Tag: ED

  • Kolkata Horror | ಆರ್‌.ಜಿ ಕರ್‌ ಕಾಲೇಜಿನ ಮಾಜಿ ಪ್ರಾಂಶುಪಾಲನ ಮನೆ ಸೇರಿ 7 ಕಡೆ ಇಡಿ ದಾಳಿ!

    Kolkata Horror | ಆರ್‌.ಜಿ ಕರ್‌ ಕಾಲೇಜಿನ ಮಾಜಿ ಪ್ರಾಂಶುಪಾಲನ ಮನೆ ಸೇರಿ 7 ಕಡೆ ಇಡಿ ದಾಳಿ!

    ಕೋಲ್ಕತ್ತಾ: ಇಲ್ಲಿನ ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ (Sandip Ghosh) ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಶುಕ್ರವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ.

    ಸಂದೀಪ್‌ ಘೋಷ್‌ ಮನೆ ಮಾತ್ರವಲ್ಲದೇ ಅವರ ನಿಕಟವರ್ತಿಗಳ ಮನೆ ಮೇಲೂ ದಾಳಿ ನಡೆಯುತ್ತಿದೆ. ಕೋಲ್ಕತ್ತಾ (Kolkata) ಮತ್ತು ಹೌರಾದ ಒಟ್ಟು 7 ಕಡೆಗಳಲ್ಲಿ ಇಡಿ ತಂಡ ದಾಳಿ ನಡೆಸುತ್ತಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಟಿಫಿನ್ ಬಾಕ್ಸ್‌ನಲ್ಲಿ ಬಿರಿಯಾನಿ ತಂದಿದ್ದಕ್ಕೆ ವಿದ್ಯಾರ್ಥಿಯನ್ನು ಶಾಲೆಯಿಂದ ಹೊರಹಾಕಿದ ಪ್ರಾಂಶುಪಾಲ

    ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ (RG Kar MCH) ನಡೆದ ಹಣಕಾಸು ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಇತ್ತೀಚೆಗಷ್ಟೇ ಸಂದೀಪ್‌ ಘೋಷ್‌ ಅವರನ್ನ ಸಿಬಿಐ ಬಂಧಿಸಿದೆ. ಸತತ 2 ವಾರಗಳ ಕಾಲ ನಡೆದ ವಿಚಾರಣೆಯ ಬಳಿಕ ಮಾಜಿ ಪ್ರಾಂಶುಪಾಲನ ಬಂಧನವಾಗಿತ್ತು. ಇದನ್ನೂ ಓದಿ: Kolkata Horror | ಟ್ರೈನಿ ವೈದ್ಯೆ ʻಹತ್ಯಾʼಚಾರ ನಡೆದಿದ್ದ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಅರೆಸ್ಟ್‌

    ವೈದ್ಯಕೀಯ ಕಾಲೇಜಿನಲ್ಲಿ ನಡೆದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7ರ ಜೊತೆಗೆ ಕ್ರಿಮಿನಲ್ ಪಿತೂರಿ, ವಂಚನೆ ಮತ್ತು ಅಪ್ರಾಮಾಣಿಕತೆ ಸೆಕ್ಷನ್‌ ಅಡಿಯಲ್ಲಿ ಪ್ರಕರಣ ದಾಖಲಿಸಿದೆ. ಅಲ್ಲದೇ ಪ್ರಕರಣ ಜಾಮೀನು ರಹಿತ ಸ್ವರೂಪದ್ದಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದರು. ಇದನ್ನೂ ಓದಿ: ಮದುವೆಯಾಗ್ತೀನಿ ಅಂತಾ ಎಣ್ಣೆ ಕುಡಿಸಿ ರಸ್ತೆಯಲ್ಲೇ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ದುರುಳ

    ಸಂದೀಪ್‌ ಘೋಷ್‌, 2021ರ ಫೆಬ್ರವರಿಯಿಂದ 2023ರ ಸೆಪ್ಟೆಂಬರ್‌ ವರೆಗೆ RG ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು. ಅಕ್ಟೋಬರ್ 2023 ರಲ್ಲಿ ವರ್ಗಾವಣೆಯಾಗಿದ್ದರು. ಇದಾದ ಒಂದೇ ತಿಂಗಳಲ್ಲಿ ಮತ್ತೆ ಅದೇ ಕಾಲೇಜಿನಲ್ಲಿ ಕರ್ತವ್ಯಕ್ಕೆ ಹಾಜರಾದರು. ಕಳೆದ ತಿಂಗಳು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆಯುವ ದಿನದವರೆಗೂ ಅವರು ಹುದ್ದೆಯಲ್ಲಿದ್ದರು. ಆಗಸ್ಟ್ 9 ರಂದು ಟ್ರೈನಿ ವೈದ್ಯೆಯ ಮೃತ ದೇಹವು ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾದ ಬಳಿಕ ಬಂಗಾಳ ಸೇರಿದಂತೆ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ಭುಗಿಲೆದ್ದಿತು. ಬೆನ್ನಲ್ಲೇ ಸಂದೀಪ್‌ ಘೋಷ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಇದಾದ ಬಳಿಕ ಈ ಬೆನ್ನಲ್ಲೇ ಭಾರತೀಯ ವೈದ್ಯಕೀಯ ಸಂಘವು ಡಾ.ಸಂದೀಪ್ ಘೋಷ್ ಅವರ ಸದಸ್ಯತ್ವವನ್ನು ಅಮಾನತುಗೊಳಿಸಿತು.

  • ಆನ್‌ಲೈನ್‌ ಟ್ರೇಡಿಂಗ್‌ ಹೆಸರಲ್ಲಿ ವಂಚನೆ – ಬೆಂಗಳೂರಲ್ಲಿ ಇ.ಡಿಯಿಂದ ನಾಲ್ವರ ಬಂಧನ

    ಆನ್‌ಲೈನ್‌ ಟ್ರೇಡಿಂಗ್‌ ಹೆಸರಲ್ಲಿ ವಂಚನೆ – ಬೆಂಗಳೂರಲ್ಲಿ ಇ.ಡಿಯಿಂದ ನಾಲ್ವರ ಬಂಧನ

    ಬೆಂಗಳೂರು: ಆನ್‌ಲೈನ್‌ ಟ್ರೇಡಿಂಗ್‌ ಹೆಸರಲ್ಲಿ ಸೈಬರ್‌ ಹೂಡಿಕೆ ವಂಚನೆ ಮಾಡುತ್ತಿದ್ದ ಬೆಂಗಳೂರಿನ (Bengaluru) ಒಬ್ಬ ಸೇರಿದಂತೆ ನಾಲ್ವರು ಆರೋಪಿಗಳನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.

    ಶಶಿಕುಮಾರ್ (25), ಸಚಿನ್ (26), ಕಿರಣ್ ಎಸ್‌ಕೆ (25) ಮತ್ತು ಚರಣ್ ರಾಜ್ (26) ಬಂಧಿತ ಆರೋಪಿಗಳು. ಇವರು ಷೇರು ಮಾರುಕಟ್ಟೆಯಲ್ಲಿ ನಕಲಿ‌ ಕಂಪನಿಗಳ ಹೆಸರಲ್ಲಿ ಹಣಹೂಡಿಕೆ ಮಾಡಿಸಿಕೊಳ್ಳುತ್ತಿದ್ದರು. ಇದನ್ನೂ ಓದಿ: ಬೈಕ್‌ಗೆ ಕಾರು ಡಿಕ್ಕಿ: ಫ್ಲೈಓವರ್ ಮೇಲಿನಿಂದ ಕೆಳಗೆ ಬಿದ್ದ ಕಾರು – ಮೂವರ ಸ್ಥಿತಿ ಗಂಭೀರ

    ನಕಲಿ ದಾಖಲೆ ನೀಡಿ ಹತ್ತಾರು ಬ್ಯಾಂಕ್ ಅಕೌಂಟ್ ತೆರೆದಿದ್ದರು. ಹಣ ವರ್ಗಾವಣೆ ಆದ ನಂತರ ಬೇರೆ ಬೇರೆ ಅಕೌಂಟ್‌ಗೆ ಟ್ರಾನ್ಸ್‌ಫರ್‌ ಮಾಡಿಕೊಳ್ಳುತ್ತಿದ್ದರು. ನಂತರ ಹಣ ಜಮಾ ಮಾಡಿದವರ ನಂಬರ್ ಬ್ಲಾಕ್ ಮಾಡುತ್ತಿದ್ದರು. ಈ ಬಗ್ಗೆ ಬೆಂಗಳೂರು ಸೈಬರ್ ಠಾಣೆಗಳಲ್ಲಿ ಹತ್ತಾರು ದೂರು ದಾಖಲಾಗಿದ್ದವು.

    ಕೋಟ್ಯಂತರ ರೂಪಾಯಿ ಬೇನಾಮಿ ಹಣ ಟ್ರಾನ್ಸ್‌ಫರ್ ಆಗಿದ್ದ ಹಿನ್ನೆಲೆ ಇಡಿ ಅಧಿಕಾರಿಗಳಿಗೆ ಸೈಬರ್‌ ಕ್ರೈಂ ಪೊಲೀಸರು ಮಾಹಿತಿ ನೀಡಿದ್ದರು. ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳು ನಾಲ್ವರನ್ನು ಬಂಧಿಸಿ, ಇಡಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

    ನಾಲ್ವರು ಆರೋಪಿಗಳನ್ನು ಏಳು ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ದನ ಕಳ್ಳಸಾಗಾಣಿಕೆ ಮಾಡಿದ್ದಾರೆ ಎಂದು ಪಿಯುಸಿ ವಿದ್ಯಾರ್ಥಿಯ ಹತ್ಯೆ – ಐವರು ಅರೆಸ್ಟ್

  • KIADB ಅಧಿಕಾರಿಗಳ ಮನೆಯಲ್ಲಿ 2 ಕೋಟಿ ಜಪ್ತಿ – ಇಡಿ ದಾಳಿ ನಡೆಸಿದ್ದು ಯಾಕೆ?

    KIADB ಅಧಿಕಾರಿಗಳ ಮನೆಯಲ್ಲಿ 2 ಕೋಟಿ ಜಪ್ತಿ – ಇಡಿ ದಾಳಿ ನಡೆಸಿದ್ದು ಯಾಕೆ?

    ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ (KIADB) ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು 2 ಕೋಟಿ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.

    ಶುಕ್ರವಾರ ಬೆಂಗಳೂರು (Bengaluru) ಮತ್ತು ಧಾರವಾಡದ (Dharwada) ಕೆಐಎಡಿಬಿ ಕಚೇರಿ ಮತ್ತು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿತ್ತು. ದಾಳಿ ಮುಂದುವರಿದಿದ್ದು ಅಧಿಕಾರಿಗಳ ಮನೆಯಲ್ಲಿದ್ದ ಹಣವನ್ನು ವಶಕ್ಕೆ ಪಡೆದಿದ್ದಾರೆ.

    ಶುಕ್ರವಾರ ಬೆಳಗ್ಗೆ 9 ಗಂಟೆಯಿಂದ ಶೋಧ ಕಾರ್ಯ ನಡೆಯುತ್ತಿದೆ. ಕಚೇರಿಯ ದಾಖಲೆಗಳನ್ನು ತೆಗೆದು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಶೀಘ್ರವೇ ಭಾರತದ ದೊಡ್ಡ ಸುದ್ದಿ: ಬ್ರೇಕಿಂಗ್‌ ನ್ಯೂಸ್‌ ಕೊಟ್ಟ ಹಿಂಡನ್‌ಬರ್ಗ್‌

     

    ದಾಳಿ ಮಾಡಿದ್ದು ಯಾಕೆ?
    ಭೂ ಸ್ವಾಧೀನ ಹೆಸರಿನಲ್ಲಿ ಕೋಟ್ಯಂತರ ರೂ. ಹಣವನ್ನು ಕೆಐಎಡಿಬಿ ಅಧಿಕಾರಿಗಳು ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಒಂದು ಪ್ರದೇಶಗಳಿಗೆ 2 ಬಾರಿ ಪರಿಹಾರ ಒದಗಿಸುವಂತೆ ದಾಖಲೆ ತೋರಿಸಿ ರೈತರ ಹೆಸರಿನಲ್ಲಿ ನಕಲಿ ಬ್ಯಾಂಕ್‌ ಖಾತೆ ತೆರೆಯಲಾಗಿದೆ. ಈ ಅಕ್ರಮ ಎಸಗಲು ಐಡಿಬಿಐ ಬ್ಯಾಂಕ್‌ನಲ್ಲಿ 24 ಖಾತೆ ತೆರೆದಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿತ್ತು. ಈಗ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಐಎಡಿಬಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದೆ. ಇದನ್ನೂ ಓದಿ: ಊಟವಿಲ್ಲ, ಬರೀ ನೀರು – 10 ಗಂಟೆಯಲ್ಲಿ 4.6 ಕೆಜಿ ತೂಕ ಇಳಿಸಿದ್ದ ಪದಕ ವಿಜೇತ ಅಮನ್‌

     

  • Valmiki Corporation Scam | ಮತ್ತೆ 7.5 ಕೋಟಿ ಹಣ ಜಪ್ತಿ – ನಾಗೇಂದ್ರ ನ್ಯಾಯಾಂಗ ಬಂಧನ ವಿಸ್ತರಣೆ

    Valmiki Corporation Scam | ಮತ್ತೆ 7.5 ಕೋಟಿ ಹಣ ಜಪ್ತಿ – ನಾಗೇಂದ್ರ ನ್ಯಾಯಾಂಗ ಬಂಧನ ವಿಸ್ತರಣೆ

    ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್‌ಗೆ (Valmiki Corporation Scam) ಸಂಬಂಧಿಸಿದಂತೆ ಇತ್ತ ಚಾರ್ಜ್‌ಶೀಟ್‌ ಸಲ್ಲಿಸಿರುವ ವಿಶೇಷ ತನಿಖಾ ತಂಡ (SIT) ತನ್ನ ಭೇಟೆಯನ್ನು ಮುಂದುವರಿಸಿದೆ. ಸೋಮವಾರ (ಆ.5) ಮತ್ತೆ 7.5 ಕೋಟಿ ರೂ.ಗಳನ್ನು ಜಪ್ತಿ ಮಾಡಿದೆ.

    ಫಸ್ಟ್ ಫಿನಾನ್ಸ್ ಬ್ಯಾಂಕ್ಸ್‌ನ ಅಧ್ಯಕ್ಷ ಸತ್ಯನಾರಾಯಣ ಇಟ್ಕಾರಿ ಬಳಿ ಹಣವನ್ನು ವಶಕ್ಕೆ ಪಡೆದಿದ್ದಾರೆ. ಆರ್‌ಬಿಎಲ್‌ ಬ್ಯಾಂಕ್‌ನಲ್ಲಿದ್ದ (RBL Bank) ಇಟ್ಕಾರಿ ಖಾತೆಯಿಂದಲೇ ಹಣವನ್ನು ಜಪ್ತಿ ಮಾಡಿದ್ದಾರೆ. ಈ ಮೂಲಕ ಈವರೆಗೆ ಎಸ್‌ಐಟಿ ಒಟ್ಟು 57 ಕೋಟಿ ರೂ.ಗಳನ್ನು ಜಪ್ತಿ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ನಮ್ಮ ಹೋರಾಟದ ಬಿಸಿಗೆ ಕಾಂಗ್ರೆಸ್ ಸರ್ಕಾರ ಒಂಟಿ ಕಾಲಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ

    ನಾಗೇಂದ್ರ ನ್ಯಾಯಾಂಗ ಬಂಧನ ವಿಸ್ತರಣೆ:
    ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್‌ನಲ್ಲಿ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್‌ ಮಾಜಿ ಸಚಿವ ಬಿ.ಎನ್‌ ನಾಗೇಂದ್ರ ಅವರ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಸೋಮವಾರ (ಆ.5) ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಾಗೇಂದ್ರ (BN Nagendra) ಅವರನ್ನು ಹಾಜರುಪಡಿಸಲಾಗಿತ್ತು. ನಾಗೇಂದ್ರ ಅವರು ಜಾಮೀನಿಗೆ ಅರ್ಜಿ ಹಾಕದೇ ಇರುವ ಕಾರಣ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಯಿತು. ಆಗಸ್ಟ್ 14ರ ವರೆಗೂ ಇಬ್ಬರ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಕೇಸ್‌- ಆರೋಪಿಯನ್ನು ಕರೆ ತಂದು ಮರು ಸೃಷ್ಟಿ ಹೇಗೆ ಮಾಡಲಾಯ್ತು?

    3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ:
    ಈವರೆಗೆ ತನಿಖೆ ನಡೆಸಿರುವ ವಿಶೇಷ ತನಿಖಾ ತಂಡ ಸುಮಾರು 3,072 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ. ಸತ್ಯಾರಾಯಣ ವರ್ಮಾ, ಸತ್ಯನಾರಾಯಣ ಇಟ್ಕಾರಿ, ವಾಲ್ಮೀಕಿ ನಿಗಮ ಎಂಡಿ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ, ನೆಕ್ಕುಂಟಿ ನಾಗರಾಜ್, ನಾಗೇಶ್ವರ್, ಸಾಯಿ ತೇಜ ಸೇರಿ 12 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ತನಿಖೆಯ ವೇಳೆ ಸುಮಾರು 45 ಕೋಟಿ ರೂ. ಮೌಲ್ಯದ ನಗದು ಹಾಗೂ ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ಎಸ್‌ಐಟಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿತ್ತು. ಈ ಬೆನ್ನಲ್ಲೇ ಮತ್ತೊಂದು ದಾಳಿ ನಡೆಸಿ ಅಪಾರ ಪ್ರಮಾಣದ ಹಣವನ್ನು ಜಪ್ತಿ ಮಾಡಿದೆ. ಇದನ್ನೂ ಓದಿ: ಮೈಸೂರು ಚಲೋ ಪಾದಯಾತ್ರೆ ವೇಳೆ ಹೃದಯಾಘಾತ – ಬಿಜೆಪಿ ಕಾರ್ಯಕರ್ತೆ ಸಾವು

  • Valmiki Corporation Scam | ಹೈದರಾಬಾದ್‌ನಲ್ಲೇ ಬೀಡುಬಿಟ್ಟ ಎಸ್‌ಐಟಿ – ಒಟ್ಟು 16 ಕೆಜಿ ಚಿನ್ನ ಜಪ್ತಿ

    Valmiki Corporation Scam | ಹೈದರಾಬಾದ್‌ನಲ್ಲೇ ಬೀಡುಬಿಟ್ಟ ಎಸ್‌ಐಟಿ – ಒಟ್ಟು 16 ಕೆಜಿ ಚಿನ್ನ ಜಪ್ತಿ

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಕೇಸ್‌ (Valmiki Corporation Corruption Case) ರಾಜಕೀಯ ಕೆಸರೆಚಾಟಕ್ಕೆ ಕಾರಣವಾಗಿದೆ. ಎಸ್‌ಐಟಿ ತನಿಖೆ ಮಧ್ಯೆಯೇ ಇಸಿಐಆರ್ ದಾಖಲಿಸಿಕೊಂಡಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಿಗಮದ ಮಾಜಿ ಸಚಿವ ಬಿ.ನಾಗೇಂದ್ರರನ್ನ (BN Nagendra) ಬಂಧಿಸಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ (SIT Team) ಹೈದರಾಬಾದ್‌ನಲ್ಲೇ ಬೀಡುಬಿಟ್ಟಿದೆ.

    ಎಸ್‌ಐಟಿ ತನಿಖೆ ಚುರುಕುಗೊಳಿಸಿದ್ದು, ಈವರೆಗೂ 37 ಕೋಟಿ ರೂ.ಗಿಂತಲೂ ಅಧಿಕ ಹಣ ಹಾಗೂ 16 ಕೆ.ಜಿಗೂ ಹೆಚ್ಚು ಚಿನ್ನವನ್ನ ವಶಪಡಿಸಿಕೊಂಡಿದೆ. ಹೈದ್ರಾಬಾದ್‌ನಲ್ಲೇ ಬೀಡುಬಿಟ್ಟಿರೋ ಎಸ್‌ಐಟಿ ಸೈಬರ್ ತಜ್ಞರ ತಂಡ, ಹೈದರಾಬಾದ್‌ನ ಫಸ್ಟ್‌ ಫೈನಾನ್ಸ್‌ ಕ್ರೆಡಿಟ್‌ ಕೋ–ಆಪರೇಟಿವ್‌ ಸೊಸೈಟಿ ಅಧ್ಯಕ್ಷ ಸತ್ಯನಾರಾಯಣ ವರ್ಮಾಗೆ ಸಂಬಂಧಿಸಿದ ಕಚೇರಿ ಹಾಗೂ ಕೆಲ ಹಣಕಾಸು ವ್ಯವಹಾರದ ತನಿಖೆ ನಡೆಸುತ್ತಿದೆ. ಇದನ್ನೂ ಓದಿ: ರಾಜ್ಯದಲ್ಲಿ ಇರೋದು ಹಗರಣಗಳಲ್ಲಿ ಮುಳುಗಿರುವ ಸರ್ಕಾರ: ನಿಖಿಲ್ ಕುಮಾರಸ್ವಾಮಿ

    ಖಾತೆಗಳಿಗೆ ಹಣ ವರ್ಗಾವಣೆ ಮಾಡಿ ಬಳಿಕ ನಗದು ಸಂಗ್ರಹ ಮಾಡಿದ್ದ ಹಿನ್ನೆಲೆ, ಎಲ್ಲಾ ಬ್ಯಾಂಕ್ ಗಳ ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ. ಮೂಲ ಖಾತೆದಾರರನ್ನ ವಿಚಾರಣೆ ನಡೆಸಿ ಹೇಳಿಕೆ ದಾಖಲು ಮಾಡಿಕೊಳ್ಳುತ್ತಿರುವ ತಂಡ ಸತ್ಯನಾರಾಯಣ ವರ್ಮನನ್ನ ವಿಚಾರಣೆಗೆ ಒಳಪಡಿಸಿ ತನಿಖೆ ನಡೆಸಲಾಗುತ್ತಿದೆ. ಇನ್ನು ಸತ್ಯನಾರಾಯಣ ವರ್ಮಾ ವಿಚಾರಣೆ ಮಾಡಲು ಇಡಿ (ED) ಸಹ ಮುಂದಾಗಿದ್ದು, ಎಸ್‌ಐಟಿ ಕಸ್ಟಡಿ ಮುಗಿಯುತ್ತಿದ್ದಂತೆ ವಶಕ್ಕೆ ಪಡೆಯಲು ಮುಂದಾಗಿದೆ. ಇದನ್ನೂ ಓದಿ: ದರ್ವೇಶ್ ಗ್ರೂಪ್‌ನಿಂದ ವಂಚನೆ – ಸಿಐಡಿ ದಾಳಿ ವೇಳೆ ಕೋಟ್ಯಂತರ ರೂ. ಪತ್ತೆ

    ಕಳೆದ ಎರಡು ದಿನಗಳ ಹಿಂದೆಯಷ್ಟೇ ಹೈದರಾಬಾದ್‌ನ ಎರಡು ಸ್ಥಳಗಳಲ್ಲಿ ಶೋಧ ನಡೆಸಿದ್ದ ಎಸ್‌ಐಟಿ, 6 ಕೆಜಿ ಚಿನ್ನ ಹಾಗೂ 2.50 ಕೋಟಿ ರೂ. ನಗದು ಹಣವನ್ನ ವಶಪಡಿಸಿಕೊಂಡಿತ್ತು. ಆರೋಪಿ ಸತ್ಯನಾರಾಯಣ ವರ್ಮನಿಂದ 5 ಕೆಜಿ ಚಿನ್ನ ಹಾಗೂ ಕಾಕಿ ಶ್ರೀನಿವಾಸ್‌ನಿಂದ 1 ಕೆಜಿ ಚಿನ್ನವನ್ನ ಜಪ್ತಿ ಮಾಡಿಕೊಂಡಿತ್ತು. ಇದನ್ನೂ ಓದಿ: ರಾಮನಗರ ಜಿಲ್ಲೆ ಹೆಸರನ್ನು ಮರು ಸ್ಥಾಪನೆ ಮಾಡೇ ಮಾಡ್ತೀವಿ – ಡಿಕೆಶಿಗೆ ನಿಖಿಲ್ ಸವಾಲ್

  • ಕಳಂಕಿತ ಅಧಿಕಾರಿ ನಂಬಿ ಕೆಟ್ರಾ ಸಿಎಂ – ಅಸ್ತಿತ್ವ ಉಳಿಸಿಕೊಳ್ಳಲು ಇಡಿ ವಿರುದ್ಧ ದೂರು?

    ಕಳಂಕಿತ ಅಧಿಕಾರಿ ನಂಬಿ ಕೆಟ್ರಾ ಸಿಎಂ – ಅಸ್ತಿತ್ವ ಉಳಿಸಿಕೊಳ್ಳಲು ಇಡಿ ವಿರುದ್ಧ ದೂರು?

    ಬೆಂಗಳೂರು: ಜಾರಿ ನಿರ್ದೇಶನಾಲಯ (ED) ವಿರುದ್ಧ ದೂರು ನೀಡಿದ್ದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹಿಂದಿನ ಹೆಚ್ಚುವರಿ ನಿರ್ದೇಶಕ ಕಲ್ಲೇಶ್‌ (Kallesh) ಭಾರೀ ಅಕ್ರಮ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

    ಹೌದು. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಅಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹಾಗೂ ಸಚಿವರ ಹೆಸರು ಹೇಳುವಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಒತ್ತಡ ಹೇರಿದ್ದಾರೆ  ಎಂದು ಆರೋಪಿಸಿ  ಅಧಿಕಾರಿ ಕಲ್ಲೇಶ್ ದೂರು ನೀಡಿದ್ದರು. ಇದನ್ನೂ ಓದಿ: ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿ – ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಆತಂಕ

     
    ಈ ದೂರನ್ನೇ ಆಧಾರವಾಗಿಟ್ಟುಕೊಂಡು ಮಂಗಳವಾರ ಸಿಎಂ-ಡಿಸಿಎಂ ಪ್ರತಿಭಟನೆ ಮಾಡಿದ್ದರು. ಆದರೆ ಈ ದೂರು ಕೊಟ್ಟ ಅಧಿಕಾರಿ ಕಲ್ಲೇಶ್‌ರನ್ನು ಭ್ರಷ್ಟಾಚಾರ ಆರೋಪದ ಮೇಲೆ ಈ ಹಿಂದೆ ಸಿದ್ದರಾಮಯ್ಯ ಅಮಾನತುಗೊಳಿಸಿದ್ದರು.

    ಪಬ್ಲಿಕ್ ಟಿವಿಗೆ ಸಿಕ್ಕಿರುವ ದಾಖಲೆಗಳ ಪ್ರಕಾರ ಜೂನ್ 22ರಂದು ನಿಗಮದ ಮಾಜಿ ಎಂಡಿ ಕಲ್ಲೇಶ್‌ರನ್ನು ಸಿದ್ದರಾಮಯ್ಯ ಅಮಾನತುಗೊಳಿಸಿದ್ದರು. ಅಮಾನತುಗೊಂಡ ಅಧಿಕಾರಿ ಕಲ್ಲೇಶ್ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಈಗ ಇಡಿ ಅಧಿಕಾರಿಗಳ ವಿರುದ್ಧ ದೂರು ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

    ಕಲ್ಲೇಶ್ ವಿರುದ್ಧ ಇರುವ ಆರೋಪಗಳೇನು?
    ಎಸ್‌ಸಿ/ಎಸ್‌ಟಿ ನಿಗಮಕ್ಕೆ ಬರಬೇಕಿದ್ದ ಬಡ್ಡಿ ಹಣದ ವಿಷಯ ಮರೆಮಾಚಿ 60 ಲಕ್ಷದ 83 ಸಾವಿರ ಬಡ್ಡಿ ಹಣಕ್ಕೆ ಸೂಕ್ತ ದಾಖಲೆ ನೀಡಿಲ್ಲ. ವಿದ್ಯಾರ್ಥಿ ನಿಲಯದ ಅಗತ್ಯ ಸಾಮಾಗ್ರಿಗಳ ಬೇಡಿಕೆ ಇಲ್ಲದೇ ಇದ್ದರೂ ಖರೀದಿ. ಸಾಮಾಗ್ರಿಗಳ ಖರೀದಿ ಟೆಂಡರ್‌ನಲ್ಲಿ ಲೋಪ.

    ಎಸ್‌ಸಿ/ಎಸ್‌ಟಿ ಹಣ ಸಮರ್ಪಕವಾಗಿ ಬಳಕೆ ಮಾಡದೇ ಇರುವುದು. ಎಸ್‌ಎಸ್‌ಎಲ್‌ಸಿ (SSLC) ಮಕ್ಕಳಿಗೆ ಗುಣಾತ್ಮಕ ತರಬೇತಿ ನೀಡಿಲ್ಲ. 75% ಗಿಂತ ಕಡಿಮೆ ಫಲಿತಾಂಶ ಬಂದ ವಸತಿ ಶಾಲೆ ಬಗ್ಗೆ ನಿಗಾವಹಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಶಕ್ತಿ ಯೋಜನೆ ಅಡಿ ಸರ್ಕಾರದಿಂದ ಸಾರಿಗೆ ಇಲಾಖೆಗೆ 1,413 ಕೋಟಿ ರೂ. ಬಾಕಿ – ರಾಮಲಿಂಗಾರೆಡ್ಡಿ

     

  • Valmiki Scam | ಇಡಿ ಅಧಿಕಾರಿಗಳ ಮೇಲಿನ ಎಫ್‌ಐಆರ್‌ಗೆ ತಡೆ

    ಬೆಂಗಳೂರು: ವಾಲ್ಮೀಕಿ ನಿಗಮ ಹಗರಣ (Valmiki Scam) ಸಂಬಂಧ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ (FIR) ಹೈಕೋರ್ಟ್ (High Court) ತಡೆ ನೀಡಿದೆ.

    ನಾಗೇಂದ್ರ ಹೆಸರು ಹೇಳುವಂತೆ ನನಗೆ ಹಿಂಸೆ ಕೊಡುತಿದ್ದರು ಅಂತ ಇಡಿಯ ಇಬ್ಬರು ಅಧಿಕಾರಿಗಳ ವಿರುದ್ಧ ನಿಗಮದ ಮಾಜಿ ಎಂಡಿ ಕಲ್ಲೇಶ್ ದೂರು ದಾಖಲಿಸಿದ್ದರು. ಎಫ್‌ಐಆರ್ ರದ್ದು ಕೋರಿ ಇಡಿ ಹೈಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಎಫ್‌ಐಆರ್‌ಗೆ ತಡೆ ನೀಡಿ ಆಗಸ್ಟ್ 21ಕ್ಕೆ ವಿಚಾರಣೆ ಮುಂದೂಡಿದೆ.

     

    ಸರ್ಕಾರದ ಪರ ವಾದ ಮಂಡಿಸಿದ ಎಜಿ ಶಶಿಕಿರಣ್ ಶೆಟ್ಟಿ, ಸಿಎಂ, ಡಿಸಿಎಂ ಹೆಸರೇಳಲು ಇಡಿ ಅಧಿಕಾರಿಗಳು ಸಾಕಷ್ಟು ಒತ್ತಡ ಹೇರಿದ್ದಾರೆ. ಇಡಿ ಕಚೇರಿಯ ಸಿಸಿಟಿವಿಯನ್ನು ವಶಕ್ಕೆ ಪಡೆಯಬೇಕು. ಆಗ ಎಲ್ಲವೂ ತಿಳಿಯಲಿದೆ ಎಂದು ವಾದಿಸಿದರು.

    ಇದಕ್ಕೆ ಜಡ್ಜ್ ನಾಗಪ್ರಸನ್ನ ಅವರು, ಸಿಸಿಟಿವಿ ಯಾಕೆ ಬೇಕು? ಅಲ್ಲಿ ಕಾಫಿ ಕುಡಿಯಲು ಕರೆದಿದ್ದರಾ? ನೀವು ಹೀಗೆ ಆರೋಪ ಮಾಡಿದ್ರೆ ಯಾವೊಬ್ಬ ಅಧಿಕಾರಿಯೂ ಕೆಲಸ ಮಾಡಲ್ಲ. ರಾಜ್ಯ ಸರ್ಕಾರ ಯಾಕೆ ಎಫ್‌ಐಆರ್ ದಾಖಲು ಮಾಡಿದೆ ಎಂದು ಪ್ರಶ್ನಿಸಿದ್ರು. ಇದನ್ನೂ ಓದಿ: ಬೆಂಗಳೂರು 5 ಭಾಗಗಳಾಗಿ ವಿಭಜನೆ – ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಮಸೂದೆಯಲ್ಲಿ ಏನಿದೆ? ಇಲ್ಲಿದೆ ಕಂಪ್ಲೀಟ್‌ ಮಾಹಿತಿ

    ಪ್ರತಿವಾದ ಮಾಡಿದ ಇ.ಡಿ ಪರ ವಕೀಲ ಎಎಸ್‌ಜಿ ಅರವಿಂದ್, ತನಿಖೆಯನ್ನು ಬೇಕಾದರೆ ಪ್ರಶ್ನಿಸಲಿ. ಅದು ಬಿಟ್ಟು ಅಧಿಕಾರಿಗಳನ್ನು ಯಾಕೆ ಟಾರ್ಗೆಟ್ ಮಾಡುತ್ತಾರೆ. ಇಡಿ ತನಿಖೆಯ ಮೇಲೆ ತೊಂದರೆ ಇದ್ದರೆ ಅವರು ಇಸಿಐಆರ್ ದಾಖಲು ಮಾಡಬಹುದಿತ್ತು ಎಂದರು. ವಾಲ್ಮೀಕಿ ಹಗರಣ| ಇಬ್ಬರು ಇಡಿ ಅಧಿಕಾರಿಗಳ ವಿರುದ್ಧವೇ ಎಫ್‌ಐಆರ್‌ ದಾಖಲು- ದೂರಿನಲ್ಲಿ ಏನಿದೆ?

    ಈ ಮಧ್ಯೆ ಎಸ್‌ಐಟಿ ತನಿಖೆಗೆ ತಡೆ ನೀಡುವಂತೆ ಸಲ್ಲಿಸಿದ್ದ ಯೂನಿಯನ್ ಬ್ಯಾಂಕ್ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಸಿಬಿಐಗೆ ನೋಟಿಸ್ ನೀಡಿ ಆಗಸ್ಟ್ 7ಕ್ಕೆ ಮುಂದೂಡಿದೆ.

     

  • Valmiki Scam | ಹೈದರಾಬಾದ್‌ ಚುನಾವಣೆಗೆ ಮದ್ಯ ಹಂಚಲು ಗಿಫ್ಟ್‌ ಕೂಪನ್‌: ಇಡಿ

    Valmiki Scam | ಹೈದರಾಬಾದ್‌ ಚುನಾವಣೆಗೆ ಮದ್ಯ ಹಂಚಲು ಗಿಫ್ಟ್‌ ಕೂಪನ್‌: ಇಡಿ

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಅಕ್ರಮ ಹಣ ವರ್ಗಾವಣೆ ಆರೋಪದ ಅಡಿ ಜೈಲು ಸೇರಿರುವ ಮಾಜಿ ಸಚಿವ ನಾಗೇಂದ್ರ (Nagendra) ಅವರು ಲೋಕಸಭಾ ಚುನಾವಣೆಯ (Lok Sabaha Election) ಸಂದರ್ಭದಲ್ಲಿ ಮತದಾರರಿಗೆ ಮದ್ಯ ಹಂಚಲು ಗಿಫ್ಟ್‌ ಕೂಪನ್‌ ಹಂಚಿಕೆ ಮಾಡಿದ್ದರು ಎಂದು ಜಾರಿ ನಿರ್ದೇಶನಾಲಯ (ED) ಗಂಭೀರ ಆರೋಪ ಮಾಡಿದೆ.

    ನಾಗೇಂದ್ರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಇಡಿ ರಿಮ್ಯಾಂಡ್ ಕಾಪಿ (Remand Copy) ಸಲ್ಲಿಕೆ ಮಾಡಿತ್ತು. ಅದರ ಎಕ್ಸ್‌ಕ್ಲೂಸಿವ್‌ ಕಾಪಿ ಪಬ್ಲಿಕ್‌ ಟಿವಿಗೆ ಈಗ ಲಭ್ಯವಾಗಿದೆ. ವಾಲ್ಮೀಕಿ ನಿಗಮದ ಹಣವನ್ನು ಚುನಾವಣೆಗೆ ಅಕ್ರಮವಾಗಿ ಬಳಕೆ ಮಾಡಿರುವುದರ ಬಗ್ಗೆ ಈ ಹಿಂದೆ ಇಡಿ ಉಲ್ಲೇಖ ಮಾಡಿತ್ತು. ಈಗ ಇನ್ನೊಂದಿಷ್ಟು ಮಾಹಿತಿಯನ್ನು ಕಲೆಹಾಕಿ ನ್ಯಾಯಾಲಯಕ್ಕೆ ವಿವರಣೆ ನೀಡಿದೆ. ಇದನ್ನೂ ಓದಿ: ಐಎನ್‌ಎಸ್‌ ಬ್ರಹ್ಮಪುತ್ರ ನೌಕೆಯಲ್ಲಿ ಅಗ್ನಿ ದುರಂತ; ಓರ್ವ ಸಿಬ್ಬಂದಿ ನಾಪತ್ತೆ – ಒಂದು ಕಡೆ ವಾಲಿದ ನೌಕೆ

    ರಿಮ್ಯಾಂಡ್‌ ಕಾಪಿಯಲ್ಲಿ ಏನಿದೆ?
    ನಾಗೇಂದ್ರ ಬಳಿ ಮೂರು ಮೊಬೈಲ್‌ಗಳು ಇದ್ದವು. ಹಗರಣ ಬೆಳಕಿಗೆ ಬಂದ ಬಳಿಕ ನಾಶ ಮಾಡಿದ್ದಾರೆ. ಇದರ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ.

    ಹಣದ ರಾಶಿ ಸುರಿದಿರುವುದಕ್ಕೆ ಪೂರಕವಾದ ಡಿಜಿಟಲ್ ಸಾಕ್ಷ್ಯ ಮತ್ತು ಫೋಟೋ ಸಿಕ್ಕಿವೆ. ಆದರೆ ಇದನ್ನು ನಾಗೇಂದ್ರ ಒಪ್ಪಿಕೊಂಡಿಲ್ಲ.

    ಹೈದರಾಬಾದ್‌ನಲ್ಲಿ ಲಿಕ್ಕರ್ ವ್ಯಾಪಾರಿಗಳ ಜೊತೆ ಡೀಲ್ ಮಾಡಿದ್ದಾರೆ. ಹಣವನ್ನು ವ್ಯಾಪಾರಿಗಳಿಂದ ಪಡೆದುಕೊಂಡಿದ್ದು ಇದರ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ.

    ಹೈದರಾಬಾದ್‌ ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ಗಿಫ್ಟ್ ಕೂಪನ್‌ ನೀಡಲಾಗಿದೆ.1.40 ಕೋಟಿ ರೂ. ಮೌಲ್ಯದ ಕೂಪನ್ ನೀಡಿರೋದಕ್ಕೆ ಪೂರಕ ಸಾಕ್ಷ್ಯ ಸಿಕ್ಕಿದೆ.

     

  • ವಾಲ್ಮೀಕಿ ಹಗರಣ| ಇಬ್ಬರು ಇಡಿ ಅಧಿಕಾರಿಗಳ ವಿರುದ್ಧವೇ ಎಫ್‌ಐಆರ್‌ ದಾಖಲು

    ವಾಲ್ಮೀಕಿ ಹಗರಣ| ಇಬ್ಬರು ಇಡಿ ಅಧಿಕಾರಿಗಳ ವಿರುದ್ಧವೇ ಎಫ್‌ಐಆರ್‌ ದಾಖಲು

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ನಡೆದಿದೆ ಎನ್ನಲಾದ 187 ಕೋಟಿ ರೂ. ಅವ್ಯವಹಾರ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು ಜಾರಿ ನಿರ್ದೇಶನಾಲಯದ (ED) ಇಬ್ಬರು ಅಧಿಕಾರಿಗಳ ವಿರುದ್ಧವೇ ಎಫ್‌ಐಆರ್‌ ದಾಖಲಾಗಿದೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಾಗೂ ಹಣಕಾಸು ಇಲಾಖೆಯನ್ನು ಸಿಲುಕಿಸುವಂತೆ ರಾಜ್ಯ ಸರ್ಕಾರಿ ಅಧಿಕಾರಿಯೊಬ್ಬರಿಗೆ ಒತ್ತಡ ಹೇರಿದ ಆರೋಪದ ಮೇರೆಗೆ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರನ್ನು 5 ವಲಯಗಳನ್ನಾಗಿ ವಿಭಜಿಸುವ ಮಸೂದೆಗೆ ಕ್ಯಾಬಿನೆಟ್‌ ಒಪ್ಪಿಗೆ

    ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ ನಿರ್ದೇಶಕ ಕಲ್ಲೇಶ್ ಬಿ (Kallesh B) ದೂರು ಆಧರಿಸಿ ಮುರಳಿ ಕಣ್ಣನ್ ಮತ್ತು ಮಿತ್ತಲ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

    ಜುಲೈ 16 ರಂದು ನಡೆದ ವಿಚಾರಣೆ ವೇಳೆ ಕಣ್ಣನ್ 17 ಪ್ರಶ್ನೆಗಳನ್ನು ಕೇಳಿದ್ದಾರೆ. ಈ ವೇಳೆ ಪ್ರಕರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ, ಸಿಎಂ ಸಿದ್ದರಾಮಯ್ಯ ಹಣಕಾಸು ಇಲಾಖೆಯನ್ನು ಹೆಸರು ಹೇಳುವಂತೆ ಕಣ್ಣನ್ ಕೇಳಿಕೊಂಡರು ಎಂದು ಅವರು ಆರೋಪಿಸಿದ್ದಾರೆ.

    ವಾಲ್ಮೀಕಿ ನಿಗಮದ ತನಿಖೆಯನ್ನು ರಾಜ್ಯ ಸರ್ಕಾರ ಎಸ್‌ಐಟಿಗೆ (SIT) ವಹಿಸಿದ್ದರೆ ಯೂನಿಯನ್‌ ಬ್ಯಾಂಕ್‌ ನೀಡಿದ ದೂರು ಆಧಾರಿಸಿ ಸಿಬಿಐ (CBI) ತನಿಖೆಗೆ ಇಳಿದಿದೆ. ಈ ವೇಳೆ ಅಕ್ರಮ ಹಣ ವರ್ಗಾವಣೆ ನಡೆದಿರುವ ಹಿನ್ನೆಲೆಯಲ್ಲಿ ಇಡಿ ಸಹ ತನಿಖೆ ನಡೆಸುತ್ತಿದೆ.

     

  • ಮಾಜಿ ಸಚಿವ ನಾಗೇಂದ್ರ ಇಡಿ ಕಸ್ಟಡಿ ಇಂದಿಗೆ ಅಂತ್ಯ

    ಮಾಜಿ ಸಚಿವ ನಾಗೇಂದ್ರ ಇಡಿ ಕಸ್ಟಡಿ ಇಂದಿಗೆ ಅಂತ್ಯ

    ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Development Corporation Scam) ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ (B Nagendra) ಅವರ ಇಡಿ (ED) ಕಸ್ಟಡಿ ಇಂದಿಗೆ ಅಂತ್ಯವಾಗಿದೆ.

    ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಅವರ ಪಾತ್ರ ಕಂಡುಬಂದ ಹಿನ್ನೆಲೆ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿ 11 ದಿನಗಳ ಕಾಲ ತನಿಖೆ ನಡೆಸಿದ್ದಾರೆ. ನಾಗೇಂದ್ರ ಅವರನ್ನು ಆರಂಭದಲ್ಲಿ 6 ದಿನ ಕಸ್ಟಡಿಗೆ ಪಡೆದಿದ್ದ ಅಧಿಕಾರಿಗಳು ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಕಾರಣ ನೀಡಿ ಮತ್ತೆ ಕಸ್ಟಡಿಗೆ ಕೇಳಿದ್ದರು. ಈ ಹಿನ್ನೆಲೆ ನ್ಯಾಯಾಲಯ ನಾಗೇಂದ್ರ ಅವರನ್ನು ಎರಡನೇ ಬಾರಿಗೆ 5 ದಿನ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿತ್ತು. ಇದನ್ನೂ ಓದಿ: ತಮಿಳುನಾಡಿಗೆ ನಾವು ನೀರು ಬಿಟ್ಟಿಲ್ಲ: ಡಿಕೆಶಿ

    ಇಂದು ನಾಗೇಂದ್ರ ಕಸ್ಟಡಿ ಅಂತ್ಯವಾದ ಹಿನ್ನೆಲೆ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಜನಪ್ರತಿನಿಧಿಗಳ ಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ. ಇನ್ನು ನಾಗೇಂದ್ರ ಅವರು ಇಡಿ ಕಸ್ಟಡಿಯಲ್ಲಿ ಇರುವಾಗಲೇ ಅವರ ಪತ್ನಿಯನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸಿ ಅಕ್ರಮದ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ ಎನ್ನಲಾಗಿದೆ. ಉಳಿದಂತೆ ಆರೋಪಿಗಳು ಚುನಾವಣೆ ವೇಳೆ ಎಣ್ಣೆಗೆ ಹಣ ಬಳಸಿರುವ ಬಗ್ಗೆ ಮಾಹಿತಿ ನೀಡಿದ್ದರು. ಅಕ್ರಮದ ಬಗ್ಗೆ ಇಡಿ ಅಧಿಕಾರಿಗಳ ಪ್ರಶ್ನೆಗಳಿಗೆ ನಾಗೇಂದ್ರ ಉತ್ತರಿಸದ ಕಾರಣ ಮತ್ತೊಮ್ಮೆ ಇಡಿ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ಇದನ್ನೂ ಓದಿ: ಇಂದಿನಿಂದ ಸಂಸತ್‌ ಅಧಿವೇಶನ ಆರಂಭ – ನಾಳೆ ಕೇಂದ್ರ ಬಜೆಟ್‌ ಮಂಡನೆ