Tag: drugs

  • ಸರ್ಜಾ ಕುರಿತ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ: ಇಂದ್ರಜಿತ್ ಲಂಕೇಶ್

    ಸರ್ಜಾ ಕುರಿತ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ: ಇಂದ್ರಜಿತ್ ಲಂಕೇಶ್

    – ಯಾರ ಮನಸ್ಸಿಗೂ ನೋವು ಮಾಡಲು ಹೇಳಿಲ್ಲ

    ಬೆಂಗಳೂರು: ಯುವ ನಟ ಚಿರಂಜೀವು ಸರ್ಜಾ ಅವರ ಮರಣೋತ್ತರ ಪರೀಕ್ಷೆ ಕುರಿತು ನಾನು ಹೇಳಿದ್ದ ಹೇಳಿಕೆಯನ್ನು ವಾಪಸ್ ಪಡೆಯುತ್ತಿದ್ದೇನೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.

    ಸಿಸಿಬಿ ವಿಚಾರಣೆ ಬಳಿಕ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಇಂದ್ರಜಿತ್ ಲಂಕೇಶ್ ಅವರು, ಈಗಾಗಲೇ ನಾನು ಚಿರಂಜೀವಿ ಸರ್ಜಾ ಅವರ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಅರ್ಜುನ್ ಸರ್ಜಾ, ಚಿರಂಜೀವಿ ಸರ್ಜಾ ಹಾಗೂ ಸುಂದರ್ ರಾಜ್ ಅವರ ಬಗ್ಗೆ ನೀಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದರು. ಇದನ್ನೂ ಓದಿ: 10, 15 ಮಂದಿ ಹೆಸರನ್ನು ಹೇಳಿದ್ದೇನೆ: ಇಂದ್ರಜಿತ್ ಲಂಕೇಶ್ ಸ್ಫೋಟಕ ಹೇಳಿಕೆ

    ಚಿರಂಜೀವಿ ಸರ್ಜಾ ಯುವ ನಟರಾಗಿದ್ದು, ಆದ್ದರಿಂದಲೇ ನಾನು ಹೇಳಿದ್ದೆ. ಅವರು ಈಗ ಇದ್ದಿದ್ದರೆ ಮೇಘನಾ ಅವರು ಖುಷಿಯಿಂದ ಇರುತ್ತಿದ್ದರು. ಸತ್ತವರ ಬಗ್ಗೆ ಮಾತನಾಡಬಾರದು. ಸರ್ಜಾ ಅವರ ಬಗ್ಗೆ ನನಗೆ ಹೆಚ್ಚು ನೋವಿದೆ. ಆದರೆ ಈ ಮೂಲಕ ಹೇಳುತ್ತಿರುವುದೇನೆಂದರೇ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ. ಡ್ರಗ್ ಮಾಫಿಯಾ ಎಂಬುವುದು ಬಹುದೊಡ್ಡದಾಗಿದೆ. ಅದನ್ನು ಸಂಪೂರ್ಣವಾಗಿ ನಿಲ್ಲಿಸಲು ಆಗದಿದ್ದರೂ ಯುವ ಜನತೆಗೆ ಒಂದು ಸಂದೇಶ ರವಾನೆ ಆಗಲಿ ಎಂಬುವುದಷ್ಟೇ ನನ್ನ ಉದ್ದೇಶ ಎಂದು ಸ್ಪಷ್ಟಪಡಿಸಿದರು.

    ಇಂದ್ರಜಿತ್ ಹೇಳಿದ್ದು ಏನು?
    ಪಬ್ಲಿಕ್ ಟಿವಿಯೊಂದಿಗೆ ಈ ಹಿಂದೆ ಮಾತನಾಡಿದ್ದ ಇಂದ್ರಜಿತ್ ಲಂಕೇಶ್ ಅವರು, ಮೂರನೇ ಪೀಳಿಗೆಯ ಮತ್ತು ಇತ್ತೀಚಿಗೆ ಬಂದ ನಟ-ನಟಿಯರು ಡ್ರಗ್ಸ್ ದಂಧೆಯಲ್ಲಿ ಇದ್ದಾರೆ ಎಂಬುದು ನನಗೆ ಗೊತ್ತಿತ್ತು. ಎಲ್ಲಿ ಎಲ್ಲಿ ಯಾವ ಯಾವ ತೋಟದಲ್ಲಿ, ರೆಸಾರ್ಟಿನಲ್ಲಿ ಮತ್ತು ರಾಜಕಾರಣಿಗಳ ಮನೆಯಲ್ಲಿ ಪಾರ್ಟಿ ಮಾಡುತ್ತಿದ್ದಾರೆ ಎಂಬುದು ಎಲ್ಲ ಗೊತ್ತಿತ್ತು. ನಾವು, ಹಿರಿಯ ನಟರು ಮತ್ತು ನಿರ್ಮಾಪಕರ ಈ ವಿಚಾರದ ಬಗ್ಗೆ ಮಾತನಾಡಿ ಶಾಕ್ ಆಗಿದ್ದು ಉಂಟು. ಇದರ ಬಗ್ಗೆ ಹಿರಿಯ ನಟರಾದ ನನ್ನ ಸ್ನೇಹಿತರು ನೋವನ್ನು ವ್ಯಕ್ತಪಡಿಸಿದ್ದಾರೆ. ನಾನು ಇವತ್ತು ಮೀಡಿಯಾ ಮುಂದೆ ಬರಲು ಕಾರಣ ಸುದ್ದಿವಾಹಿನಿಯಲ್ಲಿ ಇಡೀ ಚಿತ್ರರಂಗವೇ ಡ್ರಗ್ಸ್ ಮಾಫಿಯಾದಲ್ಲಿ ಇದೆ ಎಂದು ತೋರಿಸುತ್ತಿರುವುದು ನನಗೆ ನೋವಾಗಿದೆ. ಆದರೆ ಇತ್ತೀಚಿಗೆ ತೀರಿಕೊಂಡ ನಟನ ಪೋಸ್ಟ್ ಮಾರ್ಟಂ ಆಗಿಲ್ಲ ಏಕೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರಶ್ನಿಸಿದ್ದರು.

  • 10, 15 ಮಂದಿ ಹೆಸರನ್ನು ಹೇಳಿದ್ದೇನೆ: ಇಂದ್ರಜಿತ್ ಲಂಕೇಶ್ ಸ್ಫೋಟಕ ಹೇಳಿಕೆ

    10, 15 ಮಂದಿ ಹೆಸರನ್ನು ಹೇಳಿದ್ದೇನೆ: ಇಂದ್ರಜಿತ್ ಲಂಕೇಶ್ ಸ್ಫೋಟಕ ಹೇಳಿಕೆ

    – ಡ್ರಗ್ಸ್ ದಾಸರಿಗೆ ಶಿಕ್ಷೆ ಆಗಲೇಬೇಕು
    – ಯುವ ನಟ, ನಟಿಯರು ಡ್ರಗ್ಸ್ ರಾಯಭಾರಿಗಳು

    ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಕೇಳಿ ಬಂದಿದ್ದ ಡ್ರಗ್ಸ್ ದಂಧೆಯ ಬಗ್ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಇಂದು ಸಿಸಿಬಿ ಪೊಲೀಸರ ಎದುರು ಹಾಜರಾಗಿ ಸ್ಫೋಟಕ ಮಾಹಿತಿ ನೀಡಿದ್ದಾರೆ.

    ಸಿಸಿಬಿ ವಿಚಾರಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಇಂದ್ರಜಿತ್ ಲಂಕೇಶ್ ಅವರು, ನನಗೆ ತಿಳಿದಿದ್ದ ಮಾಹಿತಿಯ ಬಗ್ಗೆ ಸಾಕ್ಷಿ ಸಮೇತ ಅವರಿಗೆ ಹೇಳಿದ್ದೇನೆ. ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದು, ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ನಾನು ಉತ್ತರಿಸಿದ್ದೇನೆ ಎಂದರು.

    ನಿನ್ನೆ ಮೊನ್ನೆ ಬಂದ ಕೆಲ ನಟ, ನಟಿಯರು ಡ್ರಗ್ಸ್ ಗೆ ರಾಯಭಾರಿಗಳಾಗಿದ್ದಾರೆ. ಇದರಿಂದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಜನತೆ ಹಾನಿಯಾಗಲಿದೆ. ಆದ್ದರಿಂದ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಮಾಹಿತಿ ನೀಡಿದ್ದೇನೆ. ಇದರಿಂದ ಇಂಡಸ್ಟ್ರಿಗೆ ಬರುವ ಮುಂಬರುವ ಯುವ ಪೀಳಿಗೆಗೆ ಕೂಡ ಸಂದೇಶ ರವಾನೆಯಾಗಲಿದೆ ಎಂದರು.

    ವಿಚಾರಣೆ ಸಂದರ್ಭದಲ್ಲಿ ಒಟ್ಟು 10 ರಿಂದ 15 ಮಂದಿ ಹೆಸರು, ಕೆಲ ಸ್ಥಳಗಳ ಮಾಹಿತಿ, ಆ ಬಗ್ಗೆ ಬೇಕಾದ ದಾಖಲೆಗಳನ್ನು ನೀಡಿದ್ದೇನೆ. ಈಗಾಗಲೇ ಪೊಲೀಸರ ಬಳಿಯೂ ಸಾಕಷ್ಟು ಮಾಹಿತಿ ಇದೆ. ಆದರೆ ನಾನು ಈಗ ಅವರ ಹೆಸರು ಬಹಿರಂಗ ಪಡಿಸಿದರೆ ತನಿಖೆಗೆ ತೊಂದರೆ ಆಗಲಿದೆ. ಸುಮಾರು ಐದೂವರೆ ಗಂಟೆ ಅವಧಿಯಲ್ಲಿ ಹಲವು ಸಾಕ್ಷಿ, ದಾಖಲೆ, ವಿಡಿಯೋಗಳನ್ನು ನೀಡಿದ್ದೇನೆ ಎಂದು ತಿಳಿಸಿದರು.

    ತಮ್ಮ ಹೇಳಿಕೆಗಳ ವಿರುದ್ಧ ಕೇಳಿ ಬಂದ ಟೀಕೆಗಳ ಕುರಿತು ಪ್ರತಿಕ್ರಿಯೆ ನೀಡಿದ ಇಂದ್ರಜಿತ್ ಲಂಕೇಶ್ ಅವರು, ಸಮಾಜದಲ್ಲಿ ಹೆಸರು ಮಾಡಿದ ಸಾಹಿತಿಗಳು, ಗಣ್ಯರನ್ನು ಕರೆಯಿಸಿ ಮಾಧ್ಯಮಗಳು ವರದಿ ಮಾಡಬೇಕು. ಅದನ್ನು ಬಿಟ್ಟು ಸುಪಾರಿ ಕೊಟ್ಟ ವ್ಯಕ್ತಿಗಳ ಹೇಳಿಕೆ ಕೇಳಬೇಡಿ ಎಂದು ಸಲಹೆ ನೀಡಿದರು.

    ನಾನು ರಕ್ಷಣೆ ಬೇಕು ಎಂದು ಕೇಳಿಲ್ಲ. ಬೆಂಬಲ ಬೇಕು ಎಂದು ಕೇಳಿದ್ದೇನೆ. ನಾನು ಈಗ ಪೊಲೀಸರಿಗೆ ಮಾಹಿತಿ ನೀಡಿರುವುದರಿಂದ ಅವರಿಗೆ ಖುಷಿ ಆಗಿದೆ. ಶೀಘ್ರವೇ ಅಧಿಕಾರಿಗಳು ಈ ಬಗ್ಗೆ ತನಿಖೆ ಸಮೇತ ಹೆಸರು ಬಹಿರಂಗಪಡಿಸಲಿದ್ದಾರೆ. ನನಗೆ ಯಾವುದೇ ನಟರು, ರಾಜಕಾರಣಿಗಳ ಮಕ್ಕಳ ಬಗ್ಗೆ ಹೆದರಿಕೆ ಇಲ್ಲ. ನಾನು ಈ ಬಗ್ಗೆ ಸಾಕಷ್ಟು ತನಿಖೆ ನಡೆಸಿದ್ದು, ಆ ವೇಳೆ ಲಭ್ಯವಾದ ಕೆಲ ವಿಡಿಯೋ, ದಾಖಲೆಗಳನ್ನು ನೀಡಿದ್ದೇನೆ. ನನಗೆ ಯಾರು ಒತ್ತಡ ಹಾಕುತ್ತಿಲ್ಲ. ಹಲವು ನಿರ್ಮಾಪಕರು, ನಟರು, ರಾಜಕಾರಣಿಗಳು, ಸಾಮಾನ್ಯ ಜನರು ನನಗೆ ಬೆಂಬಲ ನೀಡಿದ್ದಾರೆ ಅವರಿಗೆ ಧನ್ಯವಾದ ಎಂದರು.

  • ಮೊದಲು ಡ್ರಗ್ಸ್ ಮಾಫಿಯಾದ ಬುಡ ಕಿತ್ತು ಬಿಸಾಕಬೇಕು: ನಟ ಜೆಕೆ

    ಮೊದಲು ಡ್ರಗ್ಸ್ ಮಾಫಿಯಾದ ಬುಡ ಕಿತ್ತು ಬಿಸಾಕಬೇಕು: ನಟ ಜೆಕೆ

    – ಸಾಕ್ಷ್ಯ ಇದ್ದು ಮಾತನಾಡಬೇಕು

    ಬೆಂಗಳೂರು: ಯಾರೋ ಡ್ರಗ್ಸ್ ತೆಗೊಂತಿದ್ದಾರೆ ಎಂದು ಅವರನ್ನು ಒಳಗೆ ಹಾಕಿ, ಅವರ ಜೀವನ ಹಾಳು ಮಾಡುವ ಬದಲು ಅದರ ಮೂಲವನ್ನು ಕಂಡುಹಿಡಿಯಬೇಕು. ಈ ಮೂಲಕ ಡ್ರಗ್ಸ್ ಮಾಫಿಯಾದ ಬುಡ ಸಮೇತ ಕಿತ್ತು ಬಿಸಾಕಬೇಕು ಎಂದು ನಟ ಜೆಕೆ ಹೇಳಿದ್ದಾರೆ.

    ನಗರದಲ್ಲಿ ಇಂದು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಡ್ರಗ್ಸ್ ಮಾಫಿಯಾದಲ್ಲಿ ಸಿಲುಕಿಕೊಂಡವರ ಹೆಸರು ಬಹಿರಂಗಪಡಿಸಿದರೆ ಒಳ್ಳೆಯದು. ಈ ಮಾಫಿಯಾದಲ್ಲಿ ಯಾರೆಲ್ಲ ಇದ್ದಾರೆ ಹಾಗೂ ಅವರಿಗೆ ಎಲ್ಲಿಂದ ಡ್ರಗ್ಸ್ ಬರ್ತಾ ಇದೆ ಎಂಬುದನ್ನು ಕಂಡು ಹಿಡಿದರೆ ಬಹಳ ಒಳ್ಳೆಯದು. ಯಾಕೆಂದರೆ ಯವ ಪೀಳಿಗೆ ಈ ದೇಶವನ್ನು ಒಳ್ಳೆಯ ರೀತಿಯಲ್ಲಿ ಒಂದು ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತದೆ. ದೇಶದ ಬೆಳವಣಿಗೆಗೆ ಯುವ ಪೀಳಿಗೆ ಪ್ರಮುಖ ಪಾತ್ರ ವಹಿಸುತ್ತದೆ. ಅವರನ್ನು ಡ್ರಗ್ಸ್ ತಪ್ಪು ದಾರಿಗೆ ಎಳೆಯುತ್ತಿದ್ದು, ಅದನ್ನು ನಿಲ್ಲಿಸಬೇಕಾಗಿದೆ ಎಂದರು.

    ಯುವನಟ ಸಾವನ್ನಪ್ಪಿದ್ದಾರೆ ಎಂಬ ಇಂದ್ರಜಿತ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಂಪೂರ್ಣ ಮಾಹಿತಿ ಇಟ್ಟುಕೊಂಡೇ ಯಾವತ್ತೂ ಮಾತನಾಡಬೇಕು. ಅವರು ಯಾವ ರೀತಿಯಲ್ಲಿ ಮಾತನಾಡಿದ್ದಾರೆ ಹಾಗೂ ಅವರಲ್ಲಿ ಈ ಬಗ್ಗೆ ಎಷ್ಟು ಸಾಕ್ಷ್ಯ ಇದೆ ಎಂದು ನನಗೆ ಗೊತ್ತಿಲ್ಲ. ಹೀಗಾಗಿ ನನ್ನ ಪ್ರಕಾರ ಇದು ತಪ್ಪು. ಯಾಕೆಂದರೆ ಈ ಬಗ್ಗೆ ತನಿಖೆ ಮಾಡಲು ಪೊಲೀಸರು, ಸಿಬಿಐ ಅವರು ಇದ್ದಾರೆ. ಅವರು ತನಿಖೆ ಮಾಡಿ ಅದಕ್ಕೊಂದು ಸಾರಾಂಶ ಕೊಟ್ಟ ಬಳಿಕ ಮಾತನಾಡಿದರೆ ಒಳ್ಳೆಯದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಇಂದ್ರಜಿತ್ ಅವರು ಇಷ್ಟೊಂದು ಧೈರ್ಯದಿಂದ ಹೇಳುತ್ತಿದ್ದಾರೆ ಅಂದರೆ ಅವರಿಗೆ ತಿಳಿದಿದೆ ಅಂತಾನೇ ಹೇಳಬಹುದು. ಈ ಬಗ್ಗೆ ನಮಗೆ ಗೊತ್ತಿಲ್ಲ. ಆದರೆ ಇದರಿಂದ ಸಮಾಜಕ್ಕೆ ಒಳ್ಳೆಯದಾಗುವುದಿದ್ದರೆ ಇದೊಂದು ಒಳ್ಳೆಯ ಹೆಜ್ಜೆ ಎಂದು ತಿಳಿಸಿದರು.

    10 ವರ್ಷದಿಂದ ಚಿತ್ರರಂಗದಲ್ಲಿ ಇದ್ದೀನಿ ಅಂದರೆ ಅದರ ಮೇಲೆ ಇರುವ ಪ್ರೀತಿಯೇ ಕಾರಣ. ಸ್ಯಾಂಡಲ್‍ವುಡ್ ನನಗೆ ಬೆಳೆಯಲು ಅವಕಾಶ ಕೊಟ್ಟಿದೆ. ಎಲ್ಲಾ ಕೆರಿಯರ್ ನಲ್ಲಿ ಏರಿಳಿತಗಳು ಇವೆ. ತುಂಬಾ ಅಡಚಣೆಗಳು ಬರುತ್ತಾನೇ ಇರುತ್ತವೆ. ಅದನ್ನು ಎದುರಿಸಿಕೊಂಡು ಹೋಗುವುದೇ ಜೀವನ ಎಂದು ಹೇಳಿದರು.

    ಇದೂವರೆಗೂ ನಾವು ಬರೀ ಟಿವಿ ಹಾಗೂ ಸಿನಿಮಾಗಳಲ್ಲಿ ಡ್ರಗ್ಸ್ ಮಾಫಿಯಾ ಬಗ್ಗೆ ನೋಡುತ್ತಿದ್ವಿ. ಆವಾಗ ಅನ್ನಿಸುತ್ತಿತ್ತು ಈ ರೀತಿ ಆಗುತ್ತಾ..? ಯಾಕೆ ಜನ ತಗೊತ್ತಿದ್ದಾರೆ?. ಯಾವ ಕಾರಣಕ್ಕೆ ಡ್ರಗ್ಸ್ ಸೇವನೆ ಮಾಡುತ್ತಾರೆ?. ಅದರಿಂದ ಏನು ಸಿಗುತ್ತೆ ಎಂದು ಯಾವಾಗಲೂ ಯೋಚನೆ ಮಾಡುತ್ತಿದ್ದೆವು. ನನ್ನ ಕಾಲೇಜು ದಿನಗಳಿಂದಲೂ ನಾನು ನೋಡ್ತಾ ಇದ್ದೆ. ಆದರೆ ಯಾವತ್ತೂ ಇದರ ಬಗ್ಗೆ ಆಸಕ್ತಿ ಬಂದಿಲ್ಲ. ಬರೀ ಫಿಟ್ ನೆಸ್ ಬಗ್ಗೆನೇ ಹೆಚ್ಚು ಆಸಕ್ತಿ ಹೊಂದಿದ್ದೆ. ಆದರೆ ಇದು ಚಿತ್ರರಂಗದಲ್ಲಿ ಆಗುತ್ತಿದೆ ಅಂದರೆ ನಿಜಕ್ಕೂ ಬೇಸರವಾಗುತ್ತಿದ್ದು, ಇದು ಆಗಬಾರದು. ಇದನ್ನು ನಿಲ್ಲಿಸಲೇ ಬೇಕು ಎಂದರು.

    ಇದು ಕೇವಲ ಸ್ಯಾಂಡಲ್ ವುಡ್ ಮಾತ್ರವಲ್ಲ, ಇಡೀ ವಿಶ್ವದಲ್ಲೇ ನಡೆಯುತ್ತಿರೋ ಜಾಲವಾಗಿದೆ. ನಮ್ಮ ಸ್ಯಾಂಡಲ್ ವುಡ್ ನಲ್ಲಿ ಈ ರೀತಿ ಆಗ್ತಿದೆ ಅಂದಾಗ ತುಂಬಾನೇ ಬೇಜಾರಾಗುತ್ತದೆ. ಹೀಗಿರುವಾಗ ಈ ಮಾಫಿಯಾದಲ್ಲಿ ಯಾರೂ ಭಾಗಿಯಾಗಿಲ್ಲ ಅಂತ ಹೇಳಿದರೆ ನಮಗೆ ತುಂಬಾನೇ ಖುಷಿಯಾಗುತ್ತದೆ. ಯಾಕಂದರೆ ಸ್ಯಾಂಡಲ್ ವುಡ್ ಅಂದರೆ ನಮಗೆ ಒಂದು ಕುಟುಂಬ ಇದ್ದಂತೆ ಎಂದು ನುಡಿದರು.

     

  • ಇಂದ್ರಜಿತ್ ಹೇಳಿಕೆಯಿಂದ ನನ್ನ ಮದುವೆಗೆ ತೊಂದರೆಯಾಗಿದೆ: ಯುವ ನಟ ಪವನ್ ಶೌರ್ಯ

    ಇಂದ್ರಜಿತ್ ಹೇಳಿಕೆಯಿಂದ ನನ್ನ ಮದುವೆಗೆ ತೊಂದರೆಯಾಗಿದೆ: ಯುವ ನಟ ಪವನ್ ಶೌರ್ಯ

    ಬೆಂಗಳೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಹೇಳಿಕೆಯಿಂದ ನನ್ನ ಮದುವೆಗೆ ತೊಂದರೆಯಾಗಿದೆ ಎಂದು ಯುವ ನಟ ಪವನ್ ಶೌರ್ಯ ಆರೋಪ ಮಾಡಿದ್ದಾರೆ.

    ಸ್ಯಾಂಡಲ್‍ವುಡ್ ಮೂರನೇ ಪೀಳಿಗೆಯ ಯುವ ನಟ-ನಟಿಯರು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಶನಿವಾರ ಇಂದ್ರಜಿತ್ ಲಂಕೇಶ್ ಅವರು ಬಹಿರಂಗ ಆರೋಪ ಮಾಡಿದ್ದರು. ಈಗ ಇದೇ ವಿಚಾರ ಬಹಳ ದೊಡ್ಡ ಮಟ್ಟಕ್ಕೆ ಚರ್ಚೆಯಾಗುತ್ತಿದೆ. ಲಂಕೇಶ್ ಅವರ ಈ ಹೇಳಿಕೆ ನಮಗೆ ಸಮಸ್ಯೆಯನ್ನು ಹುಟ್ಟುಹಾಕಿದೆ ಎಂದು ಪವನ್ ಶೌರ್ಯ ಹೇಳಿದ್ದಾರೆ.

    ಮುಂದಿನ ತಿಂಗಳು ನನ್ನ ಮದುವೆ ಡೇಟ್ ಫಿಕ್ಸ್ ಆಗಿದೆ. ಈಗ ಟಿವಿಯಲ್ಲಿ ಎಲ್ಲೇ ನೋಡಿದರೂ ಸ್ಯಾಂಡಲ್‍ವುಡ್ ಡ್ರಗ್ಸ್ ಸ್ಟೋರಿಯನ್ನೇ ಹಾಕುತ್ತಿದ್ದಾರೆ. ಅದರಲ್ಲೂ ಯುವ ನಟರು ಎಂದು ಹೇಳುತ್ತಿದ್ದಾರೆ. ಇದರಿಂದ ನನ್ನ ಮದುವೆಗೂ ತೊಂದರೆಯಾಗಿದೆ. ನಮ್ಮ ಭಾವಿ ಪತ್ನಿ ಮನೆಯವರು ತುಂಬ ಸೂಕ್ಷ್ಮ ಅವರು ಹೆದರಿಕೊಳ್ಳುತ್ತಿದ್ದಾರೆ. ಮದುವೆಯೇನು ಕ್ಯಾನ್ಸಲ್ ಆಗಿಲ್ಲ. ಅದರೂ ಅವರು ಟಿವಿ ನೋಡಿ ಭಯಪಡುತ್ತಿದ್ದಾರೆ ಎಂದು ಪವನ್ ಶೌರ್ಯ ಅವರು ತಿಳಿಸಿದ್ದಾರೆ.

    ನಮ್ಮ ಚಿತ್ರರಂಗದಲ್ಲಿ ಯಾರದರೂ ಡ್ರಗ್ಸ್ ವ್ಯವಹಾರ ಮಾಡುತ್ತಿದ್ದರೆ ಅವರನ್ನು ಹಿಡಿಯಲಿ ಶಿಕ್ಷೆ ಕೊಡಿಸಲಿ. ಅದನ್ನು ಬಿಟ್ಟು ನಮ್ಮವರ ಬಗ್ಗೆ ನಾವೇ ಈ ರೀತಿ ಹೇಳಬಾರದು. ಡ್ರಗ್ಸ್ ಬಗ್ಗೆ ತನಿಖೆ ಮಾಡಲು ಪೊಲೀಸ್, ಸಿಸಿಬಿ ಇಲಾಖೆಗೆಳು ಇವೆ. ಅವರು ಮಾಡಬೇಕು ಇಂದ್ರಜಿತ್ ಅವರು ಈ ರೀತಿ ಹೇಳಿದ್ದು, ಸರಿಯಲ್ಲ. ಇದರಿಂದ ನಮ್ಮ ಮನೆಯಲ್ಲಿ ಶೂಟಿಂಗ್‍ಗೆ ಹೋಗಬೇಡ ಎನ್ನುತ್ತಿದ್ದಾರೆ. ನನ್ನಂತೆಯೇ ಹಲವಾರು ಯುವ ನಟರಿಕೆ ಈ ಹೇಳಿಕೆಯಿಂದ ತೊಂದರೆಯಾಗಿದೆ ಎಂದು ಪವನ್ ಶೌರ್ಯ ಹೇಳಿದ್ದಾರೆ.

    ಹಾಲು ತುಪ್ಪ, ಉಡುಂಬಾ, ಗೂಳಿಹಟ್ಟಿ ಸಿನಿಮಾಗಳಲ್ಲಿ ಪವನ್ ಶೌರ್ಯ ನಾಯಕನಾಗಿ ನಟಿಸಿದ್ದಾರೆ.

  • ಸಹನಟರು ಡ್ರಗ್ಸ್ ತೆಗೆದುಕೊಳ್ಳುವುದನ್ನು ನೋಡಿದ್ದೇನೆ: ಆದಿ ಲೋಕೇಶ್

    ಸಹನಟರು ಡ್ರಗ್ಸ್ ತೆಗೆದುಕೊಳ್ಳುವುದನ್ನು ನೋಡಿದ್ದೇನೆ: ಆದಿ ಲೋಕೇಶ್

    ಬೆಂಗಳೂರು: ನಟರು ಡ್ರಗ್ಸ್ ತೆಗೆದುಕೊಳ್ಳುವುದನ್ನು ನಾನು ಕಣ್ಣಾರೆ ನೋಡಿದ್ದೇನೆ ಎಂದು ನಟ ಆದಿ ಲೋಕೇಶ್ ಅವರು ಹೇಳುವ ಮೂಲಕ ಹೊಸ ಬಂಬ್ ಸಿಡಿಸಿದ್ದಾರೆ.

    ಚಂದನವನದ ತಾರೆಯರು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದಾರೆ ಎಂಬ ಸುದ್ದಿ ದಿನೇ ದಿನೇ ಹೊಸ ರೂಪ ಪಡೆದುಕೊಳ್ಳುತ್ತಿದೆ. ಇಂದು ಈ ಬಗ್ಗೆ ಮಾತನಾಡಿರುವ ಆದಿ ಲೋಕೇಶ್ ಅವರು, ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ತೆಗೆದುಕೊಳ್ಳುವ ಯುವನಟರ ಬಗ್ಗೆ ಸ್ಫೋಟಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

    ಡ್ರಗ್ಸ್ ವಿಚಾರದಲ್ಲಿ ಕೇವಲ ಸ್ಯಾಂಡಲ್‍ವುಡ್ ಅನ್ನು ಟಾರ್ಗೆಟ್ ಮಡೋದು ತಪ್ಪು. ಡ್ರಗ್ಸ್ ಎಲ್ಲಿಂದ ಬರುತ್ತಿದೆ, ಯಾರು ತರುತ್ತಿದ್ದಾರೆ ಅವರನ್ನು ಹಿಡಿದುಕೊಳ್ಳಬೇಕು. ಕೆಲವರು ಸಣ್ಣಗಾಗಲು, ದಪ್ಪಗಾಗಲು ಸ್ಟಿರಾಯ್ಡ್ ತೆಗೆದುಕೊಳ್ಳುತ್ತಾರೆ. ನಾನಂತೂ ಇವತ್ತಿನವರೆಗೂ ಯಾವ ರೇವ್ ಪಾರ್ಟಿಗೆ ಹೋಗಿಲ್ಲ. ನಾನು ಕೆಲ ನೈತಿಕ ನಿಯಮಗಳನ್ನು ಅಳವಡಿಸಿಕೊಂಡು ಜೀವನ ಮಾಡುತ್ತಿದ್ದೇನೆ ಎಂದು ಹೇಳಿದರು. ಇದನ್ನು ಓದಿ: ಸಿಕ್ಸ್ ಪ್ಯಾಕ್ ಮಾಡೋಕೆ ಹೋಗಿ ಪ್ರಾಣ ತೆತ್ತ ಬೆಂಗಳೂರು ಯುವಕ

    2001ರಲ್ಲಿ ನಾನು ಚಿತ್ರರಂಗಕ್ಕೆ ಬಂದಿದ್ದು, 100ಕ್ಕೂ ಹೆಚ್ಚಿನ ಸಿನಿಮಾ ಮಾಡಿದ್ದೇನೆ. ಕೆಲ ಯುವ ನಟರು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದಾರೆ. ಡ್ರಗ್ಸ್ ತೆಗೆದುಕೊಂಡರೆ ಸ್ಮೆಲ್ ಬರಲ್ಲ, ಅವರದೇ ಲೋಕದಲ್ಲಿ ಇರುತ್ತಾರೆ. ಇದನ್ನು ನಾವು ನೋಡಿದ್ದೇವೆ. ಶೂಟಿಂಗ್ ಸಮಯದಲ್ಲಿ ನನ್ನ ಸಹಾಕಲಾವಿದರು ಡ್ರಗ್ಸ್ ತೆಗೆದುಕೊಳ್ಳುವುದನ್ನು ನಾನು ನೋಡಿದ್ದೇನೆ. ಎಲ್ಲ ಕಡೆ ಎಲ್ಲ ಬಗೆಯ ವ್ಯವಹಾರಗಳೂ ನಡೆಯುತ್ತವೆ. ಅದಕ್ಕಂತಲೇ ಕೆಲ ಜನರಿದ್ದಾರೆ ಎಂದು ತಿಳಿಸಿದರು.

  • ಮಾದಕ ವಸ್ತು ಜಾಲವನ್ನು ಸರ್ಕಾರ ಮಟ್ಟ ಹಾಕಬೇಕು – ದಿನೇಶ್ ಗುಂಡೂರಾವ್

    ಮಾದಕ ವಸ್ತು ಜಾಲವನ್ನು ಸರ್ಕಾರ ಮಟ್ಟ ಹಾಕಬೇಕು – ದಿನೇಶ್ ಗುಂಡೂರಾವ್

    ಬೆಂಗಳೂರು: ಮಾದಕ ವ್ಯಸನಕ್ಕೆ ಅತಿ ಹೆಚ್ಚು ಬಲಿಯಾಗುವುದೇ ಯುವಕರು ಎಂದು ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಟ್ವೀಟ್ ಮಾಡಿದ್ದಾರೆ.

    ಕಳೆದ ಗುರುವಾರ ಮೂವರ ಹೈಟೆಕ್ ಡ್ರಗ್ ಪೆಡ್ಲರ್ ಗಳನ್ನು ಎನ್‍ಸಿಬಿ ಬೆಂಗಳೂರಿನಲ್ಲಿ ಬಂಧಿಸಿತ್ತು. ಈ ಮೂವರು ನೀಡಿದ ಮಾಹಿತಿಯಂತೆ ಡ್ರಗ್ಸ್ ದಂಧೆಯಲ್ಲಿ ಕೆಲ ಕನ್ನಡ ನಟ-ನಟಿಯರು ಮತ್ತು ಸಂಗೀತ ನಿರ್ದೇಶಕರು ಇರುವುದು ಗೊತ್ತಾಗಿತ್ತು. ಈಗ ಈ ವಿಚಾರದ ಬಗ್ಗೆ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ಡ್ರಗ್ ಪೆಡ್ಲರ್ ಗಳ ಜೊತೆ ಕನ್ನಡ ಚಿತ್ರರಂಗದ ಕೆಲವರ ನಂಟು ಆಘಾತಕಾರಿ ಎಂದಿದ್ದಾರೆ.

    ರಾಜ್ಯದಲ್ಲಿ ಮಾದಕ ದ್ರವ್ಯದ ದೊಡ್ಡ ಜಾಲವೇ ಪತ್ತೆಯಾಗಿದೆ. ಡ್ರಗ್ ಪೆಡ್ಲರ್ ಗಳ ಜೊತೆ ಕನ್ನಡ ಚಿತ್ರರಂಗದ ಕೆಲವರ ನಂಟು ಇದೆ ಎಂಬ ಮಾತು ಆಘಾತಕಾರಿ. ಮಾದಕ ವ್ಯಸನಕ್ಕೆ ಅತಿ ಹೆಚ್ಚು ಬಲಿಯಾಗುವುದೇ ಯುವ ಸಮುದಾಯ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮಾದಕ ವಸ್ತು ಜಾಲವನ್ನು ಮಟ್ಟ ಹಾಕಬೇಕು ಎಂದು ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ.

    ಚಂದನವದನದಲ್ಲಿ ಡ್ರಗ್ಸ್ ಘಾಟು ಜೋರಾಗಿದೆ. ಇದರ ನಡುವೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಚಿತ್ರರಂಗದಲ್ಲಿ ಇರುವ ಕೆಲವರು ನಮ್ಮಲ್ಲಿ ಕಲಾವಿದರು ಡ್ರಗ್ಸ್ ತೆಗೆದುಕೊಳ್ಳವ ಪದ್ಧತಿ ಇಲ್ಲ ಎನ್ನುತ್ತಿದ್ದಾರೆ. ಆದರೆ ನಟ-ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು, ನಮ್ಮ ಕನ್ನಡ ಚಿತ್ರರಂಗದ ಮೂರನೇ ಪೀಳಿಗೆಯ ಮತ್ತು ಯುವ ನಟ-ನಟಿಯರು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಬಹಿರಂಗವಾಗಿ ಆರೋಪ ಮಾಡಿದ್ದಾರೆ.

  • ಬೆಂಗಳೂರಲ್ಲಿ ಡ್ರಗ್ಸ್ ಪತ್ತೆ ಸ್ಯಾಂಪಲ್ ಅಷ್ಟೇ, ಜಾಲ ಇನ್ನೂ ದೊಡ್ಡದಿದೆ- ಸಚಿವ ನಾಗೇಶ್

    ಬೆಂಗಳೂರಲ್ಲಿ ಡ್ರಗ್ಸ್ ಪತ್ತೆ ಸ್ಯಾಂಪಲ್ ಅಷ್ಟೇ, ಜಾಲ ಇನ್ನೂ ದೊಡ್ಡದಿದೆ- ಸಚಿವ ನಾಗೇಶ್

    – ಯಾವ ಅಪಾರ್ಟ್‍ಮೆಂಟ್‍ನಲ್ಲಿ ಏನಾಗುತ್ತೋ ಗೊತ್ತಾಗಲ್ಲ

    ಬೆಳಗಾವಿ: ಬೆಂಗಳೂರಿನಲ್ಲಿ ಡ್ರಗ್ಸ್ ಪತ್ತೆಯಾಗಿದ್ದು ಕೇವಲ ಸ್ಯಾಂಪಲ್ ಅಷ್ಟೆ, ಜಾಲ ಇನ್ನೂ ದೊಡ್ಡದಿದೆ ಎಂದು ಅಬಕಾರಿ ಸಚಿವ ಎಚ್.ನಾಗೇಶ್ ತಿಳಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರ ಗಮನಕ್ಕೆ ಬಂದ ತಕ್ಷಣ ರೇಡ್ ಮಾಡಿದ್ದಾರೆ. ಬೆಂಗಳೂರಿನಲ್ಲಿ 1.30 ಕೋಟಿ ಜನಸಂಖ್ಯೆ ಇದೆ. ಯಾವ ಏರಿಯಾ, ಅಪಾರ್ಟ್‍ಮೆಂಟ್ ನಲ್ಲಿ ಏನಾಗುತ್ತೆ ಗೊತ್ತಾಗಲ್ಲ. ಹೀಗಾಗಿ ಅದಕ್ಕೆ ಕಣ್ಗಾವಲು ಇಡಬೇಕು. ಇಂದು ನಡೆಯುತ್ತಿರುವ ಸಭೆಯಲ್ಲಿ ಇದನ್ನು ಹೈಲೇಟ್ ಮಾಡುತ್ತೇನೆ. ಇಂದು ಸಭೆಯಲ್ಲಿ ನೀಡುವ ನಿರ್ದೇಶನ ಇಡೀ ರಾಜ್ಯಕ್ಕೆ ರವಾನೆಯಾಗಬೇಕು ಎಂದು ಹೇಳಿದ್ದಾರೆ.

    ಡ್ರಗ್ಸ್ ದಂಧೆ ತಡೆಯದಿದ್ದರೆ ಅಮಾಯಕರ ಬಲಿಯಾಗಿ, ಜೀವನ ಹಾಳಾಗುತ್ತೆ. ಶಾಲೆಗೆ ಹೋಗುವ ಮಕ್ಕಳು, ಅಮಾಯಕರ ಜೀವನ ಹಾಳಾಗುತ್ತೆ. ಆರೋಗ್ಯ, ಸಮಾಜದ ದೃಷ್ಟಿಯಲ್ಲಿ ಇಲಾಖೆ ಹೆಸರು ಹಾಳಾಗಬಾರದು. ಈ ನಿಟ್ಟಿನಲ್ಲಿ ಪೊಲೀಸ್ ಹಾಗೂ ಅಬಕಾರಿ ಇಲಾಖೆ ಒಟ್ಟಾಗಿ ಕಾರ್ಯಾಚರಣೆ ಮಾಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಬೆಂಗಳೂರಿನಲ್ಲಿ ಡ್ರಗ್ಸ್ ಅಡ್ಡೆಗಳ ಮೇಲೆ ದಾಳಿ ಮಾಡುವ ಮುನ್ಸೂಚನೆಯನ್ನು ಸಚಿವರು ಕೊಟ್ಟಿದ್ದಾರೆ.

    ಡ್ರಗ್ಸ್ ಜಾಲದಲ್ಲಿ ಚಿತ್ರರಂಗ ಹಾಗೂ ರಾಜಕಾರಣಿಗಳ ಮಕ್ಕಳ ಹೆಸರು ಕೇಳಿ ಬರುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಅದರ ದರ ಹೆಚ್ಚಿರುವುದರಿಂದ ದುಡ್ಡು ಇದ್ದವರು ಬಲೆಗೆ ಬೀಳುತ್ತಾರೆ. ದುಡ್ಡಿದ್ದವರು, ಸ್ಥಿತಿವಂತರು ಡ್ರಗ್ಸ್ ಜಾಲದ ಬಲೆಗೆ ಬೀಳುತ್ತಿದ್ದಾರೆ. ಶಾಲಾ, ಕಾಲೇಜುಗಳ ಆರಂಭ ಬಳಿಕ ದಂಧೇಕೋರರ ಚಲನವಲನ ಪರಿಶೀಲಿಸುತ್ತೇವೆ. ಶಾಲಾ ಕಾಲೇಜುಗಳ ಕಾಂಪೌಂಡ್‍ಗಳ ಹಿಂದೆ ದಂಧೆ ನಡೆಯುತ್ತೆ ಎಂದು ಗೊತ್ತಾಗಿದೆ. ಮಫ್ತಿಯಲ್ಲಿ ಸಿಬ್ಬಂದಿ ಕಳುಹಿಸಿ ಪರೀಕ್ಷಿಸುತ್ತೇವೆ ಎಂದರು.

    ಬೆಳಗಾವಿಯಲ್ಲಿ ಶೇ.50ರಷ್ಟು ಮದ್ಯದಂಗಡಿಗಳು ಮಾತ್ರ ತೆರೆದಿವೆ. ಆದರೂ ಕಲೆಕ್ಷನ್ ಚೆನ್ನಾಗಿದೆ. ಎಣ್ಣೆ ವಹಿವಾಟು ಚೆನ್ನಾಗಿ ಆಗುತ್ತಿದೆ ಎಂದು ಅಬಕಾರಿ ಸಚಿವ ಹೆಚ್.ನಾಗೇಶ್ ತಿಳಿಸಿದ್ದಾರೆ.

  • ಈ ಹಿಂದೆ ತೀರಿಕೊಂಡ ನಟನ ಪೋಸ್ಟ್ ಮಾರ್ಟಂ ಆಗಿಲ್ಲ ಏಕೆ?: ಇಂದ್ರಜಿತ್

    ಈ ಹಿಂದೆ ತೀರಿಕೊಂಡ ನಟನ ಪೋಸ್ಟ್ ಮಾರ್ಟಂ ಆಗಿಲ್ಲ ಏಕೆ?: ಇಂದ್ರಜಿತ್

    – ಚಿತ್ರರಂಗದ ದೊಡ್ಡವರ ಮಕ್ಕಳು ಡ್ರಗ್ಸ್ ದಂಧೆಯಲ್ಲಿ ಭಾಗಿ
    – ಪೊಲೀಸರು ಕೇಳಿದರೆ ಹೆಸರನ್ನು ಬಹಿರಂಗ ಪಡಿಸುವೆ

    ಬೆಂಗಳೂರು: ಮೂರನೇ ಪೀಳಿಗೆಯ ಮತ್ತು ಇತ್ತೀಚಿಗೆ ಬಂದ ನಟ-ನಟಿಯರು ಡ್ರಗ್ಸ್ ದಂಧೆಯಲ್ಲಿ ಇದ್ದಾರೆ ಎಂಬುದು ನನಗೆ ಗೊತ್ತಿತ್ತು. ಎಲ್ಲಿ ಎಲ್ಲಿ ಯಾವ ಯಾವ ತೋಟದಲ್ಲಿ, ರೆಸಾರ್ಟಿನಲ್ಲಿ ಮತ್ತು ರಾಜಕಾರಣಿಗಳ ಮನೆಯಲ್ಲಿ ಪಾರ್ಟಿ ಮಾಡುತ್ತಿದ್ದಾರೆ ಎಂಬುದು ಎಲ್ಲ ಗೊತ್ತಿತ್ತು ಎಂದು ನಟ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.

    ಇಂದು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾವು, ಹಿರಿಯ ನಟರು ಮತ್ತು ನಿರ್ಮಾಪಕರ ಈ ವಿಚಾರದ ಬಗ್ಗೆ ಮಾತನಾಡಿ ಶಾಕ್ ಆಗಿದ್ದು ಉಂಟು. ಇದರ ಬಗ್ಗೆ ಹಿರಿಯ ನಟರಾದ ನನ್ನ ಸ್ನೇಹಿತರು ನೋವನ್ನು ವ್ಯಕ್ತಪಡಿಸಿದ್ದಾರೆ. ನಾನು ಇವತ್ತು ಮೀಡಿಯಾ ಮುಂದೆ ಬರಲು ಕಾರಣ ಸುದ್ದಿವಾಹಿನಿಯಲ್ಲಿ ಇಡೀ ಚಿತ್ರರಂಗವೇ ಡ್ರಗ್ಸ್ ಮಾಫಿಯಾದಲ್ಲಿ ಇದೆ ಎಂದು ತೋರಿಸುತ್ತಿರುವುದು ನನಗೆ ನೋವಾಗಿದೆ ಎಂದರು.

    ಇದರಲ್ಲಿ ಪೂರ್ತಿ ಚಿತ್ರರಂಗವಿಲ್ಲ. ಇದರಲಿಲ್ಲ ಮೂರನೇ ಪೀಳಿಗೆಯ ನಟ-ನಟಿಯರು, ಹಿರಿಯ ನಿರ್ದೇಶಕರ ಮಕ್ಕಳು, ಹಿರಿಯ ನಟರ ಮಕ್ಕಳು ಮತ್ತು ರಾಜಕಾರಣಿಗಳ ಮಕ್ಕಳು ದುಡ್ಡು ಇರುವವರು ಭಾಗಿಯಾಗಿದ್ದಾರೆ. ದೊಡ್ಡ ದೊಡ್ಡ ಶ್ರೀಮಂತರು ಬೆನ್ಜ್, ಜಾಗ್ವಾರ್ ಕಾರಿನಲ್ಲಿ ಹುಡುಗಿಯರನ್ನು ಕರೆತಂದು ಈ ರೀತಿ ಮಾಡುತ್ತಿದ್ದಾರೆ. ಇಡೀ ಚಿತ್ರರಂಗ ಇದರಲ್ಲಿ ಭಾಗಿಯಾಗಿಲ್ಲ. ಇದನ್ನು ಮೀಡಿಯಾ ತೋರಿಸಬೇಕು. ಇತ್ತೀಚೆಗೆ ಖ್ಯಾತಿ ಪಡೆದ ನಟಿಯರು, ಈಗ ಬೆಳೆಯುತ್ತಿರುವ ಕೆಲ ನಟಿಯರು ಪಾರ್ಟಿಯಲ್ಲಿ ಮಾತ್ರವಲ್ಲದೇ ಶೂಟಿಂಗ್ ಸಮಯದಲ್ಲೂ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪ ಮಾಡಿದರು.

    ಬಾಲಿವುಡ್ ಮಾದರಿಯಲ್ಲಿ ಇಲ್ಲೂ ಕೂಡ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದಾರೆ. ಪ್ರಚಾರ, ಮೋಜು, ನಶೆಗಾಗಿ ಮತ್ತು ಸಿನಿಮಾ ಅವಕಾಶಕ್ಕಾಗಿ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದಾರೆ. ಇದರ ನಡುವೆ ಹನಿಟ್ಯ್ರಾಪ್ ಕೂಡ ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದೆ ಬೆಂಗಳೂರು ಕಮಿಷನರ್ ಕೂಡ ಇದರ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಕೆಲ ನಟಿಯರು ಏಕಾಏಕಿ ರಾತ್ರೋ ರಾತ್ರಿ ಜಾಗ್ವಾರ್ ಕಾರು, ಮನೆ ಎಲ್ಲವನ್ನು ಖರೀದಿಸಿದ್ದಾರೆ ಎಂದು ಹೇಳಿದ್ದರು. ಆದರೆ ಅವರ ಹೆಸರು ಹೇಳಲಿಲ್ಲ. ಅವರಿಗೆ ಅವರ ಹೆಸರು ಗೊತ್ತಿದೆ. ತನಿಖೆ ಆಗಿದೆ ಆದರೆ ಬಹಿರಂಗಪಡಿಸಿಲ್ಲ. ಇದರಲ್ಲಿ ರಾಜಕೀಯ ಒತ್ತಡವಿದೆ ಎಂದು ಲಂಕೇಶ್ ದೂರಿದ್ದಾರೆ.

    ಒಂದು, ಎರಡು ಸಿನಿಮಾ ಮಾಡಿದ ನಟಿಯರು, ಹಿರಿಯ ನಟರ ಮಕ್ಕಳ ಜೊತೆ, ರಾಜಕಾರಣಿಗಳ ಮಕ್ಕಳ ಜೊತೆ ಪಾರ್ಟಿ ಮಾಡುತ್ತಾರೆ. ಇದರಿಂದ ಅವರ ಆರೋಗ್ಯಕ್ಕೂ ತೊಂದರೆಯಿದೆ. ಈ ಹಿಂದೆ ಕೂಡ ಒಬ್ಬ ನಟ ತೀರಿಹೋದರು ಅವರ ಮರಣೋತ್ತರ ಪರೀಕ್ಷೇಯೇ ಆಗಲಿಲ್ಲ. ಯಾಕೇ ಆಗಲಿಲ್ಲ? ರಾಜಕೀಯ ಒತ್ತಡವಿದೆಯೇ, ಪೊಲೀಸರಿಗೆ ಒತ್ತಡವಿತ್ತಾ? ಈ ಹಿಂದಿನಿಂದಲೂ ರೇವ್ ಪಾರ್ಟಿಗಳು ನಡೆಯುತ್ತಿವೆ. ಅದಕ್ಕೆ ತನಿಖೆಯಾಗಬೇಕು ಎಂದು ಹೇಳುತ್ತಿದ್ದೇನೆ ಎಂದರು.

    ಇನ್ನೊಂದು ತಮಾಷೆಯ ವಿಚಾರವೆಂದರೆ, ಇದರಲ್ಲಿ ಭಾಗಿಯಾಗಿರುವವರೇ ಇಂದು ಈ ಬಗ್ಗೆ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಪತ್ರಕರ್ತರು ಅವರನ್ನೇ ಪ್ರಶ್ನೆ ಕೇಳುತ್ತಾರೆ. ತನಿಖೆಯಲ್ಲಿ ಪೊಲೀಸ್ ಅಧಿಕಾರಿಗಳ ಬಳಿ ಹೆಸರಿದೆ ಅವರು ಬಹಿರಂಗಪಡಿಸಬೇಕಿದೆ. ಚಿತ್ರರಂಗದ ಕೆಲ ಹಿರಿಯರಿಗೂ ಈ ವಿಚಾರ ಗೊತ್ತಿದೆ. ಆದರೆ ಅವರು ಯಾಕೆ ಮಾತಾನಾಡುತ್ತಿಲ್ಲ. ಇದರ ಬಗ್ಗೆ ನಾನು ಬಹಿರಂಗ ಪಡಿಸಲು ಬೆಂಬಲಬೇಕಿದೆ. ಪೊಲೀಸ್ ಇಲಾಖೆ ಇದರ ಬಗ್ಗೆ ನನ್ನ ಕೇಳಿದರೆ ನಾನು ಹೇಳುತ್ತೇನೆ ಎಂದು ಇಂದ್ರಜಿತ್ ತಿಳಿಸಿದ್ದಾರೆ.

  • ಕೇರಳ ಮೂಲದ ನಾಲ್ವರು ಡ್ರಗ್ಸ್ ಪೆಡ್ಲರ್‌ಗಳ ಬಂಧನ- 1.5 ಕೋಟಿ ಮೌಲ್ಯದ ಡ್ರಗ್ಸ್ ವಶ

    ಕೇರಳ ಮೂಲದ ನಾಲ್ವರು ಡ್ರಗ್ಸ್ ಪೆಡ್ಲರ್‌ಗಳ ಬಂಧನ- 1.5 ಕೋಟಿ ಮೌಲ್ಯದ ಡ್ರಗ್ಸ್ ವಶ

    ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 1.25 ಕೋಟಿ ರೂ. ಮೌಲ್ಯದ ಮಾಧಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    ಇಂದು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾದಕ ವಸ್ತುಗಳ ನಿರ್ಮೂಲನೆಗೆ ಪೊಲೀಸ್ ಇಲಾಖೆ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ. ನಮ್ಮ ದೇಶಿ ಗಾಂಜಾದಿಂದ ಹಿಡಿದು ವಿದೇಶದಲ್ಲಿನ ಬೇರೆ ರೂಪದಲ್ಲಿ ಡ್ರಗ್ಸ್ ಮಾರಾಟ ಜಾಲ ಬೆಳೆದಿದೆ. ಆದ್ದರಿಂದ ‘ಡ್ರಗ್ಸ್ ಫ್ರೀ ಸಿಟಿ’ ಮಾಡುವ ಉದ್ದೇಶದಿಂದ ತೀವ್ರ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

    ರಾಜ್ಯಕ್ಕೆ ಎಲ್‍ಎಸ್‍ಡಿ ಸೇರಿದಂತೆ ಬೇರೆ ರೂಪದಲ್ಲಿ ಮಾದಕ ವಸ್ತುಗಳು ಬರುತ್ತಿದೆ. ಶಾಲಾ, ಕಾಲೇಜುಗಳ ಬಳಿಯೇ ಹೆಚ್ಚು ಮಾರಾಟ ಮಾಡಲಾಗುತ್ತಿದೆ. ವ್ಯವಸ್ಥಿತವಾದ ದಂಧೆಯನ್ನಾಗಿ ನಡೆಸಲಾಗುತ್ತಿದ್ದು, ಸರ್ಕಾರ ಕಡಿವಾಣಕ್ಕೆ ಸೂಚನೆ ನೀಡಿದೆ. ಇನ್ನು ಮುಂದೆ ಕಾಲೇಜುಗಳ ಕ್ಯಾಂಪಸ್‍ನಲ್ಲಿ ಡ್ರಗ್ಸ್ ಪತ್ತೆಯಾದರೆ ಮ್ಯಾನೇಜ್‍ಮೆಂಟ್ ವಿರುದ್ಧ ದೂರು ದಾಖಲಿಸಲಾಗುತ್ತದೆ. ಡ್ರಗ್ಸ್ ಕ್ಯಾಂಪಸ್ ಒಳಗೆ ಬರದಂತೆ ತಡೆಯುವುದು ಮ್ಯಾನೇಜ್‍ಮೆಂಟ್ ಜವಾಬ್ದಾರಿ ಎಂದು ಸಚಿವರು ತಿಳಿಸಿದರು.

    ಪೋಷಕರಿಂದ ಹಣ ಹೆಚ್ಚಿಗೆ ಪಡೆದು ಇಂತಹ ಚಟಗಳಿಗೆ ದಾಸರಾಗುತ್ತಿದ್ದಾರೆ. ಬಹಳ ದೊಡ್ಡವರು ಹಾಗೂ ಅವರ ಮಕ್ಕಳು ಜಾಲದಲ್ಲಿ ಇರುವ ಬಗ್ಗೆ ಮಾಧ್ಯಮದಲ್ಲಿ ನೋಡಿದ್ದೇನೆ. ಮುಂದೆ ಇದು ಕಂಡು ಬಂದರೆ ಕೂಡಲೇ ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ವಿದೇಶದಿಂದ ಬಂದು ಇಲ್ಲಿ ಸಾಕಷ್ಟು ಜನ ನೆಲೆಸಿದ್ದಾರೆ. ಇದುವರೆಗೂ 533 ಪ್ರಕರಣ ದಾಖಲಿಸಿ, 14 ವಿದೇಶಿಯರು ಸೇರಿ 799 ಜನ ಬಂಧನವಾಗಿದೆ. 2019 ರಲ್ಲಿ 1260 ಆರೋಪಿಗಳನ್ನ ಬಂಧಿಸಿದ್ದು, 768 ಕೇಸ್ ಹಾಕಲಾಗಿತ್ತು. ಕೋವಿಡ್ 19 ಮುಗಿದ ಕೂಡಲೇ ಎಲ್ಲಾ ಕಾಲೇಜು, ಹಾಸ್ಟಲ್ ಮಾದಕ ವಸ್ತು ವಿರೋಧಿ ಅಭಿಯಾನ ಮಾಡುತ್ತೇವೆ. ಈಗಾಗಲೇ ಎಂಟು ಸೆನ್ ಪೊಲೀಸ್ ಸ್ಟೇಷನ್ ಗಳು ಮಾಡಿದ್ದು, ಟೆಕ್ನಿಕಲ್ ಎಕ್ಸ್ ಪರ್ಟ್ ಬೇಕಾಗಿದ್ದು ಅಂಥವರನ್ನು ನೇಮಕ ಮಾಡಲಾಗುತ್ತಿದೆ. ಅಲ್ಲದೇ ಸೈಬರ್ ಪ್ರಕರಣಗಳು ಹೆಚ್ಚಾಗಿದ್ದು, ಅದರ ಕಡಿವಾಣಕ್ಕೆ ಮುಂದಾಗಿದ್ದಾವೆ ಎಂದು ವಿವರಿಸಿದರು.

    ಕೇರಳ ಮೂಲದ ಡ್ರಗ್ ಡೀಲರ್ ಗಳಾದ ಶಹದ್ ಮೊಹಮ್ನದ್, ಅಜ್ಮಲ್, ಅಜಿನ್ ಕೆಜಿವರ್ಗೇಶ್, ನಿತಿನ್ ಮೋಹನ್ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಕಿಂಗ್ ಪಿನ್ ಧೀರಜ್ ಹೇಳಿದಂತೆ ಡ್ರಗ್ ಡೀಲ್ ಮಾಡುತ್ತಿದ್ದರು. ಧೀರಜ್ ಈತ ನೆದರ್‍ಲ್ಯಾಂಡ್, ಜರ್ಮನಿಯಿಂದ ಪೋಸ್ಟಲ್ ಮೂಲಕ ಡ್ರಗ್ ತರಿಸುತ್ತಿದ್ದ. ತನ್ನ ಹುಡುಗರ ಮೂಲಕ ಡ್ರಗ್ ರಿಸೀವ್ ಮಾಡಿಸಿಕೊಂಡು ಮಾರಾಟ ಮಾಡುತ್ತಿದ್ದ. ಇಂಥವರಿಗೆ ಮಾರಾಟ ಮಾಡಬೇಕು ಎಂದು ಮೆಸೇಜ್ ಮಾಡುತ್ತಿದ್ದ. ನೋಡಲು ಬಣ್ಣ ಬಣ್ಣ, ಚಿತ್ರ ವಿಚಿತ್ರದ ಪೇಪರ್ ರೀತಿ ಕಾರಣುತ್ತಿದ್ದ ಅವುಗಳಿಗೆ ಒಂದಕ್ಕೆ 5 ಸಾವಿರಕ್ಕೆ ಮಾರಾಟ ಮಾಡಲಾಗುತ್ತಿತ್ತು. ದೊಡ್ಡ ದೊಡ್ಡ ಪಾರ್ಟಿಗಳಲ್ಲಿ ಇನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಉಳಿದಂತೆ ಕಿಂಗ್ ಪಿನ್ ಧೀರಜ್‍ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

  • ಗಾಂಜಾ ಸಿಕ್ಕಿಲ್ಲವೆಂದು 20 ಸೆಂ.ಮೀ ಉದ್ದದ ಚಾಕುವನ್ನೇ ನುಂಗಿದ 28ರ ಯುವಕ!

    ಗಾಂಜಾ ಸಿಕ್ಕಿಲ್ಲವೆಂದು 20 ಸೆಂ.ಮೀ ಉದ್ದದ ಚಾಕುವನ್ನೇ ನುಂಗಿದ 28ರ ಯುವಕ!

    – ಹೊಟ್ಟೆನೋವು ಎಂದು ಬಂದಾಗ ವೈದ್ಯರೇ ದಂಗಾದ್ರು

    ನವದೆಹಲಿ: ಅನೇಕ ಸವಾಲುಗಳನ್ನು ಎದುರಿಸಿರುವ ದೆಹಲಿಯ ಏಮ್ಸ್ ವೈದ್ಯರಿಗೆ ವಿಚಿತ್ರ ಸವಾಲೊಂದು ಎದುರಾಗಿದ್ದು, ಅದರಲ್ಲಿ ಯಶಸ್ವಿಯಾಗಿದ್ದಾರೆ.

    ಹೌದು. 28 ವರ್ಷದ ಯುವಕನೊಬ್ಬನ ಲಿವರ್ ನಿಂದ 20 ಸೆಂ.ಮೀ ಉದ್ದದ ಚಾಕುವನ್ನು ಶಸ್ತ್ರಚಿಕಿತ್ಸೆಯ ಮೂಲಕ ಹೊರ ತೆಗೆದಿದ್ದಾರೆ. ಸದ್ಯ ಯುವಕನ ಸ್ಥಿತಿ ಆರೋಗ್ಯವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

    ಯುವಕ ಒಂದೂವರೆ ತಿಂಗಳ ಹಿಂದೆ ಚಾಕುವನ್ನು ನುಂಗಿದ್ದು, ಆರಾಮಾಗಿಯೇ ಇದ್ದನಂತೆ. ಆದರೆ ಇತ್ತೀಚೆಗೆ ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಬಂದಿದ್ದಾನೆ. ಈ ವೇಳೆ ಆತನನ್ನು ಪರೀಕ್ಷೆ ಮಾಡಿದ ವೈದ್ಯರು, ಎಕ್ಸ್ ರೇ ತೆಗೆಯಬೇಕು ಎಂದು ಹೇಳಿದ್ದಾರೆ. ಅಂತೆಯೇ ಎಕ್ಸ್ ರೇ ತೆಗೆದು ನೋಡಿದಾಗ ಆತನ ಲಿವರ್ ನಲ್ಲಿ ಚಾಕು ಕಂಡು ವೈದ್ಯರಿಗೇ ಶಾಕ್ ಆಗಿದೆ.

    ಯುವಕನಿಗೆ ಆದಷ್ಟು ಬೇಗ ಶಸ್ತ್ರ ಚಿಕಿತ್ಸೆ ನಡೆಸಬೇಕು ಎಂದು ಆತನ ಪೋಷಕರಿಗೆ ವೈದ್ಯರು ತಿಳಿಸಿದ್ದಾರೆ. ಅಂತೆಯೇ 3-4 ಗಂಟೆಗಳ ಕಾಲ ಸರ್ಜರಿ ನಡೆಸಿದ ಬಳಿಕ ವೈದ್ಯರ ತಂಡ ಚಾಕು ಹೊರತೆಗೆಯುವಲ್ಲಿ ಯಶಸ್ಸು ಕಂಡಿದೆ.

    ಚಾಕು ಲಿವರ್‍ನ ಪ್ರಮುಖ ರಕ್ತನಾಳದ ಬಳಿ ಸಿಲುಕಿಕೊಂಡಿತ್ತು. ಹೀಗಾಗಿ ಶಸ್ತ್ರಚಿಕಿತ್ಸೆಯ ವೇಳೆ ಸ್ವಲ್ಪ ಎಡವಟ್ಟಾಗುತ್ತಿದ್ದರೂ ಯುವಕನ ಪ್ರಾಣಕ್ಕೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿತ್ತು. ಈ ಹಿನ್ನೆಲೆಯಲ್ಲಿ ಆದಷ್ಟು ಜಾಗರೂಕತೆ ವಹಿಸಿ ನಮ್ಮ ತಂಡ ಸರ್ಜರಿ ಮಾಡಿತು ಎಂದು ವೈದ್ಯ ಡಾ. ಎನ್.ಆರ್ ದಾಸ್ ತಿಳಿಸಿದರು.

    ಒಬ್ಬ ವ್ಯಕ್ತಿ ಇಡೀ ಚಾಕುವನ್ನು ನುಂಗಿ ಬದುಕುಳಿದಿದ್ದು ಇದೇ ಮೊದಲು. ಇದೂವರೆಗೂ ಸೂಜಿ, ಪಿನ್ ಹಾಗೂ ಮೀನಿನ ಕೊಕ್ಕೆಯಂತಹ ಅತೀ ಸೂಕ್ಷ್ಮವಾದ ವಸ್ತುಗಳನ್ನು ನುಂಗಿದ 2 ಅಥವಾ 3 ಪ್ರಕರಣಗಳನ್ನು ನೋಡಿರುವುದಾಗಿ ಏಮ್ಸ್ ವೈದ್ಯರು ತಿಳಿಸಿದ್ದಾರೆ.

    ಈ ರೋಗಿ ಮೂಲತಃ ಹರಿಯಾಣದವನಾಗಿದ್ದು, ಮಾದಕ ವ್ಯಸನಿಯಾಗಿದ್ದಾನೆ. ಈತನಿಗೆ ಒಂದು ದಿನ ಗಾಂಜಾ ಸಿಕ್ಕಿಲ್ಲ ಎಂದು ಬೇಸರದಿಂದ ಚಾಕುವನ್ನೇ ನುಂಗಿದ್ದಾನೆ ಎಂದು ವರದಿಯಾಗಿದೆ.