Tag: Duniya Vijay

  • ಡಾ.ರಾಜ್ ಮನೆಯ ಮತ್ತೊಂದು ಕುಡಿಯನ್ನು ಪರಿಚಯಿಸುತ್ತಿದ್ದೇನೆ: ದುನಿಯಾ ವಿಜಯ್

    ಡಾ.ರಾಜ್ ಮನೆಯ ಮತ್ತೊಂದು ಕುಡಿಯನ್ನು ಪರಿಚಯಿಸುತ್ತಿದ್ದೇನೆ: ದುನಿಯಾ ವಿಜಯ್

    ಚಾಮರಾಜನಗರ: ನಟ ಡಾ.ರಾಜ್‍ಕುಮಾರ್ ಮನೆಯಲ್ಲಿ ಬೆಳೆದ ಹುಡುಗನನ್ನು ಸ್ಯಾಂಡಲ್‍ವುಡ್ ಗೆ ಪರಿಚಯಿಸುತ್ತಿದ್ದೇನೆ ಎಂದು ನಟ ದುನಿಯಾ ವಿಜಯ್ ಮಾಹಿತಿ ನೀಡಿದ್ದಾರೆ.

    ಜಿಲ್ಲೆಯ ಗುಂಡ್ಲುಪೇಟೆಗೆ ದುನಿಯಾ ವಿಜಯ್ ಭೇಟಿ ನೀಡಿದ್ದು, ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. ಡಾ.ರಾಜ್‍ಕುಮಾರ್, ಶಿವಣ್ಣ, ಪುನೀತ್ ಅವರ ಮನೆಯಲ್ಲಿ ಬೆಳೆದ ಮುದ್ದಾದ ಹುಡುಗನನ್ನು ಲಾಂಚ್ ಮಾಡುತ್ತಿದ್ದೇವೆ. ಈ ಚಿತ್ರವನ್ನು ನಾನೇ ನಿರ್ದೇಶಿಸುತ್ತಿದ್ದು, ಜನವರಿಯಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ರಿವೀಲ್ ಮಾಡುತ್ತೇವೆ ಎಂದು ತಿಳಿಸಿದರು.

    ನಾನೇ ಹೊಸ ಚಿತ್ರ ನಿರ್ದೇಶನ ಮಾಡುತ್ತಿದ್ದು, ಈ ಚಿತ್ರದ ಮೂಲಕ ಚಾಮರಾಜನಗರ ಜಿಲ್ಲೆಯ ಯುವಕನನ್ನು ನಾಯಕ ನಟನನ್ನಾಗಿ ಬೆಳ್ಳಿ ಪರದೆಗೆ ತರುತ್ತಿದ್ದೇವೆ. ಈ ಬಗ್ಗೆ ನಮಗೂ ತುಂಬಾ ಖುಷಿಯಿದೆ. ರಾಜ್ ಮನೆತನದ ಲಕ್ಕಿ ಗೋಪಾಲ್ ಎಂಬ ಯುವ ನಟನನ್ನು ಹಿರೋ ಆಗಿ ಪರಿಚಯಿಸುತ್ತಿದ್ದೇವೆ. ನಟ ಹೇಗಿದ್ದಾರೆ, ತಯಾರಿ ಹೇಗಿದೆ ಎಂಬುದರ ಬಗ್ಗೆ ಶೀಘ್ರ ರಿವೀಲ್ ಮಾಡುತ್ತೇವೆ. ಅಣ್ಣಾವ್ರ ಮನೆಯ ಮತ್ತೊಂದು ಕುಡಿ ಅದು. ನಾನು ಈ ಸಿನಿಮಾ ನಿರ್ದೇಶನವನ್ನಷ್ಟೇ ಮಾಡುತ್ತಿದ್ದೇನೆ ನಟಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಕೊರೊನಾ ತೊಲಗುತ್ತಿದ್ದಂತೆ ಆದಷ್ಟು ಬೇಗ ಸಲಗ ಚಿತ್ರ ಬಿಡುಗಡೆ ಮಾಡುತ್ತೇವೆ ಎಂದು ಇದೇ ವೇಳೆ ತಿಳಿಸಿದರು.

    ಗುಂಡ್ಲುಪೇಟೆಗೆ ದುನಿಯಾ ವಿಜಯ್ ಆಗಮಿಸುವುದನ್ನು ಅರಿತಿದ್ದ ಅಭಿಮಾನಿಗಳು, ಅಪಾರ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಬ್ಲಾಕ್ ಕೋಬ್ರಾ ನೋಡಲು ಮುಗಿಬಿದ್ದರು. ಇದೇ ವೇಳೆ ಅಭಿಮಾನಿಗಳಿಗಾಗಿ ದುನಿಯಾ ವಿಜಯ್ ಸಲಗ ಚಿತ್ರದ ಡೈಲಾಗ್ ಹೊಡೆದು ರಂಜಿಸಿದರು. ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ದುನಿಯಾ ವಿಜಯ್ ಪತ್ನಿ ಮತ್ತು ಮಗನ ಜೊತೆ ಆಗಮಿಸಿದ್ದರು. ವಿಜಯ್ ಜೊತೆ ಸೆಲ್ಫಿಗೆ ಅಭಿಮಾನಿಗಳು ಮುಗಿಬಿದ್ದರು. ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದರು.

  • ಪ್ರಾಣಿ ಬೇಕಾದ್ರೆ ನಂಬೋದು, ಮನುಷ್ಯರನ್ನ ನಂಬೋಕಾಗಲ್ಲ, ಕಾಡೇ ನಂಗಿಷ್ಟ: ದುನಿಯಾ ವಿಜಯ್

    ಪ್ರಾಣಿ ಬೇಕಾದ್ರೆ ನಂಬೋದು, ಮನುಷ್ಯರನ್ನ ನಂಬೋಕಾಗಲ್ಲ, ಕಾಡೇ ನಂಗಿಷ್ಟ: ದುನಿಯಾ ವಿಜಯ್

    – ಸಲಗನನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು

    ಚಾಮರಾಜನಗರ: ಕಾಡು ಯಾವಾಗಲೂ ಶಾಂತ, ಕಾಡಲ್ಲಿ ಪ್ರಾಣಿ ನಂಬಿ ಬದುಕಬಹುದು ಆದರೆ ನಾಡಲ್ಲಿ ಮನುಷ್ಯನ್ನ ನಂಬೋಕೆ ಆಗಲ್ಲ. ಹೀಗಾಗಿ ಕಾಡಿನತ್ತ ಹೆಚ್ಚು ಒಲವು ಎಂದು ನಟ ದುನಿಯಾ ವಿಜಯ್ ಅಭಿಪ್ರಾಯಪಟ್ಟಿದ್ದಾರೆ.

    ಜಿಲ್ಲೆಯ ಗುಂಡ್ಲುಪೇಟೆಗೆ ದುನಿಯಾ ವಿಜಯ್ ಭೇಟಿ ನೀಡಿದ್ದು, ಅಭಿಮಾನಿಗಳನ್ನು ಪುಳಕಿತರನ್ನಾಗಿಸಿದ್ದಾರೆ. ನೂರಾರು ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ನೋಡಲು ಮುಗಿಬಿದ್ದಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾವು ನಿರ್ದೇಶಿಸುತ್ತಿರುವ ಮುಂದಿನ ಚಿತ್ರದ ಬಗ್ಗೆ ಮಾಹಿತಿ ನೀಡಿದರು. ಜನವರಿಯಲ್ಲಿ ನಾನು ನಿರ್ದೇಶಿಸುತ್ತಿರುವ ಚಿತ್ರದ ಬಗ್ಗೆ ರಿವೀಲ್ ಮಾಡುತ್ತೇವೆ ಎಂದು ತಿಳಿಸಿದರು.

    ಕಾಡೆಂದರೆ ನನಗೆ ತುಂಬಾ ಇಷ್ಟ, ಯಾವಾಗಲೂ ಶಾಂತವಾಗಿರುತ್ತದೆ. ಅಲ್ಲದೆ ಕಾಡಿನಲ್ಲಿ ಪ್ರಾಣಿಗಳನ್ನು ಬೇಕಾದರೆ ನಂಬಿ ಬದುಕಬಹುದು. ಆದರೆ ನಾಡಿನಲ್ಲಿ ಮನುಷ್ಯರನ್ನು ನಂಬಿ ಬದುಕಲು ಆಗಲ್ಲ. ನನಗೆ ಕಾಡೆಂದರೆ ತುಂಬಾ ಇಷ್ಟ, ಹೀಗಾಗಿ ಇತ್ತೀಚೆಗೆ ಕಾಡಿನಲ್ಲಿ ಹೆಚ್ಚು ಕಾಲ ಕಳೆಯುತ್ತಿದ್ದೇನೆ ಎಂದರು.

    ನಾನೇ ಹೊಸ ಚಿತ್ರ ನಿರ್ದೇಶನ ಮಾಡುತ್ತಿದ್ದು, ಈ ಚಿತ್ರದ ಮೂಲಕ ಚಾಮರಾಜನಗರ ಜಿಲ್ಲೆಯ ಯುವಕನನ್ನು ನಾಯಕ ನಟನನ್ನಾಗಿ ಬೆಳ್ಳಿ ಪರದೆಗೆ ತರುತ್ತಿದ್ದೇವೆ. ಈ ಬಗ್ಗೆ ನಮಗೂ ತುಂಬಾ ಖುಷಿಯಿದೆ. ರಾಜ್ ಮನೆತನದ ಲಕ್ಕಿ ಗೋಪಾಲ್ ಎಂಬ ಯುವ ನಟನನ್ನು ಹಿರೋ ಆಗಿ ಪರಿಚಯಿಸುತ್ತಿದ್ದೇವೆ. ನಟ ಹೇಗಿದ್ದಾರೆ, ತಯಾರಿ ಹೇಗಿದೆ ಎಂಬುದರ ಬಗ್ಗೆ ಶೀಘ್ರ ರಿವೀಲ್ ಮಾಡುತ್ತೇವೆ. ಅಣ್ಣಾವ್ರ ಮನೆತನದ ಮತ್ತೊಂದು ಕುಡಿ ಅದು. ನಾನು ಈ ಸಿನಿಮಾ ನಿರ್ದೇಶನವನ್ನಷ್ಟೇ ಮಾಡುತ್ತಿದ್ದೇನೆ ನಟಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಕೊರೊನಾ ತೊಲಗುತ್ತಿದ್ದಂತೆ ಆದಷ್ಟು ಬೇಗ ಸಲಗ ಚಿತ್ರ ಬಿಡುಗಡೆ ಮಾಡುತ್ತೇವೆ ಎಂದು ಇದೇ ವೇಳೆ ತಿಳಿಸಿದರು.

    ಗುಂಡ್ಲುಪೇಟೆಗೆ ದುನಿಯಾ ವಿಜಯ್ ಆಗಮಿಸುವುದನ್ನು ಅರಿತಿದ್ದ ಅಭಿಮಾನಿಗಳು, ಅಪಾರ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಬ್ಲಾಕ್ ಕೋಬ್ರಾ ನೋಡಲು ಮುಗಿಬಿದ್ದರು. ಇದೇ ವೇಳೆ ಅಭಿಮಾನಿಗಳಿಗಾಗಿ ದುನಿಯಾ ವಿಜಯ್ ಸಲಗ ಚಿತ್ರದ ಡೈಲಾಗ್ ಹೊಡೆದು ರಂಜಿಸಿದರು. ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ದುನಿಯಾ ವಿಜಯ್ ಪತ್ನಿ ಮತ್ತು ಮಗನ ಜೊತೆ ಆಗಮಿಸಿದ್ದರು. ವಿಜಯ್ ಜೊತೆ ಸೆಲ್ಫಿಗೆ ಅಭಿಮಾನಿಗಳು ಮುಗಿಬಿದ್ದರು. ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದರು.

  • ಕಪ್ಪಾಗಿ ಹುಟ್ಟಿದ್ದು ಕರ್ಮನಾ?- ದುನಿಯಾ ವಿಜಿ ಪ್ರಶ್ನೆಗೆ ಜಗ್ಗೇಶ್ ಉತ್ತರ

    ಕಪ್ಪಾಗಿ ಹುಟ್ಟಿದ್ದು ಕರ್ಮನಾ?- ದುನಿಯಾ ವಿಜಿ ಪ್ರಶ್ನೆಗೆ ಜಗ್ಗೇಶ್ ಉತ್ತರ

    ಬೆಂಗಳೂರು: ನಾವು ನೀವು ಕಪ್ಪಾಗಿ ಹುಟ್ಟಿದ್ದು ಕರ್ಮನಾ ಅನ್ನೋ ನಟ ದುನಿಯಾ ವಿಜಯ್ ಪ್ರಶ್ನೆಗೆ ನವರಸ ನಾಯಕ ಜಗ್ಗೇಶ್ ಅತ್ಯಂತ ಸರಳವಾಗಿ ಉತ್ತರ ನೀಡಿದ್ದಾರೆ. ತಮಗೆ ಫೋನ್ ಮಾಡಿ ದುನಿಯಾ ವಿಜಯ್ ಮಾತನಾಡಿರುವ ವಿಷಯವನ್ನ ಜಗ್ಗೇಶ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಜಗ್ಗೇಶ್-ದುನಿಯಾ ವಿಜಯ್ ಸಂಭಾಷಣೆ:
    ಕರೆ ಮಾಡಿದ್ದ ವಿಜಿ, ನಾವು ನೀವು ಕಪ್ಪಾಗಿ ಹುಟ್ಟಿದ್ದು ಕರ್ಮನಾ ಎಂದು ದುಃಖದಿಂದ ಕೇಳಿಬಿಟ್ಟ. ನಾನು ಯಾಕೆ ಈ ಪ್ರಶ್ನೆ ಎಂದು ಕೇಳಿದೆ. ನೋೀಡಿ ಅಣ್ಣ ನಾವು ಎಷ್ಟೇ ಶ್ರಮಪಟ್ಟು ಜೀವನ ಕಟ್ಟಿಕೊಂಡರು ಸಮಾಜ ಚರ್ಮದ ಬಣ್ಣದಿಂದ ನಮ್ಮನ್ನು ಅಳೆಯುತ್ತಾರೆ. ನಾವು ನೂರು ಶ್ರೇಷ್ಠ ಸಾಧನೆ ಮಾಡಿ ಸಣ್ಣ ತಪ್ಪು ಅರಿಯದಂತೆ ನಮ್ಮಿಂದ ಆಗಿಬಿಟ್ಟರೆ ನಮ್ಮ ಸಾಧನೆ ಶೂನ್ಯಮಾಡಿ ಹಂಗಿಸಿಬಿಡುತ್ತಾರೆ. ಅದೇ ಬಿಳಿ ಚರ್ಮದ ಮನುಜರು ಆಂತರ್ಯವೆಲ್ಲಾ ಕೊಳೆತು ಸಾಧನೆ ಶೂನ್ಯವಾದರು ಅವರ ಬಿಳಿಬಣ್ಣಕ್ಕೆ ಸಮಾಜ ಅವರನ್ನ ನಂಬಿ ಬಿಡುತ್ತಾರೆ ಎಂದು ಹೇಳಿದ. ಇದನ್ನೂ ಓದಿ: ಉದ್ಯಮ ಹರಾಜು ಹಾಕೋದು ನೋಡಿದ್ರೆ ಆ್ಯಸಿಡ್ ಕುಡಿದಂತೆ ಆಗಿದೆ: ಜಗ್ಗೇಶ್ ಬೇಸರ

    ನಾನು ಅದಕ್ಕೆ ಉದಾಹರಣೆ ಎಂದು ಕೇಳಿದಾಗ ಡ್ರಗ್ಸ್ ದಂಧೆಯಲ್ಲಿನ ಮಹಾಮಹಿಮರ ಹೆಸರು ಹೇಳಿದ. ಉತ್ತರವಿಲ್ಲದೆ ಕ್ಷಣಕಾಲ ಮೌನವಾಗಿ ನನ್ನ ಮೈಚರ್ಮ ನೋಡಿಕೊಂಡೆ ಕಾರಣ ನಾನು ವಿಜಿಗಿಂತ ಕಪ್ಪು. ಇದನ್ನೂ ಓದಿ: ಉಪ್ಪು ತಿಂದವರು ನೀರು ಕುಡಿಯಲಿ: ಡ್ರಗ್ಸ್ ಮಾಫಿಯಾ ಬಗ್ಗೆ ಜಗ್ಗೇಶ್ ಮಾತು

    ನಾನು ವಿಜಿಗೆ ಇದ್ದ ಅನುಮಾನ ದುಃಖ ದೂರಮಾಡಲು ಈ ಉದಾಹರಣೆ ಹೇಳಿದೆ. ನೋಡು ವಿಜಿ ಮಧ್ಯಮ ವರ್ಗದಲ್ಲಿ ನಾವು ಹುಟ್ಟಿದ್ದು. ಗ್ರಾಮೀಣ ಬಡಕುಟುಂಬದ ತಂದೆತಾಯಿ ಉದರದಲ್ಲಿ. ಅನ್ನಕ್ಕೆ ಕೂಲಿ ಮಾಡಿ ತಿನ್ನುವ ದೇಹ ಪರಿಸರದಲ್ಲಿ ಬೆಂದು ಕೃಷ್ಣವರ್ಣವಾಗಿರುತ್ತದೆ. ಅಂತಹ ಕಷ್ಟ ಜೀವಿಗಳ ಉದರದಲ್ಲಿ ಕಪ್ಪಾಗಿ ಹುಟ್ಟುವುದು ನಮ್ಮ ಜನ್ಮಾಂತರ ಪುಣ್ಯ. ಜಗಕ್ಕೆ ಗುರು ಕೃಷ್ಣ ಕಪ್ಪು. ಶತೃಸಂಹಾರಕ ಭೈರವ ಕಪ್ಪು. ಲಯಕಾರಕ ಶಿವ ಕಪ್ಪು. ಕಾಳಿಮಾತೆ ಕಪ್ಪು. ದೇಹಕಪ್ಪಾಗಿದ್ದರು ಪರವಾಗಿಲ್ಲ. ಆದರೆ ಹೃದಯ ಕಪ್ಪಾಗಿ ಇರಬಾರದು. ಇದನ್ನೂ ಓದಿ: ಚಿತ್ರರಂಗದಲ್ಲಿ ವಾಮ ಮಾರ್ಗದಲ್ಲಿ ಗೆದ್ದವರೇ ಡ್ರಗ್ಸ್ ದಾಸರು: ಜಗ್ಗೇಶ್ ಆಕ್ರೋಶ

    ಬಿಳಿಚರ್ಮಕ್ಕೆ ಸಹಜವಾಗಿ ಜನ ಮರುಳಾಗೋದು ಶೇ.100ರಷ್ಟು ಸತ್ಯ. ಗುಣವಂತ ಹೆಣ್ಣು ಕಪ್ಪಗಿದ್ದರೆ ಮೂಗು ಮುರಿದು, ಬಿಳಿಹೆಣ್ಣ ಬೇಗ ಒಪ್ಪಿ ಮದುವೆ ಆಗುತ್ತಾರೆ. ನಂತರ ಜೀವನ ಪೂರ ಬಾಯಿಬಡಿದುಕೊಂಡು ಬಾಳುವವರನ್ನು ಬಹಳ ಮಂದಿ ನೋಡಿದ್ದೇವೆ. ವಿಶೇಷವಾಗಿ ನಮ್ಮ ಕಲಾರಂಗದಲ್ಲಿ ಚರ್ಮ ಬಿಳಿ ಇದ್ದರಂತು ಅವರ ಮೇಲೆ ದೇವತೆ, ರಂಬೆ ಕೊಂಬೆ ಕೆರೆಕಟ್ಟೆ ಎಂದು ಹಾಡು ಬರೆದು ಮೆರೆಸುತ್ತಾರೆ. ಜಾಲತಾಣವೆಲ್ಲಾ ಅಂತ ಬಿಳಿಸುಂದರಿಯೇ ಆವರಿಸಿ ಹಾರಾಡುತ್ತಾರೆ. ಎಷ್ಟೋ ಪ್ರತಿಭೆ ಕಪ್ಪು ಇದ್ದರೆ ಅವಕಾಶ ವಂಚಿತರಾಗುತ್ತಾರೆ. ಅದು ಅವರವರ ಅದೃಷ್ಟ ಎಂದು ಸಮಾಧಾನ ಹೇಳಿದೆ. ಇದನ್ನೂ ಓದಿ:  ಇಂದಿನ ಕಲಬೆರಕೆ ಮುಂದೆ 24 ಕ್ಯಾರೆಟ್ ಚಿನ್ನವಿದ್ದಂತೆ: ಪಂಡರೀಬಾಯಿ ಬಗ್ಗೆ ಜಗ್ಗೇಶ್ ಮಾತು

    https://www.instagram.com/p/CFXabTusAlQ/

    ದುನಿಯಾ ವಿಜಯ್ ಫೋನ್ ಕರೆ ಕಡಿತವಾದ ನಂತರ ತಲೆಯಲ್ಲಿ ಕಪ್ಪು ಹುಳ ಆವರಿಸಿತು. ಮೈಬಣ್ಣ ಕಪ್ಪಗಿದ್ದರು ಪರವಾಗಿಲ್ಲಾ ಚಿಂತನೆ ಅಪರಂಜಿಯಂತೆ ಇರಲಿ. ನಾವು ಶವವಾಗಿ ಸುಟ್ಟಾಗ ಕಪ್ಪುಬಿಳಿ ಬೇಧವಿಲ್ಲದೆ ದೇಹ ಬೂದಿಯಾಗುತ್ತದೆ ಎಂದು ಜಗ್ಗೇಶ್ ಬರೆದುಕೊಂಡಿದ್ದಾರೆ.

  • ಅಣ್ಣ ಮತ್ತೊಬ್ಬ ತಾಯಿ ಇದ್ದ ಹಾಗೆ – ದರ್ಶನ್ ವಿಶ್‌ಗೆ ಡಾಲಿ ಪ್ರತಿಕ್ರಿಯೆ

    ಅಣ್ಣ ಮತ್ತೊಬ್ಬ ತಾಯಿ ಇದ್ದ ಹಾಗೆ – ದರ್ಶನ್ ವಿಶ್‌ಗೆ ಡಾಲಿ ಪ್ರತಿಕ್ರಿಯೆ

    ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡಾಲಿ ಎಂದೇ ಖ್ಯಾತಿಯಾಗಿರುವ ನಟ ಧನಂಜಯ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಟಾರ್ ನಟರು, ನಿರ್ದೇಶಕರು ಸೋಶಿಯಲ್ ಮೀಡಿಯಾದ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

    ಕೊರೊನಾ ಕಾರಣದಿಂದ ಧನಂಜಯ್ ಈ ಬಾರಿ ಸರಳವಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೂ ಮೊದಲೇ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡುವುದು ಬೇಡ ಎಂದು ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಅದರಂತೆಯೇ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕವೇ ನೆಚ್ಚಿನ ನಟನಿಗೆ ಶುಭಾಶಯ ತಿಳಿಸುತ್ತಿದ್ದಾರೆ.

    ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಧನಂಜಯ್‍ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವೀಟ್ ಮಾಡುವ ಮೂಲಕ ಶುಭ ಹಾರೈಸಿದ್ದಾರೆ. ‘ಹುಟ್ಟುಹಬ್ಬದ ಶುಭಾಶಯಗಳು ಡಾಲಿ’ ಎಂದು ವಿಶ್ ಮಾಡಿದ್ದು, ಧನಂಜಯ್ ಜೊತೆ ಇರುವ ಫೋಟೋವನ್ನು ಶೇರ್ ಮಾಡಿದ್ದಾರೆ. ದರ್ಶನ್ ಪ್ರೀತಿಯ ಶುಭಾಶಯಕ್ಕೆ ಧನಂಜಯ್ ‘ಅಣ್ಣ ಮತ್ತೊಬ್ಬ ತಾಯಿ ಇದ್ದ ಹಾಗೆ. ಧನ್ಯವಾದಗಳು ದರ್ಶನ್’ ಎಂದು ಹೇಳಿದ್ದಾರೆ.

    ದರ್ಶನ್ ಮತ್ತು ಧನಂಜಯ್ ಇಬ್ಬರು ‘ಯಜಮಾನ’ ಸಿನಿಮಾದಲ್ಲಿ ಒಟ್ಟಿಗೆ ಅಭಿನಯಿಸಿದ್ದರು. “ಹುಟ್ಟು ಹಬ್ಬದ ಶುಭಾಶಯಗಳು ಗೆಳೆಯ. ಸವಾಲು, ಸಕ್ಸಸ್, ಸಂತೋಷ, ಯಾವಾಗಲು ನಿನ್ನ ಜೊತೆಗಿರಲಿ” ಎಂದು ಸತೀಶ್ ನೀನಾಸಂ ಟ್ವೀಟ್ ಮಾಡುವ ಮೂಲಕ ವಿಶ್ ಮಾಡಿದ್ದಾರೆ. ಸತೀಶ್ ನೀನಾಸಂ ಮತ್ತು ಧನಂಜಯ್ ಇಬ್ಬರು ಉತ್ತಮ ಗೆಳೆಯರಾಗಿದ್ದು, ಇಬ್ಬರು ಒಬ್ಬರಿಗೊಬ್ಬರು ತಬ್ಬಿಕೊಂಡು ನಗುತ್ತಿರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ.

    “ನಗುತಾ ನಗುತಾ ಬಾಳು ನೀನು ನೂರು ವರುಷ” ಎಂದು ವಿಜಿ ವಿಶ್ ಮಾಡಿದ್ದಾರೆ. ‘ಸಲಗ’ ಸಿನಿಮಾ ತಂಡದ ಕಡೆಯಿಂದ ಧನಂಜಯ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಹುಟ್ಟುಹಬ್ಬಕ್ಕೆ ಉಡುಗೊರೆ ನೀಡಿದೆ. ‘ಸಲಗ’ ಸಿನಿಮಾದಲ್ಲಿ ಧನಂಜಯ್ ಪೊಲೀಸ್ ಪಾತ್ರದಲ್ಲಿ ಮಿಂಚುತ್ತಿದ್ದಾರೆ.

    ಹೊಂಬಾಳೆ ಫಿಲ್ಮ್ ಹುಟ್ಟುಹಬ್ಬದ ವಿಶೇಷವಾಗಿ ಬಹು ನಿರೀಕ್ಷೆಯ ‘ಯುವರತ್ನ’ ಸಿನಿಮಾದ ಲುಕ್ ರಿಲೀಸ್ ಮಾಡಲಾಗಿದೆ. ಚಿತ್ರದಲ್ಲಿ ಧನಂಜಯ್ ಆಂಟೋನಿ ಜೋಸೆಫ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

    ನಿರ್ದೇಶಕ ಸಂತೋಷ್ ಆನಂದ್ ರಾಮ್, ನಟ ನಿರೂಪ್ ಭಂಡಾರಿ ಸೇರಿದಂತೆ ಅನೇಕರು ಧನಂಜಯ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಧನಂಜಯ್ 10ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದು, ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ.

  • ಎಂಟೆದೆಯ ಬಂಟನಿಗೆ ಹುಟ್ಟುಹಬ್ಬದ ಶುಭಾಶಯಗಳು: ಸಿದ್ದುಗೆ ದುನಿಯಾ ವಿಜಿ ವಿಶ್

    ಎಂಟೆದೆಯ ಬಂಟನಿಗೆ ಹುಟ್ಟುಹಬ್ಬದ ಶುಭಾಶಯಗಳು: ಸಿದ್ದುಗೆ ದುನಿಯಾ ವಿಜಿ ವಿಶ್

    ಬೆಂಗಳೂರು: ಮಾಜಿ ಸಿಎಂ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ನಟ ದುನಿಯಾ ವಿಜಯ್ ಅವರು ಶುಭಕೋರಿದ್ದಾರೆ.

    ಇಂದು ಕರ್ನಾಟಕದ ಹಿರಿಯ ರಾಜಕಾರಣಿ ಮತ್ತು ವಿಪಕ್ಷದ ನಾಯಕ ಸಿದ್ದರಾಮಯ್ಯವರು 73ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಹಲವಾರ ರಾಜಕೀಯ ಗಣ್ಯರು ಮತ್ತು ನಟರು ಶುಭಕೋರಿದ್ದಾರೆ. ಅಂತಯೇ ನಟ ದುನಿಯಾ ವಿಜಯ್ ಅವರು ಕೂಡ, ಎಂಟೆದೆಯ ಬಂಟನಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದಿದ್ದಾರೆ. ಜೊತೆಗೆ ತಾವು ಕೈ ಮುಗಿಯುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

    ಸಿದ್ದರಾಮಯ್ಯ ಅವರಿಗೆ ಟ್ವೀಟ್ ಮಾಡುವ ಮೂಲಕ ವಿಶ್ ಮಾಡಿರುವ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು ಎಂದಿದ್ದಾರೆ. ನೆಚ್ಚಿನ ನಾಯಕ ಹುಟ್ಟುಹಬ್ಬಕ್ಕೆ ಅವರ ಅಪಾರವಾದ ಅಭಿಮಾನಿಗಳು ಕೂಡ ವಿಶ್ ಮಾಡಿದ್ದಾರೆ.

    ಹಿರಿಯ ರಾಜಕಾರಣಿಗಳು, ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರು, ಆತ್ಮೀಯರೂ ಆಗಿರುವ ಶ್ರೀ ಸಿದ್ದರಾಮಯ್ಯನವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕೂಡ ಹಾರೈಸಿದ್ದಾರೆ. ಜೊತೆಗೆ ಕಂದಾಯ ಮಂತ್ರಿ ಆರ್ ಅಶೋಕ್ ಕೂಡ ಸಿದ್ದರಾಮಯ್ಯ ಅವರಿಗೆ ವಿಶ್ ಮಾಡಿದ್ದು, ಮಾಜಿ ಮುಖ್ಯಮಂತ್ರಿಗಳು, ಹಿರಿಯ ರಾಜಕಾರಣಿ, ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ತಮಗೆ ದೇವರು ಇನ್ನೂ ಉತ್ತಮ ಆರೋಗ್ಯ ನೀಡಿ ಜನ ಸೇವೆ ಮಾಡುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಕೇಳಿಕೊಂಡಿದ್ದಾರೆ.

    ಸದ್ಯ ಕೊರೊನಾ ಸೋಂಕಿಗೆ ತುತ್ತಾಗಿರುವ ಸಿದ್ದರಾಮಯ್ಯ ಅವರು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗ ಸೋಂಕಿನಿಂದ ಸಿದ್ದರಾಮಯ್ಯ ಅವರು ಗುಣಮುಖರಾಗಿದ್ದು, ನಾಳೆ ಡಿಸ್ಚಾರ್ಜ್ ಆಗಲಿದ್ದಾರೆ. ಸಿದ್ದರಾಮಯ್ಯ ಅವರು ಕೋವಿಡ್ 19 ನಿಂದ ಈಗ ಪೂರ್ಣ ಗುಣಮುಖರಾಗಿದ್ದಾರೆ. ಎರಡನೇ ಬಾರಿ ನಡೆಸಿದ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ. ಆಸ್ಪತ್ರೆಗೆ ದಾಖಲಾದ ಮೊದಲ ಎರಡು ದಿನ ಮಾತ್ರ ಜ್ವರ ಕಾಣಿಸಿಕೊಂಡಿಸಿತ್ತು. ಉಳಿದಂತೆ ಸೋಂಕಿನ ಲಕ್ಷಣ ಇರಲಿಲ್ಲ. ಸಿದ್ದರಾಮಯ್ಯ ಅವರು ನಾಳೆ ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

  • ‘ಬದುಕು ಯಾರ ಕೈಯಲ್ಲೂ ಇಲ್ಲ’- ವೆಂಕಟ್ ಮೇಲಿನ ಹಲ್ಲೆಗೆ ವಿಜಿ ಖಂಡನೆ

    ‘ಬದುಕು ಯಾರ ಕೈಯಲ್ಲೂ ಇಲ್ಲ’- ವೆಂಕಟ್ ಮೇಲಿನ ಹಲ್ಲೆಗೆ ವಿಜಿ ಖಂಡನೆ

    ಬೆಂಗಳೂರು: ನಟ ಜಗ್ಗೇಶ್ ಬಳಿಕ ಇದೀಗ ದುನಿಯಾ ವಿಜಯ್ ಅವರು ಮಂಡ್ಯದಲ್ಲಿ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿದ್ದಾರೆ.

    ಹುಚ್ಚ ವೆಂಕಟ್ ಪರಿಸ್ಥಿತಿ ಕಂಡು ಬೇಸರಗೊಂಡ ವಿಜಿ ತನ್ನ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ. ಬದುಕು ಯಾರ ಕೈಯಲ್ಲೂ ಇಲ್ಲ. ಇಂದು ಒಬ್ಬ ರಾಜ ಭಿಕ್ಷೆ ಬೇಡಬಹುದು. ಅದೇ ಭಿಕ್ಷುಕ ನಾಳೆ ರಾಜನಾಗಬಹುದು. ನಾವು ಅವರ ಪರಿಸ್ಥಿತಿಯನ್ನು ವ್ಯಂಗ್ಯ ಮಾಡುವುದು ಮಾನವೀಯತೆಯಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಫೇಸ್‍ಬುಕ್ ಪೋಸ್ಟ್ ನಲ್ಲೇನಿದೆ..?
    ಹುಚ್ಚ ವೆಂಕಟ್ ಅವರಿಗೆ ಬೀದಿಯಲ್ಲಿ ಹೊಡೆಯುವ ವಿಡಿಯೋಗಳು ಕಳೆದ ಎರಡು ದಿನಗಳಿಂದ ವೈರಲ್ ಆಗಿವೆ. ‘ಹುಚ್ಚ’ ಎಂದು ಸ್ವತಃ ಹೇಳಿಕೊಂಡು ಚಿತ್ರರಂಗಕ್ಕೆ ಪ್ರವೇಶಿಸಿದರೂ ನಟನಾಗಿ, ನಿರ್ದೇಶಕನಾಗಿ ಹಾಗೂ ನಿರ್ಮಾಪಕನಾಗಿ ಕಾಣಿಸಿಕೊಂಡ ಚಿತ್ರಗಳ ಮೂಲಕ ನಾನು ವೃತ್ತಿಯಲ್ಲಿರುವ ಇಂಡಸ್ಟ್ರಿಯಲ್ಲೇ ಗುರುತಿಸಿಕೊಂಡ ವ್ಯಕ್ತಿ ಎನ್ನುವ ಕಾರಣಕ್ಕಾಗಿ ಹಾಗು ಮಾನವೀಯತೆಯ ದೃಷ್ಟಿಯಿಂದ ಮಾಧ್ಯಗಳಲ್ಲಿ ಒಂದು ಮನವಿ ಮಾಡುತ್ತಿದ್ದೇನೆ.

    ಈ ವಿಚಾರದಲ್ಲಿ ಮಾಧ್ಯಮಗಳಲ್ಲಿ ವಿನಂತಿಸಲು ಕಾರಣ ಒಂದೇ. ಆತನನ್ನು ಇಂದು ರಾಜ್ಯದ ಜನತೆ ನಟನಾಗಿ ಗುರುತಿಸುವುದಕ್ಕಿಂತ ಹೆಚ್ಚು ಮಾಧ್ಯಮಗಳಲ್ಲಿನ ಚರ್ಚೆಗಳ ಮೂಲಕ ಗುರುತಿಸಿದ್ದಾರೆ. ಆದರೆ ಇಂದು ಆತನಿಗೆ ಹೊಡೆದು ಆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡಲಾಗುತ್ತಿದೆ. ಇದೂವರೆಗೆ ಆತನ ವರ್ತನೆಯನ್ನು ಕಂಡಿರುವ ನಮಗೆ ಮತ್ತು ವೈದ್ಯರು ಕೂಡ ಈಗಾಗಲೇ ನೀಡಿರುವ ಹೇಳಿಕೆಗಳ ಪ್ರಕಾರ ಹುಚ್ಚ ವೆಂಕಟ್ ಅವರಿಗೆ ಚಿಕಿತ್ಸೆಯ ಅಗತ್ಯ ಇದೆಯೇ ಹೊರತು, ಹೊಸ ಚರ್ಚೆ, ಮಾತುಕತೆ, ಹೊಡೆದಾಟಗಳಲ್ಲ. ಇದನ್ನು ಚೆನ್ನಾಗಿ ಅರಿಯಬಲ್ಲ ಮಾಧ್ಯಮಗಳೇ ಈ ಬಾರಿ ಕೂಡ ಆತನಿಗೆ ದಯಮಾಡಿ ಸಹಾಯ ಮಾಡಿ. ಆತನ ಸಂಬಂಧಿಕರು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುವ ಜವಾಬ್ದಾರಿಯಿಂದ ಜಾರಿಕೊಳ್ಳದ ಹಾಗೆ ಕಾಳಜಿ ವಹಿಸಿ ಎಂದು ನನ್ನ ಮನವಿ ಎಂದಿದ್ದಾರೆ.

    ಇದೇ ಸಂದರ್ಭದಲ್ಲಿ ಆತನಿಗೆ ಹಲ್ಲೆಗೈದು ವಿಡಿಯೋ ಮಾಡುವವರಲ್ಲಿ ಕೂಡ ಒಂದು ಮನವಿ. ಬದುಕು ಯಾರ ಕೈಯಲ್ಲಿಯೂ ಇಲ್ಲ. ಇಂದು ಒಬ್ಬ ರಾಜ ಭಿಕ್ಷೆ ಬೇಡಬಹುದು. ಅದೇ ಭಿಕ್ಷುಕ ನಾಳೆ ರಾಜನಾಗಬಹುದು. ನಾವು ಅವರ ಪರಿಸ್ಥಿತಿಯನ್ನು ವ್ಯಂಗ್ಯ ಮಾಡುವುದು ಮಾನವೀಯತೆಯಲ್ಲ. ಹಾಗಾಗಿ ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ವ್ಯಕ್ತಿಯಲ್ಲಿ ದಯವಿಟ್ಟು ಯಾರೂ ಹಲ್ಲೆ ಮಾಡಬೇಡಿ ಎಂದು ಕಳಕಳಿಯಿಂದ ವಿನಂತಿಸುವುದಾಗಿ ಬರೆದುಕೊಂಡಿದ್ದಾರೆ.

    ನಡೆದಿದ್ದೇನು?
    ಕಳೆದ ಕೆಲ ದಿನಗಳಿಂದ ಹುಚ್ಚ ವೆಂಕಟ್ ಶ್ರೀರಂಗಪಟ್ಟಣದಲ್ಲೇ ಅಲೆದಾಡುತ್ತಿದ್ದು, ಕಬ್ಬಿನ ಜ್ಯೂಸ್ ಕುಡಿದು ಹಣ ನೀಡದೆ ರಂಪಾಟ ಮಾಡಿದ್ದ. ಅಷ್ಟೇ ಅಲ್ಲದೇ ಜ್ಯೂಸ್ ಅಂಗಡಿಯವನ ಮೇಲೆ ಕೈ ಮಾಡಿದ್ದನು. ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ವೆಂಟಕ್ ಗೆ ಧರ್ಮದೇಟು ನೀಡಿದ್ದಾರೆ. ವೆಂಟಕ್ ಗೆ ಥಳಿಸುತ್ತಿರುವುದನ್ನು ಸ್ಥಳದಲ್ಲಿ ಸೇರಿದ್ದವರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದರು. ಇದನ್ನೂ ಓದಿ: ಹುಚ್ಚ ವೆಂಕಟ್ ಸ್ಥಿತಿಗೆ ಮರುಗಿದ ಜಗ್ಗೇಶ್

  • ಸ್ಟಾರ್, ಸೆಲೆಬ್ರಿಟಿ ಎಂಬ ಅಹಂ ಇಲ್ಲದ ವಿಜಿಯಣ್ಣ ಇರುವುದೇ ಹೀಗೆ: ನವೀನ್

    ಸ್ಟಾರ್, ಸೆಲೆಬ್ರಿಟಿ ಎಂಬ ಅಹಂ ಇಲ್ಲದ ವಿಜಿಯಣ್ಣ ಇರುವುದೇ ಹೀಗೆ: ನವೀನ್

    ಬೆಂಗಳೂರು: ನಟ ದುನಿಯಾ ವಿಜಯ್ ನಿರ್ದೇಶಿಸಿ ನಟಿಸಿರುವ ‘ಸಲಗ’ ಸಿನಿಮಾ ಇದೇ ತಿಂಗಳು ತೆರೆಗೆ ಬರಲು ಸಿದ್ಧವಾಗಿದೆ. ಈ ವೇಳೆ ದುನಿಯಾ ವಿಜಿ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ.

    ಶುಕ್ರವಾರ ದುನಿಯಾ ವಿಜಿ ಪತ್ನಿ ಕೀರ್ತಿ ಮತ್ತು ಚಿತ್ರತಂಡದ ಜೊತೆ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ್ದರು. ದುನಿಯಾ ವಿಜಿಗೆ ಗಾಯಕ ನವೀನ್ ಸಜ್ಜು ಕೂಡ ಸಾಥ್ ನೀಡಿದ್ದರು. ನಂತರ ದೇವರಿಗೆ ವಿಶೇಷವಾದ ಪೂಜೆ ಮಾಡಿಸಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಅಲ್ಲದೇ ಬೆಟ್ಟದಲ್ಲಿರುವ ಆನೆಗೆ ಹಣ್ಣು-ಹಂಪಲು ಕೊಟ್ಟು ಆಶೀರ್ವಾದ ಪಡೆದುಕೊಂಡಿದ್ದಾರೆ.

    ಇದೇ ವೇಳೆ ಅಭಿಮಾನಿಗಳು ಮುಗಿಬಿದ್ದಿದ್ದು, ಸೆಲ್ಫಿ ಕ್ಕಿಕ್ಕಿಸಿಕೊಂಡಿದ್ದಾರೆ. ನವೀಜ್ ಸಜ್ಜು, ದುನಿಯಾ ವಿಜಿ ಅವರ ಸರಳತೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಬಗ್ಗೆ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡುವ ಮೂಲಕ ವಿಜಿ ಅವರ ಸರಳ ವ್ಯಕ್ತಿತ್ವದ ಬಗ್ಗೆ ಬರೆದುಕೊಂಡಿದ್ದಾರೆ.

    “ಸರಳತೆಯ ಸಲಗ, ಶುಕ್ರವಾರ ವಿಜಯಣ್ಣನೊಂದಿಗೆ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದೆ. ಬೆಟ್ಟಕ್ಕೆ ಹೋಗುವ ಮಾರ್ಗಮಧ್ಯೆ ಸಿಕ್ಕ ಈ ಪುಟ್ಟ ಗುಡಿಸಲು ಹೋಟೆಲ್‍ಗೆ ಕರೆದೊಯ್ದ ವಿಜಿಯಣ್ಣ ಉಪಾಹಾರ ಕೊಡಿಸಿದ್ದರು. ಸ್ಟಾರ್, ಸೆಲೆಬ್ರಿಟಿ ಎಂಬ ಯಾವ ಅಹಂ ಇಲ್ಲದ ವಿಜಿಯಣ್ಣ ಇರುವುದೇ ಹೀಗೆ, ಬದುಕುತ್ತಿರುವುದು ಹೀಗೆ. ಇವರು ತುಂಬಾ ಸರಳವಾದ ವ್ಯಕ್ತಿ. ನಿನ್ನೆಯ ಜರ್ನಿ ಅದ್ಭುತವಾಗಿತ್ತು. ಮುಂದಿನ ಸಲಗ ಜರ್ನಿ ಕೂಡ ಯಶಸ್ವಿಯಾಗಿ ಇರಲೆಂದು ಮಾದೇಶ್ವರನಲ್ಲಿ ಬೇಡಿಕೊಳ್ಳುತ್ತೇನೆ” ಎಂದು ಪ್ರೀತಿ ಬರೆದುಕೊಂಡಿದ್ದಾರೆ.

    https://www.instagram.com/p/B9ZWv81hV8E/

    ದುನಿಯಾ ವಿಜಿ ನಟನೆಯ ‘ಸಲಗ’ ಚಿತ್ರಕ್ಕೆ ಸಿಂಗರ್ ನವೀನ್ ಸಜ್ಜು ಎರಡು ಹಾಡುಗಳಿಗೆ ಮ್ಯೂಸಿಕ್ ಕಂಪೋಸ್ ಮಾಡಿ ಹಾಡಿದ್ದಾರೆ. ಈಗಾಗಲೇ ರೆಕಾರ್ಡಿಂಗ್ ಮುಗಿಸಿದ ತಂಡ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗಿ ಪೂಜೆ ಸಲ್ಲಿಸಿ ಬಂದಿದ್ದಾರೆ. ಇದು ದುನಿಯಾ ವಿಜಿ ನಿರ್ದೇಶನದ ಮೊದಲ ಚಿತ್ರ, ಸಿನಿಮಾದಲ್ಲಿ ನಟಿಯಾಗಿ ಸಂಜನಾ ಆನಂದ್ ಅಭಿನಯಿಸಿದ್ದಾರೆ. ಸದ್ಯದಲ್ಲೇ ಹಾಡು ರಿಲೀಸ್ ಆಗಲಿದೆ.

  • ದುನಿಯಾ ವಿಜಯ್ ಮೇಲೆ ಎಫ್‍ಐಆರ್ ದಾಖಲು

    ದುನಿಯಾ ವಿಜಯ್ ಮೇಲೆ ಎಫ್‍ಐಆರ್ ದಾಖಲು

    ಬೆಂಗಳೂರು: ನಟ ದುನಿಯಾ ವಿಜಯ್ ವಿರುದ್ಧ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

    ನಟ ದುನಿಯಾ ವಿಜಯ್ ತಮ್ಮ 46ನೇ ಹುಟ್ಟುಹಬ್ಬದ ದಿನ ತಲ್ವಾರ್ ನಲ್ಲಿ ಕೇಕ್ ಕಟ್ ಮಾಡಿದ್ದರು. ತಲ್ವಾರ್ ನಲ್ಲಿ ಕೇಕ್ ಮಾಡುವ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾದ ತಕ್ಷಣ ಹೆಚ್ಚತ್ತ ಗಿರಿನಗರ ಪೊಲೀಸರು ನೋಟಿಸ್ ಜಾರಿ ಮಾಡಿ, ಅದಕ್ಕೆ ಉತ್ತರಿಸುವಂತೆ ಸೂಚನೆ ನೀಡಿದ್ದರು. ನೋಟಿಸ್ ಜಾರಿ ಆದ ಹಿನ್ನೆಲೆಯಲ್ಲಿ ವಿಜಯ್ ಕೂಡ ಪೊಲೀಸರ ಮುಂದೆ ಹಾಜರಾಗಿ ಸುಮಾರು ಎರಡು ಗಂಟೆಗಳ ಕಾಲ ಘಟನೆ ಸಂಬಂಧ ವಿವರಣೆ ನೀಡಿದ್ದರು. ಇದನ್ನೂ ಓದಿ: ಪೊಲೀಸರಲ್ಲಿ ಕ್ಷಮೆಯಾಚಿಸಿದ ದುನಿಯಾ ವಿಜಯ್

    ಹುಟ್ಟುಹಬ್ಬದ ಸಮಯದಲ್ಲಿ ಅಭಿಮಾನಿ ಕೊಟ್ಟ ತಲ್ವಾರ್ ನಿಂದ ಕೇಕ್ ಮಾಡಿದೆ. ಅದು ಆಗ ನನಗೆ ತಪ್ಪು ಅಂತಾ ಗೊತ್ತಾಗಿರಲಿಲ್ಲ. ಇನ್ಮುಂದೆ ಈ ರೀತಿ ಆಗದಂತೆ ಎಚ್ಚರವಹಿಸೋದಾಗಿ ಮನವಿ ಮಾಡಿಕೊಂಡಿದ್ದರು. ಇದರ ಜೊತೆಗೆ ಬರ್ತ್ ಡೇ ವೇಳೆ ವಿಜಯ್ ಮನೆ ಅಕ್ಕಪಕ್ಕದವರು ಕೂಡ ಪೊಲೀಸ್ ಕಮೀಷನರ್‌ಗೆ ದೂರು ನೀಡಿದ್ದರು. ಇದನ್ನೂ ಓದಿ: ‘ಸಲಗ’ನಿಗೆ ತಿವಿದ ಖಡ್ಗ – ಪೊಲೀಸರಿಂದ ಎಫ್‌ಐಆರ್‌ಗೆ ಸಿದ್ಧತೆ

    ಅಕ್ರಮವಾಗಿ ರಸ್ತೆ ಬಂದ್ ಮಾಡಿಕೊಂಡು ಮ್ಯೂಸಿಕ್ ಹಾಕಿ ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟುಮಾಡಿದ್ದಾರೆ ಎಂದು ದೂರು ನೀಡಿದ್ದರು. ಈ ಎಲ್ಲಾ ಘಟನೆಗಳ ಅಧಾರದ ಮೇಲೆ ತನಿಖೆ ನಡೆಸಿದ ಗಿರಿನಗರ ಪೊಲೀಸರು ಆರ್ಮ್ಸ್ ಆಕ್ಟ್ ಮತ್ತು 283 (ಸಾರ್ವಜನಿಕರ ಶಾಂತಿಗೆ ಭಂಗ ಮಾಡಿದ ಮತ್ತು ಅನುಮತಿ ಇಲ್ಲದೇ ರಸ್ತೆ ಬಂದ್ ಮಾಡಿದ) ಆರೋಪದಡಿ ಕೇಸ್ ದಾಖಲಿಸಿಕೊಂಡಿದ್ದಾರೆ.

  • ಪೊಲೀಸರಲ್ಲಿ ಕ್ಷಮೆಯಾಚಿಸಿದ ದುನಿಯಾ ವಿಜಯ್

    ಪೊಲೀಸರಲ್ಲಿ ಕ್ಷಮೆಯಾಚಿಸಿದ ದುನಿಯಾ ವಿಜಯ್

    ಬೆಂಗಳೂರು: ನನ್ನಿಂದ ತಪ್ಪಾಗಿದೆ ಕ್ಷಮಿಸಿ. ತಲ್ವಾರ್‌ನಿಂದ ಕೇಕ್ ಕತ್ತರಿಸುವುದು ತಪ್ಪು ಎನ್ನುವುದು ಗೊತ್ತಿರಲಿಲ್ಲ ಎಂದು ದುನಿಯಾ ವಿಜಯ್ ಪೊಲೀಸರ ಮುಂದೆ ಕ್ಷಮೆ ಯಾಚಿಸಿದ್ದಾರೆ.

    ನಟ ದುನಿಯಾ ವಿಜಯ್ ತಮ್ಮ ಹುಟ್ಟುಹಬ್ಬದಂದು ತಲ್ವಾರ್‌ನಿಂದ ಕೇಕ್ ಕತ್ತರಿಸಿದ್ದ ಪ್ರಕರಣಕ್ಕೆ ಸಂಬಂಧ ಗಿರಿನಗರ ಪೊಲೀಸರು ನೋಟಿಸ್ ನೀಡಿದ್ದರು. ಈ ಹಿನ್ನೆಲೆ ದುನಿಯಾ ವಿಜಯ್ ಇಂದು ಪೊಲೀಸ್ ವಿಚಾರಣೆಗೆ ಹಾಜರಾದರು. ಸತತ ಎರಡು ಗಂಟೆಗಳ ಕಾಲ ದುನಿಯಾ ವಿಜಯ್ ವಿವರಣೆ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ವಿಚಾರಣೆ ಬಳಿಕ ಮಾತನಾಡಿದ ದುನಿಯಾ ವಿಜಯ್, ಘಟನೆ ಸಂಬಂಧ ಎಲ್ಲಾ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದೇನೆ. ಹುಟ್ಟುಹಬ್ಬದ ವೇಳೆ ಅಭಿಮಾನಿಯೊಬ್ಬ ಕೊಟ್ಟ ತಲ್ವಾರ್‍ನಿಂದ ಕೇಕ್ ಮಾಡಿದೆ. ಆಗ ಅದು ತಪ್ಪು ಎನ್ನುವುದು ನನಗೆ ಗೊತ್ತಾಗಿಲ್ಲ. ಇನ್ಮುಂದೆ ಈ ರೀತಿ ಆಗದಂತೆ ಎಚ್ಚರಿಕೆ ವಹಿಸುತ್ತೇನೆ ಎಂದರು ಸ್ಪಷ್ಟನೆ ನೀಡಿದರು.

    ಆಗಿದ್ದೇನು?:
    ದುನಿಯಾ ವಿಜಯ್ ಬೆಂಗಳೂರಿನ ತಮ್ಮ ನಿವಾಸದಲ್ಲಿ ಭಾನುವಾರ 46ನೇ ವರ್ಷದ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಂಡಿದ್ದರು. ಈ ವೇಳೆ ಕತ್ತಿಯಲ್ಲಿ ಕೇಕ್ ಕಟ್ ಮಾಡಿ ಹೊಸ ವಿವಾದವನ್ನು ತಮ್ಮ ಮೈಮೇಲೆ ಎಳೆದುಕೊಂಡಿದ್ದರು. ಬಳಿಕ ಪಬ್ಲಿಕ್ ಟಿವಿಯಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ, ತಮ್ಮ ತಪ್ಪಿನ ಬಗ್ಗೆ ನಟ ವಿಜಯ್ ಒಪ್ಪಿಕೊಂಡು ಕ್ಷಮೆ ಕೇಳಿದ್ದರು.

  • ‘ಸಲಗ’ನಿಗೆ ತಿವಿದ ಖಡ್ಗ – ಪೊಲೀಸರಿಂದ ಎಫ್‌ಐಆರ್‌ಗೆ ಸಿದ್ಧತೆ

    ‘ಸಲಗ’ನಿಗೆ ತಿವಿದ ಖಡ್ಗ – ಪೊಲೀಸರಿಂದ ಎಫ್‌ಐಆರ್‌ಗೆ ಸಿದ್ಧತೆ

    ಬೆಂಗಳೂರು: ನಟ ದುನಿಯಾ ವಿಜಯ್ ತನ್ನ ಹುಟ್ಟು ಹಬ್ಬ ಆಚರಣೆ ವೇಳೆ ತಲ್ವಾರ್ ನಿಂದ ಕೇಕ್ ಕಟ್ ಮಾಡಿದ ಹಿನ್ನೆಲೆಯಲ್ಲಿ, ಗಿರಿನಗರ ಪೊಲೀಸರು ಎಫ್‍ಐಆರ್ ದಾಖಲಿಸಲು ಚಿಂತನೆ ನಡೆಸಿದ್ದಾರೆ.

    ಅನುಮತಿ ಇಲ್ಲದೇ ತಲ್ವಾರ್ ಅಥವಾ ಯಾವುದೇ ಮಾರಾಕಾಸ್ತ್ರವನ್ನು ಬಹಿರಂಗವಾಗಿ ಉಪಯೋಗಿಸುವಂತಿಲ್ಲ. ಘಟನೆ ಸಂಬಂಧ ಮೂರು ದಿನದ ಒಳಗೆ ಪೊಲೀಸ್ ಠಾಣೆಗೆ ಬಂದು ವಿವರಣೆ ನೀಡುವಂತೆ ಗಿರಿನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

    ತನಿಖಾಧಿಕಾರಿ ಮುಂದೆ ವಿಜಯ್ ವಿವರಣೆ ನೀಡಿದ ನಂತರ ಶಸ್ತ್ರಾಸ್ತ್ರ ಕಾಯ್ದೆ ಅಡಿ ಆಡಿ ಎಫ್‍ಐಆರ್ ದಾಖಲಿಸಿಕೊಳ್ಳಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಇದೇ ವೇಳೆ ರಾತ್ರಿ ಹುಟ್ಟುಹಬ್ಬಕ್ಕೆ ವಿಜಯ್ ಮನೆ ಮುಂದಿನ ರಸ್ತೆ ಬಂದ್ ಮಾಡಿದ್ದು, ಅನುಮತಿ ಇಲ್ಲದೇ ಡಿಜೆ ಮ್ಯೂಸಿಕ್ ಹಾಕಿಕೊಂಡು ಅಕ್ಕಪಕ್ಕದ ಮನೆಯವರಿಗೆ ತೊಂದರೆ ಕೊಟ್ಟಿದ್ದಾರೆ ಎಂದು ಸ್ಥಳೀಯರು ದುನಿಯಾ ವಿಜಯ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್‍ಗೆ ಫೇಸ್‍ಬುಕ್ ನಲ್ಲಿ ಟ್ಯಾಗ್ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಎಲ್ಲಾ ಕಾರಣಗಳಿಂದಾಗಿ ದುನಿಯಾ ವಿಜಯ್ ವಿರುದ್ಧ ಎಫ್‍ಐಆರ್ ದಾಖಲಾಗುವ ಸಾಧ್ಯತೆಯಿದೆ.