Tag: eco-friendly Ganapathi

  • ಗಣೇಶ ಮೂರ್ತಿಗಳಿಗೆ ಬೇಡಿಕೆ ಕುಸಿತ- ಸಂಕಷ್ಟದಲ್ಲಿ ಕಲಾಕಾರರು

    ಗಣೇಶ ಮೂರ್ತಿಗಳಿಗೆ ಬೇಡಿಕೆ ಕುಸಿತ- ಸಂಕಷ್ಟದಲ್ಲಿ ಕಲಾಕಾರರು

    – ಆರ್ಥಿಕ ನೆರವು ನೀಡುವಂತೆ ಮನವಿ

    ಕಾರವಾರ: ಗಣೇಶ ಹಬ್ಬ ಹತ್ತಿರ ಬರುತ್ತಿದ್ದು, ಕೊರೊನಾ ಕಾರಣದಿಂದ ಗಣೇಶನ ಮೂರ್ತಿಯನ್ನು ಖರೀದಿಸುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಇದರಿಂದ ಮೂರ್ತಿಯನ್ನು ತಯಾರು ಮಾಡುವವರು ಸಂಕಷ್ಟದಲ್ಲಿ ಸಿಲುಕಿದ್ದಾರೆ.

    ಕೊರೊನಾ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರಿಂದ ಎಲ್ಲಾ ಉದ್ಯಮಗಳ ಮೇಲೆ ಆರ್ಥಿಕ ಬಿಕ್ಕಟ್ಟನ್ನು ತಂದೊಡ್ಡಿದೆ. ಇದೀಗ ವಿಘ್ನ ನಿವಾರಕ ಗಣಪತಿ ಮೂರ್ತಿ ಕೆಲಸಗಾರರಿಗೂ ಸಂಕಷ್ಟ ಎದುರಾಗಿದ್ದು, ಈ ಬಾರಿ ಗಣಪತಿ ಮೂರ್ತಿಗಳಿಗೆ ಬೇಡಿಕೆ ಕುಸಿದಿದೆ. ಇದನ್ನೂ ಓದಿ:ತಂದೆ ಸಮಾಧಿ ಬಳಿ ಬಾಲಕಿ ಹುಟ್ಟುಹಬ್ಬ ಆಚರಣೆ

    ಗೊಂದಲದಲ್ಲಿ ಸರ್ಕಾರ: ಕೊರೊನಾ ಮೂರನೇ ಅಲೆಯಿಂದಾಗಿ ರಾಜ್ಯ ಸರ್ಕಾರ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಯಾವ ರೀತಿ ಅನುಮತಿ ನೀಡಬೇಕು ಎಂಬ ಗೊಂದಲದಲ್ಲಿದೆ. ಸೆ.5ರಂದು ಈ ಕುರಿತು ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ತೀರ್ಮಾನ ಸಹ ಕೈಗೊಳ್ಳಲಿದೆ. ಆದರೆ ಹಲವು ಜಿಲ್ಲೆಗಳಲ್ಲಿ ಕೊರೊನಾ ಹೆಚ್ಚಾಗಿದ್ದು, ಸಾರ್ವಜನಿಕ ಉತ್ಸವ ನಡೆಸಲು ಅನುಮತಿ ನಿರಾಕರಿಸಲಾಗುತ್ತಿದೆ.

    ಈ ಬಾರಿ ಬೇಡಿಕೆಯಲ್ಲಿ ಇಳಿಮುಖ: 

    ಮಣ್ಣಿನಿಂದ ಗಣಪತಿ ಮೂರ್ತಿ ತಯಾರಿಕೆಯ ಬೇಡಿಕೆ ಇಳಿಯುತ್ತಿದ್ದು, ಇದರ ಪರಿಣಾಮ ಮೂರ್ತಿ ತಯಾರಕರ ಮೇಲೆ ಆಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೀಗ ಚತುರ್ಥಿಗೆ ಇರುತಿದ್ದ ಮೂರ್ತಿಗಳ ಬೇಡಿಕೆ ದೊಡ್ಡ ಮಟ್ಟದಲ್ಲಿ ಇಳಿದಿದೆ. ಕಾರವಾರ ತಾಲೂಕಿನಲ್ಲೇ 50ಕ್ಕೂ ಹೆಚ್ಚು ಗಣಪತಿ ಮೂರ್ತಿ ತಯಾರಕರಿದ್ದಾರೆ. ಜಿಲ್ಲೆಯಲ್ಲಿ ಇದರ ಸಂಖ್ಯೆ ಸಾವಿರ ದಾಟುತ್ತದೆ. ಇದನ್ನೂ ಓದಿ:ತಂದಿಟ್ಟು ತಮಾಷೆ ನೋಡೋದಕ್ಕೆ ಹೇಳಿರ್ತಾರೆ – ಉಮಾಪತಿ ಬಳಿ ಕ್ಷಮೆ ಕೇಳಿದ್ದ ಭೂಗತ ಪಾತಕಿ ರವಿ

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮೂರು ತಲೆಮಾರಿನಿಂದ ಗಣಪತಿ ತಯಾರಿಸುತ್ತಿರುವ ವಿನಾಯಕ್ ಬಾಂದೇಕರ್, ಈ ಬಾರಿಯ ಕೊರೊನಾದಿಂದ ಸಂಘ ಸಂಸ್ಥೆಗಳು ಮೂರ್ತಿ ತಯಾರು ಮಾಡಲು ಆರ್ಡರ್ ನೀಡುತ್ತಿದ್ದರು. ಇನ್ನೂ ಅಂಗಡಿಯಲ್ಲಿ ಮಾರಾಟ ಮಾಡುವವರು ಸಹ ಮೂರ್ತಿ ತಯಾರಿಕೆಗೆ ಈ ಬಾರಿ ಕಡಿಮೆ ಸಂಖ್ಯೆಯ ಆರ್ಡರ್ ನೀಡಿದ್ದಾರೆ. ಜನರಿಂದಲೂ ಕೂಡ ಆರ್ಡರ್ ಬರುವುದು ಕಡಿಮೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಪ್ಲಾಸ್ಟರ್ ಆಫ್ ಪ್ಯಾರಿಸ್ ಮೂರ್ತಿಗೆ ನಿರ್ಬಂಧವಾಗಿದ್ದು, ಈ ಮಳೆಯ ಹಾನಿಯಿಂದ ಕುಂಬಾರಮಣ್ಣಿನ ಬೇಡಿಕೆ ಇದ್ದರೂ ತಯಾರಿಕೆಗೆ ಬೇಕಾದ ಮಣ್ಣು ಸಿಗುತ್ತಿಲ್ಲ. ಹೀಗಾಗಿ ದುಪ್ಪಟ್ಟು ಹಣ ನೀಡಿ ಮಣ್ಣನ್ನು ಖರೀದಿಸಬೇಕಿದ್ದು, ನಾವು ಮಾಡಿದ ಕೆಲಸಕ್ಕೆ ಸೂಕ್ತ ಹಣ ದೊರಕದೇ ಇತ್ತ ಕೆಲಸವನ್ನು ಸಹ ಬಿಡಲಾಗದ ಸ್ಥಿತಿಗೆ ಕಲಾವಿದರು ಸಿಲುಕಿದ್ದಾರೆ. ಇದನ್ನೂ ಓದಿ:ಬೆಳಗಾವಿ ಮೂವರು ನಾಯಕರನ್ನ ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ

    ಈ ಹಿಂದೆ ಒಂದು ಚಿಕ್ಕ ಗಣಪತಿಗೆ ಮೂರ್ತಿಗೆ 1,000 ರೂ. ದಿಂದ ಆಕೃತಿಗೆ ಅನುಸಾರವಾಗಿ 5,000 ರೂ ಇರುತಿತ್ತು. ಇನ್ನು ದೊಡ್ಡ ಗಣಪತಿಗೆ ಐವತ್ತು ಸಾವಿರದಿಂದ ಎರಡು ಲಕ್ಷ ರೂ. ವರೆಗೆ ಆಕಾರದ ಮೇಲೆ ದರ ನಿಗದಿಯಾಗುತಿತ್ತು. ಆದರೇ ಇದೀಗ ದರವು ಅರ್ಧದಷ್ಟು ಇಳಿದಿದೆ. ಜೊತೆಗೆ ಬೇಡಿಕೆಯು ಸಹ ಇಳಿದಿದೆ.

    ಆರ್ಥಿಕ ಬೆಂಬಲ ನೀಡಬೇಕು: ಜಿಲ್ಲೆಯಲ್ಲಿ ವಾಯುಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ಸ್ನೇಹಿ ಗಣಪತಿ ಪ್ರತಿಷ್ಟಾಪನೆ ಅಭಿಯಾನ ಸಹ ನಡೆಯುತ್ತಿದೆ. ಹೀಗಾಗಿ ಜನರು ಖರ್ಚು ರಹಿತ ಹಾಗೂ ಪರಿಸರ ಸ್ನೇಹಿ ಗಣಪತಿಯತ್ತ ಮುಖ ಮಾಡಿದ್ದಾರೆ. ಕೇವಲ ಮೂರು ತಿಂಗಳುಗಳ ವ್ಯವಹಾರ ನಡೆಸುವ ಕಲಾವಿದರಿಗೆ ಇದೇ ಆರ್ಥಿಕ ಮೂಲ ಕೂಡ. ಹೀಗಾಗಿ ಕಾರ್ಮಿಕರಿಗೆ ನೀಡಿದಂತೆ ರಾಜ್ಯ ಸರ್ಕಾರ ಈ ವೃತ್ತಿಯವರಿಗೆ ಆರ್ಥಿಕ ಬೆಂಬಲ ನೀಡಬೇಕು ಎಂಬುದು ಕಲಾಕಾರರ ಬೇಡಿಕೆಯಾಗಿದೆ. ಇದನ್ನೂ ಓದಿ:ತಾಲಿಬಾನ್ ಸರ್ಕಾರ ರಚನೆಗೆ ಸಂತೋಷ ವ್ಯಕ್ತಪಡಿಸೋದು ಅನಾಗರೀಕತೆ: ನಾಸಿರುದ್ದೀನ್ ಶಾ

    ಕೊರೊನಾ ಮೂರನೇ ಅಲೆಯಿಂದಾಗಿ ಸರ್ಕಾರ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ಕಲ್ಪಿಸುವ ಕುರಿತು ಸೂಕ್ತ ನಿರ್ಧಾರಕ್ಕೆ ಬಾರದೇ ವಿಘ್ನ ನಿವಾರಕ ಗಣಪತಿಗೂ ವಿಘ್ನ ತಂದೊಡ್ಡಿದೆ. ಇದರ ಜೊತೆಗೆ ಕುಂಬಾರು ಮಣ್ಣಿನ ಗಣಪತಿ ತಯಾರಿಕೆಯನ್ನು ನಂಬಿದ ಕಲಾವಿದರಿಗೂ ಸಹ ಆರ್ಥಿಕವಾಗಿ ತೊಂದರೆಗೆ ಸಿಲುಕಿದ್ದಾರೆ.

  • ಪರಿಸರ ಜಾಗೃತಿ ಮೂಡಿಸಲು ಉದ್ಭವಿಸಿದ ಪ್ಲಾಸ್ಟಿಕ್ ಬಾಟಲ್ ವಿಘ್ನೇಶ್ವರ

    ಪರಿಸರ ಜಾಗೃತಿ ಮೂಡಿಸಲು ಉದ್ಭವಿಸಿದ ಪ್ಲಾಸ್ಟಿಕ್ ಬಾಟಲ್ ವಿಘ್ನೇಶ್ವರ

    ಭುವನೇಶ್ವರ: ಪರಿಸರ ಜಾಗೃತಿ ಮೂಡಿಸಲು ಹಲವಾರು ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತದೆ. ಆದರೂ ಕೂಡ ಪರಿಸರ ಉಳಿಸಬೇಕಾದ ನಾವು ಪ್ಲಾಸ್ಟಿಕ್, ಕೆಮಿಕಲ್ ಇನ್ನಿತರ ವಸ್ತುಗಳ ಬಳಕೆ, ವಾಯು ಮಾಲಿನ್ಯ, ಜಲ ಮಾಲಿನ್ಯ ಮಾಡಿ ನಿಸರ್ಗದ ಉಸಿರು ಗಟ್ಟಿಸುತ್ತಿದ್ದೇವೆ. ಆದ್ದರಿಂದ ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲು ಪ್ಲಾಸ್ಟಿಕ್‍ನಿಂದ ಹಾಗೂ ಮರಳಿನಲ್ಲಿ ಗಣಪತಿಯನ್ನು ತಯಾರಿಸಿ ಕಲಾವಿದರೊಬ್ಬರು ಎಲ್ಲರ ಮೆಚ್ಚುಗೆ ಪಡೆದಿದ್ದಾರೆ.

    ಒಡಿಶಾ ಮೂಲದ ಅಂತರಾಷ್ಟ್ರೀಯ ಮಟ್ಟದಲ್ಲಿ ಮರಳು ಕಲಾಕೃತಿ ಮಾಡುವಲ್ಲಿ ಹೆಸರು ಗಳಿಸಿರುವ ಸುದರ್ಶನ್ ಪಟ್ನಾಯಕ್ ಅವರು ಈ ವಿಶೇಷ ಗಣಪನ ಕಲಾಕೃತಿ ಮಾಡಿದ್ದಾರೆ. ಪುರಿ ಬೀಚ್‍ನಲ್ಲಿ ಈ ಅದ್ಭುತ ಗಣಪನ ಕಲಾಕೃತಿಯನ್ನು ಮಾಡಲಾಗಿದೆ. ಬೀಚ್ ಮರಳಿನಲ್ಲಿ ಸಿಕ್ಕ ಸುಮಾರು 1 ಸಾವಿರ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸಿ ಗಣಪನ ಕಲಾಕೃತಿಯನ್ನು ವಿಶೇಷವಾಗಿ ತಯಾರಿಸಿದ್ದಾರೆ. ಅಲ್ಲದೆ ಅದರ ಮುಂದೆ ಒಮ್ಮೆ ಮಾತ್ರ ಬಳಕೆಗೆ ಬರುವ ಪ್ಲಾಸ್ಟಿಕ್ ಉಪಯೋಗಿಸಬೇಡಿ, ಪರಿಸರವನ್ನು ಉಳಿಸಿ ಎಂದು ಬರೆದು ಒಂದೊಳ್ಳೆ ಸಂದೇಶವನ್ನು ಸಾರಿದ್ದಾರೆ.

    ಪ್ರಧಾನಿ ಮೋದಿ ಅವರ ಏಕ-ಬಳಕೆ ಪ್ಲಾಸ್ಟಿಕ್ ತ್ಯಜಿಸಿ ಅಭಿಯಾನದಿಂದ ಪ್ರೇರಿತರಾಗಿ ಈ ಕಲಾಕೃತಿ ತಯಾರಿಸಿದ್ದೇನೆ ಎಂದು ಪಟ್ನಾಯಕ್ ಹೇಳಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮೋದಿ ಅವರು ರೆಡಿಯೋದಲ್ಲಿ ಪ್ರಸಾರವಾಗುವ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಈ ಅಭಿಯಾದ ಬಗ್ಗೆ ಹೇಳಿದ್ದರು. ಇದನ್ನು ಆಲಿಸಿದ್ದ ಪಟ್ನಾಯಕ್ ಅವರು ಒಂದು ವಿಶೇಷ ಪ್ರಯತ್ನದ ಮೂಲಕ ಸಾರ್ವಜನಿಕರಲ್ಲಿ ಪರಿಸರ ಉಳಿಸಿ ಎಂದು ವಿನಂತಿ ಮಾಡಿದ್ದಾರೆ.

    ಬರೋಬ್ಬರಿ 5 ಟನ್ ಮರಳನ್ನು ಬಳಸಿ ಪಟ್ನಾಯಕ್ ಅವರು 10 ಅಡಿ ಎತ್ತರದ ಗಣೇಶನ ಕಲಾಕೃತಿಯನ್ನು ಮಾಡಿದ್ದಾರೆ. ಅದರ ಸುತ್ತ ಸುಮಾರು 1 ಸಾವಿರ ಪ್ಲಾಸ್ಟಿಕ್ ಬಾಟೆಲ್‍ಗಳನ್ನು ಇರಿಸಿ ಏಕ-ಬಳಕೆ ಪ್ಲಾಸ್ಟಿಕ್ ಬಳಸಬೇಡಿ, ಪರಿಸರ ಉಳಿಸಿ ಎಂದು ಸಂದೇಶವನ್ನು ಕೂಡ ಕಲಾಕೃತಿಯ ಎದುರು ಬರೆದಿದ್ದಾರೆ. ಅದ್ಭುತ ಕಲಾಕೃತಿ ಜೊತೆಗೆ ಪರಿಸರ ಜಾಗೃತಿ ಮೂಡಿಸಿ ಪಟ್ನಾಯಕ್ ಅವರು ಜನರ ಮನ ಗೆದ್ದಿದ್ದಾರೆ.

  • 9 ಸಾವಿರ ತೆಂಗಿನಕಾಯಿ, 15 ಟನ್ ತರಕಾರಿಯಿಂದ ಉದ್ಭವಿಸಿದ ಗಣಪ

    9 ಸಾವಿರ ತೆಂಗಿನಕಾಯಿ, 15 ಟನ್ ತರಕಾರಿಯಿಂದ ಉದ್ಭವಿಸಿದ ಗಣಪ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಂಪೂರ್ಣ ಪರಿಸರ ಸ್ನೇಹಿ ಗಣಪನ್ನು ನಿರ್ಮಾಣ ಮಾಡಲಾಗಿದೆ. ಪುಟ್ಟೇನಹಳ್ಳಿಯಲ್ಲಿನ ‘ಕೋಕೋನಟ್ ಗಣೇಶ’ ಸದ್ಯ ಎಲ್ಲರ ಮನ ಗೆದ್ದಿದ್ದಾನೆ.

    ಪುಟ್ಟೇನಹಳ್ಳಿಯಲ್ಲಿ ಸಂಪೂರ್ಣವಾಗಿ ಸಾವಿರಾರು ತೆಂಗಿನಕಾಯಿ, ಎಳನೀರು ಹಾಗೂ ಟನ್‍ಗಟ್ಟಲೆ ತರಕಾರಿಗಳನ್ನು ಬಳಸಿ ಪರಿಸರ ಸ್ನೇಹಿ ಗಣಪತಿಯನ್ನು ಮಾಡಿ, ಪೂಜಿಸಲಾಗುತ್ತಿದೆ. ಬರೋಬ್ಬರಿ 9 ಸಾವಿರ ತೆಂಗಿನ ಕಾಯಿ, 3 ಸಾವಿರ ಎಳನೀರು, 21 ವಿವಿಧ ಬಗೆಯ 15 ಟನ್‍ನಷ್ಟು ತರಕಾರಿಯನ್ನು ಬಳಸಿ ಈ ಗಣೇಶನನ್ನು ನಿರ್ಮಿಸಲಾಗಿದೆ.

    ಕಳೆದ 25 ದಿನಗಳಿಂದ 75 ಜನ ಈ ‘ಕೋಕೋನಟ್ ಗಣೇಶ’ನ ನಿರ್ಮಿಸುವಲ್ಲಿ ಶ್ರಮಿಸಿದ್ದಾರೆ. ಮೂರು ದಿನದ ಬಳಿಕ ಈ ಎಲ್ಲಾ ತೆಂಗಿನಕಾಯಿ, ತರಕಾರಿಯನ್ನು ಭಕ್ತರಿಗೆ ಹಂಚಲಾಗುತ್ತದೆ. ಅಂದಹಾಗೆ, ಕಳೆದ ವರ್ಷ ಇಲ್ಲಿ ಕಬ್ಬಿನ ಗಣೇಶನನ್ನು ಕೂರಿಸಲಾಗಿತ್ತು.

    ಪರಿಸರಕ್ಕೆ ಹಾನಿ ಆಗುವ ಕೆಮಿಕಲ್, ಬಣ್ಣಗಳನ್ನು ಬಳಸದೆ ಪರಿಸರ ಸ್ನೇಹಿಯಾದ ಗಣೇಶನನ್ನು ಮಾಡಿ, ಪೂಜಿಸಿ ಭಕ್ತಿ ಜೊತೆಗೆ ಪರಿಸರ ಪ್ರೇಮವನ್ನು ಮೆರೆದಿದ್ದಾರೆ.