ನವದೆಹಲಿ: ಹೊಸದಾಗಿ ನೇಮಕಗೊಂಡ ಇಬ್ಬರು ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ (Gyanesh Kumar) ಮತ್ತು ಡಾ. ಸುಖ್ಬೀರ್ ಸಿಂಗ್ (Sukhbir Singh Sandhu) ಸಂಧು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.
ಶುಕ್ರವಾರ ಆಯೋಗಕ್ಕೆ ಸೇರ್ಪಡೆಯಾದ ಇಬ್ಬರು ನೂತನ ಚುನಾವಣಾ ಆಯುಕ್ತರನ್ನು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸ್ವಾಗತಿಸಿದರು ಎಂದು ಚುನಾವಣಾ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಚುನಾವಣಾ ಆಯೋಗದ ಆಯುಕ್ತರಾಗಿ ಇಬ್ಬರ ನೇಮಕ
ಇತ್ತೀಚೆಗೆ ಮುಖ್ಯ ಚುನಾವಣಾ ಆಯುಕ್ತ (CEC) ಮತ್ತು ಚುನಾವಣಾ ಆಯುಕ್ತರ (EC) ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಕಾನೂನು ಜಾರಿಗೆ ಬಂದ ನಂತರ ಅವರು ಚುನಾವಣಾ ಸಮಿತಿಯ ಸದಸ್ಯರಾಗಿ ನೇಮಕಗೊಂಡ ಮೊದಲಿಗರಾಗಿದ್ದಾರೆ.
ನವದೆಹಲಿ: ಮಿಜೋರಾಂ, ಛತ್ತೀಸ್ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ಈ ಐದು ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳ (Assembly Election) ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗವು (ECI) ಸೋಮವಾರ ಪ್ರಕಟಿಸಲಿದೆ.
ಚುನಾವಣಾ ಸಮಿತಿಯು ಇಂದು ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಠಿಯನ್ನು ಕರೆದಿದ್ದು, ಮತದಾನದ ದಿನಾಂಕಗಳು, ಹಂತಗಳ ಸಂಖ್ಯೆ ಮತ್ತು ನಾಮಪತ್ರಗಳನ್ನು ಸಲ್ಲಿಸುವ ಮತ್ತು ಹಿಂತೆಗೆದುಕೊಳ್ಳುವ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ವರದಿ ಮಾಡಿದೆ. ಇದನ್ನೂ ಓದಿ: ಕೇದಾರನಾಥ ದೇವಾಲಯಕ್ಕೆ ಯೋಗಿ ಆದಿತ್ಯನಾಥ್ ಭೇಟಿ
ಈ ಐದು ರಾಜ್ಯಗಳಲ್ಲಿನ ಶಾಸಕಾಂಗ ಸಭೆಗಳ ಅವಧಿಯು ಡಿಸೆಂಬರ್ 2023 ಮತ್ತು ಜನವರಿ 2024ರ ನಡುವೆ ಮುಕ್ತಾಯಗೊಳ್ಳಲಿದೆ. ಇಸಿಐ ಸಾಮಾನ್ಯವಾಗಿ ಶಾಸಕಾಂಗ ಸಭೆಯ ಅವಧಿ ಮುಗಿಯುವ ಆರರಿಂದ ಎಂಟು ವಾರಗಳ ಮೊದಲು ಚುನಾವಣಾ ವೇಳಾಪಟ್ಟಿಯನ್ನು (Election Schedule) ಪ್ರಕಟಿಸುತ್ತದೆ. ಇದನ್ನೂ ಓದಿ: ನನ್ನನ್ನು ಸಾಯಿಸ್ಬೇಡಿ- ಬೇಡಿಕೊಂಡ್ರೂ ಬಿಡದೆ ಯುವತಿ ಅಪಹರಿಸಿದ ಹಮಾಸ್ ಉಗ್ರರು
ಮುಂಬರುವ ವಿಧಾನಸಭಾ ಚುನಾವಣೆಯು ಆಡಳಿತಾರೂಢ ಭಾರತೀಯ ಜನತಾ ಪಕ್ಷ (BJP), ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಮತ್ತು ಪ್ರಾದೇಶಿಕ ಪಕ್ಷಗಳು ಸೇರಿದಂತೆ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳಿಗೆ ಪ್ರಮುಖ ಪರೀಕ್ಷೆಯಾಗಿದೆ. ಇದನ್ನೂ ಓದಿ: ಪ್ರತಿನಿತ್ಯ ನೂರು ಸೈಬರ್ ದಾಳಿಗಳ ವಿರುದ್ಧ ಇಸ್ರೋ ಹೋರಾಟ: ಎಸ್.ಸೋಮನಾಥ್
ಐದು ರಾಜ್ಯಗಳ ಪೈಕಿ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ರಾಜಸ್ಥಾನ ಮತ್ತು ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಆಡಳಿತ ಮಾಡುತ್ತಿದ್ದು, ಮಧ್ಯಪ್ರದೇಶದಲ್ಲಿ ಬಿಜೆಪಿ ಆಡಳಿತ ಪಕ್ಷವಾಗಿದೆ. ತೆಲಂಗಾಣದಲ್ಲಿ ಕೆಸಿಆರ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ ಅಧಿಕಾರದಲ್ಲಿದೆ ಮತ್ತು ಮಿಜೋರಾಂನಲ್ಲಿ ಮಿಜೋ ನ್ಯಾಷನಲ್ ಫ್ರಂಟ್ (MNF) ಅಧಿಕಾರದಲ್ಲಿದೆ. ಇದನ್ನೂ ಓದಿ: ದೆಹಲಿ ಐಐಟಿ ವಾಶ್ ರೂಂನಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ – ಸ್ವಚ್ಛತಾ ಸಿಬ್ಬಂದಿ ಬಂಧನ
ರಾಜಸ್ಥಾನ, ಮಧ್ಯಪ್ರದೇಶ, ಮಿಜೋರಾಂ ಮತ್ತು ತೆಲಂಗಾಣದಲ್ಲಿ ಒಂದೇ ಹಂತದಲ್ಲಿ ಕಳೆದ ಬಾರಿಯಂತೆ (2018) ಮತದಾನ (Voting) ನಡೆಯಬಹುದು ಎಂದು ಇಸಿ ಮೂಲಗಳು ತಿಳಿಸಿವೆ. ಛತ್ತೀಸ್ಗಢದಲ್ಲಿ, 2018ರಲ್ಲಿ ನಡೆದ ಮತದಾನದಂತೆಯೇ ಎರಡು ಹಂತಗಳಲ್ಲಿ ಮತದಾನ ನಡೆಯುವ ಸಾಧ್ಯತೆಯಿದೆ. ಇದನ್ನೂ ಓದಿ: ಕಷ್ಟದ ಸಮಯದಲ್ಲಿ ಇಸ್ರೇಲ್ ಪರ ಒಗ್ಗಟ್ಟಿನಿಂದ ನಿಲ್ಲುತ್ತೇವೆ: ನರೇಂದ್ರ ಮೋದಿ
ನವದೆಹಲಿ: ಇವಿಎಂಗಳ (EVM) ಖರೀದಿಯಲ್ಲಿ ಭಾರತ ಚುನಾವಣಾ ಆಯೋಗ (ECI) ಅಕ್ರಮ ನಡೆಸಿದೆ ಎಂದು ಆರೋಪಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (Public Interest Litigation) ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ.
ಚುನಾವಣಾ ವೆಚ್ಚ ಹೆಚ್ಚಾದರೆ ಅದು ಪ್ರಜಾಪ್ರಭುತ್ವಕ್ಕೆ ತೆರಬೇಕಾದ ಬೆಲೆಯಾಗಿದೆ. ಅದ್ದರಿಂದ ಇವಿಎಂ ಖರೀದಿಯಲ್ಲಿ ಹೇಗೆ ಹಣ ಖರ್ಚು ಮಾಡಿದ್ದೀರಿ ಎಂದು ಕೇಳಲು ಸಾದ್ಯವಿಲ್ಲ. ಅಲ್ಲದೆ ಇವಿಎಂಗಳನ್ನು ಖರೀದಿಸುವ ವಿಷಯವು ಮೂಲಭೂತ ಹಕ್ಕುಗಳ ಜಾರಿಗಾಗಿ ಸುಪ್ರೀಂ ಕೋರ್ಟ್ಗೆ ತೆರಳುವ ಆರ್ಟಿಕಲ್ 32 (Article 32)ರ ವ್ಯಾಪ್ತಿಯೊಳಗೆ ಬರುವುದಿಲ್ಲ ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (CJI) ಡಿವೈ ಚಂದ್ರಚೂಡ್ (Chief Justice of India DY Chandrachud) ನೇತೃತ್ವದ ಪೀಠ ಹೇಳಿದೆ. ಇದನ್ನೂ ಓದಿ: ಕುಡಿದ ಪೊಲೀಸರಿಂದ ಹಲ್ಲೆ ಆರೋಪ – ದೇಶದ ಅತ್ಯುನ್ನತ ಪ್ರಶಸ್ತಿ ಹಿಂದಿರುಗಿಸಲು ಮುಂದಾದ ಕುಸ್ತಿಪಟುಗಳು
ನವದೆಹಲಿ: ಇನ್ಮುಂದೆ 17 ವರ್ಷ ಮೇಲ್ಪಟ್ಟ ಯುವ ಜನರೂ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಮುಂಚಿತವಾಗಿಯೇ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಬಹುದು ಎಂದು ಭಾರತದ ಚುನಾವಣಾ ಆಯೋಗ ಹೇಳಿದೆ.
ದೇಶದ ಕಾನೂನಿನ ಪ್ರಕಾರ ಪ್ರತಿಯೊಬ್ಬ ಪ್ರಜೆಗೂ 18 ವರ್ಷ ತುಂಬಿದ ಬಳಿಕ ಮತದಾನದ ಹಕ್ಕು ನೀಡಲಾಗಿದೆ. ಆದರೆ ಈಗ 17 ವರ್ಷದವರು ಕೂಡ ತಮ್ಮ ಹೆಸರನ್ನು ನೋಂದಾಯಿಸಲು ಮತದಾನದ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಪಾರ್ಥ ಚಟರ್ಜಿಯನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ ಮಮತಾ ಬ್ಯಾನರ್ಜಿ
ಯುವ ಜನರು ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ಜನವರಿ 1ಕ್ಕೆ 18 ವರ್ಷ ವಯಸ್ಸನ್ನು ತಲುಪುವ ಪೂರ್ವಾಪೇಕ್ಷಿತ ಮಾನದಂಡಕ್ಕಾಗಿ ಕಾಯಬೇಕಾಗಿಲ್ಲ. ಅದನ್ನೀಗ ಮತ್ತಷ್ಟು ಸುಲಭಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ (CES) ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ನೇತೃತ್ವದ ಚುನಾವಣಾ ಸಂಸ್ಥೆಯು ಎಲ್ಲಾ ರಾಜ್ಯಗಳ ಸಿಇಒಗಳು /ERO/ AEROಗಳು ಯುವಜನರು ತಮ್ಮ ಮುಂಗಡ ಅರ್ಜಿಗಳನ್ನು ಸಲ್ಲಿಸಲು ಸಹಾಯ ಮಾಡುವ ತಂತ್ರಜ್ಞಾನದ ಬಗ್ಗೆ ಕೆಲಸ ಮಾಡಲು ಸೂಚಿಸಿದ್ದಾರೆ. ಇದನ್ನೂ ಓದಿ: ಪ್ರವೀಣ್ ಹತ್ಯೆ ಖಂಡಿಸಿ 19 ಮಂದಿ ಬಿಜೆಪಿ ಕಾರ್ಯಕರ್ತರು ರಾಜೀನಾಮೆ
ಹಾಗಾಗಿ 17 ವರ್ಷಕ್ಕಿಂತ ಮೇಲ್ಪಟ್ಟ ಯುವ ಜನತೆ ಈಗ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಮುಂಚಿತವಾಗಿ ಅರ್ಜಿ ಸಲ್ಲಿಸಬಹುದು ಎಂದು ಇಸಿಐ ಹೇಳಿದೆ. ಅಲ್ಲದೇ 2023ರ ನಂತರ ಮತದಾರರ ಪಟ್ಟಿಯನ್ನು ಪ್ರತಿ ತ್ರೈಮಾಸಿಕದಲ್ಲಿ ನವೀಕರಿಸಲಾಗುತ್ತದೆ. 2023ರ ಪಟ್ಟಿ ಪರಿಷ್ಕರಣೆಗಾಗಿ 18 ವರ್ಷ ಮೇಲ್ಪಟ್ಟವರು 2023ರ ಏಪ್ರಿಲ್ 1, ಜುಲೈ 1 ಮತ್ತು ಅಕ್ಟೋಬರ್ 1ರ ದಿನಾಂಕಗಳಲ್ಲಿ ಮುಂಗಡ ಅರ್ಜಿ ಸಲ್ಲಿಸುವಂತೆ ತಿಳಿಸಿದೆ.
Live Tv
[brid partner=56869869 player=32851 video=960834 autoplay=true]