Tag: DVR

  • ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣದ ಜೊತೆಗೆ ಸಾಕ್ಷಿಯನ್ನೂ ಕದ್ದ ಕಳ್ಳರು!

    ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣದ ಜೊತೆಗೆ ಸಾಕ್ಷಿಯನ್ನೂ ಕದ್ದ ಕಳ್ಳರು!

    – ಕಳ್ಳತನಕ್ಕೂ ಮುನ್ನ ಭರ್ಜರಿ ಪೂಜೆ ಮಾಡಿದ ಖದೀಮರು

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮೊನ್ನೆಯಷ್ಟೇ ಪೊಲೀಸ್ ಅಧಿಕಾರಿಯೊಬ್ಬರ ಮೊಬೈಲ್ ಕದ್ದು ಇಬ್ಬರು ಕಳ್ಳರು ಪರಾರಿಯಾಗಿದ್ದರು. ಈ ಬೆನ್ನಲ್ಲೇ ಕೆಲವು ಕಳ್ಳರು ತಮ್ಮ ಬುದ್ಧಿ ಉಪಯೋಗಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಜೊತೆಗೆ ಸಾಕ್ಷಿಯಾಗಿದ್ದ ಸಿಸಿಟಿವಿ ಡಿವಿಆರ್ ಅನ್ನು ಕೂಡ ಕದ್ದು ಪರಾರಿಯಾಗಿದ್ದಾರೆ.

    ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜನ ನಗರದಲ್ಲಿರುವ ಮುತ್ತೂಟ್ ಫೈನಾನ್ಸ್ ಶಾಖೆಯನ್ನು ಕಳ್ಳರು ದೋಚಿದ್ದಾರೆ. ಶಾಖೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ಕಳ್ಳರು ಪರಾರಿಯಾಗಿದ್ದು, ಪ್ರಕರಣವು ಇಂದು ಬೆಳಕಿಗೆ ಬಂದಿದೆ. ಈ ಕುರಿತು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಘಟನೆಯ ವಿವರ:
    ಮುತ್ತೂಟ್ ಫೈನಾನ್ಸ್ ಶಾಖೆಯ ಅಧಿಕಾರಿಗಳು ಡಿಸೆಂಬರ್ 24 ರಂದು ಬಾಗಿಲು ಹಾಕಿ ಮನೆಗೆ ತೆರಳಿದ್ದರು. ಬಾಗಿಲು ಹಾಕಿದ್ದ ಹಿನ್ನೆಲೆಯಲ್ಲಿ ಕಳ್ಳರು ನಕಲಿ ಕೀ ಬಳಸಿ ಫೈನಾನ್ಸ್ ಶಾಖೆಯ ಬಾಗಿಲು ತೆರೆದಿದ್ದಾರೆ. ಅದರಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕದ್ದ ಕಳ್ಳರು, ಸಿಸಿಟಿವಿ ಕ್ಯಾಮೆರಾದಲ್ಲಿ ತಮ್ಮ ಕೃತ್ಯ ಸೆರೆಯಾಗಿದೆ ಎಂದು ಖಚಿತಪಡಿಸಿಕೊಂಡಿದ್ದಾರೆ. ತಕ್ಷಣವೇ ಸಿಸಿಟಿವಿ ಡಿವಿಆರ್ ಎತ್ತಿಕೊಂಡ ಕಳ್ಳರು ಅಲ್ಲಿಂದ ಪರಾರಿಯಾಗಿದ್ದಾರೆ.

    ಈ ಕುರಿತು ಶಾಖೆಯ ಅಧಿಕಾರಿಗಳು ಬ್ಯಾಡರಹಳ್ಳಿ ಠಾಣೆಗೆ ದೂರು ನೀಡಿದ್ದು, ಮುತ್ತೂಟ್ ಫೈನಾನ್ಸ್ ಶಾಖೆಗೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಖದೀಮರು ಕಳ್ಳತನಕ್ಕೂ ಮುನ್ನ ನಿಂಬೆ ಹಣ್ಣು, ಮೊಟ್ಟೆ ಒಡೆದು ಭರ್ಜರಿಯಾಗಿ ಪೂಜೆ ಪುನಸ್ಕಾರ ಮಾಡಿ ಲೂಟಿ ಮಾಡಿದ್ದಾರೆ ಎನ್ನುವುದು ಬೆಳಕಿಗೆ ಬಂದಿದೆ.

    ಎಷ್ಟು ಪ್ರಮಾಣದ ಚಿನ್ನಾಭರಣ ಕಳ್ಳತನವಾಗಿದೆ ಎನ್ನುವುದು ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸಿ ಮಾಹಿತಿ ನೀಡಲಿದ್ದಾರೆ ಎಂದು ಫೈನಾನ್ಸ್ ಶಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಶಾಖೆಯಲ್ಲಿ ಹಣ, ಚಿನ್ನ ಇಟ್ಟಿದ್ದ ಗ್ರಾಹಕರು ಆತಂಕಕ್ಕೆ ಒಳಗಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಉಡುಪಿ ಶಿರೂರು ಮಠದ ಸಿಸಿಟಿವಿ ಡಿವಿಆರ್ ನಾಪತ್ತೆ!

    ಉಡುಪಿ ಶಿರೂರು ಮಠದ ಸಿಸಿಟಿವಿ ಡಿವಿಆರ್ ನಾಪತ್ತೆ!

    ಉಡುಪಿ: ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ನಿಗೂಢ ಸಾವಿನ ಬಳಿಕ ಊಹಾಪೋಹಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಮಠದ ಡಿವಿಆರ್ ನಾಪತ್ತೆಯಾಗಿದೆ.

    ಸ್ವಾಮೀಜಿಗಳ ಅಸಹಜ ಸಾವಿನ ಕುರಿತಂತೆ ಎಸ್ ಪಿ ಲಕ್ಷ್ಮಣ್ ನಿಂಬರ್ಗಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಈ ವೇಳೆ ಸಿಸಿಟಿವಿ ವಿಡಿಯೋಗಳನ್ನು ಸೇವ್ ಮಾಡುತ್ತಿದ್ದ ಡಿವಿಆರ್ ಇದೀಗ ಮೂಲ ಮಠದಿಂದ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ. ಅಲ್ಲದೇ ಶಿರೂರು ಮೂಲಮಠದಿಂದ ಕೆಲ ವಸ್ತುಗಳು ಕೂಡ ಕಾಣೆಯಾಗಿವೆ.

    ಶಿರೂರು ಮೂಲ ಮಠದ ಪ್ರವೇಶ ದ್ವಾರದಲ್ಲೇ ಒಂದು ಸಿಸಿಟಿವಿ ಇತ್ತು. ಇದರಲ್ಲಿ ಮಠಕ್ಕೆ ಬರುವ ಎಲ್ಲಾ ಭಕ್ತರ ಬಗ್ಗೆ ದಾಖಲಾಗುತ್ತಿತ್ತು. ಯಾಕಂದ್ರೆ ಇದೊಂದು ದಾರಿಯ ಮೂಲಕವೇ ಭಕ್ತರು ಮಠ ಪ್ರವೇಶವಾಗಬೇಕಿತ್ತು. ಹೀಗಾಗಿ ಪೊಲೀಸರು ಇದೊಂದೇ ಸಾಕ್ಷಿ ಅಂತ ಪೊಲೀಸರು ನಂಬಿದ್ದರು. ತನಿಖೆಯ ಆರಂಭದಲ್ಲಿಯೇ ಪೊಲೀಸರು ಡಿವಿಆರ್ ಸಿಗುತ್ತೋ ಇಲ್ಲವೋ ಎಂಬ ಗೊಂದಲದಲ್ಲಿದ್ದರು. ಅಲ್ಲದೇ ಡಿವಿಆರ್ ಅನ್ನು ಸ್ವತಃ ಸ್ವಾಮೀಜಿಯವರೇ ಬೇರೆ ಮಠಕ್ಕೆ ಶಿಫ್ಟ್ ಮಾಡಿದ್ದಾರೆಯೋ ಎನ್ನುವುದರ ಬಗ್ಗೆ ತನಿಖೆ ನಡೆದಿತ್ತು. ಆದ್ರೆ ಎಲ್ಲಿ ಹುಡುಕಾಡಿದ್ರೂ ಡಿವಿಆರ್ ಮಾತ್ರ ಕಾಣಿಸುತ್ತಿಲ್ಲ.

    ಸ್ವಾಮೀಜಿಯವರು ಆಸ್ಪತ್ರೆಗೆ ದಾಖಲಾದ ದಿನವೇ ಯಾರೋ ಮಠಕ್ಕೆ ಬಂದು ಎಲ್ಲಾ ವಸ್ತುಗಳನ್ನು ತೆಗೆದುಕೊಂಡು ಹೋಗಿರಬಹುದೆಂಬ ಶಂಕೆ ವ್ಯಕ್ತವಾಗುತ್ತಿದೆ. ಆದ್ರೆ ಏನೆಲ್ಲ ವಸ್ತುಗಳನ್ನು ಹಾಗೂ ಯಾರು ತೆಗೆದುಕೊಂಡು ಹೋಗಿದ್ದಾರೆಂಬ ಬಗ್ಗೆ ದಾಖಲೆಗಳು ಈ ಸಿಸಿಟಿವಿಯಲ್ಲಿ ಸಿಗಬೇಕಿತ್ತು. ಆದ್ರೆ ಡಿವಿಆರ್ ಅನ್ನೇ ತೆಗೆದುಕೊಂಡು ಹೋಗಿದ್ರೆ ಎಲ್ಲಾ ದಾಖಲೆಗಳು ನಾಪತ್ತೆ ಆಗಿರೋ ಸಾಧ್ಯತೆಗಳಿವೆ. ಒಟ್ಟಿನಲ್ಲಿ ಆ ದಿನ ಮಠಕ್ಕೆ ಬಂದವರು ಯಾರು ಎಂಬುದರ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    ಮೂರು ತಿಂಗಳ ಹಿಂದೆ ಮಠದಲ್ಲಿ ಹಸುವಿನ ಕಳ್ಳತನವಾಗಿತ್ತು. ಆ ಸಂದರ್ಭದಲ್ಲಿ ಸಿಸಿಟಿವಿಯಲ್ಲಿ ದೃಶ್ಯಗಳು ಲಭ್ಯವಾಗಿದ್ದು, ಅದನ್ನು ಸ್ವತಃ ಸ್ವಾಮೀಜಿಗಳೇ ಮಧ್ಯಮಗಳಿಗೆ ನೀಡಿದ್ದರು. ಹೀಗಾಗಿ ಅಂದಿ ಇದ್ದ ಡಿವಿಆರ್ ಆ ನಂತ್ರ ಏನಾಗಿದೆ ಎಂಬುದೇ ಇದೀಗ ಪ್ರಶ್ನೆಯಾಗಿದೆ.