Tag: ED

  • ಭಾರೀ ಭದ್ರತೆಯೊಂದಿಗೆ ಟಿಎಂಸಿ ನಾಯಕನ ಮನೆ ಮೇಲೆ ಇಡಿ ದಾಳಿ

    ಭಾರೀ ಭದ್ರತೆಯೊಂದಿಗೆ ಟಿಎಂಸಿ ನಾಯಕನ ಮನೆ ಮೇಲೆ ಇಡಿ ದಾಳಿ

    ಕೋಲ್ಕತ್ತಾ: ಭಾರೀ ಭದ್ರತೆಯೊಂದಿಗೆ ತೃಣಮೂಲ ಕಾಂಗ್ರೆಸ್ (TMC) ನಾಯಕ ಶಹಜಹಾನ್ ಶೇಖ್ (Shahjahan Sheikh) ಮನೆ ಮೇಲೆ ಜಾರಿ ನಿರ್ದೇಶನಾಲಯ (ED) ತಂಡ ಮತ್ತೊಮ್ಮೆ ಇಂದು ದಾಳಿ ಮಾಡಿದೆ.

    ಪಡಿತರ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಇಂದು ಇಂದು ಸ್ಥಳೀಯ ಪೊಲೀಸರ ಜೊತೆ ಕೇಂದ್ರ ಭದ್ರತಾ ಪಡೆ ಸಿಬ್ಬಂದಿ ಸೇರಿದಂತೆ ಒಟ್ಟು 24 ವಾಹನಗಳಲ್ಲಿ ಬಂದ ಅಧಿಕಾರಿಗಳು ನಿವಾಸಕ್ಕೆ ದಾಳಿ ಮಾಡಿದ್ದು, ಅಗತ್ಯ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

    ಇಡಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದ ಶೇಖ್‌ ಆಪ್ತರು: ಜನವರಿ 5 ರಂದು ಶಹಜಹಾನ್ ಶೇಖ್ ಅವರ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಶಹಜಹಾನ್ ಶೇಖ್ ಅವರ ಆಪ್ತರು ಸೇರಿ ಇಡಿ ಅಧಿಕಾರಿಗಳ ಮೇಲೆಯೇ ದಾಳಿ ನಡೆಸಿದ್ದರು. ಜೊತೆಗೆ ಕೇಂದ್ರ ಭದ್ರತಾ ಪಡೆಗಳ ವಾಹನಗಳನ್ನೂ ಧ್ವಂಸಗೊಳಿಸಲಾಗಿತ್ತು. ಈ ಘಟನೆಯಲ್ಲಿ ಮೂವರು ಅಧಿಕಾರಿಗಳು ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಭಾರೀ ಭದ್ರೆತೊಂದಿಗೆ ಸೇಕ್‌ ಮನೆ ಮೇಲೆ ದಾಳಿ ನಡೆಸಲಾಯಿತು. ಇದನ್ನೂ ಓದಿ: ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿ ಆತ್ಮಹತ್ಯೆಗೆ ಶರಣಾದ ಯೋಧ

    ಅತ್ಯಂತ ಪ್ರಭಾವಿ ಟಿಎಂಸಿ ನಾಯಕರಾಗಿರುವ ಶಹಜಹಾನ್ ಶೇಖ್, ಉತ್ತರ 24 ಪರಗಣ ಜಿಲ್ಲೆಯ ಜಿಲ್ಲಾ ಕೌನ್ಸಿಲ್ ನ ಸದಸ್ಯರೂ ಆಗಿದ್ದಾರೆ. ಪಶ್ಚಿಮ ಬಂಗಾಳದ ಎಡಪಂಥೀಯ ಸರ್ಕಾರದ ಅವಧಿಯಲ್ಲಿ ಶೇಖ್ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಷಹಜಹಾನ್ ಶೇಖ್ ಆರಂಭದಲ್ಲಿ ಸಿಪಿಐಎಂನಲ್ಲಿದ್ದರು. ಬಳಿಕ ಅವರು 2009-2010 ರ ಸುಮಾರಿಗೆ ಟಿಎಂಸಿ ನಾಯಕ ಜ್ಯೋ ತಿಪ್ರಿಯೊ ಮಲ್ಲಿಕ್ ಅವರ ಸಹಾಯದಿಂದ ತೃಣಮೂಲ ಕಾಂಗ್ರೆಸ್‌ಗೆ ಸೇರಿದರು.

  • ಕೋಚಿಮುಲ್ ನೇಮಕಾತಿ ಅಕ್ರಮದಲ್ಲಿ ಮಂಗಳೂರು ವಿವಿ ಭಾಗಿಯಾಗಿರುವ ಶಂಕೆ – ಇಡಿ ವಿಚಾರಣೆ

    ಕೋಚಿಮುಲ್ ನೇಮಕಾತಿ ಅಕ್ರಮದಲ್ಲಿ ಮಂಗಳೂರು ವಿವಿ ಭಾಗಿಯಾಗಿರುವ ಶಂಕೆ – ಇಡಿ ವಿಚಾರಣೆ

    – ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವದಲ್ಲೇ ಪ್ರಶ್ನೆಪತ್ರಿಕೆ ಮಾರಾಟವಾಗಿರುವ ಅನುಮಾನ
    – ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ರಾಜುಕೃಷ್ಣ ಚಲನ್ನವರ್ ವಿಚಾರಣೆ

    ಮಂಗಳೂರು: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನೇಮಕಾತಿ ಪರೀಕ್ಷೆ ಹಗರಣದಲ್ಲಿ ಮಂಗಳೂರು ವಿವಿ (Mangaluru University) ನೇರವಾಗಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

    ಪರೀಕ್ಷಾ ಪೂರ್ವದಲ್ಲೇ ಕೋಚಿಮುಲ್ (Kochimul) ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮಾರಾಟವಾಗಿದೆ ಅನ್ನೋ ಬಗ್ಗೆ ಸಂಶಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರ (ಜ.20) ಮಂಗಳೂರು ವಿವಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳ ತಂಡ ಭೇಟಿ ನೀಡಿ ತೀವ್ರ ವಿಚಾರಣೆ ನಡೆಸಿದೆ. ಇದನ್ನೂ ಓದಿ: ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಮೋದಿ ಕಠಿಣ ವ್ರತ – ಪ್ರತಿದಿನ 1 ಗಂಟೆ ವಿಶೇಷ ಮಂತ್ರ ಪಠಣ

    ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳ ತಾಲೂಕಿನ ಕೊಣಾಜೆಯಲ್ಲಿರುವ ಮಂಗಳೂರು ವಿವಿಗೆ ಇ.ಡಿ ಅಧಿಕಾರಿಗಳ ತಂಡ ಭೇಟಿ ನೀಡಿದ್ದು, ಪರೀಕ್ಷಾಂಗ ಕುಲಸಚಿವ ಪ್ರೊ.ರಾಜುಕೃಷ್ಣ ಚಲನ್ನವರ್ ಅವರನ್ನ ವಿಚಾರಣೆ ನಡೆಸಿದೆ. ಇದನ್ನೂ ಓದಿ: ರಾಮಮಂದಿರದ ಮಂಡಲೋತ್ಸವ ಪೂಜೆಗೆ ರಾಯಚೂರಿನ ವೈದಿಕರಿಬ್ಬರು ಆಯ್ಕೆ

    ಕೋಚಿಮುಲ್ ನೇಮಕಾತಿ ಹಗರಣ ಸಂಬಂಧ ಈ ಹಿಂದೆಯೇ ವಿವಿ ಪರೀಕ್ಷಾಂಗ ಕುಲಸಚಿವರಿಗೆ ನೋಟಿಸ್ ನೀಡಲಾಗಿತ್ತು. ಶನಿವಾರ ವಿವಿಗೆ ಭೇಟಿ ನೀಡಿದ ಅಧಿಕಾರಿಗಳ ತಂಡ, ವಿವಿ ಅಧಿಕಾರಿಗಳೇ ಅಭ್ಯರ್ಥಿಗಳಿಗೆ ಲಕ್ಷಾಂತರ ರೂ.ಗಳಿಗೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ. ಅಲ್ಲದೇ ವಿವಿ ಅಧಿಕಾರಿಗಳ ಇ-ಮೇಲ್, ದೂರವಾಣಿ ಕರೆಗಳ ವಿವರ ಹಾಗೂ ಬ್ಯಾಂಕಿಂಗ್ ವ್ಯವಹಾರಗಳ ಕುರಿತು ತೀವ್ರ ತಪಾಸಣೆ ನಡೆಸಿದೆ. ಇದನ್ನೂ ಓದಿ: ತಲೆಗೂದಲಿಗೆ ಹಗ್ಗ ಕಟ್ಟಿಕೊಂಡೇ ರಾಮರಥ ಎಳೆದ ಸ್ವಾಮೀಜಿ; ಅಯೋಧ್ಯೆ ಕಡೆಗೆ 566 ಕಿಮೀ ಯಾತ್ರೆ

  • ಕೋಚಿಮುಲ್‌ ನೇಮಕಾತಿ ಅಕ್ರಮ – ಶಾಸಕರ ಶಿಫಾರಸು ಪತ್ರ ನೀಡಿದ ಅಭ್ಯರ್ಥಿಗಳಿಗೆ ಇಡಿ ಶಾಕ್‌

    ಕೋಚಿಮುಲ್‌ ನೇಮಕಾತಿ ಅಕ್ರಮ – ಶಾಸಕರ ಶಿಫಾರಸು ಪತ್ರ ನೀಡಿದ ಅಭ್ಯರ್ಥಿಗಳಿಗೆ ಇಡಿ ಶಾಕ್‌

    ಬೆಂಗಳೂರು: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ(KOCHIMUL) ನೇಮಕಾತಿ ಪಡೆಯಲು ಶಿಫಾರಸು ಪತ್ರ ಕೊಟ್ಟವರಿಗೆ ಜಾರಿ ನಿರ್ದೇಶನಾಲಯ (ED) ಶಾಕ್‌ ನೀಡಿದೆ.

    ಮಾಲೂರು ಕಾಂಗ್ರೆಸ್‌ ಶಾಸಕ ನಂಜೇಗೌಡ ಮನೆಯ ಮೇಲೆ ದಾಳಿ ಮಾಡಿದಾಗ 30ಕ್ಕೂ ಹೆಚ್ಚು ಸಚಿವರು, ಶಾಸಕರ ಶಿಫಾರಸು ಪತ್ರ ಪತ್ತೆಯಾಗಿದೆ ಎಂದು ಇಡಿ  ಅಧಿಕೃತವಾಗಿ ತಿಳಿಸಿತ್ತು. ಇದನ್ನೂ ಓದಿ: ಮೇಯರ್‌ ಚುನಾವಣೆ : ಮಾಲ್ಡೀವ್ಸ್‌ ಆಡಳಿತ ಪಕ್ಷಕ್ಕೆ ಹೀನಾಯ ಸೋಲು – ಭಾರತದ ಪರ ಪಕ್ಷಕ್ಕೆ ಭರ್ಜರಿ ಜಯ

    ಈಗ ನೇಮಕಾತಿಯಾದ 10 ಅಭ್ಯರ್ಥಿಗಳಿಗೆ ನೋಟಿಸ್ ನೀಡಿದ್ದು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಇಡಿ ಸೂಚಿಸಿದೆ. ಪ್ರತಿಯೊಬ್ಬ ಅಭ್ಯರ್ಥಿಗಳ ಬಳಿ 20 ರಿಂದ 30 ಲಕ್ಷ ರೂ. ಹಣವನ್ನು ಪಡೆಯಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಆಯ್ಕೆಯಾದ ಎಲ್ಲರಿಗೂ ಇಡಿ ನೋಟಿಸ್‌ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟು – ಪಾಕಿಸ್ತಾನದಲ್ಲಿ 1 ಮೊಟ್ಟೆಯ ಬೆಲೆ 33 ರೂ. – ಈರುಳ್ಳಿ ಪ್ರತಿ ಕೆಜಿಗೆ 250 ರೂ.

    ಮೊದಲ ಹಂತದಲ್ಲಿ 10 ಮಂದಿಯನ್ನು ಇಡಿ ವಿಚಾರಣೆ ನಡೆಸಲಿದ್ದು ಶಿಫಾರಸು ಪತ್ರ ಕೊಟ್ಟ ಎಲ್ಲರನ್ನು ವಿಚಾರಣೆ ನಡೆಸಲಿದೆ. ಲೋಕಸಭೆ ಚುನಾವಣೆ ಮುನ್ನವೇ ವಿಚಾರಣಾ ಮ್ಯಾರಥಾನ್‌ ನಡೆಯಲಿದೆ.

     

  • ಬೆಂಗಳೂರಿನ ರೇಸ್‌ಕೊರ್ಸ್ ಬುಕ್ಕಿಂಗ್‌ ಕೌಂಟರ್‌ ಮೇಲೆ CCB ದಾಳಿ – 3.47 ಕೋಟಿ ರೂ. ಸೀಜ್

    ಬೆಂಗಳೂರಿನ ರೇಸ್‌ಕೊರ್ಸ್ ಬುಕ್ಕಿಂಗ್‌ ಕೌಂಟರ್‌ ಮೇಲೆ CCB ದಾಳಿ – 3.47 ಕೋಟಿ ರೂ. ಸೀಜ್

    ಬೆಂಗಳೂರು:‌ ಇಲ್ಲಿನ ರೇಸ್‌ಕೋರ್ಸ್‌ (Race Course) ಬುಕ್ಕಿಂಗ್‌ ಕೌಂಟರ್‌ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಸೂಕ್ತ ದಾಖಲೆಗಳಿಲ್ಲದ 3.47 ಕೋಟಿ ರೂ. ಹಣವನ್ನು ಜಪ್ತಿ ಮಾಡಿರುವ ಘಟನೆ ಬೆಂಗಳೂರು (Bengaluru) ನಗರದಲ್ಲಿ ತಡರಾತ್ರಿ ನಡೆದಿದೆ.

    ನಿಗದಿತ ದರಗಳಿಗಿಂತ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಹಾಗೂ ಜಿಎಸ್​ಟಿ ಕಟ್ಟದೇ ವಂಚನೆ ಮಾಡಿದ ಆರೋಪಗಳ ಮೇಲೆ ರೇಸ್​ಕೋರ್ಸ್ ಬುಕ್ಕಿಂಗ್ ಕೌಂಟರ್ ಮೇಲೆ ಸಿಸಿಬಿ ಪೊಲೀಸರು (CCB Police) ದಾಳಿ ನಡೆಸಿದ್ದಾರೆ. ಬುಕ್ಕಿಂಗ್‌ ಕೌಂಟರ್​ಗಳನ್ನ ಲಾಕ್​ ಮಾಡಿದ್ದಾರೆ. ಅಲ್ಲದೇ ಕೌಂಟರ್​ನಲ್ಲಿನ ಸಿಬ್ಬಂದಿ ಹೊರ ಹೋಗದಂತೆ ತಡೆದು ಪರಿಶೀಲಿಸಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ದಾಳಿಯನ್ನು ಅಂತ್ಯಗೊಳಿಸಿದ್ದಾರೆ. ಇದನ್ನೂ ಓದಿ: ವಿದ್ಯುತ್‌ ಸ್ಪರ್ಶಿಸಿ ಯಶ್‌ ಅಭಿಮಾನಿಗಳ ಸಾವು – ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ವಿತರಣೆ 

    ದಾಳಿ ವೇಳೆ ದಾಖಲೆಗಳಿಲ್ಲದ 3.47 ಕೋಟಿ ರೂ. ಜಪ್ತಿ ಮಾಡಿದ್ದಾರೆ. ಈ ವೇಳೆ ಸಿಕ್ಕವರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಸುಮಾರು 60 ಜನರನ್ನ ವಶಕ್ಕೆ ಪಡೆದು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಜೊತೆಗೆ ನೋಟೀಸ್‌ ನೀಡಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಸಂಸತ್ ದಾಳಿ: ಮೈಸೂರಿನ ಮನೋರಂಜನ್‌ ಸೇರಿ ಐವರಿಗೆ ಮಂಪರು ಪರೀಕ್ಷೆ

    ದಾಳಿ ಸಂದರ್ಭದಲ್ಲಿ ಸಿಕ್ಕ ಹಣಕ್ಕೆ ಸೂಕ್ತ ದಾಖಲೆ ಸಲ್ಲಿಸುವಂತೆ ಸೂಚಿಸಿರುವ ಸಿಸಿಬಿ ಪೊಲೀಸರು, ದಾಖಲೆ ಸಲ್ಲಿಸಲು ವಿಫಲರಾದ್ರೆ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಮಾಹಿತಿ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಹುಟ್ಟು ಮುಸ್ಲಿಂ ಆಗದಿದ್ರೂ, ಟೋಪಿ ಹಾಕಿದಾಗ ಒರಿಜಿನಲ್‌ ಮುಸ್ಲಿಂ ಥರ ಕಾಣ್ತಾರೆ: ಸಿ.ಟಿ.ರವಿ

  • ಮಾಲೂರು ಶಾಸಕ ನಂಜೇಗೌಡ ಮನೆ ಮೇಲೆ ಇಡಿ ದಾಳಿ

    ಮಾಲೂರು ಶಾಸಕ ನಂಜೇಗೌಡ ಮನೆ ಮೇಲೆ ಇಡಿ ದಾಳಿ

    ಕೋಲಾರ: ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಮಾಲೂರು ಕಾಂಗ್ರೆಸ್‌ ಶಾಸಕ ಕೆ.ವೈ.ನಂಜೇಗೌಡ (KY Nanjegowda) ಮನೆ ಮೇಲೆ ದಾಳಿ ನಡೆಸಿದ್ದಾರೆ.

    ನಂಜೇಗೌಡ ಅವರು ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ (KOCHIMUL) ಅಧ್ಯಕ್ಷರಾಗಿದ್ದು, ಮಾಲೂರು ತಾಲೂಕಿನ ಕೊಮ್ಮನಹಳ್ಳಿಯಲ್ಲಿರುವ ಅವರ ಮನೆಯಲ್ಲಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

    ಹುತ್ತೂರು ಹೋಬಳಿಯಲ್ಲಿರುವ ಕೋಚಿಮುಲ್‌ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಇತ್ತೀಚೆಗೆ ಕೋಚಿಮುಲ್‌ ನೇಮಕಾತಿ ವಿಚಾರದಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆದಿರುವ ಅರೋಪ ಕೇಳಿ ಬಂದಿತ್ತು. ಇದನ್ನೂ ಓದಿ: ಇನ್ಮುಂದೆ ಮದುವೆ, ಪ್ರವಾಸಕ್ಕೆ ಸಿಗಲಿದೆ ಬಿಎಂಟಿಸಿ ಬಸ್ – ಯಾವ್ಯಾವ ಬಸ್‍ಗೆ ಎಷ್ಟು ರೇಟ್?

    25 ಜನ ಅಧಿಕಾರಿಗಳ ತಂಡ ಬೆಳಗಿನ ಜಾವ 5 ಗಂಟೆಗೆ ಡೈರಿಗೆ ಆಗಮಿಸಿ ದಾಖಲೆ ಪರಿಶೀಲಿಸುತ್ತಿದೆ. ಹಾಲು ಒಕ್ಕೂಟದ ಸುತ್ತಮುತ್ತ ಬಿಗಿ ಭದ್ರತೆಯನ್ನು ಕಲ್ಪಿಸಲಾಗಿದೆ. ಏಕ ಕಾಲದಲ್ಲಿ 10 ಕಡೆಗಳಲ್ಲಿ ಇಡಿ ತಂಡ ದಾಳಿ ಮಾಡಿದೆ. ಮಾಲೂರು ತಾಲೂಕಿನ ದೊಡ್ಡಮಲೆ ಗ್ರಾಮದಲ್ಲಿರುವ ಆಪ್ತ ಸಹಾಯಕ ಹರೀಶ್ ಮನೆ ಮೇಲೂ ದಾಳಿ ನಡೆದಿದೆ.

     

    ಕೋಚಿಮುಲ್ ಎಂಡಿ ಗೋಪಾಲ ಮೂರ್ತಿ ಕೋಲಾರ ನಿವಾಸ, ಕೋಚಿಮುಲ್ ಅಡ್ಮಿನ್ ಮ್ಯಾನೇಜರ್ ನಾಗೇಶ್ ಅವರ ಬೆಂಗಳೂರು ರಾಮಮೂರ್ತಿ ನಗರದಲ್ಲಿರುವ ಮನೆ ಮೇಲೂ ದಾಳಿ ನಡೆದಿದೆ.

     

  • ಬಂಧನ ಊಹಾಪೋಹ ಮಧ್ಯೆ 3 ದಿನ ಗುಜರಾತ್‌ ಪ್ರವಾಸ ಕೈಗೊಳ್ಳಲಿದ್ದಾರೆ ಕೇಜ್ರಿವಾಲ್‌

    ಬಂಧನ ಊಹಾಪೋಹ ಮಧ್ಯೆ 3 ದಿನ ಗುಜರಾತ್‌ ಪ್ರವಾಸ ಕೈಗೊಳ್ಳಲಿದ್ದಾರೆ ಕೇಜ್ರಿವಾಲ್‌

    ನವದೆಹಲಿ: ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶಾನಲಯ (ED) ನೀಡಿದ ಸಮನ್ಸ್‌ಗೆ ಸತತ ಗೈರಾಗುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Aravind Kejriwal) 3 ದಿನ ಗುಜರಾತ್‌ ಪ್ರವಾಸ (Gujarat Tour) ಕೈಗೊಂಡಿದ್ದಾರೆ.

    ಅಬಕಾರಿ ನೀತಿ ಪ್ರಕರಣಕ್ಕೆ (Excise Policy Case) ಸಂಬಂಧಿಸಿದಂತೆ ಇಡಿ ಬಂಧಿಸುವ ಸಾಧ್ಯತೆಯ ಊಹಾಪೋಹಗಳ ನಡುವೆ ಕೇಜ್ರಿವಾಲ್‌ ಜ.6 ರಿಂದ 8ರವರೆಗೆ ಗುಜರಾತ್‌ಗೆ ಭೇಟಿ ನೀಡಲಿದಾರೆ. ಕೇಜ್ರಿವಾಲ್ ಅವರ ಗುಜರಾತ್ ಭೇಟಿ ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಪ್ರವಾಸದ ಭಾಗವಾಗಿದೆ ಎಂದು ಎಎಪಿ ಮೂಲಗಳು ಗುರುವಾರ ತಿಳಿಸಿವೆ. ಇದನ್ನೂ ಓದಿ: ಹುಬ್ಬಳ್ಳಿ ಇನ್ಸ್‌ಪೆಕ್ಟರ್‌ನನ್ನು ಅಮಾನತು ಮಾಡಲ್ಲ, ಕಡ್ಡಾಯ ರಜೆ ಮೇಲೆ ಹೋಗಿಲ್ಲ: ಪರಮೇಶ್ವರ್

    ಸಾಂದರ್ಭಿಕ ಚಿತ್ರ

    ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಇಡಿ ಅವರಿಗೆ ನೀಡಲಾದ ಮೂರನೇ ಸಮನ್ಸ್‌ಗೆ ಕೇಜ್ರಿವಾಲ್ ಗೈರಾದ ಒಂದು ದಿನದ ನಂತರ ಈ ಪ್ರಕಟಣೆ ಹೊರಬಿದ್ದಿದೆ.

    ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕೇಜ್ರಿವಾಲ್‌ಗೆ ಮೊದಲ ಇಡಿ ಸಮನ್ಸ್ ಜಾರಿ ಮಾಡಿ ನವೆಂಬರ್ 2 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಡಿಸೆಂಬರ್ 18 ರಂದು ಎರಡನೇ ಸಮನ್ಸ್ ಕಳುಹಿಸಿ, ಡಿಸೆಂಬರ್ 21 ರಂದು ವಿಚಾರಣೆಗೆ ಹಾಜರಾಗುವಂತೆ ಹೇಳಿತ್ತು. ಜನವರಿ 3 ರಂದು ಮೂರನೇ ಸಮನ್ಸ್‌ ಜಾರಿ ಮಾಡಿತ್ತು.

     

  • ತೀರ್ಥಹಳ್ಳಿಯ ನ್ಯಾಷನಲ್‌ ಸಂಸ್ಥೆಯ ಮೇಲೆ ಇಡಿ ದಾಳಿ

    ತೀರ್ಥಹಳ್ಳಿಯ ನ್ಯಾಷನಲ್‌ ಸಂಸ್ಥೆಯ ಮೇಲೆ ಇಡಿ ದಾಳಿ

    ಶಿವಮೊಗ್ಗ: ತೀರ್ಥಹಳ್ಳಿಯ ನ್ಯಾಷನಲ್ (National) ಸಂಸ್ಥೆ ಮೇಲೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

    ಸುಲೈಮಾನ್ ಎಂಬುವರಿಗೆ ಸೇರಿದ ನ್ಯಾಷನಲ್ ಸಂಸ್ಥೆಯ ಗೋಲ್ಡ್ ಪ್ಯಾಲೇಸ್, ಸೂಪರ್ ಬಜಾರ್, ಇಂಡಿಯನ್ ಗ್ಯಾಸ್ ಗೋಡೌನ್ ಹಾಗೂ ಸುಲೈಮಾನ್ ನಿವಾಸದ ಮನೆ ಮೇಲೆ ದಾಳಿಯಾಗಿದೆ. ಇದನ್ನೂ ಓದಿ: ವರ್ಷದ ಮೊದಲ ದಿನವೇ ಬಿಎಂಟಿಸಿಗೆ 4.37 ಕೋಟಿ ಆದಾಯ

     

    ಬೆಳ್ಳಂಬೆಳಗ್ಗೆ 10 ವಾಹನಗಳಲ್ಲಿ ಇಡಿ ಅಧಿಕಾರಿಗಳು ಆಗಮಿಸಿದ್ದಾರೆ. ಇನ್ನೂ ಅಂಗಡಿ ಹಾಗೂ ಕಚೇರಿಯ ಬಾಗಿಲು ತೆರೆಯದ ಕಾರಣ ಇಡಿ ಅಧಿಕಾರಿಗಳು ಹೊರಗಡೆ ಕಾಯುತ್ತಿದ್ದಾರೆ.

    ಸುಲೈಮಾನ್‌ ಪುತ್ರ ಷರೀಫ್‌ ಅವರು ಕನ್‌ಸ್ಟ್ರಕ್ಷನ್‌ ವ್ಯವಹಾರ ಮಾಡುತ್ತಿದ್ದು, ಶಿವಮೊಗ್ಗದ ವಿಮಾನ ನಿಲ್ದಾಣ (Shivamogga Airport) ಕಾಮಗಾರಿ ಮಾಡಿದ್ದರು.

     

  • ಮುಚ್ಚಿಡಲು ಏನೂ ಇಲ್ಲ, ಸಮನ್ಸ್ ರಾಜಕೀಯ ಪ್ರೇರಿತ: ಕೇಜ್ರಿವಾಲ್

    ಮುಚ್ಚಿಡಲು ಏನೂ ಇಲ್ಲ, ಸಮನ್ಸ್ ರಾಜಕೀಯ ಪ್ರೇರಿತ: ಕೇಜ್ರಿವಾಲ್

    ನವದೆಹಲಿ: ‌ ನನಗೆ ಮುಚ್ಚಿಡಲು ಏನೂ ಇಲ್ಲ, ಸಮನ್ಸ್‌ ರಾಜಕೀಯ ಪ್ರೇರಿತವಾಗಿದೆ. ಹೀಗಾಗಿ ಈ ಕೂಡಲೇ ಸಮನ್ಸ್‌ (Summons) ಹಿಂಪಡೆಯಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejriwal) ಹೇಳಿದರು.

    ಮದ್ಯ ನೀತಿ ಪ್ರಕರಣದಲ್ಲಿ (Liquor Policy Case) ತಮಗೆ ಜಾರಿ ಮಾಡಿರುವ ಇಡಿ ಸಮನ್ಸ್‌ಗೆ ಗುರುವಾರ ಪ್ರತಿಕ್ರಿಯಿಸಿದ್ದು, ಸಂಸ್ಥೆ ನೀಡಿದ ಹಿಂದಿನ ಸಮನ್ಸ್‌ನಂತೆಯೇ ಈ ಸಮನ್ಸ್ ಕೂಡ ಕಾನೂನುಬಾಹಿರವಾಗಿದೆ. ಇದು ಸಂಪೂರ್ಣವಾಗಿ ರಾಜಕೀಯ ಪ್ರೇರಿತವಾಗಿರುವುದರಿಂದ ಸಮನ್ಸ್ ಅನ್ನು ಇಡಿ ಹಿಂಪಡೆಯಬೇಕು ಎಂದು ಹೇಳಿದ್ದಾರೆ.

    ಸಮನ್ಸ್‌ಗೆ ಪ್ರತಿಯಾಗಿ ಆರು ಪುಟಗಳ ಪ್ರತಿಕ್ರಿಯೆ ನೀಡಿರುವ ಕೇಜ್ರಿವಾಲ್, ನನಗೆ ಕಳುಹಿಸಲಾಗುತ್ತಿರುವ ಸಮನ್ಸ್‌ಗಳು ಯಾವುದೇ ವಸ್ತುನಿಷ್ಠ ಅಥವಾ ತರ್ಕಬದ್ಧ ಮಾನದಂಡವನ್ನು ಆಧರಿಸಿಲ್ಲ, ದೇಶದಲ್ಲಿ ಬಹು ನಿರೀಕ್ಷಿತ ಸಂಸತ್ತಿನ ಚುನಾವಣೆಯ ಕೊನೆಯ ಕೆಲವು ತಿಂಗಳುಗಳಲ್ಲಿ ಸಂವೇದನಾಶೀಲ ಸುದ್ದಿಯನ್ನು ಸೃಷ್ಟಿಸಲು ಈ ಸಮನ್ಸ್ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸಿದ್ದು, ಡಿಕೆಶಿಯ ಶಾಸಕರ ಪಟ್ಟಿಗೆ ಹೈಕಮಾಂಡ್‌ ಬ್ರೇಕ್‌ – ದೆಹಲಿ ಸಭೆಯ ಇನ್‌ಸೈಡ್‌ ಸ್ಟೋರಿ

    ಸದ್ಯ ರದ್ದುಗೊಂಡಿರುವ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಇದು ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯದಿಂದ ನೀಡಿರುವ ಎರಡನೇ ಸಮನ್ಸ್ ಆಗಿದೆ.

    ಕಳೆದ ತಿಂಗಳು ಜಾರಿ ನಿರ್ದೇಶನಲಾಯ ಅರವಿಂದ್ ಕೇಜ್ರಿವಾಲ್ ಅವರಿಗೆ ನವೆಂಬರ್ 2 ರಂದು ಮೊದಲ ಬಾರಿ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಕೇಳಿತ್ತು. ಆದರೆ ಇದು ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥರು ವಿಚಾರಣೆಗೆ ಹಾಜರಾಗದೆ ಚುನಾವಣೆ ಪ್ರಚಾರಕ್ಕೆ ತೆರಳಿದ್ದರು.

  • ಅಕ್ರಮ ಹಣ ವರ್ಗಾವಣೆ ಕೇಸ್‌ – ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ಜಾಮೀನು ನಿರಾಕರಿಸಿದ ಸುಪ್ರೀಂ

    ಅಕ್ರಮ ಹಣ ವರ್ಗಾವಣೆ ಕೇಸ್‌ – ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ಜಾಮೀನು ನಿರಾಕರಿಸಿದ ಸುಪ್ರೀಂ

    ನವದೆಹಲಿ: ಉದ್ಯೋಗಕ್ಕಾಗಿ ನಗದು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ (ED) ಬಂಧನೊಳಕ್ಕಾಗಿದ್ದ ತಮಿಳುನಾಡು ಸಚಿವ ಹಾಗೂ ಡಿಎಂಕೆ ನಾಯಕ ಸೆಂಥಿಲ್ ಬಾಲಾಜಿ (Senthil Balaji) ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ‌.

    ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಹಾಗೂ ಸತೀಶ್‌ ಚಂದ್ರ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠವು ಜಾಮೀನು ನಿರಾಕರಿಸಿದೆ. ಬಾಲಾಜಿ ಅವರು ವೈದ್ಯಕೀಯ ಜಾಮೀನಿನ (Medical Bail) ಮೇಲೆ ಬಿಡುಗಡೆಯಾಗಲು ಅರ್ಹವಾದಷ್ಟು ಗಂಭೀರವಾದ ಆರೋಗ್ಯ ಸ್ಥಿತಿ ಕಾಣುತ್ತಿಲ್ಲ ಎಂದು ಹೇಳಿ, ಕೆಳ ಹಂತದ ನ್ಯಾಯಾಲಯದಲ್ಲಿ ಸಾಮಾನ್ಯ ಜಾಮೀನಿಗೆ ಅರ್ಜಿ ಸಲ್ಲಿಸಲು ನಿರ್ದೇಶಿಸಿದೆ‌.

    ಅನಾರೋಗ್ಯ, ವೈದ್ಯಕೀಯ ಕಾರಣಗಳನ್ನು ನೀಡಿದ್ದ ಸೆಂಥಿಲ್ ಬಾಲಾಜಿ ಜಾಮೀನು ನೀಡುವಂತೆ ಈ‌ ಮೊದಲು ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಈ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿತ್ತು. ಈ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಸಮೀಕ್ಷೆ ವರದಿ ಸಲ್ಲಿಕೆಗೆ ನೀಡಿದ್ದ ಗಡುವು ಅಂತ್ಯ – ಕೋರ್ಟ್‌ಗೆ ವರದಿ?

    ವಿಚಾರಣೆ ವೇಳೆ ಸೆಂಥಿಲ್ ಬಾಲಾಜಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೊಹ್ಟಗಿ, ಆರೋಪಿ ದೀರ್ಘಕಾಲದ ಲ್ಯಾಕುನಾರ್ ಇನ್ಫೆಕ್ಷನ್‌ನಿಂದ ಬಳಲುತ್ತಿದ್ದಾರೆ ವೈದ್ಯಕೀಯ ನೆರವು ಆಧಾರದ ಮೇಲೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು. ಆದ್ರೆ ವಿಚಾರಣೆ ನಡೆಸಿದ ನ್ಯಾಯಪೀಠವು ಈ ಬಗ್ಗೆ ಗೂಗಲ್‌ನಲ್ಲಿ ಪರಿಶೀಲಿಸಲಾಗಿದೆ. ಇದು ಔಷಧಿಗಳ ಮೂಲಕ ಗುಣಪಡಿಸಬಹುದಾದ ಖಾಯಿಲೆ, ಜಾಮೀನು ನೀಡುವಂತ ಸಮಸ್ಯೆಯಲ್ಲ, ಅಂತಹ ಗಂಭೀರವಾದ ಸಮಸ್ಯೆಯಾಗಿದ್ದರೇ ನಾವು ಪರಿಗಣಿಸುತ್ತೇವೆ ಎಂದು ಹೇಳಿದೆ.

    ಮುಕುಲ್ ರೊಹ್ಟಗಿ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ವಕೀಲರು ಪ್ರಸ್ತಾಪಿಸಿದ ವೈದ್ಯಕೀಯ ಜಾಮೀನು ನಿಬಂಧನೆಯ ವ್ಯಾಖ್ಯಾನವನ್ನು ನಾವು ಅನುಸರಿಸಿದರೆ 70% ರಷ್ಟು ಕೈದಿಗಳು ಅನಾರೋಗ್ಯಕ್ಕೀಡಾಗುತ್ತಾರೆ. ಇಂತಹ ಕಾರಣಗಳನ್ನು ಕೋರ್ಟ್ ಪರಿಗಣಿಸಬಾರದು ಎಂದು ಮನವಿ ಮಾಡಿದರು.

    ನಂತರ ನ್ಯಾಯಪೀಠವು, ನೀವು ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸಬೇಕು. ವೈದ್ಯಕೀಯ ಜಾಮೀನಿಗೆ ಆಧಾರವಾಗಿ ನಿಮ್ಮ ಅನಾರೋಗ್ಯದಿಂದ ನಮಗೆ ತೃಪ್ತಿ ಇಲ್ಲ ಎಂದು ಹೇಳಿತು. ಅಂತಿಮವಾಗಿ, ಜಾಮೀನು ಅರ್ಜಿಯನ್ನು ಹಿಂಪಡೆಯಲು ಮುಕುಲ್ ರೊಹ್ಟಗಿ ಒಪ್ಪಿಕೊಂಡರು. ಇದನ್ನೂ ಓದಿ: ಒಟ್ಟಿಗೆ ಸುತ್ತಾಡುತ್ತಿದ್ದ ಅನ್ಯಕೋಮಿನ ಯುವಕ-ಯುವತಿ ಮೇಲೆ ನೈತಿಕ ಪೊಲೀಸ್‌ಗಿರಿ; ಮಂಗಳೂರಲ್ಲಿ ಇಬ್ಬರ ಬಂಧನ

    ಕಳೆದ ಜೂನ್‌ ತಿಂಗಳಲ್ಲಿ, ಡಿಎಂಕೆ ನಾಯಕ ವಿ ಸೆಂಥಿಲ್ ಬಾಲಾಜಿ ಮತ್ತು ಎಂ.ಕೆ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರದ ಕ್ಯಾಬಿನೆಟ್ ಸಚಿವರನ್ನು ಜಾರಿ ನಿರ್ದೇಶನಾಲಯವು ರಾಜ್ಯದಲ್ಲಿ ಉದ್ಯೋಗಕ್ಕಾಗಿ ನಗದು ಹಗರಣದಲ್ಲಿ ಅವರ ಪಾತ್ರಕ್ಕಾಗಿ ಬಂಧಿಸಿತ್ತು. ಇದನ್ನೂ ಓದಿ: ಮಹಾತ್ಮ ಗಾಂಧಿ ‘ಮಹಾಪುರುಷ’, ಪ್ರಧಾನಿ ಮೋದಿ ‘ಯುಗಪುರುಷ’: ಉಪ ರಾಷ್ಟ್ರಪತಿ ಬಣ್ಣನೆ

  • 100 ಕೋಟಿ ರೂ. ವಂಚನೆ ಪ್ರಕರಣ- ಪ್ರಕಾಶ್ ರಾಜ್‍ಗೆ ಇಡಿ ಸಮನ್ಸ್

    100 ಕೋಟಿ ರೂ. ವಂಚನೆ ಪ್ರಕರಣ- ಪ್ರಕಾಶ್ ರಾಜ್‍ಗೆ ಇಡಿ ಸಮನ್ಸ್

    ನವದೆಹಲಿ: 100 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಹುಭಾಷಾ ನಟ ಪ್ರಕಾಶ್ ರಾಜ್‍ಗೆ (Prakash Raj) ಜಾರಿ ನಿರ್ದೇಶನಾಲಯ (ED) ಸಮನ್ಸ್ ನೀಡಿದೆ. ಆಭರಣ ವ್ಯಾಪಾರಿಯೊಬ್ಬರಿಗೆ ಲಿಂಕ್ ಇರುವ 100 ಕೋಟಿ ರೂ. ವಂಚನೆ ಪ್ರಕರಣದ ಕುರಿತು ಗುರುವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

    ಸಮನ್ಸ್ ಯಾಕೆ..?; ನಟ ಪ್ರಕಾಶ್ ರಾಜ್ (Prakash Raj) ಅವರು ಕೆಲವು ಕಾಲ ತಿರುಚ್ಚಿ ಮೂಲದ ಪ್ರಣವ್ ಜ್ಯುವೆಲ್ಲರ್ಸ್‍ನ (Pranav Jewellers) ರಾಯಭಾರಿಯಾಗಿದ್ದರು. ಇದು ಚೆನ್ನೈ (Chennai) ಸೇರಿದಂತೆ ತಮಿಳುನಾಡು (Tamilnadu) ಮತ್ತು ಪುದುಚೇರಿಯಲ್ಲಿ ಹಲವು ಸ್ಥಳಗಳಲ್ಲಿ ಶಾಖೆಗಳನ್ನು ಹೊಂದಿದೆ. ಹೂಡಿಕೆದಾರರಿಗೆ 100 ಕೋಟಿ ರೂ. ವಂಚನೆ ಮಾಡಿರುವ ಆರೋಪದ ಮೇಲೆ ಈ ಸರಣಿ ಶಾಖೆಗಳ ಮೇಲೆ ಇಡಿ ಈ ಹಿಂದೆ ದಾಳಿ ನಡೆಸಿತ್ತು. ರಾಯಭಾರಿಯಾಗಿದ್ದರೂ ನಟ ಹಗರಣ ಬಗ್ಗೆ ಇದುವರೆಗೂ ತುಟಿ ಬಿಚ್ಚಿಲ್ಲ. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿದೆ.

    ಅಕ್ರಮ ನಡೆದಿರುವುದು ಬೆಳಕಿಗೆ ಬಂದ ಬೆನ್ನಲ್ಲೇ ಪ್ರಣವ್ ಜ್ಯುವೆಲರ್ಸ್ ನಡೆಸುತ್ತಿದ್ದ ಮಳಿಗೆಗಳನ್ನು ಅಕ್ಟೋಬರ್‍ನಲ್ಲಿ ಮುಚ್ಚಲಾಯಿತು. ಜ್ಯುವೆಲರ್ಸ್ ಮೇಲೆ ಸಾಕಷ್ಟು ದೂರುಗಳು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಮಾಲೀಕ ಮದನ್ ವಿರುದ್ಧ ತಮಿಳುನಾಡಿನ ತಿರುಚ್ಚಿಯ ಆರ್ಥಿಕ ಅಪರಾಧಗಳ ವಿಭಾಗ ಪ್ರಕರಣ ದಾಖಲಿಸಿತ್ತು. ಬಳಿಕ ಮಾಲೀಕ ಹಾಗೂ ಅವರ ಪತ್ನಿ ವಿರುದ್ಧ ಲುಕೌಟ್ ನೋಟಿಸ್ ಕೂಡ ಜಾರಿ ಮಾಡಿದೆ.

    ಈ ಸಂಬಂಧ ಬುಧವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದ ಇಡಿ ಅಧಿಕಾರಿಗಳು, ಈ ಆಭರಣ ಮಳಿಗೆ ಚಿನ್ನದ ಮೇಲೆ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಸಿಗುತ್ತದೆ ಎಂದು ನಂಬಿಸಲಾಗುತ್ತಿತ್ತು. ಈ ಮೂಲಕ ಆಭರಣ ಮಳಿಗೆಯು ಹೂಡಿಕೆದಾರರ ಬಳಿಯಿಂದ 100 ಕೋಟಿ ರೂ. ಸಂಗ್ರಹಿಸಿದೆ. ಆದರೆ ಯಾವುದೇ ಲಾಭವನ್ನು ನೀಡಿಲ್ಲ ಮತ್ತು ಹೂಡಿಕೆ ಮಾಡಿದ ಮೊತ್ತವನ್ನು ಸಹ ಯಾರಿಗೂ ಹಿಂದಿರುಗಿಸಿಲ್ಲ ಎಂದು ತಿಳಿಸಿದರು.