ನಟ ದುನಿಯಾ ವಿಜಯ್ (Duniya Vijay) ಗೆ ಲೈಫ್ ಕೊಟ್ಟ ಹೆಗ್ಗಳಿಗೆ ದುನಿಯಾ ಸೂರಿ (Suri) ಅವರದ್ದು. ದುನಿಯಾ ಸಿನಿಮಾ ಮೂಲಕ ವಿಜಯ್ ಅವನ್ನು ಹೀರೋ ಮಾಡಿದವರು ಸೂರಿ. ದುನಿಯಾ ಮೂಲಕ ವಿಜಯ್ ಗೆ ಸಿನಿಮಾ ಜಗತ್ತಿಗೆ ಹೀರೋ ಆಗಿ ಪರಿಚಯಿಸಿದವರು. ಈಗ ವಿಜಯ್ ಮಗಳನ್ನು ನಾಯಕಿಯನ್ನಾಗಿ ಮಾಡುತ್ತಿದ್ದಾರೆ ಸೂರಿ.
ಕೆಂಡಸಂಪಿಗೆ ಸಿನಿಮಾದ ನಂತರ ಇದರ ಪಿಕ್ವೇಲ್ ಕಥೆಯನ್ನು ಹೇಳುವುದಾಗಿ ಒಂಬತ್ತು ವರ್ಷಗಳ ಹಿಂದೆಯೇ ಸೂರಿ ಪ್ರಕಟಿಸಿದ್ದರು. ಅದಕ್ಕೆ ಕಾಗೆ ಬಂಗಾರ ಅಂತಾನೂ ಹೆಸರು ಇಟ್ಟಿದ್ದರು. ದೊಡ್ಡ ದೊಡ್ಡ ಪ್ರಾಜೆಕ್ಟ್ ಗಳನ್ನು ಸೂರಿ ಒಪ್ಪಿಕೊಂಡ ಕಾರಣದಿಂದಾಗಿ ಈ ಸಿನಿಮಾ ಮಾಡಿರಲಿಲ್ಲ. ಇದೀಗ ಕಾಗೆ ಬಂಗಾರಕ್ಕೆ ಮುಹೂರ್ತ ಕೂಡಿ ಬಂದಿದೆ.
ವಿರಾಟ್ ಎಂಬ ಹೊಸ ಪ್ರತಿಭೆಗಾಗಿ ಸಿನಿಮಾ ಮಾಡಲು ಹೊರಟಿದ್ದರು ಸೂರಿ. ಈಗ ಅದೇ ಚಿತ್ರಕ್ಕೆ ದುನಿಯಾ ವಿಜಯ್ ಅವರ ಮಗಳು ರಿತಾನ್ಯಳನ್ನು (Ritanya) ನಾಯಕಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ ಎನ್ನುವ ವಿಚಾರ ಕೇಳಿ ಬರುತ್ತಿದೆ. ಅಧಿಕೃತವಾಗಿ ಮಾಹಿತಿ ಕೊಡದೇ ಇದ್ದರೂ ಸುದ್ದಿ ಬಲವಾಗಿದೆ.
ಅಂದು ವಿಜಯ್ ಜೊತೆ ಸಿನಿಮಾ ಮಾಡಿ ಯಶಸ್ಸು ತಂದುಕೊಟ್ಟಿದ್ದ ಸೂರಿ, ಇಂದು ವಿಜಯ್ ಮಗಳಿಗೂ ಅಂಥದ್ದೊಂದು ಯಶಸ್ಸು ಕೊಡ್ತಾರಾ ಕಾದು ನೋಡಬೇಕಿದೆ. ಒಟ್ನಲ್ಲಿ ಸುದ್ದಿಯಂತೂ ಭರ್ಜರಿಯಾಗಿದೆ.
ಸ್ಯಾಂಡಲ್ವುಡ್ (Sandalwood) ನಟ ದುನಿಯಾ ವಿಜಯ್ (Duniya Vijay) ಪುತ್ರಿಯರಾದ ರಿತಾನ್ಯಾ ಮತ್ತು ಮೋನಿಷಾ (Monisha Vijay) ಸ್ಯಾಂಡಲ್ವುಡ್ಗೆ ಪಾದಾರ್ಪಣೆ ಮಾಡಲು ರೆಡಿಯಾಗಿದ್ದಾರೆ. ಇದರ ನಡುವೆ ವಿಜಯ್ 2ನೇ ಪುತ್ರಿ ಮೋನಿಷಾ ಹೊಸ ಹೇರ್ ಸ್ಟೈಲಿನಲ್ಲಿ ಕಾಣಿಸಿಕೊಳ್ಳುವ ಮೂಲಕ ಗಮನ ಸೆಳೆಯುತ್ತಿದ್ದಾರೆ.
ವಿಜಯ್ ಕಿರಿಯ ಮಗಳು ಮೋನಿಷಾ ವಿದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ನಟನೆಗೆ ಸಂಬಂಧಿಸಿದ ಕೋರ್ಸ್ ಕಲಿಯುತ್ತಿದ್ದಾರೆ. ಈ ನಡುವೆ ಮೋನಿಷಾ ಸ್ಟೈಲೀಶ್ ಆಗಿ ಕಾಣಿಸಿಕೊಳ್ಳುವ ಮೂಲಕ ಪಡ್ಡೆಹುಡುಗರ ನಿದ್ದೆ ಕದ್ದಿದ್ದಾರೆ.
ಮೋನಿಷಾ ವಿಜಯ್ ನಯಾ ಲುಕ್ ನೋಡಿ ವಾವ್ ನೂಡಲ್ಸ್ ಹೇರ್ ಸ್ಟೈಲ್ ಎಂದು ನೆಟ್ಟಿಗರು ಬಣ್ಣಿಸಿದ್ದಾರೆ. ನೀವು ಹೀಗೆ ರೆಡಿಯಾದ್ರೆ ನಮ್ಮಂತಹ ಹುಡುಗರ ಗತಿಯೇನು? ಎಂದು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ:ಮೊದಲ ಬಾರಿಗೆ ದ್ವಿಪಾತ್ರದಲ್ಲಿ ನಟಿಸಲಿದ್ದಾರೆ ವಿಜಯ್ ದೇವರಕೊಂಡ
ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ (Duniya Vijay) ನಟನೆಯ 29ನೇ ಸಿನಿಮಾಗೆ ರಾಜ್ ಬಿ. ಶೆಟ್ಟಿ (Raj B Shetty) ಎಂಟ್ರಿ ಕೊಟ್ಟ ಬೆನ್ನಲ್ಲೇ ‘ಬಿಗ್ ಬಾಸ್’ ಖ್ಯಾತಿಯ (Bigg Boss) ರಾಕೇಶ್ ಅಡಿಗ (Rakesh Adiga) ಕೂಡ ಕೈಜೋಡಿಸಿದ್ದಾರೆ. ಮುಖ್ಯ ಪಾತ್ರವೊಂದಕ್ಕೆ ರಾಕೇಶ್ ಬಣ್ಣ ಹಚ್ಚಿದ್ದಾರೆ.
ಈಗ ಚಿತ್ರರಂಗದಲ್ಲಿ ಮಲ್ಟಿಸ್ಟಾರ್ ಸಿನಿಮಾಗಳದ್ದೇ ದರ್ಬಾರ್. ಪಾತ್ರ ಚೆನ್ನಾಗಿದ್ದರೆ ಯಾರದೇ ಸ್ಟಾರ್ ನಟರ ಸಿನಿಮಾ ಆಗಿದ್ರೂ ಮತ್ತೊಂದಿಷ್ಟು ಸ್ಟಾರ್ಗಳು ಎಂಟ್ರಿ ಕೊಡ್ತಾರೆ. ಇದೀಗ ದುನಿಯಾ ವಿಜಯ್ ಸಿನಿಮಾದಲ್ಲಿ ಪ್ರತಿಭಾನ್ವಿತ ಕಲಾವಿದರು ಸೇರಿಕೊಳ್ತಿದ್ದಾರೆ.
ಮೂಲಗಳ ಪ್ರಕಾರ, ರಾಜ್ ಬಿ. ಶೆಟ್ಟಿ ಸಹೋದರನ ಪಾತ್ರದಲ್ಲಿ ರಾಕೇಶ್ ನಟಿಸುತ್ತಿದ್ದಾರೆ ಎನ್ನಲಾಗಿದೆ. ಈಗಾಗಲೇ ಚಿತ್ರೀಕರಣ ಶುರುವಾಗಿದ್ದು, ಫೈಟ್ ಸೀಕ್ವೆನ್ಸ್ ಶೂಟಿಂಗ್ ಮಾಡಲಾಗಿದೆ. ವಿಭಿನ್ನ ಪಾತ್ರದಲ್ಲಿ ರಾಕೇಶ್ ನಟಿಸಿದ್ದಾರೆ.
ಪುತ್ರಿ ರಿತಾನ್ಯಾರನ್ನು ಈ ಚಿತ್ರದ ಮೂಲಕ ವಿಜಯ್ ಲಾಂಚ್ ಮಾಡುತ್ತಿದ್ದಾರೆ. ‘ಕಾಟೇರ’ (Kaatera Film) ಚಿತ್ರದ ರೈಟರ್ ಜಡೇಶ್ ಕೆ. ಹಂಪಿ ಅವರು ದುನಿಯಾ ವಿಜಯ್ ಮತ್ತು ರಚಿತಾ ರಾಮ್ ಸಿನಿಮಾಗೆ ನಿರ್ದೇಶನ ಮಾಡ್ತಿದ್ದಾರೆ.ಇದನ್ನೂ ಓದಿ:ಮಿಸ್ಟರ್ ರೈಟ್, ನೀನು ನನ್ನ ಬೆಳಕು- ಚಿರುಗೆ ಮೇಘನಾ ರಾಜ್ ವಿಶ್
ಅಂದಹಾಗೆ, ನಾನು ಮತ್ತು ಗುಂಡ 2, ಆರ್ ಜೆ ಪ್ರದೀಪ್ ಜೊತೆ ಹೊಸ ಸಿನಿಮಾ ಸೇರಿದಂತೆ ಹಲವು ಚಿತ್ರಗಳು ರಾಕೇಶ್ ಅಡಿಗ ಕೈಯಲ್ಲಿವೆ.
ನಟ ದುನಿಯಾ ವಿಜಯ್ ಬೆಂಗಳೂರಿನಿಂದ ಕಾಲ್ನಡಿಗೆಯಲ್ಲಿ ಹೊರಟು ನಂಜನಗೂಡಿನ ನಂಜುಂಡೇಶ್ವರ ದರ್ಶನ ಪಡೆದಿದ್ದಾರೆ. ಸತತ ಐದು ದಿನಗಳ ಕಾಲ ತಮ್ಮ ಸಂಗಡಿಗರ ಜೊತೆ ನಡೆದುಕೊಂಡೇ ನಂಜನಗೂಡು ತಲುಪಿದ್ದಾರೆ. ಹಗಲು ರಾತ್ರಿ ಲೆಕ್ಕಿಸದೇ ಪಾದಯಾತ್ರೆ ಮಾಡಿದ್ದಾರೆ ವಿಜಯ್.
ಸದ್ಯ ಭೀಮ ಸಿನಿಮಾದ ಶೂಟಿಂಗ್ ಮುಗಿಸಿರುವ ವಿಜಯ್, ಹೊಸ ಸಿನಿಮಾದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಕಾಟೇರ ಚಿತ್ರಕ್ಕೆ ಕಥೆ ಬರೆದಿದ್ದ ಜಡೇಶ್ ಹಂಪಿ ನಿರ್ದೇಶನದಲ್ಲಿ ಮೂಡಿ ಬರಲಿರುವ ಹೊಸ ಸಿನಿಮಾದ ಕೆಲಸದಲ್ಲೂ ಅವರು ತೊಡಗಿಸಿಕೊಂಡಿದ್ದಾರೆ. ಈ ಹೊಸ ಚಿತ್ರಕ್ಕೆ ಮೊನ್ನೆಯಷ್ಟೇ ರಾಜ್ ಬಿ ಶೆಟ್ರಿ (Raj B Shetty) ಎಂಟ್ರಿ ಕೊಟ್ಟಿದ್ದಾರೆ. ಈ ಸಿನಿಮಾದಲ್ಲಿ ಅವರು ಹೊಸ ಬಗೆಯ ಪಾತ್ರ ಮಾಡಲಿದ್ದಾರೆ. ಆ ಪಾತ್ರ ಏನು ಅನ್ನುವುದನ್ನು ಚಿತ್ರತಂಡವೇ ಅಧಿಕೃತ ಮಾಹಿತಿ ನೀಡಲಿದೆ.
ದುನಿಯಾ ವಿಜಯ್ ಮತ್ತು ರಚಿತಾ ರಾಮ್ (Rachita Ram) ಕಾಂಬಿನೇಷನ್ ನ ಹೊಸ ಚಿತ್ರಕ್ಕೆ ಬೆಂಗಳೂರಿನ ದೇವಸ್ಥಾನದಲ್ಲಿ ಮೊನ್ನೆಯಷ್ಟೇ ಮುಹೂರ್ತವಾಗಿದೆ (Muhurta). ಇನ್ನೂ ಚಿತ್ರಕ್ಕೆ ಹೆಸರು ಇಟ್ಟಿಲ್ಲವಾದರೂ, ಈ ಕಾಂಬಿನೇಷನ್ ನ 2ನೇ ಚಿತ್ರ ಇದಾಗಿದೆ. ಹಾಗಾಗಿ ಸಹಜವಾಗಿ ಕುತೂಹಲಕ್ಕೆ ಕಾರಣವಾಗಿದೆ.
ಈ ಸಿನಿಮಾದ ಮತ್ತೊಂದು ವಿಶೇಷತೆ ಅಂದರೆ, ದುನಿಯಾ ವಿಜಯ್ (Duniya Vijay) ಪುತ್ರಿ ಮೋನಿಕಾ (Monica Vijay) ಈ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮೋನಿಕಾ ಚಿತ್ರೋದ್ಯಮಕ್ಕೆ ಬರುತ್ತಾರೆ ಎಂಬ ಸುದ್ದಿ ಕೆಲದಿನಗಳಿಂದ ಹರಿದಾಡಿತ್ತು. ಇದೀಗ ಅಂತೆ ಕಂತೆ ಸುದ್ದಿಗೆ ಸ್ಪಷ್ಟನೆ ಸಿಕ್ಕಿದೆ. ಅಪ್ಪನ ನಟನೆಯ 29ನೇ ಸಿನಿಮಾದಲ್ಲಿ ಮಗಳು ಮೋನಿಕಾ ಕೂಡ ನಟಿಸಲಿದ್ದಾರೆ.
ಈ ಸಿನಿಮಾವನ್ನು ಕೆ.ವಿ ಸತ್ಯಪ್ರಕಾಶ್ ನಿರ್ಮಾಣ ಮಾಡುತ್ತಿದ್ದರೆ, ಜಡೇಶ್ ಕೆ.ಹಂಪಿ ಅವರ ನಿರ್ದೇಶನವಿದೆ. ಈ ಹಿಂದೆ ‘ಜಾನಿ ಮೇರಾ ನಾಮ್ ಪ್ರೀತಿ ಮೇರಾ ಕಾಮ್’ ಎಂಬ ಚಿತ್ರದಲ್ಲಿ ದುನಿಯಾ ವಿಜಯ್ ಮತ್ತು ರಚಿತಾ ರಾಮ್ ನಟಿಸಿದ್ದರು. ಈಗ ಹಲವು ವರ್ಷಗಳ ನಂತರ ಈ ಜೋಡಿ ಒಂದಾಗುತ್ತಿದೆ. ಹಾಗಾಗಿ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.
ಕಾಟೇರ ಚಿತ್ರಕ್ಕೆ ಕಥೆ ಬರೆದಿದ್ದ ಜಡೇಶ್ ಹಂಪಿ ನಿರ್ದೇಶನದಲ್ಲಿ ಮೂಡಿ ಬರಲಿರುವ, ದುನಿಯಾ ವಿಜಯ್ ನಾಯಕನಾಗಿ ನಟಿಸಲಿರುವ ಹೊಸ ಚಿತ್ರಕ್ಕೆ ರಾಜ್ ಬಿ ಶೆಟ್ರಿ (Raj B Shetty) ಎಂಟ್ರಿ ಕೊಟ್ಟಿದ್ದಾರೆ. ಈ ಸಿನಿಮಾದಲ್ಲಿ ಅವರು ಹೊಸ ಬಗೆಯ ಪಾತ್ರ ಮಾಡಲಿದ್ದಾರೆ. ಆ ಪಾತ್ರ ಏನು ಅನ್ನುವುದನ್ನು ಚಿತ್ರತಂಡವೇ ಅಧಿಕೃತ ಮಾಹಿತಿ ನೀಡಲಿದೆ.
ದುನಿಯಾ ವಿಜಯ್ ಮತ್ತು ರಚಿತಾ ರಾಮ್ (Rachita Ram) ಕಾಂಬಿನೇಷನ್ ನ ಹೊಸ ಚಿತ್ರಕ್ಕೆ ಬೆಂಗಳೂರಿನ ದೇವಸ್ಥಾನದಲ್ಲಿ ಮೊನ್ನೆಯಷ್ಟೇ ಮುಹೂರ್ತವಾಗಿದೆ (Muhurta). ಇನ್ನೂ ಚಿತ್ರಕ್ಕೆ ಹೆಸರು ಇಟ್ಟಿಲ್ಲವಾದರೂ, ಈ ಕಾಂಬಿನೇಷನ್ ನ 2ನೇ ಚಿತ್ರ ಇದಾಗಿದೆ. ಹಾಗಾಗಿ ಸಹಜವಾಗಿ ಕುತೂಹಲಕ್ಕೆ ಕಾರಣವಾಗಿದೆ.
ಈ ಸಿನಿಮಾದ ಮತ್ತೊಂದು ವಿಶೇಷತೆ ಅಂದರೆ, ದುನಿಯಾ ವಿಜಯ್ (Duniya Vijay) ಪುತ್ರಿ ಮೋನಿಕಾ (Monica Vijay) ಈ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮೋನಿಕಾ ಚಿತ್ರೋದ್ಯಮಕ್ಕೆ ಬರುತ್ತಾರೆ ಎಂಬ ಸುದ್ದಿ ಕೆಲದಿನಗಳಿಂದ ಹರಿದಾಡಿತ್ತು. ಇದೀಗ ಅಂತೆ ಕಂತೆ ಸುದ್ದಿಗೆ ಸ್ಪಷ್ಟನೆ ಸಿಕ್ಕಿದೆ. ಅಪ್ಪನ ನಟನೆಯ 29ನೇ ಸಿನಿಮಾದಲ್ಲಿ ಮಗಳು ಮೋನಿಕಾ ಕೂಡ ನಟಿಸಲಿದ್ದಾರೆ.
ಈ ಸಿನಿಮಾವನ್ನು ಕೆ.ವಿ ಸತ್ಯಪ್ರಕಾಶ್ ನಿರ್ಮಾಣ ಮಾಡುತ್ತಿದ್ದರೆ, ಜಡೇಶ್ ಕೆ.ಹಂಪಿ ಅವರ ನಿರ್ದೇಶನವಿದೆ. ಈ ಹಿಂದೆ ‘ಜಾನಿ ಮೇರಾ ನಾಮ್ ಪ್ರೀತಿ ಮೇರಾ ಕಾಮ್’ ಎಂಬ ಚಿತ್ರದಲ್ಲಿ ದುನಿಯಾ ವಿಜಯ್ ಮತ್ತು ರಚಿತಾ ರಾಮ್ ನಟಿಸಿದ್ದರು. ಈಗ ಹಲವು ವರ್ಷಗಳ ನಂತರ ಈ ಜೋಡಿ ಒಂದಾಗುತ್ತಿದೆ. ಹಾಗಾಗಿ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.
ಸಂಜು ವೆಡ್ಸ್ ಗೀತಾ 2 ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ನಟಿ ರಚಿತಾ ರಾಮ್, ಈ ನಡುವೆ ದುನಿಯಾ ವಿಜಯ್ ನಟನೆಯ ಹೊಸ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ರಚಿತಾ ಅವರದ್ದು ನಲವತ್ತರ ವಯಸ್ಸಿನ ಪಾತ್ರ ಎನ್ನುವುದು ಬಹಿರಂಗವಾಗಿದೆ. ಸದಾ ಗ್ಲಾಮ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದ ರಚ್ಚು, ಈ ಬಾರಿ ವಿಭಿನ್ನ ಪಾತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ಜಂಟಲ್ ಮ್ಯಾನ್, ಗುರುಶಿಷ್ಯರು ಚಿತ್ರಗಳ ನಿರ್ದೇಶಕ ಹಾಗೂ ಕಾಟೇರ ಚಿತ್ರದ ಲೇಖಕ ಜಡೇಶ ಕೆ ಹಂಪಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಮಹಾಲಕ್ಷ್ಮೀಪುರದ ಶ್ರೀವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ನಡೆಯಿತು. ರಚಿತಾರಾಮ್ ಈ ಚಿತ್ರದ ನಾಯಕಿಯಾಗಿ ನಟಿಸುತ್ತಿದ್ದು, ದುನಿಯಾ ವಿಜಯ್ ಪುತ್ರಿ ರಿತನ್ಯ(ಮೋನಿಕಾ) ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. “ಡೇರ್ ಡೆವಿಲ್ ಮುಸ್ತಫಾ” ಖ್ಯಾತಿಯ ಶಿಶಿರ್ ಸಹ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಇದು ನಾನು ಕಂಡ, ಕೇಳಿದ ಹಾಗೂ ನೋಡಿದ ನೈಜ ಕಥೆ ಎಂದು ಮಾತನಾಡಿದ ನಿರ್ದೇಶಕ ಜಡೇಶ ಕೆ ಹಂಪಿ, ಇದು ಆಳಿದವರ ಕಥೆಯಲ್ಲ. ಅಳಿದು ಉಳಿದವರ ಕಥೆ. ಕೋಲಾರ ಭಾಗದಲ್ಲಿ ನಡೆಯುವ ಕಥೆಯಾಗುವುದರಿಂದ ಸಂಭಾಷಣೆ ಕೋಲಾರದ ಭಾಷೆಯಲ್ಲೇ ಇರುತ್ತದೆ. ಮಾಸ್ತಿ ಅವರು ಸಂಭಾಷಣೆ ಬರೆಯುತ್ತಿದ್ದಾರೆ. ಅವರು ಕೋಲಾರದವರೆ ಆಗಿರುವುದು ವಿಶೇಷ.ಇದು 90 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಶಿವರಾಮ ಕಾರಂತರ “ಚೋಮನ ದುಡಿ”ಯ ಚೋಮನ ಪಾತ್ರ ಈ ಚಿತ್ರಕ್ಕೆ ಸ್ಪೂರ್ತಿ. ಹಾಗಂತ “ಚೋಮನ ದುಡಿ” ಚಿತ್ರಕ್ಕೂ ಈ ಚಿತ್ರಕ್ಕೂ ಸಂಬಂಧವಿಲ್ಲ. ಇನ್ನು ಈ ಚಿತ್ರವನ್ನು ಜಗದೀಶ್ ಅವರು ನಿರ್ಮಿಸಬೇಕಿತ್ತು. ಕಾರಣಾಂತರದಿಂದ ಆಗಲಿಲ್ಲ. ಆನಂತರ ಸ್ನೇಹಿತರೊಬ್ಬರ ಮೂಲಕ ಸತ್ಯಪ್ರಕಾಶ್ ಅವರ ಪರಿಚಯವಾಯಿತು. ಅವರು ಹಾಗೂ ಅವರ ಮಗ ಸೂರಜ್ ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡರು. ಕೇವಲ ಇಪ್ಪತ್ತು ದಿನಗಳಲ್ಲಿ ಚಿತ್ರಕ್ಕೆ ಚಾಲನೆ ದೊರಕ್ಕಿದೆ. ಬೆಂಗಳೂರಿನಲ್ಲಿ ಅದ್ದೂರಿ ಸೆಟ್ ಹಾಕಲಾಗುತ್ತಿದೆ. ಉಳಿದಂತೆ ಕೋಲಾರ, ಮೈಸೂರಿನಲ್ಲೂ ಚಿತ್ರೀಕರಣ ನಡೆಯಲಿದೆ. ನಾಯಕ ವಿಜಯ್ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುತ್ತಾರೆ ನಿರ್ದೇಶಕರು.
ಈ ಚಿತ್ರದ ಮತ್ತೊಂದು ವಿಶೇಷವೆಂದರೆ ತಂದೆ – ಮಗ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ತಂದೆ – ಮಗಳು ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲೂ ದುನಿಯಾ ವಿಜಯ್ ಮಗಳು, ಮಗಳ ಪಾತ್ರದಲ್ಲೇ ಅಭಿನಯಿಸುತ್ತಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸಿದ್ದ ‘ಸಾರಥಿ’ ಚಿತ್ರವನ್ನು ನಿರ್ಮಿಸಿದ್ದ ಕೆ.ವಿ.ಸತ್ಯಪ್ರಕಾಶ್ (Satya Prakash) ಅವರು ಹನ್ನೆರಡು ವರ್ಷಗಳ ನಂತರ ಸಾರಥಿ ಫಿಲಂಸ್ ಮೂಲಕ ನೂತನ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ನಿರ್ಮಾಣಕ್ಕೆ ಸತ್ಯಪ್ರಕಾಶ್ ಅವರ ಪುತ್ರ ಸೂರಜ್ ಗೌಡ ಅವರು ಸಾಥ್ ನೀಡುತ್ತಿದ್ದಾರೆ. ಜಂಟಲ್ ಮ್ಯಾನ್, ಗುರುಶಿಷ್ಯರು ಚಿತ್ರಗಳ ನಿರ್ದೇಶಕ ಹಾಗೂ ಕಾಟೇರ ಚಿತ್ರದ ಲೇಖಕ ಜಡೇಶ ಕೆ ಹಂಪಿ (Jadesh Hampi)ನಿರ್ದೇಶನದ ಹಾಗೂ ದುನಿಯಾ ವಿಜಯ್ (Duniya Vijay) ನಾಯಕರಾಗಿ ನಟಿಸುತ್ತಿರುವ 29 ನೇ ಚಿತ್ರ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಮಹಾಲಕ್ಷ್ಮೀಪುರದ ಶ್ರೀವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಆರಂಭವಾಯಿತು. ಶಾಸಕ ಶ್ರೀ ಗೋಪಲಯ್ಯ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಚಾಲನೆ ನೀಡಿದರು. ನಿರ್ದೇಶಕ ತರುಣ್ ಸುಧೀರ್ ಆಕ್ಷನ್ ಕಟ್ ಹೇಳಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ರಚಿತಾರಾಮ್ ಈ ಚಿತ್ರದ ನಾಯಕಿಯಾಗಿ ನಟಿಸುತ್ತಿದ್ದು, ದುನಿಯಾ ವಿಜಯ್ ಪುತ್ರಿ ರಿತನ್ಯ(ಮೋನಿಕಾ) ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಡೇರ್ ಡೆವಿಲ್ ಮುಸ್ತಫಾ ಖ್ಯಾತಿಯ ಶಿಶಿರ್ ಸಹ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮುಹೂರ್ತ ಸಮಾರಂಭದ ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.
ಇದು ನಾನು ಕಂಡ, ಕೇಳಿದ ಹಾಗೂ ನೋಡಿದ ನೈಜ ಕಥೆ ಎಂದು ಮಾತನಾಡಿದ ನಿರ್ದೇಶಕ ಜಡೇಶ ಕೆ ಹಂಪಿ, ಇದು ಆಳಿದವರ ಕಥೆಯಲ್ಲ. ಅಳಿದು ಉಳಿದವರ ಕಥೆ. ಕೋಲಾರ ಭಾಗದಲ್ಲಿ ನಡೆಯುವ ಕಥೆಯಾಗುವುದರಿಂದ ಸಂಭಾಷಣೆ ಕೋಲಾರದ ಭಾಷೆಯಲ್ಲೇ ಇರುತ್ತದೆ. ಮಾಸ್ತಿ ಅವರು ಸಂಭಾಷಣೆ ಬರೆಯುತ್ತಿದ್ದಾರೆ. ಅವರು ಕೋಲಾರದವರೆ ಆಗಿರುವುದು ವಿಶೇಷ.ಇದು 90 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಶಿವರಾಮ ಕಾರಂತರ “ಚೋಮನ ದುಡಿ”ಯ ಚೋಮನ ಪಾತ್ರ ಈ ಚಿತ್ರಕ್ಕೆ ಸ್ಪೂರ್ತಿ. ಹಾಗಂತ “ಚೋಮನ ದುಡಿ” ಚಿತ್ರಕ್ಕೂ ಈ ಚಿತ್ರಕ್ಕೂ ಸಂಬಂಧವಿಲ್ಲ. ಇನ್ನು ಈ ಚಿತ್ರವನ್ನು ಜಗದೀಶ್ ಅವರು ನಿರ್ಮಿಸಬೇಕಿತ್ತು. ಕಾರಣಾಂತರದಿಂದ ಆಗಲಿಲ್ಲ. ಆನಂತರ ಸ್ನೇಹಿತರೊಬ್ಬರ ಮೂಲಕ ಸತ್ಯಪ್ರಕಾಶ್ ಅವರ ಪರಿಚಯವಾಯಿತು. ಅವರು ಹಾಗೂ ಅವರ ಮಗ ಸೂರಜ್ ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡರು. ಕೇವಲ ಇಪ್ಪತ್ತು ದಿನಗಳಲ್ಲಿ ಚಿತ್ರಕ್ಕೆ ಚಾಲನೆ ದೊರಕ್ಕಿದೆ. ಬೆಂಗಳೂರಿನಲ್ಲಿ ಅದ್ದೂರಿ ಸೆಟ್ ಹಾಕಲಾಗುತ್ತಿದೆ. ಉಳಿದಂತೆ ಕೋಲಾರ, ಮೈಸೂರಿನಲ್ಲೂ ಚಿತ್ರೀಕರಣ ನಡೆಯಲಿದೆ. ನಾಯಕ ವಿಜಯ್ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಚಿತಾರಾಮ್ ಈ ಚಿತ್ರದ ನಾಯಕಿ. ದುನಿಯಾ ವಿಜಯ್ ಪುತ್ರಿ ಮೋನಿಕಾ ಈ ಚಿತ್ರದ ಮೂಲಕ ರಿತನ್ಯ ಎಂದು ಹೆಸರು ಬದಲಾವಣೆ ಮಾಡಿಕೊಂಡು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಶಿಶಿರ್ ಕೂಡ ಮುಖ್ಯಪಾತ್ರದಲ್ಲಿದ್ದಾರೆ. ಸ್ವಾಮಿ ಗೌಡ ಛಾಯಾಗ್ರಹಣ ಹಾಗೂ ಮಾಸ್ತಿ ಅವರ ಸಂಭಾಷಣೆ ಈ ಚಿತ್ರಕ್ಕಿದೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ಹೇಳಿದರು.
ಈ ಚಿತ್ರದ ವಿಶೇಷವೆಂದರೆ ತಂದೆ – ಮಗ ನಿರ್ಮಿಸುತ್ತಿದ್ದಾರೆ. ತಂದೆ – ಮಗಳು ಅಭಿನಯಿಸುತ್ತಿದ್ದೇವೆ. ನನ್ನ ಮಗಳು ರಿತನ್ಯ, ಮುಂಬೈನ ಅನುಪಮ್ ಖೇರ್ ಇನ್ಸ್ಟಿಟ್ಯೂಟ್ ನಲ್ಲಿ ಅಭಿನಯದ ಕುರಿತು ಕಲಿತು ಬಂದಿದ್ದಾಳೆ. ಈ ಚಿತ್ರದಲ್ಲೂ ನನ್ನ ಮಗಳ ಪಾತ್ರದಲ್ಲೇ ಅಭಿನಯಿಸುತ್ತಿದ್ದಾಳೆ. ನಾನು ಚಿತ್ರರಂಗಕ್ಕೆ ಬಂದು ಮೂವತ್ತು ವರ್ಷ ಹಾಗೂ ನಾಯಕನಾಗಿ ಹದಿನೆಂಟು ವರ್ಷಗಳಾಗಿದೆ. ಈ ಸಂದರ್ಭದಲ್ಲಿ ನನ್ನ ಮಗಳು ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದಾಳೆ. ಒಬ್ಬ ತಂದೆ ಮಗಳಿಗಾಗಿ ಏನೆಲ್ಲಾ ಕೊಡಬಹುದು? ಸ್ಕ್ರಿಪ್ಟ್ ನಲ್ಲೂ ಅರ್ಧಭಾಗ ಕೊಡಬಹುದು ಎಂದು ತಿಳಿಸಿದ ದುನಿಯಾ ವಿಜಯ್, ನಿರ್ದೇಶಕ ಜಡೇಶ್ ಅವರು ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಜಡೇಶ್ ಕನ್ನಡ ಚಿತ್ರರಂಗದ ಅತ್ಯುತ್ತಮ ನಿರ್ದೇಶಕರಾಗುವುದು ಖಂಡಿತ. ಬಹಳ ವರ್ಷಗಳ ನಂತರ ಸತ್ಯಪ್ರಕಾಶ್ ಅವರು ನಿರ್ಮಾಣಕ್ಕೆ ಮರಳಿದ್ದಾರೆ. ಅವರಿಗೆ ಹಾಗೂ ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು ನಾಯಕ ದುನಿಯಾ ವಿಜಯ್.
ಮೊದಲ ಚಿತ್ರ ಅಪ್ಪನ ಜೊತೆಗೆ ನಟಿಸುತ್ತಿರುವುದು ಖುಷಿಯಾಗಿದೆ. ಈ ಚಿತ್ರದಿಂದ ನನ್ನ ಹೆಸರನ್ನು ರಿತನ್ಯ ಎಂದು ಬದಲಿಸಿಕೊಂಡಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹ ನನಗಿರಲಿ ಎಂದರು ರಿತನ್ಯ(ಮೋನಿಕಾ). “ಸಾರಥಿ” ಚಿತ್ರ ನನಗೆ ತುಂಬಾ ಕೀರ್ತಿ ತಂದುಕೊಟ್ಟ ಚಿತ್ರ. ಆನಂತರ ಕೆಲವು ಚಿತ್ರಗಳ ಕಥೆ ಕೇಳಿದ್ದೆ. ಕಾರಣಾಂತರದಿಂದ ನಿರ್ಮಿಸಲು ಆಗಿರಲಿಲ್ಲ. ಜಡೇಶ್ ಅವರ ಕಥೆ ಇಷ್ಟವಾಯಿತು. ಕೇವಲ ಇಪ್ಪತ್ತು ದಿನಗಳಲ್ಲಿ ಚಿತ್ರ ಆರಂಭವಾಯಿತು. ನಿರ್ಮಾಣದಲ್ಲಿ ನನ್ನ ಜೊತೆಗೆ ಮಗ ಸೂರಜ್ ಗೌಡ ಇದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದು ನಿರ್ಮಾಪಕ ಸತ್ಯಪ್ರಕಾಶ್ ತಿಳಿಸಿದರು.
ಸಹ ನಿರ್ಮಾಪಕ ಸೂರಜ್ ಗೌಡ, ನಟ ಶಿಶಿರ, ಛಾಯಾಗ್ರಾಹಕ ಸ್ವಾಮಿ ಗೌಡ, ನಿರ್ಮಾಣ ನಿರ್ವಾಹಕ ನರಸಿಂಹ ಜಾಲಹಳ್ಳಿ ನೂತನ ಚಿತ್ರದ ಕುರಿತು ಮಾತನಾಡಿದರು. “ಭೀಮ” ಚಿತ್ರದ ನಿರ್ಮಾಪಕರ ಕೃಷ್ಣ ಸಾರ್ಥಕ್ ಶುಭ ಹಾರೈಸಿದರು.
ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ (Duniya Vijay) ಪುತ್ರಿ ಮೋನಿಕಾ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದಾರೆ. ದುನಿಯಾ ವಿಜಯ್ ಮತ್ತು ರಚಿತಾ ರಾಮ್ (Rachita Ram) ಕಾಂಬಿನೇಷನ್ ಸಿನಿಮಾ ಮುಹೂರ್ತ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿದೆ. ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿರುವಾಗಲೇ ಮಗಳ ಹೆಸರನ್ನು ಬದಲಿಸಿದ್ದಾರೆ. ಹೆಸರು ಬದಲಿಸಿದ್ದೇಕೆ? ಎಂದು ಕಾರಣ ಕೂಡ ಬಿಚ್ಚಿಟ್ಟಿದ್ದಾರೆ.
ದುನಿಯಾ ವಿಜಯ್ 29ನೇ ಚಿತ್ರಕ್ಕೆ ‘ಕಾಟೇರ’ ಚಿತ್ರದ ಕಥೆಗಾರ ಜಡೇಶ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಮೂಲಕನೇ ಮಗಳನ್ನು ದುನಿಯಾ ವಿಜಯ್ ಇಂಡಸ್ಟ್ರಿಗೆ ಪರಿಚಯ ಮಾಡಿಸುತ್ತಿದ್ದಾರೆ. ಮೋನಿಕಾ ಬದಲು ರಿತಾನ್ಯಾ ಎಂದು ಹೆಸರಿಟ್ಟಿದ್ದಾರೆ. ಅದಕ್ಕೆ ಕಾರಣವೇನು ಎಂಬುದುನ್ನು ರಿತಾನ್ಯಾ (Rithanya Vijay) ತಿಳಿಸಿದ್ದಾರೆ.
ನಾನು ಮೋನಿಕಾ, ನನ್ನ ತಂಗಿ ಮೋನಿಷಾ ಎಲ್ಲರಿಗೂ ಒಂದು ಕನ್ಫೂಷನ್. ಅದರಿಂದ ಕೆಲವು ಬಾರಿ ನನ್ನ ವಿಡಿಯೋಗಳಿಗೆ ತಂಗಿಯ ಹೆಸರು ಹಾಕಿದ್ದು ಇದೆ. ಆ ಗೊಂದಲ ಬೇಡ ಅಂತ ನಾವು ರಿತಾನ್ಯಾ ಹೆಸರನ್ನು ಸೆಲೆಕ್ಟ್ ಮಾಡಿಕೊಂಡಿದ್ದೇವೆ ಎಂದು ವಿಜಯ್ ಪುತ್ರಿ ಮಾತನಾಡಿದ್ದಾರೆ.
ರಿತಾನ್ಯಾ ವಿಜಯ್ ಅವರು ಅನುಪಮ್ ಖೇರ್ ಆಕ್ಟಿಂಗ್ ಸ್ಕೂಲ್ನಲ್ಲಿ ತರಬೇತಿ ಪಡೆದು ನಟನೆಯ ಅಖಾಡಕ್ಕೆ ಇಳಿದಿದ್ದಾರೆ. ಸಕಲ ತಯಾರಿ ಮಾಡಿಕೊಂಡು ತಂದೆ ತೋರಿಸಿಕೊಟ್ಟ ದಾರಿಯಲ್ಲಿ ಯುವ ನಟಿ ಹೆಜ್ಜೆ ಇಡುತ್ತಿದ್ದಾರೆ. ತಂದೆ ದುನಿಯಾ ವಿಜಯ್ರಂತೆಯೇ ಚಿತ್ರರಂಗದಲ್ಲಿ ಗೆದ್ದು ಬೀಗುತ್ತಾರಾ ಎಂದು ಕಾದುನೋಡಬೇಕಿದೆ.
ಕನ್ನಡದ ಹೆಸರಾಂತ ನಟ ದುನಿಯಾ ವಿಜಯ್ ಮತ್ತು ರಚಿತಾ ರಾಮ್ (Rachita Ram) ಕಾಂಬಿನೇಷನ್ ನ ಹೊಸ ಚಿತ್ರಕ್ಕೆ ಬೆಂಗಳೂರಿನ ದೇವಸ್ಥಾನದಲ್ಲಿ ಇಂದು ಮುಹೂರ್ತವಾಯಿತು (Muhurta). ಇನ್ನೂ ಚಿತ್ರಕ್ಕೆ ಹೆಸರು ಇಟ್ಟಿಲ್ಲವಾದರೂ, ಈ ಕಾಂಬಿನೇಷನ್ ನ 2ನೇ ಚಿತ್ರ ಇದಾಗಿದೆ. ಹಾಗಾಗಿ ಸಹಜವಾಗಿ ಕುತೂಹಲಕ್ಕೆ ಕಾರಣವಾಗಿದೆ.
ಈ ಸಿನಿಮಾದ ಮತ್ತೊಂದು ವಿಶೇಷತೆ ಅಂದರೆ, ದುನಿಯಾ ವಿಜಯ್ (Duniya Vijay) ಪುತ್ರಿ ಮೋನಿಕಾ (Monica Vijay) ಈ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮೋನಿಕಾ ಚಿತ್ರೋದ್ಯಮಕ್ಕೆ ಬರುತ್ತಾರೆ ಎಂಬ ಸುದ್ದಿ ಕೆಲದಿನಗಳಿಂದ ಹರಿದಾಡಿತ್ತು. ಇದೀಗ ಅಂತೆ ಕಂತೆ ಸುದ್ದಿಗೆ ಸ್ಪಷ್ಟನೆ ಸಿಕ್ಕಿದೆ. ಅಪ್ಪನ ನಟನೆಯ 29ನೇ ಸಿನಿಮಾದಲ್ಲಿ ಮಗಳು ಮೋನಿಕಾ ಕೂಡ ನಟಿಸಲಿದ್ದಾರೆ.
ಈ ಸಿನಿಮಾವನ್ನು ಕೆ.ವಿ ಸತ್ಯಪ್ರಕಾಶ್ ನಿರ್ಮಾಣ ಮಾಡುತ್ತಿದ್ದರೆ, ಜಡೇಶ್ ಕೆ.ಹಂಪಿ ಅವರ ನಿರ್ದೇಶನವಿದೆ. ಈ ಹಿಂದೆ ‘ಜಾನಿ ಮೇರಾ ನಾಮ್ ಪ್ರೀತಿ ಮೇರಾ ಕಾಮ್’ ಎಂಬ ಚಿತ್ರದಲ್ಲಿ ದುನಿಯಾ ವಿಜಯ್ ಮತ್ತು ರಚಿತಾ ರಾಮ್ ನಟಿಸಿದ್ದರು. ಈಗ ಹಲವು ವರ್ಷಗಳ ನಂತರ ಈ ಜೋಡಿ ಒಂದಾಗುತ್ತಿದೆ. ಹಾಗಾಗಿ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.
ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ (Duniya Vijay) ಪುತ್ರಿ ಮೋನಿಕಾ (Monica Vijay) ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಕೆಲದಿನಗಳಿಂದ ಹರಿದಾಡಿತ್ತು. ಇದೀಗ ಅಂತೆ ಕಂತೆ ಸುದ್ದಿಗೆ ಸ್ಪಷ್ಟನೆ ಸಿಕ್ಕಿದೆ. ದುನಿಯಾ ವಿಜಯ್ ನಟನೆಯ 29ನೇ ಸಿನಿಮಾದಲ್ಲಿ ಮಗಳು ಮೋನಿಕಾ ಕೂಡ ನಟಿಸಲಿದ್ದಾರೆ.
ಬೆಂಗಳೂರಿನ ದೇವಸ್ಥಾನವೊಂದರಲ್ಲಿ ಏ.11ರಂದು ಚಿತ್ರದ ಮುಹೂರ್ತ ಕಾರ್ಯಕ್ರಮ ಜರುಗಲಿದೆ. ವಿಜಯ್ ಹೊಸ ಸಿನಿಮಾಗೆ ಕೆ.ವಿ ಸತ್ಯಪ್ರಕಾಶ್ ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶಕ ಜಡೇಶ್ ಕೆ.ಹಂಪಿ, ದುನಿಯಾ ವಿಜಯ್, ರಚಿತಾ ರಾಮ್ (Rachitha Ram), ಮೋನಿಕಾ ವಿಜಯ್, ಶಿಶಿರ್ ಮುಂತಾದವರು ಮುಹೂರ್ತ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ದುನಿಯಾ ವಿಜಯ್ ಮತ್ತು ರಚಿತಾ ರಾಮ್ ಹೊಸ ಚಿತ್ರಕ್ಕೆ ಜಡೇಶ್ ಕೆ. ಹಂಪಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಪುತ್ರಿ ಮೋನಿಕಾಗೂ ಕೂಡ ಚಿತ್ರದಲ್ಲಿ ಉತ್ತಮ ಪಾತ್ರವಿದೆ. ಈ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಹೊಸ ಪ್ರತಿಭೆ ಮೋನಿಕಾ ಪಾದಾರ್ಪಣೆ ಮಾಡುತ್ತಿದ್ದಾರೆ. ಇದನ್ನೂ ಓದಿ:ಈದ್ ಹಬ್ಬಕ್ಕೆ ‘ಬಡೆ ಮಿಯಾನ್ ಚೋಟೆ ಮಿಯಾನ್’
ಈ ಹಿಂದೆ ‘ಜಾನಿ ಮೇರಾ ನಾಮ್ ಪ್ರೀತಿ ಮೇರಾ ಕಾಮ್’ ಎಂಬ ಚಿತ್ರದಲ್ಲಿ ದುನಿಯಾ ವಿಜಯ್ ಮತ್ತು ರಚಿತಾ ರಾಮ್ ನಟಿಸಿದ್ದರು. ಈಗ ಹಲವು ವರ್ಷಗಳ ನಂತರ ಈ ಜೋಡಿ ಒಂದಾಗುತ್ತಿದೆ. ಹಾಗಾಗಿ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.