Tag: ED raid

  • ಐಷಾರಾಮಿ ವಾಹನ ಕಳ್ಳಸಾಗಣೆ ಕೇಸ್; ನಟ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ದಾಳಿ

    ಐಷಾರಾಮಿ ವಾಹನ ಕಳ್ಳಸಾಗಣೆ ಕೇಸ್; ನಟ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ದಾಳಿ

    ತಿರುವನಂತಪುರಂ: ಭೂತಾನ್ ವಾಹನಗಳ ಅಕ್ರಮ ಕಳ್ಳಸಾಗಣೆ ಪ್ರಕರಣದಡಿ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟಿ (Mammootty), ದುಲ್ಕರ್ ಸಲ್ಮಾನ್ (Dulquer Salmaan), ಪೃಥ್ವಿರಾಜ್ ಹಾಗೂ ಅಮಿತ್ ಚಕ್ಕಲಕಲ್ ಮನೆ ಮೇಲೆ ದಾಳಿ ಮಾಡಿದ್ದಾರೆ.

    ಚೆನ್ನೈನಲ್ಲಿರುವ (Chennai) ಮಮ್ಮುಟ್ಟಿ ಅವರ ಚಲನಚಿತ್ರ ನಿರ್ಮಾಣ ಕಂಪನಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬಿಗ್‌ಬಾಸ್‌ಗೆ ಬೀಗ| 2 ಸಾವಿರ ಉದ್ಯೋಗಿಗಳಿಗೆ ಸಮಸ್ಯೆ – ಇಂದು ಮಧ್ಯಾಹ್ನ ತುರ್ತು ಅರ್ಜಿ ವಿಚಾರಣೆ

    ಐಷಾರಾಮಿ ವಾಹನಗಳ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದಡಿ ಎರ್ನಾಕುಲಂ, ತ್ರಿಶೂರ್, ಕೋಝಿಕ್ಕೋಡ್, ಮಲಪ್ಪುರಂ, ಕೊಟ್ಟಾಯಂ ಮತ್ತು ಕೊಯಮತ್ತೂರಿನಲ್ಲಿರುವ ತಮಿಳು, ಮಲಯಾಳಂ ನಟರು ಹಾಗೂ ವಾಹನ ಮಾಲೀಕರು ಸೇರಿ 17 ಸ್ಥಳಗಳಲ್ಲಿ ದಾಳಿ ನಡೆಸಿದೆ.

    ಫೆಮಾ, 1999ರ ಅಡಿಯಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಇಂಡೋ-ಭೂತಾನ್/ನೇಪಾಳ ಮಾರ್ಗಗಳ ಮೂಲಕ ಲ್ಯಾಂಡ್ ಕ್ರೂಸರ್, ಡಿಫೆಂಡರ್ ಮತ್ತು ಮಸೆರಾಟಿಯಂತಹ ಐಷಾರಾಮಿ ಕಾರುಗಳ ಅಕ್ರಮ ಆಮದು ಮತ್ತು ನೋಂದಣಿಯಲ್ಲಿ ತೊಡಗಿರುವ ಸಿಂಡಿಕೇಟ್ ಅನ್ನು ಬಹಿರಂಗಪಡಿಸುವ ಮಾಹಿತಿಯ ಆಧಾರದ ಮೇಲೆ ದಾಳಿ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ನಕಲಿ ದಾಖಲೆಗಳನ್ನು ಬಳಸಿ ಅರುಣಾಚಲ ಪ್ರದೇಶ ಮತ್ತು ಹಿಮಾಚಲ ಪ್ರದೇಶದಂತಹ ರಾಜ್ಯಗಳ ವಾಹನ ನೋಂದಣಿ ಪಡೆದುಕೊಂಡು ಅಕ್ರಮವಾಗಿ ಸಿನಿಮಾ ನಟರಿಗೆ, ಉದ್ಯಮಿಗಳಿಗೆ ಕಾರು ಮಾರಾಟ ಮಾಡಲಾಗುತ್ತಿದೆ ಎಂದು ಆರೋಪ ಕೇಳಿಬಂದಿದೆ.

  • ಆಪ್ ನಾಯಕ ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ

    ಆಪ್ ನಾಯಕ ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ

    – 12 ಸ್ಥಳಗಳಲ್ಲಿ ದಾಖಲೆಗಳಿಗಾಗಿ ಶೋಧ

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಸಂಬಂಧ ಮಾಜಿ ಸಚಿವ ಹಾಗೂ ಹಿರಿಯ ಆಮ್ ಆದ್ಮಿ ಪಕ್ಷದ ನಾಯಕ (AAP leader) ಸೌರಭ್ ಭಾರದ್ವಾಜ್ (Saurabh Bhardwaj) ಅವರಿಗೆ ಸೇರಿದ 12ಕ್ಕೂ ಹೆಚ್ಚು ಸ್ಥಳಗಳ ಮೇಲೆ ಇಡಿ (Enforcement Directorate) ಅಧಿಕಾರಿಗಳು ದಾಳಿ ಮಾಡಿದ್ದಾರೆ.

    ಜಿಎನ್‌ಸಿಟಿಡಿ ಆರೋಗ್ಯ ಯೋಜನೆಯಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದ್ದು, ಇದರಲ್ಲಿ ಸೌರಭ್ ಭಾರದ್ವಾಜ್ ಭಾಗಿಯಾಗಿದ್ದಾರೆ ಎಂದು ಮಾಜಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಆರೋಪಿಸಿದ್ದರು. ಇದನ್ನೂ ಓದಿ: ಭಾರತೀಯ ನೌಕಾಪಡೆಗೆ ಬಲ; 2 ನೀಲಗಿರಿ ವರ್ಗದ ಯುದ್ಧನೌಕೆಗಳ ನಿಯೋಜನೆ

    ಈ ಸಂಬಂಧ ಮಂಗಳವಾರ ಇಡಿ ಅಧಿಕಾರಿಗಳು ಸೌರಭ್ ಭಾರದ್ವಾಜ್ ಅವರಿಗೆ ಸೇರಿದ 12ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ಮಾಡಿದ್ದಾರೆ. ಇದನ್ನೂ ಓದಿ: ಮಂತ್ರಾಲಯ ಶ್ರೀಗಳಿಂದ ಪರಿಸರ ಜಾಗೃತಿ – 100ಕ್ಕೂ ಹೆಚ್ಚು ಮಣ್ಣಿನ ಗಣೇಶ ವಿತರಣೆ

    2018-2019ರಲ್ಲಿ, ಆಪ್ ನೇತೃತ್ವದ ದೆಹಲಿ ಸರ್ಕಾರವು 24 ಆಸ್ಪತ್ರೆಗಳ ನಿರ್ಮಾಣಕ್ಕಾಗಿ 5,590 ಕೋಟಿ ರೂ. ಹಣದ ಯೋಜನೆಗಳನ್ನು ಅನುಮೋದಿಸಿತ್ತು. ಐಸಿಯು ಆಸ್ಪತ್ರೆಯನ್ನು 6 ತಿಂಗಳಲ್ಲಿ ಪೂರ್ಣಗೊಳಿಸಬೇಕಿತ್ತು. ಆದರೆ ಮೂರು ವರ್ಷಗಳ ನಂತರವೂ ಕೆಲಸ ಅಪೂರ್ಣವಾಗಿಯೇ ಇತ್ತು. 800 ಕೋಟಿ ರೂ. ಹಣ ಖರ್ಚು ಮಾಡಿದರೂ, 50% ರಷ್ಟು ಕೆಲಸ ಮಾತ್ರ ಪೂರ್ಣಗೊಂಡಿದೆ ಎಂದು ಗುತ್ತಿಗೆದಾರರು ಮತ್ತು ಅಧಿಕಾರಿಗಳ ವಿರುದ್ಧ ದೆಹಲಿ ಪೊಲೀಸರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಎಫ್‌ಐಆರ್ ದಾಖಲಿಸಿತ್ತು.

    ದಾಳಿ ವೇಳೆ ವಶಪಡಿಸಿಕೊಂಡ ಆಸ್ತಿಗಳ ವಿವರ ಮತ್ತು ಪತ್ತೆಯಾದ ಆರ್ಥಿಕ ಅಕ್ರಮಗಳ ವಿವರಗಳನ್ನು ಕೇಂದ್ರ ತನಿಖಾ ಸಂಸ್ಥೆ ಇನ್ನೂ ಬಹಿರಂಗಪಡಿಸಿಲ್ಲ.

    ಗ್ರೇಟರ್ ಕೈಲಾಶ್‌ನಿಂದ ಮೂರು ಬಾರಿ ಶಾಸಕರಾಗಿರುವ ಭಾರದ್ವಾಜ್, ದೆಹಲಿಯ ಆರೋಗ್ಯ, ನಗರಾಭಿವೃದ್ಧಿ ಮತ್ತು ಜಲ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ದೆಹಲಿ ಜಲ ಮಂಡಳಿಯ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇದನ್ನೂ ಓದಿ: ರಾಹು-ಕೇತು ದೋಷಗಳನ್ನು ಗಣೇಶ ಹೇಗೆ ಗುಣಪಡಿಸುತ್ತಾನೆ?

    ಇಡಿ ದಾಳಿ ಬೆನ್ನಲ್ಲೇ ಎಎಪಿ ನಾಯಕಿ, ಮಾಜಿ ಸಿಎಂ ಆತಿಶಿ ಎಕ್ಸ್ನಲ್ಲಿ ಪೋಸ್ಟ್ ಮಾಡಿ, ಇದು ಪ್ರಧಾನಿ ಮೋದಿ ಅವರ ಪದವಿ ವಿಚಾರದ ಕುರಿತ ವಿಷಯವನ್ನು ಬೇರೆಡೆ ಸೆಳೆಯುವ ಪ್ರಯತ್ನ ಎಂದು ಕಿಡಿಕಾರಿದ್ದಾರೆ.

    ಅಲ್ಲದೇ ಎಎಪಿ ನಾಯಕ ಮನೀಶ್ ಸಿಸೋಡಿಯಾ ಪ್ರತಿಕ್ರಿಯಿಸಿ, ಸೋಮವಾರ ಇಡೀ ದೇಶವೇ ಪ್ರಧಾನಿ ಮೋದಿಯವರ ಪದವಿ ಕುರಿತು ಪ್ರಶ್ನೆ ಎತ್ತಿತ್ತು. ಯಾವಾಗೆಲ್ಲಾ ಪದವಿ ವಿಚಾರ ಹೊರಬಂದಿದೆಯೋ ಆ ಸಂದರ್ಭಗಳಲ್ಲೆಲ್ಲ ಗಮನ ಬೇರೆಡೆ ಸೆಳೆಯಲು ಈ ರೀತಿ ದಾಳಿ ನಡೆಸಲಾಗಿತ್ತು ಎಂದು ದೂರಿದ್ದಾರೆ.

  • ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ – ವೀರೇಂದ್ರ ಪಪ್ಪಿ 4 ದಿನ ಇಡಿ ಕಸ್ಟಡಿಗೆ

    ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ – ವೀರೇಂದ್ರ ಪಪ್ಪಿ 4 ದಿನ ಇಡಿ ಕಸ್ಟಡಿಗೆ

    ಬೆಂಗಳೂರು: ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚಿತ್ರದುರ್ಗ (Chitradurga) ಶಾಸಕ ವೀರೇಂದ್ರ ಪಪ್ಪಿಯವರನ್ನು (Veerendra Puppy) 35ನೇ ಸಿಸಿಹೆಚ್ ನ್ಯಾಯಾಲಯ 4 ದಿನ ಇಡಿ (Enforcement Directorate) ಕಸ್ಟಡಿಗೆ ಒಪ್ಪಿಸಿದೆ.

    ಜನಪ್ರತಿನಿಧಿಗಳ ನ್ಯಾಯಾಧೀಶರು ರಜೆಯಲ್ಲಿದ್ದ ಹಿನ್ನೆಲೆ 35ನೇ ಸಿಸಿಹೆಚ್ ಜಡ್ಜ್ ಮುಂದೆ ಇಡಿ ಹಾಜರುಪಡಿಸಿತ್ತು. ಶನಿವಾರ ವೀರೇಂದ್ರ ಪಪ್ಪಿ ಸಿಕ್ಕಿಂನ ಗ್ಯಾಂಗ್ಟಕ್‍ನಲ್ಲಿ ಬಂಧಿಸಲಾಗಿತ್ತು. ಶನಿವಾರ ರಾತ್ರಿಯೇ ಸಿಕ್ಕಿಂನಿಂದ ಬೆಂಗಳೂರಿಗೆ ಕರೆತಂದಿದ್ದ ಇಡಿ ಇವತ್ತು ಬೆಳಗ್ಗೆ ಬೌರಿಂಗ್ ಹಾಸ್ಪಿಟಲ್‍ನಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ, ಶಾಂತಿನಗರ ಇಡಿ ಕಚೇರಿಗೆ ಕರೆತಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿತ್ತು. ಇದನ್ನೂ ಓದಿ: ED ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನ ಪತ್ತೆ – ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್

    ದಾಳಿ ವೇಳೆ ಶಾಸಕ ಪಪ್ಪಿ ಮನೆಯಲ್ಲಿ 12 ಕೋಟಿ ರೂ. ನಗದು, 1 ಕೋಟಿ ರೂ. ವಿದೇಶಿ ಹಣ, 6 ಕೋಟಿ ರೂ. ಮೌಲ್ಯದ ಚಿನ್ನ, 10 ಕೆಜಿ ಬೆಳ್ಳಿ, ಐಷಾರಾಮಿ ಕಾರು, 17 ಬ್ಯಾಂಕ್ ಖಾತೆ ಹಾಗೂ 2 ಬ್ಯಾಂಕ್ ಲಾಕರ್‌ಗಳನ್ನು ಇಡಿ ಸೀಜ್ ಮಾಡಿತ್ತು. ಇಡಿ 14 ದಿನ ತಮ್ಮ ಕಸ್ಟಡಿಗೆ ನೀಡಿ ಅಂತ ರಿಮ್ಯಾಂಡ್‍ನಲ್ಲಿ ಮನವಿ ಮಾಡಿತ್ತು. ಇದೇ ವೇಳೆ ವಿರೇಂದ್ರ ಪಪ್ಪಿ ಸಹೋದರ ಕೆ.ಸಿ. ನಾಗರಾಜ್ ಹಾಗೂ ಬೆಂಬಲಿಗರು ಇಡಿ ಕಚೇರಿ ಮುಂದೆ ಜಮಾಯಿಸಿದ್ದರು.

    ಚಿತ್ರದುರ್ಗ ಜಿಲ್ಲೆಯಾದ್ಯಂತ 6, ಬೆಂಗಳೂರು ನಗರ 10, ಜೋಧ್‌ಪುರ 3, ಹುಬ್ಬಳ್ಳಿ 1, ಮುಂಬೈ 2 ಮತ್ತು ಗೋವಾದಲ್ಲಿರುವ ಪಪ್ಪೀಸ್ ಕ್ಯಾಸಿನೊ ಗೋಲ್ಡ್, ಓಷನ್ ರಿವರ್ಸ್ ಕ್ಯಾಸಿನೊ, ಪಪ್ಪೀಸ್ ಕ್ಯಾಸಿನೊ ಪ್ರೈಡ್, ಓಷನ್ 7 ಕ್ಯಾಸಿನೊ, ಬಿಗ್ ಡ್ಯಾಡಿ ಕ್ಯಾಸಿನೊಗಳ ಮೇಲೆ ದಾಳಿ ನಡೆಸಲಾಗಿದೆ. ವೀರೇಂದ್ರ ಪಪ್ಪಿ ಕಿಂಗ್ 567, ರಾಜ 567, ಪಪ್ಪೀಸ್ 003, ರತ್ನ ಗೇಮಿಂಗ್ ಇತ್ಯಾದಿಗಳ ಹೆಸರಿನಲ್ಲಿ ಹಲವಾರು ಆನ್‌ಲೈನ್ ಬೆಟ್ಟಿಂಗ್ ಸೈಟ್‌ಗಳನ್ನು ನಡೆಸುತ್ತಿದ್ದಾರೆ.

    ವೀರೇಂದ್ರ ಪಪಿ ಸಹೋದರ ಕೆಸಿ ತಿಪ್ಪೇಸ್ವಾಮಿ ದುಬೈನಿಂದ ಡೈಮಂಡ್ ಸಾಫ್ಟ್ಟೆಕ್, ಟಿಆರ್‌ಎಸ್ ಟೆಕ್ನಾಲಜೀಸ್, ಪ್ರೈಮ್ 9 ಟೆಕ್ನಾಲಜೀಸ್ ಎಂಬ 3 ವ್ಯವಹಾರ ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದಾರೆ. ಈ ಘಟಕಗಳು ಕೆಸಿ ವೀರೇಂದ್ರ ಅವರ ಕಾಲ್ ಸೆಂಟರ್ ಸೇವೆಗಳು ಮತ್ತು ಗೇಮಿಂಗ್ ವ್ಯವಹಾರಕ್ಕೆ ಸಂಬಂಧಿಸಿವೆ ಎಂದು ಇ.ಡಿ ತಿಳಿಸಿದೆ. ಇದನ್ನೂ ಓದಿ: ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ; `ಕೈʼ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ED ವಶಕ್ಕೆ

  • ಹುಬ್ಬಳ್ಳಿ | ಸಿನಿಮಾ ಸ್ಟೈಲ್‌ನಲ್ಲಿ ಡೋರ್‌ ಒಡೆದು ಉದ್ಯಮಿ ಮನೆಗೆ ನುಗ್ಗಿದ ಇಡಿ ಅಧಿಕಾರಿಗಳು!

    ಹುಬ್ಬಳ್ಳಿ | ಸಿನಿಮಾ ಸ್ಟೈಲ್‌ನಲ್ಲಿ ಡೋರ್‌ ಒಡೆದು ಉದ್ಯಮಿ ಮನೆಗೆ ನುಗ್ಗಿದ ಇಡಿ ಅಧಿಕಾರಿಗಳು!

    ಹುಬ್ಬಳ್ಳಿ: ಹವಾಲಾ ಮತ್ತು ಕ್ಯಾಸಿನೋ ಕಿಂಗ್ ಪಿನ್ ಸಮುಂದರ್ ಸಿಂಗ್‌ (Samundar Singh) ಅವರ ಹುಬ್ಬಳ್ಳಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ (ED Raid) ನಡೆಸಿದ್ದಾರೆ. ಅಧಿಕಾರಿಗಳು ಎಷ್ಟೇ ಮನವಿ ಮಾಡಿದ್ರೂ ಕುಟುಂಬಸ್ಥರು ಬಾಗಿಲು ತೆರೆಯಲಿಲ್ಲ. ಈ ವೇಳೆ ಬಾಗಿಲು ಒಡೆದು ಮನೆ ಒಳಗೆ ಅಧಿಕಾರಿಗಳು ನುಗ್ಗಿದ್ದಾರೆ.

    ಹುಬ್ಬಳ್ಳಿ ದೇಶಪಾಂಡೆ ನಗರದಲ್ಲಿನ ಕಾಮಾಕ್ಷಿ ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯ 401, 402 ಸಮುಂದರ್ ಸಿಂಗ್ ಹಾಗೂ ಅವರ ಸಹೋದರನ ಫ್ಲಾಟ್ ಮೇಲೆ ಈ ದಾಳಿ ನಡೆದಿದೆ. ಮೂಲತಃ ರಾಜಸ್ಥಾನ ಮೂಲದ ಸಮುಂದರ್ ಸಿಂಗ್, ಗೋವಾದಲ್ಲಿ ಮೆಜೆಸ್ಟಿಕ್ ಫ್ರೈಡ್ ಕ್ಯಾಸಿನೋ, ಕೋಟ್ಯಂತರ ರೂಪಾಯಿ ಗೇಮ್ ಆಫ್ ಹಾಗೂ ಕ್ಯಾಸಿನೋ ವ್ಯವಹಾರ ನಡೆಸುತ್ತಿದ್ದಾರೆ. ಇದರ ಜೊತೆಗೆ ಶ್ರೀಲಂಕಾ, ದುಬೈನಲ್ಲಿ ಕ್ಯಾಸಿನೊ ಉದ್ಯಮ ನಡೆಸುತ್ತಿದ್ದಾರೆ. ಇದನ್ನೂ ಓದಿ: ವಿಜಯಪುರ | 27 ರೌಡಿಶೀಟರ್‌ಗಳ ಗಡಿಪಾರಿಗೆ ಜಿಲ್ಲಾ ಪೊಲೀಸ್ ಸಜ್ಜು

    ಇತ್ತೀಚಿಗೆ ನೂರಾರು ಕೋಟಿ ಖರ್ಚು ಮಾಡಿ ಬಹಳಷ್ಟು ಅದ್ದೂರಿಯಾಗಿ ರಾಜಾಸ್ಥಾನದಲ್ಲಿ ಪುತ್ರನ ವಿವಾಹ ಮಾಡಿದ್ದರು. ಈ ಮದುವೆ ಬಹಳಷ್ಟು ಅದ್ದೂರಿಯಾಗಿ ನಡೆದಿತ್ತು. ಬಾಲಿವುಡ್ ನಟ-ನಟಿಯರು ಭಾಗಿಯಾಗಿದ್ದರು. ಇನ್ನೂ ಮದುವೆಗೆ ಹೋಗುವ ಅತಿಥಿಗಳಿಗೆ ವಿಶೇಷ ಹೆಲಿಕಾಪ್ಟರ್ ಮೂಲಕ ಕರೆತರಲಾಗಿತ್ತು ಎನ್ನಲಾಗಿದೆ. ಇದರ ಅನುಮಾನ ಬೆನ್ನಲ್ಲೇ ಈ ದಾಳಿ ನಡೆದಿದೆ ಎನ್ನಲಾಗಿದೆ.

    ಇಡಿ ಭಯದಿಂದ ಬಾತ್ ರೂಮ್‌ನಲ್ಲಿ ಅಡಗಿ ಕುಳಿತ್ತಿದ್ದ ಎನ್ನಲಾಗಿದೆ. ದಾಳಿಯಲ್ಲಿ ಮೂವರು ಇಡಿ ಅಧಿಕಾರಿಗಳು ಹಾಗೂ 4 ಜನ ಸಿಆರ್‌ಪಿಎಫ್ ಅಧಿಕಾರಿಗಳು ಭಾಗಿಯಾಗಿದ್ದರು. ಇದನ್ನೂ ಓದಿ: ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ- ಸಂಚಾರಕ್ಕೆ ಕಂಪ್ಲಿ ಸೇತುವೆ ಮುಕ್ತ

  • ವಿದೇಶಗಳಲ್ಲಿ ಆಸ್ತಿ ಮಾಡಿದ್ರೆ ಸರ್ಕಾರಕ್ಕೆ ಬರೆದುಕೊಡುವೆ – ಇಡಿ ದಾಳಿಗೊಳಗಾಗಿದ್ದ ಶಾಸಕ ಸುಬ್ಬಾರೆಡ್ಡಿ ಸವಾಲ್‌

    ವಿದೇಶಗಳಲ್ಲಿ ಆಸ್ತಿ ಮಾಡಿದ್ರೆ ಸರ್ಕಾರಕ್ಕೆ ಬರೆದುಕೊಡುವೆ – ಇಡಿ ದಾಳಿಗೊಳಗಾಗಿದ್ದ ಶಾಸಕ ಸುಬ್ಬಾರೆಡ್ಡಿ ಸವಾಲ್‌

    – ಜೀವನದಲ್ಲಿ ಒಮ್ಮೆಯೂ ಜರ್ಮನಿಗೆ ಹೋಗಿಲ್ಲ ಎಂದ ʻಕೈʼ ಶಾಸಕ

    ಚಿಕ್ಕಬಳ್ಳಾಪುರ: ಮಲೇಷ್ಯಾ ಹಾಂಕಾಂಗ್ ಜರ್ಮನಿಯಲ್ಲಿ ಅಕ್ರಮವಾಗಿ ಆಸ್ತಿ (Property) ಮಾಡಿರುವ ಆರೋಪದ ಮೇರೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್‌.ಎನ್ ಸುಬ್ಬಾರೆಡ್ಡಿ (SN Subba Reddy) ನಿವಾಸಗಳ ಮೇಲೆ ಇಡಿ ದಾಳಿ ಮಾಡಿತ್ತು. ಇಡಿ ದಾಳಿಗೆ ಸಂಬಂಧಿಸಿದಂತೆ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಕಲಿ ದಾಖಲೆಗಳನ್ನ ಸೃಷ್ಟಿಸಿ ರಾಜಕೀಯ ವಿರೋಧಿಗಳು ನನ್ನ ಮೇಲೆ ಕುತಂತ್ರ ಮಾಡಿದ್ದಾರೆ ಅಂತ ಸುಬ್ಬಾರೆಡ್ಡಿ ಸ್ಪಷ್ಟನೆ ನೀಡಿ ದಾಖಲೆಗಳನ್ನ ಬಿಡುಗಡೆ ಮಾಡಿದ್ದಾರೆ.

    ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ನಿವಾಸ ಹಾಗೂ ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ರು. ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ʻಪಬ್ಲಿಕ್ ಟಿವಿʼ (Public TV) ಜೊತೆ ಮಾತನಾಡಿದ ಸುಬ್ಬಾರೆಡ್ಡಿ, ನಾನು ವಿದೇಶಗಳಲ್ಲಿ ಯಾವುದೇ ಆಸ್ತಿ ಮಾಡಿಲ್ಲ. ಯಾರದೋ ದೇಹಕ್ಕೆ ನನ್ನ ಮುಖದ ಫೋಟೋ ಅಂಟಿಸಿ ವಿದೇಶಗಳಲ್ಲಿ ಆಸ್ತಿ ಮಾಡಿರುವ ಹಾಗೆ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿದ್ದಾರೆ. ಇದೇ ದಾಖಲೆಗಳ ಆಧಾರದ ಮೇರೆಗೆ ಇಡಿಯವರು ನಮ್ಮ ಮನೆಗಳ ಮೇಲೆ ದಾಳಿ (ED Raid) ಮಾಡಿದ್ದಾರೆ. ನಾನು ನಯಾಪೈಸೆ ವಿದೇಶಗಳಲ್ಲಿ ಹೂಡಿಕೆ ಮಾಡಿದ್ರೆ ನನ್ನ ಆಸ್ತಿ ಎಲ್ಲಾ ಸರ್ಕಾರಕ್ಕೆ ಬರೆದುಕೊಡ್ತೇನೆ ಅಂತ ಸವಾಲು ಹಾಕಿದ್ದಾರೆ.

    ಜೀವನದಲ್ಲೇ ಜರ್ಮನಿಗೆ ಹೋಗಿಲ್ಲ
    ಇನ್ನೂ ನಾನು 15 ವರ್ಷಗಳಿಂದ ಜರ್ಮನಿ ಮಲೇಷ್ಯಾ ಹಾಂಕಾಂಗ್‌ಗೆ ಹೋಗೇ ಇಲ್ಲ. ಜೀವನದಲ್ಲಿ ಒಮ್ಮೆಯೂ ಸಹ ಜರ್ಮನಿಗೆ ಹೋಗಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ನನ್ನ ಎದುರು ಪರಾಜಿತನಾದ ಅಭ್ಯರ್ಥಿ ನನಗೆ ತೊಂದರೆ ಕೊಡುವ ಉದ್ದೇಶದಿಂದ ಕುತಂತ್ರ ಮಾಡಿರುವ ಅನುಮಾನ ಇದೆ ಎಂದರು. ಇದನ್ನೂ ಓದಿ: Air India Crash | 2 ಎಂಜಿನ್‌ಗಳಿಗೆ ಇಂಧನ ಪೂರೈಕೆ ಆಗದಿದ್ದೇ ದುರಂತಕ್ಕೆ ಕಾರಣ – AAIB ಪ್ರಾಥಮಿಕ ವರದಿ ಬಹಿರಂಗ

    ಫೋಟೋ ಎಡಿಟ್‌ ಮಾಡಿ ನಕಲಿ ದಾಖಲೆ ಸೃಷ್ಟಿ
    ಶಾಸಕ ಸುಬ್ಬಾರೆಡ್ಡಿ ಹೇಳಿರುವ ಹಾಗೆ ರಾಮಸ್ವಾಮಿ ವೀರನ್ ಎಂಬುವವರ ಹೆಸರಿನಲ್ಲಿ ಇರುವ ಆಸ್ತಿಯನ್ನ ಶಾಸಕ ಸುಬ್ಬಾರೆಡ್ಡಿ ಖರೀದಿ ಮಾಡಿರುವ ಹಾಗೆ ಯಾರದೋ ಫೋಟೋಗೆ ತಮ್ಮ ಮುಖದ ಫೋಟೋ ಎಡಿಟ್ ಮಾಡುವ ಮೂಲಕ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿದ್ದಾರಂತೆ. ಇದೇ ದಾಖಲೆಗಳನ್ನು ಆಧರಿಸಿ ಇಡಿ ರೇಡ್ ಮಾಡಿದ್ದಾರೆ. ಈ ನಕಲಿ ದಾಖಲೆಗಳು ಮೊದಲೇ ನನಗೆ ಸಿಕ್ಕಿದ್ದು ಈ ಬಗ್ಗೆ ನಾನು ಸೈಬರ್ ಠಾಣೆಯಲ್ಲಿ ದೂರು ಸಹ ನೀಡಲು ಮುಂದಾಗಿದ್ದೆ ಆದ್ರೆ ದೂರು ಪಡೆದಿರಲಿಲ್ಲ. ಈಗ ನಾನು ಮತ್ತೆ ಈ ಬಗ್ಗೆ ದೂರು ನೀಡಲಿದ್ದೇನೆ ನ್ಯಾಯಾಲಯದಲ್ಲೂ ಸಹ ದಾವೆ ಹೂಡಲಿದ್ದೇನೆ ಎಂದು ತಿಳಿಸಿದ್ರು. ಇದನ್ನೂ ಓದಿ: ಬೆಂಗಳೂರಲ್ಲಿ ಕಿಟ್ಟಿ ಪಾರ್ಟಿ ಆಯೋಜಿಸಿ 50 ಕೋಟಿ ವಂಚನೆ ಕೇಸ್ – ಲಾಯರ್ ಎಂದು ಪೊಲೀಸರಿಗೆ ಅವಾಜ್ ಹಾಕಿದ್ದ ಮತ್ತೋರ್ವ ಅರೆಸ್ಟ್

    ಇನ್ನೂ ಇಡಿಯವರು ಸಂಪೂರ್ಣ ವಿಚಾರಣೆ ನಂತರ ಸೋಮವಾರ ಜುಲೈ 14ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದು ನಾನು ವಿಚಾರಣೆಗೆ ಹಾಜರಾಗುವೆ. ಆದ್ರೆ ರಾಜಕೀಯ ವಿರೋಧಿಗಳು ನನ್ನ ಮೇಲೆ ನಡೆಸಿದ ಷಡ್ಯಂತ್ರದಿಂದ ನಾನು ಹೆದರಲ್ಲ. ಇಡಿಯವರು ಏನ್ ಬೇಕಾದರೂ ತನಿಖೆ ಮಾಡಲಿ ನಾನು ಸಹಕಾರ ನೀಡುವೆ ಅಂತಲೂ ಹೇಳಿದ್ದಾರೆ. ಇದನ್ನೂ ಓದಿ: ರಾಯಚೂರಿನಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ – ಜಮೀನಿನಲ್ಲಿ ಕುಸಿದು ಬಿದ್ದು ರೈತ ಸಾವು

  • 2029ಕ್ಕೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರ್ತೀವಿ, ಬಿಜೆಪಿ ನಾಯಕರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

    2029ಕ್ಕೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರ್ತೀವಿ, ಬಿಜೆಪಿ ನಾಯಕರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

    ಬೆಂಗಳೂರು: 2029ಕ್ಕೆ ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆ. ಆಗ ಬಿಜೆಪಿ ನಾಯಕರನ್ನು (BJP Leaders) ತಿಹಾರ್ ಜೈಲಿಗೆ (Tihar Jail) ತುಂಬೋದು ಖಚಿತ ಎಂದು ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಹೇಳಿದ್ದಾರೆ.

    ಶಾಸಕ ಸುಬ್ಬಾರೆಡ್ಡಿ ನಿವಾಸದ ಮೇಲೆ ಇಡಿ ದಾಳಿ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಮಿತ್ ಶಾ ಮಗ ಜಯ್ ಶಾ ಅಂತ ಇದ್ದಾರೆ. ಅವರ ಕಂಪನಿಗಳು ಪಾರದರ್ಶಕವಾಗಿ ಇದ್ಯಾ? ನಿತಿನ್ ಗಡ್ಕರಿ ಅವರದ್ದೂ 16 ಸಕ್ಕರೆ ಕಾರ್ಖಾನೆ ಇದೆ, ಅಲ್ಲಿ ಇ.ಡಿ, ಐಟಿ ಹೋಗಲ್ಲ. ಬರೀ ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಚಿಕ್ಕಮಗಳೂರು-ತಿರುಪತಿ ನಡುವೆ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸೇವೆ ಪ್ರಾರಂಭ

    ಸುಬ್ಬಾರೆಡ್ಡಿಯವರು ತುಂಬಾ ಕಷ್ಟಪಟ್ಟು ಬಡತನದಲ್ಲಿ ಮೇಲೆಬಂದು ಬೆಂಗಳೂರಿನಲ್ಲಿ ತನ್ನದೇ ಆದ ಸಾಮ್ರಾಜ್ಯವನ್ನು ಕಟ್ಟಿಕೊಂಡು ಮೂರು ಬಾರಿ ಶಾಸಕರಾಗಿದ್ದಾರೆ. ಸುಬ್ಬಾರೆಡ್ಡಿ ಅಂದರೆ ಪಕ್ಷನಿಷ್ಠೆ, ಪಕ್ಷನಿಷ್ಠೆ ಅಂದರೆ ಅದು ಸುಬ್ಬಾರೆಡ್ಡಿ. ಅಂತಹ ವ್ಯಕ್ತಿಯ ಮನೆಮೇಲೆ ಇಂದು ಇಡಿ ರೇಡ್ ಮಾಡಿದೆ. ಅದಾನಿ, ಅಂಬಾನಿ ಮೇಲೆ ಇಡಿ ದಾಳಿ ಆಗಲ್ಲ. ಬಿಜೆಪಿ, ವಿಜಯೇಂದ್ರ ಮೇಲೆ ರೇಡ್ ಆಗಲ್ಲ. ಐಟಿ, ಇಡಿಯವರಿಗೆ ಕಾಂಗ್ರೆಸ್‌ನವರ ಮೇಲೆ ಬಹಳ ಪ್ರೀತಿ. ಕೇಂದ್ರ ಮತ್ತು ರಾಜ್ಯ ಬಿಜೆಪಿ ಎಷ್ಟೇ ಟಾರ್ಗೆಟ್ ಮಾಡಿದರೂ ನಾವು ಹೆದರಲ್ಲ ಎಂದರು. ಇದನ್ನೂ ಓದಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆ, ಚರ್ಚೆ ಇಲ್ಲ: ಹೆಚ್.ಸಿ.ಮಹದೇವಪ್ಪ

    2029ರಲ್ಲಿ ಅಧಿಕಾರಕ್ಕೆ ಬಂದಾಗ ಬಿಜೆಪಿಯವರನ್ನು ಹುಡುಕಿ ಹುಡುಕಿ ತಿಹಾರ್ ಜೈಲನ್ನು ತುಂಬಿಸುತ್ತೇವೆ. ಅವರು ಫ್ಲವರ್ ಹಾಕಿದರೆ ನಾವು ಪಾಟ್ ಸೇರಿಸಿ ಹಾಕುತ್ತೇವೆ. ಕಾಂಗ್ರೆಸ್ ಶಾಸಕರನ್ನು ಪದೇ ಪದೇ ಟಾರ್ಗೆಟ್ ಮಾಡಲಾಗುತ್ತಿದೆ. ಇದು ಬಿಜೆಪಿಯವರಿಗೆ ಒಳ್ಳೆಯದಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: SSLC ಫಲಿತಾಂಶ ಹೆಚ್ಚಳಕ್ಕೆ ಕ್ರಮ – 29 ಅಂಶಗಳ ಕಾರ್ಯಕ್ರಮ ಅನುಷ್ಠಾನಗೊಳಿಸಿದ ಶಿಕ್ಷಣ ಇಲಾಖೆ

  • ಇಡಿ ಸಾಂವಿಧಾನಿಕ ಸಂಸ್ಥೆ ಅಲ್ಲ, ಬಿಜೆಪಿ ಅಂಗಸಂಸ್ಥೆ: ಇಡಿ ದಾಳಿಗೆ ಹರಿಪ್ರಸಾದ್ ಆಕ್ಷೇಪ

    ಇಡಿ ಸಾಂವಿಧಾನಿಕ ಸಂಸ್ಥೆ ಅಲ್ಲ, ಬಿಜೆಪಿ ಅಂಗಸಂಸ್ಥೆ: ಇಡಿ ದಾಳಿಗೆ ಹರಿಪ್ರಸಾದ್ ಆಕ್ಷೇಪ

    ನವದೆಹಲಿ: ವಾಲ್ಮೀಕಿ ನಿಗಮ ಮಂಡಳಿಯಲ್ಲಿ ಭ್ರಷ್ಟಚಾರ ನಡೆದಿದ್ದರೆ (Valmiki Scam) ಕಾನೂನು ಚೌಕಟ್ಟಿನಲ್ಲಿ ಕ್ರಮ ಆಗಲಿ ಆದರೆ ಅದು ರಾಜಕೀಯ ಪ್ರೇರಿತ ದಾಳಿಯಾಗಬಾರದು ಎಂದು ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ (BK Hariprasad) ಹೇಳಿದ್ದಾರೆ.

    ನವದೆಹಲಿಯಲ್ಲಿ ಮಾತನಾಡಿದ ಅವರು ವಾಲ್ಮಿಕಿ ಹಗರಣದಲ್ಲಿ ತಪ್ಪಾಗಿದೆ ಎಂದು ಎಲ್ಲರಿಗೂ ಗೊತ್ತಿದೆ. ಆದರೆ ಸಚಿವರ ಪಾತ್ರ ಇಲ್ಲ ಎಂದು ಸಾಬೀತಾಗಿದೆ. ಇಡಿ (ED) ಸಾಂವಿಧಾನಿಕ ಸಂಸ್ಥೆ ಅಲ್ಲ, ಬಿಜೆಪಿ ಅಂಗಸಂಸ್ಥೆ. ರಾಜಕೀಯ ಕಾರಣಗಳಿಗೆ ದಾಳಿಯಾಗಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಶಾಸಕರು, ಸಂಸದರ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ: ಪೊನ್ನಣ್ಣ

    ಜಾತಿ ಮರು ಸಮೀಕ್ಷೆಗೆ ಹೈಕಮಾಂಡ್ ಸೂಚನೆ ನೀಡಿದ ಬಗ್ಗೆ ಮಾತನಾಡಿದ ಅವರು, ಈಗ ಮಾಡಿರುವ ವರದಿ ಹಳೆಯದಾಗಿದೆ. ಜಯ ಪ್ರಕಾಶ್ ಹೆಗಡೆ ವರದಿ ಅವೈಜ್ಞಾನಿಕ ಎಂದರು. ಆದರೆ ಹೇಗೆ ಎಂದು ಯಾರು ಹೇಳಿಲ್ಲ. ಮುಂದಿನ ದಿನಗಳಲ್ಲಿ ಹೇಗೆ ಸಮೀಕ್ಷೆ ಬರುತ್ತೆ ಎಂದು ಜನರು ಎದುರು ನೋಡುತ್ತಿದ್ದಾರೆ. ಇಂತಹದೇ ಆರೋಪಗಳು ಮುಂದೆಯೂ ಬರಬಹುದು. ಅವೈಜ್ಞಾನಿಕ ಏನು ಎಂಬುದು ಸ್ಪಷ್ಟಪಡಿಸಬೇಕು, ಅದನ್ನು ಸರಿಪಡಿಸಿಕೊಂಡು ಮತ್ತೊಮ್ಮೆ ಸಮೀಕ್ಷೆ ಮಾಡಬೇಕು. ತೆಲಂಗಾಣದಲ್ಲಿ ಸಮೀಕ್ಷೆ ಮಾಡಿ ತೋರಿಸಿದೆ, ಇಲ್ಲೂ ಮಾಡುತ್ತೇವೆ. ಈಗಾಗಲೇ ಸಮೀಕ್ಷೆಯಿಂದ 187 ಕೊಟಿ ನಷ್ಟವಾಗಬಹುದು, ಮುಂದೆ ಹೀಗೆ ಆಗಬಾರದು. ಬಲಾಢ್ಯರಿಗೆ ಮಾತ್ರ ಅನುಕೂಲವಾಗಬಾರದು. ಹಿಂದುಳಿದ ಜನರಿಗೂ ಸಂವಿಧಾನದ ಆಶಯ ತಲುಪಬೇಕು ಎಂದು ಹೇಳಿದರು. ಇದನ್ನೂ ಓದಿ: ವಾಲ್ಮೀಕಿ ಹಗರಣದ 187 ಕೋಟಿ ಹಣ ಒಡವೆ ಅಂಗಡಿ, ಕಾರ್ ಶೋರೂಂ, ಬಾರ್‌ಗೆ ಹೋಗಿದೆ: ಸಿ.ಟಿ.ರವಿ ಆರೋಪ

    ಸಚಿವ ಸಂಪುಟ ಪುನಾರಚನೆ ಸುದ್ದಿ ಎರಡು ದಿನದಿಂದ ಓಡಾಡುತ್ತಿದೆ. ಇದು ಬೆಟ್ಟ ಅಗೆದು ಇಲಿ ಹಿಡಿದಂತೆ ಆಗಲಿದೆ. ಏನು ಆಗಲ್ಲ, ಸರ್ಕಾರ ಆರಾಮವಾಗಿ ನಡೆದುಕೊಂಡು ಹೋಗುತ್ತದೆ. ಸಚಿವ ಸಂಪುಟ ಪುನಾರಚನೆ ಆಗಲ್ಲ ಎಂದರು. ಇದನ್ನೂ ಓದಿ: ಕಾಂಗ್ರೆಸ್ ನಾಯಕರನ್ನ ತೇಜೋವಧೆ ಮಾಡಲು ಇಡಿ ದಾಳಿ: ಅಶೋಕ್ ಪಟ್ಟಣ

  • ಕಾಂಗ್ರೆಸ್ ಶಾಸಕರು, ಸಂಸದರ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ: ಪೊನ್ನಣ್ಣ

    ಕಾಂಗ್ರೆಸ್ ಶಾಸಕರು, ಸಂಸದರ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ: ಪೊನ್ನಣ್ಣ

    ಬೆಂಗಳೂರು: ಕಾಂಗ್ರೆಸ್ ಶಾಸಕರು, ಸಂಸದರ ಮೇಲೆ ಇಡಿ ದಾಳಿ ಮಾಡಿರೋದು ರಾಜಕೀಯ ಪ್ರೇರಿತ ಎಂದು ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ (AS Ponnanna) ಇಡಿ ವಿರುದ್ಧ ಕಿಡಿಕಾರಿದ್ದಾರೆ.

    ಇಡಿ ದಾಳಿ (ED Raid) ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಡಿ ಅವರು ವಾಲ್ಮೀಕಿ ಪ್ರಕರಣ ತನಿಖೆ ಮಾಡುತ್ತಿರುವುದೇ ಕಾನೂನುಬಾಹಿರ. ಇದೊಂದು ರಾಜಕೀಯ ಪ್ರೇರಿತ ದಾಳಿ. ಇದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಈಗಾಗಲೇ ವಾಲ್ಮೀಕಿ ಕೇಸ್‌ನಲ್ಲಿ ತನಿಖೆ ಮುಗಿದು ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. ಚಾರ್ಜ್ ಶೀಟ್ ವಿರುದ್ಧ ನಾಗೇಂದ್ರ ಕೋರ್ಟ್ ಮೊರೆ ಹೋಗಿದ್ದಾರೆ. ಈಗ ದಾಳಿ ಮಾಡಿರೋದು ನೋಡಿದ್ರೆ ಇಡಿ ಅಧಿಕಾರ ವ್ಯಾಪ್ತಿ ಏನು ಎಂದು ಪ್ರಶ್ನೆ ಮಾಡಬೇಕಾಗಿದೆ.ಇದೇನು ಮರು ತನಿಖೆನಾ? ಏನು ಗೊತ್ತಿಲ್ಲ. ಇದೊಂದು ರಾಜಕೀಯ ಪ್ರೇರಿತ ದಾಳಿ ಅಲ್ಲದೇ ಏನು ಅಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ವಾಲ್ಮೀಕಿ ಹಗರಣದ 187 ಕೋಟಿ ಹಣ ಒಡವೆ ಅಂಗಡಿ, ಕಾರ್ ಶೋರೂಂ, ಬಾರ್‌ಗೆ ಹೋಗಿದೆ: ಸಿ.ಟಿ.ರವಿ ಆರೋಪ

    ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಇದನ್ನು ಸಹಿಸೋಕೆ ಆಗುತ್ತಿಲ್ಲ. ಹೀಗಾಗಿ ಇದೆಲ್ಲ ಮಾಡುತ್ತಿದ್ದಾರೆ. ಮಂಗಳವಾರ ಮುಡಾ ಕೇಸ್‌ನಲ್ಲಿ 100 ಕೋಟಿ ಜಪ್ತಿ ಎಂದು ರಿಲೀಸ್ ಮಾಡಿದ್ದಾರೆ. ಜನರನ್ನು ದಾರಿ ತಪ್ಪಿಸೋಕೆ ಇಡಿ ಹೀಗೆ ಮಾಡುತ್ತಿದೆ. ವಿಪಕ್ಷಕ್ಕೆ ಲಾಭ ಮಾಡಲು ಹೀಗೆ ಮಾಡಲಾಗುತ್ತಿದೆ. ಇದು ಖಂಡನೀಯ, ರಾಜಕೀಯ ಪ್ರೇರಿತ. ಇದನ್ನು ವಿರೋಧ ಮಾಡುತ್ತೇವೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಾಂಗ್ರೆಸ್ ನಾಯಕರನ್ನ ತೇಜೋವಧೆ ಮಾಡಲು ಇಡಿ ದಾಳಿ: ಅಶೋಕ್ ಪಟ್ಟಣ

  • ವಾಲ್ಮೀಕಿ ಹಗರಣದ 187 ಕೋಟಿ ಹಣ ಒಡವೆ ಅಂಗಡಿ, ಕಾರ್ ಶೋರೂಂ, ಬಾರ್‌ಗೆ ಹೋಗಿದೆ: ಸಿ.ಟಿ.ರವಿ ಆರೋಪ

    ವಾಲ್ಮೀಕಿ ಹಗರಣದ 187 ಕೋಟಿ ಹಣ ಒಡವೆ ಅಂಗಡಿ, ಕಾರ್ ಶೋರೂಂ, ಬಾರ್‌ಗೆ ಹೋಗಿದೆ: ಸಿ.ಟಿ.ರವಿ ಆರೋಪ

    ಚಿಕ್ಕಮಗಳೂರು: ವಾಲ್ಮೀಕಿ ಹಗರಣದ 187 ಕೋಟಿ ರೂ. ಹಣ ಒಡವೆ ಅಂಗಡಿ, ಪೋರ್ಶೆ ಕಾರು ಶೋರೂಂ, ಬಾರ್‌ಗೆ ಹೋಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಪರಿಷತ್ ಸದಸ್ಯ ಸಿ.ಟಿ.ರವಿ ವಾಗ್ದಾಳಿ ನಡೆಸಿದರು.

    ಇಡಿ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಲೋಕಸಭೆ ಚುನಾವಣೆಗೆ ಈ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಅಂತ ಅಂಕಿ-ಅಂಶ ಸಮೇತ ಮಾಹಿತಿ ನೀಡಿದ್ವಿ. ನಾವು ಮಾಹಿತಿ ಕೊಟ್ಟರೂ ಸಿಐಡಿ ಸರಿಯಾಗಿ ತನಿಖೆ ಮಾಡಲಿಲ್ಲ. ಈಗ ಇಡಿ ರೇಡ್ ಮಾಡಿರೋದನ್ನ ನಾನು ಸ್ವಾಗತಿಸುತ್ತೇನೆ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ. ಪರಿಶಿಷ್ಟ ಪಂಗಡದ ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ ಯೋಜನೆ, ವಾಹನ-ಭೂ ಖರೀದಿಗೆ ಬಳಕೆ ಆಗಬೇಕಾದ ಹಣ ಚುನಾವಣೆ ಅಕ್ರಮ, ಬಾರ್, ಕಾರು ಶೋ ರೂಂಗೆ ಬಳಕೆಯಾಗೋದು ದರೋಡೆಗಿಂತ ಕ್ರೂರವಾಗಿರೋದು. ವ್ಯವಸ್ಥೆಯೊಳಗೆ ಇರೋರೆ ಮಾಡಿದ ದರೋಡೆ, ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

    ರಾಜ್ಯದಲ್ಲಿ ಮತ್ತೊಮ್ಮೆ ಜಾತಿಗಣತಿ ವಿಚಾರ ಕುರಿತು ಪ್ರತಿಕ್ರಿಯಿಸಿ, ಕಾಂತರಾಜ್ ವರದಿಯನ್ನು ರಾಜ್ಯ ಸರ್ಕಾರ ವೈಜ್ಞಾನಿಕ ವರದಿ ಎಂದು ಸಮರ್ಥನೆ ಮಾಡಿತ್ತು. ಸಿಎಂ ಅದನ್ನ ತಮ್ಮ ಮಹತ್ವಾಕಾಂಕ್ಷೆ ಎಂದು ಹೇಳುತ್ತಿದ್ದರು. ಕಾಂತರಾಜ್ ವರದಿ ಬಳಿಕ ಜಯಪ್ರಕಾಶ್ ಹೆಗ್ಡೆ ಸ್ಕೂಟ್ನಿ ಮಾಡಿದ್ದೇನೆ ಎಂದಿದ್ರು. ನೂರಾರು ಕೋಟಿ ಖರ್ಚು ಮಾಡಿದ್ದಾರೆ. ಈಗ ಮತ್ತೆ ಜಾತಿ ಗಣತಿ ಅಂತಿದ್ದಾರೆ. ಹಾಗಾದ್ರೆ ಮೊದಲಿನ ವರದಿ ಅವೈಜ್ಞಾನಿಕ ಅಂತ ಒಪ್ಕೊಳ್ತೀರಾ? ವೈಜ್ಞಾನಿಕ ಎಂದು ಒಪ್ಪಿಕೊಳ್ಳುವುದಾದರೆ ಸರ್ಕಾರದ ಹಣವನ್ನು ವಸೂಲಿ ಮಾಡಿ ಎಂದು ಆಗ್ರಹಿಸಿದರು.

    ಕೇಂದ್ರ ಸರ್ಕಾರ ಜನಗಣತಿ ಜೊತೆ ಜಾತಿ ಗಣತಿಯನ್ನು ಪ್ರಕಟ ಮಾಡಿದೆ. ಜನಗಣತಿ ಹಾಗೂ ಜಾತಿ ಗಣತಿ ಮಾಡುವ ಸಂವಿಧಾನದತ್ತ ಅಧಿಕಾರವಿರುವುದು ಕೇಂದ್ರಕ್ಕೆ, ರಾಜ್ಯಕ್ಕಲ್ಲ. ರಾಜಕೀಯ ಕಾರಣಕ್ಕೆ ವಿಷಯಾಂತರ ಮಾಡಲು ಈಗ ಮತ್ತೆ ಜಾತಿಗಣತಿ ಎನ್ನುತ್ತಿದ್ದಾರೆ. ನಿಮ್ಮ ಇಚ್ಛಾಶಕ್ತಿ ಇಲ್ಲದ ರಾಜಕೀಯ ತೆವಲಿಗೆ ಮತ್ತೆ, ಜಾತಿ ದುರ್ಬಳಕೆಗೆ ಮತ್ತೆ ನೂರಾರು ಕೋಟಿ ಖರ್ಚು ಮಾಡಬೇಕಾ? ಜಾತಿ ಎತ್ತು ಕಟ್ಟಲು ಸರ್ಕಾರದ ಹಣ ಬೇಕಾ? ಇದು ಕಾಂಗ್ರೆಸ್ ಹಣ ಅಲ್ಲ, ಜನರ ತೆರಿಗೆ ಹಣ. ಕಾಂತರಾಜ್ ವರದಿ ವೈಜ್ಞಾನಿಕ ಎಂದು ಜನರಿಗೆ ಮಂಕು ಬೂದಿ ಎರಚಲು ಸುಳ್ಳು ಹೇಳಿದ್ರಾ? ನಿಮ್ಮ ‘ಕೈ’ ಕಮಾಂಡ್ ಒತ್ತಡಕ್ಕೆ ವರದಿ ಬಲಿಯಾಯ್ತಾ? ನ್ಯಾಯ ಕುಡಿಸುತ್ತೇನೆ ಎಂದು ಹೇಳುತ್ತಿದ್ರಲ್ಲ, ತಿheಡಿe is ಥಿouಡಿ ಇಚ್ಛಾಶಕ್ತಿ. ಕಾಂತರಾಜ್, ಜಯಪ್ರಕಾಶ್ ವರದಿ, ದಲಿತರು, ಹಿಂದುಳಿದವರು ಯಾರಿಗೂ ನ್ಯಾಯ ಇಲ್ಲ… ಎಲ್ಲಿದೆ ನ್ಯಾಯ, ನಿಮ್ಮ ನಂಬಿದವರಿಗೆ ಯಾರಿಗೂ ನ್ಯಾಯ ಇಲ್ಲ ಎಂದು ಕಿಡಿಕಾರಿದರು.

    ತುಮಕೂರು ಜಿಲ್ಲೆಯನ್ನ ಬೆಂಗಳೂರು ಉತ್ತರ ಮಾಡುವ ವಿಚಾರ ಬಗ್ಗೆ ಮಾತನಾಡಿ, ಕೆಂಪೇಗೌಡರು ಬೆಂದಕಾಳೂರು ಎಂಬ ಹಳ್ಳಿಯನ್ನೇ ಬ್ರಾಂಡ್ ಮಾಡಿದ್ರು. ಸಿಂಗಾಪುರ ಒಂದು ಕಾಲದಲ್ಲಿ ರೋಗಗ್ರಸ್ಥವಾಗಿದ್ದ ಸಣ್ಣ ಹಳ್ಳಿ. ಸಿಂಗಾಪುರವನ್ನು ಅಲ್ಲಿಯವರು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸಿದರು. ಇವರಿಗೆ ಭವಿಷ್ಯದಲ್ಲಿ ತನ್ನ ಊರನ್ನೇ ಬ್ರಾಂಡ್ ಮಾಡುವ ತಾಕತ್ತು ಇಲ್ವಾ. ಬೆಂಗಳೂರು ಹೆಸರಿನಲ್ಲೇ ಇವರು ತಮ್ಮ ಬೇಳೆ ಬೇಯಿಸಿಕೊಳ್ಳಬೇಕಾ? ತುಮಕೂರಿಗೂ ಒಂದು ಐಡೆಂಟಿಟಿ ಕೊಡುವ ತಾಕತ್ತು ಇವರಿಗಿಲ್ವಾ? ಹಳ್ಳಿಯನ್ನೇ ಬ್ರಾಂಡ್ ಮಾಡುವ ದಾರ್ಶನಿಕರು ಇರುವ ಕಡೆ ಇವರು ಬೆಂಗಳೂರು ಹೆಸರಲ್ಲೇ ಬೇಳೆ ಬೇಯಿಸಿಕೊಳ್ಳಬೇಕಾ? ತುಮಕೂರಿನ್ನೇ ಜಾಗತೀಕ ಮಟ್ಟದಲ್ಲಿ ಬೆಳೆಸೋಕೆ ಇವರಿಗೆ ಬರೋದಿಲ್ವಾ? ಇವರು ಕೆಂಪೇಗೌಡರ ಹೆಸರಲ್ಲೇ ಬೇಳೆ ಬೇಯಿಸಿಕೊಳ್ಳಲು ನೋಡುತ್ತಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

  • ಕಾಂಗ್ರೆಸ್ ನಾಯಕರನ್ನ ತೇಜೋವಧೆ ಮಾಡಲು ಇಡಿ ದಾಳಿ: ಅಶೋಕ್ ಪಟ್ಟಣ

    ಕಾಂಗ್ರೆಸ್ ನಾಯಕರನ್ನ ತೇಜೋವಧೆ ಮಾಡಲು ಇಡಿ ದಾಳಿ: ಅಶೋಕ್ ಪಟ್ಟಣ

    ಬೆಂಗಳೂರು: ಕಾಂಗ್ರೆಸ್ ನಾಯಕರನ್ನ ತೇಜೋವಧೆ ಮಾಡಲು ಇಡಿ ದಾಳಿ (ED Raid) ಮಾಡಿದೆ ಎಂದು ವಿಧಾನಸಭೆ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ (Ashok Pattan) ಇಡಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಇಡಿ ದಾಳಿ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಂಸದ ತುಕಾರಾಂ, ಶಾಸಕ ನಾಗೇಂದ್ರ ಸೇರಿದಂತೆ ಹಲವರ ಮೇಲೆ ಇಡಿ ದಾಳಿ ಮಾಡಿದೆ. ಎಂಪಿ ತುಕಾರಾಂ ಸಭ್ಯಸ್ಥ ವ್ಯಕ್ತಿ. ಬಳ್ಳಾರಿಯಲ್ಲಿ ಕಾಂಗ್ರೆಸ್‌ನವರ ಮೇಲೆ ದಾಳಿ ನಡೆದಿದೆ. ಇಡಿ ದಾಳಿ ಮಾಡಿ ತೇಜೊವಧೆಗೆ ಮಾಡೋ ಕೆಲಸ ಮಾಡ್ತಿದ್ದಾರೆ. ಈಗಾಗಲೇ ತನಿಖೆ ನಡೆಯುತ್ತಿದೆ. ಈಗ ದಾಳಿ ಮಾಡ್ತಿರೋದಕ್ಕೆ ರಾಜಕೀಯ ಕಾರಣ ಇದೆ ಅಂತ ಆರೋಪ ಮಾಡಿದರು. ಇದನ್ನೂ ಓದಿ: ಬಳ್ಳಾರಿ ಚುನಾವಣೆಗೆ 21 ಕೋಟಿ ಹಣ ಬಳಕೆ ಆರೋಪ – ಸಂಸದ ತುಕಾರಾಂ ಇಡಿ ವಶಕ್ಕೆ

    ಚುನಾವಣೆಗೆ ಹಣ ಬಳಕೆಯಾಗಿದೆ ಅನ್ನೋದಕ್ಕೆ ತನಿಖೆ ನಡೆಯುತ್ತಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್ ನಾಯಕರ ಮೇಲೆ ದಾಳಿ ಆಗ್ತಿದೆ. ತನಿಖೆಯಲ್ಲಿ ತಪ್ಪಾಗಿರೋದು ಕಂಡು ಬಂದ್ರೆ ಶಿಕ್ಷೆಯಾಗಲಿ‌. ಅದು ಬಿಟ್ಟು ಹೀಗೆ ತೇಜೋವಧೆ ಮಾಡೋದು ಸರಿಯಲ್ಲ ಎಂದರು.

    ನಾಗೇಂದ್ರ ಅವರನ್ನ ಮತ್ತೆ ಕ್ಯಾಬಿನೆಟ್‌ಗೆ ಸೇರಿಸಿಕೊಳ್ಳೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾಗೇಂದ್ರ ಅವರನ್ನ ಸಂಪುಟಕ್ಕೆ ತೆಗೆದುಕೊಳ್ಳೋದು ಹೈಕಮಾಂಡ್, ಸಿಎಂಗೆ ಬಿಟ್ಟಿದ್ದು ಎಂದು ತಿಳಿಸಿದರು. ಇದನ್ನೂ ಓದಿ: ವಾಲ್ಮೀಕಿ ಹಗರಣ; ಸಂಸದ ತುಕಾರಾಂ, ಮೂವರು ಶಾಸಕರ ಮನೆ ಮೇಲೆ ED ದಾಳಿ