ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ (MUDA Scam) ಸಂಬಂಧಿಸಿದಂತೆ ಮಾಜಿ ಆಯುಕ್ತ ದಿನೇಶ್ ಕುಮಾರ್ (Dinesh Kumar) ಅವರನ್ನು ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬಂಧಿಸಿದ್ದಾರೆ.
ಇಂದು ಇಡಿ ವಿಚಾರಣೆಗೆ ಬರುವಂತೆ ದಿನೇಶ್ ಕುಮಾರ್ಗೆ ನೋಟಿಸ್ ನೀಡಿತ್ತು. ವಿಚಾರಣೆಗೆ ಬಂದ ವೇಳೆ ದಿನೇಶ್ ಕುಮಾರ್ ಅವರನ್ನು ಬಂಧನ ಮಾಡಲಾಗಿದ್ದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಬೇಕಿದೆ. ದಿನೇಶ್ ಅಕ್ರಮ ಹಣ ವರ್ಗಾವಣೆ ಮಾಡಿರೋದು ಸಾಬೀತಾಗಿದೆ ಎಂದು ಈ ಹಿಂದೆ ಇಡಿ ಹೇಳಿತ್ತು. ಇದನ್ನೂ ಓದಿ: ಮುಡಾ ಹಗರಣ : ಇಡಿಯಿಂದ 100 ಕೋಟಿ ಮೌಲ್ಯದ 92 ಆಸ್ತಿ ಮುಟ್ಟುಗೋಲು
ನಕಲಿ ದಾಖಲೆಗಳನ್ನು ದಿನೇಶ್ ಸೃಷ್ಟಿ ಮಾಡಿ ಈ ದಾಖಲೆಗಳ ಮೂಲಕ ಸೈಟ್ ಗಳನ್ನು ಮರುಹಂಚಿಕೆ ಮಾಡಿ ಲಾಭ ಮಾಡಿದ್ದಾರೆ. ಹಣ ಪಡೆದು ಆಸ್ತಿ ಗಳಿಕೆ ಮಾಡಿರುವುದಕ್ಕೆ ದಾಖಲೆ ಪತ್ತೆಯಾಗಿದೆ ಎಂದು ಇಡಿ ಹೇಳಿದೆ.
2022ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಜಿ.ಟಿ.ದಿನೇಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದರು. ದಿನೇಶ್ ಕುಮಾರ್ ವಿರುದ್ಧ ಮುಡಾದಲ್ಲಿ 50:50 ಅನುಪಾತದಡಿ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆ ಸರ್ಕಾರ ಅವರನ್ನು ವರ್ಗಾವಣೆ ಮಾಡಿತ್ತು. ಯಾವುದೇ ಸ್ಥಳ ತೋರಿಸದೇ ದಿನೇಶ್ ಕುಮಾರ್ ಅವರನ್ನು ವರ್ಗಾವಣೆ ಮಾಡಿದ್ದ ಸರ್ಕಾರ ನಂತರ ಹಾವೇರಿ ವಿವಿಯ ಕುಲಸಚಿವ ಹುದ್ದೆಯನ್ನು ನೀಡಿತ್ತು. ಕುಲಸಚಿವ ಹುದ್ದೆಯನ್ನು ನೀಡಿದ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಸರ್ಕಾರ ಕೊನೆಗೆ ಆ ಆದೇಶವನ್ನೇ ರದ್ದು ಮಾಡಿತ್ತು. ಇದನ್ನೂ ಓದಿ: ಮುಡಾ ಮಾಜಿ ಆಯುಕ್ತನ ಹೆಸ್ರಲ್ಲಿ 198, ಎಂಎಲ್ಸಿ ಹೆಸ್ರಲ್ಲಿ 128 ಬೇನಾಮಿ ಸೈಟ್ – 631 ಸೈಟುಗಳ ಮಾಹಿತಿ ಕೇಳಿದ ಇಡಿ
ಬೆಂಗಳೂರು: ಅಕ್ರಮ ಹಣ ವರ್ಗಾವಣೆ (Money Laundering Case) ಆರೋಪದಡಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (Satish Sail) ಅವರನ್ನು 2 ದಿನ ಇ.ಡಿ ಕಸ್ಟಡಿಗೆ (ED Custody) ನೀಡಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.
ಮಧ್ಯಂತರ ಜಾಮೀನು ನೀಡುವಂತೆ ಸೈಲ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ಅನಾರೋಗ್ಯದ ಹಿನ್ನೆಲೆ ಜಾಮೀನು ನೀಡಲು ಮನವಿ ಮಾಡಿದ್ದರು. ಇನ್ನು ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸುವ ಸಲುವಾಗಿ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಇ.ಡಿ ಕಸ್ಟಡಿಗೆ ಕೇಳಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಸಂತೋಷ್ ಗಜಾನನ ಭಟ್, ಸತೀಶ್ ಸೈಲ್ ಅವರನ್ನು 2 ದಿನ ಇ.ಡಿ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದ್ದಾರೆ. ಸೆ.12ರಂದು ಸಂಜೆ 5 ಗಂಟೆಗೆ ಮತ್ತೆ ಕೋರ್ಟ್ ಮುಂದೆ ಹಾಜರುಪಡಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ಬಿಜೆಪಿಯವ್ರೇ ನಿಮ್ಮ ಮಕ್ಳನ್ನು ವಿದೇಶದಿಂದ ಕರೆಸಿ, ಅವ್ರನ್ನ ಮುಂದೆ ಬಿಟ್ಟು ಹೋರಾಟ ಮಾಡಿ: ಪ್ರಿಯಾಂಕ್ ಖರ್ಗೆ
ಇತ್ತೀಚೆಗೆ ಅವರ ಮನೆ ಮೇಲೆ ದಾಳಿ ನಡೆಸಿದ್ದ ಇ.ಡಿ ಕೋಟ್ಯಂತರ ರೂ. ಹಣ ಹಾಗೂ ಚಿನ್ನದ ಬಿಸ್ಕೆಟ್ಗಳನ್ನು ವಶಕ್ಕೆ ಪಡೆದಿತ್ತು. 1.68 ಕೋಟಿ ನಗದು, 6.75 ಕೆಜಿ ಚಿನ್ನದ ಬಿಸ್ಕೆಟ್ಗಳು ಮತ್ತು 14.13 ಕೋಟಿ ಹಣ ಹೊಂದಿರುವ ಬ್ಯಾಂಕ್ ಖಾತೆಯನ್ನು ಜಾರಿ ನಿರ್ದೇಶನಾಲಯ ಸೀಜ್ ಮಾಡಿತ್ತು. ಇದನ್ನೂ ಓದಿ: ಬುರುಡೆ ಗ್ಯಾಂಗ್ ಲಾಕ್ ಮಾಡಲು ಎಸ್ಐಟಿಗೆ ಸಾಕ್ಷ್ಯಾಧಾರದ ಕೊರತೆ – ಚಿನ್ನಯ್ಯ ಮಾತ್ರ ಬಲಿಪಶು?
ಬೆಂಗಳೂರು: ಅಕ್ರಮ ಆನ್ಲೈನ್ ಬೆಟ್ಟಿಂಗ್ (Illegal Online Betting) ಪ್ರಕರಣ ಸಂಬಂಧ ಚಿತ್ರದುರ್ಗ (Chitradurga) ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು (Veerendra Puppy) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಅಕ್ರಮವಾಗಿ ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ಆ್ಯಪ್ಗಳಲ್ಲಿ ಸಾವಿರಾರು ಕೋಟಿ ಹಣ ಹೂಡಿಕೆ ಮತ್ತು ವರ್ಗಾವಣೆ ಆರೋಪದಲ್ಲಿ ಇಡಿ ಅಧಿಕಾರಿಗಳಿಂದ ಬಂಧನವಾಗಿದ್ದ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ವೀರೇಂದ್ರ ಪಪ್ಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿತು. ಇದನ್ನೂ ಓದಿ: ಅಕ್ರಮ ಆನ್ಲೈನ್ ಬೆಟ್ಟಿಂಗ್ – ಅಲ್ಪಾವಧಿಯಲ್ಲಿ 2,000 ಕೋಟಿ ರೂ. ಲಾಭಗಳಿಸಿದ ವೀರೇಂದ್ರ ಪಪ್ಪಿ
ಈ ಹಿಂದೆ ವೀರೇಂದ್ರ ಪಪ್ಪಿಗೆ ಸೇರಿದ ಹಲವು ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ವಹಿವಾಟಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ವೀರೇಂದ್ರ ಪಪ್ಪಿಯನ್ನು ಸಿಕ್ಕಿಂನಲ್ಲಿ ಬಂಧಿಸಿದ್ದ ಇಡಿ ಅಧಿಕಾರಿಗಳು ಕಸ್ಟಡಿಗೆ ಪಡೆದು ತೀವ್ರ ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಸಿಕ್ಕ ಹಲವು ಮಾಹಿತಿ ಆಧಾರದ ಮೇಲೆ ಮತ್ತೆ ಎರಡು ಬಾರಿ ದಾಳಿ ನಡೆಸಿ ಪರಿಶೀಲನೆ ನಡೆಸಿತ್ತು. ಈ ವೇಳೆ ಬೆಟ್ಟಿಂಗ್ ಆ್ಯಪ್ಗಳಲ್ಲಿ ಹಣ ಹೂಡಿಕೆ ಮತ್ತು ವರ್ಗಾವಣೆ ಮಾಡಿದ್ದ ಬಗ್ಗೆ ದಾಖಲೆಗಳು ಲಭ್ಯವಾಗಿತ್ತು. ಇಡಿ ಅಧಿಕಾರಿಗಳ ತನಿಖೆಯಲ್ಲಿ ವೀರೇಂದ್ರ ಪಪ್ಪಿ ಸುಮಾರು ಏಳು ಸಾವಿರ ಕೋಟಿ ಅಕ್ರಮ ವ್ಯವಹಾರ ನಡೆಸಿರೋ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಮುಂದುವರೆದು ಸುಮಾರು ಇಪ್ಪತ್ತು ಸಾವಿರ ಕೋಟಿ ಅಕ್ರಮ ವ್ಯವಹಾರದ ಬಗ್ಗೆ ತನಿಖೆ ನಡೆದಿದೆ ಎನ್ನಲಾಗಿದೆ. ಇದನ್ನೂ ಓದಿ: ಶಾಸಕ ವೀರೇಂದ್ರ ಪಪ್ಪಿ ಬಂಧನ ಪ್ರಕರಣ – 55 ಕೋಟಿ ರೂ. ನಗದು ಫ್ರೀಜ್ ಮಾಡಿದ ಇ.ಡಿ
ಚಿತ್ರದುರ್ಗ: ಜನಪ್ರತಿನಿಧಿ ಅಂದ್ರೆ ಜನಸಾಮಾನ್ಯರಿಗೆ ಮಾದರಿಯಾಗಿರಬೇಕು. ಆದರೆ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ಪಪ್ಪಿ (KC Veerendra Puppy) ಅಕ್ರಮ ಆನ್ಲೈನ್ ಬೆಟ್ಟಿಂಗ್ನಲ್ಲಿ (Online Betting) ಅಲ್ಪಾವಧಿಯಲ್ಲಿಯೇ 2,000 ಕೋಟಿ ರೂ. ಲಾಭಗಳಿಸಿದ್ದಾರೆಂಬ ಮಾಹಿತಿ ಇಡಿ (ED) ದಾಳಿ ವೇಳೆ ಬಯಲಾಗಿದೆ.
ಚಿತ್ರದುರ್ಗ ಕಾಂಗ್ರೆಸ್ ಶಾಸಕ ಹಾಗೂ ಸಿನಿಮಾ ನಟ ದೊಡ್ಡಣ್ಣನ ಅಳಿಯ ಕೆಸಿ ವೀರೇಂದ್ರ ಪಪ್ಪಿ ಹಿಂದಿನಿಂದಲೂ ಕ್ಯಾಸಿನೋ ದೊರೆ ಅಂತಾನೇ ಫೇಮಸ್. ಗೋವಾ, ಶ್ರೀಲಂಕಾ ಸೇರಿದಂತೆ ವಿವಿದೆಡೆಗಳಲ್ಲಿ ಕ್ಯಾಸಿನೋ ನಡೆಸುತ್ತಿರುವ ಕೆಸಿ ವೀರೇಂದ್ರ, ನಾವು ಹಿಂದಿನಿಂದಲೂ ಕೋಟ್ಯಾಧೀಶ್ವರರು, ನಮಗೆ ಜನಸಾಮಾನ್ಯರು ಹಾಗೂ ಸರ್ಕಾರದ ಹಣ ಬೇಕಿಲ್ಲ, ನಾನು ಜನಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆಂದು 2023ರ ವಿಧಾನಸಭೆ ಚುನಾವಣೆ ವೇಳೆ ಭರ್ಜರಿ ಪ್ರಚಾರ ಗಿಟ್ಟಿಸಿದ್ದರು. ಚಿತ್ರದುರ್ಗ ಕ್ಷೇತ್ರದಲ್ಲಿ ಹಣದಹೊಳೆ ಹರಿಸಿ ಕಾಂಗ್ರೆಸ್ ಶಾಸಕರಾಗಿ ಗೆದ್ದಿದ್ದಾರೆ. ಆದರೆ ಶಾಸಕ ವೀರೇಂದ್ರ ಹೇಗೆ ಕೋಟ್ಯಾಧಿಪತಿ ಆದ ಎನ್ನೋದನ್ನ ಶಾಸಕರ ತವರೂರಾದ ಚಳ್ಳಕೆರೆ, ಬೆಂಗಳೂರು, ಪಣಜಿ, ಗ್ಯಾಂಗ್ಟಾಕ್, ಜೋಧಪುರ, ಹುಬ್ಬಳ್ಳಿ ಮತ್ತು ಮುಂಬೈ ಸೇರಿದಂತೆ 31 ಕಡೆಗಳಲ್ಲಿ ದಾಳಿ ನಡೆಸಿದ್ದ ಅಧಿಕಾರಿಗಳು ಶಾಸಕರ ಅಸಲಿ ಬಂಡವಾಳವನ್ನು ಬಯಲುಮಾಡಿದ್ದಾರೆ. ಇದನ್ನೂ ಓದಿ: ಶಾಸಕ ವೀರೇಂದ್ರ ಪಪ್ಪಿ ಬಂಧನ ಪ್ರಕರಣ – 55 ಕೋಟಿ ರೂ. ನಗದು ಫ್ರೀಜ್ ಮಾಡಿದ ಇ.ಡಿ
ಶಾಸಕ ವೀರೇಂದ್ರನ ಅಸಲಿ ಬಂಡವಾಳದ ಬೆನ್ನತ್ತಿರುವ ಇಡಿ ಅಧಿಕಾರಿಗಳು ಅಕ್ರಮವಾಗಿ ನಡೆಸುತ್ತಿದ್ದ ಕಿಂಗ್ 567, ರಾಜಾ 567, ಲಯನ್ 567 ಸೇರಿದಂತೆ ಇತ್ಯಾದಿಗಳ ಹೆಸರಿನಲ್ಲಿ ನಡೆಸುತ್ತಿರುವ ಆನ್ಲೈನ್ ಬೆಟ್ಟಿಂಗ್ ತಾಣಗಳನ್ನು ಪತ್ತೆ ಮಾಡಿದ್ದಾರೆ. ಅಲ್ಲದೇ ಹಣ ವರ್ಗಾವಣೆಗೆ ವೆಬ್ಸೈಟ್, ರೂಟಿಂಗ್ ಮಾಡಲು ಹಲವು ಗೇಟ್ವೇಗಳನ್ನು ಬಳಕೆ ಮಾಡಿದ್ದು, ಅಲ್ಪಾವಧಿಯಲ್ಲಿಯೇ 2,000 ಕೋಟಿ ರೂ. ಲಾಭಗಳಿಸಿರುವ ಅಕ್ರಮವನ್ನು ಬಯಲಿಗೆಳೆದಿದ್ದಾರೆ. ಈ ದಂಧೆಗೆ ಶಾಸಕವೀರೇಂದ್ರ ಪಪ್ಪಿಯ ಸಹೋದರ ಕೆಸಿ ತಿಪ್ಪೆಸ್ವಾಮಿ ಪ್ರಮುಖ ಕಿಂಗ್ಪಿನ್ ಆಗಿದ್ದು, ದುಬೈನಿಂದ 3 ವ್ಯಾಪಾರ ಘಟಕಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ. ಡೈಮಂಡ್ ಸಾಫ್ಟೆಕ್, ಟಿಆರ್ಎಸ್ ಟೆಕ್ನಾಲಜೀಸ್, ಪ್ರೈಮ್ 9 ಟೆಕ್ನಾಲಜೀಸ್ ಹೆಸರಲ್ಲಿ ಶಾಸಕ ಕೆಸಿ ವೀರೇಂದ್ರ ಸಹೋದರನಾದ ಕೆಸಿ ತಿಪ್ಪೆಸ್ವಾಮಿ ಹಾಗೂ ಕೆಸಿ ನಾಗರಾಜ್ ಪುತ್ರ ಪೃಥ್ವಿ ಎನ್ ರಾಜ್, ಅನಿಲ್ ಗೌಡ ಸೇರಿದಂತೆ ಇತರರ ಸಹಭಾಗಿತ್ವದಲ್ಲಿ ಅಕ್ರಮ ದಂಧೆ ನಡೆಸುತ್ತಿದ್ದಾರೆ. ಜೊತೆಗೆ ಈ ವಹಿವಾಟುಗಳಲ್ಲಿ ಗೇಟ್ವೇಗಳು ಮತ್ತು ಟಿಎಸ್ಪಿಗಳ ಎಸ್ಕ್ರೊ ಖಾತೆಗಳ ಮೂಲಕವೂ ಆಟಗಾರರ ಹಣದ ಠೇವಣಿ ಮಾಡುತ್ತಿದ್ದು, ಈ ಹಣವನ್ನು ಹವಾಲಾ ವಹಿವಾಟುಗಳು ಸೇರಿದಂತೆ ವಿವಿಧ ರೀತಿಯಲ್ಲಿ ಹೂಡಿಕೆ ಮಾಡಿದ್ದಾರೆಂದು ಇಡಿ ಶೋಧಕಾರ್ಯದಲ್ಲಿ ಬಹಿರಂಗಪಡಿಸಿದೆ. ಇದನ್ನೂ ಓದಿ: ‘ಕೈ’ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇ.ಡಿ ದಾಳಿ – ಆರು ಐಷಾರಾಮಿ ಕಾರುಗಳು ವಶಕ್ಕೆ
ಇನ್ನು ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಮನೆ ಮೇಲೆ ಆಗಸ್ಟ್ 29ರಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಅಕ್ರಮ ಆನ್ಲೈನ್ ಹಾಗೂ ಆಫ್ಲೈನ್ ಬೆಟ್ಟಿಂಗ್ ಪ್ರಕರಣದಡಿ ಶಾಸಕ ವೀರೇಂದ್ರ ಪಪ್ಪಿಯನ್ನು ಸಿಕ್ಕಿಂನಿಂದ ಕರೆತಂದು ಬಂಧಿಸಿದ್ದರು. ಬೆಳಗಿನ ಜಾವ 5:30ರಿಂದ ಮಧ್ಯರಾತ್ರಿ 12:45 ರವರೆಗೆ ಶಾಸಕ ವೀರೇಂದ್ರ ಪಪ್ಪಿ ಹಾಗೂ ಅವರ ಸಹೋದರರಾದ ಕೆಸಿ ತಿಪ್ಪೇಸ್ವಾಮಿ ಹಾಗೂ ನಾಗರಾಜ್ ಮನೆಯಲ್ಲೂ ಸಹ ತೀವ್ರ ಶೋಧ ನಡೆಸಿ ಕೊನೆಗೆ ದಾಖಲೆಯೊಂದಿಗೆ ಅಧಿಕಾರಿಗಳು ವಾಪಸ್ ಹೋಗಿದ್ದರು. ಶಾಸಕರ ಒಡೆತನದಲ್ಲಿ ಗೋವಾದಲ್ಲಿ ನಡೆಯುತ್ತಿರುವ ಕ್ಯಾಸಿನೋ ಹಾಗೂ ಚಿತ್ರದುರ್ಗ ಹಾಗೂ ಬೆಂಗಳೂರು ಮತ್ತು ಸಿಕ್ಕಿಂನಲ್ಲಿರುವ ಮನೆಗಳಲ್ಲೂ ಏಕಕಾಲದಲ್ಲಿ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳಿಗೆ 12 ಕೋಟಿ ರೂ. ನಗದು, 1 ಕೋಟಿ ವಿದೇಶ ಕರೆನ್ಸಿ, 6 ಕೋಟಿ ಬೆಲೆ ಬಾಳುವ ಚಿನ್ನಾಭರಣ ಮತ್ತು 10 ಕೆಜಿ ಬೆಳ್ಳಿ ಪತ್ತೆಯಾಗಿದೆ. ಅಲ್ಲದೇ 5 ಐಷಾರಾಮಿ ವಾಹನಗಳನ್ನು ಕೂಡ ಇಡಿ ಅಧಿಕಾರಿಗಳು ಸೀಜ್ ಮಾಡಿದ್ದು, ಶಾಸಕ ಪಪ್ಪಿ ಅವರಿಗೆ ಸೇರಿದ 17 ಬ್ಯಾಂಕ್ ಅಕೌಂಟ್ ಹಾಗೂ 2 ಲಾಕರ್ಗಳನ್ನು ಸೀಜ್ ಮಾಡಿದ್ದಾರೆ. ಜೊತೆಗೆ ವೀರೇಂದ್ರ ಅವರ ಬ್ಯಾಂಕ್ ಖಾತೆಗಳಲ್ಲಿ ಒಟ್ಟು 40.69 ಕೋಟಿ ರೂ. ಪತ್ತೆಯಾಗಿದ್ದು, 262 ಮ್ಯೂಲ್ ಖಾತೆಗಳಲ್ಲಿ ಒಟ್ಟು 14.46 ಕೋಟಿ ರೂ. ಸೇರಿದಂತೆ 55 ಕೋಟಿ ರೂ. ಹಣವನ್ನು ಇಡಿ ಫ್ರೀಜ್ ಮಾಡಿದೆ. ಇದನ್ನೂ ಓದಿ: ಮಣಿಪುರ ಮಾತುಕತೆ ಸಫಲ; ರಾಷ್ಟ್ರೀಯ ಹೆದ್ದಾರಿ ತೆರೆಯಲು ಕುಕಿ ಗ್ರೂಪ್ ಒಪ್ಪಿಗೆ
ಒಟ್ಟಾರೆ ಹಾಸಿಗೆ ಇದ್ದಷ್ಟು ಕಾಲು ಚಾಚಬೇಕೆಂಬ ಮಾತಿದೆ. ಆದರೆ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಯ ಅಕ್ರಮ ಆನ್ಲೈನ್ ಬೆಟ್ಟಿಂಗ್ ದಂಧೆಯಿಂದ ಅಲ್ಪಾವಧಿಯಲ್ಲೇ 2,000 ಕೋಟಿ ರೂ. ಲಾಭಗಳಿಸಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕ ಹವಾಲದಲ್ಲು ತನ್ನ ವಹಿವಾಟು ನಡೆಸಿರುವ ಪರಿಣಾಮ ಇಡಿ ಕಸ್ಟಡಿಯಲ್ಲಿರುವ ವೀರೇಂದ್ರಗೆ ದಿನದಿಂದ ದಿನಕ್ಕೆ ಮತ್ತಷ್ಟು ಸಂಕಷ್ಟ ಎದುರಾಗೋದು ಗ್ಯಾರಂಟಿ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಇದನ್ನೂ ಓದಿ: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆ
ಇನ್ನು ಶಾಸಕ ಕೆ.ಸಿ ವೀರೇಂದ್ರ ಪಪ್ಪಿಯನ್ನು 4 ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಇಂದು ಇಡಿ ಕಸ್ಟಡಿ ಅವಧಿ ಅಂತ್ಯಗೊಂಡ ಬೆನ್ನಲ್ಲೇ ಜನಪ್ರತಿನಿಧಿಗಳ ಕೋರ್ಟ್ ಮುಂದೆ ಹಾಜರುಪಡಿಸಲಾಯಿತು. ಪೊಲೀಸ್ ಕಸ್ಟಡಿ ವೇಳೆ ಕೆಲವೊಂದು ನಿಯಮಗಳನ್ನು ಪಾಲಿಸಲು ಕೋರ್ಟ್ ಸೂಚನೆ ಕೊಟ್ಟಿದೆ. ರಾತ್ರಿ 9 ಗಂಟೆವರೆಗೆ ಮಾತ್ರ ವಿಚಾರಣೆ ನಡೆಸುವಂತೆ ಸೂಚಿಸಿದೆ. ಉತ್ತಮ ಆಹಾರ, ವೈದ್ಯಕೀಯ ಸೇವೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಆದೇಶ ಕೊಟ್ಟಿದೆ. ಸೆಪ್ಟೆಂಬರ್ 8ರಂದು ಸಂಜೆ 5 ಗಂಟೆಗೆ ಕೋರ್ಟ್ ಮುಂದೆ ವೀರೇಂದ್ರ ಪಪ್ಪಿಯನ್ನು ಹಾಜರುಪಡಿಸಲು ಸೂಚನೆ ನೀಡಿದೆ. ಇದನ್ನೂ ಓದಿ: ಅಪಾಯ ಮಟ್ಟ ಮೀರಿದ ಯಮುನಾ ನದಿ – ದೆಹಲಿ ಸಚಿವಾಲಯಕ್ಕೂ ನುಗ್ಗಿದ ಪ್ರವಾಹ ನೀರು
55 ಕೋಟಿ ರೂ. ನಗದು ಫ್ರೀಜ್:
ಈಗಾಗಲೇ ಪಪ್ಪಿ ಬ್ಯಾಂಕ್ ಖಾತೆಯಿಂದ 55 ಕೋಟಿ ನಗದು ಫ್ರೀಜ್ ಮಾಡಿರುವುದಾಗಿ ಇಡಿ ಪ್ರಕಟಣೆ ಹೊರಡಿಸಿತ್ತು. ಅಲ್ಲದೇ ಕೆ.ಸಿ ವೀರೇಂದ್ರ ಅವರ 9 ಬ್ಯಾಂಕ್ ಖಾತೆಗಳಲ್ಲಿ ಅಂದಾಜು 40.69 ಕೋಟಿ ನಗದು ರೂ. ಪತ್ತೆಯಾಗಿದ್ದು, 262 ಮ್ಯೂಲ್ ಖಾತೆಗಳಲ್ಲಿ ಒಟ್ಟು 14.46 ಕೋಟಿ ರೂ. (ಅಂದಾಜು) ಸೇರಿದಂತೆ 55 ಕೋಟಿ ರೂ. ಹಣವನ್ನು ಇಡಿ ಅಧಿಕಾರಿಗಳು ಫ್ರೀಜ್ ಮಾಡಿದ್ದಾರೆ.
ಬೆಂಗಳೂರು: ಅಕ್ರಮ ಆನ್ಲೈನ್ ಬೆಟ್ಟಿಂಗ್ನಲ್ಲಿ (Online Betting) ಜಾರಿ ನಿರ್ದೇಶನಾಲಯದಿಂದ (ED) ಶಾಸಕ ಕೆ ಸಿ ವಿರೇಂದ್ರ (KC Veerendra Pappi) ಬಂಧನ ಪ್ರಕರಣ ಸಂಬಂಧ ಬರೋಬ್ಬರಿ 55 ಕೋಟಿ ರೂ. ನಗದು ಫ್ರೀಜ್ ಮಾಡಲಾಗಿದೆ.
ಈ ಬಗ್ಗೆ ಇಡಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಮಂಗಳವಾರ ಚಳ್ಳಕೆರೆ, ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ವೀರೆಂದ್ರಗೆ ಸೇರಿದ ಕೋಟ್ಯಂತರ ರೂ. ಹಣ ಹಾಗೂ ಐಷಾರಾಮಿ ಐದು ಕಾರುಗಳನ್ನ ಫ್ರೀಜ್ ಮಾಡಿದ್ದಾರೆ ಎಂದು ತಿಳಿಸಿದೆ. ಇದನ್ನೂ ಓದಿ: Bengaluru| ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ – ಒಂದೂವರೆ ವರ್ಷದ ಮಗು ದುರ್ಮರಣ
ಚಿತ್ರದುರ್ಗ: ಇ.ಡಿ (ED) ವಶದಲ್ಲಿರುವ ಚಿತ್ರದುರ್ಗದ (Chitradurga) ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ (KC Veerendra Pappi) ಮನೆ ಮೇಲೆ ಇಡಿ ಅಧಿಕಾರಿಗಳು ಮತ್ತೆ ಇಂದು ದಾಳಿಯನ್ನು ನಡೆಸಿದ್ದು, 6 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.
ಶಾಸಕ ಕೆ.ಸಿ. ವೀರೇಂದ್ರ ಹೇಳಿಕೆ ಆಧರಿಸಿ ಅವರ ಮನೆ ಮೇಲೆ ದಾಳಿ ನಡೆಸಿರುವ ಇ.ಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ಆರು ಕಾರುಗಳಲ್ಲಿ ಹತ್ತಕ್ಕೂ ಹೆಚ್ಚು ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅವರ ಮನೆಯಲ್ಲಿರುವ ಐಶಾರಾಮಿ ಕಾರುಗಳ ಬಗ್ಗೆ ಪರಿಶೀಲನೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಮನೆ ಮಾತ್ರವಲ್ಲದೇ ಶಾಸಕ ವೀರೇಂದ್ರ ಪಪ್ಪಿಯ ಬ್ಯಾಂಕ್ ಖಾತೆಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸಿದ್ದಾರೆ. ಇದನ್ನೂ ಓದಿ: ಸಂತಾನಹರಣ ಚಿಕಿತ್ಸೆ ವೇಳೆ ತಾಯಿ ಸಾವು – ಅನಸ್ತೇಶಿಯಾ ನೀಡದೇ ಶಸ್ತ್ರಚಿಕಿತ್ಸೆ ಮಾಡಿದ್ದಾಗಿ ಕುಟುಂಬಸ್ಥರ ಆರೋಪ
ಚಳ್ಳಕೆರೆ ನಗರದ ಕೋಟೆಕ್ ಮಹೇಂದ್ರ ಬ್ಯಾಂಕ್ ಹಾಗೂ ಆಕ್ಸಿಸ್ ಬ್ಯಾಂಕ್ಗೆ ಇ.ಡಿ ಅಧಿಕಾರಿಗಳು ತೆರಳಿದ್ದರು. ಆ ಬ್ಯಾಂಕ್ನಲ್ಲಿ ವೀರೇಂದ್ರ ಪಪ್ಪಿ ಹಾಗೂ ಅವರ ಕುಟುಂಬ ಸದಸ್ಯರ ಹಣ ವರ್ಗಾವಣೆ ಬಗ್ಗೆ ಮಾಹಿತಿ, ದಾಖಲೆಯನ್ನ ಕೂಡ ಕಲೆ ಹಾಕಿದ್ದು, 17 ಬ್ಯಾಂಕ್ ಖಾತೆಗಳ ಮೂಲಕ ಆಗಿರುವ ಹಣಕಾಸು ವರ್ಗಾವಣೆ ಬಗ್ಗೆ ಮಾಹಿತಿ, ದಾಖಲೆಯನ್ನು ಸಂಗ್ರಹಿಸಿದ್ದಾರೆ. ಜೊತೆಗೆ ಬೆಟ್ಟಿಂಗ್ (Online Betting) ಆಪ್ಗಳ ಮೂಲಕ ಗಳಿಸಿದ ಹಣವನ್ನು ಈ ಬ್ಯಾಂಕ್ ಖಾತೆಗಳ ಮೂಲಕ ವರ್ಗಾವಣೆ ಮಾಡುವ ಮೂಲಕ ಅಕ್ರಮ ವ್ಯವಹಾರ ನಡೆಸಿದ್ದಾರೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಸಿದ್ದಾರೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಕೇಸ್ – ʻಕೈʼ ಶಾಸಕ ವಿರೇಂದ್ರ ಪಪ್ಪಿ ಮತ್ತೆ 6 ದಿನ ಇಡಿ ಕಸ್ಟಡಿಗೆ
ಆಗಸ್ಟ್ 22ರಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ವೀರೇಂದ್ರ ಪಪ್ಪಿ ನಿವಾಸ ಮೇಲೆ ಮುಂಜಾನೆ 5 ಗಂಟೆಗೆ ದಾಳಿ ಮಾಡಿದ್ದ ಇಡಿ ಅಧಿಕಾರಿಗಳು ಮಧ್ಯರಾತ್ರಿವರೆಗೂ ದಾಖಲೆಗಳ ಪರಿಶೀಲನೆ ನಡೆಸಿದ್ದರು. ಅಂದು ಪಪ್ಪಿ ಮನೆಯಲ್ಲಿ ಕೋಟಿ ಕೋಟಿ ಹಣ ಜೊತೆ ಚಿನ್ನಾಭರಣ ವಿದೇಶಿ ಕರೆನ್ಸಿಯನ್ನ ಇಡಿ ವಶಕ್ಕೆ ಪಡೆದಿತ್ತು. ಇದನ್ನೂ ಓದಿ: ED ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನ ಪತ್ತೆ – ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್
ಸತತ 18 ಗಂಟೆಗೂ ಹೆಚ್ಚು ಕಾಲ ಇಡಿ ಅಧಿಕಾರಿಗಳು ಪಪ್ಪಿ ಕೋಟೆಯನ್ನು ಜಾಲಾಡಿದ್ದರು. ಈ ವೇಳೆ 1 ಕೋಟಿ ರೂ ವಿದೇಶಿ ಕರೆನ್ಸಿ ಸೇರಿದಂತೆ ಸುಮಾರು 12 ಕೋಟಿ ರೂ ನಗದು ಪತ್ತೆ ಆಗಿತ್ತು. 6 ಕೋಟಿ ರೂ. ಮೌಲ್ಯದ ಚಿನ್ನ, ಸುಮಾರು 10 ಕೆಜಿ ಬೆಳ್ಳಿ, 4 ವಾಹನಗಳು, 17 ಬ್ಯಾಂಕ್ ಅಕೌಂಟ್ಸ್ ಮತ್ತು 2 ಲಾಕರ್ ಜಪ್ತಿ ಮಾಡಲಾಗಿದೆ. ಇದನ್ನೂ ಓದಿ: ಬಳ್ಳಾರಿಯಿಂದ ಪದೇ ಪದೇ ಕರೆತರಲು ಸಾಧ್ಯವಿಲ್ಲ: ದರ್ಶನ್ ಪರ ವಕೀಲ
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ (Valmiki Corporation) ನಡೆದಿದ್ದ ಕೋಟ್ಯಂತರ ರೂ. ಅಕ್ರಮದ ತನಿಖೆ ನಡೆಸುತ್ತಿರುವ ಇಡಿ (Enforcement Directorate) ಅಧಿಕಾರಿಗಳು 5 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ನೆಕ್ಕುಂಟಿ ನಾಗರಾಜ್, ಚಂದ್ರಮೋಹನ್, ಗೋಲಪಲ್ಲಿ ಕಿಶೋರ್ ರೆಡ್ಡಿ, ಎಟಕೇರಿ ಸತ್ಯನಾರಾಯಣ್ಗೆ ಸೇರಿದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. 4.45 ಕೋಟಿ ರೂ. ಮೌಲ್ಯದ ಭೂಮಿ, ಫ್ಲಾಟ್ಸ್ ಹಾಗೂ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್ನಲ್ಲಿದ್ದ 50 ಲಕ್ಷ ರೂ. ನಗದು ಜಪ್ತಿ ಮಾಡಲಾಗಿತ್ತು. ಇದನ್ನೂ ಓದಿ: ʻಬುರುಡೆʼ ಪ್ರಕರಣದಲ್ಲಿ ಚಿನ್ನಯ್ಯನೇ ಎ1 – ಹಳೆ ಸೆಕ್ಷನ್ ತೆಗೆದು ಹೊಸ ಸೆಕ್ಷನ್ ಹಾಕಿದ SIT
ನಿಗಮದಲ್ಲಿನ ಹಣ ಅಕ್ರಮ ವರ್ಗಾವಣೆ ಹಿನ್ನೆಲೆ ತನಿಖೆ ಕೈಗೆತ್ತಿಕೊಂಡಿದ್ದ ಇಡಿ ಅಧಿಕಾರಿಗಳು, ನಿಗಮದ ಹಣವನ್ನ ಅಕ್ರಮವಾಗಿ ವರ್ಗಾವಣೆ ಮಾಡಿರೋದು ಬೆಳಕಿಗೆ ಬಂದಿತ್ತು. ದಾಖಲೆಗಳನ್ನು ನಕಲಿ ಮಾಡುವ ಮೂಲಕ ನಿಗಮಕ್ಕೆ 89.63 ಕೋಟಿ ರೂ. ವಂಚಿಸಲಾಗಿತ್ತು.
ಎಂ.ಜಿ.ರಸ್ತೆಯ ಯೂನಿಯನ್ ಬ್ಯಾಂಕ್ನಲ್ಲಿ ತೆರೆದ ಖಾತೆಗೆ ಹಣ ವರ್ಗಾಯಿಸಲಾಗಿತ್ತು. ಬಳಿಕ ಹೈದರಾಬಾದ್ನಲ್ಲಿರುವ ಫಸ್ಟ್ ಫೈನಾನ್ಸ್ ಬ್ಯಾಂಕ್ನಲ್ಲಿ ತೆರೆಯಲಾದ 18 ನಕಲಿ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಲಾಗಿತ್ತು. ಹಗರಣದ ಹಣದಲ್ಲಿ ಲ್ಯಾಂಬೋರ್ಗಿನಿ ಕಾರು ಸೇರಿದಂತೆ ಐಷಾರಾಮಿ ವಾಹನಗಳನ್ನ ಖರೀದಿಸಿರುವುದು ಪತ್ತೆಯಾಗಿತ್ತು.
ಬೆಂಗಳೂರು: ಅಕ್ರಮ ಆನ್ಲೈನ್ (Illegal Online) ಮತ್ತು ಆಫ್ಲೈನ್ ಬೆಟ್ಟಿಂಗ್ಗೆ (Offline Betting) ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸನ ವೀರೇಂದ್ರ ಪಪ್ಪಿ (K C Veerendra Puppy) ಮತ್ತು ಇತರರ ಮೇಲೆ ಒಟ್ಟು 30 ಸ್ಥಳಗಳಲ್ಲಿ ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ED) ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ವೀರೇಂದ್ರ ಪಪ್ಪಿ ಕಿಂಗ್ 567, ರಾಜ 567, ಪಪ್ಪೀಸ್ 003, ರತ್ನ ಗೇಮಿಂಗ್ ಇತ್ಯಾದಿಗಳ ಹೆಸರಿನಲ್ಲಿ ಹಲವಾರು ಆನ್ಲೈನ್ ಬೆಟ್ಟಿಂಗ್ ಸೈಟ್ಗಳನ್ನು ನಡೆಸುತ್ತಿದ್ದಾರೆ.
ಆರೋಪಿಯ ಸಹೋದರ ಕೆ ಸಿ ತಿಪ್ಪೇಸ್ವಾಮಿ ದುಬೈನಿಂದ ಡೈಮಂಡ್ ಸಾಫ್ಟ್ಟೆಕ್, ಟಿಆರ್ಎಸ್ ಟೆಕ್ನಾಲಜೀಸ್, ಪ್ರೈಮ್ 9 ಟೆಕ್ನಾಲಜೀಸ್ ಎಂಬ 3 ವ್ಯವಹಾರ ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದಾರೆ ಈ ಘಟಕಗಳು ಕೆ ಸಿ ವೀರೇಂದ್ರ ಅವರ ಕಾಲ್ ಸೆಂಟರ್ ಸೇವೆಗಳು ಮತ್ತು ಗೇಮಿಂಗ್ ವ್ಯವಹಾರಕ್ಕೆ ಸಂಬಂಧಿಸಿವೆ.
ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿರುವ ಕಾಂಗ್ರೆಸ್ ನಾಯಕಿ ಕುಸುಮಾ ಎಚ್ ಅವರ ಸಹೋದರ ಅನಿಲ್ ಗೌಡ ವೀರೇಂದ್ರ ಪಪ್ಪಿ ಜೊತೆ ವ್ಯವಹಾರ ನಡೆಸಿದ ಹಿನ್ನೆಲೆಯಲ್ಲಿ ಅವರ ಮನೆಯ ಮೇಲೂ ದಾಳಿ ನಡೆಸಿ ದಾಖಲೆ ಪರಿಶೀಲಿಸಲಾಗಿದೆ.
ಬೆಂಗಳೂರು/ಮಂಗಳೂರು: ಧರ್ಮಸ್ಥಳ ವಿಷಯದಲ್ಲಿ (Dharmasthala Case) ಅಪಪ್ರಚಾರ ಮಾಡಲು ಯೂಟ್ಯೂಬರ್ಗಳಿಗೆ (YouTubers) ವಿದೇಶದಿಂದ ಹಣ (Foreign Fund) ಹರಿದುಬಂದಿದೆ ಅನ್ನೋ ಆರೋಪಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಂಗಳವಾರ ಕೇಂದ್ರ ಗೃಹ ಸಚಿವಾಲಯಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪತ್ರ ಬರೆದಿರೋ ಬೆನ್ನಲ್ಲೇ ದಾಖಲೆಗಳ ಪರಿಶೀಲನೆ ಮಾಡುವಂತೆ ಜಾರಿ ನಿರ್ದೇಶನಾಲಯಕ್ಕೆ ಅಮಿತ್ ಶಾ (Amit Shah) ಸೂಚನೆ ಕೊಟ್ಟಿದ್ದಾರೆ. ಹೀಗಾಗಿ, ಬೆಂಗಳೂರಿನ ಇ.ಡಿ (ED) ಅಧಿಕಾರಿಗಳು ಈಗ ಯೂಟ್ಯೂಬರ್ಗಳ ಆದಾಯದ ಮೂಲ ಕೆದಕುತ್ತಿದ್ದಾರೆ.
ಈ ಬಗ್ಗೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿಕ್ರಿಯಿಸಿ, ದೇವಸ್ಥಾನದ ಪಾವಿತ್ರ್ಯತೆ ಉಳಿಸುವ ಸಲುವಾಗಿ ಗೃಹ ಸಚಿವರಿಗೆ ಪತ್ರ ಬರೆದಿದ್ದೇನೆ. ಯಾವುದೇ ವ್ಯಕ್ತಿಗತವಾಗಿ ನಾನು ಪತ್ರ ಬರೆದಿಲ್ಲ ಅಂದಿದ್ದಾರೆ. ಇನ್ನು, ಶಾಸಕ ಭರತ್ ಶೆಟ್ಟಿ ಮಾತಾಡಿ, ಎನ್ಐಎ ಅಥವಾ ಇಡಿ ತನಿಖೆಯಾದ್ರೆ ಯಾರೆಲ್ಲರ ಬ್ಯಾಂಕ್ ಖಾತೆಗಳಿಗೆ ಎಷ್ಟೆಲ್ಲ ಹಣ ಎಲ್ಲೆಲ್ಲಿಂದ ಬಂದಿದೆ ಅನ್ನೋದು ಗೊತ್ತಾಗುತ್ತೆ ಎಂದಿದ್ದಾರೆ. ಇದನ್ನೂ ಓದಿ: ನನ್ನ ಮಗಳು ಅನನ್ಯಾ ಭಟ್ ಇದ್ದಿದ್ದು ಸತ್ಯ: ಸುಜಾತಾ ಭಟ್
ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್ ಹಾಗೂ ಯೂಟ್ಯೂಬರ್ ಸಮೀರ್ ವಿರುದ್ಧ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಎಸ್ಪಿಗೆ ದೂರು ಕೊಟ್ಟಿದ್ದಾರೆ. ಇನ್ನೊಂದೆಡೆ ಭಜರಂಗದಳ ಕಾರ್ಯಕರ್ತ ತೇಜಸ್ ಗೌಡ ಕೂಡ ಡಿಜಿ ಕಚೇರಿಯಲ್ಲಿ ಸಮೀರ್ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಮತದಾರರಿಗೆ ಹಣ ಹಂಚಿಕೆ ಆರೋಪ – ಕಾಂಗ್ರೆಸ್ ನಾಯಕರ ವಿರುದ್ಧ ಆಯೋಗಕ್ಕೆ ದೇವರಾಜೇಗೌಡ ದೂರು