ಡ ನಟನ ಬೆನ್ನುಬಿದ್ದಿದೆ. ಸ್ಟಾರ್ ನಟ ಆಗಿರೋದ್ರಿಂದ ಪ್ರಬಲ ಸಾಕ್ಷ್ಯಕ್ಕೆ ಎನ್‍ಸಿಬಿ ಶೋಧ ನಡೆಸುತ್ತಿದೆ. ಇದನ್ನೂ ಓದಿ: ಕನ್ನಡಿಗರು ಕೊಟ್ಟ ಹೆಸರಿಗೆ ಧಕ್ಕೆ ಮಾಡಿಲ್ಲ, ಯಾವತ್ತೂ ಮಾಡಲ್ಲ: ಕಣ್ಣೀರಿಟ್ಟ ಅನುಶ್ರೀ

    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸ್ಯಾಂಡಲ್‍ವುಡ್ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಹಾಗೂ ಇವರ ಆಪ್ತರು ಪರಪ್ಪನ ಅಗ್ರಹಾರ ಸೇರಿದ್ದಾರೆ. ಇಬ್ಬರೂ ನಟಿಯರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 23ರವರೆಗೆ ವಿಸ್ತರಿಸಿ ಡಿಪಿಎಸ್ ವಿಶೇಷ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ. ಈ ಆದೇಶದೊಂದಿಗೆ ಇಬ್ಬರೂ ನಟಿಯರು 23ರವರೆಗೂ ಜೈಲುಶಿಕ್ಷೆ ಅನುಭವಿಸುವುದು ಪಕ್ಕಾ ಆಗಿದೆ. ಇದನ್ನೂ ಓದಿ: ಅನುಶ್ರೀ ಪ್ರಕರಣದ ಮಾಜಿ ಸಿಎಂ ಯಾರೆಂದು ಬಹಿರಂಗಪಡಿಸಿ- ಹೆಚ್‍ಡಿಕೆ ಗರಂ

    ಇತ್ತ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ ಕಂ ನಟಿ ಅನುಶ್ರೀ ಕೂಡ ಮಂಗಳೂರಿನಲ್ಲಿ ಸಿಸಿಬಿ ವಿಚಾರಣೆ ಎದುರಿಸಿದ್ದಾರೆ. ಪ್ರಕರಣದ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಅನುಶ್ರೀ ಅವರ ಮೊಬೈಲ್ ಕರೆಗಳ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ರಾಜ್ಯದ ಪ್ರಭಾವಿ ನಾಯಕರಿಗೆ ಕರೆ ಮಾಡಿರುವ ಮಾಹಿತಿ ಲಭ್ಯವಾಗಿದೆ ಎನ್ನಲಾಗಿತ್ತು. ಅಲ್ಲದೇ ವಿಚಾರಣೆ ಸಂದರ್ಭದಲ್ಲಿ ಸಿಸಿಬಿ ಪೊಲೀಸರು ಮೊಬೈಲ್ ಸಿಮ್ ಕಾರ್ಡ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಅನುಶ್ರೀ ಅವರಿಗೆ ನೋಟಿಸ್ ಬಂದ ದಿನ ಮತ್ತು ಮಾರನೇ ದಿನ ರಾಜ್ಯದ ಮೂವರು ಪ್ರಭಾವಿಗಳಿಗೆ ಕರೆ ಮಾಡಿದ್ದಾರೆ. ಮೂವರು ಪ್ರಭಾವಿಗಳಿಗೆ ಕರೆ ಮಾಡಿ ಹೆಚ್ಚು ಸಮಯ ಮಾತನಾಡಿದ್ದಾರೆ ಎಂಬ ಮಾಹಿತಿ ಲಭಿಸಿತ್ತು.  ಇದನ್ನೂ ಓದಿ: 14 ವರ್ಷದ ಹಿಂದೆ ಬಸ್ ಹತ್ಕೊಂಡು ಬಂದು ಬೆಂಗ್ಳೂರಲ್ಲಿ ನೆಲೆ ಕಂಡಿದ್ದೇನೆ: ಗಳಗಳನೇ ಅತ್ತ ಅನುಶ್ರೀ

  • ಡ್ರಗ್ಸ್ ಪ್ರಕರಣ – ನಿರೂಪಕಿ ಅನುಶ್ರೀಗೆ ಕ್ಲೀನ್ ಚಿಟ್ ಸಾಧ್ಯತೆ

    ಡ್ರಗ್ಸ್ ಪ್ರಕರಣ – ನಿರೂಪಕಿ ಅನುಶ್ರೀಗೆ ಕ್ಲೀನ್ ಚಿಟ್ ಸಾಧ್ಯತೆ

    ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಎದುರಿಸಿದ್ದ ಆ್ಯಂಕರ್ ಕಂ ನಟಿ ಅನುಶ್ರೀಗೆ ಕ್ಲೀನ್ ಚಿಟ್ ನೀಡುವ ಸಾಧ್ಯತೆಗಳು ಹೆಚ್ಚಾಗಿವೆ. ಈ ಮೂಲಕ ಅನುಶ್ರೀ ಬಗ್ಗೆ ಸಾಕಷ್ಟು ಅರೋಪ ಇದ್ದರೂ ಪೊಲೀಸರು ಅಸಹಾಯಕರಾದ್ರಾ ಎಂಬ ಅನುಮಾನ ಮೂಡಿದೆ.

    ಈ ಹಿಂದೆ ಅನುಶ್ರೀ ಮಾಜಿ ಮುಖ್ಯಮಂತ್ರಿ, ಮಗ ಹಾಗೂ ಕೆಲ ಪ್ರಭಾವಿ ರಾಜಕರಾಣಿಗಳ ನಂಟಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಬೆನ್ನಲ್ಲೇ ಇದೀಗ ಅನುಶ್ರೀಗೆ ಕ್ಲೀನ್ ಚಿಟ್ ನೀಡುವ ಸಾಧ್ಯತೆಗಳಿವೆ. ಹೀಗಾಗಿ ಇದೀಗ ಪ್ರಭಾವಿ ವ್ಯಕ್ತಿಗಳ ಪ್ರಭಾವ ವರ್ಕೌಟ ಆಯ್ತಾ?, ಒತ್ತಡದಿಂದ ಅನುಶ್ರೀ ಬಚಾವ್ ಆದ್ರಾ ಎಂಬ ಪ್ರಶ್ನೆ ಎದ್ದಿದೆ.

    ಅನುಶ್ರೀಗೆ ಡ್ರಗ್ಸ್ ಟೆಸ್ಟ್ ಮಾಡಿಸಲು ಸಾಕಷ್ಟು ಆಧಾರ ಸಂಗ್ರಹ ಮಾಡಲಾಗಿತ್ತು. ಆದರೂ ಅನುಶ್ರೀಗೆ ಡ್ರಗ್ ಟೆಸ್ಟ್ ನಡಿಯೋದು ಡೌಟ್ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ಅನುಶ್ರೀ ಪ್ರಕರಣದಲ್ಲಿ ಸರ್ಕಾರದ ಮೇಲೆ ಪ್ರಭಾವಿಗಳ ಒತ್ತಡ ಹೆಚ್ಚಾಯ್ತಾ ಎಂಬ ಶಂಕೆ ವ್ಯಕ್ತವಾಗುತ್ತಿದೆ.  ಇದನ್ನೂ ಓದಿ: ಕನ್ನಡಿಗರು ಕೊಟ್ಟ ಹೆಸರಿಗೆ ಧಕ್ಕೆ ಮಾಡಿಲ್ಲ, ಯಾವತ್ತೂ ಮಾಡಲ್ಲ: ಕಣ್ಣೀರಿಟ್ಟ ಅನುಶ್ರೀ

    ಪ್ರಕರಣದ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಅನುಶ್ರೀ ಅವರ ಮೊಬೈಲ್ ಕರೆಗಳ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ರಾಜ್ಯದ ಪ್ರಭಾವಿ ನಾಯಕರಿಗೆ ಕರೆ ಮಾಡಿರುವ ಮಾಹಿತಿ ಲಭ್ಯವಾಗಿದೆ ಎನ್ನಲಾಗಿತ್ತು. ಅಲ್ಲದೇ ವಿಚಾರಣೆ ಸಂದರ್ಭದಲ್ಲಿ ಸಿಸಿಬಿ ಪೊಲೀಸರು ಮೊಬೈಲ್ ಸಿಮ್ ಕಾರ್ಡ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಅನುಶ್ರೀ ಅವರಿಗೆ ನೋಟಿಸ್ ಬಂದ ದಿನ ಮತ್ತು ಮಾರನೇ ದಿನ ರಾಜ್ಯದ ಮೂವರು ಪ್ರಭಾವಿಗಳಿಗೆ ಕರೆ ಮಾಡಿದ್ದಾರೆ. ಮೂವರು ಪ್ರಭಾವಿಗಳಿಗೆ ಕರೆ ಮಾಡಿ ಹೆಚ್ಚು ಸಮಯ ಮಾತನಾಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇದನ್ನೂ ಓದಿ: ಅನುಶ್ರೀ ಪ್ರಕರಣದ ಮಾಜಿ ಸಿಎಂ ಯಾರೆಂದು ಬಹಿರಂಗಪಡಿಸಿ- ಹೆಚ್‍ಡಿಕೆ ಗರಂ

    ಪ್ರಭಾವಿಗಳ ಮೊಬೈಲ್ ಸಂಖ್ಯೆ ನೋಡಿ ಪೊಲೀಸರಿಗೆ ಶಾಕ್ ಆಗಿದ್ದಾರೆ. ಅನುಶ್ರೀ ಕರೆ ಮಾಡಿದ್ದ ‘ಆ’ ಮೂವರು ಸಾಮಾನ್ಯರಲ್ಲ, ಮೂರು ದೊಡ್ಡ ಪಕ್ಷಗಳ ನಾಯಕರು ಎನ್ನಲಾಗಿದ್ದು, ಒಬ್ಬರು ರಾಜ್ಯದ ಅತಿ ದೊಡ್ಡ ರಾಜಕಾರಣಿ, ಮತ್ತೊಬ್ಬರು ಕರಾವಳಿಯ ಅತಿ ಪ್ರಭಾವಿ ನಾಯಕರು ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿತ್ತು. ಇದನ್ನೂ ಓದಿ: 14 ವರ್ಷದ ಹಿಂದೆ ಬಸ್ ಹತ್ಕೊಂಡು ಬಂದು ಬೆಂಗ್ಳೂರಲ್ಲಿ ನೆಲೆ ಕಂಡಿದ್ದೇನೆ: ಗಳಗಳನೇ ಅತ್ತ ಅನುಶ್ರೀ

  • ನಟಿ ರಿಯಾ ಚಕ್ರವರ್ತಿಗೆ ಜಾಮೀನು

    ನಟಿ ರಿಯಾ ಚಕ್ರವರ್ತಿಗೆ ಜಾಮೀನು

    ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಬಂಧನದಲ್ಲಿದ್ದ ನಟಿ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ. ಸೆಪ್ಟೆಂಬರ್ 8ರಂದು ವಿಚಾರಣೆಗೆ ಹಾಜರಾಗಿದ್ದ ನಟಿ ರಿಯಾ ಚಕ್ರವರ್ತಿಯನ್ನು ಎನ್‍ಸಿಬಿ ಬಂಧಿಸಿತ್ತು.

    ಮಂಗಳವಾರ ರಿಯಾ ಚಕ್ರವರ್ತಿ ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆ ಪ್ರಕರಣದ ಅರ್ಜಿ ಮುಂಬೈನ ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯದ ಮುಂದೆ ಬಂದಿತ್ತು. ವಿಚಾರಣೆ ನಡೆಸಿದ್ದ ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ರಿಯಾ ಸೇರಿದಂತೆ ಪ್ರಕರಣದಲ್ಲಿ ಬಂಧಿತ 20 ಆರೋಪಿಗಳ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 20ರವರೆಗೆ ವಿಸ್ತರಿಸಿ ಆದೇಶ ನೀಡಿತ್ತು. ಇತ್ತ ರಿಯಾ ಜಾಮೀನಿಗಾಗಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ರಿಯಾ ಅವರಿಗೆ ಬಾಂಬೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.

    ಇತ್ತ ಬಂಧನದಲ್ಲಿರುವ ರಿಯಾ ಸೋದರ ಶೌವಿಕ್ ಚಕ್ರವರ್ತಿ ಜಾಮೀನು ಅರ್ಜಿ ವಜಾಗೊಂಡಿದೆ. ಮುಂಬೈನ ಬೈಖಲ್ಲಾ ಜೈಲಿನಲ್ಲಿರೋ ರಿಯಾ ಇಂದು ಹೊರ ಬರಲಿದ್ದಾರೆ.

    ಡ್ರಗ್ಸ್ ಪ್ರಕರಣದಲ್ಲಿ ಎನ್‍ಸಿಬಿ ಇದುವವರೆಗೂ 20 ಆರೋಪಿಗಳನ್ನ ಬಂಧಿಸಿದೆ. ರಿಯಾ ಮತ್ತು ಶೌವಿಕ್ ಇಬ್ಬರು ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕದಲ್ಲಿರೋ ವಿಷಯ ಸಿಬಿಐ ತನಿಖೆ ವೇಳೆ ತಿಳಿದು ಬಂದಿತ್ತು. ಸಿಬಿಐ ಶಿಫಾರಸ್ಸಿನ ಮೇರೆಗೆ ಎನ್‍ಸಿಬಿ ಪ್ರತ್ಯೇಕ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಆರಂಭಿಸಿತ್ತು. ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿಯರಾದ ರಕುಲ್ ಪ್ರೀತ್ ಸಿಂಗ್, ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್ ಮತ್ತು ಶ್ರದ್ಧಾ ಕಪೂರ್ ಎನ್‍ಸಿಬಿಯ ವಿಚಾರಣೆ ಎದುರಿಸಿದ್ದಾರೆ.

  • ರಿಯಾ, ಶೌವಿಕ್ ನ್ಯಾಯಾಂಗ ಬಂಧನ ಅಕ್ಟೋಬರ್ 20ರವರೆಗೆ ವಿಸ್ತರಣೆ

    ರಿಯಾ, ಶೌವಿಕ್ ನ್ಯಾಯಾಂಗ ಬಂಧನ ಅಕ್ಟೋಬರ್ 20ರವರೆಗೆ ವಿಸ್ತರಣೆ

    ಮುಂಬೈ: ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಮತ್ತು ಸೋದರ ಶೌವಿಕ್ ಚಕ್ರವರ್ತಿ ಇಬ್ಬರ ನ್ಯಾಯಾಂಗ ಬಂಧನವನ್ನ ಅಕ್ಟೋಬರ್ 20ರವರೆಗೆ ವಿಸ್ತರಿಸಿ ಮುಂವೈ ವಿಶೇಷ ನ್ಯಾಯಾಲಯ ಆದೇಶಿಸಿದೆ.

    ಇಂದು ಇಬ್ಬರ ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆ ಪ್ರಕರಣದ ವಿಚಾರಣೆ ನ್ಯಾಯಾಲಯದ ಮುಂದೆ ಬಂದಿತ್ತು. ಮತ್ತೆ ಇಬ್ಬರನ್ನು ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣದಲ್ಲಿ ಎನ್‍ಸಿಬಿ (ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ)ಯಿಂದ ಬಂಧನಕ್ಕೊಳಗಾಗಿರುವ ರಿಯಾ ಮತ್ತು ಶೌವಿಕ್ ಜೈಲಿನಲ್ಲಿದ್ದಾರೆ. ರಿಯಾ ಹಲವು ಬಾರಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ರೂ ಬೇಲ್ ಸಿಕ್ಕಿಲ್ಲ.

    ಸೆಪ್ಟೆಂಬರ್ 8ರಂದು ವಿಚಾರಣೆಗೆ ಹಾಜರಾಗಿದ್ದ ನಟಿ ರಿಯಾ ಚಕ್ರವರ್ತಿಯನ್ನು ಎನ್‍ಸಿಬಿ ಬಂಧಿಸಿತ್ತು. ಡ್ರಗ್ಸ್ ಪ್ರಕರಣದಲ್ಲಿ ಎನ್‍ಸಿಬಿ ಇದುವವರೆಗೂ 20 ಆರೋಪಿಗಳನ್ನ ಬಂಧಿಸಿದೆ. ರಿಯಾ ಮತ್ತು ಶೌವಿಕ್ ಇಬ್ಬರು ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕದಲ್ಲಿರೋ ವಿಷಯ ಸಿಬಿಐ ತನಿಖೆ ವೇಳೆ ತಿಳಿದು ಬಂದಿತ್ತು. ಸಿಬಿಐ ಶಿಫಾರಸ್ಸಿನ ಮೇರೆಗೆ ಎನ್‍ಸಿಬಿ ಪ್ರತ್ಯೇಕ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಆರಂಭಿಸಿತ್ತು. ದನ್ನೂ ಓದಿ: ಸುಶಾಂತ್ ರೀತಿಯಲ್ಲಿ ಮತ್ತೋರ್ವ ನಟನ ಅನುಮಾನಾಸ್ಪದ ಸಾವು

    ಡ್ರಗ್ಸ್ ಪೆಡ್ಲರ್ ಜೊತೆ ರಿಯಾ ನಡೆಸಿದ್ದ ವಾಟ್ಸಪ್ ಸಂಭಾಷಣೆಯನ್ನ ಖಾಸಗಿ ಮಾಧ್ಯಮ ವರದಿ ಮಾಡಿತ್ತು. ಅಕ್ಕ ರಿಯಾ ಸೂಚನೆಯ ಮೇರೆಗೆ ಡ್ರಗ್ಸ್ ಖರೀದಿಸುತ್ತಿದ್ದೆ ಎಂದು ಶೌವಿಕ್ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿಯರಾದ ರಕುಲ್ ಪ್ರೀತ್ ಸಿಂಗ್, ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್ ಮತ್ತು ಶ್ರದ್ಧಾ ಕಪೂರ್ ಎನ್‍ಸಿಬಿಯ ವಿಚಾರಣೆ ಎದುರಿಸಿದ್ದಾರೆ.  ಇದನ್ನೂ ಓದಿ: ನಟಿಗೆ ಸುಶಾಂತ್ ಕಿಸ್- ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್

    ಸುಶಾಂತ್ ಪ್ರಕರಣದಲ್ಲಿ ಕೇಳಿ ಬಂದಿರುವ ಕೊಲೆ ಆರೋಪಗಳನ್ನು ಏಮ್ಸ್ ವೈದ್ಯ ಸುಧೀರ್ ಗುಪ್ತಾ ಸಂಪೂರ್ಣವಾಗಿ ತಳ್ಳಿ ಹಾಕಿದ್ದಾರೆ. ಸುಶಾಂತ್ ದೇಹದಲ್ಲಿ ಯಾವುದೇ ವಿಷ ಪದಾರ್ಥ ಅಥವಾ ಕೆಮಿಕಲ್ ಇರಲಿಲ್ಲ. ಹಾಗಾಗಿ ಇದು ಕೊಲೆ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾವು ಬನಮ್ಮ ವರದಿಯನ್ನು ಸೆಪ್ಟೆಂಬರ್ 28ರಂದು ಸಿಬಿಐಗೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸುಶಾಂತ್ ಸಿಂಗ್ ಕುರಿತು ಸಲ್ಮಾನ್ ಟ್ವೀಟ್- ನೆಟ್ಟಿಗರಿಂದ ಆಕ್ರೋಶ

    ಮೊದಲಿಗೆ ಸುಶಾಂತ್ ಸಿಂಗ್ ಮೃತದೇಹದ ಮರಣೋತ್ತರ ಶವ ಪರೀಕ್ಷೆ ನಡೆಸಿ ಮುಂಬೈನ ಕೂಪರ್ ಆಸ್ಪತ್ರೆ ವೈದ್ಯರು ನೀಡಿದ ವರದಿಯ ಮೇಲೆ ಅನುಮಾನಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆ ಸಿಬಿಐ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ವೈದ್ಯಕೀಯ ವರದಿ ನೀಡುವಂತೆ ಡಾ.ಸುಧೀರ್ ಗುಪ್ತಾ ನೇತೃತ್ವದ ಐವರು ಏಮ್ಸ್ ವೈದ್ಯರ ತಂಡಕ್ಕೆ ನೀಡಲಾಗಿತ್ತು. ಏಮ್ಸ್ ವೈದ್ಯರ ತಂಡಕ್ಕೆ ಸೆಪ್ಟೆಂಬರ್ 20ಕ್ಕೆ ವರದಿ ಸೂಚಿಸುವಂತೆ ಸಿಬಿಐ ಸೂಚಿಸಿತ್ತು. ಆದ್ರೆ ವೈದ್ಯರು ಸೆಪ್ಟೆಂಬರ್ 28ರಂದು ವರದಿ ನೀಡಿದ್ದರು.

  • ಮುತ್ತಪ್ಪ ರೈ ಮಗನ ಮನೆ ಮೇಲೆ ಸಿಸಿಬಿ ದಾಳಿ

    ಮುತ್ತಪ್ಪ ರೈ ಮಗನ ಮನೆ ಮೇಲೆ ಸಿಸಿಬಿ ದಾಳಿ

    ರಾಮನಗರ: ಬೆಳ್ಳಂಬೆಳಗ್ಗೆ ದಿವಂಗತ ಮುತ್ತಪ್ಪ ರೈ ಮಗನ ಮನೆ ಮೇಲೆ ಸಿಸಿಬಿ ದಾಳಿ ಮಾಡಿದೆ.

    ಮುತ್ತಪ್ಪ ರೈಗೆ ಸೇರಿದ ಎರಡು ಕಡೆ ಸಿಸಿಬಿ ದಾಳಿ ಮಾಡಿದೆ. ಬಿಡದಿ ಮತ್ತು ಬೆಂಗಳೂರಿನ ವೈಯಾಲಿಕಾವಲ್ ಮನೆ ಸೇರಿದಂತೆ ವಿವಿಧ ಕಡೆಗಳಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮುತ್ತಪ್ಪ ರೈ ಮಗ ರಿಕ್ಕಿ ಮನೆ ಮೇಲೆ ಸಿಸಿಬಿ ದಾಳಿ ಮಾಡಿದ್ದು, ಮನೆಯಲ್ಲಿ ಸಿಸಿಬಿ ಅಧಿಕಾರಿಗಳು ಶೋಧ ಕಾರ್ಯ ಮಾಡುತ್ತಿದ್ದಾರೆ.

    ಮುತ್ತಪ್ಪ ರೈ ಮಗ ರಿಕ್ಕಿ ಡ್ರಗ್ ಪೆಡ್ಲರ್ಸ್ ರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಮನಗರ ಬಿಡದಿಯ ಮನೆಯಲ್ಲಿ ಸಿಸಿಬಿ ಶೋಧ ಕಾರ್ಯ ನಡೆಸುತ್ತಿದೆ. ಎಸಿಬಿ ವೇಣುಗೋಪಾಲ್ ನೇತೃತ್ವದಲ್ಲಿ ರೇಡ್ ಮಾಡಲಾಗಿದೆ.

    ಸೋಮವಾರ ಬೆಳ್ಳಂಬೆಳಗ್ಗೆ ಸಿಬಿಐ ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿಕುಮಾರ್ ಮತ್ತು ಅವರ ಸಹೋದರ ಡಿ.ಕೆ ಸುರೇಶ್‍ಗೆ ಶಾಕ್ ನೀಡಿದ್ದರು. ಏಕಕಾಲದಲ್ಲಿ 14 ಕಡೆ ಸುಮಾರು 60ಕ್ಕೂ ಹೆಚ್ಚು ಮಂದಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿಯ ವೇಳೆ 57 ಲಕ್ಷ ಹಣ ಹಾಗೂ ಕೆಲವೊಂದು ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು.

    ಡಿಕೆ ಬ್ರದರ್ಸ್ ಬೆಂಗಳೂರು ಮನೆ ಜೊತೆಗೆ ಕನಕಪುರದ ಸ್ವಗ್ರಾಮ ದೊಡ್ಡ ಆಲಹಳ್ಳಿಯ ಮನೆ, ರಾಮನಗರದ ಕೋಡಿಹಳ್ಳಿಯಲ್ಲಿರೋ ತಾಯಿ ಗೌರಮ್ಮ ಮನೆಯಲ್ಲೂ ಸಿಬಿಐ ಶೋಧ ಮಾಡಿತ್ತು.

  • ಹಳ್ಳ ಹಿಡಿತಿದ್ಯಾ ಡ್ರಗ್ಸ್ ಡೀಲ್ ಪ್ರಕರಣ?

    ಹಳ್ಳ ಹಿಡಿತಿದ್ಯಾ ಡ್ರಗ್ಸ್ ಡೀಲ್ ಪ್ರಕರಣ?

    ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ನಟಿಯನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಆದರೆ ಇದೀಗ ಪ್ರಕರಣ ಹಳ್ಳ ಹಿಡಿತಿದ್ಯಾ ಅನ್ನೋ ಅನುಮಾನವೊಂದು ಮೂಡಿದೆ.

    ಹೌದು. ರಾಗಿಣಿ, ಸಂಜನಾ ಬಂಧಿಸಿದ್ದ ಪೊಲೀಸರ ಕೈ ಕಟ್ಟಿದ್ದು ಯಾರು?, ಕೇವಲ ಇಬ್ಬರು ನಟಿ ಮಣಿಯರಿಗಷ್ಟೆ ಸಿಸಿಬಿ ಬೇಟಿ ಸೀಮಿತವಾಯ್ತಾ ಅನ್ನೋ ಪ್ರಶ್ನೆ ಕೂಡ ಮೂಡಿದೆ. ಎಲ್ಲರನ್ನೂ ಹೆಡೆಮುರಿ ಕಟ್ಟುವುದಾಗಿ ಹೇಳಿದ್ದ ಸಿಸಿಬಿ ಇದೀಗ ಸುಮ್ಮನಾಗಿದೆ. ಈ ಮೂಲಕ ಸ್ಟಾರ್ ಗಳು ಹಾಗೂ ಸ್ಟಾರ್ ಗಳ ಮಕ್ಕಳು ಬಚಾವ್ ಆಗ್ಬಿಟ್ರಾ ಎಂಬ ಪ್ರಶ್ನೆ ಎದ್ದಿದೆ.

    ಸೆಪ್ಟಂಬರ್ 4 ರಂದು ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು. ಆದರೆ ಇದೀಗ ತಿಂಗಳು ಕಳೆದ್ರೂ ಪ್ರಮುಖ ಆರೋಪಿಗಳು ಮಾತ್ರ ಇನ್ನೂ ಸಿಕ್ಕಿಲ್ಲ. ಎ1 ಆರೋಪಿಯಾಗಿರುವ ಶಿವಪ್ರಕಾಶ್ ಇನ್ನೂ ಅರೆಸ್ಟ್ ಆಗಿಲ್ಲ ಯಾಕೆ ಎಂಬುದೇ ಯಕ್ಷ ಪ್ರಶ್ನೆಯಾಗಿದೆ.

    ಮನೆಯಿಂದ ಲೈಸೆನ್ಸ್ಡ್ ಗನ್ ತೆಗೆದುಕೊಂಡು ಹೋಗಿರುವ ಶಿವಪ್ರಕಾಶ್ ನನ್ನು ಬರೋಬ್ಬರಿ ತಿಂಗಳಾದರೂ ಪೊಲೀಸರಿಗೆ ಬಂಧಿಸೋಕೆ ಆಗಿಲ್ಲ. ಎ5 ಆರೋಪಿ ಆದಿತ್ಯ ಆಳ್ವ ಕೂಡ ಇನ್ನೂ ಸಿಕ್ಕಿಲ್ಲ. ಎಫ್‍ಐಆರ್ ದಾಖಲು ಆಗುವ ಮೊದಲೇ ಆದಿತ್ಯ ಆಳ್ವ ತಲೆಮರೆಸಿಕೊಂಡಿದ್ದನು.

    ಆದಿತ್ಯ ಆಳ್ವ ಬಾಂಬೆಯಲ್ಲಿ ಬಾವ ವಿವೇಕ್ ಒಬೆರಾಯ್ ಆಶ್ರಯದಲ್ಲಿದ್ದಾನೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಇದಲ್ಲದೆ ಇನ್ನಿಬ್ಬರು ಆರೋಪಿಗಳು ಕೂಡ ಪರಾರಿಯಾಗಿದ್ದಾರೆ. ಒಟ್ಟಿನಲ್ಲಿ ಕೇಸ್ ಹಳ್ಳ ಹಿಡಿದಿದೆ ಎಂದು ಜನ  ಹೇಳುತ್ತಿದ್ದು, ತಿಂಗಳು ಕಳೆದರೂ ಆರೋಪಿಗಳನ್ನ ಬಂಧಿಸದೆ ಪೊಲೀಸರು ಕಣ್ಮುಚ್ಚಿ ಕುಳಿತ್ರಾ ಅನ್ನೋ ಅನುಮಾನ ಮೂಡಿದೆ.

  • ಮಂಗ್ಳೂರು ಸಿಸಿಬಿ ಇನ್ಸ್‌ಪೆಕ್ಟರ್ ವರ್ಗಾವಣೆಗೆ ತಡೆ

    ಮಂಗ್ಳೂರು ಸಿಸಿಬಿ ಇನ್ಸ್‌ಪೆಕ್ಟರ್ ವರ್ಗಾವಣೆಗೆ ತಡೆ

    ಮಂಗಳೂರು: ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ವರ್ಗಾವಣೆಯನ್ನು ತಡೆಹಿಡಿಯಲಾಗಿದೆ.

    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ, ನಟಿ ಅನುಶ್ರೀ ಅವರನ್ನು ವಿಚಾರಣೆ ನಡೆಸಿದ್ದ ಇನ್ಸ್‌ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಅವರನ್ನು ಮಂಗಳೂರು ಸಿಸಿಬಿ ಪೊಲೀಸರು ದಿಢೀರ್ ವರ್ಗಾವಣೆ ಮಾಡಿದ್ದರು. ಅಲ್ಲದೆ ಅವರ ಜಾಗಕ್ಕೆ ಉಡುಪಿಯ ಕಾಪು ಠಾಣೆಯ ಸಿಐ ಆಗಿದ್ದ ಮಹೇಶ್ ಪ್ರಸಾದ್ ನೇಮಕ ಮಾಡಲಾಗಿತ್ತು. ಈ ಸುದ್ದಿಯನ್ನು ಪಬ್ಲಿಕ್ ಟಿವಿ ಪ್ರಸಾರ ಮಾಡಿತ್ತು. ಈ ಬೆನ್ನಲ್ಲೇ ಎಚ್ಚೆತ್ತ ಇಲಾಖೆ ಸಿಸಿಬಿ ಇನ್ಸ್‌ಪೆಕ್ಟರ್ ವರ್ಗಾವಣೆಯನ್ನು ತಡೆ ಹಿಡಿದಿದೆ.

    ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಡ್ರಗ್ಸ್ ಪ್ರಕರಣ ಸಂಬಂಧ ಮೊದಲು ಡಾನ್ಸರ್ ಕಿಶೋರ್ ಶೆಟ್ಟಿಯನ್ನು ಬಂಧಿಸಿದ್ದರು. ಈ ವೇಳೆ ಕಿಶೋರ್ ಶೆಟ್ಟಿಯನ್ನು ಬಿಡುಗಡೆ ಮಾಡುವಂತೆ ಶಾಸಕರು ಒತ್ತಡ ಹಾಕಿದ್ದರು ಎನ್ನಲಾಗಿತ್ತು. ಕಿಶೋರ್ ಶೆಟ್ಟಿಯನ್ನು ಪ್ರಕರಣದಿಂದ ಕೈ ಬಿಡುವಂತೆ ಒತ್ತಾಯ ಹೇರಿದ್ದರು. ಆದರೆ ಶಾಸಕನ ಒತ್ತಾಯಕ್ಕೆ ಶಿವಪ್ರಕಾಶ್ ಮಣಿದಿರಲಿಲ್ಲ. ಹೀಗಾಗಿ ಇದೀಗ ಶಿವಪ್ರಕಾಶ್ ನೇತೃತ್ವದಲ್ಲೇ ನಡೆಯುತ್ತಿದ್ದ ಕಂಪ್ಲೀಟ್ ಡ್ರಗ್ಸ್ ಪ್ರಕರಣ ತನಿಖಾ ಉತ್ತುಂಗದಲ್ಲಿದ್ದಾಗ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿತ್ತು.

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್, ಇನ್ಸ್ ಪೆಕ್ಟರ್ ವರ್ಗಾವಣೆ ಹಿಂದೆ ಬೇರೆನೇ ಕಾರಣ ಇದೆ. ಈಗ ಪ್ರಚಾರವಾಗುತ್ತಿರುವ ವಿಷಯ ಸತ್ಯಕ್ಕೆ ದೂರ. ಬಹಳ ವಿಚಾರ ನಮಗೇನೇ ಗೊತ್ತಾಗಲ್ಲ. ಮಾಧ್ಯಮಗಳಲ್ಲಿ ಬಂದ ವಿಚಾರವನ್ನು ನಾವೇ ತನಿಖೆ ಮಾಡಬೇಕಾಗುತ್ತದೆ. ಯಾವ ಅಧಿಕಾರಿಗಳ ಮೇಲೂ ಒತ್ತಡ ಹೇರಲಾಗಿಲ್ಲ ಎಂದು ಹೇಳಿದ್ದಾರೆ.

    ಅಲ್ಲದೇ ಪ್ರಕರಣದಲ್ಲಿ ಚೈನ್ ಲಿಂಕ್ ದೊಡ್ಡದಿದೆ. ಈ ಚೈನ್ ಲಿಂಕ್ ಎಲ್ಲಿ ಕೊನೆಯಾಗುತ್ತೋ ಅಲ್ಲಿ ತನಕ ವಿಚಾರಣೆ ಮಾಡುತ್ತೇವೆ. ಡ್ರಗ್ಸ್ ಪ್ರಕರಣದಲ್ಲಿ ಒಟ್ಟು 6 ಮಂದಿ ಆರೋಪಿಗಳ ಬಂಧನವಾಗಿದೆ. ಪ್ರಕರಣದ ಬಗ್ಗೆ ಪ್ರತಿನಿತ್ಯ ತನಿಖೆ ಮಾಡಲಾಗುತ್ತಿದೆ. ಮಾಹಿತಿ ಬೇಕಾದಲ್ಲಿ ನೋಟಿಸ್ ಮಾಡುತ್ತೇವೆ. ನೋಟಿಸ್ ಕೊಟ್ಟು ಪ್ರಕರಣದ ವಿಚಾರಣೆಯನ್ನು ಮಾಡುತ್ತೇವೆ ಎಂದು ಹೇಳಿದರು.