Tag: dubare elephant camp

  • ಬತ್ತಿ ಬರಡಾಗುತ್ತಿದೆ ಕಾವೇರಿ ಒಡಲು – ದಡ ಸೇರಿದ ನೂರಾರು ರಿವರ್ ರಾಫ್ಟಿಂಗ್ ಬೋಟ್​

    ಬತ್ತಿ ಬರಡಾಗುತ್ತಿದೆ ಕಾವೇರಿ ಒಡಲು – ದಡ ಸೇರಿದ ನೂರಾರು ರಿವರ್ ರಾಫ್ಟಿಂಗ್ ಬೋಟ್​

    ಮಡಿಕೇರಿ: ಜೀವನದಿ ಕಾವೇರಿ (CauveryRiver)… ಕೊಡಗು, ಮೈಸೂರು, ಮಂಡ್ಯ ಸೇರಿದಂತೆ ತಮಿಳುನಾಡಿನ ಬಹಳಷ್ಟು ಜಿಲ್ಲೆಗಳಿಗೆ ಅಕ್ಷರಶಃ ಜೀವನದಿಯಾಗಿದೆ. ಆದರೆ ಈ ಬಾರಿ ಅವಧಿಗೆ ಮೊದಲೇ ಕಾವೇರಿ ನದಿ ಬತ್ತಲಾರಂಭಿಸಿದೆ. ಜೀವನದಿಯ ಒಡಲು ಬರಿದಾಗುತ್ತಿದೆ. ಹಾಗಾಗಿ ದುಬಾರೆ ಪ್ರವಾಸಿ ತಾಣದಲ್ಲಿ ಮಿಷಿನ್‌ ಬೋಟ್‌ಗಳು ಹಾಗೂ ರಿವರ್ ರಾಫ್ಟಿಂಗ್ ಬೋಟ್​ಗಳು (River Rafting Boat) ದಡ ಸೇರಿದ್ದು, ಲಾಕ್‌ಡೌನ್‌ನಂತೆ ಪ್ರವಾಸಿ ತಾಣಗಳು ಬಣಗುಡುತ್ತಿವೆ.

    ಕೊಡಗು ಜಿಲ್ಲೆಗೆ ಆಗಮಿಸುವ ದೇಶ ವಿದೇಶಗಳ ಪ್ರವಾಸಿಗರ ಪಾಲಿನ ಹಾಟ್ ಸ್ಪಾಟ್ ಎಂದೇ ಜನಜನಿತವಾಗಿರುವ ಕುಶಾಲನಗರ ತಾಲ್ಲೂಕಿನ ದುಬಾರೆ ಕಾವೇರಿ ತೀರ ರಣ ಬಿಸಿಲಿಗೆ ದಿನೇ ದಿನೇ ಒಣಗಿ ಬಣಗುಟ್ಟುತ್ತಿದೆ. ದುಬಾರೆ ಸಾಕಾನೆ ಶಿಬಿರದಲ್ಲಿರುವ ಸಾಕಾನೆಗಳಿಗೆ ನಿತ್ಯವೂ ಮಾಡಿಸುವ ಸ್ನಾನ ಹಾಗೂ ಅವುಗಳ ದಾಹ ನೀಗಿಸುವ ಪಾನಕ್ಕೆ ನೀರಿನ ಬರ ಎದುರಾಗುವ ಎಲ್ಲಾ ಲಕ್ಷಣಗಳು ಗೋಚರವಾಗುತ್ತಿವೆ. ಇದನ್ನೂ ಓದಿ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಎ.ಆರ್.ರೆಹಮಾನ್

    ಇನ್ನು ಹತ್ತು ದಿನಗಳಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಬಾರದಿದ್ದರೆ ಜೀವನದಿ ಕಾವೇರಿಯಲ್ಲಿ ಹರಿಯುವ ನೀರು ಸಂಪೂರ್ಣ ಸ್ಥಗಿತವಾದರೂ ಅಚ್ಚರಿಪಡಬೇಕಿಲ್ಲ. ಈ ನಡುವೆ ಕಾವೇರಿಯಲ್ಲಿ ನೀರು ಕಡಿಮೆಯಾಗಿರುವುದರಿಂದ ಮೋಟಾರ್ ಬೋಟ್​ ಓಡಿಸಲಾಗುತ್ತಿಲ್ಲ. ಈ ಕಾರಣದಿಂದಾಗಿ ಅರಣ್ಯ ಇಲಾಖೆ ಬೋಟ್ ಸಂಚಾರ ನಿಲ್ಲಿಸಿದೆ. ಜೊತೆಗೆ ಖಾಸಗಿ ರಿವರ್‌ ರಾಫ್ಟಿಂಗ್ ಬೋಟ್​ಗಳು ಕೂಡ ನೀರಿಲ್ಲದೇ ಸಂಚಾರ ನಿಲ್ಲಿಸಿವೆ. ಈ ಕಾರಣದಿಂದಾಗಿ ಪ್ರವಾಸಿಗರು ಅನಿವಾರ್ಯವಾಗಿ ಅಪಾಯಕಾರಿ ನದಿಯನ್ನ ದಾಟಿಯೇ ದುಬಾರೆಗೆ ತೆರಳುತ್ತಿದ್ದಾರೆ. ಇದನ್ನೂ ಓದಿ: Explainer | ಯಾರಿದು ಹೌತಿ ಉಗ್ರರು? ಅಮೆರಿಕ ದಾಳಿ ನಡೆಸಿದ್ದು ಯಾಕೆ? ವಿಶ್ವಕ್ಕೆ ಸಮಸ್ಯೆ ಏನು?

    ಇನ್ನೂ ದುಬಾರೆ ಸಾಕಾನೆ ಶಿಬಿರಕ್ಕೆ ಅಗಮಿಸುವ ಬೆರಳೆಣಿಕೆಯ ಪ್ರವಾಸಿಗರು ತಮ್ಮ ವೃದ್ಧ ತಂದೆ ತಾಯಿ, ಪುಟ್ಟ ಪುಟ್ಟ ಮಕ್ಕಳು ಎಲ್ಲರನ್ನ ಕರೆದುಕೊಂಡು ಆನೆ ಶಿಬಿರ ನೋಡಲು ನದಿ ದಾಟುವ ಪ್ರಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ನದಿ ದಾಟುವ ಯತ್ನದಲ್ಲಿ ಹಲವು ಮಂದಿ ತಮ್ಮ ಬೆಲೆ ಬಾಳುವ ಮೊಬೈಲ್​ಗಳನ್ನ ಕಳೆದುಕೊಂಡಿದ್ದಾರಂತೆ. ಕಾವೇರಿ ನದಿ ಅವಧಿಗೆ ಮೊದಲೇ ಬತ್ತುತ್ತಿರುವುದು ಹಲವರ ಅಚ್ಚರಿಗೆ ಕಾರಣವಾಗಿದೆ. ಇದರಿಂದ ಪ್ರವಾಸೋದ್ಯಮವನ್ನೆ ಅವಲಂಬಿಸಿಕೊಂಡು ಬದುಕು ನಡೆಸುತ್ತಿರುವ ವರ್ತಕರಿಗೆ ಹಾಗೂ ಅಂಗಡಿ. ಮುಗ್ಗಟ್ಟುಗಳಿಗೂ ಬಿಸಿ ತಟ್ಟಿದೆ. ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಮುಕ್ತನಾಗುತ್ತೇನೆ, ಕಾಯಿರಿ: ಪವರ್ ಶೇರ್ ಗೇಮ್‌ಗೆ ಡಿಕೆಶಿ ಚಾಲನೆ

    ಒಟ್ನಲ್ಲಿ ನೀರಿಲ್ಲದೇ ನದಿ ಪರಿಸರ ಬಿಕೋ ಎನ್ನುತ್ತಿದ್ದು ನೋಡುಗರಿಗೆ ಹಾಗೂ ಪರಿಸರ ಪ್ರೇಮಿಗಳ ಮನಸ್ಸಿಗೆ ನೋವಾಗುತ್ತಿದೆ. ಇದನ್ನೂ ಓದಿ: ಡಿಜಿಪಿ ರಾಮಚಂದ್ರ ರಾವ್‌ಗೆ ಮತ್ತೊಂದು ಸಂಕಷ್ಟ – 2014 ರ ಇಲವಾಲ ಪೊಲೀಸ್ ದರೋಡೆ ಕೇಸ್ ಮತ್ತೆ ಮುನ್ನೆಲೆಗೆ

  • ವರ್ಷದ ಪ್ರಯತ್ನದ ಫಲ, `ಕಾಜೂರು ಕರ್ಣ’ ಸೆರೆ – ರೈತರ ಗುಂಡಿನ ದಾಳಿಯಿಂದ ಆನೆ ನರಳಾಟ

    ವರ್ಷದ ಪ್ರಯತ್ನದ ಫಲ, `ಕಾಜೂರು ಕರ್ಣ’ ಸೆರೆ – ರೈತರ ಗುಂಡಿನ ದಾಳಿಯಿಂದ ಆನೆ ನರಳಾಟ

    ಮಡಿಕೇರಿ: ಮೈತುಂಬೆಲ್ಲ ಗುಂಡೇಟಿನ ಚಹರೆಗಳು. ಎರಡು ಕಾಲಿನಲ್ಲಿ ಸ್ವಾಧೀನ ಇಲ್ಲದೇ ರೋದಿಸುತ್ತಿರುವ ಕಾಡಾನೆ. ಸಾಕಾನೆ ಶಿಬಿರದ ಆನೆ ಕ್ರಾಲ್ ಒಳಗೆ ಚಿಕಿತ್ಸೆ ಪಡೆಯುತ್ತಿರುವ ಕಾಜೂರು ಕರ್ಣ. ಈ ದೃಶ್ಯ ಕಂಡು ಬಂದಿದ್ದು ಕೊಡಗಿನ ದುಬಾರೆ ಸಾಕಾನೆ ಶಿಬಿರ (Dubare Elephant camp) ದಲ್ಲಿ.

    ಹೌದು. ಒಂದು ವರ್ಷದ ಪ್ರಯತ್ನದ ಫಲವಾಗಿ `ಕಾಜೂರು ಕರ್ಣ’ ಸೆರೆಯಾಗಿದ್ದಾನೆ. ಆದ್ರೆ ಜಮೀನಿಗೆ ಲಗ್ಗೆ ಇಡುವ ವೇಳೆ ರೈತರು (Farmers) ಆನೆ ಮೇಲೆ ಗುಂಡಿನ ದಾಳಿಯಿಂದ ಆನೆ ನರಳಾಡುತ್ತಿದೆ. ಆನೆಯ ನರಳಾಟ ಕಂಡು ಅರಣ್ಯ ಇಲಾಖೆ ಸಿಬ್ಬಂದಿ ಕಣ್ಣೀರು ಹಾಕುತ್ತಿದ್ದಾರೆ. ಇದನ್ನೂ ಓದಿ: ಭಾರತ್‌ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ʻಕೈʼ ಕಾರ್ಯಕರ್ತೆ ಸೂಟ್‌ಕೇಸ್‌ನಲ್ಲಿ ಶವವಾಗಿ ಪತ್ತೆ

    ಕೆಲ ವರ್ಷಗಳಿಂದ ಸೋಮವಾರಪೇಟೆ ತಾಲ್ಲೂಕಿನ ಕಾಜೂರು ಭಾಗದಲ್ಲಿ ಜನರಿಗೆ ಇನ್ನಿಲ್ಲದಂತೆ ಕಾಡುತ್ತಿದ್ದ ಒಂಟಿ ಸಲಗವನ್ನು ಅರಣ್ಯ ಇಲಾಖೆ (Forest Department) ಒಂದು ತಿಂಗಳ ಹಿಂದೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಯಿತು. ಕಾಜೂರು ಕರ್ಣ ಎಂದೇ ಕಾಜೂರು ಭಾಗದಲ್ಲಿ ಹೆಸರಾಗಿದ್ದ ಕಾಡಾನೆ (Wild Elephant) ಸೆರೆಗೆ ಒಂದು ವರ್ಷದ ಹಿಂದೆಯೆ ಅನುಮತಿ ದೊರೆತಿತ್ತು. ಆದರೆ, ಅಷ್ಟೂ ದಿನಗಳಿಂದ ಅರಣ್ಯ ಇಲಾಖೆಯ ಕಣ್ತಪ್ಪಿಸಿ ಚಾಣಾಕ್ಷತನದಿಂದ ಈ ಆನೆ ತಪ್ಪಿಸಿಕೊಳ್ಳುತ್ತಿತ್ತು. ಸಿಸಿಟಿವಿಗಳನ್ನು ಅಳವಡಿಸಿ ಕಾಡಾನೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಸೆರೆ ಹಿಡಿದು ದುಬಾರೆ ಸಾಕಾನೆ ಶಿಬಿರಕ್ಕೆ ಕರೆತಂದಿದ್ದಾರೆ. ಆದ್ರೆ, ಈ ವೇಳೆ ಕಾಜೂರು ಕರ್ಣನ ಮೈತುಂಬ ಗುಂಡಿನ ದಾಳಿಗಳೇ ನಡೆದಿರೋದು ಕಂಡು ಬಂದಿದೆ.

    ಎರಡು ಕಾಲಿಗೂ ಗುಂಡೆಟ್ಟು ತಗುಲಿ ಕಾಲಿನ ಸ್ವಾದಿನವನ್ನೆ ಕರ್ಣ ಕಳೆದುಕೊಂಡು ಮುಕರೋಧನೆಯನ್ನು ಅನುಭವಿಸುತ್ತಿದ್ದಾನೆ. ಒಂದು ತಿಂಗಳಿನಿಂದ ನಿದ್ರೆಯನ್ನು ಮಾಡದೇ ನೋವು ನುಂಗುತ್ತಿದ್ದಾನೆ. ಆನೆ ಪರಿಸ್ಥಿತಿ ಕಂಡು ಅರಣ್ಯ ಇಲಾಖೆ ಅಧಿಕಾರಿಗಳೇ ಕಣ್ಣಿರು ಸುರಿಸುತ್ತಿದ್ದಾರೆ. ಗುಂಡಿನ ದಾಳಿ ನಡೆಸುವ ಬದಲು ಪಟಾಕಿ ಸಿಡಿಸಿ, ಸದ್ದು ಮಾಡಿ ಕಾಡಾನೆಗಳನ್ನು ಹಿಮ್ಮೆಟ್ಟಿಸಿ ಅಂತ ಅರಣ್ಯ ಇಲಾಖೆ ಸಿಬ್ಬಂದಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಿಚನ್‌ನಲ್ಲಿ ಕಪ್ಪು ಪ್ಲಾಸ್ಟಿಕ್ ಕಂಟೇನರ್ ಬಳಸೋ ಮುನ್ನ ಎಚ್ಚರ! – ಇದು ಎಷ್ಟು ಸುರಕ್ಷಿತ?

    ಕೊಡಗು ಜಿಲ್ಲೆಯಲ್ಲಿ ಆನೆ ಮಾನವನ ಸಂಘರ್ಷ ಹಲವಾರು ವರ್ಷಗಳಿಂದ ಇದೆ. ಇಲ್ಲಿನ ಜನ ಕಾಡಾನೆಗಳ ಜೊತೆಯೂ ಬದುಕು ಸಾಗಿಸುವ ದಾರಿಯನ್ನು ಕಂಡುಕೊಂಡಿದ್ದಾರೆ. ಶಿಬಿರದಲ್ಲಿ ಇರುವ ಕಾಜೂರು ಕರ್ಣನ ಪರಿಸ್ಥಿತಿಯನ್ನು ಕಂಡು ರೈತರು ಕೂಡ ಮರಗುತ್ತಿದ್ದಾರೆ. ಇದನ್ನ ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿ ಕಾಡಾನೆಗಳು ನಾಡಿನತ್ತ ಕಾಲಿಡದಂತೆ ಕ್ರಮವಹಿಸಿ ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ರಾಜಕೀಯ ಚದುರಂಗದಾಟಕ್ಕೆ ಮೂಡಿಗೆರೆ ಬಿಜೆಪಿ ಬಲಿ, ಬಹುಮತವಿದ್ರೂ ಕಾಂಗ್ರೆಸ್‌ಗೆ ಅಧಿಕಾರ!

  • 2 ಜೀವಗಳನ್ನ ಬಲಿ ಪಡೆದಿದ್ದ, ಇಡೀ ಗ್ರಾಮದ ಜನರನ್ನೇ ಕಾಡಿದ್ದ ಸಲಗ ಕೊನೆಗೂ ಸೆರೆ

    2 ಜೀವಗಳನ್ನ ಬಲಿ ಪಡೆದಿದ್ದ, ಇಡೀ ಗ್ರಾಮದ ಜನರನ್ನೇ ಕಾಡಿದ್ದ ಸಲಗ ಕೊನೆಗೂ ಸೆರೆ

    ಮಡಿಕೇರಿ: ಎರಡು ಜೀವಗಳನ್ನ ಬಲಿ ಪಡೆದು, ಇಡೀ ಗ್ರಾಮದ ಜನರಿಗೆ ಕಾಟ ಕೊಡುತ್ತಿದ್ದ ಒಂಟಿ ಸಲಗವನ್ನ ಕೊನೆಗೂ ಅರಣ್ಯ ಇಲಾಖೆ (Kodagu Forest Department) ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

    ಹೌದು.. ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಚೆನ್ನಂಗೊಲ್ಲಿ, ಭದ್ರಗೊಳ, ದೇವರಪುರ ವ್ಯಾಪ್ತಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಅಡ್ಡಾಡುತ್ತಿದ್ದ ಪುಂಡ ಕಾಡಾನೆ (Wild Elephant) ಸುತ್ತಮುತ್ತಲಿನ ಗ್ರಾಮದ ಜನರನ್ನ ಸಿಕ್ಕಾಪಟ್ಟೆ ಕಾಡಿತ್ತು. ಅಂದಾಜು 40 ವರ್ಷ ಪ್ರಾಯದ ಒಂಟಿ ಸಲಗ ಕೆಲವು ತಿಂಗಳ ಹಿಂದೆ ಇದೇ ಭದ್ರಗೊಳ ಗ್ರಾಮದಲ್ಲಿ ಗೌರಿ ಎಂಬ ಮಹಿಳೆಯನ್ನ ಬಲಿ ಪಡೆದಿತ್ತು. ಅದಾದ ಬಳಿಕ ಎರಡು ದಿನಗಳ ಹಿಂದೆ ಚೆನ್ನಂಗೊಲ್ಲಿ ಗ್ರಾಮದಲ್ಲಿ ಪಾರ್ವತಿ (52) ಎಂಬ ಮಹಿಳೆಯನ್ನ ತುಳಿದು ಸಾಯಿಸಿತ್ತು. ಇದನ್ನೂ ಓದಿ: ಎಲಾನ್‌ ಮಸ್ಕ್‌ ಅವರ 13ನೇ ಮಗುವಿಗೆ ಜನ್ಮ ನೀಡಿದ್ದೇನೆ: ಆಶ್ಲೇ ಹೇಳಿಕೆಗೆ ಮೌನ ಮುರಿದ ಮಸ್ಕ್‌

    ಅಷ್ಟೇ ಅಲ್ಲದೇ ಸುತ್ತ ಮುತ್ತಲಿನ ಬಹಳಷ್ಟು ಮಂದಿಯ ಮೇಲೆ ದಾಳಿ ಮಾಡಿ ಭೀತಿ ಹುಟ್ಟಿಸಿತ್ತು. ಹೀಗಾಗಿ ಈ ಆನೆಯನ್ನ ಸೆರೆ ಹಿಡಿಯಲೇಬೇಕೆಂದು ಗ್ರಾಮಸ್ಥರು ರಾಜ್ಯ ವನ್ಯ ಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಶಾಸಕ ಎ.ಎಸ್ ಪೊನ್ನಣ್ಣ ಅವರ ಮೂಲಕ ಅರಣ್ಯ ಸಚಿವರಿಗೆ ಒತ್ತಡ ಹೇರಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಾಡಾನೆ ಸೆರೆಗೆ ಅನುಮತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಭದ್ರಗೊಳ ಗ್ರಾಮದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ನಡೆಯಿತು.

    ಸದ್ಯ ಈ ಆನೆಗೆ ʻವೇದʼ ಎಂದು ಹೆಸರಿಡಲಾಗಿದೆ. ಇದು ಮೊನ್ನೆ ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿದ ಬಳಿಕ ಇದೇ ಗ್ರಾಮದ ಸುತ್ತಮುತ್ತಲಿನ ಕಾಫಿ ತೋಟ, ದೇವರ ಕಾಡಿನಲ್ಲಿ ಅಡ್ಡಾಡುತ್ತಿತ್ತು. ಹೀಗಾಗಿ ಅರಣ್ಯಾಧಿಕಾರಿಗಳು ಈ ಪುಂಡಾನೆ ಮೇಲೆ ಕಣ್ಣಿಟ್ಟಿದ್ದರು, ಸೆರೆ ಹಿಡಿಯಲು ಅನುಮತಿ ಸಿಕ್ಕ ಕೂಡಲೆ ಕಾರ್ಯಾಚರಣೆ ನಡೆಸಿದ್ರು. ಇದನ್ನೂ ಓದಿ: ಅಯೋಧ್ಯೆಗೆ ತೆರಳಿದ್ದ ಕಾರಿನ ಗ್ಲಾಸ್ ಒಡೆದು ಕಳ್ಳತನ – 10 ಮೊಬೈಲ್, 20,000 ರೂ. ದೋಚಿದ ಖದೀಮರು

    ದುಬಾರೆ, ಮತ್ತಿಗೋಡು ಮತ್ತು ಹಾರಂಗಿ ಸಾಕಾನೆ ಶಿಬಿರದ ಏಳು ಸಾಕಾನೆಗಳು ಮತ್ತು 90ಕ್ಕೂ ಅಧಿಕ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ರು. ದೇವರ ಕಾಡಿನಲ್ಲಿ ಬಿಂದಾಸ್ ಆಗಿ ಅಡ್ಡಾಡುತ್ತಿದ್ದ ಕಾಡಾನೆಗೆ ಅರವಳಿಕೆ ತಜ್ಞ ಡಾ.ರಮೇಶ್ ಅರವಳಿಕೆ ಇಂಜೆಕ್ಷನ್ ಶೂಟ್​ ಮಾಡಿದ್ರು. ಇಷ್ಟು ದಿನ ತನ್ನದೇ ಲೋಕದಲ್ಲಿ ವಿಹರಿಸುತ್ತಾ ಪುಂಡಾಟವಾಡುತ್ತಿದ್ದ ವೇದ ಕೊನೆಗೂ ಸೆರೆಯಾಯಿತು. ಸೆರೆಯಾದ ಬಳಿಕ ಹೆಚ್ಚೇನೂ ನಖರಾ ಮಾಡದೇ ಕ್ರೇನ್ ಸಹಾಯದಿಂದ ಲಾರಿ ಏರಿತು.

    ಸದ್ಯ ವೇದನನ್ನ ದುಬಾರೆ ಸಾಕಾನೆ ಶಿಬಿರಕ್ಕೆ ಕರೆದೊಯ್ಯಲಾಗಿದ್ದು ಅಲ್ಲಿ ಕ್ರಾಲ್​ನಲ್ಲಿ ಹಾಕಿ ಸನ್ನಡತೆಯ ಪಾಠ ಹೇಳಲಾಗುತ್ತದೆ. ಇದನ್ನೂ ಓದಿ: ಸ್ಥಳೀಯ ಚುನಾವಣೆಯಿಂದ ಲೋಕಸಭಾ ಚುನಾವಣೆವರೆಗೂ ಸಿದ್ದರಾಮಯ್ಯ ಬೇಕು: ಡಿಕೆಶಿ

  • ಪವನ್‌ ಕಲ್ಯಾಣ್‌ ಮನವಿ – ಆಂಧ್ರದ ಅರಣ್ಯ ಸಿಬ್ಬಂದಿಗೆ ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ತರಬೇತಿ

    ಪವನ್‌ ಕಲ್ಯಾಣ್‌ ಮನವಿ – ಆಂಧ್ರದ ಅರಣ್ಯ ಸಿಬ್ಬಂದಿಗೆ ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ತರಬೇತಿ

    ಮಡಿಕೇರಿ: ಆಂಧ್ರ ಪ್ರದೇಶದ ಅರಣ್ಯ ಇಲಾಖೆ ಸಿಬ್ಬಂದಿಗೆ 1 ತಿಂಗಳು ತರಬೇತಿ ನೀಡುವ ಕಾರ್ಯಾಗಾರಕ್ಕೆ ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ (Dubare Elephant Camp) ಚಾಲನೆ ಸಿಕ್ಕಿದೆ. ಆಂಧ್ರದ ಅರಣ್ಯ ಸಚಿವ ಪವನ್‌ ಕಲ್ಯಾಣ್‌ (Pawan Kalyan) ಅವರ ಮನವಿ ಮೇರೆಗೆ 20ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ.

    ಕಾಡಾನೆ (Forest Elephant) ಸೇರಿದಂತೆ ವನ್ಯಜೀವಿಗಳ ಸಮಸ್ಯೆ ಕರ್ನಾಟಕ ಮಲೆನಾಡು ಭಾಗದಲ್ಲಿ ಮಾತ್ರವಲ್ಲ, ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲೂ ಹೆಚ್ಚಾಗಿದೆ. ಕಾಡಾನೆಗಳ ಹಾವಳಿಯಂತು ಮಿತಿಮೀರಿಹೋಗಿದೆ. ನಾಡಿಗೆ ನುಗ್ಗುವ ಆನೆಗಳನ್ನ ಮತ್ತೆ ಕಾಡಿಗಟ್ಟಲು ನುರಿತ ಮಾವುತರು ಹಾಗೂ ಕಾವಾಡಿಗಳು ಇಲ್ಲದೇ ಇರೋದು ಸಮಸ್ಯೆಗೆ ಕಾರಣವಾಗಿದೆ. ಆದ್ದರಿಂದ ವನ್ಯಜೀವಿ ನಿರ್ವಹಣೆ ಕುರಿತು ರಾಜ್ಯದ ಅರಣ್ಯ ಸಿಬ್ಬಂದಿಗೆ ತರಬೇತಿ ನೀಡಬೇಕೆಂದು ಕರ್ನಾಟಕದ ಅರಣ್ಯ ಸಚಿವರಾದ ಈಶ್ವರ ಖಂಡ್ರೆ (Eshwar Khandre) ಅವರಿಗೆ ಪವನ್‌ ಕಲ್ಯಾಣ್ ಮನವಿ ಮಾಡಿದ್ದರು. ಅದರಂತೆ‌ ಎರಡು ರಾಜ್ಯಗಳ ಅರಣ್ಯ ಇಲಾಖೆಗಳ ಪರಸ್ಪರ ಸಹಕಾರದೊಂದಿಗೆ ತರಬೇತಿ ನೀಡಲಾಗುತ್ತಿದೆ. ಇದನ್ನೂ ಓದಿ: ಕರುನಾಡಿಗೆ ಮತ್ತೊಂದು ಗರಿ: ದೇಶದ ಅತ್ಯಂತ ಕಿರಿಯ ಪೈಲಟ್ ಆಗಿ ವಿಜಯಪುರದ ಸಮೈರಾ

    ಆಂಧ್ರ ಪ್ರದೇಶದ 17 ಮಾವುತ ಮತ್ತು ಕಾವಾಡಿಗರು, ನಾಲ್ವರು ಇಲಾಖೆ ಸಿಬ್ಬಂದಿ ಸೇರಿ 21 ಮಂದಿಗೆ ನಮ್ಮ ರಾಜ್ಯದ ಮಾವುತರು ಮತ್ತು ಕವಾಡಿಗಳು ತರಬೇತಿ ನೀಡುತ್ತಿದ್ದಾರೆ. ಸಾಕಾನೆಗಳಿಗೆ ಸ್ನಾನ ಮಾಡಿಸುವುದು, ಆಹಾರ ಕೊಡುವುದು, ಇಂತಹದ್ದೇ ಪದಗಳನ್ನು ಬಳಸಿ ಆನೆಗಳನ್ನು ಮಾತನಾಡಿಸುವುದು, ವನ್ಯಜೀವಿ‌ ಸಂಘರ್ಷ ತಡೆಯುವುದು ಸೇರಿದಂತೆ ಇನ್ನಿತರ ವನ್ಯಜೀವಿ ನಿರ್ವಹಣೆ ಕುರಿತು ಹೇಳಿಕೊಡುತ್ತಿದ್ದಾರೆ. ಇದನ್ನೂ ಓದಿ: ಕೋಲಾರಕ್ಕೆ ಈ ಬಾರಿ ಮಂತ್ರಿ ಸ್ಥಾನ ನೀಡಲೇಬೇಕು, ನಾನು ಅರ್ಹನಿದ್ದೇನೆ: ಕೆವೈ ನಂಜೇಗೌಡ

    ಆನೆ ಪಳಗಿಸುವುದು ಹೇಗೆ?
    ಒಂದು ಆನೆಯನ್ನು ಪಳಗಿಸಿ ಸರಿದಾರಿಗೆ ತರೋದು ಮಕ್ಕಳಿಗೆ ಅ, ಆ, ಇ, ಈ ಕಲಿಸಿದಷ್ಟು ಸುಲಭದ ಕೆಲಸವಲ್ಲ. ಕೊಂಚ ಯಡವಟ್ಟಾದ್ರೂ ಪ್ರಾಣವೇ ಹೋಗುವ ಸಾಧ್ಯತೆ ಹೆಚ್ಚು. ಅದಕ್ಕಾಗಿ ಮಾವುತರು ಬಹಳ ಜಾಣ್ಮೆಯಿಂದಲೇ ಪಾಠ ಹೇಳಿಕೊಡುತ್ತಾರೆ. ಒಂದೊಂದೇ ಪದವನ್ನು ಕಲಿಸುತ್ತಾ… ಆನೆ ತಮ್ಮ ಮಾತಿಗೆ ಸ್ಪಂದಿಸಿದಾಗ ಶಬ್ಬಾಸ್ ಹೇಳಿ ಮೈದಡವಿ ಖುಷಿಡಿಸುತ್ತಾರೆ.

    ಹೀಗೆ ನಿಧಾನವಾಗಿ ಆನೆಯನ್ನ ತಮ್ಮವಶಕ್ಕೆ ತೆಗೆದುಕೊಳ್ಳುಬೇಕು ಎಂದು ಇಲ್ಲಿನ ಮಾವುತರು ಆಂಧ್ರಪ್ರದೇಶದ ಅರಣ್ಯ ಸಿಬ್ಬಂದಿಗೆ ಪಾಠ ಹೇಳಿಕೋಡುತ್ತಿದ್ದಾರೆ. ಇದನ್ನೂ ಓದಿ: ಒಂದು ಕ್ಷಣವೂ ಯೋಚಿಸದೇ ದಾಖಲೆ, ವೀಡಿಯೋ ರಿಲೀಸ್‌ ಮಾಡ್ಲಿ – ಯತ್ನಾಳ್‌ಗೆ ವಿಜಯೇಂದ್ರ ಸವಾಲ್‌

  • ದುಬಾರೆ ಸಾಕಾನೆ ಶಿಬಿರದಲ್ಲಿ ಮತ್ತೆ ಧನಂಜಯ – ಕಂಜನ್‌ ಫೈಟ್‌

    ದುಬಾರೆ ಸಾಕಾನೆ ಶಿಬಿರದಲ್ಲಿ ಮತ್ತೆ ಧನಂಜಯ – ಕಂಜನ್‌ ಫೈಟ್‌

    ಮಡಿಕೇರಿ: ದಸರಾ ಮಹೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದ್ದ ಕಂಜನ್‌ (Kanjan Elephant) ಮತ್ತು ಧನಂಜಯ ಆನೆಗಳು ಮತ್ತೆ ದುಬಾರೆ ಸಾಕಾನೆ ಶಿಬಿರದಲ್ಲಿ (Dubare Elephant Camp) ಕಾದಾಟ ನಡೆಸಿವೆ.

    ಇತ್ತೀಚೆಗಷ್ಟೇ ಮುಕ್ತಾಯಗೊಂಡ ಮೈಸೂರು ದಸರಾ ಸಂದರ್ಭದಲ್ಲಿ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ ದಸರಾ ಗಜಪಡೆಯ ಭಾಗವಾಗಿದ್ದ ಧನಂಜಯ ಆನೆ (Dhananjaya Elephant), ಕಂಜನ್‌ ಆನೆಯನ್ನು ಅಟ್ಟಾಡಿಸಿತ್ತು. ಈ ವೇಳೆ ಜನರು ದಿಕ್ಕಾಪಾಲಾಗಿ ಓಡಿದ್ದರು. ಈ ಘಟನೆ ಮಾಸುವ ಮುನ್ನವೇ ಧನಂಜಯ ಹಾಗೂ ಕಂಜನ್ ಮತ್ತೆ ಕಾದಾಟ ನಡೆಸಿವೆ. ಇದನ್ನೂ ಓದಿ: ಸಂಸದ ಸುಧಾಕರ್ ಬಾಗಿನ ಅರ್ಪಣೆಗೆ ಆಗಮಿಸುವಷ್ಟರಲ್ಲಿ ಹೆಜ್ಜೇನು ದಾಳಿ – ನಗರಸಭಾ ಸದಸ್ಯರು ಸೇರಿ ಹಲವರು ಆಸ್ಪತ್ರೆಗೆ ದಾಖಲು

    ಹೌದು. ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ದುಬಾರೆ ಸಾಕಾನೆ ಶಿಬಿರದಲ್ಲಿಂದು ಧನಂಜಯ ಆನೆ ಮತ್ತು ಕಂಜನ್ ಅನೆಗಳು ಮತ್ತೆ ಶಿಬಿರದಲ್ಲಿ ಫೈಟ್ ಮಾಡಿಕೊಂಡಿವೆ. ಬೆಳಗ್ಗೆ ಧನಂಜಯ ಆನೆ ಮತ್ತು ಕಂಜನ್ ಆನೆ ಶಿಬಿರದ ಒಳಗೆ ಹೋಗುವ ಸಂದರ್ಭ ಎರಡು ಅನೆಗಳು ಮುಖಾಮುಖಿಯಾಗಿವೆ. ದಿಢೀಋನೆ ಧನಂಜಯ ಆನೆ ಕಂಜನ್, ಆನೆ ಮೇಲೆ ಏಕಾಏಕಿ ದಾಳಿ ಮಾಡಲು ಮುಂದಾಗಿದೆ. ಶಿಬಿರದ ಕಾಂಪೌಂಡ್ ಬಳಿ ತಳಿಕೊಂಡು ಹೋಗಿ ಸೊಂಡಿಲಿನಲ್ಲಿ ಕಂಜನ್ ಆನೆಗೆ ಹೋಡೆದು ನಂತರ ತನ್ನ ದಂತದಿಂದ ಬಾಲದ ಬಳಿ ತಿವಿದು ನಂತರ ಕಾಲಿಗೂ ತಿವಿದಿದೆ. ಹೀಗಾಗಿ ಕಂಜನ್ ಆನೆಗೆ ಕಾಲಿಗೆ ಗಂಭೀರ ಗಾಯವಾಗಿದೆ.

    ಬೆಳಗ್ಗೆಯಿಂದಲ್ಲೂ ಮದದಲ್ಲಿ ಇದ್ದ ಧನಂಜಯನನ್ನು ನಿಯಂತ್ರಣ ಮಾಡಲು ಮಾವುತರು ಕಾವಾಡಿಗಳು ಪ್ರಯತ್ನ ಮಾಡಿದರು. ಅಲ್ಲದೇ ಶಿಬಿರದಲ್ಲಿ ನೂರಾರು ಪ್ರವಾಸಿಗರು ಇರುವ ಸಂದರ್ಭದಲ್ಲೇ ಸಾಕಾನೆಗಳ ಕಾದಾಟ ಆಗಿರುವುದರಿಂದ ಪ್ರವಾಸಿಗರು ಕೆಲ ನಿಮಿಷಗಳ ಕಾಲ ಆತಂಕಕ್ಕೆ ಒಳಗಾಗಿದ್ರು. ನಂತರ ಧನಂಜಯ ಆನೆಯನ್ನು ಮಾವುತರು ಕಾವೇರಿ ನದಿಯ ಬಳಿ ಕರೆದುಕೊಂಡು ಸರಪಳಿಯಿಂದ ಕಟ್ಟಿದ ನಂತರ ವಾತಾವರಣ ತಿಳಿಯಾಗಿದೆ ಎಂದು ಅರಣ್ಯ ಇಲಾಖೆಯ ಆದಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಫಸ್ಟ್‌ ಟೈಂ ಸೆಟ್‌ಗೆ ಬಂದಾಗ ದಪ್ಪಗಿದ್ದೇನೆ, ಕುಳ್ಳಗಿದ್ದೇನೆಂದು ಅಪಹಾಸ್ಯ ಮಾಡಿದ್ದರು: ನಿತ್ಯಾ ಮೆನನ್‌ 

  • ಕೊಡಗಿನಲ್ಲಿ ಭಾರೀ ಮಳೆ- ದುಬಾರೆ ಆನೆ ಶಿಬಿರಕ್ಕೆ ಪ್ರವಾಸಿಗರಿಗೆ ನಿಷೇಧ

    ಕೊಡಗಿನಲ್ಲಿ ಭಾರೀ ಮಳೆ- ದುಬಾರೆ ಆನೆ ಶಿಬಿರಕ್ಕೆ ಪ್ರವಾಸಿಗರಿಗೆ ನಿಷೇಧ

    ಮಡಿಕೇರಿ: ಕೊಡಗಿನಲ್ಲಿ (Kodagu) ಸುರಿಯುತ್ತಿರುವ ಭಾರೀ ಮಳೆಯಿಂದ (Rain) ಕಾವೇರಿ ನದಿಯಲ್ಲಿ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರಿಂದಾಗಿ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಬಳಿ ಇರುವ ದುಬಾರೆ ಸಾಕಾನೆ ಶಿಬಿರಕ್ಕೆ (Dubare elephant camp) ಪ್ರವಾಸಿಗರ ಪ್ರವೇಶಕ್ಕೆ ಅರಣ್ಯ ಇಲಾಖೆ ನಿಷೇಧ ಹೇರಿದೆ.

    ದುಬಾರೆಗೆ ಭೇಟಿ ನೀಡುವ ಪ್ರವಾಸಿಗರು ಸಾಕಾನೆ ಶಿಬಿರಕ್ಕೆ ತೆರಳಬೇಕಾದರೆ ಕಾವೇರಿ ನದಿ ದಾಟಿ ತೆರಳಬೇಕಿದೆ. ನದಿಗೆ ಅಡ್ಡಲಾಗಿ ಸೇತುವೆ ಇಲ್ಲದ ಕಾರಣ ಬೋಟ್‍ಗಳನ್ನು ಬಳಸಿ ಸಾಗಬೇಕಿದೆ. ಇದೀಗ ನದಿ ನೀರಿನ ಹರಿವು ಹೆಚ್ಚಾಗಿದೆ. ಇದರಿಂದ ಪ್ರವಾಸಿಗರ ಸುರಕ್ಷತಾ ದೃಷ್ಟಿಯಿಂದ ದುಬಾರೆ ಸಾಕಾನೆ ಶಿಬಿರಕ್ಕೆ ಗುರುವಾರದಿಂದ ಪ್ರವೇಶ ನಿಷೇಧಿಸಲಾಗಿದೆ. ಇದನ್ನೂ ಓದಿ: ಇಷ್ಟೆಲ್ಲಾ ಅವಮಾನ ಆದ್ಮೇಲೆ ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಇರಲ್ಲ ಅನ್ಸುತ್ತೆ: ಆರ್.ಅಶೋಕ್

    ನೀರಿನ ಹರಿವು ತಗ್ಗುವವರೆಗೆ ಬೋಟಿಂಗ್ ನಿಷೇಧ ಮುಂದುವರೆಯಲಿದೆ. ಅರಣ್ಯ ಇಲಾಖೆಯ 4 ಬೋಟ್‍ಗಳ ಮೂಲಕ ಪ್ರವಾಸಿಗರನ್ನು ನದಿ ದಾಟಿಸಿ ಸಾಕಾನೆ ಶಿಬಿರಕ್ಕೆ ಕರೆದೊಯ್ದು ಮರಳಿ ಕರೆತರಲಾಗುತ್ತದೆ. ಇದೀಗ ಈ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಮೂರೇ ದಿನಗಳ ಒಳಗೆ ಸಿಕ್ಕಿಂನಲ್ಲಿ 70 ಅಡಿ ಸೇತುವೆ ನಿರ್ಮಿಸಿದ ಸೇನೆ!

  • ದುಬಾರೆ ಆನೆ ಶಿಬಿರದಿಂದ ‘ಕುಶ’ ಬಂಧ ಮುಕ್ತ- ಸಚಿವ ಅರವಿಂದ ಲಿಂಬಾವಳಿ

    ದುಬಾರೆ ಆನೆ ಶಿಬಿರದಿಂದ ‘ಕುಶ’ ಬಂಧ ಮುಕ್ತ- ಸಚಿವ ಅರವಿಂದ ಲಿಂಬಾವಳಿ

    ಬೆಂಗಳೂರು: ಕುಶ ಆನೆಯನ್ನು ದುಬಾರೆ ಶಿಬಿರದಿಂದ ಕರೆದೊಯ್ದು ನಿನ್ನೆ ಸಂಜೆ ಅರಣ್ಯ ಪ್ರದೇಶದಲ್ಲಿ ಬಿಡುಗಡೆ ಮಾಡಲಾಗಿದೆ. ಇದರಿಂದ ಕುಶ ಬಂಧಮುಕ್ತ ನಾಗಿದ್ದಾನೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

    ಅರಣ್ಯ ಇಲಾಖೆಯ ವಶದಲ್ಲಿದ್ದ ಆನೆ ಕುಶ ನನ್ನು ಸ್ವತಂತ್ರವಾಗಿ ಅರಣ್ಯದಲ್ಲಿ ಬಿಡಲು ಈ ಹಿಂದೆ ನಡೆದ ಸಭೆಯಲ್ಲಿ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

    ಅದರಂತೆ ಅಗತ್ಯ ಸಿದ್ಧತೆಗಳನ್ನು ನಡೆಸಿ ಕುಶನನ್ನು ಬಿಡುಗಡೆ ಮಾಡಬೇಕಾದ ಪ್ರದೇಶವನ್ನು ಗುರುತಿಸಿ, ಅದಕ್ಕೆ ರೇಡಿಯೋ ಕಾಲರ್ ಅಳವಡಿಸಿ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ದುಬಾರೆಯಲ್ಲಿದ್ದ ಆನೆಯ ಕಣ್ಣಿಗೆ ಕಡ್ಡಿ ಬಡಿದು ಕುರುಡ – ಸೊಂಡಿಲೇ ಈಗ ರಾಮನಿಗೆ ಆಧಾರ

    ವಲಯ ಅರಣ್ಯಾಧಿಕಾರಿ ಅನನ್ಯ ಕುಮಾರ್ ಜೆ, ಉಪವಲಯ ಅರಣ್ಯಾಧಿಕಾರಿ ಕೆ.ಪಿ ರಂಜನ್ ಹಾಗೂ ಅರಣ್ಯ ಪಶುವೈದ್ಯಾಧಿಕಾರಿ ಡಾಕ್ಟರ್ ವಾಸಿಂ ಮಿರ್ಜಾ ಹಾಗೂ ಅರಣ್ಯ ಇಲಾಖೆಯ ಇತರ ಅಧಿಕಾರಿಗಳು ಕುಶ ಬಿಡುಗಡೆಯ ಸಂದರ್ಭದಲ್ಲಿ ಹಾಜರಿದ್ದು, ಬೀಳ್ಕೊಟ್ಟರು.

  • ದುಬಾರೆ ಬಿಡಾರಕ್ಕೆ ಮರಳಿದ ಆನೆಗಳು!

    ದುಬಾರೆ ಬಿಡಾರಕ್ಕೆ ಮರಳಿದ ಆನೆಗಳು!

    ಕೊಡಗು: ಕಾವೇರಿ ಪ್ರವಾಹ ಮಟ್ಟ ಹೆಚ್ಚಾಗಿದ್ದರಿಂದ ನದಿ ಪಾತ್ರದ ದುಬಾರೆ ಬಿಡಾರದಿಂದ ಆನೆಗಳನ್ನು ಕಾಡಿಗೆ ಕರೆದೊಯ್ಯಲಾಗಿತ್ತು. ಸದ್ಯ ಪ್ರವಾಹ ಸ್ವಲ್ಪ ತಗ್ಗಿದ್ದು, ಆನೆಗಳನ್ನು ಮತ್ತೇ ಬಿಡಾರಕ್ಕೆ ವಾಪಾಸ್ ತರಲಾಗಿದೆ.

    ದಸರಾ ಮೆರವಣಿಗೆ ಆಯ್ಕೆಯಾಗಿರುವ ಧನಂಜಯ ಸೇರಿದಂತೆ ಏಕದಂತ ಹಾಗೂ ಪುಟ್ಟ ಅಗಸ್ತ್ಯ ಆನೆಗಳು ದುಬಾರೆ ಬಿಡಾರದಲ್ಲಿ ಇವೆ. ಉಳಿದಂತೆ 27 ಆನೆಗಳು ನಿತ್ಯದಂತೆ ಕಾಡಿಗೆ ತೆರಳಿವೆ.

    ಕಾವೇರಿ ಪ್ರವಾಹ ಹೆಚ್ಚಾಗಿದ್ದರಿಂದ ಆನೆಗಳಿಗೆ ನೀರು ಕುಡಿಸಲು ಹಾಗೂ ಸ್ನಾನ ಮಾಡಿಸಲು ಕಷ್ಟವಾಗುತ್ತಿತ್ತು. ಜೊತೆಗೆ ನಮಗೂ ನದಿ ದಾಟಿ ಹೋಗಿ ಆಹಾರ ತರಲು ಆಗುತ್ತಿರಲಿಲ್ಲ. ಸುಮಾರು ದಿನಗಳಿಂದ ಬಿಸಿಲು ಕಾಣದೆ, ಬಟ್ಟೆಗಳೇ ಒಣಗುತ್ತಿರಲಿಲ್ಲ. ಹಸಿಯಾದ ಬಟ್ಟೆಗಳನ್ನೇ ತೊಟ್ಟು ಕಾಣೆಗಳ ಹಿಂದೆ ಹೋಗಿ, ಮೇಯಿಸಿಕೊಂಡು ಬರಬೇಕಿತ್ತು. ಊಟಕ್ಕಾಗಿ 10 ಕಿ.ಮೀ. ದೂರದ ಹೋಟೆಲ್‍ಗೆ ನಡೆದು ಹೋಗಿ, ಊಟ ಮಾಡಿ ಬರಬೇಕಿತ್ತು ಎಂದು ಮಾವುತ ರಾಜು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://youtu.be/Kg6EoTbxYNo

  • ಮಾವುತನ ಮೇಲೆ ಸಾಕಾನೆ ದಾಳಿ- ದಂತದಿಂದ ತಿವಿದು ಗಾಯ

    ಮಾವುತನ ಮೇಲೆ ಸಾಕಾನೆ ದಾಳಿ- ದಂತದಿಂದ ತಿವಿದು ಗಾಯ

    ಮಡಿಕೇರಿ: ಸಾಕಾನೆಯೊಂದು ಮಾವುತನ ಮೇಲೆ ದಾಳಿ ಮಾಡಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ದುಬಾರೆ ಆನೆ ಶಿಬಿರದಲ್ಲಿ ನಡೆದಿದೆ.

    ದಾಳಿ ಹಿನ್ನೆಲೆಯಲ್ಲಿ ಮಾವುತ ಅಪ್ಪಯ್ಯ(40) ಗಂಭೀರವಾಗಿ ಗಾಯಗೊಂಡು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬೆಳಗ್ಗೆ ಕಾಡಿಗಟ್ಟಲು ಸಾಕಾನೆ ಗೋಪಿಯನ್ನು ಸರಪಳಿಯಿಂದ ಬಿಚ್ಚುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ದಾಳಿ ಮಾಡಿದೆ. ಅಪ್ಪಯ್ಯ ಅವರಿಗೆ ದಂತದಿಂದ ತಿವಿದು ಗಾಯಗೊಳಿಸಿದೆ.

    ಪರಿಣಾಮ ಗಂಭೀರವಾಗಿ ಗಾಯಗೊಂಡ ಮಾವುತ ಅಪ್ಪಯ್ಯ ಅವರಿಗೆ ಸಿದ್ದಾಪುರ ಅಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.