Tag: ED

  • ಇಡಿಯಿಂದ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾಗೆ ಸೇರಿದ 97 ಕೋಟಿ ರೂ. ಆಸ್ತಿ ಜಪ್ತಿ

    ಇಡಿಯಿಂದ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾಗೆ ಸೇರಿದ 97 ಕೋಟಿ ರೂ. ಆಸ್ತಿ ಜಪ್ತಿ

    ಮುಂಬೈ: ಬಾಲಿವುಡ್ ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ (Shilpa Shetty) ಮತ್ತು ಪತಿ ರಾಜ್ ಕುಂದ್ರಾಗೆ (Raj Kundra) ಸೇರಿದ ಅಂದಾಜು 97 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ (ED) ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಿದ ಆಸ್ತಿಯಲ್ಲಿ ಮುಂಬೈನ ಪ್ರತಿಷ್ಠಿತ ಜುಹುವಿನಲ್ಲಿರುವ ಅಪಾರ್ಟ್ ಮೆಂಟ್ ಕೂಡ ಸೇರಿದೆ.

    2022ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದಿ ಅಡಿ (PMLA) ಇಡಿ ಪ್ರಕರಣವನ್ನು ದಾಖಲಿಸಿದ್ದು, ಜಾರಿ ನಿರ್ದೇಶನಾಲಯವು 97.97 ಕೋಟಿ ರೂಪಾಯಿ ಮೊತ್ತದ ಸ್ಥಿರ ಹಾಗೂ ಚರಾಸ್ತಿಯನ್ನು ಜಪ್ತಿ ಮಾಡಿದೆ. ಜಪ್ತಿಯಾದ ಆಸ್ತಿಗಳಳ್ಲಿ ಪುಣೆಯಲ್ಲಿರುವ ಬಂಗ್ಲೆ, ಫ್ಲಾಟ್ ಹಾಗೂ ಇಕ್ವಿಟಿ ಷೇರು ಕೂಡ ಹೊಂದಿವೆ.  ಇದನ್ನೂ ಓದಿ: Exclusive: ನಾವೇ ಮಂಜುನಾಥ್‌ರನ್ನ ಬಿಜೆಪಿಯಿಂದ ನಿಲ್ಲಿಸಿದ್ದು: ಕುಮಾರಸ್ವಾಮಿ

    ಈ ಹಿಂದೆ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ವೇರಿಯಬಲ್ ಟೆಕ್ ಪ್ರೈವೇಟ್ ಲಿಮಿಟೆಡ್ ಹೆಸರಿನ ಸಂಸ್ಥೆಯ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಸಂಸ್ಥೆಯ ಮೂಲಕ ಅಮಿತ್ ಭಾರದ್ವಾಜ್, ವಿವೇಕ್, ಅಜಯ್, ಮಹೇಂದರ್ ಹೀಗೆ ಹಲವಾರು ಏಜೆಂಟರ್ ಗಳು ಬಿಟ್ ಕಾಯಿನ್ (Bit Coin) ರೂಪದಲ್ಲಿ 2017ರಲ್ಲಿ 6,600 ಕೋಟಿ ರೂ. ಹಣ ಸಂಗ್ರಹಿಸಿದ್ದರು. ಇವರ ಜೊತೆ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ವ್ಯವಹಾರ ಮಾಡಿದ್ದರು ಎನ್ನುವ ಆರೋಪವಿದೆ. ಇದನ್ನೂ ಓದಿ: ಹಬ್ಬಗಳನ್ನೂ ಪೊಲೀಸ್ ಬಂದೋಬಸ್ತ್‌ನಲ್ಲಿ ಆಚರಿಸಬೇಕಿರೋದು ದುರ್ದೈವ: ಪ್ರಿಯಾಂಕ್ ಖರ್ಗೆ ವಿಷಾದ

    ಉಕ್ರೇನ್‌ನಲ್ಲಿ ಬಿಟ್ ಕಾಯಿನ್ ಮೈನಿಂಗ್ ಫಾರ್ಮ್ ಶುರು ಮಾಡುವುದಕ್ಕೆ ಶಿಲ್ಪಾ ಮತ್ತು ರಾಜ್ ಕುಂದ್ರಾ ದಂಪತಿ ಅಮಿತ್ ಭಾರದ್ವಾಜ್ ಬಳಿ 285 ಬಿಟ್ ಕಾಯಿನ್ ಪಡೆದಿದ್ದಾರೆ. ಸದ್ಯ ಈ ಬಿಟ್‌ ಕಾಯಿನ್‌ ಮೌಲ್ಯ ಸುಮಾರು 150 ಕೋಟಿ ರೂ. ಎಂದು ಎಂದು ತನಿಖಾ ಸಂಸ್ಥೆ ಹೇಳಿದೆ.

  • ದೆಹಲಿ ಸರ್ಕಾರ ಉರುಳಿಸಿ, ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ಸಂಚು – ಆಪ್‌ ಸಚಿವೆ ಆರೋಪ

    ದೆಹಲಿ ಸರ್ಕಾರ ಉರುಳಿಸಿ, ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ಸಂಚು – ಆಪ್‌ ಸಚಿವೆ ಆರೋಪ

    ನವದೆಹಲಿ: ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರನ್ನು ಅಸ್ಥಿರಗೊಳಿಸಲು ರಾಜಕೀಯ ಪಿತೂರಿ ನಡೆಸುತ್ತಿರುವ ಬಿಜಪಿ, ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಪ್ರಯತ್ನಿಸುತ್ತಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿರುವುದಾಗಿ ದೆಹಲಿ ಸಚಿವೆ ಅತಿಶಿ (Atishi) ಆರೋಪಿಸಿದ್ದಾರೆ.

    ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅರವಿಂದ್ ಕೇಜ್ರಿವಾಲ್ ಅವರನ್ನು ಸುಳ್ಳು ಪ್ರಕರಣದಲ್ಲಿ (Liquor Policy Scam) ಬಂಧಿಸಲಾಗಿದೆ. ಅವರ ವಿರುದ್ಧ ಅಪರಾಧ ಸಾಬೀತುಪಡಿಸಲು ಯಾವುದೇ ಸಾಕ್ಷ್ಯಗಳಿಲ್ಲ. ಆದ್ದರಿಂದ ದೆಹಲಿಯ ಚುನಾಯಿತ ಸರ್ಕಾರ ಉರುಳಿಸಲು ಸಂಚು ನಡೆಯುತ್ತಿದೆ. ಈ ಹಿಂದೆ ನಡೆದ ಕೆಲವು ಬೆಳವಣಿಗೆಗಳನ್ನು ನೋಡಿದಾಗ ಪೂರ್ವನಿಯೋಜಿತವಾಗಿಯೇ ಪ್ಲ್ಯಾನ್‌ ಮಾಡಿದ್ದಾರೆ ಅನ್ನೋದು ಗೊತ್ತಾಗುತ್ತಿದೆ ಎಂದು ಅತಿಶಿ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಸ್ವತಂತ್ರ ಭಾರತದ 2ನೇ ಲೋಕಸಭಾ ಚುನಾವಣೆ ಬಗ್ಗೆ ನಿಮಗೆಷ್ಟು ಗೊತ್ತು?

    ಬಿಜೆಪಿ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಸಂಚು ರೂಪಿಸುತ್ತಿದೆ ಅನ್ನೋದು ಸ್ಪಷ್ಟವಾಗಿ ತಿಳಿಯುತ್ತಿದೆ. ಅದರ ಸೂಚನೆಗಳು ನಮಗೆ ಸಿಕ್ಕಿವೆ. ಲೋಕಸಭಾ ಚುನಾವಣೆ ಘೋಷಣೆಯಾದಾಗಿನಿಂದ ದೆಹಲಿಯಲ್ಲಿ ಯಾವುದೇ ಅಧಿಕಾರಿಯ ನೇಮಕಾತಿ, ವರ್ಗಾವಣೆ ಆಗಿಲ್ಲ. ಅಧಿಕಾರಿಗಳು ಸರ್ಕಾರದ ಸಭೆಗಳಿಗೆ ಬರುತ್ತಿಲ್ಲ. ಕಳೆದ ವಾರ, ಲೆಫ್ಟಿನೆಂಟ್ ಗವರ್ನರ್ ಅವರು ಕೇಂದ್ರ ಗೃಹ ಸಚಿವಾಲಯಕ್ಕೆ ಆಧಾರರಹಿತ ಪತ್ರ ಬರೆದು, ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿಯನ್ನೂ ವಜಾ ಮಾಡಿಸಿದ್ದಾರೆ. ಇವೆಲ್ಲವೂ ದೆಹಲಿ ಸರ್ಕಾರವನ್ನು ಮುಗಿಸಲು ಮಾಡಿರುವ ಸಂಚು ಎಂದು ಅತಿಶಿ ಆರೋಪಿಸಿದ್ದಾರೆ.

    ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೆ ತರುವುದು ಕಾನೂನು ಬಾಹಿರ, ಅಸಾಂವಿಧಾನಿಕ ಮತ್ತು ಜನರ ತೀರ್ಪಿಗೆ ವಿರುದ್ಧವಾದದ್ದು ಎಂದು ಬಿಜೆಪಿಯನ್ನು ಎಚ್ಚರಿಸಲು ಬಯಸುತ್ತೇನೆ. ದೆಹಲಿಯ ಜನರು ಅರವಿಂದ್‌ ಕೇಜ್ರವಾಲ್ ಮತ್ತು ಆಪ್‌ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ರಾಮನಗರಲ್ಲಿ 30 ಕೆಜಿಗೂ ಅಧಿಕ ಪ್ರಮಾಣದ ಚಿನ್ನ; ದಾವಣಗೆರೆಯಲ್ಲಿ 12.50 ಕೋಟಿ ರೂ. ಮೌಲ್ಯದ ಚಿನ್ನಾಭರಣ, ವಜ್ರ ಜಪ್ತಿ!

  • ಜೈಲು ಸೇರಿದ ಕೇಜ್ರಿವಾಲ್‌ 4.5 ಕೆಜಿ ಕಳೆದುಕೊಂಡಿದ್ದಾರೆ: ಆಪ್‌ ಗಂಭೀರ ಆರೋಪ

    ಜೈಲು ಸೇರಿದ ಕೇಜ್ರಿವಾಲ್‌ 4.5 ಕೆಜಿ ಕಳೆದುಕೊಂಡಿದ್ದಾರೆ: ಆಪ್‌ ಗಂಭೀರ ಆರೋಪ

    ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಮಾರ್ಚ್ 21 ರಂದು ಬಂಧಿಸಿದಾಗಿನಿಂದ 4.5 ಕೆಜಿ ಕಳೆದುಕೊಂಡಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (AAP) ನಾಯಕಿ ಮತ್ತು ಸಚಿವ ಅತಿಶಿ (Atishi) ಇಂದು ಹೇಳಿದ್ದಾರೆ.

    ಇಂದು ಬೆಳಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅತಿಶಿ, ಕೇಜ್ರಿವಾಲ್ ಅವರು ಮಧುಮೇಹದಿಂದ ಬಳಲುತ್ತಿದ್ದಾರೆ. ಆರೋಗ್ಯ ಸಮಸ್ಯೆ ಇದ್ದರೂ ಅವರು ರಾಷ್ಟ್ರದ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರ ಬಂಧನಗೊಂಡ ದಿನದಿಂದ ಕೇಜ್ರಿವಾಲ್ ಅವರು 4.5 ಕೆಜಿ ತೂಕವನ್ನು ಕಳೆದುಕೊಂಡಿದ್ದಾರೆ. ಇದು ತುಂಬಾ ಕಳವಳಕಾರಿಯಾಗಿದೆ. ಬಿಜೆಪಿ ಅವರ ಆರೋಗ್ಯವನ್ನು ಅಪಾಯಕ್ಕೆ ತಳ್ಳುತ್ತಿದೆ. ಅರವಿಂದ್ ಕೇಜ್ರಿವಾಲ್ ಅವರಿಗೆ ಏನಾದರೂ ಸಂಭವಿಸಿದರೆ, ದೇಶವೇ ಅಲ್ಲ, ದೇವರು ಕೂಡ ಅವರನ್ನು ಕ್ಷಮಿಸುವುದಿಲ್ಲ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಯಾರೇ ಹೇಳಲಿ, ಬಿಡಲಿ ನಮ್ಮ ಕ್ಷೇತ್ರದಲ್ಲಿ ಸುಧಾಕರ್‌ಗೆ ಬಹುಮತ ಕೊಡುತ್ತೇವೆ: ಎಸ್‌ಆರ್‌ ವಿಶ್ವನಾಥ್‌

    ಮದ್ಯ ಹಗರಣಕ್ಕೆ (Liquor Scam) ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೊಳಗಾದ ಕೇಜ್ರಿವಾಲ್‌ ಅವರನ್ನು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನಂತರ ಸೋಮವಾರ ತಿಹಾರ್ ಜೈಲಿಗೆ ಸ್ಥಳಾಂತರಿಸಲಾಯಿತು.

    ಮುಖ್ಯಮಂತ್ರಿಗಳಿಗೆ ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ ಮನೆಯ ಆಹಾರವನ್ನು ನೀಡಲಾಗುತ್ತದೆ. ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಯಾವುದೇ ತುರ್ತು ಪರಿಸ್ಥಿತಿಗಾಗಿ ಅವರ ಸೆಲ್ ಬಳಿ ಕ್ವಿಕ್‌ ರೆಸ್ಪಾನ್ಸ್‌ ತಂಡವನ್ನು ನಿಯೋಜಿಸಲಾಗಿದೆ ಎಂದು ಜೈಲಿನ ಅಧಿಕಾರಿಗಳು ಹೇಳಿದ್ದಾರೆ.

  • ಹೊಸ ಮಧ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ – ಎಎಪಿ ಸಂಸದ ಸಂಜಯ್ ಸಿಂಗ್‌ಗೆ ಸುಪ್ರೀಂ ಜಾಮೀನು

    ಹೊಸ ಮಧ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ – ಎಎಪಿ ಸಂಸದ ಸಂಜಯ್ ಸಿಂಗ್‌ಗೆ ಸುಪ್ರೀಂ ಜಾಮೀನು

    ನವದೆಹಲಿ: ಹೊಸ ಮಧ್ಯ ನೀತಿಯಲ್ಲಿ (Delhi liquor Policy Case) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿದ್ದ ಎಎಪಿ ನಾಯಕ ಹಾಗೂ ಸಂಸದ ಸಂಜಯ್ ಸಿಂಗ್‌ (Sanjay Singh) ಅವರಿಗೆ ಸುಪ್ರಿಂ ಕೋರ್ಟ್ ಮಂಗಳವಾರ ಜಾಮೀನು ನೀಡಿದೆ.

    ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಂಜಯ್ ಸಿಂಗ್ ಅವರ ಕಸ್ಟಡಿ ಇನ್ನು ಮುಂದೆ ಅಗತ್ಯವಿಲ್ಲ ಎಂದು ಜಾರಿ ನಿರ್ದೇಶನಾಲಯ (ED) ಹೇಳಿದ ನಂತರ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ದೀಪಂಕರ್ ದತ್ತಾ ಮತ್ತು ಪ್ರಸನ್ನ ಬಿ ವರಾಲೆ ಅವರಿದ್ದ ತ್ರಿಸದಸ್ಯ ಪೀಠವು ಜಾಮೀನಿನ ಮೇಲೆ ಬಿಡುಗಡೆಗೆ ಆದೇಶಿಸಿತು.

    ಇಡಿ ಬಂಧನ ಮತ್ತು ಜಾಮೀನು ಕೋರಿ ಸಂಜಯ್ ಸಿಂಗ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಂಜೀವ್ ಖನ್ನಾ ನೇತೃತ್ವದ ತ್ರಿ ಸದಸ್ಯ ಪೀಠ, ಜಾಮೀನು ನೀಡಲು ಆಕ್ಷೇಪಗಳಿವೆಯೇ ಎಂದು ಇಡಿಯನ್ನು ಪ್ರಶ್ನಿಸಿತು‌. ಇದಕ್ಕೆ ಉತ್ತರಿಸಿದ ಇಡಿ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್-3 ಮತ್ತು 4ರ ಅಡಿಯಲ್ಲಿ ತನಿಖಾ ವರದಿಯಿಂದ ಉಂಟಾಗುವ ವಿಚಾರಣೆಯ ಬಾಕಿ ಇರುವಾಗ ಸಂಜಯ್ ಸಿಂಗ್‌ಗೆ ಜಾಮೀನು ನೀಡಲು ಆಕ್ಷೇಪಿಸುವುದಿಲ್ಲ ಎಂದು ಹೇಳಿತು.

    ಇಡಿ ವಾದ ಆಲಿಸಿದ ಬಳಿಕ ಕೋರ್ಟ್ (Supreme Court) ಮಧ್ಯಂತರ ಜಾಮೀನು ಮಂಜೂರು ಮಾಡಿತು. ಷರತ್ತುಗಳನ್ನು ಕೆಳಹಂತದ ನ್ಯಾಯಲಯ ನಿರ್ಧರಿಸಲಿದೆ ಎಂದು ಹೇಳಿತು. ಜಾಮೀನಿನ ಅವಧಿಯಲ್ಲಿ ಸಿಂಗ್ ಅವರು ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅರ್ಹರಾಗಿರುತ್ತಾರೆ. ಆದ್ರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಬಹಿರಂಗ ಹೇಳಿಕೆ ನೀಡಬಾರದು ಎಂದು ಕೋರ್ಟ್ ಸಂಜಯ್ ಸಿಂಗ್‌ಗೆ ತಾಕೀತು ಮಾಡಿದೆ. ಇದನ್ನೂ ಓದಿ: ಆಯುರ್ವೇದ ಉತ್ಪನ್ನ ಉತ್ತೇಜಿಸಲು ದಾರಿತಪ್ಪಿಸುವ ಜಾಹೀರಾತು ಪ್ರಸಾರ; ಬಾಬಾ ರಾಮದೇವ್ ಕ್ಷಮೆ ಒಪ್ಪದ ಸುಪ್ರೀಂ

    ಸಂಜಯ್ ಸಿಂಗ್ ಪರ ವಾದ ಮಂಡಿಸಿದ ಅಭಿಷೇಕ್ ಮನುಸಿಂಘ್ವಿ, ಇತರೆ ಆರೋಪಿಗಳ ಹೇಳಿಕೆ ಆಧರಿಸಿ ದಾಳಿಯನ್ನು ನಡೆಸಲಾಗಿತ್ತು. ಈವರೆಗೂ ಯಾವುದೇ ನಗದು ಹಣ ಪತ್ತೆಯಾಗಿಲ್ಲ ಅಂತಹ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ವಾದಿಸಿದರು. ಇದನ್ನೂ ಓದಿ: ಜೈಲು ಸೇರಿರುವ ಸಂಜಯ್ ಸಿಂಗ್‍ಗೆ ಎಂಪಿಯಾಗಿ ಮುಂದುವರಿಸಲು ಆಪ್ ನಿರ್ಧಾರ

    ಏನಿದು ಪ್ರಕರಣ?
    ಕಳೆದ ವರ್ಷ ಅಕ್ಟೋಬರ್‌ 4 ರಂದು ಸಂಜಯ್ ಸಿಂಗ್ ಅವರನ್ನು ಹೊಸ ಮದ್ಯ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಅವರ ಮನೆಯ ಮೇಲೆ ಇಡಿ ದಾಳಿ ನಡೆಸಿತ್ತು. ಬಳಿಕ ಅವರನ್ನು ಬಂಧಿಸಲಾಗಿತ್ತು. ಇಡಿ ಬಂಧನವನ್ನು ಪ್ರಶ್ನಿಸಿ ಸಂಜಯ್ ಸಿಂಗ್ ಅರ್ಜಿ ಸಲ್ಲಿಸಿದ್ದರು, ಆದರೆ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಇದೀಗ 6 ತಿಂಗಳ ಬಳಿಕ ಸುಪ್ರೀಂ ಕೋರ್ಟ್‌ ಸಂಜಯ್‌ ಸಿಂಗ್‌ ಅವರಿಗೆ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಕೇಂದ್ರದಿಂದ ಬಿಗ್‌ ರಿಲೀಫ್‌ – ಚುನಾವಣೆ ಮುಗಿಯವರೆಗೂ ತೆರಿಗೆ ವಸೂಲಿ ಇಲ್ಲ

  • ಅರವಿಂದ್ ಕೇಜ್ರಿವಾಲ್ ಇಡಿ ಕಸ್ಟಡಿ 4 ದಿನ ವಿಸ್ತರಣೆ

    ಅರವಿಂದ್ ಕೇಜ್ರಿವಾಲ್ ಇಡಿ ಕಸ್ಟಡಿ 4 ದಿನ ವಿಸ್ತರಣೆ

    – ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದ ಇಡಿ
    – ಪ್ರಕರಣದಲ್ಲಿ ನನ್ನ ಸಿಲುಕಿಸುವುದೇ ಇಡಿಯ ಏಕೈಕ ಉದ್ದೇಶ ಎಂದ ಕೇಜ್ರಿವಾಲ್

    ನವದೆಹಲಿ: ಹೊಸ ಅಬಕಾರಿ ನೀತಿ ಹಗರಣದಲ್ಲಿ (Delhi Liquor Scam) ಬಂಧನಕ್ಕೊಳಪಟ್ಟಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಇಡಿ (ED) ಕಸ್ಟಡಿಯನ್ನು ನಾಲ್ಕು ದಿನಗಳಿಗೆ ವಿಸ್ತರಿಸಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಆದೇಶ ನೀಡಿದೆ. ಕೇಜ್ರಿವಾಲ್ ವಿಚಾರಣೆಗೆ ಸಹಕರಿಸುತ್ತಿಲ್ಲ, ಪ್ರಕರಣದ ನಾಲ್ಕು ಮಂದಿ ಇತರೆ ಆರೋಪಿಗಳೊಂದಿಗೆ ಕೇಜ್ರಿವಾಲ್ ಅವರ ತನಿಖೆ ನಡೆಸಲು ಸಮಯ ಕೋರಿದ ಇಡಿ ವಾದವನ್ನು ಕೋರ್ಟ್ ಪುರಸ್ಕರಿಸಿದೆ.

    ಇದಕ್ಕೂ ಮುನ್ನ ಕಸ್ಟಡಿ ಅಂತ್ಯವಾದ ಹಿನ್ನಲೆ ಅರವಿಂದ್ ಕೇಜ್ರಿವಾಲ್ ಅವರನ್ನು ನ್ಯಾಯಲಯದ (Court) ಮುಂದೆ ಹಾಜರುಪಡಿಸಲಾಯಿತು. ಕೋರ್ಟ್ ಪ್ರವೇಶ ಮಾಡುವ ವೇಳೆ “ಉದ್ದೇಶಪೂರ್ವಕವಾಗಿ ಸಿಕ್ಕಿಹಾಕಿಸುವ ಪ್ರಯತ್ನ ಮಾಡಲಾಗುತ್ತಿದೆ ಜನರು ಇದಕ್ಕೆ ಉತ್ತರಿಸಲಿದ್ದಾರೆ” ಎಂದು ಅಲ್ಲಿದ್ದ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

    ವಿಚಾರಣೆ ಆರಂಭವಾಗುತ್ತಿದ್ದಂತೆ ತಮ್ಮ ಪರವಾಗಿ ತಾವೇ ವಾದ ಮಂಡಿಸಿದ ಅರವಿಂದ್ ಕೇಜ್ರಿವಾಲ್, ನನ್ನನ್ನು ಸಿಕ್ಕಿ ಹಾಕಿಸುವುದು ಇಡಿಯ ಏಕೈಕ ಉದ್ದೇಶವಾಗಿದೆ ಎಂದು ಆರೋಪಿಸಿದರು. ನಾನು ರಿಮಾಂಡ್ ಅನ್ನು ವಿರೋಧಿಸುತ್ತಿಲ್ಲ ಇಡಿ ಅವರು ಎಲ್ಲಿಯವರೆಗೆ ನನ್ನನ್ನು ಕಸ್ಟಡಿಯಲ್ಲಿ ಇರಿಸಬಹುದು? ಆದರೆ ಇಡಿ ತನಿಖೆಯ ಹೆಸರಿನಲ್ಲಿ ಸುಲಿಗೆ ದಂಧೆ ನಡೆಸುತ್ತಿರುವುದು ನಿಜವಾದ ಹಗರಣ ಎಂದು ವಾದಿಸಿದರು. ಇದನ್ನೂ ಓದಿ: ಡಿಕೆ ಸುರೇಶ್‌ ಬರೋಬ್ಬರಿ 593 ಕೋಟಿ ರೂ. ಆಸ್ತಿಗೆ ಒಡೆಯ!

    ಕೆಲವು ಆರೋಪಿಗಳು ತಮ್ಮನ್ನು ಬಂಧಿಸಿದ ನಂತರ ಭಾರತೀಯ ಜನತಾ ಪಕ್ಷಕ್ಕೆ ಎಲೆಕ್ಟ್ರೋಲ್ ಬಾಂಡ್ ಮೂಲಕ ಹಣವನ್ನು ದೇಣಿಗೆ ನೀಡಿದ್ದಾರೆ. ನಂತರ ಅವರು ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣದ ಓರ್ವ ಆರೋಪಿ ಶರತ್ ಚಂದ್ರ ರೆಡ್ಡಿ ಬಿಜೆಪಿಗೆ 55 ಕೋಟಿ ದೇಣಿಗೆ ನೀಡಿದ್ದಾರೆ. ದಂಧೆ ನಡೆಯುತ್ತಿದೆ ಎಂಬುದಕ್ಕೆ ನನ್ನ ಬಳಿ ಸಾಕ್ಷ್ಯವಿದೆ. ಹಣದ ಜಾಡು ಪತ್ತೆಯಾಗಿದೆ. ಬಂಧನದ ನಂತರ ಬಿಜೆಪಿಗೆ 50 ಕೋಟಿ ದೇಣಿಗೆ ನೀಡಿದ್ದಾರೆ ಎಂದು ಸಿಎಂ ಕೋರ್ಟ್ ಗಮನ ಸೆಳೆದರು.

    ಪ್ರಕರಣದಲ್ಲಿ ನಾಲ್ಕು ಬಾರಿ ಹೆಸರು ಕಾಣಿಸಿಕೊಂಡಿದೆ. ಸಾಕ್ಷಿಯೊಬ್ಬರು ಅಂದಿನ ಡಿಸಿಎಂ ಮನೀಶ್ ಸಿಸೋಡಿಯಾ ಅವರ ಸಮ್ಮುಖದಲ್ಲಿ ನನಗೆ ದಾಖಲೆಗಳನ್ನು ನೀಡಿದ್ದಾರೆ ಎಂದು ಹೇಳಲಾಗಿದೆ. ಶಾಸಕರು ಪ್ರತಿದಿನ ನನ್ನ ಮನೆಗೆ ಬರುತ್ತಾರೆ. ನನ್ನನ್ನು ಆರೋಪಿಸಲು ಇಂತಹ ಹೇಳಿಕೆ ಸಾಕೇ? ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ಏಳು ಸಾಕ್ಷಿಗಳ ಪೈಕಿ ಆರು ಸಾಕ್ಷಿಗಳು ನನ್ನ ಹೆಸರು ಉಲ್ಲೇಖಿಸಿಲ್ಲ, ಏಳನೇ ಸಾಕ್ಷಿ ನನ್ನ ಹೆಸರು ಉಲ್ಲೇಖಿಸಿದ ತಕ್ಷಣ ಬಾಕಿ ಆರು ಸಾಕ್ಷಿಗಳ ಹೇಳಿಕೆಯನ್ನು ಬದಿಗೆ ಸರಿಸಿದೆ. ಅಲ್ಲದೇ ನನ್ನ ಹೆಸರು ಉಲ್ಲೇಖಿಸಿದ ಸಾಕ್ಷಿಗೆ ಜಾಮೀನು ಮಂಜೂರಾಗಿದೆ ಎಂದು ಹೇಳಿದರು.

    ಕೇಜ್ರಿ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇಡಿ ಪರ ವಕೀಲ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಇನ್ನೂ ಕೆಲವು ವ್ಯಕ್ತಿಗಳ ಹೇಳಿಕೆಗಳೊಂದಿಗೆ ಸಂಸ್ಥೆಯು ಸಿಎಂ ಅವರನ್ನು ವಿಚಾರಣೆ ನಡೆಸಬೇಕಿದೆ. ಹೀಗಾಗಿ ಇನ್ನೂ ಏಳು ದಿನ ಹೆಚ್ಚುವರಿ ಕಸ್ಟಡಿಗೆ ನೀಡಬೇಕಾಗುತ್ತದೆ ಎಂದರು. ಅವರ ಹೇಳಿಕೆಗಳನ್ನು ದಾಖಲಿಸಲಾಗಿದೆ. ಆದರೆ ಅವರು ತಪ್ಪಿಸಿಕೊಳ್ಳುವ ಉತ್ತರಗಳನ್ನು ನೀಡಿದರು. ನಾವು ಅವರನ್ನು ಇತರ ಕೆಲವು ಜನರೊಂದಿಗೆ ಎದುರಿಸಬೇಕಾಗಿದೆ. ಎಎಪಿ ಗೋವಾ ಅಭ್ಯರ್ಥಿಗಳ ಇನ್ನೂ ನಾಲ್ಕು ಹೇಳಿಕೆಗಳನ್ನು ದಾಖಲಿಸಲಾಗುತ್ತಿದೆ. ನಾವು ಅವರೊಂದಿಗೆ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಎಎಸ್‌ಜಿ ವಾದಿಸಿದರು.

    ಕೇಜ್ರಿವಾಲ್ ತಮ್ಮ ಖಾತೆಗಳ ಪಾಸ್‌ವರ್ಡ್‌ಗಳನ್ನು ಏಜೆನ್ಸಿಯೊಂದಿಗೆ ಹಂಚಿಕೊಳ್ಳಲು ನಿರಾಕರಿಸುತ್ತಿದ್ದಾರೆ ಇದರಿಂದ ನಮಗೆ ಡಿಜಿಟಲ್ ಡೇಟಾಗೆ ಪ್ರವೇಶ ಸಿಕ್ಕಿಲ್ಲ, ಅವರು ಉದ್ದೇಶಪೂರ್ವಕವಾಗಿ ಸಹಕರಿಸುತ್ತಿಲ್ಲ ಮತ್ತು ನಮಗೆ ಐಟಿಆರ್‌ಗಳನ್ನು ನೀಡುತ್ತಿಲ್ಲ‌ ಎಂದರು. ಇನ್ನು ಕೇಜ್ರಿವಾಲ್ ಆರೋಪಗಳಿಗೆ ಪ್ರತಿಕ್ರಿಯಿಸಿ ರಿಮಾಂಡ್ ಹಂತದಲ್ಲಿ ಅವು ಪ್ರಸ್ತುತವಲ್ಲ, ಮಾಹಿತಿಯೂ ಉತ್ಪಾದನೆಯ ಹಂತದಲ್ಲಿದೆ, ಈ ಎಲ್ಲಾ ವಿಷಯಗಳು ಹೇಗೆ ಸಂಬಂಧಿತವಾಗಿವೆ? ಯಾರಾದರೂ ಹೇಳಿಕೆ ನೀಡಲು ಒತ್ತಾಯಿಸಲಾಗಿದೆಯೇ ಎಂಬುದು ವಿಚಾರಣೆಯ ವಿಷಯವಾಗಿದೆ ಎಂದರು.

    ಗೋವಾ ಚುನಾವಣೆಯಲ್ಲಿ ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸಿದ್ದಾರೆ. ಹವಾಲಾ ಮೂಲಕ ಹಣ ಬಂದಿದೆ ಇದನ್ನು ಗೋವಾ ಪ್ರಚಾರಕ್ಕೆ ಹಣವನ್ನು ಬಳಸಲಾಗಿದೆ ಎಂದು ತೋರಿಸಲು ನಮ್ಮ ಬಳಿ ಹೇಳಿಕೆಗಳು ಮತ್ತು ದಾಖಲೆಗಳಿವೆ. ಕೇಜ್ರಿವಾಲ್ 100 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾರೆ ಎಂಬುದನ್ನು ತೋರಿಸಲು ಇಡಿ ಬಳಿಯೂ ಸಾಕ್ಷಿಗಳಿದೆ ಎಂದು ಎಎಸ್‌ಜಿ ವಾದಿಸಿದರು. ವಾದ ಪ್ರತಿ ವಾದ ಆಲಿಸಿದ ಬಳಿಕ ನಾಲ್ಕು ದಿನಗಳ‌ ಕಸ್ಟಡಿಯನ್ನು ಕೋರ್ಟ್ ವಿಸ್ತರಿಸಿತು‌.

  • ಅಬಕಾರಿ ನೀತಿ ಹಗರಣದ ಹಣ ಎಲ್ಲಿದೆ? – ಕೇಜ್ರಿವಾಲ್ ಬಹಿರಂಗಪಡಿಸ್ತಾರೆ – ಸುನೀತಾ ಕೇಜ್ರಿವಾಲ್

    ಅಬಕಾರಿ ನೀತಿ ಹಗರಣದ ಹಣ ಎಲ್ಲಿದೆ? – ಕೇಜ್ರಿವಾಲ್ ಬಹಿರಂಗಪಡಿಸ್ತಾರೆ – ಸುನೀತಾ ಕೇಜ್ರಿವಾಲ್

    – ದೆಹಲಿಯನ್ನ ನಾಶ ಮಾಡಲು ಬಯಸಿದ್ದಾರೆ – ಕೇಂದ್ರದ ವಿರುದ್ಧ ಕೇಜ್ರಿವಾಲ್‌ ಪತ್ನಿ ಕೆಂಡ

    ನವದೆಹಲಿ: ಹೊಸ ಅಬಕಾರಿ ನೀತಿ ಹಗರಣದ ಹಣ ಎಲ್ಲಿದೆ? ಎಂದು ಮಾರ್ಚ್ 28ರಂದು ಕೋರ್ಟ್‌‌ಗೆ ಹಾಜರಾಗಲಿರುವ ಅರವಿಂದ್ ಕೇಜ್ರಿವಾಲ್ (Arvind Kejriwal) ಬಹಿರಂಗ ಪಡಿಸಲಿದ್ದಾರೆ. ಮದ್ಯ ಹಗರಣದ ಹಣ ಎಲ್ಲಿದೆ ಎಂಬುದನ್ನು ಸಾಕ್ಷ್ಯ ಸಮೇತ ದೇಶದ ಜನರ ಮುಂದೆ ತಿಳಿಸುತ್ತೇನೆ ಎಂದು ನನಗೆ ಹೇಳಿದ್ದಾರೆ ಎಂದು ಅವರ ಪತ್ನಿ ಸುನೀತಾ ಕೇಜ್ರಿವಾಲ್ (Sunita Kejriwal) ತಿಳಿಸಿದ್ದಾರೆ.

    ತಮ್ಮ ನಿವಾಸದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಅವರನ್ನು ಭೇಟಿಯಾದ ವೇಳೆ ಎಲ್ಲ ಮಾಹಿತಿಯನ್ನು ಹಂಚಿಕೊಳ್ಳುವುದಾಗಿ ಹೇಳಿದ್ದಾರೆ. ನಮ್ಮ‌ ನಿವಾಸದ ಮೇಲೆ ದಾಳಿ ನಡೆಸಿದಾಗ ಇಡಿ ಅಧಿಕಾರಿಗಳಿಗೆ ಕೇವಲ 75,000 ರೂ. ಲಭಿಸಿದೆ. ಇಡಿ (ED Raid) ಈವರೆಗೆ 250ಕ್ಕೂ ಹೆಚ್ಚು ದಾಳಿಗಳನ್ನ ನಡೆಸಿದೆ ಹಣಕ್ಕಾಗಿ ಹುಡುಕುತ್ತಿದ್ದಾರೆ ಅವರಿಗೆ ಈವರೆಗೂ ಏನೂ ಸಿಕ್ಕಿಲ್ಲ ಎಂದು ಹೇಳಿದ್ದಾರೆ.

    ಎರಡು ದಿನಗಳ ಹಿಂದೆ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ನೀರು ಮತ್ತು ಒಳಚರಂಡಿ ಸಮಸ್ಯೆಗಳ ಬಗ್ಗೆ ಜಲಸಚಿವ ಅತಿಶಿ ಅವರಿಗೆ ಪತ್ರ ಕಳುಹಿಸಿದ್ದಾರೆ. ಈಗ ಕೇಂದ್ರ ಸರ್ಕಾರ ಅವರ ವಿರುದ್ಧ ಕೇಸ್ ದಾಖಲಿಸಿದೆ. ಒಟ್ಟಿನಲ್ಲಿ ಅವರು ದೆಹಲಿಯನ್ನ ನಾಶಮಾಡಲು ಬಯಸುತ್ತಾರೆ? ಜನರು ನರಳುತ್ತಲೇ ಇರಬೇಕೆಂದು ಅವರು ಬಯಸುತ್ತಾರೆಯೇ? ಅರವಿಂದ್ ಕೇಜ್ರಿವಾಲ್‌ಗೆ ಈ ಘಟನೆಯಿಂದ ತುಂಬಾ ನೋವಾಗಿದೆ ಎಂದು ಭಾವುಕರಾಗಿದ್ದಾರೆ.

    ನನ್ನ ಪತಿ ನಿಜವಾದ ದೇಶಭಕ್ತ, ನಿರ್ಭೀತ ಮತ್ತು ಧೈರ್ಯಶಾಲಿ ವ್ಯಕ್ತಿ ಅವರಿಗೆ ದೀರ್ಘಾಯುಷ್ಯ, ಆರೋಗ್ಯ ಮತ್ತು ಯಶಸ್ಸು ಸಿಗಲಿ ಎಂದು ಜನ ಬಯಸುತ್ತಾರೆ. ಅವರು ದೈಹಿಕವಾಗಿ ಜೈಲಿನಲ್ಲಿದ್ದರೂ, ಅವರ ಆತ್ಮವು ಜನರ ನಡುವೆ ಇದೆ ಎಂದು ಸುನೀತಾ ಕೇಜ್ರಿವಾಲ್ ಹೇಳಿದ್ದಾರೆ. ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿಸಿರುವ ಇಡಿ ಮಾರ್ಚ್ 28 ವರೆಗೂ ಕಸ್ಟಡಿಗೆ ಪಡೆದುಕೊಂಡಿದೆ.

  • ತೆಲಂಗಾಣ ಮಾಜಿ ಸಿಎಂ ಪುತ್ರಿ ಕವಿತಾಗೆ 14 ದಿನ ಜೈಲು

    ತೆಲಂಗಾಣ ಮಾಜಿ ಸಿಎಂ ಪುತ್ರಿ ಕವಿತಾಗೆ 14 ದಿನ ಜೈಲು

    ನವದೆಹಲಿ: ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ.ಕವಿತಾ (K.Kavitha) ಅವರನ್ನು ದೆಹಲಿ (New Delhi) ನ್ಯಾಯಾಲಯವು ಏಪ್ರಿಲ್ 9 ರ ವರೆಗೆ ಜೈಲಿಗೆ ಕಳುಹಿಸಿದೆ.

    ಮದ್ಯ ನೀತಿ ಹಗರಣದಲ್ಲಿ ಕವಿತಾ ಅವರು ಮಾ.15 ರಂದು ಜಾರಿ ನಿರ್ದೇಶನಾಲಯದ ವಶದಲ್ಲಿದ್ದರು. ಕಳೆದ ವಾರ ಕಸ್ಟಡಿ ಅವಧಿಯನ್ನು ವಿಸ್ತರಿಸಲಾಗಿತ್ತು. ಈ ವೇಳೆ ಅವರ ಮೊಬೈಲ್‌ನಲ್ಲಿದ್ದ ಡೇಟಾವನ್ನು ಪರಿಶೀಲಿಸಲಾಗಿತ್ತು. ಇದನ್ನೂ ಓದಿ: ಉಗ್ರನ ಬಿಡುಗಡೆಗೆ ಕೇಜ್ರಿವಾಲ್‌ಗೆ 133 ಕೋಟಿ ರೂ. ಪಾವತಿಸಿದ್ದೇವೆ: ಖಲಿಸ್ತಾನಿ ಉಗ್ರ ಪನ್ನು

    ಕವಿತಾ ಅವರಿಗೆ ದೆಹಲಿ ನ್ಯಾಯಾಲಯವು ಈಗ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಅವರನ್ನು ಲಾಕಪ್‌ನಲ್ಲಿ ಇರಿಸುವ ಬದಲು ಇ.ಡಿ ತಿಹಾರ್‌ ಜೈಲಿಗೆ ವರ್ಗಾಯಿಸುವ ಸಾಧ್ಯತೆ ಇದೆ. ಬಿಆರ್‌ಎಸ್‌ ನಾಯಕಿ ನಿಜವಾಗಿ 100 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆ. ಇದನ್ನು ಎಎಪಿ ನಾಯಕರಿಗೆ ಪಾವತಿಸಲಾಗಿದೆ ಎಂದು ಆರೋಪವನ್ನು ಕವಿತಾ ಹೊತ್ತಿದ್ದಾರೆ.

    ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕವಿತಾ ಅವರು ದೆಹಲಿ ಸರ್ಕಾರದ ಅಡಿಯಲ್ಲಿ ಮದ್ಯದ ಪರವಾನಗಿಗಾಗಿ ಎಎಪಿಗೆ 100 ಕೋಟಿ ಲಂಚವನ್ನು ಪಾವತಿಸಿದ ‘ಸೌತ್ ಗ್ರೂಪ್’ ನ ಪ್ರಮುಖ ಸದಸ್ಯೆ ಎಂದು ಇಡಿ ಆರೋಪಿಸಿದೆ. ಎಎಪಿ ಗೋವಾ ಮತ್ತು ಪಂಜಾಬ್ ಚುನಾವಣಾ ಪ್ರಚಾರಕ್ಕಾಗಿ ಈ ಹಣವನ್ನು ಬಳಸಿದೆ ಎಂದು ಇಡಿ ಆರೋಪ ಮಾಡಿದೆ. ಇದನ್ನೂ ಓದಿ: ತೆಲಂಗಾಣದಲ್ಲಿ ಫೋನ್‌ ಕದ್ದಾಲಿಕೆ ಕೇಸ್‌ – ಇಂಟಲಿಜೆನ್ಸ್‌ ಬ್ಯೂರೋ ಮಾಜಿ ಮುಖ್ಯಸ್ಥ ಆರೋಪಿ ನಂ.1

  • ಏನಿದು ದೆಹಲಿ ಮದ್ಯ ಹಗರಣ? ಕೇಜ್ರಿವಾಲ್‌ ಮೇಲಿರುವ ಆರೋಪ ಏನು? ಬಂಧನವಾದ ಪ್ರಮುಖರು ಯಾರು?

    ಏನಿದು ದೆಹಲಿ ಮದ್ಯ ಹಗರಣ? ಕೇಜ್ರಿವಾಲ್‌ ಮೇಲಿರುವ ಆರೋಪ ಏನು? ಬಂಧನವಾದ ಪ್ರಮುಖರು ಯಾರು?

    ಬಕಾರಿ ನೀತಿ ಹರಣದಲ್ಲಿ (Delhi Excise Policy Case) ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ( Delhi CM Arvind Kejriwal) ಅವರನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿದೆ. ಇಡಿ ವಿಚಾರಣೆಗೆ ಹಾಜರಾಗುವಂತೆ ಜಾರಿಗೊಳಿಸಿದ್ದ 9 ಸಮನ್ಸ್‌ಗೆ ಕೇಜ್ರಿವಾಲ್‌ ಗೈರಾಗಿದ್ದರು. ಹೈಕೋರ್ಟ್‌ನಲ್ಲೂ (High Court) ಇಡಿ ವಿಚಾರಣೆಯನ್ನು ಮುಂದೂಡವಂತೆ ಕೇಜ್ರಿವಾಲ್‌ ಪರ ವಕೀಲರು ಮನವಿ ಮಾಡಿದ್ದರು. ಆದರೆ ಹೈಕೋರ್ಟ್‌ ವಾದವನ್ನು ಪುರಸ್ಕರಿಸದೇ ಕೇಜ್ರಿವಾಲ್‌ಗೆ ರಕ್ಷಣೆ ನೀಡಲು ನಿರಾಕರಿಸಿತು. ಈ ಬೆನ್ನಲ್ಲೇ ರಾತ್ರಿ ಇಡಿ ಕೇಜ್ರಿವಾಲ್‌ ನಿವಾಸಕ್ಕೆ ತೆರಳಿ ಬಂಧಿಸಿದೆ.

    ಏನಿದು ಹಗರಣ?
    ಕೋವಿಡ್‌ 2ನೇ ಅಲೆ ಉತ್ತುಂಗದಲ್ಲಿದ್ದಾಗ ಮನೀಶ್ ಸಿಸೋಡಿಯಾ 2021ರ ಏಪ್ರಿಲ್‌ನಲ್ಲಿ ಕ್ಯಾಬಿನೆಟ್‌ ಅನುಮೋದನೆ ಇಲ್ಲದೇ ಮದ್ಯದಂಗಡಿ ಟೆಂಡರ್‌ಗೆ ಅರ್ಜಿ ಸಲ್ಲಿಸಿದವರ 144.36 ಕೋಟಿ ಪರವಾನಗಿ ಶುಲ್ಕವನ್ನು ಮನ್ನಾ ಮಾಡಲು ಆದೇಶ ಹೊರಡಿಸುತ್ತಾರೆ. ಈ ಮಹತ್ವದ ನಿರ್ಧಾರದ ಬಳಿಕ ಮೇ ತಿಂಗಳಿನಲ್ಲಿ ಕೇಜ್ರಿವಾಲ್‌ ನೇತೃತ್ವದ ಕ್ಯಾಬಿನೆಟ್‌ ಸಭೆ ಕರೆದು ಅಬಕಾರಿ ನೀತಿಯಲ್ಲಿ ಬದಲಾವಣೆ ಮಾಡುತ್ತದೆ. ಮದ್ಯವನ್ನು ಮನೆಗ ಹೋಮ್‌ ಡೆಲಿವರಿ ಮಾಡಬಹುದು ಅಷ್ಟೇ ಅಲ್ಲದೇ ಮದ್ಯದ ಅಂಗಡಿಗಳನ್ನು ಬೆಳಗಿನ ಜಾವ 3 ಗಂಟೆಯವರೆಗೆ ತೆರೆಯಬಹುದು. ಪರವಾನಗಿದಾರರು ಅನಿಯಮಿತ ರಿಯಾಯಿತಿಗಳನ್ನು ನೀಡಲು ನೀತಿ ಅನುಮತಿ ಕಲ್ಪಿಸಿತ್ತು.

    ಲೆಫ್ಟಿನೆಂಟ್‌ ಗವರ್ನರ್‌ ಅವರು ಕ್ಯಾಬಿನೆಟ್‌ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಳಿಕ ದೆಹಲಿ ಸರ್ಕಾರ ತನ್ನ ನಿರ್ಧಾರವನ್ನು ಹಿಂದಕ್ಕೆ ಪಡೆಯುತ್ತದೆ. ಆದರೆ ಸಿಸೋಡಿಯಾ ಕೈಗೊಂಡ ನಿರ್ಧಾರ ಮುಂದುವರಿಯುತ್ತದೆ. ಸರ್ಕಾರದ ನಿರ್ಧಾರ ಬಗ್ಗೆ ದೆಹಲಿ ಮುಖ್ಯ ಕಾರ್ಯದರ್ಶಿ ಅವರು ಲೆಫ್ಟಿನೆಂಟ್‌ ಗವರ್ನರ್‌ ಬಳಿ ದೂರು ನೀಡುತ್ತಾರೆ. ಸಿಸೋಡಿಯಾ ನಿರ್ಧಾರದಿಂದ ಸರ್ಕಾರಕ್ಕೆ ಭಾರೀ ನಷ್ಟವಾಗಿದೆ. ವಿಸ್ಕಿ ಮತ್ತು ವೈನ್‌ ಮಾರಾಟ ಅನುಕ್ರಮವಾಗಿ 60% ಮತ್ತು 87%ರಷ್ಟು ಭಾರೀ ಏರಿಕೆಯಾಗಿದ್ದರೂ ಆದಾಯ 80% ರಷ್ಟು ಇಳಿಕೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸುತ್ತಾರೆ.

    ಕೇಜ್ರಿವಾಲ್‌- ಸಿಸೋಡಿಯಾ ಅವರು ಲೆಫ್ಟಿನೆಂಟ್‌ ಗವರ್ನರ್‌ ಗಮನಕ್ಕೆ ತಾರದೇ ತುರ್ತು ಕ್ಯಾಬಿನೆಟ್‌ ಸಭೆಯನ್ನು ಕರೆಯುತ್ತಾರೆ. ಸಿಸೋಡಿಯಾ ಅಕ್ರಮವಾಗಿ ಹೊರಡಿಸಿದ ಆದೇಶವನ್ನು ಸಕ್ರಮ ಮಾಡಲು ಕ್ಯಾಬಿನೆಟ್‌ನಲ್ಲಿ ಪ್ರಯತ್ನ ಮಾಡಲಾಗುತ್ತದೆ. ಈ ನಿರ್ಧಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್‌ ಭಾರೀ ವಿರೋಧ ವ್ಯಕ್ತಪಡಿಸಿ ಪ್ರತಿಭಟಿಸುತ್ತದೆ. ವಿರೋಧ ವ್ಯಕ್ತವಾಗುತ್ತಿದ್ದಂತೆ 2022ರ ಜುಲೈನಲ್ಲಿ ಮದ್ಯ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಲೆಫ್ಟಿನೆಂಟ್‌ ಗವರ್ನರ್‌ ಅವರು ಆದೇಶ ಹೊರಡಿಸುತ್ತಾರೆ. 2022ರ ಜುಲೈನಲ್ಲಿ ಕೇಜ್ರಿವಾಲ್‌ ಸರ್ಕಾರ ಈ ಹಿಂದೆ ಹೊರಡಿಸಿದ್ದ ಅಬಕಾರಿ ನೀತಿಯನ್ನು ಹಿಂದಕ್ಕೆ ಪಡೆಯುತ್ತದೆ. ಇದನ್ನೂ ಓದಿ: ದೆಹಲಿ ಮದ್ಯ ಹಗರಣ – ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ ಪುತ್ರಿ ಕವಿತಾ ಅರೆಸ್ಟ್‌ ಆಗಿದ್ದು ಯಾಕೆ?

    ಆರೋಪ ಏನು?
    ಕೊರೊನಾ ಸಮಯದಲ್ಲಿ ಕಿಕ್‌ ಬ್ಯಾಕ್‌ ಪಡೆಯಲೆಂದೇ ಮದ್ಯದಂಗಡಿ ಟೆಂಡರ್‌ಗೆ ಅರ್ಜಿ ಸಲ್ಲಿಸಿದವರ 144.36 ಕೋಟಿ ರೂ. ಪರವಾನಗಿ ಶುಲ್ಕವನ್ನು ಮನ್ನಾ ಮಾಡಲಾಗಿದೆ ಎಂಬ ಗಂಭೀರ ಭ್ರಷ್ಟಾಚಾರ ಆರೋಪ ಬಂದಿದೆ. ಕಾನೂನುಬಾಹಿರ ನಿರ್ಧಾರವನ್ನು ತೆಗೆದುಕೊಂಡ ಬಳಿಕ ಅದನ್ನು ಕಾನೂನುಬದ್ಧಗೊಳಿಸಲು ಸರ್ಕಾರ ಪ್ರಯತ್ನಿಸಿದ್ದು ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

    ವಿಮಾನ ನಿಲ್ದಾಣದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಇದ್ದರೂ ವಿಮಾನ ನಿಲ್ದಾಣದ ಅಧಿಕಾರಿಗಳಿಂದ ನಿರಾಕ್ಷೇಪಣಾ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬೇಕಾಗುತ್ತದೆ. ಎನ್‌ಒಸಿ ಇಲ್ಲದೇ ಮಾರಾಟ ಮಾಡಿದರೆ ದಂಡವನ್ನು ಹಾಕಲಾಗುತ್ತದೆ. ಎನ್‌ಒಸಿ ಇಲ್ಲದೇ ಮದ್ಯ ಮಾರಾಟ ಮಾಡಿದವರಿಗೆ 30 ಕೋಟಿ ರೂ. ದಂಡವನ್ನು ಹಾಕಬೇಕಿತ್ತು. ಆದರೆ ಸಿಸೋಡಿಯಾ ನಿರ್ದೇಶನದ ಹಿನ್ನೆಲೆಯಲ್ಲಿ 30 ಕೋಟಿ ರೂ ದಂಡವನ್ನು ಮನ್ನಾ ಮಾಡಲಾಗಿದೆ. ಪರವಾನಗಿ ಶುಲ್ಕ ಬಾಕಿ ಉಳಿಸಿಕೊಂಡ ಪರವಾನಗಿದಾರರ ವಿರುದ್ಧದ ಕಠಿಣ ಕ್ರಮಕ್ಕೆ ತಡೆ ನೀಡಲಾಗಿದೆ. ಅಬಕಾರಿ ನೀತಿ ಉಲ್ಲಂಘಿಸಿದ ಪರವಾನಗಿದಾರರ ವಿರುದ್ಧ ಯಾವುದೇ ದಂಡ ಕ್ರಮ ಕೈಗೊಂಡಿಲ್ಲ. ಆಮದು ಮಾಡಿದ ಪ್ರತಿ ಕೇಸ್‌ ಬಿಯರ್‌ ಮೇಲಿದ್ದ ದರವನ್ನು 50 ರೂ.ಇಳಿಕೆ ಮಾಡಲಾಗಿದೆ. ಹೊಸ ಮದ್ಯ ನೀತಿಯಿಂದಾಗಿ ಸರ್ಕಾರದ ಬೊಕ್ಕಸಕ್ಕೆ 2631 ಕೋಟಿ ರೂ. ನಷ್ಟವಾಗಿದೆ ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಸಿಎಂ ಹುದ್ದೆಗೆ ಕೇಜ್ರಿವಾಲ್‌ ರಾಜೀನಾಮೆ ಇಲ್ಲ – ಜೈಲಿನಿಂದಲೇ ಆಡಳಿತ ನಡೆಸಲು ಸಾಧ್ಯವೇ?

    ಕೇಜ್ರಿವಾಲ್‌ ಮೇಲಿರುವ ಆರೋಪ ಏನು?
    ಕೆಲ ಆಯ್ದ ವ್ಯಕ್ತಿಗಳಿಗೆ ಲಾಭ ತರಲು ದೆಹಲಿಯಲ್ಲಿ ಮದ್ಯ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಲೈಸನ್ಸ್‌ ಪಡೆಯಲು ನೂರಾರು ಕೋಟಿ ರೂ. ಲಂಚ ಪಡೆಯಲಾಗಿದೆ. ಕಂಪನಿಗಳ ಜೊತೆ ನಡೆದ ಸಭೆಯಲ್ಲಿ ಕೇಜ್ರಿವಾಲ್‌ ಸಹ ಭಾಗಿಯಾಗಿದ್ದರು. ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಆಪ್‌ ನಾಯಕ, ಪಕ್ಷದ ಚುನಾವಣಾ ವೆಚ್ಚಗಳನ್ನು ನೋಡುತ್ತಿದ್ದ ವಿಜಯ್‌ ನಾಯರ್‌ಗೆ ಕಂಪನಿಗಳು ಲೈಸೆನ್ಸ್‌ ಪಡೆಯಲು ಕಿಕ್‌ಬ್ಯಾಕ್‌ ನೀಡಲಾಗಿದೆ. ಈ ನೀತಿಯಿಂದ ಲಾಭ ಪಡೆದ ಮದ್ಯ ವ್ಯಾಪಾರಿಗಳು ಕೇಜ್ರಿವಾಲ್‌ ಆಪ್ತ ಮಂತ್ರಿಗಳಿಗೆ, ಆಪ್ತರಿಗೆ, ಸಹಚರರಿಗೆ ಕೋಟ್ಯಂತರ ರೂ. ಪಾವತಿ ಮಾಡಿದ್ದಾರೆ. ಆಪ್‌ ನಾಯಕ ವಿಜಯ್ ನಾಯರ್ ಅವರು ಕೆಲವು ಉದ್ಯಮಿಗಳು ಮತ್ತು ರಾಜಕಾರಣಿಗಳ ನಿಯಂತ್ರಣದಲ್ಲಿರುವ ‘ದಕ್ಷಿಣ ಗುಂಪಿನಿಂದ’ 100 ಕೋಟಿ ರೂಪಾಯಿಗಳನ್ನು ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪವಿದೆ.

    ಇಡಿ ಎಂಟ್ರಿಯಾಗಿದ್ದು ಹೇಗೆ?
    ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದರು. ತನಿಖೆಗೆ ಇಳಿದು ವ್ಯಕ್ತಿಗಳನ್ನು ಬಂಧನ ಮಾಡುತ್ತಿದ್ದಂತೆ ಅಕ್ರಮ ಹಣ ವರ್ಗಾವಣೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಈ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದೆ.

    ಬಂಧನಗೊಂಡವರು ಯಾರು?
    ಈ ಪ್ರಕಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಇಡಿ ಮನೀಶ್‌ ಸಿಸೋಡಿಯಾ‌ (ಆಪ್ ಡಿಸಿಎಂ), ಸತ್ಯೇಂದ್ರ ಜೈನ್‌(ಆಪ್‌ ಸಚಿವ), ಸಂಜಯ್‌ ಸಿಂಗ್‌(ಆಪ್‌ ಸಂಸದ), ಕೆ.ಕವಿತಾ(ಬಿಆರ್‌ಎಸ್‌ ಶಾಸಕಿ)

    9 ಸಮನ್ಸ್‌ಗೆ ಗೈರು:
    2023ರ ನವೆಂಬರ್‌ 23ಕ್ಕೆ ಮೊದಲ ಬಾರಿ ಕೇಜ್ರಿವಾಲ್‌ಗೆ ಸಮನ್ಸ್‌ ಜಾರಿ ಮಾಡಲಾಗಿತ್ತು. ಆದರೆ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಡಿ.23 ರಂದು ಮತ್ತೆ ಸಮನ್ಸ್‌ ಜಾರಿ ಮಾಡಲಾಗಿತ್ತು. ಈ ಸಮನ್ಸ್‌ಗೆ ಗೈರಾದ ನಂತರ 2024ರಲ್ಲಿ ಜ.3, ಜ.18, ಫೆ.2, ಫೆ.19, ಫೆ.26, ಮಾರ್ಚ್‌ 4 ರಂದು ಸಮನ್ಸ್‌ ಜಾರಿ ಮಾಡಲಾಗಿತ್ತು. ಈ ಎಲ್ಲಾ ಸಮನ್ಸ್‌ಗಳಿಗೆ ಗೈರಾದ ಹಿನ್ನೆಲೆಯಲ್ಲಿ ಮಾರ್ಚ್‌ 21 ರಂದು ಸಮನ್ಸ್‌ ಜಾರಿ ಮಾಡಿ ಕೇಜ್ರಿವಾಲ್‌ ಅವರನ್ನು ಇಡಿ ಬಂಧಿಸಿದೆ.

     

  • ಸಿಎಂ ಹುದ್ದೆಗೆ ಕೇಜ್ರಿವಾಲ್‌ ರಾಜೀನಾಮೆ ಇಲ್ಲ – ಜೈಲಿನಿಂದಲೇ ಆಡಳಿತ ನಡೆಸಲು ಸಾಧ್ಯವೇ?

    ಸಿಎಂ ಹುದ್ದೆಗೆ ಕೇಜ್ರಿವಾಲ್‌ ರಾಜೀನಾಮೆ ಇಲ್ಲ – ಜೈಲಿನಿಂದಲೇ ಆಡಳಿತ ನಡೆಸಲು ಸಾಧ್ಯವೇ?

    ನವದೆಹಲಿ: ಮದ್ಯ ಹಗರಣದಲ್ಲಿ (Delhi Excise Policy Case) ಜಾರಿ ನಿರ್ದೇಶನಾಲಯ(ED) ಬಂಧಿತರಾಗಿರುವ ಅರವಿಂದ ಕೇಜ್ರಿವಾಲ್‌ (Arvind Kejriwal) ಇನ್ನೂ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡದೇ ಇದ್ದರೂ ಜೈಲಿನಿಂದಲೇ (Jail) ಆಡಳಿತ ನಡೆಸಲಿದ್ದಾರೆ ಎಂದು ಆಪ್‌ (AAP) ಹೇಳಿದೆ.

    ಈ ಬಗ್ಗೆ ಆಪ್‌ ಪಕ್ಷದ ನಾಯಕಿ ಅತಿಶಿ (Atishi) ಪ್ರತಿಕ್ರಿಯಿಸಿ, ಕೇಜ್ರಿವಾಲ್‌ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಿಲ್ಲ. ಅವರು ತಮ್ಮ ಖಾತೆಗಳನ್ನು ತ್ಯಜಿಸಲಿದ್ದಾರೆ. ಒಂದು ವೇಳೆ ಅಗತ್ಯಬಿದ್ದರೆ ಜೈಲಿನಿಂದಲೇ ಸರ್ಕಾರ ಚಲಾಯಿಸಲಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸುರಪುರ ಉಪ ಚುನಾವಣೆ; ದಿವಂಗತ ರಾಜಾ ವೆಂಕಟಪ್ಪ ನಾಯಕ ಪುತ್ರನಿಗೆ ಕಾಂಗ್ರೆಸ್‌ ಟಿಕೆಟ್‌

    ಜೈಲಿನಿಂದ ಆಡಳಿತ್ಯ ಸಾಧ್ಯವೆ?
    ಜೈಲಿನಿಂದ ಸಿಎಂ ಹುದ್ದೆಯನ್ನು ನಿರ್ವಹಿಸುವುದನ್ನು ತಡೆಯಲು ಯಾವುದೇ ಕಾನೂನಿನಲ್ಲ. ಕಾನೂನಿನ ಪ್ರಕಾರ ಸಿಎಂ ಒಬ್ಬರು ಯಾವುದೇ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದರೆ ಮಾತ್ರ ಅಧಿಕಾರ ಕಳೆದುಕೊಳ್ಳುತ್ತಾರೆ. ಇದನ್ನೂ ಓದಿ: Lok Sabha 2024: ಸಚಿವರ ಮಕ್ಕಳು, ಕುಟುಂಬದವರಿಗೆ ‘ಕೈ’ ಟಿಕೆಟ್‌ – ಯಾರು ಎಲ್ಲಿಂದ ಸ್ಪರ್ಧೆ?

    ರಾಜೀನಾಮೆ ನೀಡಿದ್ದ ಮುಖ್ಯಮಂತ್ರಿಗಳು:
    ಅಧಿಕಾರದಲ್ಲಿ ಇರುವಾಗಲೇ ಮುಖ್ಯಮಂತ್ರಿಗಳನ್ನು ಇಡಿ, ಸಿಬಿಐ ಬಂಧಿಸುವುದು ಹೊಸದೆನಲ್ಲ. ಈ ಹಿಂದೆ ಹಲವು ಪಕ್ಷದ ಮುಖ್ಯಮಂತ್ರಿಗಳನ್ನು ಬಂಧನ ಮಾಡಲಾಗಿತ್ತು. ಆದರೆ ಅವರು ಬಂಧನಕ್ಕೂ ಮೊದಲು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಆದರೆ ಸಿಎಂ ಹುದ್ದೆಯಲ್ಲಿದ್ದಾಗಲೇ ಬಂಧನಕ್ಕೆ ಒಳಗಾದ ಮೊದಲ ನಾಯಕ ಕೇಜ್ರಿವಾಲ್‌ ಆಗಿದ್ದಾರೆ.

    ಯಡಿಯೂರಪ್ಪ(ಕರ್ನಾಟಕ), ಮಧು ಕೋಡಾ(ಜಾರ್ಖಂಡ್‌), ಶಿಬು ಸೊರೇನ್‌(ಜಾರ್ಖಂಡ್‌), ಜಯಲಲಿತಾ(ತಮಿಳಿನಾಡು), ಲಾಲು ಪ್ರಸಾದ್‌ ಯಾದವ್‌(ಬಿಹಾರ), ಹೇಮಂತ್‌ ಸೊರೇನ್(ಜಾರ್ಖಂಡ್‌), ಓಂ ಪ್ರಕಾಶ್‌ ಚೌತಾಲಾ(ಹರ್ಯಾಣ), ಚಂದ್ರಬಾಬು ನಾಯ್ಡು(ಆಂಧ್ರಪ್ರದೇಶ), ಕರುಣಾನಿಧಿ(ತಮಿಳುನಾಡು), ಚರಣ್‌ ಸಿಂಗ್‌(ಉತ್ತರ ಪ್ರದೇಶ) ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಬಂಧನಕ್ಕೆ ಒಳಗಾಗಿದ್ದರು.

  • ಅಬಕಾರಿ ನೀತಿ ಹಗರಣ – ಇ.ಡಿಯಿಂದ ಕೇಜ್ರಿವಾಲ್‌ಗೆ 9ನೇ ಬಾರಿ ಸಮನ್ಸ್

    ಅಬಕಾರಿ ನೀತಿ ಹಗರಣ – ಇ.ಡಿಯಿಂದ ಕೇಜ್ರಿವಾಲ್‌ಗೆ 9ನೇ ಬಾರಿ ಸಮನ್ಸ್

    ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ (Excise Policy Case) ಜಾಮೀನು (Bail) ಪಡೆದ ಕೆಲವೇ ಗಂಟೆಗಳ ನಂತರ ಜಾರಿ ನಿರ್ದೇಶನಾಲಯ (ED) ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (AAP) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ದೆಹಲಿ ಜಲಮಂಡಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಭಾನುವಾರ ಮತ್ತೊಂದು ಸಮನ್ಸ್ (Summons) ಜಾರಿ ಮಾಡಿದೆ.

    ಹಿಂದಿನ ಸಮನ್ಸ್‌ಗಳನ್ನು ಕಾನೂನುಬಾಹಿರ ಎಂದು ಕರೆದಿದ್ದ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಲು ನಿರಾಕರಿಸಿದ್ದರು. ಈ ಹಿನ್ನೆಲೆ ಜಾರಿ ನಿರ್ದೇಶನಾಲಯ ಎರಡು ದೂರುಗಳನ್ನು ನೀಡಿತ್ತು. ಶನಿವಾರ ಇ.ಡಿ ನೀಡಿದ ದೂರಿನ ವಿಚಾರಣೆಗಾಗಿ ಅರವಿಂದ್ ಕೇಜ್ರಿವಾಲ್ ಶನಿವಾರ ರೋಸ್ ಅವೆನ್ಯೂ ಕೋರ್ಟ್‌ಗೆ ಹಾಜರಾಗಿದ್ದರು. ಈ ಪ್ರಕರಣದಲ್ಲಿ ನ್ಯಾಯಾಲಯ ಕೇಜ್ರಿವಾಲ್ ಅವರಿಗೆ 15,000 ರೂ. ಮೌಲ್ಯದ ಶ್ಯೂರಿಟಿ ಬಾಂಡ್ ಹಾಗೂ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಶನಿವಾರ ಜಾಮೀನು ಮಂಜೂರು ಮಾಡಿತ್ತು. ಇದನ್ನೂ ಓದಿ: ಕಾಂಗ್ರೆಸ್‌ ಇಲ್ಲದೇ ಇದ್ದಿದ್ರೆ ದೇಶಕ್ಕೆ ಸ್ವಾತಂತ್ರ್ಯ ಸಿಗುತ್ತಿರಲಿಲ್ಲ: ಸಂಜಯ್‌ ರಾವತ್‌

    ಒಂಬತ್ತನೇ ಸಮನ್ಸ್‌ನಲ್ಲಿ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21 ರಂದು ಕೇಜ್ರಿವಾಲ್ ಹಾಜರಾಗುವಂತೆ ತನಿಖಾ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ಗಂಡು ಮಗುವಿಗೆ ಜನ್ಮ ನೀಡಿದ ಗಾಯಕ ಸಿಧು ಮೂಸೆವಾಲಾ ತಾಯಿ