Tag: Duniya Vijay

  • ಮಗಳ ಹುಟ್ಟುಹಬ್ಬಕ್ಕೆ ದುಬಾರಿ ಗಿಫ್ಟ್ ನೀಡಿದ ದುನಿಯಾ ವಿಜಯ್

    ಮಗಳ ಹುಟ್ಟುಹಬ್ಬಕ್ಕೆ ದುಬಾರಿ ಗಿಫ್ಟ್ ನೀಡಿದ ದುನಿಯಾ ವಿಜಯ್

    ಚಂದನವನದ ಬ್ಲ್ಯಾಕ್ ಕೋಬ್ರಾ ಮತ್ತೆ ಸುದ್ದಿಯಲ್ಲಿದ್ದಾರೆ. ಸಲಗ ಚಿತ್ರದ ಸಕ್ಸಸ್ ನಂತರ ಮತ್ತೆ ಕೌಟುಂಬಿಕ ವಿಚಾರವಾಗಿ ಸದ್ದು ಮಾಡ್ತಿದ್ದಾರೆ. ತಮ್ಮ ಮುದ್ದು ಮಗಳು ಮೋನಿಕಾ ಅವರಿಗೆ ಭರ್ಜರಿ ಗಿಫ್ಟ್ ನೀಡಿ, ನೆಟ್ಟಿಗರ ಗಮನ ಸೆಳೆದಿದ್ದಾರೆ.‌

    ದುನಿಯಾ ವಿಜಯ್ `ಸಲಗ’ ಚಿತ್ರದ ಮೂಲಕ ನಟನಾಗಿ ಮಾತ್ರವಲ್ಲ, ನಿರ್ದೇಶಕನಾಗಿಯೂ ಕೂಡ ಸಕ್ಸಸ್ ಕಂಡವರು. ಇದೀಗ ಭೀಮ ಚಿತ್ರದ ಜತೆಗೆ ಟಾಲಿವುಡ್ ಅಖಾಡದಲ್ಲೂ ವಿಜಯ್ ಸೌಂಡ್ ಮಾಡ್ತಿದ್ದಾರೆ. ಈಗ ಮಗಳು ಮೋನಿಕಾ ಹುಟ್ಟುಹಬ್ಬಕ್ಕೆ ದುಬಾರಿ ಕಾರೋಂದನ್ನ ಗಿಫ್ಟ್ ನೀಡಿದ್ದಾರೆ. ಇದನ್ನೂ ಓದಿ:ರಾಜಮೌಳಿ ಶಿಷ್ಯನಿಂದ ಬಂಕಿಮ ಚಂದ್ರ ಚಟರ್ಜಿ ಅವರ ‘ಆನಂದಮಠ’ ಕೃತಿ ಆಧರಿಸಿದ ಸಿನಿಮಾ

    ಕುಟುಂಬದಲ್ಲಿ ಅದೇನೇ ಸಮಸ್ಯೆ ಇದ್ದರು ಮಕ್ಕಳ ಪಾಲಿಗೆ ಬೆಸ್ಟ್ ಅಪ್ಪನಾಗಿ, ಮಕ್ಕಳ ಖುಷಿಗೆ ವಿಜಯ್ ಶ್ರಮಿಸುತ್ತಿದ್ದಾರೆ. 3 ಮಕ್ಕಳ ತಂದೆಯಾಗಿರುವ ವಿಜಯ್ ಈಗ ವೈಯಕ್ತಿಕ ವಿಚಾರವಾಗಿ ನೆಟ್ಟಿಗರ ಗಮನ ಸೆಳೆದಿದ್ದಾರೆ. ಮಗಳು ಮೋನಿಕಾ ಹುಟ್ಟುಹಬ್ಬಕ್ಕೆ ದುಬಾರಿ ಕಾರು ಗಿಫ್ಟ್ ಮಾಡಿ, ಮುದ್ದು ಮಗಳ ಖುಷಿಗೆ ವಿಜಯ್ ಪಾತ್ರರಾಗಿದ್ದಾರೆ. ಅಪ್ಪ ಮತ್ತು ಕಾರಿನ ಜತೆಯಿರುವ ಫೋಟೋವನ್ನ ಮೋನಿಕಾ ಶೇರ್ ಮಾಡಿ, ಲವ್ ಯೂ ಅಪ್ಪ ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಬಾಲಯ್ಯ- ದುನಿಯಾ ವಿಜಯ್ ನಟನೆಯ ತೆಲುಗು ಚಿತ್ರದ ಶೂಟಿಂಗ್‌ನಲ್ಲಿ ಶ್ರುತಿ ಹಾಸನ್

    ಬಾಲಯ್ಯ- ದುನಿಯಾ ವಿಜಯ್ ನಟನೆಯ ತೆಲುಗು ಚಿತ್ರದ ಶೂಟಿಂಗ್‌ನಲ್ಲಿ ಶ್ರುತಿ ಹಾಸನ್

    ಕ್ಷಿಣ ಭಾರತ ಚಿತ್ರರಂಗದ ಬ್ಯೂಟಿ ಶ್ರುತಿ ಹಾಸನ್‌ಗೆ ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಸಾಲು ಸಾಲು ಸಿನಿಮಾಗಳಲ್ಲಿ ಶ್ರುತಿ ಹಾಸನ್ ಬ್ಯುಸಿಯಾಗಿದ್ದಾರೆ. ಇದೀಗ ನಂದಮುರಿ ಬಾಲಕೃಷ್ಣ ಮತ್ತು ದುನಿಯಾ ವಿಜಯ್ ಕಾಂಬಿನೇಷನ್‌ನ ಹೊಸ ಪ್ರಾಜೆಕ್ಟ್‌ ಶೂಟಿಂಗ್‌ನಲ್ಲಿ `ಸಲಾರ್’ ಬೆಡಗಿ ಶ್ರುತಿ ಪಾಲ್ಗೊಂಡಿದ್ದಾರೆ.

    `ಅಖಂಡ’ ಚಿತ್ರದ ಸಕ್ಸಸ್ ನಂತರ `ಎನ್‌ಬಿಕೆ 107′ ಸೂಪರ್ ಸ್ಟಾರ್ ಬಾಲಯ್ಯ ನಟಿಸುತ್ತಿದ್ದಾರೆ. ಇತ್ತ `ಸಲಗ’ ಸೂಪರ್ ಡೂಪರ್ ಹಿಟ್ ಆದಮೇಲೆ ದುನಿಯಾ ವಿಜಯ್ ಟಾಲಿವುಡ್‌ನಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಬಾಲಯ್ಯಗೆ ಟಕ್ಕರ್ ಕೊಡುವುದಕ್ಕೆ ದುನಿಯಾ ವಿಜಿ ರೆಡಿಯಾಗಿದ್ದಾರೆ. ಸದ್ಯ ಈ ತೆಲುಗು ಪ್ರಾಜೆಕ್ಟ್ ಭರದಿಂದ ಚಿತ್ರೀಕರಣ ಸಾಗುತ್ತಿದ್ದು, `ಸಲಾರ್’ ಬ್ಯೂಟಿ ಶ್ರುತಿ ಹಾಸನ್ ಚಿತ್ರತಂಡಕ್ಕೆ ಸಾಥ್ ಕೊಡ್ತಿದ್ದಾರೆ. ಬಾಲಯ್ಯಗೆ ನಾಯಕಿಯಾಗಿ ಕಾಣಿಸಿಕೊಳ್ತಿದ್ದಾರೆ. ಇದನ್ನೂ ಓದಿ:`ನನ್ನ ಹೀರೋ’ ಎಂದು ಕಮಲ್ ಹಾಸನ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ ಖುಷ್ಬೂ

    ಸದ್ಯ ಚಿತ್ರೀಕರಣಕ್ಕೆ ಎಂಟ್ರಿ ಕೊಟ್ಟಿರೋ ಶ್ರುತಿಗೆ ನಿರ್ದೇಶಕ ಗೋಪಿಚಂದ್ ಮತ್ತು ಟೀಮ್ ಸ್ವಾಗತ ಕೋರಿದೆ. ಸೆಟ್ ಬಂದಿರೋ ಸಲಾರ್ ಬೆಡಗಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಟಿ ಶ್ರುತಿ ಭಾಗದ ಚಿತ್ರೀಕರಣ ಭರದಿಂದ ಆಗುತ್ತಿದೆ.

    Live Tv

  • ಸರಕಾರಕ್ಕೆ ಟೀಸರ್ ಮೂಲಕ ಟಾಂಗ್ ಕೊಟ್ಟ ಟಾಲಿವುಡ್ ಬಾಲಕೃಷ್ಣ

    ಸರಕಾರಕ್ಕೆ ಟೀಸರ್ ಮೂಲಕ ಟಾಂಗ್ ಕೊಟ್ಟ ಟಾಲಿವುಡ್ ಬಾಲಕೃಷ್ಣ

    ತೆಲುಗು ಸಿನಿಮಾ ರಂಗದ ಲೆಜೆಂಡ್ ನಟ ಬಾಲಕೃಷ್ಣ ಅವರ ಹುಟ್ಟು ಹಬ್ಬಕ್ಕಾಗಿ ಇವರ ನಟನೆಯ 107ನೇ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಹೇಳಿ ಕೇಳಿ ಬಾಲಕೃಷ್ಣ ಮಾಸ್ ಹೀರೋ, ಟೀಸರ್ ಕೂಡ ಅಷ್ಟೇ ಮಾಸ್ ಆಗಿ ಮೂಡಿ ಬಂದಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ. ಟೀಸರ್ ನಲ್ಲಿ ಹೊಡೆದ ಡೈಲಾಗ್ ಇದೀಗ ಟಾಲಿವುಡ್ ನಲ್ಲಿ ವೈರಲ್ ಆಗಿದೆ.

    107ನೇ ಸಿನಿಮಾದ ಶೂಟಿಂಗ್ ನಿರಂತರವಾಗಿ ನಡೆದಿದ್ದು, ನಿರ್ದೇಶಕ ಗೋಪಿಚಂದ್ ಮಲಿನೇನಿ ವಿಶೇಷವಾಗಿ ಟೀಸರ್ ರೆಡಿ ಮಾಡಿದ್ದು, ಬಾಲಕೃಷ್ಣ ಸಾಲ್ಟ್ ಅಂಡ್ ಪೇಪರ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಮಾಸ್ ಲುಕ್ ನಲ್ಲಿ ಕ್ಲಾಸ್ ಡೈಲಾಗ್ ಹೊಡೆದಿದ್ದಾರೆ. ಅದರಲ್ಲೂ ಈ ಟೀಸರ್ ನಲ್ಲಿ ಅಲ್ಲಿನ ಸರಕಾರಕ್ಕೆ ಟಾಂಗ್ ಕೊಟ್ಟಿದ್ದು, ಆ ಡೈಲಾಗ್ ಭಾರೀ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಕೊನೆಗೂ ರಿವೀಲ್ ಆಯಿತು ನಯನತಾರಾ ಮತ್ತು ವಿಘ್ನೇಶ್ ಶಿವನ್ ಮದುವೆ ಫೋಟೋ

    ಈ ಟೀಸರ್ ನಲ್ಲಿ ಬಾಲಯ್ಯ ‘ನಿಮಗೆಲ್ಲ ಗೌರ್ಮೆಂಟ್ ಆರ್ಡರ್.. ನನಗೆ ದೇವರ ಆರ್ಡರ್’ ಎಂದು ಹೇಳುವ ಡೈಲಾಗ್ ಇದೀಗ ಸಿಕ್ಕಾಪಟ್ಟೆ ಚರ್ಚೆ ಆಗುತ್ತಿದ್ದು, ಇದು ನಿಜವಾಗಿಯೂ ಬಾಲಯ್ಯ ಸರಕಾರಕ್ಕೆ ಕೊಟ್ಟಿರುವ ಟಾಂಗ್? ಎನ್ನುವ ಪ್ರಶ್ನೆಯನ್ನೂ ಅದು ಹುಟ್ಟು ಹಾಕಿದೆ. ಅಲ್ಲದೇ, ಅವರು ಯಾಕೆ ಸರಕಾರಕ್ಕೆ ಈ ರೀತಿ ಟಾಂಗ್ ಕೊಟ್ಟರು ಎನ್ನುವ ಚರ್ಚೆಯನ್ನೂ ಅದು ಹುಟ್ಟು ಹಾಕಿದೆ.

    ಬಾಲಕೃಷ್ಣ ಸಿನಿಮಾದಲ್ಲಿ ಕನ್ನಡದ ದುನಿಯಾ ವಿಜಯ್ ಕೂಡ ನಟಿಸುತ್ತಿದ್ದು, ಎರಡು ಹಂತದ ಶೂಟಿಂಗ್ ಕೂಡ ಅವರು ಮುಗಿಸಿ ಬಂದಿದ್ದಾರೆ. ಈ ಬಾರಿಯ ಹುಟ್ಟು ಹಬ್ಬಕ್ಕೆ ದುನಿಯಾ ವಿಜಯ್, ವಿಶ್ ಮಾಡಿದ್ದಾರೆ. ನಟಸಿಂಹ ಎಂದು ಬಿರುದು ಕೂಡ ಕೊಟ್ಟಿದ್ದಾರೆ.

  • ಯೋಗರಾಜ್ ಭಟ್ ಮಾವ, ನಟ ಸತ್ಯ ಉಮ್ಮತ್ತಾಲ್ ನಿಧನ

    ಯೋಗರಾಜ್ ಭಟ್ ಮಾವ, ನಟ ಸತ್ಯ ಉಮ್ಮತ್ತಾಲ್ ನಿಧನ

    ನ್ನಡ ಸಿನಿಮಾ ರಂಗದ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರ ಮಾವ, ನಟರೂ ಆಗಿರುವ ಸತ್ಯ ಉಮ್ಮತ್ತಾಲ್ (70) ಇಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಯೋಗರಾಜ್ ಭಟ್ ಅವರ ಪತ್ನಿಯ ತಂದೆ ಇವರಾಗಿದ್ದು, ಭಟ್ಟರ ಬೆಂಗಳೂರಿನ ಮನೆಯಲ್ಲೇ ವಾಸವಿದ್ದರು.

    ಪವನ್ ಕುಮಾರ್ ನಿರ್ದೇಶನದ ಲೈಫು ಇಷ್ಟೇನೇ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಸತ್ಯ ಅವರು ಇಪ್ಪತ್ತೈದಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸಹನಟರಾಗಿ ನಟಿಸಿದ್ದಾರೆ. ಲೈಫ್ ಇಷ್ಟೇನೆ ಪಾತ್ರದಿಂದ ಸಿನಿಮಾ ರಂಗಕ್ಕೆ ಕಾಲಿಟ್ಟರೆ, ಗಣೇಶ್, ದುನಿಯಾ ವಿಜಯ್, ಶಿವರಾಜ್ ಕುಮಾರ್ ಸೇರಿದಂತೆ ಅನೇಕ ಹೆಸರಾಂತ ನಟರ ಜೊತೆ ತೆರೆಹಂಚಿಕೊಂಡಿದ್ದಾರೆ.  ಇದನ್ನೂ ಓದಿ : ನಿತ್ಯಾನಂದ ಕುರಿತು ಸಾಕ್ಷ್ಯಚಿತ್ರ : ದೇವಮಾನವನ ನಿಜಬಣ್ಣ ಬಟಾಬಯಲು

    ಯೋಗರಾಜ್ ಭಟ್ ನಿರ್ದೇಶನದ ಬಹುತೇಕ ಸಿನಿಮಾಗಳಲ್ಲೂ ಸತ್ಯ ಕಾಣಿಸಿಕೊಂಡಿದ್ದರು. ಜಯಮ್ಮನ ಮಗ, ಕೆಂಡಸಂಪಗಿ, ಕಡ್ಡಿಪುಡಿ, ದನಕಾಯೋನು, ಆಕ್ಟ್ 1978, ಪ್ರೀತಿ ಗೀತಿ ಇತ್ಯಾದಿ ಸೇರಿದಂತೆ ಅನೇಕ ಚಿತ್ರಗಳಲ್ಲಿ ಇವರು ನಟಿಸಿದ್ದಾರೆ. ಇದನ್ನೂ ಓದಿ : ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಸಿನಿಮಾಗೆ ಮುಹೂರ್ತ : ಹಣೆ ಮೇಲೆ ಟೈಟಲ್ ಹಾಕಿಕೊಂಡು ಬಂದ ಚಿತ್ರತಂಡ

    ಬೆಂಗಳೂರಿನ ಯೋಗರಾಜ್ ಭಟ್ ಅವರ ಮನೆಯಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಂದು ಸಂಜೆ ಬೆಂಗಳೂರಿನ ರುದ್ರಭೂಮಿಯಲ್ಲೇ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ತಿಳಿದು ಬಂದಿದೆ.

  • ತಮ್ಮದೇ ಹೆಸರಿನ ಚಿತ್ರದಲ್ಲಿ ತೆಲುಗಿನ ಸ್ಟಾರ್ ನಟ ಬಾಲಕೃಷ್ಣ

    ತಮ್ಮದೇ ಹೆಸರಿನ ಚಿತ್ರದಲ್ಲಿ ತೆಲುಗಿನ ಸ್ಟಾರ್ ನಟ ಬಾಲಕೃಷ್ಣ

    ಟಾಲಿವುಡ್ ನ ಖ್ಯಾತ ನಟ ಬಾಲಕೃಷ್ಣ ಅವರ 107ನೇ ಸಿನಿಮಾದ ಎರಡನೇ ಹಂತದ ಶೂಟಿಂಗ್ ನಡೆದಿದೆ. ಈ ಸಂದರ್ಭದಲ್ಲಿ ಆ ಚಿತ್ರಕ್ಕೆ ಹೆಸರು ಘೋಷಣೆ ಆಗಿದೆ. ಬಾಲಕೃಷ್ಣ ಅವರ ಈ ಚಿತ್ರಕ್ಕೆ ಹಲವು ಶೀರ್ಷಿಕೆಗಳು ಕೇಳಿ ಬಂದಿದ್ದವು. ಅಲ್ಲದೇ, ಈ ಸಿನಿಮಾಗೆ ಅಣ್ಣಾಗಾರು ಎಂದು ಹೆಸರಿಡಲು ಚಿತ್ರತಂಡ ನಿರ್ಧರಿಸಿತ್ತು. ಆದರೆ, ಬೇರೆ ಹೆಸರು ಇಡುವ ಮೂಲಕ ಕುತೂಹಲ ಮೂಡಿಸಿದೆ ಚಿತ್ರತಂಡ. ಇದನ್ನೂ ಓದಿ : ಹಾಲಿವುಡ್ ಖ್ಯಾತ ನಟ ರೇ ಲಿಯೊಟ್ಟಾ ಮಲಗಿದ್ದಾಗಲೇ ನಿಧನ

    ಸಾಮಾನ್ಯವಾಗಿ ಕಲಾವಿದರು ತಮ್ಮ ಹೆಸರಿನ ಚಿತ್ರಗಳಲ್ಲಿ ನಟಿಸಲು ಉತ್ಸುಕರಾಗಿತ್ತಾರೆ. ಅದೊಂದು ಸೌಭಾಗ್ಯದ ಕ್ಷಣವೆಂದು ಭಾವಿಸುತ್ತಾರೆ. ಹಾಗಾಗಿ ಬಾಲಕೃಷ್ಣ ಅವರ 107ನೇ ಚಿತ್ರಕ್ಕೆ ‘ಜೈ ಬಾಲಯ್ಯ’ ಎಂದು ಹೆಸರಿಡುವ ಮೂಲಕ ಚಿತ್ರತಂಡ ಬಾಲಕೃಷ್ಣ ಅವರು ಗೌರವ ಸೂಚಿಸಿದೆ. ಬಾಲಕೃಷ್ಣ ಅವರ ಅಭಿಮಾನಿಗಳು ಕೂಡ ಈ ಟೈಟಲ್ ಕೇಳಿ ‘ಜೈ ಬಾಲಯ್ಯ’ ಎಂದು ಹಾರೈಸಿದ್ದಾರೆ. ಇದನ್ನೂ ಓದಿ  : ಸಿನಿಮಾವಾಗಲಿದೆ ‘ಟೈಂಪಾಸ್’ ಬೆಡಗಿ ಪ್ರೋತಿಮಾ ಬೇಡಿ ಬಯೋಪಿಕ್

    ಈ ಸಿನಿಮಾದ ವಿಶೇಷತೆ ಅಂದರೆ, ಮೊದಲ ಬಾರಿಗೆ ಈ ಚಿತ್ರದ ಮೂಲಕ ಕನ್ನಡದ ನಟ ದುನಿಯಾ ವಿಜಯ್ ತೆಲುಗು ಸಿನಿಮಾ ರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ವಿಜಯ್ ವಿಲನ್ ಪಾತ್ರ ಮಾಡಿದ್ದಾರೆ. ಈಗಾಗಲೇ ಎರಡು ಹಂತದ ಶೂಟಿಂಗ್ ನಲ್ಲೂ ವಿಜಯ್ ಪಾಲ್ಗೊಂಡಿದ್ದಾರೆ. ವಿಜಯ್ ಖಡಕ್ ವಿಲನ್ ಪಾತ್ರದಲ್ಲಿ ನಟಿಸಿದ್ದು, ಆ ಪಾತ್ರದ ಲುಕ್ ಕೂಡ ರಿವಿಲ್ ಆಗಿದೆ. ಇದನ್ನೂ ಓದಿ : ವಾರಕ್ಕೆ ಹತ್ತತ್ತು ಸಿನಿಮಾಗಳು ರಿಲೀಸ್ : ಥಿಯೇಟರ್ ಮಾತ್ರ ಖಾಲಿ ಖಾಲಿ

    ಬಾಲಕೃಷ್ಣ ನಾಯಕನಾಗಿ ನಟಿಸುತ್ತಿದ್ದರೆ, ಶ್ರುತಿ ಹಾಸನ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಗೋಪಿಚಂದ್ ಮೆಲಿನೇನಿ ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬರುತ್ತಿದೆ.

  • ಶಿವಣ್ಣನ ಹುಲಿ ಅವತಾರ: ಬೈರಾಗಿ ಹಾಡಿಗೆ ಭೀಮನ ಬಲ

    ಶಿವಣ್ಣನ ಹುಲಿ ಅವತಾರ: ಬೈರಾಗಿ ಹಾಡಿಗೆ ಭೀಮನ ಬಲ

    ಶಿವರಾಜ್ ಕುಮಾರ್ ನಟನೆಯ ಬೈರಾಗಿ ಸಿನಿಮಾದ ಹಾಡೊಂದು ಬಿಡುಗಡೆ ಆಗಿದ್ದು, ಈ ಹಾಡಿನಲ್ಲಿ ಶಿವರಾಜ್ ಕುಮಾರ್ ಹುಲಿವೇಷ ಹಾಕಿದ್ದಾರೆ. ಇದು ರಿಲೀಸ್ ಆಗುತ್ತಿರುವ ಈ ಸಿನಿಮಾದ ಮೊದಲ ಹಾಡಾಗಿದ್ದು, ದುನಿಯಾ ವಿಜಯ್ ಈ ಗೀತೆಯನ್ನು ಬಿಡುಗಡೆ ಮಾಡಿದ್ದಾರೆ. ಸಿನಿಮಾದಲ್ಲಿ ಈ ಹಾಡು ಶಿವಣ್ಣನ ಎಂಟ್ರಿ ಸಾಂಗ್ ಆಗಿದ್ದು ಸಖತ್ ಮಾಸ್ ಆಗಿ ಮೂಡಿಬಂದಿದೆ. ಡಾ. ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ, ಅನೂಪ್ ಸೀಳಿನ್ ಬ್ಯಾಂಡು ಬಜಾಯಿಸಿರುವ ಈ ಹಾಡಿಗೆ ಆ್ಯಂಥೋನಿ ದಾಸನ್ ದನಿಗೂಡಿಸಿರುವುದು ವಿಶೇಷ. ಇದನ್ನೂ ಓದಿ : ಗೋವಾ ಸಿಎಂ ಭೇಟಿಯಾದ ಯಶ್, ರಾಧಿಕಾ ಪಂಡಿತ್

    ‘ಟಕರಟಕ ಟಕರಟಕ ಎಗರಿಬಂತೋ ಕಾಡಹುಲಿ…’ ಎಂಬ ಸಾಹಿತ್ಯದಿಂದ ಶುರುವಾಗುವ ಈ ಸಾಂಗ್ ಕುರಿತು ಮಾತನಾಡಿರುವ ದುನಿಯಾ ವಿಜಯ್,  ‘ಮಾಸ್ ಬೀಟ್, ಕೇಳಿದಾಕ್ಷಣ ಕುಣಿಸುವ ಸಂಗೀತ ಈ ಹಾಡಿನಲ್ಲಿದೆ. ಆ್ಯಂಥೋನಿ ದಾಸ್ ವಾಯ್ಸ್ ಕೇಳಿದಾಕ್ಷಣ ಥ್ರಿಲ್ ಆಗಿಹೋದೆ. ಶಿವಣ್ಣನ ಎನರ್ಜಿಗೆ ಸರಿದೂಗುವಂಥ ಹಾಡಿದು. ನಾನಂತೂ ಸಖತ್ ಎಂಜಾಯ್ ಮಾಡಿದೆ. ಈ ಹಾಡನ್ನು ಕೇಳಿದವರೂ ಇಷ್ಟಪಡುತ್ತಾರೆ ಎಂಬ ಭರವಸೆಯಿದೆ’ ಎಂದಿದ್ದಾರೆ. ಇದನ್ನೂ ಓದಿ : ‘ಟಕ್ಕರ್’ ಮೂಲಕ ಪ್ರೇಕ್ಷಕರ ಮನಗೆಲ್ಲೋಕೆ ರೆಡಿಯಾದ ಮನೋಜ್ ಕುಮಾರ್

    ‘ನೂರಾರು ಡಾನ್ಸರ್ಸ್, ಬೃಹತ್ ಸೆಟ್, ಕಲರ್’ಫುಲ್ ಕಾಸ್ಟ್ಯೂಮ್’ನಲ್ಲಿ ಶಿವಣ್ಣಈ ಹಾಡಿಗೆ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ಬನೇರುಘಟ್ಟ ಸಮೀಪದ ದೇವಸ್ಥಾನವೊಂದರ ಬಳಿ ಜಾತ್ರೆ ಸೆಟ್ ಹಾಕಲಾಗಿತ್ತು. ದೊಡ್ಡ ಮಟ್ಟದಲ್ಲಿ ಈ ಹಾಡು ಮೂಡಿಬಂದಿದೆ’ ಎನ್ನುತ್ತಾರೆ ನಿರ್ಮಾಪಕ ಕೃಷ್ಣ ಸಾರ್ಥಕ್.  ವಿಜಯ್ ಮಿಲ್ಟನ್‌ ನಿರ್ದೇಶನ ಹಾಗೂ ಛಾಯಾಗ್ರಹಣವಿರುವ ಈ ಸಿನಿಮಾಕ್ಕೆ ಅವರೇ ಕಥೆ, ಚಿತ್ರಕಥೆ ಒದಗಿಸಿದ್ದಾರೆ. ಗುರು ಕಶ್ಯಪ್ ಸಂಭಾಷಣೆ ಈ ಚಿತ್ರಕ್ಕಿದೆ.

  • ದುನಿಯಾ ವಿಜಯ್ ಮತ್ತು ಬಾಲಯ್ಯ ನಟನೆಯ ಚಿತ್ರಕ್ಕೆ ಟೈಟಲ್ ಫಿಕ್ಸ್

    ದುನಿಯಾ ವಿಜಯ್ ಮತ್ತು ಬಾಲಯ್ಯ ನಟನೆಯ ಚಿತ್ರಕ್ಕೆ ಟೈಟಲ್ ಫಿಕ್ಸ್

    `ಸಲಗ’ ಭರ್ಜರಿ ಸಕ್ಸಸ್ ನಂತರ ಭೀಮನ ಅವತಾರವೆತ್ತಿ ಟಾಲಿವುಡ್ ಲೆಜೆಂಡ್ ಬಾಲಯ್ಯ ಜತೆ ಅಖಾಡಕ್ಕೆ ಇಳಿದಿದ್ದಾರೆ. ಬಾಲಯ್ಯ ಮತ್ತು ದುನಿಯಾ ವಿಜಯ್ ಕಾಂಬಿನೇಷನ್‌ನ ಹೊಸ ಚಿತ್ರಕ್ಕೆ ಪವರ್‌ಫುಲ್ ಟೈಟಲ್ ಕೂಡ ಫಿಕ್ಸ್ ಆಗಿದೆ.

    ದುನಿಯಾ ವಿಜಯ್ ಅಭಿನಯದ `ಸಲಗ’ ಸೂಪರ್ ಸಕ್ಸಸ್ ನಂತರ ಇದೀಗ `ಭೀಮ’ ಚಿತ್ರದ ನಿರ್ದೇಶನದ ಜವಬ್ದಾರಿ ಕೂಡ ಕೈಗೆತ್ತಿಕೊಂಡಿದ್ದಾರೆ. ನಟನಾಗಿ ಕಮ್ ನಿರ್ದೇಶಕನಾಗಿ ಪಳಗಿರೋ ವಿಜಯ್‌ಗೆ ತೆಲುಗು ಚಿತ್ರರಂಗ ರೆಡ್ ಕಾರ್ಪೆಟ್ ಹಾಕಿ ಕರೆಯುತ್ತಿದ್ದಾರೆ. ನಂದಮೂರಿ ಬಾಲಕೃಷ್ಣ ನಟನೆಯ ಹೊಸ ಚಿತ್ರಕ್ಕೆ ದುನಿಯಾ ವಿಜಯ್ ಪ್ರಮುಖ ಪಾತ್ರಕ್ಕೆ ಜೀವ ತುಂಬ್ತಿದ್ದಾರೆ. ಬಾಲಯ್ಯ ನಟನೆಯ ಹೊಸ ಸಿನಿಮಾಗೆ `ಅಣ್ಣಗಾರು’ ಅನ್ನೋ ಪವರ್‌ಫುಲ್ ಟೈಟಲ್ ಇಡಲಾಗಿದೆ.

    `ಅಖಂಡ’ ಬ್ಲಾಕ್ ಬಸ್ಟರ್ ಸಕ್ಸಸ್ ನಂತರ ಎಂದೂ ಮಾಡಿರದ ಡಿಫರೆಂಟ್ ಪಾತ್ರದಲ್ಲಿ ಬರಲು ಬಾಲಯ್ಯ ಸಜ್ಜಾಗಿದ್ದಾರೆ. ಇನ್ನು ಗೋಪಿಚಂದ್ ಮಲಾನೇನಿ ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದು, ಬಾಲಯ್ಯ ನಟನಯೆ 107ನೇ ಚಿತ್ರಕ್ಕೆ `ಅಣ್ಣಗಾರು’ ಟೈಟಲ್ ಕೂಡ ಫಿಕ್ಸ್ ಫೈನಲ್ ಆಗಿದೆ. ಬಾಲಯ್ಯಗೆ ನಾಯಕಿಯಾಗಿ ಶ್ರುತಿ ಹಾಸನ್ ನಟಿಸುತ್ತಿದ್ದಾರೆ. ಇದನ್ನೂ ಓದಿ: ಕಾಜಲ್ ಜೊತೆ ಶಾರುಖ್ ಖಾನ್ ಮತ್ತೆ ರೊಮ್ಯಾನ್ಸ್

    `ಅಣ್ಣಗಾರು’ ಪವರ್‌ಫುಲ್ ಟೈಟಲ್ ಮೂಲಕ ಬಾಲಯ್ಯ ಮತ್ತು ದುನಿಯಾ ವಿಜಯ್ ಬರುತ್ತಿದ್ದಾರೆ. ಸದ್ಯದಲ್ಲೇ ಚಿತ್ರತಂಡದಿಂದ ಟೈಟಲ್ ಕುರಿತು ಅಧಿಕೃತ ಮಾಹಿತಿ ಹೊರಬೀಳಲಿದೆ. ಲೆಜೆಂಡರಿ ಆಕ್ಟರ್ ಬಾಲಯ್ಯ ಮತ್ತು ದುನಿಯಾ ವಿಜಯ್ ನಟನೆಯನ್ನು ತೆರೆಯ ಮೇಲೆ ನೋಡಲು ಅಭಿಮಾನಿಗಳು ಕಾತರದಿಂದ ಕಾಯ್ತಿದ್ದಾರೆ.

  • ವಿಜಯ್ ದುನಿಯಾದಲ್ಲಿ ‘ಭೀಮ’ ಎಂಟ್ರಿ : ನಟಿ ಮಾಲಾಶ್ರೀ ಬಳಿ ಇತ್ತು ಭೀಮ ಟೈಟಲ್

    ವಿಜಯ್ ದುನಿಯಾದಲ್ಲಿ ‘ಭೀಮ’ ಎಂಟ್ರಿ : ನಟಿ ಮಾಲಾಶ್ರೀ ಬಳಿ ಇತ್ತು ಭೀಮ ಟೈಟಲ್

    ದುನಿಯಾ ವಿಜಯ್ ನಿರ್ದೇಶನದ ಎರಡನೇ ಚಿತ್ರ ‘ಭೀಮ’ನಿಗೆ ನಿನ್ನೆ ಬೆಂಗಳೂರಿನ ಬಂಡೆ ಮಾಕಾಳಮ್ಮ ದೇವಸ್ಥಾನದಲ್ಲಿ ಮುಹೂರ್ತ ನಡೆಯಿತು.  ನಟರಾದ ಶ್ರೀನಗರ ಕಿಟ್ಟಿ, ಡಾಲಿ ಧನಂಜಯ, ನಿರ್ಮಾಪಕರಾದ ಕೆ.ಪಿ.ಶ್ರೀಕಾಂತ್, ನಾಗಿ ಮುಂತಾದ ಗಣ್ಯರು ಈ ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಇದನ್ನೂ ಓದಿ : ಕನ್ನಡದಲ್ಲೂ ಬಂತು ಬಾಲಿವುಡ್ ನ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ

    “ಸಲಗ” ನಂತರ “ಭೀಮ” ಚಿತ್ರವನ್ನು ನಿರ್ದೇಶಿಸುತ್ತಿದ್ದೇನೆ. ಯುವ ಹಾಗೂ ಉತ್ಸಾಹಿ ನಿರ್ಮಾಪಕರಾದ ಜಗದೀಶ್ ಹಾಗೂ ಕೃಷ್ಣ ಸಾರ್ಥಕ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.  ಕಂಡ ಕೆಲವು ಘಟನೆಗಳನ್ನು ಆಧರಿಸಿ ಕಥೆ ಸಿದ್ದಪಡಿಸಿಕೊಂಡಿದ್ದೀನಿ. ಚಿತ್ರಕ್ಕೆ ಶೀರ್ಷಿಕೆ ಏನಿಡಬೇಕೆಂದು ಬಹಳ ದಿನಗಳ ಚರ್ಚೆ ನಡೆದ ನಂತರ “ಭೀಮ” ಎಂಬ ಶೀರ್ಷಿಕೆ ಆಯ್ಕೆ ಮಾಡಿಕೊಂಡಿದ್ದೀವಿ.  ಶೀರ್ಷಿಕೆ ಕೊಡಿಸಿದ ಜಗದೀಶ್ ಅವರಿಗೆ ಧನ್ಯವಾದ. ಈ ಚಿತ್ರಕ್ಕೆ ಚರಣ್ ರಾಜ್ ಸಂಗೀತ ನೀಡಲಿದ್ದಾರೆ. ನಿರ್ದೇಶನದ ಜೊತೆಗೆ ನಾನು ನಾಯಕನಾಗೂ ಕಾಣಿಸಿಕೊಳ್ಳುತ್ತಿದ್ದೀನಿ.  ಇದನ್ನೂ ಓದಿ : ಮಗನೊಂದಿಗೆ ನಿಖಿಲ್ ಕುಮಾರ್ ಸ್ವಾಮಿ ಜಾಲಿ ಟ್ರೀಪ್

    “ಜಯಮ್ಮನ ಮಗ” ಚಿತ್ರದಲ್ಲಿ ನನ್ನ ತಾಯಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಕಲ್ಯಾಣಿ ಅವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.  ಬ್ಲ್ಯಾಕ್ ಡ್ರ್ಯಾಗನ್ ಮಂಜು ಅವರು ಸೇರಿದಂತೆ ಸಾಕಷ್ಟು ಹೊಸ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ನಾಯಕಿಯ ಆಯ್ಕೆ ನಡೆಯುತ್ತಿದೆ. ಇಂದಿನಿಂದ ಚಿತ್ರೀಕರಣ ಆರಂಭಿಸುತ್ತಿದ್ದೇನೆ. ನನ್ನ “ಸಲಗ” ಚಿತ್ರದ ಮುಹೂರ್ತ ಸಮಾರಂಭ ಸಹ ಈ ದೇವಸ್ಥಾನದಲ್ಲಿ ನಡೆದಿತ್ತು. ಎರಡನೇ ಚಿತ್ರದ ಮುಹೂರ್ತ ಇಲ್ಲೇ ನಡೆಯಬೇಕೆಂದು ಆಸೆಯಿತ್ತು. ಇಂತಹ ದೇವಸ್ಥಾನ ಪರಿಚಯಿಸಿದ ಕೆ.ಪಿ.ಶ್ರೀಕಾಂತ್ ಅವರಿಗೆ ಧನ್ಯವಾದ.  ಶ್ರೀನಗರ ಕಿಟ್ಟಿ, ಧನಂಜಯ ಸೇರಿದಂತೆ ಅನೇಕ ಚಿತ್ರರಂಗದ ಗೆಳೆಯರು ಆಗಮಿಸಿರುವುದು ಖುಷಿ ತಂದಿದೆ ಎಂದರು ನಾಯಕ ಹಾಗೂ ನಿರ್ದೇಶಕ ದುನಿಯಾ ವಿಜಯ್. ಇದನ್ನೂ ಓದಿ : ಜೇಮ್ಸ್ ಟೀಮ್ ಮೊದಲೇ ಈ ಕೆಲಸ ಮಾಡಬೇಕಿತ್ತು : ನಟ ಶಿವರಾಜ್ ಕುಮಾರ್

    “ಜಯಮ್ಮನ ಮಗ” ಚಿತ್ರದಲ್ಲಿ ನನಗೆ ತಾಯಿಯ ಪಾತ್ರ ನೀಡಿದ್ದರು. ಈ ಚಿತ್ರದಲ್ಲೂ ನಾನು ಅವರ ತಾಯಿ. ಆ ಚಿತ್ರದಲ್ಲಿ ಸೌಮ್ಯ ಸ್ವಭಾವದ ತಾಯಿಯಾಗಿ ಕಾಣಿಸಿಕೊಂಡಿದ್ದೆ. ಇದರಲ್ಲಿ ಸ್ವಲ್ಪ ರೌದ್ರ ಸ್ಭಭಾವದವಳು ಎಂದು ಹಿರಿಯ ನಟಿ ಕಲ್ಯಾಣಿ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಅಂದಹಾಗೆ ಈ ಸಿನಿಮಾದ ಟೈಟಲ್ ಭೀಮ ನಟಿ ಮಾಲಾಶ್ರೀ ಅವರ ಬಳಿಯಿತ್ತು. ನಿರ್ಮಾಪಕ ಜಗದೀಶ್ ಮತ್ತು ದುನಿಯಾ ವಿಜಯ್ ಕೇಳಿದಾಗ ಪ್ರೀತಿಯಿಂದಲೇ ಆ ಟೈಟಲ್ ಕೊಟ್ಟಿದ್ದಾರೆ ನಟಿ ಮಾಲಾಶ್ರೀ.

  • ಏ.18ಕ್ಕೆ ದುನಿಯಾ ವಿಜಯ್ ನಿರ್ದೇಶನದ ‘ಭೀಮ’ನಿಗೆ ಮುಹೂರ್ತ

    ಏ.18ಕ್ಕೆ ದುನಿಯಾ ವಿಜಯ್ ನಿರ್ದೇಶನದ ‘ಭೀಮ’ನಿಗೆ ಮುಹೂರ್ತ

    ದುನಿಯಾ ವಿಜಯ್ ನಿರ್ದೇಶನದ ಎರಡನೇ ಚಿತ್ರಕ್ಕೆ ಎಪ್ರಿಲ್ 18ರಂದು ಮುಹೂರ್ತ ಫಿಕ್ಸ್ ಆಗಿದೆ. ಈ ಸಿನಿಮಾಗೆ ಈಗಾಗಲೇ ‘ಭೀಮ’ ಎಂದು ಹೆಸರಿಡಲಾಗಿದ್ದು, ಭೀಮನ ಜತೆ ಯಾರೆಲ್ಲ ಸೇರಿಕೊಂಡಿದ್ದಾರೆ ಎನ್ನುವುದು ಮುಹೂರ್ತದ ದಿನದಂದು ಗೊತ್ತಾಗಲಿದೆ. ಚಿತ್ರದ ಪೋಸ್ಟರ್ ಮತ್ತು ಟೈಟಲ್ ಲಾಂಚ್ ಅನ್ನು ವಿಭಿನ್ನವಾಗಿ ಮಾಡಿರುವ ದುನಿಯಾ ವಿಜಯ್, ಇದೀಗ ಮುಹೂರ್ತವನ್ನು ಸರಳವಾಗಿ ಮತ್ತು ವಿಶೇಷವಾಗಿ ಪ್ಲ್ಯಾನ್ ಮಾಡಿದ್ದಾರೆ. ಬೆಂಗಳೂರಿನ ಬಂಡೆ ಮಾಕಾಳಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನಡೆಯಲಿದೆ. ಅವರ ಮೊದಲ ನಿರ್ದೇಶನದ ಚಿತ್ರ ಸಲಗದ ಮುಹೂರ್ತ ಕೂಡ ಇದೇ ದೇವಸ್ಥಾನದಲ್ಲೇ ನಡೆದಿತ್ತು. ಇದನ್ನೂ ಓದಿ : ‘ಸಲಾರ್’ ಸಿನಿಮಾದಲ್ಲಿ ‘ಉಗ್ರಂ’ ಛಾಯೆ ಇದೆ: ಪ್ರಶಾಂತ್ ನೀಲ್

    ಮೊದಲನೇ ನಿರ್ದೇಶನದಲ್ಲೇ ಯಶಸ್ಸು ಕಂಡಿರುವ ದುನಿಯಾ ವಿಜಯ್, ಎರಡನೇ ಸಿನಿಮಾದಲ್ಲೂ ಅಂಥದ್ದೊಂದು ಭರವಸೆ ಮೂಡಿಸಿದ್ದಾರೆ. ಈಗಾಗಲೇ ಸಿನಿಮಾದ ಆಡಿಯೋ ರೈಟ್ಸ್ ಸೇಲ್ ಆಗಿದ್ದು, ಸಿನಿಮಾ ಶುರುವಾಗುವ ಮುನ್ನವೇ ವಿಜಯ್ ಅವರಿಗೆ ಕೈ ತುಂಬಾ ಹಣ ನೀಡಿದೆ. ಇದನ್ನೂ ಓದಿ : EXCLUSIVE INTERVIEW: ಗೆಲ್ಲಲು ಹೊರಟವನಿಗೆ ಸೋಲು ದೊಡ್ಡದಾಗಬಾರದು: ಯಶ್

    ಸಲಗ ಸಿನಿಮಾದ ಬಹುತೇಕ ಹಾಡುಗಳು ಹಿಟ್ ಆಗಿದ್ದರೆ, ಭೀಮ ಸಿನಿಮಾದ ಹಾಡುಗಳ ಬಗ್ಗೆಯೂ ನಿರೀಕ್ಷೆ ಮೂಡಿದೆ. ಈ ಸಿನಿಮಾದಲ್ಲಿ ಮತ್ತೆ ವಿಜಯ್ ಮತ್ತು ಚರಣ್ ರಾಜ್ ಕಾಂಬಿನೇಷನ್ ಮುಂದುವರೆದಿದೆ. ಈ ಚಿತ್ರವನ್ನು ಕೃಷ್ಣ ಸಾರ್ಥಕ್ ಹಾಗೂ ವಿತರಕ ಜಗದೀಶ್ ಗೌಡ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಸದ್ಯದಲ್ಲೇ ಶೂಟಿಂಗ್ ಕೂಡ ಶುರುವಾಗಲಿದೆ.

  • ದುನಿಯಾ ವಿಜಯ್ ನಟನೆಯ ತೆಲುಗು ಸಿನಿಮಾದ ಫಸ್ಟ್ ಲುಕ್ ರಿಲೀಸ್ :  ಯಾರದು ಪ್ರತಾಪ್ ರೆಡ್ಡಿ?

    ದುನಿಯಾ ವಿಜಯ್ ನಟನೆಯ ತೆಲುಗು ಸಿನಿಮಾದ ಫಸ್ಟ್ ಲುಕ್ ರಿಲೀಸ್ : ಯಾರದು ಪ್ರತಾಪ್ ರೆಡ್ಡಿ?

    ಮೊನ್ನೆಯಷ್ಟೇ ದುನಿಯಾ ವಿಜಯ್ ತೆಲುಗಿನ ತಮ್ಮ ಚೊಚ್ಚಲು ಸಿನಿಮಾದ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದರು. ಒಂದು ವಾರ ಶೂಟಿಂಗ್ ಮುಗಿಯುತ್ತಿದ್ದಂತೆಯೇ ಇನ್ನೂ ಹೆಸರಿಡದ ಆ ಸಿನಿಮಾದಲ್ಲಿನ ವಿಜಯ್ ಪಾತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದೆ ಚಿತ್ರತಂಡ. ಈ ಸಿನಿಮಾದಲ್ಲಿ ವಿಜಯ್ ಅವರ ಪಾತ್ರದ ಹೆಸರನ್ನೂ ರಿವಿಲ್ ಮಾಡಲಾಗಿದೆ. ಮುಸಳಿ ಮಡಗು ಪ್ರತಾಪ್ ರೆಡ್ಡಿ ಹೆಸರಿನ ಪಾತ್ರವನ್ನು ವಿಜಯ್ ನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ : ಐದು ಮಕ್ಕಳಿಗೆ ‘ಪುನೀತ್ ರಾಜಕುಮಾರ್’ ಅಂತ ನಾಮಕರಣ ಮಾಡಿದ ನಟಿ ತಾರಾ

    ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ನಟನೆಯ ಈ ಹೊಸ ಸಿನಿಮಾದಲ್ಲಿ ವಿಜಯ್ ನೆಗೆಟಿವ್ ಶೇಡ್ ಇರುವಂತಹ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶೂಟಿಂಗ್ ಗಾಗಿ ವಿಜಯ್, ಪತ್ನಿಯೊಂದಿಗೆ ಈಗಾಗಲೇ ತೆರಳಿದ್ದಾರೆ. ಇದನ್ನೂ ಓದಿ : ಅಬ್ಬಬ್ಬಾ..! 60 ಕೋಟಿ ಬಾಚಿದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ : ಬಾಕ್ಸ್ ಆಫೀಸ್ ಚಿಂದಿ ಚಿತ್ರಾನ್ನ

    ವಿಲನ್ ಆಗಿಯೇ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟವರು ದುನಿಯಾ ವಿಜಯ್, ಆನಂತರ ದುನಿಯಾ ಚಿತ್ರ ಅವರನ್ನು ಹೀರೋ ಆಗಿ ಮಾಡಿತು. ಅಲ್ಲಿಂದ ಅವರು ನಾಯಕರಾಗಿಯೇ ಸಿನಿಮಾ ರಂಗದಲ್ಲಿ ಗುರುತಿಸಿಕೊಂಡರು. ಈಗ ಮತ್ತೆ ವಿಲನ್ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಅದು ತೆಲುಗು ಸಿನಿಮಾದಲ್ಲಿ ಎನ್ನುವುದು ವಿಶೇಷ. ಗೋಪಿಚಂದ್ ಮಲಿನೇನೆ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಬಾಲಯ್ಯನ 107ನೇ ಸಿನಿಮಾ ಇದಾಗಿದೆ.