Tag: eagleton resort

  • ಬಿಗ್‌ಬಾಸ್‌ ಸ್ಪರ್ಧಿಗಳು ಈಗಲ್‌ಟನ್‌ ರೆಸಾರ್ಟ್‌ಗೆ ಶಿಫ್ಟ್‌

    ಬಿಗ್‌ಬಾಸ್‌ ಸ್ಪರ್ಧಿಗಳು ಈಗಲ್‌ಟನ್‌ ರೆಸಾರ್ಟ್‌ಗೆ ಶಿಫ್ಟ್‌

    ಬಿಗ್‌ಬಾಸ್‌ ಮನೆಗೆ ಕಂದಾಯ ಇಲಾಖೆ ಅಧಿಕಾರಿಗಳು ಬೀಗ ಹಾಕಿದ ಬಳಿಕ ಸ್ಪರ್ಧಿಗಳನ್ನು ಈಗಲ್‌ಟನ್‌ ರೆಸಾರ್ಟ್‌ ಶಿಫ್ಟ್‌ ಮಾಡಲಾಗಿದೆ.

    ಇನ್ನೋವಾ ಕಾರಿನಲ್ಲಿ ಸ್ಪರ್ಧಿಗಳು ರೆಸಾರ್ಟ್‌ಗೆ ಶಿಫ್ಟ್‌ ಮಾಡಲಾಗಿದೆ. ಒಂದು ಕಾರಿನಲ್ಲಿ ತಲಾ ಐದು ಮಂದಿ ಪ್ರಯಾಣಿಸಿದರು. ಗೇಟ್ ನಂಬರ್ ಸಿ ಮೂಲಕ ಜಾಲಿವುಡ್ ಸ್ಟುಡಿಯೋದಿಂದ ಆಚೆ ಬಂದ ಬಿಗ್ ಬಾಸ್ ಸ್ಪರ್ಧಿಗಳು ಐದಕ್ಕೂ ಹೆಚ್ಚು ಇನ್ನೋವಾ ಕಾರುಗಳ ಮೂಲಕ ಹೊರಟರು.

    15 ಕ್ಕೂ ಹೆಚ್ಚು ರೂಮ್‌ಗಳನ್ನು ಬಿಗ್‌ಬಾಸ್‌ ಮ್ಯಾನೇಜ್‌ಮೆಂಟ್‌ ಬುಕ್‌ ಮಾಡಿದೆ. ಸ್ಪರ್ಧಿಗಳು, ಟೆಕ್ನಿಷಿಯನ್‌ಗಳಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

  • ಈಗಲ್‍ಟನ್ ರೆಸಾರ್ಟ್ ಒತ್ತುವರಿ ಮಾಡಿದ ಜಾಗ ಕ್ರೀಡಾ ಸಮುಚ್ಚಯ ನಿರ್ಮಾಣಕ್ಕೆ ನೀಡಿ: ಡಾ.ನಾರಾಯಣಗೌಡ

    ಈಗಲ್‍ಟನ್ ರೆಸಾರ್ಟ್ ಒತ್ತುವರಿ ಮಾಡಿದ ಜಾಗ ಕ್ರೀಡಾ ಸಮುಚ್ಚಯ ನಿರ್ಮಾಣಕ್ಕೆ ನೀಡಿ: ಡಾ.ನಾರಾಯಣಗೌಡ

    -ಸಿಎಂ ಹಾಗೂ ಕಂದಾಯ ಸಚಿವರಿಗೆ ಪತ್ರ

    ಬೆಂಗಳೂರು: ರಾಮನಗರ ಜಿಲ್ಲಾಡಳಿತ ಮಾಡಿದ ಕಾರ್ಯ ಶ್ಲಾಘನೀಯ. ಬಿಡದಿಯಲ್ಲಿರುವ ಈಗಲ್‍ಟನ್ ರೆಸಾರ್ಟ್ ಒತ್ತುವರಿ ಮಾಡಿಕೊಂಡಿದ್ದ 77 ಎಕರೆ 18 ಗುಂಟೆ ಜಾಗವನ್ನು ಕೋರ್ಟ್ ಆದೇಶದಂತೆ ತೆರವು ಮಾಡಿ ಸರ್ಕಾರದ ವಶಕ್ಕೆ ಪಡೆದುಕೊಳ್ಳಲಾಗಿದೆ. ವಿಶಾಲವಾಗಿರುವ ಈ ನಿವೇಶನ ಕ್ರೀಡಾ ಚಟುವಟಿಕೆಗೆ ಯೋಗ್ಯವಾಗಿದೆ. ಆದ್ದರಿಂದ ಈ ಸ್ಥಳವನ್ನು ಕ್ರೀಡಾ ಸಮುಚ್ಚಯ ನಿರ್ಮಾಣಕ್ಕಾಗಿ ನೀಡಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

    ನಮ್ಮ ರಾಜ್ಯದ ಕ್ರೀಡಾಪಟುಗಳಿಗೆ ಒಲಂಪಿಕ್ಸ್ ಕ್ರೀಡಾಕೂಟ, ಏಷಿಯಾ ಗೇಮ್ಸ್ ಸೇರಿದಂತೆ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ತರಬೇತಿ ನೀಡಲು ವಿಶಾಲ ಪ್ರದೇಶದಲ್ಲಿ ಬೃಹತ್ತಾದ ಕ್ರೀಡಾ ಸಮುಚ್ಚಯ ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ಕ್ರೀಡಾ ಇಲಾಖೆ ಇದಕ್ಕಾಗಿ ವಿಶಾಲ ನಿವೇಶನವನ್ನೂ ಹುಡುಕುತ್ತಿದೆ. ಪ್ರಸ್ತುತ ರಾಮನಗರದ ಬಿಡದಿಯಲ್ಲಿ ಈಗಲ್‍ಟನ್ ರೆಸಾರ್ಟ್ ಒತ್ತುವರಿ ಮಾಡಿಕೊಂಡಿದ್ದ ಸರ್ಕಾರಿ ಗೋಮಾಳ ಒತ್ತುವರಿ ತೆರವು ಮಾಡಿ ಜಿಲ್ಲಾಡಳಿತ ವಶಕ್ಕೆ ಪಡೆದುಕೊಂಡಿದೆ. ಗಾಲ್ಫ್ ಕೋರ್ಟ್ ಕೂಡ ಈ ಸ್ಥಳದಲ್ಲಿದೆ. ಸಮತಟ್ಟಾಗಿರುವ ಈ ವಿಶಾಲ ಪ್ರದೇಶ ಕ್ರೀಡಾ ಸಮುಚ್ಚಯ ನಿರ್ಮಾಣಕ್ಕೆ ಯೋಗ್ಯವಾಗಿದೆ. ಬೆಂಗಳೂರಿಗೂ ಈ ಪ್ರದೇಶ ಸಮೀಪದಲ್ಲಿದೆ. ಆದ್ದರಿಂದ 77 ಎಕರೆ 18 ಗುಂಟೆ ಈ ಪ್ರದೇಶವನ್ನು ಕ್ರೀಡಾ ಇಲಾಖೆಗೆ ಹಸ್ತಾಂತರಿಸಿ ಎಂದು ನಾರಾಯಣಗೌಡ ಅವರು ಬಸವರಾಜ ಬೊಮ್ಮಾಯಿ ಹಾಗೂ ಆರ್.ಅಶೋಕ್ ಅವರಿಗೆ ಪತ್ರದ ಮೂಲಕ ಬೇಡಿಕೆ ಇಟ್ಟಿದ್ದಾರೆ. ಇದನ್ನೂ ಓದಿ: ಬಾಳೆಎಲೆಯಲ್ಲಿ ಮೂಡಿದ ಮೋದಿ ಚಿತ್ರ

    ಪ್ರಸ್ತುತ ಬೆಂಗಳೂರಿನ ಕಂಠೀರವ ಕ್ರೀಡಾಂಗಣವನ್ನು ಆಧುನೀಕರಣ ಮಾಡಲಾಗುತ್ತಿದೆ. ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಕ್ರೀಡಾಂಗಣ ಉನ್ನತೀಕರಿಸಲಾಗುತ್ತಿದೆ. ಆದರೆ ಬೆಂಗಳೂರಿಗೆ ಅತ್ಯಂತ ಸಮೀಪವಿರುವ ಇಷ್ಟೊಂದು ವಿಶಾಲ ಪ್ರದೇಶದಲ್ಲಿ ಬೃಹತ್ತಾದ ಕ್ರೀಡಾ ಸಮುಚ್ಚಯ ನಿರ್ಮಿಸಿದರೆ ಕ್ರೀಡಾಪಟುಗಳಿಗೆ ಹೆಚ್ಚು ಅನುಕೂಲವಾಗಲಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣವೂ ಸಮೀಪದಲ್ಲೇ ಇದೆ. ಬೆಂಗಳೂರು ಮೈಸೂರು ನಡುವೆ ವಿಶಾಲ ರಸ್ತೆಯೂ ನಿರ್ಮಾಣವಾಗುತ್ತಿದೆ. ಇದರಿಂದಾಗಿ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟ ಆಯೋಜಿಸಲು ಈ ಸ್ಥಳ ಪ್ರಶಸ್ತವಾಗಲಿದೆ. ಆದ್ದರಿಂದ ರಾಮನಗರದ ಬಿಡದಿಯಲ್ಲಿ ಈಗಲ್‍ಟನ್ ರೆಸಾರ್ಟ್ ನಿಂದ ಒತ್ತುವರಿ ತೆರವು ಮಾಡಿರುವ ಸರ್ಕಾರಿ ಗೋಮಾಳವನ್ನು ಕ್ರೀಡಾ ಇಲಾಖೆಗೆ ಹಸ್ತಾಂತರಿಸಿ ಕ್ರೀಡೆಗೆ ಪ್ರೋತ್ಸಾಹಿಸಿ ಎಂದು ನಾರಾಯಣಗೌಡ ಅವರು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ವಿಜಯೇಂದ್ರ ಯಾವುದೇ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ: ಬಿಎಸ್‍ವೈ

  • ಶಾಸಕ ಗಣೇಶ್ ಹಲ್ಲೆ ವಿಚಾರ ನನ್ನ ಇಲಾಖೆ ವ್ಯಾಪ್ತಿಗೆ ಬರಲ್ಲ- ಸಚಿವ ಕೆಜೆ ಜಾರ್ಜ್

    ಶಾಸಕ ಗಣೇಶ್ ಹಲ್ಲೆ ವಿಚಾರ ನನ್ನ ಇಲಾಖೆ ವ್ಯಾಪ್ತಿಗೆ ಬರಲ್ಲ- ಸಚಿವ ಕೆಜೆ ಜಾರ್ಜ್

    ಚಿಕ್ಕಮಗಳೂರು: ರೆಸಾರ್ಟ್ ರಾಜಕೀಯ ಮುಗಿಸಿ ಬಿಜೆಪಿಯವರು ಬರ ಅಧ್ಯಯನಕ್ಕೆ ಮುಂದಾದ ಬೆನ್ನಲ್ಲೇ ಕಾಂಗ್ರೆಸ್ ನಾಯಕ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ಕೂಡ ಬರ ಅಧ್ಯಯನ ಆರಂಭಿಸಿದ್ದಾರೆ.

    ಸಚಿವರು ಇಂದು ಕಡೂರು ತಾಲೂಕಿನ ಕೆ.ಬಿದರೆ ಗ್ರಾಮದಲ್ಲಿ ಬರ ಅಧ್ಯಯನ ನಡೆಸಿದರು. ಈ ವೇಳೆ ಈಗಲ್‍ಗನ್ ರೆಸಾರ್ಟಿನಲ್ಲಿ ಕಾಂಗ್ರೆಸ್ ಶಾಸಕರ ಹಲ್ಲೆ ಪ್ರಕರಣ ವಿಚಾರವಾಗಿ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದರು. ಇದನ್ನು ಓದಿ: ಕಂಪ್ಲಿ ಗಣೇಶ್ ಕಣ್ಣಾ ಮುಚ್ಚಾಲೆ ಆಟ – ಮುಂಬೈನಲ್ಲಿ ಪೊಲೀಸರಿಗೆ ಚಳ್ಳೆಹಣ್ಣು!

    ಗಣೇಶ್ ಹಲ್ಲೆ ಮಾಡಿರುವ ವಿಚಾರ ನನ್ನ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ. ನಾನು ಕೈಗಾರಿಕಾ ಮಂತ್ರಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತವಾರಿ ಸಚಿವ ಅಷ್ಟೇ. ಇದಕ್ಕೆ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಹಾಗೂ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಉತ್ತರ ಕೊಡುತ್ತಾರೆ ಎಂದು ಹಾರಿಕೆ ಉತ್ತರ ನೀಡಿದರು.

    ನೀವು ಪ್ರಕರಣದ ವಿಚಾರಣೆಯ ಕಮಿಟಿಯಲ್ಲಿ ಇರುವುದಿಂದ ಕೇಳಿದ್ವಿ ಅಂತಾ ಮಾಧ್ಯಮದವರು ಹೇಳುತ್ತಿದ್ದಂತೆ, ನಾನು ಕಮಿಟಿಯ ಸದಸ್ಯನಾಗಿ ನಿಮಗೆ ಎಲ್ಲವನ್ನೂ ಹೇಳುವುದಕ್ಕೆ ಆಗುತ್ತಾ? ಇಲ್ಲಿ ನಿಂತು ಎಲ್ಲವನ್ನೂ ಹೇಳಲಿಕ್ಕೆ ಆಗುವುದಿಲ್ಲ. ವಿಚಾರಣೆ ನಡೆಸಿ, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಾರಿಕೊಂಡರು.

    ಈ ವೇಳೆ ಅಲ್ಲಿದ್ದ ಕೆಲ ಸ್ಥಳೀಯರು, ನೀವು ಬಂದು, ನೋಡಿ ವಾಪಾಸ್ ಹೋಗಿಬಿಡುತ್ತೀರಿ. ಆದರೆ ನಿಮ್ಮಿಂದ ನಮಗೆ ಯಾವುದೇ ಪ್ರಯೋಜನವಾಗಿಲ್ಲ. ಇಲ್ಲಿ ಹನಿ ನೀರಿಗೂ ಹಾಹಾಕಾರವಿದೆ. ನಿಮ್ಮ ಅಧ್ಯಯನದ ಪ್ರವಾಸಕ್ಕಿಂತ ನಮಗೆ ಶಾಶ್ವತ ನೀರಾವರಿ ಯೋಜನೆ ಬೇಕು ಎಂದು ಆಗ್ರಹಿಸಿದರು. ಮಧ್ಯಾಹ್ನ 1 ಗಂಟೆಗೆ ಬಂದು ಬರ ಅಧ್ಯಯನ ನಡೆಸಿದ ಸಚಿವರು ಎರಡು ಗಂಟೆಗೆ ವಾಪಾಸ್ ನಡೆದರು. ಸಚಿವರ ಅಲ್ಲಿಂದ ಹೋಗುತ್ತಿದ್ದಂತೆ ಕೆಲವರು, ಇವರು ಕಾಟಾಚಾರಕ್ಕೆ ಭೇಟಿ ನೀಡಿದ್ದಾರೆ ಅಷ್ಟೇ ಎಂದು ಆಕ್ರೋಶ ಹೊರ ಹಾಕಿದರು.

    https://www.youtube.com/watch?v=F1q42m7oBuA

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಈಗಲ್ಟನ್ ರೆಸಾರ್ಟಿನಲ್ಲಿ ರಾತ್ರಿ ನಡೆದಿದ್ದೇನು? ಎಳೆ ಎಳೆಯಾಗಿ ಬಿಚ್ಚಿಟ್ಟ ಶಾಸಕ ಗಣೇಶ್

    ಈಗಲ್ಟನ್ ರೆಸಾರ್ಟಿನಲ್ಲಿ ರಾತ್ರಿ ನಡೆದಿದ್ದೇನು? ಎಳೆ ಎಳೆಯಾಗಿ ಬಿಚ್ಚಿಟ್ಟ ಶಾಸಕ ಗಣೇಶ್

    ಬೆಂಗಳೂರು: ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿ ಬಂಧನ ಭಯದಿಂದ ಕಂಪ್ಲಿ ಶಾಸಕ ಗನೇಶ್ ನಾಪತ್ತೆಯಾಗಿದ್ದಾರೆ. ಆದರೆ ಅಂದು ಈಗಲ್ಟನ್ ರೆಸಾರ್ಟಿನಲ್ಲಿ ಏನೆಲ್ಲ ಘಟನೆ ನಡೆಯಿತು? ನಾನು ಹೊಡೆಯಲು ಪ್ರೇರಣೆಯಾದ ಘಟನೆ ಏನು ಎನ್ನುವುದನ್ನು ಗಣೇಶ್ ಅವರು ಎಳೆ ಎಳೆಯಾಗಿ ವಿವರಿಸಿ ಫೇಸ್‍ಬುಕ್ ಪೋಸ್ಟ್‍ನಲ್ಲಿ ಬರೆದುಕೊಂಡಿದ್ದಾರೆ.

    ಈಗಲ್ಟನ್ ರೆಸಾರ್ಟಿನಲ್ಲಿ ಆನಂದ್ ಸಿಂಗ್ ಅವರೊಂದಿಗೆ ಪಾರ್ಟಿ ಮಾಡಿದ್ದು ನಿಜ ಎಂದು ಒಪ್ಪಿಕೊಂಡಿದ್ದು, ಪಾರ್ಟಿ ನಡೆದ ಬಳಿಕ ಏನೆಲ್ಲಾ ಆಯ್ತು ಎನ್ನುವುದರ ಬಗ್ಗೆ ಕಂಪ್ಲಿ ಕಾಂಗ್ರೆಸ್ ಫೇಸ್ ಬುಕ್ ಪೇಜ್ ನಲ್ಲಿ ವಿವರಿಸಿ ಮಾಹಿತಿ ನೀಡಿದ್ದಾರೆ.

    ಫೇಸ್‍ಬುಕ್ ಪೋಸ್ಟ್ ನಲ್ಲೇನಿದೆ?
    ಕಂಪ್ಲಿ ವಿಧಾನಸಭಾ ಕ್ಷೇತ್ರದ ಜನತೆಗೆ ನನ್ನ ನಮಸ್ಕಾರಗಳು. ಅಂದು ಏನು ಘಟನೆಗಳು ನಡೆದಿದ್ದವು ಅವು ಎಲ್ಲ ಸುಳ್ಳು. ಈಗಲ್ಟನ್ ರೆಸಾರ್ಟ್ ನಲ್ಲಿ ನಾನು ಹಾಗೂ ಆನಂದ್ ಸಿಂಗ್ ಪಾರ್ಟಿ ಮಾಡಿದ್ದು ನಿಜ. ಪಾರ್ಟಿ ಮಾಡಿದ ನಂತರ ಆನಂದ್ ಸಿಂಗ್ ಅವರೇ ರೂಮ್ ಗೆ ಕರೆದುಕೊಂಡು ಹೋಗಿ ರಾತ್ರಿ 11.00 ಗಂಟೆ ಇಂದ 2.30 ಗಂಟೆವರೆಗೆ ಕೂರಿಸಿಕೊಂಡು ಮಾತನಾಡಿದರು.

    “ಸಾಮಾನ್ಯ ವ್ಯಕ್ತಿಯಾದ ನೀನು ಎಂಎಲ್‍ಎ ಆಗಿದ್ದು ನಾನು ಸಹಿಸುವುದಿಲ್ಲ. ನನ್ನ ಎದುರು ಕುಳಿತು ಕೊಳ್ಳುವ ಶಕ್ತಿ ನಿನಗೆ ಬಂತ ಮಗನೇ, ಕೆಳಗೆ ಕುಳಿತು ಕೊಳ್ಳುವ ಮಗನೇ” ಅಂತ ನನಗೆ ನಿಂದನೆ ಮಾಡುತ್ತಲೇ ಮಾತನಾಡಿದ್ದರು. “ಕಳೆದ ಚುನಾವಣೆಯಲ್ಲಿ ನೀನು ಸ್ವತಂತ್ರ ಅಭ್ಯರ್ಥಿಯಾಗಿ ನಿಲ್ಲಲು ಹಾಗೂ ಸೋಲಲು ನಾನೇ ಕಾರಣ. 81 ರೆಹಮಾನ್ ಸಾಬ್‍ನಿಗೆ ನಿನ್ನ ಅಪ್ಪನ ಹತ್ತಿರ ಕಳುಹಿಸಿ ಸ್ವತಂತ್ರ ಅಭ್ಯರ್ಥಿಯಾಗಿ ನಿಲ್ಲಲು ನಾನೇ ಕಾರಣ. ಈ ರೀತಿ ನೀನು ಆರ್ಥಿಕವಾಗಿ ಕುಗ್ಗಿ ಭಿಕ್ಷೆ ಬೇಡುವ ಹಾಗೆ ಮಾಡಿದೆ. ತುಕರಾಂಗೆ ಮಿನಿಸ್ಟರ್ ಮಾಡಲು ದೆಹಲಿಗೆ ಹೋಗುತ್ತೀಯಾ ಸೂ…! ಮಗನೇ” ಎಂದು ಹೇಳಿದರು.

    “ಎಂ.ಪಿ ರವೀಂದ್ರ ರವರ ಜಾಗ 2 ಕೋಟಿ ರೂ.ಗೆ ತೆಗೆದುಕೊಂಡು ಹಗರಿಬೊಮ್ಮನಹಳ್ಳಿಯಲ್ಲಿ ಆಫೀಸ್ ಮಾಡಿ ಭೀಮಾಗೆ ಸೋಲಿಸಲು ಪಣ ತೊಟ್ಟಿದೆ, ಆದರೆ ಅದು ಆಗಲಿಲ್ಲ. ಈಗ ಕಂಪ್ಲಿಯಲ್ಲಿ ಆಫೀಸ್ ತೆಗೆದು ನಿನ್ನನ್ನು ಮುಗಿಸುತ್ತೇನೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಾಲ್ಮೀಕಿ ಸಮುದಾಯ ನನ್ನ ವಿರುದ್ಧ ಇದ್ದರೂ, ನನ್ನ ಒಂದು ಕೂದಲು ಕೀಳಲು ಅವರಿಂದ ಆಗಲಿಲ್ಲ. ಆದರು ನಾನು ಗೆದ್ದು ಬಂದೆ, ಕೀಳು ಜಾತಿ ನೀನು ಅದಕ್ಕೆ ಸೇರಿದವನು” ಎಂದು ಕೆಳಗೆ ಕೂತಿದ್ದ ನನ್ನ ಎದೆಗೆ ಜೋರಾಗಿ ಕಾಲಿನಿಂದ ಹೊಡೆದರು. ನನ್ನ ಜಾತಿ ಬಗ್ಗೆ ಕೆಟ್ಟದಾಗಿ ಮಾತನಾಡಿದರು ಎದೆಗೆ ನೋವು ಆಗಿದ್ದರಿಂದ ನಾನು ನಿಧಾನವಾಗಿ ರೂಮ್ ಗೆ ಹೋದೆ.

    ಆನಂದ್ ಸಿಂಗ್ ಮತ್ತೆ ರೂಮಿನವರೆಗೂ ಬಂದು ಮಡಿಕೆ ಎತ್ತಿ ಹೊಡೆದು,”ನನ್ನ ರೂಮಿನ ಬಾಗಿಲು ತಟ್ಟಿ ಬಾಲೆ ಸೂ.. ಮಗನೇ ಭೀಮಾನ ರೂಂ ತೋರಿಸ ಬಾ. ಎಲ್ಲರ ಮುಂದೆ ಸೂ.. ಮಗ ಎಂದಿದ್ದಾನೆ ಅವನನ್ನು ಬಿಡಲ್ಲ” ಎಂದರು. ನನ್ನನ್ನು ಬಲವಂತವಾಗಿ ಭೀಮಾ ನಾಯ್ಕ್ ರೂಂ ಗೆ ಕರೆದುಕೊಂಡು ಹೋದರು. ಅಲ್ಲಿ,”ಲೇ ಭೀಮಾ ನೀನು ಲೇ ಸೂ… ಮಗ ಸಿಪಿಎಲ್ ಮೀಟಿಂಗ್‍ನಲ್ಲಿ ಎಲ್ಲರ ಮುಂದೆ ನನಗೆ ಸೂ.. ಮಗ ಅಂತ ಹೇಳಿದಿ, ಎಲ್ಲರ ಮುಂದೆ ನನ್ನ ಕಾಲಿಗೆ ಬಿದ್ದು ಕ್ಷಮೆ ಕೇಳು ಮಗನೇ” ಅಂತ ಭೀಮಾ ನಾಯ್ಕ್ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾಗ ನಾನು ಮಧ್ಯೆ ಪ್ರವೇಶಿಸಿ ಇಬ್ಬರ ನಡುವೆ ಸಾಂತ್ವನ ಮಾಡಿದೆ. ನಂತರ ಭೀಮಾನ ಕಥೆ ಮುಗಿಯಿತು. ಈಗ “ನೀನು ಲೇ ಸೂ….! ಮಗ ಗಣೇಶ” ಎಂದರು.

    ನನ್ನ ಪರಿವಾರ ನನ್ನ ಹೆಂಡತಿ, ತಾಯಿ ಅಕ್ಕನ ಮೇಲೆ ಕೆಟ್ಟದಾಗಿ ಮಾತನಾಡಿದರು. ಅವಾಚ್ಯ ಶಬ್ದಗಳಿಂದ ಬೈದರು. ಜಾತಿ ನಿಂದನೆ ಮಾಡಿದರು ನನ್ನ ಶರ್ಟ್ ಹರಿದು ನನ್ನ ಬಲಗೈ ಹೆಬ್ಬೆರಳನ್ನು ತಿರುಗಿಸಿ ಫ್ಯಾಕ್ಚರ್ ಮಾಡಿ ಬೆಡ್ ಲೈಟ್ ತೆಗದು ಕೊಂಡು ನನ್ನ ಬೆನ್ನಿಗೆ ಹೊಡೆದು ಹಲ್ಲೆ ಮಾಡಿದರು. ಅವರು ನನ್ನ ಮೇಲೆ ಮೊದಲು ಕೈ ಎತ್ತಿದಕ್ಕೆ ನಾನು ಅವರ ಮೇಲೆ ಕೈ ಎತ್ತಿದೆ. ಇದಕ್ಕೆ ಪ್ರತ್ಯಕ್ಷ ಸಾಕ್ಷಿ ಭೀಮಾ ನಾಯ್ಕ, ವಿಶ್ವ ಹಾಗೂ ಶರಣಪ್ಪ. ಈ ಎಲ್ಲಾ ವಿಷಯ ಎಲ್ಲಾ ಮುಖಂಡರಿಗೂ ತಿಳಿದಿದೆ. ಮುಖಂಡರು ಇಬ್ಬರ ತಪ್ಪಿದೆ. ಇಬ್ಬರೂ ಪಕ್ಷದ ಮುಜುಗರಕ್ಕೆ ಕಾರಣ ಆಗಿದ್ದೀರಿ ಎಂದು ಹೇಳಿ ಈಗಲ್ಟನ್ ರೆಸಾರ್ಟ್ ನಲ್ಲಿ ವೈದ್ಯರನ್ನು ಕರಿಸಿ ನನಗೆ ಪ್ರಥಮ ಚಿಕಿತ್ಸೆ ಮಾಡಿದರು.

    ನನ್ನ ಜಾತಿ ಬಗ್ಗೆ ಕೆಟ್ಟದಾಗಿ ಮಾತಾಡಿದ್ದರೆ ಆನಂದ ಸಿಂಗ್‍ಗೆ ಹೊಡೆಯ ಬೇಕು ಎಂಬ ಉದ್ದೇಶ ನನ್ನಲ್ಲಿ ಇಲ್ಲ. ಹಾಗಾದರೆ ನಾನು ಅವರ ಹತ್ತಿರ ರೂಂ ನಲ್ಲಿ 2 ರಿಂದ 3 ತಾಸು ಇದ್ದಾಗ ಮಾಡಬಹುದಾಗಿತ್ತು. ಯಾವುದೇ ಉದ್ದೇಶ ನನ್ನಲ್ಲಿ ಇಲ್ಲ. ರಾಜಕೀಯವಾಗಿ ಮುಗಿಸಲು ಆನಂದ್ ಸಿಂಗ್ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ನನ್ನ ಹಾಗೂ ನನ್ನ ಕುಟುಂಬದವರಿಗೆ ಆನಂದ್ ಸಿಂಗ್ ಹಾಗೂ ಸಂದೀಪ್ ಸಿಂಗ್ ರಿಂದ ಜೀವ ಬೆದರಿಕೆ ಇದೆ. ಕಂಪ್ಲಿ ಕ್ಷೇತ್ರದ ಜನರಿಗೆ ನನ್ನ ಮನವಿ. ಕಂಪ್ಲಿ ಕ್ಷೇತ್ರದ ಜನ ಸುಳ್ಳು ಸುದ್ದಿಗಳನ್ನು ನಂಬಬಾರದು. ನಾನು ಕಂಪ್ಲಿ ಬಿಟ್ಟು ಯಾವ ಕ್ಷೇತ್ರಕ್ಕೂ ಹೋಗುವುದಿಲ್ಲ ಕಂಪ್ಲಿ ಕಲ್ಯಾಣವೇ ನನ್ನ ಗುರಿ ಎಂದು ಪೇಜ್ ನಲ್ಲಿ ಬರೆಯಲಾಗಿದೆ.


    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಹುಲ್ ಗಾಂಧಿ ಫುಲ್ ಗರಂ: ಆನಂದ್ ಸಿಂಗ್ ಕುಟುಂಬಸ್ಥರ ಮನವೊಲಿಕೆಗೆ ಕೈ ನಾಯಕರಿಂದ ಸರ್ಕಸ್

    ರಾಹುಲ್ ಗಾಂಧಿ ಫುಲ್ ಗರಂ: ಆನಂದ್ ಸಿಂಗ್ ಕುಟುಂಬಸ್ಥರ ಮನವೊಲಿಕೆಗೆ ಕೈ ನಾಯಕರಿಂದ ಸರ್ಕಸ್

    ಬೆಂಗಳೂರು: ಆನಂದ್ ಸಿಂಗ್ ಮೇಲೆ ಮದ್ಯದ ಬಾಟಲಿಯಿಂದ ಹಲ್ಲೆ ನಡೆಸಿ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಮರ್ಯಾದೆ ಹರಾಜು ಹಾಕಿದ ಕಂಪ್ಲಿ ಶಾಸಕ ಗಣೇಶ್ ಪಕ್ಷದಿಂದಲೇ ಉಚ್ಚಾಟನೆಯಾಗುವ ಸಾಧ್ಯತೆಯಿದೆ.

    ರೆಸಾರ್ಟಿನಲ್ಲಿ ಇಬ್ಬರು ಕಿತ್ತಾಡಿದ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫುಲ್ ಗರಂ ಆಗಿದ್ದು, ಶಿಸ್ತು ಕ್ರಮ ಕೈಗೊಳ್ಳಿ ಎಂದು ಹಿರಿಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಕಾಂಗ್ರೆಸ್ ಪಕ್ಷದದಿಂದ ಹಲ್ಲೆಕೋರ ಶಾಸಕ ಗಣೇಶ್ ಉಚ್ಛಾಟನೆಯಾಗುವ ಸಾಧ್ಯತೆಯಿದ್ದು, ಇಂದು ಅಥವಾ ನಾಳೆ ಕಾಂಗ್ರೆಸ್ ಪಕ್ಷದಿಂದ ಅಧಿಕೃತ ನಿರ್ಧಾರ ಪ್ರಕಟವಾಗಲಿದೆ. ಆಪರೇಷನ್ ಕಮಲದ ಮಧ್ಯೆ ಶಾಸಕರ ಕೊರತೆ ಇರುವಾಗ ಉಚ್ಚಾಟನೆಯ ನಿರ್ಧಾರ ಕೈಗೊಳ್ಳುತ್ತಾ ಎನ್ನುವ ಪ್ರಶ್ನೆ ಎದುರಾಗಿದ್ದು ಯಾವ ಶಿಸ್ತು ಕ್ರಮ ಕೈಗೊಳ್ಳುತ್ತದೆ ಎನ್ನುವ ಕುತೂಹಲ ಹೆಚ್ಚಾಗಿದೆ.

    ಇತ್ತ ಗಣೇಶ್ ವಿರುದ್ಧ ಕ್ರಮ ಕೈಗೊಳ್ಳಿ ಅಥವಾ ದೂರಿಗೆ ಅವಕಾಶ ಕೊಡಿ ಎಂದು ಆನಂದ್ ಸಿಂಗ್ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ. ಕುಟುಂಬಸ್ಥರು ಪಟ್ಟು ಹಿಡಿಯುತ್ತಿದ್ದಂತೆ ಅವರ ಮನವೊಲಿಕೆಗೆ ಕೈ ನಾಯಕರು ಭಾನುವಾರ  ರಾತ್ರಿಯಿಂದ ಸರ್ಕಸ್ ಆರಂಭಿಸಿದ್ದಾರೆ.

    ದೂರು, ತನಿಖೆ ಎಂದು ಹೋದರೆ ಎಲ್ಲರಿಗೂ ಮುಜುಗರ ಆಗುತ್ತದೆ ಎಂದು ಹೇಳಿ ಅನಂದ್ ಸಿಂಗ್ ಜೊತೆ ಕಾಂಗ್ರೆಸ್ ನಾಯಕರು ಚರ್ಚಿಸಿದ್ದಾರೆ. ಆದರೆ ಅದರೆ ಕುಟುಂಬದವರು ದೂರು ದಾಖಲಿಸಲೇಬೇಕು. ಗಣೇಶ್ ಮೇಲೆ ಕಾನೂನು ರೀತಿಯ ಕ್ರಮಕ್ಕೆ ಆಗ್ರಹಿಸಿದ್ದಾರೆ. ಹೀಗಾಗಿ ಕುಟುಂಬದವರ ಮನವೊಲಿಸಲು ಕೈ ನಾಯಕರು ಮುಂದಾಗಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ತಿಳಿದುಬಂದಿದೆ.


    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರೆಸಾರ್ಟಿನಲ್ಲಿ ಗನ್ ಕಿತ್ತುಕೊಳ್ಳಲು ಗನ್ ಮ್ಯಾನ್ ಕಿವಿ ಕಚ್ಚಿ ಕಿತ್ತಾಡಿದ ಗಣೇಶ್!

    ರೆಸಾರ್ಟಿನಲ್ಲಿ ಗನ್ ಕಿತ್ತುಕೊಳ್ಳಲು ಗನ್ ಮ್ಯಾನ್ ಕಿವಿ ಕಚ್ಚಿ ಕಿತ್ತಾಡಿದ ಗಣೇಶ್!

    ಬೆಂಗಳೂರು: ಕಾಂಗ್ರೆಸ್ ಶಾಸಕರ ಈಗಲ್ ಟನ್ ರೆಸಾರ್ಟ್ ಮಾರಾಮಾರಿ ಪ್ರಕರಣ ಕ್ಷಣ ಕ್ಷಣಕ್ಕೂ ತಿರುವು ಪಡೆದುಕೊಳ್ಳುತ್ತಿದ್ದು, ಕಂಪ್ಲಿ ಶಾಸಕ ಗನ್ ಮ್ಯಾನ್ ಕಿವಿ ಕಚ್ಚಿದ್ದಾರೆ ಎನ್ನುವ ವಿಚಾರ ಪಕ್ಷದ ಮೂಲಗಳಿಂದ ಲಭ್ಯವಾಗಿದೆ.

    ಗನ್ ಮ್ಯಾನ್ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ರಹಸ್ಯವಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಗನ್ ಮ್ಯಾನ್ ಯಾವುದೇ ಠಾಣೆಗೆ ದೂರು ನೀಡಿಲ್ಲ. ಅಷ್ಟೇ ಅಲ್ಲದೆ ಈ ವಿಚಾರ ಯಾರಿಗೂ ಗೊತ್ತಾಗಂತೆ ನಾಯಕರು ಪ್ಲಾನ್ ಮಾಡಿದ್ದಾರೆ.

    ಆಗಿದ್ದೇನು?:
    ಮದ್ಯದ ಮತ್ತಿನಲ್ಲಿದ್ದ ಶಾಸಕರಾದ ಆನಂದ್ ಸಿಂಗ್ ಹಾಗೂ ಗಣೇಶ್ ಜೋರಾಗಿ ಕಿತ್ತಾಡಿಕೊಳ್ಳುತ್ತಿದ್ದರು. ಈ ವೇಳೆ ಹೊರ ನಿಂತಿದ್ದ ಗನ್ ಮ್ಯಾನ್ ಒಳಗೆ ಬಂದಿದ್ದಾನೆ. ತಕ್ಷಣವೇ ಗನ್ ಮ್ಯಾನ್ ಬಳಿಗೆ ತೆರಳಿದ ಕಂಪ್ಲಿ ಶಾಸಕ ಗಣೇಶ್ ಗನ್ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಆದರೆ ಗನ್ ನೀಡಲು ಗನ್ ಮ್ಯಾನ್ ನಿರಾಕರಿಸಿದ್ದರಿಂದ ಕೋಪಗೊಂಡ ಶಾಸಕರು ಆತನ ಕಿವಿ ಕಚ್ಚಿ, ಮುಖವನ್ನು ಪರಚಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದುಬಂದಿದೆ.  ಇದನ್ನೂ ಓದಿ: ಆನಂದ್ ಸಿಂಗ್-ಗಣೇಶ್ ನಡುವಿನ ‘ಬಾಟಲ್’ ಬ್ಯಾಟಲ್ – ರಾತ್ರಿ ನಿಜವಾಗಿ ಏನಾಯ್ತು? ಇಲ್ಲಿದೆ ಇನ್‍ಸೈಡ್ ಸ್ಟೋರಿ

    ಗನ್ ಮ್ಯಾನ್ ಮೇಲಾಗುತ್ತಿದ್ದ ಹಲ್ಲೆ ತಡೆಯಲು ಮುಂದಾದ ಆನಂದ್ ಸಿಂಗ್ ಅವರ ಮೇಲೆ ಗಣೇಶ್ ಮದ್ಯದ ಬಾಟಲ್‍ನಿಂದ ಹೊಡೆದಿದ್ದಾರೆ. ಅದೃಷ್ಟವಶಾತ್ ಗನ್ ಮ್ಯಾನ್ ಹಾಗೂ ಆನಂದ್ ಸಿಂಗ್ ಸ್ಪಲ್ಪದರಲ್ಲಿಯೇ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರೆಸಾರ್ಟಿನಲ್ಲೇ ಬಡಿದಾಡಿಕೊಂಡು ರಾಜ್ಯದ ಮಾನವನ್ನು ಹಾಳು ಮಾಡಿದ್ರು – ಆರ್. ಅಶೋಕ್

    ರೆಸಾರ್ಟಿನಲ್ಲೇ ಬಡಿದಾಡಿಕೊಂಡು ರಾಜ್ಯದ ಮಾನವನ್ನು ಹಾಳು ಮಾಡಿದ್ರು – ಆರ್. ಅಶೋಕ್

    ಬೆಂಗಳೂರು: ಕರ್ನಾಟಕ ಶಾಸಕರ ಮಾನ ಮರ್ಯಾದೆಯನ್ನು ಹರಾಜು ಹಾಕುವ ಕೆಲಸವನ್ನು ಕಾಂಗ್ರೆಸ್‍ನವರು ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

    ಕಾಂಗ್ರೆಸ್ ಶಾಸಕ ಆನಂತ್ ಸಿಂಗ್ ಮೇಲಿನ ಹಲ್ಲೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ನಾಯಕರು ಗುಂಡಾಗಿರಿ ಪ್ರವೃತ್ತಿಯನ್ನು ಮುಂದುವರಿಸಿದ್ದಾರೆ. ಜನಪ್ರತಿನಿಧಿಯಾಗಿದ್ದು ರೆಸಾರ್ಟಿನಲ್ಲಿ ಹೊಡೆದಾಡಿಕೊಂಡು ರಾಜ್ಯದ ಎಲ್ಲ ಶಾಸಕರ ಮಾನವನ್ನು ಹರಾಜು ಹಾಕಿದ್ದಾರೆ. ಜನರಿಗೆ ಶಾಸಕರ ಮೇಲಿದ್ದ ನಂಬಿಕೆ, ಗೌರವವನ್ನು ಹಾಳು ಮಾಡಿದ್ದಾರೆ. ಈ ಘಟನೆಯಿಂದ ರಾಜ್ಯ 224 ಶಾಸಕರು ತಲೆ ತಗ್ಗಿಸಿ ನಡೆಯುವಂತಾಗಿದೆ ಎಂದು ಕಿಡಿಕಾರಿದ್ದಾರೆ.

    ಬಾರ್ ನಲ್ಲಿ ಗಲಾಟೆ ಮಾಡಿದ ಪುಂಡ ಪೋಕರಿಗಳನ್ನು ಪೊಲೀಸರು ಹಿಡಿದು ಥಳಿಸಿ ಬುದ್ಧಿ ಕಲಿಸುತ್ತಾರೆ. ಆದರೆ ಈಗ ಎಲ್ಲಿ ಹೋಗಿದ್ದಾರೆ ಪೊಲೀಸರು? ಕಾಂಗ್ರೆಸ್ ನಾಯಕರು ತಮ್ಮ ಶಾಸಕರನ್ನು ರೆಸಾರ್ಟಿಗೆ ಕರೆದುಕೊಂಡು ಹೋಗಿ ಹಲ್ಲೆ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಂದರೆ ಗುಂಡಾ ಸಂಸ್ಕøತಿಯ ಪಕ್ಷ ಎನ್ನುವುದನ್ನು ಮತ್ತೊಮ್ಮೆ ಸಾಬೀತಾಗಿದೆ ಎಂದು ಆರೋಪಿಸಿದರು.

    ಆನಂದ್ ಸಿಂಗ್ ಅವರಿಗೆ ಬಾಟಲ್ ನಿಂದ ಹೊಡೆದು ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಈ ಹಿಂದೆ ಶಾಸಕ ನಲಪಾಡ್ ಪುತ್ರನ ಪ್ರಕರಣವನ್ನು ನಾವು ನೋಡಿದ್ದೇವೆ ಎಂದ ಅವರು, ಈ ಘಟನೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಕಾರಣ. ಅವರು ಶಾಸಕರ ಮಧ್ಯೆ ಬೆಂಕಿ ಹಚ್ಚಿ, ಪಕ್ಷದಲ್ಲಿ ಗುಂಪುಗಳನ್ನಾಗಿ ಮಾಡಿದರು. ಸಿಎಲ್‍ಪಿ ಸಭೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವಂತೆ ಸುಮಾರು 20 ಶಾಸಕರು ಒತ್ತಾಯ ಮಾಡಿದ್ದಾರೆ. ಇದಕ್ಕೆ ಸಿದ್ದರಾಮಯ್ಯನವರ ಕುತಂತ್ರವೇ ಕಾರಣ ಎಂದು ದೂರಿದರು.

    ಆನಂದ್ ಸಿಂಗ್ ಅವರಿಗೆ ಕೇವಲ ಎದೆನೋವು ಅಂತ ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಹಾಗಿದ್ದರೆ ಆನಂದ್ ಸಿಂಗ್ ಅವರನ್ನು ಹೊರಗೆ ತಂದು ತೋರಿಸಲಿ, ನಿಜವಾದ ಸತ್ಯ ಬಯಲಿಗೆ ಬರುತ್ತದೆ. ಪ್ರಕರಣವನ್ನು ಮುಚ್ಚಿ ಹಾಕುವುದು ಸರಿಯಲ್ಲ ಎಂದು ಗುಡುಗಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೈ ಶಾಸಕರು ಉಳಿದುಕೊಂಡಿರುವ ಈಗಲ್‍ಟನ್ ರೆಸಾರ್ಟಿನಿಂದ ಸರ್ಕಾರಕ್ಕೆ ಬರಬೇಕಿದೆ 982 ಕೋಟಿ ರೂ.

    ಕೈ ಶಾಸಕರು ಉಳಿದುಕೊಂಡಿರುವ ಈಗಲ್‍ಟನ್ ರೆಸಾರ್ಟಿನಿಂದ ಸರ್ಕಾರಕ್ಕೆ ಬರಬೇಕಿದೆ 982 ಕೋಟಿ ರೂ.

    – ರೆಸಾರ್ಟಿನಿಂದ ಮರಳುವಾಗ ಬಾಕಿ ಹಣ ತನ್ನಿ : ಬಿಜೆಪಿ ವ್ಯಂಗ್ಯ
    – ಅಧಿವೇಶನದಲ್ಲಿ ದಂಡ ವಸೂಲಿ ಮಾಡ್ತೀವಿ ಎಂದಿದ್ದ ದೇಶಪಾಂಡೆ
    – ಸರ್ಕಾರಕ್ಕೆ ರೆಸಾರ್ಟ್ ಮೇಲೆ ಇಷ್ಟೊಂದು ಅಕ್ಕರೆ ಯಾಕೆ: ಸುರೇಶ್ ಕುಮಾರ್ ಪ್ರಶ್ನೆ

    ಬೆಂಗಳೂರು: ನೀವು ಉಳಿದುಕೊಂಡಿರುವ ರೆಸಾರ್ಟ್ ಸರ್ಕಾರಕ್ಕೆ ನೀಡಬೇಕಾದ 982 ಕೋಟಿ ರೂ. ದಂಡವನ್ನು ಬಾಕಿ ಉಳಿಸಿಕೊಂಡಿದೆ. ಅಲ್ಲಿಂದ ನೀವು ವಾಪಾಸ್ ಬರುವಾಗ ಹಣವನ್ನು ಪಡೆದುಕೊಂಡು ಬನ್ನಿ ಎಂದು ಬಿಜೆಪಿ ಟ್ವೀಟ್ ಮೂಲಕ ಕಾಂಗ್ರೆಸ್ ನಾಯಕರ ಕಾಲೆಳೆದಿದೆ.

    ಕಾಂಗ್ರೆಸ್‍ನ ಮರ್ಯಾದಾ ಪುರುಷೋತ್ತಮರಾದ ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಈಗಲ್ ಟನ್ ರೆಸಾರ್ಟ್ ಗೆ ಹೋಗಿದ್ದಾರೆ. ಸರ್ಕಾರಕ್ಕೆ ರೆಸಾರ್ಟ್ ಪಾವತಿಸಬೇಕಾದ ದಂಡದ ಹಣವನ್ನು ತಂದರೆ ಅದನ್ನು ರೈತರ ಸಾಲ ಮನ್ನಾಕ್ಕೆ ಬಳಸಬಹುದು ಎಂದು ಬಿಜೆಪಿ ವ್ಯಂಗ್ಯವಾಡಿದೆ.

    ಏನಿದು ಪ್ರಕರಣ?:
    ಬಿಡದಿ ಬಳಿ ಇರುವ ಈಗಲ್‍ಟನ್ ರೆಸಾರ್ಟ್ 77 ಎಕರೆ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದಕ್ಕೆ ರಾಜ್ಯ ಸರ್ಕಾರ ಬರೋಬ್ಬರಿ 982 ಕೋಟಿ ರೂ. ದಂಡ ಹಾಕಿತ್ತು. ಸುಪ್ರೀಂಕೋರ್ಟ್ ಮಾರ್ಗದರ್ಶನದಂತೆ ಪೆನಾಲ್ಟಿ ಹಾಕಲು ಸಿದ್ದರಾಮಯ್ಯ ಸರ್ಕಾರದ ಕ್ಯಾಬಿನೆಟ್ ತೀರ್ಮಾನಿಸಿತ್ತು. 982 ಕೋಟಿ ರೂ. ದಂಡ ಕಟ್ಟಬೇಕು ಇಲ್ಲದೇ ಇದ್ದರೆ 77 ಎಕ್ರೆ ಭೂಮಿಯನ್ನು ಸರ್ಕಾರಕ್ಕೆ ನೀಡಬೇಕು ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ಈ ಹಿಂದೆ ತಿಳಿಸಿದ್ದರು. ಕ್ಯಾಬಿನೆಟ್ ತೀರ್ಮಾನ ಕೈಗೊಂಡು ಪೆನಾಲ್ಟಿ ವಿಧಿಸಿದ ಬೆನ್ನಲ್ಲೇ ರೆಸಾರ್ಟಿಗೆ ಗುಜರಾತ್‍ನ 42 ಜನ ಕಾಂಗ್ರೆಸ್ ಶಾಸಕರು ವಾಸ್ತವ್ಯ ಹೂಡಿದ್ದರು.

    2012ರಲ್ಲೂ ಬಿಜೆಪಿ ಸರ್ಕಾರ ಇದೇ ರೆಸಾರ್ಟ್ ನ 72 ಎಕರೆ ಸಕ್ರಮಕ್ಕೆ 82 ಕೋಟಿ ರೂ. ಪೆನಾಲ್ಟಿ ಹಾಕಿತ್ತು. ಬಳಿಕ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಆಂಧ್ರಪ್ರದೇಶದ ಉದ್ಯಮಿ ಮೇದಾ ಅಶೋಕ್‍ಗೆ ಈ ರೆಸಾರ್ಟ್ ಸೇರಿದ್ದು, 2000ನೇ ಇಸ್ವಿಯಲ್ಲಿ ರೆಸಾರ್ಟ್ ನಿರ್ಮಾಣಗೊಂಡಿದೆ. 2013ರಿಂದ ಅವರ ಮಕ್ಕಳಾದ ಮೇದಾ ಕಿರಣ್ ಕುಮಾರ್, ಮೇದಾ ಚೇತನ್ ಅವರು ರೆಸಾರ್ಟ್ ನಡೆಸುತ್ತಿದ್ದಾರೆ. ವಿಶೇಷವಾಗಿ 2006 ರಲ್ಲಿ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗುವಾಗ ಇದೇ ರೆಸಾರ್ಟ್ ನಲ್ಲಿ ಜೆಡಿಎಸ್ ಶಾಸಕರು ತಂಗಿದ್ದರು.

    ಸುರೇಶ್ ಕುಮಾರ್ ಪೋಸ್ಟ್ : ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಈಗಲ್ ಟನ್ ರೆಸಾರ್ಟ್ ಕುರಿತು ಹೇಳಿಕೊಂಡಿದ್ದಾರೆ. ಈಗಲ್ ಟನ್ ರೆಸಾರ್ಟ್ ನಿಂದ ಸರ್ಕಾರಕ್ಕೆ 982 ಕೋಟಿ ರೂ, ಬರಬೇಕಾಗಿದೆ. ಕೋರ್ಟ್ ಸೂಚನೆ ಕೊಟ್ಟಿದ್ದರೂ ಇದುವರೆಗೂ ರಾಜ್ಯ ಸರ್ಕಾರ ಹಣ ವಸೂಲಾತಿ ಮಾಡಿಲ್ಲ. ಬೆಳಗಾವಿ ಅಧಿವೇಶನದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ವೇಳೆ ಹಣ ವಸೂಲಾತಿ ಮಾಡದಿರುವ ಬಗ್ಗೆ ಸದನದಲ್ಲಿ ಉತ್ತರಿಸಲು ತಡಬಡಾಯಿಸಿದ ಕಂದಾಯ ಸಚಿವ ಆರ್.ವಿ ದೇಶಪಾಂಡೆ ಅವರು, ಯಾವ ಮೂಲಾಜಿಗೂ ಈಡಾಗದೇ ರೆಸಾರ್ಟ್ ನಿಂದ 982 ಕೋಟಿ ವಸೂಲಿ ಮಾಡುತ್ತೇವೆ ಸ್ವಲ್ಪ ಸಮಯ ಕೊಡಿ ಎಂದು ಸ್ಪೀಕರ್ ಎದುರು ಮನವಿ ಮಾಡಿದ್ದರು. ಈಗ ಅದೇ ರೆಸಾರ್ಟ್ ನಲ್ಲಿ ಕಾಂಗ್ರೆಸ್ ತನ್ನ ಶಾಸಕರಿಗೆ ವಾಸ್ತವ್ಯ ಕಲ್ಪಿಸಿದೆ. ಈ ಮೂಲಕ ಮತ್ತೆ ಈಗಲ್ ಟನ್ ರೆಸಾರ್ಟ್ ಮುಲಾಜಿಗೆ ಮೈತ್ರಿ ಸರ್ಕಾರ ಬಿದ್ದಿದೆ ಎಂದು ಹೇಳಿದ್ದಾರೆ.

    ಮೈತ್ರಿ ಸರ್ಕಾರ ಮುರಿದು ಬೀಳುವ ಹಂತದಲ್ಲಿ ಕೈ ಶಾಸಕರ ರಕ್ಷಣೆಗೆ ಈಗಲ್ ಟನ್ ರೆಸಾರ್ಟ್ ಬಳಕೆ ಮಾಡಲಾಗುತ್ತಿದೆ. ಆದರೆ ಸರ್ಕಾರಿ ಜಮೀನನ್ನು ಕಬಳಿಸಿಕೊಂಡು ಈಗಲ್ ಟನ್ ರೆಸಾರ್ಟ್ ನೆಲೆ ನಿಂತಿದೆ. 77 ಎಕರೆ ಸರ್ಕಾರಿ ಜಮೀನನ್ನು ಅತಿಕ್ರಮಣ ಮಾಡಿಕೊಂಡು, 982 ಕೋಟಿ ರೂ., ದಂಡಕ್ಕೆ ಗುರಿಯಾಗಿತ್ತು. ಆದರೆ ಸರ್ಕಾರದ ಭೂಮಿ ಲಪಟಾಯಿಸಿರುವ ಈಗಲ್ ಟನ್ ರೆಸಾರ್ಟ್ ಮೇಲೆ ಏಕೆ ಕಾಂಗ್ರೆಸ್‍ಗೆ ಇಷ್ಟೊಂದು ಅಕ್ಕರೆ? ಕೈ ಶಾಸಕರ ರಕ್ಷಣೆಗೆ ಬೇರೆ ಯಾವ ರೆಸಾರ್ಟ್ ಸಿಗಲಿಲ್ಲವೇ ಎಂದು ಸುರೇಶ್ ಕುಮಾರ್ ಕುಟುಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಈಗಲ್‍ಟನ್ ರೆಸಾರ್ಟ್ ನಲ್ಲಿ ಡಿಕೆ ಸುರೇಶ್ ಭೇಟಿಯಾದ ಜೆಡಿಎಸ್ ಬಂಡಾಯ ಶಾಸಕರು

    ಈಗಲ್‍ಟನ್ ರೆಸಾರ್ಟ್ ನಲ್ಲಿ ಡಿಕೆ ಸುರೇಶ್ ಭೇಟಿಯಾದ ಜೆಡಿಎಸ್ ಬಂಡಾಯ ಶಾಸಕರು

    ರಾಮನಗರ: ಜೆಡಿಎಸ್‍ನಿಂದ ಅಮಾನಾತಾದ ಶಾಸಕರು ಕಾಂಗ್ರೆಸ್ ಸೇರೋದು ಬಹುತೇಕ ಕನ್ಫರ್ಮ್ ಆದಂತಿದೆ.

    ಶುಕ್ರವಾರ ಐಟಿ ದಾಳಿ ನಡೆದಿರುವ ಹೊತ್ತಲ್ಲೇ ಡಿಕೆಶಿ ಮನೆ ಒಳಗೆ ತೆರಳಲು ಏಳು ಮಂದಿ ಬಂಡಾಯ ಶಾಸಕರು ಪ್ರಯತ್ನಿಸಿದ್ರು. ಆದ್ರೆ ಇದಕ್ಕೆ ಐಟಿ ಅಧಿಕಾರಿಗಳು ಅವಕಾಶ ಕೊಡಲಿಲ್ಲ. ಹೀಗಾಗಿ ಅವರು ಗುಜರಾತ್ ಶಾಸಕರು ಉಳಿದುಕೊಂಡಿರುವ ಈಗಲ್ ಟನ್ ರೆಸಾರ್ಟ್‍ಗೆ ಭೇಟಿ ನೀಡಿದ್ರು. ಅಲ್ಲಿಯೇ ಬೀಡುಬಿಟ್ಟಿದ್ದ ಸಂಸದ ಡಿಕೆ ಸುರೇಶ್ ಅವರನ್ನ ಭೇಟಿ ಮಾಡಿ ಧೈರ್ಯ ತುಂಬಿದ್ರು. ಅಲ್ಲದೇ ಗುಜರಾತ್ ಶಾಸಕರಲ್ಲಿ ಮನೋಸ್ಥೈರ್ಯ ತುಂಬೋ ಕೆಲಸ ಮಾಡಿದ್ರು.

    ಬಳಿಕ ಮಾತಾಡಿದ ಜಮೀರ್ ಅಹ್ಮದ್, ನಮ್ಮನ್ನು ಯಾರೂ ಆಪರೇಷನ್ ಮಾಡಿಲ್ಲ ಅಂದ್ರು. ಮೋದಿ ಹಿಟ್ಲರ್‍ನಂತೆ ವರ್ತೀಸ್ತಿದ್ದಾರೆ. ಎಷ್ಟು ದಿನ ನಡೆಯುತ್ತೋ ನೋಡೋಣ ಅಂದ್ರು.

    ಇದೇ ವೇಳೆ ಶಾಸಕ ಚೆಲುವರಾಯಸ್ವಾಮಿ ಮಾತನಾಡಿ, ಇಲ್ಲಿ ಎಲ್ಲಾ ಕೈ ಶಾಸಕರು ಆರಾಮಾಗಿ ಇದ್ದಾರೆ. ಅಹ್ಮದ್ ಪಟೇಲ್ ಗೆಲುವು ಖಚಿತ ಅಂತ ಹೇಳಿದ್ರು.

     

  • ಈಗಲ್ ಟನ್ ನಲ್ಲಿದ್ದ ಕಾಂಗ್ರೆಸ್ ಶಾಸಕರು ಇಂದು ಶಿಫ್ಟ್?

    ಈಗಲ್ ಟನ್ ನಲ್ಲಿದ್ದ ಕಾಂಗ್ರೆಸ್ ಶಾಸಕರು ಇಂದು ಶಿಫ್ಟ್?

    ರಾಮನಗರ: ಇಲ್ಲಿನ ಬಿಡದಿ ಸಮೀಪದ ಈಗಲ್ ಟನ್ ನಲ್ಲಿ ವಾಸ್ತವ್ಯ ಹೂಡಿರುವ ಗುಜರಾತ್ ಕಾಂಗ್ರೆಸ್ ಶಾಸಕರು ಇಂದು ಪ್ರವಾಸಕ್ಕೆ ಹೊರಡುವ ಇಲ್ಲವೇ ಈಗಲ್ ಟನ್ ನಿಂದ ಬೇರೆಡೆ ಶಿಫ್ಟ್ ಆಗುವ ಲಕ್ಷಣಗಳು ದಟ್ಟವಾಗಿವೆ.

    ಬೆಳ್ಳಂಬೆಳಗ್ಗೆಯೇ ರೆಸಾರ್ಟ್ ಒಳಗೆ ಎರಡು ಐರಾವತ ಬಸ್‍ಗಳು ಪ್ರವೇಶಿಸಿವೆ. ಇದ್ರಿಂದ ಗುಜರಾತ್ ಶಾಸಕರು ರೆಸಾರ್ಟ್ ನಿಂದ ಹೊರ ಹೋಗಲಿದ್ದಾರೆ ಎನ್ನಲಾಗ್ತಿದೆ. ಶಾಸಕರೆಲ್ಲರೂ ಕೂಡಾ ಪ್ರವಾಸಕ್ಕೆ ಬೆಂಗಳೂರು ಅಥವಾ ಮಡಿಕೇರಿ ಕಡೆಗೆ ಹೋಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಆದ್ರೆ ಬಸ್ ಗಳು ರೆಸಾರ್ಟ್ ಒಳಪ್ರವೇಶ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಈಗಲ್ ಟನ್ ರೆಸಾರ್ಟ್ ಭದ್ರತಾ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಸಿನಿಮಾ ಚಿತ್ರಿಕರಣಕ್ಕೆ ಬಸ್ ಗಳು ಬಂದಿವೆ ಅಂತ ತಿಳಿಸುತ್ತಿದ್ದಾರೆ.