Tag: Duniya Vijay

  • ‘ಪೆಂಟಗನ್’ ನಂತರ ಮತ್ತೊಂದು ಚಿತ್ರಕ್ಕೆ ನಟ ರಾಘು ಶಿವಮೊಗ್ಗ ಡೈರೆಕ್ಷನ್

    ‘ಪೆಂಟಗನ್’ ನಂತರ ಮತ್ತೊಂದು ಚಿತ್ರಕ್ಕೆ ನಟ ರಾಘು ಶಿವಮೊಗ್ಗ ಡೈರೆಕ್ಷನ್

    ಚೌಕಬಾರ, ಚೂರಿಕಟ್ಟೆ, ಪೆಂಟಗನ್ ರೀತಿಯ ಹೊಸ ಬಗೆಯ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ, ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕ, ನಟ ರಾಘು ಶಿವಮೊಗ್ಗ (Raghu Shivamogga) ಇದೀಗ ಮತ್ತೊಂದು ಚಿತ್ರಕ್ಕೆ ನಿರ್ದೇಶನ ಮಾಡಲು ಮುಂದಾಗಿದ್ದಾರೆ. ಪೆಂಟಗನ್ ನಲ್ಲಿ ಬೋಲ್ಡ್ ಸಬ್ಜೆಕ್ಟ್ ಅನ್ನು ಆಯ್ಕೆ ಮಾಡಿಕೊಂಡಿದ್ದ ಇವರು, ಮುಂದಿನ ಸಿನಿಮಾಗಾಗಿ (New Movie) ಯಾವ ರೀತಿಯ ಕಥೆಯನ್ನು ಆಯ್ಕೆ ಮಾಡಿಕೊಂಡಿರಬಹುದು ಎನ್ನುವ ಕುತೂಹಲ ಮೂಡಿದೆ.

    ಅವರ ಮುಂದಿನ ಚಿತ್ರದ ಬಗ್ಗೆ ಯಾವುದೇ ಮಾಹಿತಿಯನ್ನು ನೀಡದೇ ಹೋದರೂ, ಅವರ ಹೊಸ ಚಿತ್ರದ ಶೀರ್ಷಿಕೆ (Title Launch) ಅನಾವರಣವನ್ನು ದುನಿಯಾ ವಿಜಯ್ (Duniya Vijay), ನಾಳೆ ಸಂಜೆ 5.31ಕ್ಕೆ ಮಾಡಲಿದ್ದಾರೆ. ವಿಜಯ್ ಈ ಸಿನಿಮಾದ ಟೈಟಲ್ ಲಾಂಚ್ ಮಾಡುತ್ತಿರುವುದರಿಂದ ಇದೊಂದು ಸಾಹಸ ಪ್ರಧಾನ ಸಿನಿಮಾ ಇರಬಹುದಾ ಎನ್ನುವ ಪ್ರಶ್ನೆ ಕೂಡ ಮೂಡಿದೆ. ಆದರೆ, ನಾಳೆಯೇ ಒಂದಷ್ಟು ವಿಷಯಗಳನ್ನು ಬಹಿರಂಗವಾಗಬಹುದು. ಇದನ್ನೂ ಓದಿ:ಚಂದ್ರನನ್ನು ಮುಟ್ಟಿದ ಭಾರತ- ಇಸ್ರೋ ಸಾಧನೆಗೆ ಭೇಷ್‌ ಎಂದ ಸ್ಟಾರ್ಸ್

    ನಿರ್ದೇಶಕನ ಕನಸ್ಹೊತ್ತು ಚಿತ್ರೋದ್ಯಮಕ್ಕೆ ಬಂದಿದ್ದ ರಾಘು, ಮೊದಲು ಚೌಕಬಾರ ಹೆಸರಿನ ಕಿರುಚಿತ್ರ ಮಾಡಿದರು. ಆ ಸಿನಿಮಾವನ್ನು ಥಿಯೇಟರ್ ಗೆ ರಿಲೀಸ್ ಮಾಡಿ, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದರು. ಆನಂತರ ಚೂರಿಕಟ್ಟೆ ಸಿನಿಮಾಗೆ ಆಕ್ಷನ್ ಕಟ್ ಹೇಳಿದರು. ಈ ಸಿನಿಮಾ ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಯಿತು. ಅವರಿಗೂ ಒಳ್ಳೆಯ ಹೆಸರು ಬಂತು. ನಂತರ ಆಕ್ಟ್ 1978 ಸಿನಿಮಾಗೆ ನಟರಾಗಿ ಪ್ರವೇಶ ಮಾಡಿದರು. ಈ ಸಿನಿಮಾದಲ್ಲಿನ ಪಾತ್ರ ಅವರನ್ನು ಬ್ಯುಸಿ ನಟನನ್ನಾಗಿ ಮಾಡಿತು. ಸಾಕಷ್ಟು ಸಿನಿಮಾಗಳಲ್ಲಿ ನಟನಾಗಿಯೇ ಬ್ಯುಸಿಯಾದರು. ಈಗ ಮತ್ತೆ ನಿರ್ದೇಶನದತ್ತ ಮುಖ ಮಾಡಿದ್ದಾರೆ.

     

    ಹೊಸ ಸಿನಿಮಾದ ನಟರು, ತಾಂತ್ರಿಕ ವರ್ಗ ಯಾವುದನ್ನೂ ರಾಘು ಶಿವಮೊಗ್ಗ ಅವರು ಬಿಟ್ಟುಕೊಟ್ಟಿಲ್ಲ. ಕೇವಲ ಟೈಟಲ್ ಶೀರ್ಷಿಕೆಯ ಕುರಿತಾಗಿ ಮಾತ್ರ ಮಾಹಿತಿ ನೀಡಿದ್ದಾರೆ. ಪದ್ಮಾ ಪಿಕ್ಚರ್ಸ್ ಮತ್ತು ಗೌರಿ ಟಾಕೀಸ್ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಭೀಮ’ನಿಗಾಗಿ ಮತ್ತೆ ಒಂದಾದ ಕವಿರಾಜ್-ದುನಿಯಾ ವಿಜಯ್

    ‘ಭೀಮ’ನಿಗಾಗಿ ಮತ್ತೆ ಒಂದಾದ ಕವಿರಾಜ್-ದುನಿಯಾ ವಿಜಯ್

    ರಿಗೊಬ್ಳೆ ಪದ್ಮಾಪತಿ…’ ಸಾಂಗ್ ಯಾರು ತಾನೆ ಕೇಳಿಲ್ಲ. ಸ್ಯಾಂಡಲ್‌ವುಡ್ ಕ್ವೀನ್, ಮೋಹಕತಾರೆ ರಮ್ಯಾ ಪದ್ಮಾವತಿಯಾಗಿ ಹಾಡಿಗೆ ಹೆಜ್ಜೆ ಹಾಕಿದ್ದರು. ರಮ್ಯಾಗೆ ದುನಿಯಾ ವಿಜಿ (Duniya Vijay) ಸಾಥ್ ನೀಡಿದ್ದರು. ‘ಜಾನಿ ಮೇರಾ ನಾಮ್ ಪ್ರೀತಿ ಮೇರಾ ಕಾಮ್’ ಸಿನಿಮಾದ ಹಾಡು ಇದಾಗಿದ್ದು ಇಬ್ಬರೂ ಸಖತ್ ಆಗಿ  ಹೆಜ್ಜೆ ಹಾಕಿದ್ದರು. ವಿ ಹರಿಕೃಷ್ಣ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿರುವ ಈ ಸುಂದರ ಹಾಡಿಗೆ (Song) ಸಾಹಿತ್ಯ ರಚಿಸಿದ್ದು ಖ್ಯಾತ ಚಿತ್ರಸಾಹಿತಿ ಕವಿರಾಜ್ (Kaviraj). ಈ ಹಾಡಿನ ಬಳಿಕ ರಮ್ಯಾ ಸ್ಯಾಂಡಲ್‌ವುಡ್ ಪದ್ಮಾವತಿ ಅಂತಾನೇ ಖ್ಯಾತಿಗಳಿಸಿದರು. ಅಷ್ಟರ ಮಟ್ಟಿಗೆ ಈ ಹಾಡು ಹಿಟ್ ಆಗಿತ್ತು.

    ಆ ಹಾಡಿನ ನಂತರ ಕವಿರಾಜ್ ಮತ್ತು ದುನಿಯ ವಿಜಿ ಕಾಂಬಿನೇಷ್‌ನಲ್ಲಿ ಮತ್ತೊಂದು ವಿಶೇಷ ಹಾಡು ಮೂಡಿ ಬರುತ್ತಿದೆ. ‘ಪದ್ಮಾವತಿ’ ಹಾಡಿನ ಬಳಿಕ ಮತ್ತೊಂದು ಬ್ಲಾಕ್ ಬಸ್ಟರ್ ಹಿಟ್‌ಗೆ ಸಜ್ಜಾಗಿದೆ ಈ ಜೋಡಿ. ದುನಿಯಾ  ವಿಜಿಯ್ ಸದ್ಯ ‘ಭೀಮ’ (Bheem) ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿಸಿರುವ ವಿಜಿ ರಿಲೀಸ್ ತಯಾರಿಯಲ್ಲಿದ್ದಾರೆ. ‘ಭೀಮ’ ಸಿನಿಮಾಗಾಗಿ ಕವಿರಾಜ್ ವಿಶೇಷ ಹಾಡೊಂದನ್ನು ಬರೆದಿದ್ದಾರೆ. ಅಂದು ‘ಪದ್ಮಾವತಿ’ ಅಂತ ಮೋಡಿ ಮಾಡಿದ್ದ ಕವಿರಾಜ್ ಇದೀಗ, ‘ಬೇಡ ಬೇಡ ದೊಡ್ಡ ಪಾರ್ಟಿ…’ ಎನ್ನುತ್ತಾ ಮತ್ತೆ ಗಾಯನಪ್ರಿಯರ ಮುಂದೆ ಬರುತ್ತಿದ್ದಾರೆ. ಈ ಬಗ್ಗೆ ಕವಿರಾಜ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

    ‘ಬೇಡ ದೊಡ್ಡ ದೊಡ್ಡ ಪಾರ್ಟಿ.. ಕುಡಿಸು ನೀ ಸಾಕು ಬೈ ಟೂ ಟೀ…’ ಸಾಲುಗಳಿಂದ ಪ್ರಾರಂಭವಾಗುವ ಈ ಹಾಡು ಭೀಮ ಸಿನಿಮಾದ ಹೈ ವೋಲ್ಟೇಜ್ ಹಾಡು ಆಗಿರಲಿದೆ. ಅಂದಹಾಗೆ ಭೀಮ ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಚರಣ್ ರಾಜ್ ಸಂಗೀತ, ಕವಿರಾಜ್ ಸಾಹಿತ್ಯ ಹಾಗೂ ದುನಿಯಾ ವಿಜಯ್ ನಟನೆ. ಈ ಮೂವರ ಕಾಂಬಿನೇಷನ್‌ನಲ್ಲಿ ಬರ್ತಿರುವ ಹಾಡಿನ ಮೇಲೆ ನಿರೀಕ್ಷೆ ಈಗಾಗಲೇ ಹೆಚ್ಚಾಗಿದ್ದು ತೆರೆಮೇಲೆ ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ.

    ‘ಭೀಮನ ಟೀಮ್ ನಿಂದ ಚರಣ್ ರಾಜ್ ಸಂಗೀತದಲ್ಲಿ ಒಂದು ಖಡಕ್ ಸಾಂಗ್ ಲೋಡಿಂಗ್. ಬೇಡ ಬೇಡವೆಂದರೂ ಚೇರ್ ಮೇಲೆ ನನ್ನ ಕೂರಿಸಿ , ತಾವು ಹಿಂದೆ ನಿಂತು ಒಬ್ಬ ತಂತ್ರಜ್ಞರಿಗೆ ಗೌರವ ನೀಡಿದ್ದು ಹೃದಯವಂತ ವಿಜಯ್ ಸರ್’ ಎಂದು ಬರೆದುಕೊಂಡಿದ್ದಾರೆ. ದುನಿಯಾ ವಿಜಯ್ ತಂತ್ರಜ್ಞರನ್ನು ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತಾರೆ, ಅಷ್ಟೆಯಲ್ಲದೇ ಅವರಿಗೆ ಸಲ್ಲ ಬೇಕಾದ ಗೌರವವನ್ನು ನೀಡುತ್ತಾರೆ. ಹಾಗಾಗಿಯೇ ವಿಜಿ ಎಂದರೆ ತಂತ್ರಜ್ಞರಿಗೆ ಇಷ್ಟ. ಚಿತ್ರಸಾಹಿತಿ ಕವಿರಾಜ್ ಕೂಡ ಇದನ್ನೆ ಹೇಳಿದ್ದಾರೆ. ಸುಂದರ ಸಾಲುಗಳ ಜೊತೆಗೆ ಕವಿರಾಜ್ ಚೇರ್ ಮೇಲೆ ಕುಳಿತಿದ್ದು ಸುತ್ತ ಭೀಮ ಟೀಮ್ ನಿಂತಿರುವ ಫೋಟೋವನ್ನು ಶೇರ್ ಮಾಡಿದ್ದಾರೆ.

    ‘ಭೀಮ’ ಸಿನಿಮಾದ ಬಗ್ಗೆ ಹೇಳುವುದಾದರೆ ದುನಿಯಾ ವಿಜಯ್ ನಾಯಕನಾಗಿ ನಟಿಸಿದ್ದರೆ ನಾಯಕಿಯಾಗಿ ರಂಗಭೂಮಿ ಕಲಾವಿದೆ ಅಶ್ವಿನಿ ಕಾಣಿಸಿಕೊಂಡಿದ್ದಾರೆ. ಕೃಷ್ಣ  ಸಾರ್ಥಕ್  ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಸಲಗ ಬಳಿಕ ದುನಿಯ ವಿಜಯ್ ಆಕ್ಷನ್ ಕಟ್ ಹೇಳುತ್ತಿರುವ 2ನೇ ಸಿನಿಮಾ ಇದಾಗಿದೆ.  ಸಲಗ ಸಕ್ಸಸ್‌ನಲ್ಲಿರುವ ವಿಜಿ ಭೀಮ ಮೂಲಕ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿದ್ದರಾಮಯ್ಯನವರು ಮತ್ತೆ ಸಿಎಂ ಆಗ್ಬೇಕು – ದುನಿಯಾ ವಿಜಯ್

    ಸಿದ್ದರಾಮಯ್ಯನವರು ಮತ್ತೆ ಸಿಎಂ ಆಗ್ಬೇಕು – ದುನಿಯಾ ವಿಜಯ್

    ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಪರವಾಗಿ ವರುಣಾ ಕ್ಷೇತ್ರದಲ್ಲಿ (Varuna Constituency) ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ಭರ್ಜರಿ ಪ್ರಚಾರ ನಡೆಸಿದ್ದಾರೆ.

    ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ರಮ್ಯಾ (Ramya), ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿರುವ ಗೀತಾ ಶಿವರಾಜ್ ಕುಮಾರ್ ಹಾಗೂ ಶಿವರಾಜ್ ಕುಮಾರ್ (Shivarajkumar) ಮತ್ತು ಸಿದ್ಧರಾಮಯ್ಯನವರಿಗೆ ಆಪ್ತರಾಗಿರುವ ದುನಿಯಾ ವಿಜಯ್ (Duniya Vijay) ಹಾಗೂ ನಿಶ್ಚಿಕಾ ನಾಯ್ದು ವರುಣಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿ ಸಿದ್ದರಾಮಯ್ಯ ಪರ ಮತಯಾಚಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಅಪ್ಪಾಜಿ ಮೇಲಿನ ಪ್ರೀತಿ ಉಕ್ಕಿ ಹರಿಯುತ್ತಿದೆ – ನಿಶ್ವಿಕಾ ನಾಯ್ಡು

    ಈ ವೇಳೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ನಟ ದುನಿಯಾ ವಿಜಯ್, ಸಿದ್ದರಾಮಯ್ಯನವರು ಬಡವರಿಗಾಗಿ ಅನೇಕ ಕಾರ್ಯಕ್ರಮಗಳನ್ನ ನೀಡಿದ್ದಾರೆ. ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು ಹೇಳಿದ್ದಾರೆ.

    5 ವರ್ಷ ಪೂರ್ಣ ಆಡಳಿತ ಮಾಡಿದ್ದಾರೆ ಅಂದ್ರೆ ಭ್ರಷ್ಟರಹಿತ ಆಡಳಿತ ಅನ್ನೋದು ಗೊತ್ತಾಗುತ್ತೆ. ಹೊರಗಿನವರಿಗಿಂತ ನಮ್ಮೂರಿನವರು, ನಮ್ಮವರನ್ನ ಗೆಲ್ಲಿಸಬೇಕು. ಎಲ್ಲರೂ ಕೂಡ ಸಿದ್ದರಾಮಯ್ಯ ನವರಿಗೆ ಮತ ಹಾಕಿ. ಅವರು ಮತ್ತೆ ಸಿಎಂ ಆಗ್ಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಾಜಕೀಯ ಅಖಾಡಕ್ಕೆ ಅಪ್ಪು ಎಳೆತಂದ ಪ್ರತಾಪ್ ಸಿಂಹ : ನಟ ಶಿವಣ್ಣ ಪ್ರತಿಕ್ರಿಯೆ

    ಸಿದ್ದರಾಮಯ್ಯ ಪರ ಶಿವಣ್ಣ ಪ್ರಚಾರಕ್ಕೆ ಬಿಜೆಪಿ ನಾಯಕರ ಅಸಮಾಧಾನ ವಿಚಾರಕ್ಕೆ ಪ್ರತಿಕ್ರಿಯಿಸಿ, ಶಿವಣ್ಣ ಅವರ ಬಗ್ಗೆ ಯಾರೂ ಮಾತುನಾಡುವಂತಿಲ್ಲ. ಜೊತೆಗೆ ರಾಜಕೀಯ ವಿವಾದಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಏಕೆಂದರೆ ನಾನು ರಾಜಕೀಯಕ್ಕೆ ಬರಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

  • ಮೇ 4ರಂದು ರಮ್ಯಾ, ಶಿವಣ್ಣ, ದುನಿಯಾ ವಿಜಯ್‌ರಿಂದ ವರುಣಾದಲ್ಲಿ ಸಿದ್ದು ಪರ ಪ್ರಚಾರ

    ಮೇ 4ರಂದು ರಮ್ಯಾ, ಶಿವಣ್ಣ, ದುನಿಯಾ ವಿಜಯ್‌ರಿಂದ ವರುಣಾದಲ್ಲಿ ಸಿದ್ದು ಪರ ಪ್ರಚಾರ

    ಮೈಸೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಪರವಾಗಿ ಗುರುವಾರ (ಮೇ 4) ರಂದು ಮೈಸೂರಿನ ವರುಣಾ ಕ್ಷೇತ್ರದಲ್ಲಿ ಮೋಹಕ ತಾರೆ ರಮ್ಯಾ (Ramya), ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ (Shivarajkumar) ಹಾಗೂ ನಟ ದುನಿಯಾ ವಿಜಯ್ (Duniya Vijay) ಚುನಾವಣಾ ಪ್ರಚಾರ ನಡೆಸಲಿದ್ದಾರೆ.

    ಬೆಳಿಗ್ಗೆಯಿಂದ ಸಂಜೆವರೆಗೆ ವರುಣಾ ಕ್ಷೇತ್ರದಲ್ಲಿ ರೋಡ್ ಶೋ ಮೂಲಕ ಸ್ಯಾಂಡಲ್‌ವುಡ್ ನಟರು ಸಿದ್ದರಾಮಯ್ಯ ಅವರಿಗೆ ಶಕ್ತಿ ತುಂಬಲಿದ್ದಾರೆ. ಇದನ್ನೂ ಓದಿ: ನಾನು ಮಂಡ್ಯದವಳೇ, ಗೌಡ್ತಿ, ನಾನು ಗೌಡ್ತಿ ಎನ್ನುವುದನ್ನು ಯಾರೂ ಕಿತ್ತುಕೊಳ್ಳಲು ಆಗಲ್ಲ: ರಮ್ಯಾ

    ವಿಧಾನಸಭಾ ಚುನಾವಣೆಗೆ ದಿನಗಣನೆ ಬಾಕಿಯಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮೂರು ಪಕ್ಷಗಳ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಬಾರಿ ಹಳೆ ಮೈಸೂರು ಭಾಗದಲ್ಲಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲಲೇಬೆಕೆಂದು ಪಣ ತೊಟ್ಟಿರುವ ಸಿದ್ದರಾಮಯ್ಯ ಅವರು ವರುಣಾದಲ್ಲಿ ಎರಡು ದಿನ ಮಾತ್ರ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಆಯಮ್ಮನನ್ನ ಗೆಲ್ಲಿಸಿದ್ದು ಸರಿಯಲ್ಲ – ಸುಮಲತಾ ಗೆಲುವಿಗೆ ಸಿದ್ದು ಪಶ್ಚಾತಾಪ

    ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಸ್ಟಾರ್ ಪ್ರಚಾರಕಾಗಿರುವ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ, ಹ್ಯಾಟ್ರಿಕ್ ಹೀರೊ ಡಾ.ಶಿವರಾಜ್‌ಕುಮಾರ್ ಹಾಗೂ ನಟ ದುನಿಯಾ ವಿಜಯ್ ಸಿದ್ದರಾಮಯ್ಯ ಅವರ ಪರ ಪ್ರಚಾರಕ್ಕಿಳಿಯುತ್ತಿದ್ದಾರೆ. ಈಗಾಗಲೇ ಕೆಲವು ದಿನಗಳಿಂದ ನಟ ಕಿಚ್ಚ ಸುದೀಪ್ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ನಡೆಸುತ್ತಿದ್ದು, ಇದಕ್ಕೆ ಕೌಂಟರ್‌ಕೊಡುವ ನಿಟ್ಟಿನಲ್ಲಿ ಕಾಂಗ್ರೆಸ್ ಸ್ಟಾರ್ ಪ್ರಚಾರಕರನ್ನ ಕಣಕ್ಕಿಳಿಸುತ್ತಿದೆ.

  • ನಟ ಉದಯ್, ಅನಿಲ್ ಸಾವಿಗೆ ಅವರೇ ಕಾರಣ : ಕೋರ್ಟ್ ಮುಂದೆ ವಕೀಲರ ವಾದ

    ನಟ ಉದಯ್, ಅನಿಲ್ ಸಾವಿಗೆ ಅವರೇ ಕಾರಣ : ಕೋರ್ಟ್ ಮುಂದೆ ವಕೀಲರ ವಾದ

    ದುನಿಯಾ ವಿಜಯ್ (Duniya Vijay) ನಟನೆಯ ಮಾಸ್ತಿಗುಡಿ (Mastigudi) ಸಿನಿಮಾದ ಸಾಹಸ ಸನ್ನಿವೇಶದಲ್ಲಿ ಉದಯೋನ್ಮುಖ ಖಳ ನಟರಾದ ಉದಯ್ (Uday) ಮತ್ತು ಅನಿಲ್ (Anil) ನೀರಿಗೆ ಬಿದ್ದು ಸಾವನ್ನಪ್ಪಿದ್ದರು. ಈ ಸಾವಿಗೆ ಸಂಬಂಧಿಸಿದಂತೆ ಸಾಹಸ ನಿರ್ದೇಶಕ ರವಿವರ್ಮ (Ravi Varma) ಸೇರಿದಂತೆ ಹಲವರು ಮೇಲೆ ಎಫ್.ಐ.ಆರ್ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ಬೆಂಗಳೂರು ನಗರದ 9ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಮುಂದೆ ಬಂದಿದ್ದು, ನ್ಯಾಯಧೀಶರಿಗೆ ರವಿವರ್ಮ ಪರ ವಕೀಲರು ಕೆಲವು ವಿಷಯವನ್ನು ಹೇಳಿದ್ದಾರೆ.

     

    ವಿಚಾರಣೆ ವೇಳೆ ರವಿವರ್ಮ ಪರ ವಕೀಲರಾದ ಸಿ.ಎಚ್. ಹನುಮಂತರಾಯ ವಾದ ಮಂಡಿಸಿ, ಆ ನಟರ ಸಾವಿಗೆ ಅವರೇ ಕಾರಣ. ಅದೊಂದು ಆಕಸ್ಮಿಕ ಸಾವು. ತಮ್ಮ ದೇಹದ ಸಿಕ್ಸ್ ಪ್ಯಾಕ್ ತೋರಿಸಲು ಹೋಗಿ ಈ ರೀತಿ ಮಾಡಿಕೊಂಡಿದ್ದಾರೆ. ಸಿಕ್ಸ್ ಪ್ಯಾಕ್ ಅಭಿಮಾನಿಗಳು ನೋಡಲಿ ಎನ್ನುವುದಕ್ಕಾಗಿ ಅವರು ಸೇಫ್ಟಿ ಜಾಕೆಟ್ ಧರಿಸಲು ಒಪ್ಪಲಿಲ್ಲ. ಹಾಗೆಯೇ ತಮಗೆ ಈಜು ಬರುತ್ತದೆ ಎಂದೂ ಹೇಳಿದ್ದರು’ ಎಂದಿದ್ದಾರೆ ವಕೀಲರು. ಇದನ್ನೂ ಓದಿ:ಸಂಪತ್ ಪತ್ನಿ 5 ತಿಂಗಳ ಗರ್ಭಿಣಿ- ಸಹನಟನ ನೆನೆದು ಕಣ್ಣೀರಿಟ್ಟ ವೈಷ್ಣವಿ

    ಪೊಲೀಸರೇ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಮೇಲೆ ತಿಳಿಸಿದ ಎಲ್ಲವನ್ನೂ ಉಲ್ಲೇಖಿಸಲಾಗಿದೆ ಎಂದ ವಕೀಲರು, ಆ ಇಬ್ಬರು ನಟರ ಒಪ್ಪಿಗೆ ಪಡೆದುಕೊಂಡೇ ಹೆಲಿಕಾಫ್ಟರ್ ನಿಂದ ಜಲಾಶಯದ ಹಿನ್ನೀರಿಗೆ ಧುಮುಕುವ ಸಾಹಸ ಮಾಡಿಸಲಾಯಿತು. ಹಾಗಾಗಿ ಇದನ್ನು ಆಕಸ್ಮಿಕ ಘಟನೆ ಎಂದು ಭಾವಿಸಬೇಕು ಎಂದು ವಕೀಲರು ಮನವಿ ಮಾಡಿಕೊಂಡರು.

    ಸಿ.ಎಚ್.ಹನುಮಂತರಾಯ ಅವರ ವಾದ ಆಲಿಸಿದ ನ್ಯಾಯಾಮೂರ್ತಿಗಳಾದ ಎಸ್. ಶ್ರೀಧರ್ ಅವರು ಹೆಚ್ಚಿನ ವಾದ ಮಂಡನೆಗೆ ಮೇ 30ಕ್ಕೆ ವಿಚಾರಣೆ ನಿಗದಿಪಡಿಸಿದ್ದಾರೆ. 2016ರ ನವೆಂಬರ್ 7 ರಂದು ನಡೆದ ಘಟನೆಯಲ್ಲಿ ಹೆಲಿಕಾಪ್ಟರ್ ನಿಂದ ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ  ಧುಮುಕಿದ್ದ ಅನಿಲ್, ಉದಯ್ ಶವವಾಗಿ ಪತ್ತೆಯಾಗಿದ್ದರು. ಈ ಇಬ್ಬರೊಂದಿಗೆ ಜಿಗಿದಿದ್ದ ದುನಿಯಾ ವಿಜಯ್ ಅವರನ್ನು ರಕ್ಷಣೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ತಾವರೆಕೆರೆ ಪೊಲೀಸರು ಚಿತ್ರದ ಸಾಹಸ ನಿರ್ದೇಶಕ ರವಿವರ್ಮ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಿದ್ದರು.

  • ಸಿದ್ದರಾಮಯ್ಯ ಪರ ಪ್ರಚಾರಕ್ಕೆ ರಮ್ಯಾ, ದುನಿಯಾ ವಿಜಯ್‌ ಬರ್ತಾರೆ – ಯತೀಂದ್ರ

    ಸಿದ್ದರಾಮಯ್ಯ ಪರ ಪ್ರಚಾರಕ್ಕೆ ರಮ್ಯಾ, ದುನಿಯಾ ವಿಜಯ್‌ ಬರ್ತಾರೆ – ಯತೀಂದ್ರ

    – ಮಲ್ಲಿಕಾರ್ಜುನ ಖರ್ಗೆ, ಡಿಕೆಶಿ ಬರೋದು ಡೌಟ್ ಎಂದ ಶಾಸಕ

    ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪರವಾಗಿ ಚುನಾವಣಾ ಪ್ರಚಾರಕ್ಕೆ ನಟಿ ರಮ್ಯಾ (Actor Ramya) ಮತ್ತು ನಟ ದುನಿಯಾ ವಿಜಯ್‌ (Duniya Vijay) ಬರುತ್ತಾರೆ. ಆದ್ರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬರುವ ಪ್ಲಾನ್ ಇಲ್ಲ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿದ್ದಾರೆ.

    ಈ ಕುರಿತು ʻಪಬ್ಲಿಕ್‌ ಟಿವಿʼಯೊಂದಿಗೆ (Public TV) ಮಾತನಾಡಿರುವ ಯತೀಂದ್ರ ಅವರು, ಸಿದ್ದರಾಮಯ್ಯ (Siddaramaiah) ಅವರು ಮೇ 4 ರಿಂದ ಮೈಸೂರಿನಲ್ಲೇ (Mysuru) ಇದ್ದು ಪ್ರಚಾರ ನಡೆಸಲಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಇದು ನನ್ನ ಕೊನೇ ಚುನಾವಣೆ, 1 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ – ನಾಮಪತ್ರ ಸಲ್ಲಿಸಿ ಸಿದ್ದು ಮನವಿ

    ಕಳೆದ 10 ದಿನಗಳಿಂದ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದೇವೆ. ವರುಣಾ ಕ್ಷೇತ್ರದ ಜನರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ಈಗಲೂ ಸಿದ್ದರಾಮಯ್ಯ ಅವರು ಕೊಟ್ಟಂತಹ ಕಾರ್ಯಕ್ರಮಗಳನ್ನ ನೆನೆಯುತ್ತಿದ್ದಾರೆ. ಬಿಜೆಪಿಯವರ ದುರಾಡಳಿತದಿಂದ ಜನ ಬೇಸತ್ತಿದ್ದು, ಕಾಂಗ್ರೆಸ್‌ ಬಗ್ಗೆ ಹೆಚ್ಚಿನ ಒಲವು ತೋರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ತಡೆ – ಮೇ 9 ರವರೆಗೆ ಜಾರಿ ಬೇಡವೆಂದು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

    ಬಿಜೆಪಿಯವರಿಗೆ ನನ್ನ ತಂದೆ ಕೊಟ್ಟ ಆಡಳಿತದಲ್ಲಿ ತಪ್ಪು ಹುಡುಕಲಾಗುತ್ತಿಲ್ಲ, ಅವರ ಪ್ರಾಮಾಣಿಕತೆ ಬಗ್ಗೆ ಪ್ರಶ್ನೆ ಮಾಡೋಕೆ ಆಗ್ತಿಲ್ಲ. ಹಾಗಾಗಿ ಜಾತಿ ವಿರೋಧಿ ಹಣೆಪಟ್ಟಿ ಕಟ್ಟುವ ಪ್ರಯತ್ನ ಮಾಡ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಲಿಂಗಾಯತ ವಿರೋಧಿ ಪಟ್ಟ ಕಟ್ಟುವ ಪ್ರಯತ್ನವನ್ನ ಬಿಜೆಪಿ ಮಾಡ್ತಿದೆ. ಅದು ಯಶಸ್ವಿಯಾಗಲ್ಲ. ಬಿಜೆಪಿ ಐಟಿ ಸೆಲ್ ಒಂದು ರೀತಿ ಸುಳ್ಳಿನ ಫ್ಯಾಕ್ಟರಿ ಇದ್ದಂತೆ. ಲಿಂಗಾಯತ ಸಮಯದಾಯಗಳ ವೋಟ್‌ ಪಡೆಯುವುದಕ್ಕಾಗಿ ಬೇರೆ ದಾರಿಯಿಲ್ಲದೇ ಲಿಂಗಾಯತ ವಿರೋಧಿ ಹಣೆಪಟ್ಟಿ ಕಟ್ಟುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

  • Exclusive: ‘ಭೀಮ’ ಚಿತ್ರೀಕರಣದ ವೇಳೆ ದುನಿಯಾ ವಿಜಯ್ ಕಾಲಿಗೆ ಪೆಟ್ಟು

    Exclusive: ‘ಭೀಮ’ ಚಿತ್ರೀಕರಣದ ವೇಳೆ ದುನಿಯಾ ವಿಜಯ್ ಕಾಲಿಗೆ ಪೆಟ್ಟು

    ಟ ಕಮ್ ನಿರ್ದೇಶಕ ದುನಿಯಾ ವಿಜಯ್ ‘ಸಲಗ’ (Salaga) ಸೂಪರ್ ಸಕ್ಸಸ್ ನಂತರ ‘ಭೀಮ’ (Bheema) ಸಿನಿಮಾವನ್ನ ಕೈಗೆತ್ತಿಕೊಂಡಿದ್ದಾರೆ. ಚಿತ್ರೀಕರಣದ ವೇಳೆ ದುನಿಯಾವಿಜಯ್ ಕಾಲಿಗೆ ಪೆಟ್ಟು ಬಿದ್ದಿದೆ. ಗಾಯದ ನೋವಿನ ನಡುವೆಯೇ ವಿಜಯ್ ‘ಭೀಮ’ ಚಿತ್ರದ ಶೂಟಿಂಗ್ ಮುಂದುವರೆಸಿದ್ದಾರೆ. ಈ ಘಟನೆ ಬಗ್ಗೆ ನಿರ್ಮಾಪಕ ಕೃಷ್ಣ ಸಾರ್ಥಕ್ (Krishna Sarthak) ಪಬ್ಲಿಕ್ ಟಿವಿ ಡಿಜಿಟಲ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:ಕ್ಯಾಪ್ಟನ್ ಮಿಲ್ಲರ್ ಶೂಟಿಂಗ್ ನಡುವೆ ಕ್ರಿಕೆಟ್ ವೀಕ್ಷಿಸಿದ ಧನುಷ್, ಶಿವಣ್ಣ

    ಕನ್ನಡ ಸಿನಿಮಾ ರಂಗದ ಪ್ರತಿಭಾನ್ವಿತ ನಟ ದುನಿಯಾ ವಿಜಯ್ (Duniya Vijay) ಅವರು ನಿರ್ದೇಶಕನಾಗಿಯೂ ಸಕ್ಸಸ್ ಕಂಡವರು. ಮೊದಲ ಚಿತ್ರ ಸಲಗ ಸಿನಿಮಾಗೆ ನಿರ್ದೇಶನ ಮಾಡುವ ಮೂಲಕ ಡೈರೆಕ್ಟರ್ ಆಗಿಯೂ ಸಕ್ಸಸ್ ಕಂಡರು. ಈಗ ಭೀಮ ಚಿತ್ರಕ್ಕೆ ನಿರ್ದೇಶನ ಮಾಡ್ತಿದ್ದಾರೆ. ಕೃಷ್ಣ ಸಾರ್ಥಕ್ ಮತ್ತು ಜಗದೀಶ್ ಗೌಡ ಅವರು ಜಂಟಿಯಾಗಿ ಈ ಸಿನಿಮಾ ನಿರ್ಮಾಣ ಮಾಡ್ತಿದ್ದಾರೆ.

     

    View this post on Instagram

     

    A post shared by Mohan Salaga (@mohan_salaga__)

    ‘ಭೀಮ’ (Bheema) ಚಿತ್ರದ ಚಿತ್ರೀಕರಣ (Shooting) ಬಹುಬಿರುಸಿನಿಂದ ಸಾಗುತ್ತಿತ್ತು. ಚೇತನ್ ಡಿಸೋಜ ಅವರ ನಿರ್ದೇಶನದಲ್ಲಿ ಆಕ್ಷನ್ ದೃಶ್ಯಗಳು ನಡೆಯುತ್ತಿದ್ದವು. ಆದರೆ ಇದೆ ಬುಧವಾರ (ಏಪ್ರಿಲ್ 12) ಆಕ್ಷನ್ ದೃಶ್ಯವೊಂದರಲ್ಲಿ ಅಭಿನಯಿಸುವಾಗ ವಿಜಿ ಅವರ ಬಲಗಾಲಿಗೆ ಏಟು ಬೀಳುತ್ತದೆ. ಕಾಲಿಗೆ ಬಲವಾದ ಪೆಟ್ಟು ಬಿದ್ದು, ನೋವು ಅನುಭವಿಸುತ್ತಿದ್ದರೂ ಕೂಡ, ನಿರ್ದೇಶಕನಾಗಿ ತಂಡವನ್ನ ಮುನ್ನಡೆಸುವ ಜವಾಬ್ದಾರಿ ಹೊತ್ತಿದ್ದ ದುನಿಯಾ ವಿಜಿ ಅವರು, ಆ ನೋವಿನ ನಡುವೆಯೂ ಕೂಡ ಚಿತ್ರೀಕರಣ ಮುಂದುವರೆಸಿದ್ದಾರೆ. ಈ ಬಗ್ಗೆ ಭೀಮ ನಿರ್ಮಾಪಕ ಕೃಷ್ಣ ಸಾರ್ಥಕ್ ಮಾತನಾಡಿ, ಇನ್ನು 40 ದಿನಗಳ ಚಿತ್ರೀಕರಣ ಬಾಕಿಯಿದೆ. ನಾಲ್ಕು ಬಹುಮುಖ್ಯ ಭಾಗಗಳ ಚಿತ್ರೀಕರಣ ನಡೆಯುತ್ತಿದೆ. ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಕಳೆದ ವಾರ ನಟ ವಿಜಯ್ ಅವರ ಬಲಗಾಲಿಗೆ ಏಟು ಬಿದ್ದಿತ್ತು. ಸ್ಥಳದಲ್ಲಿಯೇ ಸೂಕ್ತ ಚಿಕಿತ್ಸೆ ಪಡೆದು, ನೋವಿನ ನಡುವೆಯೇ ಚಿತ್ರೀಕರಣ ಮಾಡ್ತಿದ್ದಾರೆ. ನಟ ವಿಜಯ್ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

    ‘ಭೀಮ’ನ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಹೆಚ್ಚಿನ ನಿರೀಕ್ಷೆಗಳನ್ನು ಕೂಡ ಈ ಚಿತ್ರ ತನ್ನ ಮೇಲೆ ಹೊತ್ತಿದೆ. ‘ಸಲಗ’ಕ್ಕೆ ಸಂಗೀತ ನೀಡಿ, ಮೌಲ್ಯ ಹೆಚ್ಚಿಸಿದ್ದ ಚರಣ್ ರಾಜ್ ಅವರೇ ‘ಭೀಮ’ ಚಿತ್ರಕ್ಕೂ ಸಂಗೀತ ನೀಡುತ್ತಿದ್ದಾರೆ. ರಂಗಭೂಮಿಯಿದ ಬಂದಿರುವಂತಹ ಅಶ್ವಿನಿ ಅವರು ಚಿತ್ರದ ನಾಯಕಿಯಾಗಿದ್ದು, ಜೊತೆಗೆ ಗೋಪಾಲ ಕೃಷ್ಣ ದೇಶಪಾಂಡೆ, ಗಿಲಿಗಿಲಿ ಚಂದ್ರು, ಕಾಕ್ರೋಚ್ ಸುಧಿ, ಕಲ್ಯಾಣಿ ರಾಜು, ಡ್ರಾಗನ್ ಮಂಜು ಮುಂತಾದವರು ಕಥೆಯ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚುತ್ತಿದ್ದಾರೆ.‌

    ಶೃತಿ ರಿಪ್ಪನ್‌ಪೇಟೆ, ಪಬ್ಲಿಕ್‌ ಟಿವಿ ಡಿಜಿಟಲ್

  • ಅಪ್ಪುಗಾಗಿ ವಿಶೇಷ ಬೇಡಿಕೆ ಇಟ್ಟ ನಟ ದುನಿಯಾ ವಿಜಯ್

    ಅಪ್ಪುಗಾಗಿ ವಿಶೇಷ ಬೇಡಿಕೆ ಇಟ್ಟ ನಟ ದುನಿಯಾ ವಿಜಯ್

    ನಿನ್ನೆಯಷ್ಟೇ ಪುನೀತ್ ರಾಜ್ ಕುಮಾರ್ (Puneeth Rajkumar) ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಮತ್ತು ಕನ್ನಡ ಚಿತ್ರೋದ್ಯಮ ತಮ್ಮದೇ ಆದ ರೀತಿಯಲ್ಲಿ ಆಚರಿಸಿವೆ. ರಾಜ್ಯಾದ್ಯಂತ ಅಭಿಮಾನಿಗಳು ಸಮಾಜಮುಖಿ ಕೆಲಸಗಳನ್ನು ಮಾಡುವ ಮೂಲಕ ನೆಚ್ಚಿನ ನಟನ ಹುಟ್ಟು ಹಬ್ಬ ಆಚರಿಸಿದ್ದಾರೆ. ಅಲ್ಲದೇ, ಅನೇಕ ಕಲಾವಿದರು ಮತ್ತು ತಂತ್ರಜ್ಞರು ತಮ್ಮದೇ ಆದ ರೀತಿಯಲ್ಲಿ ಅಪ್ಪುವನ್ನು (Appu) ಸ್ಮರಿಸಿದ್ದಾರೆ. ಅದರಲ್ಲಿ ವಿಭಿನ್ನವಾಗಿ ಗಮನ ಸೆಳೆದದ್ದು ನಟ ದುನಿಯಾ ವಿಜಯ್ (Duniya Vijay) ಅವರ ಟ್ವೀಟ್.

    ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬಕ್ಕೆ ವಿಶೇಷವಾಗಿ ವಿಶ್ ಮಾಡಿರುವ ಅವರು, ಅಪ್ಪುಗಾಗಿ ವಿಶೇಷ ಬೇಡಿಕೆಯನ್ನು ಇಟ್ಟಿದ್ದಾರೆ. ಇನ್ಮುಂದೆ ಪಠ್ಯಪುಸ್ತಕದಲ್ಲಿ ‘ಅ’ ಅಂದರೆ ‘ಅಪ್ಪು’ ಎಂದು ಓದಿಸುವಂತಾಗಲಿ ಎಂದಿದ್ದಾರೆ. ‘ಅ’ ಅಕ್ಷರವನ್ನು ಕಲಿಸುವಾಗ  ‘ಅಪ್ಪು’ ಎಂದು ನಮೂದಿಸುವಂತೆ ಅವರು ಕೇಳಿಕೊಂಡಿದ್ದಾರೆ. ಈ ಮೂಲಕ ಪುನೀತ್ ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ. ಇದನ್ನೂ ಓದಿ: ನಟಿ ಸ್ವರಾ ಭಾಸ್ಕರ್ ಆರತಕ್ಷತೆಯಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ

    ದುನಿಯಾ ವಿಜಯ್ ಈ ರೀತಿಯಲ್ಲಿ ಟ್ವೀಟ್ ಮಾಡುತ್ತಿದ್ದಂತೆಯೇ ಅಸಂಖ್ಯಾತ ಅಭಿಮಾನಿಗಳು ಮೆಚ್ಚಿಗೆ ಸೂಚಿಸಿದ್ದಾರೆ. ಕೆಲವರು ಪ್ರಾಥಮಿಕ ಪಠ್ಯದಲ್ಲಿ ಅಪ್ಪು ಅವರ ಜೀವನ ಕುರಿತು ಪ್ರಕಟಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಕೇವಲ ಒಂದು ವಿಶ್ವವಿದ್ಯಾಲಯಕ್ಕೆ ಅವರ ಬದುಕನ್ನು ಸೀಮಿತ ಮಾಡದೇ, ಎಲ್ಲ ಪಠ್ಯದಲ್ಲೂ ಅವರ ಜೀವನ ಸಂದೇಶ ಹಾಕಬೇಕು ಎಂದು ಆಗ್ರಹಿಸಿದ್ದಾರೆ.

    ಅಪ್ಪು ಜನ್ಮದಿನದಂದು ನಿನ್ನೆ ದಿನಪೂರ್ತಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಅಪ್ಪು ಸ್ಮಾರಕದ ಹತ್ತಿರ ಮಧ್ಯರಾತ್ರಿಯಿಂದಲೇ ಅಭಿಮಾನಿಗಳು ಜಮಾವಣೆಗೊಂಡಿದ್ದರು. ಅಸಂಖ್ಯಾತ ಅಭಿಮಾನಿಗಳು ದೂರದ ಊರಿಂದ ಸ್ಮಾರಕ ಪೂಜೆಗೆ ಆಗಮಿಸಿದ್ದರು.

  • Exclusive:`ಭೀಮ’ ಬಳಿಕ ದುನಿಯಾ ವಿಜಯ್ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್

    Exclusive:`ಭೀಮ’ ಬಳಿಕ ದುನಿಯಾ ವಿಜಯ್ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್

    ಸ್ಯಾಂಡಲ್‌ವುಡ್ (Sandalwood)  `ಸಲಗ’ (Salaga) ದುನಿಯಾ ವಿಜಯ್ (Duniya Vijay) ಪ್ರತಿಭಾನ್ವಿತ ನಟ ಎಂಬುದರಲ್ಲಿ ಎರಡು ಮಾತಿಲ್ಲ. ಕನ್ನಡ ಮತ್ತು ತೆಲುಗಿನಲ್ಲಿ ದುನಿಯಾ ವಿಜಯ್ ತಮ್ಮ ನಟನೆಯ ಮೂಲಕ ಕಿಡಿ ಹಚ್ಚಿದ್ದಾರೆ. ಸದ್ಯ `ಭೀಮ’ (Bheema) ಚಿತ್ರದ ನಂತರ ದುನಿಯಾ ವಿಜಯ್ ಏನ್ಮಾಡ್ತಾರೆ, ಅವರ ಮುಂದಿನ ಸಿನಿಮಾ ಯಾವುದು? ಎಂಬುದಕ್ಕೆ ಇದೀಗ ಉತ್ತರ ಸಿಕ್ಕಿದೆ. `ಸಲಗ’ನ ಮುಂದಿನ ಹೆಜ್ಜೆ ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ.

    `ಸಲಗ’ ಸಕ್ಸಸ್ ನಂತರ ದುನಿಯಾ ವಿಜಯ್ ಪಾತ್ರಗಳ ಆಯ್ಕೆಯಲ್ಲಿ ಸಖತ್ ಚ್ಯೂಸಿಯಾಗಿದ್ದಾರೆ. ಅದರಲ್ಲೂ ಬಾಲಯ್ಯ ಮುಂದೆ `ವೀರ ಸಿಂಹ ರೆಡ್ಡಿ’ (Veera Simha Reddy) ಚಿತ್ರದಲ್ಲಿ ಅಬ್ಬರಿಸದ ಮೇಲೆ ದುನಿಯಾ ವಿಜಯ್ ಮೇಲಿನ ಕ್ರೇಜ್ ಡಬಲ್ ಆಗಿದೆ. `ಭೀಮ’ ಚಿತ್ರದ ಲುಕ್‌ನಿಂದಲೇ ವಿಜಯ್ ಈಗಾಗಲೇ ಕ್ರೇಜ್ ಹುಟ್ಟು ಹಾಕಿದ್ದಾರೆ. ಹೀಗಿರುವಾಗ `ಭೀಮ’ ಬಳಿಕ `ಗುರು ಶಿಷ್ಯರು’ ನಿರ್ದೇಶಕ ಜಡೇಶ್ ಕುಮಾರ್ ಹಂಪಿ ಜೊತೆ ಸಿನಿಮಾ ಮಾಡಲು ವಿಜಯ್ ಕೈಜೋಡಿಸಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಡಿಜಿಟಲ್‌ಗೆ ಕನ್ನಡದ ಪ್ರತಿಭಾನ್ವಿತ ನಿರ್ದೇಶಕ ಜಡೇಶ್ ಕುಮಾರ್ (Jadesh Kumar) ಮಾಹಿತಿ ನೀಡಿದ್ದಾರೆ.

    ನಿರ್ದೇಶಕ ಜಡೇಶ್-ದುನಿಯಾ ವಿಜಯ್ ಕಾಂಬಿನೇಷನ್‌ನಲ್ಲಿ 1950ರ ಕಾಲಘಟ್ಟದ ಕಥೆ ಮೂಡಿ ಬರಲಿದೆ. ಸ್ವಾತಂತ್ರ್ಯ ಸಿಕ್ಕಿದ ಬಳಿಕ ಜನರ ಮನಸ್ಥಿತಿ ಹೇಗಿತ್ತು. ಅವರ ಮುಗ್ಧತೆ ಮತ್ತು ಆಲೋಚನೆ ಹೇಗಿತ್ತು ಎಂಬುದನ್ನ ಈ ಸಿನಿಮಾ ತೆರೆಯ ಮೇಲೆ ತೋರಿಸಿಕೊಡಲಿದೆ. ದುನಿಯಾ (Duniya Film) ಚಿತ್ರದಲ್ಲಿ ವಿಜಯ್ ಮುಗ್ಧನಾಗಿ ಅದ್ಭುತವಾಗಿ ನಟಿಸಿದ್ದರು. ಕೊಂಚ ಅದೇ ಶೇಡ್‌ನಲ್ಲಿ ಇಲ್ಲಿ ವಿಜಯ್ ನಟಿಸಲಿದ್ದಾರೆ.

     

    View this post on Instagram

     

    A post shared by Duniya Vijay (@duniyavijayofficial)

    1950ರ ಕಾಲಘಟ್ಟದ ಕಥೆಯಾಗಿರುವ ಕಾರಣ, ಹಳ್ಳಿ ಸೊಗಡಿನ ಅದ್ದೂರಿ ಸೆಟ್ ಅನ್ನೇ ಹಾಕಲಾಗುತ್ತದೆ. ಖಡಕ್ ಪಾತ್ರಗಳಲ್ಲಿ ದುನಿಯಾ ವಿಜಯ್ ನಟಿಸಿ ಸೈ ಎನಿಸಿಕೊಂಡಿದ್ದರು. ಇದೀಗ ವಿಭಿನ್ನ ಪಾತ್ರದ ಮೂಲಕ ರಂಜಿಸಲು ಸಜ್ಜಾಗುತ್ತಿದ್ದಾರೆ. `ಭೀಮ’ ಚಿತ್ರದ ಶೂಟಿಂಗ್ ಪೂರ್ಣಗೊಂಡ ಬಳಿಕ ಮೇ ಅಂತ್ಯದಲ್ಲಿ ಹೊಸ ಚಿತ್ರವನ್ನು ವಿಜಯ್ ಕೈಗೆತ್ತಿಕೊಳ್ಳಲಿದ್ದಾರೆ. ಜೊತೆಗೆ ಈ ಚಿತ್ರವನ್ನ ʻಭೀಮʼ ಸಿನಿಮಾದ ನಿರ್ದೇಶಕರಾದ ಕೃಷ್ಣ ಸಾರ್ಥಕ್- ಜಗದೀಶ್ ಗೌಡ ಅವರು ನಿರ್ಮಾಣ ಮಾಡಲಿದ್ದಾರೆ ಎಂದು ನಿರ್ದೇಶಕ ಜಡೇಶ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹೃತಿಕ್ ರೋಷನ್- ಸಬಾ ಆಜಾದ್ ಮದುವೆ ನಿಜಾನಾ? ರಾಕೇಶ್ ರೋಷನ್ ಸ್ಪಷ್ಟನೆ

    ಇನ್ನೂ ದುನಿಯಾ ವಿಜಯ್‌ಗೆ ನಾಯಕಿಯಾಗಿ ಕನ್ನಡದ ನಟಿಯೇ ಬರುವ ಸಾಧ್ಯತೆಯಿದೆ. ನಾಯಕಿ ಸೆಲೆಕ್ಷನ್ ಬಗ್ಗೆ ಇನ್ನೂ ಅಂತಿಮ ಆಗಿಲ್ಲ ಎಂದು ನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ. ಇನ್ನೂ ರಾಜಹಂಸ, ಜೆಂಟಲ್‌ಮೆನ್, ಗುರು ಶಿಷ್ಯರು ಖ್ಯಾತಿಯ ನಿರ್ದೇಶಕ ಜಡೇಶ್ ಕುಮಾರ್ ಮತ್ತು ದುನಿಯಾ ವಿಜಯ್ ಅವರ ಕಾಂಬಿನೇಷನ್ ಸಿನಿಮಾ ಮುಂದಿನ ದಿನಗಳಲ್ಲಿ ಅದೆಷ್ಟರ ಮಟ್ಟಿಗೆ ಕಮಾಲ್ ಮಾಡಲಿದೆ ಎಂಬುದನ್ನ ಕಾದುನೋಡಬೇಕಿದೆ.

    ಶೃತಿ ರಿಪ್ಪನ್‌ಪೇಟೆ, ಪಬ್ಲಿಕ್‌ ಟಿವಿ ಡಿಜಿಟಲ್‌ 

  • ಪ್ರೇಮಿಗಳ ದಿನಕ್ಕೆ ದುನಿಯಾ ವಿಜಯ್ ಕೊಟ್ಟ ಸ್ಪೆಷಲ್ ಗಿಫ್ಟ್

    ಪ್ರೇಮಿಗಳ ದಿನಕ್ಕೆ ದುನಿಯಾ ವಿಜಯ್ ಕೊಟ್ಟ ಸ್ಪೆಷಲ್ ಗಿಫ್ಟ್

    ಲ್ಲೆಡೆ ಇಂದು ಪ್ರೇಮಿಗಳ ದಿನವನ್ನು ಆಚರಿಸಲಾಗುತ್ತಿದೆ. ಈ ದಿನಕ್ಕಾಗಿ ತಮ್ಮ ಅಭಿಮಾನಿಗಳಿಗೆ ದುನಿಯಾ ವಿಜಯ್ ಸ್ಪೆಷಲ್ ಉಡುಗೊರೆಯನ್ನು ನೀಡಿದ್ದಾರೆ. ಇವರ ನಿರ್ದೇಶನ ಮತ್ತು ನಟನೆಯಲ್ಲಿ ಮೂಡಿ ಬರುತ್ತಿರುವ ಭೀಮಾ ಸಿನಿಮಾದ ನಾಯಕಿಯನ್ನು ಪರಿಚಯಿಸಿದ್ದು, ಫಸ್ಟ್ ಲುಕ್ ಕೂಡ ಬಿಡುಗಡೆ ಮಾಡಿದ್ದಾರೆ. ನಾಯಕಿಯ ಫಸ್ಟ್ ಲುಕ್ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ.

    ಸಲಗ ಸಿನಿಮಾದ ನಂತರ ಮೂಡಿ ಬರುತ್ತಿರುವ ಭೀಮ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆಗಳು ಇವೆ. ಸಲಗ ಸಕ್ಸಸ್ ನಲ್ಲಿರುವ ದುನಿಯಾ ವಿಜಯ್, ತಮ್ಮ ಮುಂದಿನ ನಿರ್ದೇಶನದ ಸಿನಿಮಾ ಯಾವ ರೀತಿಯಲ್ಲಿ ಇರಲಿದೆ ಎನ್ನುವುದಕ್ಕೆ ಇಂದು ರಿಲೀಸ್ ಮಾಡಿರುವ ನಾಯಕಿಯ ಫಸ್ಟ್ ಲುಕ್ ಸಾಕ್ಷಿಯಾಗಿದೆ. ಇಡೀ ಸಿನಿಮಾವನ್ನು ಹೊಸ ರೀತಿಯಲ್ಲಿ ಕಟ್ಟುವ ಪ್ರಯತ್ನ ಮಾಡಿದ್ದಾರೆ ವಿಜಯ್. ಹಾಗಾಗಿ ನಾಯಕಿಯ ಕಾಸ್ಟ್ಯೂಮ್ ಮತ್ತು ಚಹರೆಯನ್ನು ಭಿನ್ನವಾಗಿಯೇ ಚಿತ್ರಿಸಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ರಜನಿ ಜೊತೆ ಶಿವರಾಜ್ ಕುಮಾರ್: ಫೋಟೋ ಲೀಕ್

    ಈ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾದವರು ಅಶ್ವಿನಿ. ರಂಗಭೂಮಿ ಹಿನ್ನೆಲೆಯ ಈ ನಟಿ ಈಗಾಗಲೇ ಸಾಕಷ್ಟು ನಾಟಕಗಳಲ್ಲೂ ಅಭಿನಯಿಸಿದ್ದಾರೆ. ರಂಗಭೂಮಿಯ ಪ್ರತಿಭೆಯನ್ನು ಈ ಬಾರಿ ತಮ್ಮ ಸಿನಿಮಾಗಾಗಿ ಆಯ್ಕೆ ಮಾಡಿಕೊಂಡಿದ್ದಾರೆ ದುನಿಯಾ ವಿಜಯ್. ಈ ಸಿನಿಮಾದಲ್ಲಿ ಅಶ್ವಿನಿ ಯಾವ ರೀತಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನುವ ಕುರಿತು ಯಾವುದೇ ಮಾಹಿತಿ ನೀಡದೇ ಇದ್ದರೂ, ಬಿಡುಗಡೆ ಆಗಿರುವ ಫಸ್ಟ್ ಲುಕ್ ನಾನಾ ಸುದ್ದಿಗಳನ್ನು ನೀಡುತ್ತಿದೆ.

    ದುನಿಯಾ ವಿಜಯ್ ನಿರ್ದೇಶನದ ಎರಡನೇ ಸಿನಿಮಾವಿದು. ಸಲಗ ಅವರ ವೃತ್ತಿ ಬದುಕಿಗೆ ಮತ್ತೊಂದು ಬ್ರೇಕ್ ನೀಡಿದ ಸಿನಿಮಾ. ಬಾಕ್ಸ್ ಆಫೀಸನಲ್ಲಿ ಸಖತ್ ಸದ್ದು ಮಾಡಿತ್ತು. ಹಾಗಾಗಿ ಎರಡನೇ ಸಿನಿಮಾಗೆ ಬೇಡಿಕೆ ಸಾಕಷ್ಟಿದೆ. ನೋಡುಗರು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ಹಲವು ಹಂತಗಳಲ್ಲಿ ಸಿನಿಮಾದ ಶೂಟಿಂಗ್ ಕೂಡ ಮುಗಿಸಿದ್ದಾರೆ ವಿಜಯ್.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k