Tag: e-governance

  • ದೇಶದಲ್ಲೇ ಅತ್ಯುತ್ತಮವಾದ ಕಾನೂನು ಸುವ್ಯವಸ್ಥೆ ಕೇರಳದಲ್ಲಿದೆ – ಪಿಣರಾಯಿ ವಿಜಯನ್‌

    ದೇಶದಲ್ಲೇ ಅತ್ಯುತ್ತಮವಾದ ಕಾನೂನು ಸುವ್ಯವಸ್ಥೆ ಕೇರಳದಲ್ಲಿದೆ – ಪಿಣರಾಯಿ ವಿಜಯನ್‌

    ತಿರುವನಂತಪುರಂ: ದೇಶದಲ್ಲೇ ಅತ್ಯುತ್ತಮವಾದ ಕಾನೂನು ಸುವ್ಯವಸ್ಥೆ (Kerala Law And Order) ಕೇರಳದಲ್ಲಿದೆ. ಕಳೆದ ಕೆಲ ವರ್ಷಗಳಿಂದ ಯಾವುದೇ ಕೋಮುಗಲಭೆಗಳು ಕೇರಳದಲ್ಲಿ ನಡೆದಿಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ (Pinarayi Vijayan) ಹೇಳಿದ್ದಾರೆ.

    ಖಾಸಗಿ ವಾಹಿನಿಯೊಂದರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲೇ ಅತ್ಯುತ್ತಮವಾದ ಕಾನೂನು ವ್ಯವಸ್ಥೆಯನ್ನು ನಾವು ಹೊಂದಿದ್ದೇವೆ. ಕಳೆದ ಕೆಲ ವರ್ಷಗಳಿಂದ ಒಂದೇ ಒಂದು ಕೋಮುಗಲಭೆ (Communal Violence), ಹಿಂಸಾಚಾರವೂ ಅಲ್ಲಿ ನಡೆದಿಲ್ಲ ಎಂದು ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಗುರುತಿನ ಪುರಾವೆಗಳಿಲ್ಲದೇ 2,000 ರೂ. ನೋಟುಗಳ ವಿನಿಮಯ – ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ

    ಇತ್ತೀಚೆಗಷ್ಟೇ ಕೇರಳ ದೇಶದ ಮೊದಲ ಇ-ಆಡಳಿತ (E Governance) ರಾಜ್ಯ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದು, ಮೈಲಿಗಲ್ಲು ಸಾಧಿಸಿದೆ. ಇ-ಆಡಳಿತದ ಮೂಲಕ ನಾವು ಪಾರದರ್ಶಕತೆ, ದಕ್ಷತೆ ಮತ್ತು ಸಾರ್ವಜನಿಕ ಒಳಗೊಳ್ಳುವಿಕೆಯನ್ನು ಸಾಧಿಸುತ್ತಿದ್ದೇವೆ. ತಡೆರಹಿತ ಸಾರ್ವಜನಿಕ ಸೇವೆಗಳನ್ನು ಕಲ್ಪಿಸಲು ತಂತ್ರಜ್ಞಾನವನ್ನ ಸಮರ್ಪಕವಾಗಿ ಬಳಸಿಕೊಳ್ಳುತ್ತಿದ್ದೇವೆ. 900ಕ್ಕೂ ಹೆಚ್ಚು ಸೇವೆಗಳು ಆನ್‌ಲೈನ್‌ನಲ್ಲೇ ಲಭ್ಯವಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಕೋಮು ಸಂಘರ್ಷ: ಅನಧಿಕೃತ ಶಸ್ತ್ರಾಸ್ತ್ರಗಳನ್ನು ಕೂಡಲೇ ಒಪ್ಪಿಸಿ – ದಂಗೆಕೋರರಿಗೆ ಅಮಿತ್‌ ಶಾ ವಾರ್ನಿಂಗ್‌

    ಅಲ್ಲದೇ ಈಗಾಗಲೇ ಸರ್ಕಾರಿ ಕಚೇರಿಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 2 ಸಾವಿರ ವೈಫೈ ಹಾಟ್‌ಸ್ಪಾಟ್‌ (WiFi Hotspots) ಸ್ಥಾಪಿಸಲಾಗಿದೆ. ಇದರೊಂದಿಗೆ ಇನ್ನೂ 2,000 ಹಾಟ್‌ಸ್ಪಾಟ್‌ಗಳನ್ನ ಸ್ಥಾಪಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

  • ಆರ್ಥಿಕವಾಗಿ ಕುಸಿದ ಬಿಡಿಎ- ಬಿಲ್ ಪಾವತಿಸದ್ದಕ್ಕೆ ಇಂಟರ್ನೆಟ್‌ ಕಡಿತ

    ಆರ್ಥಿಕವಾಗಿ ಕುಸಿದ ಬಿಡಿಎ- ಬಿಲ್ ಪಾವತಿಸದ್ದಕ್ಕೆ ಇಂಟರ್ನೆಟ್‌ ಕಡಿತ

    ಬೆಂಗಳೂರು: ಬಿಡಿಎ ಆರ್ಥಿಕವಾಗಿ ಕುಸಿದಿದ್ದು, ಕಂಪ್ಯೂಟರ್ ಗಳಿಗೆ ಇಂಟರ್ ನೆಟ್ ಸಂಪರ್ಕ ಸಹ ಇಲ್ಲದೆ ಇ-ಆಡಳಿತ ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ.

    ಬಿಡಿಎ ಆರ್ಥಿಕ ಕುಸಿತ ಕಂಡಿದೆ ಎಂದು ಈ ಹಿಂದಿನಿಂದಲೂ ಹೇಳಲಾಗುತ್ತಿತ್ತು. ಆದರೆ ಅದಕ್ಕೆ ಸೂಕ್ತ ಪುರಾವೆ ಸಿಕ್ಕಿರಲಿಲ್ಲ. ಇದೀಗ ಆರ್ಥಿಕ ಕುಸಿತ ಕಂಡಿರುವುದು ಜಗಜ್ಜಾಹೀರಾಗಿದ್ದು, ಇದಕ್ಕೆ ತಾಜಾ ನಿದರ್ಶನ ಎಂಬಂತೆ ಬಿಡಿಎ ಕಚೇರಿಯಲ್ಲಿನ ಕಂಪ್ಯೂಟರ್ ಗಳು ಇಂಟರ್‍ನೆಟ್ ಸಂಪರ್ಕ ಕಳೆದುಕೊಂಡಿವೆ.

    ಬಿಡಿಎ ಈ ವರ್ಷದ ಏಪ್ರಿಲ್ ತಿಂಗಳಿನಿಂದ ಇ-ಆಡಳಿತ ವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ. ಆದರೆ ಕಳೆದ 4 ದಿನಗಳಿಂದ ಇ-ಆಡಳಿತ ವ್ಯವಸ್ಥೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಕಾರಣ 2019-20ನೇ ಸಾಲಿನ ಮುಂಗಡ ಬಿಲ್ ಕಟ್ಟಿಲ್ಲ ಎಂದು ಬಿಎಸ್‍ಎನ್‍ಎಲ್ ಸಂಸ್ಥೆ ಕಳೆದ ನಾಲ್ಕು ದಿನಗಳಿಂದ ಇಂಟರ್ ನೆಟ್ ಸಂಪರ್ಕ ಕಡಿತಗೊಳಿಸಿದೆ.

    ಮಾರ್ಚ್ ನಲ್ಲೇ ಬಿಡಿಎ 13 ಲಕ್ಷ ರೂಪಾಯಿಯಷ್ಟು ಇಂಟರ್‍ನೆಟ್ ಶುಲ್ಕವನ್ನು ಬಿಎಸ್‍ಎನ್‍ಎಲ್‍ಗೆ ಕಟ್ಟಬೇಕಿತ್ತು. ಸೆಪ್ಟೆಂಬರ್ ತಿಂಗಳಾಂತ್ಯ ಬಂದರೂ ಬಿಲ್ ಪಾವತಿಸದ ಕಾರಣ ಬಿಎಸ್‍ಎನ್‍ಎಲ್ ಇಂಟರ್ ನೆಟ್ ಸೇವೆಯನ್ನು ಕಡಿತಗೊಳಿಸಿದೆ. ಇದರಿಂದ ಬಿಡಿಎ ಕಚೇರಿಯಲ್ಲಿ ದೈನಂದಿನ ಕೆಲಸ ಕಾರ್ಯಗಳು ಹಳಿ ತಪ್ಪಿದಂತಾಗಿವೆ.

    ಈ ಬಗ್ಗೆ ಬಿಡಿಎ ಕಾರ್ಯದರ್ಶಿ ಡಾ.ವಾಸಂತಿ ಅಮರ್ ಪ್ರತಿಕ್ರಿಯಿಸಿ, ಬಿಎಸ್‍ಎನ್‍ಎಲ್ ಸದ್ಯ 30 ಎಂಬಿಪಿಎಸ್ (ಮೆಗಾಬೈಟ್ ಪರ್ ಸೆಕೆಂಡ್) ಸ್ಪೀಡ್‍ನಲ್ಲಿ ಇಂಟರ್ ನೆಟ್ ಒದಗಿಸುತ್ತಿದೆ. ಆದರೆ ಆಕ್ಟ್ ಫೈಬರ್ ನೆಟ್ 100 ಎಂಬಿಪಿಎಸ್ ಸ್ಪೀಡ್‍ನಲ್ಲಿ ವರ್ಷಕ್ಕೆ ಕೇವಲ 2.75 ಲಕ್ಷದಲ್ಲಿ ಸೇವೆ ಕೊಡುತ್ತಿದೆ. ಈ ಸೇವೆ ಪಡೆಯಲು ಬಿಡಿಎ ಚಿಂತನೆ ನಡೆಸಿದೆ. ಬಿಎಸ್‍ಎನ್‍ಎಲ್ ಸೇವೆ ಸುರಕ್ಷತೆ ಎಂಬ ಕಾರಣಕ್ಕೆ ಮುಂದುವರಿಸುತ್ತೇವೆ. ಅವರಿಗೂ ಇದೇ ಸ್ಪೀಡ್‍ನಲ್ಲಿ ಇಂಟರ್ ನೆಟ್ ಸೇವೆ ನೀಡಲು ಕೋರಿದ್ದೇವೆ. ಇಂದಿನಿಂದ ಎಲ್ಲ ಸೇವೆಗಳು ಯಥಾಪ್ರಕಾರ ಮುಂದುವರಿಯುತ್ತಿವೆ ಎಂದು ಸ್ಪಷ್ಟನೆ ನೀಡಿದ್ದಾರೆ.