Tag: Drunk man

  • ಕುಡಿದ ಮತ್ತಿನಲ್ಲಿ ಗೂಳಿ ಸವಾರಿ ಮಾಡಿದ ಯುವಕ

    ಕುಡಿದ ಮತ್ತಿನಲ್ಲಿ ಗೂಳಿ ಸವಾರಿ ಮಾಡಿದ ಯುವಕ

    ಡೆಹ್ರಾಡೋನ್: ಕುಡಕನೊಬ್ಬ ಬೀದಿಯಲ್ಲಿ ಗೂಳಿಯ (Bull) ಮೇಲೆ ಸವಾರಿ ಮಾಡಿದ ಘಟನೆ ಉತ್ತರಾಖಂಡದ (Uttarakhand) ರಿಷಿಕೇಶದ (Rishikesh) ತಪೋವನ ಪ್ರದೇಶದಲ್ಲಿ ನಡೆದಿದೆ.

    ಕುಡಿದ ಮತ್ತಿನಲ್ಲಿದ್ದ ಯುವಕ (Drunk Man) ವೈರಲ್ ವೀಡಿಯೋವನ್ನು ಮಾಡಲು ಈ ರೀತಿ ಮಾಡಿದ್ದ. ಯುವಕನು ಗೂಳಿಯ ಮೇಲೆ ಕುಳಿತು ರಸ್ತೆಯಲ್ಲಿ ಸವಾರಿ ಮಾಡುತ್ತಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಉತ್ತರಾಖಂಡದ ಪೊಲೀಸರು ತನಿಖೆ ನಡೆಸಿದ್ದಾರೆ.

    ಈ ವೇಳೆ ಯುವಕನನ್ನು ಉತ್ತರಾಖಂಡದ ರಿಷಿಕೇಶದ ತಪೋವನ ಪ್ರದೇಶದ ನಿವಾಸಿ ಎಂದು ಗುರುತಿಸಲಾಗಿದೆ. ಅಷ್ಟೇ ಅಲ್ಲದೇ ಆತನ ವಿರುದ್ಧ ಮಧ್ಯರಾತ್ರಿಯ ಸಮಯದಲ್ಲಿ ಅಶಾಂತಿಯನ್ನು ಸೃಷ್ಟಿಸಿರುವುದು ಹಾಗೂ ಪ್ರಾಣಿಗಳನ್ನು ಅನುಚಿತವಾಗಿ ನಡೆಸಿಕೊಂಡಿರುವ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ. ಘಟನೆಗೆ ಸಂಬಂಧಿಸಿ ಆತನನ್ನು ವಿಚಾರಣೆಗೆ ಒಳಪಡಿಸಿ ಭವಿಷ್ಯದಲ್ಲಿ ಪ್ರಾಣಿಗಳೊಂದಿಗೆ ಇಂತಹ ಸಾಹಸಗಳನ್ನು ಮಾಡದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನೆಯ ಕುರಿತು ಉತ್ತರಾಖಂಡ ಪೊಲೀಸರು ಟ್ವೀಟ್ ಮಾಡಿದ್ದಾರೆ. ಟ್ವೀಟ್‍ನಲ್ಲಿ ಋಷಿಕೇಶದ ತಪೋವನದಲ್ಲಿ ಕುಡುಕನೊಬ್ಬ ಗೂಳಿಯ ಮೇಲೆ ಸವಾರಿ ಮಾಡಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಈ ಹಿನ್ನೆಲೆಯಲ್ಲಿ ವೀಡಿಯೋಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಯುವಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಭವಿಷ್ಯದಲ್ಲಿ ಈ ರೀತಿ ಪ್ರಾಣಿಗಳೊಂದಿಗೆ ಅನುಚಿತವಾಗಿ ವರ್ತಿಸದಂತೆ ಯುವಕನಿಗೆ ಎಚ್ಚರಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಗ್ರರ ಜೊತೆ ಸ್ಥಳೀಯರ ಶಾಮೀಲು – ಜಮ್ಮು ಕಾಶ್ಮೀರದಲ್ಲಿ 15 ಕಡೆ ಎನ್‍ಐಎ ಶೋಧ

    ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಅನೇಕರು ಈ ವೀಡಿಯೋ ಕುರಿತು ಕಿಡಿಕಾರಿದ್ದಾರೆ. ಅಷ್ಟೇ ಅಲ್ಲದೇ ಈ ರೀತಿ ಮಾಡುವುದು ಸೂಕ್ತವಲ್ಲ ಎಂದು ತಿಳಿಸಿದರೇ, ಇನ್ನೂ ಕೆಲವರು ಈ ವೀಡಿಯೋವನ್ನು ಜೆಲ್ಲಿಕಟ್ಟಿಗೆ ಹೋಲಿಸಿದ್ದಾರೆ. ಇದನ್ನೂ ಓದಿ: ಮತಗಟ್ಟೆ ತರಬೇತಿಯಲ್ಲಿ ಉದ್ಧಟತನ – ಮಹಿಳಾ ಇನ್‌ಸ್ಪೆಕ್ಟರ್‌ ಅಮಾನತು

  • ವಿಮಾನದಲ್ಲಿ ಕಂಠಪೂರ್ತಿ ಕುಡಿದು ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ಸಹಪ್ರಯಾಣಿಕ

    ವಿಮಾನದಲ್ಲಿ ಕಂಠಪೂರ್ತಿ ಕುಡಿದು ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ಸಹಪ್ರಯಾಣಿಕ

    ನವದೆಹಲಿ: ನ್ಯೂಯಾರ್ಕ್‍ನಿಂದ (New York) ನವದೆಹಲಿಗೆ (Delhi) ಸಂಚರಿಸುತ್ತಿದ್ದ ಏರ್ ಇಂಡಿಯಾ (Air India)  ವಿಮಾನದಲ್ಲಿ (Flight) ಮಹಿಳೆಯೊಬ್ಬರ ಮೇಲೆ ಸಹಪ್ರಯಾಣಿಕ ಕಂಠಪೂರ್ತಿ ಕುಡಿದು ಮೂತ್ರ ವಿಸರ್ಜಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ನ್ಯೂಯಾರ್ಕ್‍ನಿಂದ ದೆಹಲಿಗೆ ನ.26 ರಂದು ಏರ್ ಇಂಡಿಯಾ ವಿಮಾನ AI-102 ಸಂಚರಿಸುತ್ತಿತ್ತು. ಈ ವಿಮಾನದಲ್ಲಿ ಬ್ಯುಸಿನೆಸ್ ಕ್ಲಾಸ್‍ನಲ್ಲಿ ಸಂಚರಿಸುತ್ತಿದ್ದ ಪುರುಷ ಪ್ರಯಾಣಿಕರೊಬ್ಬರು ಕುಡಿದ ಮತ್ತಿನಲ್ಲಿ (Drunk Man) ಸಹಪ್ರಯಾಣಿಕರಾಗಿದ್ದ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ್ದಾರೆ. ಈ ಬಗ್ಗೆ ಮಹಿಳೆ ಕೂಡಲೇ ಏರ್ ಇಂಡಿಯಾ ವಿಮಾನದಲ್ಲಿದ್ದ ಸಿಬ್ಬಂದಿಗೆ ತಿಳಿಸಿದ್ದಾರೆ. ಸಿಬ್ಬಂದಿ ಬಂದು ವಿಚಾರಿಸುತ್ತಿದ್ದಂತೆ ಕುಡಿದ ಮತ್ತಿನಲ್ಲಿ ಏನು ಅರಿಯದವರಂತೆ ವರ್ತಿಸಿದ್ದಾರೆ. ಇದನ್ನೂ ಓದಿ: ಹತ್ಯೆ ಕೇಸ್- ಅಮಾನತುಗೊಂಡ ಬಿಜೆಪಿ ನಾಯಕನ ಅಕ್ರಮ ಹೋಟೆಲ್ ನೆಲಸಮ

    ಘಟನೆ ಬಳಿಕ ಮಹಿಳೆ ಈ ಬಗ್ಗೆ ಟಾಟಾ ಸನ್ಸ್‌ ಗ್ರೂಪ್‌ನ (Tata Group) ಮುಖ್ಯಸ್ಥ ನಟರಾಜನ್‌ ಚಂದ್ರಶೇಖರನ್‌ ಅವರಿಗೆ ಪತ್ರ ಬರೆದು ಘಟನೆ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ವಿಮಾನದ ಸಿಬ್ಬಂದಿ ಘಟನೆಯ ಬಳಿಕ ಈ ಬಗ್ಗೆ ಯಾವುದೇ ರೀತಿಯ ರೆಸ್ಪಾನ್ಸ್ ಮಾಡಿಲ್ಲ. ಇದರಿಂದ ವಿಮಾನದಲ್ಲಿ ಸಂಚರಿಸುವಾಗ ನಮ್ಮ ಸುರಕ್ಷತೆ ಬಗ್ಗೆ ಪ್ರಶ್ನೆ ಮಾಡುವಂತಾಗಿದೆ. ಇದನ್ನೂ ಓದಿ: ತ್ರಿಪುರಾದ ಮಾಜಿ ಸಿಎಂ ಪೂರ್ವಜರ ಮನೆಗೆ ಬೆಂಕಿಯಿಟ್ಟ ದುಷ್ಕರ್ಮಿಗಳು

    ಊಟದ ಬಳಿಕ ವಿಮಾನದ ಲೈಟ್ ಆಫ್ ಮಾಡಲಾಗಿತ್ತು. ಈ ವೇಳೆ ಪ್ರಯಾಣಿಕರೊಬ್ಬರು ನನ್ನ ಸೀಟ್ ಬಳಿ ಬಂದು ಮೂತ್ರ ವಿಸರ್ಜಿಸಿದ್ದಾರೆ. ಈ ವೇಳೆ ಅವರ ಖಾಸಗಿ ಅಂಗವನ್ನು ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಏರ್ ಇಂಡಿಯಾ ಘಟನೆ ಬಗ್ಗೆ ಇದೀಗ ಮಾಹಿತಿ ಸಿಕ್ಕಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಅಸಭ್ಯವಾಗಿ ವರ್ತಿಸಿದ ಪ್ರಯಾಣಿಕರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಸ್ಪಷ್ಟಪಡಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಶಾಲೆಗೆ ನುಗ್ಗಿ ಶಿಕ್ಷಕಿ ಮೇಲೆ ಕುಡುಕನಿಂದ ಹಲ್ಲೆ

    ಶಾಲೆಗೆ ನುಗ್ಗಿ ಶಿಕ್ಷಕಿ ಮೇಲೆ ಕುಡುಕನಿಂದ ಹಲ್ಲೆ

    ಚೆನ್ನೈ: ಕುಡಿದ ಅಮಲಿನಲ್ಲಿ ಶಾಲೆಗೆ ನುಗ್ಗಿ ವ್ಯಕ್ತಿಯೋರ್ವ(Drunk Man) ಶಿಕ್ಷಕಿ ಮೇಲೆ ಹಲ್ಲೆ ನಡೆಸಿರುವ ಘಟನೆ ತಮಿಳುನಾಡಿನ(Tamil Nadu) ಪುದುಕೊಟ್ಟೈ (Pudukottai) ಜಿಲ್ಲೆಯಲ್ಲಿ ನಡೆದಿದೆ.

    ಆರೋಪಿಯನ್ನು ಚಿತ್ರವೇಲ್ ಎಂದು ಗುರುತಿಸಲಾಗಿದ್ದು, ಕುಡಿದ ಮತ್ತಿನಲ್ಲಿ ಸರ್ಕಾರಿ ಶಾಲೆಗೆ ನುಗ್ಗಿ ತರಗತಿಯೊಳಗೆ ಪಾಠ ಮಾಡುತ್ತಿದ್ದ ಶಿಕ್ಷಕಿ (School Teacher) ಮೇಲೆ ಹಲ್ಲೆ ನಡೆಸಿದ್ದಾನೆ. ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಎಷ್ಟೇ ದೊಡ್ಡ ಹುಲಿ ಆದ್ರೂ, ಕಾನೂನಿಗೆ ಒಂದೇ – ಬಿಎಸ್‌ವೈಗೆ ಟಾಂಗ್ ನೀಡಿದ ಯತ್ನಾಳ್

    ಸರ್ಕಾರಿ ಶಾಲೆಗೆ ಬಂದ ಚಿತ್ರವೇಲ್(Chitravel), ಶಿಕ್ಷಕಿ ಚಿತ್ರಾದೇವಿ ಪಾಠ ಮಾಡುತ್ತಿದ್ದ ವೇಳೆ ತರಗತಿಗೆ ನುಗ್ಗಿದ್ದಾನೆ. ನಂತರ ಏಕಾಏಕಿ ವಿದ್ಯಾರ್ಥಿಗಳ ಎದುರೇ ನಿಂದಿಸಲು ಆರಂಭಿಸಿದ್ದಲ್ಲದೇ, ಚಿತ್ರಾದೇವಿಗೆ(Chitradevi) ಎಲ್ಲರ ಮುಂದೆ ಕಪಾಳಮೋಕ್ಷ ಮಾಡಿದ್ದಾನೆ. ಇದನ್ನೂ ಓದಿ: ನ್ಯಾಯಾಧೀಶರ ವಯೋಮಿತಿ ಹೆಚ್ಚಿಸಿ – ಸಂವಿಧಾನಿಕ ತಿದ್ದುಪಡಿಗೆ ಬಾರ್ ಕೌನ್ಸಿಲ್ ಮನವಿ

    ಶಾಲೆಯ ಇನ್ನೋರ್ವ ಸಿಬ್ಬಂದಿ (Staff Member) ಸೆರೆ ಹಿಡಿದಿರುವ ವೀಡಿಯೋದಲ್ಲಿ(Video) ಶಿಕ್ಷಕಿ ಚಿತ್ರವೇಲ್‍ನನ್ನು ತರಗತಿಯಿಂದ ಹೊರ ಹೋಗುವಂತೆ ಹೇಳುತ್ತಿರುವುದನ್ನು ಮತ್ತು ಮಕ್ಕಳು ಭಯ ಪಡುತ್ತಾರೆ ಹೊರಗೆ ಹೋಗು ಎಂದು ಕೂಗಾಡುತ್ತಿರುವುದನ್ನು ಕಾಣಬಹುದಾಗಿದೆ.

    ಘಟನೆಯ ನಂತರ ಚಿತ್ರವೇಲ್ ವಿರುದ್ಧ ಸಮೀಪದ ಪೊಲೀಸ್ ಠಾಣೆಯಲ್ಲಿ ಚಿತ್ರಾದೇವಿ ಅವರು ದೂರು ದಾಖಲಿಸಿದ್ದು, ಪೊಲೀಸರು (Police) ನಾಲ್ಕು ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಶೆಯಲ್ಲಿ ಪೊಲೀಸರಿಗೆ ಫೋನ್ ಮಾಡಿದವ ಕೆಲವೇ ಗಂಟೆಯಲ್ಲಿ ಅರೆಸ್ಟ್

    ನಶೆಯಲ್ಲಿ ಪೊಲೀಸರಿಗೆ ಫೋನ್ ಮಾಡಿದವ ಕೆಲವೇ ಗಂಟೆಯಲ್ಲಿ ಅರೆಸ್ಟ್

    – ಪೊಲೀಸರು ಬಂಧಿಸಿದ್ದು ಯಾಕೆ?

    ನವದೆಹಲಿ: ಕುಡಿದ ಮತ್ತಿನಲ್ಲಿ ಪೊಲೀಸರಿಗೆ ಫೋನ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನ ಪೊಲೀಸರು ಬಂಧಿಸಿದ್ದಾರೆ.

    30 ವರ್ಷದ ಪಿಂಟು ಸಿಂಗ್ ಬಂಧಿತ ವ್ಯಕ್ತಿ. ಕಾರ್ ಪೇಂಟರ್ ಆಗಿ ಕೆಲಸ ಮಾಡಿಕೊಂಡಿರುವ ಪಿಂಟು ಶನಿವಾರ ನಶೆಯಲ್ಲಿ ಪೊಲೀಸರಿಗೆ ಫೋನ್ ಮಾಡಿದ್ದಾನೆ. ಪ್ರಧಾನಿಗಳನ್ನ ಕೊಲ್ಲಲು ತನಗೆ 30 ಕೋಟಿ ರೂಪಾಯಿಗೆ ಸುಪಾರಿ ನೀಡಿದ್ದಾರೆ ಎಂದು ಹೇಳಿ ಫೋನ್ ಕಟ್ ಮಾಡಿದ್ದಾನೆ. ಕೂಡಲೇ ಎಚ್ಚೆತ್ತ ಪೊಲೀಸರು ಕಾಲ್ ಟ್ರೇಸ್ ಮಾಡಿ ಪಿಂಟುನನ್ನು ಬಂಧಿಸಿದ್ದಾರೆ.

    ಬಂಧನದ ಬಳಿಕ ಪಿಂಟು ನಶೆಯಲ್ಲಿ ಈ ರೀತಿ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಆತ ಮಾನಸಿಕ ಅಸ್ವಸ್ಥನಾಗಿದ್ದರಿಂದ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

     

  • ಬಂದ್ ವೇಳೆ ಕುಡುಕನ ರಂಪಾಟಕ್ಕೆ ಪೊಲೀಸರು ಸುಸ್ತು

    ಬಂದ್ ವೇಳೆ ಕುಡುಕನ ರಂಪಾಟಕ್ಕೆ ಪೊಲೀಸರು ಸುಸ್ತು

    ಗದಗ: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಸರ್ಕಾರದ ವಿರುದ್ಧ ಕನ್ನಡ ಪರ ಸಂಘಟನೆಗಳು ಇಂದು ಬೀದಿಗಿಳಿದಿವೆ. ಈ ಮಧ್ಯೆ ಕುಡುಕನೋರ್ವ ರಂಪಾಟ ಮಾಡಿದ್ದು, ಪೊಲೀಸರೇ ಸುಸ್ತಾದ ಘಟನೆ ಗದಗ್ ನಲ್ಲಿ ನಡೆದಿದೆ.

    ಹೌದು. ಸರ್ಕಾರದ ವಿರುದ್ಧ ಗದಗ ನಗರದ ಚೆನ್ನಮ್ಮ ಸರ್ಕಲ್ ಬಳಿ ಪ್ರತಿಭಟನೆ ನಡೆಯುತ್ತಿತ್ತು. ಈ ವೇಳೆ ಕುಡುಕ ರಾದ್ಧಾಂತ ಮಾಡಿದ್ದಾನೆ. ಕುಡುಕನ ರಗಳೆಗೆ ಪೊಲೀಸರು ಹಾಗೂ ಪ್ರತಿಭಟನೆಕಾರರು ಸುಸ್ತಾಗಿದ್ದಾರೆ. ಪ್ರತಿಭಟನೆಯಲ್ಲಿ ಕುಡುಕನ ರಂಪಾಟ ಪೊಲೀಸರಿಗೆ ಪ್ರಾಣ ಸಂಕಟ ಎಂಬಂತಾಗಿದ್ದು, ಕೊನೆಗೆ ಆತನನ್ನು ಪೊಲೀಸರು ಎಳೆದು ಹಾಕಿದ ಪ್ರಸಂಗ ನಡೆಯಿತು.

    ಪ್ರತಿಭಟನೆ ವೇಳೆ ಲಾರಿಗಳನ್ನ ಅಡ್ಡಗಟ್ಟಿ ಪೊಲೀಸರ ಜೊತೆ ವಾಗ್ವಾದ ನಡೆಯಿತು. ವಾಹನ ತಡೆಯಲು ಪೊಲೀಸರು ತಾಕೀತು ಮಾಡಿದರು. ಈ ಹಿನ್ನೆಲೆಯಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು. ಕರವೆ ಕಾರ್ಯಕರ್ತರು ವಾಹನ ಏರಿ ರಸ್ತೆ ತಡೆಗೆ ಮುಂದಾದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವಲ್ಲಿ ಪೊಲೀಸರ ಹರಸಾಹ ಪಟ್ಟರು.

  • ಕುಡುಕನಿಂದ ವೈದ್ಯರ ಮೇಲೆ ಹಲ್ಲೆ, ಪೊಲೀಸ್ ಜೀಪ್ ಕೆಳಗೆ ಮಲಗಿ ರಂಪಾಟ

    ಕುಡುಕನಿಂದ ವೈದ್ಯರ ಮೇಲೆ ಹಲ್ಲೆ, ಪೊಲೀಸ್ ಜೀಪ್ ಕೆಳಗೆ ಮಲಗಿ ರಂಪಾಟ

    ಚಿಕ್ಕೋಡಿ (ಬೆಳಗಾವಿ): ಲಾಕ್‍ಡೌನ್ ಹಿನ್ನೆಲೆ ರಾಜ್ಯದಲ್ಲಿ ಕಳೆದ 43 ದಿನಗಳಿಂದ ಮದ್ಯ ಮಾರಾಟ ಸಂಪೂರ್ಣ ಬಂದ್ ಮಾಡಲಾಗಿತ್ತು. ಆದರೆ ನಿನ್ನೆಯಿಂದ ರಾಜ್ಯ ಸರ್ಕಾರ ಲಾಕ್‍ಡೌನ್ ಸಡಿಲಿಕೆ ಮಾಡಿ ಕಂಟೈನಮೆಂಟ್ ಝೋನ್‍ಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕಡೆ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ.

    ಮದ್ಯ ಸಿಕ್ಕಿದ್ದೇ ತಡ ಕೆಲವೆಡೆ ಕುಡುಕರ ರಂಪಾಟ, ಗಲಾಟೆಗಳು ಜೋರಾಗಿ ಶುರುವಾಗಿವೆ. ಹೌದು ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ಕುಡುಕನೊಬ್ಬ ವೈದ್ಯರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ. ತಾಲೂಕಿನ ಬೆಡಕಿಹಾಳ ಗ್ರಾಮದ ಸಂಜೀವ್ ಕುಮಾರ್ ಬಣವಾನೆ ವೈದ್ಯರ ಮೇಲೆ ಹಲ್ಲೆ ಮಾಡಿದ ಕುಡುಕ. ಇದನ್ನೂ ಓದಿ: ಕುಡುಕರ ಎಡವಟ್ಟಿನಿಂದ ಮೂರ್ನಾಲ್ಕು ಬಣವೆಗಳಿಗೆ ಬೆಂಕಿ

    ಸಂಜೀವ್ ಕುಮಾರ್ ಮದ್ಯದ ಮತ್ತಿನಲ್ಲಿ ತನ್ನ ಕೈಗೆ ಗಾಯ ಮಾಡಿಕೊಂಡು ಯಕ್ಸಂಬಾ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಬಂದಿದ್ದ. ಚಿಕಿತ್ಸೆ ನೀಡಲು ಮುಂದಾದ ವೈದ್ಯರ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಆಸ್ಪತ್ರೆಯ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾನೆ. ಆಸ್ಪತ್ರೆಯ ವೈದ್ಯರು ಪ್ರಕರಣ ಕುರಿತು ಸದಲಾಗ ಠಾಣೆಯಲ್ಲಿ ದೂರು ನೀಡಿದ್ದರು. ತಕ್ಷಣವೇ ಆಸ್ಪತ್ರೆಗೆ ದೌಡಾಯಿಸಿದ ಪೊಲೀಸರು ಸಂಜೀವ್ ಕುಮಾರ್ ನನ್ನ ಠಾಣೆಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಕುಡಿಯಲು ಹಣ ಕೊಡದ್ದಕ್ಕೆ ಗರ್ಭಿಣಿ ಪತ್ನಿ ತಲೆಗೆ ಗುಂಡು ಹೊಡೆದ- ಭಯದಿಂದ ಪೊದೆಯಲ್ಲಿ ಅವಿತ ಮಗ

    ಠಾಣೆಯಲ್ಲೂ ಸಂಜೀವ್ ಕುಮಾರ್ ರಂಪಾಟ ನಿಲ್ಲಲಿಲ್ಲ. ಪೊಲೀಸ್ ಠಾಣೆ ಮುಂದೆ ನಿಂತಿದ್ದ ಜೀಪ್ ಕೆಳೆಗೆ ಮಲಗಿ ನನ್ನ ಮೇಲೆ ಜೀಪ್ ಹರಿಸಿ, ಸಾಯಿಸಿ ಎಂದು ರಂಪಾಟ ಮಾಡಿದ್ದಾನೆ. ಠಾಣೆ ಮುಂದೆ ಕುಡುಕನ ರಂಪಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪೊಲೀಸರು ಸಂಜೀವ್ ಕುಮಾರ್ ಬಣವಾನೆ ವಿರುದ್ಧ ಪ್ರಕರಣ ದಾಖಲಿಸಿ ಬೆಳಗಾವಿಯ ಹಿಂಡಲಗಾ ಜೈಲಿಗೆ ಕಳಸಿದ್ದಾರೆ.

  • ದೂರದಿಂದ್ಲೇ ಎಣ್ಣೆ ಖರೀದಿಸ್ತೀವಿ ಅಂಗಡಿ ಓಪನ್ ಮಾಡಿ ಪ್ಲೀಸ್ – ಸಿಎಂಗೆ ಕುಡುಕನ ಪತ್ರ

    ದೂರದಿಂದ್ಲೇ ಎಣ್ಣೆ ಖರೀದಿಸ್ತೀವಿ ಅಂಗಡಿ ಓಪನ್ ಮಾಡಿ ಪ್ಲೀಸ್ – ಸಿಎಂಗೆ ಕುಡುಕನ ಪತ್ರ

    ಬೆಂಗಳೂರು: ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆ ದೇಶವೇ ಲಾಕ್‍ಡೌನ್ ಆಗಿದೆ. ಒಂದೆಡೆ ಜನ ಸಾಮಾನ್ಯರು ದಿನ ಬಳಕೆಯ ಅಗತ್ಯ ವಸ್ತುಗಳ ಖರೀದಿಗೆ ಪರದಾಡುತ್ತಿದ್ದರೆ, ಇನ್ನೊಂದೆಡೆ ಮದ್ಯ ಸಿಗದೇ ಕುಡುಕರ ಕಷ್ಟ ತಾರಕ್ಕಕ್ಕೇರಿದೆ.

    ಲಾಕ್‍ಡೌನ್‍ನಿಂದ ಮದ್ಯ ಮಾರಾಟ ಸ್ಥಗಿತಗೊಂಡಿರುವ ಕಾರಣಕ್ಕೆ ಸದ್ಯ ರಾಜ್ಯದಲ್ಲಿ ಕುಡುಕರಿಗೆ ಎಣ್ಣೆ ಸಿಗದೆ ಹುಚ್ಚರಂತಾಗಿದ್ದಾರಂತೆ. ಈ ಹಿನ್ನೆಲೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹಾಗೂ ಅಬಕಾರಿ ಸಚಿವರಿಗೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಿವಾಸಿ ವಿ. ಮಂಜುನಾಥ್ ಎಂಬಾತ ಪತ್ರ ಬರೆದಿದ್ದಾನೆ. ಸದ್ಯ ಸರ್ಕಾರದ ತೀರ್ಮಾನದಿಂದ ಮದ್ಯ ಪ್ರಿಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದಯವಿಟ್ಟು ಮದ್ಯದಂಗಡಿ ತೆರೆಯಿರಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡೇ ಮದ್ಯ ಖರೀದಿ ಮಾಡ್ತೇವೆ ಎಂದು ಕುಡುಕ ಗೋಗರೆದಿದ್ದಾನೆ.

    ರಾಜ್ಯದಲ್ಲಿ ಆರೂವರೆ ಕೋಟಿ ಜನಸಂಖ್ಯೆ ಇದೆ. ಅದರಲ್ಲಿ ಮೂರು ಮುಕ್ಕಾಲು ಕೋಟಿ ಜನರು ಮದ್ಯ ಪ್ರಿಯರಿದ್ದಾರೆ. ಬೆಳಗ್ಗೆ 9ರಿಂದ 12ರವರೆಗೆ ಎಂಎಸ್‍ಐಎಲ್ ಹೋಲ್‍ಸೇಲ್ ಮದ್ಯದ ಅಂಗಡಿ ಓಪನ್ ಮಾಡಿ ಖರೀದಿಗೆ ಅವಕಾಶ ಕೊಡಬೇಕು. ನಾವು 6 ಅಡಿ ದೂರದಲ್ಲಿ ನಿಂತು ಎಣ್ಣೆ ಖರೀದಿ ಮಾಡ್ತೀವಿ. ಮುಖ್ಯಮಂತ್ರಿ ಹಾಗೂ ಅಬಕಾರಿ ಸಚಿವರಿಗೆ ದಯವಿಟ್ಟು ನಮ್ಮ ಮನವಿಗೆ ಸಹಕರಿಸಬೇಕು ಎಂದು ವಾಟ್ಸಪ್ ನಲ್ಲಿ ಪತ್ರ ಬರೆದು ಕುಡುಕ ಕೋರಿಕೊಂಡಿದ್ದಾನೆ.

  • ಕುಡುಕನ ರಂಪಾಟಕ್ಕೆ ಸುಸ್ತಾಗಿ ಕೈಕಾಲು ಕಟ್ಟಿಹಾಕಿದ ಪೊಲೀಸರು

    ಕುಡುಕನ ರಂಪಾಟಕ್ಕೆ ಸುಸ್ತಾಗಿ ಕೈಕಾಲು ಕಟ್ಟಿಹಾಕಿದ ಪೊಲೀಸರು

    ದಾವಣಗೆರೆ: ಅತಿಯಾಗಿ ಮದ್ಯ ಸೇವಿಸಿದ್ದ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಪೊಲೀಸ್ ವಾಹನದ ಗಾಜು ಒಡೆದು ಹಾಕಿದ ಘಟನೆ ದಾವಣಗೆರೆಯ ಶಾಮನೂರು ರಸ್ತೆಯಲ್ಲಿ ನಡೆದಿದೆ. ಕಲ್ಲೆಸೆದ ಕುಡುಕ ಮಹಾಶಯ ಈಗ ಪೊಲೀಸರ ಅಥಿತಿಯಾಗಿದ್ದಾನೆ.

    ಶಾಮನೂರು ರಸ್ತೆಯ ಬಾರ್ ಒಂದರಲ್ಲಿ ಹರಪ್ಪನಹಳ್ಳಿ ತಾಲೂಕಿನ ಗೌರಿಪುರ ಗ್ರಾಮದ ಮಂಜುನಾಥ್ ಮದ್ಯ ಸೇವಿಸಿ ಪೊಲೀಸ್ ವಾಹನಕ್ಕೆ ಕಲ್ಲು ಎಸೆದಿದ್ದಾನೆ. ಮಂಜುನಾಥ್ ವಿದ್ಯಾನಗರದಲ್ಲಿ ವಾಚ್‍ಮೆನ್ ಆಗಿ ಕೆಲಸ ಮಾಡುತ್ತಿದ್ದು, ಸೋಮವಾರ ರಾತ್ರಿ ಅತಿಯಾಗಿ ಮದ್ಯ ಸೇವನೆ ಮಾಡಿ ರಂಪಾಟ ಮಾಡಿದ್ದಾನೆ. ಕುಡಿದು ದಾರಿಯಲ್ಲಿ ಹೋಗುವವರಿಗೆ ತೊಂದರೆ ಕೊಡುವುದಲ್ಲದೆ ಗಸ್ತು ತಿರುಗುತ್ತಿದ್ದ ಪೊಲೀಸ್ ವಾಹನಕ್ಕೆ ಕಲ್ಲಿನಿಂದ ಒಡೆದು ಗಾಜು ಪುಡಿಪುಡಿ ಮಾಡಿದ್ದಾನೆ.

    ಕೌಂಟುಂಬಿಕ ಸಮಸ್ಯೆಯಿಂದಾಗಿ ಮಂಜುನಾಥ್ ಅತಿಯಾಗಿ ಮದ್ಯ ಸೇವಿಸಿದ್ದ ಎನ್ನಲಾಗಿದ್ದು, ಕುಡುಕನ ಕಾಟ ತಾಳಲಾರದೆ ಸಾರ್ವಜನಿಕರು ಹಾಗೂ ಪೊಲೀಸರು ಹಗ್ಗದಿಂದ ಆತನ ಕೈಕಾಲು ಕಟ್ಟಿ ಹಾಕಿದ್ದರು. ಘಟನೆ ನಡೆದ ಸ್ಥಳಕ್ಕೆ ಆಗಮಿಸಿ ವಿದ್ಯಾನಗರಿ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ.

  • ಗಿರ್ಗಿಟ್ಲೆ ರೀತಿ ನಾಗಪ್ಪನನ್ನು ತಿರುಗಿಸಿ, ಕತ್ತಿಗೆ ಸುತ್ಕೊಂಡ ಕುಡುಕ

    ಗಿರ್ಗಿಟ್ಲೆ ರೀತಿ ನಾಗಪ್ಪನನ್ನು ತಿರುಗಿಸಿ, ಕತ್ತಿಗೆ ಸುತ್ಕೊಂಡ ಕುಡುಕ

    ಜೈಪುರ: ಮದ್ಯದ ನಶೆಯಿದ್ದ ಜನರು ಚಿತ್ರ ವಿಚಿತ್ರವಾಗಿ ವರ್ತಿಸುತ್ತಿರುತ್ತಾರೆ. ಆದರೆ ರಾಜಸ್ಥಾನದಲ್ಲೊಬ್ಬ ಕುಡುಕ ಮದ್ಯದ ನಶೆಯಲ್ಲಿ ನಾಗರ ಹಾವಿನೊಂದಿಗೆ ಸರಸಕ್ಕಿಳಿದಿದ್ದಾನೆ. ಹಾವಿನ ಮುಂದೆ ನಿಂತು ನಾನಾ, ನೀನಾ ನೋಡೇ ಬಿಡಣಾ ಎಂದು ನಾಗನಿಗೆ ಸವಾಲ್ ಹಾಕಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗಿದೆ.

    ಸಾಮಾನ್ಯವಾಗಿ ನಾಗರ ಹಾವನ್ನು ಕಂಡರೇ ಭಯಬಿದ್ದು ಜನ ಜಾಗ ಖಾಲಿ ಮಾಡುತ್ತಾರೆ. ಆದರೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ನಾಗರ ಹಾವಿನೊಂದಿಗೆ ಆಟವಾಡಿದ್ದಾನೆ. ಈ ಕುಡುಕನನ್ನು ಪ್ರಕಾಶ್ ಮಹಾವರ್ ಎಂದು ಗುರುತಿಸಲಾಗಿದೆ. ಹಾವನ್ನು ಕೈಯಲ್ಲಿ ಹಿಡಿದು ಗಿರ ಗಿರನೇ ಗಿರ್ಗಿಟ್ಲೆ ರೀತಿ ತಿರುಗಿಸಿ, ಸುಮಾರು 1 ಗಂಟೆಯ ಕಾಲ ಹಾವನ್ನು ಹಿಡಿದುಕೊಂಡು ಕುಡುಕ ಸತಾಯಿಸಿದ್ದಾನೆ. ಈ ದೃಶ್ಯವನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಕುಡುಕನ ಹುಚ್ಚಾಟ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿಬಿಟ್ಟಿದೆ.

    ದೌಸಾ ಜಿಲ್ಲೆಯ ಗದ್ದೆಯೊಂದರಲ್ಲಿ ತನ್ನ ಪಾಡಿಗೆ ಹರಿದಾಡಿಕೊಂಡು ಹೋಗುತ್ತಿದ್ದ ನಾಗರ ಹಾವಿನ ಕಂಡ ಪ್ರಕಾಶ್ ಅದರ ದಾರಿಯನ್ನು ತಡೆದಿದ್ದಾನೆ. ಕೆಲ ಸಮಯದ ಬಳಿಕ ಅದನ್ನು ಹಿಡಿದು ಗಿರ ಗಿರನೇ ತಿರುಗಿಸಿ, ತನ್ನ ಕೊರಳಿಗೆ ಧರಿಸಿಕೊಂಡು ಹುಚ್ಚಾಟವಾಡಿದ್ದಾನೆ. ನೀನಾ, ನಾನಾ ನೋಡೇ ಬಿಡಣಾ ಎಂದು ನಾಗಪ್ಪನಿಗೆ ಸವಾಲ್ ಹಾಕಿಕೊಂಡು ರಂಪಾಟ ಮಾಡಿದ್ದಾನೆ. ಈ ವೇಳೆ ಆತನಿಂದ ತಪ್ಪಿಸಿಕೊಳ್ಳಲು ಸಾಕಷ್ಟು ಬಾರಿ ಹಾವು ಆತನಿಗೆ ಕಚ್ಚಿದೆ. ಆದರೂ ಆತ ಮಾತ್ರ ಎಣ್ಣೆ ಏಟಲ್ಲಿ ಹುಚ್ಚಾಟ ಮುಂದುವರಿಸಿದ್ದ. ಈ ದೃಶ್ಯವು ವಿಡಿಯೋದಲ್ಲಿ ಸೆರೆಯಾಗಿದೆ.

    ಹಾವು ಕಚ್ಚಿದ ಪರಿಣಾಮ ಪ್ರಕಾಶ್ ಶರೀರ ನೀಲಿ ಬಣ್ಣಕ್ಕೆ ತಿರುಗುತ್ತಿದ್ದಂತೆ ತಕ್ಷಣ ಆತನನ್ನು ಸ್ಥಳೀಯರು ಆಸ್ಪತ್ರೆಗೆ ರವಾನಿಸಿದರು. ಸದ್ಯ ಪ್ರಕಾಶ್ ಸ್ಥಿತಿ ಹೇಗಿದೆ ಎನ್ನುವ ನಿಖರ ಮಾಹಿತಿ ಲಭ್ಯವಾಗಿಲ್ಲ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.

  • ಮದ್ಯದ ಅಮಲಿನಲ್ಲಿ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಬೈದು, ಭದ್ರತಾ ಸಿಬ್ಬಂದಿಗೆ ಥಳಿಸಿದ ರೋಗಿ

    ಮದ್ಯದ ಅಮಲಿನಲ್ಲಿ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಬೈದು, ಭದ್ರತಾ ಸಿಬ್ಬಂದಿಗೆ ಥಳಿಸಿದ ರೋಗಿ

    ಮಡಿಕೇರಿ: ರೋಗಿಯೊಬ್ಬ ಮದ್ಯದ ಅಮಲಿನಲ್ಲಿ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಬೈದು, ಸೆಕ್ಯುರಿಟಿ ಗಾರ್ಡ್ ಗೆ ಥಳಿಸಿದ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

    ವಿರಾಜಪೇಟೆಯ ದರ್ಶನ್ ಆಸ್ಪತ್ರೆಯಲ್ಲಿ ಗಲಾಟೆ ಮಾಡಿಕೊಂಡ ವ್ಯಕ್ತಿ. ದರ್ಶನ್ ಮದ್ಯ ಸೇವಿಸಿ ಆಸ್ಪತ್ರೆಗೆ ಬಂದಿದ್ದ. ಈ ವೇಳೆ ಮಹಿಳಾ ಸಿಬ್ಬಂದಿಯ ಜೊತೆಗೆ ಜಗಳ ಆರಂಭಿಸಿ, ಅವಾಚ್ಯ ಪದಗಳಿಂದ ಬೈದಿದ್ದಾನೆ. ಇದನ್ನು ಕೇಳಿಸಿಕೊಂಡ ಸೆಕ್ಯುರಿಟಿ ಗಾರ್ಡ್ ಜಗಳ ಬಿಡಿಸಲು ಮುಂದಾಗಿದ್ದಾನೆ. ಈ ವೇಳೆ ಮತ್ತಷ್ಟು ರಂಪಾಟ ಮಾಡಿದ ದರ್ಶನ್ ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ ಮಾಡಿದ್ದಾನೆ.

    ದರ್ಶನ್ ವರ್ತನೆಯಿಂದ ಬೇಸತ್ತ ಆಸ್ಪತ್ರೆಯ ಸಿಬ್ಬಂದಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆರೋಪಿ ದರ್ಶನ್‍ನನ್ನು ವ್ಯಕ್ತಿಯ ಬಂಧಿಸಿದ್ದಾರೆ. ಈ ಸಂಬಂಧ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.