Tag: Dussehra

  • ದುಷ್ಟ, ಕೆಡುಕಿನ ಮೇಲೆ ಒಳ್ಳೆಯದರ ವಿಜಯ: ಭಾರತೀಯರಿಗೆ ವಿಜಯದಶಮಿ ಶುಭಾಶಯ ತಿಳಿಸಿದ ಮೋದಿ

    ದುಷ್ಟ, ಕೆಡುಕಿನ ಮೇಲೆ ಒಳ್ಳೆಯದರ ವಿಜಯ: ಭಾರತೀಯರಿಗೆ ವಿಜಯದಶಮಿ ಶುಭಾಶಯ ತಿಳಿಸಿದ ಮೋದಿ

    ನವದೆಹಲಿ: ಭಾರತೀಯರಿಗೆ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ವಿಜಯದಶಮಿಯ (Vijaya Dashami) ಶುಭಾಶಯ ಕೋರಿದ್ದಾರೆ.

    ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ವಿಜಯದಶಮಿಯು ದುಷ್ಟ ಮತ್ತು ಸುಳ್ಳಿನ ಮೇಲೆ ಒಳ್ಳೆಯದು ಮತ್ತು ಸದಾಚಾರದ ವಿಜಯವನ್ನು ಆಚರಿಸುತ್ತದೆ. ಧೈರ್ಯ, ಬುದ್ಧಿವಂತಿಕೆ ಮತ್ತು ಭಕ್ತಿ ಯಾವಾಗಲೂ ನಮ್ಮ ಮಾರ್ಗಗಳಿಗೆ ಮಾರ್ಗದರ್ಶನ ನೀಡಲಿ ಎಂದು ಆಶಿಸಿದ್ದಾರೆ. ಇದನ್ನೂ ಓದಿ: ಕೇಸರಿ ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

    ಸಮಸ್ತ ಭಾರತೀಯರಿಗೆ ವಿಜಯ ದಶಮಿಯ ಶುಭಾಶಯಗಳು ಎಂದು ಮೋದಿ ತಿಳಿಸಿದ್ದಾರೆ.

    ಇದೇ ಸಂದರ್ಭದಲ್ಲಿ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುಜರಾತ್‌ನ ಭುಜ್‌ಗೆ ಆಗಮಿಸಿ, ಸೇನಾ ನೆಲೆಯಲ್ಲಿ ಭಾರತೀಯ ಸೇನಾ ಸಿಬ್ಬಂದಿಯೊಂದಿಗೆ ದಸರಾ ಸಂಭ್ರಮಾಚರಣೆ ಮಾಡಿದ್ದಾರೆ. ಇದನ್ನೂ ಓದಿ: ಅರಮನೆ ನಗರಿಯಲ್ಲಿ ದಸರಾ ವೈಭವ – ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ

  • ಬಂದೇ ಬಿಡ್ತು ದಸರಾ – ಮೈಸೂರು ಅರಮನೆಯಲ್ಲಿ ಯಾವ ದಿನ ಏನು ಕಾರ್ಯಕ್ರಮ?

    ಬಂದೇ ಬಿಡ್ತು ದಸರಾ – ಮೈಸೂರು ಅರಮನೆಯಲ್ಲಿ ಯಾವ ದಿನ ಏನು ಕಾರ್ಯಕ್ರಮ?

    ಮೈಸೂರು: ವಿಶ್ವವಿಖ್ಯಾತ ಮೈಸೂರು (Mysuru) ದಸರಾ 2023ಕ್ಕೆ (Dussehra) ದಿನಗಣನೆ ಶುರುವಾಗಿದೆ. ಅರಮನೆಯಲ್ಲಿ ದಸರಾ ಪರಂಪರೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅರಮನೆಯಲ್ಲಿ ನಡೆಯುವ ದಸರಾ ಪೂಜಾ ಕಾರ್ಯಕ್ರಮಗಳ ಪಟ್ಟಿ ಇಂತಿದೆ.

    ಅ.9 ರಂದು ರತ್ನ ಖಚಿತ ಸಿಂಹಾಸನ ಜೋಡಣೆ ಆಗಲಿದೆ. ಬೆಳಗ್ಗೆ 7 ಗಂಟೆಗೆ ನವಗ್ರಹ ಹೋಮ ಸೇರಿ ಹಲವು ಪೂಜಾ ವಿಧಿ ವಿಧಾನಗಳು ನಡೆಯಲಿದೆ. ಬಳಿಕ ಬೆಳಗ್ಗೆ 10:05 ರಿಂದ 10:35ರ ಶುಭ ಲಗ್ನದಲ್ಲಿ ಸಿಂಹಾಸನ ಜೋಡಣೆ ಆಗಲಿದೆ. ಬಳಿಕ ಗೋಶಾಲೆಗೆ ಪಟ್ಟದ ಆನೆ, ಪಟ್ಟದ ಕುದುರೆ ಹಾಗೂ ಪಟ್ಟದ ಹಸು ಆಗಮಿಸಲಿವೆ. ಇದನ್ನೂ ಓದಿ: ಸಿಕ್ಕಿಂ ಪ್ರವಾಹ – 102 ಜನ ನಾಪತ್ತೆ, ಸಾವಿನ ಸಂಖ್ಯೆ 14ಕ್ಕೆ ಏರಿಕೆ

    ಅ.15 ರಂದು 6 ಗಂಟೆಯಿಂದ 6:25ರ ವರೆಗೆ ಶುಭ ಮುಹೂರ್ತದಲ್ಲಿ ಸಿಂಹ ಜೋಡಣೆ ಮಾಡಲಾಗುತ್ತದೆ. ಬೆಳಗ್ಗೆ 07:05 ರಿಂದ 7:45ರ ಶುಭ ಲಗ್ನದಲ್ಲಿ ಕಂಕಣ ಧಾರಣೆ ನಡೆಯಲಿದೆ. ಈ ವೇಳೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಅವರ ಪತ್ನಿ ತ್ರಿಷಿಕಾ ಕುಮಾರಿಗೆ ಕಂಕಣ ಧಾರಣೆ ನಡೆಯಲಿದೆ.

    ಬಳಿಕ 9:45ಕ್ಕೆ ಅರಮನೆ ಸವಾರಿ ತೊಟ್ಟಿಗೆ ಪಟ್ಟದ ಆನೆ, ಪಟ್ಟದ ಕುದುರೆ ಮತ್ತು ಪಟ್ಟದ ಹಸು ಆಗಮಿಸಲಿವೆ. ಬೆಳಗ್ಗೆ 10:15ಕ್ಕೆ ಕಳಸ ಪೂಜೆ ಹಾಗೂ ಸಿಂಹಾಸನ ಪೂಜೆ ನೆರವೇರಲಿದೆ. ಇದಾದ ಬಳಿಕ ಬೆಳಗ್ಗೆ 11:30ರಿಂದ 11:50ಕ್ಕೆ ಖಾಸಗಿ ದರ್ಬಾರ್ ನಡೆಯಲಿದೆ. ಅಂದು ಮಧ್ಯಾಹ್ನ 1:45 ರಿಂದ 02:05ರ ಅವಧಿಯಲ್ಲಿ ತಾಯಿ ಚಾಮುಂಡೇಶ್ವರಿಯನ್ನು ಚಾಮುಂಡಿ ತೊಟ್ಟಿಯಿಂದ ಕನ್ನಡಿ ತೊಟ್ಟಿಗೆ ರವಾನೆ ಮಾಡಲಾಗುತ್ತದೆ.

    ಅ.20 ರಂದು 10:05 ರಿಂದ 10:25ಕ್ಕೆ ಸರಸ್ವತಿ ಪೂಜೆ, ಅ.21 ರಂದು ಕಾಳರಾತ್ರಿ ಪೂಜೆ, ಅ.22 ರಂದು ದುರ್ಗಾಷ್ಠಮಿ ಪೂಜೆ, ಅ.23 ರಂದು ದುರ್ಗಾಷ್ಠಮಿ ಪೂಜೆ ನಡೆಯಲಿದೆ. ಅದೇ ದಿನ ಬೆಳಗ್ಗೆ 5:30ಕ್ಕೆ ಚಂಡಿಹೋಮದೊಂದಿಗೆ ಪೂಜೆ ಆರಂಭವಾಗಲಿದೆ. ಆ ಸಮಯದಲ್ಲಿ ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಕುದುರೆ ಹಾಗೂ ಪಟ್ಟದ ಹಸು ಆಗಮಿಸಲಿವೆ.

    ಬಳಿಕ ಬೆಳಗ್ಗೆ 6:05 ರಿಂದ 06:15ಕ್ಕೆ ಖಾಸಾ ಆಯುಧಗಳು ಅರಮನೆ ಕೋಡಿ ಸೋಮೇಶ್ವರ ದೇಗುಲಕ್ಕೆ ರವಾನೆ ಆಗಲಿವೆ. ಬೆಳಗ್ಗೆ 07:15ಕ್ಕೆ ಖಾಸಾ ಆಯುಧಗಳು ಕೋಡಿ ಸೋಮೇಶ್ವರ ದೇಗುಲದಿಂದ ಅರಮನೆಗೆ ವಾಪಸ್ ತರಲಾಗುತ್ತದೆ. ಬೆಳಗ್ಗೆ 9:30ಕ್ಕೆ ಚಂಡಿಹೋಮ ಪೂರ್ಣಾಹುತಿ ನಡೆಯಲಿದೆ. ಬೆಳಗ್ಗೆ 11:45ಕ್ಕೆ ಕಲ್ಯಾಣ ಮಂಟಪಕ್ಕೆ ಪಟ್ಟದ ಆನೆ, ಪಟ್ಟದ ಕುದುರೆ ಹಾಗೂ ಪಟ್ಟದ ಹಸು ಬರಲಿವೆ. ಬಳಿಕ ಮಧ್ಯಾಹ್ನ 12:20ಕ್ಕೆ ಆಯುಧಪೂಜೆ ಆರಂಭವಾಗಲಿದೆ. ಈ ವೇಳೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ಆಯುಧಗಳಿಗೆ ಪೂಜೆ ನಡೆಯಲಿದೆ.

    ಬಳಿಕ ಸಂಜೆ ಖಾಸಗಿ ದರ್ಬಾರ್ ಇರಲಿದೆ. ನಂತರ ಸಿಂಹ ವಿಸರ್ಜನೆ, ವಾಣಿ ವಿಲಾಸ ದೇವರ ಮನೆಯಲ್ಲಿ ಕಂಕಣ ವಿಸರ್ಜನೆ ಆಗಲಿದೆ. ಅಂಬಾವಿಲಾಸದಲ್ಲಿ ದಪ್ತಾರ್ ಪೂಜೆ ಮಾಡಿ, ಮಹಾಸನ್ನಿಧಾನದಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಮಲದೇವಿ ದರ್ಶನ ಪಡೆಯಲಿದ್ದಾರೆ.

    ಅ.24 ರಂದು ವಿಜಯದಶಮಿ ಆಚರಣೆ ನಡೆಯಲಿದೆ. ಬೆಳಗ್ಗೆ 9:45ಕ್ಕೆ ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಕುದುರೆ ಮತ್ತು ಪಟ್ಟದ ಹಸು ಆಗಮಿಸಲಿವೆ. ಬೆಳಗ್ಗೆ 11 ರಿಂದ 11:40ರ ವೇಳೆಗೆ ವಿಜಯದಶಮಿ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆ ಅರಮನೆ ಆನೆ ಬಾಗಿಲಿನಿಂದ ಅರಮನೆ ಭುವನೇಶ್ವರಿ ದೇಗುಲದವರೆಗೂ ನಡೆಯಲಿದೆ. ಬಳಿಕ ಭುವನೇಶ್ವರಿ ದೇಗುಲದಲ್ಲಿ ಶಮಿ ಪೂಜೆಯನ್ನು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ನೆರವೇರಿಸಲಿದ್ದಾರೆ. ಇದನ್ನೂ ಓದಿ: ಬಿಟ್‌ಕಾಯಿನ್‌ ಪ್ರಕರಣ – ಪಂಜಾಬ್‌ ಮೂಲದ ಅಂತಾರಾಷ್ಟ್ರೀಯ ಹ್ಯಾಕರ್‌ ಬಂಧನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 500 ವರ್ಷ ಇತಿಹಾಸ ಹೊಂದಿದ ದೇವಸ್ಥಾನಕ್ಕೆ ಭೇಟಿ ನೀಡಿದ ಸೋನಿಯಾ

    500 ವರ್ಷ ಇತಿಹಾಸ ಹೊಂದಿದ ದೇವಸ್ಥಾನಕ್ಕೆ ಭೇಟಿ ನೀಡಿದ ಸೋನಿಯಾ

    ಮೈಸೂರು: ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ(Sonia Gandhi) ಅವರು ವಿಜಯದಶಮಿ(Vijayadashami ) ಹಬ್ಬದ ಹಿನ್ನೆಲೆಯಲ್ಲಿ ಹೆಚ್ ಡಿ ಕೋಟಿ ತಾಲ್ಲೂಕಿನಲ್ಲಿರುವ ದೇವಸ್ಥಾನದಲ್ಲಿ(Temple) ಪೂಜೆ ಸಲ್ಲಿಸಿದ್ದಾರೆ.

    ಕಬಿನಿ ಹಿನ್ನಿರಿನಲ್ಲಿರುವ ಭೀಮನಕೊಲ್ಲಿ ದೇವಸ್ಥಾನಕ್ಕೆ(Bheemanakolli Temple) ಭೇಟಿ ನೀಡಿದ ಸೋನಿಯಾ ಗಾಂಧಿ ಮಹದೇಶ್ವರನ ದರ್ಶನ ಪಡೆದರು. ಕಬಿನಿ(Kabini) ಹಿನ್ನಿರಿನಲ್ಲಿರುವ ಮಹದೇಶ್ವರ ದೇವಸ್ಥಾನಕ್ಕೆ 500 ವರ್ಷಗಳ ಇತಿಹಾಸವಿದೆ. ಇಲ್ಲಿ ದೇವರ ಮೂರ್ತಿಯನ್ನು ತಂದು ಪ್ರತಿಷ್ಠೆ ಮಾಡಿದ್ದಲ್ಲ, ಇದು ಉದ್ಭವ ಮೂರ್ತಿ ಎಂಬ ನಂಬಿಕೆಯಿದೆ.

    ದೇವಸ್ಥಾನಕ್ಕೆ ಭೇಟಿ ನೀಡಿದ ಸೋನಿಯಾಗೆ ಅನುಷಾ ಎಂಬುವವರು ಮಹದೇಶ್ವರ ಸ್ವಾಮಿ ದೇವಸ್ಥಾನ ಹಿನ್ನೆಲೆಯ ಬಗ್ಗೆ ವಿವರಣೆ ನೀಡಿದ್ದಾರೆ. ಸೋನಿಯಾ ಗಾಂಧಿ ಭೇಟಿ ವೇಳೆ ಸ್ಥಳೀಯ ಶಾಸಕ ಅನಿಲ್ ಚಿಕ್ಕಮಾದು ಸಾಥ್ ನೀಡಿದರು.

    ಸೋನಿಯಾ ಗಾಂಧಿ ಅವರು ತಮ್ಮ ಪುತ್ರ, ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೋ ಯಾತ್ರೆಯಲ್ಲಿ(Bharat Jodo Yatra) ಪಾಲ್ಗೊಳ್ಳಲು ಸೋಮವಾರ ಆಗಮಿಸಿದ್ದಾರೆ. ಇದನ್ನೂ ಓದಿ: ಕ್ರೀಸ್ ಬಿಟ್ಟರೆ ಉಳಿಗಾಲವಿಲ್ಲ ಸ್ಟಬ್ಸ್‌ಗೆ ಚಹರ್ ವಾರ್ನಿಂಗ್ – ಕಣ್ಸನ್ನೆಯಲ್ಲೇ ಮಾತುಕತೆ

    ಸೋನಿಯಾ ಗಾಂಧಿ ಅವರು ಕೊಡಗಿನ ರೆಸಾರ್ಟ್‌ನಲ್ಲಿ ಸೋಮವಾರದಿಂದ ಮೂರು ದಿನಗಳ ಕಾಲ ವಾಸ್ತವ್ಯ ಹೂಡಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್‌ನಲ್ಲಿ ಕೊಡಗಿಗೆ ತೆರಳಲು ಸಾಧ್ಯವಾಗಲಿಲ್ಲ. ಹೀಗಾಗಿ,ಎಚ್‌.ಡಿ. ಕೋಟೆ ತಾಲೂಕು ಕಬಿನಿ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಸೋನಿಯಾ ಗಾಂಧಿ ಅವರು ಶುಕ್ರವಾರ ಬೆಳಗ್ಗೆ ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೈಸೂರು ದಸರಾ ಜಂಬೂಸವಾರಿ ಪುಷ್ಪಾರ್ಚನೆಗೆ ಪ್ರಧಾನಿ ಬರಲ್ಲ: ಎಸ್.ಟಿ.ಸೋಮಶೇಖರ್

    ಮೈಸೂರು ದಸರಾ ಜಂಬೂಸವಾರಿ ಪುಷ್ಪಾರ್ಚನೆಗೆ ಪ್ರಧಾನಿ ಬರಲ್ಲ: ಎಸ್.ಟಿ.ಸೋಮಶೇಖರ್

    ಮೈಸೂರು: ಅದ್ಧೂರಿಯಾಗಿ ನಡೆಯುವ ಮೈಸೂರು ದಸರಾ ಜಂಬೂಸವಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪುಷ್ಪಾರ್ಚನೆಗೆ ಬರುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ ನೀಡಿದರು.

    ಮೈಸೂರು ದಸರಾದಲ್ಲಿ ಭಾಗವಹಿಸಲಿರುವ ಗಣ್ಯರ ಬಗ್ಗೆ ಮಾಹಿತಿ ನೀಡಿದ ಅವರು, ರಾಷ್ಟ್ರಪತಿ ಭಾಗವಹಿಸುವ ಕಾರ್ಯಕ್ರಮದ ಪಟ್ಟಿ ಅಂತಿಮವಾಗುತ್ತಿದೆ. ಅವರನ್ನು ಅರಮನೆಯ ಭೇಟಿ ಬಗ್ಗೆ ಈಗಾಗಲೇ ಕೇಳಲಾಗಿದೆ. ಆದರೆ ಇನ್ನೂ ರಾಷ್ಟ್ರಪತಿಗಳಿಂದ ಅಧಿಕೃತ ಒಪ್ಪಿಗೆ ಸಿಕ್ಕಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ನಮ್ಮ ಪ್ರಯತ್ನದಿಂದಾಗಿ ಚೀತಾ ಭಾರತಕ್ಕೆ ಬಂದಿವೆ: ಕಾಂಗ್ರೆಸ್

    ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರದ 4 ಮಂತ್ರಿಗಳು ಬರುವ ಸಾಧ್ಯತೆ ಇದೆ. ಅದರ ಆಧಾರದ ಮೇಲೆ ವೇದಿಕೆ ಮೇಲೆ ಕುಳಿತುಕೊಳ್ಳುವವರ ಪಟ್ಟಿ ಅಂತಿಮಗೊಳ್ಳುತ್ತದೆ. ದಸರಾ ಪಾಸ್ ಹಾಗೂ ಗೋಲ್ಡ್ ಕಾರ್ಡ್ ಕುರಿತು ಇಂದು ಸಂಜೆಯೊಳಗೆ ಅಂತಿಮ ತೀರ್ಮಾನವಾಗುತ್ತದೆ. ಯುವದಸರಾ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಮಧ್ಯಾಹ್ನ ಸಭೆ ನಡೆಸಿ ಸಂಜೆಯೊಳಗೆ ತೀರ್ಮಾನವನ್ನು ಅಂತಿಮಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: 70 ವರ್ಷಗಳ ನಂತರ ಭಾರತಕ್ಕೆ ಮರಳಿದ ಚೀತಾ – ನಮೀಬಿಯಾದ 8 ಚೀತಾಗಳನ್ನು ಬಿಡುಗಡೆ ಮಾಡಿದ ಮೋದಿ

    ದಸರಾಗೆ ಹಣ ಬಿಡುಗಡೆ ವಿಚಾರವಾಗಿ ಮಾತನಾಡಿದ ಅವರು, ಹಣ ಬಿಡುಗಡೆ ಮಾಡಿರುವುದಾಗಿ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿದ್ಯುತ್ ದೀಪಾಲಂಕಾರಕ್ಕೆ 4.5 ಕೋಟಿ ರೂ. ನಿಗದಿ ಮಾಡಲಾಗಿದೆ. ಎಲ್ಲವನ್ನೂ ವ್ಯವಸ್ಥಿತವಾಗಿ ಮಾಡುತ್ತೇವೆ ಎಂದು ಎಸ್.ಟಿ.ಸೋಮಶೇಖರ್ ಹೇಳಿದರು.

    Live Tv
    [brid partner=56869869 player=32851 video=960834 autoplay=true]