Tag: Duniya Vijay

  • ರಾಜ್ಯ ಮಹಿಳಾ ಆಯೋಗಕ್ಕೆ ದುನಿಯಾ ವಿಜಿ ಹಾಜರ್

    ರಾಜ್ಯ ಮಹಿಳಾ ಆಯೋಗಕ್ಕೆ ದುನಿಯಾ ವಿಜಿ ಹಾಜರ್

    ಬೆಂಗಳೂರು: ಕುಟುಂಬ ರಂಪಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಶುಕ್ರವಾರ ಮಹಿಳಾ ಆಯೋಗಕ್ಕೆ ಹಾಜರಾಗಿದ್ದರು.

    ದುನಿಯಾ ವಿಜಯ್ ವಿರುದ್ಧ ಮಹಿಳಾ ಆಯೋಗಕ್ಕೆ ಪತ್ನಿ ನಾಗರತ್ನ ದೂರು ದಾಖಲಿಸಿದ್ದರು. ದೂರು ದಾಖಲು ಮಾಡಿಕೊಂಡ ರಾಜ್ಯ ಮಹಿಳಾ ಆಯೋಗ ವಿಜಿಗೆ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ದುನಿಯಾ ವಿಜಯ್ ಮಹಿಳಾ ಆಯೋಗಕ್ಕೆ ನಿನ್ನೆ ಹಾಜರಾಗಿದ್ದರು.

    ದುನಿಯಾ ವಿಜಿ ನನಗೆ ಡಿವೋರ್ಸ್ ನೀಡದೆ ಎರಡನೇ ಮದುವೆಯಾಗಿದ್ದಾನೆ ಎಂದು ಪತ್ನಿ ನಾಗರತ್ನ ದೂರು ದಾಖಲಿಸಿದ್ದರು. ಅಷ್ಟೇ ಅಲ್ಲದೆ ವಿಜಯ್ ವಿರುದ್ಧ ಮಾನಸಿಕ ಕಿರುಕುಳದ ಆರೋಪ ಕೂಡ ಮಾಡಿದ್ದರು. ಈ ಬಗ್ಗೆ ವಿಚಾರಣೆಗೆ ಹಾಜರಾಗಿ ಉತ್ತರ ನೀಡುವಂತೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷಿ ಬಾಯಿ ವಿಜಿಗೆ ನೋಟಿಸ್ ನೀಡಿದ್ದರು.

    ವಿಚಾರಣೆಗೆ ಹಾಜರಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ದುನಿಯಾ ವಿಜಿ, ಘಟನೆ ಸಂಬಂಧ ಮಹಿಳಾ ಆಯೋಗದವರು ಕೆಲವು ದಾಖಲೆಗಳನ್ನ ಕೇಳಿದ್ದರು. ನಾನು ಎಲ್ಲಾ ದಾಖಲೆಗಳನ್ನ ಸಲ್ಲಿಸುತ್ತೇನೆ. ಈ ಪ್ರಕರಣ ಕೋರ್ಟ್ ನಲ್ಲಿ ಇರುವುದರಿಂದ ವೈಯಕ್ತಿಕ ಮಾಹಿತಿ ನೀಡಲು ಸಾಧ್ಯವಿಲ್ಲ. ಆದರೆ ಮುಂದಿನ ದಿನಗಳಲ್ಲಿ ತನಿಖೆಗೆ ಕರೆದರೆ ಸಹಕರಿಸುತ್ತೇನೆ ಎಂದು ಹೇಳಿದ್ದರು.

    ದುನಿಯಾ ವಿಜಿ ವಿರುದ್ಧ ಪತ್ನಿ ನಾಗರತ್ನ ದೂರನ್ನ ನೀಡಿದ್ದರು. ದೂರು ದಾಖಲಿಸಿಕೊಂಡು ವಿಜಿಗೆ ನೋಟಿಸ್ ನೀಡಿದ್ವಿ. ಹೀಗಾಗಿ ಅವರು ವಿಚಾರಣೆಗೆ ಹಾಜರಾಗಿದ್ದರು. ಸುಮಾರು 1 ಗಂಟೆಗಳ ಕಾಲ ವಿಜಿ ಅವರನ್ನು ವಿಚಾರಣೆ ನಡೆಸಿದ್ದೇನೆ. ವಿಜಿ ನಾಗರತ್ನ ಜೊತೆ ಬಾಳಲು ಸಾಧ್ಯವಿಲ್ಲ ಅಂತ ಹೇಳಿದ್ದಾರೆ. ಆದರೆ ಮಕ್ಕಳ ಜವಬ್ದಾರಿ ನನ್ನದು ಎಂದು ವಿಜಿ ಹೇಳಿರುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷಿ ಬಾಯಿ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹುಟ್ಟುಹಬ್ಬದ ಸಂಭ್ರಮದಲ್ಲಿ ದುನಿಯಾ ವಿಜಯ್

    ಹುಟ್ಟುಹಬ್ಬದ ಸಂಭ್ರಮದಲ್ಲಿ ದುನಿಯಾ ವಿಜಯ್

    -ಬರ್ತ್ ಡೇ ಖುಷಿಯಲ್ಲಿ ಅಭಿಮಾನಿಗಳಿಗೆ ಗಿಫ್ಟ್

    ಬೆಂಗಳೂರು: ತಮ್ಮ 45ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ದುನಿಯಾ ವಿಜಯ್ ನಿನ್ನೆ ರಾತ್ರಿ ಕೇಕ್ ಕತ್ತರಿಸುವ ಮೂಲಕ ಅಭಿಮಾನಿಗಳೊಂದಿಗೆ ತಮ್ಮ ನಿವಾಸದಲ್ಲಿ ಹುಟ್ಟುಹಬ್ಬವನ್ನ ಆಚರಿಸಿಕೊಂಡರು.

    ತಮ್ಮ ನೆಚ್ಚಿನ ನಟನಿಗೆ ಶೂಭಕೋರಲು ಹೊಸಕೆರೆ ಹಳ್ಳಿ ಬಳಿಯಿರುವ ವಿಜಿ ಅವರ ಮನೆ ಬಳಿ ನೂರಾರು ಅಭಿಮಾನಿಗಳು ಆಗಮಿಸಿದ್ದರು. ಅಭಿನಿಮಾನಿಗಳು ತಂದ ಕೇಕ್ ಕತ್ತಿರಿಸಿದ ವಿಜಯ್, ತಮ್ಮ ಹುಟ್ಟುಹಬ್ಬವನ್ನು ಆಚರಿಸಿದ ಅಭಿಮಾನಿಗಳಿಗೆ ಅಭಿನಂದನೆ ತಿಳಿಸಿದರು. ಹಾಗೆಯೇ ಈ ವೇಳೆ ಅಭಿಮಾನಿಗಳಿಗೆ ಗಿಫ್ಟ್ ಎನ್ನುವಂತೆ ದುನಿಯಾ ವಿಜಯ್ ಅಭಿನಯದ ಮುಂದಿನ ಸಿನಿಮಾ `ಸಲಗ’ ಚಿತ್ರದ ಟ್ರೇಲರ್ ಲಾಂಚ್ ಮಾಡಲಾಯ್ತು.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನ್ನ ಮೇಲೆ ಅಭಿಮಾನಿಗಳು ಇಷ್ಟೊಂದು ಪ್ರೀತಿ ಇಟ್ಟಿರೋದಕ್ಕೆ ಧನ್ಯವಾದ. ರೆಬೆಲ್ ಸ್ಟಾರ್ ಅಂಬರೀಶ್ ಅವರು ನಮ್ಮನ್ನು ಅಗಲಿರುವುದರಿಂದ ಈ ಬಾರಿ ಹುಟ್ಟುಹಬ್ಬವನ್ನು ಆಚರಿಕೊಳ್ಳೋದು ಬೇಡ ಅಂದುಕೊಂಡಿದ್ದೆ. ಆದ್ರೆ ಅಭಿಮಾನಿಗಳು ದೂರ ದೂರದ ಊರಿಂದ ನನಗೋಸ್ಕರ ಬಂದಿದ್ದಾರೆ. ಕೆಲವರು ಕಲಬುರಗಿ ಇಂದ ನಡೆದುಕೊಂಡೇ ಇಲ್ಲಿಯವರೆಗೆ ಬಂದಿದ್ದಾರೆ. ಅವರಿಗೆಲ್ಲ ಬೇಸರ ಮಾಡಲು ಮನಸ್ಸು ಬರಲಿಲ್ಲ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದುನಿಯಾ ವಿಜಿ ವಿರುದ್ಧ ಮಹಿಳಾ ಆಯೋಗ ಕೆಂಡಾಮಂಡಲ

    ದುನಿಯಾ ವಿಜಿ ವಿರುದ್ಧ ಮಹಿಳಾ ಆಯೋಗ ಕೆಂಡಾಮಂಡಲ

    ಬೆಂಗಳೂರು: ಸ್ಯಾಂಡಲ್ ವುಡ್ ಕರಿಚಿರತೆ ದುನಿಯಾ ವಿಜಯ್ ವಿರುದ್ಧ ರಾಜ್ಯ ಮಹಿಳಾ ಆಯೋಗ ಕೆಂಡಾಮಂಡಲವಾಗಿದೆ.

    ನೋಟಿಸ್ ನೀಡಿದ್ರೂ ವಿಚಾರಣೆಗೆ ಹಾಜರಾಗದ್ದಕ್ಕೆ ಆಯೋಗ ವಿಜಯ್ ವಿರುದ್ಧ ಗರಂ ಆಗಿದೆ. ಈ ಹಿನ್ನೆಲೆಯಲ್ಲಿ ಇನ್ನೊಂದು ವಾರದೊಳಗೆ ವಿಚಾರಣೆಗೆ ಹಾಜರಾಗಿ ಅಂತ ಮತ್ತೊಮ್ಮೆ ಎಚ್ಚರಿಕೆ ಕೊಟ್ಟಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ.

    ಜೀವನ ನಡೆಸಲು ನನಗೆ ವಿಜಯ್ ಹಣ ನೀಡುತ್ತಿಲ್ಲ. ಹೀಗಾಗಿ ಮಕ್ಕಳೊಂದಿಗೆ ಜೀವನ ನಡೆಸಲು ಸಾಕಷ್ಟು ತೊಂದರೆಯಾಗುತ್ತಿದೆ ಅಂತ ವಿಜಿ ವಿರುದ್ಧ ಆರೋಪ ಮಾಡಿ ಮೊದಲ ಪತ್ನಿ ನಾಗರತ್ನ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ದೂರು ಸ್ವೀಕರಿಸಿದ್ದ ಆಯೋಗ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇದೇ 17ರಂದು ವಿಚಾರಣೆಗೆ ಹಾಜರಾಗುವಂತೆ ವಿಜಿಗೆ ನೋಟಿಸ್ ನೀಡಲಾಗಿತ್ತು.

    ನೋಟೀಸ್ ಗೆ ಸ್ಪಂದಿಸಿದ ನಟ, ವಿಚಾರಣೆಗೆ ಹಾಜರಾಗುತ್ತೇನೆ. ಆದ್ರೆ ಫಿಲಂ ಶೂಟಿಂಗ್ ಇದ್ದ ಕಾರಣ ಒಂದು ವಾರ ಕಾಲಾವಕಾಶ ನೀಡಬೇಕು ಅಂತ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆಯೋಗ ಅದಕ್ಕೆ ಅನುವು ಮಾಡಿಕೊಟ್ಟಿತ್ತು. ಆದ್ರೆ ಇದೀಗ ಒಂದು ವಾರ ಕಳೆದ್ರೂ ದುನಿಯಾ ವಿಜಯ್ ವಿಚಾರಣೆಗೆ ಹಾಜರಾಗದೇ ಇದ್ದಿದ್ದರಿಂದ ವಿಜಿ ವಿರುದ್ಧ ಆಯೋಗ ಗರಂ ಆಗಿದೆ.

    ಅಲ್ಲದೇ ಒಂದು ವಾರದೊಳಗೆ ವಿಚಾರಣೆಗೆ ಹಾಜರಾಗದೇ ಇದ್ದಲ್ಲಿ ವಿಜಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಮಹಿಳಾ ಆಯೋಗ ಎಚ್ಚರಿಕೆಯ ಸಂದೇಶ ರವಾನಿಸಿದೆ ಎಂಬುದಾಗಿ ತಿಳಿದುಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದುನಿಯಾ ವಿಜಯ್ ಈಗ ಸಲಗ!

    ದುನಿಯಾ ವಿಜಯ್ ಈಗ ಸಲಗ!

    ಬೆಂಗಳೂರು: ರಾಘು ಶಿವಮೊಗ್ಗ ನಿರ್ದೇಶನದಲ್ಲಿ ಕುಸ್ತಿ ಚಿತ್ರ ಮೂಡಿ ಬರೋದಾಗಿ ಈ ಹಿಂದೆ ಸುದ್ದಿಯಾಗಿತ್ತು. ಆದರೆ ಅದಾದ ಕೆಲ ದಿನಗಳಲ್ಲಿಯೇ ಕುಸ್ತಿ ನಿಂತು ಹೋಗಿದೆ ಎಂದೂ ರೂಮರ್ ಹರಿದಾಡಿತ್ತು. ಆದರೆ ಕುಸ್ತಿ ನಿಂತಿಲ್ಲ ಮುಂದಕ್ಕೆ ಹೋಗಿದೆ ಅಂತ ಸ್ಪಷ್ಟೀಕರಣ ನೀಡಿದ್ದ ರಾಘು, ಈ ಗ್ಯಾಪಲ್ಲಿ ತಾವು ದುನಿಯಾ ವಿಜಿಗಾಗಿ ಮತ್ತೊಂದು ಚಿತ್ರ ನಿರ್ದೇಶನ ಮಾಡುತ್ತಿರೋದಾಗಿ ಹೇಳಿಕೊಂಡಿದ್ದರು. ಇದೀಗ ಆ ಚಿತ್ರದ ಟೈಟಲ್ ಅನಾವರಣಗೊಂಡಿದೆ!

    ಈ ಚಿತ್ರಕ್ಕೆ ಸಲಗ ಎಂಬ ನಾಮಕರಣವಾಗಿದೆ. ಇದರ ಟೈಟಲ್ ಡಿಸೈನ್ ಕೂಡಾ ಹೊರ ಬಂದಿದೆ. ಹೊಸಾ ಶೈಲಿಯಲ್ಲಿ, ಕ್ರಿಯೇಟಿವ್ ಆಗಿ ಮಾಡಲಾಗಿರೋ ಈ ಟೈಟಲ್ ಡಿಸೈನಿಗೆ ನಿಜಕ್ಕೂ ಒಂದು ಫೋರ್ಸ್ ಇದೆ. ಈ ಚಿತ್ರದ ಮೂಲಕವೇ ದುನಿಯಾ ವಿಜಯ್ ಮೈ ಕೊಡವಿಕೊಂಡು ಎದ್ದು ನಿಲ್ಲುತ್ತಾರೆಂಬಂಥಾ ಸೂಚನೆಯೂ ಹೊಮ್ಮುವಂತಿದೆ. ಅಂದ ಹಾಗೆ ಈ ಚಿತ್ರಕ್ಕೆ ರಾಘು ಶಿವಮೊಗ್ಗ ವಿಶಿಷ್ಟವಾದೊಂದು ಕಥೆಯನ್ನ ಸಿದ್ಧಪಡಿಸಿಕೊಂಡಿದ್ದಾರಂತೆ. ಈ ಚಿತ್ರದ ಫಸ್ಟ್ ಲುಕ್ ಜನವರಿ ಒಂದರಂದು ಬಿಡುಗಡೆಯಾಗಲಿದೆ.

     

    ಸಲಗಕ್ಕೆ ಹೊಸಾ ವರ್ಷದಿಂದಲೇ ಚಿತ್ರೀಕರಣ ನಡೆಯುತ್ತಿದೆ. ಹಾಗಾದರೆ ಕುಸ್ತಿ ಚಿತ್ರದ ಕಥೆಯೇನು ಎಂಬ ಪ್ರಶ್ನೆ ಏಳುತ್ತದೆ. ಅದಕ್ಕೂ ಕೂಡಾ ರಾಘು ಉತ್ತರ ನೀಡಿದ್ದಾರೆ. ಬಹುಶಃ ಕುಸ್ತಿ ಮಾಮೂಲಿ ಚಿತ್ರವಾಗಿದ್ದರೆ ಈ ಹೊತ್ತಿಗೆಲ್ಲಾ ದುನಿಯಾ ವಿಜಿ ಚಿತ್ರೀಕರಣದಲ್ಲಿ ತೊಡಗಿಸಿಕೊಳ್ಳುತ್ತಿದ್ದರೇನೋ. ಆದರೆ ಅವರು ಈ ಚಿತ್ರಕ್ಕಾಗಿ ನಡೆಸಿದ್ದ ಬಾಡಿ ಬಿಲ್ಡ್, ಕುಸ್ತಿ ತರಬೇತಿಗಳೆಲ್ಲ ವೈಯಕ್ತಿಕ ವಿವಾದಗಳಿಂದ ನಿಂತು ಹೋಗಿವೆ. ಇನ್ನು ಹೊಸದಾಗಿಯೇ ಆರಂಭ ಮಾಡಬೇಕಷ್ಟೇ. ಇನ್ನು ವಿಜಿ ಮಗ ಸಾಮ್ರಾಟ್ ಕೂಡಾ ಈ ಚಿತ್ರದಲ್ಲಿ ಪ್ರಮುಖವಾದ ಪಾತ್ರ ನಿರ್ವಹಿಸಲು ರೆಡಿಯಾಗುತ್ತಿದ್ದ. ಆತನಿಗೂ ತರಬೇತಿ ಕೊಡಿಸಲಾಗುತ್ತಿತ್ತು. ಅದೂ ಕೂಡಾ ಬ್ರೇಕಾಗಿದೆ.

    ಈಗ ಅಪ್ಪ ಮಗನಿಗೆ ಈ ತರಬೇತಿಗಳನ್ನು ಹೊಸತಾಗಿ ಕೊಡಿಸಿ ರೆಡಿಯಾಗಿಸೋ ಕೆಲಸವೂ ಸಲಗ ಚಿತ್ರದ ಜೊತೆಗೇ ನಡೆಯಲಿದೆ. ಸಾಮ್ರಾಟ್ ಗೆ ಇನ್ನೇನು ಶಾಲಾ ಪರೀಕ್ಷೆಗಳು ಶುರುವಾಗೋದರಿಂದ ಅದೂ ಕೂಡಾ ಕಷ್ಟ ಸಾಧ್ಯ. ಆದ್ದರಿಂದಲೇ ದುನಿಯಾ ವಿಜಿ ಮತ್ತು ರಾಘು ಸೇರಿ ಚರ್ಚೆ ನಡೆಸಿ ಕುಸ್ತಿ ಚಿತ್ರವನ್ನು ಮುಂದಿನ ವರ್ಷದಿಂದ ಆರಂಭಿಸಲು ನಿರ್ಧಾರ ಮಾಡಿದ್ದಾರೆ. ಸಲಗ ಚಿತ್ರ ಮುಗಿಯೋ ಹೊತ್ತಿಗೆಲ್ಲ ಕುಸ್ತಿಯೂ ಆರಂಭವಾಗಲಿದೆ…!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದುನಿಯಾ ವಿಜಿಗೆ ಮತ್ತೆ ಸಂಕಷ್ಟ – ಆರೋಪ ಸಾಬೀತಾದ್ರೆ 7 ವರ್ಷ ಜೈಲು

    ದುನಿಯಾ ವಿಜಿಗೆ ಮತ್ತೆ ಸಂಕಷ್ಟ – ಆರೋಪ ಸಾಬೀತಾದ್ರೆ 7 ವರ್ಷ ಜೈಲು

    ಬೆಂಗಳೂರು: ಮೊದಲ ಪತ್ನಿ ಇರುವಾಗಲೇ ಎರಡನೇ ಮದುವೆಯಾದ ದುನಿಯಾ ವಿಜಿಗೆ ಈಗ ಸಂಕಷ್ಟ ಎದುರಾಗಿದೆ.

    ಕಾನೂನಿನ ಪ್ರಕಾರ ಮೊದಲ ಪತ್ನಿ ಬದುಕಿರುವಾಗಲೇ 2ನೇ ಮದುವೆ ಆಗುವಂತಿಲ್ಲ, ಅಲ್ಲದೇ ಎರಡನೇ ಪತ್ನಿ ಎಂದು ಘೋಷಣೆ ಮಾಡುವಂತೆಯೂ ಇಲ್ಲ. ಆದರೆ ನಟ ವಿಜಿ ಜಿಮ್ ಟ್ರೈನರ್ ಮೇಲೆ ಹಲ್ಲೆ ಹಾಗೂ ಕಿಡ್ನಾಪ್ ಪ್ರಕರಣದಲ್ಲಿ ಜೈಲಿನಲ್ಲಿರುವಾಗ ಎರಡನೇ ಹೆಂಡತಿಯ ಬಗ್ಗೆ ಪತ್ರ ಬರೆದಿದ್ದ ವಿಜಿ ಕೀರ್ತಿಗೌಡ ತನ್ನ 2ನೇ ಹೆಂಡತಿ ಅಂತ ಒಪ್ಪಿಕೊಂಡಿದ್ದರು.

    ಈ ಪತ್ರವನ್ನು ಆಧಾರವನ್ನು ಇಟ್ಟುಕೊಂಡು ಮೊದಲ ಪತ್ನಿ ನಾಗಲಕ್ಷಿ ಐಪಿಸಿ ಸೆಕ್ಷನ್ 494(ಪತ್ನಿ ಜೀವಂತ ಇರುವಾಗಲೇ ಮತ್ತೊಂದು ಮದುವೆ) ಅಡಿಯಲ್ಲಿ ದೂರು ದಾಖಲಿಸಲು ನಿರ್ಧರಿಸಿದ್ದಾರೆ.

    ತನ್ನ ಆರೋಪದ ಬಗ್ಗೆ ವಕೀಲರಿಗೆ ವಿಜಿ ವಿರುದ್ಧ ಎಲ್ಲಾ ದಾಖಲೆಗಳನ್ನು ನೀಡಿರೋ ನಾಗರತ್ನ, ಈ ವಾರವೇ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲು ನಿರ್ಧರಿಸಿದ್ದಾರೆ. ಆರೋಪ ಏನಾದರೂ ಸಾಬೀತಾದರೆ ಕನಿಷ್ಟ ಅಂದರೂ ವಿಜಿ 7 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಿಂತಿಲ್ಲ ದುನಿಯಾ ವಿಜಿ ಫ್ಯಾಮಿಲಿ ವಾರ್ – ಮನೆಗಾಗಿ ಪತಿಯ ವಿರುದ್ಧ ಮತ್ತೆ ದೂರು!

    ನಿಂತಿಲ್ಲ ದುನಿಯಾ ವಿಜಿ ಫ್ಯಾಮಿಲಿ ವಾರ್ – ಮನೆಗಾಗಿ ಪತಿಯ ವಿರುದ್ಧ ಮತ್ತೆ ದೂರು!

    ಬೆಂಗಳೂರು: ದುನಿಯಾ ವಿಜಯ್ ಅವರು ಮೊದಲ ಪತ್ನಿ ನಾಗರತ್ನ ಮನೆಗಾಗಿ ತಮ್ಮ ಪತಿ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದಾರೆ.

    ನಾಗರತ್ನ ಮನೆಗಾಗಿ ವಿಜಿ ವಿರುದ್ಧ ದೂರು ನೀಡಲು ರಾಜ್ಯ ಮಹಿಳಾ ಆಯೋಗದ ಮೊರೆ ಹೋಗಲಿದ್ದಾರೆ. ನಾಗರತ್ನ ಅವರು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷೀ ಬಾಯಿಯನ್ನು ಭೇಟಿಯಾಗಿ ತಮ್ಮ ಪತಿ ವಿಜಿ ವಿರುದ್ಧ ದೂರು ನೀಡಲಿದ್ದಾರೆ.

    ವಿಜಿ ತನಗೆ ಹೇಳದೇ ತಮ್ಮ ಮನೆಯನ್ನು ಸ್ನೇಹಿತ, ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಸುಂದರ್ ಗೌಡ ಅವರಿಗೆ ಮಾರಿದ್ದಾರೆ ಎಂದು ನಾಗರತ್ನ ಆರೋಪಿಸುತ್ತಿದ್ದಾರೆ. ಚನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆಯ ಹಿಂಭಾಗದಲ್ಲಿರೋ ದುನಿಯಾ ವಿಜಿ ಮನೆಯಿದ್ದು, ಈಗಾಗಲೇ ವಿಜಿ ತನ್ನ ಸ್ನೇಹಿತ ಸುಂದರ್ ಗೌಡಗೆ 4 ವರ್ಷದ ಹಿಂದೆ ಮನೆ ಮಾರಿದ್ದಾರೆ.

    ಸುಂದರ್ ಗೌಡಗೆ ವಿಜಿ ಮನೆ ಮಾರಿರುವ ವಿಚಾರ ತಿಳಿಯುತ್ತಿದ್ದಂತೆ ವಿಜಿ ವಿರುದ್ಧ ನಾಗರತ್ನ ಗರಂ ಆಗಿದ್ದಾರೆ. ನನ್ನ ಅನುಮತಿಯಿಲ್ಲದೆ ವಿಜಿ ಮನೆ ಮಾರಿದ್ದಾರೆ ಎಂದು ನಾಗರತ್ನ ಆರೋಪ ಮಾಡುತ್ತಿದ್ದಾರೆ. ನನಗೆ ಸರಿಯಾಗಿ ಜೀವನಾಂಶ ತಲುಪಿಲ್ಲ ಎಂದು ನಾಗರತ್ನ ಮಹಿಳಾ ಆಯೋಗದ ಮೋರೆ ಹೋಗಲು ಮುಂದಾಗಿದ್ದಾರೆ.

    ನಾಗರತ್ನ ಇಂದು ಮಧ್ಯಾಹ್ನ 12 ಗಂಟೆಗೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷೀ ಬಾಯಿ ಭೇಟಿ ಮಾಡಲಿದ್ದಾರೆ. ಈಗಾಗಲೇ ನಾಗಲಕ್ಷೀ ಬಾಯಿ ಅವರಲ್ಲಿ ಮೌಖಿಕವಾಗಿ ನಾಗರತ್ನ ದೂರು ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದುನಿಯಾ ವಿಜಿ ಪತ್ನಿ ನಾಗರತ್ನಗೆ ಬಿಗ್ ರಿಲೀಫ್

    ದುನಿಯಾ ವಿಜಿ ಪತ್ನಿ ನಾಗರತ್ನಗೆ ಬಿಗ್ ರಿಲೀಫ್

    ಬೆಂಗಳೂರು: ನಟ ದುನಿಯಾ ವಿಜಯ್ 2ನೇ ಪತ್ನಿ ಕೀರ್ತಿಗೌಡ ಮೇಲಿನ ಹಲ್ಲೆ ಪ್ರಕರಣದಲ್ಲಿ ನಾಗರತ್ನ ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

    ನಗರದ ಸೆಷನ್ಸ್ ನ್ಯಾಯಾಲಯ ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು, 1 ಲಕ್ಷ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಪಡೆದಿದೆ.

    ನಟ ದುನಿಯಾ ವಿಜಯ್ 2ನೇ ಪತ್ನಿ ಕೀರ್ತಿ ಗೌಡ ಮೇಲೆ ಹಲ್ಲೆ ಹಾಗೂ ದರೋಡೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರತ್ನಗೆ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನ.5 ರಂದು ನಗರದ ಸಿಟಿ ಸಿವಿಲ್ ಕೋರ್ಟ್ ನಾಗರತ್ನಗೆ 50 ಸಾವಿರ ರೂ. ಬಾಂಡ್ ಷರತ್ತು ವಿಧಿಸಿ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

    ಏನಿದು ಪ್ರಕರಣ?
    ಕೀರ್ತಿ ಗೌಡ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾದ ಬಳಿಕ ನಾಗರತ್ನ ಪೊಲೀಸರ ಕೈಗೆ ಸಿಗದೇ ನಾಪತ್ತೆಯಾಗಿದ್ದರು. ಗಿರಿನಗರ ಪೊಲೀಸರು ನಾಗರತ್ನಗಾಗಿ ತೀವ್ರ ಹುಡುಕಾಟ ನಡೆಸಿದ್ದರೂ ಬಂಧಿಸುವಲ್ಲಿ ವಿಫಲವಾಗಿದ್ದರು. ಕೀರ್ತಿಗೌಡ ಅವರು ತಮ್ಮ ಮೇಲೆ ನಡೆದ ಹಲ್ಲೆ ಸಂಬಂಧಿಸಿದಂತೆ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹಲ್ಲೆ ಮತ್ತು ಅಂಗಾಂಗ ಊನಗೊಳಿಸಿದ ಆರೋಪದಡಿ ಐಪಿಸಿ ಸೆಕ್ಷನ್ 326ರ ಅಡಿಯಲ್ಲಿ ನಾಗರತ್ನ ಅವರ ಮೇಲೆ ಎಫ್‍ಐಆರ್ ದಾಖಲು ಮಾಡಲಾಗಿತ್ತು. ಹಲ್ಲೆ ವಿಡಿಯೋ ಲಭ್ಯವಾಗುವುದಕ್ಕೂ ಮೊದಲು ಕೀರ್ತಿ ಅವರು ದೂರು ದಾಖಲಿಸಿದ್ದರು. ಆದರೆ ಆ ವೇಳೆ ನಾಗರತ್ನ ವಿರುದ್ಧ ಐಪಿಸಿ ಸೆಕ್ಷನ್ 306 ಮತ್ತು 309 ಅಡಿ ಮಾತ್ರ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ 326 ಸೆಕ್ಷನ್ ಹೆಚ್ಚುವರಿಯಾಗಿ ಹಾಕಲು ಪೊಲೀಸರು ನಿರ್ಧಾರ ಮಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ದುನಿಯಾ ವಿಜಿ ಮನೆಗೆ ಹೋಗದಂತೆ ನಾಗರತ್ನಗೆ ನಿರ್ಬಂಧ

    ದುನಿಯಾ ವಿಜಿ ಮನೆಗೆ ಹೋಗದಂತೆ ನಾಗರತ್ನಗೆ ನಿರ್ಬಂಧ

    ಬೆಂಗಳೂರು: ನಟ ದುನಿಯಾ ವಿಜಯ್ ಮನೆಗೆ ಹೋಗದಂತೆ ಮೊದಲ ಪತ್ನಿ ನಾಗರತ್ನಗೆ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ಮಧ್ಯಂತರ ಆದೇಶವನ್ನು ನೀಡಿದೆ. ದುನಿಯಾ ವಿಜಯ್ ವಿರುದ್ಧ ಮಾಧ್ಯಮಗಳಿಗೆ ಸಂದರ್ಶನ ನೀಡುವಂತಿಲ್ಲ. ದುನಿಯಾ ವಿಜಿ ಆಗಲಿ ಅವರ ಕುಟುಂಬಸ್ಥರ ವಿರುದ್ಧವೂ ಬಹಿರಂಗವಾಗಿ ಹೇಳಿಕೆ ನೀಡುವಂತಿಲ್ಲ. ಪ್ರಕರಣದ ವಿಚಾರಣೆಯ ವೇಳೆ ಕ್ಯಾಮೆರಾ ಬಳಸುವಂತೆಯೂ ಸೂಚನೆ ನೀಡಲಾಗಿದೆ.

    ಕೆಲವು ದಿನಗಳ ಹಿಂದೆ ದುನಿಯಾ ಪತ್ನಿಯರ ಜಡೆ ಜಗಳವನ್ನು ಇಡೀ ರಾಜ್ಯವೇ ನೋಡಿತ್ತು. ಪತ್ನಿಯರಿಬ್ಬರ ಜಗಳದಿಂದ ಬೇಸತ್ತ ವಿಜಿ ಮೊದಲ ಪತ್ನಿ ನಾಗರತ್ನರಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಆದೇಶವನ್ನು ನೀಡಿದೆ.

    ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ದುನಿಯಾ ವಿಜಯ್, ಈ ಮೊದಲೇ ನಾನು ವಿಚ್ಛೇದನ ಪಡೆಯಲು ಅರ್ಜಿ ಸಲ್ಲಿಸಿದ್ದೆ. ಆದರೆ ವಕೀಲರ ಮುಂದೆ ಒಪ್ಪಂದ ಆಗಿದ್ದ ಕಾರಣ ನಾನು 2 ವರ್ಷ ಸುಮ್ಮನೆ ಇದ್ದೆ. ಶನಿ ಕಾಟ ಇದ್ರೂ ಪಾರಾಗ್ತಾರೆ, ಆದರೆ ಹೆಂಡತಿ ಕಾಟದಿಂದ ಪಾರಾಗಲು ಸಾಧ್ಯವೇ ಇಲ್ಲ. ನಾನು ಎಂದೂ ಶಾಂತಿ ಭಂಗ ಮಾಡಿಲ್ಲ. ಆಕೆಯೇ ನನಗೆ ಶಾಂತಿ ಇಲ್ಲದಂತೆ ಮಾಡಿದ್ದಾರೆ. ನಾನು ಏನೂ ತಪ್ಪು ಮಾಡಿಲ್ಲ. ಆದರೆ ಜನತೆಗೆ ಸುಳ್ಳು ಹೇಳಿಕೆ ನೀಡಿ ನನ್ನ ಹೆಸರು ಹಾಳು ಮಾಡಲು ಯತ್ನಿಸಿದ್ದು ನನಗೆ ಬೇಸರ ತಂದಿತ್ತು ಎಂದು ಹೇಳಿದ್ದರು.

    2 ವರ್ಷಗಳ ಕಾಲ ಎಷ್ಟೇ ನೋವು ನೀಡಿದರೂ ಸಹನೆಯಿಂದ ಇದ್ದೆ. ಆದರೆ ಈಗ ಎಲ್ಲದಕ್ಕೂ ಕೊನೆಗಾಣಿಸಬೇಕೆಂದು ವಿಡಿಯೋ ನೀಡಿ ಪೂರ್ಣ ವಿರಾಮ ಹಾಕಿದ್ದೇನೆ. ನನ್ನ ಮೇಲೆ ಇಲ್ಲ ಸಲ್ಲದ ನಕಲಿ ಎಫ್‍ಐಆರ್ ಮಾಡಿದ್ದರು. ಆದರೂ ಸುಮ್ಮನೆ ಇದ್ದೆ. ಇದನ್ನು ಸಹಿಸಲು ಸಾಧ್ಯವಾಗದೇ ಆಕೆ ಮತ್ತೆ ಇಷ್ಟೆಲ್ಲಾ ಮಾಡಿದ್ದಾರೆ. ನನ್ನ ತಾಯಿಯ ಮೇಲೂ 2 ಬಾರಿ ಹಲ್ಲೆ ನಡೆದಿತ್ತು, ಆದರೆ ನಾನು ಗೌರವಕ್ಕೆ ಅಂಜಿ ಮಾತನಾಡಿರಲಿಲ್ಲ ಎಂದು ತಿಳಿಸಿದರು.

    ನನ್ನ ಬದುಕನ್ನೇ ಆಕೆ ಮುಗಿಸಲು ಯತ್ನ ಮಾಡಿದ್ದಾರೆ. ಇಷ್ಟು ಕಷ್ಟ ಅನುಭವಿಸಿದ್ದಕ್ಕೆ ಕೀರ್ತಿ ನನಗೆ ಸಿಕ್ಕಿದ್ದು ಅದೃಷ್ಟ. ದೇವರು ನನಗೆ ಕೀರ್ತಿಯನ್ನು ನೀಡಿದ್ದಾರೆ. ಆದರೆ ನನಗೆ ಈಗಲೂ ನೋವು ಇದೆ. ನನ್ನ ಹೆಣ್ಣು ಮಕ್ಕಳ ಜೀವನ ಹಾಳು ಮಾಡಿದ್ದಾರೆ. ನನ್ನ ವಿರುದ್ಧವೇ ಮಕ್ಕಳು ದೂರು ನೀಡುವಂತೆ ಮಾಡಿದ್ದಾರೆ ಎಂದು ಹೇಳುವ ಮೂಲಕ ಎರಡನೇ ಪತ್ನಿ ಕೀರ್ತಿಯನ್ನು ದುನಿಯಾ ವಿಜಯ್ ಕೊಂಡಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಡಿಸಿಪಿ ಅಣ್ಣಾಮಲೈ ಮುಂದೆ ಹಾಜರಾಗಿ ಹೇಳಿಕೆ ಕೊಟ್ಟ ದುನಿಯಾ ವಿಜಿ ಕುಟುಂಬ

    ಡಿಸಿಪಿ ಅಣ್ಣಾಮಲೈ ಮುಂದೆ ಹಾಜರಾಗಿ ಹೇಳಿಕೆ ಕೊಟ್ಟ ದುನಿಯಾ ವಿಜಿ ಕುಟುಂಬ

    ಬೆಂಗಳೂರು: ದುನಿಯಾ ವಿಜಿ ಕುಟುಂಬ ಇಂದು ಬೆಂಗಳೂರು ದಕ್ಷಿಣ ಡಿಸಿಪಿ ಅಣ್ಣಾಮಲೈ ಎದುರು ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡಿದೆ.

    ಪದೇ ಪದೇ ಗಲಾಟೆ ಮಾಡಿಕೊಂಡು ಕಾನೂನು ಸುವ್ಯವಸ್ಥೆ ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿ ಅಪರಾಧ ದಂಡ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 107ರ ಅಡಿ ಗಿರಿನಗರ ಪೊಲೀಸರು ದುನಿಯಾ ವಿಜಿ, ನಾಗರತ್ನ ಸೇರಿದಂತೆ 7 ಮಂದಿಯ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿದ್ದರು.

    ಈ ಪ್ರಕರರಣಕ್ಕೆ ಸಂಬಂಧಿಸಿದಂತೆ ವಿಜಯ್ ಹಾಗೂ ಕುಟುಂಬ ಸದಸ್ಯರು ಇಂದು ವಿಚಾರಣೆಗೆ ಹಾಜರಾಗಿದ್ದರು. ವಿಜಯ್, 2ನೇ ಪತ್ನಿ ಕೀರ್ತಿಗೌಡ ಹಾಗೂ ಕುಟುಂಬಸ್ಥರ ಹೇಳಿಕೆಯನ್ನು ಪೊಲೀಸರು ಪಡೆದುಕೊಂಡಿದ್ದಾರೆ.

    ಈ ವೇಳೆ ಮಾತನಾಡಿದ ವಿಜಯ್, ಎಲ್ಲರು ನಮ್ಮ ಹೇಳಿಕೆ ನೀಡಿದ್ದೇವೆ. ಪ್ರಕರಣ ವಿಚಾರಣೆ ಹಂತದಲ್ಲಿದೆ. ನಾನು ಯಾವುದೇ ಕಾರಣಕ್ಕೂ ಸಾರ್ವಜನಿಕರಿಗಾಗಲಿ, ಕಾನೂನಿಗಾಗಲಿ ಧಕ್ಕೆ ತರಲ್ಲ. ಶಾಂತಿ ಕದಡುವ ಪ್ರಯತ್ನ ಮಾಡಲ್ಲ. ಪೊಲೀಸರು ಅವರು ತಮ್ಮ ಕರ್ತವ್ಯವನ್ನು ಮಾಡುತ್ತಿದ್ದಾರೆ ಎಂದು ಹೇಳಿ ಕೈ ಮುಗಿದು ಎಲ್ಲರಿಗೂ ಒಳ್ಳೆದಾಗಲಿ ಎಂದು ಹೇಳಿದರು.

    ಇನ್ನು ದುನಿಯಾ ವಿಜಿ ಎರಡನೇ ಪತ್ನಿ ಕೀರ್ತಿಗೌಡ ಮೇಲೆ ಹಲ್ಲೆ ಸಂಬಂಧ ಈಗಾಗಲೇ ಮಧ್ಯಂತರ ನಿರೀಕ್ಷಣಾ ಜಾಮೀನು ಪಡೆದುಕೊಂಡಿರುವ ನಾಗರತ್ನ ಸದ್ಯಕ್ಕೆ ರಿಲ್ಯಾಕ್ಸ್ ಆಗುವ ಹಾಗಿಲ್ಲ. ಯಾಕಂದ್ರೆ ನಾಗರತ್ನ ಮೇಲೆ ಕೂಡ ಗಿರಿನಗರ ಪೊಲೀಸರು ಸಿಆರ್‍ಪಿಸಿ ಸೆಕ್ಷನ್ 107 ಹಾಕಿದ್ದಾರೆ. ಹೀಗಾಗಿ ಇದಕ್ಕೆ ಸಂಬಂಧಿಸಿದಂತೆ ನಾಗರತ್ನ ಕೂಡ ಅಣ್ಣಾಮಲೈ ಮುಂದೆ ಹಾಜರಾಗಿ ಬಾಂಡ್ ನೀಡಿ ಮುಚ್ಚಳಿಕೆ ಬರೆದು ಕೊಡಬೇಕು. ಇಷ್ಟು ದಿನ ನಾಪತ್ತೆಯಾಗಿದ್ದ ನಾಗರತ್ನಗೆ ಮಧ್ಯಂತರ ಜಾಮೀನು ಸಿಕ್ಕಿರುವುದರಿಂದ ಶೀಘ್ರದಲ್ಲೇ ಪೊಲೀಸರು ಅವರನ್ನು ಡಿಸಿಪಿ ಎದುರು ಹಾಜರಾಗಲು ನೋಟೀಸ್ ನೀಡಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಡಿಸಿಪಿ ಮುಂದೆ ಹಾಜರಾಗುವಂತೆ ದುನಿಯಾ ವಿಜಿಗೆ ನೋಟಿಸ್

    ಡಿಸಿಪಿ ಮುಂದೆ ಹಾಜರಾಗುವಂತೆ ದುನಿಯಾ ವಿಜಿಗೆ ನೋಟಿಸ್

    ಬೆಂಗಳೂರು: ನಟ ದುನಿಯಾ ವಿಜಿಗೆ ಜೈಲಿಗೆ ಹೋಗಿ ಬಂದ್ರೂ ಪೊಲೀಸ್ ವಿಚಾರಣೆಯ ಬಿಸಿ ಮಾತ್ರ ಕಡಿಮೆ ಆಗಿಲ್ಲ. ದುನಿಯಾ ವಿಜಿ ಮೇಲೆ ಗಿರಿ ನಗರ ಪೊಲೀಸರು ಹಾಕಿರುವ ಸಿಆರ್‌ಪಿಸಿ ಸೆಕ್ಷನ್ 107 ಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡುವಂತೆ ದುನಿಯಾ ವಿಜಿಗೆ ನೋಟಿಸ್ ನೀಡಲಾಗಿದೆ. ಹೀಗಾಗಿ ವಿಜಯ್ ಇಂದು ದಕ್ಷಿಣ ವಿಭಾಗದ ಡಿಸಿಪಿ ಎದುರು ಹಾಜರಾಗಿ ಬಾಂಡ್ ನೀಡಿ ಹೇಳಿಕೆ ಕೊಡಬೇಕು.

    ನಟ ದುನಿಯಾ ವಿಜಿ ಕುಟುಂಬ ಹಾಗೂ ಹೊರಗಡೆ ಪದೇ ಪದೇ ಪ್ರಕರಣಗಳು ದಾಖಲಾಗುತ್ತಿದ್ದ ಹಿನ್ನೆಲೆಯಲ್ಲಿ ಗಿರಿ ನಗರ ಪೊಲೀಸರು ಸಿಆರ್‌ಪಿಸಿ ಸೆಕ್ಷನ್ 107 ಹಾಕಿದ್ದರು. ಹೀಗಾಗಿ ಇಂದು ಪೊಲೀಸರ ಮುಂದೆ ಹಾಜರಾಗಬೇಕಿದೆ.

    ದುನಿಯಾ ವಿಜಿ ಎರಡನೇ ಪತ್ನಿ ಕೀರ್ತಿಗೌಡ ಮೇಲೆ ಹಲ್ಲೆ ಸಂಬಂಧ ಈಗಾಗಲೇ ಮಧ್ಯಂತರ ನಿರೀಕ್ಷಣಾ ಜಾಮೀನು ಪಡೆದುಕೊಂಡಿರುವ ನಾಗರತ್ನ ಸದ್ಯಕ್ಕೆ ರಿಲ್ಯಾಕ್ಸ್ ಆಗುವ ಹಾಗಿಲ್ಲ. ಯಾಕಂದ್ರೆ ನಾಗರತ್ನ ಮೇಲೆ ಕೂಡ ಗಿರಿನಗರ ಪೊಲೀಸರು ಸಿಆರ್‌ಪಿಸಿ ಸೆಕ್ಷನ್ 107 ಹಾಕಿದ್ದಾರೆ. ಹೀಗಾಗಿ ಇದಕ್ಕೆ ಸಂಬಂಧಿಸಿದಂತೆ ನಾಗರತ್ನ ಕೂಡ ದಕ್ಷಿಣ ವಿಭಾಗದ ಡಿಸಿಪಿ ಎದಿರು ಹಾಜರಾಗಿ ಬಾಂಡ್ ನೀಡಿ ಮುಚ್ಚಳಿಕೆ ಬರೆದು ಕೊಡಬೇಕು. ಇಷ್ಟು ದಿನ ನಾಪತ್ತೆಯಾಗಿದ್ದ ನಾಗರತ್ನಗೆ ಮಧ್ಯಂತರ ಜಾಮೀನು ಸಿಕ್ಕಿರುವುದರಿಂದ ಶೀಘ್ರದಲ್ಲೇ ಪೊಲೀಸರು ಅವರನ್ನು ಡಿಸಿಪಿ ಎದುರು ಹಾಜರಾಗಲು ನೋಟೀಸ್ ನೀಡಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv