Tag: Dummy

  • ರಾಖಿ ಸಾವಂತ್ ‘ಡುಮ್ಮಿ’ ಎಂದು ಕೆಣಕಿದ ನಟಿ ಶೆರ್ಲಿನ್ ಚೋಪ್ರಾ

    ರಾಖಿ ಸಾವಂತ್ ‘ಡುಮ್ಮಿ’ ಎಂದು ಕೆಣಕಿದ ನಟಿ ಶೆರ್ಲಿನ್ ಚೋಪ್ರಾ

    ಲ್ಲದ ಕಾರಣಕ್ಕಾಗಿ ಸದಾ ಸುದ್ದಿಯಲ್ಲಿರುತ್ತಾರೆ ನಟಿಯರಾದ ರಾಖಿ ಸಾವಂತ್ (Rakhi Sawant) ಮತ್ತು ಶೆರ್ಲಿನ್ ಚೋಪ್ರಾ (Sherlina Chopra). ಮದುವೆ, ಬಾಯ್ ಫ‍್ರೆಂಡ್, ಬ್ರೇಕಪ್ ಎನ್ನುತ್ತಾ ದಿನಕ್ಕೊಂದು ಸದ್ದು ಮಾಡುವ ಚಾಳಿ ರಾಖಿಗಿದ್ದರೆ, ಮೀಟೂ ಕಾರಣದಿಂದಾಗಿ ಶೆರ್ಲಿನ್ ಚೋಪ್ರಾ ಇತ್ತೀಚೆಗಂತೂ ಸಾಕಷ್ಟು ಸುದ್ದಿ ಆಗುತ್ತಿದ್ದಾಳೆ. ಈ ಇಬ್ಬರ ನಡುವೆ ಯಾವತ್ತೂ ಕೋಲ್ಡ್ ವಾರ್ ಇದ್ದೇ ಇದೆ. ಇದು ಮತ್ತೊಮ್ಮೆ ಸಾಬೀತಾಗಿದೆ.

    ಮಾಧ್ಯಮಗಳ ಜೊತೆ ಮಾತನಾಡಿರುವ ಶೆರ್ಲಿನ್ ಚೋಪ್ರಾ, ಖಡಕ್ಕಾಗಿಯೇ ರಾಖಿಗೆ ಸಂದೇಶವೊಂದನ್ನು ನೀಡಿದ್ದಾರೆ. ರಾಖಿ ನಾನ್ ಸೆನ್ಸ್ ಎಂದು ಮೂದಲಿಸಿದ್ದಾರೆ. ರಾಖಿ ಮೂರ್ನಾಲ್ಕು ತಿಂಗಳಿಗೊಮ್ಮೆ ಬಾಯ್ ಫ್ರೆಂಡ್ ಬದಲಾಯಿಸುತ್ತಾಳೆ. ಗಂಡನನ್ನೂ ಬದಲಾಯಿಸುತ್ತಾಳೆ. ಆಕೆ ಡುಮ್ಮಿ (Dummy). ಜಿಮ್ ಮುಂದೆ ಓಡಾಡುತ್ತಾಳೆಯೇ ಹೊರತು, ಜಿಮ್ ನಲ್ಲಿ ಕಷ್ಟ ಪಡಲ್ಲ ಎಂದು ಕಾಮೆಂಟ್ ಮಾಡಿದ್ದಾಳೆ. ಇದನ್ನೂ ಓದಿ:ಅಮಿತಾಭ್ ಮೊಮ್ಮಗಳ ಜೊತೆಗಿನ ಡೇಟಿಂಗ್ ಬಗ್ಗೆ ಬಾಯ್ಬಿಟ್ಟ ನಟ ಸಿದ್ಧಾಂತ್

    ರಾಖಿ ಮೇಲೆ ಶೆರ್ಲಿನ್ ಕೋಪ ಮಾಡಿಕೊಳ್ಳಲು ಕಾರಣ ಸಾಜಿದ್ (Sajid) ಮೇಲೆ ರಾಖಿ ತೋರಿಸಿದ ಅನುಕಂಪ. ಹಿಂದಿ ಬಿಗ್ ಬಾಸ್ (Bigg Boss) ಮನೆಯಲ್ಲಿ ಸದ್ಯ ನಿರ್ದೇಶಕ ಸಾಜಿದ್ ಇದ್ದಾನೆ. ಅವನ ಮೇಲೆ ಶೆರ್ಲಿನ್ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಸಾಜಿದ್ ನನ್ನು ಮನೆಯಿಂದ ಆಚೆ ಹಾಕಿ ಎಂದು ಗುಡುಗಿದ್ದಳು. ಅವನೊಬ್ಬ ಅವಿವೇಕಿ ಎಂದೂ ಜರಿದಿದ್ದರು. ಈ ಮಾತಿಗೆ ಸಾಜಿದ್ ಮೇಲೆ ರಾಕಿ ಅನುಕಂಪ ತೋರಿದ್ದರು. ಸಾಜಿದ್ ನನ್ನು ಬಿಟ್ಟುಬಿಡಿ ಎಂದು ಹೇಳಿದ್ದರು.

    ಸಾಜಿದ್ ಪರ ರಾಖಿ ಸಾವಂತ್ ಬ್ಯಾಟಿಂಗ್ ಮಾಡಿದಳು ಎನ್ನುವ ಕಾರಣಕ್ಕಾಗಿ ಶೆರ್ಲಿನ್ ಇದೀಗ ತಿರುಗಿ ಬಿದ್ದಿದ್ದಾಳೆ. ರಾಖಿ ದೇಹ ಬೆಳೆಸಿದ್ದಾಳೆ. ಅದನ್ನು ಕರಗಿಸಬೇಕು ಅಂತ ಜಿಮ್ ಮುಂದೆ ತಿರುಗುತ್ತಾಳೆ. ಜಿಮ್ ಒಳಗೆ ಹೋಗಬೇಕು, ಮೆಂಬರ್ ಶಿಪ್ ತಗೆದುಕೊಳ್ಳಬೇಕು, ಕಷ್ಟ ಪಡಬೇಕು. ಆಕೆಗೆ ಕಷ್ಟ ಪಡೋದು ಏನು ಅಂತಾನೇ ಗೊತ್ತಿಲ್ಲ ಎಂದು ಕಾಲೆಳೆದಿದ್ದಾಳೆ.

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್ ನೀಡಿದ ಚೆಕ್ ನಕಲಿ: ಆರ್ ಅಶೋಕ್ ಗಂಭೀರ ಆರೋಪ

    ಕಾಂಗ್ರೆಸ್ ನೀಡಿದ ಚೆಕ್ ನಕಲಿ: ಆರ್ ಅಶೋಕ್ ಗಂಭೀರ ಆರೋಪ

    ಬೆಂಗಳೂರು: ವಲಸೆ ಕಾರ್ಮಿಕರನ್ನು ಉಚಿತವಾಗಿ ಅವರ ಊರಿಗೆ ಕಳುಹಿಸಲೆಂದು ಕಾಂಗ್ರೆಸ್ ನೀಡಿದ ಚೆಕ್ ನಕಲಿ ಎಂದು ಕಂದಾಯ ಮಂತ್ರಿ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.

    ಇಂದು ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷರು ನೀಡಿದ ಚೆಕ್ ಮೇಲೆ ದಿನೇಶ್ ಗುಂಡುರಾವ್ ಸಹಿ ಇದೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್. ಇವರ ಒಳ ಜಗಳ ಏನಿದೆಯೋ ಗೊತ್ತಿಲ್ಲ. ಚೆಕ್ ಮೇಲೆ ಡಿಕೆಶಿ ಸಹಿ ಇಲ್ಲ. ಹೀಗಾಗಿ ಈ ಚೆಕ್ ಕೂಡ ನಕಲಿ. ಇವರಿಗೆ ಖಾತೆ ಬದಲಾವಣೆ ಮಾಡುವ ಜ್ಞಾನ ಇಲ್ಲ. ಬಸ್ ಬಿಡುವ ಬಗ್ಗೆ ನಮಗೆ ಸಲಹೆ ನೀಡುತ್ತಾರೆ ಎಂದು ಡಿಕೆಶಿಗೆ ಟಾಂಗ್ ನೀಡಿದರು.

    ಇದೇ ವೇಳೆ ಕಾಂಗ್ರೆಸ್ ನಾಯಕರು ಕೆಂಪೇಗೌಡ ಬಸ್ ನಿಲ್ದಾಣ ಭೇಟಿ ವಿಚಾರದ ಬಗ್ಗೆ ಮಾತನಾಡಿದ ಅವರು, ನಿನ್ನೆ ಸುಮಾರು 5 ಸಾವಿರ ಮಂದಿ ಮಧ್ಯದಲ್ಲಿ ಕಾಂಗ್ರೆಸ್ ನಾಯಕರು ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ. ಯಾರಿಗಾದರೂ ಸೋಂಕು ಇದ್ದರೆ ಅನ್ನೋ ಪರಿಜ್ಞಾನವೂ ಅವರಿಗೆ ಇರಲಿಲ್ಲ. ಹೀಗಿರುವಾಗ ಬೇರೆಯವರಿಗೆ ಹೇಳುವ ನೈತಿಕತೆ ಅವರಿಗಿಲ್ಲ. ಹೀಗಾಗಿ ಅವರಿಗೂ ತಪಾಸಣೆಯಾಗಬೇಕು. ಜೊತೆಗೆ ಅವರಿಗೂ ಕ್ವಾರೆಂಟೈನ್ ಮಾಡೋ ಚಾನ್ಸ್ ಬರಬಹುದು. ಈ ಬಗ್ಗೆ ಅಧಿಕಾರಿಗಳ ಜೊತೆ ಹಾಗೂ ಸಿಎಂ ಜೊತೆ ಚರ್ಚಿಸಿ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

    ದಿನೇಶ್ ಗುಂಡುರಾವ್ ಅಧ್ಯಕ್ಷರಾಗಿದ್ದಾಗ ದೇಣಿಗೆ ನೀಡಿರಲಿಲ್ಲ. ಈಗ ಡಿಕೆ ಶಿವಕುಮಾರ್ ಅಧ್ಯಕ್ಷ ಆಗುತ್ತಿದ್ದಂತೆ ಏಕಾಏಕಿ ದುಡ್ಡು ಬಂದಿದೆ. ಅದು ನಮಗೆ ಆಶ್ಚರ್ಯ ತಂದಿದೆ. ಹೀಗಾಗಿ ಅವರು ನೀಡಿದ ಚೆಕ್‍ನ್ನು ನಾವು ಹುಷಾರಾಗಿ ನೋಡುತ್ತಿದ್ದೇವೆ. ಅವರ ಒಂದು ಕೋಟಿ ಚೆಕ್ ಅನ್ನು ನಾವು ತಗೆದುಕೊಂಡಿಲ್ಲ. ನಾವು ನೂರಾರು ಕೋಟಿ ಈಗಾಗಲೇ ಖರ್ಚು ಮಾಡಿದ್ದೇವೆ. ಕಾಂಗ್ರೆಸ್ ದೇಶದಿಂದ ಪಡೆದಿದ್ದೆ ಹೆಚ್ಚು. ಅರವತ್ತು ವರ್ಷದಲ್ಲಿ ನೀವು ಎಷ್ಟು ಪಡೆದಿದ್ದೀರಿ. ಈಗ ತೀರ್ಥ ಕೊಟ್ಟಂತೆ ಕೊಡಬೇಡಿ. ನಿಮ್ಮ ಪಕ್ಷಕ್ಕೆ 120 ವರ್ಷ ಇತಿಹಾಸ ಇದೆ. ಕೊಡುವುದಿದ್ದರೆ 120 ಕೋಟಿ ಕೊಡಿ ಅದನ್ನು ಬಿಟ್ಟು ಪ್ರಚಾರಕ್ಕೆ ಹಣ ಕೊಡಬೇಡಿ ಎಂದು ಅಶೋಕ್ ವಾಗ್ದಾಳಿ ನಡೆಸಿದರು.