Tag: Duniya Vijay

  • ದುನಿಯಾ ವಿಜಯ್ ಅರೆಸ್ಟ್: ಬೀದಿಯಲ್ಲಿ ‘ಭೀಮ’ನ ಬಂಧನ

    ದುನಿಯಾ ವಿಜಯ್ ಅರೆಸ್ಟ್: ಬೀದಿಯಲ್ಲಿ ‘ಭೀಮ’ನ ಬಂಧನ

    ನ್ನಡದ ಹೆಸರಾಂತ ನಟ ದುನಿಯಾ ವಿಜಯ್ ಅರೆಸ್ಟ್ (Arrest) ಆಗಿದ್ದಾರೆ. ಬೆಂಗಳೂರಿನ ವಿನೋವಾ ನಗರದಲ್ಲಿ ನಡುರಸ್ತೆಯಲ್ಲೇ ಪೊಲೀಸರು ದುನಿಯಾ ವಿಜಯ್ ಕೈಗೆ ಬೇಡಿ ತೋಡಿಸಿಕೊಂಡು ಕರೆದುಕೊಂಡು ಹೋಗಿದ್ದಾರೆ. ಬೆಂಗಳೂರಿನ ವಿನೋವಾ ರಸ್ತೆಯಲ್ಲಿ ವಿಜಯ್ ಕಂಡು ಬಹುತೇಕರು ಗಾಬರಿಗೊಂಡಿದ್ದರು. ವಿಜಯ್ ಮೈ ತುಂಬಾ ರಕ್ತ ಬೇರೆ ಹರಿದಿದ್ದರಿಂದ ಏನಾಯಿತು ಎಂದೆಲ್ಲ ವಿಚಾರಿಸಿದ್ದರು. ಆಮೇಲೆ ಅದು ಶೂಟಿಂಗ್ ಸನ್ನಿವೇಶ ಎಂದು ಗೊತ್ತಾಗಿ ನಿಟ್ಟುಸಿರಿಟ್ಟರು.

    ಹೌದು, ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡುತ್ತಿರುವ ಭೀಮ (Bhima) ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಅದರಲ್ಲೂ ಕ್ಲೈಮ್ಯಾಕ್ಸ್ ದೃಶ್ಯವನ್ನು ವಿಜಯ್ ಶೂಟ್ ಮಾಡುತ್ತಿದ್ದಾರೆ. ನಡು ರಸ್ತೆಯಲ್ಲಿ ವಿಜಯ್ ಅವರನ್ನು ಅರೆಸ್ಟ್ ಮಾಡಿಕೊಂಡು ಹೋಗುವ ದೃಶ್ಯ ಅದಾಗಿದೆ. ಈ ಮೂಲಕ ಭೀಮ ಸಿನಿಮಾದ ಕ್ಲೈಮ್ಯಾಕ್ಸ್ ಏನಾಗಿರಲಿದೆ ಎನ್ನುವ ಸಣ್ಣದೊಂದು ಸುಳಿವೂ ಸಿಕ್ಕಿದೆ.

    ವಿಜಯ್ ಮಗಳ ಎಂಟ್ರಿ

    ದುನಿಯಾ ವಿಜಯ್ (Duniya Vijay) ಈಗಾಗಲೇ ನಟ, ನಿರ್ದೇಶಕನಾಗಿ ಸೈ ಎನಿಸಿಕೊಂಡಿದ್ದಾರೆ. ಭೀಮನಾಗಿ ಅಬ್ಬರಿಸಲು ಸಜ್ಜಾಗಿರುವ ಬೆನ್ನಲ್ಲೇ ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ಸಿನಿ ದುನಿಯಾಗೆ ಇಬ್ಬರು ಪುತ್ರಿಯರನ್ನು ವಿಜಯ್ ಪರಿಚಯಿಸುತ್ತಿದ್ದಾರೆ.

    ದುನಿಯಾ ವಿಜಯ್ ಅವರ ಇಬ್ಬರು ಹೆಣ್ಣು ಮಕ್ಕಳು ಸಿನಿಮಾರಂಗ ಪ್ರವೇಶಿಸೋದು ಖಚಿತ. ಇದನ್ನ ಸ್ವತಃ ವಿಜಯ್ ಅನೌನ್ಸ್ ಮಾಡಿದ್ದಾರೆ. ಆದರೆ ನೀವು ಗೆಸ್ ಮಾಡಿದಂತೆ ಕಿರಿ ಮಗಳು ಮೋನಿಷಾ (Monisha) ಅಲ್ಲ. ಬದಲಿಗೆ ಹಿರಿಯ ಮಗಳು ಮೋನಿಕಾ (Monica) ಮೊದಲು ಚಿತ್ರರಂಗಕ್ಕೆ ಎಂಟ್ರಿ ಕೊಡಲಿದ್ದಾರೆ. ಮೋನಿಕಾ ವಿಜಯ್ ಅವರ ಎಜುಕೇಷನ್ ಕಂಪ್ಲೀಟ್ ಆಗಿದೆ. ರಿಸೆಂಟ್ ಆಗಿ ಮುಂಬೈನಲ್ಲಿ ಆ್ಯಕ್ಟಿಂಗ್ ಕೋರ್ಸ್ ಸಹ ಮುಗಿಸಿ ಬಂದಿದ್ದಾರೆ. ಮುಂಬೈನ ಅನುಪಮ್ ಖೇರ್ (Anupam Kher) ನಟನಾ ಶಾಲೆಯಲ್ಲಿ ತರಬೇತಿ ಪಡೆದು ಬಂದಿರುವ ಮೋನಿಕಾ, ಸದ್ಯ ಬೆಂಗಳೂರಿನಲ್ಲಿ ಕಲಾತಂಡವೊಂದರ ಜೊತೆ ಕೆಲಸ ಮಾಡ್ತಿದ್ದಾರೆ.

    ಹಾಗಾಗಿ ಹಿರಿ ಮಗಳು ಮೋನಿಕಾ ಸಿನಿಮಾ ಎಂಟ್ರಿಗೆ ತಯಾರಾಗಿದ್ದು, ಶೀಘ್ರದಲ್ಲೇ ಸಿನಿಮಾ ಅನೌನ್ಸ್ ಆಗುವ ನಿರೀಕ್ಷೆಯಿದೆ. ಆದ್ರೆ ಕಿರಿ ಮಗಳು ಮೋನಿಷಾ ಇನ್ನೂ ಎಜುಕೇಷನ್ ಮಾಡ್ತಿದ್ದು, ಈಗ ಹೆಚ್ಚಿನ ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋಗ್ತಿದ್ದಾರಂತೆ. ಜೊತೆಗೆ ಮೋನಿಷಾ ಸಹ ಆ್ಯಕ್ಟಿಂಗ್ ಟ್ರೈನಿಂಗ್ ಪಡೆದುಕೊಳ್ಳಲಿದ್ದು, ಅದು ಮುಗಿದು ವಾಪಸ್ ಆದ ಬಳಿಕವಷ್ಟೇ ಮೋನಿಷಾ ಬಣ್ಣದ ಜಗತ್ತಿಗೆ ಬರಲಿದ್ದಾರೆ.

     

    ವಿಜಯ್ ಅವರ ಇಬ್ಬರು ಮಕ್ಕಳಿಗೂ ಈಗಾಗಲೇ ತುಂಬಾ ಆಫರ್ಸ್ ಬಂದಿದೆ. ಆದರೆ ಶಿಕ್ಷಣಕ್ಕೆ ತೊಂದರೆಯಾಗಬಾರದು ಅನ್ನೋ ಕಾರಣಕ್ಕೆ ಇಷ್ಟು ದಿನ ನಟನೆಗೆ ಬರೋದನ್ನ ಮುಂದೂಡಲಾಗಿತ್ತು. ಆದ್ರೀಗ ಹಿರಿ ಮಗಳು ಸಿನಿಮಾ ಮಾಡೋ ಉದ್ದೇಶದಿಂದಲೇ ಸಕಲ ತಯಾರಿ ಮುಗಿಸಿದ್ದಾಳೆ. ಹೀಗಾಗಿ ಮೋನಿಕಾ ಲಾಂಚ್ ಮಾಡೋಕೆ ಇದು ಸೂಕ್ತ ಸಮಯ ಎಂದು ವಿಜಯ್ ನಿರ್ಧರಿಸಿದ್ದಾರಂತೆ. ಸದ್ಯ ಮೋನಿಕಾ ಚೊಚ್ಚಲ ಸಿನಿಮಾಗೆ ಅದ್ಭುತ ಸ್ಕ್ರಿಪ್ಟ್ ಕೂಡ ರೆಡಿಯಿದ್ದು, ಒಂದೊಳ್ಳೆ ಸಮಯ ನೋಡ್ಕೊಂಡು ಸಿನಿಮಾ ಶುರು ಮಾಡುವ ಪ್ಲ್ಯಾನ್‌ನಲ್ಲಿದ್ದಾರೆ. ಇನ್ನು ಹಿರಿಯ ಮಗಳ ಮೊದಲ ಸಿನಿಮಾಗೆ ಸ್ವತಃ ದುನಿಯಾ ವಿಜಯ್ ಅವರೇ ಆ್ಯಕ್ಷನ್ ಕಟ್ ಹೇಳುವ ಸಾಧ್ಯತೆ ಇದೆ.

  • ಒಂದೇ ಸಿನಿಮಾದಲ್ಲಿ ಅಪ್ಪ, ಮಗಳು- ‘ಕಾಟೇರ’ ರೈಟರ್ ಆ್ಯಕ್ಷನ್ ಕಟ್

    ಒಂದೇ ಸಿನಿಮಾದಲ್ಲಿ ಅಪ್ಪ, ಮಗಳು- ‘ಕಾಟೇರ’ ರೈಟರ್ ಆ್ಯಕ್ಷನ್ ಕಟ್

    ಸ್ಯಾಂಡಲ್‌ವುಡ್ (Sandalwood) ಸಲಗ ದುನಿಯಾ ವಿಜಯ್ (Duniya Vijay) ಅವರು ‘ಭೀಮ’ನಾಗಿ ಅಬ್ಬರಿಸೋಕೆ ರೆಡಿಯಾಗಿದ್ದಾರೆ. ಇದರ ನಡುವೆ ಅಭಿಮಾನಿಗಳಿಗೆ ವಿಜಯ್ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಒಂದೇ ಸಿನಿಮಾದಲ್ಲಿ ದುನಿಯಾ ವಿಜಯ್ ಮತ್ತು ಮಗಳು ಮೋನಿಕಾ(Monica Vijay) ನಟಿಸುತ್ತಿದ್ದಾರೆ. ಈ ಬಗ್ಗೆ ಇಲ್ಲಿದೆ ಮಾಹಿತಿ.

    ಇತ್ತೀಚೆಗೆ ದೊಡ್ಡ ಮಗಳು ಮೋನಿಕಾ ಸಿನಿಮಾರಂಗಕ್ಕೆ ಬರೋದಾಗಿ ದುನಿಯಾ ವಿಜಯ್ ಅನೌನ್ಸ್ ಮಾಡಿದ್ದರು. ಅದರಂತೆ ಇದೀಗ ಮೋನಿಕಾ ವಿಜಯ್ ಚೊಚ್ಚಲ ಸಿನಿಮಾ ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ. ದರ್ಶನ್ ನಟನೆಯ ‘ಕಾಟೇರ’ (Katera) ಚಿತ್ರದ ರೈಟರ್ ಜಡೇಶ್ ಕುಮಾರ್ (Jadesh Kumar) ಅವರ ನಿರ್ದೇಶನದಲ್ಲಿ ದುನಿಯಾ ವಿಜಯ್-ಮೋನಿಕಾ ಜೊತೆಯಾಗಿ ನಟಿಸುತ್ತಿದ್ದಾರೆ.

    ಸಂಬಂಧಗಳ ಕುರಿತು ಬಾಂಧವ್ಯ ಸಾರುವ ಸಿನಿಮಾದಲ್ಲಿ ದುನಿಯಾ ವಿಜಯ್- ಮಗಳು ಮೋನಿಕಾ ಒಟ್ಟಾಗಿ ಕಾಣಿಸಿಕೊಳ್ಳೋದು ಪಕ್ಕಾ ಆಗಿದೆ. ಇಬ್ಬರ ಪಾತ್ರ ಕೂಡ ಡಿಫರೆಂಟ್ ಆಗಿದೆ. ತೆರೆಯ ಮೇಲೂ ಕೂಡ ತಂದೆ-ಮಗಳಾಗಿಯೇ ನಟಿಸುತ್ತಿದ್ದಾರಾ ಎಂಬುದಕ್ಕೆ ಉತ್ತರ ಸಿಕ್ಕಿಲ್ಲ. ಇಬ್ಬರ ಕಾಂಬಿನೇಷನ್ ತೆರೆಯ ಮೇಲೆ ಹೇಗೆ ವರ್ಕ್ ಆಗಲಿದೆ ಎಂಬುದರ ಬಗ್ಗೆ ಫ್ಯಾನ್ಸ್‌ಗೆ ಕುತೂಹಲ ಕೆರಳಿಸಿದೆ. ಇದನ್ನೂ ಓದಿ:ಪಡ್ಡೆಹುಡುಗರ ಎದೆಬಡಿತ ಹೆಚ್ಚಿಸಿದ ತೃಪ್ತಿ ದಿಮ್ರಿ ನಯಾ ಫೋಟೋಶೂಟ್

    ಮೋನಿಕಾ (Monica Vijay) ಅವರು ನಟನೆಗೆ ಬರೋದ್ದಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಮುಂಬೈನಲ್ಲಿ ಅನುಪಮ್ ಖೇರ್ ನಟನಾ ಶಾಲೆಯಲ್ಲಿ ತರಬೇತಿ ಪಡೆದುಕೊಂಡು ಬಂದಿದ್ದಾರೆ. ಡ್ಯಾನ್ಸ್, ಫಿಟ್‌ನೆಸ್ ಹೀಗೆ ಸಾಕಷ್ಟು ವಿಚಾರಗಳಿಗೆ ಒತ್ತು ಕೊಟ್ಟು ಅಪ್ಪನ ಹಾದಿಯಲ್ಲಿ ಮಗಳು ಹೆಜ್ಜೆ ಇಡ್ತಿದ್ದಾರೆ. ಮೋನಿಕಾ ವಿಜಯ್‌ ಕೂಡ ನಟಿಯಾಗಿ ಗೆದ್ದು ಬೀಗುತ್ತಾರಾ ಕಾದುನೋಡಬೇಕಿದೆ.

  • ‘ಯುವರಾಜ’ ನಿಖಿಲ್ ಹುಡುಕಿಕೊಂಡು ಸೆಟ್‌ಗೆ ಬಂದ ‘ಭೀಮ’

    ‘ಯುವರಾಜ’ ನಿಖಿಲ್ ಹುಡುಕಿಕೊಂಡು ಸೆಟ್‌ಗೆ ಬಂದ ‘ಭೀಮ’

    ನಿಖಿಲ್ ಕುಮಾರ್ ಸ್ವಾಮಿ  (Nikhil Kumar) ನಟನೆಯ ಹೊಸ ಸಿನಿಮಾದ ಶೂಟಿಂಗ್ ದಾಸನಪುರ ಎಪಿಎಂಸಿ ಜಾಗದಲ್ಲಿ ನಡೆಯುತ್ತಿದೆ. ಚಿತ್ರೀಕರಣ ನಡೆಯುವ ಜಾಗದಲ್ಲಿ ನಟ ದುನಿಯಾ ವಿಜಯ್ (Duniya Vijay) ಕಾಣಿಸಿಕೊಂಡಿದ್ದಾರೆ. ಶೂಟಿಂಗ್ ನೋಡುವುದಕ್ಕಾಗಿಯೇ ಅವರು ದಾಸನಪುರದ ಎಪಿಎಂಸಿ ಜಾಗಕ್ಕೆ ಆಗಮಿಸಿದ್ದರು. ತುಂಬಾ ಹೊತ್ತು ಶೂಟಿಂಗ್ (Shooting) ಸೆಟ್ ನಲ್ಲಿ ಕುಳಿತಿದ್ದ ದುನಿಯಾ ವಿಜಯ್, ನಂತರ ಚಿತ್ರೀಕರಣ ಕುರಿತಂತೆ ಮಾತನಾಡಿದರು.

    ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಸುಭಾಸ್ಕರನ್ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದು, ಲಕ್ಷ್ಮಣ್ ಅವರ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಈಗಾಗಲೇ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ.

    ಬಹು ನಿರೀಕ್ಷಿತ ಈ ಚಿತ್ರದಲ್ಲಿ ಸ್ಯಾಂಡಲ್ ವುಡ್ ಸಲಗ ದುನಿಯಾ ವಿಜಯ್ ಅವರು ನಟಿಸುತ್ತಿದ್ದಾರೆ.  ವಿಜಯ್ ಅವರ ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟು ಬಿಟ್ಟುಕೊಟ್ಟಿಲ್ಲ. ಸದ್ಯದಲ್ಲೇ ವಿಜಯ್ ಅವರು ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ವಿಜಯ್ ಅವರ ಪಾತ್ರ ಏನಿರಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಬಗ್ಗೆ ಸಿನಿರಸಿಕರಿಗೆ ಸಾಕಷ್ಟು ನಿರೀಕ್ಷೆಯಿದೆ.

    ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಹಾಗೂ ವಂಶಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಈಗಾಗಲೇ ಅನೇಕರು ಶೂಟಿಂಗ್ ಸೆಟ್‌ಗೆ ಭೇಟಿ ಕೊಟ್ಟು ಕುತೂಹಲವನ್ನಂತೂ ಮೂಡಿಸಿದ್ದಾರೆ.

     

    ಈ ಸಿನಿಮಾದ ಮೂಲಕ ಬಾಲಿವುಡ್ ನಟಿ ಯುಕ್ತಿ ತಾರೇಜ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದಾರೆ. ಇದು ಇವರ ದಕ್ಷಿಣದ ಎರಡನೇ ಚಿತ್ರವಾದರೆ, ಕನ್ನಡದಲ್ಲಿ ಮೊದಲು. ನಟ ನಾಗಶೌರ್ಯ ಜೊತೆ ರಂಗಾಬಲಿ ಸಿನಿಮಾದ ಮೂಲಕ ಟಾಲಿವುಡ್‌ಗೆ ಎಂಟ್ರಿ ಕೊಟ್ಟವರು ಯುಕ್ತಿ ತಾರೇಜ. ಮಾಡೆಲಿಂಗ್ ಕ್ಷೇತ್ರದಲ್ಲಿದ್ದ ಹುಡುಗಿಯನ್ನು ಟಾಲಿವುಡ್‌ಗೆ ಕರೆತರಲಾಗಿತ್ತು.

  • ರಜನಿಕಾಂತ್ ಚಿತ್ರದಲ್ಲಿ ದುನಿಯಾ ವಿಜಯ್ ವಿಲನ್

    ರಜನಿಕಾಂತ್ ಚಿತ್ರದಲ್ಲಿ ದುನಿಯಾ ವಿಜಯ್ ವಿಲನ್

    ಜನಿಕಾಂತ್ ನಟನೆಯ 171ನೇ ಸಿನಿಮಾದಲ್ಲಿ ದುನಿಯಾ ವಿಜಯ್ (Duniya Vijay) ನಟಿಸಲಿದ್ದಾರೆ ಎನ್ನುವ ಸುದ್ದಿ ಹರಡಿದೆ. ಲೋಕೇಶ್ ಕನಕರಾಜ್ (Lokesh Kanakaraj) ನಿರ್ದೇಶನದಲ್ಲಿ ಮೂಡಿ ಬರಲಿರುವ ಈ ಸಿನಿಮಾದಲ್ಲಿ ವಿಜಯ್ ವಿಲನ್ ಪಾತ್ರ ಮಾಡಲಿದ್ದಾರಂತೆ. ರಜನಿಕಾಂತ್ ಅಂದರೆ, ವಿಜಯ್ ಗೆ ಪ್ರಾಣ. ಹಾಗಾಗಿ ಈ ಸಿನಿಮಾವನ್ನು ಅವರು ಒಪ್ಪಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಲೋಕೇಶ್ ಮತ್ತು ದುನಿಯಾ ವಿಜಯ್ ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ ಎನ್ನುವುದು ಸದ್ಯದ ವರ್ತಮಾನ.

    ಹಾಗಂತ ಈ ಸಿನಿಮಾ ಈಗಲೇ ಶುರುವಾಗುವುದಿಲ್ಲ. ಇನ್ನೂ ರಜನಿಕಾಂತ್ 170ನೇ ಸಿನಿಮಾದಲ್ಲಿ ನಟಿಸಬೇಕಿದೆ. ಈ ಸಿನಿಮಾ ಇನ್ನೂ ಶೂಟಿಂಗ್ ಪ್ರಾರಂಭವಾಗಿಲ್ಲ. ಈ ಸಿನಿಮಾ ಮುಗಿದ ನಂತರವೇ 171ನೇ ಸಿನಿಮಾ ಶುರುವಾಗಲಿದೆ. ಆದರೂ, ನಿರ್ದೇಶಕರು ಪಾತ್ರಗಳನ್ನು ಹುಡುಕುವ ಕಾರ್ಯಕದಲ್ಲಿ ನಿರತರಾಗಿದ್ದಾರಂತೆ.

    170ನೇ ಸಿನಿಮಾ ವಿಶೇಷವೇನು?

    ಬರೋಬ್ಬರಿ 32 ವರ್ಷಗಳ ಬಳಿಕ ಭಾರತೀಯ ಸಿನಿಮಾ ರಂಗದ ಇಬ್ಬರು ದಿಗ್ಗಜರು ಒಂದಾಗಲಿದ್ದಾರೆ ಎನ್ನುವ ಸುದ್ದಿ ಹಲವು ತಿಂಗಳಿಂದ ಹರಿದಾಡುತ್ತಿತ್ತು. ಇದು ನಿಜನಾ ಎನ್ನುವ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಮೂಡಿತ್ತು. ಕೊನೆಗೂ ಅದು ನಿಜವಾಗಿದೆ ಮೂರು ದಶಕದ ಬಳಿಕ ರಜನಿಕಾಂತ್ ಮತ್ತು ಅಮಿತಾಭ್ ಬಚ್ಚನ್ ಒಟ್ಟಾಗಿ ನಟಿಸುತ್ತಿದ್ದಾರೆ.

    ಚಿತ್ರರಂಗದ ದಂತಕಥೆ ಎಂದರೆ ಒಬ್ಬರು ರಜನಿಕಾಂತ್(Rajanikanth), ಮತ್ತೊಬ್ಬರು ಅಮಿತಾಭ್ ಬಚ್ಚನ್. ಈ ಜೋಡಿ ಒಟ್ಟಾಗಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು.ಬಳಿಕ ತಲೈವಾ- ಬಿಗ್ ಬಿ ಜೋಡಿ ತೆರೆಯ ಮೇಲೆ ಕಾಣಿಸಿಕೊಳ್ಳಲೇಯಿಲ್ಲ. ಈ ಸ್ಟಾರ್ ಕಿಲಾಡಿ ಜೋಡಿ, ಇದೀಗ ತಮ್ಮ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಲೈವಾ-ಬಿಗ್ ಬಿ (Bigg B) ಇಬ್ಬರು ಒಟ್ಟಾಗಿ ಕಾಣಿಸಿಕೊಳ್ಳಲು ಕೌಂಟ್‌ಡೌನ್ ಶುರುವಾಗಿದೆ.

    ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ(Lyca Productions) ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ. ಇಂಡಿಯನ್, ಖೈದಿ ನಂಬರ್ 150, 2.0, ದರ್ಬಾರ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ, ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಮತ್ತೆ ಕೈ ಜೋಡಿಸಿದೆ. ರಜನಿಯ 170ನೇ ಚಿತ್ರಕ್ಕೆ ಹಣ ಸುರಿಯುತ್ತಿದೆ. ವಿಶೇಷ ಅಂದರೆ ರಜನಿ ಜೊತೆ ಬಾಲಿವುಡ್ ದಂತಕಥೆ ಅಮಿತಾಭ್ ಬಚ್ಚನ್ (Amitabh Bacchan) ಕೂಡ ನಟಿಸುತ್ತಿದ್ದಾರೆ.

    ರಜನಿಕಾಂತ್- ಅಮಿತಾಭ್ ಬಚ್ಚನ್ ಭಾರತೀಯ ಚಿತ್ರರಂಗದ ಘಟಾನುಘಟಿ ನಾಯಕರು. ಈ ಇಬ್ಬರು ತಾರೆಯರು ಅಂದಾ ಕಾನೂನ್, ಗೆರಾಫ್ತಾರ್ ಮತ್ತು ಹಮ್ ಸಿನಿಮಾಗಳಲ್ಲಿ ನಟಿಸಿದ್ದರು. ಈ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿದ್ದವು. ರಜನಿ- ಅಮಿತಾಭ್ ಬಚ್ಚನ್ ಅಭಿನಯಕ್ಕೂ ಮೆಚ್ಚುಗೆಯ ಮಹಾಪೂರ ಹರಿದು ಬಂದಿತ್ತು. ಈ ಸಿನಿಮಾಗಳ ಯಶಸ್ಸಿನ ನಂತರ ಇದೀಗ 32 ವರ್ಷದ ಬಳಿಕ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗೆ ಲೈಕಾ ಪ್ರೊಡಕ್ಷನ್ ಹಣ ಹಾಕುತ್ತಿದೆ.ಬಹಳ ಅದ್ಧೂರಿಯಾಗಿ ಮೂಡಿ ಬರಲಿರುವ ಈ ಪ್ರಾಜೆಕ್ಟ್ ಮುಂದಿನ ತಿಂಗಳ ಅಂತ್ಯಕ್ಕೆ ಟೇಕಾಫ್ ಆಗಲಿದೆ.

     

    ರಜನಿ-ಅಮಿತಾಭ್ ಬಚ್ಚನ್ ನಟಿಸಲಿರುವ, ಲೈಕಾ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ‘ಜೈ ಭೀಮ್’ ಖ್ಯಾತಿಯ ಟಿಜೆ ಜ್ಞಾನವೇಲ್ (TJ Gnanavel) ನಿರ್ದೇಶಿಸಲಿದ್ದಾರೆ. ಜೈ ಭೀಮ್ ಮೂಲಕ ಇಂಡಿಯನ್ ಸಿನಿಲೋಕದಲ್ಲಿ ಸಂಚಲನ ಸೃಷ್ಟಿಸಿದ್ದ ಜ್ಞಾನವೇಲ್ ರಜನಿ- ಅಮಿತಾಭ್ ಬಚ್ಚನ್ ನಂತಹ ಸೂಪರ್ ಸ್ಟಾರ್ಸ್ ಗೆ ಸಿನಿಮಾ ಆಕ್ಷನ್ ಕಟ್ ಹೇಳುತ್ತಿದ್ದು, ಈ ಪ್ರಾಜೆಕ್ಟ್ ಮೇಲೆ ನಿರೀಕ್ಷೆ ಹೆಚ್ಚಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾಡಿಗಾಗಿ ಸಿಕ್ಸ್ ಪ್ಯಾಕ್ ಮಾಡಿದ ದುನಿಯಾ ವಿಜಯ್

    ಹಾಡಿಗಾಗಿ ಸಿಕ್ಸ್ ಪ್ಯಾಕ್ ಮಾಡಿದ ದುನಿಯಾ ವಿಜಯ್

    ದುನಿಯಾ ವಿಜಯ್ ಸದ್ಯ ಭೀಮ (Bheem) ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರು ಜಿಮ್ ನಲ್ಲಿ ಸಾಕಷ್ಟು ಬೆವರು ಸುರಿಸುತ್ತಿದ್ದಾರೆ. ಭೀಮ ಸಿನಿಮಾದ ಹಾಡೊಂದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಈ ಹಾಡಿಗೆ ಅವರು ಸಿಕ್ಸ್ ಪ್ಯಾಕ್ (Six Pack) ಕೂಡ ಮಾಡಿಕೊಳ್ಳುತ್ತಿದ್ದಾರಂತೆ. ಜಿಮ್ ನಲ್ಲಿ ಬೆವರು ಸುರಿಸುತ್ತಿರುವ ಅವರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

    ನಿಖಿಲ್ ಚಿತ್ರದಲ್ಲಿ ವಿಜಯ್

    ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಸುಭಾಸ್ಕರನ್ ಅವರು ನಿರ್ಮಿಸುತ್ತಿರುವ, ಲಕ್ಷ್ಮಣ್ ನಿರ್ದೇಶನದಲ್ಲಿ ಯುವರಾಜ ನಿಖಿಲ್ ಕುಮಾರ್ (Nikhil Kumar) ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ.

    ಬಹು ನಿರೀಕ್ಷಿತ ಈ ಚಿತ್ರದಲ್ಲಿ ಸ್ಯಾಂಡಲ್ ವುಡ್ ಸಲಗ ದುನಿಯಾ ವಿಜಯ್ (Duniya Vijay) ಅವರು ನಟಿಸುತ್ತಿದ್ದಾರೆ.  ವಿಜಯ್ ಅವರ ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟು ಬಿಟ್ಟುಕೊಟ್ಟಿಲ್ಲ. ಸದ್ಯದಲ್ಲೇ ವಿಜಯ್ ಅವರು ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ವಿಜಯ್ ಅವರ ಪಾತ್ರ ಏನ್ನಿರಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಬಗ್ಗೆ ಸಿನಿರಸಿಕರಿಗೆ ಸಾಕಷ್ಟು ನಿರೀಕ್ಷೆಯಿದೆ.

     

    ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಹಾಗೂ ವಂಶಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಈಗಾಗಲೇ ಅನೇಕರು ಶೂಟಿಂಗ್ ಸೆಟ್ ಗೆ ಭೇಟಿ ಕೊಟ್ಟು ಕುತೂಹಲವನ್ನಂತೂ ಮೂಡಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿಖಿಲ್ ಕುಮಾರ್ ಚಿತ್ರಕ್ಕೆ ಎಂಟ್ರಿ ಕೊಟ್ಟ ದುನಿಯಾ ವಿಜಯ್

    ನಿಖಿಲ್ ಕುಮಾರ್ ಚಿತ್ರಕ್ಕೆ ಎಂಟ್ರಿ ಕೊಟ್ಟ ದುನಿಯಾ ವಿಜಯ್

    ಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಸುಭಾಸ್ಕರನ್ ಅವರು ನಿರ್ಮಿಸುತ್ತಿರುವ, ಲಕ್ಷ್ಮಣ್ ನಿರ್ದೇಶನದಲ್ಲಿ ಯುವರಾಜ ನಿಖಿಲ್ ಕುಮಾರ್ (Nikhil Kumar) ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ.

    ಬಹು ನಿರೀಕ್ಷಿತ ಈ ಚಿತ್ರದಲ್ಲಿ ಸ್ಯಾಂಡಲ್ ವುಡ್ ಸಲಗ ದುನಿಯಾ ವಿಜಯ್ (Duniya Vijay) ಅವರು ನಟಿಸುತ್ತಿದ್ದಾರೆ.  ವಿಜಯ್ ಅವರ ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟು ಬಿಟ್ಟುಕೊಟ್ಟಿಲ್ಲ. ಸದ್ಯದಲ್ಲೇ ವಿಜಯ್ ಅವರು ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ವಿಜಯ್ ಅವರ ಪಾತ್ರ ಏನ್ನಿರಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಬಗ್ಗೆ ಸಿನಿರಸಿಕರಿಗೆ ಸಾಕಷ್ಟು ನಿರೀಕ್ಷೆಯಿದೆ.

    ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಹಾಗೂ ವಂಶಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಈಗಾಗಲೇ ಅನೇಕರು ಶೂಟಿಂಗ್ ಸೆಟ್ ಗೆ ಭೇಟಿ ಕೊಟ್ಟು ಕುತೂಹಲವನ್ನಂತೂ ಮೂಡಿಸಿದ್ದಾರೆ.

     

    ಈ ಸಿನಿಮಾದ ಮೂಲಕ ಬಾಲಿವುಡ್ ನಟಿ ಯುಕ್ತಿ ತಾರೇಜ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಇದು ಇವರ ದಕ್ಷಿಣದ ಎರಡನೇ ಚಿತ್ರವಾದರೆ, ಕನ್ನಡದಲ್ಲಿ ಮೊದಲು. ನಟ ನಾಗಶೌರ್ಯ ಜೊತೆ ರಂಗಾಬಲಿ ಸಿನಿಮಾದ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟವರು ಯುಕ್ತಿ ತಾರೇಜ. ಮಾಡೆಲಿಂಗ್ ಕ್ಷೇತ್ರದಲ್ಲಿದ್ದ ಹುಡುಗಿಯನ್ನು ಟಾಲಿವುಡ್ ಗೆ ಕರೆತರಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿಖಿಲ್ ಕುಮಾರ್ ಸಿನಿಮಾದಲ್ಲಿ ದುನಿಯಾ ವಿಜಯ್

    ನಿಖಿಲ್ ಕುಮಾರ್ ಸಿನಿಮಾದಲ್ಲಿ ದುನಿಯಾ ವಿಜಯ್

    ದುನಿಯಾ ವಿಜಯ್ (Duniya Vijay) ಇದೀಗ ಭೀಮ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯ  ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ನಿಖಿಲ್ ಕುಮಾರ್ ಅಭಿನಯದ ಹೊಸ ಸಿನಿಮಾದಲ್ಲಿ ವಿಜಯ್ ಪಾತ್ರವೊಂದನ್ನು ನಿರ್ವಹಿಸಲಿದ್ದಾರಂತೆ. ಅಧಿಕೃತವಾಗಿ ಸಿನಿಮಾ ತಂಡ ಈ ವಿಷಯ ತಿಳಿಸದೇ ಇದ್ದರೂ, ವಿಜಯ್ ಪಾತ್ರ ಮಾಡುವುದು ಪಕ್ಕಾ ಎಂದು ಹೇಳಲಾಗುತ್ತಿದೆ. ಸದ್ಯದಲ್ಲೇ ಚಿತ್ರತಂಡವನ್ನೂ ಅವರು ಸೇರಿಕೊಳ್ಳಲಿದ್ದಾರೆ.

    ನಿಖಿಲ್ ಕುಮಾರ್ ಸ್ವಾಮಿ (Nikhil Kumaraswamy) ನಟನೆಯ ಹೊಸ ಸಿನಿಮಾದ ಮೂಲಕ ಬಾಲಿವುಡ್ ನಟಿ ಯುಕ್ತಿ ತಾರೇಜ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಇದು ಇವರ ದಕ್ಷಿಣದ ಎರಡನೇ ಚಿತ್ರವಾದರೆ, ಕನ್ನಡದಲ್ಲಿ ಮೊದಲು. ನಟ ನಾಗಶೌರ್ಯ ಜೊತೆ ರಂಗಾಬಲಿ ಸಿನಿಮಾದ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟವರು ಯುಕ್ತಿ ತಾರೇಜ. ಮಾಡೆಲಿಂಗ್ ಕ್ಷೇತ್ರದಲ್ಲಿದ್ದ ಹುಡುಗಿಯನ್ನು ಟಾಲಿವುಡ್ ಗೆ ಕರೆತರಲಾಗಿತ್ತು.

    ಯುಕ್ತಿ ತಾರೇಜ (Yukti Thareja) ಮೂಲತಃ ಹರಿಯಾಣ ಮೂಲದವರು. ದೆಹಲಿಯಲ್ಲಿ ವಾಣಿಜ್ಯ ವಿಷಯದಲ್ಲಿ ಪದವಿ ಮಾಡಿಕೊಂಡಿದ್ದಾರೆ. ಕೋವಿಡ್ ವೇಳೆಯಲ್ಲಿ ಮತ್ತೆ ಹರಿಯಾಣಕ್ಕೆ ಪ್ರಯಾಣ ಬೆಳೆಸಿದ್ದರು. ಕಾಲೇಜು ದಿನಗಳಲ್ಲೇ ಫ್ಯಾಷನ್ ಜಗತ್ತಿನತ್ತ ಮುಖ ಮಾಡಿ, ಓದುತ್ತಿರುವಾಗಲೇ ‘ದೆಹಲಿ ಫ್ರೆಶ್ ಫೇಸ್’ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದೇ ಮಾಡೆಲಿಂಗ್ ಜಗತ್ತಿಗೆ ಬರಲು ಪ್ರೇರಣೆ ಅಂತಾರೆ.

    ದೆಹಲಿಯಲ್ಲೇ ಮಾಡೆಲಿಂಗ್ ಜಗತ್ತಿನಲ್ಲಿ ಹೆಸರು ಮಾಡುತ್ತಿರುವಾಗಲೇ ಸಿನಿಮಾ ರಂಗದತ್ತ ಒಲವು. ಮಾಡೆಲಿಂಗ್ ಮಾಡುವಾಗಲೇ ಚಿತ್ರದಲ್ಲಿ ನಟಿಸುವಂತೆ ಆಫರ್. ಹಾಗಾಗಿ ದೆಹಲಿಯಿಂದ ಮುಂಬೈಗೆ ಶಿಫ್ಟ್ ಆಗಿದ್ದಾರೆ. ಬಾಲಿವುಡ್ ನಲ್ಲಿ ‘ಲುಟ್ ಗಯೆ’ ಹಾಡಿನ ಮೂಲಕ ಸಖತ್ ಫೇಮಸ್. ಆ ಹಾಡಿನ ಮೂಲಕ ಬಾಲಿವುಡ್ ಗೆ ಪರಿಚಯವಾದ ನಟಿ. ಈ ಹಾಡು ಪಡ್ಡೆಗಳ ಹಾರ್ಟ್ ಬೀಟ್ ಹೆಚ್ಚು ಕಡಿಮೆ ಮಾಡಿತ್ತು.

    ಲುಟ್ ಗಯೆ ಹಾಡಿನ ನಂತರ ಬಾಲಿವುಡ್ ನಲ್ಲಿ ಸಾಕಷ್ಟು ಆಫರ್ ಬಂದರೂ, ಆಯ್ಕೆ ಮಾಡಿಕೊಳ್ಳಲು ಹಿಂದೇಟು ಹಾಕಿದರು. ಹಾಗಾಗಿ ರಂಗಬಲಿ ಇವರ ಚೊಚ್ಚಲು ಸಿನಿಮಾವಾಯಿತು. ರಂಗಬಲಿ ಸಿನಿಮಾದಲ್ಲಿ ಸಖತ್ ಬೋಲ್ಡ್ ಆಗಿಯೇ ಕಾಣಿಸಿಕೊಂಡಿದ್ದರು ಯುಕ್ತಿ ತಾರೇಜ. ಮೊದಲ ಸಿನಿಮಾದಲ್ಲೇ ಅಷ್ಟೊಂದು ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದು ಚರ್ಚೆಗೂ ಕಾರಣವಾಗಿತ್ತು.

     

    ಇದೀಗ ಕನ್ನಡ ಸಿನಿಮಾ ರಂಗಕ್ಕೂ ಯುಕ್ತಿ ತಾರೇಜ ಕಾಲಿಟ್ಟಿದ್ದಾರೆ. ಈ ಸಿನಿಮಾದಲ್ಲಿ ಯಾವ ರೀತಿಯ ಪಾತ್ರ ಮಾಡುತ್ತಾರೆ ಎನ್ನುವುದು ಬಹಿರಂಗವಾಗಿಲ್ಲ. ಮುಂದಿನ ದಿನಗಳಲ್ಲಿ ತಿಳಿಯಬಹುದು. ಈ ಸಿನಿಮಾದ ಮೂಲಕ ಲೈಕಾ ಸಂಸ್ಥೆ (Lyca Production) ಕೂಡ ಇದೇ ಮೊದಲ ಬಾರಿಗೆ ಕನ್ನಡ ಸಿನಿಮಾವೊಂದನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರಕ್ಕೆ ಯುಕ್ತಿ ತಾರೇಜ ಆಯ್ಕೆ ಕೂಡ ಕುತೂಹಲ ಮೂಡಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಿತ್ರರಂಗಕ್ಕೆ ಎಂಟ್ರಿ ಕೊಡಲಿದ್ದಾರೆ ದುನಿಯಾ ವಿಜಯ್ ಪುತ್ರಿಯರು

    ಚಿತ್ರರಂಗಕ್ಕೆ ಎಂಟ್ರಿ ಕೊಡಲಿದ್ದಾರೆ ದುನಿಯಾ ವಿಜಯ್ ಪುತ್ರಿಯರು

    ಸ್ಯಾಂಡಲ್‌ವುಡ್ ಸಲಗ (Salaga) ದುನಿಯಾ ವಿಜಯ್ (Duniya Vijay) ಈಗಾಗಲೇ ನಟ, ನಿರ್ದೇಶಕನಾಗಿ ಸೈ ಎನಿಸಿಕೊಂಡಿದ್ದಾರೆ. ಭೀಮನಾಗಿ ಅಬ್ಬರಿಸಲು ಸಜ್ಜಾಗಿರುವ ಬೆನ್ನಲ್ಲೇ ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ಸಿನಿ ದುನಿಯಾಗೆ ಇಬ್ಬರು ಪುತ್ರಿಯರನ್ನು ವಿಜಯ್ ಪರಿಚಯಿಸುತ್ತಿದ್ದಾರೆ.

    ದುನಿಯಾ ವಿಜಯ್ ಅವರ ಇಬ್ಬರು ಹೆಣ್ಣು ಮಕ್ಕಳು ಸಿನಿಮಾರಂಗ ಪ್ರವೇಶಿಸೋದು ಖಚಿತ. ಇದನ್ನ ಸ್ವತಃ ವಿಜಯ್ ಅನೌನ್ಸ್ ಮಾಡಿದ್ದಾರೆ. ಆದರೆ ನೀವು ಗೆಸ್ ಮಾಡಿದಂತೆ ಕಿರಿ ಮಗಳು ಮೋನಿಷಾ (Monisha) ಅಲ್ಲ. ಬದಲಿಗೆ ಹಿರಿಯ ಮಗಳು ಮೋನಿಕಾ (Monica) ಮೊದಲು ಚಿತ್ರರಂಗಕ್ಕೆ ಎಂಟ್ರಿ ಕೊಡಲಿದ್ದಾರೆ. ಮೋನಿಕಾ ವಿಜಯ್ ಅವರ ಎಜುಕೇಷನ್ ಕಂಪ್ಲೀಟ್ ಆಗಿದೆ. ರಿಸೆಂಟ್ ಆಗಿ ಮುಂಬೈನಲ್ಲಿ ಆ್ಯಕ್ಟಿಂಗ್ ಕೋರ್ಸ್ ಸಹ ಮುಗಿಸಿ ಬಂದಿದ್ದಾರೆ. ಮುಂಬೈನ ಅನುಪಮ್ ಖೇರ್ (Anupam Kher) ನಟನಾ ಶಾಲೆಯಲ್ಲಿ ತರಬೇತಿ ಪಡೆದು ಬಂದಿರುವ ಮೋನಿಕಾ, ಸದ್ಯ ಬೆಂಗಳೂರಿನಲ್ಲಿ ಕಲಾತಂಡವೊಂದರ ಜೊತೆ ಕೆಲಸ ಮಾಡ್ತಿದ್ದಾರೆ. ಇದನ್ನೂ ಓದಿ:‘ಜವಾನ್’ ಸಕ್ಸಸ್ ಬಳಿಕ ಪ್ರಭಾಸ್ ಸಿನಿಮಾದಲ್ಲಿ ನಯನತಾರಾ

    ಹಾಗಾಗಿ ಹಿರಿ ಮಗಳು ಮೋನಿಕಾ ಸಿನಿಮಾ ಎಂಟ್ರಿಗೆ ತಯಾರಾಗಿದ್ದು, ಶೀಘ್ರದಲ್ಲೇ ಸಿನಿಮಾ ಅನೌನ್ಸ್ ಆಗುವ ನಿರೀಕ್ಷೆಯಿದೆ. ಆದ್ರೆ ಕಿರಿ ಮಗಳು ಮೋನಿಷಾ ಇನ್ನೂ ಎಜುಕೇಷನ್ ಮಾಡ್ತಿದ್ದು, ಈಗ ಹೆಚ್ಚಿನ ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋಗ್ತಿದ್ದಾರಂತೆ. ಜೊತೆಗೆ ಮೋನಿಷಾ ಸಹ ಆ್ಯಕ್ಟಿಂಗ್ ಟ್ರೈನಿಂಗ್ ಪಡೆದುಕೊಳ್ಳಲಿದ್ದು, ಅದು ಮುಗಿದು ವಾಪಸ್ ಆದ ಬಳಿಕವಷ್ಟೇ ಮೋನಿಷಾ ಬಣ್ಣದ ಜಗತ್ತಿಗೆ ಬರಲಿದ್ದಾರೆ.

    ವಿಜಯ್ ಅವರ ಇಬ್ಬರು ಮಕ್ಕಳಿಗೂ ಈಗಾಗಲೇ ತುಂಬಾ ಆಫರ್ಸ್ ಬಂದಿದೆ. ಆದರೆ ಶಿಕ್ಷಣಕ್ಕೆ ತೊಂದರೆಯಾಗಬಾರದು ಅನ್ನೋ ಕಾರಣಕ್ಕೆ ಇಷ್ಟು ದಿನ ನಟನೆಗೆ ಬರೋದನ್ನ ಮುಂದೂಡಲಾಗಿತ್ತು. ಆದ್ರೀಗ ಹಿರಿ ಮಗಳು ಸಿನಿಮಾ ಮಾಡೋ ಉದ್ದೇಶದಿಂದಲೇ ಸಕಲ ತಯಾರಿ ಮುಗಿಸಿದ್ದಾಳೆ. ಹೀಗಾಗಿ ಮೋನಿಕಾ ಲಾಂಚ್ ಮಾಡೋಕೆ ಇದು ಸೂಕ್ತ ಸಮಯ ಎಂದು ವಿಜಯ್ ನಿರ್ಧರಿಸಿದ್ದಾರಂತೆ. ಸದ್ಯ ಮೋನಿಕಾ ಚೊಚ್ಚಲ ಸಿನಿಮಾಗೆ ಅದ್ಭುತ ಸ್ಕ್ರಿಪ್ಟ್ ಕೂಡ ರೆಡಿಯಿದ್ದು, ಒಂದೊಳ್ಳೆ ಸಮಯ ನೋಡ್ಕೊಂಡು ಸಿನಿಮಾ ಶುರು ಮಾಡುವ ಪ್ಲ್ಯಾನ್‌ನಲ್ಲಿದ್ದಾರೆ. ಇನ್ನು ಹಿರಿಯ ಮಗಳ ಮೊದಲ ಸಿನಿಮಾಗೆ ಸ್ವತಃ ದುನಿಯಾ ವಿಜಯ್ ಅವರೇ ಆ್ಯಕ್ಷನ್ ಕಟ್ ಹೇಳುವ ಸಾಧ್ಯತೆ ಇದೆ.

    ಸಕಲ ತಯಾರಿ ಮಾಡಿಕೊಂಡೇ ನಟನೆಗಿಳಿಯುತ್ತಿರುವ ಮೋನಿಕಾ ಕೂಡ ತಂದೆ ದುನಿಯಾ ವಿಜಯ್ ಅವರಂತೆಯೇ ಗೆದ್ದು ಬೀಗುತ್ತಾರಾ? ಕಾಯಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದುನಿಯಾ ವಿಜಯ್ ನಿರ್ದೇಶನದ ಭೀಮನ ‘ಸೈಕ್ ಸಾಂಗ್’ ರಿಲೀಸ್

    ದುನಿಯಾ ವಿಜಯ್ ನಿರ್ದೇಶನದ ಭೀಮನ ‘ಸೈಕ್ ಸಾಂಗ್’ ರಿಲೀಸ್

    ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡುತ್ತಿರುವ ಭೀಮ ಸಿನಿಮಾದ ‘ಸೈಕ್ ಸಾಂಗ್’ (Saik Song) ಇಂದು ಬಿಡುಗಡೆ ಆಗಿದೆ. ಬ್ಯಾಡ್ ಬಾಯ್ಸ್ ಆನ್ ದಿ ಸ್ಟ್ರೀಟ್ ಎಂದು ಶುರುವಾಗುವ ಗೀತೆಯಲ್ಲಿ ಕನ್ನಡ, ಹಿಂದಿ, ಇಂಗ್ಲಿಷ್ ಪದಗಳನ್ನು ಮಿಕ್ಸ್ ಮಾಡಿ ರಾಪ್ ಮಾಡಲಾಗಿದೆ. ಇದೊಂದು ವಿಜಯ್ ಅವರ ಇಂಟ್ರಡಕ್ಷನ್ ಸಾಂಗ್ ಆಗಿದ್ದು, ಚರಣ್ ರಾಜ್ ಸಂಗೀತ ಸಂಯೋಜನೆಯಲ್ಲಿ ಹಾಡು ಮೂಡಿ ಬಂದಿದೆ.

    ರಾಪರ್ ಗಳಾದ ರಾಹುಲ್ ಡಿಟ್ಟೋ, ನಾಗಾರ್ಜುನ್ ಶರ್ಮಾ ಮತ್ತು ಎಂ.ಸಿ.ಬಿಜ್ಜು ಈ ಹಾಡನ್ನು ಬರೆದಿದ್ದು, ರಾಹುಲ್ ಮತ್ತು ಬಿಜ್ಜು ಈ ಗೀತೆಯನ್ನು ಹಾಡಿದ್ದಾರೆ. ಕ್ಯಾಚಿ ಎನಿಸುವಂತಹ ಅನೇಕ ಪದಗಳನ್ನು ಇಲ್ಲಿ ಬಳಸಲಾಗಿದೆ. ಕೆಲ ಬೈಗಳುಗಳನ್ನು ಕೂಡ ಈ ಹಾಡಿನಲ್ಲಿ ಕೇಳಬಹುದು.

    ಭೀಮ (Bheem) ಸೆಟ್ಟೇರಿದಾನಿಂದಲೂ ದೊಡ್ಡ ಮಟ್ಟದ ಹೈಪ್, ಕ್ರೇಜ್ ಹುಟ್ಟಿಸಿರೋ ಸಿನಿಮಾ. ಈ ವರ್ಷದ ಬಹು ನಿರೀಕ್ಷಿತ ಸಿನಿಮಾ. ಸ್ಯಾಂಡಲ್ ವುಡ್ ಸಲಗ ದುನಿಯಾ ವಿಜಯ್ (Duniya Vijay) ನಿರ್ದೇಶನದಲ್ಲಿ ಮೂಡಿ ಬರ್ತಿರೋ ಮತ್ತೊಂದು ಮಾಸ್ ಕಮರ್ಷಿಯಲ್ ಎಂಟ್ರಟೈನರ್. ಸಲಗದಂತಹ ಬ್ಲಾಕ್ ಬಸ್ಟರ್ ಕೊಟ್ಮೇಲೆ ದುನಿಯಾ ವಿಜಯ್ ಮತ್ತೆ ಆಕ್ಷನ್ ಕಟ್ ಹೇಳೋದ್ರೊಂದಿಗೆ ಲೀಡ್ ರೋಲ್ ಪ್ಲೇ ಮಾಡಿರೋ ಸಿನಿಮಾ. ಪ್ರಚಂಡ ಪ್ರತಿಭಾವಂತರ ದಂಡುಕಟ್ಟಿಕೊಂಡು ವಿಜಯ್ ಈ ಸಲ ಮತ್ತೊಂದು ಔಟ್ ಅಂಡ್ ಔಟ್ ಎಂಟ್ರಟೈನ್ಮೆಂಟ್ ಪ್ಯಾಕೇಜ್ ಮಾಡಿದ್ದಾರೆ.

     

    ಕೃಷ್ಣ ಸಾರ್ಥಕ್, ಜಗದೀಶ್ ಗೌಡ ಜಂಟಿಯಾಗಿ ನಿರ್ಮಿಸಿರೋ ಈ ಚಿತ್ರಕ್ಕೆ ಶಿವಸೇನಾ ಕ್ಯಾಮೆರಾ ವರ್ಕ್ ಇದೆ. ಭೀಮ ಈಗಾಗ್ಲೇ ಪೋಸ್ಟ್ ಪ್ರೊಡಕ್ಷನ್ ಕೊನೆಯ ಹಂತದಲ್ಲಿರೋ ಚಿತ್ರತಂಡ, ಇದೀಗ ಒಂದೊಂದೇ ಹಾಡನ್ನ ರಿಲೀಸ್ ಮಾಡೋದಕ್ಕೆ ಸಜ್ಜಾಗಿದೆ. ಅದ್ರಂತೆ, ಮೊದಲ ಹಾಡನ್ನ ಇದೇ 18ನೇ ತಾರೀಖು ಸೋಮವಾರ ಗೌರಿ ಗಣೇಶ ಹಬ್ಬದ ಪ್ರಯುಕ್ತ ರಿಲೀಸ್ ಮಾಡ್ತಿದ್ದಾರೆ.  ಮ್ಯೂಸಿಕ್ ಡೈರೆಕ್ಟರ್ ಚರಣ್ ರಾಜ್ (Charan Raj) ಜೊತೆಗೆ ವಿಜಯ್ ಸಲಗದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ರು. ಆದಾದ ಮೇಲೆ ಭೀಮ ಮೂಲಕ ಮತ್ತೆ ಸಂಚಲ ಸೃಷ್ಟಿಸೋದಕ್ಕೆ ಸಜ್ಜಾಗಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗೌರಿ ಗಣೇಶ ಹಬ್ಬಕ್ಕೆ ‘ಭೀಮ’ನ ಬ್ಯಾಡ್ ಬಾಯ್ಸ್ ಸಾಂಗ್  ರಿಲೀಸ್

    ಗೌರಿ ಗಣೇಶ ಹಬ್ಬಕ್ಕೆ ‘ಭೀಮ’ನ ಬ್ಯಾಡ್ ಬಾಯ್ಸ್ ಸಾಂಗ್ ರಿಲೀಸ್

    ಭೀಮ (Bheem) ಸೆಟ್ಟೇರಿದಾನಿಂದಲೂ ದೊಡ್ಡ ಮಟ್ಟದ ಹೈಪ್, ಕ್ರೇಜ್ ಹುಟ್ಟಿಸಿರೋ ಸಿನಿಮಾ. ಈ ವರ್ಷದ ಬಹು ನಿರೀಕ್ಷಿತ ಸಿನಿಮಾ. ಸ್ಯಾಂಡಲ್ ವುಡ್ ಸಲಗ ದುನಿಯಾ ವಿಜಯ್ (Duniya Vijay) ನಿರ್ದೇಶನದಲ್ಲಿ ಮೂಡಿ ಬರ್ತಿರೋ ಮತ್ತೊಂದು ಮಾಸ್ ಕಮರ್ಷಿಯಲ್ ಎಂಟ್ರಟೈನರ್. ಸಲಗದಂತಹ ಬ್ಲಾಕ್ ಬಸ್ಟರ್ ಕೊಟ್ಮೇಲೆ ದುನಿಯಾ ವಿಜಯ್ ಮತ್ತೆ ಆಕ್ಷನ್ ಕಟ್ ಹೇಳೋದ್ರೊಂದಿಗೆ ಲೀಡ್ ರೋಲ್ ಪ್ಲೇ ಮಾಡಿರೋ ಸಿನಿಮಾ. ಪ್ರಚಂಡ ಪ್ರತಿಭಾವಂತರ ದಂಡುಕಟ್ಟಿಕೊಂಡು ವಿಜಯ್ ಈ ಸಲ ಮತ್ತೊಂದು ಔಟ್ ಅಂಡ್ ಔಟ್ ಎಂಟ್ರಟೈನ್ಮೆಂಟ್ ಪ್ಯಾಕೇಜ್ ಮಾಡಿದ್ದಾರೆ.

    ಕೃಷ್ಣ ಸಾರ್ಥಕ್, ಜಗದೀಶ್ ಗೌಡ ಜಂಟಿಯಾಗಿ ನಿರ್ಮಿಸಿರೋ ಈ ಚಿತ್ರಕ್ಕೆ ಶಿವಸೇನಾ ಕ್ಯಾಮೆರಾ ವರ್ಕ್ ಇದೆ. ಭೀಮ ಈಗಾಗ್ಲೇ ಪೋಸ್ಟ್ ಪ್ರೊಡಕ್ಷನ್ ಕೊನೆಯ ಹಂತದಲ್ಲಿರೋ ಚಿತ್ರತಂಡ, ಇದೀಗ ಒಂದೊಂದೇ ಹಾಡನ್ನ ರಿಲೀಸ್ ಮಾಡೋದಕ್ಕೆ ಸಜ್ಜಾಗಿದೆ. ಅದ್ರಂತೆ, ಮೊದಲ ಹಾಡನ್ನ ಇದೇ 18ನೇ ತಾರೀಖು ಸೋಮವಾರ ಗೌರಿ ಗಣೇಶ ಹಬ್ಬದ ಪ್ರಯುಕ್ತ ರಿಲೀಸ್ ಮಾಡ್ತಿದ್ದಾರೆ.  ಮ್ಯೂಸಿಕ್ ಡೈರೆಕ್ಟರ್ ಚರಣ್ ರಾಜ್ (Charan Raj) ಜೊತೆಗೆ ವಿಜಯ್ ಸಲಗದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ರು. ಆದಾದ ಮೇಲೆ ಭೀಮ ಮೂಲಕ ಮತ್ತೆ ಸಂಚಲ ಸೃಷ್ಟಿಸೋದಕ್ಕೆ ಸಜ್ಜಾಗಿದ್ದಾರೆ.

     

    ಈಗಾಗ್ಲೇ ರಿಲೀಸ್ ಆಗಿರೋ ಟೀಸರ್ ಬಿಟ್ ನಲ್ಲೇ ವಿಜಯ್ ಚರಣ್ ಮ್ಯೂಸಿಕ್ ಝಲಕ್ ನ ಬಿಟ್ಟು ಕುತೂಹಲ ಹುಟ್ಟಿಸಿದ್ರು. ಹಾಗಾಗಿ ಈಗ ಗೌರಿ ಗಣೇಶನ ಹಬ್ಬಕ್ಕೆ ರಿಲೀಸ್ ಆಗ್ತಿರೋ ಬ್ಯಾಡ್ ಬಾಯ್ಸ್ ಮೇಲೆ ಸಿಕ್ಕಾಪಟ್ಟೆ ಕುತೂಹಲ  ನಿರೀಕ್ಷೆ ಇದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]