Tag: E.D

  • ಇಡಿ ತನಿಖೆಗೆ ನನ್ನ ಸಹೋದರ ಡಿ.ಕೆ ಸುರೇಶ್ ಸಹಕಾರ ಕೊಡ್ತಾರೆ: ಡಿಕೆಶಿ

    ಇಡಿ ತನಿಖೆಗೆ ನನ್ನ ಸಹೋದರ ಡಿ.ಕೆ ಸುರೇಶ್ ಸಹಕಾರ ಕೊಡ್ತಾರೆ: ಡಿಕೆಶಿ

    ಬೆಂಗಳೂರು: ಐಶ್ವರ್ಯ ಗೌಡ ಕೇಸ್‌ನಲ್ಲಿ ಇಡಿ (Directorate of Enforcement) ಕೊಟ್ಟಿರೋ ನೋಟಿಸ್‌ಗೆ ನನ್ನ ತಮ್ಮ ಡಿ.ಕೆ ಸುರೇಶ್ (D.K Suresh) ಸಹಕಾರ ಕೊಡಲಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ತಿಳಿಸಿದ್ದಾರೆ.

    ಡಿ.ಕೆ ಸುರೇಶ್‌ ಅವರಿಗೆ ಇಡಿ ನೋಟಿಸ್ ನೀಡಿರುವ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಸಹೋದರ ಇರಲಿಲ್ಲ. ಅಂಟಿಸಿ ಹೋಗ್ತೀನಿ ಅಂತ ಹೇಳಿದ್ರಂತೆ. ಅದಕ್ಕೆ ನಾನು ರಿಸೀವ್ ಮಾಡಿ ಅಂತ ಹೇಳಿದ್ದೇನೆ. ನನ್ನ ಸಹೋದರ ತನ್ನ ಹೆಸರು ಮಿಸ್ ಯೂಸ್ ಆಗಿದೆ ತನಿಖೆ ಮಾಡಿ ಅಂತ ಪೊಲೀಸರಿಗೆ ದೂರು ನೀಡಿದ್ದಾರೆ. ನನ್ನ ಸಹೋದರ ಹೋಗಿ ಇಡಿಗೆ ಏನು ಬೇಕಾದರೂ ಸಹಕಾರ ಕೊಡ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಐಶ್ವರ್ಯ ಗೌಡ ವಂಚನೆ ಕೇಸ್ – ವಿನಯ್ ಕುಲಕರ್ಣಿಗೆ ಇಡಿ ಸಮನ್ಸ್

    ಕಾನೂನು ಬಾಹಿರ ಚಟುವಟಿಕೆ ಮಾಡೋರು, ಮೋಸ ಮಾಡೋರು, 3-4 ಜನ ಮೋಸ ಆಗಿರೋರು ಬಂದು ನಿಮ್ಮ ಹೆಸರು ಮಿಸ್ ಯೂಸ್ ಮಾಡ್ತಿದ್ದಾರೆ ಅಂತ ಹೇಳಿದ್ದಾರೆ. ಅದನ್ನು ತನಿಖೆ ಮಾಡಿ ಅಂತ ನಾವು ಹೇಳಿದ್ದೇವೆ. ಇಡಿಗೆ ಸಹಕಾರ ಕೊಡೋಕೆ ನಾವು ತಯಾರಿದ್ದೇವೆ. ನಾವು ಈ ದೇಶದ ಕಾನೂನಿಗೆ, ವಿಚಾರಣೆಗೆ ಇಂತಹ ಮೋಸ ಮಾಡೋ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಸಹಕಾರ ಕೊಡ್ತೀವಿ. ನಾವು ಸಮಾಜಕ್ಕೆ, ಜನರಿಗೆ ನ್ಯಾಯ ಒದಗಿಸಿ ಕೊಡಬೇಕು. ಅದು ನಮ್ಮ ಕರ್ತವ್ಯ. ಅದನ್ನ ಸುರೇಶ್, ಶಿವಕುಮಾರ್ ಮಾಡ್ತಾರೆ. ನಾವು ಇಡಿಗೆ ಎಲ್ಲಾ ಸಹಕಾರ ಕೊಡ್ತೀವಿ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಐಶ್ವರ್ಯ ಗೌಡ ಮನೆ ಮೇಲೆ ಇಡಿ ದಾಳಿ – 2.25 ಕೋಟಿ ನಗದು ಪತ್ತೆ

  • ಶಾಸಕ ಭರತ್ ರೆಡ್ಡಿ ಮನೆ ಮೇಲೆ ಮುಂದುವರಿದ ಇ.ಡಿ ದಾಳಿ

    ಶಾಸಕ ಭರತ್ ರೆಡ್ಡಿ ಮನೆ ಮೇಲೆ ಮುಂದುವರಿದ ಇ.ಡಿ ದಾಳಿ

    ಬಳ್ಳಾರಿ: ಬಳ್ಳಾರಿಯ ಶಾಸಕ ನಾರಾ ಭರತ್ ರೆಡ್ಡಿ (Nara Bharath Reddy)ಮನೆ ಹಾಗೂ ಕಚೇರಿ ಮೇಲೆ ಶನಿವಾರದಂದು ಇ.ಡಿ  (E.D) ದಾಳಿ ನಡೆಸಿದ್ದು, ಇಂದು ಕೂಡ ಅಧಿಕಾರಿಗಳ ಪರಿಶೀಲನೆ ಮುಂದುವರಿಯಲಿದೆ.

    ಶನಿವಾರ ಬೆಳಗ್ಗೆ 6:30ಕ್ಕೆ ಭರತ್ ರೆಡ್ಡಿ ಮನೆ ಮೇಲೆ ಇ.ಡಿ ಅಧಿಕಾರಿಗಳು ದಾಳಿ ಮಾಡಿದ್ದರು. 24 ಗಂಟೆಗಳಾದರೂ ಇ.ಡಿ ಅಧಿಕಾರಿಗಳ ಪರಿಶೀಲನೆ ಮುಗಿಯಲೇ ಇಲ್ಲ. ದಿನವಿಡೀ ನಡೆದ ದಾಳಿಯಲ್ಲಿ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಕಲೆ ಹಾಕಿದ್ದಾರೆ. ಅಲ್ಲದೇ ಭರತ್ ಅಪ್ತರು ಮತ್ತು ಸಂಬಂಧಿಕರ ಮನೆ ಮತ್ತು ಕಚೇರಿಗಳ ಮೇಲೂ ಇ.ಡಿ ದಾಳಿ ನಡೆಸಿದೆ. ಭರತ್ ಅವರ ಚಿಕ್ಕಪ್ಪ ಪ್ರತಾಪ್ ರೆಡ್ಡಿ, ಆಪ್ತರಾದ ರತ್ನ ಬಾಬು ಮತ್ತು ಸತೀಶ್ ರೆಡ್ಡಿ ಮನೆಗಳಲ್ಲೂ ಶೋಧ ಕಾರ್ಯ ನಡೆಸಿದ್ದಾರೆ. ಇಂದು ಇನ್ನಷ್ಟು ಆಪ್ತರು ಮತ್ತು ಸಂಬಂಧಿಗಳ ಮನೆ ಮೇಲೆ ದಾಳಿ ನಡೆಸುವ ಸಾಧ್ಯತೆಗಳಿವೆ. ಇದನ್ನೂ ಓದಿ: ಬೆಂಗಳೂರು ರೈಲುಗಳು ಹೈಟೆಕ್- 6 ಮಾರ್ಗಗಳಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆ ಜಾರಿ

    ಅದಾಯಕ್ಕಿಂತಲೂ ಅಧಿಕ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಇ.ಡಿ ದಾಳಿ ನಡೆಸಿದೆ. ಚುನಾವಣೆಗೂ ಮುನ್ನ ಸೆಂಟ್ರಲ್ ಐ.ಟಿ ತಂಡ ದಾಳಿ ನಡೆಸಿತ್ತು. ಬಳಿಕ ಐಟಿಯಿಂದ ಇ.ಡಿಗೆ ಪ್ರಕರಣ ವರ್ಗಾವಣೆಯಾದ ಹಿನ್ನೆಲೆ ನಿನ್ನೆ ತಡರಾತ್ರಿವರೆಗೂ ಭರತ್ ಹಾಗೂ ಅವರ ತಂದೆ ಒಡೆತನದ ರಾಘವೇಂದ್ರ ಎಂಟರ್‌ಪ್ರೈಸಸ್‌ ಮೇಲೆ ಇ.ಡಿ ಅಧಿಕಾರಿಗಳು ದಾಳಿ ಮಾಡಿ ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಅಮಿತ್ ಶಾ ಎಂಟ್ರಿ- ಮೈತ್ರಿ ನಾಯಕರ ಭೇಟಿ ಇಂದೇ ನಡೆಯುತ್ತಾ?

    ಮಾಜಿ ಶಾಸಕರಾದ ಸೂರ್ಯ ನಾರಾಯಣ ರೆಡ್ಡಿ ಅವರು ಭರತ್ ತಂದೆ. ಸುಮಾರು ವರ್ಷಗಳಿಂದ ಗ್ರಾನೈಟ್ ಉದ್ಯಮ ಮಾಡಿಕೊಂಡು ಬಂದಿದ್ದು, ನೂರಾರು ಕೋಟಿ ಆಸ್ತಿ ಹೊಂದಿದ್ದಾರೆ. ಆಂಧ್ರಪ್ರದೇಶದಲ್ಲಿ ಮತ್ತು ಕೊಪ್ಪಳ ಜೆಲ್ಲೆಯಲ್ಲಿ ಗ್ರಾನೈಟ್ ಕ್ವಾರಿಗಳನ್ನ ಹೊಂದಿದ್ದಾರೆ. ಇದನ್ನೂ ಓದಿ: ವ್ಯಾಲೆಂಟೈನ್ಸ್ ಡೇ ಸೇರಿ ಬೆಂಗಳೂರಿನಲ್ಲಿ 4 ದಿನ ಮದ್ಯ ಬಂದ್!

  • ಪತ್ರಾ ಚಾವ್ಲ್‌ ಭೂಹಗರಣ: ಸಂಜಯ್‌ ರಾವತ್‌ಗೆ ಆ.22ರವರೆಗೆ ನ್ಯಾಯಾಂಗ ಬಂಧನ

    ಪತ್ರಾ ಚಾವ್ಲ್‌ ಭೂಹಗರಣ: ಸಂಜಯ್‌ ರಾವತ್‌ಗೆ ಆ.22ರವರೆಗೆ ನ್ಯಾಯಾಂಗ ಬಂಧನ

    ಮುಂಬೈ: ಪತ್ರಾ ಚಾವ್ಲ್‌ ಭೂಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ಸಂಸದ ಸಂಜಯ್‌ ರಾವತ್‌ ಅವರನ್ನು ಆಗಸ್ಟ್‌ 22 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    ಈ ಹಿಂದೆ ಇಡಿ ಕಸ್ಟಡಿಯಲ್ಲಿದ್ದ ಶಿವಸೇನಾ ನಾಯಕನಿಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದು, ಅವರಿಗೆ ಅಗತ್ಯ ಔಷಧ ಒದಗಿಸಲು ಸಹ ನ್ಯಾಯಾಲಯವು ಅನುಮತಿಸಿದೆ. ಇದನ್ನೂ ಓದಿ: 725.7 ಕೋಟಿ ಡೀಲ್‌ – ಗುಜರಾತ್‌ನ ಫೋರ್ಡ್‌ ಘಟಕ ಖರೀದಿಸಿದ ಟಾಟಾ

    ಇದಕ್ಕೂ ಮುನ್ನ ಆಗಸ್ಟ್ 1 ರಂದು ರಾವತ್ ಅವರನ್ನು ಇದೇ ಪ್ರಕರಣದಲ್ಲಿ ಆಗಸ್ಟ್ 4 ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಕಳುಹಿಸಲಾಗಿತ್ತು. ಅದೇ ದಿನ, ಬಂಧನದ ನಂತರ ಇಡಿ ಅವರನ್ನು ವಿಶೇಷ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿತು.

    ಇಡಿ ಅಧಿಕಾರಿಗಳು ಜುಲೈ 31 ರಂದು ಶಿವಸೇನಾ ನಾಯಕನ ಮನೆಯ ಮೇಲೆ ದಾಳಿ ನಡೆಸಿದ್ದರು. ಹಲವು ಗಂಟೆಗಳ ಕಾಲ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ನಂತರ ಆಗಸ್ಟ್ 1 ರಂದು ಅವರನ್ನು ಬಂಧಿಸಲಾಯಿತು. ಇದನ್ನೂ ಓದಿ: CWG 2022: ಇಂದು ಕೊನೆಯ ದಿನ – ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರುವ ತವಕದಲ್ಲಿ ಭಾರತ

    ಈ ವರ್ಷ ಜೂನ್ 28 ರಂದು, 1,034 ಕೋಟಿ ರೂ. ಪತ್ರಾ ಚಾವ್ಲ್‌ ಭೂಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸಂಜಯ್ ರಾವತ್ ಅವರಿಗೆ ಸಮನ್ಸ್ ನೀಡಿತ್ತು.

    Live Tv
    [brid partner=56869869 player=32851 video=960834 autoplay=true]