Tag: Ebrahim Raisi

  • ಇರಾನ್ ಅಧ್ಯಕ್ಷರ ಸಾವಿನಲ್ಲಿ ನಮ್ಮ ಕೈವಾಡವಿಲ್ಲ: ಇಸ್ರೇಲ್‌ ಸ್ಪಷ್ಟನೆ

    ಇರಾನ್ ಅಧ್ಯಕ್ಷರ ಸಾವಿನಲ್ಲಿ ನಮ್ಮ ಕೈವಾಡವಿಲ್ಲ: ಇಸ್ರೇಲ್‌ ಸ್ಪಷ್ಟನೆ

    ಟೆಲ್‌ ಅವಿವ್‌: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಸಾವಿನಲ್ಲಿ ನಮ್ಮ ದೇಶವು ಭಾಗಿಯಾಗಿಲ್ಲ ಎಂದು ಇಸ್ರೇಲ್‌ನ (Israel) ಅಧಿಕಾರಿಯೊಬ್ಬರು ಹೇಳಿದ್ದಾರೆ.

    ಭಾನುವಾರ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ (Iran President Ebrahim Risi), ವಿದೇಶಾಂಗ ಸಚಿವ ಹುಸೇನ್ ಅಮಿರಾಬ್ದೊಲ್ಲಾಹಿಯಾನ್ ಮತ್ತು ಇತರ ಆರು ಮಂದಿ ಹೆಲಿಕಾಪ್ಟರ್‌ ದುರಂತದಲ್ಲಿ ಮೃತಪಟ್ಟಿದ್ದರು. ಆದರೆ ಈ ಅವಘಡದಲ್ಲಿ ದೇಶ ಭಾಗಿಯಾಗಿರುವ ಕುರಿತು ಬರುತ್ತಿರುವ ಆರೋಪಗಳನ್ನು ಇಸ್ರೇಲಿ ಅಧಿಕಾರಿ ನಿರಾಕರಿಸಿದ್ದಾರೆ. ತಮ್ಮ ಮೇಲೆ ಆರೋಪ ಕೇಳಿಬರುತ್ತಿದ್ದಂತೆಯೇ ಇಸ್ರೇಲ್‌ ಅಧಿಕಾರಿಯೊಬ್ಬರು ಪ್ರತಿಕ್ರಿಯೆ ನೀಡಿದ್ದು, ಘಟನೆಯಲ್ಲಿ ನಮ್ಮ ಕೈವಾಡ ಇಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

    ಆರೋಪ ಏಕೆ..?: ಅಕ್ಟೋಬರ್ 7 ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ಮಾಡಿದ ನಂತರ ಕಳೆದ ಕೆಲವು ತಿಂಗಳುಗಳಲ್ಲಿ ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಅದರ ಪ್ರಾಕ್ಸಿ ಗುಂಪುಗಳನ್ನು ಒಳಗೊಂಡ ದಾಳಿಗಳು ಮತ್ತು ಸಂಘರ್ಷಗಳು ಹುಟ್ಟಿಕೊಂಡವು. ಇದು ಗಾಜಾದಲ್ಲಿ ರಕ್ತಪಾತಕ್ಕೆ ಕಾರಣವಾಯಿತು. ಇದನ್ನೂ ಓದಿ: ಜೂನ್ 28 ರಂದು ಇರಾನ್‌ನಲ್ಲಿ ಅಧ್ಯಕ್ಷೀಯ ಚುನಾವಣೆ

    ಒಟ್ಟಿನಲ್ಲಿ ಇಸ್ರೇಲ್ ವಿರುದ್ಧ ಮಧ್ಯಪ್ರಾಚ್ಯ ಭಾಗದಲ್ಲಿ ಮತ್ತೊಮ್ಮೆ ಸೇಡಿನ ಕಿಡಿ ಹೊತ್ತಿಕೊಂಡಿದೆ. ಈ ಮೂಲಕ 3ನೇ ಮಹಾಯುದ್ಧಕ್ಕೆ ಕ್ಷಣಗಣನೆ ಆರಂಭವಾಗಿದೆ. ಯಾವ ಕ್ಷಣದಲ್ಲಿ ಬೇಕಾದರೂ, ಇರಾನ್ ನೇರವಾಗಿ ಇಸ್ರೇಲ್ ವಿರುದ್ಧ ಯುದ್ಧ ಘೋಷಣೆ ಮಾಡುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ನಡುವೆ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣ ಮಾಡುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಹೀಗಾಗಿ ಇಬ್ರಾಹಿಂ ರೈಸಿ ಸೇರಿದಂತೆ ಇರಾನ್ ವಿದೇಶಾಂಗ ಸಚಿವರು ಹಾಗೂ ಅಧಿಕಾರಿಗಳ ಸಾವಿಗೆ ಇಸ್ರೇಲ್ ಕಾರಣ ಎಂಬ ಆರೋಪ ಕೇಳಿಬಂದಿತ್ತು.

  • ಜೂನ್ 28 ರಂದು ಇರಾನ್‌ನಲ್ಲಿ ಅಧ್ಯಕ್ಷೀಯ ಚುನಾವಣೆ

    ಜೂನ್ 28 ರಂದು ಇರಾನ್‌ನಲ್ಲಿ ಅಧ್ಯಕ್ಷೀಯ ಚುನಾವಣೆ

    – ದೇಶದಲ್ಲಿ 5 ದಿನ ಶೋಕಾಚರಣೆ

    ಟೆಹ್ರಾನ್:‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Risi) ಹೆಲಿಕಾಪ್ಟರ್ ಅಪಘಾತದಲ್ಲಿ (Helicopter Crash) ನಿಧನರಾದ ನಂತರ ಇರಾನ್ ದೊಡ್ಡ ಘೋಷಣೆಯೊಂದನ್ನು ಮಾಡಿದೆ. ರೈಸಿ ಅವರ ಸಾವಿನ ಬಳಿಕ ದೇಶದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಸಲು ಇರಾನ್ ನಿರ್ಧರಿಸಿದೆ. ಜೂನ್ 28 ರಂದು ಇರಾನ್‌ನಲ್ಲಿ ಅಧ್ಯಕ್ಷೀಯ ಚುನಾವಣೆ (Iran Presidential Election) ನಡೆಯಲಿದೆ ಎಂದು ಹೇಳಿಕೆ ತಿಳಿಸಿದೆ.

    ಸರ್ಕಾರ ಮತ್ತು ಸಂಸತ್ತಿನ ಮುಖ್ಯಸ್ಥರ ಸಭೆಯಲ್ಲಿ 14 ನೇ ಅಧ್ಯಕ್ಷೀಯ ಚುನಾವಣೆಯನ್ನು ಜೂನ್ 28 ರಂದು ನಡೆಸಲು ನಿರ್ಧರಿಸಲಾಯಿತು ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಈ ನಡುವೆ ಉಪಾಧ್ಯಕ್ಷ ಮೊಹಮ್ಮದ್ ಮೊಖ್ಬರ್ ಅವರನ್ನು ದೇಶದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ದೇಶದಲ್ಲಿ 5 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಲಾಗಿದೆ. ಇದನ್ನೂ ಓದಿ: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಗೌರವಾರ್ಥ ಮಂಗಳವಾರ ಭಾರತದಲ್ಲಿ ಶೋಕಾಚರಣೆ

    ಹೆಲಿಕಾಪ್ಟರ್ ಪತನ: ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್ ಭಾನುವಾರದಂದು ದಟ್ಟವಾದ ಮಂಜಿನಿಂದಾಗಿ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಪರ್ವತ ಅರಣ್ಯ ಪ್ರದೇಶದಲ್ಲಿ ಪತನಗೊಂಡಿದೆ. ಪ್ರತಿಕೂಲ ಹವಾಮಾನದಿಂದಾಗಿ, ಶೋಧ ಮತ್ತು ರಕ್ಷಣಾ ತಂಡಗಳು ಅಪಘಾತದ ಸ್ಥಳವನ್ನು ತಲುಪಲು ಸಾಕಷ್ಟು ಪ್ರಯಾಸಪಡಬೇಕಾಯಿತು. ಕೊನೆಗೆ ಸೋಮವಾರ ಮುಂಜಾನೆ ಅವಘಡ ನಡೆದ ಸ್ಥಳಕ್ಕೆ ತಲುಪಲು ಸಾಧ್ಯವಾಯಿತು. ಈ ಅಪಘಾತದಲ್ಲಿ ಇರಾನ್‌ನ ವಿದೇಶಾಂಗ ಸಚಿವರೂ ಮೃತಪಟ್ಟಿದ್ದಾರೆ.

  • ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಗೌರವಾರ್ಥ ಮಂಗಳವಾರ ಭಾರತದಲ್ಲಿ ಶೋಕಾಚರಣೆ

    ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಗೌರವಾರ್ಥ ಮಂಗಳವಾರ ಭಾರತದಲ್ಲಿ ಶೋಕಾಚರಣೆ

    ನವದೆಹಲಿ/ಟೆಹರಾನ್‌: ಹೆಲಿಕಾಪ್ಟರ್ ದುರಂತದಲ್ಲಿ (Helicopter Tragedy) ಮೃತಪಟ್ಟ ಇರಾನ್ (Iran) ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಗೌರವಾರ್ಥ ದೇಶಾದ್ಯಂತ ಮಂಗಳವಾರ ಒಂದು ದಿನದ ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಗೃಹ ಸಚಿವಾಲಯ ತಿಳಿಸಿದೆ.

    ಡಾ. ಸೆಯ್ಯದ್ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದುಲ್ಲಾಹಿಯಾನ್ ಅವರು ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾಗಿದ್ದಾರೆ. ಮೃತರ ಆತ್ಮಗಳಿಗೆ ಗೌರವ ಸೂಚಕವಾಗಿ ಮಂಗಳವಾರ ಪ್ರತಿನಿತ್ಯ ಹಾರಿಸುವ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು (National Flag) ಅರ್ಧ ಎತ್ತರದಲ್ಲಿ ಹಾರಿಸಲಾಗುತ್ತದೆ ಮತ್ತು ಯಾವುದೇ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

    ಮೃತಪಟ್ಟಿದ್ದು ಹೇಗೆ?
    ಭಾನುವಾರ ರೈಸಿ ಪಯಣಿಸ್ತಿದ್ದ ಹೆಲಿಕಾಪ್ಟರ್ ಪ್ರಕೃತಿ ವೈಪರಿತ್ಯದ ಪರಿಣಾಮ ಜೋಲ್ಫಾ ನಗರ ಬಳಿಯ ದಟ್ಟ ಕಾನನದಲ್ಲಿ ಪತನವಾಗಿದೆ. ದುರಂತದಲ್ಲಿ ಅಧ್ಯಕ್ಷ ರೈಸಿ, ವಿದೇಶಾಂಗ ಮಂತ್ರಿ ಹುಸೈನ್ ಅಮಿರ್ ಅಬ್ದುಲ್ಲಲಹಿಯನ್, ಅಜರ್‌ಬೈಜಾನ್ ಪ್ರಾಂತ್ಯದ ಗವರ್ನರ್‌ ಮಲಿಕ್ ಸೇರಿ ಹಲವರು ಮೃತಪಟ್ಟಿದ್ದಾರೆ.

    ನಿನ್ನೆಯಿಂದಲೂ ಹೆಲಿಕಾಪ್ಟರ್ ಪತನವಾದ ಸ್ಥಳದ ಹುಡುಕಾಟ ನಡೆದಿತ್ತು. ಇಂದು ಬೆಳಗ್ಗೆ ದುರಂತ ಸ್ಥಳ ಪತ್ತೆಯಾಗಿದೆ. ಪ್ರಧಾನಿ ಮೋದಿ (PM Narendra Modi) ಸೇರಿ ಜಗತ್ತಿನ ಗಣ್ಯರು ಘಟನೆಗೆ ಆಘಾತ ವ್ಯಕ್ತಪಡಿಸಿದ್ದಾರೆ.

    2021ರಲ್ಲಿ ಇರಾನ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ರೈಸಿ ಅವರನ್ನು, ಇರಾನ್‌ನ ಸುಪ್ರೀಂ ನೇತಾರ ಅಯತೊಲ್ಲಾ ಖೊಮೆನಿ ಉತ್ತರಾಧಿಕಾರಿ ಎಂದು ಪರಿಗಣಿಸಲಾಗಿತ್ತು. ಕಟ್ಟರ್ ಇಸ್ಲಾಮಿಕ್‌ವಾದಿಯಾಗಿದ್ದ ರೈಸಿ, ಬುರ್ಖಾ ಕಡ್ಡಾಯ ಮಾಡಿದ್ದರು. ಇಂಟರ್ನೆಟ್ ಬಳಕೆಗೆ ಸೆನ್ಸಾರ್ ಜಾರಿ ಮಾಡಿದ್ದರು.  ಇದನ್ನೂ ಓದಿ: 2014 ರಿಂದ 2022ರವರೆಗೂ ಆಪ್‌ಗೆ ವಿದೇಶದಿಂದ ಫಂಡಿಂಗ್‌ – ಇಡಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

    ಕೆಲವು ದಿನಗಳ ಇಸ್ರೇಲ್‌ (Israel) ಮೇಲೆ ಕ್ಷಿಪಣಿ ದಾಳಿ ನಡೆಸಿದ್ದರು. ಅಷ್ಟೇ ಅಲ್ಲದೇ ಪಾಕಿಸ್ತಾನದ (Pakistan) ಮೇಲೆ ಏರ್‌ ಸ್ಟ್ರೈಕ್‌ ಮಾಡಿಸಿದ್ದರು. ಭಾರತದ (India) ಪರ ಒಲವು ಹೊಂದಿದ್ದ ಇವರು ಮೋದಿ ಬಳಿ ತಮ್ಮ ಸಾಮರ್ಥ್ಯವನ್ನು ಬಳಸಿ ಇಸ್ರೇಲ್ ಗಾಜಾದ ಮೇಲೆ ನಡೆಸುತ್ತಿರುವ ಯುದ್ಧವನ್ನು ಕೊನೆಗೊಳಿಸುವಂತೆ ಒತ್ತಾಯಿಸಿದ್ದರು.

     

  • ಇರಾನ್ ಅಧ್ಯಕ್ಷ ರೈಸಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

    ಇರಾನ್ ಅಧ್ಯಕ್ಷ ರೈಸಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

    ನವದೆಹಲಿ/ಟೆಹ್ರಾನ್: ದುರಂತಕ್ಕೀಡಾದ ಹೆಲಿಕಾಪ್ಟರ್ ನಲ್ಲಿದ್ದ ಇರಾನ್ (Iran Helicopter Tragedy) ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Risi) ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

    ಈ ಸಂಬಂಧ ಎಕ್ಸ್ ಮಾಡಿರುವ ಪ್ರಧಾನಿ ಮೋದಿ (Narendra Modi), ಇರಾನ್‍ನ ಅಧ್ಯಕ್ಷ ಡಾ. ಸೈಯದ್ ಇಬ್ರಾಹಿಂ ರೈಸಿ ಅವರ ದುರಂತ ನಿಧನದಿಂದ ತೀವ್ರ ದುಃಖ ಮತ್ತು ಆಘಾತವಾಗಿದೆ. ಭಾರತ-ಇರಾನ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಲು ಅವರ ಕೊಡುಗೆ ಯಾವಾಗಲೂ ಸ್ಮರಣೀಯವಾಗಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು. ಇರಾನ್‍ನ ಜನರು ಈ ದುಃಖದ ಸಮಯದಲ್ಲಿ ಇರಾನ್‍ನೊಂದಿಗೆ ನಿಂತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

    ಘಟನೆ ವಿವರ: ಭಾನುವಾರ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಅಜರ್ ಬೈಜಾನ್‍ನ ಗಡಿಗೆ ಭೇಟಿ ನೀಡಿ ಹಿಂದಿರುಗುವ ಮಾರ್ಗದಲ್ಲಿ ಪರ್ವತ ಪ್ರದೇಶವನ್ನು ದಾಟುತ್ತಿದ್ದಾಗ ದಟ್ಟ ಮಂಜಿನಿಂದಾಗಿ ಪತನವಾಗಿತ್ತು.‌ ಇದನ್ನೂ ಓದಿ: ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ದುರ್ಮರಣ

    ಕಡಿದಾದ ಪರ್ವತ ಶ್ರೇಣಿಯ ಕಣಿವೆ ಭಾಗದಲ್ಲಿ ಪ್ರತಿಕೂಲ ವಾತಾವರಣದ ನಡುವೆ ಹಲವು ಗಂಟೆಗಳ ಶೋಧ ಕಾರ್ಯದ ಬಳಿಕ ಡ್ರೋನ್ ಮೂಲಕ ಪತನಗೊಂಡ ಹೆಲಿಕಾಪ್ಟರ್ ಅವಶೇಷ ಪತ್ತೆ ಮಾಡಲಾಗಿತ್ತು. ಹೆಲಿಕಾಪ್ಟರ್ ಸುಟ್ಟು ಭಸ್ಮವಾಗಿದೆ ಎಂದು ಅಧಿಕಾರಿ ತಿಳಿಸಿದ್ದರು.

    ಅಧ್ಯಕ್ಷ ರೈಸಿ ಹಾಗೂ ವಿದೇಶಾಂಗ ಸಚಿವ ಹೊಸೈನ್ ಸೇರಿದಂತೆ ಹೆಲಿಕಾಪ್ಟರ್ ನಲ್ಲಿದ್ದ ಎಲ್ಲ 9 ಮಂದಿ ಬಲಿಯಾಗಿದ್ದಾರೆ. ಈ ಹೆಲಿಕಾಪ್ಟರ್ ನಲ್ಲಿ ಪೂರ್ವ ಅಜರ್‍ಬೈಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ ರಹಮತಿ, ಮೂವರು ಇರಾನ್ ಅಧಿಕಾರಿಗಳು ಹಾಗೂ ಭದ್ರತಾ ತಂಡದ ಸದಸ್ಯರಿದ್ದು, ಎಲ್ಲರೂ ಮೃತಪಟ್ಟಿರುವುದಾಗಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

  • ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ದುರ್ಮರಣ

    ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ದುರ್ಮರಣ

    ಟೆಹ್ರಾನ್: ಭಾನುವಾರ ಪತನಗೊಂಡಿದ್ದ ಹೆಲಿಕಾಪ್ಟರ್‌ನಲ್ಲಿದ್ದ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಸಹಿತ ಎಲ್ಲರೂ ಮೃತಪಟ್ಟಿರುವುದಾಗಿ ಇರಾನ್‌ (Iran) ಮಾಧ್ಯಮಗಳು ವರದಿ ಮಾಡಿವೆ.

    ಈ ದುರ್ಘಟನೆಯಲ್ಲಿ ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ ರಹಮತಿ, ತಬ್ರಿಜ್‌ನ ಇಮಾಮ್ ಮೊಹಮ್ಮದ್ ಅಲಿ ಅಲೆಹಶೆಮ್, ಪೈಲಟ್, ಕೋ ಪೈಲಟ್, ಸಿಬ್ಬಂದಿ ಮುಖ್ಯಸ್ಥ, ಭದ್ರತಾ ಮುಖ್ಯಸ್ಥ ಹಾಗೂ ಗನ್‌ಮ್ಯಾನ್‌ಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

    ಇರಾನ್‍ನ ವಾಯುವ್ಯ ಪರ್ವತ ಪ್ರದೇಶದ ಜೋಲ್ಫಾದಲ್ಲಿ ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್ ಪತನಗೊಂಡಿತ್ತು. ಈ ಸ್ಥಳವನ್ನು ಮಾನವರಹಿತ ವಿಮಾನ (ಯುಎವಿ) ಗುರುತಿಸಿದೆ ಎಂದು ಟರ್ಕಿಯ ಸರ್ಕಾರಿ ಸುದ್ದಿ ಸಂಸ್ಥೆ ಅನಾಡೊಲು ವರದಿ ಮಾಡಿದೆ.

    ಪರ್ವತ ಶ್ರೇಣಿಗಳ ನಡುವೆ ಇಬ್ರಾಹಿಂ ರೈಸಿ ಹಾಗೂ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಹವಾಮಾನ ವೈಪ್ಯರಿತ್ಯದಿಂದ ಭಾನುವಾರ ಸಂಜೆ (ಮೆ 19) ಪತನಗೊಂಡಿತ್ತು. ಹೆಲಿಕಾಪ್ಟರ್ ಹಾರಾಟದ ಸುಮಾರು 30 ನಿಮಿಷಗಳ ನಂತರ ಸಂಪರ್ಕವನ್ನು ಕಳೆದುಕೊಂಡಿತ್ತು.

    ಇಬ್ರಾಹಿಂ ರೈಸಿ ಮತ್ತು ಅಜೆರ್ಬೈಜಾನಿ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ಅವರು ಗಡಿಭಾಗದಲ್ಲಿ ಕ್ವಿಜ್ ಖಲಾಸಿ ಅಣೆಕಟ್ಟನ್ನು ಉದ್ಘಾಟಿಸಿ ಇರಾನಿನ ನಗರ ತಬ್ರಿಜ್‍ಗೆ ಹಿಂದಿರುಗುವ ಈ ಘಟನೆ ಸಂಭವಿಸಿತ್ತು.

  • ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತನ- ಸುರಕ್ಷಿತವಾಗಿ ವಾಪಸ್‌ ಆಗಲು ಮೋದಿ ಪ್ರಾರ್ಥನೆ

    ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತನ- ಸುರಕ್ಷಿತವಾಗಿ ವಾಪಸ್‌ ಆಗಲು ಮೋದಿ ಪ್ರಾರ್ಥನೆ

    ನವದೆಹಲಿ/ಟೆಹ್ರಾನ್: ಅಜರ್‌ಬೈಜಾನ್‌ನಿಂದ ಟೆಹ್ರಾನ್‌ಗೆ ಹಿಂದಿರುಗುತ್ತಿದ್ದಾಗ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi), ವಿದೇಶಾಂಗ ಸಚಿವರು ಮತ್ತು ಇತರ ಉನ್ನತ ಶ್ರೇಣಿಯ ಅಧಿಕಾರಿಗಳನ್ನು ಒಳಗೊಂಡ ಹೆಲಿಕಾಪ್ಟರ್ ಪತನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

    ಈ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಮೋದಿ, ಇರಾನ್ ಅಧ್ಯಕ್ಷ (Iran President) ಹಾಗೂ ಇತರ ನಾಲ್ವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಸಂಬಂಧಿಸಿದ ಸುದ್ದಿ ಕೇಳಿ ಆಘಾತಗೊಂಡಿದ್ದೇನೆ. ಈ ಸಂಕಷ್ಟದ ಸಮಯದಲ್ಲಿ ನಾವು ಇರಾನ್ ಜನರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ. ಪತನವಾದ ಹೆಲಿಕಾಪ್ಟರ್‌ನಲ್ಲಿದ್ದವರು ಶೀಘ್ರವೇ ಸುರಕ್ಷಿತವಾಗಿ ವಾಪಸ್‌ ಆಗಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಇರಾನ್ ಅಧ್ಯಕ್ಷ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪರ್ವತಗಳ ಮಧ್ಯೆ ಪತನ: ವರದಿ

    ಆಗಿದ್ದೇನು..?: ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಅಜರ್‌ಬೈಜಾನ್‌ನ (Azerbaijan to Tehran) ಗಡಿಗೆ ಭೇಟಿ ನೀಡಿ ಹಿಂದಿರುಗುವ ಮಾರ್ಗದಲ್ಲಿ ದಟ್ಟ ಮಂಜಿನಲ್ಲಿ ಪರ್ವತ ಪ್ರದೇಶವನ್ನು ದಾಟುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಇಸ್ರಾನ್-ಇರಾನ್ ಸಂಘರ್ಷ ತಾರಕಕ್ಕೇರಿರುವ ಸಂದರ್ಭದಲ್ಲೇ ಈ ಘಟನೆ ನಡೆದಿದೆ. ಇಬ್ರಾಹಿಂ ರೈಸಿ, ವಿದೇಶಾಂಗ ಸಚಿವ ಅಮೀರ್ ನಾಪತ್ತೆಯಾಗಿದ್ದು, 65 ತಂಡಗಳಿಂದ ತೀವ್ರ ಶೋಧ ನಡೀತಾ ಇದೆ. ಪ್ರತಿಕೂಲ ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಕಾಪ್ಟರ್ ಪತನಗೊಂಡಿದೆ ಎನ್ನಲಾಗಿದೆ. ದೇಶದಾದ್ಯಂತ ರೈಸಿಗಾಗಿ ಪ್ರಾರ್ಥಿಸಲಾಗುತ್ತಿದೆ.

    63 ವಯಸ್ಸಿನ ರೈಸಿ 2021 ರಲ್ಲಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅಧಿಕಾರ ವಹಿಸಿಕೊಂಡಾಗಿನಿಂದ ನೈತಿಕತೆಯ ಕಾನೂನುಗಳನ್ನು ಬಿಗಿಗೊಳಿಸುವಂತೆ ಆದೇಶಿಸಿದ್ದರು. ವಿಶ್ವ ಶಕ್ತಿಗಳೊಂದಿಗೆ ಪರಮಾಣು ಮಾತುಕತೆಗಳನ್ನು ತಳ್ಳಿಹಾಕಿದ್ದರು.

  • ಇರಾನ್ ಅಧ್ಯಕ್ಷ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪರ್ವತಗಳ ಮಧ್ಯೆ ಪತನ: ವರದಿ

    ಇರಾನ್ ಅಧ್ಯಕ್ಷ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪರ್ವತಗಳ ಮಧ್ಯೆ ಪತನ: ವರದಿ

    – ದಟ್ಟ ಮಂಜಿನಲ್ಲಿ ಪರ್ವತಗಳಲ್ಲಿ ರಕ್ಷಣಾ ಕಾರ್ಯಾಚರಣೆ; ಇನ್ನೂ ಸಿಗದ ಸುಳಿವು

    ಟೆಹ್ರಾನ್: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್‌, ಪರ್ವತ ಪ್ರದೇಶವನ್ನು ದಾಟುತ್ತಿದ್ದಾಗ ದಟ್ಟ ಮಂಜಿನಿಂದಾಗಿ ಪತನವಾಗಿದೆ ಎಂದು ಇರಾನ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಅಜರ್‌ಬೈಜಾನ್‌ನ ಗಡಿಗೆ ಭೇಟಿ ನೀಡಿ ಹಿಂತಿರುಗುವ ಮಾರ್ಗದಲ್ಲಿ ದಟ್ಟ ಮಂಜಿನಲ್ಲಿ ಪರ್ವತ ಪ್ರದೇಶವನ್ನು ದಾಟುತ್ತಿದ್ದಾಗ ಅಪಘಾತಕ್ಕೀಡಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಅಪಘಾತ

    ಹೆಲಿಕಾಪ್ಟರ್ ಅಪಘಾತದಿಂದಾಗಿ ರೈಸಿ ಮತ್ತು ವಿದೇಶಾಂಗ ಸಚಿವ ಹೊಸೈನ್ ಅಮಿರಾಬ್ದೊಲ್ಲಾಹಿಯಾನ್ ಅವರು ಅಪಾಯದಲ್ಲಿದ್ದಾರೆ. ಅವರಿಗೆ ಏನೂ ಆಗಿಲ್ಲ ಎಂಬ ಭರವಸೆಯಲ್ಲಿದ್ದೇವೆ. ಆದರೆ ಅಪಘಾತದ ಸ್ಥಳದ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

    ಕೆಟ್ಟ ಹವಾಮಾನವು ರಕ್ಷಣಾ ಪ್ರಯತ್ನಗಳನ್ನು ಸಂಕೀರ್ಣಗೊಳಿಸುತ್ತಿದೆ. ಭಾರೀ ಮಂಜಿ ಇರುವ ಪರ್ವತ ಪ್ರದೇಶದಲ್ಲಿ ರಕ್ಷಣಾ ತಂಡಗಳು ಕಾಲ್ನಡಿಗೆಯಲ್ಲಿ ಹುಡುಕಾಟದಲ್ಲಿ ಕಾರ್ಯನಿರತವಾಗಿವೆ. ದೇಶದಾದ್ಯಂತ ರೈಸಿಗಾಗಿ ಪ್ರಾರ್ಥಿಸಲಾಗುತ್ತಿದೆ. ಇದನ್ನೂ ಓದಿ: ಒಂದೇ ವಾರದಲ್ಲಿ 25,900 ಕೊರೊನಾ ಪ್ರಕರಣಗಳು ಪತ್ತೆ- ಸಿಂಗಾಪುರದಲ್ಲಿ ಮಾಸ್ಕ್‌ ಕಡ್ಡಾಯ

    63 ವಯಸ್ಸಿನ ರೈಸಿ 2021 ರಲ್ಲಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅಧಿಕಾರ ವಹಿಸಿಕೊಂಡಾಗಿನಿಂದ ನೈತಿಕತೆಯ ಕಾನೂನುಗಳನ್ನು ಬಿಗಿಗೊಳಿಸುವಂತೆ ಆದೇಶಿಸಿದ್ದರು. ವಿಶ್ವ ಶಕ್ತಿಗಳೊಂದಿಗೆ ಪರಮಾಣು ಮಾತುಕತೆಗಳನ್ನು ತಳ್ಳಿಹಾಕಿದ್ದರು.

  • ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಅಪಘಾತ

    ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಅಪಘಾತ

    ತೆಹ್ರಾನ್: ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ ಇರಾನ್‌ (Iran) ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಅವರನ್ನು ಸಾಗಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

    ಹೆಲಿಕಾಪ್ಟರ್‌ನಲ್ಲಿದ್ದ ಅಧ್ಯಕ್ಷರ ಕೆಲವು ಸಹಚರರು, ಕೇಂದ್ರ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಪಘಾತದಲ್ಲಿ ಯಾವುದೇ ಪ್ರಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಒಂದೇ ವಾರದಲ್ಲಿ 25,900 ಕೊರೊನಾ ಪ್ರಕರಣಗಳು ಪತ್ತೆ- ಸಿಂಗಾಪುರದಲ್ಲಿ ಮಾಸ್ಕ್‌ ಕಡ್ಡಾಯ

    ಅಧ್ಯಕ್ಷರ ಬೆಂಗಾವಲು ಪಡೆ ಮೂರು ಹೆಲಿಕಾಪ್ಟರ್‌ಗಳನ್ನು ಒಳಗೊಂಡಿತ್ತು. ಈ ಪೈಕಿ ಎರಡು ಹೆಲಿಕಾಪ್ಟರ್‌ಗಳು ವಿವಿಧ ಸಚಿವರು ಮತ್ತು ಅಧಿಕಾರಿಗಳನ್ನು ಹೊತ್ತು ತಮ್ಮ ಗಮ್ಯಸ್ಥಾನವನ್ನು ಯಶಸ್ವಿಯಾಗಿ ತಲುಪಿವೆ. ಆದರೆ ಅಧ್ಯಕ್ಷ ರೈಸಿ ಅವರನ್ನು ಹೊತ್ತ ಹೆಲಿಕಾಪ್ಟರ್ ತೊಂದರೆ ಎದುರಿಸಿತು.

    ಅಧ್ಯಕ್ಷ ರೈಸಿ ಅವರ ಜೊತೆ ವಿದೇಶಾಂಗ ಸಚಿವ ಹೊಸೈನ್ ಅಮಿರಬ್ದೊಲ್ಲಾಹಿಯಾನ್ ಕೂಡ ಇದ್ದರು ಎನ್ನಲಾಗಿದೆ. ಪ್ರಸ್ತುತ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಪ್ರಯಾಣಿಕರ ಸ್ಥಿತಿಯ ಕುರಿತು ಹೆಚ್ಚಿನ ವಿವರ ಇನ್ನೂ ಬಹಿರಂಗವಾಗಿಲ್ಲ. ಇದನ್ನೂ ಓದಿ: ಕಿರ್ಗಿಸ್ತಾನ್‌ನಲ್ಲಿ ಭಾರತ, ಪಾಕಿಸ್ತಾನ ವಿದ್ಯಾರ್ಥಿಗಳ ಟಾರ್ಗೆಟ್‌ ಮಾಡಿ ದಾಳಿ

  • ಇರಾನ್‌ನಲ್ಲಿ ಹಿಜಬ್ ಹೋರಾಟ – 60 ಮಹಿಳೆಯರು ಸೇರಿ 700ಕ್ಕೂ ಹೆಚ್ಚು ಮಂದಿ ಅರೆಸ್ಟ್

    ಇರಾನ್‌ನಲ್ಲಿ ಹಿಜಬ್ ಹೋರಾಟ – 60 ಮಹಿಳೆಯರು ಸೇರಿ 700ಕ್ಕೂ ಹೆಚ್ಚು ಮಂದಿ ಅರೆಸ್ಟ್

    ಟೆಹರಾನ್: ಹಿಜಬ್ (Hijab) ಧರಿಸಿಲ್ಲ ಎಂದು ಬಂಧನಕ್ಕೊಳಗಾಗಿದ್ದ ಇರಾನಿ ಯುವತಿ (Iranian Women) ಬಲಿಯಾದ ಪ್ರಕರಣ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ. ಕಳೆದ ಒಂದು ವಾರದಿಂದಲೂ ಹಿಂಸಾತ್ಮಕ ಪ್ರತಿಭಟನೆ (Protest)  ನಡೆಯುತ್ತಿದ್ದು, 700ಕ್ಕೂ ಹೆಚ್ಚು ಮದಿಯನ್ನು ಪೊಲೀಸರು (Police) ಬಂಧಿಸಿದ್ದಾರೆ.

    ಒಟ್ಟು 739 ಮಂದಿಯನ್ನು ಬಂಧಿಸಿದ್ದು, ಅವರಲ್ಲಿ 60 ಮಂದಿ ಮಹಿಳೆಯರೂ ಇದ್ದಾರೆ ಎಂದು ಇರಾನ್ (Iran) ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಟಿಎಂಸಿಯ 21 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ಆದರೆ ಬಿಜೆಪಿಯಲ್ಲಿ ಆಕ್ಷೇಪವಿದೆ: ಮಿಥುನ್ ಚಕ್ರವರ್ತಿ

    ಈಗಾಗಲೇ ಪ್ರತಿಭಟನೆ ಹತ್ತಿಕ್ಕಲು ಇಂಟರ್‌ನೆಟ್ (Internet) ಸ್ಥಗಿತಗೊಳಿಸಲಾಗಿದೆ. ವಾಟ್ಸಪ್, ಇನ್‌ಸ್ಟಾಗ್ರಾಮ್ (Instagram) ಬಳಕೆಯನ್ನೂ ನಿಷೇಧಿಸಲಾಗಿದೆ.

    ಸತತ 9ನೇ ದಿನ ಇರಾನ್‌ನ ಬಹುತೇಕ ನಗರ, ಪಟ್ಟಣಗಳಲ್ಲಿ ಮಹಿಳೆಯರ ಪ್ರತಿಭಟನೆಗಳು ಮುಂದುವರಿದಿವೆ. ಸಾವಿರಾರು ಮಹಿಳೆಯರು ಹಗಲು ರಾತ್ರಿ ಎನ್ನದೇ ಕೆರ್ಮಾನ್‌ನ ಆಜಾದಿ ವೃತ್ತದಲ್ಲಿ, ಸರ್ವಾಧಿಕಾರ ನಶಿಸಲಿ. ಹಿಜಬ್ ಕಟ್ಟುಪಾಡು ನಶಿಸಲಿ ಎಂದು ಘೋಷಣೆ ಕೂಗುತ್ತಿದ್ದಾರೆ. ಕತ್ತರಿ ಹಿಡಿದು ಕೂದಲು ಕತ್ತರಿಸಿಕೊಳ್ಳುವ ಅಭಿಯಾನವನ್ನು ಮುಂದುವರಿಸಿದ್ದಾರೆ. ಹಿಜಬ್ ಸುಟ್ಟು ಆಕ್ರೋಶ ಹೊರಹಾಕುತ್ತಿದ್ದಾರೆ. ಇದನ್ನೂ ಓದಿ: ಕಂಟೆಸ್ಟೆಂಟ್ ನಂಬರ್ 1 ಆಗಿ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ ನಟ ಅರುಣ್ ಸಾಗರ್

    ಪ್ರತಿಭಟನೆ ದಮನಿಸಲು ರೈಸಿ ಸರ್ಕಾರ (Ebrahim Raisi Government) ಬಲಪ್ರಯೋಗ ಮಾಡುತ್ತಿದೆ. ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದೆ. ಈವರೆಗೆ ದೇಶದ ವಿವಿಧೆಡೆ 50ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಆದರೂ ಪ್ರತಿಭಟನಾಕಾರರು ಹಿಂದೆ ಸರಿಯಲು ಸಿದ್ಧರಿಲ್ಲ. ಇದು ಇರಾನ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

    ಮೃತರ ಸಂಖ್ಯೆ 50ಕ್ಕೆ ಏರಿಕೆಯಾದ ಬೆನ್ನಲ್ಲೇ ಅನಗತ್ಯ ಬಲಪ್ರಯೋಗ ಮಾಡದಂತೆ ವಿಶ್ವಸಂಸ್ಥೆ (UN) ಒತ್ತಾಯಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಪತ್ರಕರ್ತೆ ಹಿಜಬ್ ಧರಿಸದ್ದಕ್ಕೆ ಸಂದರ್ಶನವನ್ನೇ ರದ್ದುಗೊಳಿಸಿದ ಇರಾನ್ ಅಧ್ಯಕ್ಷ

    ಪತ್ರಕರ್ತೆ ಹಿಜಬ್ ಧರಿಸದ್ದಕ್ಕೆ ಸಂದರ್ಶನವನ್ನೇ ರದ್ದುಗೊಳಿಸಿದ ಇರಾನ್ ಅಧ್ಯಕ್ಷ

    ವಾಷಿಂಗ್ಟನ್: ಸಂದರ್ಶಕಿಯೊಬ್ಬಳು ಹಿಜಬ್ (Hijab) ಧರಿಸಲು ನಿರಾಕರಿಸಿದ್ದಾಗಿ ಇರಾನ್ ಅಧ್ಯಕ್ಷ (Iran President) ಇಬ್ರಾಹಿಂ ರೈಸಿ ಸಂದರ್ಶನವನ್ನು ರದ್ದುಗೊಳಿಸಿದ್ದಾರೆ.

    ಸಿಎನ್‍ನ್ ವಾಹಿನಿಯ ಖ್ಯಾತ ಆ್ಯಂಕರ್ (CNN Journalist) ಕ್ರಿಸ್ಟಿಯಾನೆ ಅಮನ್‍ಪೋರ್ (Christiane Amanpour) ಅವರು ಹಿಜಬ್ ಧರಿಸದೇ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿಯನ್ನು (Ebrahim Raisi) ಸಂದರ್ಶನ ಮಾಡಲು ನಿರ್ಧರಿಸಿದ್ದರು. ಸಂದರ್ಶನ ನಡೆಸುವ ಮುನ್ನವೇ ಹಿಜಬ್ ಧರಿಸಬೇಕು ಎಂದು ಷರತ್ತು ವಿಧಿಸಲಾಗಿತ್ತು. ಆದರೆ ಈ ಷರತ್ತನ್ನು ಅಮ್‍ಪೋರ್ ನಿರಾಕರಿಸಿದ್ದಾರೆ. ಹಿಜಬ್ ಧರಿಸದ್ದಕ್ಕೆ ಇಬ್ರಾಹಿಂ ರೈಸಿ ಸಂದರ್ಶನವನ್ನು ರದ್ದುಗೊಳಿಸಿದ್ದಾರೆ.

    ಈ ಬಗ್ಗೆ ಅಮನ್‍ಪೋರ್ ಸರಣಿ ಟ್ವೀಟ್ ಮಾಡಿದ್ದು, ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ವಿರುದ್ಧ ಕಿಡಿಕಾರಿದ್ದಾರೆ. ಅಷ್ಟೇ ಅಲ್ಲದೇ ಖಾಲಿ ಕುರ್ಚಿ ಇರುವ ಫೋಟೋವನ್ನು ಅಪ್ಲೋಡ್ ಮಾಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ಇರಾನ್‍ನಲ್ಲಿ ಹೆಚ್ಚುತ್ತಿರುವ ಪ್ರತಿಭಟನೆ ಬಗ್ಗೆ ಚರ್ಚಿಸಲು ಯೋಜಿಸಿದ್ದೆ. ಇದರಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಮಹ್ಸಾ ಅಮಿನಿಯ ಸಾವು, ಮಹಿಳೆಯರು ಹಿಜಬ್ ಸುಟ್ಟು ಪ್ರತಿಭಟನೆ ನಡೆಸುತ್ತಿರುವುದರ ಜೊತೆಗೆ ಹಲವಾರು ಘಟನೆಗಳು ಸೇರಿತ್ತು. ಇರಾನ್‍ನ ಅಧ್ಯಕ್ಷ ರೈಸಿ ಯುಎಸ್‍ಗೆ ಭೇಟಿ ನೀಡಿದ ಸಂದರ್ಭದಲ್ಲಿ ಇದು ಅವರ ಮೊದಲ ಸಂದರ್ಶನವಾಗಿದೆ. ಈ ಸಂದರ್ಶನವು ವಾರಗಳ ಹಿಂದಿನ ಯೋಜನೆಯಾಗಿದ್ದು, 8 ಗಂಟೆಗಳಿಂದ ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಿಕೊಂಡಿದ್ದೆವು.

    ಇರಾನ್‍ನ ಅಧ್ಯಕ್ಷರು ಬರುತ್ತಾರೆ ಎಂದು ಅವರಿಗಾಗಿ 40 ನಿಮಿಷಗಳ ಕಾಲ ಕಾಯುತ್ತಿದ್ದೆವು. ಆದರೆ ಸಂದರ್ಶನ ಪ್ರಾರಂಭವಾಗುವ ಮುನ್ನ ಸಹಾಯಕರೊಬ್ಬರು ಬಂದು ಅಧ್ಯಕ್ಷರು ಹೇಳಿದ್ದಾರೆ. ತಲೆಗೆ ಸ್ಕಾರ್ಫ್ ಧರಿಸಬೇಕು. ಏಕೆಂದರೆ ಇದು ಮೊಹರಂನ ಪವಿತ್ರ ತಿಂಗಳಾಗಿದೆ ಎಂದು ಸಲಹೆ ನೀಡಿದ್ದರು. ಇದನ್ನೂ ಓದಿ: ಇರಾನ್‍ ಹಿಜಬ್ ಹೋರಾಟ – ಪೊಲೀಸರ ಗುಂಡಿಗೆ 8 ಮಂದಿ ಬಲಿ

    ಈ ಹಿನ್ನೆಲೆಯಲ್ಲಿ ನಾನು ನಯವಾಗಿ ನಿರಾಕರಿಸಿದ್ದು, ನಾವು ನ್ಯೂಯಾರ್ಕ್‍ನಲ್ಲಿದ್ದೇವೆ. ಹಿಜಬ್‍ಗೆ ಸಂಬಂಧಿಸಿದಂತೆ ಇಲ್ಲಿ ಯಾವುದೇ ಕಾನೂನು ಅಥವಾ ಸಂಪ್ರದಾಯಗಳಿಲ್ಲ. ನಾನು ಇರಾನ್ ಹೊರಗೆ ಸಂದರ್ಶನ ಮಾಡುವಾಗ ಹಿಂದಿನ ಯಾವ ಅಧ್ಯಕ್ಷರು ಹಿಜಬ್ ಧರಿಸಲು ಹೇಳಿರಲಿಲ್ಲ ಎಂದು ಅವರಿಗೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಅವರು ಸಂದರ್ಶನವನ್ನು ನಿರಾಕರಿಸಿದರು ಎಂದು ಹೇಳಿದ್ದಾರೆ.

    ಹಿಜಬ್ ಕಾನೂನುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸ್ ಕಸ್ಟಡಿಯಲ್ಲಿ ಯುವತಿಯೊಬ್ಬಳು ಸಾವನ್ನಪ್ಪಿದ್ದಳು. ಇದಾದ ನಂತರ ಇರಾನ್‍ನಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿದ್ದು 30 ಮಂದಿ ಸಾವನ್ನಪ್ಪಿದ್ದಾರೆ. ಪ್ರತಿಭಟನೆ ಜೋರಾಗುತ್ತಿರುವ ಹಿನ್ನೆಲೆಯಲ್ಲಿ ಇರಾನ್‍ನಲ್ಲಿ ಇಂಟರ್‌ನೆಟ್ ಸೇವೆಯನ್ನು ಬಂದ್ ಮಾಡಲಾಗಿದೆ. ಇದನ್ನೂ ಓದಿ: ಇರಾನ್‌ನಲ್ಲಿ ಹಿಜಬ್ ಹೋರಾಟ- ವಾಟ್ಸಪ್, ಇನ್‌ಸ್ಟಾಗ್ರಾಮ್ ಬಳಕೆ ಸ್ಥಗಿತ

    Live Tv
    [brid partner=56869869 player=32851 video=960834 autoplay=true]