Tag: E-Prasad

  • ಇನ್ಮುಂದೆ ಆನ್‌ಲೈನ್‌ನಲ್ಲೇ ಸಿಗಲಿದೆ ಮೈಸೂರು ಚಾಮುಂಡೇಶ್ವರಿ, ಕಟೀಲು ದುರ್ಗಾಪರಮೇಶ್ವರಿಯ ಪ್ರಸಾದ!

    ಇನ್ಮುಂದೆ ಆನ್‌ಲೈನ್‌ನಲ್ಲೇ ಸಿಗಲಿದೆ ಮೈಸೂರು ಚಾಮುಂಡೇಶ್ವರಿ, ಕಟೀಲು ದುರ್ಗಾಪರಮೇಶ್ವರಿಯ ಪ್ರಸಾದ!

    – ಮುಜರಾಯಿ ದೇವಸ್ಥಾನಗಳ ಇ-ಪ್ರಸಾದಕ್ಕೆ ಫುಲ್ ಡಿಮ್ಯಾಂಡ್
    – ಮತ್ತಷ್ಟು ದೇವಾಲಯಗಳ ಸೇರ್ಪಡೆಗೆ ನಿರ್ಧಾರ

    ಬೆಂಗಳೂರು: ಮುಜರಾಯಿ ಇಲಾಖೆಯ (Department Of Muzrai) ಇ-ಪ್ರಸಾದ (E-Prasad) ಯೋಜನೆಗೆ ಬೇಡಿಕೆ ಹೆಚ್ಚಾಗಿದ್ದು, ಇದೀಗ ಇನ್ನಷ್ಟು ದೇವಾಲಯಗಳ ಪ್ರಸಾದವನ್ನು ಆನ್‌ಲೈನ್ ಮೂಲಕ ಮನೆಮನೆಗೂ ತಲುಪಿಸಲು ಇಲಾಖೆ ಮುಂದಾಗಿದೆ.

    ಇತ್ತೀಚಿಗಷ್ಟೇ ಮುಜರಾಯಿ ಇಲಾಖೆ ದೇವಸ್ಥಾನಗಳ ಪ್ರಸಾದವನ್ನು ಆನ್‌ಲೈನ್ ಮೂಲಕ ಎಲ್ಲರ ಮನೆಗೆ ತಲುಪಿಸುವ `ಇ-ಪ್ರಸಾದ’ ಯೋಜನೆಯನ್ನು ಲೋಕಾರ್ಪಣೆ ಮಾಡಿದ್ದರು. ಈ ಯೋಜನೆಗೆ ರಾಜ್ಯದ ಜನರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದ್ದು, ಏಳು ದೇವಸ್ಥಾನಗಳ ಪ್ರಸಾದಕ್ಕೆ ಬೇಡಿಕೆ ಹೆಚ್ಚಾಗಿದೆ.

    ಕಾಮನ್ ಸರ್ವಿಸ್ ಸೆಂಟರ್‌ಗಳಿಂದ ಜನರು ಬುಕ್ ಮಾಡುತ್ತಿದ್ದು, ಯೋಜನೆ ಲೋರ್ಕಾಪಣೆಯಾದ ಬಳಿಕ ಇದುವರೆಗೂ 10 ಸಾವಿರ ಮಂದಿ ಪ್ರಸಾದವನ್ನು ಬುಕ್ ಮಾಡಿದ್ದಾರೆ. ಕೇರಳ ಮತ್ತು ಮಹಾರಾಷ್ಟ್ರದವರು ಕೂಡ ಬುಕ್ ಮಾಡುತ್ತಿದ್ದಾರೆ. ಪ್ರಾಯೋಗಿಕವಾಗಿ 14 ದೇವಸ್ಥಾನಗಳಲ್ಲಿ ಜಾರಿ ಮಾಡಲಾಗಿತ್ತು. ಈಗ ಮತ್ತಷ್ಟು ದೇವಸ್ಥಾನಗಳನ್ನು ಈ ಯೋಜನೆಗೆ ಸೇರಿಸಲು ಮುಜರಾಯಿ ಇಲಾಖೆ ಚಿಂತನೆ ನಡೆಸಿದೆ.ಇದನ್ನೂ ಓದಿ: ಡಿವೋರ್ಸ್‌ ಬಳಿಕ ಪತ್ನಿಗೆ ಜೀವನಾಂಶ ಹೊಂದಿಸಲು ದರೋಡೆಗೆ ಯತ್ನ – ಮಾಜಿ ಪತಿ ಸೇರಿ ಮೂವರು ಅರೆಸ್ಟ್‌

    ಯಾವ ದೇವಸ್ಥಾನಗಳ ಪ್ರಸಾದಕ್ಕೆ ಬೇಡಿಕೆ ಹೆಚ್ಚು?
    1. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ
    2. ನಂಜನಗೂಡು ದೇವಸ್ಥಾನ
    3 ರೇಣುಕಾ ಯಲ್ಲಮ್ಮ
    4. ದತ್ತಾತ್ರೇಯ ದೇವಸ್ಥಾನ
    5. ಹುಲಿಗೆಮ್ಮ ದೇವಸ್ಥಾನ
    6. ಬೆಂಗಳೂರಿನ ದೊಡ್ಡ ಗಣಪತಿ ಟೆಂಪಲ್
    7. ಕೊಲ್ಲೂರು ಮೂಕಾಂಬಿ ದೇವಸ್ಥಾನ

    ಹೊಸದಾಗಿ ಸೇರ್ಪಡೆಗೊಳ್ಳಲಿರುವ ದೇವಸ್ಥಾನಗಳು:
    1. ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ
    2. ಕಟೀಲು ದುರ್ಗಾಪರಮೇಶ್ವರಿ
    3. ಘಾಟಿ ಸುಬ್ರಮಣ್ಯ
    4. ಮಂಗಳೂರಿನ ಸೌತಡ್ಕ ಗಣಪತಿ. ಇದನ್ನೂ ಓದಿ: Breaking | ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಳ

  • ಮುಜರಾಯಿಯಿಂದ ಇ-ಪ್ರಸಾದ ಸೇವೆ : 15 ದಿನಗಳಲ್ಲಿ ಮನೆ ಬಾಗಿಲಿಗೆ ಬರಲಿದೆ ರಾಜ್ಯದ 400 ದೇಗುಲಗಳ ಪ್ರಸಾದ!

    ಮುಜರಾಯಿಯಿಂದ ಇ-ಪ್ರಸಾದ ಸೇವೆ : 15 ದಿನಗಳಲ್ಲಿ ಮನೆ ಬಾಗಿಲಿಗೆ ಬರಲಿದೆ ರಾಜ್ಯದ 400 ದೇಗುಲಗಳ ಪ್ರಸಾದ!

    ಬೆಂಗಳೂರು: ಮುಜರಾಯಿ ಇಲಾಖೆ (Muzrai Department) ರಾಜ್ಯದ ಜನರಿಗೆ ಸಿಹಿ ಸುದ್ದಿ ನೀಡಿದ್ದು, ಇ-ಪ್ರಸಾದ (E-Prasad) ಸೇವೆ ಮೂಲಕ ರಾಜ್ಯದ 400 ದೇಗುಲಗಳ ಪ್ರಸಾದ 15 ದಿನಗಳಲ್ಲಿ ಮನೆ ಬಾಗಿಲಿಗೆ ಬರಲಿದೆ.

    ಈಗಾಗಲೇ ಧನುರ್ಮಾಸ ಮುಗಿದಿದ್ದು, ಗೃಹಪ್ರವೇಶ, ನಾಮಕರಣ ಸೇರಿದಂತೆ ಮದುವೆ ಸೀಜನ್ ಆರಂಭವಾಗಿದೆ. ಇಂತಹ ಶುಭ ಸಂದರ್ಭದಲ್ಲಿ ದೂರದ ಊರುಗಳಲ್ಲಿರುವ ದೇವಸ್ಥಾನಕ್ಕೆ ಹೋಗಿ ಪ್ರಸಾದ ತರುವುದು ಕಷ್ಟವಾಗುತ್ತದೆ. ಹೀಗಾಗಿ ಈ ಸಮಸ್ಯೆಯನ್ನು ಬಗೆಹರಿಸಲು ಮುಜರಾಯಿ ಸಿಹಿ ಸುದ್ದಿ ನೀಡಿದ್ದು, ಮನೆ ಬಾಗಿಲಿಗೆ ದೇವರ ಪ್ರಸಾದ ತಲುಪಲಿದೆ.ಇದನ್ನೂ ಓದಿ: ಮಾ.17ಕ್ಕೆ ಪುನೀತ್ ಹುಟ್ಟುಹಬ್ಬ – ‘ಅಪ್ಪು’ ಸಿನಿಮಾ ರೀ-ರಿಲೀಸ್

    ಇತ್ತೀಚಿನ ದಿನಗಳಲ್ಲಿ ದೂರದ ದೇವಸ್ಥಾನಗಳಿಗೆ ಹೋಗಿ, ಜನರ ದಟ್ಟಣೆಯ ನಡುವೆ ದೇವರ ದರ್ಶನ ಪಡೆಯುವುದು ಕಷ್ಟ. ಈ ಹಿನ್ನೆಲೆ ದೇವಸ್ಥಾನಕ್ಕೆ ತೆರಳಿ ಪ್ರಸಾದ ಪಡೆಯಲು ಕಷ್ಟವಾಗುವ ಹಿನ್ನೆಲೆ ಭಕ್ತರ ಅನುಕೂಲಕ್ಕಾಗಿ ಮುಜರಾಯಿ ಇಲಾಖೆ ಹೊಸ ಪ್ರಯೋಗ ನಡೆಸಿದೆ. ಈ ಮೂಲಕ ರಾಜ್ಯದ ಪ್ರಮುಖ 10 ದೇವಾಲಯಗಳ ಪ್ರಸಾದ ಆನ್‌ಲೈನ್‌ನಲ್ಲಿ ಮನೆ ಬಾಗಿಲಿಗೆ ತಲುಪಿಸುವ ಪ್ರಯೋಗ ಆರಂಭಿಸಿತ್ತು. ಈ ಇ-ಪ್ರಸಾದ ಸೇವೆಗೆ ಭಕ್ತಾದಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.

    ಇದುವರೆಗೂ ಅಂದಾಜು 25 ಸಾವಿರ ಭಕ್ತಾದಿಗಳು ಇ-ಪ್ರಸಾದ ಪಡೆದಿದ್ದಾರೆ. ಹೀಗಾಗಿ ಮುಂದಿನ 15 ದಿನಗಳಲ್ಲಿ ರಾಜ್ಯದ 400 ದೇವಾಲಯಗಳಲ್ಲಿ ಇ-ಪ್ರಸಾದ ಸೇವೆ ಆರಂಭಿಸುವ ಯೋಜನೆಯನ್ನು ಮುಜರಾಯಿ ಇಲಾಖೆ ಹಾಕಿಕೊಂಡಿದೆ.

    ಇ-ಪ್ರಸಾದದ ಅನುಕೂಲಗಳು:

    • ವೃದ್ಧರು ಮನೆಯಲ್ಲೇ ಕುಳಿತು ತಮಗಿಷ್ಟವಾದ ದೇವಸ್ಥಾನದ ಪ್ರಸಾದ ತರಿಸಿಕೊಳ್ಳಬಹುದು.
    • ವಿಶೇಷಚೇತನರು, ಅಂಧರು ಹೀಗೆ ಹಲವರಿಗೆ ಈ ಸೇವೆ ತುಂಬಾ ಉಪಯೋಗವಾಗಲಿದೆ.
    • ವಿಶೇಷ ದಿನಗಳಲ್ಲಿ ದೇವಸ್ಥಾನಗಳಲ್ಲಿ ಜನದಟ್ಟಣೆ ಹೆಚ್ಚಾಗಿರುತ್ತದೆ.
    • ಭಕ್ತರು ದೇವಸ್ಥಾನಕ್ಕೆ ಹೋದರೂ ಪ್ರಸಾದ ಸ್ವೀಕರಿಸುವುದು ಕಷ್ಟವಾಗುತ್ತದೆ
    • ಪುಟ್ಟ ಮಕ್ಕಳಿರುವ ಪೋಷಕರು, ಮನೆಯಿಂದ ಹೊರಬರಲಾಗದ ಗರ್ಭಿಣಿಯರು ಈ ಸೇವೆಯ ಮೂಲಕ ಪ್ರಸಾದ ಬುಕ್ ಮಾಡಿಕೊಳ್ಳಬಹುದು.ಇದನ್ನೂ ಓದಿ: ರಾಜಸ್ಥಾನ | ಹೋಳಿ ಬಣ್ಣ ಹಚ್ಚಿಸಿಕೊಳ್ಳಲು ನಿರಾಕರಿಸಿದ ಯುವಕನ ಬರ್ಬರ ಹತ್ಯೆ