Tag: Drunkers

  • ಲಾಕ್‍ಡೌನ್ ಎಫೆಕ್ಟ್- ಮಳೆಯನ್ನೂ ಲೆಕ್ಕಿಸದೆ ಮದ್ಯದಂಗಡಿ ಮುಂದೆ ಕುಡುಕರ ಕ್ಯೂ

    ಲಾಕ್‍ಡೌನ್ ಎಫೆಕ್ಟ್- ಮಳೆಯನ್ನೂ ಲೆಕ್ಕಿಸದೆ ಮದ್ಯದಂಗಡಿ ಮುಂದೆ ಕುಡುಕರ ಕ್ಯೂ

    ರಾಯಚೂರು: ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿರುವ ಹಿನ್ನೆಲೆ ನಾಳೆಯಿಂದ ಜಿಲ್ಲೆಯ ರಾಯಚೂರು ಹಾಗೂ ಸಿಂಧನೂರು ನಗರಗಳಲ್ಲಿ ಒಂದು ವಾರ ಸಂಪೂರ್ಣ ಲಾಕ್‍ಡೌನ್ ಮಾಡಲಾಗುತ್ತಿದೆ. ಹೀಗಾಗಿ ಕುಡುಕರು ಮಳೆಯನ್ನೂ ಲೆಕ್ಕಿಸದೆ ಒಂದು ವಾರಕ್ಕಾಗುವಷ್ಟು ಮದ್ಯ ಖರೀದಿಸಲು ಸರತಿಯಲ್ಲಿ ನಿಂತಿದ್ದಾರೆ.

    ಒಂದು ವಾರ ಮದ್ಯದಂಗಡಿಗಳು ಸಹ ಬಂದ್ ಆಗುವ ಹಿನ್ನೆಲೆ ಮದ್ಯ ಪ್ರೀಯರಿಗೆ ಕಷ್ಟವಾಗಿದ್ದು, ಮಳೆಯನ್ನೂ ಲೆಕ್ಕಿಸದೆ ಮದ್ಯದ ಅಂಗಡಿಗಳ ಮುಂದೆ ಕ್ಯೂ ನಿಂತಿದ್ದಾರೆ. ನಗರದ ಗಂಜ್ ರಸ್ತೆಯ ಎಂಎಸ್‍ಐಎಲ್ ಸೇರಿ ಬಹುತೇಕ ಕಡೆ ಮದ್ಯಕ್ಕಾಗಿ ದೊಡ್ಡ ಕ್ಯೂ ನಿಂತಿದ್ದು, ಒಂದು ವಾರಕ್ಕಾಗುವಷ್ಟು ಮದ್ಯ ಖರೀದಿಯಲ್ಲಿ ಕುಡುಕರು ಫುಲ್ ಬ್ಯುಸಿಯಾಗಿದ್ದಾರೆ.

    ನಾಳೆಯಿಂದ ರಾಯಚೂರು, ಸಿಂಧನೂರು ನಗರಗಳು ಸಂಪೂರ್ಣ ಬಂದ್ ಆಗಲಿದ್ದು, ಅಗತ್ಯ ಹಾಗೂ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಮದ್ಯದಂಗಡಿಗಳು ಸಂಪೂರ್ಣ ಬಂದ್ ಆಗಲಿವೆ. ರಾಯಚೂರು ನಗರದಲ್ಲಿ ಸಂಜೆಯಿಂದ ಮಳೆ ಸುರಿಯುತ್ತಿದ್ದು, ರಸ್ತೆಯಲ್ಲಿ ನೀರು ಹರಿದು ವಾಹನ ಸವಾರರು ಪರದಾಡುವಂತಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವೆಡೆ ಮಳೆಯಿಂದಾಗಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಇದಾವುದನ್ನೂ ಲೆಕ್ಕಿಸದ ಕುಡುಕರು ಮಳೆಯಲ್ಲೆ ಮದ್ಯದ ಅಂಗಡಿಗಳ ಮುಂದೆ ಕ್ಯೂ ನಿಂತು ಮದ್ಯ ಕೊಳ್ಳುತ್ತಿದ್ದಾರೆ.

  • ಎಣ್ಣೆ ಇಲ್ಲದೇ ಕುಡುಕರು ಕಂಗಾಲಾಗಿದ್ದಾರೆ: ಆಯನೂರು ಮಂಜುನಾಥ್

    ಎಣ್ಣೆ ಇಲ್ಲದೇ ಕುಡುಕರು ಕಂಗಾಲಾಗಿದ್ದಾರೆ: ಆಯನೂರು ಮಂಜುನಾಥ್

    ಶಿವಮೊಗ್ಗ: ಕೊರೊನಾ ವೈರಸ್ ಭೀತಿ ಹಿನ್ನೆಲೆ ಭಾರತ 21 ದಿನಗಳ ಕಾಲ ಲಾಕ್‍ಡೌನ್ ಆಗಿದೆ. ಇದರ ಪರಿಣಾಮ ಮದ್ಯದ ಅಂಗಡಿಗಳು ಬಂದ್ ಆಗಿವೆ. ಆದರೆ ಎಣ್ಣೆಗೆ ದಾಸರಾಗಿರುವವರು ಎಣ್ಣೆ ಸಿಗದೇ ಕಂಗಾಲಾಗಿದ್ದು ಅವರ ಕಥೆ ಹೇಳತೀರದಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಕೊರೊನಾ ವೈರಸ್ ಕುರಿತು ಜಿಲ್ಲಾಡಳಿತ ಕೈಗೊಂಡಿರು ಮುಂಜಾಗ್ರತಾ ಕ್ರಮದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಆಯನೂರು ಮಂಜುನಾಥ್ ಅವರು, ಸಿ.ಎಲ್-2 ಅಂಗಡಿಗಳು ತೆರೆಯಲು ಸೂಚನೆ ಇದ್ದರೂ ಅವರು ತೆಗೆಯುತ್ತಿಲ್ಲ. ಇದರ ಪರಿಣಾಮ ಕುಡಿಯುವವರ ಮನೆಯಲ್ಲಿ ಸಮಸ್ಯೆಯಾಗಿದೆ ಎಂದು ಕೇಳಲ್ಪಟ್ಟಿದ್ದೇನೆ. ಎಣ್ಣೆ ಸಿಗದೇ ಪ್ರತಿದಿನ ಕುಡಿಯುವವರು ಹೇಗೇಗೋ ಆಡ್ತಿದ್ದಾರೆ ಎಂದು ಕುಡುಕರ ಸಮಸ್ಯೆ ಬಗ್ಗೆ ಮಾತನಾಡಿದರು.

    ಇದಕ್ಕೆ ಪ್ರತಿಕ್ರಿಯಿಸಿದ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು, ವೈನ್ ಶಾಪ್‍ಗಳಿಗೆ ಸೀಲ್ ಮಾಡುವ ಮುನ್ನವೇ ಅಂಗಡಿಗಳಿಂದ ಮದ್ಯ ಹೊರಗೆ ಸಾಗಿಸಲಾಗಿದೆ ಎಂದು ಆರೋಪಿಸಿದರು. ಅಬಕಾರಿ ಇಲಾಖೆ ಅಧಿಕಾರಿಗಳು ಕೂಡ ಇದರಲ್ಲಿ ಶಾಮೀಲಾಗಿದ್ದು, ಅಂಗಡಿಗಳಿಂದ ಮದ್ಯವನ್ನು ಮನೆಗಳಿಗೆ ಹಾಗೂ ಇತರೆ ಅಂಗಡಿಗಳಿಗೆ ಸಾಗಿಸಿ, ಅಲ್ಲಿ ಮಾರಾಟ ಮಾಡಲಾಗುತ್ತಿದೆ. ಆದರೆ ಈ ಬಗ್ಗೆ ಅಬಕಾರಿ ಇಲಾಖೆ ಅಧಿಕಾರಿಗಳು ಗಮನವೇ ಹರಿಸುತ್ತಿಲ್ಲ. ಜನರು ಅಕ್ರಮವಾಗಿ ಮದ್ಯ ಮಾರಾಟ ಮಾಡುವ ಸ್ಥಳಗಳಲ್ಲಿ ಗುಂಪು ಗುಂಪಾಗಿ ಸೇರುತ್ತಿದ್ದಾರೆ ಎಂದು ಕಿಡಿಕಾರಿದರು.