Tag: ED

  • ಟಿಕೆಟ್‌ಗೆ ನೀಡಿದ್ದು ಹವಾಲಾ ಹಣ – ಗೋವಿಂದ ಬಾಬು ವಿರುದ್ಧವೇ ಇಡಿಗೆ ದೂರು

    ಟಿಕೆಟ್‌ಗೆ ನೀಡಿದ್ದು ಹವಾಲಾ ಹಣ – ಗೋವಿಂದ ಬಾಬು ವಿರುದ್ಧವೇ ಇಡಿಗೆ ದೂರು

    ಬೆಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ (BJP MLA Ticket Scam) ಪಡೆಯಲು ಹೋಗಿ 5 ಕೋಟಿ ರೂ. ಕಳೆದುಕೊಂಡಿರುವುದಾಗಿ ದೂರು ನೀಡಿರುವ ಗೋವಿಂದ ಬಾಬು ಪೂಜಾರಿ (Govind Babu Poojari) ವಿರುದ್ಧವೇ ಈಗ ಜಾರಿ ನಿರ್ದೇಶನಾಲಯದಲ್ಲಿ (ED) ದೂರು ದಾಖಲಾಗಿದೆ.

    5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಟಿಕೆಟ್‌ಗೆ ನೀಡಿದ್ದು ಹವಾಲಾ ಹಣ. ಅವರು ನಗದು ರೂಪದಲ್ಲಿ ನೀಡಿರುವುದು ಅಪರಾಧವಾಗಿದ್ದು ಅವರ ವಿರುದ್ಧ ತನಿಖೆ ನಡೆಸಬೇಕೆಂದು ಕೋರಿ ವಕೀಲ ನಟರಾಜ ಶರ್ಮಾ (Nataraj Sharma) ದೂರು ನೀಡಿದ್ದಾರೆ.  ಇದನ್ನೂ ಓದಿ: ರಾಜ್ಯಕ್ಕೆ 3ನೇ ವಂದೇ ಭಾರತ್ ರೈಲು – ಇಂದು ಪ್ರಾಯೋಗಿಕ ಸಂಚಾರ

    ದೂರು ನೀಡಿದ ಬಳಿಕ ಪ್ರತಿಕ್ರಿಯಿಸಿದ ನಟರಾಜ ಶರ್ಮಾ, ಗೋವಿಂದ ಪೂಜಾರಿ ಅವರು ನೀಡಿರುವ ದೂರಿನಲ್ಲಿ ನಗದು ರೂಪದಲ್ಲಿ ನೀಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಒಂದು ಟಿಕೆಟ್‌ಗೆ 5 ಕೋಟಿ ರೂ. ನೀಡಿರುವುದು ಪ್ರಜಾಪ್ರಭುತ್ವದ ಕಗ್ಗೋಲೆ. ಮುಂಬೈನಲ್ಲಿ (Mumbai) ವ್ಯವಹಾರ ಮಾಡಿಕೊಂಡಿದ್ದ ಅವರಿಗೆ 5 ಕೋಟಿ ರೂ. ಹಣವನ್ನು ನಗದು ರೂಪದಲ್ಲಿ ನೀಡಬಾರದು ಎನ್ನುವುದು ಅವರಿಗೆ ತಿಳಿದಿರಬೇಕಿತ್ತು. ಇದು ಹವಾಲಾ ಹಣ ಎಂಬ ದೃಷ್ಟಿಯಿಂದ ದೂರು ನೀಡಿದ್ದೇನೆ ಎಂದು ತಿಳಿಸಿದರು.

    ಈ ವಂಚನೆ ಪ್ರಕರಣದಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕಿತ್ತು. ಸಾಲವಾಗಿಯೇ ಹಣ ಪಡೆದಿದ್ದರೂ ಸಾಲ ಪಡೆದ ಉದ್ದೇಶವೇ ಬೇರೆಯಾಗಿದೆ. ನಗದು ರೂಪದಲ್ಲಿ ಇಷ್ಟೊಂದು ವ್ಯವಹಾರ ನಡೆಸಿದ್ದು ಹೇಗೆ? ಇಡಿ ಈ ವಿಚಾರವಾಗಿ ತನಿಖೆ ಮಾಡಬೇಕೆಂದು ಕೋರಿ ದೂರು ನೀಡಿದ್ದೇನೆ ಎಂದು ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 42 ನಕಲಿ ಕಾಮಗಾರಿ ಬಿಲ್‌ – ED, ಲೋಕಾಯುಕ್ತಕ್ಕೆ ಮಾಜಿ ಸಚಿವ ಮುನಿರತ್ನ ದೂರು

    42 ನಕಲಿ ಕಾಮಗಾರಿ ಬಿಲ್‌ – ED, ಲೋಕಾಯುಕ್ತಕ್ಕೆ ಮಾಜಿ ಸಚಿವ ಮುನಿರತ್ನ ದೂರು

    ಬೆಂಗಳೂರು: ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ 42 ನಕಲಿ ಕಾಮಗಾರಿಯ ಬಿಲ್ ತಯಾರಾಗಿದ್ದು, 9.5 ಕೋಟಿ ರೂ. ಅವ್ಯವಹಾರದ ವಿರುದ್ಧ ಜಾರಿ ನಿರ್ದೇಶನಾಲಯ (ED) ಹಾಗೂ ಲೋಕಾಯುಕ್ತಕ್ಕೆ (Karnataka Lokayukta) ದೂರು ಕೊಟ್ಟಿರುವುದಾಗಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಮುನಿರತ್ನ (Munirathna) ಹೇಳಿದ್ದಾರೆ.

    ಈ ಸಂಬಂಧ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತನಿಖೆ ಮಾಡುವವರು ಎಲ್ಲವನ್ನೂ ತರಿಸಿಕೊಳ್ಳುತ್ತಾರೆ. ನಾನು ಒಬ್ಬ ಶಾಸಕನಾಗಿ ನನ್ನ ಗಮನಕ್ಕೆ ಬಂದಿದ್ದನ್ನ ತಿಳಿಸಿದ್ದೇನೆ. ಸರ್ಕಾರ SIT ಮೂಲಕ ತನಿಖೆಗೆ ಮುಂದಾಗಿದೆ. ನನ್ನ ಗಮನಕ್ಕೆ ಬಂದಿರೋದನ್ನ ನಾನು ಮಾಡುತ್ತಿದ್ದೇನೆಯೇ ಹೊರತು ತಪ್ಪೇನು ಮಾಡಿಲ್ಲ. ಲೋಕಾಯುಕ್ತ, ಇಡಿಗೆ ದೂರು ಕೊಟ್ಟಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ರಣವಾನಂದ ಶ್ರೀಗಳ ಕ್ಷಮೆ ಕೋರುವಂತೆ ಸಚಿವ ಮಧು ಬಂಗಾರಪ್ಪಗೆ ಈಡಿಗ ಮಹಾಮಂಡಳಿ ಆಗ್ರಹ

    ಇಡೀ ಕ್ಷೇತ್ರದಲ್ಲೇ ಅಭಿವೃದ್ಧಿ ಕಾಮಗಾರಿ (Development Work) ನಿಂತಿದೆ, ಬೇಕಿದ್ದರೆ ತನಿಖೆ ಮಾಡಲಿ, ಸತ್ಯ ಹೊರಬರಲಿ. ಈಗಾಗಲೇ 4 ತಿಂಗಳು ಕಳೆದಿದೆ. ಫ್ಲೈ ಓವರ್ ಕಾಮಗಾರಿ ನಿಂತಿದೆ, ಶಾಲೆಗಳ ಕಾಮಗಾರಿಯೂ ನಿಂತಿದೆ. ಮನೆ ಕಟ್ಟುವವರಿಗೆ ತೊಂದರೆಯಾಗಿದೆ, ಲಾ ಆಂಡ್ ಆರ್ಡರ್ ಸಮಸ್ಯೆಯಿದೆ. ನಡೆಯುತ್ತಿರೋ ಕಾಮಗಾರಿ ನಿಲ್ಲಿಸಿ ಏನು ಸಾಧನೆ ಮಾಡ್ತಾರೆ? ಸರ್ಕಾರದಲ್ಲಿ ಹೊಸ ಕಾಮಗಾರಿಗೆ ದುಡ್ಡಿಲ್ಲ. ಹೊಸದಾಗಿ ಮಾಡೋಕಾಗಲ್ಲ ಅಂತ ಉಪಮುಖ್ಯಮಂತ್ರಿಗಳೇ ಹೇಳಿದ್ದಾರೆ. ಹಣ ಇಲ್ಲದೇ ಇದ್ರೆ ಹಿಂದಿನ ಸರ್ಕಾರದ ಕಾಮಗಾರಿಯನ್ನಾದರೂ ಮಾಡಬೇಕಲ್ಲ. ನನ್ನ ಕ್ಷೇತ್ರ ಬೆಂಗಳೂರು ಗ್ರಾಮಾಂತರದಲ್ಲಿದೆ. ಅದಕ್ಕೆ ನನ್ನ ಮೇಲೆ ಅಭಿಮಾನ, ಈ ಚುನಾವಣೆಯಲ್ಲಿ ಮತ್ತೆ ಆಯ್ಕೆಯಾಗಿದ್ದು, ತಾಯಿ ರಾಜರಾಜೇಶ್ವರಿ ತೀರ್ಪು. ಮುನಿರತ್ನ ಇಲ್ಲದೇ ಇದ್ದಿದ್ದರೆ ಈ ಕ್ಷೇತ್ರವನ್ನ ಯಾರೂ ತಿರುಗಿ ನೋಡುತ್ತಿರಲಿಲ್ಲ ಎಂದು ಹೇಳಿದ್ದಾರೆ.

    ಇವತ್ತು ಐಟಿ-ಬಿಟಿಗೆ ಇಡೀ ದೇಶದಲ್ಲೇ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಆದ್ರೆ ನಮ್ಮ ರಾಜ್ಯಕ್ಕೆ ಬರಬೇಕಿರುವ ತೆರಿಗೆ ಪಕ್ಕದ ರಾಜ್ಯಕ್ಕೆ ಹೈದರಾಬಾದ್‌ಗೆ ಹೋಗ್ತಿದೆ. ಅದರ ಬಗ್ಗೆ ಗಮನ ಹರಿಸೋದು ಬಿಟ್ಟು ಬೇಡದಿರುವುದರ ಬಗ್ಗೆ ಈ ಸರ್ಕಾರ ಮಾತನಾಡುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: 12 ಲಕ್ಷ ರೂ. ಮೌಲ್ಯದ ಅಮೆರಿಕನ್ ಡೈಮಂಡ್ ಹರಳುಗಳಿಂದ ಸಿದ್ಧಗೊಂಡ ವಿಶೇಷ ವಿನಾಯಕ ಮೂರ್ತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿರಿ ಜೀವಗಳಿಗೆ ಮೋಸ: ಇಡಿ ವಿಚಾರಣೆಗೆ ಹಾಜರಾದ ನಟಿ, ಸಂಸದೆ ನುಸ್ರತ್

    ಹಿರಿ ಜೀವಗಳಿಗೆ ಮೋಸ: ಇಡಿ ವಿಚಾರಣೆಗೆ ಹಾಜರಾದ ನಟಿ, ಸಂಸದೆ ನುಸ್ರತ್

    ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದೆ ಹಾಗೂ ನಟಿ ನುಸ್ರತ್ ಜಹಾನ್ (Nusrat Jahan) ಇಂದು ಇಡಿ (ED) ಅಧಿಕಾರಿಗಳ ಮುಂದೆ ಹಾಜರಾದರು. ಹಿರಿ ಜೀವಗಳಿಗೆ ಫ್ಲ್ಯಾಟ್ ಕೊಡಿಸುವುದಾಗಿ ಹೇಳಿ ಕೋಟ್ಯಾಂತರ ರೂಪಾಯಿಯನ್ನು ವಂಚಿಸಿದ್ದಾರೆ ಎಂದು ಅವರ ಮೇಲೆ ದೂರು ದಾಖಲಾಗಿತ್ತು. ಹಾಗಾಗಿ ಇಂದು ವಿಚಾರಣೆಗೆ ನುಸ್ರತ್ ಹಾಜರಾಗಿದ್ದಾರೆ.

    ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ನ ಪ್ರಭಾವಿ ರಾಜಕಾರಣಿ ಹಾಗೂ ಸಂಸೆಯೂ ಆಗಿರುವ ನುಸ್ರತ್ ಜಹಾನ್, ಫ್ಲ್ಯಾಟ್ ಕೊಡಿಸುವುದಾಗಿ ಹೇಳಿ ಅಕ್ರಮವಾಗಿ ಹಣ ಪಡೆದುಕೊಂಡಿದ್ದಾರೆ ಎನ್ನುವ ಆರೋಪವನ್ನು ಎದುರಿಸುತ್ತಿದ್ದಾರೆ.

    ಇಡಿಯಿಂದ ನೋಟಿಸ್ ಪಡೆದುಕೊಂಡಿದ್ದ ನುಸ್ರತ್ ಸಾಲ್ಟೆಲೇಕ್ ನಲ್ಲಿರುವ ಸಿಜಿಓ ಆಫೀಸಿಗೆ ಇಂದು ಹಾಜರಾಗಿದ್ದರು. ಇಡಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ರಿಯಲ್ ಎಸ್ಟೇಟ್ ಕಂಪನಿಯೊಂದರ ನಿರ್ದೇಶಕಿಯಾಗಿರುವ ನುಸ್ರತ್, ಆ ಕಂಪನಿಯು ಫ್ಲ್ಯಾಟ್ ನೀಡಿಲ್ಲ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಯಶ್ 19 ಚಿತ್ರಕ್ಕೆ ಸಂಯುಕ್ತಾ ಮೆನನ್ ನಾಯಕಿ: ಈ ತಿಂಗಳಲ್ಲೇ ಘೋಷಣೆ?

    ಪಶ್ಚಿಮ ಬಂಗಾಳದ (West Bengal) ಬಸಿರಹತ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಭಾರೀ ಅಂತರದಿಂದಲೇ ಗೆಲುವು ಸಾಧಿಸಿರುವ ನುಸ್ರತ್, ಈ ಹಿಂದೆ ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ.  ಹಲವಾರು ಜಾಹೀರಾತುಗಳಲ್ಲೂ ಅವರು ಕಾಣಿಸಿಕೊಂಡಿದ್ದಾರೆ.

    ನುಸ್ರತ್ ಅವರನ್ನು ಇಡಿ ವಿಚಾರಣೆಗೆ ಕರೆಯುತ್ತಿದ್ದಂತೆಯೇ ವಿರೋಧ ಪಕ್ಷಗಳು ಭಾರೀ ಗಲಾಟೆ ಎಬ್ಬಿಸಿವೆ. ಕೂಡಲೇ ಅವರನ್ನು ಬಂಧಿಸುವಂತೆ ಒತ್ತಾಯ ಕೂಡ ಮಾಡಲಾಗುತ್ತಿದೆ. ಎಷ್ಟೇ ಪ್ರಭಾವಿ ಆಗಿದ್ದರೂ, ಅವರನ್ನು ಬಿಡಬೇಡಿ ಎಂದು ಹಲವರು ಒತ್ತಾಯ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟಿ ನವ್ಯಾ ನಾಯರ್ ‘ಇಡಿ’ ಸಂಕಷ್ಟ: ಎಫ್.ಐ.ಆರ್ ದಾಖಲು ಸಾಧ್ಯತೆ

    ನಟಿ ನವ್ಯಾ ನಾಯರ್ ‘ಇಡಿ’ ಸಂಕಷ್ಟ: ಎಫ್.ಐ.ಆರ್ ದಾಖಲು ಸಾಧ್ಯತೆ

    ಕ್ಷಿಣ ಭಾರತದ ಖ್ಯಾತ ನಟಿ ನವ್ಯಾ ನಾಯರ್ ಸದ್ಯ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಕ್ರಮ ಹಣ ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಕಂದಾಯ ಅಧಿಕಾರಿ ಜೊತೆ ಇವರು ಸಂಬಂಧ ಹೊಂದಿದ್ದರು ಎಂದು ಹೇಳಲಾಗುತ್ತಿದೆ. ಕಂದಾಯ ಅಧಿಕಾರಿ ಕೊಟ್ಟ ಗಿಫ್ಟ್ ಅನ್ನು ಇವರು ಸ್ವೀಕರಿಸಿದ್ದಾರೆ ಎನ್ನುವ ಕಾರಣಕ್ಕಾಗಿ ಇಡಿ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಸದ್ಯದಲ್ಲೇ ನವ್ಯಾ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ.

    ಮನಿಲ್ಯಾಂಡರಿಂಗ್ (Money Laundering) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧನವಾಗಿರುವ (Arrest) ಐ.ಆರ್.ಎಸ್ ಅಧಿಕಾರಿ ಸಚಿನ್ ಸಾವಂತ್ (Sachin Sawant) ಜೊತೆ ಮಲಯಾಳಂ ಖ್ಯಾತ ನಟಿ ನವ್ಯಾ ನಾಯರ್ (Navya Nair) ಸ್ನೇಹ ಹೊಂದಿದ್ದರು ಎನ್ನುವ ಅಂಶ ತನಿಖೆಯಲ್ಲಿ ಬಯಲಾಗಿದೆ. ಈ ಸ್ನೇಹಕ್ಕಾಗಿ ನವ್ಯಾ ಅವರಿಗೆ ಭಾರೀ ಮೊತ್ತದ ಉಡುಗೊರೆಯನ್ನೇ ಸಚಿನ್ ನೀಡಿದ್ದರು ಎಂದು ಹೇಳಲಾಗುತ್ತಿದೆ.

    ತನಿಖೆಯ ವೇಳೆ ನಟಿ ನವ್ಯಾ ನಾಯರ್ ಅವರಿಗೆ ಅಧಿಕಾರಿ ಸಚಿನ್ ಅವರು ಚಿನ್ನದ ಉಡುಗೊರೆ ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನು ಉಡುಗೊರೆಯಾಗಿ ನೀಡಿದ್ದು, ಇಡಿ ಅಧಿಕಾರಿಗಳು ಇದಕ್ಕೆ ಸಂಬಂಧಿಸಿದಂತೆ ನವ್ಯಾ ಅವರನ್ನು ಮುಂಬೈಗೆ ಕರೆಯಿಸಿಕೊಂಡು ವಿಚಾರಣೆ ಮಾಡಿದ್ದಾರೆ. ನಟಿಯ ಹೇಳಿಕೆಯನ್ನೂ ದಾಖಲಿಸಿಕೊಂಡಿದ್ದಾರೆ.

    ನವ್ಯಾ ಭೇಟಿಗಾಗಿ ಸಚಿನ್ ಹಲವು ಬಾರಿ ಕೊಚ್ಚಿನ್ ಗೂ ಹೋಗಿದ್ದರು ಎಂದು ತನಿಖೆಯಿಂದ ಬಯಲಾಗಿದೆ. ತನಿಖೆ ವೇಳೆ ಅಧಿಕಾರಿಯ ಮೊಬೈಲ್, ವಾಟ್ಸಪ್ ಡೇಟಾ ಪರಿಶೀಲಿಸಿದಾಗ ಇವೆಲ್ಲವೂ ಪತ್ತೆ ಆಗಿವೆ. ಈ ಕುರಿತು ನವ್ಯಾ ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದು, ನಾವಿಬ್ಬರೂ ಸ್ನೇಹಿತರು ಅಷ್ಟೇ. ಅದರಾಚೆ ಬೇರೆ ಏನೂ ಇಲ್ಲ ಎಂದು ಹೇಳಿದ್ದಾರಂತೆ. ಸ್ನೇಹದ ಸಂಕೇತವಾಗಿ ಚಿನ್ನದ ಉಡುಗೊರೆ ಕೊಟ್ಟಿದ್ದು ನಿಜವೆಂದು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

     

    ಸಚಿನ್ ಮತ್ತು ನವ್ಯಾ ನೆರೆಹೊರೆಯವರು ಅನ್ನುವ ಕಾರಣಕ್ಕಾಗಿ ಪರಿಚಯವಾಗಿತ್ತು. ಈ ಅಧಿಕಾರಿಯು ಗುರುವಾಯೂರು ದೇವಸ್ಥಾನಕ್ಕೆ ಭೇಟಿ ನೀಡಿದಾಗ, ನವ್ಯಾ ಅವರಿಗೆ ಭೇಟಿಯ ವ್ಯವಸ್ಥೆ ಮಾಡಿದ್ದರು ಎಂದು ವಿಚಾರಣೆ ವೇಳೆ ಗೊತ್ತಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅದಾನಿ ಷೇರು ಶಾರ್ಟ್‌ ಸೆಲ್ಲಿಂಗ್‌, 16 ಕಂಪನಿಗಳಿಗೆ ಭಾರೀ ಲಾಭ – ಇಡಿ ತನಿಖಾ ವರದಿಯಲ್ಲಿ ಏನಿದೆ?

    ಅದಾನಿ ಷೇರು ಶಾರ್ಟ್‌ ಸೆಲ್ಲಿಂಗ್‌, 16 ಕಂಪನಿಗಳಿಗೆ ಭಾರೀ ಲಾಭ – ಇಡಿ ತನಿಖಾ ವರದಿಯಲ್ಲಿ ಏನಿದೆ?

    ನವದೆಹಲಿ: ಹಿಂಡೆನ್‌ಬರ್ಗ್ ಸಂಶೋಧನಾ ವರದಿ (Hindenburg Research Report) ಬಿಡುಗಡೆಯಾಗುವ ಸಮಯದಲ್ಲಿ ಅದಾನಿ (Adani) ಸಮೂಹದ ಷೇರುಗಳನ್ನು ಶಾರ್ಟ್ ಸೆಲ್ಲಿಂಗ್ (Short Selling ) ಮಾಡುವ ಮೂಲಕ ಒಂದು ಖಾಸಗಿ ಬ್ಯಾಂಕ್‌ ಸೇರಿದಂತೆ 16 ಸಂಸ್ಥೆಗಳು ಭಾರೀ ಲಾಭ ಮಾಡಿರುವ ವಿಷಯ ಜಾರಿ ನಿರ್ದೇಶನಾಲಯದ (ED) ತನಿಖೆಯ ವೇಳೆ ಬೆಳಕಿಗೆ ಬಂದಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ವಿದೇಶಿ ಬಂಡವಾಳ ಹೂಡಿಕೆದಾರರು ಮತ್ತು ವಿದೇಶಿ ಸಾಂಸ್ಥಿಕ ಹೂಡಿಕೆದಾರರು (FPIs/FIIs) ಸೇರಿದಂತೆ ಒಂದು ಡಜನ್ ಕಂಪನಿಗಳು ಅದಾನಿ ಗ್ರೂಪ್‌ನ ಷೇರುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿ ಲಾಭ ಮಾಡಿರುವ ವಿಷಯ ಇಡಿ ನಡೆಸಿದ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ.

    ಲಾಭ ಮಾಡಿದ ಸಂಸ್ಥೆಗಳ ಪೈಕಿ ಮೂರು ಭಾರತದಲ್ಲಿ ನೆಲೆಗೊಂಡಿದ್ದರೆ, ನಾಲ್ಕು ಮಾರಿಷಸ್‌, ಮತ್ತು ಫ್ರಾನ್ಸ್, ಹಾಂಕಾಂಗ್‌, ಕೇಮನ್ ದ್ವೀಪಗಳು, ಐರ್ಲೆಂಡ್ ಮತ್ತು ಲಂಡನ್‌ನಲ್ಲಿ ತಲಾ ಒಂದು ಸಂಸ್ಥೆಗಳು ನೆಲೆಗೊಂಡಿವೆ ಎಂದು ಇಡಿ ತನ್ನ ವರದಿಯಲ್ಲಿ ಹೇಳಿದೆ. ಇದನ್ನೂ ಓದಿ: ಇದು ಭಾರತದ ಮೇಲೆ ನಡೆಸಿದ ವ್ಯವಸ್ಥಿತ ದಾಳಿ – ಆರೋಪಗಳಿಗೆ 413 ಪುಟಗಳ ಉತ್ತರ ನೀಡಿದ ಅದಾನಿ ಗ್ರೂಪ್‌

    ಹಿಂಡೆನ್‌ಬರ್ಗ್‌ ವರದಿ ಜನವರಿ 24ರಂದು ಪ್ರಕಟವಾಗಿತ್ತು. ವರದಿ ಪ್ರಕಟವಾಗುವ 2-3 ದಿನಗಳ ಹಿಂದೆ ಕೆಲ ಕಂಪನಿಗಳು ಶಾರ್ಟ್‌ ಸೆಲ್ಲಿಂಗ್‌ ಮಾಡಿವೆ. ಅದರಲ್ಲೂ ಕೆಲ ಕಂಪನಿಗಳು ಇದೇ ಮೊದಲ ಬಾರಿಗೆ ಶಾರ್ಟ್‌ ಸೆಲ್ಲಿಂಗ್‌ ಮಾಡಿದೆ ಎಂದು ಇಡಿ ಜುಲೈನಲ್ಲಿ ಸಲ್ಲಿಸಿದ ತನಿಖಾ ವರದಿಯಲ್ಲಿ ಸೆಬಿಗೆ (SEBI) ತಿಳಿಸಿದೆ. ಎರಡು ಭಾರತೀಯ ಕಂಪನಿಗಳು ‘ಟಾಪ್ ಶಾರ್ಟ್ ಸೆಲ್ಲರ್’ಗಳಲ್ಲಿ ಕಾಣಿಸಿಕೊಂಡಿವೆ. ಈ ಪೈಕಿ ಒಂದು ದೆಹಲಿಯಲ್ಲಿ ಮತ್ತು ಇನ್ನೊಂದು ಮುಂಬೈನಲ್ಲಿ ನೋಂದಾಯಿಸಲಾಗಿದೆ.

    ಕಡಿಮೆ ಅವಧಿಯಲ್ಲಿ ಲಾಭ ಮಾಡಿದ 16 ಸಂಸ್ಥೆಗಳ ಮೇಲೆ ಸದ್ಯ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ಸಂಸ್ಥೆಗಳ ಮೇಲೆ ಕ್ರಿಮಿನಲ್‌ ತನಿಖೆ ನಡೆಸುವ ಸಂಪೂರ್ಣ ಅಧಿಕಾರ ಸೆಬಿಗೆ ಇದ್ದು ಒಂದು ವೇಳೆ ಅನುಮಾನಾಸ್ಪದ ವ್ಯವಹಾರ ನಡೆದಿದ್ದರೆ ದೂರು ದಾಖಲಿಸಬಹುದು. ದೂರು ದಾಖಲಾದ ಬಳಿಕ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (PMLA) ಅಡಿ ಇಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಿದೆ. ಇದನ್ನೂ ಓದಿ: ಷೇರು ವಿವಾದ; ಅದಾನಿ ಗ್ರೂಪ್‌ಗೆ ಸುಪ್ರೀಂ ಕೋರ್ಟ್ ಸಮಿತಿ ಕ್ಲೀನ್ ಚಿಟ್

    ಏನಿದು ಶಾರ್ಟ್‌ ಸೆಲ್ಲಿಂಗ್‌?
    ಶಾರ್ಟ್ ಸೆಲ್ಲಿಂಗ್ ಎನ್ನುವುದು ಹೂಡಿಕೆಯ ತಂತ್ರವಾಗಿದ್ದು, ಮುಂದಿನ ದಿನಗಳಲ್ಲಿ ಕಂಪನಿಯ ಷೇರು ಮೌಲ್ಯ ಕುಸಿಯಬಹುದು ಎಂಬುದನ್ನು ಮೊದಲೇ ಊಹಿಸಿ ನಿಗದಿತ ಬೆಲೆಗಿಂತ ಕಡಿಮೆ ಬೆಲೆಗೆ ಮಾರಾಟ ಮಾಡಿ ನಂತರ ಆ ಕಂಪನಿಯ ಷೇರು ಮೌಲ್ಯ ಕುಸಿತಗೊಂಡಾಗ ಅವುಗಳನ್ನು ಕಡಿಮೆ ಬೆಲೆಗೆ ಮರು ಖರೀದಿಸಿ ಲಾಭ ಮಾಡುವುದಕ್ಕೆ ಶಾರ್ಟ್‌ ಸೆಲ್ಲಿಂಗ್‌ ಎಂದು ಕರೆಯಲಾಗುತ್ತದೆ.

    ಲಾಭ ಮಾಡಿರುವ ಒಂದು ಸಂಸ್ಥೆ 2020ರಲ್ಲಿ ಆರಂಭಗೊಂಡಿದ್ದರೂ 2021 ರವರೆಗೆ ನಿಷ್ಕ್ರಿಯವಾಗಿತ್ತು. ಹೀಗಿದ್ದರೂ ಇದು ಸೆಪ್ಟೆಂಬರ್ 2021 ರಿಂದ ಮಾರ್ಚ್ 2022 ರವರೆಗಿನ ಕೇವಲ ಆರು ತಿಂಗಳೊಳಗೆ 31,000 ಕೋಟಿ ರೂ. ವಹಿವಾಟಿನ ಮೇಲೆ 1,100 ಕೋಟಿ ರೂಪಾಯಿಗಳ ಗಳಿಕೆಯನ್ನು ಘೋಷಿಸಿದೆ. ಇದನ್ನೂ ಓದಿ: ಅದಾನಿ ಸಮೂಹ ಕಂಪನಿಗಳಲ್ಲಿ 15,446 ಕೋಟಿ ಹೂಡಿಕೆ – ಅದಾನಿ ಕೈ ಹಿಡಿದ ರಾಜೀವ್‌ ಜೈನ್‌ ಯಾರು?

    ಭಾರತದಲ್ಲಿ ಬ್ಯಾಂಕ್ ಆಗಿ ಕಾರ್ಯನಿರ್ವಹಿಸುತ್ತಿರುವ ಮತ್ತೊಂದು ಹಣಕಾಸು ಸೇವೆಗಳ ಗುಂಪು 122 ಕೋಟಿ ರೂಪಾಯಿಗಳ ಅಲ್ಪ ಆದಾಯವನ್ನು ದಾಖಲಿಸಿದೆ. ಹೀಗಿದ್ದರೂ ಎಫ್‌ಐಐ ಆಗಿ ಯಾವುದೇ ತೆರಿಗೆ ಹೊಣೆಗಾರಿಕೆಯಿಲ್ಲದೆ 9,700 ಕೋಟಿ ರೂ. ಆದಾಯಗಳಿಸಿ ಅಚ್ಚರಿ ಮೂಡಿಸಿದೆ ಎಂದು ಇಡಿ ಹೇಳಿದೆ.

    ಈ ಎಫ್‌ಪಿಐಗಳು ಮತ್ತು ಎಫ್‌ಐಐಗಳು ನಿಜವಾದ ಫಲಾನುಭವಿಗಳಲ್ಲ. ಇವುಗಳು ವಿದೇಶಿ ಹೂಡಿಕೆದಾರರರಿಗೆ ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸಿರಬಹುದು ಎಂದು ಇಡಿ ಸಂಶಯ ವ್ಯಕ್ತಪಡಿಸಿದೆ.

    ಅದಾನಿಯಿಂದ ಎಫ್‌ಪಿಒ ರದ್ದು:
    20,000 ಕೋಟಿ ರೂ. ಮೌಲ್ಯದ ಎಫ್‌ಪಿಒಗೆ (ಮುಂದುವರಿದ ಸಾರ್ವಜನಿಕ ಕೊಡುಗೆ ಅಥವಾ ಹೊಸದಾಗಿ ಷೇರುಗಳನ್ನು ಮಾರುಕಟ್ಟೆ ಬಿಡುಗಡೆ) ಅದಾನಿ ಕಂಪನಿ ಈ ಜನವರಿಯಲ್ಲಿ ಚಾಲನೆ ನೀಡಿತ್ತು. ಪ್ರತಿ ಷೇರಿಗೆ 3,112ರಿಂದ 3,276 ರೂ. ಆಫರ್‌ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಹಿಂಡೆನ್‌ಬರ್ಗ್‌ ಅದಾನಿ ಕಂಪನಿ ವಿರುದ್ಧ ಸಂಶೋಧನಾ ವರದಿ ಬಿಡುಗಡೆ ಮಾಡಿತ್ತು. ವರದಿ ಬಳಿಕ ಅದಾನಿ ಕಂಪನಿಯ ಷೇರಿನ ಮೌಲ್ಯ ಕುಸಿತ ಕಂಡಿದ್ದರೂ ಎಫ್‌ಪಿಒ ಬಿಡ್‌ ಖರೀದಿ ಪ್ರಕ್ರಿಯೆ ಪೂರ್ಣಗೊಂಡಿತ್ತು.

    ಷೇರುಗಳ ಮೌಲ್ಯ ಭಾರೀ ಪ್ರಮಾಣದಲ್ಲಿ ಕುಸಿತ ಕಂಡ ನಂತರ 20 ಸಾವಿರ ಕೋಟಿ ಬಂಡವಾಳ ಸಂಗ್ರಹಿಸಲು ಮುಂದಾಗಿದ್ದ ಎಫ್‌ಪಿಒ ಪ್ರಕ್ರಿಯೆಯನ್ನೇ ಅದಾನಿ ಸಮೂಹ ರದ್ದು ಮಾಡಿತ್ತು. ನಮ್ಮ ಷೇರು (Share) ಮೌಲ್ಯ ಕುಸಿದಿದೆ. ಈ ಸಂದರ್ಭದಲ್ಲಿ ಎಫ್‌ಪಿಒನೊಂದಿಗೆ ಮುಂದುವರಿಯುವುದು ನೈತಿಕವಾಗಿ ಸರಿಯಲ್ಲ ಎಂದು ಹೇಳಿ ಹೂಡಿಕೆದಾರರ ಹಣವನ್ನು ಮರಳಿಸಲಾಗುವುದು ಎಂದು ಗೌತಮ್‌ ಅದಾನಿ ತಿಳಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಾಜಿ ಸಚಿವ ಸತ್ಯೇಂದ್ರ ಜೈನ್ ಜೈಲಲ್ಲಿ ಸ್ವಿಮ್ಮಿಂಗ್ ಪೂಲ್ ಕೇಳ್ತಿದ್ದಾರೆ – ಸುಪ್ರೀಂ ಕೋರ್ಟ್‌ಗೆ ED ಮಾಹಿತಿ

    ಮಾಜಿ ಸಚಿವ ಸತ್ಯೇಂದ್ರ ಜೈನ್ ಜೈಲಲ್ಲಿ ಸ್ವಿಮ್ಮಿಂಗ್ ಪೂಲ್ ಕೇಳ್ತಿದ್ದಾರೆ – ಸುಪ್ರೀಂ ಕೋರ್ಟ್‌ಗೆ ED ಮಾಹಿತಿ

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಎಎಪಿ ಮಾಜಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ (Satyendar Jain) ಅವರಿಗೆ ಕೋರಲಾದ ಮಧ್ಯಂತರ ವೈದ್ಯಕೀಯ ಜಾಮೀನು (Medical Bail) ವಿಸ್ತರಣೆಯನ್ನು ಜಾರಿ ನಿರ್ದೇಶನಾಲಯ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೇ ಸತ್ಯೇಂದರ್ ಜೈನ್ ಅವರು ಜೈಲಿನ ಆವರಣದಲ್ಲಿ ಸ್ವಿಮ್ಮಿಂಗ್ ಪೂಲ್ ಬೇಕೆಂದು ಕೇಳುತ್ತಿದ್ದಾರೆ ಎಂಬುದಾಗಿ ಜಾರಿ ನಿರ್ದೇಶನಾಲಯ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ (Supreme Court) ತಿಳಿಸಿದೆ.

    ಜೈನ್ ಅವರ ವೈದ್ಯಕೀಯ ಸಲಹೆಯನ್ನ ಉಲ್ಲೇಖಿಸಿ ಅವರ ಮಧ್ಯಂತರ ಜಾಮೀನು ವಿಸ್ತರಣೆ ಮಾಡುವಂತೆ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದರು. ಸತ್ಯೇಂದರ್ ಜೈನ್ ಅವರು ಮಹತ್ವದ ಬೆನ್ನುಹುರಿ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ಕೆಲವು ಬಹುಮುಖ್ಯ ಚಿಕಿತ್ಸೆಗಳಿಗೆ ಒಳಗಾಗುತ್ತಿದ್ದಾರೆ. ಹೀಗಾಗಿ ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಬೇಕು ಎಂದು ಸಿಂಘ್ವಿ ಕೋರಿದ್ದರು.

    ಜೈನ್ ಅವರಿಗೆ ಮಧ್ಯಂತರ ಜಾಮೀನು ವಿಸ್ತರಣೆ ಮಾಡಲು ವೈದ್ಯರ ಸಲಹೆ ಸಾಲುವುದಿಲ್ಲ ಎಂದು ಪ್ರತಿಪಾದಿಸಿದ ಜಾರಿ ನಿರ್ದೇಶನಾಲಯ, ಜಾಮೀನು ವಿಸ್ತರಣೆ ನೀಡುವ ಮನವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಅವರು ಜೈಲಿನಲ್ಲಿ ಈಜುಕೊಳ ಬೇಕೆಂದು ಕೇಳುತ್ತಿದ್ದಾರೆ. ಎಲ್ಲರಿಗೂ ಇದು ಸಾಧ್ಯವಾಗಲ್ಲ ಎಂದು ಇಡಿ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ತಿಳಿಸಿದ್ದಾರೆ. ಇದನ್ನೂ ಓದಿ: ಹನಿಟ್ರ್ಯಾಪ್ ಭೀತಿ – ಯೂನಿಫಾರಂ ಧರಿಸಿ ಫೋಟೊ, ವೀಡಿಯೋ ಅಪ್ಲೋಡ್ ಮಾಡದಂತೆ ಅರೆಸೇನಾ ಪಡೆಗಳಿಗೆ ಸೂಚನೆ

    ಜೈನ್ ಅವರನ್ನು ಏಮ್ಸ್ ವೈದ್ಯರ ತಂಡ ಸ್ವತಂತ್ರವಾಗಿ ತಪಾಸಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ ರಾಜು, ಅಗತ್ಯಬಿದ್ದರೆ, ಜೈನ್ ಅವರಿಗೆ ಫಿಸಿಯೋ ಥೆರಪಿ ನೀಡಲು ಅವರು ಈಜುಕೊಳಕ್ಕೆ ಕರೆದೊಯ್ಯಬಹುದು ಎಂದು ಹೇಳಿದರು. ಈ ವೇಳೆ ಕೋರ್ಟ್, ಆದ್ರೆ ಏನ್ ಮಾಡೋದು ಅವರು ಫಿಸಿಯೋಥೆರಪಿಗೆ ಒಳಗಾದ್ರೆ ನೀವು ಫೋಟೋ ತೆಗೆದು ಅವುಗಳನ್ನೂ ಪ್ರಕಟಿಸಿಬಿಡ್ತೀರಿ ಎಂದು ಹೇಳಿತು. ಬಳಿಕ ಜೈನ್ ಅವರ ಮಧ್ಯಂತರ ವೈದ್ಯಕೀಯ ಜಾಮೀನು ಅವಧಿಯನ್ನ ಸೆಪ್ಟೆಂಬರ್ 1ರವರೆಗೂ ವಿಸ್ತರಿಸಲು ಕೋರ್ಟ್ ಒಪ್ಪಿಗೆ ಸೂಚಿಸಿತು.

    ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 2022ರಿಂದಲೂ ಜೈಲಿನಲ್ಲಿರುವ ಜೈನ್ ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ಏಪ್ರಿಲ್ 6ರಂದು ನಿರಾಕರಿಸಿತ್ತು. ಜಾಮೀನು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಯಾವುದೇ ಕಾನೂನುಬಾಹಿರ ಅಂಶ ಕಂಡುಬಂದಿಲ್ಲ ಎಂದು ಹೈಕೋರ್ಟ್ ಹೇಳಿತ್ತು. ಇದನ್ನು ಜೈನ್ ಅವರು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನಾರೋಗ್ಯದಿಂದ ಜಾಮೀನು ಪಡೆದಿದ್ದ ಲಾಲೂ ಪ್ರಸಾದ್‌ ಯಾದವ್‌ ಬ್ಯಾಡ್ಮಿಂಟನ್‌ ಆಟದಲ್ಲಿ ಬ್ಯುಸಿ

    ಅನಾರೋಗ್ಯದಿಂದ ಜಾಮೀನು ಪಡೆದಿದ್ದ ಲಾಲೂ ಪ್ರಸಾದ್‌ ಯಾದವ್‌ ಬ್ಯಾಡ್ಮಿಂಟನ್‌ ಆಟದಲ್ಲಿ ಬ್ಯುಸಿ

    – ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ ಮೊರೆ ಹೋದ ಸಿಬಿಐ

    ಪಾಟ್ನಾ: ಮೇವು ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ರಾಷ್ಟ್ರೀಯ ಜನತಾ ದಳ (RJD) ನಾಯಕ ಲಾಲೂ ಪ್ರಸಾದ್‌ ಯಾದವ್‌ (Lalu Prasad Yadav) ಅನಾರೋಗ್ಯ ಕಾರಣಕ್ಕಾಗಿ ಕೋರ್ಟ್‌ನಿಂದ ಜಾಮೀನು ಪಡೆದಿದ್ದರು, ಆದರೀಗ ಬ್ಯಾಡ್ಮಿಂಟನ್‌ (Badminton) ಆಡೋದ್ರಲ್ಲಿ ಅವರು ಬ್ಯುಸಿ ಆಗಿದ್ದಾರೆ.

    ಅನಾರೋಗ್ಯದ ಕಾರಣಕ್ಕಾಗಿ ಜಾರ್ಖಂಡ್ ಹೈಕೋರ್ಟ್ (Jharkhand High Court) ಲಾಲೂ ಪ್ರಸಾದ್‌ ಯಾದವ್‌ ಅವರಿಗೆ ಜಾಮೀನು ನೀಡಲಾಗಿತ್ತು. ಆದ್ರೆ ಜಾಮೀನು ಪಡೆದು ಜೈಲಿನಿಂದ ಹೊರಬಂದ ಲಾಲೂ ಪ್ರಸಾದ್ ಯಾದವ್ ಬ್ಯಾಡ್ಮಿಂಟನ್ ಆಟ ಆಡದಲ್ಲಿ ಬ್ಯುಸಿಯಾಗಿದ್ದಾರೆ ಎಂದು ಹೇಳಿರುವ ಸಿಬಿಐ (CBI), ಲಾಲೂ ಯಾದವ್ ಅವರ ಜಾಮೀನು ರದ್ದು ಮಾಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದೆ. ಆದ್ರೆ ಲಾಲೂ ಪ್ರಸಾದ್ ಯಾದವ್ ಪರ ವಕೀಲರು, ಇತ್ತೀಚೆಗಷ್ಟೇ ಲಾಲೂ ಪ್ರಸಾದ್ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಅವರ ಜಾಮೀನು ರದ್ದು ಮಾಡದಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ’ತುಕ್ರ-ತನಿಯ’ ಕಥೆ ಹೇಳ್ತಿದ್ದಾರೆ ರಾಘು ಶಿವಮೊಗ್ಗ: ಟೈಟಲ್ ಲಾಂಚ್ ಮಾಡಿದ ದುನಿಯಾ ವಿಜಯ್

    ಮೇವು ಹಗರಣ ಸಂಬಂಧ ಬಿಹಾರದ ದೊರಾಂಡಾ ಖಜಾನೆಯಲ್ಲಿ ಇದ್ದ ಹಣವನ್ನು ದುರ್ಬಳಕೆ ಮಾಡಿಕೊಂಡ ಆರೋಪ ಸಾಬೀತಾಗಿದ್ದ ಹಿನ್ನೆಲೆಯಲ್ಲಿ ಲಾಲೂ ಪ್ರಸಾದ್ ಯಾದವ್ ಅವರಿಗೆ ನ್ಯಾಯಾಲಯ 5 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿತ್ತು. ಆ ಬಳಿಕ ಆರೋಗ್ಯ ಸಂಬಂಧಿ ಕಾರಣಗಳಿಂದಾಗಿ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾಮೀನು ಸಿಕ್ಕಿತ್ತು. ಜಾಮೀನು ಪಡೆದು ಹೊರ ಬಂದ ಬಳಿಕ ಲಾಲೂ ಯಾದವ್ ಬ್ಯಾಡ್ಮಿಂಟನ್ ಆಡುತ್ತಿದ್ದಾರೆ ಎಂದಿರುವ ಸಿಬಿಐ ಪರ ವಕೀಲರು, ಲಾಲೂ ಅವರ ಜಾಮೀನು ಏಕೆ ರದ್ದು ಮಾಡಬಾರದು? ಎಂದು ಸುಪ್ರೀಂ ಕೋರ್ಟ್‌ಗೆ ಕೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಹೊಸ ʻಎಲಿವೇಟೆಡ್ ವಾಕ್‌ವೇʼ ಆರಂಭ

    ಸಿಬಿಐ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಾಡಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು, ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾಮೀನು ನೀಡಿದ ಜಾರ್ಖಂಡ್ ಹೈಕೋರ್ಟ್‌ ಆದೇಶವು ದೋಷಪೂರಿತ ಹಾಗೂ ಕಾನೂನಾತ್ಮಕವಾಗಿ ಕೆಟ್ಟದ್ದು ಎಂದು ವಾದಿಸಿದ್ದಾರೆ. ಸಿಬಿಐನ ಈ ಮನವಿ ವಿರುದ್ಧ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಇತ್ತೀಚೆಗಷ್ಟೇ ಲಾಲೂ ಪ್ರಸಾದ್ ಯಾದವ್ ಅವರು ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಇದನ್ನು ಪರಿಗಣಿಸಿ ಜಾಮೀನು ಮುಂದುವರೆಸಿ ಎಂದು ಮನವಿ ಮಾಡಿದರು. ಅಷ್ಟೇ ಅಲ್ಲ, ಲಾಲೂ ಪ್ರಸಾದ್ ಯಾದವ್ ಅವರು ಈಗಾಗಲೇ 42 ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದಾರೆ ಎಂದೂ ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಇದನ್ನೂ ಓದಿ: Chandrayaan-3 ಲ್ಯಾಂಡರ್‌ನಿಂದ ಚಂದ್ರನ ಮೇಲೆ ಇಳಿಯುತ್ತಿರುವ ರೋವರ್ – ವೀಡಿಯೋ ರಿಲೀಸ್ ಮಾಡಿದ ಇಸ್ರೋ

    ಇದಕ್ಕೆ ತಿರುಗೇಟು ನೀಡಿದ ಸಿಬಿಐ ಪರ ವಕೀಲರು, ಲಾಲೂ ಪ್ರಸಾದ್ ಯಾದವ್ ಅವರು 3.5 ವರ್ಷ ಜೈಲಿನಲ್ಲಿ ಇದ್ದರು. ಆದರೆ ಅವರಿಗೆ ವಿಧಿಸಿರುವ 5 ವರ್ಷಗಳ ಜೈಲು ಶಿಕ್ಷೆ ನಿರಂತರವಾಗಿ ಇರಬೇಕು. ಜೈಲಿನಿಂದ ಆರೋಗ್ಯ ಸಮಸ್ಯೆ ಕಾರಣಕ್ಕೆ ಹೊರ ಬಂದಿರುವ ಲಾಲೂ ಯಾದವ್ ಬ್ಯಾಡ್ಮಿಂಟನ್ ಆಡುತ್ತಿದ್ದಾರೆ. ಇದನ್ನು ಗಮನಿಸಿದರೆ ನ್ಯಾಯಾಲಯ ಜಾಮೀನು ನೀಡಿರುವ ಆದೇಶವು ದೋಷಪೂರಿತ ಎಂಬಂತೆ ಕಾಣುತ್ತಿದೆ ಎಂದು ಹೇಳಿದರು. ಬಳಿಕ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಎ. ಎಸ್. ಬೋಪಣ್ಣ ಹಾಗೂ ಎಂ. ಎಂ. ಸುಂದರೇಶ್ ಅವರಿದ್ದ ಪೀಠವು ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 17ಕ್ಕೆ ಮುಂದೂಡಿದರು.

    ಕೆಲ ದಿನಗಳ ಹಿಂದೆಯಷ್ಟೇ ಲಾಲೂ ಪ್ರಸಾದ್‌ ಯಾದವ್‌ ಅವರ ಮನೆ ಮೇಲೆ ದಾಳಿ ನಡೆದ್ದ ಜಾರಿ ನಿರ್ದೇಶನಾಲಯ ಲಾಲೂ ಪ್ರಸಾದ್‌ ಹಾಗೂ ಅವರ ಕುಟುಂಬಸ್ಥರಿಗೆ ಸೇರಿದ್ದ 6 ಕೋಟಿ ರೂ. ಮೌಲ್ಯದ ಆಸ್ತಿಯನ್ನ ಮುಟ್ಟುಗೋಲುಹಾಕಿಕೊಂಡಿತ್ತು.

    ಏನಿದು ಮೇವು ಹಗರಣ?
    1992 ರಿಂದ 1995ರ ಅವಧಿಯಲ್ಲಿ ಮೇವು ಹಗರಣ ನಡೆದಿತ್ತು. 950 ಕೋಟಿ ರೂ. ಮೊತ್ತದ ಭಾರೀ ಹಗರಣ ಇದಾಗಿದ್ದು, ಈ ಹಗರಣದಲ್ಲಿ ಲಾಲೂ ಪ್ರಸಾದ್‌ ಯಾದವ್‌ ಅವರನ್ನ ದೋಷಿ ಎಂದು ಪರಿಗಣಿಸಿ 5 ವರ್ಷಗಳ ಕಾಲ ಶಿಕ್ಷೆ ವಿಧಿಸಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಬ್ಬರು ಉದ್ಯಮಿಗಳ 40.22 ಕೋಟಿ ರೂ. ಆಸ್ತಿ ಜಪ್ತಿಗೆ ED ಅದೇಶ

    ಇಬ್ಬರು ಉದ್ಯಮಿಗಳ 40.22 ಕೋಟಿ ರೂ. ಆಸ್ತಿ ಜಪ್ತಿಗೆ ED ಅದೇಶ

    ಹುಬ್ಬಳ್ಳಿ: ವಂಚನೆ ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯವು ಆರೋಪಿಗಳ ಆಸ್ತಿ ಜಪ್ತಿ ಮಾಡಿದೆ. ಇಡಿ (ED) ಯಿಂದ ಇಬ್ಬರು ಉದ್ಯಮಿಗಳ 40.22 ಕೋಟಿ ಆಸ್ತಿ ಜಪ್ತಿಗೆ ಅದೇಶಿಸಲಾಗಿದೆ. ಶೀತಲ್ ಕುಮಾರ್, ಜಿನೇಂದ್ರ ಮಗ್ದುಮ್ ಅವರಿಗೆ ಸೇರಿದ ಆಸ್ತಿ ಜಪ್ತಿ ಮಾಡಲಾಗಿದೆ. ಈ ಇಬ್ಬರು ಉದ್ಯಮಿ ಸಂಜಯ್ ಘೋಡಾವತ್‌ಗೆ ವಂಚಿಸಿದ್ದ ಆರೋಪವಿತ್ತು.

    ಸ್ಟಾರ್ ಏರ್‌ಲೈನ್ಸ್ ಮಾಲೀಕ ಸಂಜಯ್ ಘೋಡಾವತ್ ಜೊತೆ ಆರೋಪಿಗಳು ಸ್ನೇಹ ಬೆಳೆಸಿದ್ದರು. ರಿಯಲ್ ಎಸ್ಟೇಟ್ ಉದ್ಯಮದ ಹೆಸರಲ್ಲಿ ವಂಚಿಸಿದ್ದರು. ಬೇರೊಬ್ಬರ 525 ಕೋಟಿ ರೂ. ಹಣವನ್ನು ತಮ್ಮ ವೈಯಕ್ತಿಕ ಖಾತೆ ಹಾಗೂ ಇತರರ ಖಾತೆಗೆ ವರ್ಗಾಯಿಸಿಕೊಂಡಿದ್ದರು. ಈ ಬಗ್ಗೆ ಉದ್ಯಮಿ ಸಂಜಯ್ ದನ್ ಚೆಂದ್ ಘೋಡಾವತ್ ವಂಚನೆ ಪ್ರಕರಣ ದಾಖಲಿಸಿದ್ದರು. ಇದನ್ನೂ ಓದಿ: ಉಡುಪಿ ವೀಡಿಯೋ ಪ್ರಕರಣ – SITಗೆ ವಹಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸ್ಪಷ್ಟನೆ

    ಹುಬ್ಬಳ್ಳಿಯ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಘೋಡಾವತ್ ದೂರು ದಾಖಲಿಸಿದ್ದರು. ಬಹು ಕೋಟಿ ವಂಚನೆ ಪ್ರಕರಣವಾಗಿದ್ದರಿಂದ ಹುಬ್ಬಳ್ಳಿ ಪೊಲೀಸರು ED ಗೆ ಪ್ರಕರಣ ಹಸ್ತಾಂತರ ಮಾಡಿದ್ರು. ED ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ತನಿಖೆ ನಡೆಸುತ್ತಿದೆ.

    ಇದೀಗ ಇಬ್ಬರು ಆರೋಪಿಗಳಿಗೆ ಸೇರಿದ ಆಸ್ತಿ ಜಪ್ತಿ ಮಾಡಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ ರಾಜ್ಯದಲ್ಲಿನ ಮನೆ, ಅಪಾರ್ಟ್ಮೆಂಟ್, ವಿಂಡ್ ಮಿಲ್ ಸೇರಿದಂತೆ 12 ಆಸ್ತಿಗಳನ್ನು ಇಡಿ ಜಪ್ತಿ ಮಾಡಿದೆ. ಇದನ್ನೂ ಓದಿ: ಎಕ್ಸ್‌ಪ್ರೆಸ್ ವೇಯಲ್ಲಿ ನಿಯಮ ಉಲ್ಲಂಘಿಸಿದವರಿಗೆ ಬಿತ್ತು ದಂಡ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಡಿಯಿಂದ ಲಾಲು ಪ್ರಸಾದ್ ಯಾದವ್ ಕುಟುಂಬದ ಆಸ್ತಿ ಜಪ್ತಿ

    ಇಡಿಯಿಂದ ಲಾಲು ಪ್ರಸಾದ್ ಯಾದವ್ ಕುಟುಂಬದ ಆಸ್ತಿ ಜಪ್ತಿ

    ಪಾಟ್ನಾ: ರಾಷ್ಟ್ರೀಯ ಜನತಾ ದಳ (RJD) ಹಿರಿಯ ನಾಯಕ ಲಾಲು ಪ್ರಸಾದ್ ಯಾದವ್ (Lalu Prasad Yadav) ಮತ್ತು ಅವರ ಕುಟುಂಬದ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ಮಾಡಿದೆ.

    ನ್ಯೂ ಫ್ರೆಂಡ್ಸ್ ಕಾಲೋನಿಯಲ್ಲಿರುವ ವಸತಿ ಗೃಹ ಸೇರಿದಂತೆ ಯಾದವ್ ಕುಟುಂಬದ ದೆಹಲಿ ಮತ್ತು ಪಾಟ್ನಾದ ಒಟ್ಟು 6 ಕೊಟಿ ಆಸ್ತಿಯನ್ನು ಇಡಿ ವಶಕ್ಕೆ ಪಡೆದುಕೊಂಡಿದೆ. ಯುಪಿಎ-1 ಸರ್ಕಾರದಲ್ಲಿ ಲಾಲು ಪ್ರಸಾದ್ ರೈಲ್ವೇ ಸಚಿವರಾಗಿದ್ದಾಗ ನಡೆದ ಉದ್ಯೋಗ ಹಗರಣಕ್ಕೆ ಸಂಬಂಧಿಸಿ ಈ ದಾಳಿ ನಡೆದಿದೆ ಎನ್ನಲಾಗಿದೆ. ಇದನ್ನೂ ಓದಿ: ಲೋಕಸಭಾ ಚುನಾವಣೆ ಬಗ್ಗೆ ದೆಹಲಿಯಲ್ಲಿ ಸಭೆ: ಡಿ.ಕೆ ಶಿವಕುಮಾರ್

    ಲಾಲು ಪ್ರಸಾದ್ ಯಾದವ್ ಅವರ ಪತ್ನಿ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಪುತ್ರಿಯರಾದ ಮಿಸಾ ಭಾರತಿ (ರಾಜ್ಯಸಭೆಯಲ್ಲಿ ಆರ್‍ಜೆಡಿ ಸಂಸದ), ಚಂದಾ ಯಾದವ್ ಮತ್ತು ರಾಗಿಣಿ ಯಾದವ್ ಅವರ ಹೇಳಿಕೆಗಳನ್ನು ಇಡಿ ದಾಖಲಿಸಿದೆ ಎಂದು ಸಂಸ್ಥೆ ವರದಿ ಹೇಳಿದೆ.

    ಲಾಲು ಪ್ರಸಾದ್ ಯಾದವ್ ಅವರು ಭಾನುವಾರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲುತ್ತೆ. ಆ ನಂತರ ನರೇಂದ್ರ ಮೋದಿ ವಿದೇಶದಲ್ಲಿ ನೆಲೆಸುತ್ತಾರೆ ಎಂದು ವ್ಯಂಗ್ಯವಾಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಡಿ ಮುಖ್ಯಸ್ಥ ಸಂಜಯ್ ಕುಮಾರ್ ಮಿಶ್ರಾ ಅಧಿಕಾರಾವಧಿ ವಿಸ್ತರಣೆಗೆ ಸುಪ್ರೀಂ ಸಮ್ಮತಿ

    ಇಡಿ ಮುಖ್ಯಸ್ಥ ಸಂಜಯ್ ಕುಮಾರ್ ಮಿಶ್ರಾ ಅಧಿಕಾರಾವಧಿ ವಿಸ್ತರಣೆಗೆ ಸುಪ್ರೀಂ ಸಮ್ಮತಿ

    ನವದೆಹಲಿ: ಸಂಜಯ್ ಕುಮಾರ್ ಮಿಶ್ರಾ (Sanjay Kumar Mishra) ಅವರನ್ನು ಸೆಪ್ಟೆಂಬರ್ 15 ರವರೆಗೆ ಜಾರಿ ನಿರ್ದೇಶನಾಲಯದ (ED) ನಿರ್ದೇಶಕರಾಗಿ ಮುಂದುವರಿಸಲು ಸುಪ್ರೀಂ ಕೋರ್ಟ್ (Supreme Court) ಗುರುವಾರ ಅನುಮತಿ ನೀಡಿದೆ.

    ಕೇಂದ್ರ ಸರ್ಕಾರ ಅವರ ಅಧಿಕಾರಾವಧಿಯನ್ನು ಅಕ್ಟೋಬರ್ 15 ರವರೆಗೆ ವಿಸ್ತರಿಸುವಂತೆ ಕೋರಿದ ಹಿನ್ನೆಲೆ ಮನವಿಯನ್ನು ಪರಿಷ್ಕರಿಸಿ ಪುರಸ್ಕರಿಸಿದೆ. ಫೈನಾನ್ಶಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್ (FATF) ಪರಿಶೀಲನೆಯಲ್ಲಿ ಮಿಶ್ರಾ ಅವರ ಅನುಪಸ್ಥಿತಿಯು ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆ ರಾಷ್ಟ್ರದ ಹಿತಾಸಕ್ತಿಯಿಂದ ಕೇಂದ್ರ ಸರ್ಕಾರದ ಮನವಿಯನ್ನು ಪರಿಗಣಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದನ್ನೂ ಓದಿ: ಕರ್ನಾಟಕ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿ: ಸುಪ್ರೀಂ ಸಲಹೆ

    1984ರ ಬ್ಯಾಚ್‌ನ ಐಆರ್‌ಎಸ್ ಅಧಿಕಾರಿ ಮಿಶ್ರಾ ಅವರನ್ನು ಇಡಿ ಮುಖ್ಯಸ್ಥರಾಗಿ ಮೂರನೇ ಬಾರಿಗೆ ಮಾಡಿದ ಅಧಿಕಾರಾವಧಿಯ ವಿಸ್ತರಣೆಯು ಕಾನೂನುಬಾಹಿರ ಮತ್ತು 2021ರಲ್ಲಿ ಅದರ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ಹೇಳಿತ್ತು. ಆದಾಗ್ಯೂ, ಸುಗಮ ವರ್ಗಾವಣೆಗೆ ಅವಕಾಶ ನೀಡಲು ಜುಲೈ 31ರವರೆಗೆ ಅಧಿಕಾರದಲ್ಲಿ ಮುಂದುವರಿಯಲು ಅವರಿಗೆ ಅನುಮತಿ ನೀಡಿತು. ಇದನ್ನೂ ಓದಿ: ವಾಟ್ಸಪ್ ಸ್ಟೇಟಸ್ ಜವಾಬ್ದಾರಿಯುತವಾಗಿ ಹಾಕಿ – ಬಾಂಬೆ ಹೈಕೋರ್ಟ್

    ಈ ನಡುವೆ ಇಡಿ ಮುಖ್ಯಸ್ಥರ ಅಧಿಕಾರಾವಧಿಯನ್ನು ವಿಸ್ತರಿಸುವಂತೆ ಕೋರಿ ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್ಗೆ ತುರ್ತು ಅರ್ಜಿ ಸಲ್ಲಿಸಿತ್ತು. ಎಫ್‌ಎಟಿಎಫ್ ಪರಿಶೀಲನೆಯು ನಿರ್ಣಾಯಕ ಹಂತದಲ್ಲಿದೆ. ಜುಲೈ 21, 2023 ರಂದು ಪರಿಣಾಮಕಾರಿತ್ವದ ಕುರಿತು ಸಲ್ಲಿಕೆಗಳನ್ನು ಮಾಡಲಾಗಿದೆ. ನವೆಂಬರ್ 2023ರಲ್ಲಿ ಆನ್-ಸೈಟ್ ಭೇಟಿಯನ್ನು ನಡೆಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆ ಅವರ ಅಗತ್ಯವಿದೆ ಎಂದು ಅರ್ಜಿಯಲ್ಲಿ ನಮೂದಿಸಲಾಗಿತ್ತು. ಇದನ್ನೂ ಓದಿ: ಜ್ಞಾನವ್ಯಾಪಿ ಮಸೀದಿ ಸರ್ವೆಗೆ ತಾತ್ಕಾಲಿಕ ತಡೆ ನೀಡಿದ ಸುಪ್ರೀಂಕೋರ್ಟ್

    ಈ ಹಿನ್ನೆಲೆ ಸಂಜಯ್ ಕುಮಾರ್ ಮಿಶ್ರಾ ಅವರನ್ನು ಅಕ್ಟೋಬರ್ 15ರವರೆಗೆ ಕಚೇರಿಯಲ್ಲಿ ಮುಂದುವರಿಯಲು ಅವಕಾಶ ನೀಡುವಂತೆ ಕೇಂದ್ರ ಸರ್ಕಾರ ವಾದಿಸಿತ್ತು. ಸರ್ಕಾರದ ವಾದ ಆಲಿಸಿದ ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ವಿಕ್ರಮ್ ನಾಥ್ ಮತ್ತು ಸಂಜಯ್ ಕರೋಲ್ ಅವರ ಪೀಠವು ಸೆಪ್ಟೆಂಬರ್ 15 ರವರೆಗೆ ಹುದ್ದೆಯಲ್ಲಿ ಮುಂದುವರಿಸಲು ಅನುಮತಿ ನೀಡಿದೆ. ಇದನ್ನೂ ಓದಿ: 5 ವರ್ಷಗಳಲ್ಲಿ ಕಾನೂನು ಹೋರಾಟಕ್ಕೆ ಕೇಂದ್ರ ಖರ್ಚು ಮಾಡಿದ್ದೆಷ್ಟು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]