Tag: Duniya Vijay

  • ಹುಟ್ಟುಹಬ್ಬದ ದಿನವೇ ದುನಿಯಾ ವಿಜಿ ವಿರುದ್ಧ ದೂರು

    ಹುಟ್ಟುಹಬ್ಬದ ದಿನವೇ ದುನಿಯಾ ವಿಜಿ ವಿರುದ್ಧ ದೂರು

    ಬೆಂಗಳೂರು: ದುನಿಯಾ ವಿಜಯ್ ಇಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ತಲ್ವಾರ್ ಬಳಸಿ ಕೇಕ್ ಕಟ್ ಮಾಡುವ ಮೂಲಕ ಎಡವಟ್ಟು ಮಾಡಿಕೊಂಡಿದ್ದಾರೆ. ವಿಜಯ್ ಅವರ ಈ ಕೆಲಸಕ್ಕೆ ಪೊಲೀಸರು ದೂರು ದಾಖಲಿಸಿಕೊಳ್ಳಲು ಮುಂದಾಗಿದ್ದಾರೆ.

    ತಲ್ವಾರ್ ಬಳಸಿ ಕೇಕ್ ಕಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರಿನಗರದ ಸ್ಥಳೀಯರು ದುನಿಯಾ ವಿಜಯ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ನಗರ ಪೊಲೀಸ್ ಆಯುಕ್ತರಿಗೆ ಫೇಸ್‍ಬುಕ್‍ನಲ್ಲಿ ಟ್ಯಾಗ್ ಮಾಡುವ ಮೂಲಕ ದೂರು ನೀಡಿದ್ದಾರೆ. ಇದನ್ನೂ ಓದಿ: ದುನಿಯಾ ವಿಜಿ 46ನೇ ಬರ್ತ್ ಡೇಯಲ್ಲಿ ಅವಾಂತರ- ತಲ್ವಾರ್‌ನಲ್ಲಿ ಕೇಕ್ ಕಟ್ ಮಾಡಿದ ನಟ

    ರಾತ್ರಿ ಎರಡು ಗಂಟೆಯಾದರೂ ಜನರನ್ನು ಸೇರಿಸಿಕೊಂಡು ಶಬ್ದ ಮಾಡಿ ಗಲಾಟೆ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ಓಡಾಟಕ್ಕೂ ತೊಂದರೆ ನೀಡಿದ್ದಾರೆ. ಧ್ವನಿ ವರ್ಧಕಗಳನ್ನು ಬಳಸಿ ಅಕ್ಕಪಕ್ಕ ಮನೆಯವರಿಗೆ ಕಿರಿಕಿರಿ ಉಂಟು ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ. ಇದನ್ನೂ ಓದಿ: ನನ್ನ ಗಮನಕ್ಕೆ ಬಾರದೇ ಎಡವಟ್ಟಾಗಿದೆ ಕ್ಷಮಿಸಿ: ವಿಜಯ್

    ಸ್ಥಳೀಯರು ದೂರು ನೀಡಿದ ಹಿನ್ನಲೆ ಗಿರಿನಗರ ಠಾಣಾ ಪೊಲೀಸರು ಸ್ವಯಂಪ್ರೇರಿತ ಕೇಸ್ ಹಾಗೂ ಐಪಿಸಿ ಸೆಕ್ಷನ್ 283 ಅಡಿಯಲ್ಲಿ ಶಸ್ತ್ರಾಸ್ತ್ರ ಕಾಯ್ದೆ ಕೇಸ್ ದಾಖಲಿಸಿಕೊಳ್ಳಲು ಮುಂದಾಗಿದ್ದಾರೆ. ಅನುಮತಿ ಇಲ್ಲದೇ ತಡರಾತ್ರಿವರೆಗೂ ಧ್ವನಿವರ್ಧಕ ಬಳಸಿ, ರಸ್ತೆಯಲ್ಲಿ ಸಂಚಾರಕ್ಕೂ ಅಡಚಣೆ ಮಾಡಿದ್ದಾರೆ. ಗುಂಪು ಸೇರಿಸಿ ಅಕ್ಕಪಕ್ಕದ ಸ್ಥಳೀಯರಿಗೆ ತೊಂದರೆ ಉಂಟು ಮಾಡಿದ ಆರೋಪದ ಮೇಲೆ ಪೊಲೀಸರು ವಿಜಯ್ ಅವರ ವಿರುದ್ಧ ದೂರು ದಾಖಲಿಸಿಕೊಳ್ಳಲು ಮುಂದಾಗಿದ್ದಾರೆ. ಈಗಾಗಲೇ ದುನಿಯಾ ವಿಜಯ್‍ಗೆ ಪೊಲೀಸರು ನೋಟಿಸ್ ನೀಡಲು ಸಿದ್ಧತೆ ನಡೆಸುತ್ತಿದ್ದಾರೆ.

    ದುನಿಯಾ ವಿಜಯ್ ಅವರ ಹುಟ್ಟುಹಬ್ಬದಿಂದ ಜನರು ಬೇಸತ್ತು ಹೋಗಿದ್ದಾರೆ. ಹೀಗಾಗಿ ಹುಟ್ಟುಹಬ್ಬದ ನೆಪದಲ್ಲಿ ಅಭಿಮಾನಿಗಳು ಕಿರಿಕ್ ಮಾಡುತ್ತಾರೆ. ಇಡೀ ರಾತ್ರಿ ದಾಂಧಲೆ ಮಾಡಿದ್ದು, ನೆಮ್ಮದಿಯಿಂದ ನಿದ್ರೆ ಮಾಡುವುದಕ್ಕೆ ಆಗಲ್ಲ. ಪೊಲೀಸರಿಗೆ ಹೇಳಿದ್ರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಿಜಯ್ ಅವರ ಅಕ್ಕಪಕ್ಕದ ಮನೆಯವರು ಫೇಸ್‍ಬುಕ್‍ನಲ್ಲಿ ದೂರು ನೀಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

     

  • ನನ್ನ ಗಮನಕ್ಕೆ ಬಾರದೇ ಎಡವಟ್ಟಾಗಿದೆ ಕ್ಷಮಿಸಿ: ವಿಜಯ್

    ನನ್ನ ಗಮನಕ್ಕೆ ಬಾರದೇ ಎಡವಟ್ಟಾಗಿದೆ ಕ್ಷಮಿಸಿ: ವಿಜಯ್

    ಬೆಂಗಳೂರು: ನಟ ದುನಿಯಾ ವಿಜಯ್ ತಮ್ಮ ಹುಟ್ಟುಹಬ್ಬದ ಸಂಭ್ರಮದ ವೇಳೆ ಕತ್ತಿಯಲ್ಲಿ ಕೇಕ್ ಕಟ್ ಮಾಡುವ ಮೂಲಕ ಹೊಸ ವಿವಾದವನ್ನು ತಮ್ಮ ಮೈಮೇಲೆ ಎಳೆದುಕೊಂಡಿದ್ದರು. ಇದೀಗ ಪಬ್ಲಿಕ್ ಟಿವಿಯಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ, ತಮ್ಮ ತಪ್ಪಿನ ಬಗ್ಗೆ ನಟ ವಿಜಯ್ ಒಪ್ಪಿಕೊಂಡಿದ್ದು, ಕ್ಷಮೆ ಕೇಳಿದ್ದಾರೆ.

    ಈ ಬಗ್ಗೆ ಮಾತನಾಡಿದ ದುನಿಯಾ ವಿಜಯ್, ಗುಂಪಿನಲ್ಲಿ ಸಾಕಷ್ಟು ಅಭಿಮಾನಿಗಳು ಬಂದಿದ್ದರು. ಈ ವೇಳೆ ನನ್ನ ಕೈಗೆ ಯಾರು ತಲ್ವಾರ್ ಕೊಟ್ರೋ ಗೊತ್ತಾಗಲಿಲ್ಲ. ಈ ವೇಳೆ ನನ್ನ ಗಮನಕ್ಕೆ ಬಾರದೇ ಎಡವಟ್ಟಾಗಿದೆ ಎಂದು ಕ್ಷಮೆ ಕೇಳಿದರು. ಇದನ್ನೂ ಓದಿ: ದುನಿಯಾ ವಿಜಿ 46ನೇ ಬರ್ತ್ ಡೇಯಲ್ಲಿ ಅವಾಂತರ- ತಲ್ವಾರ್‌ನಲ್ಲಿ ಕೇಕ್ ಕಟ್ ಮಾಡಿದ ನಟ

    ಭಾನುವಾರ ರಾತ್ರಿ ಕೇಕ್ ಕಟ್ ಮಾಡಿರುವ ವಿಡಿಯೋವನ್ನು ಗಿರಿನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. 5 ಇಂಚಿಗೂ ಉದ್ದದ ಕತ್ತಿ ಇದ್ದದ್ದು ಸಾಬೀತಾದರೆ ನಟ ದುನಿಯಾ ವಿಜಯ್ ಮೇಲೆ, ಆರ್ಮ್ಸ್ ಆ್ಯಕ್ಟ್ ಅಡಿ ಪೊಲೀಸರು ಕೇಸ್ ದಾಖಲಿಸಿಕೊಳ್ಳುವ ಸಾಧ್ಯತೆಯಿದೆ.

    ಇಂದು ದುನಿಯಾ ವಿಜಯ್ ತಮ್ಮ 46ನೇ ವರ್ಷದ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಂಡರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಕುಟುಂಬಸ್ಥರು ಹಾಗೂ ಅಭಿಮಾನಿಗಳೊಂದಿಗೆ ಕತ್ತಿಯಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬವನ್ನು ಸೆಲಬ್ರೇಟ್ ಮಾಡಿಕೊಂಡರು. ಈ ವೇಳೆ ತಮ್ಮ ‘ಸಲಗ’ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ತಮ್ಮ ನೆಚ್ಚಿನ ನಟನಿಗೆ ವಿಶ್ ಮಾಡಲು ರಾಜ್ಯದ ಹಲವೆಡೆಯಿಂದ ಅಭಿಮಾನಿಗಳು ಬಂದಿದ್ದರು.

     

  • ಸ್ನೇಹದಲ್ಲಿ ಬದುಕೋದು ನನಗಿಷ್ಟ, ಇದು ಸಲಗದ ಬರ್ತ್ ಡೇ: ದುನಿಯಾ ವಿಜಿ

    ಸ್ನೇಹದಲ್ಲಿ ಬದುಕೋದು ನನಗಿಷ್ಟ, ಇದು ಸಲಗದ ಬರ್ತ್ ಡೇ: ದುನಿಯಾ ವಿಜಿ

    ಬೆಂಗಳೂರು: ಸ್ನೇಹದಲ್ಲಿ ಬದುಕೋದು ನನಗೆ ಇಷ್ಟ, ಇದು ಸಲಗದ ಹುಟ್ಟುಹಬ್ಬ ಎಂದು ನಟ ದುನಿಯಾ ವಿಜಯ್ ತಮ್ಮ ಹುಟ್ಟುಹಬ್ಬದ ಸಂಭ್ರಮದ ವೇಳೆ ಹೇಳಿದರು.

    ಇಂದು ದುನಿಯಾ ವಿಜಯ್ ತಮ್ಮ 46ನೇ ವರ್ಷದ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಂಡರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಕುಟುಂಬಸ್ಥರು ಹಾಗೂ ಅಭಿಮಾನಿಗಳೊಂದಿಗೆ ಕತ್ತಿಯಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬವನ್ನು ಸೆಲಬ್ರೇಟ್ ಮಾಡಿಕೊಂಡರು. ಈ ವೇಳೆ ತಮ್ಮ ‘ಸಲಗ’ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ತಮ್ಮ ನೆಚ್ಚಿನ ನಟನಿಗೆ ವಿಶ್ ಮಾಡಲು ರಾಜ್ಯದ ಹಲವಡೆಯಿಂದ ಅಭಿಮಾನಿಗಳು ಬಂದಿದ್ದರು.

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ದುನಿಯಾ ವಿಜಯ್, ತುಂಬಾ ಖುಷಿಯಾಗುತ್ತಿದೆ. ಇದು ನನ್ನ ಬರ್ತ್ ಡೇ ಅನ್ನೋದಕ್ಕಿಂತ ಸಲಗ ಚಿತ್ರ ತಂಡದ ಹುಟ್ಟುಹಬ್ಬ. ಸ್ನೇಹದಲ್ಲಿ ಬದುಕುವುದು ನನಗೆ ಇಷ್ಟ. ಇದು ಸಲಗದ ಹುಟ್ಟುಹಬ್ಬ. ಚಿತ್ರದ ನಿರ್ದೇಶಕನಾದ ಮೇಲೆ ಮೊದಲ ಹುಟ್ಟುಹಬ್ಬ ಇದು. ಹೀಗಾಗಿ ಸಲಗದ ಹುಟ್ಟುಹಬ್ಬವಿದು ಎಂದರು.

    ಫೆಬ್ರವರಿ 14ಕ್ಕೆ ಮತ್ತೊಂದು ಸಾಂಗ್ ಟ್ರೈಲರ್ ಬಿಡುತ್ತೇವೆ. ನಮ್ಮ ಚಿತ್ರ ತಂಡವೇ ನನಗೆ ಬಲ ತಂದು ಕೊಟ್ಟಿದೆ. ಆ್ಯಕ್ಟಿಂಗ್, ಡೈರಕ್ಷನ್ ನಲ್ಲಿ ಎಂಜಾಯ್ ಮಾಡುತ್ತೇನೆ. ಹೀಗಾಗಿ ಈ ಬರ್ತ್ ಡೇ ತುಂಬಾ ಖುಷಿಯಾಗುತ್ತಿದೆ ಎಂದು ಸಂತಸದಿಂದ ಹೇಳಿದರು.

    ಈ ಬಾರಿ ತಲ್ವಾರ್ ನಲ್ಲಿ ಕೇಕ್ ಕತ್ತರಿಸೋ ಮೂಲಕ ದುನಿಯಾ ವಿಜಿ ಬರ್ತ್ ಡೇಯನ್ನ ವಿಶೇಷವಾಗಿ ಆಚರಿಸಿಕೊಂಡಿದ್ದು, ಈ ಮೂಲಕ ತಮ್ಮ ಬರ್ತ್ ಡೇ ಸೆಲಬ್ರೇಷನ್ ವೇಳೆ ಎಡವಟ್ಟು ಮಾಡಿಕೊಂಡಿದ್ದಾರೆ. ಯಾವುದೇ ಆಯುಧಗಳನ್ನು ಸಾರ್ವಜನಿಕವಾಗಿ ಬಳಸುವಂತಿಲ್ಲ, ಪ್ರದರ್ಶಿಸುವಂತಿಲ್ಲ. ಇದು ಆರ್ಮ್ಸ್ ಆ್ಯಕ್ಟ್ ಅಡಿ ಅಪರಾಧವಾಗುತ್ತದೆ. ಆದರೆ ಹುಟ್ಟುಹಬ್ಬದ ಸಂಭ್ರಮದ ವೇಳೆ ಈ ಎಡವಟ್ಟು ನಡೆದಿದ್ದು, ಹೊಸ ವಿವಾದವನ್ನು ತನ್ನ ಮೈಮೇಲೆ ಎಳೆದುಕೊಂಡಿದ್ದಾರೆ.

  • ದುನಿಯಾ ವಿಜಿ 46ನೇ ಬರ್ತ್ ಡೇಯಲ್ಲಿ ಅವಾಂತರ- ತಲ್ವಾರ್‌ನಲ್ಲಿ ಕೇಕ್ ಕಟ್ ಮಾಡಿದ ನಟ

    ದುನಿಯಾ ವಿಜಿ 46ನೇ ಬರ್ತ್ ಡೇಯಲ್ಲಿ ಅವಾಂತರ- ತಲ್ವಾರ್‌ನಲ್ಲಿ ಕೇಕ್ ಕಟ್ ಮಾಡಿದ ನಟ

    ಬೆಂಗಳೂರು: ನಟ ದುನಿಯಾ ವಿಜಯ್ ತಮ್ಮ 46ನೇ ವರ್ಷದ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಂಡರು.

    ಬೆಂಗಳೂರಿನ ತಮ್ಮ ನಿವಾಸದಲ್ಲಿ ಕುಟುಂಬಸ್ಥರು ಹಾಗೂ ಅಭಿಮಾನಿಗಳೊಂದಿಗೆ ಕತ್ತಿಯಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬವನ್ನು ಸೆಲಬ್ರೇಟ್ ಮಾಡಿಕೊಂಡರು. ಈ ವೇಳೆ ತಮ್ಮ ‘ಸಲಗ’ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ತಮ್ಮ ನೆಚ್ಚಿನ ನಟನಿಗೆ ವಿಶ್ ಮಾಡಲು ರಾಜ್ಯದ ಹಲವಡೆಯಿಂದ ಅಭಿಮಾನಿಗಳು ಬಂದಿದ್ದರು.

    ನಟ ದುನಿಯಾ ವಿಜಯ್ ‘ಸಲಗ’ ಚಿತ್ರದ ಟೀಸರ್ ಬಿಡುಗಡೆ ಮಾಡುತ್ತಿದ್ದಂತೆ ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಬರ್ತ್ ಡೇ ಸೆಲಬ್ರೇಷನ್ ವೇಳೆ ವಿಜಿಯ ತಂದೆ ತಾಯಿ ಹಾಗೂ ಎರಡನೇ ಪತ್ನಿ ಕೀರ್ತಿ ಭಾಗಿಯಾಗಿದ್ದರು.

    ಈ ಬಾರಿ ತಲ್ವಾರ್ ನಲ್ಲಿ ಕೇಕ್ ಕತ್ತರಿಸೋ ಮೂಲಕ ದುನಿಯಾ ವಿಜಿ ಬರ್ತ್ ಡೇಯನ್ನ ವಿಶೇಷವಾಗಿ ಆಚರಿಸಿಕೊಂಡಿದ್ದು, ಈ ಮೂಲಕ ತಮ್ಮ ಬರ್ತ್ ಡೇ ಸೆಲಬ್ರೇಷನ್ ವೇಳೆ ಎಡವಟ್ಟು ಮಾಡಿಕೊಂಡಿದ್ದಾರೆ. ಯಾವುದೇ ಆಯುಧಗಳನ್ನು ಸಾರ್ವಜನಿಕವಾಗಿ ಬಳಸುವಂತಿಲ್ಲ, ಪ್ರದರ್ಶಿಸುವಂತಿಲ್ಲ. ಇದು ಆರ್ಮ್ಸ್ ಆ್ಯಕ್ಟ್ ಅಡಿ ಅಪರಾಧವಾಗುತ್ತದೆ. ಆದರೆ ಹುಟ್ಟುಹಬ್ಬದ ಸಂಭ್ರಮದ ವೇಳೆ ಈ ಎಡವಟ್ಟು ನಡೆದಿದ್ದು, ಹೊಸ ವಿವಾದವನ್ನು ತನ್ನ ಮೈಮೇಲೆ ಎಳೆದುಕೊಂಡಿದ್ದಾರೆ.

  • ಘೀಳಿಡಲು ಸಜ್ಜಾದ ಸಲಗ ಗೆಲ್ಲುವ ಸೂಚನೆ!

    ಘೀಳಿಡಲು ಸಜ್ಜಾದ ಸಲಗ ಗೆಲ್ಲುವ ಸೂಚನೆ!

    ಬೆಂಗಳೂರು: ದುನಿಯಾ ವಿಜಯ್ ಅಭಿನಯಿಸಿ ನಿರ್ದೇಶನವನ್ನೂ ಮಾಡುತ್ತಿರೋ ಚಿತ್ರ ಸಲಗ. ಬಂಡಿಮಾಕಾಳಮ್ಮ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನಡೆಯೋ ಮೂಲಕ ಈ ಸಿನಿಮಾಗೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಸಲಗ ಎಂಬುದೇ ಪಕ್ಕಾ ಮಾಸ್ ಟೈಟಲ್. ದುನಿಯಾ ವಿಜಯ್ ಮೊದಲ ಹೆಜ್ಜೆಯಲ್ಲಿ ನಿರ್ದೇಶಕರಾಗಿ ಈ ಚಿತ್ರವನ್ನ ಹೇಗೆ ಸಂಭಾಳಿಸಲಿದ್ದಾರೆ, ಇದರ ಕಥೆ ಎಂಥಾದ್ದೆಂಬುದೂ ಸೇರಿದಂತೆ ಪ್ರೇಕ್ಷಕರಲ್ಲಿರೋ ಕುತೂಹಲ ಒಂದೆರಡಲ್ಲ. ಸಲಗ ಪ್ರೇಕ್ಷಕರ ನಡುವೆ ಈ ಪಾಟಿ ಘೀಳಿಟ್ಟು ಸದ್ದು ಮಾಡುತ್ತಿರೋದಕ್ಕೆ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿರೋದು ಕೆ.ಪಿ ಶ್ರೀಕಾಂತ್ ಅನ್ನೋದೂ ಕೂಡಾ ಕಾರಣ!

    ಕೆಪಿ ಶ್ರೀಕಾಂತ್ ಹಿಟ್ ಸಿನಿಮಾ ನಿರ್ಮಾಪಕರೆಂದೇ ಖ್ಯಾತರಾಗಿರುವವರು. ಸಿನಿಮಾವನ್ನು ವ್ಯವಹಾರದಾಚೆಗೆ ಪ್ರೀತಿಸುವ ಅವರು ಕಥೆಗೆ ಎಲ್ಲ ಕೋನದಿಂದಲೂ ಕಸುವಿದೆ ಅಂತ ಗೊತ್ತಾಗದೆ ಯಾವ ಚಿತ್ರವನ್ನೂ ನಿರ್ಮಾಣ ಮಾಡಲು ಮುಂದಾಗುವವರಲ್ಲ. ಹೆಚ್ಚೂಕಮ್ಮಿ ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಚಿತ್ರರಂಗದ ಭಾಗವಾಗಿರುವ ಶ್ರೀಕಾಂತ್ ಬತ್ತಳಿಕೆಯಲ್ಲಿ ಈ ಮಾತಿಗೆ ಪೂರಕವಾದ ವಿಚಾರಗಳೇ ಇವೆ. ಇಂಥಾ ಶ್ರೀಕಾಂತ್ ಮತ್ತು ದುನಿಯಾ ವಿಜಯ್ ಸಲಗದ ಮೂಲಕ ಭಾರೀ ಯಶಸ್ಸೊಂದನ್ನು ತಮ್ಮದಾಗಿಸಿಕೊಳ್ಳಲಿದ್ದಾರೆಂಬ ಸೂಚನೆಗಳೇ ಎಲ್ಲ ದಿಕ್ಕಿನಿಂದಲೂ ಕಾಣಿಸುತ್ತಿವೆ.

    ಸಲಗ ಆರಂಭದಲ್ಲಿಯೇ ಎಂಥಾ ಸೆನ್ಸೇಷನ್ ಕ್ರಿಯೇಟ್ ಮಾಡಿದೆ ಅನ್ನೋದಕ್ಕೆ ಚಿತ್ರರಂಗದ ಗಣ್ಯರ ಪ್ರತಿಕ್ರಿಯೆಗಳಿಗಿಂತಲೂ ಬೇರೆ ಉದಾಹರಣೆ ಬೇಕಿಲ್ಲ. ಯುವ ನಿರ್ದೇಶಕ ಸಂತೋಷ್ ಆನಂದ್‍ರಾಮ್ ಈ ಚಿತ್ರದ ಮೂಲಕ ನಿರ್ದೇಶಕರಾಗುತ್ತಿರೋ ವಿಜಯ್ ಸೇರಿದಂತೆ ಇಡೀ ಚಿತ್ರ ತಂಡಕ್ಕೆ ಶುಭ ಕೋರಿದ್ದಾರೆ. ತರುಣ್ ಸುಧೀರ್ ಕೂಡಾ ತಮ್ಮ ಬಹುಕಾಲದ ಗೆಳೆಯನ ಈ ಸಾಹಸಕ್ಕೆ ಶುಭ ಕೋರಿದ್ದಾರೆ. ಕಾರ್ತಿಕ್ ಗೌಡ, ರಿಯಲ್ ಸ್ಟಾರ್ ಉಪೇಂದ್ರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕರು ಸಲಗಕ್ಕೆ ಶುಭ ಕೋರಿದ್ದಾರೆ.

    ಇದು ಸಲಗ ಚಿತ್ರದ ಬಗ್ಗೆ ತಾನೇ ತಾನಾಗಿ ಹುಟ್ಟಿಕೊಂಡಿರೋ ಪಾಸಿಟಿವ್ ವಾತಾವರಣ. ದುನಿಯಾ ವಿಜಯ್ ಅವರೇನು ಏಕಾಏಕಿ ನಿರ್ದೇಶಕರಾಗಿ ಅವತರಿಸಿಲ್ಲ. ನಿರ್ದೇಶನಕ್ಕೆ ಬೇಕಾಗುವಂಥಾ ಎಲ್ಲ ಪಟ್ಟುಗಳನ್ನೂ ಕರಗತ ಮಾಡಿಕೊಂಡು ಎಲ್ಲದರಲ್ಲಿಯೂ ಪಕ್ಕಾ ಅನ್ನಿಸಿದ ನಂತರವಷ್ಟೇ ಅಖಾಡಕ್ಕಿಳಿದಿದ್ದಾರೆ. ವಿಜಯ್ ಅವರ ಇಂಥಾ ಶ್ರದ್ಧೆಯ ಯಾನಕ್ಕೆ ನಿರ್ಮಾಪಕ ಕೆ ಪಿ ಶ್ರೀಕಾಂತ್ ಕೂಡಾ ಸಾಥ್ ನೀಡಿದ್ದಾರೆ. ಇವರಿಬ್ಬರ ಕಾಂಬಿನೇಷನ್ನಿನಲ್ಲಿ ಕನ್ನಡ ಚಿತ್ರರಂಗದಲ್ಲೊಂದು ಮೈಲಿಗಲ್ಲೆನ್ನಬಹುದಾದ ಕಮಾಲ್ ನಡೆಯೋ ಲಕ್ಷಣಗಳೇ ಎಲ್ಲೆಡೆ ದಟ್ಟೈಸಿದೆ.

  • ಸಿದ್ದರಾಮಯ್ಯರನ್ನು ಭೇಟಿ ಮಾಡಿದ ದುನಿಯಾ ವಿಜಯ್

    ಸಿದ್ದರಾಮಯ್ಯರನ್ನು ಭೇಟಿ ಮಾಡಿದ ದುನಿಯಾ ವಿಜಯ್

    ಬೆಂಗಳೂರು: ಸ್ಯಾಂಡಲ್‍ವುಡ್ ಕರಿಚಿರತೆ ದುನಿಯಾ ವಿಜಯ್ ಅವರು ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.

    ದುನಿಯಾ ವಿಜಯ್ ತಮ್ಮ ಮುಂಬರುವ ‘ಸಲಗ’ ಚಿತ್ರತಂಡದ ಜೊತೆ ಸಿದ್ದರಾಮಯ್ಯ ಅವರನ್ನು ಭೇಟಿ ಆಗಿದ್ದು, ಈಗ ಈ ಫೋಟೋಗಳನ್ನು ತಮ್ಮ ಟ್ವಿಟ್ಟರಿನಲ್ಲಿ ಹಂಚಿಕೊಂಡಿದ್ದಾರೆ. ಆದರೆ ದುನಿಯಾ ವಿಜಯ್ ಭೇಟಿ ಮಾಡಿದ್ದು ಯಾಕೆ ಎಂಬ ವಿಷಯವನ್ನು ಹೇಳಿಕೊಂಡಿಲ್ಲ.

    “ಸಲಗ ಚಿತ್ರತಂಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಆದ ಕ್ಷಣ” ಎಂದು ಟ್ವಿಟ್ಟರಿನಲ್ಲಿ ಹಂಚಿಕೊಂಡಿರುವ ಫೋಟೋದೊಂದಿಗೆ ಬರೆದುಕೊಂಡಿದ್ದಾರೆ.

    ಇತ್ತೀಚೆಗೆ ಸಲಗ ಚಿತ್ರದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವೈರಲ್ ಫೋಟೋದಲ್ಲಿ ದುನಿಯಾ ವಿಜಯ್, ಪೊಲೀಸ್ ವೇಷದಲ್ಲಿ ಇದ್ದ ಡಾಲಿ ಧನಂಜಯ್ ಅವರನ್ನು ಗುರಾಯಿಸುತ್ತಿದ್ದರು.

    ಈ ಚಿತ್ರವನ್ನು ರಘು ಶಿವಮೊಗ್ಗ ಅವರು ನಿರ್ದೇಶನ ಮಾಡುತ್ತಿದ್ದು, ಕೆ.ಪಿ ಶ್ರೀಕಾಂತ್ ಅವರು ಚಿತ್ರಕ್ಕೆ ಬಂಡವಾಳ ಹೂಡಲು ಮುಂದಾಗಿದ್ದಾರೆ. ಈ ಚಿತ್ರಕ್ಕೆ ಚರಣ್ ರಾಜ್ ಹಿನ್ನೆಲೆ ಸಂಗೀತ ನೀಡಲಿದ್ದು, ನವೀನ್ ಸಜ್ಜು ಸಂಗೀತ ನಿರ್ದೇಶಕರಾಗಿ ಹೊಸ ಟ್ರೆಂಡ್ ಸೆಟ್ ಮಾಡಲು ತಯಾರಿ ಆರಂಭಿಸಿದ್ದಾರೆ.

  • ಹಫ್ತಾ: ನಿರ್ಮಾಪಕ ಮೈತ್ರಿ ಮಂಜುನಾಥ್ ಕಣ್ಣಲ್ಲಿ ಗೆಲುವಿನ ಪ್ರಭೆ!

    ಹಫ್ತಾ: ನಿರ್ಮಾಪಕ ಮೈತ್ರಿ ಮಂಜುನಾಥ್ ಕಣ್ಣಲ್ಲಿ ಗೆಲುವಿನ ಪ್ರಭೆ!

    ವರ್ಧನ್ ತೀರ್ಥಹಳ್ಳಿ ನಾಯಕನಾಗಿ ಪಾದಾರ್ಪಣೆ ಮಾಡುತ್ತಿರುವ ಚಿತ್ರ ಹಫ್ತಾ. ಪ್ರಕಾಶ್ ಹೆಬ್ಬಾಳ ನಿರ್ದೇಶನದ ಈ ಚಿತ್ರ ವಿಶೇಷವಾದೊಂದು ಕಥೆಯನ್ನು ಹೊಂದಿದೆಯೆಂಬ ಅಂದಾಜು ಈಗಾಗಲೇ ಪ್ರೇಕ್ಷಕರಿಗೆಲ್ಲ ಸಿಕ್ಕಿ ಬಿಟ್ಟಿದೆ. ಯಾವುದೇ ಯಶಸ್ವಿ ಚಿತ್ರ ಬಿಡುಗಡೆಗೂ ಮುಂಚೆಯೇ ಸಕಾರಾತ್ಮಕವಾದ ಟಾಕ್ ಕ್ರಿಯೇಟ್ ಮಾಡುತ್ತವಲ್ಲ? ಆ ರೀತಿಯ ಲಕ್ಷಣಗಳಿಗೆಲ್ಲ ಹಫ್ತಾ ಚಿತ್ರ ರೂವಾರಿಯಾಗಿದೆ. ಇದು ನಿರ್ಮಾಪಕರಾಗಿ ಮೊದಲ ಪ್ರಯತ್ನದಲ್ಲಿಯೇ ಮೈತ್ರಿ ಮಂಜುನಾಥ್ ಅವರಿಗೆ ತುಂಬು ಭರವಸೆಯನ್ನೂ ಹುಟ್ಟಿಸಿದೆ.

    ಮೈತ್ರಿ ಮಂಜುನಾಥ್ ಅವರು ಹಫ್ತಾ ಚಿತ್ರವನ್ನು ಮೈತ್ರಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಷ್ಠಿತ ಉದ್ಯಮಿಯಾಗಿ ಗುರುತಿಸಿಕೊಂಡಿರೋ ಮಂಜುನಾಥ್ ಮೈತ್ರಿ ಗ್ರೂಪ್ಸ್ ಮಾಲೀಕರು. ಇದರಡಿಯಲ್ಲಿ ಹಲವಾರು ಉದ್ಯಮಗಳ ಒಡೆಯರಾಗಿರುವ ಅವರ ಪಾಲಿಗೆ ಸಿನಿಮಾ ಮಾಡಬೇಕೆಂಬುದು ಹಳೆಯ ಕನಸು. ಹಾಗಂತ ಅದಕ್ಕೇನೂ ರೂಪುರೇಷೆ ಇಲ್ಲದಿರಲಿಲ್ಲ. ಒಟ್ಟಾರೆ ಒಂದು ಸಿನಿಮಾ ಮಾಡಿ ನಿರ್ಮಾಪಕ ಅನ್ನಿಸಿಕೊಳ್ಳುವ ಯಾವ ಅವಸರವೂ ಅವರಿಗಿರಲಿಲ್ಲ. ಎಲ್ಲ ರೀತಿಯಿಂದಲೂ ತಮಗೆ ಒಪ್ಪಿಗೆಯಾಗುವ, ಕೇಳಿದಾಕ್ಷಣವೇ ಗೆಲುವಿನ ಸೂಚನೆ ಸಿಗುವಂಥಾ ಕಥೆ ಸಿಕ್ಕಿದಾಗಲಷ್ಟೇ ನಿರ್ಮಾಪಕರಾಗಿ ಹೊಸ ಯಾನ ಆರಂಭಿಸಬೇಕೆಂಬ ನಿರ್ಧಾರ ಅವರದ್ದಾಗಿತ್ತು.

    ಇಂಥಾದ್ದೊಂದು ಅಚಲ ನಿರ್ಧಾರಕ್ಕೆ ಹೊಸಾ ಆವೇಗ ಸಿಕ್ಕಿದ್ದು ಎರಡು ವರ್ಷಗಳ ಹಿಂದೆ. ಈ ಸಿನೆಮಾದ ನಿರ್ದೇಶಕ ಪ್ರಕಾಶ್ ಹೆಬ್ಬಾಳ ಮಂಜುನಾಥ್ ಅವರಿಗೆ ಬಹು ಕಾಲದ ಗೆಳೆಯ. ಅದೊಂದು ದಿನ ಎಲ್ಲ ತಯಾರಿ ಮಾಡಿಕೊಂಡು ಬಂದಿದ್ದ ಪ್ರಕಾಶ್ ಹಫ್ತಾ ಚಿತ್ರದ ಕಥೆಯನ್ನು ಮಂಜುನಾಥ್ ಅವರಿಗೆ ಒಪ್ಪಿಸಿದ್ದರಂತೆ. ಪೂರ್ತಿ ಕಥೆ ಕೇಳಿದವರಿಗೆ ತಾನು ನಿರ್ಮಾಪಕನಾಗಿ ಪಾದಾರ್ಪಣೆ ಮಾಡಲು ಇದೇ ಸರಿಯಾದ ಕಥೆ ಅಂತ ಆ ಕ್ಷಣವೇ ಅನ್ನಿಸಿತ್ತಂತೆ. ಈ ಕಾರಣದಿಂದಲೇ ಮೈತ್ರಿ ಪ್ರೊಡಕ್ಷನ್ಸ್ ಅಸ್ತಿತ್ವಕ್ಕೆ ಬಂದು ಹಫ್ತಾ ಚಿತ್ರಕ್ಕೆ ವಿಧ್ಯುಕ್ತ ಚಾಲನೆ ಸಿಕ್ಕಿತ್ತು.

    ಬೆಂಗಳೂರಿನವರೇ ಆದ ಮಂಜುನಾಥ್ ಪಾಲಿಗೆ ಸಿನಿಮಾ ಆಕರ್ಷಣೆ ಇಂದು ನಿನ್ನೆಯದ್ದಲ್ಲ. ಈ ಬಗ್ಗೆ ಅಪಾರ ಕ್ರೇಜ್ ಹೊಂದಿದ್ದ ಅವರು ಕೆಲ ಕಿರು ಚಿತ್ರಗಳನ್ನು ನಿರ್ಮಾಣ ಮಾಡಿದ್ದರು. ಅದನ್ನು ಸಿನಿಮಾ ಮಾಡುವ ತಯಾರಿಯೆಂದೇ ಪರಿಗಣಿಸಿದ್ದರು. ತಾವೊಂದು ಸಿನಿಮಾ ನಿರ್ಮಾಣ ಮಾಡಿದರೆ ಅದು ತಾಂತ್ರಿಕವಾಗಿಯೂ ಶ್ರೀಮಂತಿಕೆಯಿಂದ ಕೂಡಿರಬೇಕೆಂದು ಆಶಿಸಿದ್ದ ಮಂಜುನಾಥ್ ಹಫ್ತಾ ಚಿತ್ರವನ್ನೂ ಕೂಡಾ ಅದರಂತೆಯೇ ರೂಪಿಸಿದ ಖುಷಿ ಹೊಂದಿದ್ದಾರೆ.

    ಹಫ್ತಾ ಚಿತ್ರ ಶುರುವಾದ ಮೊದಲ ದಿನವೇ ನೂರಾರು ಮಂದಿಗೆ ಕೆಲಸ ಕೊಟ್ಟ ತೃಪ್ತ ಭಾವವನ್ನೂ ತುಂಬಿಕೊಂಡಿದ್ದ ಮೈತ್ರಿ ಮಂಜುನಾಥ್ ಪಾಲಿಗೆ ಆರಂಭದಿಂದ ಇಲ್ಲಿಯವರೆಗೂ ಒಳ್ಳೆಯ ಅನುಭವಗಳೇ ಕೈ ಹಿಡಿದಿವೆ. ಆರಂಭದಲ್ಲಿ ಪ್ರಕಾಶ್ ಕಥೆ ಹೇಳುವಾಗ ಇದ್ದ ಫೀಲ್‍ಗೆ ಅನುಗುಣವಾಗಿಯೇ ಚಿತ್ರ ಮೂಡಿ ಬಂದಿರೋದರಿಂದ ಅವರಲ್ಲಿ ಗೆಲ್ಲುವ ಭರವಸೆ ಹೆಚ್ಚಾಗಿದೆ. ಕರಾವಳಿ ತೀರದ ಭೂಗತ ಜಗತ್ತಿನ ಕಥೆಯನ್ನು ವಿಭಿನ್ನವಾಗಿಯೇ ತೆರೆ ಮೇಲೆ ತಂದಿರೋದರ ಬಗ್ಗೆ ಖುಷಿ, ಮತ್ತದು ಎಲ್ಲಾ ಪ್ರೇಕ್ಷಕರಿಗೂ ಇಷ್ಟವಾಗುತ್ತದೆ ಎಂಬ ಭರವಸೆ ಮಂಜುನಾಥ್ ಅವರದ್ದು.

    ಇದು ಮೈತ್ರಿ ಮಂಜುನಾಥ್ ನಿರ್ಮಾಣದ ಮೊದಲ ಚಿತ್ರ. ಇದರ ಬಗ್ಗೆ ಈಗ ಅಷ್ಟ ದಿಕ್ಕುಗಳಿಂದಲೂ ಒಳ್ಳೆ ಮಾತುಗಳೇ ಕೇಳಿ ಬರುತ್ತಿವೆ. ಈ ಮೂಲಕವೇ ಪುಷ್ಕಳವಾದ ಗೆಲುವು ದಕ್ಕುತ್ತದೆ ಎಂಬ ಭರವಸೆಯೂ ಗಟ್ಟಿಯಾಗುತ್ತಿದೆ. ಇದುವೇ ಮಂಜುನಾಥ್ ಅವರಲ್ಲಿ ನಿರ್ಮಾಪಕರಾಗಿ ನೆಲೆ ಕಂಡುಕೊಳ್ಳುವ ಇರಾದೆಯನ್ನೂ ಹುಟ್ಟಿಸಿದೆ. ಈಗಾಗಲೇ ಅವರು ಎರಡನೇ ಚಿತ್ರಕ್ಕಾಗಿ ತಯಾರಿ ಆರಂಭಿಸಿದ್ದಾರೆ. ಇದು ಹಫ್ತಾ ಬಿಡುಗಡೆ ಪೂರ್ವದಲ್ಲಿಯೇ ಸೃಷ್ಟಿಸಿರೋ ಕ್ರೇಜ್‍ನ ಪರಿಣಾಮ!

    https://www.youtube.com/watch?v=zZefRDFISRU

  • ಹಫ್ತಾದ ಮೆಲೋಡಿ ಹಾಡು ಬಿಡುಗಡೆಗೊಳಿಸಿದರು ದುನಿಯಾ ವಿಜಯ್!

    ಹಫ್ತಾದ ಮೆಲೋಡಿ ಹಾಡು ಬಿಡುಗಡೆಗೊಳಿಸಿದರು ದುನಿಯಾ ವಿಜಯ್!

    ಬೆಂಗಳೂರು: ಪ್ರಕಾಶ್ ಹೆಬ್ಬಾಳ ನಿರ್ದೇಶನದ ಹಫ್ತಾ ಚಿತ್ರವೀಗ ಬಿಡುಗಡೆಯ ಸನ್ನಾಹದಲ್ಲಿದೆ. ಮಾಸ್ ಹಾಗೂ ಕ್ಯಾಚೀ ಟೈಟಲ್ಲಿನ ಮೂಲಕವೇ ಸದ್ದು ಮಾಡುತ್ತಾ ಬಂದಿರೋ ಈ ಚಿತ್ರದ ಆಡಿಯೂ ಕೆಲ ದಿನಗಳ ಹಿಂದೆ ಬಿಡುಗಡೆಯಾಗಿ ವ್ಯಾಪಕ ಮೆಚ್ಚುಗೆಯನ್ನೂ ಗಳಿಸಿಕೊಂಡಿದೆ. ಈ ಅಲೆಯಲ್ಲಿಯೇ ವೀಡಿಯೋ ಹಾಡೊಂದನ್ನು ದುನಿಯಾ ವಿಜಯ್ ಬಿಡುಗಡೆಗೊಳಿಸಿದ್ದಾರೆ.

    ಈ ಲಿರಿಕಲ್ ವೀಡಿಯೋವನ್ನು ಬಿಡುಗಡೆಗೊಳಿಸಿರುವ ವಿಜಯ್, ಈ ಹೊಸಬರ ಪ್ರತಿಭಾವಂತ ತಂಡವನ್ನು ಪ್ರೋತ್ಸಾಹಿಸಿ ಗೆಲ್ಲಿಸುವಂತೆ ವಿನಂತಿಸಿಕೊಂಡಿದ್ದಾರೆ. ನೀನೇ ನೀನೇ ಜೊತೆಯಲಿ ನಿನ್ನ ಮಾತೇ ಸಿಹಿಚಳಿ ಎಂಬ ಮಧುರವಾದ ಈ ಹಾಡನ್ನು ಕೊಂಡಾಡುತ್ತಲೇ ವಿಜಯ್ ಅನಾವರಣಗೊಳಿಸಿದ್ದಾರೆ.

    ಇದು ಅಪ್ಪಟ ಮೆಲೋಡಿ ಹಾಡು. ಈ ಹಾಡಿಗೆ ವಿಜಯ್ ಯಾಡ್ರ್ಲಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಎಂಥವರನ್ನೂ ಮೋಹಕ್ಕೀಡು ಮಾಡುವಂಥಾ ಸಾಲುಗಳನ್ನು ಹೊಂದಿರೋ ಈ ಹಾಡನ್ನು ಅನುರಾಧಾ ಭಟ್ ಮತ್ತು ಹರಿಚರಣ್ ಹಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಆಡಿಯೋ ಬಿಡುಗಡೆಯಾಗಿತ್ತಲ್ಲಾ? ಅದರಲ್ಲಿನ ಎಲ್ಲ ಹಾಡುಗಳೂ ಜನಮಾನಸ ತಲುಪಿಕೊಂಡಿವೆ. ಅದರಲ್ಲಿಯೂ ಟೈಟಲ್ ಸಾಂಗ್ ಅಂತೂ ಟ್ರೆಂಡಿಂಗ್ ನಲ್ಲಿದೆ. ಈಗ ಬಿಡುಗಡೆಯಾಗಿರೋ ಈ ಮೆಲೋಡಿ ಲಿರಿಕಲ್ ವೀಡಿಯೋ ಸಾಂಗ್ ಕೂಡಾ ಅಂಥಾದ್ದೇ ಮೋಡಿ ಮಾಡೋ ಲಕ್ಷಣಗಳೇ ದಟ್ಟವಾಗಿವೆ.

    ಈ ಹಿಂದೆ ದಯಾಳ್ ಮತ್ತು ರಮೇಶ್ ಅರವಿಂದ್ ಅವರ ಜೊತೆ ಕೆಲಸ ಮಾಡಿರುವ ಪ್ರಕಾಶ್ ನಿರ್ದೇಶನದ ಮೊದಲ ಚಿತ್ರ ಹಫ್ತಾ. ಮೈತ್ರಿ ಮಂಜುನಾಥ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವರ್ಧನ್ ತೀರ್ಥಹಳ್ಳಿ ಮತ್ತು ರಾಘವ್ ನಾಗ್ ನಾಯಕರಾಗಿ ನಟಿಸಿದ್ದಾರೆ. ಇದುವರೆಗೂ ಹಲವಾರು ಚಿತ್ರಗಳಲ್ಲಿ ಖಳನಾಗಿ ಅಬ್ಬರಿಸಿರುವ ವರ್ಧನ್ ತೀರ್ಥಹಳ್ಳಿ ಈ ಸಿನಿಮಾ ಮೂಲಕ ನಾಯಕನಾಗಿದ್ದಾರೆ. ಕರಾವಳಿ ತೀರದ ಭೂಗತ ಜಗತ್ತಿನ ಕಥೆ ಹೊಂದಿರುವ ಈ ಚಿತ್ರದಲ್ಲಿ ವರ್ಧನ್ ಎರಡು ಶೇಡುಗಳ ಪಾತ್ರದಲ್ಲಿ ಮಿಂಚಿದ್ದಾರಂತೆ.

  • ಹಫ್ತಾದ ಮೆಲೋಡಿ ಹಾಡು ಬಿಡುಗಡೆಗೊಳಿಸಲಿದ್ದಾರೆ ದುನಿಯಾ ವಿಜಯ್!

    ಹಫ್ತಾದ ಮೆಲೋಡಿ ಹಾಡು ಬಿಡುಗಡೆಗೊಳಿಸಲಿದ್ದಾರೆ ದುನಿಯಾ ವಿಜಯ್!

    ಬೆಂಗಳೂರು: ಪ್ರಕಾಶ್ ಹೆಬ್ಬಾಳ ನಿರ್ದೇಶನದ ಹಫ್ತಾ ಚಿತ್ರವೀಗ ಬಿಡುಗಡೆಯ ಸನ್ನಾಹದಲ್ಲಿದೆ. ಮಾಸ್ ಹಾಗೂ ಕ್ಯಾಚೀ ಟೈಟಲ್ಲಿನ ಮೂಲಕವೇ ಸದ್ದು ಮಾಡುತ್ತಾ ಬಂದಿರೋ ಈ ಚಿತ್ರದ ಆಡಿಯೋ ಕೆಲ ದಿನಗಳ ಹಿಂದೆ ಬಿಡುಗಡೆಯಾಗಿ ವ್ಯಾಪಕ ಮೆಚ್ಚುಗೆಯನ್ನೂ ಗಳಿಸಿಕೊಂಡಿದೆ. ಈ ಅಲೆಯಲ್ಲಿಯೇ ವೀಡಿಯೋ ಹಾಡೊಂದನ್ನು ಬಿಡುಗಡೆ ಮಾಡಲು ಚಿತ್ರ ತಂಡ ಸಜ್ಜುಗೊಂಡಿದೆ.

    ಈ ಲಿರಿಕಲ್ ವೀಡಿಯೋ ನಾಳೆ ಸಂಜೆ ಬಿಡುಗಡೆಯಾಗಲಿದೆ. ಇದು ಅಪ್ಪಟ ಮೆಲೋಡಿ ಹಾಡು. ವಿಶೇಷವೆಂದರೆ ಇದನ್ನು ಮಾಸ್ ಹೀರೋ ಬ್ಲಾಕ್ ಕೋಬ್ರಾ ದುನಿಯಾ ವಿಜಯ್ ಅವರು ಬಿಡುಗಡೆಗೊಳಿಸಲಿದ್ದಾರೆ!

    ಈ ಹಾಡಿಗೆ ವಿಜಯ್ ಯಾಡ್ರ್ಲಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಎಂಥವರನ್ನೂ ಮೋಹಕ್ಕೀಡು ಮಾಡುವಂಥಾ ಸಾಲುಗಳನ್ನು ಹೊಂದಿರೋ ಈ ಹಾಡನ್ನು ಅನುರಾಧಾ ಭಟ್ ಮತ್ತು ಹರಿಚರಣ್ ಹಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಆಡಿಯೋ ಬಿಡುಗಡೆಯಾಗಿತ್ತಲ್ಲಾ? ಅದರಲ್ಲಿನ ಎಲ್ಲ ಹಾಡುಗಳೂ ಜನಮಾನಸ ತಲುಪಿಕೊಂಡಿವೆ. ಅದರಲ್ಲಿಯೂ ಟೈಟಲ್ ಸಾಂಗ್ ಅಂತೂ ಟ್ರೆಂಡಿಂಗ್ ನಲ್ಲಿದೆ. ನಾಳೆ ಬಿಡುಗಡೆಯಾಗಲಿರೋ ಈ ಮೆಲೋಡಿ ಲಿರಿಕಲ್ ವೀಡಿಯೋ ಸಾಂಗ್ ಕೂಡಾ ಅಂಥಾದ್ದೇ ಮೋಡಿ ಮಾಡೋ ಭರವಸೆ ಚಿತ್ರತಂಡದಲ್ಲಿದೆ.

    ಈ ಹಿಂದೆ ದಯಾಳ್ ಮತ್ತು ರಮೇಶ್ ಅರವಿಂದ್ ಅವರ ಜೊತೆ ಕೆಲಸ ಮಾಡಿರುವ ಪ್ರಕಾಶ್ ನಿರ್ದೇಶನದ ಮೊದಲ ಚಿತ್ರ ಹಫ್ತಾ. ಮೈತ್ರಿ ಮಂಜುನಾಥ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವರ್ಧನ್ ತೀರ್ಥಹಳ್ಳಿ ಮತ್ತು ರಾಘವ್ ನಾಗ್ ನಾಯಕರಾಗಿ ನಟಿಸಿದ್ದಾರೆ. ಇದುವರೆಗೂ ಹಲವಾರು ಚಿತ್ರಗಳಲ್ಲಿ ಖಳನಾಗಿ ಅಬ್ಬರಿಸಿರುವ ವರ್ಧನ್ ತೀರ್ಥಹಳ್ಳಿ ಈ ಸಿನಿಮಾ ಮೂಲಕ ನಾಯಕನಾಗಿದ್ದಾರೆ. ಕರಾವಳಿ ತೀರದ ಭೂಗತ ಜಗತ್ತಿನ ಕಥೆ ಹೊಂದಿರುವ ಈ ಚಿತ್ರದಲ್ಲಿ ವರ್ಧನ್ ಎರಡು ಶೇಡುಗಳ ಪಾತ್ರದಲ್ಲಿ ಮಿಂಚಿದ್ದಾರಂತೆ.

  • ಘೀಳಿಡಲು ರೆಡಿಯಾದ ‘ಸಲಗ’ದೊಂದಿಗೆ ಗುಟುರು ಹಾಕಿತು ಟಗರು ಟೀಮ್!

    ಘೀಳಿಡಲು ರೆಡಿಯಾದ ‘ಸಲಗ’ದೊಂದಿಗೆ ಗುಟುರು ಹಾಕಿತು ಟಗರು ಟೀಮ್!

    ಬೆಂಗಳೂರು: ಕಳೆದ ವರ್ಷದಲ್ಲಿ ದೊಡ್ಡ ಮಟ್ಟದಲ್ಲಿ ಗೆಲುವು ದಾಖಲಿಸಿದ್ದ ಚಿತ್ರ ದುನಿಯಾ ಸೂರಿ ನಿರ್ದೇಶನದ ಟಗರು. ತಾಂತ್ರಿಕವಾಗಿಯೂ ಸೇರಿದಂತೆ ಎಲ್ಲ ರೀತಿಯಲ್ಲಿಯೂ ಭಾರೀ ಸದ್ದು ಮಾಡಿದ್ದ ಈ ಚಿತ್ರದ ತಂಡವೇ ಮತ್ತೊಂದು ಚಿತ್ರಕ್ಕೆ ಸಾಥ್ ನೀಡಿದೆ ಅಂದರೆ ಅದರ ಬಗ್ಗೆ ಕುತೂಹಲ ಹುಟ್ಟದಿರಲು ಸಾಧ್ಯವೇ? ಸದ್ಯಕ್ಕೆ ದುನಿಯಾ ವಿಜಯ್ ನಾಯಕನಾಗಿ ನಟಿಸುತ್ತಿರೋ ಸಲಗ ಚಿತ್ರವೂ ಕೂಡಾ ಇಂಥಾ ಕಾರಣದಿಂದಲೇ ಮತ್ತೆ ಸದ್ದು ಮಾಡಿದೆ!

    ಸಲಗ ಎಂಬ ಶೀರ್ಷಿಕೆಯಲ್ಲಿಯೇ ಒಂದು ಫೋರ್ಸ್ ಇದೆ. ಅದು ದುನಿಯಾ ವಿಜಯ್ ಅವರ ಇಮೇಜಿಗೆ ಹೇಳಿ ಮಾಡಿಸಿದಂತಿದೆ ಅನ್ನೋ ವಿಚಾರ ಆರಂಭದಿಂದಲೇ ಕೇಳಿ ಬಂದಿತ್ತು. ಅದಾದ ನಂತರದಲ್ಲಿ ಈ ಸಿನಿಮಾ ಬಗ್ಗೆ ಗಂಭೀರವಾಗಿ ತಯಾರಿ ನಡೆಸಿದ್ದ ವಿಜಯ್ ಅವರು ಇದೀಗ ಎಲ್ಲವನ್ನೂ ಅಂತಿಮ ಹಂತಕ್ಕೆ ತಂದಿದ್ದಾರೆ. ಟಗರು ಚಿತ್ರತಂಡ ಸಲಗಕ್ಕೆ ಸಾಥ್ ನೀಡಿರೋ ರೋಚಕ ಸುದ್ದಿಯೊಂದರ ಮೂಲಕ ವಿಜಯ್ ಸಂಚಲನ ಸೃಷ್ಟಿಸಿದ್ದಾರೆ.

    ಅಂದಹಾಗೆ, ನಿರ್ದೇಶಕ ಸೂರಿಯವರನ್ನು ಹೊರತು ಪಡಿಸಿ ಒಂದಿಡೀ ಟಗರು ಟೀಮು ಸಲಗ ಚಿತ್ರವನ್ನು ರೂಪಿಸಲು ಪಣ ತೊಟ್ಟ ನಿಂತಿದೆ. ಟಗರು ಚಿತ್ರಕ್ಕೆ ಹೊಸ ಶೈಲಿಯ ಸಂಭಾಷಣೆ ಬರೆದಿದ್ದ ಮಾಸ್ತಿ ಮಂಜು, ಅಭಿ ಮಲ್ಲ ಸೇರಿದಂತೆ ಪ್ರತಿಭಾವಂತರ ದಂಡು ಸಲಗಕ್ಕೆ ಸಾಥ್ ನೀಡಿದೆ. ವಿಶೇಷವೆಂದರೆ ಟಗರು ನಿರ್ಮಾಪಕರಾಗಿದ್ದ ಕೆ.ಪಿ ಶ್ರೀಕಾಂತ್ ಅವರೇ ಸಲಗಕ್ಕೂ ಬಂಡವಾಳ ಹೂಡಲು ಮುಂದಾಗಿದ್ದಾರೆ. ಯಾವುದೇ ಚಿತ್ರ ಮಾಡುವಾಗಲೂ ಕಥೆಯೂ ಸೇರಿದಂತೆ ಪ್ರತಿಯೊಂದನ್ನೂ ಕೂಲಂಕಷವಾಗಿ ಪರಿಶೀಲಿಸೋ ಶ್ರೀಕಾಂತ್ ಅವರಿಗೆ ಸಲಗದ ಕಥೆ ತುಂಬಾ ಹಿಡಿಸಿದೆ. ಪಟ್ಟಾಗಿ ಪರಿಶ್ರಮ ಹಾಕಿದರೆ ಟಗರು ಚಿತ್ರದಂಥಾದ್ದೇ ಭರಪೂರ ಯಶಸ್ಸನ್ನು ಸಲಗವೂ ತನ್ನದಾಗಿಸಿಕೊಳ್ಳಲಿದೆ ಎಂಬ ಭರವಸೆಯೂ ಶ್ರೀಕಾಂತ್ ಅವರಿಗಿದೆ.

    ಡಾಲಿ, ಕಾಕ್ರೋಚ್ ಪಾತ್ರಧಾರಿಗಳೂ ಇರುತ್ತಾರೆ!: ಹಾಗಾದ್ರೆ, ಟಗರು ಚಿತ್ರದಲ್ಲಿ ಟ್ರೆಂಡ್ ಸೆಟ್ ಮಾಡಿದ್ದ ಪಾತ್ರಗಳಲ್ಲಿ ಮಿಂಚಿದ್ದ ಪಾತ್ರಗಳನ್ನು ನಿರ್ವಹಿಸಿದ್ದ ಕಲಾವಿದರೂ ಸಲಗದಲ್ಲಿರುತ್ತಾರಾ ಎಂಬ ಪ್ರಶ್ನೆ ಕಾಡುತ್ತೆ. ಅದರಲ್ಲಿಯೂ ಬ್ರ್ಯಾಂಡ್ ಆಗಿ ಬಿಟ್ಟಿದ್ದ ಡಾಲಿ ಮತ್ತು ಕಾಕ್ರೋಚ್ ಪಾತ್ರಧಾರಿಗಳಾಗಿದ್ದ ಧನಂಜಯ್ ಮತ್ತು ಸುಧಿಯಂಥವರೂ ಜೊತೆಯಾಗ್ತಾರಾ ಎಂಬ ಕುತೂಹಲವೂ ಕಾಡುತ್ತೆ. ಇದಕ್ಕೆ ಸಿಕ್ಕ ಉತ್ತರ ಪ್ರೇಕ್ಷಕರನ್ನು ಥ್ರಿಲ್ ಆಗಿಸುವಂತಿದೆ. ಯಾಕಂದ್ರೆ, ಸಲಗ ಚಿತ್ರದಲ್ಲಿಯೂ ಧನಂಜಯ್ ಮತ್ತು ಸುಧಿ ಪಾತ್ರ ನಿರ್ವಹಿಸಲಿದ್ದಾರೆ. ಆ ಪಾತ್ರಗಳೂ ಕೂಡಾ ಟಗರು ಪಾತ್ರಗಳಂತೆಯೇ ತೀರಾ ಭಿನ್ನವಾಗಿರಲಿವೆ!

    ಇನ್ನುಳಿದಂತೆ ಟಗರುವಿನಂಥಾ ಸೂಪರ್ ಹಿಟ್ ಚಿತ್ರದ ತಂಡವೇ ತಮ್ಮ ಚಿತ್ರಕ್ಕೆ ಸಾಥ್ ನೀಡಿರೋದರಿಂದ ದುನಿಯಾ ವಿಜಯ್ ಕೂಡಾ ಖುಷಿಗೊಂಡಿದ್ದಾರೆ. ಅದ್ಭುತವಾದೊಂದು ಕಥೆಯ ಮೂಲಕ ತೆರೆ ಮೇಲೆ ಬರುವ ಭರವಸೆಯ ಮಾತುಗಳನ್ನೂ ಅವರಾಡಿದ್ದಾರೆ. ಇನ್ನೂ ಮುಖ್ಯ ಸಂಗತಿಯೆಂದರೆ, ಟಗರು ಚಿತ್ರದ ಮೂಲಕ ಭಿನ್ನವಾದ ಸಂಗೀತದ ತರಂಗಗಳನ್ನೆಬ್ಬಿಸಿದ್ದ ಚರಣ್ ರಾಜ್ ಸಲಗಕ್ಕೆ ಹಿನ್ನೆಲೆ ಸಂಗೀತ ನೀಡಲಿದ್ದಾರೆ. ನವೀನ್ ಸಜ್ಜು ಸಂಗೀತ ನಿರ್ದೇಶಕರಾಗಿ ಹೊಸ ಟ್ರೆಂಡ್ ಸೆಟ್ ಮಾಡಲು ತಯಾರಿ ಆರಂಭಿಸಿದ್ದಾರೆ.

    ಆದರೆ ಸಲಗ ಚಿತ್ರದ ನಿರ್ದೇಶಕರು ಯಾರೆಂಬುದನ್ನು ಮಾತ್ರ ಗೌಪ್ಯವಾಗಿಡಲಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಚಿತ್ರತಂಡ ಅದನ್ನೂ ರಿವೀಲ್ ಮಾಡಲಿದೆ. ಇದೀಗ ಭರದಿಂದ ಸಲಗಕ್ಕಾಗಿ ತಯಾರಿಗಳು ನಡೆಯುತ್ತಿವೆ. ಈ ತಿಂಗಳಲ್ಲಿಯೇ ಎಲ್ಲ ಪೂರ್ವಭಾವಿ ಕೆಲಸ ಕಾರ್ಯಗಳನ್ನೂ ಮುಗಿಸಿಕೊಂಡು ಮುಂದಿನ ತಿಂಗಳಿಂದ ಸಲಗ ಚಿತ್ರೀಕರಣ ಶುರುವಾಗೋ ಲಕ್ಷಣಗಳಿವೆ.