Tag: Duniya Vijay

  • ಜೈಲಿನಿಂದ ಹೊರಬರ್ತಿದ್ದಂತೆ ಅಪ್ಪಿಕೊಂಡು ಸ್ವೀಟ್ಸ್ ತಿಂದ ಜಂಗ್ಲಿ ದಂಪತಿ

    ಜೈಲಿನಿಂದ ಹೊರಬರ್ತಿದ್ದಂತೆ ಅಪ್ಪಿಕೊಂಡು ಸ್ವೀಟ್ಸ್ ತಿಂದ ಜಂಗ್ಲಿ ದಂಪತಿ

    ಬೆಂಗಳೂರು: ಜಿಮ್ ಟ್ರೈನರ್ ಮಾರುತಿ ಗೌಡ ಮೇಲಿನ ಹಲ್ಲೆ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದ ನಟ ದುನಿಯಾ ವಿಜಿ ರಿಲೀಸ್ ಆಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿಂದ ಹೊರಗೆ ಕಾಲಿಟ್ಟ ಕೂಡಲೇ ತನ್ನನ್ನು ಕರೆದುಕೊಂಡು ಹೋಗಲು ಬಂದಿದ್ದ ಎರಡನೇ ಪತ್ನಿ ಕೀರ್ತಿಗೌಡರನ್ನು ಜಂಗ್ಲಿ ಅಪ್ಪಿಕೊಂಡರು.

    ಇದೇ ವೇಳೆ ಜೈಲಿನ ಬಳಿ ನೆರೆದಿದ್ದ ಅಭಿಮಾನಿಗಳು ಜೈಕಾರ ಕೂಗಿದರು. ನಂತರ ಗಾಳಿ ಆಂಜನೇಯ ದೇವಸ್ಥಾನ ಮತ್ತು ದರ್ಗಾಕ್ಕೆ ಪತ್ನಿ ಸಮೇತ ಭೇಟಿ ನೀಡಿದರು. ಬಳಿಕ ಪರಸ್ಪರ ಸ್ವೀಟ್ಸ್ ತಿನ್ನಿಸಿಕೊಂಡು ದಂಪತಿ ಸಂಭ್ರಮಿಸಿದರು.

    ನಂತರ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಎಲ್ಲೂ ಕೇಸಿನ ಬಗ್ಗೆ ಮಾತನಾಡಬಾರದು ಎಂದು ನಿಬಂಧನೆಯಿದೆ. ಹೀಗಾಗಿ ನಾನು ಮಾತನಾಡುವುದಿಲ್ಲ. ನನಗೆ ಹಾಗೂ ನನ್ನ ಸ್ನೇಹಿತರಿಗೆ ಜಾಮೀನು ನೀಡಿದಂತಹ ಮ್ಯಾಜಿಸ್ಟ್ರೇಟರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಏಕೆಂದರೆ ಎಷ್ಟೋ ಹಿತಶತ್ರುಗಳು ಜಾಮೀನು ಸಿಗಬಾರದು ಎಂದು ಕಾದುಕುಳಿತಿದ್ದರು. ಆದ್ರೆ ಮ್ಯಾಜಿಸ್ಟ್ರೇಟರ್ ನ್ಯಾಯವನ್ನು ಪರಿಶೀಲಿಸಿ ದೇವರ ಸಮಾನರಾಗಿದ್ದಾರೆ ಎಂದರು.

    ಅಧಿಕಾರಿಗಳ ಕೈವಾಡದ ಬಗ್ಗೆ ಕುರಿತು ನಾನು ಮುಖಾಮುಖಿ ಮಾತನಾಡಲು ರೆಡಿಯಾಗಿದ್ದೇನೆ. ಮಾಧ್ಯಮಗಳು ಅವಕಾಶ ಮಾಡಿಕೊಟ್ಟರೆ ನಾನು ಮಾತನಾಡುತ್ತೇನೆ ಎಂದು ಹೇಳಿದರು.

    ಪತ್ನಿ ವಿರುದ್ಧದ ಹಲವು ಆರೋಪದ ವಿಚಾರದ ಕುರಿತು ಮಾತನಾಡಿದ ಅವರು, ನಾಗರತ್ನ ನಾಲ್ಕು ವರ್ಷದ ಹಿಂದೆ ನನ್ನ ಮರ್ಯಾದೆ ತೆಗೆದರು. ಅವರು ನನ್ನ ತಂದೆ-ತಾಯಿನ ಚೆನ್ನಾಗಿ ನೋಡಿಕೊಂಡಿಲ್ಲ. ನಾಗರತ್ನಗೆ ದೊಡ್ಡ ಮನೆಯನ್ನು ಕೊಟ್ಟು ನಾನು ಬಾಡಿಗೆ ಮನೆಯಲ್ಲಿದ್ದೇನೆ. ಮಗ ಮತ್ತು ಮಗಳಂದಿರ ಹೆಸರಿಗೆ ಆಸ್ತಿ ಬರೆದಿದ್ದೇನೆ. ನಾನು, ನನ್ನ ತಂದೆ-ತಾಯಿ ಸತ್ತರೆ ಮಣ್ಣಾಕೋಕೆ ಬರಬೇಡ ಅಂತ ವಿಲ್ ಮಾಡಿಟ್ಟಿದ್ದೇವೆ. ಆದರೆ ನಾಗರತ್ನ ಬಾಯಿಬಿಟ್ಟರೆ ಸುಳ್ಳೇ ಹೇಳೋದು ಎಂದರು.

    ಜಂಗ್ಲಿ ಜೈಲು ಮುಕ್ತನಾಗುತ್ತಿದ್ದಂತೆಯೇ ರಾತ್ರಿ 11 ಗಂಟೆಗೆ ಎರಡನೇ ಪತ್ನಿ ಕೀರ್ತಿ ಜೊತೆ ಸುದ್ದಿಗೋಷ್ಠಿ ನಡೆಸಿದರು. ನನ್ನ ಮಗನಿಗೆ ಹೊಡೆದರು. ಇದಾದ ಬಳಿಕ ಗಲಾಟೆ ಆಯಿತು. ಆದರೆ ನಾನು ಮಾರುತಿ ಗೌಡಗೆ ಹೊಡೆದೇ ಇಲ್ಲ. ಅಲ್ಲದೇ ಮಾರುತಿ ಗೌಡನನ್ನು ನಾನು ಕಿಡ್ನಾಪ್ ಕೂಡ ಮಾಡಿಲ್ಲ. ನಾನು ಸ್ಟೇಷನ್‍ಗೆ ಹೋದ ಮೇಲೆ ಅವರ ಕಡೆಯ ಹುಡುಗರೇ ನನ್ನ ಮೇಲೆ ಮುಗಿಬಿದ್ದರು ಅಂತ ದುನಿಯಾ ವಿಜಿ ಹೇಳಿದ್ದಾರೆ. ಇದರಲ್ಲಿ ಕಾಣದ ಕೈಗಳ ಕೈವಾಡ ಇದೆ ಅಂತ ನೇರವಾಗಿ ಮಾಧ್ಯಮಗಳ ಮುಂದೆ ಅವರು ಆರೋಪಿಸಿದ್ರು. ಒಂದು ವೇಳೆ ಮಾರುತಿ ಗೌಡ, ಕಿಟ್ಟಿ ಬಂದರೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬುದ್ಧಿ ಹೇಳಿ ದುನಿಯಾ ವಿಜಿಗೆ ಬೇಲ್ ಕೊಟ್ಟ ಜಡ್ಜ್

    ಬುದ್ಧಿ ಹೇಳಿ ದುನಿಯಾ ವಿಜಿಗೆ ಬೇಲ್ ಕೊಟ್ಟ ಜಡ್ಜ್

    ಬೆಂಗಳೂರು: ಮಾರುತಿ ಗೌಡ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟ ದುನಿಯಾ ವಿಜಿಗೆ 70ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

    ಇದೇ ಕೊನೆ. ಇನ್ನು ಮುಂದೆ ಪುಂಡಾಟ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸೆಷನ್ಸ್ ಕೋರ್ಟ್ ಕೋರ್ಟ್ ನ್ಯಾಯಾಧೀಶ ರಾಮಲೀಂಗೇಗೌಡ ನಟ ದುನಿಯಾ ವಿಜಯ್‍ಗೆ ಎಚ್ಚರಿಕೆ ನೀಡಿ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಜಾಮೀನು ಅರ್ಜಿ ವಿಚಾರಣೆ ವೇಳೆ ನ್ಯಾಯಾಧೀಶರು ನಟ ದುನಿಯಾ ವಿಜಯ್‍ಗೆ, ಹೀರೋ ಆಗಿರುವ ನೀವು ಜನರಿಗೆ ರೋಲ್ ಮಾಡೆಲ್ ಆಗಿರಬೇಕು. ಈ ರೀತಿ ಮಾಡಿಕೊಳ್ಳಬಾರದು ಎಂದು ಬುದ್ಧಿವಾದ ಹೇಳಿದರು.

    1 ಲಕ್ಷ ರೂ. ಬಾಂಡ್ ಹಾಗೂ ಎರಡು ಶ್ಯೂರಿಟಿ, ಪ್ರಭಾವ ಬೀರಿ ಯಾವುದೇ ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು. ತನಿಖೆಗೆ ಸಹಕರಿಸಿಬೇಕು ಎಂದು ಷರತ್ತು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ವಿಜಯ್ ಪರ ವಕೀಲರು ಪರಪ್ಪನ ಅಗ್ರಹಾರಕ್ಕೆ ತೆರಳಿದ್ದು, ವಿಜಯ್ ಇಂದೇ ಬಿಡುಗಡೆಯಾಗುವ ಸಾಧ್ಯತೆಯಿದೆ.

    ದುನಿಯಾ ವಿಜಯ್ ಮೇಲೆ ಕಿಡ್ನಾಪ್, ಹಲ್ಲೆ, ಕೊಲೆ ಜೀವ ಬೆದರಿಕೆ, ಐಪಿಸಿ ಸೆಕ್ಷನ್ 365 (ಕಿಡ್ನಾಪ್), 342 (ಅಕ್ರಮ ಬಂಧನ), 325 (ಹಲ್ಲೆ), 506 (ಕೊಲೆ ಬೆದರಿಕೆ) ಪ್ರಕರಣ ದಾಖಲಾಗಿದೆ. ವಿಜಿ ಮೇಲೆ ದಾಖಲಾಗಿರುವ ಆರೋಪಗಳು ಸಾಬೀತಾದಲ್ಲಿ ಎರಡು ವರ್ಷ ಮೇಲ್ಪಟ್ಟು ಶಿಕ್ಷೆಯಾಗುವ ಸಾಧ್ಯತೆ ಇದೆ.

    ಏನಿದು ಪ್ರಕರಣ?
    ಸೆಪ್ಟೆಂಬರ್ 22ರ ಶನಿವಾರ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಮಿಸ್ಟರ್ ಬೆಂಗಳೂರು ಬಾಡಿ ಬಿಲ್ಡಿಂಗ್ ಸ್ಪರ್ಧೆ ನಡೆಯುತಿತ್ತು. ಈ ಕಾಂಪಿಟೇಷನ್ ನೋಡಲು ದುನಿಯಾ ವಿಜಿ ಮತ್ತು ತಂಡ ಬಂದಿತ್ತು. ಈ ವೇಳೆ ಪಾನಿಪೂರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಮತ್ತು ದುನಿಯಾ ವಿಜಿ ನಡುವೆ ಮಾತಿನ ಚಕಮಕಿ ನಡೆದಿದೆ. ಆದರೆ ಗಲಾಟೆ ವಿಕೋಪಕ್ಕೆ ತಿರುಗಿ ದುನಿಯಾ ವಿಜಯ್ ಗ್ಯಾಂಗ್, ಮಾರುತಿಗೌಡನ ಮೇಲೆ ಹಲ್ಲೆ ನಡೆಸಿ ಕಾರಿನಲ್ಲಿ ಹಾಕಿಕೊಂಡು ಕಿಡ್ನಾಪ್ ಮಾಡಿದ್ದರು. ದುನಿಯಾ ವಿಜಿ, ಮಣಿ ಮತ್ತು ಪ್ರಸಾದ್ ಸಹಚರರಿಂದ ಈ ಕೃತ್ಯ ನಡೆದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಇಂದು `ಜಂಗ್ಲಿ’ಯ ಜಾಮೀನು ಭವಿಷ್ಯ- ಇತ್ತ ಕೀರ್ತಿಗೆ ಭದ್ರತೆ ನೀಡುವಂತೆ ವಿಜಿ ಪತ್ರ

    ಇಂದು `ಜಂಗ್ಲಿ’ಯ ಜಾಮೀನು ಭವಿಷ್ಯ- ಇತ್ತ ಕೀರ್ತಿಗೆ ಭದ್ರತೆ ನೀಡುವಂತೆ ವಿಜಿ ಪತ್ರ

    ಬೆಂಗಳೂರು: ಕಳೆದೊಂದು ವಾರದಿಂದ ಪರಪ್ಪನ ಅಗ್ರಹಾರದಲ್ಲಿರುವ ದುನಿಯಾ ವಿಜಿ, ಜೈಲಿನಿಂದ ಹೊರ ಬರ್ತಾರೋ ಇಲ್ವೋ ಅನ್ನೋದು ಇಂದು ನಿರ್ಧಾರವಾಗಲಿದೆ. ಇಂದು 8ನೇ ಎಸಿಎಂಎಂ ಕೋರ್ಟ್ ಜಂಗ್ಲಿಯ ಜಾಮೀನು ಅರ್ಜಿ ತೀರ್ಪು ನೀಡಲಿದೆ. ಈ ನಡುವೆ ಎರಡನೇ ಪತ್ನಿಗೆ ಭದ್ರತೆ ನೀಡುವಂತೆ ವಿಜಿ ಪೊಲೀಸರಿಗೆ ಪತ್ರ ಬರೆದಿದ್ದಾರೆ.

    ಜಿಮ್ ಟ್ರೈನರ್ ಮಾರುತಿ ಗೌಡನನ್ನು ಕಿಡ್ನಾಪ್ ಮಾಡಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ 8ನೇ ಎಸಿಎಂಎಂ ಕೋರ್ಟ್ ಇಂದಿಗೆ ತೀರ್ಪು ಮುಂದೂಡಿತ್ತು. ಇಂದು ಮಧ್ಯಾಹ್ನ 3 ಗಂಟೆಗೆ 8ನೇ ಎಸಿಎಂಎಂ ಕೋರ್ಟ್ ಜಾಮೀನು ಅರ್ಜಿಯ ತೀರ್ಪು ಪ್ರಕಟಿಸಲಿದೆ.

    ಇನ್ನು ಹಲ್ಲೆಗೊಳಗಾದ ಮಾರುತಿ ಗೌಡ ಈಗಾಗಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಹಾಗಾಗಿ ದುನಿಯಾ ವಿಜಿ ಜಾಮೀನು ಸಿಗೋ ನಿರೀಕ್ಷೆಯಲ್ಲಿದ್ದಾರೆ. ಇತ್ತ ಸೆಲೆಬ್ರಿಟಿ ಎಂಬ ಕಾರಣಕ್ಕೆ ಈ ಪ್ರಕರಣವನ್ನು ದೊಡ್ಡದು ಮಾಡಿದ್ದಾರೆ. ಇವರೇನು ರೌಡಿ ಅಲ್ಲ ಆಕಸ್ಮಿಕವಾಗಿ ಆದ ಜಗಳ ಅಂತಾ ದುನಿಯಾ ವಿಜಿ ಪರ ವಕೀಲರು ವಾದಿಸಿದ್ದರು.

    ಇದೆಲ್ಲದರ ನಡುವೆ ದೊಡ್ಡೆಂಡ್ತಿ-ಚಿಕ್ಕೆಂಡ್ತಿ ಗಲಾಟೆಯಿಂದ ಜೈಲಲ್ಲೂ ಕಂಗಾಲಾಗಿರೋ ದುನಿಯಾ ವಿಜಯ್ ಇದೀಗ, ಕೀರ್ತಿಗೆ ಹೆಚ್ಚುಕಮ್ಮಿಯಾದ್ರೆ ನಾಗರತ್ನರವರೇ ನೇರ ಹೊಣೆ ಅಂತ ಸೆಂಟ್ರಲ್ ಜೈಲ್‍ನಿಂದಲೇ ಗಿರಿನಗರ ಪೊಲೀಸರಿಗೆ ವಿಜಯ್ ಪತ್ರ ಬರೆದಿದ್ದಾರೆ.

    ಪತ್ರದಲ್ಲೇನಿದೆ?:
    ಇಂದ
    ಬಿ.ಆರ್.ವಿಜಯ್ ಕುಮಾರ್ ಸನ್ ಆಫ್ ಸಿ.ರುದ್ರಪ್ಪ
    ಕೇಂದ್ರ ಕಾರಾಗೃಹ, ಬೆಂಗಳೂರು

    ಮಾನ್ಯರೇ,
    ವಿಷಯ: ನನ್ನ ಪತ್ನಿ ಕೀರ್ತಿ ಇವರಿಗೆ ಸೂಕ್ತ ಭದ್ರತೆ ಒದಗಿಸುವ ಕೋರಿ

    ನನ್ನ ಪತ್ನಿ ಕೀರ್ತಿ ಕಳೆದ ಸೋಮವಾರ ನನ್ನನ್ನು ಭೇಟಿ ಮಾಡಲು ಕೇಂದ್ರ ಕಾರಾಗೃಹಕ್ಕೆ ಬಂದಿದ್ದು, ದಿನಾಂಕ 23/09/18ರಂದು ನಾಗರತ್ನರವರು ನನ್ನ ಪತ್ನಿ ಕೀರ್ತಿಯವರ ಮೇಲೆ ಹಲ್ಲೆ ನಡೆಸಿದ್ದಾರಂತೆ. ಇದರಿಂದ ನನ್ನ ಪತ್ನಿ ಕೀರ್ತಿಯವರು ತೀವ್ರ ಭಯಭೀತರಾಗಿರುತ್ತಾರೆ. ಹಾಗೂ ನನ್ನನ್ನು ಭೇಟಿ ಮಾಡಲು ಬರುವ ಸಮಯದಲ್ಲಿ ಕಾರ್ ಡ್ರೈವರ್ ಮಹಮ್ಮದ್‍ರವರಿಗೆ ಕರೆ ಮಾಡಿ ನಿನ್ನನ್ನು ಅಂದರೆ ಕೀರ್ತಿಯವರನ್ನು ಸುಮ್ಮನೆ ಬಿಡುವುದಿಲ್ಲ. ನೀನು ಮತ್ತೆ ಮನೆಗೆ ಬಂದರೆ ನಿನಗೆ ಒಂದು ಗತಿ ಕಾಣಿಸುತ್ತೇನೆ ಎಂದು ಧಮ್ಕಿ ಹಾಕಿರುತ್ತಾರೆ ಹಾಗೂ ಕೊಲೆ ಬೆದರಿಕೆಯೊಡ್ಡಿರುತ್ತಾರೆ. ಸುಮ್ಮನೆ ನನ್ನ ಪತ್ನಿ ಮೇಲೆ ಆರೋಪ ಮಾಡಿ ಪ್ರಕರಣ ದಾಖಲು ಮಾಡುತ್ತಿದ್ದು, ದಯಮಾಡಿ ನನ್ನ ಹೆಂಡತಿ ಕೀರ್ತಿಗೆ ಸೂಕ್ತ ಭದ್ರತಾ ವ್ಯವಸ್ಥೆ ನೀಡಬೇಕೆಂದು ತಮ್ಮಲ್ಲಿ ಕಳಕಳಿಯಿಂದ ಪ್ರಾರ್ಥಿಸುತ್ತಿದ್ದೇನೆ. ಹಾಗೂ ನನ್ನ ಪತ್ನಿ ಕೀರ್ತಿಯವರಿಗೆ ಪ್ರಾಣ ಬೆದರಿಕೆ ಇದ್ದು, ಸೂಕ್ತ ಭದ್ರತೆ ಒದಗಿಸಬೇಕೆಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇನೆ. ನನ್ನ ಪತ್ನಿ ಕೀರ್ತಿಯವರು ಮಾನಸಿಕ ಕಿರುಕುಳದಿಂದ ನೊಂದಿದ್ದು, ಮತ್ತೆ ಈ ರೀತಿಯ ಘಟನೆ ಜರುಗಿದಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿರುತ್ತಾರೆ. ನನ್ನ ಪತ್ನಿ ಕೀರ್ತಿಯವರಿಗೆ ಏನಾದರೂ ತೊಂದರೆಯಾದಲ್ಲಿ ನಾಗರತ್ನರವರೇ ನೇರ ಹೊಣೆಗಾರರಾಗಿರುತ್ತಾರೆ.

    ವಂದನೆಗಳೊಂದಿಗೆ

    ಇಂತಿ ತಮ್ಮ ವಿಶ್ವಾಸಿ
    ಬಿ.ಆರ್.ವಿಜಯ್ ಕುಮಾರ್

    ಒಟ್ಟಿನಲ್ಲಿ ಇಂದು ದುನಿಯಾ ವಿಜಿಗೆ ಜಾಮೀನು ಸಿಕ್ಕರೆ ಬಿಗ್ ರಿಲೀಫ್ ಸಿಕ್ಕಂತಾಗಲಿದ್ದು, ಇಲ್ಲದೆ ಹೋದ್ರೆ ಇನ್ನಷ್ಟು ದಿನ ಜೈಲೂಟ ಗ್ಯಾರಂಟಿಯಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಿಜಿ ಹಲ್ಲೆ ಪ್ರಕರಣ: ರಾಜಿ ಸಂಧಾನದ ಬಗ್ಗೆ ಪಾನಿಪುರಿ ಕಿಟ್ಟಿ ಸ್ಪಷ್ಟನೆ

    ವಿಜಿ ಹಲ್ಲೆ ಪ್ರಕರಣ: ರಾಜಿ ಸಂಧಾನದ ಬಗ್ಗೆ ಪಾನಿಪುರಿ ಕಿಟ್ಟಿ ಸ್ಪಷ್ಟನೆ

    ಬೆಂಗಳೂರು: ನಟ ದುನಿಯಾ ವಿಜಿ ಜಾಮೀನು ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಈ ನಡುವೆ ರಾಜಿ ಸಂಧಾನದ ಊಹಾಪೋಹ ಕೇಳಿ ಬಂದಿದ್ದು, ಈ ಬಗ್ಗೆ ಸ್ವತಃ ಪಾನಿಪುರಿ ಕಿಟ್ಟಿ ಸ್ಪಷ್ಟನೆ ಕೊಟ್ಟಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕಿಟ್ಟಿ, ನಾವು ದೇವರನ್ನು ನಂಬಿದ್ದೇವೆ. ನ್ಯಾಯ ಸಿಗಲಿ, ಸಿಗದಿರಲಿ. ಆದರೆ ಕಾನೂನು ಏನು ಹೇಳುತ್ತದೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ. ನಾನು ಕಾನೂನು ಹೋರಾಟ ಮಾಡುತ್ತೇನೆ. ಕಾನೂನು ಚೌಕಟ್ಟಿನೊಳಗೆ ಇರುತ್ತೀನಿ. ಯಾವ ರಾಜಿ ಸಂಧನಾನೂ ಮಾಡಿಕೊಳ್ಳಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಜಿ ಮಗನನ್ನ ಕಾಡಿಸಿಲ್ಲ, ಅವರೇ ಕಿಟ್ಟಿ ಎಲ್ಲಿದ್ದಾನೆ ಅಂತಾ ಹಲ್ಲೆ ಮಾಡಿದ್ರು: ಮಾರುತಿ ಗೌಡ

    ದುನಿಯಾ ವಿಜಿ ಪತ್ನಿ ನಾಗರತ್ನ ಅವರು ಬಂದರೂ ಸಂಧಾನಕ್ಕೆ ನಾನು ಬಗ್ಗಲ್ಲ. ತನ್ನ ಪತಿಯನ್ನ ಹೇಗೆ ಉಳಿಸಿಕೊಳ್ಳಬೇಕು ಅನ್ನೋ ಆಸೆ ನಾಗರತ್ನ ಅವರಿಗೆ ಇದೆಯೋ ಹಾಗೇ ನನ್ನ ಮಗನನ್ನ ಕಾಪಾಡಿಕೊಳ್ಳಬೇಕು ಅನ್ನೋ ಆಸೆ ನನಗೂ ಇದೆ. ನನ್ನ ಮಗನಿಗೆ ತುಂಬಾ ನೋವಾಗಿದೆ ನಾನು ಯಾವ ಸಂಧಾನವನ್ನು ಮಾಡಿಕೊಳ್ಳಲ್ಲ. ಜಾಮೀನು ಸಿಗಲಿ ಬಿಡಲಿ ಕಾನೂನು ಚೌಕಟ್ಟಿನೊಳಗೆ ಇರುತ್ತೀನಿ. ಹೋರಾಟ ಮಾಡುತ್ತೇನೆ ಎಂದು ಪಾನಿಪುರಿ ಕಿಟ್ಟಿ ಅವರು ಸ್ಪಷ್ಟಪಡಿಸಿದ್ದಾರೆ.

    ವಿಜಯ್ ಅವರ ಜಾಮೀನು ಅರ್ಜಿಯನ್ನು ಈ ಹಿಂದೆ ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಜಾಮೀನಿಗಾಗಿ ವಿಜಿ ಸೆಷನ್ಸ್ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸೆಷನ್ಸ್ ಕೋರ್ಟ್ ನಲ್ಲಿ ಶನಿವಾರ ಅರ್ಜಿ ವಿಚಾರಣೆ ನಡೆದಿದೆ. ಎರಡೂ ಕಡೆಯ ವಾದವನ್ನು ಆಲಿಸಿದ ಕೋರ್ಟ್ ಆದೇಶವನ್ನು ಅಕ್ಟೋಬರ್ 1ಕ್ಕೆ ಕಾಯ್ದಿರಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದುನಿಯಾ ವಿಜಿ 2ನೇ ಪತ್ನಿಗೆ ಜೀವ ಬೆದರಿಕೆ!

    ದುನಿಯಾ ವಿಜಿ 2ನೇ ಪತ್ನಿಗೆ ಜೀವ ಬೆದರಿಕೆ!

    -ಪಬ್ಲಿಕ್ ಟಿವಿಗೆ ಕೀರ್ತಿಗೌಡ ಹೇಳಿದ್ದೇನು..?

    ಬೆಂಗಳೂರು: ಕನ್ನಡದ ನಟ ದುನಿಯಾ ವಿಜಯ್ ಜೈಲು ಸೇರಿದಂತೆ 2ನೇ ಪತ್ನಿ ಕೀರ್ತಿಗೌಡ ಮನೆ ಖಾಲಿ ಮಾಡಿದ್ದರು. ಮೊದಲ ಪತ್ನಿ ನಾಗರತ್ನ ಮತ್ತು ಕೀರ್ತಿಗೌಡ ಇಬ್ಬರ ನಡುವಿನ ಜಡೆಜಗಳ ಬಳಿಕ ಒಬ್ಬರ ಮೇಲೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸ್ ವಿಚಾರಣೆ ಬಳಿಕ ಕೀರ್ತಿಗೌಡ ತವರು ಮನೆ ಸೇರಿಕೊಂಡಿದ್ದರು. ದಿಢೀರ್ ಅಂತಾ ತಾಯಿ ಮನೆ ಸೇರಿದ್ದು ಯಾಕೆ ಅಂತಾ ಕೀರ್ತಿಗೌಡ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ.

    ಕೀರ್ತಿಗೌಡ ಹೇಳಿದ್ದೇನು..?
    ನಾನು ಎಲ್ಲಿಯೂ ಹೋಗಿಲ್ಲ. ನಾನು ಜೈಲಿನಿಂದ ಹಿಂದಿರುಗಿ ಬರೋವರೆಗೂ ತಾಯಿ ಮನೆಯಲ್ಲಿ ಇರಲು ಹೇಳಿದ್ದಾರೆ. ನನಗೆ ಕತ್ರಿಗುಪ್ಪೆಯ ಮನೆಯಲ್ಲಿರಲು ಸೇಫ್ಟಿ ಇಲ್ಲ. ಪತಿ ದುನಿಯಾ ವಿಜಯ್ ಬಂದ ಮೇಲೆ ನನ್ನ ಮೇಲಿರುವ ಆರೋಪಗಳಿಗೆ ಸ್ಪಷ್ಟನೆಯನ್ನು ಇಬ್ಬರು ನೀಡುತ್ತೇವೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ವಿಚಾರಿಸಿದ್ರೆ ಎಲ್ಲ ಮಾಹಿತಿಗಳು ಲಭ್ಯವಾಗುತ್ತವೆ ಎಂದು ಕೀರ್ತಿಗೌಡ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.


    ಕೀರ್ತಿ ಅವರ ಮಾತು ಕೇಳಿದ ಮೇಲೆ ಜೀವ ಬೆದರಿಕೆ ಏನಾದರೂ ಇದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಜೈಲಿನಲ್ಲಿರುವ ವಿಜಯ್ ಅವರ ಜಾಮೀನು ಅರ್ಜಿಯನ್ನು ಈ ಹಿಂದೆ ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಜಾಮೀನಿಗಾಗಿ ವಿಜಿ ಸೆಷನ್ಸ್ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸೆಷನ್ಸ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಅಕ್ಟೋಬರ್ 1ಕ್ಕೆ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.

    ಕೀರ್ತಿ ಗೌಡ ಅವರು ಕಳೆದು ನಾಲ್ಕು ದಿನಗಳಿಂದ ಮನೆಯಲ್ಲಿ ಇಲ್ಲ. ನಾವು ಕಾಲೇಜಿನಿಂದ ಬಂದ ಮೇಲೆ ಕೀರ್ತಿ ಅವರು ಮನೆಯಲ್ಲಿ ಇರಲಿಲ್ಲ. ಮನೆಯಲ್ಲಿ ಚಿನ್ನಾಭರಣ ಏನೂ ಇಲ್ಲ ಎಂದು ದುನಿಯಾ ವಿಜಯ್ ಮಗಳು ಪಬ್ಲಿಕ್ ಟಿವಿಗೆ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=YjxBslBdbNU&t=0s&index=2&list=PL96D6827AB409C8A9

  • ದುನಿಯಾ ವಿಜಿ ಎರಡನೇ ಪತ್ನಿ ಕೀರ್ತಿಗೌಡ ನಾಪತ್ತೆ!

    ದುನಿಯಾ ವಿಜಿ ಎರಡನೇ ಪತ್ನಿ ಕೀರ್ತಿಗೌಡ ನಾಪತ್ತೆ!

    ಬೆಂಗಳೂರು: ಜಿಮ್ ಟ್ರೈನರ್ ಮಾರುತಿ ಗೌಡ ಮೇಲೆ ದುನಿಯಾ ವಿಜಿ ಅವರ ಹಲ್ಲೆ ಪ್ರಕರಣ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ ಹೊರಬಿದ್ದಿದೆ.

    ಎರಡನೇ ಪತ್ನಿ ಕೀರ್ತಿ ಗೌಡ ನಾಲ್ಕು ದಿನಗಳಿಂದ ಮನೆಯಲ್ಲಿ ಇಲ್ಲ. ಮನೆಯಲ್ಲಿದ್ದ ಹಣ, 1 ಲಕ್ಷ ಬೆಲೆ ಬಾಳುವ ಒಡವೆ ದೋಚಿ ಪರಾರಿಯಾಗಿದ್ದಾರೆ ಎಂದು ದುನಿಯಾ ವಿಜಯ್ ಕುಟುಂಬದ ಆಪ್ತ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ.

    ಕೀರ್ತಿ ಕತ್ರಿಗುಪ್ಪಿಯಲ್ಲಿರುವ ಮನೆಗೆ ಬರುತ್ತಿಲ್ಲ. ಅಷ್ಟೇ ಅಲ್ಲದೇ ನಾಗರತ್ನ ಅವರು ಕೂಡ ನನಗೆ ನನ್ನ ಮಕ್ಕಳಿಗೆ ಜೀವ ಬೆದರಿಕೆ ಇದೆ ಎಂದು ಹೇಳುತ್ತಿದ್ದಾರೆ. ವಿಜಯ್ ಅವರ ಮಕ್ಕಳಾದ ಮೋನಿಕ ಹಾಗೂ ಇನ್ನಿಬ್ಬರು, ಕೀರ್ತಿ ಅವರು ನಮಗೆ ಧಮ್ಕಿ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

    ಈ ಬಗ್ಗೆ ದುನಿಯಾ ವಿಜಿ ಮಗಳು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ, ಕೀರ್ತಿಗೌಡ ಅವರು 4-5 ದಿನಗಳಿಂದ ಮನೆಯಲ್ಲಿ ಇಲ್ಲ. ಅವರು ಯಾವಾಗ ಹೋದರೋ ಗೊತ್ತಿಲ್ಲ. ನಾವು ಕಾಲೇಜಿಗೆ ಹೋಗಿದ್ದೇವು. ಮನೆಗೆ ಬಂದಾಗ ಮನೆಯಲ್ಲಿ ಅವರು ಮತ್ತು ಹಣ. ಒಡವೆ ಏನೂ ಇರಲಿಲ್ಲ. ನಿಮಗೆ ಎಷ್ಟು ವಿಷಯ ಗೊತ್ತಿದೆಯೋ ನನಗೂ ಅಷ್ಟೇ ಗೊತ್ತಿರುವುದು ಎಂದು ಸ್ಪಷ್ಟಪಡಿಸಿದ್ದಾರೆ.

    ಕೀರ್ತಿಗೌಡ ಸೋಮವಾರ ವಿಜಯ್ ಅವರನ್ನು ನೋಡಲು ಹೋಗಿದ್ದರು. ಈ ವೇಳೆ ಮಕ್ಕಳು ಶಾಲೆ-ಕಾಲೇಜಿಗೆ ಹೋಗಿರುತ್ತಾರೆ. ಶಾಲೆ, ಕಾಲೇಜು ಮುಗಿಸಿಕೊಂಡು ಬರುವಷ್ಟರಲ್ಲಿ ಕೀರ್ತೀಗೌಡ ಮನೆಯಲ್ಲಿ ಇರಲಿಲ್ಲ. ಜೀವ ಬೆದರಿಕೆಯಿಂದ ಇರುವುದಕ್ಕೆ ಭಯದಿಂದ ಎಲ್ಲಾದರೂ ಹೋಗಿರಬಹುದು ಅಥವಾ ವಿಜಿ ಅವರು ಇಲ್ಲದ ಕಾರಣ ಇವರ ಬಳಿ ಇರುವುದು ಬೇಡ ಎಂದು ಹೋಗಿರಬಹುದು, ವಿಜಯ್ ಅವರು ಬಂದ ಬಳಿಕ ಬರಬಹುದು ಎಂಬ ಮಾತುಗಳು ಕೇಳಿಬರುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಡಿಸ್ಚಾರ್ಜ್ ಆದ ಮಾರುತಿ ಗೌಡಾಗೆ ಮಾತಾಡಕ್ಕೂ ಆಗ್ತಿಲ್ಲ, ನಡೆಯೋಕೂ ಆಗ್ತಿಲ್ಲ!

    ಡಿಸ್ಚಾರ್ಜ್ ಆದ ಮಾರುತಿ ಗೌಡಾಗೆ ಮಾತಾಡಕ್ಕೂ ಆಗ್ತಿಲ್ಲ, ನಡೆಯೋಕೂ ಆಗ್ತಿಲ್ಲ!

    – ಕಿಟ್ಟಿಯಿಂದ ರಾಜಿ ಸಂಧಾನದ ಸುಳಿವು

    ಬೆಂಗಳೂರು: ನಟ ದುನಿಯಾ ವಿಜಿಯಿಂದ ಹಲ್ಲೆಗೊಳಗಾದ ಜಿಮ್ ಟ್ರೈನರ್ ಮಾರುತಿ ಗೌಡ ಅವರು ವಿಕ್ರಮ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆದ್ರೆ ಮಾತೋಡ್ತಾನೂ ಇಲ್ಲ. ನಡೆಯೋದಕ್ಕೂ ಆಗ್ತಿಲ್ಲ. ಈ ಮಧ್ಯೆ ಪಾನಿಪುರಿ ಕಿಟ್ಟಿ ರಾಜಿ ಸಂಧಾನದ ಸುಳಿವು ಕೊಟ್ಟಿದ್ದಾರೆ.

    ಇಂದು ದುನಿಯಾ ವಿಜಯ್ ಅವರ ಜಾಮೀನು ಅರ್ಜಿ ವಿಚಾರಣೆ ಬೆನ್ನಲ್ಲೇ ಡಿಸ್ಚಾರ್ಜ್ ಮಾಡಿದ್ದು, ಇದೀಗ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ದುನಿಯಾ ವಿಜಿಯಿಂದ ಹಲ್ಲೆಗೊಳಗಾದ ಮಾರುತಿ ಗೌಡ ಒಂದು ವಾರಗಳ ಬಳಿಕ ವಿಕ್ರಮ್ ಆಸ್ಪತ್ರೆಯಿಂದ ಶುಕ್ರವಾರ ರಾತ್ರಿ ಡಿಸ್ಚಾರ್ಜ್ ಆಗಿದ್ದಾರೆ. ಮಾರುತಿ ಗೌಡ ಅವರಿಗೆ ಹಲ್ಲೆ ವೇಳೆ ತುಟಿಗೆ ಮತ್ತು ಕಣ್ಣಿನ ಭಾಗಕ್ಕೆ ಹೊಡೆತ ಬಿದ್ದು ಊತ ಬಂದಿತ್ತು. ಈ ಹಿನ್ನೆಲೆ 15 ಹೊಲಿಗೆ ಬಿದ್ದಿದ್ದು, ಸದ್ಯ ಆರೋಗ್ಯದಲ್ಲಿ ಸುಧಾರಿಸಿದೆ. ಇದನ್ನೂ ಓದಿ:  ನಟ ದುನಿಯಾ ವಿಜಯ್ ಗೆ ಜಾಮೀನು?

    ಮಾರುತಿ ಗೌಡನಿಗೆ 15 ಹೊಲಿಗೆ ಬಿದ್ದಿರೋ ಕಾರಣದಿಂದಾಗಿ ಮಾತನಾಡಲು ಸಾಧ್ಯಾವಾಗದೇ ಓಡಾಡಲು ವೀಲ್ ಚೇರ್ ಬಳಸಿ ಮನೆ ತಲುಪಿದ್ದು, ಎರಡು ದಿನಕ್ಕೊಮ್ಮೆ ಆಸ್ಪತ್ರೆಯ ಭೇಟಿ ನೀಡಿ ಆರೋಗ್ಯ ಪರಿಶೀಲನೆ ಮಾಡಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ ಅಂತ ಚಿಕ್ಕಪ್ಪ ಪಾನಿಪುರಿ ಕಿಟ್ಟಿ ತಿಳಿಸಿದ್ದಾರೆ.

    ಮಾರುತಿ ಗೌಡ ಆಸ್ಪತ್ರೆಯಲ್ಲಿದ್ದಾಗಲೇ ಸಂಧಾನಕ್ಕಾಗಿ ದುನಿಯಾ ವಿಜಿಯ ಮೊದಲನೇ ಹೆಂಡತಿ ನಾಗರತ್ನ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ಬಗ್ಗೆ ಪಾನಿಪುರಿ ಕಿಟ್ಟಿಯನ್ನ ಪ್ರಶ್ನೆ ಮಾಡಿದ್ರೆ, ನಾಗರತ್ನ ಅವರು ನನ್ನ ಹತ್ತಿರ ಮಾತಾಡಿಲ್ಲ. ರಾಜಿ ಸಂಧಾನದ ಬಗ್ಗೆನೂ ನನಗೆ ಗೊತ್ತಿಲ್ಲ. ಸಂಧಾನ ಮಾಡಿಕೊಳ್ಳಲ್ಲ ಕಾನೂನು ಹೋರಾಟ ಮಾಡ್ತೇನೆ. ದುನಿಯಾ ವಿಜಿ ಮತ್ತು ಪತ್ನಿ ಸಂಧಾನಕ್ಕೆ ಬಂದರೆ ನನ್ನ ಮಗ ಗುಣವಾದ ಮೇಲೆ ಸಂಧಾನದ ಬಗ್ಗೆ ಮಾತಾಡೋಣ ಅಂತ ಹೇಳಿದ್ದರು. ಇದನ್ನೂ ಓದಿ: ದುನಿಯಾ ವಿಜಿಯಿಂದ ಹಲ್ಲೆಗೊಳಗಾಗಿದ್ದ ಮಾರುತಿ ಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಒಟ್ಟಿನಲ್ಲಿ ವಿಕ್ರಮ್ ಆಸ್ಪತ್ರೆಯಿಂದ ಮಾರುತಿಗೌಡ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯಕ್ಕೆ ಮಾರುತಿಗೌಡಗೆ ವೈದ್ಯರು ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ನಟ ದುನಿಯಾ ವಿಜಯ್ ಗೆ ಜಾಮೀನು?

    ನಟ ದುನಿಯಾ ವಿಜಯ್ ಗೆ ಜಾಮೀನು?

    ಬೆಂಗಳೂರು: ಜಿಮ್ ಟ್ರೈನರ್ ಮಾರುತಿಗೌಡ ಕಿಡ್ನಾಪ್, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಅವರಿಗೆ ಇಂದು ಸೆಷನ್ಸ್ ಕೋರ್ಟ್ ನಲ್ಲಿ ಜಾಮೀನು ಸಿಗುವ ಸಾಧ್ಯತೆಗಳಿವೆ.

    ಪ್ರಕರಣ ಸಂಬಂಧ ಜೈಲಿನಲ್ಲಿರುವ ವಿಜಯ್ ಅವರ ಜಾಮೀನು ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಜಾಮೀನಿಗಾಗಿ ವಿಜಿ ಸೆಷನ್ಸ್ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸೆಷನ್ಸ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದ್ದು, ದುನಿಯಾ ವಿಜಿಗೆ ಜಾಮೀನು ಸಿಗುವ ಸಾಧ್ಯತೆಗಳಿವೆ. ಯಾಕಂದ್ರೆ ಹಲ್ಲೆಗಳೊಳಗಾಗಿದ್ದ ಮಾರುತಿ ಗೌಡ ಶುಕ್ರವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ನಟ ದುನಿಯಾ ವಿಜಿ ಹಲ್ಲೆಯಿಂದ ವಿಕ್ರಮ್ ಆಸ್ಪತ್ರೆಯಲ್ಲಿ ಮಾರುತಿಗೌಡ ದಾಖಲಾಗಿದ್ದರು. ಆರು ದಿನಗಳ ಬಳಿಕ ನಿನ್ನೆ ರಾತ್ರಿ ಡಿಸ್ಚಾರ್ಜ್ ಆಗಿದ್ದಾರೆ. ಮಾರುತಿಗೌಡ ತುಟಿಗೆ ಗಾಯವಾಗಿ, ಕಣ್ಣು ಮತ್ತು ಮುಖ ಊತ ಬಂದಿತ್ತು. ಹೀಗಾಗಿ ಆರು ದಿನಗಳ ಕಾಲ ಚಿಕಿತ್ಸೆ ನೀಡಿ ತುಟಿಗೆ ಹದಿನೈದು ಹೊಲಿಗೆ ಹಾಕಲಾಗಿತ್ತು. ಸದ್ಯಕ್ಕೆ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಇದನ್ನೂ ಓದಿ: ಹಲ್ಲೆ ಮಾಡಿದ್ದನ್ನು ಪೊಲೀಸ್ರಿಗೆ ಹೇಳ್ಬೇಡ: ಮಾರುತಿ ಗೌಡಗೆ ವಿಜಿ ವಾರ್ನಿಂಗ್

    ಕಳೆದ ಶನಿವಾರ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಮಿಸ್ಟರ್ ಬೆಂಗಳೂರು ಬಾಡಿ ಬಿಲ್ಡಿಂಗ್ ಸ್ಪರ್ಧೆ ನಡೆಯುತಿತ್ತು. ಈ ಸ್ಪರ್ಧೆ ನೋಡಲು ದುನಿಯಾ ವಿಜಿ ತಮ್ಮ ತಂಡದೊಂದಿಗೆ ಬಂದಿದ್ದರು. ಈ ವೇಳೆ ಪಾನಿಪೂರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಮತ್ತು ದುನಿಯಾ ವಿಜಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಆದರೆ ಗಲಾಟೆ ವಿಕೋಪಕ್ಕೆ ತಿರುಗಿ ದುನಿಯಾ ವಿಜಯ್ ಗ್ಯಾಂಗ್, ಮಾರುತಿಗೌಡರ ಮೇಲೆ ಹಲ್ಲೆ ನಡೆಸಿ ಕಾರಿನಲ್ಲಿ ಹಾಕಿಕೊಂಡು ಕಿಡ್ನಾಪ್ ಮಾಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದುನಿಯಾ ವಿಜಿಯಿಂದ ಹಲ್ಲೆಗೊಳಗಾಗಿದ್ದ ಮಾರುತಿ ಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್

    ದುನಿಯಾ ವಿಜಿಯಿಂದ ಹಲ್ಲೆಗೊಳಗಾಗಿದ್ದ ಮಾರುತಿ ಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಬೆಂಗಳೂರು: ದುನಿಯಾ ವಿಜಯ್‍ನಿಂದ ಹಲ್ಲೆಗೊಳಗಾಗಿದ್ದ ಮಾರುತಿ ಗೌಡ ವಿಕ್ರಮ್ ಆಸ್ಪತ್ರೆಯಿಂದ ಶುಕ್ರವಾರ ರಾತ್ರಿ ಡಿಸ್ಚಾರ್ಜ್ ಆಗಿದ್ದಾರೆ.

    ನಟ ದುನಿಯಾ ವಿಜಿ ಹಲ್ಲೆಯಿಂದ ವಿಕ್ರಮ್ ಆಸ್ಪತ್ರೆಯಲ್ಲಿ ಮಾರುತಿಗೌಡ ದಾಖಲಾಗಿದ್ದರು. ಆರು ದಿನಗಳ ಬಳಿಕ ಡಿಸ್ಚಾರ್ಜ್ ಆಗಿದ್ದಾರೆ. ಮಾರುತಿಗೌಡ ತುಟಿಗೆ ಗಾಯವಾಗಿ, ಕಣ್ಣು ಮತ್ತು ಮುಖ ಊತ ಬಂದಿತ್ತು. ಹೀಗಾಗಿ ಆರು ದಿನಗಳ ಕಾಲ ಚಿಕಿತ್ಸೆ ನೀಡಿ ತುಟಿಗೆ ಹದಿನೈದು ಹೊಲಿಗೆ ಹಾಕಲಾಗಿತ್ತು. ಸದ್ಯಕ್ಕೆ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.

    ಕಳೆದ ಶನಿವಾರ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಮಿಸ್ಟರ್ ಬೆಂಗಳೂರು ಬಾಡಿ ಬಿಲ್ಡಿಂಗ್ ಸ್ಪರ್ಧೆ ನಡೆಯುತಿತ್ತು. ಈ ಸ್ಪರ್ಧೆ ನೋಡಲು ದುನಿಯಾ ವಿಜಿ ತಮ್ಮ ತಂಡದೊಂದಿಗೆ ಬಂದಿದ್ದರು. ಈ ವೇಳೆ ಪಾನಿಪೂರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಮತ್ತು ದುನಿಯಾ ವಿಜಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಆದರೆ ಗಲಾಟೆ ವಿಕೋಪಕ್ಕೆ ತಿರುಗಿ ದುನಿಯಾ ವಿಜಯ್ ಗ್ಯಾಂಗ್, ಮಾರುತಿಗೌಡರ ಮೇಲೆ ಹಲ್ಲೆ ನಡೆಸಿ ಕಾರಿನಲ್ಲಿ ಹಾಕಿಕೊಂಡು ಕಿಡ್ನಾಪ್ ಮಾಡಿತ್ತು.

    ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದಾಗಲೇ ಬುಧವಾರ ಪಬ್ಲಿಕ್ ಟಿವಿಯೊಂದಿಗೆ ಮಾರುತಿಗೌಡ ದುನಿಯಾ ವಿಜಿ ಕ್ರೂರ ಮುಖವನ್ನು ವಿವರಿಸಿದ್ದರು.  ಇದನ್ನೂ ಓದಿ: ಹಲ್ಲೆ ಮಾಡಿದ್ದನ್ನು ಪೊಲೀಸ್ರಿಗೆ ಹೇಳ್ಬೇಡ: ಮಾರುತಿ ಗೌಡಗೆ ವಿಜಿ ವಾರ್ನಿಂಗ್

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹಲ್ಲೆ ಮಾಡಿದ್ದನ್ನು ಪೊಲೀಸ್ರಿಗೆ ಹೇಳ್ಬೇಡ: ಮಾರುತಿ ಗೌಡಗೆ ವಿಜಿ ವಾರ್ನಿಂಗ್

    ಹಲ್ಲೆ ಮಾಡಿದ್ದನ್ನು ಪೊಲೀಸ್ರಿಗೆ ಹೇಳ್ಬೇಡ: ಮಾರುತಿ ಗೌಡಗೆ ವಿಜಿ ವಾರ್ನಿಂಗ್

    ಬೆಂಗಳೂರು: ನಟ ದುನಿಯಾ ವಿಜಯ್ ನನ್ನ ಮೇಲೆ ರಾಡ್ ನಿಂದ ಹಲ್ಲೆ ಮಾಡಿದ್ದಾರೆ ಎಂದು ಮಾರುತಿ ಗೌಡ ಹೇಳಿದ್ದಾರೆ.

    ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾರುತಿಗೌಡ ಅವರು ಪಬ್ಲಿಕ್ ಟಿವಿಯ ಜೊತೆ ಮಾತನಾಡಿ ದುನಿಯಾ ವಿಜಿ ಕ್ರೂರ ಮುಖವನ್ನು ವಿವರಿಸಿದ್ದಾರೆ.

    ಮಾರುತಿ ಗೌಡ ವಿವರಿಸಿದ್ದು ಹೀಗೆ:
    ವಿಜಿ ಬಂದು ನನ್ನ ಚಿಕ್ಕಪ್ಪ ಕಿಟ್ಟಿ ಎಲ್ಲಿ ಎಂದು ಕೇಳಿದರು. ಅದಕ್ಕೆ ನಾನು ಗೊತ್ತಿಲ್ಲ ಎಂದೆ. ಬಳಿಕ 2 ನಿಮಿಷ ಬಿಟ್ಟು 10 ಮಂದಿ ಹುಡುಗರು ಬಂದು ಹೊಡೆದು ನನ್ನನ್ನು ಕಾರಿನ ಬಳಿ ತಳ್ಳಿದರು. ಅಲ್ಲಿಯೇ ವಿಜಯ್ ಕೂಡ ನಿಂತಿದ್ದರು. ಬಳಿಕ ವಿಜಿ ನನ್ನನ್ನು ಕಾರಿನೊಳಗೆ ಹತ್ತಿಸಲು ಹೇಳಿದರು. ಅದರಂತೆ ಕಾರಿನೊಳಗೆ ನನ್ನನ್ನು ಎಳೆದುಕೊಂಡು ಹೋದರು.

    ಡ್ರೈವರ್ ಪ್ರಸಾದ್, ವಿಜಿ, ಮಣಿ ಹಾಗೂ ದುನಿಯಾ ವಿಜಿ ಮಗ ಕಾರಿನಲ್ಲಿದ್ದರು. ಯಾವುದೇ ಕಾರಣಗಳನ್ನು ಹೇಳದೆ ನನಗೆ ಹಾಗೂ ನನ್ನ ಚಿಕ್ಕಪ್ಪ ಪಾನಿಪುರಿ ಕಿಟ್ಟಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜ್ಯಾಕ್ ರಾಡ್‍ನಲ್ಲಿ ಹಲ್ಲೆ ಮಾಡಿದರು. ಈ ಎಲ್ಲಾ ಘಟನೆಯನ್ನು ವಿಜಿ ಅವರ ಮಗ ವಿಡಿಯೋ ಮಾಡಿದ್ದಾನೆ. ಕಾರಿನಲ್ಲಿ ತುಂಬಾ ಸುತ್ತಾಡಿಸಿದ್ದಾರೆ. ನಾನು ಎಲ್ಲಿದ್ದೇನೆ ಎನ್ನುವುದು ಗೊತ್ತಾಗಲಿಲ್ಲ. ಆರ್.ಆರ್.ನಗರ ಆರ್ಚ್ ಅನ್ನು ಮಾತ್ರ ನಾನು ಕೊನೆಯದಾಗಿ ನೋಡಿದೆ.

    ಇದೇ ವೇಳೆ ನನ್ನ ಚಿಕ್ಕಪ್ಪ ವಿಜಿಗೆ ಫೋನ್ ಮಾಡಿದಾಗಲೂ ಅವರಿಗೆ ಚೆನ್ನಾಗಿ ಬೈದು ನಿಂದಿಸಿದರು. ನಂತರ ಪೊಲೀಸರು ಕರೆ ಮಾಡಿ ವಿಜಯ್‍ಗೆ ಬರಲು ಹೇಳಿದಾಗ, ನಿಜ ಹೇಳಬಾರದು, ನಾನು ನಿನಗೆ ಏನೂ ಮಾಡಿಲ್ಲ ಎಂದು ಹೇಳುವಂತೆ ಸೂಚಿಸಿ ಎಚ್ಚರಿಕೆ ನೀಡಿದರು. ಹೆಚ್ಚಿನ ಹಲ್ಲೆ ಮಾಡಿದ್ದರಿಂದ ನನಗೆ ಕಣ್ಣುಗಳು ಸ್ಪಷ್ಟವಾಗಿ ಕಾಣಿಸುತ್ತಿರಲಿಲ್ಲ, ಮಂಜಾಗಿ ಕಾಣಿಸುತ್ತಿತ್ತು. ಇದೀಗ ನನ್ನ ತುಟಿಗೆ 16 ಸ್ಟಿಚ್ ಹಾಕಿದ್ದಾರೆ. ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗಬೇಕು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv