ಭುವನೇಶ್ವರ: ಸುಪ್ರೀಂ ಕೋರ್ಟ್ (Supreme Court) ಮುಖ್ಯ ನ್ಯಾಯಾಧೀಶ ಡಿವೈ ಚಂದ್ರಚೂಡ್ (DY Chandrachud) ಅವರ ನಿವಾಸಕ್ಕೆ ಗಣೇಶ ಪೂಜೆಗೆ (Ganesh Pooja) ಭೇಟಿ ನೀಡಿದ್ದನ್ನು ಟೀಕಿಸಿದ ಪ್ರತಿಪಕ್ಷಗಳಿಗೆ ಸಚಿವ ನರೇಂದ್ರ ಮೋದಿ (Narendra Modi) ಮಂಗಳವಾರ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.
ಒಡೆದು ಆಳುವ ನೀತಿ ಮಾಡಿದ್ದ ಬ್ರಿಟಿಷರು (British) ಗಣೇಶೋತ್ಸವದ ವಿರುದ್ಧ ಕೆರಳಿದ್ದರು. ಇಂದು ಕೂಡ ಭಾರತೀಯ ಸಮಾಜವನ್ನು ಒಡೆಯಲು ಮತ್ತು ಒಡೆಯಲು ಪ್ರಯತ್ನಿಸುತ್ತಿರುವ ಜನರು ಗಣೇಶ ಗಣಪತಿ ಪೂಜೆಯನ್ನು ಅಂಗೀಕರಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪಬ್ಲಿಕ್ ಟಿವಿ ಸಂಸ್ಥೆ ವಿರುದ್ಧ ಇಲ್ಲಸಲ್ಲದ ಆರೋಪಕ್ಕೆ ಕಾನೂನು ಕ್ರಮ
ನಾನು ಗಣಪತಿ ಪೂಜೆಗೆ ಹಾಜರಾಗಿದ್ದಕ್ಕೆ ಕಾಂಗ್ರೆಸ್ (Congress) ಮತ್ತು ಅದರ ʼಪರಿಸರ ವ್ಯವಸ್ಥೆʼಗೆ ಸಮಸ್ಯೆಯಾಗಿದೆ. ಅವರು ಅಧಿಕಾರದಲ್ಲಿರುವ ಕರ್ನಾಟಕದಲ್ಲಿಅದಕ್ಕಿಂತ ದೊಡ್ಡ ಪಾಪ ಮಾಡಿದ್ದಾರೆ. ಅವರು ಗಣೇಶನ ಮೂರ್ತಿಯನ್ನು ಕಂಬಿ ಹಿಂದೆ ಹಾಕಿದ್ದಾರೆ. ಈ ಚಿತ್ರವನ್ನು ನೋಡಿ ಇಡೀ ದೇಶವೇ ತಲ್ಲಣಗೊಂಡಿದೆ. ಇಂತಹ ದ್ವೇಷ ದೇಶಕ್ಕೆ ಅಪಾಯಕಾರಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಿಜೆಐ ಚಂದ್ರಚೂಡ್ ಮನೆಯಲ್ಲಿ ಗಣೇಶನಿಗೆ ಮೋದಿ ಆರತಿ – ಸಂಜಯ್ ರಾವತ್ ಆಕ್ಷೇಪ
ನವದೆಹಲಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಿಳಾ ವೈದ್ಯರಿಗೆ ರಾತ್ರಿ ಪಾಳಿ ನೀಡುವುದನ್ನು ನಿಲ್ಲಿಸುವ ಪಶ್ಚಿಮ ಬಂಗಾಳ (West Bengal) ಸರ್ಕಾರದ ಅಧಿಸೂಚನೆಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಕಟುವಾಗಿ ಟೀಕಿಸಿದ್ದಾರೆ. ಅಲ್ಲದೇ ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ ವೈದ್ಯರಿಗೆ ಭದ್ರತೆ ಒದಗಿಸುವುದು ರಾಜ್ಯ ಸರ್ಕಾರದ ಕರ್ತವ್ಯ ಎಂದು ಚಾಟಿ ಬೀಸಿದ್ದಾರೆ.
ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಆದ ಬಳಿಕ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ತಿದ್ದುಪಡಿ ಮಾಡಲು ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ (Supreme Court) ನಿರ್ದೇಶಿಸಿಸಿದೆ.
ಮಹಿಳೆಯರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ನೀವು ಹೇಗೆ ಹೇಳುತ್ತೀರಿ? ಅವರು ರಿಯಾಯಿತಿಯನ್ನು ಬಯಸುವುದಿಲ್ಲ. ಅದಕ್ಕೆ ಪರಿಹಾರವೆಂದರೆ, ನೀವು ಭದ್ರತೆಯನ್ನು ನೀಡಬೇಕು. ಪಶ್ಚಿಮ ಬಂಗಾಳ ಅಧಿಸೂಚನೆಯನ್ನು ಸರಿಪಡಿಸಬೇಕು. ಭದ್ರತೆ ಒದಗಿಸುವುದು ನಿಮ್ಮ ಕರ್ತವ್ಯ, ಮಹಿಳೆಯರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ನೀವು ಹೇಳಲಾಗುವುದಿಲ್ಲ. ಮಹಿಳೆಯರು ಪೈಲಟ್ಗಳಾಗಿ, ಸೇನೆಯಲ್ಲಿ ರಾತ್ರಿ ಕೆಲಸ ಮಾಡುತ್ತಾರೆ ಎಂಬುದನ್ನು ನೀವು ಗಮನಿಸಬೇಕು ಎಂದು ಸರ್ಕಾರದ ಪರ ವಾದ ಮಂಡಿಸಿದ ವಕೀಲ ಸಿಬಲ್ ಅವರಿಗೆ ಸಿಜೆಐ ಸೂಚಿಸಿದರು.
ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (RG Kar Hospital) ನಡೆದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಪೀಠವು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ. ಪ್ರಸ್ತುತ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣದ ತನಿಖೆ ನಡೆಸುತ್ತಿದೆ.
ಆರ್ಜಿ ಕರ್ ಆಸ್ಪತ್ರೆಯ ಅತ್ಯಾಚಾರ-ಕೊಲೆ ಘಟನೆಯ ಕುರಿತು ರಾಷ್ಟ್ರವ್ಯಾಪಿ ಪ್ರತಿಭಟನೆಗಳ ನಡುವೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪ್ರಧಾನ ಸಲಹೆಗಾರ ಅಲಾಪನ್ ಬಂಡೋಪಾಧ್ಯಾಯ ಅವರು ಮಹಿಳಾ ವೈದ್ಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೈಗೊಂಡ ನೂತನ ಕ್ರಮಗಳನ್ನು ಘೋಷಿಸಿದ್ದರು.
ಎಲ್ಲಾ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ಮಹಿಳಾ ಸ್ನೇಹಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ಸ್ಥಳೀಯ ಪೊಲೀಸರಿಂದ ನಿತ್ಯ ರಾತ್ರಿ ಗಸ್ತು ತಿರುಗಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರಾತ್ರಿ ಕರ್ತವ್ಯದ ವೇಳೆ ಮಹಿಳಾ ವೈದ್ಯರು ಜೋಡಿಯಾಗಿ ಕಾರ್ಯನಿರ್ವಹಿಸುವ ರೀತಿಯಲ್ಲಿ ಶಿಫ್ಟ್ ವ್ಯವಸ್ಥೆ ಮಾಡಲಾಗುವುದು. ಈ ಮಾರ್ಗಸೂಚಿಗಳನ್ನು ಅನುಸರಿಸಲು ಖಾಸಗಿ ಆರೋಗ್ಯ ಕೇಂದ್ರಗಳಿಗೂ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ನವದೆಹಲಿ/ಕೋಲ್ಕತ್ತಾ: ವೈದ್ಯರನ್ನು 36 ಗಂಟೆಗಳ ಕಾಲ ನಿರಂತರವಾಗಿ ದುಡಿಸಿಕೊಳ್ಳುವುದು ಅಮಾನವೀಯ ಎಂದು ಸುಪ್ರೀಂ ಕೋರ್ಟ್ (Supreme Court) ಗುರುವಾರ ಹೇಳಿದೆ.
ಕೋಲ್ಕತ್ತಾ ಆರ್.ಜಿ ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆ ಅತ್ಯಾಚಾರ- ಕೊಲೆ ಪ್ರಕರಣದ ವಿಚಾರನೆ ನಡೆಸಿದ ಸಿಜೆಐ ಡಿ.ವೈ ಚಂದ್ರಚೂಡ್ (DYChandrachud) ನೇತೃತ್ವದ ತ್ರಿಸದಸ್ಯ ಪೀಠ ದೇಶಾದ್ಯಂತ ವೈದ್ಯರ ಕರ್ತವ್ಯದ ಅವಧಿ ಬಗ್ಗೆ ಕಳವಳ ವ್ಯಕ್ತಪಡಿಸಿತು. ಅಲ್ಲದೇ ಈ ಬಗ್ಗೆ ಕ್ರಮ ಕಾರ್ಯಪಡೆ ರಚಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿತು.
ದೇಶಾದ್ಯಂತ ವೈದ್ಯರ ಕರ್ತವ್ಯದ ಅವಧಿ ಬಗ್ಗೆ ನಾವು ತೀವ್ರ ಕಳವಳ ವ್ಯಕ್ತಪಡಿಸಿದ್ದೇವೆ. ಕೆಲ ವೈದ್ಯರು 36 ಗಂಟೆಗಳ ಪಾಳಿಯಲ್ಲಿ ಕೆಲಸ ಮಾಡುತ್ತಾರೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹೇಳಿದ್ದಾರೆ. ನೇಮಕಗೊಂಡ 10 ಮಂದಿ ಸದಸ್ಯರ ಕಾರ್ಯಪಡೆ ಈ ಬಗ್ಗೆ ತನಿಖೆ ನಡೆಸಿ ಎಲ್ಲಾ ವೈದ್ಯರ (Kolkata Doctor) ಕರ್ತವ್ಯದ ಸಮಯವನ್ನು ಸುವ್ಯವಸ್ಥಿತಗೊಳಿಸಲು ಪರಿಶೀಲಿಸಬೇಕು ಪೀಠ ತಾಕೀತು ಮಾಡಿದೆ. ಇದನ್ನೂ ಓದಿ: ಧರ್ಮಗುರುಗಳ ಮೂಲಕ ಮುಸ್ಲಿಮರ ವಿವಾಹ ನೋಂದಣಿಗೆ ತಡೆ – ಹೊಸ ಮಸೂದೆಗೆ ಅಸ್ಸಾಂ ಕ್ಯಾಬಿನೆಟ್ ಅನುಮೋದನೆ
ಅಲ್ಲದೇ ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ, ಕೋಲ್ಕತ್ತಾ ಪೊಲೀಸರ ತನಿಖೆಯಲ್ಲಿನ ವಿಳಂಬ ಮತ್ತು ಸ್ಪಷ್ಟ ಅಕ್ರಮಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿತು. ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಲು ಪೊಲೀಸರು ವಿಳಂಬ ಮಾಡಿರುವುದು ಅತ್ಯಂತ ಗೊಂದಲದ ಸಂಗತಿ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.
ಮೋದಿಗೆ ದೀದಿ ಪತ್ರ:
ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಗುರುವಾರ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಮನವಿ ಮಾಡಿದ್ದಾರೆ. ಈ ಪತ್ರದ ಪ್ರತಿಯನ್ನು ತಮ್ಮ ಎಕ್ಸ್ ಖಾತೆಯಲ್ಲೂ ಹಂಚಿಕೊಂಡಿದ್ದಾರೆ. ಈ ದಿನ ನಾನು ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ದಿನೇ ದಿನೇ ದೇಶಾದ್ಯಂತ ಹೆಚ್ಚಾಗುತ್ತಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಬಗ್ಗೆ ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಬೇಕೆಂದರೆ ಕಟ್ಟುನಿಟ್ಟಿನ ಕಾನೂನು ಜಾರಿಯಾದರೆ ಮಾತ್ರ ಸಾಧ್ಯ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಸುಳ್ಳುಪತ್ತೆ ಪರೀಕ್ಷೆಗೆ ಅಸ್ತು:
ಕೋಲ್ಕತ್ತಾ ಆರ್.ಜಿ ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆ ಅತ್ಯಾಚಾರ- ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಇತರ ನಾಲ್ವರು ವೈದ್ಯರ ಮೇಲೆ ಪಾಲಿಗ್ರಾಫ್ ಪರೀಕ್ಷೆ (ಸುಳ್ಳು ಪತ್ತೆ ಪರೀಕ್ಷೆ) ನಡೆಸಲು ಸುಪ್ರೀಂ ಕೋರ್ಟ್ ಸಿಬಿಐಗೆ ಅನುಮತಿ ನೀಡಿದೆ. ಏತನ್ಮಧ್ಯೆ ಪ್ರಕರಣವನ್ನು ತಿರುಚಲು ಮತ್ತು ಮುಚ್ಚಿಹಾಕಲು ಕೋಲ್ಕತ್ತಾ ಪೊಲೀಸರು ಪ್ರಯತ್ನಿಸಿದ್ದಾರೆ ಎಂದು ಸಿಬಿಐ ಗಂಭೀರ ಆರೋಪ ಮಾಡಿದೆ. ಇದನ್ನೂ ಓದಿ: Kolkata Horror | ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳಿ – ವೈದ್ಯರಿಗೆ ಸುಪ್ರೀಂ ಸೂಚನೆ!
ಗುರುವಾರ ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಸಿಬಿಐ ಅನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಂದ ಮಾಹಿತಿ ಪಡೆಯಿತು. ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿ ಕಾಲೇಜಿನ ಮಾಜಿ ಪ್ರಾಂಶುಪಾಲ ಮತ್ತು ಇತರ ನಾಲ್ವರು ವೈದ್ಯರನ್ನು ಸಿಬಿಐ ಬಂಧಿಸಿ ಕಳೆದ ಒಂದು ವಾರದಿಂದ ವಿಚಾರಣೆ ನಡೆಸುತ್ತಿದೆ. ಆದರೆ ಅವರಿಂದ ಸರಿಯಾದ ಉತ್ತರ ಸಿಗದಿರುವ ಹಿನ್ನೆಲೆಯಲ್ಲಿ ಪಾಲಿಗ್ರಾಫ್ ಟೆಸ್ಟ್ ನಡೆಸಲು ಸುಪ್ರೀಂ ಕೋರ್ಟಿನ ಅನುಮತಿ ಕೋರಿದ್ದು ಕೋರ್ಟ್ ಅಸ್ತು ಎಂದಿದೆ.
ಕೋಲ್ಕತ್ತಾ: ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ (Kolkata Doctor Case) ಸಂಬಂಧ ಸುಪ್ರೀಂ ಕೋರ್ಟ್ (Supreme Court) ವಿಚಾರಣೆ ಮುಂದುವರಿಸಿದೆ. ಘಟನೆ ಖಂಡಿಸಿ ಕಳೆದ ಕೆಲ ದಿನಗಳಿಂದ ನಡೆಸ್ತಿರುವ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳುವಂತೆ ವೈದ್ಯರಿಗೆ ಸೂಚನೆ ನೀಡಿದೆ.
ಬಿಜೆಪಿ, ಟಿಎಂಸಿಗೆ ಬುದ್ಧಿವಾದ
ವಿಚಾರಣೆ ವೇಳೆ ಘಟನೆಗೆ ಸಂಬಂಧಿಸಿದಂತೆ ಟಿಎಂಸಿ (TMC) ಮತ್ತು ಬಿಜೆಪಿಗೆ (BJP( ಬುದ್ಧಿವಾದ ಹೇಳಿದ ನ್ಯಾಯಾಲಯ ಇತ್ತ ಸಿಬಿಐ ಮತ್ತು ಪಶ್ಚಿಮ ಬಂಗಾಳ ಸರ್ಕಾರ ರಾಜಕೀಯ ಲಾಭ ಪಡೆಯಲು ಹವಣಿಸುತ್ತಿರುವುದನ್ನು ಟೀಕಿಸಿದೆ. ʻಮಮತಾ ಬ್ಯಾನರ್ಜಿ ಕಡೆಗೆ ಕೈತೋರುವವರ ಬೆರಳು ಕತ್ತರಿಸಲಾಗುವುದುʼ ಎಂಬ ಬಂಗಾಳ ಸಚಿವರೊಬ್ಬರ ಹೇಳಿಕೆಯನ್ನು ಸಿಬಿಐ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ (SG) ತುಷಾರ್ ಮೆಹ್ತಾ ಪ್ರಸ್ತಾಪಿಸಿದರು.
ಆಗ ಪಶ್ಚಿಮ ಬಂಗಾಳ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಗುಂಡು ಹಾರಿಸಲಾಗುವುದು ಅಂತ ಹೇಳಿರುವುದಾಗಿ ಕೋರ್ಟ್ ಗಮನಕ್ಕೆ ತಂದರು. ಆ ಸಂದರ್ಭದಲ್ಲಿ ನ್ಯಾಯಾಲಯ ಪರಿಸ್ಥಿತಿಯನ್ನು ರಾಜಕೀಯಗೊಳಿಸಬೇಡಿ ಕಾನೂನು ತನ್ನ ಹಾದಿಯನ್ನು ಕಂಡುಕೊಳ್ಳಲಿದೆ ಎಂಬುದಾಗಿ ತಿಳಿಸಿತು.
ಕರ್ತವ್ಯ ಮಾಡುತ್ತಲೇ ಮುಷ್ಕರ ನಡೆಸ್ತಿರೋದಾಗಿ ವೈದ್ಯರ ಸಂಘ ತಿಳಿಸಿದೆ. ಇದೇ ವೇಳೆ ಯುವವೈದ್ಯೆಯ ಅತ್ಯಾಚಾರ ಪ್ರಕರಣದ ತನಿಖಾ ಪ್ರಗತಿಯ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್ಗೆ ಸಿಬಿಐ (CBI) ಸಲ್ಲಿಸಿದೆ. ಅತ್ಯಾಚಾರ & ಹತ್ಯೆ ಮುಚ್ಚಿಹಾಕುವ ಪ್ರಯತ್ನ ನಡೆದಿತ್ತು. ಅಪ್ಪ-ಅಪ್ಪನಿಗೂ ಸರಿಯಾದ ಮಾಹಿತಿ ನೀಡದೇ ದಾರಿ ತಪ್ಪಿಸುವ ಪ್ರಯತ್ನವೂ ಆಗಿತ್ತು. ಶವ ದಹನದ ಬಳಿಕವೇ ಎಫ್ಐಆರ್ (FIR) ನಮೂದಿಸಿದ್ರು. ಘಟನಾ ಸ್ಥಳದಲ್ಲಿ ಸಾಕ್ಷ್ಯಾಧಾರಗಳನ್ನ ಧ್ವಂಸ ಮಾಡುವ ಪ್ರಯತ್ನಗಳು ನಡೆದಿವೆ ಎಂದು ಸಿಬಿಐ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಟ್ರೈನಿ ವೈದ್ಯೆ ಮೇಲೆ ನಡೆದಿರೋದು ಗ್ಯಾಂಗ್ ರೇಪ್ ಅಲ್ಲ – ಪ್ರಾಥಮಿಕ ತನಿಖೆ ಬಳಿಕ CBI ಮೂಲಗಳಿಂದ ಮಾಹಿತಿ
ಘಟನೆ ನಡೆದ 5ನೇ ದಿನ ತಮ್ಮ ಕೈಗೆ ತನಿಖಾ ವರದಿಯನ್ನು ಪೊಲೀಸರು ಸಲ್ಲಿಸಿದ್ರು. ಅಷ್ಟರೊಳಗೆ ಸಾಕಷ್ಟು ವರದಿಗಳನ್ನು ಬದಲಾಯಿಸಿದ್ರು ಎಂದು ಸಾಲಿಸಿಟರ್ ಜನರೆಲ್ ಆರೋಪಿಸಿದರು. ಆದ್ರೆ ಪ್ರತಿಯೊಂದರ ವಿಡಿಯೋ ಚಿತ್ರೀಕರಣ ನಡೆದಿದೆ ಎಂದು ಬಂಗಾಳ ಸರ್ಕಾರದ ಪರ ವಕೀಲ ಕಪಿಲ್ ಸಿಬಲ್ ಸ್ಪಷ್ಟಪಡಿಸಿದ್ರು. ವೈದ್ಯರು ಒತ್ತಡ ತಂದಿದ್ದಕ್ಕೆ ವೀಡಿಯೋ ಚಿತ್ರೀಕರಣ ನಡೆದಿದೆ ಎಂದು ತುಷಾರ್ ಮೆಹ್ತಾ ಟಾಂಗ್ ಕೊಟ್ರು. ಈ ಮಧ್ಯೆಯೇ, ಯುವವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ. ಒಬ್ಬನೇ ವ್ಯಕ್ತಿ ಕೃತ್ಯ ಎಸಗಿದ್ದಾನೆ ಎಂದು ಸಿಬಿಐ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಧರ್ಮಗುರುಗಳ ಮೂಲಕ ಮುಸ್ಲಿಮರ ವಿವಾಹ ನೋಂದಣಿಗೆ ತಡೆ – ಹೊಸ ಮಸೂದೆಗೆ ಅಸ್ಸಾಂ ಕ್ಯಾಬಿನೆಟ್ ಅನುಮೋದನೆ
ಕೋಲ್ಕತ್ತಾ ಪ್ರಕರಣ ಏನು?
ಇದೇ ತಿಂಗಳ ಆ.9ರಂದು ಬೆಳಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಕೃತ್ಯ ನಡೆಸಿದ್ದ ಆರೋಪಿ ಸಂಜಯ್ನನ್ನು ಪೊಲೀಸರು ಬಂಧಿಸಿದ್ದರು. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದರು. ಈ ಹಿಂದೆ ಪೊಲೀಸ್ ಸ್ವಯಂ ಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿತ್ತು. ಸದ್ಯ ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸುತ್ತಿದೆ. ಈ ಬೆನ್ನಲ್ಲೇ ಸ್ವಯಂಪ್ರೇರಿತವಾಗಿ ದೂರು ದಾಖಳಿಸಿಕೊಂಡ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಇದನ್ನೂ ಓದಿ: J&K Assembly Polls | ಎನ್ಸಿ-ಕಾಂಗ್ರೆಸ್ ಮೈತ್ರಿ ಬಹುತೇಕ ಖಚಿತ; ಮುಂದುವರಿದ ಸೀಟು ಹಂಚಿಕೆ ಮಾತುಕತೆ
ನವದೆಹಲಿ: ಕೋಲ್ಕತ್ತಾದ ಆರ್.ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ (Kolkata Doctor Case) ಮೇಲೆ ನಡೆದ ಅತ್ಯಾಚಾರ ಸಾಮೂಹಿಕ ಅತ್ಯಚಾರವಲ್ಲ. ಇದು ಓರ್ವ ವ್ಯಕ್ತಿಯಿಂದ ನಡೆದಿದೆ ಎಂದು ಸಿಬಿಐ (CBI) ಮೂಲಗಳು ಹೇಳಿವೆ.
ನಾಗರಿಕ ಸ್ವಯಂ ಸೇವಕ ಸಂಜೋಯ್ ರಾಯ್ ಎಂಬಾತ ವೈದ್ಯರ ಮೇಲೆ ಅತ್ಯಾಚಾರ ಎಸಗಿ ಕೊಂದಿದ್ದಾನೆ ಎಂದು ವಿಧಿವಿಜ್ಞಾನ ವರದಿಯೂ ಸೂಚಿಸಿದೆ. ಒಬ್ಬ ವ್ಯಕ್ತಿಯ ಕೈವಾಡವನ್ನು ಡಿಎನ್ಎ ವರದಿಯೂ (DNA Report) ದೃಢಪಡಿಸಿದೆ. ವೈದ್ಯೆಯನ್ನು ಹತ್ಯೆಗೈದ ಕಟ್ಟಡಕ್ಕೆ ರಾಯ್ ಪ್ರವೇಶಿಸಿದ ಸಿಸಿಟಿವಿ ದೃಶ್ಯಾವಳಿಗಳನ್ನ ಸಿಬಿಐ ಪರಿಶೀಲಿಸಿದೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ನರ್ಸರಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ – ಭುಗಿಲೆದ್ದ ಹಿಂಸಾಚಾರ; 72 ಮಂದಿ ಅರೆಸ್ಟ್!
ಕೌಟುಂಬಿಕ ದೌರ್ಜನ್ಯದ ಇತಿಹಾಸ ಹೊಂದಿರುವ ಮತ್ತು ಆಸ್ಪತ್ರೆಯ ಎಲ್ಲಾ ವಿಭಾಗಗಳಿಗೆ ಪ್ರವೇಶವನ್ನು ಹೊಂದಿದ್ದ ರಾಯ್ ಅವರ ಬ್ಲೂಟೂತ್ ಹೆಡ್ಸೆಟ್ ಅಪರಾಧದ ಸ್ಥಳದಲ್ಲಿ ಪತ್ತೆಯಾದ ನಂತರ ಅವರನ್ನು ಬಂಧಿಸಲಾಯಿತು. ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಕುರಿತು ಸಿಬಿಐ ತನಿಖೆಯನ್ನು ಇನ್ನೂ ಮುಕ್ತಾಯಗೊಳಿಸಿಲ್ಲ. ಅಂತಿಮ ಅಭಿಪ್ರಾಯ ಪಡೆಯಲು ಸ್ವತಂತ್ರ ತಜ್ಞರಿಗೆ ಫೊರೆನ್ಸಿಕ್ ವರದಿಯನ್ನು ಕಳುಹಿಸುವ ಸಾಧ್ಯತೆಯಿದೆ.
ಈ ಹಿಂದೆ ಸಂತ್ರಸ್ಥೆಯ ಯೋನಿ ಸ್ವ್ಯಾಬ್ ಪರೀಕ್ಷೆಯಲ್ಲಿ 151 ಗ್ರಾಂ ದ್ರವ ಕಂಡು ಬಂದಿದ ಹಿನ್ನಲೆ ಸಾಮೂಹಿಕ ಅತ್ಯಾಚಾರ ನಡೆದಿರಬಹುದು ಎಂದು ವೈದ್ಯರು ಹೇಳಿದ್ದರು. ಸಂತ್ರಸ್ತೆಯ ಪೋಷಕರು ಕೋಲ್ಕತ್ತಾ ಹೈಕೋರ್ಟ್ನಲ್ಲಿ ಇದೇ ಅಂಶವನ್ನು ಮುಖ್ಯವಾಗಿ ವಾದವನ್ನು ಮಂಡಿಸಿದ್ದರು. ಪ್ರಶಿಕ್ಷಣಾರ್ಥಿ ವೈದ್ಯರ ಮೇಲೆ ಉಂಟಾಗುವ ಗಾಯಗಳ ಸ್ವರೂಪವು ಒಬ್ಬ ವ್ಯಕ್ತಿಯ ಕೈಕೆಲಸವಾಗಿರಲು ಸಾಧ್ಯವಿಲ್ಲ ಎಂದು ಡಾ. ಸುವರ್ಣ ಗೋಸ್ವಾಮಿ ಅಭಿಪ್ರಾಯಪಟ್ಟಿದ್ದರು. ಇದನ್ನೂ ಓದಿ: Bharat Bandh| ಮಕ್ಕಳಿದ್ದ ಶಾಲಾ ಬಸ್ಸಿಗೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಾಕಾರರು
– ದೀದಿ ನಿಂದಕರ ಬೆರಳು ಕತ್ತರಿಸಿ ಎಂದು ನಾಲಿಗೆ ಹರಿಬಿಟ್ಟ ಟಿಎಂಸಿ ಸಚಿವ
ಕೋಲ್ಕತ್ತಾ: ದೇಶದಲ್ಲಿ ಭಾರೀ ಸಂಚಲನಕ್ಕೆ ಕಾರಣವಾದ ಬಂಗಾಳದ ಯುವವೈದ್ಯೆ ಹತ್ಯಾಚಾರ ಪ್ರಕರಣ ದಿನೇ ದಿನೇ ಹೊಸ ಆಯಾಮ ಪಡೆದುಕೊಳ್ತಿದೆ. ತಮ್ಮ ಪುತ್ರಿಯ ಡೈರಿಯಲ್ಲಿ ಒಂದು ಪುಟ ಕಾಣೆಯಾಗಿದೆ ಎಂದು ಮೃತರ ತಂದೆ ಆರೋಪ ಮಾಡಿದ್ದಾರೆ.
ಮೃತರ ಶರೀರದ ಮೇಲೆ 14 ಗಾಯಗಳು ಕಂಡುಬಂದಿವೆ ಎಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ಉಲ್ಲೇಖವಾಗಿದೆ ಅಂತಾ ಹೇಳಲಾಗಿದೆ. ಆರೋಪಿಯನ್ನು ಸುಳ್ಳುಪತ್ತೆ ಪರೀಕ್ಷೆಗೆ ಒಳಪಡಿಸಲು ಹೈಕೋರ್ಟ್ ಅನುಮತಿ ನೀಡಿದೆ. ಮೆಡಿಕಲ್ ಕಾಲೇಜ್ ಮಾಜಿ ಪ್ರಾಂಶುಪಾಲನನ್ನು ಸಿಬಿಐ ತೀವ್ರ ವಿಚಾರಣೆಗೆ ಒಳಪಡಿಸಿದೆ. ಇನ್ನೂ ಬಂಗಾಳ ಹೆಣ್ಮಕ್ಕಳಿಗೆ ಸುರಕ್ಷಿತವಲ್ಲ.. ಈ ವಿಚಾರದಲ್ಲಿ ಮಮತಾ ಸರ್ಕಾರ ವಿಫಲವಾಗಿದೆ ಎಂದು ರಾಜ್ಯಪಾಲ ಆನಂದ್ ಬೋಸ್ ಆಕ್ರೋಶ ಹೊರಹಾಕಿದ್ದಾರೆ.
ಮಮತಾ ಬ್ಯಾನರ್ಜಿ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿವೆ. ಆದ್ರೆ, ಅಭಿಷೇಕ್ ಬ್ಯಾನರ್ಜಿ ಸದ್ದು ಇಲ್ಲದೇ ಇರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಹೊತ್ತಲ್ಲೇ ದೀದಿ ನಿಂದಕರ ಬೆರಳು ಕತ್ತರಿಸಿ ಎಂದು ಟಿಎಂಸಿ ಸಚಿವ ಉದ್ಯಾನ್ ಗುಹಾ ಪ್ರಚೋದನೆ ನೀಡಿದ್ದಾರೆ. ಇನ್ನೂ ಸೋಷಿಯಲ್ ಮೀಡಿಯಾ ಮೂಲಕ ಸಿಎಂಗೆ ಬೆದರಿಕೆ ಹಾಕಿದ್ದ ಬಿಕಾಂ ವಿದ್ಯಾರ್ಥಿಯೊಬ್ಬನನ್ನು ಬಂಗಾಳ ಪೊಲೀಸರು ಬಂಧಿಸಿದ್ದಾರೆ. ಕೋಲ್ಕತ್ತಾ ಪೊಲೀಸ್ ಆಯುಕ್ತರನ್ನು ಸಿಬಿಐ ವಿಚಾರಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದ ಸುವೆಂದು ಶೇಖರ್ಗೆ ಸಮನ್ಸ್ ಜಾರಿಯಾಗಿದೆ.
ಹೀಗಾಗಿ ಬಂಧನದಿಂದ ರಕ್ಷಣೆ ಕೋರಿ ಸುವೆಂದು ಶೇಖರ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅಂದ ಹಾಗೆ, ಕೋಲ್ಕತ್ತಾ ಪ್ರಕರಣವನ್ನು ಸುಮೋಟೋ ಆಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಮಂಗಳವಾರ ವಿಚಾರಣೆ ಕೈಗೆತ್ತಿಕೊಳ್ಳಲಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.25 ಭದ್ರತೆ ಹೆಚ್ಚಳ:
ಟ್ರೈನಿ ವೈದ್ಯೆ ಖಂಡಿಸಿ ದೇಶವ್ಯಾಪಿ ಪ್ರತಿಭಟನೆ ಭುಗಿಲೆದ್ದಿರುವ ಹೊತ್ತಿನಲ್ಲೇ ಕೇಂದ್ರ ಸಚಿವಾಲಯವು ಎಲ್ಲಾ ಕೇಂದ್ರ ಸರ್ಕಾರಿ ಆಸ್ಪತ್ರೆಗಳಲ್ಲಿ ಭದ್ರತೆಯನ್ನು ಶೇ.25 ರಷ್ಟು ಹೆಚ್ಷಿಸಲು ಅನುಮತಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಟ್ಯಾಂಡರ್ಡ್ ಸೆಕ್ಯುರಿಟಿ ಪ್ರೋಟೋಕಾಲ್ ಹೊರತಾಗಿ, ಸರ್ಕಾರಿ ಆಸ್ಪತ್ರೆಗಳು ತಮ್ಮ ಭದ್ರತಾ ಮೌಲ್ಯಮಾಪನವನ್ನು ನಡೆಸಿದ ನಂತರ ವೈಯಕ್ತಿಕ ಬೇಡಿಕೆಗಳ ಆಧಾರದ ಮೇಲೆ ಮಾರ್ಷಲ್ಗಳ ನಿಯೋಜನೆಗೆ ಅನುಮೋದಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೂ ರಾಷ್ಟ್ರವ್ಯಾಪಿ ಪ್ರತಿಭಟನೆ ಬೆನ್ನಲ್ಲೇ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್ ಮಂಗಳವಾರ (ಆ.20) ಪ್ರಕರಣದ ವಿಚಾರಣೆ ನಡೆಸಲಿದೆ.
ನವದೆಹಲಿ: ಕೋಲ್ಕತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ (RG Kar Medical College) ನಡೆದಿರುವ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಖಂಡಿಸಿ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಯುತ್ತಿದೆ. ಈ ಹೊತ್ತಿನಲ್ಲೇ ಸುಪ್ರೀಂ ಕೋರ್ಟ್ (Supreme Court) ಮಧ್ಯ ಪ್ರವೇಶ ಮಾಡಿದ್ದು, ಸ್ವಪ್ರೇರಿತವಾಗಿ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (DY Chandrachud) ನೇತೃತ್ವದ ತ್ರಿಸದಸ್ಯ ಪೀಠವು ಮಂಗಳವಾರ ಈ ಪ್ರಕರಣದ ವಿಚಾರಣೆ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈಗಾಗಲೇ ಈ ಪ್ರಕರಣವನ್ನು ಕೋಲ್ಕತ್ತಾ ಹೈಕೋರ್ಟ್ನಲ್ಲಿ (Kolkata High Court) ವಿಚಾರಣೆ ನಡೆಸಲಾಗುತ್ತಿದೆ. ಈ ಮಧ್ಯೆ ಸಿಬಿಐ ಸಹ ಪ್ರಕರಣದ ಬೆನ್ನುಹತ್ತಿದೆ.
ಕೋಲ್ಕತ್ತಾ ಪ್ರಕರಣ ಏನು?
ಕಳೆದ ಆ.9ರಂದು ಬೆಳಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಕೃತ್ಯ ನಡೆಸಿದ್ದ ಆರೋಪಿ ಸಂಜಯ್ನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಹಿಂದೆ ಪೊಲೀಸ್ ಸ್ವಯಂಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಸದ್ಯ ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸುತ್ತಿದೆ.
ಪೊಲೀಸರ ವಿರುದ್ಧ ಬಿಜೆಪಿ ಆರೋಪ:
ಕೋಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರನ್ನು ರಕ್ಷಿಸುವ ದಂಧೆಯಲ್ಲಿ ತೊಡಗಿದ್ದಾರೆ, ಇತರ ಸಾಕ್ಷ್ಯಗಳನ್ನು ತಿರುಚಲಾಗಿದೆ ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ. ಅಲ್ಲದೇ ತಮ್ಮ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಹಲವು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಮಾಹಿತಿಯನ್ನು ಕೇಂದ್ರೀಯ ತನಿಖಾ ದಳ ಪ್ರಧಾನ ಕಚೇರಿ ಖಾತೆಗೆ ಟ್ಯಾಗ್ ಮಾಡಿದ್ದಾರೆ.
The following information that I have gathered from my various reliable sources might be germane for the purpose of Investigation undertaken by the @CBIHeadquarters:-
1. The viscera of the deceased victim Doctor has been changed by the @KolkataPolice in the name of…
ನಿರ್ಭಯಾ ತಾಯಿ ಆಕ್ರೋಶ:
ಪಶ್ವಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಪ್ರತಿಭಟನೆ ನಡೆಸುವ ಮೂಲಕ ಜನರ ಗಮನ ಬೇರೆಡೆಗೆ ತಿರುಗಿಸಲು ಯತ್ನಿಸುತ್ತಿದ್ದಾರೆ ಎಂದು ನಿರ್ಭಯಾ ತಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮಮತಾ ಬ್ಯಾನರ್ಜಿ ತಮ್ಮ ಬೆಂಬಲಿಗರೊಂದಿಗೆ ಟ್ರೈನಿ ವೈದ್ಯೆಯ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ತಮ್ಮ ಅಧಿಕಾರ ಬಳಸಿ ಅಪರಾಧಿಯ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಬಿಟ್ಟು ಮಮತಾ ಬ್ಯಾನರ್ಜಿ ಪ್ರತಿಭಟನೆಯ ಹೆಸರಿನಲ್ಲಿ ಜನರ ಗಮನ ಬೇರೆಡೆ ತಿರುಗಿಸಲು ಯತ್ನಿಸುತ್ತಿದ್ದಾರೆ ಎಂದು ನಿರ್ಭಯಾ ತಾಯಿ ಟೀಕಿಸಿದ್ದಾರೆ.
ನವದೆಹಲಿ: ನೀಟ್ಯುಜಿ 2024 (NEET UG 2024) ಮರುಪರೀಕ್ಷೆಯ ಮನವಿಯನ್ನು ಸುಪ್ರೀಂ ಕೋಟ್ (Supreme Court) ತಿರಸ್ಕರಿಸಿದೆ. ಅರ್ಜಿದಾರರು ಆರೋಪಿಸಿದಂತೆ ಪ್ರಶ್ನೆ ಪತ್ರಿಕೆಯ ವ್ಯಾಪಕ ಸೋರಿಕೆಗೆ ಸಾಕ್ಷ್ಯಾಧಾರಗಳಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ (DY Chandrachud), ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ತ್ರಿಸದಸ್ಯ ಪೀಠವು ಈ ಅರ್ಜಿಯನ್ನು ವಿಚಾರಣೆ ನಡೆಸಿತು. ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಅರ್ಜಿದಾರರು ಆರೋಪಿಸಿದಂತೆ ಪ್ರಶ್ನೆ ಪತ್ರಿಕೆಯ ವ್ಯಾಪಕ ಸೋರಿಕೆಯನ್ನು ತೋರಿಸಲು ತನ್ನ ಮುಂದೆ ಇರುವ ಸಾಕ್ಷ್ಯಗಳು ಸಾಕಾಗುವುದಿಲ್ಲ ಎಂದು ಪೀಠ ಹೇಳಿದೆ.
ಸುಪ್ರೀಂ ಆದೇಶದಲ್ಲಿ ಏನಿದೆ?
ನೀಟ್ಯುಜಿ 2024 2024 ರ ರದ್ದತಿಗೆ ಆದೇಶ ನೀಡುವುದು ನ್ಯಾಯಸಮ್ಮತವಲ್ಲ. ಪರೀಕ್ಷೆಯ ಫಲಿತಾಂಶವು ದುರ್ಬಲವಾಗಿದೆ ಅಥವಾ ಪರೀಕ್ಷೆಯ ವ್ಯವಸ್ಥಿತ ಉಲ್ಲಂಘನೆಯಾಗಿದೆ ಎಂಬ ತೀರ್ಮಾನಕ್ಕೆ ಕಾರಣವಾಗಲು ದಾಖಲೆಯಲ್ಲಿ ಸಾಕಷ್ಟು ಸಾಕ್ಷಿಗಳ ಕೊರತೆ ಇದೆ.
ವಿವಾದಾತ್ಮಕ ಪ್ರಶ್ನೆಗೆ ಸರಿಯಾದ ಉತ್ತರವನ್ನು ದೆಹಲಿಯ ಐಐಟಿ ಸಮಿತಿಯಿಂದ ಕೋರ್ಟ್ ಮಾಹಿತಿ ಪಡೆದು ಒಪ್ಪಿಕೊಂಡಿದೆ. ಈ ಆಧಾರದ ಮೇಲೆ ಫಲಿತಾಂಶಗಳನ್ನು ಮರು ಲೆಕ್ಕಾಚಾರ ಮಾಡಲು ಎನ್ಟಿಎಗೆ ನಿರ್ದೇಶನ ನೀಡಲಾಗಿದೆ.
ವೈಯಕ್ತಿಕ ಕುಂದುಕೊರತೆಗಳನ್ನು ಹೊಂದಿರುವ ವಿದ್ಯಾರ್ಥಿಗಳು ತಮ್ಮ ಅರ್ಜಿಗಳನ್ನು (ಯಾವುದಾದರೂ ಇದ್ದರೆ) ಸುಪ್ರೀಂ ಕೋರ್ಟ್ನಿಂದ ಹಿಂತೆಗೆದುಕೊಂಡ ನಂತರ ಹೈಕೋರ್ಟ್ನ್ನು ಸಂಪರ್ಕಿಸಬಹುದು.
ನೀಟ್ಯುಜಿಯನ್ನು ಬಲಪಡಿಸಲು ಮತ್ತು ಭವಿಷ್ಯದಲ್ಲಿ ಅಂತಹ ಸಮಸ್ಯೆಗಳು ಉದ್ಭವಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ರಚಿಸಿರುವ ಏಳು ಸದಸ್ಯರ ತಜ್ಞರ ಸಮಿತಿಯು ನ್ಯಾಯಾಲಯದಿಂದ ಹೆಚ್ಚಿನ ನಿರ್ದೇಶನಗಳನ್ನು ನೀಡಬಹುದು.
ಪದವಿಪೂರ್ವ ಕೋರ್ಸ್ಗಳಿಗೆ ದೇಶಾದ್ಯಂತ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶವು ನೀಟ್ಯುಜಿ ಸ್ಕೋರ್ ಅನ್ನು ಆಧರಿಸಿದೆ.
ಈ ವಿಷಯದ ಬಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ಇನ್ನೂ ಮುಕ್ತಾಯವಾಗಬೇಕಿದೆ ಎಂದು ನ್ಯಾಯಾಲಯ ಗಮನಿಸಿದೆ. ತನಿಖೆಯಲ್ಲಿ ಹೆಚ್ಚು ಕಳಂಕಿತ ಅಭ್ಯರ್ಥಿಗಳು ಅಥವಾ ಯಾವುದೇ ಅವ್ಯವಹಾರದ ಫಲಾನುಭವಿಗಳು ಕಂಡುಬಂದರೆ, ಅಂತಹ ವಿದ್ಯಾರ್ಥಿಯು ಕಾಲೇಜು ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದರೂ ಯಾವುದೇ ಹಂತದಲ್ಲಿ ಕ್ರಮ ಕೈಗೊಳ್ಳಬಹುದು ಎಂದು ಪೀಠವು ತಿಳಿಸಿದೆ.
ವಂಚನೆಯ ಭಾಗವಾಗಿರುವುದು ಅಥವಾ ದುಷ್ಕøತ್ಯಗಳ ಫಲಾನುಭವಿ ಎಂದು ಬಹಿರಂಗಗೊಂಡ ಯಾವುದೇ ವಿದ್ಯಾರ್ಥಿಯು ಪ್ರವೇಶದ ಮುಂದುವರಿಕೆಯಲ್ಲಿ ಯಾವುದೇ ಸ್ಥಾಪಿತ ಹಕ್ಕನ್ನು ಪಡೆಯಲು ಅರ್ಹರಾಗಿರುವುದಿಲ್ಲ ಎಂದು ನ್ಯಾಯಾಲಯ ಆದೇಶದಲ್ಲಿ ಉಲ್ಲೇಖಿಸಿದೆ.
ಏನಿದು ಪ್ರಕರಣ?
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಮೇ 5 ರಂದು ನಡೆಸಿದ ಪರೀಕ್ಷೆಯಲ್ಲಿ ಸುಮಾರು 24 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಮತ್ತು 1,500 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡಿದ್ದು ವಿವಾದಕ್ಕೆ ಕಾರಣವಾಗಿ ದೇಶಾದ್ಯಂತ ಭಾರೀ ಪ್ರತಿಭಟನೆ ನಡೆದಿತ್ತು. ಇದಾದ ಬಳಿಕ ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದ್ದು, ಕೆಲವು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ. ಇದರ ನಡುವೆ ಮರು ಪರೀಕ್ಷೆ ನಡೆಸುವಂತೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿತ್ತು.
ನವದೆಹಲಿ: 2024ನೇ ಸಾಲಿನ ನೀಟ್-ಯುಜಿ (NEET-UG) ಪರೀಕ್ಷಾ ಫಲಿತಾಂಶವನ್ನು ಜುಲೈ 20ರ ಮಧ್ಯಾಹ್ನ 12 ಗಂಟೆಯೊಳಗೆ ಪ್ರಕಟಿಸುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (NTA) ಸುಪ್ರೀಂ ಕೋರ್ಟ್ ಆದೇಶಿಸಿದೆ.
ವಿಚಾರಣೆ ವೇಳೆ ಕೋರ್ಟ್ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಬಿಹಾರ ಪೊಲೀಸರಿಂದ ವರದಿ ಕೇಳಿತ್ತು. ಬಿಹಾರ ಪೊಲೀಸರು ಈ ಕೇಸ್ನಲ್ಲಿ ಮೊದಲ ಪ್ರಕರಣ ದಾಖಲಿಸಿದ್ದರು. ನಂತರ ಇದು ಜಾರ್ಖಂಡ್, ಗುಜರಾತ್, ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಸಕ್ರಿಯವಾಗಿರುವ ರಾಷ್ಟ್ರೀಯ ʻಸಾಲ್ವರ್ ಗ್ಯಾಂಗ್ʼ ನೊಂದಿಗೆ ಸಂಪರ್ಕ ಹೊಂದಿದೆ ಎಂಬುದು ಬೆಳಕಿಗೆ ಬಂದಿತ್ತು. ಇದನ್ನೂ ಓದಿ:
ನಗರ ಮತ್ತು ಕೇಂದ್ರವಾರು ಫಲಿತಾಂಶ ಪ್ರಕಟಿಸಬೇಕೆಂಬ ಆದೇಶವನ್ನು ಎನ್ಟಿಎ ವಿರೋಧಿಸಿತ್ತು. ಪರೀಕ್ಷಾ ಏಜೆನ್ಸಿ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಪರೀಕ್ಷಾ ಫಲಿತಾಂಶಗಳು ವಿದ್ಯಾರ್ಥಿಗಳ ಖಾಸಗಿ ಆಸ್ತಿ ಎಂಬ ಕಾರಣಕ್ಕಾಗಿ ವಿನಂತಿ ವಿರೋಧಿಸಿದರು. ಇಡೀ ಫಲಿತಾಂಶ ಎಂದಿಗೂ ಪ್ರಕಟಿಸಲಾಗದು, ಅವು ವಿದ್ಯಾರ್ಥಿಗಳ ಆಸ್ತಿ ಎಂದು ವಾದಿಸಿದ್ದರು. ಇದನ್ನೂ ಓದಿ: ತಿರುಪತಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ – ವೆಂಕಟರಮಣನಿಗೆ ವಿಶೇಷ ಪೂಜೆ
ಏಜೆನ್ಸಿಯ ಪರ ವಾದವನ್ನು ಕೋರ್ಟ್ ತಳ್ಳಿಹಾಕಿತ್ತು. ವಾಸ್ತವವೆಂದರೆ ಬಿಹಾರದ ಪಾಟ್ನಾದಲ್ಲಿ, ಜಾರ್ಖಂಡ್ನ ಹಜಾರಿಬಾಗ್ನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಇದು ಆ ಕೇಂದ್ರಗಳಿಗೆ ಮಾತ್ರವೇ ಸೀಮಿತವಾಗಿಯೇ ಎಂಬುದನ್ನು ಪತ್ತೆಹಚ್ಚಲು ನಾವು ಬಯಸುತ್ತೇವೆ. ಆದ್ರೆ, ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶ ತಿಳಿಯದೇ ಕಂಗಾಲಾಗಿದ್ದಾರೆ. ಆದ್ದರಿಂದ ಕೇಂದ್ರ ಮತ್ತು ನಗರವಾರು ಫಲಿತಾಂಶ ಪ್ರಕಟಿಸಿ, ವಿದ್ಯಾರ್ಥಿಗಳ ಗುರುತನ್ನು ಮರೆಮಾಚಲು ನಾವು ಬಯಸುತ್ತೇವೆ. ಇದರಿಂದ ಕೇಂದ್ರವಾರು ಮಾರ್ಕ್ ಪ್ಯಾಟರ್ನ್ ಏನೆಂಬುದೂ ತಿಳಿಯುತ್ತದೆ ಎಂದು ಕೋರ್ಟ್ ವಿವರಿಸಿತು.
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿನ ಆರ್ಟಿಕಲ್ 370 (Article 370) ರದ್ದು ಮಾಡಿದ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಕೇಂದ್ರ ಸರ್ಕಾರದ (Union Government of India) ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ಸುಪ್ರೀಂ ಕೋರ್ಟ್ನ (Supreme Court) ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠವು ತನ್ನ ಚೇಂಬರ್ನಲ್ಲಿ ವಿಚಾರಣೆ ನಡೆಸಿದ ಬಳಿಕ ಅರ್ಜಿಯನ್ನು ವಜಾಗೊಳಿಸಿದೆ.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಅಂತಿಮವಾಗಿ ಈ ಪ್ರದೇಶಕ್ಕೆ ರಾಜ್ಯತ್ವವನ್ನು ಪುನಃ ಸ್ಥಾಪಿಸಲಾಗುವುದು ಎಂದು ನೀಡಿದ ಭರವಸೆಯನ್ನು ದಾಖಲಿಸಿದ ಸುಪ್ರೀಂ ಕೋರ್ಟ್ ಕಳೆದ ಡಿಸೆಂಬರ್ ನಲ್ಲಿ ಆರ್ಟಿಕಲ್ 370 ಅನ್ನು ರದ್ದು ಮಾಡುವ ಸರ್ಕಾರದ ನಿರ್ಧಾರ ಸರಿಯಾಗಿದೆ ಎಂದು ಆದೇಶ ನೀಡಿತ್ತು.