Tag: ED summons

  • ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ – ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಸೇರಿ ಮೂವರಿಗೆ ಇಡಿ ಸಮನ್ಸ್

    ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ – ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಸೇರಿ ಮೂವರಿಗೆ ಇಡಿ ಸಮನ್ಸ್

    ನವದೆಹಲಿ: ಅಕ್ರಮ ಬೆಟ್ಟಿಂಗ್ ಆ್ಯಪ್ (Betting App) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗರಾದ ಯುವರಾಜ್‌ ಸಿಂಗ್‌, ರಾಬಿನ್ ಉತ್ತಪ್ಪ ಹಾಗೂ ನಟ ಸೋನು ಸೂದ್‌ಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ಜಾರಿಗೊಳಿಸಿದೆ.

    ಅಧಿಕಾರಿಗಳ ಮಾಹಿತಿ ಪ್ರಕಾರ, ಇದು 1xBet ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದೆ. ಈ ಹಿನ್ನೆಲೆ ಮೂವರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಅದರಂತೆ ಸೆ.22ಕ್ಕೆ ರಾಬಿನ್ ಉತ್ತಪ್ಪ (Robin Uthappa), ಸೆ.23ಕ್ಕೆ ಯುವರಾಜ್ ಸಿಂಗ್ (Yuvraj Singh) ಹಾಗೂ ಸೆ.24ಕ್ಕೆ ನಟ ಸೋನು ಸೂದ್‌ (Sonu Sood) ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಈ ವೇಳೆ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿಯಲ್ಲಿ ಮೂವರ ಹೇಳಿಕೆ ದಾಖಲಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಅಕ್ರಮ ಬೆಟ್ಟಿಂಗ್‌ ಆ್ಯಪ್ ಪ್ರಕರಣ – ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಶಿಖರ್‌ ಧವನ್‌ಗೆ ಇಡಿ ಸಮನ್ಸ್‌

    ಇತ್ತೀಚಿಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಶಿಖರ್ ಧವನ್ (Shikar Dhawan) ಇಡಿ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಸತತ 8 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದರು ಎಂದು ತಿಳಿದುಬಂದಿದೆ.

    ಏನಿದು ಕೇಸ್?
    ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ವಂಚನೆ ಜೊತೆಗೆ ಭಾರೀ ಪ್ರಮಾಣದ ತೆರಿಗೆ ವಂಚನೆ ಮಾಡಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ಬೆಟ್ಟಿಂಗ್ ಆ್ಯಪ್‌ಗಳಿಗೆ ಸಂಬಂಧಿಸಿದ ಹಲವಾರು ಪ್ರಕರಣಗಳ ತನಿಖೆ ನಡೆಸುತ್ತಿದೆ. ಈಗಾಗಲೇ ಬೆಟ್ಟಿಂಗ್ ಆ್ಯಪ್‌ಗಳ ಪ್ರಚಾರದಲ್ಲಿದ್ದ ಹಲವಾರು ಬಾಲಿವುಡ್ ಮತ್ತು ದಕ್ಷಿಣ ಭಾರತದ ಚಲನಚಿತ್ರ ತಾರೆಯರು, ಕ್ರಿಕೆಟಿಗರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುತ್ತಿದೆ.

    ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ಹರ್ಭಜನ್ ಸಿಂಗ್, ಊರ್ವಶಿ ರೌಟೇಲಾ ಮತ್ತು ಸುರೇಶ್ ರೈನಾ ಕೂಡಾ ಈ ಪಟ್ಟಿಯಲ್ಲಿದ್ದಾರೆ. ಕಳೆದ ತಿಂಗಳು ಸುರೇಶ್ ರೈನಾ ವಿಚಾರಣೆ ಎದುರಿಸಿದ್ದರು.

  • ಅಕ್ರಮ ಬೆಟ್ಟಿಂಗ್‌ ಆ್ಯಪ್ ಪ್ರಕರಣ – ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಶಿಖರ್‌ ಧವನ್‌ಗೆ ಇಡಿ ಸಮನ್ಸ್‌

    ಅಕ್ರಮ ಬೆಟ್ಟಿಂಗ್‌ ಆ್ಯಪ್ ಪ್ರಕರಣ – ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಶಿಖರ್‌ ಧವನ್‌ಗೆ ಇಡಿ ಸಮನ್ಸ್‌

    ನವದೆಹಲಿ: ಅಕ್ರಮ ಬೆಟ್ಟಿಂಗ್‌ ಆ್ಯಪ್‌ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಕ್ರಿಕೆಟಿಗ ಶಿಖರ್‌ ಧವನ್‌ಗೆ (Shikhar Dhawan) ಜಾರಿ ನಿರ್ದೇಶನಾಲಯ (ED) ಸಮನ್ಸ್‌ ಜಾರಿಗೊಳಿಸಿದೆ.

    ಅಧಿಕಾರಿಗಳ ಪ್ರಕಾರ, ಪ್ರಕರಣದ ತನಿಖೆಯು ʻ1xBetʼ ಬೆಟ್ಟಿಂಗ್ ಆ್ಯಪ್‌ಗೆ (Illegal Betting App Case) ಸಂಬಂಧಿಸಿದೆ. ಶಿಖರ್‌ ಧವನ್‌ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಗಳ ಮೂಲಕ ಬೆಟ್ಟಿಂಗ್‌ ಆ್ಯಪ್‌ ಪರ ಪ್ರಚಾರ ಮಾಡ್ತಿದ್ದಾರೆ. ಹೀಗಾಗಿ ʻ1xBetʼ ಆ್ಯಪ್‌ ಜಾಹೀರಾತಿಗೆ ಸಂಬಂಧಿಸಿದಂತೆ 39 ವರ್ಷದ ಧವನ್‌ ತಮ್ಮ ಪಾತ್ರ ಸ್ಪಷ್ಟಪಡಿಸಬೇಕಿದೆ. ಅದಕ್ಕಾಗಿ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್‌ ಜಾರಿ ಮಾಡಿದೆ. ಇದನ್ನೂ ಓದಿ: ದಿಗ್ಗಜರನ್ನ ಹಿಂದಿಕ್ಕಿದ ಸಿಕಂದರ್‌ ರಜಾ – ಪಾಕ್‌ ಮೂಲದ ಜಿಂಬಾಬ್ವೆ ಆಟಗಾರ ವಿಶ್ವದ ನಂ.1 ಆಲ್‌ರೌಂಡರ್‌

    ತನಿಖೆಯ ಭಾಗವಾಗಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (PMLA) ಅಡಿಯಲ್ಲಿ ಹೇಳಿಕೆ ದಾಖಲಿಸಲಾಗುವುದು ಎಂದು ಇಡಿ ತಿಳಿಸಿದೆ. ಇದನ್ನೂ ಓದಿ: ಆರ್‌ಸಿಬಿ ಐತಿಹಾಸಿಕ ಗೆಲುವಿನ ಸಂತೋಷದ ಕ್ಷಣ ದುರಂತವಾಯ್ತು – ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಟ್ವೀಟ್

    ಏನಿದು ಕೇಸ್‌?
    ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ವಂಚನೆ ಜೊತೆಗೆ ಭಾರೀ ಪ್ರಮಾಣದ ತೆರಿಗೆ ವಂಚನೆ ಮಾಡಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ಬೆಟ್ಟಿಂಗ್‌ ಆ್ಯಪ್‌ಗಳಿಗೆ ಸಂಬಂಧಿಸಿದ ಹಲವಾರು ಪ್ರಕರಣಗಳ ತನಿಖೆ ನಡೆಸುತ್ತಿದೆ. ಈಗಾಗಲೇ ಬೆಟ್ಟಿಂಗ್‌ ಆ್ಯಪ್‌ಗಳ ಪ್ರಚಾರದಲ್ಲಿದ್ದ ಹಲವಾರು ಬಾಲಿವುಡ್ ಮತ್ತು ದಕ್ಷಿಣ ಭಾರತದ ಚಲನಚಿತ್ರ ತಾರೆಯರು, ಕ್ರಿಕೆಟಿಗರಿಗೂ ನೋಟಿಸ್‌ ನೀಡಿ ವಿಚಾರಣೆ ನಡೆಸಲಾಗುತ್ತಿದೆ.

    ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ಹರ್ಭಜನ್ ಸಿಂಗ್, ಊರ್ವಶಿ ರೌಟೇಲಾ ಮತ್ತು ಸುರೇಶ್ ರೈನಾ ಕೂಡಾ ಈ ಪಟ್ಟಿಯಲ್ಲಿದ್ದಾರೆ. ಕಳೆದ ತಿಂಗಳು ಸುರೇಶ್‌ ರೈನಾ ವಿಚಾರಣೆ ಎದುರಿಸಿದ್ದರು. ಇದನ್ನೂ ಓದಿ: ಟಿ20 ಕ್ರಿಕೆಟ್‌ಗೆ ದಿಢೀರ್‌ ನಿವೃತ್ತಿ ಘೋಷಿಸಿದ ಮಿಚೆಲ್‌ ಸ್ಟಾರ್ಕ್

  • ಇಡಿ ಸಮನ್ಸ್ – ವಿಚಾರಣೆಯಿಂದ ವಿನಾಯಿತಿ ಕೋರಿದ ಸೋನಿಯಾ

    ಇಡಿ ಸಮನ್ಸ್ – ವಿಚಾರಣೆಯಿಂದ ವಿನಾಯಿತಿ ಕೋರಿದ ಸೋನಿಯಾ

    ನವದೆಹಲಿ: ಕೋವಿಡ್ ಹಿನ್ನೆಲೆಯಲ್ಲಿ ವಿಚಾರಣೆಯಿಂದ ವಿನಾಯಿತಿ ನೀಡುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜಾರಿ ನಿರ್ದೇಶನಾಲಯ(ಇಡಿ) ಬಳಿ ಮನವಿ ಮಾಡಿದ್ದಾರೆ.

    ನ್ಯಾಷನಲ್ ಹೆರಾಲ್ಡ್ ಪ್ರಕರಣ ವಿಚಾರವಾಗಿ ಇಂದು ವಿಚಾರಣೆ ಹಾಜರಾಗುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಸಮನ್ಸ್ ನೀಡಲಾಗಿತ್ತು. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಅವರು ವಿಚಾರಣೆಗೆ ಹಾಜರಾಗಲು ಬದಲಿ ದಿನಾಂಕ ಕೇಳಿದ್ದಾರೆ.

    ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದರು.

    ಜೂನ್ 2 ರಂದು ರಾಹುಲ್ ಗಾಂಧಿ ಮತ್ತು ಜೂನ್ 8 ರಂದು ಸೋನಿಯಾ ಗಾಂಧಿ ವಿಚಾರಣೆಗೆ ಆಗಮಿಸಬೇಕೆಂದು ಸಮನ್ಸ್‌ನಲ್ಲಿ ತಿಳಿಸಲಾಗಿತ್ತು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‍ಎ) ಅಡಿಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಪ್ರಶ್ನೆ ಮಾಡಲು ಇಡಿ ಅಧಿಕಾರಿಗಳು ವಿಚಾರಣೆ ಮಾಡಲಿದ್ದಾರೆ.

    ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫೆನಾರ್ಂಡಿಸ್, ಸುಮನ್ ದುಬೆ ಮತ್ತು ಸ್ಯಾಮ್ ಪಿತ್ರೋಡಾ ವಿರುದ್ಧ ದೂರು ಸಲ್ಲಿಸಿದ್ದರು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವವನ್ನು ಪಡೆಯುವಲ್ಲಿ ವಂಚನೆ ಮಾಡಲಾಗಿದ್ದು, ಇಲ್ಲಿ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ತನಿಖೆಗೆ ಮನವಿ ಮಾಡಿದ್ದರು.

  • ದೇಶದ ಒಳಿತಿಗಾಗಿ ಪ್ರಧಾನಿ ಸ್ಥಾನವನ್ನು ತ್ಯಾಗ ಮಾಡಿದವರಿಗೆ ಕೊಡುವ ಬೆಲೆ ಇದೆಯೇ?: ಕೇಂದ್ರ ಸರ್ಕಾರಕ್ಕೆ ಡಿಕೆಶಿ ಪ್ರಶ್ನೆ

    ದೇಶದ ಒಳಿತಿಗಾಗಿ ಪ್ರಧಾನಿ ಸ್ಥಾನವನ್ನು ತ್ಯಾಗ ಮಾಡಿದವರಿಗೆ ಕೊಡುವ ಬೆಲೆ ಇದೆಯೇ?: ಕೇಂದ್ರ ಸರ್ಕಾರಕ್ಕೆ ಡಿಕೆಶಿ ಪ್ರಶ್ನೆ

    ಬೆಂಗಳೂರು: ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರಿಗೆ ಇಡಿ ಸಮನ್ಸ್ ನೀಡಿರುವುದು ಬಿಜೆಪಿ ಸರ್ಕಾರದ ಸೇಡಿನ ರಾಜಕಾರಣಕ್ಕೆ ಸಾಕ್ಷಿಯಾಗಿದೆ. ದೇಶದ ಒಳಿತಿಗಾಗಿ ಪ್ರಧಾನಿ ಸ್ಥಾನವನ್ನು ತ್ಯಾಗ ಮಾಡಿದವರಿಗೆ ಕೊಡುವ ಬೆಲೆ ಇದೆಯೇ? ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಇಡಿ ಸಮನ್ಸ್ ನೀಡಿರುವುದು ಬಿಜೆಪಿ ಸರ್ಕಾರದ ಸೇಡಿನ ರಾಜಕಾರಣಕ್ಕೆ ಸಾಕ್ಷಿಯಾಗಿದೆ. ದೇಶದ ಒಳಿತಿಗಾಗಿ ಪ್ರಧಾನಿ ಸ್ಥಾನವನ್ನು ತ್ಯಾಗ ಮಾಡಿದವರಿಗೆ ಕೊಡುವ ಬೆಲೆ ಇದೆಯೇ? ಈ ಸೇಡಿನ ರಾಜಕೀಯ ಸೋನಿಯಾ ಅವರ ವಿರುದ್ಧ ಅಷ್ಟೇ ಅಲ್ಲ ಕಾಂಗ್ರೆಸ್ ಬೆಂಬಲಿಸುವ ಸಾಮಾನ್ಯರ ವಿರುದ್ಧವೂ ಹೌದು. ಇದನ್ನೂ ಓದಿ: ಸೋನಿಯಾ, ರಾಹುಲ್ ಗಾಂಧಿಗೆ ಇಡಿ ಸಮನ್ಸ್

    ಕೇಂದ್ರ ಸರ್ಕಾರದ ಹಿಡಿತದಲ್ಲಿರುವ ED ಈಗ HD (Harassment Directorate) ಆಗಿದೆ. ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆರ್ಥಿಕ ನೀತಿಗಳು ವಿಫಲಗೊಂಡ ನಂತರ INC ನಾಯಕತ್ವವನ್ನು ಹತ್ತಿಕ್ಕುವ ಬಿಜೆಪಿ ಕನಸಿಗೆ ಆಯ್ಕೆಯಾಗಿ ಉಳಿದಿರುವುದು ಹಿರಿಯ ನಾಯಕರಿಗೆ ಕಿರುಕುಳ ನೀಡುವ ಏಕೈಕ ಅಡ್ಡದಾರಿ. ಇದನ್ನೂ ಓದಿ: ಲೆಕ್ಕಕ್ಕೆ ಸಿಗದಷ್ಟು ಹಣ ಬೆಂಗಳೂರಿನಿಂದ ದೆಹಲಿಗೆ ಅಕ್ರಮವಾಗಿ ವರ್ಗಾವಣೆ- ಡಿಕೆಶಿ ವಿರುದ್ಧ ಇಡಿ ಆರೋಪ

  • ಇಡಿ ಕೇಸ್‍ನಲ್ಲಿ ಡಿಕೆಶಿ ಆಪ್ತನ ಸಂಬಂಧಿಗಳಿಗೆ ಬಿಗ್ ರಿಲೀಫ್

    ಇಡಿ ಕೇಸ್‍ನಲ್ಲಿ ಡಿಕೆಶಿ ಆಪ್ತನ ಸಂಬಂಧಿಗಳಿಗೆ ಬಿಗ್ ರಿಲೀಫ್

    ನವದೆಹಲಿ: ಡಿ.ಕೆ ಶಿವಕುಮಾರ್ ಆಪ್ತ ಸಹಾಯಕ ಆಂಜನೇಯ ಸಂಬಂಧಿಗಳಿಗೆ ಇಂದು ದೆಹಲಿ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

    ದೆಹಲಿಗೆ ಬಂದು ವಿಚಾರಣೆ ಹಾಜರಾಗವಂತೆ ಇಡಿ ನೀಡಿದ್ದ ಸಮನ್ಸ್‍ನಿಂದ ನಿಂದ ರಿಯಾಯಿತಿ ಸಿಕ್ಕಿದ್ದು ದೆಹಲಿಗೆ ಬಂದು ವಿಚಾರಣೆ ಎದುರಿಸುವ ಅವಶ್ಯಕತೆ ಇಲ್ಲ ಎಂದು ನ್ಯಾ. ಬ್ರಿಜೇಶ್ ಸೇಥಿ ನೇತೃತ್ವದ ಏಕ ಸದಸ್ಯ ಅಭಿಪ್ರಾಯಪಟ್ಟಿದೆ.

    ದೆಹಲಿಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ನೀಡಿದ್ದ ಸಮನ್ಸ್ ಪಶ್ನಿಸಿ ಮತ್ತು ಬೆಂಗಳೂರಿನಲ್ಲಿ ವಿಚಾರಣೆ ನಡೆಸುವಂತೆ ಕೋರಿ ಡಿಕೆಶಿ ಆಪ್ತ ಆಂಜನೇಯ ಸಂಬಂಧಿಗಳಾದ ಜಿ.ಹನುಮಂತಯ್ಯ, ಮೀನಾಕ್ಷಿ, ಲಕ್ಷ್ಮಮ್ಮ, ಜಯಶೀಲ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಖುದ್ದು ವಿಚಾರಣೆಗೆ ಹಾಜರಾಗುವ ಅವಶ್ಯಕತೆ ಇಲ್ಲ ಆದರೆ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಕೇಳುವ ದಾಖಲೆಗಳನ್ನು ನೀಡುವಂತೆ ಸೂಚಿಸಿದೆ.

    ಇದೇ ಪ್ರಕರಣದ ಅಡಿ ಬೆಂಗಳೂರಿನಲ್ಲಿ ವಿಚಾರಣೆಗೆ ಕೋರಿ ಡಿ.ಕೆ ಶಿವಕುಮಾರ್ ಪತ್ನಿ ಉಷಾ ಕೂಡಾ ಅರ್ಜಿ ಸಲ್ಲಿಸಿದ್ದರು ಈ ಅರ್ಜಿಯನ್ನ ಜನವರಿ 15 ಕ್ಕೆ ಮುಂದೂಡಲಾಗಿದೆ.

  • ಇಡಿ ಸಮನ್ಸ್ – ಡಿಕೆಶಿ ಪತ್ನಿ ಉಷಾ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ

    ಇಡಿ ಸಮನ್ಸ್ – ಡಿಕೆಶಿ ಪತ್ನಿ ಉಷಾ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ

    ನವದೆಹಲಿ: ಜಾರಿ ನಿರ್ದೇಶನಾಲಯ(ಇಡಿ) ನೀಡಿರುವ ಸಮನ್ಸ್ ರದ್ದು ಮತ್ತು ಬೆಂಗಳೂರಿನಲ್ಲಿ ವಿಚಾರಣೆ ನಡೆಸಲು ಸೂಚಿಸುವಂತೆ ಕೋರಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಪತ್ನಿ ಉಷಾ ಅವರು ಸಲ್ಲಿಸಿರುವ ಅರ್ಜಿ ಇಂದು ವಿಚಾರಣೆಗೆ ಬರಲಿದೆ.

    ದೆಹಲಿ ಹೈಕೋರ್ಟಿನ ನ್ಯಾ. ಬ್ರಿಜೇಶ್ ಸೇಥಿ ನೇತೃತ್ವದ ಏಕ ಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಡಿ.ಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಡಿ ಡಿಕೆಶಿ ಅವರ ಪತ್ನಿ ಉಷಾ ಮತ್ತು ತಾಯಿ ಗೌರಮ್ಮ ಅವರಿಗೆ ದೆಹಲಿಗೆ ಬಂದು ವಿಚಾರಣೆ ಎದುರಿಸುವಂತೆ ಸಮನ್ಸ್ ಜಾರಿ ಮಾಡಿತ್ತು. ಇಡಿ ನೀಡಿದ್ದ ಸಮನ್ಸ್ ಪ್ರಶ್ನೆ ಮಾಡಿದ್ದ ಉಷಾ ಮತ್ತು ಗೌರಮ್ಮ ದೆಹಲಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.

    ಗೌರಮ್ಮಗೆ 85 ವರ್ಷ ವಯಸ್ಸಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಿಚಾರಣೆ ನಡೆಸಲು ಇಡಿ ಅಧಿಕಾರಿಗಳು ಕಳೆದ ವಿಚಾರಣೆಯಲ್ಲಿ ಒಪ್ಪಿಕೊಂಡಿದ್ದರು. ಹೀಗಾಗಿ ಗೌರಮ್ಮ ಸಲ್ಲಿಸಿದ್ದ ತಮ್ಮ ಅರ್ಜಿಯನ್ನು ಹಿಂಪಡೆದುಕೊಂಡಿದ್ದು, ಉಷಾ ಸಲ್ಲಿಸಿರುವ ಅರ್ಜಿ ಇಂದು ವಿಚಾರಣೆ ಬರಲಿದೆ.

    ಕಳೆದ ವಿಚಾರಣೆಯಲ್ಲಿ ವಾದ ಮಂಡಿಸಿದ್ದ ಇಡಿ ಪರ ವಕೀಲರು, ಗೌರಮ್ಮ ಹೊರತುಪಡಿಸಿ ಪ್ರಕರಣಕ್ಕೆ ಸಂಬಂಧಿಸಿದವರು ದೆಹಲಿಗೆ ಬಂದು ವಿಚಾರಣೆ ಎದುರಿಸಲಿ ಯಾವುದೇ ಕಾರಣಕ್ಕೂ ಉಷಾ ಅವರನ್ನು ಬೆಂಗಳೂರಿನಲ್ಲಿ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಹೈಕೋರ್ಟ್ ಬೆಂಗಳೂರಿನಲ್ಲಿ ವಿಚಾರಣೆ ಅವಕಾಶ ನೀಡಿದ್ದಲ್ಲಿ ಇತರೆ ಪ್ರಕರಣದ ಆರೋಪಿಗಳು ತಮ್ಮ ಸ್ವಂತ ಸ್ಥಳಗಳಲ್ಲಿ ವಿಚಾರಣೆ ಪಟ್ಟು ಹಿಡಿಯುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದ್ದರು. ಉಷಾ ಅವರ ಪರ ವಾದ ಮಂಡಿಸಿದ್ದ ವಕೀಲರು ಮಾತ್ರ ಗೌರಮ್ಮ ಜೊತೆ ಉಷಾ ಅವರ ವಿಚಾರಣೆ ಕೂಡ ಆಗಲಿ ಅನ್ನೋ ಬೇಡಿಕೆ ಇಟ್ಟಿದ್ದರು.

    ವಾದ ಪ್ರತಿವಾದ ಆಲಿಸಿದ್ದ ಪೀಠ ಉಷಾ ಪರ ವಕೀಲರಿಗೆ ಕಾನೂನು ವ್ಯಾಪ್ತಿಯಲ್ಲಿ ವಾದ ಮುಂದುವರಿಸುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಉಷಾ ಪರ ವಕೀಲರು ವಾದ ಮಂಡಿಸಲಿದ್ದಾರೆ. ಇದೇ ಪ್ರಕರಣದ ಮತ್ತೋರ್ವ ಆರೋಪಿ ಡಿ.ಕೆ ಶಿವಕುಮಾರ್ ಆಪ್ತ ಆಂಜನೇಯ ಸಂಬಂಧಿಗಳಿಗೂ ಇಡಿ ಸಮನ್ಸ್ ನೀಡಿದ್ದು, ಅವರು ಕೂಡ ಬೆಂಗಳೂರಿನಲ್ಲಿ ವಿಚಾರಣೆಗೆ ಬೇಡಿಕೆ ಇಟ್ಟಿದ್ದಾರೆ. ಉಷಾ ಅರ್ಜಿ ವಿಚಾರಣೆ ವೇಳೆ ಈ ಅರ್ಜಿಗಳು ಕೂಡ ವಿಚಾರಣೆಗೆ ಬರಲಿದೆ.

  • ದೆಹಲಿ ಹೈಕೋರ್ಟಿನಲ್ಲಿ ಡಿಕೆಶಿ ತಾಯಿ, ಪತ್ನಿಯ ಭವಿಷ್ಯ ನಿರ್ಧಾರ

    ದೆಹಲಿ ಹೈಕೋರ್ಟಿನಲ್ಲಿ ಡಿಕೆಶಿ ತಾಯಿ, ಪತ್ನಿಯ ಭವಿಷ್ಯ ನಿರ್ಧಾರ

    ಬೆಂಗಳೂರು: ಇಡಿ(ಜಾರಿ ನಿರ್ದೇಶನಾಲಯ) ನೀಡಿರುವ ಸಮನ್ಸ್ ರದ್ದು ಮಾಡಿ ಬೆಂಗಳೂರಿನಲ್ಲಿ ವಿಚಾರಣೆ ನಡೆಸುವಂತೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಪತ್ನಿ ಉಷಾ, ತಾಯಿ ಗೌರಮ್ಮ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ ನಡೆಯಲಿದೆ.

    ದೆಹಲಿ ಹೈ ಕೋರ್ಟಿನ ನ್ಯಾ. ಬ್ರಿಜೇಶ್ ಸೇಥಿ ನೇತೃತ್ವದ ಏಕ ಸದಸ್ಯ ಪೀಠ ಮಧ್ಯಾಹ್ನ 2:30ಕ್ಕೆ ವಿಚಾರಣೆ ನಡೆಸಲಿದ್ದು, ಡಿ.ಕೆ ಶಿವಕುಮಾರ್ ಆಪ್ತ ಸಹಾಯಕ ಆಂಜನೇಯ ಸಲ್ಲಿಸಿರುವ ಅರ್ಜಿಯನ್ನು ಈ ವೇಳೆ ಒಗ್ಗೂಡಿಸಿಕೊಳ್ಳಲಿದೆ. ಆಂಜನೇಯ ಅತ್ತೆ ಲಕ್ಷ್ಮಮ್ಮ, ಮಾವ ಹನುಮಂತಯ್ಯ ಸಂಬಂಧಿಗಳಾದ ಮೀನಾಕ್ಷಿ, ಜೈಶೀಲ ಅವರಿಗೂ ಇಡಿ ನೋಟಿಸ್ ನೀಡಿ ದೆಹಲಿ ಕಚೇರಿಗೆ ಬಂದು ಉತ್ತರಿಸುವಂತೆ ಸೂಚಿಸಿತ್ತು. ಈ ಸಮನ್ಸ್ ರದ್ದು ಮಾಡಿ ಬೆಂಗಳೂರಿನಲ್ಲಿ ವಿಚಾರಣೆ ನಡೆಸಲು ಇಡಿ ಅಧಿಕಾರಿಗಳಿಗೆ ಸೂಚಿಸುವಂತೆ ಅರ್ಜಿ ಸಲ್ಲಿಸಲಾಗಿತ್ತು.

    ಈಗಾಗಲೇ ಉಷಾ ಮತ್ತು ಗೌರಮ್ಮ ಪರ ವಕೀಲರ ವಾದ ಮಂಡನೆ ಮುಕ್ತಾಯವಾದ ಹಿನ್ನೆಲೆ ಇಂದು ಆಂಜನೇಯ ಅತ್ತೆ, ಮಾವನ ಪರ ವಕೀಲರು ವಾದ ಮಂಡಿಸಲಿದ್ದಾರೆ. ಬಳಿಕ ಇಡಿ ಪರ ವಕೀಲರು ವಾದ ಮಂಡಿಸಲಿದ್ದು, ಬೆಂಗಳೂರಿನಲ್ಲೆ ವಿಚಾರಣೆಗೆ ದೆಹಲಿ ಹೈಕೋರ್ಟ್ ಅವಕಾಶ ನೀಡುತ್ತಾ ಕಾದು ನೋಡಬೇಕು.

  • 78 ಕೋಟಿ ಹೂಡಿಕೆ – ಐಶ್ವರ್ಯ ಶಿವಕುಮಾರ್‌ಗೆ ಇಡಿ ಸಮನ್ಸ್

    78 ಕೋಟಿ ಹೂಡಿಕೆ – ಐಶ್ವರ್ಯ ಶಿವಕುಮಾರ್‌ಗೆ ಇಡಿ ಸಮನ್ಸ್

    ಬೆಂಗಳೂರು: ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಗೆ ವಿಚಾರಣೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ.

    ಸೆ.12 ರಂದು ಬೆಳಗ್ಗೆ 11 ಗಂಟೆಗೆ ಇಡಿ ಕೇಂದ್ರ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲು ಐಶ್ವರ್ಯ ಅವರಿಗೆ ಸೂಚನೆ ನೀಡಲಾಗಿದೆ. ಡಿಕೆ ಶಿವಕುಮಾರ್ ಅವರ ಕಸ್ಟಡಿಯ ಅವಧಿ ಇದೇ 13 ರಂದು ಮುಕ್ತಾಯವಾಗುತ್ತಿರುವುದರಿಂದ 12 ರಂದೇ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿರುವುದು ವಿಶೇಷವಾಗಿದೆ.

    ಐಶ್ವರ್ಯ ಅವರ ಹೆಸರಿನಲ್ಲಿ ಸೋಲ್ ಅಂಡ್ ಸೇಲ್ಸ್ ನಲ್ಲಿ 78 ಕೋಟಿ ರೂ. ಹೂಡಿಕೆ ಮಾಡಲಾಗಿದೆ. ಅಷ್ಟೇ ಅಲ್ಲದೇ ನ್ಯಾಷನಲ್ ಗ್ಲೋಬಲ್ ಕಾಲೇಜಿನಲ್ಲಿ ಐಶ್ವರ್ಯಾ ಟ್ರಸ್ಟಿಯಾಗಿದ್ದಾರೆ. ಈಗಾಗಲೇ ಡಿಕೆ ಶಿವಕುಮಾರ್ ವಿಚಾರಣೆ ವೇಳೆ ಪುತ್ರಿಯ ಹೆಸರಿನಲ್ಲಿ ಹೂಡಿಕೆ ಮಾಡಿರುವ ಕುರಿತು ಇಡಿ ಪ್ರಶ್ನೆಗಳಿಗೆ ಉತ್ತರಿಸಿದ್ದು, ಈ ಮೊತ್ತವನ್ನು ನನ್ನ ಹಿತೈಷಿಗಳು, ಕುಟುಂಬದವರು, ಸ್ನೇಹಿತರು ಕೊಟ್ಟ ಹಣ ಎಂದು ತಿಳಿಸಿದ್ದರು. ಈಗ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಐಶ್ವರ್ಯ ಅವರಿಗೆ ಸಮನ್ಸ್ ನೀಡಿದೆ. ಇದನ್ನು ಓದಿ: ಕಸ್ಟಡಿ ಅಂತ್ಯವಾಗ್ತಿರೋ ಬೆನ್ನಲ್ಲೇ ಹೊಸ ಭೀತಿ- ಮತ್ತೆ 4 ದಿನ ಇಡಿ ಕಸ್ಟಡಿಗೆ ಡಿಕೆಶಿ

    ಸೋಲ್ ಅಂಡ್ ಸೇಲ್ಸ್ ಯೋಜನೆಯ ಕಚೇರಿ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಕೆಲ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ಈ ವೇಳೆ ಹೂಡಿಕೆ ಮಾಡಿರುವ ಹಣ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಿದೆ ಎನ್ನಲಾಗಿದೆ. ಅಲ್ಲದೇ ಬೇರೆ ಬೇರೆ ಮೂಲಗಳಿಂದ ಸಂಗ್ರಹ ಮಾಡಿರುವ ಅನುಮಾನ ಕೂಡ ಅಧಿಕಾರಿಗಳಿಗೆ ವ್ಯಕ್ತವಾಗಿದೆ.

    ಯೋಜನೆಯಲ್ಲಿ ಹೂಡಿಕೆ ಮಾಡಿರುವ ಹಣ ಯಾವ ಮೂಲದಿಂದ ಬಂದಿದೆ ಎಂಬ ಬಗ್ಗೆ ಮಾಹಿತಿ ಖಚಿತ ಪಡಿಸಿಕೊಳ್ಳುವುದು ಇಡಿಯ ಉದ್ದೇಶವಾಗಿದೆ ಎನ್ನಲಾಗಿದೆ. ಅಲ್ಲದೇ ಐಶ್ವರ್ಯ ಅವರಿಗೆ ಈ ಹೂಡಿಕೆ ಮಾಡಿರುವ ಬಗ್ಗೆ ಮಾಹಿತಿ ತಿಳಿದಿದೆಯೇ ಎಂಬ ಬಗ್ಗೆಯೂ ಇಡಿ ವಿಚಾರಣೆಗೆ ನಡೆಸಲಿದೆ. ಸದ್ಯ ಇಡಿ ಅಧಿಕಾರಗಳ ಎದುರು ಐಶ್ವರ್ಯ ಯಾವ ಉತ್ತರ ನೀಡಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ. ಇದನ್ನು ಓದಿ: ಡಿಕೆಶಿಗೆ ಮತ್ತೊಂದು ಬಿಗ್ ಶಾಕ್- ಆಪ್ತನ ಮನೆ ಮೇಲೆ ಇಡಿ ದಾಳಿ

    ಈ ಹಿಂದೆ 2017ರ ನವೆಂಬರ್ ತಿಂಗಳಿನಲ್ಲಿ ಶಿವಕುಮಾರ್ ತಾಯಿ ಗೌರಮ್ಮ, ಪತ್ನಿ ಉಷಾ, ಪುತ್ರಿ ಐಶ್ವರ್ಯ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಆದಾಯ ತೆರಿಗೆ ಕಚೇರಿಯಲ್ಲಿ ಪ್ರತ್ಯೇಕವಾಗಿ ವಿಚಾರಣೆಗೆ ಹಾಜರಾಗಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ್ದರು.

    ನಿಮ್ಮ ತಂದೆ ನಿಮ್ಮ ಹೆಸರಲ್ಲಿ ಎಷ್ಟು ಆಸ್ತಿ ಮಾಡಿದ್ದಾರೆ ಎನ್ನುವ ಪ್ರಶ್ನೆಗೆ ಅದೆಲ್ಲಾ ನನಗೆ ಗೊತ್ತಿಲ್ಲ. ಅವರು ಇದುವರೆಗೂ ಹೇಳಿಲ್ಲ ನಾನು ಕೇಳಿಲ್ಲ ಎಂದು ಐಶ್ವರ್ಯ ಹೇಳಿದ್ದರು. ಗ್ಲೋಬಲ್ ಕಾಲೇಜಿನಲ್ಲಿ ನಿಮ್ಮ ಪಾತ್ರ ಏನು? ನೀವು ಪಾಲುದಾರರಾ ಎಂದು ಕೇಳಿದ್ದಕ್ಕೆ ನಾನು ಪಾಲುದಾರಳಾಗಿ ಇಲ್ಲ. ಅಪ್ಪ ಮಾಡಿರಬಹುದು ಅದರ ಬಗ್ಗೆ ಗೊತ್ತಿಲ್ಲ ನಾನು ಅಲ್ಲಿ ಟ್ರಸ್ಟಿಯಾಗಿ ಇದ್ದೇನೆ ಎಂದು ಉತ್ತರ ನೀಡಿದ್ದರು ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು. ಇದನ್ನು ಓದಿ: ಇಡಿ ವಶದಲ್ಲಿದೆ ಸೋಲಾರ್ ಪವರ್ ಪ್ಲಾಂಟ್ ದಾಖಲೆ- ಟ್ರಬಲ್ ಶೂಟರ್‌ಗೆ ಹೆಚ್ಚಾದ ಸಂಕಷ್ಟ

    ಟ್ರಸ್ಟಿ ಎಂದರೆ ಏನು? ನಿಮ್ಮ ಕೆಲಸ ಏನಿರುತ್ತದೆ ಎಂದಿದ್ದಕ್ಕೆ ಇಡೀ ಕಾಲೇಜಿನ ಬಗ್ಗೆ ಶಿಕ್ಷಣ ಟ್ರಸ್ಟ್ ಅಂತ ಮಾಡಲಾಗಿದೆ. ಅದರಲ್ಲಿ ನಾನು ಒಬ್ಬಳು ಟ್ರಸ್ಟಿ ಅಷ್ಟೇ. ಸಲಹೆ ಸೂಚನೆಗಳನ್ನು ಕೊಡಲಾಗುತ್ತದೆ ಎಂದು ಉತ್ತರಿಸಿದ್ದರು. ಕಾಲೇಜಿನ ಹಣಕಾಸಿನ ವ್ಯವಹಾರದ ಬಗ್ಗೆ ಕೇಳಿದ ಪ್ರಶ್ನೆಗೆ ನಾವು ಮಾಡಿಕೊಂಡಿರುವುದು ಎಜ್ಯುಕೇಶನ್ ಟ್ರಸ್ಟ್ ಅಂತ ಅಲ್ಲಿ ಹಣಕಾಸಿನ ವ್ಯವಹಾರ ಬರುವುದಿಲ್ಲ ಎಂದು ಹೇಳಿದ್ದರು. ಕೋರ್ಸ್ ಗಳಿಗೆ ಶುಲ್ಕ ನಿಗದಿಯನ್ನು ನಿಮ್ಮ ಟ್ರಸ್ಟ್ ಮಾಡುತ್ತಾ ಎಂದು ಕೇಳಿದ್ದಕ್ಕೆ ನಾವು ಬೇರೆ ಬೇರೆ ಕಾಲೇಜಿನ ಮಾಹಿತಿ ಹೇಳ್ತೀವಿ. ಶುಲ್ಕ ನಿಗದಿ ಮಾಡುವುದು ನಿರ್ದೇಶಕರು ಎಂಬುದಾಗಿ ಉತ್ತರ ನೀಡಿದ್ದರು.