Tag: Duniya Vijay

  • ದುನಿಯಾ ವಿಜಯ್ ಚಿತ್ರಕ್ಕೆ ರಚಿತಾ ರಾಮ್ ನಾಯಕಿ

    ದುನಿಯಾ ವಿಜಯ್ ಚಿತ್ರಕ್ಕೆ ರಚಿತಾ ರಾಮ್ ನಾಯಕಿ

    ದ್ಯ ಸಂಜು ವೆಡ್ಸ್ ಗೀತಾ 2 ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ರಚಿತಾ ರಾಮ್ (Rachita Ram), ಮತ್ತೊಂದು ಸಿನಿಮಾ ಒಪ್ಪಿಕೊಂಡಿರುವ ಸುದ್ದಿ ಗಾಂಧಿ ನಗರದಲ್ಲಿ ಹರಿದಾಡುತ್ತಿದೆ. ಕಾಟೇರ ಕಥೆಗಾರ ಜಡೇಶ್ ಹಂಪಿ ನಿರ್ದೇಶನದ ಚಿತ್ರಕ್ಕೆ ರಚಿತಾ ರಾಮ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

    ಈ ಹಿಂದೆ ದುನಿಯಾ ವಿಜಯ್ (Duniya Vijay) ಅವರಿಗಾಗಿ ಜಡೇಶ್ (Jadesh Hampi) ಸಿನಿಮಾ ಮಾಡುವ ವಿಚಾರ ಹಂಚಿಕೊಂಡಿದ್ದಾರೆ. ವಿಜಯ್ ಅವರ 29ನೇ ಸಿನಿಮಾ ಅನೌನ್ಸ್ ಕೂಡ ಮಾಡಿದ್ದರು. ಇದೇ ಚಿತ್ರಕ್ಕೆ ರಚಿತಾ ರಾಮ್ ನಾಯಕಿಯಾಗಿ ಆಯ್ಕೆಯಾಗಿದ್ದಾರಂತೆ. ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಹಂಚಿಕೊಳ್ಳಬೇಕಷ್ಟೆ.

    ನಾನಾ ಕಾರಣಗಳಿಂದಾಗಿ ಈ ಸಿನಿಮಾ ಕುತೂಹಲ ಮೂಡಿಸಿದೆ. ಈ ಸಿನಿಮಾ ಮೂಲಕ ದುನಿಯಾ ವಿಜಯ್ ಅವರ ಪುತ್ರಿ ಮೋನಿಕಾ ಚಿತ್ರರಂಗಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಆದರೆ, ಇದ್ಯಾವುದೂ ಅಧಿಕೃತವಲ್ಲ. ವಿಜಯ್ ಭೀಮ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರೋದ್ರಿಂದ ಮುಂದಿನ ದಿನಗಳಲ್ಲಿ ಈ ಎಲ್ಲ ಪ್ರಶ್ನೆಗಳಿಗೂ ಉತ್ತರ ಸಿಗಬಹುದು.

     

    ರಚಿತಾ ರಾಮ್ ಮತ್ತು ದುನಿಯಾ ವಿಜಯ್ ನಟನೆಯ ಜಾನಿ  ಸಿನಿಮಾ ಪ್ರೇಕ್ಷಕರನ್ನು ರಂಜಿಸಿತ್ತು. ಹಾಗಾಗಿ ಮತ್ತೆ ಈ ಜೋಡಿಯನ್ನು ತೆರೆಯ ಮೇಲೆ ನೋಡುವುದಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

  • 15 ವರ್ಷದ ನಂತರ ದುನಿಯಾ ಸೂರಿ ಸಿನಿಮಾದಲ್ಲಿ ದುನಿಯಾ ವಿಜಯ್

    15 ವರ್ಷದ ನಂತರ ದುನಿಯಾ ಸೂರಿ ಸಿನಿಮಾದಲ್ಲಿ ದುನಿಯಾ ವಿಜಯ್

    ದುನಿಯಾ ಸಿನಿಮಾದ ಮೂಲಕ ಕನ್ನಡ ಚಿತ್ರ ಜಗತ್ತಿಗೆ ವಿಜಯ್ ಕುಮಾರ್ ಅಲಿಯಾಸ್ ವಿಜಯ್ (Duniya Vijay) ಅವರನ್ನು ಹೀರೋ ಆಗಿ ಪರಿಚಯಿಸಿದರು ನಿರ್ದೇಶಕ ಸೂರಿ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಪಡೆಯಿತು. ಈ ಸಿನಿಮಾದಿಂದಾಗಿಯೇ ದುನಿಯಾ ಸೂರಿ (Duniya Suri) ಮತ್ತು ದುನಿಯಾ ವಿಜಯ್ ಎಂಬ ಇಬ್ಬರು ಪ್ರತಿಭಾವಂತರ ಜನ್ಮ ತಾಳಿದರು.

    ದುನಿಯಾ ಗೆಲುವು ಮತ್ತೆ ಈ ಜೋಡಿಯನ್ನು ಜಂಗ್ಲಿ ಸಿನಿಮಾದಲ್ಲಿ ಕೆಲಸ ಮಾಡುವಂತೆ ಮಾಡಿತ್ತು. ಬಾಕ್ಸ್ ಆಫೀಸಿನಲ್ಲಿ ಜಂಗ್ಲಿ ಕೂಡ ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಿತು. ಜಂಗ್ಲಿ ರಿಲೀಸ್ ಆಗಿ 15 ವರ್ಷಗಳ ಗತಿಸಿವೆ. ಒಂದೂವರೆ ದಶಕದ ನಂತರ ಮತ್ತೆ ಈ ಜೋಡಿ ಸಿನಿಮಾ (New movie) ಮಾಡಲಿದೆ.

     

    ಹೌದು, ದುನಿಯಾ ವಿಜಯ್ ಗಾಗಿ ಸೂರಿ ಸಿನಿಮಾ ಮಾಡಲಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಜಯಣ್ಣಈ ಸಿನಿಮಾದ ನಿರ್ಮಾಪಕರು ಎನ್ನುವ ಮಾಹಿತಿಯೂ ಇದೆ. ಈಗಾಗಲೇ ವಿಜಿಗಾಗಿ ಸೂರಿ ಸ್ಕ್ರಿಪ್ಟ್ ಕೂಡ ತಯಾರಿ ಮಾಡಿದ್ದರಂತೆ. ಅಧಿಕೃತವಾಗಿ ಮುಂದಿನ ದಿನಗಳಲ್ಲಿ ಈ ಸುದ್ದಿ ಹೊರಬರಬಹುದು.

  • ಪುನೀತ್ ಹುಟ್ಟುಹಬ್ಬಕ್ಕೆ ‘ಜಾಕಿ’ ಸಿನಿಮಾ ಮರುಬಿಡುಗಡೆ

    ಪುನೀತ್ ಹುಟ್ಟುಹಬ್ಬಕ್ಕೆ ‘ಜಾಕಿ’ ಸಿನಿಮಾ ಮರುಬಿಡುಗಡೆ

    ಪುನೀತ್ ರಾಜ್ ಕುಮಾರ್ (Puneeth Rajkumar) ಹುಟ್ಟು ಹಬ್ಬಕ್ಕೆ (Birthday) ಈಗಿನಿಂದಲೇ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಮಾರ್ಚ್ 17ಕ್ಕೆ ಅಪ್ಪು ಹುಟ್ಟು ಹಬ್ಬ. ಅಂದು ಅವರ ನಟನೆಯ ಜಾಕಿ (Jackie) ಸಿನಿಮಾವನ್ನು ಮರು ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ದುನಿಯಾ ಸೂರಿ (Duniya Vijay)  ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಬಾಕ್ಸ್ ಆಫೀಸಿನಲ್ಲಿ ಸೂಪರ್ ಹಿಟ್ ಚಿತ್ರ ಎಂದು ದಾಖಲಾಗಿದೆ.

    ಚಿತ್ರದ ಕಥೆ, ಅಪ್ಪು ಡಾನ್ಸ್, ಹಾಡು ಹಾಗೂ ಸಾಹಸ ಸನ್ನಿವೇಶಗಳಿಂದ ಜಾಕಿ ಸಿನಿಮಾ ಗಮನ ಸೆಳೆದಿತ್ತು. ವಿಚಿತ್ರ ವೇಷಗಳನ್ನೂ ಈ ಸಿನಿಮಾದಲ್ಲಿ ಪುನೀತ್ ರಾಜ್ ಕುಮಾರ್ ಹಾಕಿದ್ದರು. ಪಾರ್ವತಮ್ಮ ರಾಜ್ ಕುಮಾರ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಅಪ್ಪು ಜೊತೆ ಭಾವನಾ ನಾಯಕಿಯಾಗಿ ನಟಿಸಿದ್ದರು.

    ಜಾಕಿ ಚಿತ್ರವನ್ನು ಮತ್ತಷ್ಟು ಅಪ್ ಗ್ರೇಡ್ ಮಾಡಿ ಈ ಬಾರಿ ಥಿಯೇಟರ್ ಗೆ ತರಲಾಗುತ್ತಿದೆ. ಸೌಂಡ್, ರೆಸ್ಯುಲೇಷನ್ ಮತ್ತಷ್ಟು ಹೆಚ್ಚಿಸಲಾಗಿದೆಯಂತೆ. ಇನ್ನಷ್ಟು ಕಲರ್ ಫುಲ್ ನೊಂದಿಗೆ ಜಾಕಿ ಸಿನಿಮಾವನ್ನು ನೋಡಬಹುದಾಗಿದೆಯಂತೆ.

    ಬರೀ ಸಿನಿಮಾ ಮಾತ್ರವಲ್ಲ ಎಂದಿನಂತೆ ಅವರ ಅಭಿಮಾನಿಗಳು ಅನ್ನ ಸಂತರ್ಪಣೆ, ಕಣ್ಣುದಾನ, ರಕ್ತದಾನದಂತಹ ಶಿಬಿರಗಳನ್ನು ಅಪ್ಪು ಸಮಾಧಿ ಬಳಿ ಮಾಡಲು ರೆಡಿ ಆಗುತ್ತಿದ್ದಾರೆ. ಅಂದು ಯುವ ಸಿನಿಮಾದ ಇವೆಂಟ್ ಕೂಡ ಇರಲಿದೆ.

  • ನಿರ್ಮಾಪಕಿಯಾದ ದುನಿಯಾ ವಿಜಯ್ 2ನೇ ಪತ್ನಿ ಕೀರ್ತಿ

    ನಿರ್ಮಾಪಕಿಯಾದ ದುನಿಯಾ ವಿಜಯ್ 2ನೇ ಪತ್ನಿ ಕೀರ್ತಿ

    ದುನಿಯಾ ವಿಜಯ್ (Duniya Vijay)  ನಟನೆಯಿಂದ ನಿರ್ದೇಶಕರ ಭಡ್ತಿ ಪಡೆದಿದ್ದರೆ, ಇದೀಗ ಅವರ 2ನೇ ಪತ್ನಿ ಕೀರ್ತಿ ಗೌಡ (Keerthi Gowda) ನಿರ್ಮಾಪಕಿಯಾಗುತ್ತಿದ್ದಾರೆ. ಅರ್ಜುನ್ ಎಂಟರ್ ಟೇನ್ಮೆಂಟ್ ಹೆಸರಿನಲ್ಲಿ ನಿರ್ಮಾಣ ಸಂಸ್ಥೆಯೊಂದನ್ನು ಶುರು ಮಾಡಿದ್ದಾರೆ. ಈ ಸಂಸ್ಥೆಯ ಮೂಲಕ ಮೊದಲ ಬಾರಿಗೆ ಕಿರುಚಿತ್ರವೊಂದನ್ನು ನಿರ್ಮಾಣ ಮಾಡಿದ್ದಾರೆ.

    ಕೀರ್ತಿ ಗೌಡ ಅವರಿಗೆ ಸಿನಿಮಾ ರಂಗ ಹೊಸದೇನೂ ಅಲ್ಲ. ನಾಯಕಿಯಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟವರು. ಹಲವಾರು ಚಿತ್ರಗಳಲ್ಲೂ ನಟಿಸಿದ್ದಾರೆ. ಮದುವೆ ನಂತರ ನಟನೆಯಿಂದ ದೂರ ಉಳಿದಿದ್ದರು. ವಿಜಯ್ ಅವರ ಸಿನಿಮಾಗಳಿಗೆ ಸಹಾಯ ಮಾಡುತ್ತಿದ್ದರು. ಇದೀಗ ನಿರ್ಮಾಣಕ್ಕೆ ಮುಂದಾಗಿದ್ದಾರೆ.

    ಮೊದಲ ನಿರ್ಮಾಣದ ಕಿರುಚಿತ್ರದಲ್ಲಿ ಬುಡಕಟ್ಟು ಮಕ್ಕಳ ಶಿಕ್ಷಣದ ಕುರಿತು ವಿಷಯ ಆಯ್ಕೆ ಮಾಡಿಕೊಂಡಿದ್ದಾರಂತೆ. ಈ ಮೂಲಕ ಸಮಾಜಕ್ಕೆ ಒಂದು ಸಂದೇಶವನ್ನು ನೀಡುವಂತಹ ಕೆಲಸಕ್ಕೆ ಅವರು ಮುಂದಾಗಿದ್ದಾರೆ.

     

    ಕೀರ್ತಿ ಗೌಡ ಕೇವಲ ನಟಿ ಮಾತ್ರವಲ್ಲ, ಸಂಗೀತದಲ್ಲೂ ಅವರಿಗೆ ಆಸಕ್ತಿಯಿದೆ. ಈ ಹಿಂದೆ ಹಿಂದೂಸ್ತಾನಿ ಸಂಗೀತ ಕಲಿಯುತ್ತಿರುವ ಕುರಿತು ಅವರು ಬರೆದುಕೊಂಡಿದ್ದರು. ಜೊತೆಗೆ ವಿಜಯ್ ಅವರ ಕಷ್ಟ, ಸಂಭ್ರಮದಲ್ಲಿ ಭಾಗಿಯಾಗುವ ಮೂಲಕ  ವಿಜಯ್ ಅಭಿಮಾನಿಗಳ ಪಾಲಿಗೆ ನೆಚ್ಚಿನ ಅತ್ತಿಗೆ ಕೂಡ ಆಗಿದ್ದಾರೆ.

  • ‘ಭೀಮ’ನ ಟೀಸರ್ ರಿಲೀಸ್: ವಿಜಯ್ ದುನಿಯಾದ ಮತ್ತೊಂದು ಖದರ್

    ‘ಭೀಮ’ನ ಟೀಸರ್ ರಿಲೀಸ್: ವಿಜಯ್ ದುನಿಯಾದ ಮತ್ತೊಂದು ಖದರ್

    ದುನಿಯಾ ವಿಜಯ್ ಅವರ ಹುಟ್ಟು ಹಬ್ಬಕ್ಕೆ ಅವರೇ ನಿರ್ದೇಶನ ಮಾಡಿ, ನಟಿಸಿರುವ ಭೀಮ (Bheem) ಸಿನಿಮಾದ  ಟೀಸರ್ ರಿಲೀಸ್ ಆಗಿದೆ. ಮತ್ತೊಂದು ಮಾಸ್ ಸಿನಿಮಾದ ಮೂಲಕ ಎರಡನೇ ಬಾರಿಗೆ ನಿರ್ದೇಶಕರಾಗಿ ವಿಜಯ್ ಜನರ ಮುಂದೆ ನಿಂತಿದ್ದಾರೆ. ಮೇಲ್ನೋಟಕ್ಕೆ ಪೊಲೀಸ್ ವ್ಯವಸ್ಥೆ, ಡ್ರಗ್ಸ್ ಮಾಫಿಯಾ ಸುತ್ತ ಹೆಣೆದಿರುವ ಕಥೆ ಎನ್ನುವ ಸುಳಿವನ್ನು ಟೀಸರ್ ನೀಡುತ್ತದೆ.

    ಈ ಹುಟ್ಟು ಹಬ್ಬದ ಸಂದರ್ಭದಲ್ಲಿ ದುನಿಯಾ ವಿಜಯ್ (Duniya Vijay) ಅವರು ತಮ್ಮ ಅಭಿಮಾನಿಗಳಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದರು. ಯಶ್ (Yash) ಫ್ಯಾನ್ಸ್ ದುರಂತ ಸಾವಿನ ಬಳಿಕ ವಿಜಯ್ ಅಭಿಮಾನಿಗಳಿಗೆ ಕೈ ಮುಗಿದು ಮನವಿ ಮಾಡಿಕೊಂಡಿದ್ದರು. ಬ್ಯಾನರ್ಸ್ ಕಟ್ಟದಂತೆ ಕೇಳಿಕೊಂಡಿದ್ದಾರೆ.

    ಇನ್ನೂ ಕಳೆದ ಬಾರಿ ಅಭಿಮಾನಿಯೊಬ್ಬರು ನಡೆದುಕೊಂಡೇ ವಿಜಯ್ ಹುಟ್ಟುಹಬ್ಬಕ್ಕೆ ಬಂದಿದ್ದರು. ಹಾಗಾಗಿ ಕೈ ಮುಗಿದು ಕೇಳಿಕೊಳ್ಳುತ್ತೇನೆ ಯಾವ ಅಭಿಮಾನಿಗಳು ಸಹ ಈ ಬಾರಿ ನಡೆದುಕೊಂಡು ಬರಬೇಡಿ, ಯಾರು ಕೇಕ್ ಮತ್ತು ಹೂವಿನ ಹಾರ ತರಬೇಡಿ. ನನಗೆ ನಿಮ್ಮ ಜೊತೆಗೆ ಕುಳಿತು ಪ್ರೀತಿಯಿಂದ ಊಟ ಮಾಡುವ ಆಸೆಯಿದೆ ಎಂದು ಹೇಳಿದ್ದರು.

     

    ಪ್ರತಿ ಬಾರಿಯಂತೆ ಈ ಬಾರಿಯೂ ವಿಜಯ್ ತಮ್ಮ ಅಭಿಮಾನಿಗಳನ್ನು ಭೇಟಿಯಾಗಿದ್ದಾರೆ. ತನ್ನ ಹುಟ್ಟೂರಾದ ಕುಂಬಾರನಹಳ್ಳಿಯಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅಭಿಮಾನಿಗಳ ಜೊತೆಯಲ್ಲಿ ಕೂತು ಊಟ ಮಾಡಿದ್ದಾರೆ.

  • ಜೈಲಿನಿಂದ 6 ಖೈದಿಗಳ ಬಿಡುಗಡೆ ಮಾಡಿಸಿದ ನಟ ವಿಜಯ್

    ಜೈಲಿನಿಂದ 6 ಖೈದಿಗಳ ಬಿಡುಗಡೆ ಮಾಡಿಸಿದ ನಟ ವಿಜಯ್

    ಮೊನ್ನೆಯಷ್ಟೇ ಹುಟ್ಟೂರಲ್ಲಿ ಜೈಲು ಪಾಲಾಗಿರೋ ಅಮಾಯಕ ಜೀವಿಗಳ ಬಿಡುಗಡೆಗೆ ಪ್ರಯತ್ನ ಮಾಡ್ತಿವಿ ಎಂದಿದ್ದ ವಿಜಯ್, ಇಂದು ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿನ 6 ಜೈಲು ಹಕ್ಕಿಗಳನ್ನು ಬಿಡುಗಡೆ ಮಾಡಿಸಿದ್ದಾರೆ. ಕೋರ್ಟ್ ವಿಧಿಸಿದ ದಂಡ ಕಟ್ಟಲಾಗದೆ ಈ ಕೈದಿಗಳು ಜೈಲಿನಲ್ಲಿದ್ದರು.

    ಹುಟ್ಟು ಹಬ್ಬಕ್ಕೆ ಸಿದ್ಧತೆ

    ದುನಿಯಾ ವಿಜಯ್ ಜನವರಿ 20ರಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳ ಜೊತೆ ಇರುವುದಕ್ಕಾಗಿಯೇ ಅವರು ವಿಶೇಷ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದಾರೆ. ಜೊತೆಗೆ ವಿಜಯ್ ಅವರೇ ನಿರ್ದೇಶಿಸಿ, ನಟಿಸುತ್ತಿರುವ ಭೀಮ ಚಿತ್ರದ ಟೀಸರ್ ಕೂಡ ಅಂದು ಬಿಡುಗಡೆ ಆಗಲಿದೆ.

    ಈ ಹುಟ್ಟು ಹಬ್ಬದ ಸಂದರ್ಭದಲ್ಲಿ ದುನಿಯಾ ವಿಜಯ್ (Duniya Vijay) ಅವರು ತಮ್ಮ ಅಭಿಮಾನಿಗಳಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಯಶ್ (Yash) ಫ್ಯಾನ್ಸ್ ದುರಂತ ಸಾವಿನ ಬಳಿಕ ವಿಜಯ್ ಅಭಿಮಾನಿಗಳಿಗೆ ಕೈ ಮುಗಿದು ಮನವಿ ಮಾಡಿಕೊಂಡಿದ್ದಾರೆ. ತಮ್ಮ ಹುಟ್ಟುಹಬ್ಬದ (Birthday) ಅಪ್‌ಡೇಟ್ ಹಂಚಿಕೊಂಡಿದ್ದಾರೆ.

    ಇದೇ ಜನವರಿ 20ರಂದು ದುನಿಯಾ ವಿಜಯ್ (Duniya Vijay) ಹುಟ್ಟುಹಬ್ಬವಿದೆ. ಹೀಗಾಗಿ ಪ್ರತಿ ಬಾರಿಯಂತೆ ಈ ಬಾರಿಯೂ ವಿಜಯ್ ತಮ್ಮ ಅಭಿಮಾನಿಗಳನ್ನು ಭೇಟಿಯಾಗಲಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತನ್ನ ಹುಟ್ಟೂರಾದ ಕುಂಬಾರನಹಳ್ಳಿಯಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.

  • ದುನಿಯಾ ವಿಜಯ್ ಹುಟ್ಟುಹಬ್ಬಕ್ಕೆ ‘ಭೀಮ’ ಟೀಸರ್

    ದುನಿಯಾ ವಿಜಯ್ ಹುಟ್ಟುಹಬ್ಬಕ್ಕೆ ‘ಭೀಮ’ ಟೀಸರ್

    ನ್ನಡದ ಹೆಸರಾಂತ ನಟ ದುನಿಯಾ ವಿಜಯ್ ಜನವರಿ 20ರಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳ ಜೊತೆ ಇರುವುದಕ್ಕಾಗಿಯೇ ಅವರು ವಿಶೇಷ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದಾರೆ. ಜೊತೆಗೆ ವಿಜಯ್ ಅವರೇ ನಿರ್ದೇಶಿಸಿ, ನಟಿಸುತ್ತಿರುವ ಭೀಮ ಚಿತ್ರದ ಟೀಸರ್ ಕೂಡ ಅಂದು ಬಿಡುಗಡೆ ಆಗಲಿದೆ.

    ಈ ಹುಟ್ಟು ಹಬ್ಬದ ಸಂದರ್ಭದಲ್ಲಿ ದುನಿಯಾ ವಿಜಯ್ (Duniya Vijay) ಅವರು ತಮ್ಮ ಅಭಿಮಾನಿಗಳಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಯಶ್ (Yash) ಫ್ಯಾನ್ಸ್ ದುರಂತ ಸಾವಿನ ಬಳಿಕ ವಿಜಯ್ ಅಭಿಮಾನಿಗಳಿಗೆ ಕೈ ಮುಗಿದು ಮನವಿ ಮಾಡಿಕೊಂಡಿದ್ದಾರೆ. ತಮ್ಮ ಹುಟ್ಟುಹಬ್ಬದ (Birthday) ಅಪ್‌ಡೇಟ್ ಹಂಚಿಕೊಂಡಿದ್ದಾರೆ.

    ಇದೇ ಜನವರಿ 20ರಂದು ದುನಿಯಾ ವಿಜಯ್ (Duniya Vijay) ಹುಟ್ಟುಹಬ್ಬವಿದೆ. ಹೀಗಾಗಿ ಪ್ರತಿ ಬಾರಿಯಂತೆ ಈ ಬಾರಿಯೂ ವಿಜಯ್ ತಮ್ಮ ಅಭಿಮಾನಿಗಳನ್ನು ಭೇಟಿಯಾಗಲಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತನ್ನ ಹುಟ್ಟೂರಾದ ಕುಂಬಾರನಹಳ್ಳಿಯಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.

    ಕುಂಬಾರನಹಳ್ಳಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದು, ಅಲ್ಲಿಯೇ ಅಭಿಮಾನಿಗಳನ್ನು ಭೇಟಿಯಾಗಲಿದ್ದಾರೆ. ನಟ ಯಶ್ ಬರ್ತಡೇ ದಿನ ನಡೆದ ದುರಂತಗಳನ್ನು ಗಮನದಲ್ಲಿಟ್ಟುಕೊಂಡು ಈ ವಿಚಾರ ತಿಳಿಸಿದ್ದಾರೆ. ಇನ್ನೂ ಕಳೆದ ಬಾರಿ ಅಭಿಮಾನಿಯೊಬ್ಬರು ನಡೆದುಕೊಂಡೇ ವಿಜಯ್ ಹುಟ್ಟುಹಬ್ಬಕ್ಕೆ ಬಂದಿದ್ದರು. ಹಾಗಾಗಿ ಕೈ ಮುಗಿದು ಕೇಳಿಕೊಳ್ಳುತ್ತೇನೆ ಯಾವ ಅಭಿಮಾನಿಗಳು ಸಹ ಈ ಬಾರಿ ನಡೆದುಕೊಂಡು ಬರಬೇಡಿ, ಯಾರು ಕೇಕ್ ಮತ್ತು ಹೂವಿನ ಹಾರ ತರಬೇಡಿ. ನನಗೆ ನಿಮ್ಮ ಜೊತೆಗೆ ಕುಳಿತು ಪ್ರೀತಿಯಿಂದ ಊಟ ಮಾಡುವ ಆಸೆಯಿದೆ ಎಂದು ಹೇಳಿದ್ದಾರೆ.

     

    ಜನವರಿ 20ರಂದು ಬೆಳಿಗ್ಗೆ ಎಲ್ಲರೂ ಸೇಫಾಗಿ ಬನ್ನಿ. ಜನವರಿ 19ರವರೆಗೂ ನಮಗೆ ಸಿನಿಮಾ ಕೆಲಸ ಇದೆ. ಹೀಗಾಗಿ ಜ.20ರಂದು ಎಲ್ಲರೂ ಬನ್ನಿ ಜೊತೆಯಲ್ಲಿ ಕುಳಿತು ಊಟ ಮಾಡೋಣ. ಯಾರು ನನ್ನ ಹುಟ್ಟುಹಬ್ಬದ ದಿನ ಫ್ಲೆಕ್ಸ್ ಬ್ಯಾನರ್ ಹಾಕಬೇಡಿ ಎಂದು ದುನಿಯಾ ವಿಜಯ್ ಹೇಳಿದ್ದಾರೆ.

  • ಯಶ್ ಫ್ಯಾನ್ಸ್ ದುರಂತ ಸಾವಿನ ಬಳಿಕ ದುನಿಯಾ ವಿಜಯ್ ವಿಶೇಷ ಮನವಿ

    ಯಶ್ ಫ್ಯಾನ್ಸ್ ದುರಂತ ಸಾವಿನ ಬಳಿಕ ದುನಿಯಾ ವಿಜಯ್ ವಿಶೇಷ ಮನವಿ

    ಸ್ಯಾಂಡಲ್‌ವುಡ್ ಸಲಗ ದುನಿಯಾ ವಿಜಯ್ (Duniya Vijay) ಅವರು ತಮ್ಮ ಅಭಿಮಾನಿಗಳಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಯಶ್ (Yash) ಫ್ಯಾನ್ಸ್ ದುರಂತ ಸಾವಿನ ಬಳಿಕ ವಿಜಯ್ ಅಭಿಮಾನಿಗಳಿಗೆ ಕೈ ಮುಗಿದು ಮನವಿ ಮಾಡಿಕೊಂಡಿದ್ದಾರೆ. ತಮ್ಮ ಹುಟ್ಟುಹಬ್ಬದ (Birthday) ಅಪ್‌ಡೇಟ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:‘ಶನಿ’ ಕಂಟಕ‌ ವರ್ತೂರು ಸಂತೋಷ್ ತಲೆಗೆ ಕಟ್ಟಿದ ಕಾರ್ತಿಕ್‌- ಚಳಿ ಬಿಡಿಸಿದ ಸುದೀಪ್

    ಇದೇ ಜನವರಿ 20ರಂದು ದುನಿಯಾ ವಿಜಯ್ (Duniya Vijay) ಹುಟ್ಟುಹಬ್ಬವಿದೆ. ಹೀಗಾಗಿ ಪ್ರತಿ ಬಾರಿಯಂತೆ ಈ ಬಾರಿಯೂ ವಿಜಯ್ ತಮ್ಮ ಅಭಿಮಾನಿಗಳನ್ನು ಭೇಟಿಯಾಗಲಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತನ್ನ ಹುಟ್ಟೂರಾದ ಕುಂಬಾರನಹಳ್ಳಿಯಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.

    ಕುಂಬಾರನಹಳ್ಳಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದು, ಅಲ್ಲಿಯೇ ಅಭಿಮಾನಿಗಳನ್ನು ಭೇಟಿಯಾಗಲಿದ್ದಾರೆ. ನಟ ಯಶ್ ಬರ್ತಡೇ ದಿನ ನಡೆದ ದುರಂತಗಳನ್ನು ಗಮನದಲ್ಲಿಟ್ಟುಕೊಂಡು ಈ ವಿಚಾರ ತಿಳಿಸಿದ್ದಾರೆ. ಇನ್ನೂ ಕಳೆದ ಬಾರಿ ಅಭಿಮಾನಿಯೊಬ್ಬರು ನಡೆದುಕೊಂಡೇ ವಿಜಯ್ ಹುಟ್ಟುಹಬ್ಬಕ್ಕೆ ಬಂದಿದ್ದರು. ಹಾಗಾಗಿ ಕೈ ಮುಗಿದು ಕೇಳಿಕೊಳ್ಳುತ್ತೇನೆ ಯಾವ ಅಭಿಮಾನಿಗಳು ಸಹ ಈ ಬಾರಿ ನಡೆದುಕೊಂಡು ಬರಬೇಡಿ, ಯಾರು ಕೇಕ್ ಮತ್ತು ಹೂವಿನ ಹಾರ ತರಬೇಡಿ. ನನಗೆ ನಿಮ್ಮ ಜೊತೆಗೆ ಕುಳಿತು ಪ್ರೀತಿಯಿಂದ ಊಟ ಮಾಡುವ ಆಸೆಯಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಬೆಂಗಳೂರಿನ ಬೆಡಗಿಗೆ ಖುಲಾಯಿಸಿದ ಅದೃಷ್ಟ- ಮುಂದೇನು ಮಾಡ್ತಾರೆ ಶ್ರೀಲೀಲಾ?

    ಜನವರಿ 20ರಂದು ಬೆಳಿಗ್ಗೆ ಎಲ್ಲರೂ ಸೇಫಾಗಿ ಬನ್ನಿ. ಜನವರಿ 19ರವರೆಗೂ ನಮಗೆ ಸಿನಿಮಾ ಕೆಲಸ ಇದೆ. ಹೀಗಾಗಿ ಜ.20ರಂದು ಎಲ್ಲರೂ ಬನ್ನಿ ಜೊತೆಯಲ್ಲಿ ಕುಳಿತು ಊಟ ಮಾಡೋಣ. ಯಾರು ನನ್ನ ಹುಟ್ಟುಹಬ್ಬದ ದಿನ ಫ್ಲೆಕ್ಸ್ ಬ್ಯಾನರ್ ಹಾಕಬೇಡಿ ಎಂದು ದುನಿಯಾ ವಿಜಯ್ ಹೇಳಿದ್ದಾರೆ.

    ಅಂದಹಾಗೆ ಯಶ್ ಹುಟ್ಟುಹಬ್ಬದಂದು (ಜ.8) ಮೂವರು ಯುವಕರು ಮೃತಪಟ್ಟಿದ್ದರು. ಗದಗದ ಸೊರಣಗಿಯಲ್ಲಿ ಈ ಘಟನೆ ಸಂಭವಿಸಿತ್ತು. ಬಳಿಕ ಯಶ್ ಸೊರಣಗಿ ಗ್ರಾಮಕ್ಕೆ ಭೇಟಿ ನೀಡಿ, ಮೃತರಾಗಿರೋ ಯುವಕರ ಕುಟುಂಬಸ್ಥರನ್ನು ಸಂತೈಸಿ ಧೈರ್ಯ ಹೇಳಿ ಬಂದಿದ್ದರು.

  • ‘ಭೀಮ’ ಸಾಂಗ್ ಔಟ್- ‘ನೂರು ರೂಪಾಯಿ ಮಿಕ್ಸ್’ ಹಾಡಿಗೆ ಭರ್ಜರಿ ರೆಸ್ಪಾನ್ಸ್

    ‘ಭೀಮ’ ಸಾಂಗ್ ಔಟ್- ‘ನೂರು ರೂಪಾಯಿ ಮಿಕ್ಸ್’ ಹಾಡಿಗೆ ಭರ್ಜರಿ ರೆಸ್ಪಾನ್ಸ್

    ನ್ಯೂ ಇಯರ್ ಆರಂಭದಲ್ಲಿ ದುನಿಯಾ ವಿಜಯ್ (Duniya Vijay) ಮಾಸ್ ಅಭಿಮಾನಿಗಳಿಗೆ ಹಾಡೊಂದನ್ನ ಉಡುಗೊರೆಯಾಗಿ ಕೊಟ್ಟಿದ್ದಾರೆ. ‘ಭೀಮ’ ಸಿನಿಮಾದ ‘ನೂರು ರೂಪಾಯಿ ಮಿಕ್ಸ್’ (Nooru Rupai Mix) ಎಂಬ ಸುಕ್ಕಾ ಸಾಂಗ್ ರಿಲೀಸ್ ಆಗಿದೆ. ಈ ಹಾಡಿನ ವಿಶೇಷತೆ ಏನು? ಇಲ್ಲಿದೆ ಮಾಹಿತಿ.

    ‘ಸಲಗ’ (Salaga) ಸಕ್ಸಸ್ ನಂತರ ದುನಿಯಾ ವಿಜಯ್ ಫುಲ್ ಜೋಶ್‌ನಲ್ಲಿದ್ದಾರೆ. ಜನಸಾಮಾನ್ಯರ ನಡುವಿನ ಕತೆ ಕಂಟೆಂಟ್ ಇಟ್ಟುಕೊಂಡು, ಮನರಂಜನೆ ಜೊತೆ ನಿಮ್ಮ ಮಡಿಲಿಗೆ ಅರ್ಪಿಸಲು ಸಜ್ಜಾಗಿದ್ದಾರೆ. ಈಗಾಗೇ ರಿಲೀಸ್ ಆಗಿರುವ ಹಾಡುಗಳು ಮತ್ತು `ಭೀಮ’ ಕಂಟೆಂಟ್ ಅದ್ಭುತ ಸೌಂಡ್ ಮಾಡ್ತಿದೆ.

    ಮೊನ್ನೆ ಮೊನ್ನೆ ಬೆಂಗಳೂರು ಲಾಲ್‌ಬಾಗ್ ಸಿದ್ದಾಪುರದ ಸಂದಿ-ಗೊಂದಿಗಳಲ್ಲಿ ‘ಭೀಮ’ನ ಫೈನಲ್ ಹಂತದ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಈಗ ಹೊಸ ವರ್ಷಕ್ಕೆ ನೂರು ರೂಪಾಯಿ ಮಿಕ್ಸ್ ಹಾಡನ್ನು ಬಜಾರ್‌ಗೆ ಬಿಟ್ಟಿದ್ದಾರೆ. ಈ ಹಾಡಿಗೆ ಫಿದಾ ಆಗಿದ್ದಾರೆ. ಇದನ್ನೂ ಓದಿ:ದಳಪತಿ ವಿಜಯ್ ನಟನೆಯ ಹೊಸ ಸಿನಿಮಾಗೆ ಟೈಟಲ್ ಫಿಕ್ಸ್

    `ನೂರು ರೂಪಾಯಿ ಮಿಕ್ಸ್’ ಈ ಹಾಡನ್ನು ಕಲಾಸಿಪಾಳ್ಯದ ಲೋಕೇಶನ್‌ನಲ್ಲಿ ಶೂಟಿಂಗ್ ಮಾಡಲಾಗಿದೆ. ಎಂ.ಸಿ.ಬಿಜ್ಜು ಸಾಹಿತ್ಯ ಬರೆದಿದ್ದು, ಚರಣ್‌ರಾಜ್ ಸಂಗೀತ ಸಂಯೋಜನೆ ಮಾಡಿದ್ದಾರೆ. ನೂರು ರೂಪಾಯಿ ಹಾಡು ಭರ್ಜರಿ ಸದ್ದು ಮಾಡ್ತಿದೆ. ನಿರ್ಮಾಪಕ ಜಗದೀಶ್ ಮತ್ತು ಕೃಷ್ಣ ಸಾರ್ಥಕ್ ‘ಭೀಮ’ನಿಗೆ ಸಿಗ್ತಿರುವ ರೆಸ್ಪಾನ್ಸ್ ನೋಡಿ ಖುಷಿಯಾಗಿದ್ದಾರೆ. ‘ಭೀಮ’ ಈ ಚಿತ್ರವನ್ನು ಅದ್ದೂರಿಯಾಗಿ ತೆರೆಯ ಮೇಲೆ ತೋರಿಸಲು ಕೋಟಿ ಕೋಟಿ ಸುರಿದಿದ್ದಾರೆ.

    ಸಲಗ ಸಿನಿಮಾದಲ್ಲಿ ನಟನೆ ಜೊತೆ ನಿರ್ದೇಶನ ಮಾಡಿ ಗೆದ್ದು ತೋರಿಸಿದ್ದರು. ಭೀಮ ಸಿನಿಮಾಗೂ ದುನಿಯಾ ವಿಜಯ್ ನಿರ್ದೇಶನ ಮಾಡಿದ್ದಾರೆ. ಹಾಗಾಗಿ ಸಿನಿಮಾ ಬಗ್ಗೆ ನಿರೀಕ್ಷೆ ಡಬಲ್ ಆಗಿದೆ. ಈಗಾಗಲೇ ಹಾಡುಗಳು ಸದ್ದು ಮಾಡ್ತಿರೋ ಹಾಗೆಯೇ ಸಿನಿಮಾ ಕೂಡ ಚಿತ್ರಮಂದಿರದಲ್ಲಿ ಸೌಂಡ್ ಮಾಡುತ್ತಾ ಕಾದುನೋಡಬೇಕಿದೆ.

  • ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ನಿಧನಕ್ಕೆ ದುನಿಯಾ ವಿಜಯ್ ಕಂಬನಿ

    ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ನಿಧನಕ್ಕೆ ದುನಿಯಾ ವಿಜಯ್ ಕಂಬನಿ

    ನ್ನಡದ ಹೆಸರಾಂತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ (Jolly Bastin) ನಿಧನಕ್ಕೆ ನಟ, ನಿರ್ದೇಶಕ ದುನಿಯಾ ವಿಜಯ್ ಕಂಬನಿ ಮಿಡಿದಿದ್ದಾರೆ. ಇತ್ತೀಚೆಗಷ್ಟೇ ಜಾಲಿ ಮಾಸ್ಟರ್ ಜೊತೆ ವಿಜಯ್ ಕೆಲಸ ಮಾಡಿದ್ದನ್ನು ನೆನಪಿಸಿಕೊಂಡಿದ್ದಾರೆ. ದುನಿಯಾ ವಿಜಯ್ (Duniya Vijay) ನಿರ್ದೇಶಿಸಿ, ನಟಿಸುತ್ತಿರುವ ಭೀಮ ಚಿತ್ರಕ್ಕೆ ಜಾಲಿ ಬಾಸ್ಟಿನ್ ಅವರ ಸಾಹಸ ನಿರ್ದೇಶನವಿದೆ. ಅತ್ಯುತ್ತಮ ಸಾಹಸ ನಿರ್ದೇಶಕನನ್ನು ಕಳೆದುಕೊಂಡಿರುವುದಾಗಿ ವಿಜಯ್ ಬರೆದುಕೊಂಡಿದ್ದಾರೆ.

    ಮಲಯಾಳಂ ಮೂಲದ, ಕನ್ನಡಿಗರೇ ಆಗಿರುವ ಜಾಲಿ ಬಾಸ್ಟಿನ್ ನಿನ್ನೆ ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ. ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಸಾವಿರಾರು ಚಿತ್ರಗಳಿಗೆ ಸಾಹಸ ದೃಶ್ಯಗಳನ್ನು ಕಂಪೋಸ್ ಮಾಡಿರುವ ಜಾಲಿ ಬಾಸ್ಟಿನ್, ಬಹುಬೇಡಿಕೆ ಸ್ಟಂಟ್ ಮಾಸ್ಟರ್ ಆಗಿದ್ದರು.

    ಬೈಕ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ ಜಾಲಿ ಬಾಸ್ಟಿನ್, ಕ್ರೇಜಿಸ್ಟಾರ್ ರವಿಚಂದ್ರನ್ ಕಣ್ಣಿಗೆ ಬಿದ್ದು, ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದರು. ಪ್ರೇಮಲೋಕ ಸೇರಿದಂತೆ ರವಿಚಂದ್ರನ್ ಅವರ ಬಹುತೇಕ ಚಿತ್ರಗಳಿಗೆ ಇವರ ಸಾಹಸ ನಿರ್ದೇಶನವಿದೆ. ಶಾಂತಿ ಕ್ರಾಂತಿಗಾಗಿ ಮಾಡಿದ ಸಾಹಸ ದೃಶ್ಯಗಳ ಕಂಪೋಸ್ ಇವತ್ತಿಗೂ ನೆನಪಿನಲ್ಲಿ ಉಳಿಯುವಂಥದ್ದು.

    ಕೇರಳದಲ್ಲಿ 1966ರಲ್ಲಿ ಜಾಲಿ ಬಾಸ್ಟಿನ್ ಹುಟ್ಟಿದ್ದರೂ, ಬೆಳೆದದ್ದು ಬೆಂಗಳೂರಿನಲ್ಲಿ. ಇಲ್ಲಿಯೇ ನೆಲೆಯೂರಿ ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಸಿನಿಮಾಗಳಿಗೆ ಕೆಲಸ ಮಾಡಿದ್ದಾರೆ. ಇತ್ತೀಚೆಗಷ್ಟೇ ಅವರು ದುನಿಯಾ ವಿಜಯ್ ನಿರ್ದೇಶನದ ಭೀಮ ಸಿನಿಮಾಗಾಗಿ ಕೆಲಸ ಮಾಡಿದ್ದರು.

    ಡಿಸೆಂಬರ್ ಬಂತೆಂದರೆ ಒಂದು ರೀತಿಯಲ್ಲಿ ಚಿತ್ರೋದ್ಯಮಕ್ಕೆ ಭಯ ಕಾಡುತ್ತದೆ. ಹಲವು ವರ್ಷಗಳಿಂದ ಡಿಸೆಂಬರ್ ನಲ್ಲಿ ಚಿತ್ರೋದ್ಯಮ ಅನೇಕ ಗಣ್ಯರನ್ನು ಕಳೆದುಕೊಂಡಿದೆ. ಇತ್ತೀಚೆಗಷ್ಟೇ ಲೀಲಾವತಿ ಅವರನ್ನು ಕಳೆದುಕೊಂಡು ಚಿತ್ರೋದ್ಯಮ ದುಃಖದಲ್ಲಿತ್ತು. ಈಗ ಜಾಲಿ ಕೂಡ ಚಿತ್ರೋದ್ಯಮದಿಂದ ಮರೆಯಾಗಿದ್ದಾರೆ.